Physical Abuse: ಪಾರ್ಟಿ ಮುಗಿಸಿ ಲಿಫ್ಟ್‌ ಕೇಳಿದ ಯುವತಿಯ ಮೇಲೆರಗಿದ ಕಾಮುಕನ ಬಂಧನ; ಸಂತ್ರಸ್ತೆಯ ಜೀವ ಉಳಿಸಿದ SOS ಬಟನ್! - Vistara News

ಕ್ರೈಂ

Physical Abuse: ಪಾರ್ಟಿ ಮುಗಿಸಿ ಲಿಫ್ಟ್‌ ಕೇಳಿದ ಯುವತಿಯ ಮೇಲೆರಗಿದ ಕಾಮುಕನ ಬಂಧನ; ಸಂತ್ರಸ್ತೆಯ ಜೀವ ಉಳಿಸಿದ SOS ಬಟನ್!

Physical Abuse: ಅನ್ಯರಾಜ್ಯದ ಯುವತಿ ಬೆಂಗಳೂರಿನಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದು ಗೆಟ್‌ ಟುಗೆದರ್‌ ಪಾರ್ಟಿಗಾಗಿ ಸ್ನೇಹಿತರ ಜೊತೆ ಹೋಗಿದ್ದಳು. ವಾಪಸ್ ಆಗುತ್ತಿದ್ದ ಯುವತಿಯನ್ನು ಈ ಯುವಕ ಬೈಕ್‌ನಲ್ಲಿ ಡ್ರಾಪ್‌ ನೆಪದಲ್ಲಿ ಕರೆದೊಯ್ದಿದ್ದಾನೆ.

VISTARANEWS.COM


on

physical abuse hsr layout
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಾರ್ಟಿ ಮುಗಿಸಿದ ಬಳಿಕ ಮನೆಗೆ ಹೋಗಲು ಅಪರಿಚಿತನ ಬಳಿ ಲಿಫ್ಟ್‌ ಕೇಳಿದ ಯುವತಿಯನ್ನು ಎಚ್‌ಎಸ್‌ಆರ್‌ ಲೇಔಟ್‌ನ (HSR Layout) ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ (Physical Abuse) ಎಸಗಿದ ಪಾತಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ಫೂಟೇಜ್‌ (CCTV footage) ಆಧರಿಸಿ ಕಾಮುಕನನ್ನು (Culprit) ಪತ್ತೆಹಚ್ಚಲಾಗಿದೆ.

ಅನ್ಯರಾಜ್ಯದ ಯುವತಿ ಬೆಂಗಳೂರಿನಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದು ಗೆಟ್‌ ಟುಗೆದರ್‌ ಪಾರ್ಟಿಗಾಗಿ ಸ್ನೇಹಿತರ ಜೊತೆ ಹೋಗಿದ್ದಳು. ವಾಪಸ್ ಆಗುತ್ತಿದ್ದ ಯುವತಿಯನ್ನು ಈ ಯುವಕ ಬೈಕ್‌ನಲ್ಲಿ ಡ್ರಾಪ್‌ ನೆಪದಲ್ಲಿ ಕರೆದೊಯ್ದಿದ್ದಾನೆ. ಬೊಮ್ಮನಹಳ್ಳಿ ಸಮೀಪದ ಶೆಡ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಪ್ರಕರಣದ ಸ್ಥಳದ ಸಿಸಿಟಿವಿ ಫೂಟೇಜ್‌ ಆಧರಿಸಿ ಆರೋಪಿಯನ್ನು ಹೆಚ್​ಎಸ್​ಆರ್​ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್​ 17ರ ರಾತ್ರಿ 1 ಗಂಟೆ ಸುಮಾರಿಗೆ ಕೋರಮಂಗಲದಲ್ಲಿ ಪಾರ್ಟಿ ಮುಗಿಸಿಕೊಂಡು ವಾಪಸ್‌ ಬರುವಾಗ ಸ್ನೇಹಿತರಿಂದ ಬೇರ್ಪಟ್ಟಿದ್ದಾಳೆ. ಹೆಬ್ಬಗೋಡಿಯಲ್ಲಿರೋ ಮನೆ ಸೇರಬೇಕಿದ್ದ ಯುವತಿ, ಅಪರಿಚಿತನ ಬೈಕ್‌ ಹತ್ತಿದ್ದಾಳೆ. ಆ ಬೈಕ್‌ನಲ್ಲಿ ಡ್ರಾಪ್‌ ಪಡೆದವಳು ಮಾರ್ಗಮಧ್ಯೆ ಕೆಳಗಿಳಿದ್ದಾಳೆ. ಸ್ವಲ್ಪದೂರ ನಡೆದುಕೊಂಡು ಹೋದವಳು, ಮತ್ತೊಂದು ಬೈಕ್‌ ಹತ್ತಿದ್ದಾಳೆ. ಯುವತಿ ಮದ್ಯದ ನಶೆಯಲ್ಲಿರುವುದನ್ನು ಬಂಡವಾಳ ಮಾಡಿಕೊಂಡ ಈತ, ಬೊಮ್ಮನಹಳ್ಳಿ ಸಮೀಪದ ನಿರ್ಜನವಾದ ಲಾರಿ ನಿಲ್ಲಿಸುವ ಜಾಗಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಆರೋಪಿಯ ಆಡುಗೋಡಿಯ ನಿವಾಸದಿಂದ ಆತನನ್ನು ಬಂಧಿಸಲಾಗಿದೆ. ಸದ್ಯ ತನಿಖೆ ಮುಂದುವರೆದಿದ್ದು ಆರೋಪಿಯ ಹೆಚ್ಚಿನ ವಿವರ ಗೊತ್ತಾಗಬೇಕಿದೆ. ಕೊರಿಯೋಗ್ರಾಫರ್ ಆಗಿರುವ ಅತ್ಯಾಚಾರ ಆರೋಪಿ ಇದೇ ಸಮಯದಲ್ಲಿ ಕೋರಮಂಗಲ ಪಬ್​ಗೆ ಪಾರ್ಟಿಗೆ ಬಂದಿದ್ದ. ಮನೆಗೆ ತೆರಳುವಾಗ ಯುವತಿ‌ ಡ್ರಾಪ್ ಕೇಳಿದ್ದಾಳೆ. ಯುವತಿ ಕೂಡ ಕೋರಮಂಗಲದ ಪಬ್​ನಲ್ಲಿ ಪಾರ್ಟಿ ಮುಗಿಸಿ ಹೊರಟಿದ್ದಳು.

ಆರೋಪಿ ಅತ್ಯಾಚಾರದ ವೇಳೆ ಯುವತಿಯ ಬಟ್ಟೆ ಹರಿದು ಕ್ರೌರ್ಯ ಮೆರೆದಿದ್ದಾನೆ. ಈ ವೇಳೆ ಯುವತಿ ಕೂಡ ಈತನ ಕೃತ್ಯಕ್ಕೆ ಪ್ರತಿರೋಧ ಒಡ್ಡಿದ್ದು ಆತನ ಬಟ್ಟೆ ಹರಿದು, ಮುಖಕ್ಕೆ ಪರಚಿದ್ದಾಳೆ. ಇದೇ ವೇಳೆಗೆ ಯುವತಿಯ ಸ್ನೇಹಿತರು ಕೂಡ ಸ್ಥಳಕ್ಕೆ ಬಂದಿದ್ದು ಇದರಿಂದ ಹೆದರಿ ಆರೋಪಿ ಪರಾರಿಯಾಗಿದ್ದ. BNS ಕಾಯ್ದೆ 64 ಅಡಿಯಲ್ಲಿ HSR ಲೇಔಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಕಾಮುಕ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದಂತೆ ಯುವತಿ ಮೊಬೈಲ್​ನಲ್ಲಿ ಎಮರ್ಜೆನ್ಸಿ SOS ಬಟನ್ ಒತ್ತಿದ್ದಾಳೆ. ತಕ್ಷಣ ಮಾಹಿತಿ ಸ್ನೇಹಿತರಿಗೆ ಹೋಗಿದೆ. ಸ್ಥಳಕ್ಕೆ ದೌಡಾಯಿಸಿದ ಸ್ನೇಹಿತರು ಯುವತಿಯ ಜೀವ ಉಳಿಸಿದ್ದಾರೆ. ಸ್ಥಳದಲ್ಲೆ ಅರೆ ನಗ್ನ ಸ್ಥಿತಿಯಲ್ಲಿದ್ದ ಅಪರಿಚಿತ ಓಡಿ ಹೋಗಿದ್ದಾನೆ. ಆತನ ಮುಖದ ಮೇಲೆ ಪರಚಿದ ಗಾಯಗಳಾಗಿವೆ ಎಂದು ಸ್ನೇಹಿತರು ಮಾಹಿತಿ ಕೊಟ್ಟು ದೂರು ದಾಖಲಿಸಿದ್ದರು. ಅಸ್ವಸ್ಥಗೊಂಡಿದ್ದ ಯುವತಿ ಬೊಮ್ಮಸಂದ್ರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಕೋಲ್ಕತಾದಲ್ಲಿ ನಡೆದ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಭೀಕರ ಕೊಲೆಯ ಬಳಿಕ, ಇಂಥ ಪ್ರಕರಣಗಳ ಬಗ್ಗೆ ಕಳವಳ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣ ಸದ್ದು ಮಾಡಿತ್ತು.

ಇದನ್ನೂ ಓದಿ: Physical Abuse: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಎಚ್ಎಸ್ಆರ್ ಲೇಔಟ್‌ ಠಾಣೆಯಲ್ಲಿ ಎಫ್ಐಆರ್ ದಾಖಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಬಳ್ಳಾಪುರ

Murder case : ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

Murder Case : ಆಸ್ತಿಗಾಗಿ ಶುರುವಾದ ಗಲಾಟೆಯು ಎರಡು ಕುಟುಂಬಗಳು ಕಲ್ಲು-ದೊಣ್ಣೆಗಳಿಂದ ಹೊಡೆದಾಡಿಕೊಂಡಿದ್ದಾರೆ. ಗಲಾಟೆ ತಾರಕಕ್ಕೇರಿದ್ದು ಕೊಲೆಯಲ್ಲಿ ಅಂತ್ಯವಾಗಿದೆ.

VISTARANEWS.COM


on

By

murder case
Koo

ಚಿಕ್ಕಬಳ್ಳಾಪುರ: ಪಿತ್ರಾರ್ಜಿತ ಆಸ್ತಿಗಾಗಿ ದಾಯಾದಿಗಳ ನಡುವಿನ ಗಲಾಟೆಯೂ ತಾರಕಕ್ಕೇರಿದ್ದು ವ್ಯಕ್ತಿಯ ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ಆಸ್ತಿಗಾಗಿ ತಮ್ಮನ ಮಕ್ಕಳಿಂದಲೇ ಅಣ್ಣನ ಕೊಲೆಯಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ನಡುವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ನಂಜುಂಡಯ್ಯ (55) ಗಲಾಟೆಯಲ್ಲಿ ಕೊಲೆಯಾದವರು. ಕಲ್ಲು ದೊಣ್ಣೆಗಳಿಂದ ಬಡಿದಾಟದಲ್ಲಿ ತೀವ್ರ ಗಾಯಗೊಂಡಿದ್ದ ನಂಜುಂಡಯ್ಯರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಂಜುಂಡಯ್ಯ ಮೃತಪಟ್ಟಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಡುವನಹಳ್ಳಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮಂಡ್ಯದ ಮೊಗರಹಳ್ಳಿ ಬಳಿ ಘಟನೆ ನಡೆದಿದೆ. ಮಂಟಿ ಗ್ರಾಮದ ಅನಿಲ್ (28) ಮೃತ ದುರ್ದೈವಿ. ಮೊಗರಹಳ್ಳಿ ಗ್ರಾಮದ ಸ್ಮಶಾನದ ಬಳಿ ಶವ ಪತ್ತೆಯಾಗಿದೆ. ಸೋಮವಾರ ಬೆಳಗ್ಗೆ ನೇತಾಡುತ್ತಿದ್ದ ಶವ ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರೆಂಟ್‌ ಶಾಕ್‌ಗೆ ಯುವಕ ಬಲಿ

ಕೃಷಿ ಚಟುವಟಿಕೆಯ ವೇಳೆ ಆಕಸ್ಮಿಕ ವಿದ್ಯುತ್‌ ಸ್ಪರ್ಶಿಸಿ ಯುವಕನೊರ್ವ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ‌ ತಾಂವಶಿ ಗ್ರಾಮದಲ್ಲಿ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ದ್ರಾಕ್ಷಿ ತೋಟದಲ್ಲಿ ಪಂಪ್ ಸೆಟ್ ಶುರು ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ಸಂಗಪ್ಪ ನಾನಪ್ಪ ತಳವಾರ (28) ಮೃತ ದುರ್ದೈವಿ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

Road Accident : ಬೆಂಗಳೂರಿನಲ್ಲಿ ಶರವೇಗದಲ್ಲಿ ಬಂದ ಕಾರೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತವು ಸೆರೆಯಾಗಿದ್ದು, ಎದೆ ಝಲ್ ಎನ್ನುತ್ತೆ.

VISTARANEWS.COM


on

By

Road Accident
Koo

ಬೆಂಗಳೂರು: ಅಬ್ಬಾ.. ಬೆಂಗಳೂರಿನ ಸರ್ಜಾಪುರದಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ವೊಂದು (Road Accident) ಸಂಭವಿಸಿದ್ದು, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶರವೇಗದಲ್ಲಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರ ಗಾಳಿಗೆ ತೂರಿ ಹಾರಿ ಬಿದ್ದಿದ್ದಾನೆ.

ಕಾರು ಬೈಕ್‌ಗೆ ಡಿಕ್ಕಿಯಾದರೂ ಪವಾಡ ಸದೃಶ್ಯ ರೀತಿ ಬೈಕ್‌ ಸವಾರ ಬಚಾವಾಗಿದ್ದಾನೆ. ಅದೃಷ್ಟವಶಾತ್ ಸವಾರ ಸಣ್ಣ-ಪುಟ್ಟ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ.

ಕಾರು ಡಿಕ್ಕಿಯಾದ ರಭಸಕ್ಕೆ ಸವಾರ ಬೈಕ್ ಸಮೇತ ರಸ್ತೆಗೆ ಹಾರಿ ಬಿದ್ದರೆ, ಧರಿಸಿದ್ದ ಹೆಲ್ಮೆಟ್ ಒಂದು ಕಡೆ ಎಗರಿ ಬಿದ್ದಿದೆ. ಅಪಘಾತದ ದೃಶ್ಯ ಮುಂದಿದ್ದ ಕಾರೊಂದರ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆಗಸ್ಟ್‌ 15ರ ಬೆಳಗ್ಗೆ 7:50 ರ ಸುಮಾರಿಗೆ ಸರ್ಜಾಪುರ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೈಕ್‌ ಸಂಪೂರ್ಣ ಜಖಂಗೊಂಡಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Assault Case : ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಝಳಪಿಸಿದ ತಲ್ವಾರ್‌; ಇಬ್ಬರು ಗಂಭೀರ

ಗೂಡ್ಸ್‌ ವಾಹನ ಡಿಕ್ಕಿಗೆ ಮಹಿಳೆ ಸಾವು

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಹಲಸೂರು ಗೇಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ಭಾನುವಾರ ಮಧ್ಯಾಹ್ನ 2ಗಂಟೆ ಸುಮಾರಿಗೆ ಅಪಘಾತ ನಡೆದಿದೆ.

ಸತ್ಯಪ್ರೇಮ ಎಂಬುವವರು ಮೃತ ದುರ್ದೈವಿ. ಸತ್ಯಪ್ರೇಮ ಅವರು ತಮ್ಮ ಪತಿ ಜತೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಕಾರ್ಪೊರೇಷನ್ ಬಸ್ ನಿಲ್ದಾಣದ ಬಳಿ ಹಿಂದಿನಿಂದ ಬಂದ ಐಷರ್ ವಾಹನ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸತ್ಯಪ್ರೇಮಾರ ತಲೆಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸತ್ಯಪ್ರೇಮಾರ ಪತಿಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಿಯಂತ್ರಣ ತಪ್ಪಿದ ಕಾರು, 17 ಬೈಕ್‌ಗಳು ಜಖಂ

ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಿಂತಿದ್ದ ಬೈಕ್‌ಗಳ ಮೇಲೆ ನುಗ್ಗಿದೆ. ಪರಿಣಾಮ ಹದಿನೇಳು ಬೈಕ್‌ಗಳು ಜಖಂಗೊಂಡಿವೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ, ಕೆಂಕೆರೆಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ.

ಧಾರಾಕಾರ ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಸವಾರರು ಬೈಕ್‌ಗಳನ್ನು ನಿಲ್ಲಿಸಿ ಬಸ್ ನಿಲ್ದಾಣದಲ್ಲಿ ನಿಂತಿದ್ದರು. ಈ ವೇಳೆ ಅತಿ ವೇಗವಾಗಿ ಚಲಿಸುತ್ತಿದ್ದ ಫಾರ್ಚೂನರ್ ಕಾರು, ಮಳೆಯಿಂದ ರಸ್ತೆ ಕಾಣದೆ ನಿಯಂತ್ರಣ ತಪ್ಪಿ ಬೈಕ್‌ಗಳ ಮೇಲೆ ನುಗ್ಗಿದೆ. ಬೈಕ್‌ಗಳ ಮೇಲೆ‌ ನುಗ್ಗಿ ಬಳಿಕ ಬಸ್‌ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದು ಕಾರು ನಿಂತಿದೆ.

ಕಾರು ಗುದ್ದಿದ ರಭಸಕ್ಕೆ ಗೋಡೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಓರ್ವನಿಗೆ ಗಾಯವಾಗಿದ್ದು, ಅದೃಷ್ಟವಶಾತ್ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಿಲ್ದಾಣದಲ್ಲಿ ಬೈಕ್ ಸವಾರರು ನಿಂತಿದ್ದರಿಂದ ಎಲ್ಲರ ಜೀವ ಉಳಿದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Uttarakhand Horror: ದೇಶವನ್ನೇ ಬೆಚ್ಚಿಬೀಳಿಸೋ ಮತ್ತೊಂದು ಘಟನೆ! ಬಸ್‌ನಲ್ಲೇ ಯುವತಿ ಮೇಲೆ ಡ್ರೈವರ್‌ ಸೇರಿ ಐವರಿಂದ ಗ್ಯಾಂಗ್‌ರೇಪ್‌

Uttarakhand Horror: ಪೊಲೀಸ್‌ ವಿಚಾರಣೆ ವೇಳೆ ಆರಂಭದಲ್ಲಿ ಯುವತಿ ತಾನು ಪಂಜಾಬ್‌ ಮೂಲದವಳು ಮತ್ತು ಅನಾಥಳು ಎಂದು ಹೇಳಿಕೊಂಡಿದ್ದರು. ಇದಾದ ಬಳಿಕ ಆಕೆ ಉತ್ತರಪ್ರದೇಶ ಮೂಲದವಳು ಎಂಬುದು ತಿಳಿದುಬಂದಿದೆ. ಆಕೆ ಹೇಳುವಂತೆ ಆಕೆ ಆ.12ರಂದು ದಿಲ್ಲಿಯಿಂದ ಡೆಹ್ರಾಡೂನ್‌ಗೆ ISBT ಬಸ್‌ನಲ್ಲಿ ಪ್ರಯಾಣ ಶುರು ಮಾಡಿದ್ದಳು. ಡೆಹ್ರಾಡೂನ್‌ ಟರ್ಮಿನಲ್‌ನಲ್ಲಿ ಬಸ್‌ನ ಡ್ರೈವರ್‌, ಕಂಡಕ್ಟರ್‌, ಕ್ಯಾಶಿಯರ್‌ ಹಾಗೂ ಇತರ ಇಬ್ಬರು ಚಾಲಕರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.

VISTARANEWS.COM


on

Uttarakhand Horror
Koo

ಡೆಹ್ರಾಡೂನ್‌: ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣ(Kolkata Doctor murder case) ಖಂಡಿಸಿ ರಾಷ್ಟ್ರವ್ಯಾಪಿ ಆಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ ಮತ್ತೊಂದು ಅಂತಹದ್ದೇ ಒಂದು ಹೀನ ಕೃತ್ಯವೊಂದು ಉತ್ತರಾಖಂಡದಲ್ಲಿ(Uttarakhand Horror) ನಡೆದಿದೆ. ಬಸ್‌ನಲ್ಲಿ ಯುವತಿ ಮೇಲೆ ಐವರು ನೀಚರು ಸಾಮೂಹಿಕ ಅತ್ಯಾಚಾರ(Gangrape) ಎಸಗಿ ಕ್ರೌರ್ಯ ಮೆರೆದಿದ್ದಾರೆ.

ಡೆಹ್ರಾಡೂನ್‌ನ ಅಂತಾರಾಜ್ಯ ಬಸ್‌ ಟ್ರಮಿನಲ್‌ನಲ್ಲಿ ಈ ಕೃತ್ಯ ನಡೆದಿದ್ದು, ನಡುರಾತ್ರಿ ಯುವತಿಯೊಬ್ಬಳು ಬಸ್‌ಸ್ಟ್ಯಾಂಡ್‌ನಲ್ಲಿ ಕುಳಿತಿರುವ ಬಗ್ಗೆ ಡೆಹ್ರಾಡೂನ್‌ ಮಕ್ಕಳ ಕಲ್ಯಾಣ ಸಮಿತಿಗೆ ಕರೆಯೊಂದು ಬಂದಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿ ಯುವತಿಯನ್ನು ಸರ್ಕಾರಿ ಹೋಂಗೆ ಕಳುಹಿಸಿ ವಿಚಾರಣೆ ನಡೆಸಿದಾಗ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಹೇಳಿಕೊಂಡಿದ್ದಾಳೆ.

ಪೊಲೀಸ್‌ ವಿಚಾರಣೆ ವೇಳೆ ಆರಂಭದಲ್ಲಿ ಯುವತಿ ತಾನು ಪಂಜಾಬ್‌ ಮೂಲದವಳು ಮತ್ತು ಅನಾಥಳು ಎಂದು ಹೇಳಿಕೊಂಡಿದ್ದರು. ಇದಾದ ಬಳಿಕ ಆಕೆ ಉತ್ತರಪ್ರದೇಶ ಮೂಲದವಳು ಎಂಬುದು ತಿಳಿದುಬಂದಿದೆ. ಆಕೆ ಹೇಳುವಂತೆ ಆಕೆ ಆ.12ರಂದು ದಿಲ್ಲಿಯಿಂದ ಡೆಹ್ರಾಡೂನ್‌ಗೆ ISBT ಬಸ್‌ನಲ್ಲಿ ಪ್ರಯಾಣ ಶುರು ಮಾಡಿದ್ದಳು. ಡೆಹ್ರಾಡೂನ್‌ ಟರ್ಮಿನಲ್‌ನಲ್ಲಿ ಬಸ್‌ನ ಡ್ರೈವರ್‌, ಕಂಡಕ್ಟರ್‌, ಕ್ಯಾಶಿಯರ್‌ ಹಾಗೂ ಇತರ ಇಬ್ಬರು ಚಾಲಕರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.

ಆರೋಪಿಗಳ ಹಡೆಮುರಿ ಕಟ್ಟಿದ ಪೊಲೀಸರು

ಯುವತಿ ದೂರಿನಾಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಾದ ಧರ್ಮೇಂದ್ರ ಕುಮಾರ್‌(32), ರಾಜ್‌ಪಾಲ್‌(57), ದೇವೇಂದ್ರ (52), ರಾಜೇಶ್‌ ಕುಮಾರ್‌ ಸೋನಕ್‌(38), ಹಾಗೂ ರವಿಕುಮಾರ್(34)ನನ್ನು ಅರೆಸ್ಟ್‌ ಮಾಡಿದ್ದಾರೆ. ವಿಚಾರಣೆ ವೇಳೆ ತಮ್ಮ ಕೃತ್ಯವನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಯುವತಿ ಪಂಜಾಬ್‌ಗೆ ಹೇಗೆ ಹೋಗಬೇಕೆಂದು ಬಸ್‌ ಚಾಲಕ ದೇವೇಂದ್ರನ ಬಳಿಕ ಕೇಳಿದ್ದಳು. ಈ ವೇಳೆ ಡೆಹ್ರಾಡೂನ್‌ಗೆ ಬಂದು ಅಲ್ಲಿಂದ ಬಸ್‌ನಲ್ಲಿ ಹೋಗಬಹುದೆಂದು ಯುವತಿಗೆ ಹೇಳಿದ್ದಾನೆ.

ಡೆಹ್ರಾಡೂನ್‌ ತಲುಪುವ ಮೊದಲೇ ಎಲ್ಲಾ ಬಸ್‌ ಪ್ರಯಾಣಿಕರು ಇಳಿದ ಕಾರಣ ಬಸ್‌ ಖಾಲಿಯಾಗಿತ್ತು. ಯುವತಿ ಒಬ್ಬಳೇ ಇದ್ದಳು. ಟರ್ಮಿನಲ್‌ ತಲುಪುತ್ತಿದ್ದಂತೆ ದೇವೇಂದ್ರ ಮತ್ತು ಧರ್ಮೇಂದ್ರ ಬಸ್‌ ಪಾರ್ಕ್‌ ಮಾಡಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ರವಿ ಮತ್ತು ರಾಜ್‌ ಪಾಲ್‌ ಕೂಡ ಆಕೆಯನ್ನು ರೇಪ್‌ ಮಾಡಿದ್ದರು.ಈ ವಿಚಾರ ತಿಳಿದು ಸ್ಥಳಕ್ಕೆ ಬಂದ ಕ್ಯಾಶಿಯರ್‌ ಕೂಡ ಇವರಿಗೆ ಸಾಥ್‌ ಕೊಟ್ಟು ಅಟ್ಟಹಾಸ ಮೆರೆದಿದ್ದಾನೆ.

ಇದನ್ನೂ ಓದಿ: Physical Abuse: ಕಿಡ್ನ್ಯಾಪ್ ಮಾಡಿ ಮಹಿಳೆ ಮೇಲೆ ಅತ್ಯಾಚಾರ, ಮಗನ ಮೇಲೂ ಹಲ್ಲೆ; 9 ಆರೋಪಿಗಳ ಅರೆಸ್ಟ್‌

Continue Reading

ಉಡುಪಿ

Assault Case : ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಝಳಪಿಸಿದ ತಲ್ವಾರ್‌; ಇಬ್ಬರು ಗಂಭೀರ

Assault Case : ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಯುವಕರ ಗ್ಯಾಂಗ್‌ವೊಂದು ಕೈಯಲ್ಲಿ ತಲ್ವಾರ್‌ ಹಿಡಿದು ರಸ್ತೆಯಲ್ಲಿ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದ್ದಾರೆ. ಅನಿರೀಕ್ಷಿತ ದಾಳಿಯಿಂದಾಗಿ ನಾಲ್ಕೈದು ಮಂದಿ ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

assault case
ಗಾಂಜಾ ನಶೆಯಲ್ಲಿ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದ ಯುವಕರ ತಂಡ.. ಆಸ್ಪತ್ರೆಗೆ ದಾಖಲಾದ ಯುವಕ
Koo

ಉಡುಪಿ: ಉಡುಪಿಯ ಕುಂದಾಪುರ ಸಮೀಪದ ವಕ್ವಾಡಿಯಲ್ಲಿ ಗಾಂಜಾ ನಶೆಯಲ್ಲಿ ಬಂದ ಹತ್ತಾರು ಯುವಕರ ಗ್ಯಾಂಗ್‌ವೊಂದು ತಲ್ವಾರ್‌ (Assault Case) ಝಳಪಿಸಿದೆ. ನಿನ್ನೆ ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ನಾಲ್ಕೈದು ಜನರಿಗೆ ಗಂಭೀರವಾಗಿ ಗಾಯವಾಗಿದೆ.

ವಕ್ವಾಡಿಯಲ್ಲಿ ಗಾಂಜಾ ನಶೆಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ದಾಂಧಲೆ ಮಾಡಿದ್ದಾರೆ. ಬಳಿಕ ಪಕ್ಕದಲ್ಲಿದ್ದ ಆಟೋ, ಬೈಕ್ ಮೇಲು ತಲ್ವಾರ್‌ ಬೀಸಿ ಹಾನಿ ಮಾಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದೆ ಪಕ್ಕದಲ್ಲಿ ನಿಂತಿದ್ದ ಅಶೋಕ್ ಮತ್ತು ಚಂದ್ರಶೇಖರ್ ಎಂಬುವವರ ಮೇಲೆ ದಾಳಿ ಮಾಡಿದ್ದಾರೆ.

ಇದರಿಂದಾಗಿ ವಕ್ವಾಡಿಯ ಚಂದ್ರಶೇಖರ್ (27) ಮತ್ತು ಅಶೋಕ್ ದೇವಾಡಿಗ (45) ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ವಕ್ವಾಡಿಯ ಆದರ್ಶ(33), ಎಡ್ವರ್ಡ್(35), ಗಣೇಶ್ ಕುಂಭಾಶಿ(28), ಗೋವರ್ಧನ್(32)ಬಂಧಿತರು. ಪ್ರಕರಣದಲ್ಲಿ ಭಾಗಿಯಾಗಿದ್ದ ಉಳಿದ ಆರೋಪಿಗಳು ಪರಾರಿ ಆಗಿದ್ದು, ಪೊಲೀಸ್‌ರು ಹುಡುಕಾಟ ನಡೆಸಿದ್ದಾರೆ.

ವಕ್ವಾಡಿ, ಗೋಪಾಡಿ ಭಾಗದಲ್ಲಿ ಗಾಂಜಾ, ಡ್ರಗ್ ನಶೆ ವಿಪರೀತವಾಗಿದ್ದು, ಅಪರಾಧ ಚಟುವಟಿಕೆ ಹೆಚ್ಚಾಗಿದೆ. ಹಲವಾರು ವರ್ಷಗಳಿಂದ ದಂಧೆ ಜತೆಗೆ ಅನೈತಿಕ ಚಟುವಟಿಕೆ ನಡೆಯುತ್ತಿದೆ. ಸಾಕಷ್ಟು ಭಾರಿ ಈ ಬಗ್ಗೆ ಸ್ಥಳೀಯರು ದೂರು ನೀಡಿದ್ದರು ಇದುವರೆಗೂ ಸರಿಯಾದ ಕ್ರಮ ತೆಗೆದುಕೊಂಡಿಲ್ಲ ಜನರು ಕಿಡಿಕಾರಿದ್ದಾರೆ.

ಇದನ್ನೂ ಓದಿ: CM Siddaramaiah: ಇಂದು ಕಟಕಟೆ ಏರಲಿದೆ ಮುಡಾ ಪ್ರಕರಣ; 20 ಅಂಶಗಳೊಂದಿಗೆ ಸಿದ್ದರಾಮಯ್ಯ ಹೈಕೋರ್ಟ್‌ಗೆ; ಇಂದು ಏನೇನಾಗಲಿದೆ?

ಚಿಕ್ಕಬಳ್ಳಾಪುರದಲ್ಲಿ ರೋಡ್‌ ರೋಮಿಯೊಗಳ ವ್ಹೀಲಿಂಗ್‌

ಚಿಕ್ಕಬಳ್ಳಾಪುರದಲ್ಲಿ ರೋಡ್‌ ರೋಮಿಯೊಗಳ ವ್ಹೀಲಿಂಗ್‌ ಹುಚ್ಚಾಟ ಹೆಚ್ಚಾಗಿದೆ. ಹುಡುಗಿಯರಿಗೆ ಗಾಳ ಹಾಕಲು ಬಸ್ ಹಿಂದೆ ವ್ಹೀಲಿಂಗ್‌ ಮಾಡಿ ಫೋಸ್‌ ಕೊಡುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ 44 ಸೇರಿದಂತೆ ಹಲವು ರಸ್ತೆಗಳಲ್ಲಿ ವ್ಹೀಲಿಂಗ್ ಹಾವಳಿಗೆ ಇತರ ಸವಾರರು ಆತಂಕಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
murder case
ಚಿಕ್ಕಬಳ್ಳಾಪುರ13 mins ago

Murder case : ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

BJP-JDS Protest
ಪ್ರಮುಖ ಸುದ್ದಿ18 mins ago

BJP-JDS Protest: ಭಂಡತನ ಬಿಟ್ಟು ರಾಜೀನಾಮೆ ಕೊಡಿ; ಸಿಎಂ ಸಿದ್ದರಾಮಯ್ಯಗೆ ಬಿಜೆಪಿ-ಜೆಡಿಎಸ್‌ ನಾಯಕರ ಆಗ್ರಹ

Chhaava teaser Vicky Kaushal Rashmika M
ಸ್ಯಾಂಡಲ್ ವುಡ್1 hour ago

Chhaava teaser: ‘ಛಾವಾ’ ಟೀಸರ್ ಔಟ್‌; ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ಗರ್ಜಿಸಿದ ವಿಕ್ಕಿ ಕೌಶಲ್!

Road Accident
ಬೆಂಗಳೂರು1 hour ago

Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

Uttarakhand Horror
ದೇಶ1 hour ago

Uttarakhand Horror: ದೇಶವನ್ನೇ ಬೆಚ್ಚಿಬೀಳಿಸೋ ಮತ್ತೊಂದು ಘಟನೆ! ಬಸ್‌ನಲ್ಲೇ ಯುವತಿ ಮೇಲೆ ಡ್ರೈವರ್‌ ಸೇರಿ ಐವರಿಂದ ಗ್ಯಾಂಗ್‌ರೇಪ್‌

muda case congress protest
ಪ್ರಮುಖ ಸುದ್ದಿ2 hours ago

MUDA Case: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ; ರಾಜಭವನ ಮುತ್ತಿಗೆಗೆ ಯತ್ನಿಸಿದ ಕಾರ್ಯಕರ್ತರು

Vettaiyan VS Kanguva Vettaiyan to clash with Suriya's Kanguva
ಕಾಲಿವುಡ್2 hours ago

Vettaiyan VS Kanguva: ರಜನಿಕಾಂತ್ ಹೊಸ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌; ʻಕಂಗುವʼ ಜತೆ ಕ್ಲ್ಯಾಶ್‌!

Viral Video
Latest2 hours ago

Viral Video: ಹೂ ಮಾರಿ ಜೀವನ ಮಾಡುವ ತಾಯಿ ಬಳಿ ಐಫೋನ್‌ಗಾಗಿ ಮಗ ಮಾಡಿದ ಬ್ಲ್ಯಾಕ್‌ಮೇಲ್‌ ಏನು ನೋಡಿ!

Duniya Vijay 20 crore collection till today
ಸ್ಯಾಂಡಲ್ ವುಡ್2 hours ago

Duniya Vijay: 20 ಕೋಟಿ ರೂ. ಕಲೆಕ್ಷನ್‌ ಮಾಡಿ ʻಭೀಮʼ ದಾಖಲೆ ? ಇಲ್ಲಿಯವರೆಗಿನ ಕಲೆಕ್ಷನ್‌ ಎಷ್ಟು?

assault case
ಉಡುಪಿ2 hours ago

Assault Case : ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಝಳಪಿಸಿದ ತಲ್ವಾರ್‌; ಇಬ್ಬರು ಗಂಭೀರ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌