Stree 2 Box Office Day 4: 200 ಕೋಟಿ ರೂ. ಕಲೆಕ್ಷನ್‌ ಮಾಡಿ ಗೆದ್ದು ಬೀಗಿದ ‘ಸ್ತ್ರೀ 2’; ನಾಲ್ಕು ದಿನದಲ್ಲಿ ದಾಖಲೆ ಗಳಿಕೆ! - Vistara News

ಬಾಲಿವುಡ್

Stree 2 Box Office Day 4: 200 ಕೋಟಿ ರೂ. ಕಲೆಕ್ಷನ್‌ ಮಾಡಿ ಗೆದ್ದು ಬೀಗಿದ ‘ಸ್ತ್ರೀ 2’; ನಾಲ್ಕು ದಿನದಲ್ಲಿ ದಾಖಲೆ ಗಳಿಕೆ!

Stree 2 Box Office Day 4:ಹಾರರ್-ಕಾಮಿಡಿ ಶೈಲಿಯಲ್ಲಿ ‘ಸ್ತ್ರೀ 2′ ಸಿದ್ಧವಾಗಿದೆ. ಈ ಚಿತ್ರ ಆಗಸ್ಟ್ 15ರಂದು ಬಿಡುಗಡೆಯಾಗಿದೆ. ‘ಸ್ತ್ರೀ 2′ ಜೊತೆಗೆ ಅಕ್ಷಯ್ ಕುಮಾರ್ ಅವರ ‘ಖೇಲ್ ಖೇಲ್ ಮೇ’ ಮತ್ತು ಜಾನ್ ಅಬ್ರಹಾಂ, ಶಾರ್ವರಿ ವಾಘ್ ಅವರ ‘ವೇದ್’ ಕೂಡ ಆಗಸ್ಟ್ 15 ರಂದು ಬಿಡುಗಡೆ ಆಗಿದೆ. ಈ ಪೈಕಿ ‘ಸ್ತ್ರೀ 2’ ಗೆದ್ದಿದೆ.

VISTARANEWS.COM


on

Stree 2 Box Office Day 4 Rajkummar Rao Shraddha Starrer Creates History
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು:  ಶ್ರದ್ಧಾ ಕಪೂರ್, ರಾಜ್‌ಕುಮಾರ್ ರಾವ್, ಅಪರಶಕ್ತಿ ಖುರಾನಾ, ಅಭಿಷೇಕ್ ಬ್ಯಾನರ್ಜಿ ಮತ್ತು ಪಂಕಜ್ ತ್ರಿಪಾಠಿ ನಟಿಸಿರುವ ಸ್ಟ್ರೀ 2 ಬಾಕ್ಸ್ ಆಫೀಸ್‌ನಲ್ಲಿ (Stree 2 Box Office Day 4) ಕೊಳ್ಳೆ ಹೊಡೆದಿದೆ. ಈ ಚಿತ್ರವು ತನ್ನ ಮೊದಲ ದಿನದಲ್ಲಿ ಭಾರತದಲ್ಲಿ 60.3 ಕೋಟಿ ರೂ. ಕಲೆಕ್ಷನ್‌ ಮಾಡಿತ್ತು. ವಾರಾಂತ್ಯದಲ್ಲಿ 204 ಕೋಟಿ ಕಲೆಕ್ಷನ್‌ ಮಾಡಿ ಗೆದ್ದು ಬೀಗಿದೆ.

ತರಣ್ ಆದರ್ಶ್ ಟ್ವೀಟ್‌ ಮಾಡಿ ʻʻಭಾನುವಾರ ಸ್ಟ್ರೀ 2 58.20 ಕೋಟಿ ರೂ. ಸಂಗ್ರಹಿಸಿದೆ. ಇದು ಚಿತ್ರದ ಮೊದಲ ದಿನದ ಕಲೆಕ್ಷನ್‌ಗಿಂತ ಹೆಚ್ಚು. ಸಂಗ್ರಹಣೆಯು ಸ್ತ್ರೀ 2 ರೂ 200 ಕೋಟಿ ಕ್ಲಬ್‌ಗೆ ಪ್ರವೇಶಿಸಲು ಕಾರಣವಾಗಿದೆʼʼಎಂದು ಬರೆದುಕೊಂಡಿದ್ದಾರೆ. ರಕ್ಷಾ ಬಂಧನದ ಕಾರಣದಿಂದ ಸೋಮವಾರದಂದು ಸ್ತ್ರೀ 2 ದೊಡ್ಡ ಕಲೆಕ್ಷನ್‌ ಮಾಡಬಹುದು ಎನ್ನಲಾಗಿದೆ. ಆಗಸ್ಟ್ 18, 2024 ರಂದು ಒಟ್ಟಾರೆ 72.74% ಹಿಂದಿ ಆಕ್ಯುಪೆನ್ಸಿಯನ್ನು ಹೊಂದಿತ್ತು” ಎಂದು ವರದಿ ಹೇಳಿದೆ.

ಹಾರರ್-ಕಾಮಿಡಿ ಶೈಲಿಯಲ್ಲಿ ‘ಸ್ತ್ರೀ 2′ ಸಿದ್ಧವಾಗಿದೆ. ಈ ಚಿತ್ರ ಆಗಸ್ಟ್ 15ರಂದು ಬಿಡುಗಡೆಯಾಗಿದೆ. ‘ಸ್ತ್ರೀ 2′ ಜೊತೆಗೆ ಅಕ್ಷಯ್ ಕುಮಾರ್ ಅವರ ‘ಖೇಲ್ ಖೇಲ್ ಮೇ’ ಮತ್ತು ಜಾನ್ ಅಬ್ರಹಾಂ, ಶಾರ್ವರಿ ವಾಘ್ ಅವರ ‘ವೇದ್’ ಕೂಡ ಆಗಸ್ಟ್ 15 ರಂದು ಬಿಡುಗಡೆ ಆಗಿದೆ. ಈ ಪೈಕಿ ‘ಸ್ತ್ರೀ 2’ ಗೆದ್ದಿದೆ.

ಇದನ್ನೂ ಓದಿ: Stree 2 Box Office: ಗೆದ್ದು ಬೀಗಿದ ‘ಸ್ತ್ರೀ 2’ ಚಿತ್ರ; ಎರಡೇ ದಿನದಲ್ಲಿ 100 ಕೋಟಿ ರೂ. ಭರ್ಜರಿ ಕಲೆಕ್ಷನ್‌!

ಶ್ರದ್ಧಾ ಕಪೂರ್, ರಾಜ್​ಕುಮಾರ್ ರಾವ್, ಅಭಿಷೇಕ್ ಬ್ಯಾನರ್ಜಿ, ಪಂಕಜ್ ತ್ರಿಪಾಠಿ ‘ಸ್ತ್ರೀ 2 ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಪ್ರೀಮಿಯರ್ ಶೋಗಳಿಂದ 8 ಕೋಟಿ ರೂಪಾಯಿ ಹಾಗೂ ಮೊದಲ ದಿನದ ಗಳಿಕೆಯಿಂದ 46 ಕೋಟಿ ರೂಪಾಯಿ ಸಿಕ್ಕಿತ್ತು. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 54.35 ಕೋಟಿ ರೂಪಾಯಿ ಆಗಿತ್ತು. ಈ ಮೂಲಕ ‘ಕಲ್ಕಿ 2898 ಎಡಿ’ ಚಿತ್ರದ ಮೊದಲ ದಿನದ ಕಲೆಕ್ಷನ್​ನ ಈ ಸಿನಿಮಾ ಹಿಂದಿಕ್ಕಿತ್ತು.

ಸ್ತ್ರೀ 1 ಸಿನಿಮಾ 2018ರಲ್ಲಿ ಬಿಡುಗಡೆಯಾಯಿತು. ಸ್ತ್ರೀ 1ಚಿತ್ರ ಬಿಡುಗಡೆಯಾದ ಹೊಸ್ತಿಲಲ್ಲಿ ವ್ಯಾಪಕವಾಗಿ ಮೆಚ್ಚುಗೆ ಪಡೆದು, ಭಾರಿ ಕಲೆಕ್ಷನ್‌ ಮಾಡಿತ್ತು.

ಸ್ತ್ರೀ’ ಸಿನಿಮಾದ ಮುಂದುವರಿದ ಭಾಗವಾಗಿ ‘ಸ್ತ್ರೀ 2’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಲ್ಲಿ ಹಲವು ವಿಶೇಷ ಅತಿಥಿ ಪಾತ್ರಗಳು ಇವೆ. ವರುಣ್ ಧವನ್ ಅವರು ಕೂಡ ಈ ಚಿತ್ರದಲ್ಲಿ ಬಂದು ಹೋಗಿದ್ದಾರೆ. ಈ ಚಿತ್ರದಿಂದ ಬಾಲಿವುಡ್​ಗೆ ಮೊದಲ ದೊಡ್ಡ ಗೆಲುವು ಸಿಕ್ಕಂತೆ ಆಗಿದೆ. ಈ ಸಿನಿಮಾಗೆ ಬುಕ್ ಮೈ ಶೋನಲ್ಲಿ ಒಳ್ಳೆಯ ರೇಟಿಂಗ್ ಸಿಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Deepika Padukone: ತುಂಬು ಗರ್ಭಿಣಿ ದೀಪಿಕಾ ಪಡುಕೋಣೆ ಮುಂಬೈನಲ್ಲಿ ಸುತ್ತಾಟ; ವಿಡಿಯೊ ವೈರಲ್‌!

Deepika Padukone: ಸೆಪ್ಟೆಂಬರ್‌ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ ನಟಿ. 2018 ರಲ್ಲಿ ಇಟಲಿಯ ಲೇಕ್ ಕೊಮೊದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ 38 ವರ್ಷದ ದೀಪಿಕಾ ಮತ್ತು ರಣವೀರ್ ವಿವಾಹವಾದರು. ನಟಿಯ ಲುಕ್‌ ಕಂಡು ಫ್ಯಾನ್ಸ್‌ ಕೂಡ ಮುಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

VISTARANEWS.COM


on

Koo

ಬೆಂಗಳೂರು: ತುಂಬು ಗರ್ಭಿಣಿ ದೀಪಿಕಾ ಪಡುಕೋಣೆ (Deepika Padukone) ಇತ್ತೀಚೆಗೆ ಮುಂಬೈನಲ್ಲಿ ಕಾಣಿಸಿಕೊಂಡಿದಾರೆ. ನಟಿ-ಹಾಗೂ ರಣವೀರ್ ಸಿಂಗ್ ಸೆಪ್ಟೆಂಬರ್‌ನಲ್ಲಿ ಮೊದಲ ಮಗುವನ್ನು ಸ್ವಾಗತಿಸಲು ಸಿದ್ಧರಾಗಿದ್ದಾರೆ. ಭಾನುವಾರ ರಾತ್ರಿ ತುಂಬು ಗರ್ಭಿಣಿ ದೀಪಿಕಾ ನಗರದಲ್ಲಿ ತನ್ನ ಕಾರಿನ ಕಡೆಗೆ ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ. ಉಡುಪನ್ನು ಧರಿಸಿದ್ದರು ಕೂದಲನ್ನು ಬನ್‌ ಕಟ್ಟಿದ್ದರು. Deepika Padukone spotted out

ಸೆಪ್ಟೆಂಬರ್‌ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ ನಟಿ. 2018 ರಲ್ಲಿ ಇಟಲಿಯ ಲೇಕ್ ಕೊಮೊದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ 38 ವರ್ಷದ ದೀಪಿಕಾ ಮತ್ತು ರಣವೀರ್ ವಿವಾಹವಾದರು. ನಟಿಯ ಲುಕ್‌ ಕಂಡು ಫ್ಯಾನ್ಸ್‌ ಕೂಡ ಮುಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. “ದೀಪಿಕಾ, ನಿಮ್ಮ ಸೌಂದರ್ಯವು ಕೆಲವು ಜನರನ್ನು ಕೊಲ್ಲುತ್ತಿದೆʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ತಾಯಿಯಾಗುವ ಸಂಭ್ರಮದಲ್ಲಿರುವ ನಟಿ ದೀಪಿಕಾ ಪಡುಕೋಣೆ ತನ್ನ ಬೇಬಿ ಬಂಪ್ ಅನ್ನು ತುಂಬಾ ವಿಶೇಷವಾದ ಲುಕ್‌ನಲ್ಲಿ ತೋರಿಸಲು ಪ್ರಾರಂಭಿಸಿದ್ದಾರೆ. ಹಾಗೇ ಗರ್ಭಿಣಿಯರು ತಮ್ಮ ಬೇಬಿ ಬಂಪ್‌ನಲ್ಲಿ ಯಾವ ರೀತಿ ಫ್ಯಾಷನ್ ಡ್ರೆಸ್ ಧರಿಸಬಹುದು ಎಂದು ತೋರಿಸಿಕೊಡುತ್ತಿದ್ದಾರೆ.

ಇದನ್ನೂ ಓದಿ: Deepika Padukone: ಡಿನ್ನರ್ ಡೇಟ್‌ನಲ್ಲಿ ಗುಳಿ ಕೆನ್ನೆ ಸುಂದರಿ ; ದೀಪಿಕಾ ಲುಕ್‌ಗೆ ಫ್ಯಾನ್ಸ್‌ ಫಿದಾ!

ಸೆಪ್ಟೆಂಬರ್‌ನಲ್ಲಿ ಮಗು ಜನಿಸಲಿದೆ ಎಂದು ದೀಪಿಕಾ ದಂಪತಿ ಹೇಳಿಕೊಂಡಿದ್ದಾರೆ. ಆರು ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ ರಣವೀರ್-ದೀಪಿಕಾ 2018ರಂದು ಇಟಲಿಯ ಲೇಕ್ ಕೊಮೊದಲ್ಲಿ ಮದುವೆಯಾಗಿದ್ದರು.ಸಿನಿಮಾ ವಿಚಾರಕ್ಕೆ ಬಂದರೆ ದೀಪಿಕಾ ಅವರು ರೋಹಿತ್ ಶೆಟ್ಟಿ ಅವರ ʻಸಿಂಗಮ್ ಅಗೇನ್‌ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಜಯ್ ದೇವಗನ್, ಕರೀನಾ ಕಪೂರ್, ರಣವೀರ್ ಸಿಂಗ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ಮತ್ತು ಅರ್ಜುನ್ ಕಪೂರ್ ಜೊತೆಗೆ ಲೇಡಿ ಸಿಂಗಮ್ ಪಾತ್ರಕ್ಕೆ ದೀಪಿಕಾ ಹೆಜ್ಜೆ ಹಾಕಿದ್ದಾರೆ.

Continue Reading

ಬಾಲಿವುಡ್

Kangana Ranaut: ಖಾನ್‌ಗಳ ಸಿನಿಮಾ ಆಫರ್‌ ಎಂದಿಗೂ ಒಪ್ಪಲ್ಲ ಎಂದ ಕಂಗನಾ

Kangana Ranaut: ಇತ್ತೀಚಿನ ಪಾಡ್‌ಕ್ಯಾಸ್ಟ್‌ನಲ್ಲಿ, ಕಂಗನಾ ಅವರು ಐದು ಎ-ಲಿಸ್ಟರ್‌ ನಟರೊಂದಿಗೆ ಕೆಲಸ ಮಾಡಿಲ್ಲ ಎಂದು ಹೆಮ್ಮೆಯಿಂದ ಬಹಿರಂಗಪಡಿಸಿದ್ದಾರೆ. ಈ ತಾರೆಯರು ನಟಿಸಿದ ಚಲನಚಿತ್ರಗಳಲ್ಲಿ ಸಾಮಾನ್ಯವಾಗಿ ಟೆಂಪ್ಲೇಟ್ ಅನ್ನು ಒಳಗೊಂಡಿರುತ್ತವೆ. ಅದರಲ್ಲಿ ಮಹಿಳೆಯರನ್ನು ಕೆಲವು ದೃಶ್ಯಗಳು ಮತ್ತು ಒಂದೆರಡು ಹಾಡುಗಳಿಗೆ ಮಾತ್ರ ಸೀಮಿತ ಮಾಡುತ್ತಾರೆ. ಅಂತಹ ಸಿನಿಮಾಗಳನ್ನು ಮಾಡಲು ಬಯಸುವುದಿಲ್ಲ ಎಂದು ಕಂಗನಾ ಹೇಳಿದರು.

VISTARANEWS.COM


on

Kangana Ranaut Says She REJECTED Films with Ranbir Kapoor
Koo

ಬೆಂಗಳೂರು: ರಣಬೀರ್ ಕಪೂರ್ ಮತ್ತು ಅಕ್ಷಯ್ ಕುಮಾರ್ ನಾಯಕರಾಗಿ ನಟಿಸಿರುವ ಚಿತ್ರಗಳ ಆಫರ್‌ಗಳನ್ನು ನಿರಾಕರಿಸಿರುವುದಾಗಿ ಕಂಗನಾ ರಣಾವತ್‌ (Kangana Ranaut) ಬಹಿರಂಗಪಡಿಸಿದ್ದಾರೆ. ಶಾರುಖ್ ಖಾನ್, ಸಲ್ಮಾನ್ ಖಾನ್, ಆಮೀರ್ ಖಾನ್, ಅಕ್ಷಯ್ ಕುಮಾರ್ ಮತ್ತು ರಣಬೀರ್ ಕಪೂರ್ ಅವರೊಂದಿಗೆ ಚಲನಚಿತ್ರಗಳನ್ನು ಮಾಡದೆಯೇ ನಟಿಯರು ಬಾಲಿವುಡ್‌ನಲ್ಲಿ ಛಾಪು ಮೂಡಿಸಬಹುದು ಎಂಬುದಕ್ಕೆ ಇದು ಉದಾಹರಣೆಯಾಗಿದೆ ಎಂದು ನಟಿ ಹೇಳಿದರು.

ಇತ್ತೀಚಿನ ಪಾಡ್‌ಕ್ಯಾಸ್ಟ್‌ನಲ್ಲಿ, ಕಂಗನಾ ಅವರು ಐದು ಎ-ಲಿಸ್ಟರ್‌ ನಟರೊಂದಿಗೆ ಕೆಲಸ ಮಾಡಿಲ್ಲ ಎಂದು ಹೆಮ್ಮೆಯಿಂದ ಬಹಿರಂಗಪಡಿಸಿದ್ದಾರೆ. ಈ ತಾರೆಯರು ನಟಿಸಿದ ಚಲನಚಿತ್ರಗಳಲ್ಲಿ ಸಾಮಾನ್ಯವಾಗಿ ಟೆಂಪ್ಲೇಟ್ ಅನ್ನು ಒಳಗೊಂಡಿರುತ್ತವೆ. ಅದರಲ್ಲಿ ಮಹಿಳೆಯರನ್ನು ಕೆಲವು ದೃಶ್ಯಗಳು ಮತ್ತು ಒಂದೆರಡು ಹಾಡುಗಳಿಗೆ ಮಾತ್ರ ಸೀಮಿತ ಮಾಡುತ್ತಾರೆ. ಅಂತಹ ಸಿನಿಮಾಗಳನ್ನು ಮಾಡಲು ಬಯಸುವುದಿಲ್ಲ ಎಂದು ಕಂಗನಾ ಹೇಳಿದರು.

ನಟಿ ಮಾತನಾಡಿ ʻʻನಾನು ಖಾನ್ ನಾಯಕತ್ವದ ಚಿತ್ರಗಳನ್ನು ನಿರಾಕರಿಸಿದೆ. ಎಲ್ಲಾ ಖಾನ್‌ಗಳು ತುಂಬಾ ಒಳ್ಳೆಯವರು. ನನ್ನೊಂದಿಗೆ ಎಂದಿಗೂ ಅನುಚಿತವಾಗಿ ವರ್ತಿಸಲಿಲ್ಲ. ಹೌದು, ನನ್ನೊಂದಿಗೆ ಅನುಚಿತವಾಗಿ ವರ್ತಿಸಿದವರೂ ಇದ್ದಾರೆ. ಆದರೆ ನಾನು ಯಾವಾಗಲೂ ಖಾನ್‌ ಚಿತ್ರಗಳನ್ನು ಮಾಡಲು ಇಚ್ಟ ಪಡುವುದಿಲ್ಲ. ಅವರುಗಳ ಸಿನಿಮಾಗಳಲ್ಲಿ ನಾಯಕಿಯರನ್ನು ಕೇವಲ ಎರಡು ದೃಶ್ಯಗಳು ಮತ್ತು ಒಂದು ಹಾಡಿಗೆ ಮಾತ್ರ ಸಿಮೀತ ಮಾಡುತ್ತಾರೆ. ನಾನು ಎ-ಲಿಸ್ಟರ್ ಮಹಿಳೆಯಾಗಿ ಇರಲುಬಯಸುತ್ತೇನೆ, ಖಾನ್‌ಗಳೊಂದಿಗೆ ಕೆಲಸ ಮಾಡದ ಟಾಪ್-ಮೋಸ್ಟ್ ನಟಿ ನಾನು, ”ಎಂದು ಕಂಗನಾ ಹೇಳಿದರು.

ಇದನ್ನೂ ಓದಿ: Kangana Ranaut: ʻಎಮರ್ಜೆನ್ಸಿʼ ಟ್ರೈಲರ್‌ ಔಟ್‌; ಕಂಗನಾ ರಣಾವತ್‌ಗೆ ರಾಷ್ಟ್ರ ಪ್ರಶಸ್ತಿ ಫಿಕ್ಸ್‌ ಅಂದ್ರು ಫ್ಯಾನ್ಸ್‌!

“ನನ್ನ ನಂತರ ಬರಲಿರುವ ಮಹಿಳೆಯರಿಗೆ ನನ್ನ ಕೈಲಾದದ್ದನ್ನು ಸಹಾಯ ಮಾಡಲು ಬಯಸುತ್ತೇನೆ. ಯಾವುದೇ ಖಾನ್‌ಗಳು ನಿಮ್ಮನ್ನು ಯಶಸ್ವಿಯಾಗಿಸಲು ಸಾಧ್ಯವಿಲ್ಲ, ಯಾವುದೇ ಕುಮಾರ್ ನಿಮ್ಮನ್ನು ಯಶಸ್ವಿಯಾಗಿಸಲು ಸಾಧ್ಯವಿಲ್ಲ, ಯಾವುದೇ ಕಪೂರ್ ನಿಮ್ಮನ್ನು ಯಶಸ್ವಿಯಾಗಿಸಲು ಸಾಧ್ಯವಿಲ್ಲ. ನಾನು ರಣಬೀರ್ ಕಪೂರ್ ಅವರ ಚಿತ್ರಗಳಿಗೆ ನೋ ಹೇಳಿದೆ, ಅಕ್ಷಯ್ ಕುಮಾರ್ ಅವರ ಚಿತ್ರಗಳಿಗೆ ನಾನು ನೋ ಹೇಳಿದೆ. ನಾಯಕನೊಬ್ಬನೇ ನಾಯಕಿಯನ್ನು ಯಶಸ್ವಿಗೊಳಿಸಬಲ್ಲ ಎಂಬ ಮೂಲಮಾದರಿಯಾಗಲು ನಾನು ಬಯಸಲಿಲ್ಲʼʼಎಂದರು.

ಕ್ವೀನ್ ಮತ್ತು ತನು ವೆಡ್ಸ್ ಮನು ಚಿತ್ರಗಳ ನಂತರ ಕಂಗನಾ ಮಹಿಳಾ ಪ್ರಧಾನ ಸಿನಿಮಾಗಳನ್ನೇ ಹೆಚ್ಚಾಗಿ ಮಾಡಿದರು. ಫ್ಯಾಷನ್ ಮತ್ತು ತಲೈವಿಯಂತಹ ಸಿನಿಮಾಗಳನ್ನು ಸಹ ಮಾಡಿದ್ದಾರೆ, ಇದು ಎ-ಲಿಸ್ಟ್ ಬಾಲಿವುಡ್ ತಾರೆಯನ್ನು ಒಳಗೊಂಡಿರಲಿಲ್ಲ. ಕಂಗನಾ ಈಗ ಎಮರ್ಜೆನ್ಸಿ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸೆಪ್ಟೆಂಬರ್​ 6ರಂದು ಈ ಸಿನಿಮಾ ತೆರೆಗೆ ಬರಲಿದೆ. ಅನುಪಮ್​ ಖೇರ್​, ಶ್ರೇಯಸ್​ ತಲ್ಪಡೆ, ಮಿಲಿಂದ್​ ಸೋಮನ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.  ಈ ಹಿಂದೆ ಈ ವರ್ಷ ನವೆಂಬರ್ 24ರಂದು ಎಮರ್ಜೆನ್ಸಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಲಾಗಿತ್ತು. 

Continue Reading

ಬಿಗ್ ಬಾಸ್

Isha Koppikar: ʻಸೂರ್ಯವಂಶʼ ಖ್ಯಾತಿಯ ನಟಿ ಬಿಗ್‌ ಬಾಸ್‌ಗೆ ಹೋಗೋದು ಫಿಕ್ಸ್‌!

Isha Koppikar:ಇಶಾ ಕೊಪ್ಪಿಕರ್ ಹಿಂದಿ ಜತೆ ಕನ್ನಡ, ತಮಿಳು, ತೆಲುಗು ಹಾಗೂ ಮರಾಠಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದರಲ್ಲೂ ಬಾಲಿವುಡ್‌ನ ‘ಕಂಪನಿ’, ‘ಕಾಂಠೆ’, ‘ಡಾನ್’ ಅಂತಹ ಯಶಸ್ವಿ ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದ್ದರು.

VISTARANEWS.COM


on

Isha Koppikar Bigg Boss 18 Is Isha Koppikar a confirmed contestant
Koo

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಜತೆ ʻಸೂರ್ಯವಂಶʼ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ಮುಂಬೈ ನಟಿ ಇಶಾ ಕೊಪ್ಪಿಕರ್ (Isha Koppikar) ಚಿತ್ರರಂಗದಲ್ಲಿ ಅತ್ಯಂತ ಜನಪ್ರಿಯ ಹೆಸರುಗಳಲ್ಲಿ ಒಬ್ಬರು. ನಟಿ ಹಿಂದಿ ಚಿತ್ರರಂಗದಲ್ಲೂ ಹೆಸರು ಗಳಿಸಿದ್ದಾರೆ.  ಹಿಂದಿಯ ಬಿಗ್​ಬಾಸ್​ಗೆ ಮೊದಲ ಎಂಟ್ರಿಯಾಗಿ ಇಶಾ ಕೊಪ್ಪಿಕರ್​ ಹೆಸರು ಕನ್​ಫರ್ಮ್​ ಆಗಿದೆ. ಈ ಕುರಿತು ಖುದ್ದು ನಟಿ ಹೇಳಿದ್ದಾರೆ ಎನ್ನಲಾಗಿದೆ. 

ಇಶಾ ಕೊಪ್ಪಿಕರ್ ಹಿಂದಿ ಜತೆ ಕನ್ನಡ, ತಮಿಳು, ತೆಲುಗು ಹಾಗೂ ಮರಾಠಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದರಲ್ಲೂ ಬಾಲಿವುಡ್‌ನ ‘ಕಂಪನಿ’, ‘ಕಾಂಠೆ’, ‘ಡಾನ್’ ಅಂತಹ ಯಶಸ್ವಿ ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದ್ದರು. ಕನ್ನಡದಲ್ಲೂ ಐದು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಸೂರ್ಯವಂಶ’,’ಹೂ ಅಂತಿಯಾ ಹೂಂ ಅಂತಿಯಾ’, ‘ಓ ನನ್ನ ನಲ್ಲೆ’, ‘ಲೂಟಿ’ ಹಾಗೂ ನಾಲ್ಕು ವರ್ಷಗಳ ಹಿಂದಷ್ಟೇ ತೆರೆಕಂಡಿರೋ ‘ಕವಚ’ ಸಿನಿಮಾದಲ್ಲಿ ನಟಿಸಿದ್ದರು. ಇದೀಗ ಅವರು ಹಿಂದಿಯ ಬಿಗ್​ಬಾಸ್​ಗೆ ಮೊದಲ ಸ್ಪರ್ಧಿಯಾಗಿ ಎಂಟ್ರಿ ಕೊಡಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Isha Koppikar: ಖ್ಯಾತ ನಟ ನನಗೆ ಏಕಾಂತದಲ್ಲಿ ಭೇಟಿಯಾಗುವಂತೆ ಹೇಳಿದ್ದ ಎಂದ ʻಸೂರ್ಯವಂಶʼ ನಟಿ!

ಇತ್ತೇಚೆಗೆ ನಟಿ ಕಾಸ್ಟಿಂಗ್ ಕೌಚ್ ಅನುಭವವನ್ನು ಹಂಚಿಕೊಂಡಿದ್ದರು. ಸಿದ್ಧಾರ್ಥ್ ಕಣ್ಣನ್ ಅವರೊಂದಿಗಿನ ಸಂದರ್ಶನದಲ್ಲಿ, ಇಶಾ ಮಾತನಾಡಿ ʻʻಆಗೆಲ್ಲ ಮಿ ಟೂ ಭಿಯಾನ ಇರಲಿಲ್ಲ. ನನ್ನ ಕಾಲದಲ್ಲಿ ಅನೇಕ ನಟಿಯರು ಇಂಡಸ್ಟ್ರಿ ತೊರೆದರು. ಕೆಲವೇ ಕೆಲವರು ಇಂಡಸ್ಟ್ರಿಯಲ್ಲಿ ಇದ್ದರು. ಅದರಲ್ಲಿ ನಾನೂ ಒಬ್ಬಳು. ನಾನು 18 ವರ್ಷವನಿದ್ದಾಗ ನಟ ಕಾಸ್ಟಿಂಗ್ ಕೌಚ್‌ಗಾಗಿ ಸಂಪರ್ಕಿಸಿದರು. ಕೆಲಸ ಸಿಗಬೇಕಾದರೆ ನಟರ ಜೊತೆ ‘ಫ್ರೆಂಡ್ಲಿ’ ಆಗಬೇಕು ಅಂತ ಹೇಳಿದ್ರು. ನೀವು ಯಾವ ಅರ್ಥದಲ್ಲಿ ‘ಫ್ರೆಂಡ್ಲಿ’ ಆಗಿರಬೇಕು ಎಂದು ಹೇಳುತ್ತಿದ್ದೀರಿ ಅಂತ ಅವರಿಗೆ ಮರು ಪ್ರಶ್ನೆ ಮಾಡಿದ್ದೆ ಎಂದಿದ್ದಾರೆ. ಇನ್ನೂ.. ಇದೊಂದೇ ಅಲ್ಲ. ಮತ್ತೊಮ್ಮೆ.. ಮತ್ತೊಬ್ಬ ಸ್ಟಾರ್‌ ನನಗೆ ಸಿಂಗಲ್ ಆಗಿ ಏಕಾಂತದಲ್ಲಿ ಭೇಟಿಯಾಗುವಂತೆ ಹೇಳಿದ್ದ ಎಂದಿದ್ದಾರೆ. ಡ್ರೈವರ್ ಅಥವಾ ಬೇರೆ ಯಾರನ್ನೂ ಜತೆಗೆ ಕರೆದುಕೊಂಡು ಬರಬಾರದು ಎಂಬ ಷರತ್ತನ್ನೂ ಹಾಕಿದ್ದ ಎಂದಿರುವ ಇಶಾ ಕೊಪ್ಪಿಕರ್, ಆ ಕಾಲಕ್ಕೆ ಆತ ಹಿಂದಿ ಚಿತ್ರರಂಗದ ‘ಎ’ ದರ್ಜೆಯ ನಾಯಕನಾಗಿದ್ದ ಎಂದು ಕೂಡ ಹೇಳಿದ್ದಾರೆ. ನನ್ನ ಜೊತೆ ಚಿತ್ರರಂಗದ ಬಂದ ಹಲವಾರು ನಾಯಕಿಯರು ಈ ಕಾಸ್ಟಿಂಗ್ ಕೌಚ್ ಕಾರಣಕ್ಕೆ ಚಿತ್ರರಂಗದಿಂದ ದೂರ ಸರೆದರು ಎಂದು ಹೇಳಿಕೊಂಡಿದ್ದರು.

ಬಾಲಿವುಡ್​ ನಟ ಸಲ್ಮಾನ್​ ಖಾನ್​ ನಡೆಸಿಕೊಡುವ ಬಿಗ್​ಬಾಸ್​ ಷೋ 18ನೇ ಸೀಸನ್​ ಬರುವ ಅಕ್ಟೋಬರ್​ 5ರಿಂದ ಶುರುವಾಗಲಿದೆ.

Continue Reading

ಬಾಲಿವುಡ್

Stree 2 Box Office: ಗೆದ್ದು ಬೀಗಿದ ‘ಸ್ತ್ರೀ 2’ ಚಿತ್ರ; ಎರಡೇ ದಿನದಲ್ಲಿ 100 ಕೋಟಿ ರೂ. ಭರ್ಜರಿ ಕಲೆಕ್ಷನ್‌!

Stree 2 Box Office: ಹಾರರ್-ಕಾಮಿಡಿ ಶೈಲಿಯಲ್ಲಿ ‘ಸ್ತ್ರೀ 2′ ಸಿದ್ಧವಾಗಿದೆ. ಈ ಚಿತ್ರ ಆಗಸ್ಟ್ 15ರಂದು ಬಿಡುಗಡೆಯಾಗಿದೆ. ‘ಸ್ತ್ರೀ 2′ ಜೊತೆಗೆ ಅಕ್ಷಯ್ ಕುಮಾರ್ ಅವರ ‘ಖೇಲ್ ಖೇಲ್ ಮೇ’ ಮತ್ತು ಜಾನ್ ಅಬ್ರಹಾಂ, ಶಾರ್ವರಿ ವಾಘ್ ಅವರ ‘ವೇದ್’ ಕೂಡ ಆಗಸ್ಟ್ 15 ರಂದು ಬಿಡುಗಡೆ ಆಗಿದೆ. ಈ ಪೈಕಿ ‘ಸ್ತ್ರೀ 2’ ಗೆದ್ದಿದೆ.

VISTARANEWS.COM


on

Stree 2 Box Office Day 2 Shraddha Kapoor-Rajkummar Rao Film Creates History
Koo

ಬೆಂಗಳೂರು: ಶ್ರದ್ಧಾ ಕಪೂರ್, ರಾಜ್‌ಕುಮಾರ್ ರಾವ್, ಅಪರಶಕ್ತಿ ಖುರಾನಾ, ಅಭಿಷೇಕ್ ಬ್ಯಾನರ್ಜಿ ಮತ್ತು ಪಂಕಜ್ ತ್ರಿಪಾಠಿ ನಟಿಸಿರುವ ಸ್ಟ್ರೀ 2 ಬಾಕ್ಸ್ ಆಫೀಸ್‌ನಲ್ಲಿ ಕೊಳ್ಳೆ ಹೊಡೆದಿದೆ. ಈ ಚಿತ್ರವು ತನ್ನ ಮೊದಲ ದಿನದಲ್ಲಿ ಭಾರತದಲ್ಲಿ 60.3 ಕೋಟಿ ರೂ. ಕಲೆಕ್ಷನ್‌ ಮಾಡಿದೆ. ಒಟ್ಟು ಕಲೆಕ್ಷನ್ (Stree 2 Box Office) ಸುಮಾರು 76.5 ಕೋಟಿ ರೂ. ಅದರ ಎರಡನೇ ದಿನದಲ್ಲಿ, ಚಿತ್ರ 30 ಕೋಟಿ ರೂ. ಗಳಿಕೆ ಕಂಡಿದೆ. ಸ್ಟ್ರೀ 2 ನ ಒಟ್ಟು ಗಳಿಕೆ 100 ಕೋಟಿ ರೂ ಆಗಿದೆ ವರದಿಯಾಗಿದೆ.

ಹಾರರ್-ಕಾಮಿಡಿ ಶೈಲಿಯಲ್ಲಿ ‘ಸ್ತ್ರೀ 2′ ಸಿದ್ಧವಾಗಿದೆ. ಈ ಚಿತ್ರ ಆಗಸ್ಟ್ 15ರಂದು ಬಿಡುಗಡೆಯಾಗಿದೆ. ‘ಸ್ತ್ರೀ 2′ ಜೊತೆಗೆ ಅಕ್ಷಯ್ ಕುಮಾರ್ ಅವರ ‘ಖೇಲ್ ಖೇಲ್ ಮೇ’ ಮತ್ತು ಜಾನ್ ಅಬ್ರಹಾಂ, ಶಾರ್ವರಿ ವಾಘ್ ಅವರ ‘ವೇದ್’ ಕೂಡ ಆಗಸ್ಟ್ 15 ರಂದು ಬಿಡುಗಡೆ ಆಗಿದೆ. ಈ ಪೈಕಿ ‘ಸ್ತ್ರೀ 2’ ಗೆದ್ದಿದೆ.

ಶ್ರದ್ಧಾ ಕಪೂರ್, ರಾಜ್​ಕುಮಾರ್ ರಾವ್, ಅಭಿಷೇಕ್ ಬ್ಯಾನರ್ಜಿ, ಪಂಕಜ್ ತ್ರಿಪಾಠಿ ‘ಸ್ತ್ರೀ 2 ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಪ್ರೀಮಿಯರ್ ಶೋಗಳಿಂದ 8 ಕೋಟಿ ರೂಪಾಯಿ ಹಾಗೂ ಮೊದಲ ದಿನದ ಗಳಿಕೆಯಿಂದ 46 ಕೋಟಿ ರೂಪಾಯಿ ಸಿಕ್ಕಿತ್ತು. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 54.35 ಕೋಟಿ ರೂಪಾಯಿ ಆಗಿತ್ತು. ಈ ಮೂಲಕ ‘ಕಲ್ಕಿ 2898 ಎಡಿ’ ಚಿತ್ರದ ಮೊದಲ ದಿನದ ಕಲೆಕ್ಷನ್​ನ ಈ ಸಿನಿಮಾ ಹಿಂದಿಕ್ಕಿತ್ತು.

ಇದನ್ನೂ ಓದಿ: Shiva Rajkumar: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಸೆಟ್ಟೇರಿತು ಶಿವರಾಜ್ ಕುಮಾರ್ 131ನೇ ಸಿನಿಮಾ!

. ಸ್ತ್ರೀ 1 ಸಿನಿಮಾ 2018ರಲ್ಲಿ ಬಿಡುಗಡೆಯಾಯಿತು. ಸ್ತ್ರೀ 1ಚಿತ್ರ ಬಿಡುಗಡೆಯಾದ ಹೊಸ್ತಿಲಲ್ಲಿ ವ್ಯಾಪಕವಾಗಿ ಮೆಚ್ಚುಗೆ ಪಡೆದು, ಭಾರಿ ಕಲೆಕ್ಷನ್‌ ಮಾಡಿತ್ತು. 

ಸ್ತ್ರೀ’ ಸಿನಿಮಾದ ಮುಂದುವರಿದ ಭಾಗವಾಗಿ ‘ಸ್ತ್ರೀ 2’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರದಲ್ಲಿ ಹಲವು ವಿಶೇಷ ಅತಿಥಿ ಪಾತ್ರಗಳು ಇವೆ. ವರುಣ್ ಧವನ್ ಅವರು ಕೂಡ ಈ ಚಿತ್ರದಲ್ಲಿ ಬಂದು ಹೋಗಿದ್ದಾರೆ. ಈ ಚಿತ್ರದಿಂದ ಬಾಲಿವುಡ್​ಗೆ ಮೊದಲ ದೊಡ್ಡ ಗೆಲುವು ಸಿಕ್ಕಂತೆ ಆಗಿದೆ. ಈ ಸಿನಿಮಾಗೆ ಬುಕ್ ಮೈ ಶೋನಲ್ಲಿ ಒಳ್ಳೆಯ ರೇಟಿಂಗ್ ಸಿಕ್ಕಿದೆ.

Continue Reading
Advertisement
heart attack in press meet
ಬೆಂಗಳೂರು10 mins ago

Heart Attack: ಪತ್ರಿಕಾಗೋಷ್ಠಿಯಲ್ಲಿ ಸಿಎಂ ಪರ ಮಾತನಾಡುತ್ತಿದ್ದಾಗಲೇ ಹೃದಯಾಘಾತವಾಗಿ ಕುಸಿದ ವ್ಯಕ್ತಿ

Sonal shared an emotional post remembering Darshan on the day of Raksha Bandhan
ಸ್ಯಾಂಡಲ್ ವುಡ್22 mins ago

Sonal Monteiro: ರಕ್ಷಾ ಬಂಧನದ ದಿನ ದರ್ಶನ್ ನೆನೆದು ಭಾವುಕ ಪೋಸ್ಟ್‌ ಹಂಚಿಕೊಂಡ ಸೋನಲ್‌!

Kolkata Doctor Murder case
ದೇಶ53 mins ago

Kolkata Doctor Murder case: ಮಮತಾ ಬ್ಯಾನರ್ಜಿ ಹತ್ಯೆಗೆ ಪ್ರಚೋದಿಸಿ ಪೋಸ್ಟ್‌- ವಿದ್ಯಾರ್ಥಿನಿ ಅರೆಸ್ಟ್‌

CLP Meeting
ರಾಜಕೀಯ1 hour ago

CLP Meeting: ಆ.22ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

Sexual Abuse
Latest2 hours ago

Sexual Abuse: ಸಿರಾಜ್‌ ಅಹ್ಮದ್‌ ಎಂಬಾತನ ಕಿರುಕುಳ; ಕುತ್ತಿಗೆಗೆ ಇರಿದುಕೊಂಡು ಸಾಯಲೆತ್ನಿಸಿದ ಬಾಲಕಿ; ಆತಂಕಕಾರಿ ವಿಡಿಯೊ

cm siddaramaiah 12
ಪ್ರಮುಖ ಸುದ್ದಿ2 hours ago

CM Siddaramaiah: ನಾನು ಡಲ್‌ ಆಗಿಲ್ಲ, ನನ್ನ ಹೋರಾಟದ ಜೋಶ್‌ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

Viral Video
Latest2 hours ago

Viral Video: ವೈದ್ಯರ ಎದುರೇ ಹೃದಯಾಘಾತದಿಂದ ಸಾವು; ಆಘಾತಕಾರಿ ವಿಡಿಯೊ

Lohegaon airport
ದೇಶ2 hours ago

Lohegaon airport: ಏರ್‌ಪೋರ್ಟ್‌ನಲ್ಲಿ ಮಹಿಳೆಯ ರಂಪಾಟ- CISF ಕಾನ್‌ಸ್ಟೆಬಲ್‌ ಕೈಗೆ ಕಚ್ಚಿ ಕಪಾಳಮೋಕ್ಷ, ಪ್ರಯಾಣಿಕರ ಮೇಲೂ ಹಲ್ಲೆ

murder case
ಚಿಕ್ಕಬಳ್ಳಾಪುರ2 hours ago

Murder case : ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

BJP-JDS Protest
ಪ್ರಮುಖ ಸುದ್ದಿ2 hours ago

BJP-JDS Protest: ಭಂಡತನ ಬಿಟ್ಟು ರಾಜೀನಾಮೆ ಕೊಡಿ; ಸಿಎಂ ಸಿದ್ದರಾಮಯ್ಯಗೆ ಬಿಜೆಪಿ-ಜೆಡಿಎಸ್‌ ನಾಯಕರ ಆಗ್ರಹ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌