Inspector Abscond: ಕಳ್ಳರಿಂದ ಸೀಜ್‌ ಮಾಡಿದ ₹72 ಲಕ್ಷ ಗುಳುಂ ಮಾಡಿ ಇನ್‌ಸ್ಪೆಕ್ಟರ್‌ ನಾಪತ್ತೆ! - Vistara News

ಕ್ರೈಂ

Inspector Abscond: ಕಳ್ಳರಿಂದ ಸೀಜ್‌ ಮಾಡಿದ ₹72 ಲಕ್ಷ ಗುಳುಂ ಮಾಡಿ ಇನ್‌ಸ್ಪೆಕ್ಟರ್‌ ನಾಪತ್ತೆ!

Inspector Abscond: ಕರ್ತವ್ಯದ ವೇಳೆ ಕಳ್ಳತನ ಪ್ರಕರಣವೊಂದರಲ್ಲಿ ಶಂಕರ್ ನಾಯ್ಕ್ ₹72 ಲಕ್ಷ ಜಪ್ತಿ ಮಾಡಿದ್ದರು. ಈ ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ ಸುಪರ್ದಿಗೆ ಕೊಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪವಿದೆ. ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಶಂಕರ್ ಹಾಗೂ ಮಧ್ಯವರ್ತಿ ಲೋಕನಾಥ್ ವಿರುದ್ಧ ಕೇಸ್ ದಾಖಲಾಗಿತ್ತು.

VISTARANEWS.COM


on

police inspector abscond
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಳ್ಳತನ ಪ್ರಕರಣದಲ್ಲಿ (Theft Case) ಮುಟ್ಟುಗೋಲು (Seize) ಹಾಕಿಕೊಂಡಿದ್ದ ಹಣವನ್ನು ದುರ್ಬಳಕೆ (misuse) ಮಾಡಿದ ಆರೋಪ ಹೊತ್ತಿರುವ ಪೊಲೀಸ್‌ ಇನ್‌ಸ್ಪೆಕ್ಟರ್‌ ನಾಪತ್ತೆ (Police inspector abscond) ಯಾಗಿದ್ದು, ಸಿಸಿಬಿ ಪೊಲೀಸರಿಂದ (CCB police) ಶೋಧ ನಡೆಯುತ್ತಿದೆ. ಬಿಡದಿ ಠಾಣೆಯಿಂದ ಪರಾರಿಯಾಗಿರುವ ಇನ್‌ಸ್ಪೆಕ್ಟರ್‌ ಶಂಕರ್ ನಾಯ್ಕ್ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದು, ಹತ್ತು ದಿನಗಳಿಂದ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾರೆ.

ಕರ್ತವ್ಯದ ವೇಳೆ ಕಳ್ಳತನ ಪ್ರಕರಣವೊಂದರಲ್ಲಿ ಶಂಕರ್ ನಾಯ್ಕ್ ₹72 ಲಕ್ಷ ಜಪ್ತಿ ಮಾಡಿದ್ದರು. ಈ ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ ಸುಪರ್ದಿಗೆ ಕೊಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪವಿದೆ. ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಶಂಕರ್ ಹಾಗೂ ಮಧ್ಯವರ್ತಿ ಲೋಕನಾಥ್ ವಿರುದ್ಧ ಕೇಸ್ ದಾಖಲಾಗಿತ್ತು. ಎಸಿಪಿ ಭರತ್ ರೆಡ್ಡಿ ದೂರು ಆಧರಿಸಿ FIR ದಾಖಲಾಗಿತ್ತು.

2023ರ ನವೆಂಬರ್‌ನಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ನಂತರ ಪ್ರಕರಣದ ತನಿಖೆಯನ್ನು ಕಮಿಷನರ್ ಸಿಸಿಬಿಗೆ ವಹಿಸಿಸಲಾಗಿತ್ತು. ಪ್ರಕರಣ ರದ್ದು ಕೋರಿ ಶಂಕರ್‌ ನಾಯ್ಕ್‌ ಹೈಕೋರ್ಟ್ ಮೆಟ್ಟಲೇರಿದ್ದರು. ಪ್ರಕರಣದ ತನಿಖೆಗೆ ಹೈಕೋರ್ಟ್‌ ತಡೆ ನೀಡಿತ್ತು. ಆದರೆ ತಡೆಯಾಜ್ಞೆ ತೆರವುಗೊಳಿಸುವಂತೆ ಸಿಸಿಬಿ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯನ್ನು ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ತಡೆಯಾಜ್ಞೆ ತೆರವುಗೊಳಿಸುತ್ತಿದ್ದಂತೆ ಇನ್‌ಸ್ಪೆಕ್ಟರ್ ಶಂಕರ್ ನಾಯಕ್ ನಾಪತ್ತೆಯಾಗಿದ್ದಾರೆ.

ಶಿಕ್ಷಕಿಯ ಹತ್ಯೆ ಮಾಡಿ ತಿರುಪತಿಯಲ್ಲಿ ತಲೆಮರೆಸಿಕೊಂಡವರ ಸೆರೆ

ಕೋಲಾರ: ಮನೆಗೆ ನುಗ್ಗಿ ಶಿಕ್ಷಕಿಯ ಕೊಲೆ (Teacher Murder Case) ಮಾಡಿದ ಪ್ರಕರಣದಲ್ಲಿ ತಿರುಪತಿಯಲ್ಲಿ ತಲೆ ಮರೆಸಿಕೊಂಡಿದ್ದ ಆರು ಮಂದಿಯನ್ನು ಕೋಲಾರ ಪೊಲೀಸರು (Kolar news) ಬಂಧಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಸುಂಕ ಲೇಔಟ್ ಬಡಾವಣೆಯಲ್ಲಿ ಕೊಲೆ ಪ್ರಕರಣ ನಡೆದಿತ್ತು. ಆಗಸ್ಟ್ 14ರ ಸಂಜೆ ದಿವ್ಯಶ್ರೀ (43) ಎಂಬ ಶಿಕ್ಷಕಿಯನ್ನು ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ ಆರೋಪಿಗಳು ಆಂಧ್ರಪ್ರದೇಶದ ತಿರುಪತಿಯಲ್ಲಿ ತಲೆ ಮರೆಸಿಕೊಂಡಿದ್ದರು. ಆರೋಪಿಗಳನ್ನು ಭುವನ್‌ ಪತ್ರಹಳ್ಳಿ, ರಂಜಿತ್‌ ಮುಳಬಾಗಿಲು, ಶಹೀದ್‌ ನಂಗಲಿ, ರಾಹುಲ್‌ ಮಲ್ಲೇಕುಪ್ಪ, ಭರತ್‌ ಗುಮ್ಮಕಲ್‌, ಯಶ್ವಂತ್‌ ಮಲ್ಲೇಕುಪ್ಪ ಎಂದು ಗುರುತಿಸಲಾಗಿದೆ.

ದಿವ್ಯಶ್ರೀ ಅವರ ಗಂಡನ ಫೈನಾನ್ಸ್‌ ವ್ಯವಹಾರಕ್ಕೆ ಸಂಬಂಧಿಸಿ ಚಿಂತಾಮಣಿಯಲ್ಲಿರುವ ಜಮೀನಿನ ವ್ಯಾಜ್ಯದ ವಿಚಾರದಲ್ಲಿ ಕೊಲೆ ನಡೆದಿದೆ. ಕೊಲೆಗಾಗಿ ಸುಪಾರಿ ನೀಡಿದ ಆರೋಪಿಗಾಗಿ ಹುಡುಕಾಟ ನಡೆದಿದೆ. ಆರೋಪಿಗಳಲ್ಲಿ ಅಪ್ರಾಪ್ತ ವಯಸ್ಕರೂ ಇದ್ದು, ಮಾದಕ ದ್ರವ್ಯವ ವ್ಯಸನಿಗಳಾದ ಇವರು ಚಿಲ್ಲರೆ ಕಾಸಿಗಾಗಿ ಕೊಲೆ ಮಾಡಿರುವ ಸಾಧ್ಯತೆ ಇದೆ. ಮುಳಬಾಗಿಲು ಪೊಲೀಸರಿಂದ ವಿಚಾರಣೆ ಮುಂದುವರಿದಿದೆ.

ಪ್ರಕರಣದ ವಿವರ

ಮುಳಬಾಗಿಲು ನಗರದ ಪ್ರತಿಷ್ಠಿತ ಬಡಾವಣೆಯಲ್ಲಿ ದಿವ್ಯಶ್ರೀ ಅವರು ಮಗಳೊಂದಿಗೆ ವಾಸವಾಗಿದ್ದು, ಇವರ ಪತಿ ಪದ್ಮನಾಭ ಶೆಟ್ಟಿ ಅಗರಬತ್ತಿ ಲೇವಾದೇವಿ ವ್ಯವಹಾರ ನಡೆಸುತ್ತಿದ್ದಾರೆ. ಇವರ ಮತ್ತೊಬ್ಬ ಮಗ ಪ್ರೇಮ್‌ ವಿದ್ಯಾಭ್ಯಾಸದ ನಿಮಿತ್ತ ಬೇರೆ ಊರಿನಲ್ಲಿ ನೆಲೆಸಿದ್ದಾರೆ. ಪತಿ ಹೊರಗೆ ಹೋಗಿದ್ದು, ಮನೆಯಲ್ಲಿ ದಿವ್ಯಶ್ರೀ ಹಾಗೂ ಪುತ್ರಿ ನಿಶಾ ಮಾತ್ರ ಇದ್ದಾಗ ಪಾತಕ ನಡೆದಿದೆ.

ನಿಶಾ ನಿನ್ನೆ ಸಂಜೆ ಮನೆಯ ಮೇಲ್ಭಾಗದ ಕೊಠಡಿಯಲ್ಲಿ ಓದುತ್ತಿದ್ದಳು. ನೆಲ ಮಾಳಿಗೆಯಲ್ಲಿ ದಿವ್ಯಶ್ರೀ ಅವರು ರಾತ್ರಿ 7.30ರ ಸುಮಾರಿನಲ್ಲಿ ಟಿವಿ ವೀಕ್ಷಿಸುತ್ತ ಕುಳಿತಿದ್ದರು. ಆ ವೇಳೆ ಹಂತಕರು ಏಕಾಏಕಿ ಮನೆಯೊಳಗೆ ನುಗ್ಗಿ ಚಾಕುವಿನಿಂದ ದಿವ್ಯಶ್ರೀ ಅವರ ಕುತ್ತಿಗೆ ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮನೆಯೊಳಗೆ ಏನೋ ಗಲಾಟೆಯಾಗುತ್ತಿದೆ ಎಂದು ನಿಶಾ ಕೆಳಗೆ ಇಳಿದು ಬಂದು ನೋಡಿದಾಗ ತಾಯಿ ರಕ್ತದ ಮಡುವಿನಲ್ಲಿ ಇದ್ದದ್ದು ಕಂಡು ಚೀರಾಡಿದ್ದಾರೆ. ನೆರೆಹೊರೆಯವರು ಏನಾಯಿತೆಂದು ಇವರ ಮನೆಗೆ ಬಂದು ನೋಡಿ ತಕ್ಷಣ ರಕ್ತದ ಮಡುವಿನಲ್ಲಿ ಬಿದಿದ್ದ ದಿವ್ಯಶ್ರೀ ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಜನಭರಿತ ಈ ಬಡಾವಣೆಯಲ್ಲಿ ಶಿಕ್ಷಕಿಯ ಕೊಲೆ ನಡೆದಿರುವುದು ಕಂಡು ಆತಂಕಗೊಂಡ ಸುತ್ತಮುತ್ತಲ ನಿವಾಸಿಗಳು ಭಯಭೀತರಾಗಿದ್ದಾರೆ.

ಇದನ್ನೂ ಓದಿ: Food Poison: ಊಟ ಮಾಡುವಾಗ ಇಲಿ ವಿಷ ಸಿಂಪಡಣೆ, ವಿದ್ಯಾರ್ಥಿಗಳು ಅಸ್ವಸ್ಥ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lohegaon airport: ಏರ್‌ಪೋರ್ಟ್‌ನಲ್ಲಿ ಮಹಿಳೆಯ ರಂಪಾಟ- CISF ಕಾನ್‌ಸ್ಟೆಬಲ್‌ ಕೈಗೆ ಕಚ್ಚಿ ಕಪಾಳಮೋಕ್ಷ, ಪ್ರಯಾಣಿಕರ ಮೇಲೂ ಹಲ್ಲೆ

Lohegaon airport: ಖಾಸಗಿ ವಿಮಾನದಲ್ಲಿ ನವದೆಹಲಿಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಪುಣೆಯ ಲೋಹೆಗಾಂವ್ ಏರ್‌ಪೋರ್ಟ್‌ನಲ್ಲಿ ಇಬ್ಬರು ಸಹ ಪ್ರಯಾಣಿಕರು ಮತ್ತು ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ನಂತರ ಆಕೆಯನ್ನು ವಿಮಾನದಿಂದ ಹೊರಗೆ ಕಳುಹಿಸಲಾಯಿತು. ಬೋರ್ಡಿಂಗ್ ಪ್ರಕ್ರಿಯೆ ವೇಳೆ ಈ ಘಟನೆ ನಡೆದಿದೆ.

VISTARANEWS.COM


on

Lohegaon airport
Koo

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಬಸ್‌ನಲ್ಲಿ ನಡೆಯೋ ಪ್ರಯಾಣಿಕರ ಗಲಾಟೆ, ಜಗಳಕ್ಕಿಂತ ಹೆಚ್ಚಾಗಿ ವಿಮಾನದಲ್ಲಿ ನಡೆಯೋ ಕಿರಿಕ್‌ಗಳ ಬಗ್ಗೆ ವರದಿಯಾಗುತ್ತಲೇ ಇರುತ್ತದೆ. ವಿಮಾನದೊಳಗೆ ಪ್ರಯಾಣಿಕರ ನಡುವೆ ಗಲಾಟೆ, ಹೊಡೆದಾಟ ನಡೆದಿರುವ ಬಗ್ಗೆ ಆಗಾಗ ಸುದ್ದಿ ಆಗುತ್ತಲೇ ಇರುತ್ತದೆ. ಇದೀಗ ಅಂತಹದ್ದೇ ಒಂದು ಮತ್ತೊಂದು ಘಟನೆ ಬೆಳಕಿಗೆ ಬಂದಿದೆ(Lohegaon airport). ಮಹಿಳೆಯೊಬ್ಬಳು ಸಹಪ್ರಯಾಣಿಕರು ಮತ್ತು ಸಿಐಎಸ್‌ಎಫ್ ಕಾನ್‌ಸ್ಟೆಬಲ್(CISF Constable) ಮೇಲೆ ಹಲ್ಲೆ ನಡೆಸಿದ್ದಾಳೆ(Viral News).

ಖಾಸಗಿ ವಿಮಾನದಲ್ಲಿ ನವದೆಹಲಿಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಪುಣೆಯ ಲೋಹೆಗಾಂವ್ ಏರ್‌ಪೋರ್ಟ್‌ನಲ್ಲಿ ಇಬ್ಬರು ಸಹ ಪ್ರಯಾಣಿಕರು ಮತ್ತು ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ನಂತರ ಆಕೆಯನ್ನು ವಿಮಾನದಿಂದ ಹೊರಗೆ ಕಳುಹಿಸಲಾಯಿತು. ಬೋರ್ಡಿಂಗ್ ಪ್ರಕ್ರಿಯೆ ವೇಳೆ ಈ ಘಟನೆ ನಡೆದಿದೆ. ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಮಹಿಳೆ ಆರಂಭದಲ್ಲಿ ತಮ್ಮ ನಿಯೋಜಿತ ಸ್ಥಳಗಳಲ್ಲಿ ಕುಳಿತಿದ್ದ ಸಹೋದರ ಮತ್ತು ಸಹೋದರಿಯ ಮೇಲೆ ಹಲ್ಲೆ ನಡೆಸಿದ್ದಾಳೆ.

ಇದರ ನಂತರ, ಸಿಬ್ಬಂದಿ ಸಿಐಎಸ್ಎಫ್ ನೆರವಿಗೆ ಕರೆದರು, ಪರಿಸ್ಥಿತಿಯನ್ನು ನಿಭಾಯಿಸಲು ಕಾನ್‌ಸ್ಟೆಬಲ್‌ಗಳಾದ ಪ್ರಿಯಾಂಕಾ ರೆಡ್ಡಿ ಮತ್ತು ಸೋನಿಕಾ ಪಾಲ್ ಅಲ್ಲಿಗೆ ಬಂದರು. ಈ ವೇಳೆ ಮಹಿಳೆ ಕಾನ್‌ಸ್ಟೆಬಲ್ ರೆಡ್ಡಿಗೆ ಕಪಾಳಮೋಕ್ಷ ಮಾಡಿದ್ದಾಳೆ ಅಲ್ಲದೇ ಆಕೆಯ ಕೈಗೆ ಕಚ್ಚಿದ್ದಾಳೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕೆಲವು ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಆಗಿತ್ತು. ಕೊನೆಗೆ ಆಕೆ ಮತ್ತು ಆಕೆಯ ಪತಿಯನ್ನು ವಿಮಾನದಿಂದ ಕೆಳಗಿಳಿಸಲಾಯಿತು. ನಂತರ ಅವರನ್ನು ವಿಮಾನ ನಿಲ್ದಾಣ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಇನ್ನು ಮಹಿಳೆ ಮತ್ತು ಆಕೆಯ ಪತಿ ಪುಣೆಯ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದು, ಇವರು ಪುಣೆಯಿಂದ ದೆಹಲಿಗೆ ಅಂತ್ಯಕ್ರಿಯೆಗೆಂದು ತೆರಳುತ್ತಿದ್ದರು ಎನ್ನಲಾಗಿದೆ.

ಒಂದು ವರ್ಷದ ಹಿಂದೆ ಏರ್‌ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕನೊಬ್ಬನ ಮೇಲೆ ಮಲ-ಮೂತ್ರ ವಿಸರ್ಜಿಸಿದ ಘಟನೆ ವರದಿಯಾಗಿತ್ತು. ಮುಂಬಯಿ-ದೆಹಲಿ ಮಾರ್ಗದ ಎಐಸಿ 866 ಎಂಬ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದ ರಾಮ್ ಸಿಂಗ್ ಇಂಥ ಹೊಲಸು ಮಾಡಿದ್ದಾನೆ. ಪೊಲೀಸರು ಎಫ್ ಐಆರ್ ದಾಖಲು ಮಾಡಿದ್ದಾರೆ. ಈತ ಮದ್ಯಪಾನ ಮಾಡಿದ್ದರ ಬಗ್ಗೆ ಉಲ್ಲೇಖವಾಗಿಲ್ಲ. ಮುಂಬಯಿಯಿಂದ ದೆಹಲಿಗೆ ಹೋಗುತ್ತಿದ್ದ ವಿಮಾನದ 9 ನೇ ಸಾಲಿನಲ್ಲಿ, 17F ಸೀಟ್ ನಲ್ಲಿ ಕುಳಿತಿದ್ದ ರಾಮ್ ಸಿಂಗ್, ವಿಮಾನ ಹೊರಟ ಕೆಲವೇ ಹೊತ್ತಲ್ಲಿ ಅನುಚಿತ ವರ್ತನೆ ತೋರಿಸಿದ್ದಾನೆ. ಸೀಟ್ ನಿಂದ ಕೆಳಗೆ ಇಳಿದು ಮಲ-ಮೂತ್ರ ವಿಸರ್ಜಿಸಿ, ಅಲ್ಲೇ ಉಗುಳಿದ್ದಾನೆ. ಅಷ್ಟರಲ್ಲಿ ವಿಮಾನ ಸಿಬ್ಬಂದಿ ಅಲ್ಲಿಗೆ ಬಂದು ರಾಮ್ ಸಿಂಗ್ ನನ್ನು ಅಲ್ಲಿಂದ ಕರೆದುಕೊಂಡು ಹೋಗಿ ಐಸೋಲೇಟ್ ಮಾಡಿದ್ದಾರೆ.

ಇದನ್ನೂ ಓದಿ: ಏರ್​ ಇಂಡಿಯಾ ವಿಮಾನದಲ್ಲಿ ಹೊಲಸು ಮಾಡಿದ ಪ್ರಯಾಣಿಕ; ಮಲ-ಮೂತ್ರ ವಿಸರ್ಜಿಸಿ, ಗಲಾಟೆ

Continue Reading

ಚಿಕ್ಕಬಳ್ಳಾಪುರ

Murder case : ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

Murder Case : ಆಸ್ತಿಗಾಗಿ ಶುರುವಾದ ಗಲಾಟೆಯು ಎರಡು ಕುಟುಂಬಗಳು ಕಲ್ಲು-ದೊಣ್ಣೆಗಳಿಂದ ಹೊಡೆದಾಡಿಕೊಂಡಿದ್ದಾರೆ. ಗಲಾಟೆ ತಾರಕಕ್ಕೇರಿದ್ದು ಕೊಲೆಯಲ್ಲಿ ಅಂತ್ಯವಾಗಿದೆ.

VISTARANEWS.COM


on

By

murder case
Koo

ಚಿಕ್ಕಬಳ್ಳಾಪುರ: ಪಿತ್ರಾರ್ಜಿತ ಆಸ್ತಿಗಾಗಿ ದಾಯಾದಿಗಳ ನಡುವಿನ ಗಲಾಟೆಯೂ ತಾರಕಕ್ಕೇರಿದ್ದು ವ್ಯಕ್ತಿಯ ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ಆಸ್ತಿಗಾಗಿ ತಮ್ಮನ ಮಕ್ಕಳಿಂದಲೇ ಅಣ್ಣನ ಕೊಲೆಯಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ನಡುವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ನಂಜುಂಡಯ್ಯ (55) ಗಲಾಟೆಯಲ್ಲಿ ಕೊಲೆಯಾದವರು. ಕಲ್ಲು ದೊಣ್ಣೆಗಳಿಂದ ಬಡಿದಾಟದಲ್ಲಿ ತೀವ್ರ ಗಾಯಗೊಂಡಿದ್ದ ನಂಜುಂಡಯ್ಯರನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಂಜುಂಡಯ್ಯ ಮೃತಪಟ್ಟಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಡುವನಹಳ್ಳಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮಂಡ್ಯದ ಮೊಗರಹಳ್ಳಿ ಬಳಿ ಘಟನೆ ನಡೆದಿದೆ. ಮಂಟಿ ಗ್ರಾಮದ ಅನಿಲ್ (28) ಮೃತ ದುರ್ದೈವಿ. ಮೊಗರಹಳ್ಳಿ ಗ್ರಾಮದ ಸ್ಮಶಾನದ ಬಳಿ ಶವ ಪತ್ತೆಯಾಗಿದೆ. ಸೋಮವಾರ ಬೆಳಗ್ಗೆ ನೇತಾಡುತ್ತಿದ್ದ ಶವ ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರೆಂಟ್‌ ಶಾಕ್‌ಗೆ ಯುವಕ ಬಲಿ

ಕೃಷಿ ಚಟುವಟಿಕೆಯ ವೇಳೆ ಆಕಸ್ಮಿಕ ವಿದ್ಯುತ್‌ ಸ್ಪರ್ಶಿಸಿ ಯುವಕನೊರ್ವ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ‌ ತಾಂವಶಿ ಗ್ರಾಮದಲ್ಲಿ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ದ್ರಾಕ್ಷಿ ತೋಟದಲ್ಲಿ ಪಂಪ್ ಸೆಟ್ ಶುರು ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ಸಂಗಪ್ಪ ನಾನಪ್ಪ ತಳವಾರ (28) ಮೃತ ದುರ್ದೈವಿ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಸರ್ಜಾಪುರದಲ್ಲಿ ಎದೆ ಝುಲ್‌ ಎನ್ನುವ ಡೆಡ್ಲಿ ಆ್ಯಕ್ಸಿಡೆಂಟ್‌; ಬೈಕ್‌ ಸವಾರ ಬದುಕಿದ್ದೆ ಪವಾಡ

Road Accident : ಬೆಂಗಳೂರಿನಲ್ಲಿ ಶರವೇಗದಲ್ಲಿ ಬಂದ ಕಾರೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತವು ಸೆರೆಯಾಗಿದ್ದು, ಎದೆ ಝಲ್ ಎನ್ನುತ್ತೆ.

VISTARANEWS.COM


on

By

Road Accident
Koo

ಬೆಂಗಳೂರು: ಅಬ್ಬಾ.. ಬೆಂಗಳೂರಿನ ಸರ್ಜಾಪುರದಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ವೊಂದು (Road Accident) ಸಂಭವಿಸಿದ್ದು, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶರವೇಗದಲ್ಲಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರ ಗಾಳಿಗೆ ತೂರಿ ಹಾರಿ ಬಿದ್ದಿದ್ದಾನೆ.

ಕಾರು ಬೈಕ್‌ಗೆ ಡಿಕ್ಕಿಯಾದರೂ ಪವಾಡ ಸದೃಶ್ಯ ರೀತಿ ಬೈಕ್‌ ಸವಾರ ಬಚಾವಾಗಿದ್ದಾನೆ. ಅದೃಷ್ಟವಶಾತ್ ಸವಾರ ಸಣ್ಣ-ಪುಟ್ಟ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ.

ಕಾರು ಡಿಕ್ಕಿಯಾದ ರಭಸಕ್ಕೆ ಸವಾರ ಬೈಕ್ ಸಮೇತ ರಸ್ತೆಗೆ ಹಾರಿ ಬಿದ್ದರೆ, ಧರಿಸಿದ್ದ ಹೆಲ್ಮೆಟ್ ಒಂದು ಕಡೆ ಎಗರಿ ಬಿದ್ದಿದೆ. ಅಪಘಾತದ ದೃಶ್ಯ ಮುಂದಿದ್ದ ಕಾರೊಂದರ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆಗಸ್ಟ್‌ 15ರ ಬೆಳಗ್ಗೆ 7:50 ರ ಸುಮಾರಿಗೆ ಸರ್ಜಾಪುರ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೈಕ್‌ ಸಂಪೂರ್ಣ ಜಖಂಗೊಂಡಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Assault Case : ಕುಂದಾಪುರದಲ್ಲಿ ಗಾಂಜಾ ನಶೆಯಲ್ಲಿ ಝಳಪಿಸಿದ ತಲ್ವಾರ್‌; ಇಬ್ಬರು ಗಂಭೀರ

ಗೂಡ್ಸ್‌ ವಾಹನ ಡಿಕ್ಕಿಗೆ ಮಹಿಳೆ ಸಾವು

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಹಲಸೂರು ಗೇಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ಭಾನುವಾರ ಮಧ್ಯಾಹ್ನ 2ಗಂಟೆ ಸುಮಾರಿಗೆ ಅಪಘಾತ ನಡೆದಿದೆ.

ಸತ್ಯಪ್ರೇಮ ಎಂಬುವವರು ಮೃತ ದುರ್ದೈವಿ. ಸತ್ಯಪ್ರೇಮ ಅವರು ತಮ್ಮ ಪತಿ ಜತೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಕಾರ್ಪೊರೇಷನ್ ಬಸ್ ನಿಲ್ದಾಣದ ಬಳಿ ಹಿಂದಿನಿಂದ ಬಂದ ಐಷರ್ ವಾಹನ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸತ್ಯಪ್ರೇಮಾರ ತಲೆಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸತ್ಯಪ್ರೇಮಾರ ಪತಿಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಿಯಂತ್ರಣ ತಪ್ಪಿದ ಕಾರು, 17 ಬೈಕ್‌ಗಳು ಜಖಂ

ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಿಂತಿದ್ದ ಬೈಕ್‌ಗಳ ಮೇಲೆ ನುಗ್ಗಿದೆ. ಪರಿಣಾಮ ಹದಿನೇಳು ಬೈಕ್‌ಗಳು ಜಖಂಗೊಂಡಿವೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ, ಕೆಂಕೆರೆಹಳ್ಳಿ ಗೇಟ್ ಬಳಿ ಅಪಘಾತ ನಡೆದಿದೆ.

ಧಾರಾಕಾರ ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಸವಾರರು ಬೈಕ್‌ಗಳನ್ನು ನಿಲ್ಲಿಸಿ ಬಸ್ ನಿಲ್ದಾಣದಲ್ಲಿ ನಿಂತಿದ್ದರು. ಈ ವೇಳೆ ಅತಿ ವೇಗವಾಗಿ ಚಲಿಸುತ್ತಿದ್ದ ಫಾರ್ಚೂನರ್ ಕಾರು, ಮಳೆಯಿಂದ ರಸ್ತೆ ಕಾಣದೆ ನಿಯಂತ್ರಣ ತಪ್ಪಿ ಬೈಕ್‌ಗಳ ಮೇಲೆ ನುಗ್ಗಿದೆ. ಬೈಕ್‌ಗಳ ಮೇಲೆ‌ ನುಗ್ಗಿ ಬಳಿಕ ಬಸ್‌ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದು ಕಾರು ನಿಂತಿದೆ.

ಕಾರು ಗುದ್ದಿದ ರಭಸಕ್ಕೆ ಗೋಡೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಓರ್ವನಿಗೆ ಗಾಯವಾಗಿದ್ದು, ಅದೃಷ್ಟವಶಾತ್ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಿಲ್ದಾಣದಲ್ಲಿ ಬೈಕ್ ಸವಾರರು ನಿಂತಿದ್ದರಿಂದ ಎಲ್ಲರ ಜೀವ ಉಳಿದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Uttarakhand Horror: ದೇಶವನ್ನೇ ಬೆಚ್ಚಿಬೀಳಿಸೋ ಮತ್ತೊಂದು ಘಟನೆ! ಬಸ್‌ನಲ್ಲೇ ಯುವತಿ ಮೇಲೆ ಡ್ರೈವರ್‌ ಸೇರಿ ಐವರಿಂದ ಗ್ಯಾಂಗ್‌ರೇಪ್‌

Uttarakhand Horror: ಪೊಲೀಸ್‌ ವಿಚಾರಣೆ ವೇಳೆ ಆರಂಭದಲ್ಲಿ ಯುವತಿ ತಾನು ಪಂಜಾಬ್‌ ಮೂಲದವಳು ಮತ್ತು ಅನಾಥಳು ಎಂದು ಹೇಳಿಕೊಂಡಿದ್ದರು. ಇದಾದ ಬಳಿಕ ಆಕೆ ಉತ್ತರಪ್ರದೇಶ ಮೂಲದವಳು ಎಂಬುದು ತಿಳಿದುಬಂದಿದೆ. ಆಕೆ ಹೇಳುವಂತೆ ಆಕೆ ಆ.12ರಂದು ದಿಲ್ಲಿಯಿಂದ ಡೆಹ್ರಾಡೂನ್‌ಗೆ ISBT ಬಸ್‌ನಲ್ಲಿ ಪ್ರಯಾಣ ಶುರು ಮಾಡಿದ್ದಳು. ಡೆಹ್ರಾಡೂನ್‌ ಟರ್ಮಿನಲ್‌ನಲ್ಲಿ ಬಸ್‌ನ ಡ್ರೈವರ್‌, ಕಂಡಕ್ಟರ್‌, ಕ್ಯಾಶಿಯರ್‌ ಹಾಗೂ ಇತರ ಇಬ್ಬರು ಚಾಲಕರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.

VISTARANEWS.COM


on

Uttarakhand Horror
Koo

ಡೆಹ್ರಾಡೂನ್‌: ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣ(Kolkata Doctor murder case) ಖಂಡಿಸಿ ರಾಷ್ಟ್ರವ್ಯಾಪಿ ಆಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ ಮತ್ತೊಂದು ಅಂತಹದ್ದೇ ಒಂದು ಹೀನ ಕೃತ್ಯವೊಂದು ಉತ್ತರಾಖಂಡದಲ್ಲಿ(Uttarakhand Horror) ನಡೆದಿದೆ. ಬಸ್‌ನಲ್ಲಿ ಯುವತಿ ಮೇಲೆ ಐವರು ನೀಚರು ಸಾಮೂಹಿಕ ಅತ್ಯಾಚಾರ(Gangrape) ಎಸಗಿ ಕ್ರೌರ್ಯ ಮೆರೆದಿದ್ದಾರೆ.

ಡೆಹ್ರಾಡೂನ್‌ನ ಅಂತಾರಾಜ್ಯ ಬಸ್‌ ಟ್ರಮಿನಲ್‌ನಲ್ಲಿ ಈ ಕೃತ್ಯ ನಡೆದಿದ್ದು, ನಡುರಾತ್ರಿ ಯುವತಿಯೊಬ್ಬಳು ಬಸ್‌ಸ್ಟ್ಯಾಂಡ್‌ನಲ್ಲಿ ಕುಳಿತಿರುವ ಬಗ್ಗೆ ಡೆಹ್ರಾಡೂನ್‌ ಮಕ್ಕಳ ಕಲ್ಯಾಣ ಸಮಿತಿಗೆ ಕರೆಯೊಂದು ಬಂದಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿ ಯುವತಿಯನ್ನು ಸರ್ಕಾರಿ ಹೋಂಗೆ ಕಳುಹಿಸಿ ವಿಚಾರಣೆ ನಡೆಸಿದಾಗ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಹೇಳಿಕೊಂಡಿದ್ದಾಳೆ.

ಪೊಲೀಸ್‌ ವಿಚಾರಣೆ ವೇಳೆ ಆರಂಭದಲ್ಲಿ ಯುವತಿ ತಾನು ಪಂಜಾಬ್‌ ಮೂಲದವಳು ಮತ್ತು ಅನಾಥಳು ಎಂದು ಹೇಳಿಕೊಂಡಿದ್ದರು. ಇದಾದ ಬಳಿಕ ಆಕೆ ಉತ್ತರಪ್ರದೇಶ ಮೂಲದವಳು ಎಂಬುದು ತಿಳಿದುಬಂದಿದೆ. ಆಕೆ ಹೇಳುವಂತೆ ಆಕೆ ಆ.12ರಂದು ದಿಲ್ಲಿಯಿಂದ ಡೆಹ್ರಾಡೂನ್‌ಗೆ ISBT ಬಸ್‌ನಲ್ಲಿ ಪ್ರಯಾಣ ಶುರು ಮಾಡಿದ್ದಳು. ಡೆಹ್ರಾಡೂನ್‌ ಟರ್ಮಿನಲ್‌ನಲ್ಲಿ ಬಸ್‌ನ ಡ್ರೈವರ್‌, ಕಂಡಕ್ಟರ್‌, ಕ್ಯಾಶಿಯರ್‌ ಹಾಗೂ ಇತರ ಇಬ್ಬರು ಚಾಲಕರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.

ಆರೋಪಿಗಳ ಹಡೆಮುರಿ ಕಟ್ಟಿದ ಪೊಲೀಸರು

ಯುವತಿ ದೂರಿನಾಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಾದ ಧರ್ಮೇಂದ್ರ ಕುಮಾರ್‌(32), ರಾಜ್‌ಪಾಲ್‌(57), ದೇವೇಂದ್ರ (52), ರಾಜೇಶ್‌ ಕುಮಾರ್‌ ಸೋನಕ್‌(38), ಹಾಗೂ ರವಿಕುಮಾರ್(34)ನನ್ನು ಅರೆಸ್ಟ್‌ ಮಾಡಿದ್ದಾರೆ. ವಿಚಾರಣೆ ವೇಳೆ ತಮ್ಮ ಕೃತ್ಯವನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಯುವತಿ ಪಂಜಾಬ್‌ಗೆ ಹೇಗೆ ಹೋಗಬೇಕೆಂದು ಬಸ್‌ ಚಾಲಕ ದೇವೇಂದ್ರನ ಬಳಿಕ ಕೇಳಿದ್ದಳು. ಈ ವೇಳೆ ಡೆಹ್ರಾಡೂನ್‌ಗೆ ಬಂದು ಅಲ್ಲಿಂದ ಬಸ್‌ನಲ್ಲಿ ಹೋಗಬಹುದೆಂದು ಯುವತಿಗೆ ಹೇಳಿದ್ದಾನೆ.

ಡೆಹ್ರಾಡೂನ್‌ ತಲುಪುವ ಮೊದಲೇ ಎಲ್ಲಾ ಬಸ್‌ ಪ್ರಯಾಣಿಕರು ಇಳಿದ ಕಾರಣ ಬಸ್‌ ಖಾಲಿಯಾಗಿತ್ತು. ಯುವತಿ ಒಬ್ಬಳೇ ಇದ್ದಳು. ಟರ್ಮಿನಲ್‌ ತಲುಪುತ್ತಿದ್ದಂತೆ ದೇವೇಂದ್ರ ಮತ್ತು ಧರ್ಮೇಂದ್ರ ಬಸ್‌ ಪಾರ್ಕ್‌ ಮಾಡಿ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ರವಿ ಮತ್ತು ರಾಜ್‌ ಪಾಲ್‌ ಕೂಡ ಆಕೆಯನ್ನು ರೇಪ್‌ ಮಾಡಿದ್ದರು.ಈ ವಿಚಾರ ತಿಳಿದು ಸ್ಥಳಕ್ಕೆ ಬಂದ ಕ್ಯಾಶಿಯರ್‌ ಕೂಡ ಇವರಿಗೆ ಸಾಥ್‌ ಕೊಟ್ಟು ಅಟ್ಟಹಾಸ ಮೆರೆದಿದ್ದಾನೆ.

ಇದನ್ನೂ ಓದಿ: Physical Abuse: ಕಿಡ್ನ್ಯಾಪ್ ಮಾಡಿ ಮಹಿಳೆ ಮೇಲೆ ಅತ್ಯಾಚಾರ, ಮಗನ ಮೇಲೂ ಹಲ್ಲೆ; 9 ಆರೋಪಿಗಳ ಅರೆಸ್ಟ್‌

Continue Reading
Advertisement
heart attack in press meet
ಬೆಂಗಳೂರು6 mins ago

Heart Attack: ಪತ್ರಿಕಾಗೋಷ್ಠಿಯಲ್ಲಿ ಸಿಎಂ ಪರ ಮಾತನಾಡುತ್ತಿದ್ದಾಗಲೇ ಹೃದಯಾಘಾತವಾಗಿ ಕುಸಿದ ವ್ಯಕ್ತಿ

Sonal shared an emotional post remembering Darshan on the day of Raksha Bandhan
ಸ್ಯಾಂಡಲ್ ವುಡ್18 mins ago

Sonal Monteiro: ರಕ್ಷಾ ಬಂಧನದ ದಿನ ದರ್ಶನ್ ನೆನೆದು ಭಾವುಕ ಪೋಸ್ಟ್‌ ಹಂಚಿಕೊಂಡ ಸೋನಲ್‌!

Kolkata Doctor Murder case
ದೇಶ49 mins ago

Kolkata Doctor Murder case: ಮಮತಾ ಬ್ಯಾನರ್ಜಿ ಹತ್ಯೆಗೆ ಪ್ರಚೋದಿಸಿ ಪೋಸ್ಟ್‌- ವಿದ್ಯಾರ್ಥಿನಿ ಅರೆಸ್ಟ್‌

CLP Meeting
ರಾಜಕೀಯ1 hour ago

CLP Meeting: ಆ.22ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

Sexual Abuse
Latest1 hour ago

Sexual Abuse: ಸಿರಾಜ್‌ ಅಹ್ಮದ್‌ ಎಂಬಾತನ ಕಿರುಕುಳ; ಕುತ್ತಿಗೆಗೆ ಇರಿದುಕೊಂಡು ಸಾಯಲೆತ್ನಿಸಿದ ಬಾಲಕಿ; ಆತಂಕಕಾರಿ ವಿಡಿಯೊ

cm siddaramaiah 12
ಪ್ರಮುಖ ಸುದ್ದಿ1 hour ago

CM Siddaramaiah: ನಾನು ಡಲ್‌ ಆಗಿಲ್ಲ, ನನ್ನ ಹೋರಾಟದ ಜೋಶ್‌ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

Viral Video
Latest2 hours ago

Viral Video: ವೈದ್ಯರ ಎದುರೇ ಹೃದಯಾಘಾತದಿಂದ ಸಾವು; ಆಘಾತಕಾರಿ ವಿಡಿಯೊ

Lohegaon airport
ದೇಶ2 hours ago

Lohegaon airport: ಏರ್‌ಪೋರ್ಟ್‌ನಲ್ಲಿ ಮಹಿಳೆಯ ರಂಪಾಟ- CISF ಕಾನ್‌ಸ್ಟೆಬಲ್‌ ಕೈಗೆ ಕಚ್ಚಿ ಕಪಾಳಮೋಕ್ಷ, ಪ್ರಯಾಣಿಕರ ಮೇಲೂ ಹಲ್ಲೆ

murder case
ಚಿಕ್ಕಬಳ್ಳಾಪುರ2 hours ago

Murder case : ಪಿತ್ರಾರ್ಜಿತ ಆಸ್ತಿಗಾಗಿ ತಾರಕಕ್ಕೇರಿದ ಗಲಾಟೆ; ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

BJP-JDS Protest
ಪ್ರಮುಖ ಸುದ್ದಿ2 hours ago

BJP-JDS Protest: ಭಂಡತನ ಬಿಟ್ಟು ರಾಜೀನಾಮೆ ಕೊಡಿ; ಸಿಎಂ ಸಿದ್ದರಾಮಯ್ಯಗೆ ಬಿಜೆಪಿ-ಜೆಡಿಎಸ್‌ ನಾಯಕರ ಆಗ್ರಹ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌