Dhruva Sarja: ನಮ್ಮದು ರಾಮಜನ್ಮ ಭೂಮಿ, ರೇಪಿಸ್ಟ್‌ಗಳಿಗೆ ಶಿಕ್ಷೆಯಾಗಲಿ ಎಂದ ಧ್ರುವ ಸರ್ಜಾ! - Vistara News

ಸ್ಯಾಂಡಲ್ ವುಡ್

Dhruva Sarja: ನಮ್ಮದು ರಾಮಜನ್ಮ ಭೂಮಿ, ರೇಪಿಸ್ಟ್‌ಗಳಿಗೆ ಶಿಕ್ಷೆಯಾಗಲಿ ಎಂದ ಧ್ರುವ ಸರ್ಜಾ!

Dhruva Sarja: ಆರ್​ಜಿ ಕರ್ ಸರ್ಕಾರಿ ಆಸ್ಪತ್ರೆ (RG Kar Medical Hospital)ಯಲ್ಲಿನ ಟ್ರೈನಿ ವೈದ್ಯೆಯ ಮೇಲೆ ಈ ದೌರ್ಜನ್ಯ ಎಸಗಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಕೊಲ್ಕತ್ತಾ ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ಧ್ರುವ ಸರ್ಜಾ (Dhruva Sarja) ಕೂಡ ಪ್ರತಿಕ್ರಿಯಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ.

VISTARANEWS.COM


on

Dhruva Sarja voice rise of Kolkata Rape Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದಲ್ಲಿ ದೇಶವೇ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, 31 ವರ್ಷದ ಮಹಿಳಾ ಟ್ರೈನಿ ವೈದ್ಯರೊಬ್ಬರ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆ ನಡೆಸಲಾಗಿತ್ತು. ಆರ್​ಜಿ ಕರ್ ಸರ್ಕಾರಿ ಆಸ್ಪತ್ರೆ (RG Kar Medical Hospital)ಯಲ್ಲಿನ ಟ್ರೈನಿ ವೈದ್ಯೆಯ ಮೇಲೆ ಈ ದೌರ್ಜನ್ಯ ಎಸಗಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಕೊಲ್ಕತ್ತಾ ಪೊಲೀಸರು ಬಂಧಿಸಿದ್ದರು. ಈ ಬಗ್ಗೆ ಧ್ರುವ ಸರ್ಜಾ (Dhruva Sarja) ಕೂಡ ಪ್ರತಿಕ್ರಿಯಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ.

ʻʻಎಲ್ಲರಿಗೂ ನಮಸ್ಕಾರ. ನಾನು ಮಾರ್ಟಿನ್​ ಸಿನಿಮಾದ ಪ್ರಚಾರದಲ್ಲಿ ಇದ್ದೇನೆ ಎಂಬುದು ಹೌದು. ಮಾರ್ಟಿನ್​ ಸಿನಿಮಾವನ್ನು ಒಂದು ನಿಮಿಷ ಪಕ್ಕಕ್ಕೆ ಇಟ್ಟುಬಿಡೋಣ. ಇವತ್ತು ವಿಡಿಯೋ ಮಾಡುತ್ತಿರುವ ಉದ್ದೇಶ, 2024ರ ಆಗಸ್ಟ್​ 14ರ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಪ್ರತಿ 16 ನಿಮಿಷಕ್ಕೆ ಒಂದು ಹೆಣ್ಣು ಮಗು ಮೇಲೆ ಅತ್ಯಾಚಾರ ನಡೆಯುತ್ತಿದೆ. ಎಲ್ಲಿ ಹೆಣ್ಣುಮಕ್ಕಳಿಗೆ ಮರ್ಯಾದೆ, ಗೌರವ ಇರುವುದಿಲ್ಲವೋ ಅಲ್ಲಿ ಭಗವಂತನೇ ಇರುವುದಿಲ್ಲʼʼ.

‘ನಮ್ಮದು ರಾಮಜನ್ಮ ಭೂಮಿ. ಕೆಲವರು ಮಾಡುವ ಕೃತ್ಯದಿಂದ ನಮ್ಮ ಭಾರತಕ್ಕೆ ಕೆಟ್ಟ ಹೆಸರು. ಹೆಣ್ಮಕ್ಕಳಿಗೆ ಮಾತ್ರ ಹೀಗಿರಿ, ಹಾಗಿರಿ, ಹೀಗೆಯೇ ಬಟ್ಟೆ ಹಾಕಬೇಕು, ಇದನ್ನೇ ಮಾಡಬೇಕು, ಅದನ್ನೇ ಮಾಡಬೇಕು ಅಂತ ಹೇಳುವುದಕ್ಕಿಂತ ಒಬ್ಬ ಹುಡುಗನನ್ನು ಬೆಳೆಸುವಾಗ ಮೂರು ವಿಷಯ ಕಡ್ಡಾಯವಾಗಿ ಪ್ರತಿಯೊಬ್ಬರ ಮನೆಯಲ್ಲಿ ಹೇಳಿಕೊಡಬೇಕು. ಹೆಣ್ಮಕ್ಕಳನ್ನು ಹೇಗೆ ರಕ್ಷಿಸಬೇಕು, ಹೇಗೆ ಬೆಂಬಲಿಸಬೇಕು, ಹೇಗೆ ಗೌರವಿಸಬೇಕು ಎಂಬುದನ್ನು ಹೇಳಿಕೊಡಲೇಬೇಕು’ ಎಂದಿದ್ದಾರೆ ಧ್ರುವ ಸರ್ಜಾ.

ಇದನ್ನೂ ಓದಿ: Dhruva Sarja : ಗ್ಲೋಬಲ್ ಲೆವೆಲ್‌ನಲ್ಲಿ ʻಮಾರ್ಟಿನ್ʼ ಅಬ್ಬರ; ಅಭಿಮಾನಿಗಳಲ್ಲಿ ನಿರೀಕ್ಷೆ ದುಪ್ಪಟ್ಟು!

ʻʻಇಂಥ ರೇಪಿಸ್ಟ್​ಗಳು ಸಿಕ್ಕಿ, ಕಾನೂನಿನ ಪ್ರಕಾರ ಶಿಕ್ಷೆ ಆಗಲಿ ಅಂತ ಆ ಭಗವಂತನಲ್ಲಿ ಕೇಳಿಕೊಳ್ಳುತ್ತೇವೆ. ಅವರಿಗೆ ಎಂಥ ಶಿಕ್ಷೆ ಕೊಟ್ಟರೂ ಸಮಾಧಾನ ಆಗಲ್ಲ. ಇಂಥ ನನ್ಮಕ್ಕಳನ್ನು ನಡುರಸ್ತೆಯಲ್ಲಿ ನಿಲ್ಲಿಸಿ ಜೀವಂತವಾಗಿ ಸುಟ್ಟುಹಾಕಿದರೂ ಸಮಾಧಾನ ಆಗಲ್ಲ. ಆ ಭಗವಂತ ಇಂಥವರಿಗೆ ಒಳ್ಳೆಯದು ಮಾಡದೇ ಇರಲಿ ಅಂತ ಮನಸಾರೆ ಕೇಳಿಕೊಳ್ಳುತ್ತೇನೆ. ನನಗೂ ಹೆಣ್ಣು ಮಗಳು ಇದ್ದಾಳೆ. ಯಾರಿಗೋ ಅನ್ಯಾಯ ಆಗಿದೆ ಎಂದಾಗ ಅವರ ಜೊತೆ ನಾವು ಇರಬೇಕು. ದಯವಿಟ್ಟು ಧ್ವನಿಯೆತ್ತಿ. ಎಲ್ಲರೂ ನ್ಯಾಯ ಕೇಳೋಣ. ಇದು ಭಾರತವನ್ನು ಬದಲಾಯಿಸುವ ಸಮಯ. ನಾವೆಲ್ಲರೂ ಒಂದಾಗಬೇಕು’ ಎಂದು ಧ್ರುವ ಸರ್ಜಾ ವಿಡಿಯೋ ಹಂಚಿಕೊಂಡಿದ್ದಾರೆ.

ಅತ್ಯಾಚಾರಕ್ಕೊಳಗಾಗಿ ಕೊಲೆಯಾದ 31 ವರ್ಷದ ವೈದ್ಯೆಯ ದೇಹದಲ್ಲಿ ಅತೀ ಕ್ರೂರವಾಗಿ ಹಲ್ಲೆ ನಡೆಸಿದ್ದನ್ನು ಸೂಚಿಸುವ ಅನೇಕ ಗಾಯದ ಗುರುತುಗಳಿವೆ ಎನ್ನುವುದನ್ನು ಮರಣೋತ್ತರ ಪರೀಕ್ಷೆಯ ವರದಿ ಬಹಿರಂಗಪಡಿಸಿತ್ತು. ಸಂತ್ರಸ್ತೆಯ ಕಣ್ಣು ಮತ್ತು ಬಾಯಿಯಿಂದ ರಕ್ತಸ್ರಾವವಾಗಿತ್ತು. ಮುಖ ಮತ್ತು ಉಗುರುಗಳ ಮೇಲೆ ಗಾಯಗಳಾಗಿವೆ. ಸಂತ್ರಸ್ತೆಯ ಖಾಸಗಿ ಭಾಗಗಳಿಂದಲೂ ರಕ್ತಸ್ರಾವವಾಗಿದೆ. ಮಾತ್ರವಲ್ಲ ಹೊಟ್ಟೆ, ಎಡಗಾಲಿಗೆ ಗಾಯಗಳಾಗಿವೆ. ಕುತ್ತಿಗೆ, ಬಲಗೈ, ಉಂಗುರ ಬೆರಳು ಮತ್ತು ತುಟಿ ಹೀಗೆ ಎಲ್ಲ ಅಂಗಗಳಲ್ಲಿಯೂ ಗಾಯದ ಗುರುತುಗಳಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಗುರುವಾರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kannada New Movie: ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್‌ನ ʼಫಾರೆಸ್ಟ್ʼ ಚಿತ್ರದ ಟ್ರೈಲರ್ ಸದ್ಯದಲ್ಲೇ ರಿಲೀಸ್‌

ಅಡ್ವೆಂಚರಸ್ ಕಾಮಿಡಿ (Kannada New Movie) ಕಥಾಹಂದರ ಒಳಗೊಂಡಿರುವ “ಫಾರೆಸ್ಟ್” ಚಿತ್ರದ ಟ್ರೈಲರ್ ಸದ್ದದಲ್ಲೇ ರಿಲೀಸ್‌ ಆಗಲಿದೆ. ಎನ್.ಎಂ.ಕೆ. ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಎನ್.ಎಂ. ಕಾಂತರಾಜ್ ಅವರು ಚಿತ್ರವನ್ನು ನಿರ್ಮಿಸಿದ್ದಾರೆ. ಹಾಸ್ಯನಟ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಅವರಂತ ಸ್ಟಾರ್ ಕಲಾವಿದರೇ ಅಭಿನಯಿಸಿದ ಮಲ್ಟಿ ಸ್ಟಾರರ್ ಚಿತ್ರ ಇದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಅಡ್ವೆಂಚರಸ್ ಕಾಮಿಡಿ ಕಥಾಹಂದರ ಒಳಗೊಂಡ ಚಿತ್ರ “ಫಾರೆಸ್ಟ್” ತನ್ನ ಟೈಟಲ್, ತಾರಾಗಣ ಹಾಗೂ ಕಾನ್ಸೆಪ್ಟ್ ಕಾರಣದಿಂದಲೇ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಎನ್.ಎಂ.ಕೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಎನ್. ಎಂ. ಕಾಂತರಾಜ್ ಅವರು ಚಿತ್ರವನ್ನು (Kannada New Movie) ನಿರ್ಮಿಸಿದ್ದಾರೆ.

ಇದನ್ನೂ ಓದಿ: Namma Metro : ನಾಳೆಯಿಂದ ಸೆಪ್ಟೆಂಬರ್‌ 11ರವರೆಗೂ ಪೀಣ್ಯ ಇಂಡಸ್ಟ್ರಿ ಟು ನಾಗಸಂದ್ರ ಮೆಟ್ರೋ ಓಡಾಟ ಬಂದ್‌!

ಈ ಸಿನಿಮಾ ಬಗ್ಗೆ ತುಂಬಾ ಕಾಳಜಿ ಇಟ್ಟುಕೊಂಡಿರುವ ನಿರ್ಮಾಪಕರು ಕ್ವಾಲಿಟಿ ವಿಷಯದಲ್ಲಿ ಎಲ್ಲೂ ಕಾಂಪ್ರಮೈಸ್ ಆಗದೆ, ಬಜೆಟ್ ಬಗ್ಗೆ ಯೋಚಿಸದೆ ಧಾರಾಳವಾಗಿ ಖರ್ಚು ಮಾಡಿದ್ದಾರೆ, ಡಬಲ್ ಇಂಜಿನ್ , ಬ್ರಹ್ಮಚಾರಿಯಂಥ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ಮಾಡಿರುವ ಚಂದ್ರಮೋಹನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ, ಕಾಡಲ್ಲಿ ನಡೆಯುವ ಅಡ್ವೆಂಚರಸ್ ಕಾಮಿಡಿ ಸ್ಟೋರಿಯನ್ನು ಈ ಚಿತ್ರದ ಮೂಲಕ ಹೇಳಹೊರಟಿದ್ದಾರೆ.

ಹಾಸ್ಯನಟ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಅವರಂತ ಸ್ಟಾರ್ ಕಲಾವಿದರೇ ಅಭಿನಯಿಸಿದ ಮಲ್ಟಿ ಸ್ಟಾರರ್ ಚಿತ್ರ ಇದಾಗಿದೆ. ಫಾರೆಸ್ಟ್‌ನಲ್ಲಿ ನಡೆಯುವ ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್ ಇರುವ ಈ ಚಿತ್ರದ ಬಹುತೇಕ ಕಥೆ ಕಾಡಿನಲ್ಲಿಯೇ ನಡೆಯೋದು ಚಿತ್ರದ ಮತ್ತೊಂದು ವಿಶೇಷ. ಸದ್ಯದಲ್ಲೇ ಈ ಸಿನಿಮಾದ ಮೊದಲಪ್ರತಿ ಹೊರಬರಲಿದೆ. ಅತಿದೊಡ್ಡ ಕಳ್ಳತನವೊಂದರ ಸುತ್ತ ನಡೆಯುವ ಘಟನೆಗಳನ್ನು ಈ ಚಿತ್ರದಲ್ಲಿ ಹೇಳಲಾಗಿದೆ.

ಬೆಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಸಂಪಾಜೆ ಫಾರೆಸ್ಟ್ ಹಾಗೂ ಮಲೆ ಮಾದೇಶ್ವರ ಬೆಟ್ಟದ ಸುತ್ತಮುತ್ತ 80 ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆದಿದೆ. ಕೆಲವು ಕಡೆ ಡಬಲ್ ಕಾಲ್‌ಶೀಟ್ ಆಗಿದ್ದರಿಂದ ಶೂಟಿಂಗ್ ದಿನಗಳು ಹೆಚ್ಚಾಗಿದೆ ಎಂದು ನಿರ್ಮಾಪಕ ಕಾಂತರಾಜು ತಿಳಿಸಿದ್ದಾರೆ. ಈಗಾಗಲೇ ಚಿತ್ರದ ಟ್ರೈಲರ್ ಸಿದ್ದವಾಗಿದ್ದು, ಈ ತಿಂಗಳ ಅಂತ್ಯದಲ್ಲಿ ರಿಲೀಸ್ ಮಾಡವುದಾಗಿಯೂ ಹಾಗೂ ಸೆಪ್ಟೆಂಬರ್‌ನಲ್ಲಿ ಚಿತ್ರವನ್ನು ಬಿಡುಗಡೆ ಮಾಡಬೇಕೆಂದು ನಿರ್ಮಾಪಕ ಕಾಂತರಾಜು ಅವರು ಯೋಜನೆ ಹಾಕಿಕೊಂಡಿದ್ದಾರೆ.

ಅಲ್ಲದೆ ಚಿತ್ರದ ಮತ್ತೊಂದು ಹಾಡನ್ನು ಸದ್ಯದಲ್ಲೇ ರಿಲೀಸ್ ಮಾಡುವುದಾಗಿಯೂ ನಿರ್ಮಾಪಕರು ಹೇಳಿದ್ದಾರೆ, ಚೇತನ್ ಕುಮಾರ್ ಅವರ ರಚನೆಯ ಈ ಹಾಡಿಗೆ ಗಾಯಕ ಚಂದನ್ ಶೆಟ್ಟಿ ದನಿಯಾಗಿದ್ದಾರೆ.

ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಕಥೆ, ಚಿತ್ರಕಥೆ ರಚಿಸಿದ್ದಾರೆ. ಅಲ್ಲದೆ ಸತ್ಯಶೌರ್ಯ ಸಾಗರ್ ಸಂಭಾಷಣೆ ರಚಿಸಿದ್ದಾರೆ. ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ.ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ: Fake Garlic: ಎಚ್ಚರ..ಎಚ್ಚರ.. ಮಾರ್ಕೆಟ್‌ಗೆ ಲಗ್ಗೆ ಇಟ್ಟಿದೆ ಸಿಮೆಂಟ್‌ ಬೆಳ್ಳುಳ್ಳಿ! ವಿಡಿಯೋ ನೋಡಿದ್ರೆ ಶಾಕ್‌ ಆಗೋದು ಗ್ಯಾರಂಟಿ

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದ ಹಿರಿಯ ಹಾಗೂ ಕಿರಿಯ ಕಲಾವಿದರು ಫಾರೆಸ್ಟ್ ಚಿತ್ರದ ಪ್ರಮುಖ ತಾರಾಬಳಗದಲ್ಲಿದ್ದಾರೆ.

Continue Reading

ಸ್ಯಾಂಡಲ್ ವುಡ್

Shiva Rajkumar: ಸಿನಿಮಾ ಸೆಟ್​ನಲ್ಲಿ ಯಶ್ ಜತೆ ಹೊಸ ಲುಕ್​ನಲ್ಲಿ ಶಿವಣ್ಣ; ರಾಕಿಂಗ್‌ ಸ್ಟಾರ್‌ ಭೇಟಿ ಮಾಡಿದ್ದೇಕೆ?

Shiva Rajkumar: ಈ ಹಿಂದೆ ಕನ್ನಡ ಚಿತ್ರರಂಗಕ್ಕೆ ರಾಮ್ ಗೋಪಾಲ್ ವರ್ಮಾ ಕರೆ ತಂದು ಶಿವಣ್ಣನಿಗೆ ಕಿಲ್ಲಿಂಗ್ ವೀರಪ್ಪನ್ ಸಿನಿಮಾ ಮಾಡಿಸಿದ್ದ ಸುಧೀರ್ ಮತ್ತೊಮ್ಮೆ ಕರುನಾಡ ಕಿಂಗ್ ಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನ ಯುವ ನಿರ್ದೇಶಕ ಕಾರ್ತಿಕ್ ಅದ್ವೈತ್ ದೊಡ್ಮನೆ ದೊರೆಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

VISTARANEWS.COM


on

Shiva Rajkumar new look with Yash on the movie set Why did the rocking star visit?
Koo

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ (Shiva Rajkumar) 131ನೇ ಚಿತ್ರದ ಪೋಸ್ಟರ್‌ ಈ ಹಿಂದೆ ಬಿಡುಗಡೆಯಾಗಿತ್ತು. ವರಲಕ್ಷ್ಮಿ ಹಬ್ಬದಂದು ಸಿನಿಮಾದ ಮುಹೂರ್ತ ಮುಗಿಸಿ ಅಧಿಕೃತವಾಗಿ ಸೆಟ್ಟೇರಿತ್ತು. ಶಿವಣ್ಣ ನಟಿಸಲಿರುವ 131ನೇ ಸಿನಿಮಾ ಆಗಿರಲಿದ್ದು ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ. ಇದೀಗ ಸಿನಿಮಾ ಚಿತ್ರೀಕರಣ ವೇಳೆ ಯಶ್‌ ಅವರು ಶಿವಣ್ಣ ಅವರನ್ನು ಭೇಟಿಯಾಗಿದ್ದಾರೆ. ಶಿವಣ್ಣ ಅವರನ್ನು ಭೇಟಿಯಾದ ಫೋಟೊಗಳು ವೈರಲ್‌ ಆಗಿವೆ.

ಟಾಕ್ಸಿಕ್ ಲುಕ್ ಅಲ್ಲಿಯೇ ರಾಕಿಂಗ್ ಸ್ಟಾರ್ ಯಶ್ ಇದ್ದಾರೆ. 131 ಚಿತ್ರದ ಗೆಟಪ್‌ ಅಲ್ಲಿಯೇ ಶಿವಣ್ಣ ಇದ್ದಾರೆ. ಹೀಗೆ ಈ ಸ್ಟಾರ್ ನಟರ ಭೇಟಿಯ ಈ ಫೋಟೋ ವೈರಲ್ ಆಗುತ್ತಿದೆ. ಬೆಂಗಳೂರಿನ ಎಚ್.ಎಂ.ಟಿ. ಫ್ಯಾಕ್ಟರಿಯಲ್ಲಿಯೇ ಚಿತ್ರದ ಸೆಟ್ ಕೂಡ ಹಾಕಲಾಗಿದೆ. ಇದೇ ಜಾಗದಲ್ಲಿಯೇ ಯಶ್ ತಮ್ಮ ಬಹು ಕೋಟಿ ವೆಚ್ಚದ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಮಾಡುತ್ತಿದ್ದಾರೆ. ಈ ವೇಳೆ ಯಶ್‌ ಭೇಟಿ ಮಾಡಿದ್ದಾರೆ.

ಈ ಹಿಂದೆ ಕನ್ನಡ ಚಿತ್ರರಂಗಕ್ಕೆ ರಾಮ್ ಗೋಪಾಲ್ ವರ್ಮಾ ಕರೆ ತಂದು ಶಿವಣ್ಣನಿಗೆ ಕಿಲ್ಲಿಂಗ್ ವೀರಪ್ಪನ್ ಸಿನಿಮಾ ಮಾಡಿಸಿದ್ದ ಸುಧೀರ್ ಮತ್ತೊಮ್ಮೆ ಕರುನಾಡ ಕಿಂಗ್ ಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನ ಯುವ ನಿರ್ದೇಶಕ ಕಾರ್ತಿಕ್ ಅದ್ವೈತ್ ದೊಡ್ಮನೆ ದೊರೆಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಇದನ್ನೂ ಓದಿ: Shiva Rajkumar: ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಸೆಟ್ಟೇರಿತು ಶಿವರಾಜ್ ಕುಮಾರ್ 131ನೇ ಸಿನಿಮಾ!

ಶಿವಣ್ಣನ ಜನ್ಮದಿನದ ಅಂಗವಾಗಿ 131ನೇ ಚಿತ್ರದ ಮೊದಲ ತುಣುಕು ಬಿಡುಗಡೆ ಮಾಡಲಾಗಿತ್ತು. 3 ನಿಮಿಷ 49 ಸೆಕೆಂಡ್ ಇರುವ ವಿಡಿಯೋ ತುಣುಕಿನಲ್ಲಿ ಪೊಲೀಸ್ ಸ್ಟೇಷನ್ ನಲ್ಲಿ ರಗಡ್ ಡೈಲಾಗ್ ಮೂಲಕ ಹೀರೋ ಇಂಟ್ರೂಡ್ಯೂಸ್ ಮಾಡಲಾಗಿತ್ತು.

ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ ಪಾಯುಮ್ ಒಲಿ ನೀ ಎನಕ್ಕು ಚಿತ್ರವನ್ನು ನಿರ್ದೇಶಿಸಿದ್ದ ಕಾರ್ತಿಕ್ ಅದ್ವೈತ್, ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದಾರೆ, ಅಂದಹಾಗೇ ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ. ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದೆ. ಇತರ ಕಲಾವಿದರ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ಚಿತ್ರೀಕರಣಕ್ಕೆ ತೆರಳು ಎದುರು ನೋಡುತ್ತಿದೆ ಚಿತ್ರತಂಡ. ಸ್ಯಾಮ್ ಸಿ.ಎಸ್ ಸಂಗೀತ ಒದಗಿಸಲಿದ್ದಾರೆ. ಎ.ಜೆ ಶೆಟ್ಟಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ದೀಪು ಎಸ್ ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ. ಭುವನೇಶ್ವರಿ ಪ್ರೊಡಕ್ಷನ್ ನಡಿ ಎಸ್ ಎನ್ ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Sonal Monteiro: ರಕ್ಷಾ ಬಂಧನದ ದಿನ ದರ್ಶನ್ ನೆನೆದು ಭಾವುಕ ಪೋಸ್ಟ್‌ ಹಂಚಿಕೊಂಡ ಸೋನಲ್‌!

Sonal Monteiro: ನಟಿ ಸೋನಾಲ್ ಮಂಥೆರೊ (sonal monteiro) ಹಾಗೂ ನಿರ್ದೇಶಕ ತರುಣ್ ಸುಧೀರ್ (Tharun Sudhir) ಮದುವೆಯಾಗಿದ್ದಾರೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ.

VISTARANEWS.COM


on

Sonal shared an emotional post remembering Darshan on the day of Raksha Bandhan
Koo

ಬೆಂಗಳೂರು: ಸೋನಲ್ (Sonal Monteiro) ಹಾಗೂ ದರ್ಶನ್ ನಡುವೆ ಉತ್ತಮ ಒಡನಾಟವಿದೆ. ಸದಾ ಅಣ್ಣಾ ಎಂದು ಬಾಯಿತುಂಬಾ ಕರೆಯುತ್ತಾರೆ. ತರುಣ್ ಹಾಗೂ ದರ್ಶನ್ ಸ್ನೇಹ ಕೂಡ ಬಹಳ ಹಳೆಯದು. ಹೀಗೆ ಬಹಳ ಆಪ್ತರಾದ ಜೋಡಿಯ ಮದುವೆಗೆ ದರ್ಶನ್ ಭಾಗಿ ಆಗಲು ಸಾಧ್ಯವಾಗಲಿಲ್ಲ. ಕಳೆದ ವರ್ಷ ದರ್ಶನ್‌ಗೆ ಸೋನಲ್ ರಾಖಿ ಕಟ್ಟಿದ್ದ ವೀಡಿಯೋ ಬಹಳ ವೈರಲ್ ಆಗಿತ್ತು.ರಕ್ಷಾ ಬಂಧನದ ದಿನ ದರ್ಶನ್ ನೆನೆದು ಸೋನಲ್ ಇನ್‌ಸ್ಟಾಗ್ರಾಮ್‌ನಲ್ಲಿ ಭಾವುಕ ಪೋಸ್ಟ್ ಮಾಡಿದ್ದಾರೆ.

“ಈ ವಿಶೇಷ ದಿನದಂದು ನಾವು ಒಟ್ಟಿಗೆ ಇಲ್ಲದಿದ್ದರೂ, ನಮ್ಮ ಬಾಂಧವ್ಯ ಎಂದಿಗೂ ಮರೆಯಾಗುವುದಿಲ್ಲ. ನಾವು ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಇನ್ನು ಸದಾ ಪ್ರೀತಿಸುತ್ತೇವೆ ಅಣ್ಣ. ರಕ್ಷಾಬಂಧನದ ಶುಭಾಶಯಗಳು” ಎಂದು ಬರೆದುಕೊಂಡಿದ್ದಾರೆ.

ನಟಿ ಸೋನಾಲ್ ಮಂಥೆರೊ (sonal monteiro) ಹಾಗೂ ನಿರ್ದೇಶಕ ತರುಣ್ ಸುಧೀರ್ (Tharun Sudhir) ಮದುವೆಯಾಗಿದ್ದಾರೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ ರೇಗಿಸುತ್ತಿದ್ದರು, ಇದೇ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿತ್ತು.

ತರುಣ್ ನಿರ್ದೇಶನದ ‘ರಾಬರ್ಟ್’ ಚಿತ್ರದಲ್ಲಿ ರಾಘವ ವಿನೋದ್ ಪ್ರಭಾಕರ್ ಜೋಡಿ ತನು ಆಗಿ ಸೋನಲ್ ಮಿಂಚಿದ್ದರು. ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಮೊದಲಿಗೆ ತುಳು ಸಿನಿಮಾಗಳಲ್ಲಿ ನಟಿಸಿದ್ದರು. ‘ಅಭಿಸಾರಿಕೆ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದರು.

ಇದನ್ನೂ ಓದಿ: Sonal Monteiro: ಮನಸೂರೆಗೊಳ್ಳುತ್ತಿದೆ ತನುಷ್ ಶಿವಣ್ಣ- ಸೋನಾಲ್ ಯುಗಳಗೀತೆ

ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಕಾಲೇಜು ದಿನಗಳಲ್ಲೇ ಮಾಡೆಲಿಂಗ್ ಆರಂಭಿಸಿದ್ದರು. ‘ಎಕ್ಕಾ ಸಕ್ಕಾ’ ಎನ್ನುವ ತುಳು ಚಿತ್ರದಲ್ಲಿ ಮೊದಲಿಗೆ ನಟಿಸಿದರು. ಬಳಿಕ ಮತ್ತೆರಡು ತುಳು ಸಿನಿಮಾ ಅವಕಾಶ ಸಿಕ್ಕಿತ್ತು. ನಂತರ ‘ಅಭಿಸಾರಿಕ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು.

‘ಎಂಎಲ್‌ಎ’, ‘ಮದುವೆ ದಿಬ್ಬಣ’, ‘ಪಂಚತಂತ್ರ’, ‘ಡೆಮೊ ಪೀಸ್’ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಸೋನಲ್ ಮಿಂಚಿದರು.ರಾಬರ್ಟ್’ ಬಳಿಕ ‘ಶಂಭೋ ಶಿವ ಶಂಕರ’, ‘ಗರಡಿ’, ‘ಶುಗರ್ ಫ್ಯಾಕ್ಟರಿ’ ಸಿನಿಮಾಗಳಲ್ಲಿ ಸೋನಲ್ ನಟಿಸಿದ್ದಾರೆ. ‘ಬುದ್ಧಿವಂತ-2’ ಹಾಗೂ ‘ಮಾರ್ಗರೆಟ್ ಲವರ್ ಆಫ್ ರಾಮಾಚಾರಿ’ ಸಿನಿಮಾಗಳಲ್ಲಿ ನಟಿಸಿದ್ದು ಇನ್ನಷ್ಟೇ ಈ ಸಿನಿಮಾಗಳು ತೆರೆಗೆ ಬರಬೇಕಿದೆ.

Continue Reading

ಸ್ಯಾಂಡಲ್ ವುಡ್

Chhaava teaser: ‘ಛಾವಾ’ ಟೀಸರ್ ಔಟ್‌; ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ಗರ್ಜಿಸಿದ ವಿಕ್ಕಿ ಕೌಶಲ್!

Vicky Kaushal: ಚಿತ್ರವು ಪ್ರಾಥಮಿಕವಾಗಿ ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದ್ದರೂ, ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ. ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ನಿರ್ವಹಿಸುತ್ತಿದ್ದರು ಎನ್ನುವುದು ವಿಶೇಷ. ಈ ವಿಚಾರ ಕೂಡ ಸಿನಿಮಾದಲ್ಲಿ ಹೈಲೈಟ್ ಆಗಲಿದೆ.

VISTARANEWS.COM


on

Chhaava teaser Vicky Kaushal Rashmika M
Koo

ಬೆಂಗಳೂರು: ವಿಕ್ಕಿ ಕೌಶಲ್ (Chhaava’ teaser) ಅಭಿನಯದ ಮುಂಬರುವ ಚಿತ್ರ ‘ಛಾವಾ’ ಟೀಸರ್ ಇದೀಗ ಬಿಡುಗಡೆಯಾಗಿದೆ. ನಟ ಲಕ್ಷ್ಮಣ್ ಉಟೇಕರ್ ಚಿತ್ರದಲ್ಲಿ ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರವನ್ನು ನಿರ್ವಹಿಸಿದ್ದಾರೆ. ಪ್ರೇಕ್ಷಕರು ವಿಕ್ಕಿ ಕೌಶಲ್ (Vicky Kaushal) ಅವರನ್ನು ಹಿಂದೆಂದೂ ನೋಡಿರದ ಅವತಾರದಲ್ಲಿ ಕಂಡಿದ್ದಾರೆ.

ಕಿರು ವೀಡಿಯೊದಲ್ಲಿ, ವಿಕ್ಕಿ ಕೌಶಲ್ ತನ್ನ ಉಗ್ರ ರೂಪವನ್ನು ಹೊರ ಹಾಕಿದ್ದಾರೆ. ಟೀಸರ್‌ನ ಅಂತ್ಯದ ವೇಳೆಗೆ, ಅಕ್ಷಯ್ ಖನ್ನಾ ಅವರ ಲುಕ್‌ ಗುರುತು ಹಿಡಿಯಲು ಆಗದಂತೆ ಕಂಡಿದ್ದಾರೆ. ಈಗಾಗಲೇ ಹಲವಾರು ಮಂದಿ ವಿಕ್ಕಿ ಕೌಶಲ್ ಅವರ ಹೊಸ ಅವತಾರವನ್ನು ಹೊಗಳಿದ್ದಾರೆ.

ಚಿತ್ರವು ಪ್ರಾಥಮಿಕವಾಗಿ ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದ್ದರೂ, ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ. ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ನಿರ್ವಹಿಸುತ್ತಿದ್ದರು ಎನ್ನುವುದು ವಿಶೇಷ. ಈ ವಿಚಾರ ಕೂಡ ಸಿನಿಮಾದಲ್ಲಿ ಹೈಲೈಟ್ ಆಗಲಿದೆ.

ಇದನ್ನೂ ಓದಿ: Vicky Kaushal: ವಿಕ್ಕಿ ಕೌಶಲ್ `ಛಾವಾ’ ಟೀಸರ್‌ ಔಟ್‌!

ಸ್ತ್ರೀ’, ‘ಭೇಡಿಯಾ’ ಮೊದಲಾದ ಸಿನಿಮಾಗಳಿಗೆ ಬಂಡವಾಳ ಹೂಡಿದ ಮ್ಯಾಡಾಕ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ʻಛಾವಾʼ ಸಿನಿಮಾ ಈ ಪ್ರೊಡಕ್ಷನ್ ಹೌಸ್‌ನ ಮೊದಲ ಐತಿಹಾಸಿಕ ಯೋಜನೆಯಾಗಿದೆ. ಈ ಯೋಜನೆ ವಿಕ್ಕಿ ಮತ್ತು ರಶ್ಮಿಕಾ ಅವರ ಮೊದಲ ಸಹಯೋಗವಾಗಿದೆ. ಈ ಹಿಂದೆ ಒಳಉಡುಪುಗಳ ಜಾಹೀರಾತಿಗಾಗಿ ಒಟ್ಟಿಗೆ ಕೆಲಸ ಮಾಡಿದ್ದರು. ಚಿತ್ರವು ಡಿಸೆಂಬರ್ 6 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading
Advertisement
Raksha Bandhan
ಪ್ರಮುಖ ಸುದ್ದಿ9 mins ago

Raksha Bandhan : ಪುಟಾಣಿ ಗೆಳೆಯರೊಂದಿಗೆ ರಕ್ಷಾ ಬಂಧನ ಆಚರಿಸಿಕೊಂಡ ನರೇಂದ್ರ ಮೋದಿ; ಇಲ್ಲಿವೆ ಚಿತ್ರಗಳು

Rayara Aradhane 2024
ಧಾರ್ಮಿಕ14 mins ago

Rayara Aradhane 2024: ನಾಳೆಯಿಂದ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ; ಗುರುಗಳ ಜೀವನ ಹೇಗಿತ್ತು, ಸಂದೇಶ ಏನಾಗಿತ್ತು?

Actor Chetan Ahimsa
ಕರ್ನಾಟಕ23 mins ago

Chetan Ahimsa: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಟ ಚೇತನ್ ಆಗ್ರಹ; ಆ.28ಕ್ಕೆ ಕಾಂಗ್ರೆಸ್ ಹಠಾವೋ, ದಲಿತ ಬಚಾವೋ ಹೋರಾಟ

Uttara Kannada News
ಕರ್ನಾಟಕ33 mins ago

Uttara Kannada News: ಪಿಎಂ ಸ್ವ-ನಿಧಿ ಯೋಜನೆ; ಕಾರವಾರ ನಗರಸಭೆಗೆ ರಾಜ್ಯ ಮಟ್ಟದ ಪ್ರಶಸ್ತಿಯ ಗರಿ

ಆರೋಗ್ಯ34 mins ago

Sodium reduction: ಉಪ್ಪು ಸೇವನೆ ಕಡಿಮೆಯಾದರೆ ಈ ಎಲ್ಲ ಸಮಸ್ಯೆಗಳು ಕಾಡುತ್ತವೆ

Pralhad Joshi
ಬೆಂಗಳೂರು35 mins ago

Pralhad Joshi: ಕಾಂಗ್ರೆಸ್‌ನಿಂದ ದೇಶದಲ್ಲಿ ಬಾಂಗ್ಲಾದಂತೆ ಅರಾಜಕತೆ ಸೃಷ್ಟಿಸುವ ಹುನ್ನಾರ; ಪ್ರಲ್ಹಾದ್‌ ಜೋಶಿ ಆರೋಪ

Virat kohli
ಕ್ರೀಡೆ40 mins ago

Virat Kohli : ಕೊಹ್ಲಿ ಕಿಂಗ್ ಅಲ್ಲ; ಭಾರತದ ಸೂಪರ್​​ ಸ್ಟಾರ್​ ಬ್ಯಾಟರ್​​ ಬಗ್ಗೆ ಕಳಪೆ ಕಾಮೆಂಟ್ ಮಾಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Contrast dupatta fashion
ಫ್ಯಾಷನ್48 mins ago

Contrast Dupatta Fashion: ಶ್ರಾವಣ ಮಾಸದಲ್ಲಿ ಟ್ರೆಂಡಿಯಾದ ಕಾಂಟ್ರಾಸ್ಟ್ ದುಪಟ್ಟಾ ಫ್ಯಾಷನ್‌

Actor Darshan
ಕರ್ನಾಟಕ1 hour ago

Pavithra gowda: ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ; ಆ.22ಕ್ಕೆ ವಿಚಾರಣೆ

Death Penalty
ವಿದೇಶ1 hour ago

Death Penalty: ಈ 7 ದೇಶಗಳಲ್ಲಿ ಅತ್ಯಾಚಾರ ನಡೆಸಿದರೆ ಮರಣ ದಂಡನೆಯೇ ಶಿಕ್ಷೆ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌