Karnataka Weather : ಸಣ್‌ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು; ನಾಳೆಗೂ ಅಲರ್ಟ್‌ - Vistara News

ಮಳೆ

Karnataka Weather : ಸಣ್‌ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು; ನಾಳೆಗೂ ಅಲರ್ಟ್‌

Karnataka Weather Forecast : ಬೆಂಗಳೂರು, ದೊಡ್ಡಬಳ್ಳಾಪುರದಲ್ಲಿ ಸುರಿದ ಮಳೆಗೆ (Rain News) ರಸ್ತೆಗಳು ಜಲಾವೃತಗೊಂಡು ಅವಾಂತರವೇ ಸೃಷ್ಟಿಯಾಗಿದೆ. ಆಗಸ್ಟ್‌ 23ರವರೆಗೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

Karnataka Weather Forecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೋಮವಾರ ರಾಜಧಾನಿ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಮಳೆ (Bengaluru rain) ಸುರಿದಿದೆ. ಕೇವಲ10-15 ನಿಮಿಷ ಸುರಿದ ಮಳೆಗೆ ಹಲವು ರಸ್ತೆಗಳು ಜಲಾವೃತಗೊಂಡಿದ್ದವು. ಹೆಬ್ಬಾಳದ ರಸ್ತೆಗಳು ಕೆರೆಯಂತಾಗಿ ಸವಾರರು, ಸಾರ್ವಜನಿಕರು ಹೈರಣಾದರು. ಇತ್ತ ಮಳೆ ಕಡಿಮೆಯಾಗುತ್ತಿದ್ದಂತೆ ಸವಾರರು ಟ್ರಾಫಿಕ್‌ನಲ್ಲಿ (Karnataka Weather Forecast) ಸಿಲುಕಿದ್ದರು.

ಯಶವಂತಪುರ, ಹೆಬ್ಬಾಳ ಅಂಡರ್ ಪಾಸ್‌ನಲ್ಲಿ ವಾಹನಗಳು ನಿಂತಲ್ಲೇ ನಿಲ್ಲುವಂತಾಯಿತು. ಟ್ರಾಫಿಕ್ ಕ್ಲಿಯರ್ ಮಾಡಲು ಸಂಚಾರಿ ಪೊಲೀಸರು ಹರಸಾಹಸ ಪಟ್ಟರು. ಹೆಬ್ಬಾಳ ಸಂಪರ್ಕ ಕಲ್ಪಿಸುವ ಅಕ್ಕಪಕ್ಕದ ರಸ್ತೆಗಳು, ವಸಂತನಗರ, ರೈಲ್ವೆ ಪ್ಯಾರಲಲ್ ರಸ್ತೆ, ಪ್ಯಾಲೇಸ್ ಗುಟ್ಟಳ್ಳಿ ಸೇರಿದಂತೆ ಸುತ್ತಮುತ್ತ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಸಿಲಿಕಾನ್ ಸಿಟಿಯಲ್ಲಿ ಮಳೆಗೆ ಮರವೊಂದ ಧರೆಗುರುಳಿದೆ. ಸಂಜಯ್ ನಗರದಲ್ಲಿ ಕಾರಿನ ಮೇಲೆ ಬೃಹತ್ ಮರ ಬಿದ್ದಿದೆ. ಮರ ಉರುಳಿ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿತ್ತು. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇತ್ತ ದೊಡ್ಡಬಳ್ಳಾಪುರದಲ್ಲೂ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ರಸ್ತೆಯ ಮೇಲೆ ನೀರು ತುಂಬಿ ಹರಿದಿತ್ತು. ದೊಡ್ಡಬಳ್ಳಾಪುರದ ತಾಲೂಕು ಕಚೇರಿ, ತೇರಿನ ಬೀದಿ ಸರ್ಕಲ್ ಬಳಿ ವಾಹನ ಸವಾರರು ಪರದಾಡಿದರು. ಒಂದು ಅಡಿಗೂ‌ ಹೆಚ್ಚು ನೀರು ನಿಂತು, ಜತೆಗೆ ಚರಂಡಿ ನೀರೆಲ್ಲಾ ತುಂಬಿ ರಸ್ತೆಯ ಮೇಲೆ ಹರಿದಿತ್ತು. ತಾಲೂಕು ಕಚೇರಿಯ ಮುಂದೆಯೇ ರಸ್ತೆ ಅವ್ಯವಸ್ಥೆಗೊಂಡಿತ್ತು. ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಪರದಾಡಿದರು.

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ರಸ್ತೆಗಳು ನದಿಯಂತಾಗಿತ್ತು. ಬಾಳೆಹೊನ್ನೂರು-ಕಳಸ- ಕೊಟ್ಟಿಗೆಹಾರ ಸಂಪರ್ಕ ಕಡಿತಗೊಂಡಿತ್ತು. ಎನ್ ಆರ್ ಪುರ ತಾಲೂಕಿನ ಬನ್ನೂರು ಬಳಿ ರಸ್ತೆ ಮುಳುಗಡೆಯಾಗಿದೆ. ರಸ್ತೆಯ ಮೇಲೆ ರಭಸವಾಗಿ ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಕಿಲೋ ಮೀಟರ್ ಗಟ್ಟಲೆ ವಾಹನಗಳು ನಿಂತಲ್ಲೇ ನಿಂತಿವೆ.ವಿಜಯಪುರದ ನಾಲತವಾಡನಲ್ಲಿ ಭಾರಿ ಮಳೆಗೆ ಸಾರ್ವಜನಿಕರು, ಗ್ರಾಹಕರು ಪರದಾಡಿದರು. ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಮಾರ್ಕೆಟ್‌ಗೆ ಚರಂಡಿ ನೀರು ನುಗ್ಗಿತ್ತು.

ಇದನ್ನೂ ಓದಿ: Namma Metro : ನಾಳೆಯಿಂದ ಸೆಪ್ಟೆಂಬರ್‌ 11ರವರೆಗೂ ಪೀಣ್ಯ ಇಂಡಸ್ಟ್ರಿ ಟು ನಾಗಸಂದ್ರ ಮೆಟ್ರೋ ಓಡಾಟ ಬಂದ್‌!

ಬಾಗಲಕೋಟೆಯಲ್ಲಿ ಅಬ್ಬರಿಸಿದ ಮಳೆ

ತಡರಾತ್ರಿ ಬಾಗಲಕೋಟೆಯ ರಬಕವಿ ಬನಹಟ್ಟಿ ನಗರದಲ್ಲಿ ಮಳೆಯು ಅಬ್ಬರಿಸಿದೆ. ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದ್ದು, ಇಡೀ ಬನಹಟ್ಟಿ ನಗರ ನದಿಯಂತೆ ಕಂಡು ಬಂತು. ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ನಿದ್ದೆಗೆಟ್ಟು ಬಕೆಟ್ ಮೂಲಕ ನೀರು ಹೊರ ಹಾಕಿದರು. ಬ್ಯಾರೆಲ್, ಮನೆ ಮುಂಭಾಗದ ಬೈಕ್‌ಗಳು ಜಲಾವೃತಗೊಂಡಿದ್ದವು. 1 ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಬನಹಟ್ಟಿ ಜನರು ತತ್ತರಿಸಿ ಹೋಗಿದ್ದರು.

ಚಿಕ್ಕಮಗಳೂರಿನಲ್ಲಿ ನಿಲ್ಲದ ಮಳೆ ಅವಾಂತರ

ರಾತ್ರಿ ಸುರಿದ ಮಳೆಗೆ ಕೆರೆಯ ಏರಿ ಒಡೆದು ಜಮೀನಿಗೆ ನೀರು ನುಗ್ಗಿದ್ದರಿಂದ ಸುಮಾರು 30 ಎಕರೆ ಬೆಳೆ ನಾಶವಾಗಿದೆ. ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಜೋಳ, ರಾಗಿ ಸೇರಿದಂತೆ ಹಲವು ಬೆಳೆಗಳು ಕೊಚ್ಚಿ ಹೋಗಿವೆ. ಕೂಡಲೇ ಏರಿ ದುರಸ್ತಿ ಮಾಡಿ ನೀರು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಇತ್ತ ಚಿಕ್ಕಮಗಳೂರು ನಗರದ ಕಲ್ಲು ದೊಡ್ಡಿ ಬಡಾವಣೆಯ ಹಲವು ಮನೆಗಳಿಗೆ ನೀರು ನುಗ್ಗಿ ಪರದಾಟ ಅನುಭವಿಸಿದರು. ರಸ್ತೆ ನೀರು ಹಳ್ಳದಂತೆ ಮನೆಗೆ ನುಗ್ಗಿತ್ತು. ನೀರು ಹೊರ ಹಾಕಲಾಗದೆ ಜನರು ಪರದಾಡಿದರು. ಮನೆಯಲ್ಲಿದ್ದ ಆಹಾರ ಪದಾರ್ಥ ಹಾಗೂ ವಸ್ತುಗಳು ಹಾನಿಯಾಗಿದ್ದವು. ನಗರ ಸಭೆ ವಿರುದ್ಧ ಸ್ಥಳೀಯ ನಾಗರಿಕರು ಇಡಿ ಶಾಪ ಹಾಕಿದ್ದರು.

ಆಗಸ್ಟ್‌ 23ರವರಗೆ ಭಾರಿ ಮಳೆ ಎಚ್ಚರ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ (ಆ.19) ಆಗಸ್ಟ್ 23ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಅರಬ್ಬೀ ಸಮುದ್ರದ ಕರಾವಳಿ ಪ್ರದೇಶದಿಂದ ಮಾಲ್ಡಿವ್ಸ್ ದ್ವೀಪದವರೆಗೆ 1.5 ಮತ್ತು 1.8ಕಿ.ಮೀ ಟ್ರಪ್ ಎದ್ದಿದೆ. ಹೀಗಾಗಿ ಆಗಸ್ಟ್ 19 ರಿಂದ 23 ರ ವರೆಗೆ ಕರಾವಳಿ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಆಗಸ್ಟ್ 19 ಮತ್ತು 20 ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23 ರ ವರೆಗೆ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ತುಮಕೂರು, ದಾವಣಗೆರೆ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಕೋಲಾರ್, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯೊಂದಿಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

Karnataka Weather Forecast
Karnataka Weather Forecast

ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಚಾಮರಾಜನಗರ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.

ಇದನ್ನೂ ಓದಿ: Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

ಗುಡುಗು ಸಹಿತ ಮಳೆ

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಎಫೆಕ್ಟ್‌; ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ 20ಕ್ಕೂ ಹೆಚ್ಚು ಕುರಿಗಳು

Karnataka Weather Forecast : ಶನಿವಾರ ರಾತ್ರಿ ಸುರಿದ ಮಳೆಯು ಹಲವೆಡೆ ಅವಾಂತರವನ್ನೇ ಸೃಷ್ಟಿಸಿದೆ. ಭಾರಿ ಮಳೆಗೆ (Rain News) ಬೆಳೆಗಳು ಜಲಾವೃತಗೊಂಡು ರೈತರು ಕಂಗಲಾಗಿದ್ದಾರೆ.

VISTARANEWS.COM


on

By

Karnataka weather Forecast
Koo

ಯಾದಗಿರಿ ಜಿಲ್ಲೆಯಾದ್ಯಂತ ನಿನ್ನೆ ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ (Rain News) ಬೂದನೂರಿನ ಹಿರೇಹಳ್ಳ ತುಂಬಿ ಹರಿಯುತ್ತಿದೆ. ತುಂಬಿ ಹರಿಯುತ್ತಿರುವ ಹಳ್ಳದಲ್ಲಿ 20ಕ್ಕೂ ಹೆಚ್ಚು ಕುರಿಗಳು ಕೊಚ್ಚಿ ಹೋಗಿವೆ. ಇತ್ತ ಹಿರೇಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ 50 ಕುರಿಗಳ ರಕ್ಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬೂದನೂರಿನ ಹಿರೇಹಳ್ಳದಲ್ಲಿ ಘಟನೆ (Karnataka Weather Forecast) ನಡೆದಿದೆ. ಬೂದನೂರ ಗ್ರಾಮದ ಸಾಮಯ್ಯ ಎಂಬ ಕುರುಗಾಯಿಗೆ ಸೇರಿದ್ದ ಕುರಿಗಳನ್ನು ಸಂಜೆ ಎಂದಿನಂತೆ ಹಳ್ಳ ದಾಟಿ ಬರುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಗ್ರಾಮಸ್ಥರ ಸಹಾಯದಿಂದ 50 ಕ್ಕೂ ಹೆಚ್ಚು ಕುರಿಗಳ ರಕ್ಷಣೆ ಮಾಡಲಾಗಿದೆ. 20 ಕ್ಕೂ ಹೆಚ್ಚು ಕುರಿಗಳು ಹಿರೇಹಳ್ಳದ ನೀರು ಪಾಲಾಗಿವೆ.

ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸುತ್ತಮುತ್ತ ಭಾನುವಾರ ಅರ್ಧ ಗಂಟೆಗೂ ಹೆಚ್ಚು ಸಮಯ ಧಾರಾಕಾರ ಮಳೆಯಾಗಿದೆ. ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಮಳೆ ಆರ್ಭಟ ಜೋರಾಗಿತ್ತು. ಮಳೆಗೆ ರಸ್ತೆ ಹಾಗೂ ಚರಂಡಿಗಳ ಮೇಲೆ ನೀರು ಹರಿದು ಮನೆಗಳತ್ತ ತೆರಳಲು ಜನರು ಪರದಾಡಿದ್ದರು. ರಾಜಧಾನಿ ಬೆಂಗಳೂರಿನ ಸುತ್ತಮುತ್ತಲೂ ಮಳೆಯಾಗಿದೆ.

ಚಿಕ್ಕಬಳ್ಳಾಪುರದಲಿ ಬಾಳೆ ತೋಟ ನಾಶ

ಇಡೀ ರಾತ್ರಿ ಸುರಿದ ಭಾರಿ ಮಳೆಗೆ ಬಾಳೆ ತೋಟ ನಾಶವಾಗಿದೆ. ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸುಮಾರು ಹತ್ತು ಲಕ್ಷ ಬೆಲೆ ಬಾಳುವ 2500 ಬಾಳೆ ಗಿಡಗಳು ನಾಶವಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಬೀಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹನುಮಂತರಾಯಪ್ಪ ಎಂಬ ರೈತನಿಗೆ ಸೇರಿದ ಬಾಳೆ ತೋಟ ಫಸಲಿಗೆ ಬಂದಿದ್ದ ಬೆಳೆ ನೆಲಕಚ್ಚಿದೆ. ಇತ್ತ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಮೇಲೂರು ಗ್ರಾಮ ದೇವತೆ ಗಂಗಾದೇವಿ ದೇವಸ್ಥಾನ ಜಲಾವೃತಗೊಂಡಿದೆ. ಮನೆಗಳಿಗೆ ಹಾಗೂ ದೇವಸ್ಥಾನಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಅಧಿಕಾರಿಗಳಿಗೆ ಜನರು ಹಿಡಿಶಾಪ ಹಾಕಿದ್ದಾರೆ.

ತುಮಕೂರಿನಲ್ಲಿ ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು

ತುಮಕೂರು ಜಿಲ್ಲೆಯ ಹಲವೆಡೆ ತಡರಾತ್ರಿ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಕ್ಕೆ ನೀರು ನುಗ್ಗಿ ರಸ್ತೆಗಳು ಜಲಾವೃತಗೊಂಡಿದೆ. ತುಮಕೂರು ನಗರ, ಗುಬ್ಬಿ, ಕುಣಿಗಲ್ ತಾಲೂಕಿನಲ್ಲಿ ಮಳೆಯಾಗಿದೆ. ತುಮಕೂರು ನಗರದ ಬನಶಂಕರಿಯಲ್ಲಿ ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರ ಪರದಾಟಬೇಕಾಯಿತು. ಹಲವಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ವಿಜಯಪುರದಲ್ಲಿ ಜಮೀನು ಜಲಾವೃತ

ಕಾಲುವೆಗೆ ನೀರು ಬಿಟ್ಟಿದ್ದರಿಂದ ಭೂಮಿಯ ಬದು ಒಡೆದು ಜಮೀನಿಗೆ ನೀರು ನುಗ್ಗಿದೆ. ಕಾಲುವೆ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ರೈತರು ಬೆಳೆದ ಮುಂಗಾರು ಬೆಳೆಗಳಾದ ತೊಗರಿ, ಮೆಕ್ಕೆಜೋಳ ಸಂಪೂರ್ಣ ಜಲಾವೃತಗೊಂಡಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೊಟ್ಯಾಳ ಗ್ರಾಮದ ರೈತರ ಗೋಳು ಕೇಳುವವರು ಇಲ್ಲದಂತಾಗಿದೆ. ನೂರಾರು ಎಕರೆದಲ್ಲಿ ಬೆಳೆದ ಬೆಳೆ ಸಂಪೂರ್ಣಹಾನಿಯಾಗಿದೆ. ಕೂಡಲೇ ಕಾಲುವೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಜತೆಗೆ ನಾಶವಾದ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಮಳೆಗೆ ಧರೆಗುರುಳಿದ ಮರಗಳು

ನಿನ್ನೆ ಶನಿವಾರ ಸುರಿದ ಗಾಳಿ ಮಳೆಗೆ ಅಡಿಕೆ ಹಾಗೂ ತೆಂಗಿನ ಮರಗಳು ಧರೆಗುರುಳಿವೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಾಸಡಿ ಗ್ರಾಮ ಒಂದರಲ್ಲೇ 3 ಸಾವಿರಕ್ಕೂ ಅಧಿಕ ಅಡಿಕೆ ಮರ 200ಕ್ಕೂ ಅಧಿಕ ತೆಂಗಿನ ಮರಗಳು ಉರುಳಿ ಬಿದ್ದಿವೆ. ಫಲಕ್ಕೆ ಬಂದ ಅಡಿಕೆ ಮರ ಕಳೆದುಕೊಂಡ ರೈತರು ಗೋಳಾಡುತ್ತಿದ್ದಾರೆ. 16 ವರ್ಷಗಳ ಕಾಲ ಮಕ್ಕಳಂತೆ ಸಾಕಿದ್ದ ಅಡಿಕೆ ಮರ ಧರೆಗುರುಳಿದ್ದನ್ನು ಕಂಡು ರೈತರು ಕಣ್ಣೀರು ಹಾಕುತ್ತಿದ್ದಾರೆ. ರೈತರೂಂದಿಗೆ ಮಾಜಿ ಸಚಿವ ರೇಣುಕಾಚಾರ್ಯ ಬೆಳೆ ಹಾನಿ ತೋಟಗಳಿಗೆ ಭೇಟಿ ನೀಡಿದರು. ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದರು. ಬೆಳೆ ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದರು.

ಇದನ್ನೂ ಓದಿ: POCSO Case: ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಮೊಬೈಲ್‌ ಆಸೆ ತೋರಿಸಿ ಅತ್ಯಾಚಾರವೆಸಗಿದ ಕಾಮುಕ

ನಾಳೆ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಆ.19ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಇನ್ನೂ ದಕ್ಷಿಣ ಒಳನಾಡಿನ ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Lightning Strike: ಮಿಂಚು ಹೊಡೆದು 9 ಸಾವು; 12 ಮಂದಿಗೆ ಗಾಯ

Lightning Strike: ಒಡಿಶಾದ ವಿವಿಧ ಭಾಗಗಳಲ್ಲಿ ಶನಿವಾರ ಮಿಂಚು ಹೊಡೆದು ಸುಮಾರು 9 ಮಂದಿ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಮಯೂರ್‌ಭಂಜ್‌, ಬಾಲಸೊರೆ ಮತ್ತು ಭದ್ರಕ್‌ ಜಿಲ್ಲೆಗಳಲ್ಲಿ ತಲಾ ಇಬ್ಬರು ಮತ್ತು ಕೈಂಜ್ಹರ್‌, ಧೆನ್ಕನಲ್‌ ಮತ್ತು ಗಂಜಮ್‌ ಜಿಲ್ಲೆಗಳಲ್ಲಿ ತಲಾ ಒಬ್ಬರು ಅಸುನೀಗಿದ್ದಾರೆ.

VISTARANEWS.COM


on

Lightning Strike
Koo

ಭುವನೇಶ್ವರ: ಒಡಿಶಾದ ವಿವಿಧ ಭಾಗಗಳಲ್ಲಿ ಶನಿವಾರ ಮಿಂಚು ಹೊಡೆದು (Lightning Strike) ಸುಮಾರು 9 ಮಂದಿ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಮಯೂರ್‌ಭಂಜ್‌, ಬಾಲಸೊರೆ ಮತ್ತು ಭದ್ರಕ್‌ ಜಿಲ್ಲೆಗಳಲ್ಲಿ ತಲಾ ಇಬ್ಬರು ಮತ್ತು ಕೈಂಜ್ಹರ್‌, ಧೆನ್ಕನಲ್‌ ಮತ್ತು ಗಂಜಮ್‌ ಜಿಲ್ಲೆಗಳಲ್ಲಿ ತಲಾ ಒಬ್ಬರು ಅಸುನೀಗಿದ್ದಾರೆ.

ಘಟನೆಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಜತೆಗೆ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಬಾರ್ಪಾಲಿ ಬ್ಲಾಕ್‌ನ ಮುನುಪಾಲಿ ಗ್ರಾಮದ ಬಳಿಯ ಹೊಲದಲ್ಲಿ ಸಿಡಿಲು ಬಡಿದು 12 ಜನರು ಗಾಯಗೊಂಡಿದ್ದಾರೆ ಎಂದು ಬಾರ್ಗರ್ ಜಿಲ್ಲೆಯ ವರದಿ ತಿಳಿಸಿದೆ. ಗಾಯಗೊಂಡ 12 ಜನರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂಕಿ-ಅಂಶಗಳ ಪ್ರಕಾರ ಒಡಿಶಾದಲ್ಲಿ ಕಳೆದ ಐದು ವರ್ಷಗಳಲ್ಲಿ ಸಿಡಿಲು ಬಡಿದು 10,741 ಮಂದಿ ಮೃತಪಟ್ಟಿದ್ದಾರೆ. ಮಿಂಚಿನ ಹೊಡೆತದಿಂದ ಅತೀ ಹೆಚ್ಚಿನ ಸಾವು ಒಡಿಶಾದಲ್ಲಿ ಸಂಭವಿಸುತ್ತದೆ. ಎರಡನೇ ಸ್ಥಾನದಲ್ಲಿ ಮಧ್ಯಪ್ರದೇಶ ಇದೆ.

ಹಿಮಾಚಲ ಪ್ರದೇಶದಲ್ಲಿ ಮುಂದುವರಿದ ಮಳೆ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮಳೆ ಮುಂದಿವರಿದಿದೆ. ಆಗಸ್ಟ್‌ 23ರವರೆಗೆ ಧಾರಾಕಾರವಾಗಿ ಮಳೆಯಾಗಲಿದ್ದು, 5 ಜಿಲ್ಲೆಗಳಲ್ಲಿ ಪ್ರವಾಹ ಎದುರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಚಂಬ, ಕಂಗ್ರ, ಮಂಡಿ, ಶಿಮ್ಲಾ ಮತ್ತು ಸಿರ್ಮುವಾರ್‌ ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಲ್ಲಿ ಭೀಕರ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಆಗಸ್ಟ್ 23ರವರೆಗೆ ರಾಜ್ಯದ ಬಯಲು, ಬೆಟ್ಟ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಉನಾ, ಬಿಲಾಸ್ಪುರ, ಹಮೀರ್ಪುರ್, ಕಾಂಗ್ರಾ, ಸೋಲನ್, ಶಿಮ್ಲಾ ಮತ್ತು ಸಿರ್ಮುವಾರ್‌ನ ಪ್ರತ್ಯೇಕ ಸ್ಥಳಗಳಲ್ಲಿ ನಾಳೆ ಭಾರಿ ಮಳೆಯಾಗಲಿದೆ. ಈ ಮಾನ್ಸೂನ್ ಋತುವಿನಲ್ಲಿ ಇದುವರೆಗೆ 215 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 33ಕ್ಕೂ ಅಧಿಕ ಮಂದಿ ಕಾಣೆಯಾಗಿದ್ದಾರೆ. ಶಿಮ್ಲಾ ವಲಯದಲ್ಲಿ ಅತಿ ಹೆಚ್ಚು 83 ರಸ್ತೆಗಳು ಸೇರಿದಂತೆ ರಾಜ್ಯಾದ್ಯಂತ ಒಟ್ಟು 194 ರಸ್ತೆಗಳು ಇನ್ನೂ ದುರಸ್ತಿಯಾಗಿಲ್ಲ. ಇದಲ್ಲದೆ ನಿರಂತರ ಮಳೆಯಿಂದಾಗಿ 4,764 ನೀರು ಸರಬರಾಜು ಯೋಜನೆಗಳ ಮೇಲೆ ಪರಿಣಾಮ ಬೀರಿದೆ.

ಮಧ್ಯಪ್ರದೇಶದಲ್ಲಿಯೂ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿಯೂ ಇದುವರೆಗೆ ಉತ್ತಮ ಮಳೆ ಸುರಿದಿದೆ. ಆಗಸ್ಟ್ 19ರಿಂದ ರಾಜ್ಯದಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಸೂಚಿಸಿದ್ದಾರೆ. ಸದ್ಯ ರಾಜ್ಯದ ಅಣೆಕಟ್ಟುಗಳು ಮತ್ತು ಕೊಳಗಳಲ್ಲಿನ ನೀರಿನ ಮಟ್ಟವು ಗರಿಷ್ಠ ಪ್ರಮಾಣದಲ್ಲಿದೆ. ಕೋಲಾರ, ಬನ್ಸಾಗರ್, ಕುಂಡಲಿಯಾ, ಬರ್ಗಿ, ಇಂದಿರಾ ಸಾಗರ್, ಓಂಕಾರೇಶ್ವರ, ಕಲಿಯಸೊಟ್, ಭದ್ರಭಡ, ಕೆರವ ಮತ್ತು ಇತರ ಅಣೆಕಟ್ಟುಗಳು ಬಹುತೇಕ ಭರ್ತಿಯಾಗಿವೆ.

ಇದನ್ನೂ ಓದಿ: Cloudburst: ಮೇಘಸ್ಫೋಟದಿಂದ ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ; 40ಕ್ಕೂ ಹೆಚ್ಚು ಮಂದಿ ನಾಪತ್ತೆ

Continue Reading

ಮಳೆ

Karnataka Weather : ಭಾರಿ ಮಳೆ ಹಿನ್ನೆಲೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ (Rain News) ಮಾಡಲಾಗಿದೆ. ಕೆಲವೊಮ್ಮೆ ಗಾಳಿ ವೇಗವು ಬೀಸಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಇಂದು ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಚದುರಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್‌ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Dina Bhavishya: ಈ ರಾಶಿಯವರಿಗೆ ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲೂ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Raksha Bandhan
ಪ್ರಮುಖ ಸುದ್ದಿ7 mins ago

Raksha Bandhan : ಪುಟಾಣಿ ಗೆಳೆಯರೊಂದಿಗೆ ರಕ್ಷಾ ಬಂಧನ ಆಚರಿಸಿಕೊಂಡ ನರೇಂದ್ರ ಮೋದಿ; ಇಲ್ಲಿವೆ ಚಿತ್ರಗಳು

Rayara Aradhane 2024
ಧಾರ್ಮಿಕ12 mins ago

Rayara Aradhane 2024: ನಾಳೆಯಿಂದ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ; ಗುರುಗಳ ಜೀವನ ಹೇಗಿತ್ತು, ಸಂದೇಶ ಏನಾಗಿತ್ತು?

Actor Chetan Ahimsa
ಕರ್ನಾಟಕ21 mins ago

Chetan Ahimsa: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಟ ಚೇತನ್ ಆಗ್ರಹ; ಆ.28ಕ್ಕೆ ಕಾಂಗ್ರೆಸ್ ಹಠಾವೋ, ದಲಿತ ಬಚಾವೋ ಹೋರಾಟ

Uttara Kannada News
ಕರ್ನಾಟಕ32 mins ago

Uttara Kannada News: ಪಿಎಂ ಸ್ವ-ನಿಧಿ ಯೋಜನೆ; ಕಾರವಾರ ನಗರಸಭೆಗೆ ರಾಜ್ಯ ಮಟ್ಟದ ಪ್ರಶಸ್ತಿಯ ಗರಿ

ಆರೋಗ್ಯ32 mins ago

Sodium reduction: ಉಪ್ಪು ಸೇವನೆ ಕಡಿಮೆಯಾದರೆ ಈ ಎಲ್ಲ ಸಮಸ್ಯೆಗಳು ಕಾಡುತ್ತವೆ

Pralhad Joshi
ಬೆಂಗಳೂರು34 mins ago

Pralhad Joshi: ಕಾಂಗ್ರೆಸ್‌ನಿಂದ ದೇಶದಲ್ಲಿ ಬಾಂಗ್ಲಾದಂತೆ ಅರಾಜಕತೆ ಸೃಷ್ಟಿಸುವ ಹುನ್ನಾರ; ಪ್ರಲ್ಹಾದ್‌ ಜೋಶಿ ಆರೋಪ

Virat kohli
ಕ್ರೀಡೆ38 mins ago

Virat Kohli : ಕೊಹ್ಲಿ ಕಿಂಗ್ ಅಲ್ಲ; ಭಾರತದ ಸೂಪರ್​​ ಸ್ಟಾರ್​ ಬ್ಯಾಟರ್​​ ಬಗ್ಗೆ ಕಳಪೆ ಕಾಮೆಂಟ್ ಮಾಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Contrast dupatta fashion
ಫ್ಯಾಷನ್47 mins ago

Contrast Dupatta Fashion: ಶ್ರಾವಣ ಮಾಸದಲ್ಲಿ ಟ್ರೆಂಡಿಯಾದ ಕಾಂಟ್ರಾಸ್ಟ್ ದುಪಟ್ಟಾ ಫ್ಯಾಷನ್‌

Actor Darshan
ಕರ್ನಾಟಕ1 hour ago

Pavithra gowda: ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ; ಆ.22ಕ್ಕೆ ವಿಚಾರಣೆ

Death Penalty
ವಿದೇಶ1 hour ago

Death Penalty: ಈ 7 ದೇಶಗಳಲ್ಲಿ ಅತ್ಯಾಚಾರ ನಡೆಸಿದರೆ ಮರಣ ದಂಡನೆಯೇ ಶಿಕ್ಷೆ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌