Zika virus : ಮಾರಕ ಜೀಕಾ ವೈರಸ್​ಗೆ ಕರ್ನಾಟಕದಲ್ಲಿ ಮೊದಲ ಬಲಿ; ಶಿವಮೊಗ್ಗದ ವ್ಯಕ್ತಿ ಸಾವು - Vistara News

ಪ್ರಮುಖ ಸುದ್ದಿ

Zika virus : ಮಾರಕ ಜೀಕಾ ವೈರಸ್​ಗೆ ಕರ್ನಾಟಕದಲ್ಲಿ ಮೊದಲ ಬಲಿ; ಶಿವಮೊಗ್ಗದ ವ್ಯಕ್ತಿ ಸಾವು

Zika virus : ರಾಜ್ಯದಲ್ಲಿ ಇದುವರೆಗೂ ಒಟ್ಟು 9 ಜೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಶಿವಮೊಗ್ಗದಲ್ಲಿ 3, ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ 6 ಜನರಿಗೆ ಜೀಕಾ ವೈರಸ್​ ಸೋಂಕು ಕಂಡು ಬಂದಿದೆ. ಬೆಂಗಳೂರಿನಲ್ಲಿ ಜೀಕಾ ವೈರಸ್​ ಪತ್ತೆಯಾದವರಲ್ಲಿ ಒಬ್ಬರು ಗರ್ಭಿಣೀ ಎಂದು ಆರೋಗ್ಯ ಇಲಾಖೆಯಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ.

VISTARANEWS.COM


on

Zika virus
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಅಪಾಯಕಾರಿ ಜೀಕಾ ವೈರಸ್​ಗೆ (Zika virus ) ಕರ್ನಾಟದಲ್ಲಿ ಮೊದಲ ಬಲಿಯಾಗಿದೆ. ಜೀಕಾ ವೈರಸ್​ ಸೋಂಕಿನಿಂದ ಬಳಸುತ್ತಿದ್ದ ವ್ಯಕ್ತಿಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ. 73 ವರ್ಷದ ವ್ಯಕ್ತಿ ಮೃತಪಟ್ಟವರು ಎಂದು ಮೂಲಗಳು ತಿಳಿಸಿವೆ. ಅವರಿಗೆ ಕೆಲವು ದಿನಗಳಿಂದ ಜೀಕಾ ವೈರಸ್​ನಿಂದ ಆಗುವ ಸೋಂಕು ಇತ್ತು. ಜತೆಗೆ ಅವರಿಗೆ ಕೋಮಾರ್ಬಿಟಿಸ್ ಕೂಡ ಇತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇದುವರೆಗೂ ಒಟ್ಟು 9 ಜೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಶಿವಮೊಗ್ಗದಲ್ಲಿ 3, ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ 6 ಜನರಿಗೆ ಜೀಕಾ ವೈರಸ್​ ಸೋಂಕು ಕಂಡು ಬಂದಿದೆ. ಬೆಂಗಳೂರಿನಲ್ಲಿ ಜೀಕಾ ವೈರಸ್​ ಪತ್ತೆಯಾದವರಲ್ಲಿ ಒಬ್ಬರು ಗರ್ಭಿಣೀ ಎಂದು ಆರೋಗ್ಯ ಇಲಾಖೆಯಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: RAI New Rules: ನಿಮಗೆ ಗೊತ್ತಿರಲಿ; ಸೆ.1ರಿಂದ ಈ ಸಿಮ್ ಕಾರ್ಡ್‌ಗಳು ಕಪ್ಪು ಪಟ್ಟಿಗೆ!

ವೈರಸ್ ಗೆ ತುತ್ತಾದ ಗರ್ಭಿಣಿಯ ಆರೈಕೆಗೆ ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗರ್ಭಿಣಿಯರ ಸಂಪರ್ಕಕ್ಕೆ ಬಂದವರ ತಪಾಸಣೆ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಇದೇ ವೇಳೆ ಆರೋಗ್ಯ ವೈರಸ್ ಕಾಣಿಸಿಕೊಂಡ ರೋಗಿಗಳ ವಿವರವನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ. ಜಿಗಣಿಯಲ್ಲಿ ಝೀಕಾ ವೈರಸ್ ಕಂಡುಬಂದ ಗರ್ಭಿಣಿಗೆ ಹೆರಿಗೆಯಾಗಿದ್ದು ತಾಯಿ ಮಗು ಆರೋಗ್ಯವಾಗಿದ್ದಾರೆ. ಇನ್ನುಳಿದ ನಾಲ್ವರಿಗೆ ಮುಂದುವರೆದ ಚಿಕಿತ್ಸೆ ಮುಂದುವರಿದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಚೀನಾದ ಅಥ್ಲೀಟ್​ ಈಗ ರೆಸ್ಟೋರೆಂಟ್​​ನಲ್ಲಿ ವೇಟರ್​!

VISTARANEWS.COM


on

Paris Olympics 2024
Koo

ಬೆಂಗಳೂರು : ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ (Paris Olympics 2024) ಹಲವಾರು ಕ್ರೀಡಾಪಟುಗಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದ್ದಾರೆ. ಅವರಲ್ಲಿ ಬ್ಯಾಲೆನ್ಸ್ ಬೀಮ್ ಜಿಮ್ನಾಸ್ಟಿಕ್ಸ್ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದ ಚೀನಾದ ಜಿಮ್ನಾಸ್ಟ್ ಝೌ ಯಾಕಿನ್ ಒಬ್ಬರು. ಒಲಿಂಪಿಕ್ ಪೋಡಿಯಂನಲ್ಲಿ ಪದಕ ಗೆದ್ದ ಬಳಿಕ ಹೇಗೆ ಪ್ರತಿಕ್ರಿಯಿಸಬೇಕು ಎಂದು ತಿಳಿಯದೇ ಪಕ್ಕದವರನ್ನು ನಕಲು ಮಾಡಿದ 18 ವರ್ಷದ ಆಟಗಾರ್ತಿಯ ವಿಡಿಯೊವೊಂದು ವೈರಲ್ ಆಗಿತ್ತು. ಅವರು ಪಕ್ಕದಲ್ಲಿದ್ದ ವಿಜೇತರು ಪದಕ ಕಚ್ಚುವುದನ್ನು ನೋಡಿ ಅದೇ ರೀತಿ ಮಾಡಿದ್ದರು. ಅದು ಅಂತರ್ಜಾಲದಾದ್ಯಂತದ ಅಭಿಮಾನಿಗಳ ಗಮನ ಸೆಳೆದಿತ್ತು. ಇದೀಗ ಮನೆಗೆ ಹಿಂದಿರುಗಿದ ಅವರ ಜೀವನದ ಇನ್ನೊಂದು ನೋಟ ವೈರಲ್ ಆಗಿದೆ. ಅದೇನೆಂದರೆ ಅವರು ರೆಸ್ಟೋರೆಂಟ್ ಒಂದರಲ್ಲಿ ಸಪ್ಲೈರ್​ ಆಗಿ ಕೆಲಸ ಮಾಡುವುದನ್ನು ಮುಂದುವರಿಸಿದ್ದಾರೆ.

ಪ್ಯಾರಿಸ್ 2024 ರಲ್ಲಿ ಇಟಲಿಯ ಇಬ್ಬರು ಜಿಮ್ನಾಸ್ಟ್​ಗಳಾದ ಆಲಿಸ್ ಡಿ’ಅಮಾಟೊ ಮತ್ತು ಮನಿಲಾ ಎಸ್ಪೊಸಿಟೊ ನಡುವಿನ ಬ್ಯಾಲೆನ್ಸ್ ಬೀಮ್ ಸ್ಪರ್ಧೆಯಲ್ಲಿ ಝೌ ಯಾಕಿನ್ ಎರಡನೇ ಸ್ಥಾನ ಪಡೆದರು. ಪೋಡಿಯಂನಲ್ಲಿ ಫೋಟೋಗಳಿಗೆ ಪೋಸ್ ನೀಡುವಾಗ ಇಟಾಲಿಯನ್ನರು ತಮ್ಮ ಪದಕಗಳನ್ನು ಕಚ್ಚುತ್ತಿದ್ದರು. ಇದು ಝೌ ಅವರ ತಮಾಷೆಯ ಸದರ್ಭಕ್ಕೆ ಕಾರಣವಾಯಿತು. ಅವರು ಸ್ವತಃ ಹಾಗೆ ಮಾಡಲು ಪ್ರಯತ್ನಿಸಿದರು. ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಯಿತು.

ಒಲಿಂಪಿಕ್ಸ್ ನಂತರ, ಝೌ ಯಾಕಿನ್ ಮತ್ತೊಮ್ಮೆ ವೈರಲ್ ಆಗಿದ್ದಾರೆ. ಆದಾಗ್ಯೂ, ಈ ಬಾರಿ, ಝೌ ಚೀನಾದ ಹುನಾನ್ ಪ್ರಾಂತ್ಯದ ತನ್ನ ಸ್ಥಳೀಯ ನಗರ ಹೆಂಗ್ಯಾಂಗ್ನ ಸ್ಥಳೀಯ ರೆಸ್ಟೋರೆಂಟ್​ನಲ್ಲಿ ಆಹಾರವನ್ನು ಬಡಿಸುತ್ತಾ ತನ್ನ ಕುಟುಂಬಕ್ಕೆ ಸಹಾಯ ಮಾಡುವುದನ್ನು ಕಾಣಬಹುದು.

ಝೌ ಯಾಕಿನ್ ಯಾರು?

ಕೇವಲ 18 ನೇ ವಯಸ್ಸಿನಲ್ಲಿಯೂ, ಝೌ ಯಾಕಿನ್ ಈಗಾಗಲೇ ತನ್ನ ಜಿಮ್ನಾಸ್ಟಿಕ್ಸ್ ವೃತ್ತಿಜೀವನದಲ್ಲಿ ಗಮನಾರ್ಹ ಪದಕಗಳನ್ನು ಗಳಿಸಿದ್ದಾರೆ. ಕೇವಲ ಮೂರು ವರ್ಷದವಳಿದ್ದಾಗ ಜಿಮ್ನಾಸ್ಟಿಕ್ಸ್ ಪ್ರಾರಂಭಿಸಿದ ಝೌ ಬ್ಯಾಲೆನ್ಸ್ ಬೀಮ್ ವಿಭಾಗದಲ್ಲಿ ಪರಿಣತಿ ಹೊಂದಿದ್ದಾರೆ.

ಇದನ್ನೂ ಓದಿ: Virat Kohli : ಕೊಹ್ಲಿ ಕಿಂಗ್ ಅಲ್ಲ; ಭಾರತದ ಸೂಪರ್​​ ಸ್ಟಾರ್​ ಬ್ಯಾಟರ್​​ ಬಗ್ಗೆ ಕಳಪೆ ಕಾಮೆಂಟ್ ಮಾಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

2020ರಲ್ಲಿ ಝೌ ಚೈನೀಸ್ ಚಾಂಪಿಯನ್ಶಿಪ್​ನ ಬ್ಯಾಲೆನ್ಸ್ ಬೀಮ್​ನಲ್ಲಿ ವೈಯಕ್ತಿಕ ಚಿನ್ನ ಗೆದ್ದಿದ್ದರು. ಹಿರಿಯ ಮಟ್ಟದಲ್ಲಿ, ಝೌ ಪ್ಯಾರಿಸ್​ನಲ್ಲಿ ತನ್ನ ಮೊದಲ ಒಲಿಂಪಿಕ್ ಪದಕ ಗೆಲ್ಲುವ ಮೊದಲು ಚೀನಾದ ರಾಷ್ಟ್ರೀಯ ಕ್ರೀಡಾಕೂಟ ಮತ್ತು ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಚಿನ್ನ ಗೆದ್ದಿದ್ದಾರೆ.

ಪ್ಯಾರಿಸ್ 2024 ರಲ್ಲಿ, ಝೌ ಪ್ರಸಿದ್ಧ ಜಿಮ್ನಾಸ್ಟ್ ಸಿಮೋನ್ ಬೈಲ್ಸ್ ಅವರನ್ನು ಹಿಂದಿಕ್ಕಿ ಅರ್ಹತೆ ಪಡೆದಿದ್ದರು. ನಂತರ ಒಟ್ಟು 14.100 ಅಂಕಗಳೊಂದಿಗೆ ಬೆಳ್ಳಿ ಗೆದ್ದರು. ಇದು ಚಿನ್ನದ ಪದಕ ವಿಜೇತ ಡಿ’ಅಮಾಟೊ ಅವರ 14.366 ಕ್ಕಿಂತ ಸ್ವಲ್ಪ ಕಡಿಮೆ. ಫೈನಲ್​​ನಲ್ಲಿ ಝೌ ಮತ್ತೆ ಬೈಲ್ಸ್ ಅವರನ್ನು ಸೋಲಿಸಿದರು

Continue Reading

ಪ್ರಮುಖ ಸುದ್ದಿ

Sudha Murthy : ವಿವಾದ ಸೃಷ್ಟಿಸಿದ ಸುಧಾ ಮೂರ್ತಿಯವರ ‘ರಕ್ಷಾ ಬಂಧನ’ದ ಕತೆ; ಸ್ಪಷ್ಟನೆ ನೀಡಿದ ಸಂಸದೆ

Sudha Murthy’ :

VISTARANEWS.COM


on

Sudha Murthy'
Koo

ಬೆಂಗಳೂರು : ರಕ್ಷಾ ಬಂಧನ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯರಾದ ಸುಧಾ ಮೂರ್ತಿ (Sudha Murthy) ಹಂಚಿಕೊಂಡ ಸಂದೇಶ ವಿವಾದಕ್ಕೆ ಈಡಾಗಿದ್ದು ಬಳಿಕ ಅವರು ಅದಕ್ಕೆ ಸ್ಪಷ್ಟನೆ ನೀಡಿದ್ದಾರೆ. ತಮಗೆ ಹೇಗೆ “ಪ್ರಮುಖ ಹಬ್ಬ” ಮತ್ತು ದಾರ ಅಥವಾ ರಾಖಿ ಹೊಂದಿರುವ ಮೌಲ್ಯವನ್ನು ಅವರು ವಿವರಣೆ ನೀಡಿದ್ದು ಒಂದು ವರ್ಗದ ಜನರನ್ನು ಕೆರಳಿಸಿತ್ತು. ಬಳಿಕ ಅವರು ತಮ್ಮ ಹೇಳಿಕೆಯನ್ನು ತಿದ್ದಿಕೊಂಡಿದ್ದಾರೆ. ಆದಾಗ್ಯೂ ಇದು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್​ನಲ್ಲಿ ಚರ್ಚೆಗೆ ಕಾರಣವಾಯಿತು. ನಾನು ಬೆಳೆಯುವ ಅವಧಿಯಲ್ಲಿ ಕಲಿತ ಕಥೆಯನ್ನು ಹೇಳುವ ಉದ್ದೇಶ ತಮ್ಮದಾಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.


“ರಕ್ಷಾ ಬಂಧನವು ನನಗೆ ಒಂದು ಪ್ರಮುಖ ಹಬ್ಬವಾಗಿದೆ, ಸಹೋದರಿಯೊಬ್ಬಳು ಕಷ್ಟದ ಸಂದರ್ಭದಲ್ಲಿ ಯಾವಾಗಲೂ ನನಗೆ ನೆರವಿಗೆ ಬರಬೇಕು ಎಂದು ಸಹೋದರನಿಗೆ ಕಟ್ಟುವ ದಾರ” ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ವಿಡಿಯೊದಲ್ಲಿ ಬರೆದುಕೊಂಡಿದ್ದಾರೆ.

ರಾಣಿ ಕರ್ಣಾವತಿ (ಮೇವಾರ್ ಸಾಮಾಜ್ಯ ) ತನ್ನ ರಾಜ್ಯದ ಮೇಲೆ ದಾಳಿ ನಡೆದಾಗ ಏನು ಮಾಡಬೇಕೆಂದು ಅವಳಿಗೆ ತಿಳಿಯದೇ ಮೊಘಲ್ ಚಕ್ರವರ್ತಿ ಹುಮಾಯೂನ್ ಗೆ ದಾರವೊಂದನ್ನು ಕಳುಹಿಸಿ, ನಾನು ಅಪಾಯದಲ್ಲಿದ್ದೇನೆ ದಯವಿಟ್ಟು ನನ್ನನ್ನು ನಿಮ್ಮ ಸಹೋದರಿ ಎಂದು ಪರಿಗಣಿಸಿ ಕಾಪಾಡಿ ಎಂದ ಕೋರಿದ್ದಳು.. ಹುಮಾಯೂನ್ ಗೆ ಅದು ಏನೆಂದು ತಿಳಿದಿರಲಿಲ್ಲ ಇದು ಏನು ಎಂದು ಸಭಾಸದರನ್ನು ಕೇಳಿದ್ದಳು. ಆಗ ವರು ಸಹೋದರನಿಗೆ ಸಹೋದರಿಯ ಕರೆ ಎಂದು ಹೇಳಿದರು. ಇದು ಈ ನೆಲದ ಪದ್ಧತಿ ಎಂದರು. ಇದು ನಿಜವಾಗಿದ್ದರೆ ನಾನು ರಾಣಿ ಕರ್ಣಾವತಿಗೆ ಸಹಾಯ ಮಾಡುತ್ತೇನೆ ಎಂದು ಹುಮಾಯುನ್ ದೆಹಲಿಯಿಂದ ಹೊರಟಿದ್ದ. ಆದರೆ ಸಮಯಕ್ಕೆ ಸರಿಯಾಗಿ ಅಲ್ಲಿಗೆ ತಲುಪಲು ಸಾಧ್ಯವಾಗಲಿಲ್ಲ ಮತ್ತು ಕರ್ಣಾವತಿ ನಿಧನ ಹೊಂದಿದ್ದರು ಎಂದು ಸುಧಾ ಮೂರ್ತಿ ಕತೆಯನ್ನು ಹೇಳಿದ್ದರು.

ಎಕ್ಸ್ ನಲ್ಲಿ ಹಲವಾರು ಬಳಕೆದಾರರು ಮೂರ್ತಿಯವರ ಕತೆಯ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದರು. ರಾಖಿ ಹಬ್ಬ ಆರಂಭಗೊಂಡಿದ್ದು ಮಹಾಭಾರತದ ಸಮಯಕ್ಕೆ ಎಂದು ವಾದಿಸಿದ್ದರು. ಮಹಾಭಾರತದ ಸಮಯದಲ್ಲಿ, ರಾಜ ಶಿಶುಪಾಲನನ್ನು ಕೊಲ್ಲಲು ಸುದರ್ಶನ ಚಕ್ರ ಬಳಸುವಾಗ ಶ್ರೀಕೃಷ್ಣನು ತನ್ನ ಬೆರಳನ್ನು ಕತ್ತರಿಸಿಕೊಂಡಿದ್ದ. ಈ ವೇಳೆ ದ್ರೌಪದಿ ಗಾಯವನ್ನು ಬಟ್ಟೆಯ ತುಂಡಿನಿಂದ ಕಟ್ಟಿದ್ದಳು. ಶ್ರೀಕೃಷ್ಣನು ಖುಷಿಯಿಂದ ಕಷ್ಟಕಾಲದಲ್ಲಿ ನೆರವಾಗುವುದಾಗಿ ದ್ರೌಪದಿಗೆ ಭರವಸೆ ನೀಡಿದ್ದ. ಕೌರವರು ದ್ರೌಪದಿಯನ್ನು ಅವಮಾನಿಸಲು ಪ್ರಯತ್ನಿಸಿದಾಗ ಶ್ರೀಕೃಷ್ಣನು ಸೀರೆಯನ್ನು ನೀಡಿ ಆಕೆಯ ಮಾನ ಕಾಪಾಡಿದ. ಇದು ರಾಖಿ ಹಬ್ಬದ ಮೂಲ ಎಂದು ವಾದಿಸಿದರು.

ಇದನ್ನೂ ಓದಿ: Celebrities Rakhi Celebration: ಫೆಸ್ಟಿವ್‌ ಸೀಸನ್‌ ವೇರ್ಸ್‌ನಲ್ಲಿ ಸೆಲೆಬ್ರೆಟಿಗಳ ರಾಖಿ ಸಂಭ್ರಮ

ಬಳಿಕ ಸುಧಾ ಮೂರ್ತಿ ಅವರು ಸ್ಪಷ್ಟೀಕರಣ ನೀಡಿದ್ದಾರೆ. “ರಕ್ಷಾ ಬಂಧನದಂದು ನಾನು ಹಂಚಿಕೊಂಡ ಕಥೆಯು ಹಬ್ಬಕ್ಕೆ ಸಂಬಂಧಿಸಿದ ಅನೇಕ ಕಥೆಗಳಲ್ಲಿ ಒಂದಾಗಿದೆ. ಖಂಡಿತವಾಗಿಯೂ ಹಬ್ಬದ ಮೂಲ ಅದಲ್ಲ. ನಾನು ವೀಡಿಯೊದಲ್ಲಿ ಮೊದಲೇ ಹೇಳಿದ್ದೇನೆ. ಇದು ಈ ನೆಲದ ಪದ್ಧತಿ ಎಂದು. ನಾನು ಬೆಳೆಯುತ್ತಿರುವಾಗ ಕಲಿತ ಅನೇಕ ಕಥೆಗಳಲ್ಲಿ ಅದೂ ಒಂದು. ರಕ್ಷಾ ಬಂಧನದ ಹಿಂದಿನ ಸಾಂಕೇತಿಕತೆಯ ಬಗ್ಗೆ ಎತ್ತಿ ತೋರಿಸುವುದು ನನ್ನ ಉದ್ದೇಶವಾಗಿತ್ತು ಎಂದು ಹೇಳಿದ್ದಾರ.

Continue Reading

ಪ್ರಮುಖ ಸುದ್ದಿ

Raksha Bandhan : ಪುಟಾಣಿ ಗೆಳೆಯರೊಂದಿಗೆ ರಕ್ಷಾ ಬಂಧನ ಆಚರಿಸಿಕೊಂಡ ನರೇಂದ್ರ ಮೋದಿ; ಇಲ್ಲಿವೆ ಚಿತ್ರಗಳು

Raksha Bandhan : ಸಹೋದರ ಸಹೋದರಿಯರ ನಡುವಿನ ಅಪಾರ ಪ್ರೀತಿಯನ್ನು ಸಂಕೇತಿಸುವ ಹಬ್ಬವಾದ ರಕ್ಷಾ ಬಂಧನದ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು. ಈ ಪವಿತ್ರ ಹಬ್ಬವು ನಿಮ್ಮೆಲ್ಲರ ಸಂಬಂಧಗಳಲ್ಲಿ ಹೊಸ ಮಾಧುರ್ಯವನ್ನು ತರಲಿ ಮತ್ತು ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ” ಎಂದು ಅವರು ಬರೆದಿದ್ದಾರೆ.

VISTARANEWS.COM


on

Raksha Bandhan
Koo

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ತಮ್ಮ “ಪುಟಾಣಿ ಸ್ನೇಹಿತರೊಂದಿಗೆ” ರಕ್ಷಾ ಬಂಧನ (Raksha Bandhan) ಆಚರಿಸಿದರು. ರಕ್ಷಾ ಬಂಧನವು ಸಹೋದರ ಸಹೋದರಿಯರ ನಡುವಿನ ಪ್ರೀತಿ ಮತ್ತು ಬಂಧಕ್ಕೆ ಸಮರ್ಪಿತವಾದ ಸಾಂಪ್ರದಾಯಿಕ ಹಿಂದೂ ಹಬ್ಬವಾಗಿದೆ. ಮೋದಿ ಅವರು ತಮ್ಮ ಎಕ್ಸ್ (ಈ ಹಿಂದೆ ಟ್ವಿಟರ್) ಖಾತೆಯಲ್ಲಿ, ಅಧಿಕೃತ ನಿವಾಸವಾದ 7, ಲೋಕ ಕಲ್ಯಾಣ ಮಾರ್ಗದಲ್ಲಿ ಶಾಲಾ ಬಾಲಕಿಯರೊಂದಿಗೆ ಹಬ್ಬದ ಆಚರಣೆಯ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

ನನ್ನ ಯುವ ಸ್ನೇಹಿತರೊಂದಿಗೆ ರಕ್ಷಾ ಬಂಧನವನ್ನು ಗುರುತಿಸಲು ಸಂತೋಷವಾಗುತ್ತಿದೆ ಎಂದು ಅವರು ಬರೆದಿದ್ದಾರೆ. ಇದಕ್ಕೂ ಮುನ್ನ ಅವರು ಈ ಸಂದರ್ಭದಲ್ಲಿ ದೇಶದ ಜನರಿಗೆ ಶುಭ ಕೋರಿದರು ಮತ್ತು ಎಲ್ಲರ ಸಂತೋಷ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದರು.

ಸಹೋದರ ಸಹೋದರಿಯರ ನಡುವಿನ ಅಪಾರ ಪ್ರೀತಿಯನ್ನು ಸಂಕೇತಿಸುವ ಹಬ್ಬವಾದ ರಕ್ಷಾ ಬಂಧನದ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು. ಈ ಪವಿತ್ರ ಹಬ್ಬವು ನಿಮ್ಮೆಲ್ಲರ ಸಂಬಂಧಗಳಲ್ಲಿ ಹೊಸ ಮಾಧುರ್ಯವನ್ನು ತರಲಿ ಮತ್ತು ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ” ಎಂದು ಅವರು ಬರೆದಿದ್ದಾರೆ.

ಈ ದಿನ, ಸಹೋದರಿಯರು ತಮ್ಮ ಸಹೋದರರ ಮಣಿಕಟ್ಟಿಗೆ ರಾಖಿ ಕಟ್ಟುತ್ತಾರೆ. ಇದಕ್ಕೆ ಪ್ರತಿಯಾಗಿ, ಸಹೋದರರು ತಮ್ಮ ಸಹೋದರಿಯರಿಗೆ ಪ್ರೀತಿ ಮತ್ತು ಕಾಳಜಿಯ ಸಂಕೇತವಾಗಿ ಉಡುಗೊರೆಗಳನ್ನು ನೀಡುತ್ತಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಶುಭ ಹಾರೈಸಿದ್ದು, ಎಲ್ಲರ ಸಂತೋಷ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದ್ದಾರೆ. ಎಲ್ಲ ದೇಶವಾಸಿಗಳಿಗೆ ರಕ್ಷಾ ಬಂಧನದ ಶುಭಾಶಯಗಳು. ಸಹೋದರ ಸಹೋದರಿಯರ ನಡುವಿನ ಮುರಿಯಲಾಗದ ಪ್ರೀತಿ ಮತ್ತು ವಾತ್ಸಲ್ಯದ ಈ ಹಬ್ಬದಲ್ಲಿ, ಪ್ರತಿಯೊಬ್ಬರ ಸಂತೋಷ ಮತ್ತು ಸಮೃದ್ಧಿಗಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಶಾ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜನರಿಗೆ ಶುಭಾಶಯ ಕೋಡಿದ್ದಾರೆ. ರಕ್ಷಾ ಬಂಧನವು ಪ್ರತಿಯೊಬ್ಬರ ಜೀವನವನ್ನು ಸಂತೋಷ ಮತ್ತು ಅದೃಷ್ಟದಿಂದ ತುಂಬಲಿ ಎಂದು ಪ್ರಾರ್ಥಿಸಿದ್ದಾರೆ. “ಸಹೋದರ ಸಹೋದರಿಯರ ನಡುವಿನ ಮುರಿಯಲಾಗದ ಪ್ರೀತಿ ಮತ್ತು ವಿಶ್ವಾಸದ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಪವಿತ್ರ ಹಬ್ಬದಂದು ನಾನು ನನ್ನ ಎಲ್ಲಾ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಮತ್ತು ಶುಭಾಶಯಗಳನ್ನು ಸಲ್ಲಿಸುವೆ . ನಮ್ಮ ಪವಿತ್ರ ಸಂಸ್ಕೃತಿಯ ಈ ಹಬ್ಬವು ಪ್ರತಿಯೊಬ್ಬರ ಜೀವನವನ್ನು ಸಂತೋಷ, ಅದೃಷ್ಟ ಮತ್ತು ಸಮೃದ್ಧಿಯಿಂದ ತುಂಬಲಿ ” ಎಂದು ನಡ್ಡಾ ಟ್ವೀಟ್ ಮಾಡಿದ್ದಾರೆ.

Continue Reading

ಕ್ರೀಡೆ

Virat Kohli : ಕೊಹ್ಲಿ ಕಿಂಗ್ ಅಲ್ಲ; ಭಾರತದ ಸೂಪರ್​​ ಸ್ಟಾರ್​ ಬ್ಯಾಟರ್​​ ಬಗ್ಗೆ ಕಳಪೆ ಕಾಮೆಂಟ್ ಮಾಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Virat Kohli : ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮತ್ತು ತರಬೇತುದಾರ ಬಾಸಿತ್ ಅಲಿ ಅವರು ಕೊಹ್ಲಿಯ ಕ್ರಿಕೆಟ್​ ಬದುಕಿನ ಬಗ್ಗೆ ಮಾತನಾಡಿದ್ದಾರೆ. ಆದರೆ, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ಸಯೀದ್ ಅನ್ವರ್, ಜಾವೇದ್ ಮಿಯಾಂದಾದ್ ಮತ್ತು ಇಂಜಮಾಮ್-ಉಲ್-ಹಕ್ ಅವರಂತಹ ದಂತಕಥೆಗಳಿಗೆ ಹೋಲಿಸುವ ಮೂಲಕ ಕೊಹ್ಲಿಯ ಸಾಧನೆ ಏನೂ ಅಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Virat kohli
Koo

ನವದೆಹಲಿ: ಭಾರತದ ಬ್ಯಾಟಿಂಗ್ ಸೂಪಸ್ಟಾರ್ ಹಾಗೂ ಆಧುನಿಕ ಯುಗದ ಕ್ರಿಕೆಟ್​ನ ಮಹಾನ್ ಪ್ರತಿಭಾವಂತ ವಿರಾಟ್ ಕೊಹ್ಲಿ (Virat Kohli) ಆಗಸ್ಟ್ 18 ರಂದು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 16 ವರ್ಷಗಳ ಮೈಲಿಗಲ್ಲು ದಾಟಿದ್ದಾರೆ. ಇದು ಅವರ ಅಗಾಧ ಪ್ರತಿಭೆ ಹಾಗೂ ಶ್ರಮಕ್ಕೆ ಸಾಕ್ಷಿಯಾಗಿದೆ. ಕ್ರಿಕೆಟ್ ಆಟದಲ್ಲಿ ಅವರ ಪ್ರಾಬಲ್ಯದ ಬಗ್ಗೆ ಮೆಚ್ಚದವರೇ ಇಲ್ಲ. ಅಂತಾರಾಷ್ಟ್ರಿಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದಾಗಿನಿಂದ ಕೊಹ್ಲಿ ತಮ್ಮ ಅಭಿಮಾನಿಗಳು ಮತ್ತು ಕ್ರಿಕೆಟ್ ವಿಶ್ಲೇಷಕರನ್ನು ಮೋಡಿ ಮಾಡುತ್ತಿದ್ದಾರೆ. ಆದರೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಾಸಿತ್ ಅಲಿ ಕೊಹ್ಲಿ ಬಗ್ಗೆ ಕಳಪೆ ಕಾಮೆಂಟ್ ಮಾಡಿದ್ದಾರೆ. ಅವರನ್ನು ಕಿಂಗ್ ಎಂದು ಕರೆಯಬಾರದು ಎಂದು ಹೇಳಿದ್ದಾರೆ.

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮತ್ತು ತರಬೇತುದಾರ ಬಾಸಿತ್ ಅಲಿ ಅವರು ಕೊಹ್ಲಿಯ ಕ್ರಿಕೆಟ್​ ಬದುಕಿನ ಬಗ್ಗೆ ಮಾತನಾಡಿದ್ದಾರೆ. ಆದರೆ, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ಸಯೀದ್ ಅನ್ವರ್, ಜಾವೇದ್ ಮಿಯಾಂದಾದ್ ಮತ್ತು ಇಂಜಮಾಮ್-ಉಲ್-ಹಕ್ ಅವರಂತಹ ದಂತಕಥೆಗಳಿಗೆ ಹೋಲಿಸುವ ಮೂಲಕ ಕೊಹ್ಲಿಯ ಸಾಧನೆ ಏನೂ ಅಲ್ಲ ಎಂದು ಹೇಳಿದ್ದಾರೆ.

ಬಾಸಿತ್ ಅಲಿ ತಮ್ಮ ಯೂಟ್ಯೂಬ್ ಚಾನೆಲ್​​ನಲ್ಲಿ ಮಾತನಾಡುತ್ತಾ, ಕೊಹ್ಲಿಯದ್ದು ದೊಡ್ಡ ಸಾಧನೆ. ಅವರು ಇನ್ನೂ 3 ವರ್ಷಗಳ ಕಾಲ ಆಡಲಿದ್ದಾರೆ. ಒಟ್ಟು 19 ವರ್ಷಗಳ ಕಾಲ ಆಡಲಿದ್ದಾರೆ. ಅವರು ತುಂಬಾ ಫಿಟ್ ಆಗಿದ್ದಾರೆ. ವಿರಾಟ್ ಕೊಹ್ಲಿಯ ಬದ್ಧತೆ ಉತ್ತಮವಾಗಿದೆ. ಸಚಿನ್, ಅನ್ವರ್, ಜಾವೇದ್, ಇಂಜಮಾಮ್, ಗವಾಸ್ಕರ್, ಮೊಹಮ್ಮದ್ ಯೂಸುಫ್ ಮತ್ತು ಯೂನಿಸ್ ಖಾನ್ ಅವರು ಬದ್ಧತೆಯಿಂದಲೇ ಆಡಿದ್ದಾರೆ ಎಂದು ಹೇಳಿದರು.

ಕೊಹ್ಲಿಯ ಅವಿರತ ಕಠಿಣ ಪರಿಶ್ರಮವು ಅವರ ಯಶಸ್ಸಿಗೆ ನಿರ್ಣಾಯಕ ಎಂದು ಪಾಕಿಸ್ತಾನದ ಮಾಜಿ ಆಯ್ಕೆದಾರ ಉಲ್ಲೇಖಿಸಿದ್ದಾರೆ. ಇಂದಿನ ಮಕ್ಕಳು ಬಾಬರ್ ಅಜಮ್ ಕೊಹ್ಲಿಯ ರೀತಿ ಕವರ್​ ಡ್ರೈವ್​ ಹೊಡೆಯುತ್ತಾರೆ ಎಂದು ಹೇಳುತ್ತಾರೆ. ವಿರಾಟ್ ಕೊಹ್ಲಿ ಆ ರೀತಿ ಮಾಡಲು ಕೊಹ್ಲಿಯ ಸಾಕಷ್ಟು ಅಭ್ಯಾಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಎಂಎಸ್ ಧೋನಿ ಬೆಂಬಲದಿಂದ ಕೊಹ್ಲಿ ಕಿಂಗ್​ ಆದರು

ಕೊಹ್ಲಿ ಅಂಡರ್ 19ನಲ್ಲಿ ಕಾಣಿಸಿಕೊಂಡಾಗಿನಿಂದ ಕಳೆದ 16 ವರ್ಷಗಳಿಂದ ಕ್ರಿಕೆಟ್ ಜಗತ್ತನ್ನು ಆಳಿದ್ದಾರೆ. ಆಟಕ್ಕೆ ಇಳಿದ ತಕ್ಷಣದ ಪ್ರಭಾವ ಬೀರಿದ್ದಾರೆ. ಇನ್ನೂ ಕ್ರಿಕೆಟ್​ ಆಟವನ್ನು ಆಡುತ್ತಿದ್ದಾರೆ. ಕೊಹ್ಲಿಗೆ ಎಂಎಸ್ ಧೋನಿ ಮತ್ತು ಯುವರಾಜ್ ಸಿಂಗ್ ಅವರಂತಹ ಹಿರಿಯ ಆಟಗಾರರ ಬೆಂಬಲವಿದೆ. ಅವರಿಗೆ ಸಾಕಷ್ಟು ಸಹಾಯ ಮಾಡಿತು ಎಂದು ಅವರು ಹೇಳಿದ್ದಾರೆ. ಆದಾಗ್ಯೂ ಕೊಹ್ಲಿ ಕ್ರಿಕೆಟ್​​ನ “ಕಿಂಗ್” ಅಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Ishan Kishan : ಮ್ಯಾನ್​ ಆಫ್​ ದಿ ಮ್ಯಾಚ್​ ಪ್ರಶಸ್ತಿ ಪಡೆದು ಮೂಲಕ ಬಿಸಿಸಿಐಗೆ ಪ್ರತ್ಯುತ್ತರ ಕೊಟ್ಟ ಇಶಾನ್ ಕಿಶನ್​

ವಿರಾಟ್ ಕೊಹ್ಲಿಯ ಅತ್ಯುನ್ನತ ಕೌಶಲ್ಯ ಮತ್ತು ಪ್ರಭಾವವನ್ನು ಬಸಿತ್ ಒಪ್ಪಿಕೊಂಡಿದ್ದಾರೆ. ಆದರೆ “ಕಿಂಗ್” ಎಂಬ ಬಿರುದು ಸ್ವತಃ ಭಾರತೀಯ ಬ್ಯಾಟಿಂಗ್ ಮಾಂತ್ರಿಕನಿಗೆ ಸರಿಹೊಂದುವುದಿಲ್ಲ ಎಂದು ಅವರು ಹೇಳಿದ್ದಾರೆ. ಕ್ರಿಕೆಟ್ ಬಗ್ಗೆ ಕೊಹ್ಲಿಯ ಉತ್ಸಾಹಕ್ಕೆ ಸಾಟಿಯಿಲ್ಲ. ಆದರೆ ಕ್ರಿಕೆಟ್​​ ನಿಜವಾದ ರಾಜ ಎಂದು ಅವರು ಒತ್ತಿಹೇಳಿದರು. ಶ್ರೇಷ್ಠ ಡಾನ್ ಬ್ರಾಡ್ಮನ್ ಅಥವಾ ಸಚಿನ್ ತೆಂಡೂಲ್ಕರ್ ಅವರನ್ನೂ ಕಿಂಗ್​ ಎಂದು ಕರೆದಿಲ್ಲ. ಹೀಗಾಗಿ ಕೊಹ್ಲಿಯನ್ನು ಕಿಂಗ್ ಎಂದು ಕರೆಯಲಾಗಿಲ್ಲ ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿ ಕಿಂಗ್ ಅಲ್ಲ ಎಂದು ನಾನು ಭಾವಿಸುತ್ತೇನೆ: ಬಾಸಿತ್ ಅಲಿ

ನೀವು ಕಿಂಗ್ ಎಂದು ಕರೆದರೆ ನಾನು ಅಲ್ಲ ಎಂದು ಹೇಳುತ್ತೇನೆ. ಯಾಕೆಂದರೆ ಕ್ರಿಕೆಟ್ ಗಿಂತ ದೊಡ್ಡವರು ಯಾರೂ ಇಲ್ಲ. ಕ್ರಿಕೆಟ್ ದೊಡ್ಡ ವಿಷಯ. ವಿರಾಟ್​ ಕೊಹ್ಲಿಯೇ ಈ ಹೇಳಿಕೆಯನ್ನು ಇಷ್ಟಪಡುವುದಿಲ್ಲ. ತಮ್ಮ ರನ್ ಮತ್ತು ಬ್ಯಾಟಿಂಗ್ ಬಗ್ಗೆ ಮಾತನಾಡಲು ಇಷ್ಟಪಡುತ್ತಾರೆ ಎಂದು ಬಸಿತ್ ಅಲಿ ಹೇಳಿದ್ದಾರೆ.

ಡಾನ್ ಬ್ರಾಡ್ಮನ್, ಗವಾಸ್ಕರ್ ಮತ್ತು ಸಚಿನ್ ಅವರನ್ನೂ ಕಿಂಗ್​ ಎಂದು ಕರೆಯಲಾಗಿಲ್ಲ. ಆದ್ದರಿಂದ, ವಿರಾಟ್ ಕೊಹ್ಲಿ ಕಿಂಗ್ ಅಲ್ಲ ಎಂದು ನಾನು ಭಾವಿಸುತ್ತೇನೆ. ಅವರೊಬ್ಬ ಶ್ರೇಷ್ಠ ಬ್ಯಾಟರ್​. ಅದನ್ನೇ ಹೇಳುತ್ತೇನೆ. ತವರಿನಲ್ಲಿ ಮುಂಬರುವ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ಶ್ರೀಲಂಕಾ ವಿರುದ್ಧ ಭಾರತ 2-0 ಅಂತರದಲ್ಲಿ ಏಕದಿನ ಸರಣಿ ಸೋಲನುಭವಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.

Continue Reading
Advertisement
Justice KS Hegde
ಕರ್ನಾಟಕ5 hours ago

Justice KS Hegde: ಜಸ್ಟೀಸ್‌ ಕೆ.ಎಸ್.ಹೆಗ್ಡೆ ಜೀವನ, ಕೊಡುಗೆ ಕುರಿತು ಚಂದನ ವಾಹಿನಿಯಲ್ಲಿ ವಿಶೇಷ ಕಾರ್ಯಕ್ರಮ

Paris Olympics 2024
ಪ್ರಮುಖ ಸುದ್ದಿ5 hours ago

Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಚೀನಾದ ಅಥ್ಲೀಟ್​ ಈಗ ರೆಸ್ಟೋರೆಂಟ್​​ನಲ್ಲಿ ವೇಟರ್​!

Sudha Murthy'
ಪ್ರಮುಖ ಸುದ್ದಿ5 hours ago

Sudha Murthy : ವಿವಾದ ಸೃಷ್ಟಿಸಿದ ಸುಧಾ ಮೂರ್ತಿಯವರ ‘ರಕ್ಷಾ ಬಂಧನ’ದ ಕತೆ; ಸ್ಪಷ್ಟನೆ ನೀಡಿದ ಸಂಸದೆ

Zika virus
ಪ್ರಮುಖ ಸುದ್ದಿ6 hours ago

Zika virus : ಮಾರಕ ಜೀಕಾ ವೈರಸ್​ಗೆ ಕರ್ನಾಟಕದಲ್ಲಿ ಮೊದಲ ಬಲಿ; ಶಿವಮೊಗ್ಗದ ವ್ಯಕ್ತಿ ಸಾವು

Israel Attack
ವಿದೇಶ6 hours ago

Israel Attack: ರಹಸ್ಯ ತಾಣದಲ್ಲಿದ್ದ ಹಿಜ್ಬುಲ್ಲಾ ಕಮಾಂಡರ್‌ನನ್ನು ಒಂದು ಫೋನ್ ಕಾಲ್‌ ಮೂಲಕ ಕೊಂದು ಮುಗಿಸಿದ ಇಸ್ರೇಲ್!

Celebrities Rakhi Celebration
ಫ್ಯಾಷನ್6 hours ago

Celebrities Rakhi Celebration: ಫೆಸ್ಟಿವ್‌ ಸೀಸನ್‌ ವೇರ್ಸ್‌ನಲ್ಲಿ ಸೆಲೆಬ್ರೆಟಿಗಳ ರಾಖಿ ಸಂಭ್ರಮ

TRAI New Rules
ಗ್ಯಾಜೆಟ್ಸ್6 hours ago

TRAI New Rules: ನಿಮಗೆ ಗೊತ್ತಿರಲಿ; ಸೆ.1ರಿಂದ ಈ ಸಿಮ್ ಕಾರ್ಡ್‌ಗಳು ಕಪ್ಪು ಪಟ್ಟಿಗೆ!

Raksha Bandhan
ಪ್ರಮುಖ ಸುದ್ದಿ6 hours ago

Raksha Bandhan : ಪುಟಾಣಿ ಗೆಳೆಯರೊಂದಿಗೆ ರಕ್ಷಾ ಬಂಧನ ಆಚರಿಸಿಕೊಂಡ ನರೇಂದ್ರ ಮೋದಿ; ಇಲ್ಲಿವೆ ಚಿತ್ರಗಳು

Rayara Aradhane 2024
ಧಾರ್ಮಿಕ6 hours ago

Rayara Aradhane 2024: ನಾಳೆಯಿಂದ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ; ಗುರುಗಳ ಜೀವನ ಹೇಗಿತ್ತು, ಸಂದೇಶ ಏನಾಗಿತ್ತು?

Actor Chetan Ahimsa
ಕರ್ನಾಟಕ7 hours ago

Chetan Ahimsa: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಟ ಚೇತನ್ ಆಗ್ರಹ; ಆ.28ಕ್ಕೆ ಕಾಂಗ್ರೆಸ್ ಹಠಾವೋ, ದಲಿತ ಬಚಾವೋ ಹೋರಾಟ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌