Earthquake: ಜಮ್ಮು-ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಬ್ಯಾಕ್‌ ಟು ಬ್ಯಾಕ್‌ ಭೂಕಂಪ - Vistara News

ದೇಶ

Earthquake: ಜಮ್ಮು-ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಬ್ಯಾಕ್‌ ಟು ಬ್ಯಾಕ್‌ ಭೂಕಂಪ

Earthquake: ಇಂದು ಬೆಳಗ್ಗೆ ಜನರಿಗೆ ಭೂಮಿ ಕಂಪಿಸಿದ ಅನುಭವವಾಗಿತ್ತು. ಯಾವುದೇ ಪ್ರಾಣಹಾನಿ ಅಥವಾ ಗಮನಾರ್ಹ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ. ಯಾವುದೇ ಬೆಳವಣಿಗೆಗಳಿಗಾಗಿ ಅಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ

VISTARANEWS.COM


on

Earthquake
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ(Jammu Kashmir)ದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಎರಡು ಭೂಕಂಪ(Earthquake) ಸಂಭವಿಸಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ 4.9 ಮತ್ತು 4.8 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರದ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಅದೃಷ್ಟವಶಾತ್‌ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಇಂದು ಬೆಳಗ್ಗೆ ಜನರಿಗೆ ಭೂಮಿ ಕಂಪಿಸಿದ ಅನುಭವವಾಗಿತ್ತು. ಯಾವುದೇ ಪ್ರಾಣಹಾನಿ ಅಥವಾ ಗಮನಾರ್ಹ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ. ಯಾವುದೇ ಬೆಳವಣಿಗೆಗಳಿಗಾಗಿ ಅಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಕಳೆದ ತಿಂಗಳೂ ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರಿ ಭೂಕಂಪ ಸಂಭವಿಸಿದ್ದು, ಜನ ಬೆಚ್ಚಿಬಿದ್ದಿದ್ದರು. ರಿಕ್ಟರ್‌ ಮಾಪನದಲ್ಲಿ 4.1 ತೀವ್ರತೆ ದಾಖಲಾಗಿದ್ದು, ಭೂಮಿ ಕಂಪಿಸಿದ ಅನುಭವವಾಗುತ್ತಲೇ ಜನ ಮನೆಯಿಂದ ಹೊರಗೆ ಬಂದಿದ್ದರು. ಕೆಲ ಗಂಟೆಗಳ ಬಳಿಕವೇ ಅವರು ಮನೆಗೆ ಹೋಗಿದ್ದಾರೆ. ಆದಾಗ್ಯೂ, ಪ್ರಾಣಾಪಾಯ ಸೇರಿ ಯಾವುದೇ ದುರಂತ ಸಂಭವಿಸಿರಲಿಲ್ಲ.

ಬಾರಾಮುಲ್ಲಾ ಪ್ರದೇಶದಲ್ಲಿ ಜುಲೈ 12 ಮಧ್ಯಾಹ್ನ 12.26ರ ಸುಮಾರಿಗೆ ಭೂಮಿ ಕಂಪಿಸಿದೆ. ಜನರ ಮನೆಗಳಲ್ಲಿರುವ ಫ್ಯಾನ್‌ ಹಾಗೂ ಮೇಜುಗಳು ಅಲುಗಾಡಿದ ಕಾರಣ ಜನ ಕೂಡಲೇ ಮನೆಯಿಂದ ಹೊರಗೆ ಬಂದಿದ್ದಾರೆ. ಭೂಮಿಯ 10 ಕಿಲೋಮೀಟರ್‌ ಆಳದಲ್ಲಿ ಕಂಪನ ಉಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆಲ ತಿಂಗಳ ಹಿಂದೆ ರಾಷ್ಟ್ರ ರಾಜಧಾನಿ ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಹಿಮಾಚಲ ಪ್ರದೇಶ ಸೇರಿ ಹಲವೆಡೆ ಭೂಕಂಪ ಸಂಭವಿಸಿತ್ತು.

ಚೀನಾದಲ್ಲಿ ಕೆಲ ತಿಂಗಳ ಹಿಂದಷ್ಟೇ ಸಂಭವಿಸಿದ್ದ ಭೂಕಂಪದಲ್ಲಿ 100ಕ್ಕೂ ಅಧಿಕ ಜನ ಮೃತಪಟ್ಟು, ಸಾವಿರಾರು ನಾಗರಿಕರು ಗಾಯಗೊಂಡಿದ್ದರು. ಜಪಾನ್‌ನಲ್ಲೂ ಹೊಸ ವರ್ಷದ ದಿನವೇ ಭೂಕಂಪ ಸಂಭವಿಸಿ 100ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಇದರ ಬೆನ್ನಲ್ಲೇ ಚೀನಾದಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿತ್ತು. ಅಫಘಾನಿಸ್ತಾನ, ಪಾಕಿಸ್ತಾನ, ಮ್ಯಾನ್ಮಾರ್‌ ಸೇರಿ ಹಲವೆಡೆ ಭೂಕಂಪ ಸಂಭವಿಸಿದರೆ, ದೆಹಲಿ ಹಾಗೂ ರಾಷ್ಟ್ರ ರಾಜಧಾನಿಯಲ್ಲಿ ಭೂಕಂಪದ ಅನುಭವವಾಗುವುದು ಸಾಮಾನ್ಯವಾಗಿದೆ.

ಇದನ್ನೂ ಓದಿ: Earthquake: ಜಮ್ಮು-ಕಾಶ್ಮೀರದಲ್ಲಿ 4.1 ತೀವ್ರತೆಯ ಭೂಕಂಪ; ಮನೆಯಿಂದ ಓಡಿಬಂದ ಜನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kolkata Doctor murder case: ಅಂತ್ಯಕ್ರಿಯೆ ನಡೆದ 3 ಗಂಟೆ ನಂತ್ರ FIR ದಾಖಲು..ಆಸ್ಪತ್ರೆ ವೈದ್ಯರು, ಪೊಲೀಸರು ಏನ್‌ ಮಾಡ್ತಿದ್ರು?- ಸುಪ್ರೀಂ ತರಾಟೆ

kolkata Doctor murder case: ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲು ಮತ್ತು ಇತರ ಪ್ರಕ್ರಿಯೆ ನಡೆಸುವಲ್ಲಿ ಪೊಲೀಸ್‌ ಇಲಾಖೆ, ಆಸ್ಪತ್ರೆ ಆಡಳಿತ ಮಂಡಳಿ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಟ್ರೈನಿ ವೈದ್ಯೆಯ ಮೃತದೇಹವನ್ನು ಅಂತ್ಯ ಸಂಸ್ಕಾರಕ್ಕೆ ಕಳುಹಿಸಿದ ಮೂರು ಗಂಟೆಗಳ ನಂತರ ಎಫ್‌ಐಆರ್‌ ಏಕೆ ದಾಖಲಾಗಿದೆ? ಕಾಲೇಜು ಪ್ರಾಂಶುಪಾಲ ಏನು ಮಾಡುತ್ತಿದ್ದರು? ಎಂದು ಪ್ರಶ್ನಿಸಿದೆ

VISTARANEWS.COM


on

kolkata Doctor murder case
Koo

ನವದೆಹಲಿ:ಕೋಲ್ಕತಾದ ಆರ್‌ ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ(RG Kar Medical college) ನಡೆದಿರುವ ವೈದ್ಯೆಯ ಬರ್ಬರ ಸಾಮೂಹಿಕ ಅತ್ಯಾಚಾರ ಹಾಗು ಕೊಲೆಯ (Kolkata Doctor murder case) ಪ್ರಕರಣದ ವಿಚಾರಣೆ ಇಂದು ಸುಪ್ರೀಂಕೋರ್ಟ್‌(Supreme Court)ನಲ್ಲಿ ನಡೆಸಿದ್ದು, ಇಂತಹ ಹೇಯ ಕೃತ್ಯಕ್ಕೆ ಕಡಿವಾಣ ಹಾಕಲು ಮತ್ತೊಂದು ಅತ್ಯಾಚಾರ ನಡೆಯುವವರೆಗೆ ಕಾಯಲು ಸಾಧ್ಯವಿಲ್ಲ ಎಂಂದು ಖಡಕ್‌ ಆಗಿ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲು ಮತ್ತು ಇತರ ಪ್ರಕ್ರಿಯೆ ನಡೆಸುವಲ್ಲಿ ಪೊಲೀಸ್‌ ಇಲಾಖೆ, ಆಸ್ಪತ್ರೆ ಆಡಳಿತ ಮಂಡಳಿ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಟ್ರೈನಿ ವೈದ್ಯೆಯ ಮೃತದೇಹವನ್ನು ಅಂತ್ಯ ಸಂಸ್ಕಾರಕ್ಕೆ ಕಳುಹಿಸಿದ ಮೂರು ಗಂಟೆಗಳ ನಂತರ ಎಫ್‌ಐಆರ್‌ ಏಕೆ ದಾಖಲಾಗಿದೆ? ಕಾಲೇಜು ಪ್ರಾಂಶುಪಾಲ ಏನು ಮಾಡುತ್ತಿದ್ದರು? FIR ದಾಖಲಾಗದೇ ಯುವತಿಯ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಏನು ಮಾಡುತ್ತಿದ್ದರು? ಇಷ್ಟು ಪ್ರಕರಣವೊಂದು ನಡೆದಿರುವಾಗ ಘಟನಾ ಸ್ಥಳದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಹೇಗೆ ಅವಕಾಶ ಮಾಡಿಕೊಟ್ಟರು ಎಂದು ಖಡಕ್‌ ಆಗಿ ಪ್ರಶ್ನಿಸಿದ್ದಾರೆ.

ಪೀಠದ ಪ್ರಶ್ನೆಗಳಿಗೆ ಉತ್ತರವಾಗಿ, ಪಶ್ಚಿಮ ಬಂಗಾಳ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಆಸ್ಪತ್ರೆಯಲ್ಲಿ ಜನರು ಫೋಟೋಗಳನ್ನು ತೆಗೆದುಕೊಂಡಿದ್ದಾರೆ, ಅಸಹಜ ಸಾವಿನ ಪ್ರಕರಣವನ್ನು ತಕ್ಷಣವೇ ಪ್ರಾರಂಭಿಸಲಾಯಿತು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಇರುವ ಮಂಡಳಿಯನ್ನು ಸ್ಥಾಪಿಸಲಾಯಿತು ಎಂದು ಪ್ರತಿವಾದಿಸಿದರು. ಆದರೆ, ವಿಶೇಷವಾಗಿ ಸಂತ್ರಸ್ತೆಯ ಪೋಷಕರ ಅನುಪಸ್ಥಿತಿಯಲ್ಲಿ ಎಫ್‌ಐಆರ್ ದಾಖಲಿಸುವುದು ಆಸ್ಪತ್ರೆಯ ಕರ್ತವ್ಯ ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.

ಎಫ್‌ಐಆರ್‌ನ ಟೈಮ್‌ಲೈನ್ ಅನ್ನು ಪ್ರಶ್ನಿಸಿದ ನ್ಯಾಯಮೂರ್ತಿ ಪಾರ್ದಿವಾಲಾ, “ಎಫ್‌ಐಆರ್ ದಾಖಲಿಸಿದ ಮೊದಲ ಮಾಹಿತಿದಾರರು ಯಾರು? ಎಫ್‌ಐಆರ್‌ನ ಸಮಯ ಎಷ್ಟು?” ಮೊದಲ ಮಾಹಿತಿದಾರ ಸಂತ್ರಸ್ತೆಯ ತಂದೆಯಾಗಿದ್ದು, ರಾತ್ರಿ 11:45 ಕ್ಕೆ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಸಿಬಲ್ ಪ್ರತಿಕ್ರಿಯಿಸಿದರು.

ವೈದ್ಯಕೀಯ ವೃತ್ತಿಗಳು ಹಿಂಸೆಗೆ ಗುರಿಯಾಗುತ್ತಿವೆ. ಸಮಾಜದಲ್ಲಿ ಬೇರೂರಿರುವ ಪಿತೃಪ್ರಭುತ್ವದ ಪಕ್ಷಪಾತದಿಂದಾಗಿ, ಮಹಿಳಾ ವೈದ್ಯರು ಹಿಂಸಾಚಾರಕ್ಕೆ ಹೆಚ್ಚು ಗುರಿಯಾಗುತ್ತಿದ್ದಾರೆ. ಉದ್ಯೋಗ ಸ್ಥಳದಲ್ಲೇ ಅವರ ಮೇಲಿನ ಶೋಷಣೆ ಹೆಚ್ಚಾಗುತ್ತಿದೆ ಎಂದು ಸಿಜೆಐ ಚಂದ್ರಚೂಡ್‌ ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಕಾರ್ಯಪಡೆ ನೇಮಕ

ಇನ್ನು ವೈದ್ಯೆ ಕೊಲೆ ಪ್ರಕರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್‌ ರಾಷ್ಟ್ರೀಯ ಕಾರ್ಯಪಡೆಯನ್ನು ನೇಮಕ ಮಾಡಿದೆ. ಈ ಕಾರ್ಯಪಡೆಯಲ್ಲಿ ಸರ್ಜನ್‌ ವೈಸ್‌ ಅಡ್ಮಿರಲ್‌ ಆರ್‌.ಕೆ. ಸರಿನ್‌, ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ನ್ಯಾಷನಲ್ ಗ್ಯಾಸ್ಟ್ರೋಲಜಿ ವ್ಯವಸ್ಥಾಪಕ ನಿರ್ದೇಶಕ ಡಾ. ನಾಗೇಶ್ವರ ರೆಡ್ಡಿ ಇದ್ದಾರೆ.

ಇದನ್ನೂ ಓದಿ: Kolkata Doctor murder case: ಕೋಲ್ಕತ್ತಾ ಟ್ರೈನಿ ವೈದ್ಯೆಯ ಕೊಲೆ ಪ್ರಕರಣ- ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

Continue Reading

ಪ್ರಮುಖ ಸುದ್ದಿ

Mollywood Sex Mafia: ಮಲಯಾಳಂ ಚಿತ್ರರಂಗದ ಸೆಕ್ಸ್‌ ಮಾಫಿಯಾ ಬಟಾಬಯಲು; 15 ಪ್ರಭಾವಿಗಳಿಂದ ದಂಧೆ- ಸ್ಫೋಟಕ ವರದಿ ಔಟ್‌

Mollywood Sex Mafia: ಚಿತ್ರರಂಗದಲ್ಲಿನ ಮಹಿಳಾ ಶೋಷಣೆ ಕುರಿತು ಅಧ್ಯಯನ ನಡೆಸಲು ಕೇರಳ ಸರ್ಕಾರ ರಚನೆ ಮಾಡಿದ್ದ ನ್ಯಾ. ಹೇಮಾ ನೇತೃತ್ವದ ಸಮಿತಿ ಸ್ಫೋಟಕ ವರದಿಯೊಂದನ್ನು ಬಿಡುಗಡೆ ಮಾಡಿದೆ. ಈ ವರದಿಯಲ್ಲಿ ಮಲಯಾಳ ಚಿತ್ರರಂಗವು ನಿರ್ದೇಶಕರು, ನಿರ್ಮಾಪಕರು ಹಾಗೂ ಪ್ರಮುಖ ನಟರನ್ನು ಒಳಗೊಂಡ 15 ಪ್ರಭಾವಿಗಳ ಕಪಿಮುಷ್ಟಿಯಲ್ಲಿದೆ. ಯಾವ ಚಿತ್ರದಲ್ಲಿ ಯಾರಿಗೆ ಅವಕಾಶ ನೀಡಬೇಕೆಂಬುದನ್ನು ಈ ಪ್ರಭಾವಿಗಳ ತಂಡ ನಿರ್ಧರಿಸುತ್ತದೆ. ಅಲ್ಲದೇ ಜೂನಿಯರ್‌ ನಟ-ನಟಿಯರು ಅಡ್ಜಸ್ಟ್‌ಮೆಂಟ್‌ಗೆ ಒಪ್ಪಿದರೆ ಮಾತ್ರ ಅವರಿಗೆ ಚಿತ್ರದಲ್ಲಿ ಅವಕಾಶ ನೀಡಲಾಗುತ್ತಿದೆ ಎಂಬುದು ವರದಿಯಲ್ಲಿ ಬಯಲಾಗಿದೆ.

VISTARANEWS.COM


on

Mollywood Sex Mafia
Koo

ತಿರುವನಂತಪುರಂ: ಬಹಳ ಸಹಜ, ನೈಜ ಕಥಾವಸ್ತು, ಅತ್ಯದ್ಭುತ ನಟನೆಯ ನಟ-ನಟಿಯರು, ಜನರಿಗೆ ಬೇಗ ಮುಟ್ಟುವ ಮತ್ತು ಮೆಚ್ಚುಗೆಯಾಗುವಂತಹ ಸಿನಿಮಾಗಳ ಮೂಲಕ ಇಡೀ ದೇಶದ ಪ್ರೇಕ್ಷಕರ ಗಮನ ಸೆಳೆಯುವ ಮಲಯಾಳಂ ಚಿತ್ರರಂಗದ(Malayalam film industry) ವಿರುದ್ಧ ಇದೀಗ ಬಹುದೊಡ್ಡ ವಿವಾದವೊಂದು ಕೇಳಿಬಂದಿದೆ. ಕೇರಳ ಚಿತ್ರರಂಗದ ಸೆಕ್ಸ್ ಹಗರಣ(Mollywood Sex Mafia)ಹೊರಬಿದ್ದಿದ್ದು 15 ದೊಡ್ಡ ವ್ಯಕ್ತಿಗಳು ಭಾರಿ ದಂಧೆ ನಡೆಸಿದ್ದಾರೆ ಎಂಬ ಸ್ಪೋಟಕ ವರದಿಗಳು ಲಭ್ಯವಾಗಿವೆ.

ಚಿತ್ರರಂಗದಲ್ಲಿನ ಮಹಿಳಾ ಶೋಷಣೆ ಕುರಿತು ಅಧ್ಯಯನ ನಡೆಸಲು ಕೇರಳ ಸರ್ಕಾರ ರಚನೆ ಮಾಡಿದ್ದ ನ್ಯಾ. ಹೇಮಾ ನೇತೃತ್ವದ ಸಮಿತಿ ಸ್ಫೋಟಕ ವರದಿಯೊಂದನ್ನು ಬಿಡುಗಡೆ ಮಾಡಿದೆ. ಈ ವರದಿಯಲ್ಲಿ ಮಲಯಾಳ ಚಿತ್ರರಂಗವು ನಿರ್ದೇಶಕರು, ನಿರ್ಮಾಪಕರು ಹಾಗೂ ಪ್ರಮುಖ ನಟರನ್ನು ಒಳಗೊಂಡ 15 ಪ್ರಭಾವಿಗಳ ಕಪಿಮುಷ್ಟಿಯಲ್ಲಿದೆ. ಯಾವ ಚಿತ್ರದಲ್ಲಿ ಯಾರಿಗೆ ಅವಕಾಶ ನೀಡಬೇಕೆಂಬುದನ್ನು ಈ ಪ್ರಭಾವಿಗಳ ತಂಡ ನಿರ್ಧರಿಸುತ್ತದೆ. ಅಲ್ಲದೇ ಜೂನಿಯರ್‌ ನಟ-ನಟಿಯರು ಅಡ್ಜಸ್ಟ್‌ಮೆಂಟ್‌ಗೆ ಒಪ್ಪಿದರೆ ಮಾತ್ರ ಅವರಿಗೆ ಚಿತ್ರದಲ್ಲಿ ಅವಕಾಶ ನೀಡಲಾಗುತ್ತಿದೆ ಎಂಬುದು ವರದಿಯಲ್ಲಿ ಬಯಲಾಗಿದೆ.

ಇನ್ನು ಈ ಬಗ್ಗೆ ಕಿರಿಯ ನಟಿಯೊಬ್ಬರು ಅಧ್ಯಯನ ತಂಡಕ್ಕೆ ಮಾಹಿತಿ ನೀಡಿದ್ದು, ಇದೇ ಅನೇಕ ಮಾಹಿತಿ ಕಳೆ ಹಾಕಿರುವ ಸಮಿತಿ 233 ಪುಟಗಳ ವರದಿ ತಯಾರು ಮಾಡಿದೆ. ಇದೀಗ ಮಾಹಿತಿ ಹಕ್ಕು(RTI) ಅಡಿಯಲ್ಲಿ ಈ ವರದಿಯನ್ನು ಬಿಡುಗಡೆ ಮಾಡಲಾಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವ ಸಂಗತಿಗಳು ಒಂದೊಂದೆ ಬಯಲಾಗಿದೆ. ಮಲಯಾಳ ಚಿತ್ರರಂಗದಲ್ಲಿ ‘ಕಾಸ್ಟಿಂಗ್‌ ಕೌಚ್‌’ (ಸಿನಿಮಾದಲ್ಲಿ ಅವಕಾಶ ನೀಡಲು ನಟಿಯರನ್ನು ಲೈಂಗಿಕವಾಗಿ ಶೋಷಿಸುವುದು) ಇದೆ. ತಮಗೆ ಯಾರು ಸಹಕರಿಸುತ್ತಾರೋ ಅವರನ್ನು ಒಂದು ಗುಂಪು ಮಾಡಲಾಗುತ್ತದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ನಟಿಯರಿರುವ ಕೋಣೆ ಬಾಗಿಲು ಬಡಿಯುತ್ತಾರೆ

ಇನ್ನು ವರದಿಯಲ್ಲಿ ಹೇಳಿರುವಂತೆ ರಾತ್ರಿ ವೇಳೆ ನಟಿಯರು ತಂಗಿದ್ದಾಗ ಅವರ ಕೋಣೆಯ ಬಾಗಿಲನ್ನು ಪದೇ ಪದೇ ಬಡಿಯಲಾಗುತ್ತದೆ. ಅವರು ತೆಗೆಯದಿದ್ದರೆ ಇನ್ನೂ ಜೋರಾಗಿ ಬಡಿಯಲಾಗುತ್ತದೆ. ಕೆಲವೊಂದು ಸಂದರ್ಭದಲ್ಲಿ ಬಾಗಿಲೇ ಮುರಿದು ಬೀಳಬಹುದು ಎಂಬಂತೆ ಅದನ್ನು ಬಡಿಯಲಾಗುತ್ತದೆ ಎಂದು ನಟಿಯರು ತನಗೆ ತಿಳಿಸಿದ್ದಾರೆ ಎಂದು ಆಯೋಗ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇನ್ನು ಮಲಯಾಳಂ ಚಿತ್ರರಂಗದಲ್ಲಿ ಅತಿಹೆಚ್ಚಾಗಿ ಮಹಿಳೆಯರ ಮೇಲೆ ಶೋಷಣೆ ನಡೆಯುತ್ತಿದೆ. ಒಂದು ವೇಳೆ ಅದನ್ನು ಪ್ರತಿಭಟಿಸಿದರೆ ಈ 15ಜನರ ಮಾಫಿಯಾ ಅವರ ಭವಿಷ್ಯವನ್ನೇ ಹಾಳುಗೆಡವುತ್ತಿದೆ. ಇದಕ್ಕೆ ಹೆದರಿ ನಟಿಯರು ದೂರು ನೀಡಲೂ ನಿರಾಕರಿಸುತ್ತಿದ್ದಾರೆ.

ಸಮಿತಿ ರಚನೆ ಆಗಿದ್ದು ಯಾವಾಗ?

2017ರಲ್ಲಿ ಖ್ಯಾತ ಚಿತ್ರನಟಿಯೊಬ್ಬರ ಮೇಲೆ ನಟ ದಿಲೀಪ್‌ ತಂಡದಿಂದ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣ ಬಹಳ ಸಂಚಲನ ಮೂಡಿಸಿತ್ತು. ಹೀಗಾಗಿ ಚಿತ್ರರಂಗದಲ್ಲಿನ ಲೈಂಗಿಕ ಶೋಷಣೆ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಹೇಮಾ ನೇತೃತ್ವದಲ್ಲಿ ಆಯೋಗವೊಂದನ್ನು ರಚಿಸಲಾಗಿತ್ತು.

ಇನ್ನು ಈ ವರದಿ ಬಿಡುಗಡೆಯಾಗಿರುವ ಬಗ್ಗೆ ಸಂಸದ ಶಶಿ ತರೂರ್‌ ಪ್ರತಿಕ್ರಿಯಿಸಿದ್ದು, ಇಷ್ಟು ದೊಡ್ಡಮಟ್ಟದಲ್ಲಿ ಕೇರಳ ಚಿತ್ರರಂಗದಲ್ಲಿ ಮಾಫಿಯಾ ನಡೆಯುತ್ತಿದ್ದರೂ ಕೇರಳ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Casting Couch | ಅಡ್ಜೆಸ್ಟ್‌ ಆಗಬೇಕು ಅಂದಿದ್ದ ನಿರ್ಮಾಪಕ: ರತನ್‌ ರಜಪೂತ್‌ ಕಾಸ್ಟಿಂಗ್‌ ಕೌಚ್‌ ಬಗ್ಗೆ ಹೇಳಿದ್ದೇನು?

Continue Reading

ಪ್ರಮುಖ ಸುದ್ದಿ

Gold Rate Today: ಸ್ವರ್ಣ ಪ್ರಿಯರಿಗೆ ಕೊಂಚ ನಿರಾಳ; ಚಿನ್ನದ ದರ ಇಳಿಕೆ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,660 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,265 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,280 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,600 ಮತ್ತು ₹ 6,66,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 58,120 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 72,650 ಮತ್ತು ₹ 7,26,500 ತಲುಪಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ಸತತವಾಗಿ ಏರಿಕೆಯಾಗಿದ್ದ ಚಿನ್ನದ ದರ ಇಂದು (ಆಗಸ್ಟ್‌ 20) ಸ್ವಲ್ಪ ಇಳಿಕೆಯಾಗಿದೆ (Gold Rate Today). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 10 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 12 ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,660 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,265 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,280 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,600 ಮತ್ತು ₹ 6,66,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 58,120 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 72,650 ಮತ್ತು ₹ 7,26,500 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,675₹ 7,280
ಮುಂಬೈ₹ 6,660₹ 7,265
ಬೆಂಗಳೂರು₹ 6,660₹ 7,265
ಚೆನ್ನೈ₹ 6,660₹ 7,265

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆ ಕಂಡಿದೆ. ಬೆಳ್ಳಿ 1 ಗ್ರಾಂಗೆ ₹ 86 ಹಾಗೂ 8 ಗ್ರಾಂಗೆ ₹ 688 ಇದೆ. 10 ಗ್ರಾಂ ₹ 860 ಹಾಗೂ 1 ಕಿಲೋಗ್ರಾಂ ₹ 86,000 ಬೆಲೆ ಬಾಳುತ್ತದೆ.

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್‌ಮಾರ್ಕ್‌ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್‌ಮಾರ್ಕ್‌ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇನನ್ನೂ ಓದಿ: Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Continue Reading

ದೇಶ

Sexual Assault: ಫೇಕ್‌ NCC ಕ್ಯಾಂಪ್‌ ಆಯೋಜಿಸಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ರಾಜಕಾರಣಿ ಸೇರಿ 8 ಮಂದಿ ಅರೆಸ್ಟ್‌

Sexual Assault: ನಕಲಿ ಎನ್‌ಸಿಸಿ ಕ್ಯಾಂಪ್‌ನಲ್ಲಿ 13 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ರಾಜಕೀಯ ಪಕ್ಷದ ಮುಖಂಡ ಸೇರಿದಂತೆ ಎಂಟು ಜನರನ್ನು ಅರೆಸ್ಟ್‌ ಮಾಡಲಾಗಿದೆ.

VISTARANEWS.COM


on

Sexual Assault
Koo

ಚೆನ್ನೈ: ಕೋಲ್ಕತ್ತಾ ಟ್ರೈನಿ ವೈದ್ಯೆ ಹತ್ಯೆ ಪ್ರಕರಣ(Kolkata Doctor Murder case) ಖಂಡಿಸಿ ರಾಷ್ಟ್ರವ್ಯಾಪಿ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ತಮಿಳುನಾಡಿ(Tamil Nadu)ನಲ್ಲಿ ಇಂತಹದ್ದೇ ಒಂದು ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ನಕಲಿ ಎನ್‌ಸಿಸಿ ಕ್ಯಾಂಪ್‌(NCC)ನಲ್ಲಿ 13 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ(Sexual Assault) ನಡೆದಿದೆ. ವಿಚಾರಣೆ ನಡೆಸಿದಾಗ ಇತರ ನಾಲ್ವರು ಬಾಲಕಿಯರಿಗೂ ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ರಾಜಕೀಯ ಪಕ್ಷದ ಮುಖಂಡ ಸೇರಿದಂತೆ ಎಂಟು ಜನರನ್ನು ಅರೆಸ್ಟ್‌ ಮಾಡಲಾಗಿದೆ.

ಘಟನೆ ವಿವರ:

ಕೃಷ್ಣಗಿರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ರಾಜಕೀಯ ಪಕ್ಷವಾಗಿರುವ ನಾಮ್‌ ತಮಿಳರ್‌ ಕಚ್ಚಿಯ ಜಿಲ್ಲಾ ಕಾರ್ಯದರ್ಶಿ ಶಿವರಾಮನ್‌ ಖಾಸಗಿ ಶಾಲೆಯೊಂದಕ್ಕೆ ಭೇಟಿ ಕೊಟ್ಟು ಎನ್‌ಸಿಸಿ ಕ್ಯಾಂಪ್‌ ಆಯೋಜಿಸುವ ಬಗ್ಗೆ ಚರ್ಚೆ ನಡೆಸಿದ್ದಾನೆ. ಆತನೇ ಸ್ವಯಂ ಆಸಕ್ತಿಯಿಂದ ಎನ್‌ಸಿಸಿ ಕ್ಯಾಂಪ್‌ ಆಯೋಜಿಸಿದ್ದ. ಆತನ ಜೊತೆಗಿದ್ದ ತಂಡವನ್ನು ಮತ್ತು ಆತನ ಹಿನ್ನೆಲೆ ಬಗ್ಗೆ ಸರಿಯಾಗಿ ಪರಿಶೀಲನೆ ನಡೆಸದೇ ಶಾಲಾ ಪ್ರಾಂಶುಪಾಲರು ಇದಕ್ಕೆ ಒಪ್ಪಿದರು.

ಶಿಬಿರವು ಆಗಸ್ಟ್ 5 ರಿಂದ ಆಗಸ್ಟ್ 9 ರವರೆಗೆ ನಡೆದಿದ್ದು, 17 ಹುಡುಗಿಯರು ಸೇರಿದಂತೆ 41 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರದ ಸಮಯದಲ್ಲಿ, ಹುಡುಗರನ್ನು ನೆಲ ಮಹಡಿಯಲ್ಲಿ ಮತ್ತು ಹುಡುಗಿಯರನ್ನು ಮೇಲಿನ ಮಹಡಿಯಲ್ಲಿ ಇರಿಸಲಾಗಿತ್ತು. ಅಲ್ಲಿ ಮಿಲಿಟರಿ ತರಹದ ತರಬೇತಿ ನೀಡಲಾಗಿತ್ತು. ಅಲ್ಲದೇ ರಾತ್ರಿಯಲ್ಲಿ ನಾಲ್ಕು ಗಂಟೆಗಳ ಪಾಳಿಗಳವರೆಗೆ ಶಾಲೆಯ ಕಾಂಪೌಂಡ್ ಅನ್ನು ಕಾವಲು ಕಾಯಲು ವಿದ್ಯಾರ್ಥಿಗಳನ್ನು ಗುಂಪುಗಳಲ್ಲಿ ನಿಯೋಜಿಸಲಾಯಿತು. ಈ ರಾತ್ರಿ ಪಾಳಿಯಲ್ಲಿ ಶಿವರಾಮನ್ 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಸಂತ್ರಸ್ತೆ ಶಾಲೆಯ ಪ್ರಾಂಶುಪಾಲರಾದ ಸತೀಶ್ ಕುಮಾರ್ ಅವರಿಗೆ ಈ ಹೀನ ಕೃತ್ಯದ ಬಗ್ಗೆ ದೂರು ನೀಡಿದ್ದಳು. ಆದರೆ ಕ್ರಮ ತೆಗೆದುಕೊಳ್ಳುವ ಬದಲು, ಪ್ರಾಂಶುಪಾಲರು, ಶಾಲೆಯ ಇಬ್ಬರು ಶಿಕ್ಷಕರೊಂದಿಗೆ ಸೇರಿ ಈ ಕೃತ್ಯವನ್ನು ಮುಚ್ಚಿಡಲು ನಿರ್ಧರಿಸಿದರು. ಹುಡುಗಿ ಅಂತಿಮವಾಗಿ ತನ್ನ ತಾಯಿಗೆ ತಿಳಿಸಿದಳು, ಆಕೆಯ ತಂದೆ ಶುಕ್ರವಾರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರ ಪ್ರಕಾರ, ಲೈಂಗಿಕ ದೌರ್ಜನ್ಯಕ್ಕೊಳಗಾದ ಹುಡುಗಿಯನ್ನು ಹೊರತುಪಡಿಸಿ, ಕನಿಷ್ಠ ನಾಲ್ವರು ವಿದ್ಯಾರ್ಥಿನಿಯರಿಗೆ ಶಿವರಾಮನ್ ಮತ್ತು ಅವರ ಸಹಚರರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಶಿವರಾಮನ್ ಮತ್ತು ಆತನ ಸಹಚರರು ಕೃಷ್ಣಗಿರಿಯ ಇತರ ಮೂರು ಶಾಲೆಗಳಲ್ಲಿ ಇದೇ ರೀತಿಯ ಅನಧಿಕೃತ ಎನ್‌ಸಿಸಿ ಕ್ಯಾಂಪ್‌ ನಡೆಸಿದೆ ಎನ್ನಲಾಗಿದೆ. ಅವರು ಈ ಹಿಂದಿನ ಅವಧಿಗಳ ಫೋಟೋಗಳು ಮತ್ತು ವೀಡಿಯೊಗಳನ್ನು ತೋರಿಸುವ ಮೂಲಕ ಪ್ರಸ್ತುತ ಶಾಲೆಯ ಆಡಳಿತವನ್ನು ಮನವೊಲಿಸಿದರು.

ಇದನ್ನೂ ಓದಿ: Uttarakhand Horror: ದೇಶವನ್ನೇ ಬೆಚ್ಚಿಬೀಳಿಸೋ ಮತ್ತೊಂದು ಘಟನೆ! ಬಸ್‌ನಲ್ಲೇ ಯುವತಿ ಮೇಲೆ ಡ್ರೈವರ್‌ ಸೇರಿ ಐವರಿಂದ ಗ್ಯಾಂಗ್‌ರೇಪ್‌

Continue Reading
Advertisement
CM vs Governor
ಪ್ರಮುಖ ಸುದ್ದಿ16 mins ago

CM vs Governor: ರಾಜ್ಯಪಾಲರ ವಿರುದ್ಧ ಹೋರಾಟ ತೀವ್ರ; ರಾಷ್ಟ್ರಪತಿಗಳಿಗೆ ದೂರು ನೀಡಲು ರಾಜ್ಯ ಸರ್ಕಾರ ಚಿಂತನೆ

kolkata Doctor murder case
ಪ್ರಮುಖ ಸುದ್ದಿ22 mins ago

Kolkata Doctor murder case: ಅಂತ್ಯಕ್ರಿಯೆ ನಡೆದ 3 ಗಂಟೆ ನಂತ್ರ FIR ದಾಖಲು..ಆಸ್ಪತ್ರೆ ವೈದ್ಯರು, ಪೊಲೀಸರು ಏನ್‌ ಮಾಡ್ತಿದ್ರು?- ಸುಪ್ರೀಂ ತರಾಟೆ

HD Kumaraswamy
ಪ್ರಮುಖ ಸುದ್ದಿ36 mins ago

HD Kumaraswamy : ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು 2ನೇ ಬಾರಿ ರಾಜ್ಯಪಾಲರ ಅನುಮತಿ ಕೋರಿದ ಎಸ್‌ಐಟಿ

Child Online Protection Award
ಬೆಂಗಳೂರು1 hour ago

Child Online Protection Award : ಸ್ಟೋಗೋ ಉತ್ಸವ, ಚೈಲ್ಡ್ ಆನ್‌ಲೈನ್ ಪ್ರೊಟೆಕ್ಷನ್ ಪ್ರಶಸ್ತಿ 2024 ಘೋಷಣೆ

Yuvraj Singh
ಕ್ರೀಡೆ2 hours ago

Yuvraj Singh : ಶೀಘ್ರದಲ್ಲೇ ತೆರೆಗೆ ಬರಲಿದೆ ಯುವರಾಜ್ ಸಿಂಗ್‌ ಬಯೋಪಿಕ್‌

Mollywood Sex Mafia
ಪ್ರಮುಖ ಸುದ್ದಿ2 hours ago

Mollywood Sex Mafia: ಮಲಯಾಳಂ ಚಿತ್ರರಂಗದ ಸೆಕ್ಸ್‌ ಮಾಫಿಯಾ ಬಟಾಬಯಲು; 15 ಪ್ರಭಾವಿಗಳಿಂದ ದಂಧೆ- ಸ್ಫೋಟಕ ವರದಿ ಔಟ್‌

Assault case
ಬೆಂಗಳೂರು2 hours ago

Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

Stree 2 Box Office Day 5
ಸಿನಿಮಾ2 hours ago

Stree 2 Box Office Day 5: ಕಲ್ಕಿ, ಫೈಟರ್ ದಾಖಲೆ ಮುರಿದ ಶ್ರದ್ಧಾ ಕಪೂರ್‌ ಅಭಿನಯದ ಸ್ತ್ರೀ 2

assault case
ದಕ್ಷಿಣ ಕನ್ನಡ2 hours ago

Assault Case : ಮಂಗಳೂರಿನಲ್ಲಿ ಫುಟ್ಬಾಲ್‌ ಆಟಕ್ಕೆ ಕಿರಿಕ್‌; ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್‌ ಮಾಡಿ ಅರೆಬೆತ್ತಲೆಗೊಳಿಸಿ ಹಲ್ಲೆ

Yash-Radhika
Latest2 hours ago

Yash-Radhika: ರಾಕಿಂಗ್ ಸ್ಟಾರ್‌ ಯಶ್- ರಾಧಿಕಾ ಕುಟುಂಬದ ಸಂಭ್ರಮದ ರಕ್ಷಾಬಂಧನ; ಇಲ್ಲಿವೆ ಚಿತ್ರಗಳು

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌