Bheema Box Office Collection : ಎರಡನೇ ವಾರಾಂತ್ಯದಲ್ಲೂ ಮುನ್ನುಗ್ಗಿದ್ದ ಭೀಮ; 20 ಕೋಟಿ ರೂ. ಕಲೆಕ್ಷನ್‌ - Vistara News

ಸಿನಿಮಾ

Bheema Box Office Collection : ಎರಡನೇ ವಾರಾಂತ್ಯದಲ್ಲೂ ಮುನ್ನುಗ್ಗಿದ್ದ ಭೀಮ; 20 ಕೋಟಿ ರೂ. ಕಲೆಕ್ಷನ್‌

Bheema Box Office Collection :

VISTARANEWS.COM


on

Bheema Box Office Collection
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ವರ್ಷದ ಮೊದಲ ಹಿಟ್‌ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಯೊಂದಿಗೆ ದುನಿಯಾ ವಿಜಯ್‌ ನಿರ್ದೇಶನದ ‘ಭೀಮ’ ಸಿನಿಮಾ ಮುನ್ನುಗುತ್ತಿದೆ. ಸ್ಯಾಂಡಲ್‌ವುಡ್‌‌ನ ಬಾಕ್ಸ್‌ ಆಫೀಸ್‌ನಲ್ಲಿ ತನ್ನದೇ ಆದ ರೀತಿಯಲ್ಲಿ ಸಾಗಿ ನಿರಂತರವಾಗಿ ಕಲೆಕ್ಷನ್ (Bheema Box Office Collection) ಮಾಡುತ್ತಿದೆ. ನಿರಂತರ ರಜೆಗಳು ಮತ್ತು ವೀಕೆಂಡ್‌ ಸಿನಿಮಾ ಪ್ರಿಯರ ಮನ ಗೆದ್ದಿರುವ ‘ಭೀಮ’ 20 ಕೋಟಿ ರೂಪಾಯಿ ಕಲೆಕ್ಷನ್ ಮೀರಿದೆ.

‘ಭೀಮ’ ಸಿನಿಮಾಗೆ ಎರಡನೇ ವಾರಾಂತ್ಯದ ಲಾಭವನ್ನೂ ಸಂಪೂರ್ಣವಾಗಿ ಗಳಿಸಿದೆ. ಇದು ಈ ವರ್ಷದ ಮೊದಲ ಕನ್ನಡದ ಹಿಟ್ ಸಿನಿಮಾ. ಹೀಗಾಗಿ ಅದರ ಪ್ರಭಾವ ಎಷ್ಟು ದಿನ ಉಳಿಬಹುದು ಎಂಬ ಕುತೂಹಲದ ನಡುವೆಯೂ ಬಹುತೇಕ ವಿಜಯದ ಗುರಿಯನ್ನು ಮುಟ್ಟಿದೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆ ಇರುವ ಹೊರತಾಗಿಯೂ ಮಾಸ್ ಅಭಿಮಾನಿಗಳ ಪ್ರೀತಿಗೆ ಸಿನಿಮಾ ಪಾತ್ರವಾಗಿದೆ.

‘ಭೀಮ’ ಮೊದಲ ದಿನದಿಂದಲೇ ಕಲೆಕ್ಷನ್‌ನಲ್ಲಿ ಸ್ಥಿರತೆ ಕಾಪಾಡಿಕೊಂಡಿದೆ. ಹೀಗಾಗಿ 10 ದಿನಗಳಲ್ಲಿ 20 ಕೋಟಿ ರೂಪಾಯಿ ಬಾಚಿಕೊಂಡಿದೆ. ಇದರು ಸ್ಯಾಂಡಲ್‌ವುಡ್‌ಗೆ ಹೊಸ ಹುರುಷು ಕೊಟ್ಟಿದೆ. ಸಿನಿಮಾವನ್ನು ಪ್ರೇಕ್ಷಕರಷ್ಟೇ ಅಲ್ಲ ವಿಮರ್ಶಕರೂ ಹೊಗಳುತ್ತಿದ್ದಾರೆ. ಬೆಂಗಳೂರಿನಲ್ಲಿ ಡ್ರಗ್ ಮಾಫಿಯಾ ವಿರುದ್ಧ ಸಮರ ಸಾರಿರುವ ಈ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಗೊಳ್ಳುತ್ತಿದೆ. ಭೀಮನ ಪ್ರಭಾವ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ಎರಡನೇ ಹಂತದ ನಗರಗಳಲ್ಲೂ ವಾರಾಂತ್ಯದಲ್ಲಿ ಲಾಭ ಮಾಡಿಕೊಂಡಿದೆ.

ಚಿತ್ರಮಂದಿರಗಳಿಂದ ವಿಮುಖರಾಗಿದ್ದ ಸಿನಿ ಪ್ರೇಕ್ಷಕರನ್ನು ಮತ್ತೆ ಸೆಳೆಯುವಲ್ಲಿ ಭೀಮ ಯಶಸ್ವಿಯಾಗಿದೆ ಎಂಬುದೇ ಹೆಚ್ಚುಗಾರಿಕೆ. ವಿಜಯ್‌ ಅವರ ಮೊದಲ ಸಿನಿಮಾ ‘ಸಲಗ’ ಬಾಕ್ಸಾಫೀಸ್‌ನಲ್ಲಿ ಹಿಟ್ ಅಂತ ಸಾಬೀತಾಗಿತ್ತು. ಈಗ ಎರಡನೇ ಸಿನಿಮಾ ‘ಭೀಮ’ವನ್ನು ಕೂಡ ದುನಿಯಾ ಗೆಲ್ಲಿಸಿದ್ದಾರೆ. ನಿರೀಕ್ಷೆಯಂತೆ ಕಳೆದ ಶನಿವಾರ ಮತ್ತು ಭಾನುವಾರ ಸಿನಿಮಾ ಕಲೆಕ್ಷನ್ ಚೆನ್ನಾಗಿಯೇ ಆಗಿದೆ. ಭಾನುವಾರ (ಆಗಸ್ಟ್ 18 ಭೀಮನಿಗೆ 10ನೇ ದಿನವಾಗಿದ್ದು 1.25 ರಿಂದ 1.30 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ.

‘ ₹20 ಕೋಟಿ ಕ್ಲಬ್ ಸೇರಿತೇ? ಭೀಮ

ದುನಿಯಾ ವಿಜಯ್ ಅವರ ಪ್ರಯತ್ನ ನಿರ್ಮಾಪಕರ ಜೇಬು ತುಂಬಿಸಿದೆ. ಸಣ್ಣ ಬಜೆಟ್ ಸಿನಿಮಾವೊಂದು ಬಾಕ್ಸಾಫೀಸ್‌ನಲ್ಲಿ 20 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಭರವಸೆ ಮೂಡಿಸಿದೆ. ಇದು ಸ್ಯಾಂಡಲ್‌ವುಡ್‌‌‌ ಮಟ್ಟಿಗೆ ದೊಡ್ಡ ಸಕ್ಸಸ್. ಕಳೆದ 9 ದಿನಗಳಲ್ಲಿ ‘ಭೀಮ’ 19.73 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಂತೆಯೇ 10ನೇ ದಿನದ್ದೂ ಸೇರಿದರೆ 21 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ : Hyderabad Tour: ಹೈದರಾಬಾದ್‌ನ ಈ 10 ಅದ್ಭುತ ತಾಣಗಳು ಫೋಟೋಶೂಟ್‌ಗೆ ಹೇಳಿಮಾಡಿಸಿದಂತಿವೆ!

3ನೇ ವಾರ ಭೀಮನಿಗೆ ದೊಡ್ಡ ಸವಾಲು ಇದೆ. ಯಾಕೆಂದರೆ ದೀರ್ಘ ರಜೆಗಳು ಮುಗಿದಿವೆ. ಹೊಸ ಹೊಸ ಸಿನಿಮಾಗಳು ಬಿಡುಗಡೆ ಸಜ್ಜಾಗಿ ನಿಂತಿವೆ. ಇವೆಲ್ಲದರ ನಡುವೆ ಭೀಮ ಮುನ್ನುಗ್ಗಿದರೆ ನಿರ್ಮಾಪಕರಿಗೆ ಲಾಭ ಗ್ಯಾರಂಟಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

ನಿರ್ದೇಶಕ ಮಧುಸೂದನ್ ಹವಾಲ್ದಾರ್ ನಿರ್ದೇಶನದ “ಕಾಖಂಡಕಿ ಶ್ರೀ ಮಹಿಪತಿದಾಸರು” ಚಿತ್ರದ (Kannada New Movie) ಹಾಡುಗಳ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಚಿತ್ರದ ಏಳು ಹಾಡುಗಳನ್ನು ಪ್ರದರ್ಶಿಸಲಾಯಿತು. ಮಹಿಪತಿದಾಸರ ವಿರಚಿತ ಹನ್ನೊಂದು ಹಾಡುಗಳು ಈ ಚಿತ್ರದಲ್ಲಿವೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಕನ್ನಡ ಸಾಹಿತ್ಯಕ್ಕೆ ದಾಸರ ಕೊಡುಗೆ ಅಪಾರ.‌ ಅಂತಹ ಮಹನೀಯರ ‌ಮಹಿಮೆಯನ್ನು ಚಿತ್ರಗಳ ಮೂಲಕ ಜನರಿಗೆ ಪರಿಚಯಿಸುವ ಕೆಲಸವನ್ನು ನಿರ್ದೇಶಕ ಮಧುಸೂದನ್ ಹವಾಲ್ದಾರ್ ಮಾಡುತ್ತಾ ಬರುತ್ತಿದ್ದಾರೆ. ಕರ್ನಾಟಕದ ಮತ್ತೊಬ್ಬ ಶ್ರೇಷ್ಠ ಹರಿದಾಸರಾದ ಮಹಿಪತಿ ದಾಸರ ಕುರಿತಾದ “ಕಾಖಂಡಕಿ ಶ್ರೀ ಮಹಿಪತಿದಾಸರು” ಚಿತ್ರವನ್ನು (Kannada New Movie) ನಿರ್ದೇಶಿಸುವುದರ ಜತೆಗೆ ಮೊದಲ ಬಾರಿಗೆ ಸಂಗೀತ ನಿರ್ದೇಶನವನ್ನು ಮಾಡಿದ್ದಾರೆ.

ಮಹಿಪತಿದಾಸರ ವಿರಚಿತ ಹನ್ನೊಂದು ಹಾಡುಗಳು ಈ ಚಿತ್ರದಲ್ಲಿದ್ದು, ಚಿತ್ರದಲ್ಲಿ ಮಹಿಪತಿದಾಸರ ಪಾತ್ರದಲ್ಲಿ ಕಾಣಿಸಿಕೊಂಡಿರುವ ವಿಜಯಾನಂದ ಅವರು ಏಳು ಹಾಡುಗಳನ್ನು ಹಾಗೂ ಮಧುಸೂದನ್ ಹವಾಲ್ದಾರ್, ಅನಂತ ಕುಲಕರ್ಣಿ, ರಾಯಚೂರು ಶೇಷಗಿರಿದಾಸ್ ಹಾಗೂ ವಿ.ವಿ. ಪ್ರಸನ್ನ ಅವರು ಒಂದೊಂದು ಗೀತೆಯನ್ನು ಹಾಡಿದ್ದಾರೆ.

ಇದನ್ನೂ ಓದಿ: Gold Rate Today: ಸ್ವರ್ಣ ಪ್ರಿಯರಿಗೆ ಕೊಂಚ ನಿರಾಳ; ಚಿನ್ನದ ದರ ಇಳಿಕೆ

ಇತ್ತೀಚೆಗೆ ಈ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಚಿತ್ರದ ಏಳು ಹಾಡುಗಳನ್ನು ಪ್ರದರ್ಶಿಸಲಾಯಿತು. ಮಾಧವತೀರ್ಥ (ತಂಬಿಹಳ್ಳಿ) ಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾಸಾಗರ ಮಾಧವತೀರ್ಥರು ಹಾಡುಗಳನ್ನು ಲೋಕಾರ್ಪಣೆ ಮಾಡಿದರು. ಮಾಜಿ ಶಾಸಕ ಎಸ್.ಕೆ. ಬೆಳ್ಳುಬ್ಬಿ, ಹುಸೇನ್ ಸಾಬ್ ದಾಸ್, ಸುಭಾಷ್ ಕಾಖಂಡಕಿ, ಮುರಳಿ, ವಿಷ್ಣುತೀರ್ಥ ಜೋಶಿ, ರಾಘವೇಂದ್ರ ರಾವ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಂತರ ಗಣ್ಯರು ಹಾಗೂ ಚಿತ್ರತಂಡದವರು ಮಾತನಾಡಿದರು.

ಕನ್ನಡ ಹರಿದಾಸ ಸಾಹಿತ್ಯಕ್ಕೆ ಮಹಿಪತಿದಾಸರ ಕೊಡುಗೆ ಅಪಾರ.‌ ಆದರೆ ಅವರಿಗೆ ಹೆಚ್ಚು ‌ಪ್ರಚಾರ ಸಿಕ್ಕಿಲ್ಲ. ಸಿನಿಮಾ‌ ಎಲ್ಲರನ್ನು ಬಹುಬೇಗ ತಲುಪುವ ಮಾಧ್ಯಮ.‌ ಇದರ ಮೂಲಕ ಮಧುಸೂದನ್ ಹವಾಲ್ದಾರ್ ಅವರು ಕನ್ನಡದ ಹರಿದಾಸರನ್ನು ಜನರಿಗೆ ಪರಿಚಯಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಎಲ್ಲಾ ಹರಿದಾಸರ ಅನುಗ್ರಹವಿರಲಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಶ್ರೀ ವಿದ್ಯಾಸಾಗರ ಮಾಧವತೀರ್ಥರು ಆಶೀರ್ವದಿಸಿದರು.

“ಶ್ರೀ ಜಗನ್ನಾಥದಾಸರು” ಚಿತ್ರದಿಂದ ಶ್ರೇಷ್ಠ ಹರಿದಾಸರ ಚಿತ್ರಗಳನ್ನು ನಿರ್ದೇಶಿಸುತ್ತಾ ಬಂದಿದ್ದೇನೆ. ಪ್ರಸ್ತುತ “ಕಾಖಂಡಕಿ ಶ್ರೀಮಹಿಪತಿದಾಸರು” ಚಿತ್ರವನ್ನು ‌ನಿರ್ದೇಶಿಸುವುದರೊಂದಿಗೆ ಸಂಗೀತ ಸಂಯೋಜನೆ ಕೂಡ ಮಾಡಿದ್ದೇನೆ. ರಾಮಾಂಬುಜ ಮೂವೀಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಮಧುಸೂದನ್ ಹವಾಲ್ದಾರ್ ತಿಳಿಸಿದರು.

ಇದನ್ನೂ ಓದಿ: Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

ಐಟಿ ಉದ್ಯೋಗಿಯಾಗಿದ್ದ ನಾನು ದಾಸರ ಅನುಗ್ರಹದಿಂದ ಇಂದು ಮಹಿಪತಿದಾಸರ ಪಾತ್ರ ಮಾಡಿದ್ದೇನೆ. ನಟನೆ ಜತಗೆ ಗಾಯನವನ್ನೂ ಮಾಡಲು ಅವಕಾಶ ನೀಡಿದ ಮಧುಸೂದನ್ ಹವಾಲ್ದಾರ್ ಅವರಿಗೆ ಧನ್ಯವಾದ ಎಂದರು ನಟ ವಿಜಯಾನಂದ್.

Continue Reading

ಸಿನಿಮಾ

Viral Video: ಐಷಾರಾಮಿ ಟೊಯೋಟಾ ಲೆಕ್ಸಸ್ ಕಾರು ಖರೀದಿಸಿದ ಜಾನ್ವಿ ಕಪೂರ್! ಇದರ ದರ ಎಷ್ಟು?

ಬಾಲಿವುಡ್ ನಟಿ ಜಾನ್ವಿ ಕಪೂರ್ ಭಾರತದಲ್ಲಿ ಲಭ್ಯವಿರುವ ಎಸ್ ಯುವಿ ಮಾದರಿಯ ಅತ್ಯಂತ ದುಬಾರಿ ಬೆಲೆಯ ಕಾರನ್ನು ಖರೀದಿ ಮಾಡಿದ್ದಾರೆ. ಇದರ ವಿಡಿಯೋ (Viral Video) ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಾರಿ ವೈರಲ್ ಆಗಿದೆ. ಅಂದಹಾಗೆ ಈ ಕಾರು ಯಾವುದು, ಇದರ ಬೆಲೆ ಎಷ್ಟು ಗೊತ್ತೇ? ಇಲ್ಲಿದೆ ಈ ಕುರಿತ ವಿವರ.

VISTARANEWS.COM


on

By

Viral Video
Koo

ಬ್ಯಾಕ್ ಟು ಬ್ಯಾಕ್ ಚಿತ್ರದಲ್ಲಿ ಬ್ಯುಸಿಯಾಗಿರುವ ಬಾಲಿವುಡ್ ನಟಿ ಜಾನ್ವಿ ಕಪೂರ್ (Janhvi Kapoor) ಈಗ ದಕ್ಷಿಣ ಸಿನಿಮಾರಂಗಕ್ಕೂ (south film) ಕಾಲಿಟ್ಟಿದ್ದಾರೆ. ಇತ್ತೀಚೆಗಷ್ಟೇ ಇವರ ಮತ್ತು ಜೂನಿಯರ್ ಎನ್‌ಟಿಆರ್ (jr NTR) ಅಭಿನಯದ ʼದೇವರʼ (devara) ಚಿತ್ರದ ಹಾಡು ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ನಟಿ ಜಾನ್ವಿ ಕಪೂರ್ ದುಬಾರಿ ಬೆಲೆಯ ಕಾರೊಂದನ್ನು ಖರೀದಿ ಮಾಡಿರುವುದಾಗಿ ಪಾಪರಾಜಿಗಳು ವಿಡಿಯೋವೊಂದನ್ನು (Viral Video) ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಿಸ್ಟರ್ ಆಂಡ್ ಮಿಸಸ್ ಮಹಿ ಮತ್ತು ಉಲಾಜ್ ಚಿತ್ರದ ಬಳಿಕ ದೇವರ ಚಿತ್ರದಲ್ಲಿ ಬ್ಯುಸಿಯಾಗಿರುವ ನಟಿ ಜಾನ್ವಿ ಸೊಗಸಾದ ಹೊಸ ಟೊಯೋಟಾ ಲೆಕ್ಸಸ್‌ ಕಾರನ್ನು ಖರೀದಿ ಮಾಡಿದ್ದಾರೆ ಎನ್ನಲಾಗಿದೆ.


ಕಾರಿನ ಬೆಲೆ ಎಷ್ಟು?

ಜಾನ್ವಿ ಕಪೂರ್ ಅವರ ಹೊಸ ಕಾರು ಮುಂಬಯಿನ ಬೀದಿಗಳಲ್ಲಿ ಸಂಚರಿಸುತ್ತಿದೆ. ಆಗಸ್ಟ್ 18ರಂದು ಇದು ಪಾಪರಾಜಿಗಳ ಕಣ್ಣಿಗೆ ಬಿದ್ದಿದೆ. ಪಾಪರಾಜಿ ಹಂಚಿಕೊಂಡ ವಿಡಿಯೋವು ಜಾನ್ವಿಯ ಹೊಸ ಟೊಯೋಟಾ ಲೆಕ್ಸಸ್ ಅನ್ನು ಪ್ರದರ್ಶಿಸಿದೆ. ಕಪ್ಪು ಬಣ್ಣದ ಹೊಳೆಯುವ ಈ ಕಾರು ಎಲ್ಲರ ಕಣ್ಣುಗಳನ್ನು ಸೆಳೆಯಿತು. ಎಸ್‌ಯುವಿನಲ್ಲಿ ಭಾರತದಲ್ಲಿ ಲಭ್ಯವಿರುವ ಅತ್ಯಂತ ಬೆಲೆಬಾಳುವ ಮಾದರಿಗಳಲ್ಲಿ ಒಂದಾಗಿದೆ.

ಜಾನ್ವಿಯ ಲೆಕ್ಸಸ್ ಎಲ್ ಎಂ 350 ಎಂಎಚ್ ಐಷಾರಾಮಿ ಕಾರಿನಲ್ಲಿ ಹಲವು ವೈಶಿಷ್ಟ್ಯಗಳಿವೆ. ಇದರ ಎಕ್ಸ್ ಶೋರೂಂ ಬೆಲೆ ಸುಮಾರು 2.50 ಕೋಟಿ ರೂ. ಗಳಾಗಿದ್ದು, ಆನ್ ರೋಡ್ ಬೆಲೆ 2.87 ಕೋಟಿ ರೂ. ನಷ್ಟಿದೆ. ಉನ್ನತ ಮಟ್ಟದ ಈ ವಾಹನವು ಪ್ರೀಮಿಯಂ ಸೌಕರ್ಯಗಳಿಂದ ತುಂಬಿದೆ. ಇದು ಹೆಚ್ಚುವರಿ ಲೆಗ್‌ರೂಮ್‌ಗೆ ಸರಿಹೊಂದಿಸಬಹುದಾದ ರಿಕ್ಲೈನರ್ ಆಸನಗಳನ್ನು ಒಳಗೊಂಡಿದೆ ಮತ್ತು ಉತ್ತಮ ಲಗೇಜ್ ಸ್ಥಳಕ್ಕಾಗಿ ಟಿಪ್-ಅಪ್ ಕಾರ್ಯವನ್ನು ಸಹ ಹೊಂದಿದೆ. ಕೆಲವೇ ದಿನಗಳ ಹಿಂದೆ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಕೂಡ ಇದೇ ಮಾದರಿಯನ್ನು ಬೂದು ಬಣ್ಣದಲ್ಲಿ ಖರೀದಿಸಿದರು.


ಬ್ಯುಸಿಯಾಗಿರುವ ಜಾನ್ವಿ

ಚಿತ್ರರಂಗದಲ್ಲಿ ಮಾತ್ರವಲ್ಲ ವಯಕ್ತಿಕ ಜೀವನದಲ್ಲೂ ಜಾನ್ವಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗೆ ತಾಯಿ ಶ್ರೀದೇವಿ ಅವರ 61 ನೇ ಜನ್ಮ ವಾರ್ಷಿಕೋತ್ಸವದ ವೇಳೆ ಜಾನ್ವಿ ಕಪೂರ್ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. 2018 ರಲ್ಲಿ ತನ್ನ ತಾಯಿಯ ಮರಣದ ಅನಂತರ ಜಾನ್ವಿಯು ಅನುಸರಿಸುತ್ತಿರುವ ವಾರ್ಷಿಕ ಸಂಪ್ರದಾಯ ಇದಾಗಿದೆ.


ಜಾನ್ವಿ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಒಂದೆರಡು ಚಿತ್ರಗಳನ್ನು ಮತ್ತು ತಾಯಿಯೊಂದಿಗೆ ಬಾಲ್ಯದ ಚಿತ್ರವನ್ನು ಹಂಚಿಕೊಂಡಿದ್ದರು. ಹಳದಿ ರೇಷ್ಮೆ ಸೀರೆಯಲ್ಲಿ ಕಾಣಿಸಿಕೊಂಡಿದ್ದ ಜಾನ್ವಿ ದೇವಾಲಯದ ಮೆಟ್ಟಿಲುಗಳ ಮೇಲೆ ನಿಂತು ತೆಗೆದ ಫೋಟೋಗಳನ್ನು ಹಂಚಿಕೊಂಡಿದ್ದರು.


ಇದನ್ನೂ ಓದಿ: Kannada New Movie: ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್‌ನ ʼಫಾರೆಸ್ಟ್ʼ ಚಿತ್ರದ ಟ್ರೈಲರ್ ಸದ್ಯದಲ್ಲೇ ರಿಲೀಸ್‌

ತಿರುಪತಿ ದೇವಸ್ಥಾನದೊಂದಿಗೆ ಜಾನ್ವಿಯ ನಂಟು

ಜಾನ್ವಿ ತಿರುಪತಿ ದೇವಸ್ಥಾನದಲ್ಲಿ ಮೆಟ್ಟಿಲುಗಳನ್ನು ಹತ್ತಲು ಕಾರಣವನ್ನು ಬಹಿರಂಗಪಡಿಸಿದ್ದಾರೆ. ಅಮ್ಮ ತೀರಿಕೊಂಡ ಅನಂತರ ನಾನು ತಿರುಪತಿಯ ಮೆಟ್ಟಿಲುಗಳನ್ನು ಹತ್ತಲು ಪ್ರಾರಂಭಿಸಿದೆ ಎಂದು ಜಾನ್ವಿ ಹೇಳಿದ್ದಾರೆ.
ಶ್ರೀದೇವಿ ತನ್ನ ಹುಟ್ಟುಹಬ್ಬದಂದು ಈ ರೀತಿ ಮಾಡುತ್ತಿದ್ದಳು. ಅವಳು ಬಿಟ್ಟು ಹೋದ ಬಳಿಕ ನಾನು ಅವಳ ಹುಟ್ಟುಹಬ್ಬದಂದು ತಿರುಪತಿ ಮೆಟ್ಟಿಲು ಹತ್ತಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

Continue Reading

ಸಿನಿಮಾ

Harshika Poonacha: ರವಿವರ್ಮ ಪೇಂಟಿಂಗ್ ಥೀಮ್‌ನಲ್ಲಿ ಮಿರ ಮಿರ ಮಿಂಚಿದ ಹರ್ಷಿಕಾ ಪೂಣಚ್ಚ; ಹೇಗಿತ್ತು ಫೋಟೊಶೂಟ್

Harshika Poonacha: ಕೊಡವ ಶೈಲಿ ಹಾಗೂ ಸಂಪ್ರದಾಯದ ಕಾನ್ಸೆಪ್ಟ್‌ ಇಟ್ಟುಕೊಂಡು ಫೋಟೊ ಶೂಟ್‌ ಮಾಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದ ಹರ್ಷಿಕಾ ಪೂಣಚ್ಚ, ಇದೀಗ 7 ತಿಂಗಳು ತುಂಬಿದ ಹಿನ್ನೆಲೆ ರವಿವರ್ಮ ಪೇಂಟಿಂಗ್ ಥೀಮ್‌ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ.

VISTARANEWS.COM


on

By

Harshika Poonachas photoshoot with Ravi Varmas painting theme
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಹಿಂದೆ ಹರ್ಷಿಕಾ ಮತ್ತು ಭುವನ್ ಕೊಡವ ಶೈಲಿ ಹಾಗೂ ಸಂಪ್ರದಾಯದ ಕಾನ್ಸೆಪ್ಟ್‌ ಇಟ್ಟುಕೊಂಡು ಫೋಟೊ ಶೂಟ್‌ ಮಾಡಿಸುವ ಮೂಲಕ ಗಮನ ಸೆಳೆದಿದ್ದರು. ಇದೀಗ 7 ತಿಂಗಳ ಗರ್ಭಿಣಿಯಾಗಿರುವ ಹರ್ಷಿಕಾ ಪೂಣಚ್ಚ, ರವಿವರ್ಮ ಪೇಂಟಿಂಗ್ ಥೀಮ್‌ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ಸ್ಯಾಂಡಲ್ ವುಡ್ ಸುಂದರಿ ಹರ್ಷಿಕಾ ತಿಳಿ ಗುಲಾಬಿ ಬಣ್ಣದ ಸೀರೆಗೆ ಹಸಿರು ಬಳೇ ತೊಟ್ಟು ಕ್ಯಾಮೆರಾಗೆ ಫೋಸ್‌ ಕೊಟ್ಟಿದ್ದಾರೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದರು. 2023ರ ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ (Bhuvann Ponnannaa) ಜತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಮದುವೆಯಾಗಿ ವರ್ಷದೊಳಗೆ ಗುಡ್‌ನ್ಯೂಸ್‌ ಕೊಟ್ಟಿದ್ದರು.

ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರು. ಈ ಸ್ನೇಹ ಪ್ರೀತಿಗೆ ತಿರುಗಿ ಕಳೆದ ವರ್ಷ ಹಸೆಮಣೆ ಏರಿದ್ದರು. ವಿರಾಜಪೇಟೆಯ ಅಮ್ಮತ್ತಿಯಲ್ಲಿ ಹರ್ಷಿಕಾ ಮತ್ತು ಭುವನ್ ಕೊಡವ ಶೈಲಿಯಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರ ಮದುವೆಗೆ ಸ್ಯಾಂಡಲ್‌ವುಡ್‌, ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಿ ಹಾರೈಸಿದ್ದರು.

ತಾವು ಪೋಷಕರಾಗುತ್ತಿರುವ ವಿಚಾರವನ್ನು ಭುವನ್ ಮತ್ತು ಹರ್ಷಿಕಾ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಸದ್ಯ ಹರ್ಷಿಕಾ ಐದು ತಿಂಗಳ ಗರ್ಭಿಣಿ ಆಗಿದ್ದು, ಈ ಖುಷಿ ವಿಚಾರವನ್ನ ವಿಭಿನ್ನ ರೀತಿಯಲ್ಲಿ ಫೋಟೊ ಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ.

ಕೊಡವ ಶೈಲಿಯಲ್ಲಿ ಗಮನ ಸೆಳೆದಿದ್ದ ಫೋಟೊ ಶೂಟ್

ಹರ್ಷಿಕಾ ಮತ್ತು ಭುವನ್ ತಮ್ಮ ಕೊಡವ ಶೈಲಿ ಹಾಗೂ ಸಂಪ್ರದಾಯದ ಕಾನ್ಸೆಪ್ಟ್‌ ಇಟ್ಟುಕೊಂಡು ಫೋಟೊ ಶೂಟ್‌ ಮಾಡಿಸುವ ಮೂಲಕ ಗಮನ ಸೆಳೆದಿದ್ದರು. ತಮ್ಮ ಚೊಚ್ಚಲ ಮಗುವಿನ ಆಗಮನದ ಸಿಹಿ ಸುದ್ದಿ ತಿಳಿಸಲು ಪುರಾತನ ಕೊಡವ ಸಾಂಪ್ರದಾಯ, ಉಡುಪು, ಕೊಡಗಿನ ‘ಐನ್ ಮನೆ’ (ದೊಡ್ಡಮನೆ), ಕೋವಿ, ಉಪಕರಣಗಳು, ಜೀವನಶೈಲಿ ಎಲ್ಲವನ್ನು ಬಳಸಿಕೊಂಡು, ಸಂಪ್ರದಾಯವನ್ನು ಬಿಂಬಿಸುವ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸಿದ್ದರು.

ಅದರ ಜತೆಗೆ, ʼʼಇಂದಿನವರೆಗೂ ನಮ್ಮಿಬ್ಬರಿಗೆ ಸದಾ ಆಶೀರ್ವಾದಿಸುತ್ತಾ ಬಂದಿದ್ದೀರಿ. ಇನ್ನು ಮುಂದೆ ನಿಮ್ಮ ಪ್ರೀತಿ, ಆಶೀರ್ವಾದ ನಮ್ಮ ಈ ಇನ್ನೊಂದು ಪುಟ್ಟ ಜೀವದ ಮೇಲೂ ಇರಲಿ. ಅಕ್ಟೋಬರ್‌ಗೆ ಕಾತುರದಿಂದ ಕಾಯುತ್ತಿದ್ದೇವೆ” ಎಂದು ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಹರ್ಷಿಕಾ ಮತ್ತು ಭುವನ್‌ ಬರೆದುಕೊಂಡಿದ್ದರು.

ಹೇಗಿತ್ತು ಸಿನಿ ಪಯಣ

2008ರಲ್ಲಿ ʼಪಿಯುಸಿʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಹರ್ಷಿಕಾ ಬಳಿಕ ಕೊಡವ, ಕೊಂಕಣಿ, ತೆಲುಗು, ಮಲಯಾಳಂ, ಬೋಜಪುರಿ, ತಮಿಳು ಮುಂತಾದ ಚಿತ್ರಗಳಲ್ಲಿ ನಟಿಸಿ ಬಹುಭಾಷಾ ತಾರೆ ಎನಿಸಿಕೊಂಡಿದ್ದಾರೆ. 2010ರಲ್ಲಿ ತೆರೆಕಂಡದ ಕನ್ನಡದ ʼತಮಸ್ಸುʼ ಚಿತ್ರಕ್ಕಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ ಮುಡಿಗೇರಿಸಿಕೊಂಡ ಅವರು ಸದ್ಯ ತಮಿಳು ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.

ಇನ್ನು ಸ್ಯಾಂಡಲ್‌ವುಡ್‌ ನಟ ಭುವನ್‌ ಪೊನ್ನಣ್ಣ 2010ರಲ್ಲಿ ತೆರೆಕಂಡ, ಸುದೀಪ್‌ ಅಭಿನಯದ ʼಜಸ್ಟ್‌ ಮಾತ್‌ ಮಾತಲ್ಲಿʼ ಚಿತ್ರದ ಮೂಲಕ ಬಣ್ಣ ಲೋಕ ಪ್ರವೇಶಿಸಿದ್ದರು. ಗಣೇಶ್‌ ಜತೆಗೆ ಕೂಲ್‌ ಚಿತ್ರದಲ್ಲಿಯೂ ನಟಿಸಿರುವ ಅವರು 2019ರಲ್ಲಿ ತೆರೆಕಂಡ ರಾಂಧವ ಸಿನಿಮಾದ ಮೂಲಕ ಜನಪ್ರಿಯರಾಗಿದ್ದಾರೆ. ಕೊಡಗು ಮೂಲದ ಭುವನ್‌ ಮತ್ತು ಹರ್ಷಿಕಾ ಈ ಹಿಂದೆ ನೆರೆ ಪೀಡಿತರಿಗೆ ನೆರವಾಗುವ ಮೂಲಕ ಅನೇಕ ಮಂದಿಯ ಕಷ್ಟಗಳಿಗೆ ಸಹಾಯ ಹಸ್ತ ಚಾಚಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Mollywood Sex Mafia: ಮಲಯಾಳಂ ಚಿತ್ರರಂಗದ ಸೆಕ್ಸ್‌ ಮಾಫಿಯಾ ಬಟಾಬಯಲು; 15 ಪ್ರಭಾವಿಗಳಿಂದ ದಂಧೆ- ಸ್ಫೋಟಕ ವರದಿ ಔಟ್‌

Mollywood Sex Mafia: ಚಿತ್ರರಂಗದಲ್ಲಿನ ಮಹಿಳಾ ಶೋಷಣೆ ಕುರಿತು ಅಧ್ಯಯನ ನಡೆಸಲು ಕೇರಳ ಸರ್ಕಾರ ರಚನೆ ಮಾಡಿದ್ದ ನ್ಯಾ. ಹೇಮಾ ನೇತೃತ್ವದ ಸಮಿತಿ ಸ್ಫೋಟಕ ವರದಿಯೊಂದನ್ನು ಬಿಡುಗಡೆ ಮಾಡಿದೆ. ಈ ವರದಿಯಲ್ಲಿ ಮಲಯಾಳ ಚಿತ್ರರಂಗವು ನಿರ್ದೇಶಕರು, ನಿರ್ಮಾಪಕರು ಹಾಗೂ ಪ್ರಮುಖ ನಟರನ್ನು ಒಳಗೊಂಡ 15 ಪ್ರಭಾವಿಗಳ ಕಪಿಮುಷ್ಟಿಯಲ್ಲಿದೆ. ಯಾವ ಚಿತ್ರದಲ್ಲಿ ಯಾರಿಗೆ ಅವಕಾಶ ನೀಡಬೇಕೆಂಬುದನ್ನು ಈ ಪ್ರಭಾವಿಗಳ ತಂಡ ನಿರ್ಧರಿಸುತ್ತದೆ. ಅಲ್ಲದೇ ಜೂನಿಯರ್‌ ನಟ-ನಟಿಯರು ಅಡ್ಜಸ್ಟ್‌ಮೆಂಟ್‌ಗೆ ಒಪ್ಪಿದರೆ ಮಾತ್ರ ಅವರಿಗೆ ಚಿತ್ರದಲ್ಲಿ ಅವಕಾಶ ನೀಡಲಾಗುತ್ತಿದೆ ಎಂಬುದು ವರದಿಯಲ್ಲಿ ಬಯಲಾಗಿದೆ.

VISTARANEWS.COM


on

Mollywood Sex Mafia
Koo

ತಿರುವನಂತಪುರಂ: ಬಹಳ ಸಹಜ, ನೈಜ ಕಥಾವಸ್ತು, ಅತ್ಯದ್ಭುತ ನಟನೆಯ ನಟ-ನಟಿಯರು, ಜನರಿಗೆ ಬೇಗ ಮುಟ್ಟುವ ಮತ್ತು ಮೆಚ್ಚುಗೆಯಾಗುವಂತಹ ಸಿನಿಮಾಗಳ ಮೂಲಕ ಇಡೀ ದೇಶದ ಪ್ರೇಕ್ಷಕರ ಗಮನ ಸೆಳೆಯುವ ಮಲಯಾಳಂ ಚಿತ್ರರಂಗದ(Malayalam film industry) ವಿರುದ್ಧ ಇದೀಗ ಬಹುದೊಡ್ಡ ವಿವಾದವೊಂದು ಕೇಳಿಬಂದಿದೆ. ಕೇರಳ ಚಿತ್ರರಂಗದ ಸೆಕ್ಸ್ ಹಗರಣ(Mollywood Sex Mafia)ಹೊರಬಿದ್ದಿದ್ದು 15 ದೊಡ್ಡ ವ್ಯಕ್ತಿಗಳು ಭಾರಿ ದಂಧೆ ನಡೆಸಿದ್ದಾರೆ ಎಂಬ ಸ್ಪೋಟಕ ವರದಿಗಳು ಲಭ್ಯವಾಗಿವೆ.

ಚಿತ್ರರಂಗದಲ್ಲಿನ ಮಹಿಳಾ ಶೋಷಣೆ ಕುರಿತು ಅಧ್ಯಯನ ನಡೆಸಲು ಕೇರಳ ಸರ್ಕಾರ ರಚನೆ ಮಾಡಿದ್ದ ನ್ಯಾ. ಹೇಮಾ ನೇತೃತ್ವದ ಸಮಿತಿ ಸ್ಫೋಟಕ ವರದಿಯೊಂದನ್ನು ಬಿಡುಗಡೆ ಮಾಡಿದೆ. ಈ ವರದಿಯಲ್ಲಿ ಮಲಯಾಳ ಚಿತ್ರರಂಗವು ನಿರ್ದೇಶಕರು, ನಿರ್ಮಾಪಕರು ಹಾಗೂ ಪ್ರಮುಖ ನಟರನ್ನು ಒಳಗೊಂಡ 15 ಪ್ರಭಾವಿಗಳ ಕಪಿಮುಷ್ಟಿಯಲ್ಲಿದೆ. ಯಾವ ಚಿತ್ರದಲ್ಲಿ ಯಾರಿಗೆ ಅವಕಾಶ ನೀಡಬೇಕೆಂಬುದನ್ನು ಈ ಪ್ರಭಾವಿಗಳ ತಂಡ ನಿರ್ಧರಿಸುತ್ತದೆ. ಅಲ್ಲದೇ ಜೂನಿಯರ್‌ ನಟ-ನಟಿಯರು ಅಡ್ಜಸ್ಟ್‌ಮೆಂಟ್‌ಗೆ ಒಪ್ಪಿದರೆ ಮಾತ್ರ ಅವರಿಗೆ ಚಿತ್ರದಲ್ಲಿ ಅವಕಾಶ ನೀಡಲಾಗುತ್ತಿದೆ ಎಂಬುದು ವರದಿಯಲ್ಲಿ ಬಯಲಾಗಿದೆ.

ಇನ್ನು ಈ ಬಗ್ಗೆ ಕಿರಿಯ ನಟಿಯೊಬ್ಬರು ಅಧ್ಯಯನ ತಂಡಕ್ಕೆ ಮಾಹಿತಿ ನೀಡಿದ್ದು, ಇದೇ ಅನೇಕ ಮಾಹಿತಿ ಕಳೆ ಹಾಕಿರುವ ಸಮಿತಿ 233 ಪುಟಗಳ ವರದಿ ತಯಾರು ಮಾಡಿದೆ. ಇದೀಗ ಮಾಹಿತಿ ಹಕ್ಕು(RTI) ಅಡಿಯಲ್ಲಿ ಈ ವರದಿಯನ್ನು ಬಿಡುಗಡೆ ಮಾಡಲಾಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವ ಸಂಗತಿಗಳು ಒಂದೊಂದೆ ಬಯಲಾಗಿದೆ. ಮಲಯಾಳ ಚಿತ್ರರಂಗದಲ್ಲಿ ‘ಕಾಸ್ಟಿಂಗ್‌ ಕೌಚ್‌’ (ಸಿನಿಮಾದಲ್ಲಿ ಅವಕಾಶ ನೀಡಲು ನಟಿಯರನ್ನು ಲೈಂಗಿಕವಾಗಿ ಶೋಷಿಸುವುದು) ಇದೆ. ತಮಗೆ ಯಾರು ಸಹಕರಿಸುತ್ತಾರೋ ಅವರನ್ನು ಒಂದು ಗುಂಪು ಮಾಡಲಾಗುತ್ತದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ನಟಿಯರಿರುವ ಕೋಣೆ ಬಾಗಿಲು ಬಡಿಯುತ್ತಾರೆ

ಇನ್ನು ವರದಿಯಲ್ಲಿ ಹೇಳಿರುವಂತೆ ರಾತ್ರಿ ವೇಳೆ ನಟಿಯರು ತಂಗಿದ್ದಾಗ ಅವರ ಕೋಣೆಯ ಬಾಗಿಲನ್ನು ಪದೇ ಪದೇ ಬಡಿಯಲಾಗುತ್ತದೆ. ಅವರು ತೆಗೆಯದಿದ್ದರೆ ಇನ್ನೂ ಜೋರಾಗಿ ಬಡಿಯಲಾಗುತ್ತದೆ. ಕೆಲವೊಂದು ಸಂದರ್ಭದಲ್ಲಿ ಬಾಗಿಲೇ ಮುರಿದು ಬೀಳಬಹುದು ಎಂಬಂತೆ ಅದನ್ನು ಬಡಿಯಲಾಗುತ್ತದೆ ಎಂದು ನಟಿಯರು ತನಗೆ ತಿಳಿಸಿದ್ದಾರೆ ಎಂದು ಆಯೋಗ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇನ್ನು ಮಲಯಾಳಂ ಚಿತ್ರರಂಗದಲ್ಲಿ ಅತಿಹೆಚ್ಚಾಗಿ ಮಹಿಳೆಯರ ಮೇಲೆ ಶೋಷಣೆ ನಡೆಯುತ್ತಿದೆ. ಒಂದು ವೇಳೆ ಅದನ್ನು ಪ್ರತಿಭಟಿಸಿದರೆ ಈ 15ಜನರ ಮಾಫಿಯಾ ಅವರ ಭವಿಷ್ಯವನ್ನೇ ಹಾಳುಗೆಡವುತ್ತಿದೆ. ಇದಕ್ಕೆ ಹೆದರಿ ನಟಿಯರು ದೂರು ನೀಡಲೂ ನಿರಾಕರಿಸುತ್ತಿದ್ದಾರೆ.

ಸಮಿತಿ ರಚನೆ ಆಗಿದ್ದು ಯಾವಾಗ?

2017ರಲ್ಲಿ ಖ್ಯಾತ ಚಿತ್ರನಟಿಯೊಬ್ಬರ ಮೇಲೆ ನಟ ದಿಲೀಪ್‌ ತಂಡದಿಂದ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣ ಬಹಳ ಸಂಚಲನ ಮೂಡಿಸಿತ್ತು. ಹೀಗಾಗಿ ಚಿತ್ರರಂಗದಲ್ಲಿನ ಲೈಂಗಿಕ ಶೋಷಣೆ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಹೇಮಾ ನೇತೃತ್ವದಲ್ಲಿ ಆಯೋಗವೊಂದನ್ನು ರಚಿಸಲಾಗಿತ್ತು.

ಇನ್ನು ಈ ವರದಿ ಬಿಡುಗಡೆಯಾಗಿರುವ ಬಗ್ಗೆ ಸಂಸದ ಶಶಿ ತರೂರ್‌ ಪ್ರತಿಕ್ರಿಯಿಸಿದ್ದು, ಇಷ್ಟು ದೊಡ್ಡಮಟ್ಟದಲ್ಲಿ ಕೇರಳ ಚಿತ್ರರಂಗದಲ್ಲಿ ಮಾಫಿಯಾ ನಡೆಯುತ್ತಿದ್ದರೂ ಕೇರಳ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Casting Couch | ಅಡ್ಜೆಸ್ಟ್‌ ಆಗಬೇಕು ಅಂದಿದ್ದ ನಿರ್ಮಾಪಕ: ರತನ್‌ ರಜಪೂತ್‌ ಕಾಸ್ಟಿಂಗ್‌ ಕೌಚ್‌ ಬಗ್ಗೆ ಹೇಳಿದ್ದೇನು?

Continue Reading
Advertisement
Manish Pandey
ಕ್ರಿಕೆಟ್11 mins ago

Manish Pandey: ಮತ್ತೆ ಆರ್​ಸಿಬಿ ಸೇರುವ ಬಯಕೆ ವ್ಯಕ್ತಪಡಿಸಿದ ಮನೀಷ್​ ಪಾಂಡೆ

Hoax Bomb Threat
ದೇಶ17 mins ago

Hoax Bomb Threat: ಮತ್ತೆ ಹುಸಿಬಾಂಬ್‌ ಸಂದೇಶ- ಮೂರು ಮಾಲ್‌ಗಳು, ಆಸ್ಪತ್ರೆಗೆ ಬೆದರಿಕೆ

Actor Darshan
ಕರ್ನಾಟಕ31 mins ago

Actor Darshan: ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಅರ್ಜಿ ವಿಚಾರಣೆ ಸೆ.5ಕ್ಕೆ ಮುಂದೂಡಿದ ಹೈಕೋರ್ಟ್

Darius Visser
ಕ್ರಿಕೆಟ್43 mins ago

Darius Visser: ಒಂದೇ ಓವರ್​ನಲ್ಲಿ 39 ರನ್​ ಚಚ್ಚಿ ಯುವರಾಜ್​ ಸಿಂಗ್​ ದಾಖಲೆ ಮುರಿದ ಡೇರಿಯಸ್ ವಿಸ್ಸರ್

Kannada New Movie
ಕರ್ನಾಟಕ49 mins ago

Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

Viral Video
Latest53 mins ago

Viral Video: ಸೈಕಲ್‍ನಲ್ಲಿ ಆಟವಾಡುತ್ತಿದ್ದ ಬಾಲಕಿ ಕಾರಿನಡಿ ಬಿದ್ದು ಸಾವು; ಆಘಾತಕಾರಿ ವಿಡಿಯೊ

Viral Video
Latest1 hour ago

Viral Video: ಈ ಮೀನಿನ ದೇಹದಲ್ಲಿದೆ 860 ವೋಲ್ಟ್ ವಿದ್ಯುತ್! ಇದನ್ನು ತಿನ್ನಲು ಹೋದ ಮೊಸಳೆ ಕತೆ ಏನಾಯ್ತು ನೋಡಿ!

Lateral Entry
ಪ್ರಮುಖ ಸುದ್ದಿ1 hour ago

Lateral Entry : ಪ್ರಧಾನಿ ಮೋದಿ ಮಧ್ಯಪ್ರವೇಶ; ಲ್ಯಾಟರಲ್ ಎಂಟ್ರಿ ಮೂಲಕ ನೇಮಕಕ್ಕೆ ತಡೆ

sexual abuse
ದೇಶ1 hour ago

Sexual abuse: ನರ್ಸರಿ ಮಕ್ಕಳ ಮೇಲೆ ಶಾಲೆಯಲ್ಲೇ ಲೈಂಗಿಕ ದೌರ್ಜನ್ಯ; ರೈಲು ತಡೆದು ಪೋಷಕರ ಉಗ್ರ ಪ್ರತಿಭಟನೆ

Viral Video
ಸಿನಿಮಾ1 hour ago

Viral Video: ಐಷಾರಾಮಿ ಟೊಯೋಟಾ ಲೆಕ್ಸಸ್ ಕಾರು ಖರೀದಿಸಿದ ಜಾನ್ವಿ ಕಪೂರ್! ಇದರ ದರ ಎಷ್ಟು?

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌