Yash-Radhika: ರಾಕಿಂಗ್ ಸ್ಟಾರ್‌ ಯಶ್- ರಾಧಿಕಾ ಕುಟುಂಬದ ಸಂಭ್ರಮದ ರಕ್ಷಾಬಂಧನ; ಇಲ್ಲಿವೆ ಚಿತ್ರಗಳು - Vistara News

Latest

Yash-Radhika: ರಾಕಿಂಗ್ ಸ್ಟಾರ್‌ ಯಶ್- ರಾಧಿಕಾ ಕುಟುಂಬದ ಸಂಭ್ರಮದ ರಕ್ಷಾಬಂಧನ; ಇಲ್ಲಿವೆ ಚಿತ್ರಗಳು

Yash-Radhika ರಕ್ಷಾಬಂಧನವು ಭಾರತದಲ್ಲಿ ಒಂದು ವಿಶೇಷ ಹಬ್ಬ. ಇದು ಸಹೋದರ ಸಹೋದರಿಯರ ನಡುವಿನ ಬಂಧವನ್ನು ಗಟ್ಟಿಗೊಳಿಸುವಂತಹ ಹಬ್ಬವಾಗಿದೆ. ಈ ಬಾರಿ ರಕ್ಷಾಬಂಧನವನ್ನು ಯಶ್-ರಾಧಿಕಾ ಮಕ್ಕಳಾದ ಐರಾ-ಯಥರ್ವ್ ಬಹಳ ಸಂಭ್ರಮದಿಂದ ಆಚರಿಸಿದ್ದಾರೆ. ರಾಧಿಕಾ ಪಂಡಿತ್ ಮಕ್ಕಳಿಬ್ಬರ ಫೋಟೊವನ್ನು ಹಂಚಿಕೊಂಡು ಖುಷಿಪಟ್ಟಿದ್ದಾರೆ.

VISTARANEWS.COM


on

Yash-Radhika
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಣ್ಣ- ತಂಗಿಯರ ಬಾಂಧವ್ಯ ಬೆಸುಗೆಯನ್ನು ಹೆಚ್ಚಿಸುವ ಹಬ್ಬವೇ ರಕ್ಷಾ ಬಂಧನ. ಅಣ್ಣನಿಗೆ ತಂಗಿ ರಾಖಿ ಕಟ್ಟುವ ಮೂಲಕ ತನ್ನ ರಕ್ಷಣೆಯ ಹೊಣೆಯನ್ನು ಆತನ ಹೆಗಲಿಗೇರಿಸುತ್ತಾಳೆ. ಇನ್ನು ಈ ಆಚರಣೆಯ ಹಿಂದೆ ಸಾಕಷ್ಟು ಪುರಾಣ ಕಥೆಗಳಿವೆ. ಈ ರಕ್ಷಾಬಂಧನವನ್ನು ಎಲ್ಲರೂ ಖುಷಿಯಿಂದ, ಸಂಭ್ರಮದಿಂದ ಆಚರಿಸುತ್ತಾರೆ. ಚಂದನವನದಲ್ಲೂ ಈ ರಕ್ಷಾಬಂಧನದ ಸಂಭ್ರಮ ಜೋರಾಗಿಯೇ ಇತ್ತು. ಯಶ್-ರಾಧಿಕಾ(Yash-Radhika) ಮಕ್ಕಳಾದ ಐರಾ ಹಾಗೂ ಯಥರ್ವ್‌ ರಕ್ಷಾಬಂಧನವನ್ನು ಬಹಳ ಖುಷಿಯಿಂದ ಆಚರಿಸಿದ್ದಾರೆ.

ಸ್ಯಾಂಡಲ್‌ವುಡ್‌ನ ಕ್ಯೂಟ್‌ ಕಪಲ್‌ ಎಂದೇ ಹೆಸರು ಗಳಿಸಿದ ಯಶ್-ರಾಧಿಕಾ ಅವರ ಮುದ್ದಾದ ಮಕ್ಕಳ ರಕ್ಷಾಬಂಧನದ ಫೋಟೊ ಈಗ ಎಲ್ಲೆಡೆ ವೈರಲ್‌ ಆಗಿದೆ.

ವರಮಹಾಲಕ್ಷ್ಮಿ, ದೀಪಾವಳಿ, ರಕ್ಷಾಬಂಧನ ಹೀಗೆ ಎಲ್ಲಾ ಹಬ್ಬದ ಆಚರಣೆಯನ್ನು ರಾಧಿಕಾ ಅವರು ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ ಹಂಚಿಕೊಂಡು ಖುಷಿಪಡುತ್ತಿರುತ್ತಾರೆ.

ಈಗ ಮಕ್ಕಳಾದ ಐರಾ ಹಾಗೂ ಯಥರ್ವ್‌ ಅವರು ರಕ್ಷಾಬಂದನವನ್ನು ಆಚರಿಸಿದ ಫೋಟೊವನ್ನು ಶೇರ್‌ ಮಾಡಿಕೊಂಡು ಖುಷಿಪಟ್ಟಿದ್ದಾರೆ.

ಐರಾ ಹಾಗೂ ಯಥರ್ವ್‌ ರಕ್ಷಾಬಂಧನವನ್ನು ಬಹಳ ಸರಳವಾಗಿ ಆಚರಿಸಿದ್ದಾರೆ.ಅಕ್ಕ-ತಮ್ಮ ಇಬ್ಬರೂ ಮ್ಯಾಚಿಂಗ್‌ ಮ್ಯಾಚಿಂಗ್‌ ಉಡುಪು ತೊಟ್ಟಿದ್ದರು.

ಇನ್ನು ಐರಾ ತನ್ನ ತಮ್ಮನಿಗೆ ರಾಖಿ ಕಟ್ಟಿ ಹಣೆಗೆ ಕುಂಕುಮ ಹಚ್ಚಿ ಸಿಹಿ ತಿನ್ನಿಸಿ ರಾಖಿ ಹಬ್ಬವನ್ನು ಖುಷಿಯಿಂದ ಆಚರಿಸಿದ್ದಾಳೆ. ಈವರಿಬ್ಬರ ಫೋಟೊವನ್ನು ರಾಧಿಕಾ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಕ್ಷಾ ಬಂಧನಕ್ಕೆ ಸಂಬಂಧಿಸಿದ ಒಂದು ಜನಪ್ರಿಯ ಕಥೆ ಮಹಾಭಾರತದ ಕೃಷ್ಣ-ದ್ರೌಪದಿಯಿಂದ ಬಂದಿದೆ ಎನ್ನಲಾಗಿದೆ. ಶ್ರೀಕೃಷ್ಣನು ಕಬ್ಬಿನ ತುಂಡನ್ನು ಕತ್ತರಿಸುವಾಗ ಅವನ ಬೆರಳಿಗೆ ಗಾಯವಾಯಿತು. ಆಗ ಪಾಂಡವರ ಪತ್ನಿ ದ್ರೌಪದಿ ತನ್ನ ಸೀರೆಯ ತುಂಡನ್ನು ಹರಿದು ಆತನನ್ನು ರಕ್ಷಿಸಲು ಬೆರಳಿಗೆ ಸುತ್ತಿದಳು. ಆಗ ಕೃಷ್ಣನು ಅವಳಲ್ಲಿ ಸಹೋದರ ಪ್ರೇಮವನ್ನು ಕಂಡು ಅಗತ್ಯದ ಸಮಯದಲ್ಲಿ ಅವಳನ್ನು ಕಾಪಾಡುವುದಾಗಿ ಪ್ರತಿಜ್ಞೆ ಮಾಡಿದನು. ಅದರಂತೆ ರಕ್ಷಾ ಬಂಧನವನ್ನು ಅಣ್ಣ-ತಂಗಿ ಹಬ್ಬವೆಂದು ರಾಖಿ ಕಟ್ಟುವ ಮೂಲಕ ಆಚರಿಸಲಾಗುತ್ತದೆ.

ಇದನ್ನೂ ಓದಿ: ಏಕಾಏಕಿ ಸುರಿದ ಮಳೆ; ಭಕ್ತರಿಗೆ ಮಠದ ಪ್ರಾಕಾರದಲ್ಲಿ ಮಲಗಲು ವ್ಯವಸ್ಥೆ ಮಾಡಿಕೊಟ್ಟ ಮಂತ್ರಾಲಯ ಶ್ರೀಗಳು

ಹಾಗೇ ಇನ್ನೊಂದು ಇತಿಹಾಸದ ಕಥೆಯಲ್ಲಿ ಚಿತ್ತೋರಿನ ರಾಣಿ ಕರ್ಣಾವತಿ ಆಕ್ರಮಣಕಾರರ ವಿರುದ್ಧ ಸಹಾಯವನ್ನು ಕೋರಿ ಚಕ್ರವರ್ತಿ ಹುಮಾಯೂನ್‌ಗೆ ರಾಖಿಯನ್ನು ಕಳುಹಿಸಿದಳು. ಆಗ ಹುಮಾಯೂನ್ ತಕ್ಷಣವೇ ಅವಳ ಸಹಾಯಕ್ಕೆ ಬಂದನು ಎನ್ನಲಾಗಿದೆ. ರಾಖಿ ಮೂಲಕ ಅವರ ನಡುವೆ ಸಹೋದರ ಸಹೋದರಿಯ ಸಂಬಂಧ ಬೆಳೆಯಿತು ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

ನಿರ್ದೇಶಕ ಮಧುಸೂದನ್ ಹವಾಲ್ದಾರ್ ನಿರ್ದೇಶನದ “ಕಾಖಂಡಕಿ ಶ್ರೀ ಮಹಿಪತಿದಾಸರು” ಚಿತ್ರದ (Kannada New Movie) ಹಾಡುಗಳ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಚಿತ್ರದ ಏಳು ಹಾಡುಗಳನ್ನು ಪ್ರದರ್ಶಿಸಲಾಯಿತು. ಮಹಿಪತಿದಾಸರ ವಿರಚಿತ ಹನ್ನೊಂದು ಹಾಡುಗಳು ಈ ಚಿತ್ರದಲ್ಲಿವೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಕನ್ನಡ ಸಾಹಿತ್ಯಕ್ಕೆ ದಾಸರ ಕೊಡುಗೆ ಅಪಾರ.‌ ಅಂತಹ ಮಹನೀಯರ ‌ಮಹಿಮೆಯನ್ನು ಚಿತ್ರಗಳ ಮೂಲಕ ಜನರಿಗೆ ಪರಿಚಯಿಸುವ ಕೆಲಸವನ್ನು ನಿರ್ದೇಶಕ ಮಧುಸೂದನ್ ಹವಾಲ್ದಾರ್ ಮಾಡುತ್ತಾ ಬರುತ್ತಿದ್ದಾರೆ. ಕರ್ನಾಟಕದ ಮತ್ತೊಬ್ಬ ಶ್ರೇಷ್ಠ ಹರಿದಾಸರಾದ ಮಹಿಪತಿ ದಾಸರ ಕುರಿತಾದ “ಕಾಖಂಡಕಿ ಶ್ರೀ ಮಹಿಪತಿದಾಸರು” ಚಿತ್ರವನ್ನು (Kannada New Movie) ನಿರ್ದೇಶಿಸುವುದರ ಜತೆಗೆ ಮೊದಲ ಬಾರಿಗೆ ಸಂಗೀತ ನಿರ್ದೇಶನವನ್ನು ಮಾಡಿದ್ದಾರೆ.

ಮಹಿಪತಿದಾಸರ ವಿರಚಿತ ಹನ್ನೊಂದು ಹಾಡುಗಳು ಈ ಚಿತ್ರದಲ್ಲಿದ್ದು, ಚಿತ್ರದಲ್ಲಿ ಮಹಿಪತಿದಾಸರ ಪಾತ್ರದಲ್ಲಿ ಕಾಣಿಸಿಕೊಂಡಿರುವ ವಿಜಯಾನಂದ ಅವರು ಏಳು ಹಾಡುಗಳನ್ನು ಹಾಗೂ ಮಧುಸೂದನ್ ಹವಾಲ್ದಾರ್, ಅನಂತ ಕುಲಕರ್ಣಿ, ರಾಯಚೂರು ಶೇಷಗಿರಿದಾಸ್ ಹಾಗೂ ವಿ.ವಿ. ಪ್ರಸನ್ನ ಅವರು ಒಂದೊಂದು ಗೀತೆಯನ್ನು ಹಾಡಿದ್ದಾರೆ.

ಇದನ್ನೂ ಓದಿ: Gold Rate Today: ಸ್ವರ್ಣ ಪ್ರಿಯರಿಗೆ ಕೊಂಚ ನಿರಾಳ; ಚಿನ್ನದ ದರ ಇಳಿಕೆ

ಇತ್ತೀಚೆಗೆ ಈ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಚಿತ್ರದ ಏಳು ಹಾಡುಗಳನ್ನು ಪ್ರದರ್ಶಿಸಲಾಯಿತು. ಮಾಧವತೀರ್ಥ (ತಂಬಿಹಳ್ಳಿ) ಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾಸಾಗರ ಮಾಧವತೀರ್ಥರು ಹಾಡುಗಳನ್ನು ಲೋಕಾರ್ಪಣೆ ಮಾಡಿದರು. ಮಾಜಿ ಶಾಸಕ ಎಸ್.ಕೆ. ಬೆಳ್ಳುಬ್ಬಿ, ಹುಸೇನ್ ಸಾಬ್ ದಾಸ್, ಸುಭಾಷ್ ಕಾಖಂಡಕಿ, ಮುರಳಿ, ವಿಷ್ಣುತೀರ್ಥ ಜೋಶಿ, ರಾಘವೇಂದ್ರ ರಾವ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಂತರ ಗಣ್ಯರು ಹಾಗೂ ಚಿತ್ರತಂಡದವರು ಮಾತನಾಡಿದರು.

ಕನ್ನಡ ಹರಿದಾಸ ಸಾಹಿತ್ಯಕ್ಕೆ ಮಹಿಪತಿದಾಸರ ಕೊಡುಗೆ ಅಪಾರ.‌ ಆದರೆ ಅವರಿಗೆ ಹೆಚ್ಚು ‌ಪ್ರಚಾರ ಸಿಕ್ಕಿಲ್ಲ. ಸಿನಿಮಾ‌ ಎಲ್ಲರನ್ನು ಬಹುಬೇಗ ತಲುಪುವ ಮಾಧ್ಯಮ.‌ ಇದರ ಮೂಲಕ ಮಧುಸೂದನ್ ಹವಾಲ್ದಾರ್ ಅವರು ಕನ್ನಡದ ಹರಿದಾಸರನ್ನು ಜನರಿಗೆ ಪರಿಚಯಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಎಲ್ಲಾ ಹರಿದಾಸರ ಅನುಗ್ರಹವಿರಲಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಶ್ರೀ ವಿದ್ಯಾಸಾಗರ ಮಾಧವತೀರ್ಥರು ಆಶೀರ್ವದಿಸಿದರು.

“ಶ್ರೀ ಜಗನ್ನಾಥದಾಸರು” ಚಿತ್ರದಿಂದ ಶ್ರೇಷ್ಠ ಹರಿದಾಸರ ಚಿತ್ರಗಳನ್ನು ನಿರ್ದೇಶಿಸುತ್ತಾ ಬಂದಿದ್ದೇನೆ. ಪ್ರಸ್ತುತ “ಕಾಖಂಡಕಿ ಶ್ರೀಮಹಿಪತಿದಾಸರು” ಚಿತ್ರವನ್ನು ‌ನಿರ್ದೇಶಿಸುವುದರೊಂದಿಗೆ ಸಂಗೀತ ಸಂಯೋಜನೆ ಕೂಡ ಮಾಡಿದ್ದೇನೆ. ರಾಮಾಂಬುಜ ಮೂವೀಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಮಧುಸೂದನ್ ಹವಾಲ್ದಾರ್ ತಿಳಿಸಿದರು.

ಇದನ್ನೂ ಓದಿ: Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

ಐಟಿ ಉದ್ಯೋಗಿಯಾಗಿದ್ದ ನಾನು ದಾಸರ ಅನುಗ್ರಹದಿಂದ ಇಂದು ಮಹಿಪತಿದಾಸರ ಪಾತ್ರ ಮಾಡಿದ್ದೇನೆ. ನಟನೆ ಜತಗೆ ಗಾಯನವನ್ನೂ ಮಾಡಲು ಅವಕಾಶ ನೀಡಿದ ಮಧುಸೂದನ್ ಹವಾಲ್ದಾರ್ ಅವರಿಗೆ ಧನ್ಯವಾದ ಎಂದರು ನಟ ವಿಜಯಾನಂದ್.

Continue Reading

Latest

Viral Video: ಸೈಕಲ್‍ನಲ್ಲಿ ಆಟವಾಡುತ್ತಿದ್ದ ಬಾಲಕಿ ಕಾರಿನಡಿ ಬಿದ್ದು ಸಾವು; ಆಘಾತಕಾರಿ ವಿಡಿಯೊ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ (Viral Video) ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಘೋರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮೆಹ್ಸಾನಾದ ಸ್ಪರ್ಶ್ ವಿಲ್ಲಾ ಸೊಸೈಟಿಯಲ್ಲಿ ಈ ದುರಂತ ಘಟನೆ ನಡೆದಿದೆ. ಮೃತ ಬಾಲಕಿಯನ್ನು ದಿಶಾ ಪಟೇಲ್ ಎಂದು ಗುರುತಿಸಲಾಗಿದೆ.

VISTARANEWS.COM


on

Viral Video
Koo


ಮಕ್ಕಳನ್ನು ಸೈಕಲ್ ಹತ್ತಿಸಿ ರಸ್ತೆಗೆ ಬಿಡುವ ಪೋಷಕರು ತುಂಬಾ ಎಚ್ಚರಿಕೆಯಿಂದ ಮಕ್ಕಳನ್ನು ನೋಡಿಕೊಳ್ಳಬೇಕು. ಇಲ್ಲವಾದರೆ ಇದರಿಂದ ಅನಾಹುತಗಳೇ ಸಂಭವಿಸುತ್ತದೆ. ಪೋಷಕರ ನಿರ್ಲಕ್ಷತನ ಮತ್ತು ಕಾರು ಚಾಲಕನ ಬೇಜವಾಬ್ದಾರಿತನದ ಚಾಲನೆಯಿಂದಾಗಿ, ಬಾಳಿ ಬದುಕಬೇಕಾಗಿದ್ದ ಪುಟ್ಟ ಕಂದಮ್ಮಗಳು ಜೀವ ಕಳೆದುಕೊಳ್ಳಬೇಕಾಗುವ ಪರಿಸ್ಥಿತಿ ಎದುರಾಗಿದೆ. ಇದೀಗ ಅಂತಹದೊಂದು ಘಟನೆ ಗುಜರಾತ್‍ನಲ್ಲಿ ನಡೆದಿದೆ. ಗುಜರಾತ್‍ನ ಮೆಹ್ಸಾನಾ ಜಿಲ್ಲೆಯಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಘೋರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗುತ್ತಿದೆ.

ಮೆಹ್ಸಾನಾದ ಸ್ಪರ್ಶ್ ವಿಲ್ಲಾ ಸೊಸೈಟಿಯಲ್ಲಿ ಈ ದುರಂತ ಘಟನೆ ನಡೆದಿದೆ. ಮೃತ ಬಾಲಕಿಯನ್ನು ದಿಶಾ ಪಟೇಲ್ ಎಂದು ಗುರುತಿಸಲಾಗಿದೆ. ಈ ಘಟನೆಯು ನಗರದ ಜನರಲ್ಲಿ ಆಘಾತವನ್ನು ಉಂಟುಮಾಡಿದೆ. ಈ ಹೃದಯ ವಿದ್ರಾವಕ ಅಪಘಾತವು ಸೊಸೈಟಿಯಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ವೈರಲ್ ಆಗಿರುವ ವಿಡಿಯೊದಲ್ಲಿ, ಅಪ್ರಾಪ್ತ ಬಾಲಕಿ ಹೌಸಿಂಗ್ ಸೊಸೈಟಿಯೊಳಗೆ ಸೈಕಲ್‍ನಲ್ಲಿ ಆಟವಾಡುತ್ತಿದ್ದಾಳೆ. ಇನ್ನೊಂದು ಬದಿಯಿಂದ ಬರುತ್ತಿದ್ದ ಕಾರನ್ನು ನೋಡಿದ ನಂತರ ಹುಡುಗಿ ಇದ್ದಕ್ಕಿದ್ದಂತೆ ಸೈಕಲ್ ಅನ್ನು ಟರ್ನ್ ಮಾಡಲು ಹೋಗಿ ಸಮತೋಲನವನ್ನು ಕಳೆದುಕೊಂಡು ಅಲ್ಲೇ ಕೆಳಗೆ ಬೀಳುತ್ತಾಳೆ. ಆದರೆ ಇದನ್ನು ಗಮನಿಸದ ಕಾರು ಚಾಲಕ ಹುಡುಗಿ ಎದ್ದೇಳುವ ಮೊದಲು, ಕಾರನ್ನು ಅವಳ ಮೇಲೆ ಹರಿಸಿದ್ದಾನೆ. ಇದರಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ನಂತರ ಚಾಲಕ ತನ್ನ ವಾಹನವನ್ನು ನಿಲ್ಲಿಸಿ ಅವಳನ್ನು ಪರೀಕ್ಷಿಸಲು ವಾಹನದಿಂದ ಇಳಿದಿದ್ದಾನೆ. ಹಾಗೇ ಅಲ್ಲೇ ಇದ್ದ ಇಬ್ಬರು ಮಹಿಳೆಯರು ಹುಡುಗಿಗೆ ಸಹಾಯ ಮಾಡಲು ಅವಳ ಬಳಿಗೆ ಬಂದಿದ್ದಾರೆ, ಆದರೆ ಏನು ಪ್ರಯೋಜನ? ಆಕೆ ಆಗಲೇ ಮೃತಪಟ್ಟಿದ್ದಳು.

ಇದನ್ನೂ ಓದಿ:ತಾಯಿಯ ಅಂತ್ಯಸಂಸ್ಕಾರಕ್ಕಾಗಿ ಭಿಕ್ಷೆ ಬೇಡಿದ ಮಗಳು! ಮನಕಲಕುವ ವಿಡಿಯೊ

ವರದಿಯ ಪ್ರಕಾರ, ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಘಟನೆಯ ನಂತರ, ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಾರು ಚಾಲಕನನ್ನು ಗುರುತಿಸಲಾಗುತ್ತಿದೆ. ಸ್ಥಳೀಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Continue Reading

Latest

Viral Video: ಈ ಮೀನಿನ ದೇಹದಲ್ಲಿದೆ 860 ವೋಲ್ಟ್ ವಿದ್ಯುತ್! ಇದನ್ನು ತಿನ್ನಲು ಹೋದ ಮೊಸಳೆ ಕತೆ ಏನಾಯ್ತು ನೋಡಿ!

ಮೊಸಳೆ ಹಾಗೂ ಈಲ್ (Viral Video) ನಡುವಿನ ಹೊಡೆದಾಟದ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕೊಳದ ಅಂಚಿನಲ್ಲಿ ಮಲಗಿದ ಮೊಸಳೆ ಹತ್ತಿರ ಎಲೆಕ್ಟ್ರಿಕ್ ಈಲ್ ಬಂದಿದೆ. ಈಲ್ ದಡದ ಕಡೆಗೆ ಬರುತ್ತಿದ್ದಂತೆ ಮೊಸಳೆ ಈಲ್ ಮೇಲೆ ದಾಳಿ ಮಾಡಿ ಅದನ್ನು ತನ್ನ ದವಡೆಗಳಲ್ಲಿ ಹಿಡಿದುಕೊಂಡಿತು. ಈಲ್ ಕೂಡ ಮೊಸಳೆ ಮೇಲೆ ಪ್ರತಿಧಾಳಿ ನಡೆಸಿತು. ಈಲ್ ನಡೆಸಿದ ದಾಳಿಗೆ ಮೊಸಳೆ ತತ್ತರಿಸಿ ಹೋಗಿದೆ. ಈ ವಿಡಿಯೊ ನೋಡಿ.

VISTARANEWS.COM


on

Viral Video
Koo


ಮೊಸಳೆಗಳು ನದಿಯಲ್ಲಿ ಇರುವ ದೊಡ್ಡ ದೊಡ್ಡ ಮೀನುಗಳು, ನದಿಯ ಬಳಿ ಬಂದ ಪ್ರಾಣಿಗಳು ಮಾತ್ರವಲ್ಲ ಮನುಷ್ಯರನ್ನೂ ಬೇಟೆಯಾಡಿ ತಿನ್ನುತ್ತವೆ. ಆದರೆ ಬೇಟೆಯಾಡುವುದು ಕೆಲವೊಮ್ಮೆ ಅಪಾಯಕಾರಿಯಾಗಬಹುದು, ಯಾಕೆಂದರೆ ನದಿಯಲ್ಲಿ ಕೆಲವೊಮ್ಮೆ ಎಲೆಕ್ಟ್ರಿಕ್ ಈಲ್ ಮೀನುಗಳಿರುತ್ತವೆ. ಇವು ತುಂಬಾ ಅಪಾಯಕಾರಿ. ಯಾಕೆಂದರೆ ಇವು ತಮ್ಮನ್ನು ಹಿಡಿಯಲು ಬಂದವರಿಗೆ ಕರೆಂಟ್ ಶಾಕ್ ನೀಡುತ್ತದೆ. ಇದು ಜೀವಕ್ಕೆ ಅಪಾಯಕಾರಿಯಾಗಬಹುದು. ಇದು ಅವುಗಳಿಗೆ ಶತ್ರುಗಳಿಂದಾಗುವ ದಾಳಿಯನ್ನು ತಪ್ಪಿಸಿಕೊಳ್ಳಲು ನೈಸರ್ಗಿಕವಾಗಿ ದೊರೆತ ಶಕ್ತಿಯಾಗಿದೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಮೊಸಳೆ ಮತ್ತು ಎಲೆಕ್ಟ್ರಿಕ್ ಈಲ್ ನಡುವೆ ಹೋರಾಟ ನಡೆಯುತ್ತಿರುವ ವಿಡಿಯೊವೊಂದು ಸೋಶಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ (Viral Video)ಆಗುತ್ತಿದ್ದು, ಅನೇಕರ ಗಮನ ಸೆಳೆಯುತ್ತಿದೆ.

ಈ ವೈರಲ್ ವಿಡಿಯೊದಲ್ಲಿ ಮೊಸಳೆ ಕೊಳದ ಅಂಚಿನಲ್ಲಿ ಮಲಗಿತ್ತು. ಅಲ್ಲಿ ಹತ್ತಿರದಲ್ಲಿದ್ದ ಎಲೆಕ್ಟ್ರಿಕ್ ಈಲ್ ಮೊಸಳೆ ಹತ್ತಿರ ಬಂದಿದೆ. ಈಲ್ ದಡದ ಕಡೆಗೆ ಬರುತ್ತಿದ್ದಂತೆ ಮೊಸಳೆ ಈಲ್ ಮೇಲೆ ದಾಳಿ ಮಾಡಿ ಅದನ್ನು ತನ್ನ ದವಡೆಗಳಲ್ಲಿ ಹಿಡಿದುಕೊಂಡಿತು. ಅದರ ನಂತರ ನಡೆದ ದೃಶ್ಯ ತುಂಬಾ ಆಘಾತಕಾರಿಯಾಗಿತ್ತು. ಯಾಕೆಂದರೆ ಎಲೆಕ್ಟ್ರಿಕ್ ಈಲ್‍ಗಳಿಗೆ 860-ವೋಲ್ಟ್ ವರೆಗೆ ಹೆಚ್ಚಿನ-ವೋಲ್ಟೇಜ್ ಕರೆಂಟ್‍ಗಳನ್ನು ತನ್ನ ದೇಹದಲ್ಲಿ ಉತ್ಪತ್ತಿ ಮಾಡುವಂತಹ ಸಾಮರ್ಥ್ಯ ಇದೆ.

ಹಾಗಾಗಿ ಅವು ಬೇಟೆಯಾಡಲು ಬಂದವರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಈ ಶಕ್ತಿಯನ್ನು ಬಳಸುತ್ತವೆ. ಇಂತಹ ಈಲ್ ಅನ್ನು ಮೊಸಳೆ ಹಿಡಿದಾಗ ಈಲ್ ಭಾರಿ ವಿದ್ಯುತ್ ಆಘಾತಗಳನ್ನು ನೀಡಿತು. ಆಘಾತವು ಎಷ್ಟು ಪ್ರಬಲವಾಗಿತ್ತು ಎಂದರೆ ಮೊಸಳೆಯ ಇಡೀ ದೇಹವು ಅನಿಯಂತ್ರಿತವಾಗಿ ನಡುಗಲು ಪ್ರಾರಂಭಿಸಿತು. ವಿಡಿಯೊದಲ್ಲಿ ಮೊಸಳೆ ನೀರಿನಲ್ಲಿ ನೋವಿನಿಂದ ನರಳುತ್ತಿರುವುದನ್ನು ಕಾಣಬಹುದು. ಬಲವಾದ ವಿದ್ಯುತ್ ಪ್ರವಾಹದಿಂದ ಮೊಸಳೆ ಅಲ್ಲೇ ನಿರ್ಜೀವವಾಗಿ ಬಿಟ್ಟಿದೆ.

ಆದರೆ ಇದರಲ್ಲಿ ಈಲ್ ಕೂಡ ಸಾವನಪ್ಪಿದೆ. ಯಾಕೆಂದರೆ ಮೊಸಳೆ ಪ್ರಬಲ ವಿದ್ಯುತ್ ಆಘಾತಕ್ಕೆ ಬಲಿಯಾಯಿತು, ಆ ವೇಳೆ ಮೊಸಳೆಯ ದವಡೆಗಳಲ್ಲಿ ಸಿಕ್ಕಿಬಿದ್ದ ಈಲ್ ಕೂಡ ಸಾವನ್ನಪ್ಪಿತು. ಇಡೀ ಘಟನೆಯನ್ನು ಪ್ರೇಕ್ಷಕರೊಬ್ಬರು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

ಇದನ್ನೂ ಓದಿ:ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡುತ್ತ ದೇವಾಲಯದೊಳಗೇ ಹಸ್ತಮೈಥುನ!

ಎಲೆಕ್ಟ್ರಿಕ್ ಈಲ್ಸ್ ಒಂದು ಮಾರಣಾಂತಿಕ ಜಾತಿಯ ಮೀನಾಗಿದೆ. ಇವು ಅತ್ಯಂತ ಅಪಾಯಕಾರಿ ಮೀನು ಪ್ರಭೇದಗಳಲ್ಲಿ ಒಂದಾಗಿದೆ, ಇದು 860 ವೋಲ್ಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಮೀನನ್ನು ಹಿಡಿಯಲು ಹೋದ ಅನೇಕ ಜನರು ಕರೆಂಟ್ ಶಾಕ್‍ಗೆ ಒಳಗಾಗಿ ಸಾವನಪ್ಪಿದ್ದಾರೆ. ಹಲವರು ತಮ್ಮ ದೇಹದ ಶಕ್ತಿಯನ್ನೇ ಕಳೆದುಕೊಂಡು ಹಾಸಿಗೆ ಹಿಡಿದಿದ್ದಾರೆ.

Continue Reading

ಸಿನಿಮಾ

Viral Video: ಐಷಾರಾಮಿ ಟೊಯೋಟಾ ಲೆಕ್ಸಸ್ ಕಾರು ಖರೀದಿಸಿದ ಜಾನ್ವಿ ಕಪೂರ್! ಇದರ ದರ ಎಷ್ಟು?

ಬಾಲಿವುಡ್ ನಟಿ ಜಾನ್ವಿ ಕಪೂರ್ ಭಾರತದಲ್ಲಿ ಲಭ್ಯವಿರುವ ಎಸ್ ಯುವಿ ಮಾದರಿಯ ಅತ್ಯಂತ ದುಬಾರಿ ಬೆಲೆಯ ಕಾರನ್ನು ಖರೀದಿ ಮಾಡಿದ್ದಾರೆ. ಇದರ ವಿಡಿಯೋ (Viral Video) ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಾರಿ ವೈರಲ್ ಆಗಿದೆ. ಅಂದಹಾಗೆ ಈ ಕಾರು ಯಾವುದು, ಇದರ ಬೆಲೆ ಎಷ್ಟು ಗೊತ್ತೇ? ಇಲ್ಲಿದೆ ಈ ಕುರಿತ ವಿವರ.

VISTARANEWS.COM


on

By

Viral Video
Koo

ಬ್ಯಾಕ್ ಟು ಬ್ಯಾಕ್ ಚಿತ್ರದಲ್ಲಿ ಬ್ಯುಸಿಯಾಗಿರುವ ಬಾಲಿವುಡ್ ನಟಿ ಜಾನ್ವಿ ಕಪೂರ್ (Janhvi Kapoor) ಈಗ ದಕ್ಷಿಣ ಸಿನಿಮಾರಂಗಕ್ಕೂ (south film) ಕಾಲಿಟ್ಟಿದ್ದಾರೆ. ಇತ್ತೀಚೆಗಷ್ಟೇ ಇವರ ಮತ್ತು ಜೂನಿಯರ್ ಎನ್‌ಟಿಆರ್ (jr NTR) ಅಭಿನಯದ ʼದೇವರʼ (devara) ಚಿತ್ರದ ಹಾಡು ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ನಟಿ ಜಾನ್ವಿ ಕಪೂರ್ ದುಬಾರಿ ಬೆಲೆಯ ಕಾರೊಂದನ್ನು ಖರೀದಿ ಮಾಡಿರುವುದಾಗಿ ಪಾಪರಾಜಿಗಳು ವಿಡಿಯೋವೊಂದನ್ನು (Viral Video) ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮಿಸ್ಟರ್ ಆಂಡ್ ಮಿಸಸ್ ಮಹಿ ಮತ್ತು ಉಲಾಜ್ ಚಿತ್ರದ ಬಳಿಕ ದೇವರ ಚಿತ್ರದಲ್ಲಿ ಬ್ಯುಸಿಯಾಗಿರುವ ನಟಿ ಜಾನ್ವಿ ಸೊಗಸಾದ ಹೊಸ ಟೊಯೋಟಾ ಲೆಕ್ಸಸ್‌ ಕಾರನ್ನು ಖರೀದಿ ಮಾಡಿದ್ದಾರೆ ಎನ್ನಲಾಗಿದೆ.


ಕಾರಿನ ಬೆಲೆ ಎಷ್ಟು?

ಜಾನ್ವಿ ಕಪೂರ್ ಅವರ ಹೊಸ ಕಾರು ಮುಂಬಯಿನ ಬೀದಿಗಳಲ್ಲಿ ಸಂಚರಿಸುತ್ತಿದೆ. ಆಗಸ್ಟ್ 18ರಂದು ಇದು ಪಾಪರಾಜಿಗಳ ಕಣ್ಣಿಗೆ ಬಿದ್ದಿದೆ. ಪಾಪರಾಜಿ ಹಂಚಿಕೊಂಡ ವಿಡಿಯೋವು ಜಾನ್ವಿಯ ಹೊಸ ಟೊಯೋಟಾ ಲೆಕ್ಸಸ್ ಅನ್ನು ಪ್ರದರ್ಶಿಸಿದೆ. ಕಪ್ಪು ಬಣ್ಣದ ಹೊಳೆಯುವ ಈ ಕಾರು ಎಲ್ಲರ ಕಣ್ಣುಗಳನ್ನು ಸೆಳೆಯಿತು. ಎಸ್‌ಯುವಿನಲ್ಲಿ ಭಾರತದಲ್ಲಿ ಲಭ್ಯವಿರುವ ಅತ್ಯಂತ ಬೆಲೆಬಾಳುವ ಮಾದರಿಗಳಲ್ಲಿ ಒಂದಾಗಿದೆ.

ಜಾನ್ವಿಯ ಲೆಕ್ಸಸ್ ಎಲ್ ಎಂ 350 ಎಂಎಚ್ ಐಷಾರಾಮಿ ಕಾರಿನಲ್ಲಿ ಹಲವು ವೈಶಿಷ್ಟ್ಯಗಳಿವೆ. ಇದರ ಎಕ್ಸ್ ಶೋರೂಂ ಬೆಲೆ ಸುಮಾರು 2.50 ಕೋಟಿ ರೂ. ಗಳಾಗಿದ್ದು, ಆನ್ ರೋಡ್ ಬೆಲೆ 2.87 ಕೋಟಿ ರೂ. ನಷ್ಟಿದೆ. ಉನ್ನತ ಮಟ್ಟದ ಈ ವಾಹನವು ಪ್ರೀಮಿಯಂ ಸೌಕರ್ಯಗಳಿಂದ ತುಂಬಿದೆ. ಇದು ಹೆಚ್ಚುವರಿ ಲೆಗ್‌ರೂಮ್‌ಗೆ ಸರಿಹೊಂದಿಸಬಹುದಾದ ರಿಕ್ಲೈನರ್ ಆಸನಗಳನ್ನು ಒಳಗೊಂಡಿದೆ ಮತ್ತು ಉತ್ತಮ ಲಗೇಜ್ ಸ್ಥಳಕ್ಕಾಗಿ ಟಿಪ್-ಅಪ್ ಕಾರ್ಯವನ್ನು ಸಹ ಹೊಂದಿದೆ. ಕೆಲವೇ ದಿನಗಳ ಹಿಂದೆ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಕೂಡ ಇದೇ ಮಾದರಿಯನ್ನು ಬೂದು ಬಣ್ಣದಲ್ಲಿ ಖರೀದಿಸಿದರು.


ಬ್ಯುಸಿಯಾಗಿರುವ ಜಾನ್ವಿ

ಚಿತ್ರರಂಗದಲ್ಲಿ ಮಾತ್ರವಲ್ಲ ವಯಕ್ತಿಕ ಜೀವನದಲ್ಲೂ ಜಾನ್ವಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗೆ ತಾಯಿ ಶ್ರೀದೇವಿ ಅವರ 61 ನೇ ಜನ್ಮ ವಾರ್ಷಿಕೋತ್ಸವದ ವೇಳೆ ಜಾನ್ವಿ ಕಪೂರ್ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. 2018 ರಲ್ಲಿ ತನ್ನ ತಾಯಿಯ ಮರಣದ ಅನಂತರ ಜಾನ್ವಿಯು ಅನುಸರಿಸುತ್ತಿರುವ ವಾರ್ಷಿಕ ಸಂಪ್ರದಾಯ ಇದಾಗಿದೆ.


ಜಾನ್ವಿ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಒಂದೆರಡು ಚಿತ್ರಗಳನ್ನು ಮತ್ತು ತಾಯಿಯೊಂದಿಗೆ ಬಾಲ್ಯದ ಚಿತ್ರವನ್ನು ಹಂಚಿಕೊಂಡಿದ್ದರು. ಹಳದಿ ರೇಷ್ಮೆ ಸೀರೆಯಲ್ಲಿ ಕಾಣಿಸಿಕೊಂಡಿದ್ದ ಜಾನ್ವಿ ದೇವಾಲಯದ ಮೆಟ್ಟಿಲುಗಳ ಮೇಲೆ ನಿಂತು ತೆಗೆದ ಫೋಟೋಗಳನ್ನು ಹಂಚಿಕೊಂಡಿದ್ದರು.


ಇದನ್ನೂ ಓದಿ: Kannada New Movie: ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್‌ನ ʼಫಾರೆಸ್ಟ್ʼ ಚಿತ್ರದ ಟ್ರೈಲರ್ ಸದ್ಯದಲ್ಲೇ ರಿಲೀಸ್‌

ತಿರುಪತಿ ದೇವಸ್ಥಾನದೊಂದಿಗೆ ಜಾನ್ವಿಯ ನಂಟು

ಜಾನ್ವಿ ತಿರುಪತಿ ದೇವಸ್ಥಾನದಲ್ಲಿ ಮೆಟ್ಟಿಲುಗಳನ್ನು ಹತ್ತಲು ಕಾರಣವನ್ನು ಬಹಿರಂಗಪಡಿಸಿದ್ದಾರೆ. ಅಮ್ಮ ತೀರಿಕೊಂಡ ಅನಂತರ ನಾನು ತಿರುಪತಿಯ ಮೆಟ್ಟಿಲುಗಳನ್ನು ಹತ್ತಲು ಪ್ರಾರಂಭಿಸಿದೆ ಎಂದು ಜಾನ್ವಿ ಹೇಳಿದ್ದಾರೆ.
ಶ್ರೀದೇವಿ ತನ್ನ ಹುಟ್ಟುಹಬ್ಬದಂದು ಈ ರೀತಿ ಮಾಡುತ್ತಿದ್ದಳು. ಅವಳು ಬಿಟ್ಟು ಹೋದ ಬಳಿಕ ನಾನು ಅವಳ ಹುಟ್ಟುಹಬ್ಬದಂದು ತಿರುಪತಿ ಮೆಟ್ಟಿಲು ಹತ್ತಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

Continue Reading
Advertisement
Manish Pandey
ಕ್ರಿಕೆಟ್11 mins ago

Manish Pandey: ಮತ್ತೆ ಆರ್​ಸಿಬಿ ಸೇರುವ ಬಯಕೆ ವ್ಯಕ್ತಪಡಿಸಿದ ಮನೀಷ್​ ಪಾಂಡೆ

Hoax Bomb Threat
ದೇಶ16 mins ago

Hoax Bomb Threat: ಮತ್ತೆ ಹುಸಿಬಾಂಬ್‌ ಸಂದೇಶ- ಮೂರು ಮಾಲ್‌ಗಳು, ಆಸ್ಪತ್ರೆಗೆ ಬೆದರಿಕೆ

Actor Darshan
ಕರ್ನಾಟಕ31 mins ago

Actor Darshan: ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಅರ್ಜಿ ವಿಚಾರಣೆ ಸೆ.5ಕ್ಕೆ ಮುಂದೂಡಿದ ಹೈಕೋರ್ಟ್

Darius Visser
ಕ್ರಿಕೆಟ್43 mins ago

Darius Visser: ಒಂದೇ ಓವರ್​ನಲ್ಲಿ 39 ರನ್​ ಚಚ್ಚಿ ಯುವರಾಜ್​ ಸಿಂಗ್​ ದಾಖಲೆ ಮುರಿದ ಡೇರಿಯಸ್ ವಿಸ್ಸರ್

Kannada New Movie
ಕರ್ನಾಟಕ48 mins ago

Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

Viral Video
Latest53 mins ago

Viral Video: ಸೈಕಲ್‍ನಲ್ಲಿ ಆಟವಾಡುತ್ತಿದ್ದ ಬಾಲಕಿ ಕಾರಿನಡಿ ಬಿದ್ದು ಸಾವು; ಆಘಾತಕಾರಿ ವಿಡಿಯೊ

Viral Video
Latest1 hour ago

Viral Video: ಈ ಮೀನಿನ ದೇಹದಲ್ಲಿದೆ 860 ವೋಲ್ಟ್ ವಿದ್ಯುತ್! ಇದನ್ನು ತಿನ್ನಲು ಹೋದ ಮೊಸಳೆ ಕತೆ ಏನಾಯ್ತು ನೋಡಿ!

Lateral Entry
ಪ್ರಮುಖ ಸುದ್ದಿ1 hour ago

Lateral Entry : ಪ್ರಧಾನಿ ಮೋದಿ ಮಧ್ಯಪ್ರವೇಶ; ಲ್ಯಾಟರಲ್ ಎಂಟ್ರಿ ಮೂಲಕ ನೇಮಕಕ್ಕೆ ತಡೆ

sexual abuse
ದೇಶ1 hour ago

Sexual abuse: ನರ್ಸರಿ ಮಕ್ಕಳ ಮೇಲೆ ಶಾಲೆಯಲ್ಲೇ ಲೈಂಗಿಕ ದೌರ್ಜನ್ಯ; ರೈಲು ತಡೆದು ಪೋಷಕರ ಉಗ್ರ ಪ್ರತಿಭಟನೆ

Viral Video
ಸಿನಿಮಾ1 hour ago

Viral Video: ಐಷಾರಾಮಿ ಟೊಯೋಟಾ ಲೆಕ್ಸಸ್ ಕಾರು ಖರೀದಿಸಿದ ಜಾನ್ವಿ ಕಪೂರ್! ಇದರ ದರ ಎಷ್ಟು?

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌