Viral Video: ಸೈಕಲ್‍ನಲ್ಲಿ ಆಟವಾಡುತ್ತಿದ್ದ ಬಾಲಕಿ ಕಾರಿನಡಿ ಬಿದ್ದು ಸಾವು; ಆಘಾತಕಾರಿ ವಿಡಿಯೊ - Vistara News

Latest

Viral Video: ಸೈಕಲ್‍ನಲ್ಲಿ ಆಟವಾಡುತ್ತಿದ್ದ ಬಾಲಕಿ ಕಾರಿನಡಿ ಬಿದ್ದು ಸಾವು; ಆಘಾತಕಾರಿ ವಿಡಿಯೊ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ (Viral Video) ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಘೋರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮೆಹ್ಸಾನಾದ ಸ್ಪರ್ಶ್ ವಿಲ್ಲಾ ಸೊಸೈಟಿಯಲ್ಲಿ ಈ ದುರಂತ ಘಟನೆ ನಡೆದಿದೆ. ಮೃತ ಬಾಲಕಿಯನ್ನು ದಿಶಾ ಪಟೇಲ್ ಎಂದು ಗುರುತಿಸಲಾಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಮಕ್ಕಳನ್ನು ಸೈಕಲ್ ಹತ್ತಿಸಿ ರಸ್ತೆಗೆ ಬಿಡುವ ಪೋಷಕರು ತುಂಬಾ ಎಚ್ಚರಿಕೆಯಿಂದ ಮಕ್ಕಳನ್ನು ನೋಡಿಕೊಳ್ಳಬೇಕು. ಇಲ್ಲವಾದರೆ ಇದರಿಂದ ಅನಾಹುತಗಳೇ ಸಂಭವಿಸುತ್ತದೆ. ಪೋಷಕರ ನಿರ್ಲಕ್ಷತನ ಮತ್ತು ಕಾರು ಚಾಲಕನ ಬೇಜವಾಬ್ದಾರಿತನದ ಚಾಲನೆಯಿಂದಾಗಿ, ಬಾಳಿ ಬದುಕಬೇಕಾಗಿದ್ದ ಪುಟ್ಟ ಕಂದಮ್ಮಗಳು ಜೀವ ಕಳೆದುಕೊಳ್ಳಬೇಕಾಗುವ ಪರಿಸ್ಥಿತಿ ಎದುರಾಗಿದೆ. ಇದೀಗ ಅಂತಹದೊಂದು ಘಟನೆ ಗುಜರಾತ್‍ನಲ್ಲಿ ನಡೆದಿದೆ. ಗುಜರಾತ್‍ನ ಮೆಹ್ಸಾನಾ ಜಿಲ್ಲೆಯಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಘೋರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗುತ್ತಿದೆ.

ಮೆಹ್ಸಾನಾದ ಸ್ಪರ್ಶ್ ವಿಲ್ಲಾ ಸೊಸೈಟಿಯಲ್ಲಿ ಈ ದುರಂತ ಘಟನೆ ನಡೆದಿದೆ. ಮೃತ ಬಾಲಕಿಯನ್ನು ದಿಶಾ ಪಟೇಲ್ ಎಂದು ಗುರುತಿಸಲಾಗಿದೆ. ಈ ಘಟನೆಯು ನಗರದ ಜನರಲ್ಲಿ ಆಘಾತವನ್ನು ಉಂಟುಮಾಡಿದೆ. ಈ ಹೃದಯ ವಿದ್ರಾವಕ ಅಪಘಾತವು ಸೊಸೈಟಿಯಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ವೈರಲ್ ಆಗಿರುವ ವಿಡಿಯೊದಲ್ಲಿ, ಅಪ್ರಾಪ್ತ ಬಾಲಕಿ ಹೌಸಿಂಗ್ ಸೊಸೈಟಿಯೊಳಗೆ ಸೈಕಲ್‍ನಲ್ಲಿ ಆಟವಾಡುತ್ತಿದ್ದಾಳೆ. ಇನ್ನೊಂದು ಬದಿಯಿಂದ ಬರುತ್ತಿದ್ದ ಕಾರನ್ನು ನೋಡಿದ ನಂತರ ಹುಡುಗಿ ಇದ್ದಕ್ಕಿದ್ದಂತೆ ಸೈಕಲ್ ಅನ್ನು ಟರ್ನ್ ಮಾಡಲು ಹೋಗಿ ಸಮತೋಲನವನ್ನು ಕಳೆದುಕೊಂಡು ಅಲ್ಲೇ ಕೆಳಗೆ ಬೀಳುತ್ತಾಳೆ. ಆದರೆ ಇದನ್ನು ಗಮನಿಸದ ಕಾರು ಚಾಲಕ ಹುಡುಗಿ ಎದ್ದೇಳುವ ಮೊದಲು, ಕಾರನ್ನು ಅವಳ ಮೇಲೆ ಹರಿಸಿದ್ದಾನೆ. ಇದರಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ನಂತರ ಚಾಲಕ ತನ್ನ ವಾಹನವನ್ನು ನಿಲ್ಲಿಸಿ ಅವಳನ್ನು ಪರೀಕ್ಷಿಸಲು ವಾಹನದಿಂದ ಇಳಿದಿದ್ದಾನೆ. ಹಾಗೇ ಅಲ್ಲೇ ಇದ್ದ ಇಬ್ಬರು ಮಹಿಳೆಯರು ಹುಡುಗಿಗೆ ಸಹಾಯ ಮಾಡಲು ಅವಳ ಬಳಿಗೆ ಬಂದಿದ್ದಾರೆ, ಆದರೆ ಏನು ಪ್ರಯೋಜನ? ಆಕೆ ಆಗಲೇ ಮೃತಪಟ್ಟಿದ್ದಳು.

ಇದನ್ನೂ ಓದಿ:ತಾಯಿಯ ಅಂತ್ಯಸಂಸ್ಕಾರಕ್ಕಾಗಿ ಭಿಕ್ಷೆ ಬೇಡಿದ ಮಗಳು! ಮನಕಲಕುವ ವಿಡಿಯೊ

ವರದಿಯ ಪ್ರಕಾರ, ಘಟನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಘಟನೆಯ ನಂತರ, ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಾರು ಚಾಲಕನನ್ನು ಗುರುತಿಸಲಾಗುತ್ತಿದೆ. ಸ್ಥಳೀಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಲಬುರಗಿ

DK Shivakumar: ಆರ್ಟಿಕಲ್ 371 ಜೆ ಜಾರಿಗೆ 10 ವರ್ಷ; ಸಂಭ್ರಮಾಚರಣೆಗೆ ಸರ್ಕಾರದ ಸಿದ್ಧತೆ

ಆರ್ಟಿಕಲ್ 371 ಜೆ ಜಾರಿಯಾಗಿ ಹತ್ತು ವರ್ಷಗಳಾಗುತ್ತಿದ್ದು, ಇದರ ಸಂಭ್ರಮಾಚರಣೆಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಸಂಭ್ರಮಾಚರಣೆ ನೆನಪಿಗೆ 371 ಹಾಸಿಗೆಗಳನ್ನು ಒಳಗೊಂಡ ಜಯದೇವ ಆಸ್ಪತ್ರೆಯನ್ನು ಮುಂದಿನ ತಿಂಗಳು ಲೋಕಾರ್ಪಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

VISTARANEWS.COM


on

DK Shivakumar
ಕಲಬುರಗಿಯಲ್ಲಿ ಮಂಗಳವಾರ ನಡೆದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ ಶರಣ್ ಪ್ರಕಾಶ್ ಪಾಟೀಲ್, ಸಂಸದ ರಾಧಾಕೃಷ್ಣ ಮತ್ತಿತರರು ಭಾಗವಹಿಸಿದ್ದರು.
Koo

ಕಲಬುರಗಿ: ಆರ್ಟಿಕಲ್ 371 ಜೆ ಜಾರಿಯಾಗಿ ಹತ್ತು ವರ್ಷಗಳಾಗುತ್ತಿದ್ದು, ಇದರ ಸಂಭ್ರಮಾಚರಣೆಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಸಂಭ್ರಮಾಚರಣೆ ನೆನಪಿಗೆ 371 ಹಾಸಿಗೆಗಳನ್ನು ಒಳಗೊಂಡ ಜಯದೇವ ಆಸ್ಪತ್ರೆಯನ್ನು ಮುಂದಿನ ತಿಂಗಳು ಲೋಕಾರ್ಪಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು.

ಕಲಬುರಗಿಯಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿಗೆ ಅಂತಾರಾಷ್ಟೀಯ ಗುಣಮಟ್ಟದ ಇಎಸ್‌ಐ ಆಸ್ಪತ್ರೆಯನ್ನು ಮಲ್ಲಿಕಾರ್ಜುನ ಖರ್ಗೆ ಅವರು ತಂದರು. ಕಲಬುರಗಿ ರಾಜ್ಯದಲ್ಲಿ ಮೂರನೇ ಆರೋಗ್ಯ ಹಬ್ ಆಗಿ ರೂಪುಗೊಳ್ಳುತ್ತಿದೆ. ಇಂದಿರಾಗಾಂಧಿ ತಾಯಿ- ಮಕ್ಕಳ ಆಸ್ಪತ್ರೆ, ಕಿದ್ವಾಯಿ, ಜಯದೇವ ಆಸ್ಪತ್ರೆಗಳು ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿವೆ. ಇದರಿಂದ ಈ ಭಾಗದ ಜನರು ಬೆಂಗಳೂರು, ಹೈದರಾಬಾದ್‌ಗೆ ಹೋಗುವುದು ತಪ್ಪಲಿದೆ. ಸಂಭ್ರಮಾಚರಣೆ ಕಾರ್ಯಕ್ರಮದ ಬಗ್ಗೆ ವಿರೋಧ ಪಕ್ಷದ ಇಬ್ಬರು ನಾಯಕರ ಜತೆ ಚರ್ಚೆ ನಡೆಸಿ, ದಿನಾಂಕ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: CM Siddaramaiah: ಹೊಟ್ಟೆಕಿಚ್ಚಿನಿಂದಾಗಿ ಬಿಜೆಪಿಯವರಿಂದ ನನ್ನ ವಿರುದ್ಧ ಸುಳ್ಳು ಆರೋಪ; ಸಿದ್ದರಾಮಯ್ಯ

ಆರ್ಟಿಕಲ್ 371 ಜೆ ಯನ್ನು ಕಲ್ಯಾಣ ಕರ್ನಾಟಕದ ಅಭಿವೃದ್ದಿಗಾಗಿ ಮಲ್ಲಿಖಾರ್ಜುನ ಖರ್ಗೆ ಅವರು ಮುಂದಾಳತ್ವವಹಿಸಿ ಜಾರಿಗೆ ತಂದರು. ಈ ಭಾಗದಲ್ಲಿ ಶೈಕ್ಷಣಿಕ, ಔದ್ಯೋಗಿಕ ಮತ್ತು ಸಾಮಾಜಿಕ ಕ್ರಾಂತಿಗೆ ಮುನ್ನಡಿ ಬರೆದಿದೆ ಎಂದರು.

ತುಂಗಭದ್ರಾ ಗೇಟ್ ದುರಸ್ತಿ ಮಾಡಿದ ಪ್ರತಿ ಕಾರ್ಮಿಕರಿಗೂ ಗೌರವ ಸಲ್ಲಿಕೆ

70 ವರ್ಷಗಳ ಹಳೆಯ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟಿನ ಚೈನ್ ಲಿಂಕ್ ದುರಾದೃಷ್ಟವಶಾತ್ ತುಂಡಾಯಿತು. ಇದಕ್ಕೆ ಬಿಜೆಪಿ, ದಳದವರು ನಮ್ಮ ಮೇಲೆ ಗದಾಪ್ರಹಾರ ಮಾಡಿದರು. ನಾವು ಹಗಲು, ರಾತ್ರಿ ನಿದ್ದೆ ಮಾಡದೆ ಕಾರ್ಯಪ್ರವೃತ್ತರಾದೆವು. ಕೂಡಲೇ ಎಂಜಿನಿಯರ್‌ಗಳು, ತಂತ್ರಜ್ಞರನ್ನು ಕರೆಸಿ ಗೇಟನ್ನು ಮತ್ತೆ ಅಳವಡಿಸಲಾಯಿತು. ಪ್ರತಿಯೊಬ್ಬ ಕೆಲಸಗಾರನೂ ಪಣತೊಟ್ಟು ಕೆಲಸ ಮಾಡಿದ್ದಾರೆ. ಈ ಕೆಲಸಕ್ಕೆ ಶ್ರಮಿಸಿದ ಚಿಕ್ಕ ಕಾರ್ಮಿಕರು, ಎಂಜಿನಿಯರ್‌ಗಳು, ತಂತ್ರಜ್ಞರು, ಅಧಿಕಾರಿಗಳನ್ನು ಸನ್ಮಾನ ಮಾಡುವ ಕೆಲಸವನ್ನು ಸರ್ಕಾರ ಮುಂದಿನ ದಿನಗಳಲ್ಲಿ ಮಾಡುತ್ತದೆ ಎಂದು ತಿಳಿಸಿದರು.

ಅಣೆಕಟ್ಟನ್ನು ಉಳಿಸಿಕೊಂಡಿದ್ದೇ ದೊಡ್ಡ ಪವಾಡ. ಗೇಟ್ ದುರಸ್ತಿ ಮಾಡಿ ರೈತರ ಪಾಲಿನ ನೀರು ಉಳಿಸಿದಂತಾಯಿತು. ಇಡೀ ದೇಶವೇ ಏನಾಗಬಹುದು ಎಂದು ಕಾತರದಿಂದ ನೋಡುತ್ತಿತ್ತು. ನಾವು ಇದರಲ್ಲಿ ಯಶಸ್ಸು ಕಂಡಿದ್ದೇವೆ. ಅದಕ್ಕೆ ನಾನು ಪದೇ, ಪದೇ ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ ಎಂದು ಹೇಳುತ್ತಿರುತ್ತೇನೆ ಎಂದರು.

ಇದನ್ನೂ ಓದಿ: Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

ಗೇಟ್ ದುರಸ್ತಿ ಮಾಡಲು ಒಂದಷ್ಟು ನೀರನ್ನು ನದಿಗೆ ಬಿಡಬೇಕಾದ ಅನಿವಾರ್ಯತೆಯಿತ್ತು. ಈಗ ವರುಣನ ಕೃಪೆಯಿಂದ ಮಳೆ ಬರುತ್ತಿದೆ. ರೈತರ ಪಾಲಿನ ನೀರನ್ನು ಅವರಿಗೆ ಬಿಡಲಾಗುವುದು, ರೈತರನ್ನು ಉಳಿಸಿಕೊಳ್ಳುವ ಕೆಲಸ ನಾವು ಮಾಡುತ್ತೇವೆ ಎಂದು ಹೇಳಿದರು.

Continue Reading

ಕಲಬುರಗಿ

DK Shivakumar: ಸಿದ್ದರಾಮಯ್ಯ ಅವರದು ಹೆದರುವ ರಕ್ತವಲ್ಲ ಎಂದ ಡಿ.ಕೆ.ಶಿವಕುಮಾರ್!

ಮುಡಾ ಹಗರಣದ ತನಿಖೆಗೆ ಮುಖ್ಯಮಂತ್ರಿಗಳೇ ನ್ಯಾಯಾಂಗ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಿದ್ದಾರೆ. ನಲವತ್ತು ವರ್ಷ ರಾಜಕಾರಣ ಮಾಡಿಕೊಂಡು ಬಂದಿರುವ ಅವರು ಹೆದರುವವರಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ ಎಂದು ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar), ಸಿಎಂ ಅವರ ತಪ್ಪು ಇಲ್ಲದಿರುವ ಕಾರಣಕ್ಕೆ ಹೈಕೋರ್ಟ್ ಪ್ರಾಸಿಕ್ಯೂಷನ್‌ಗೆ ತಡೆ ನೀಡಿದೆ. ಈ ಹಿಂದೆ ರಚನೆ ಮಾಡಿರುವ ಆಯೋಗದಂತೆ ನ್ಯಾಯಾಂಗ ತನಿಖೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

DK Shivakumar
Koo

ಕಲಬುರಗಿ: ಮುಡಾ ಹಗರಣದ ತನಿಖೆಗೆ ಮುಖ್ಯಮಂತ್ರಿಗಳೇ ನ್ಯಾಯಾಂಗ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಿದ್ದಾರೆ. ನಲವತ್ತು ವರ್ಷ ರಾಜಕಾರಣ ಮಾಡಿಕೊಂಡು ಬಂದಿರುವ ಅವರು ಹೆದರುವವರಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು.

ಕಲಬುರಗಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಪ್ಪು ಮಾಡದಿದ್ದರೇ ಸಿಎಂ ಏಕೆ ಹೆದರಬೇಕು ಎನ್ನುವ ಜಗದೀಶ್ ಶೆಟ್ಟರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಯಾರು ಹೆದರಿದ್ದಾರೆ. ಶೆಟ್ಟರ್ ಅವರಿಗೆ ಹೆದರಿಕೆ ಇರಬೇಕು. ನಾವು ಈ ನೆಲದ ಕಾನೂನಿಗೆ ಗೌರವ ನೀಡುತ್ತೇವೆ. ಸಿಎಂ ಅವರ ತಪ್ಪು ಇಲ್ಲದಿರುವ ಕಾರಣಕ್ಕೆ ಹೈಕೋರ್ಟ್ ಪ್ರಾಸಿಕ್ಯೂಷನ್‌ಗೆ ತಡೆ ನೀಡಿದೆ. ಈ ಹಿಂದೆ ರಚನೆ ಮಾಡಿರುವ ಆಯೋಗದಂತೆ ನ್ಯಾಯಾಂಗ ತನಿಖೆ ನಡೆಯಲಿದೆ ಎಂದು ತಿಳಿಸಿದರು.

ಐದು ವರ್ಷವೂ ಸಿದ್ದರಾಮಯ್ಯ ಐದು ವರ್ಷದ ಅವಧಿ ಪೂರ್ಣಗೊಳಿಸುತ್ತಾರೆಯೇ ಎಂದು ಪ್ರಶ್ನಿಸಿದಾಗ “ನಮ್ಮ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ 10 ವರ್ಷಗಳ ಕಾಲ ಅಧಿಕಾರದಲ್ಲಿ ಇರುತ್ತದೆ” ಎಂದರು.

ಇದನ್ನೂ ಓದಿ: CM Siddaramaiah: ಹೊಟ್ಟೆಕಿಚ್ಚಿನಿಂದಾಗಿ ಬಿಜೆಪಿಯವರಿಂದ ನನ್ನ ವಿರುದ್ಧ ಸುಳ್ಳು ಆರೋಪ; ಸಿದ್ದರಾಮಯ್ಯ

ರಾಜ್ಯಪಾಲರು ದಲಿತ ಎನ್ನುವ ಕಾರಣಕ್ಕೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಕೇಳಿದಾಗ “ಅವರನ್ನು ರಾಜ್ಯಪಾಲರ ಹುದ್ದೆಗೆ ಕೂರಿಸಿರುವುದು ಸಂವಿಧಾನವೇ ಹೊರತು ಜಾತಿಯಲ್ಲ” ಎಂದು ತಿಳಿಸಿದರು.

ರಾಜ್ಯಪಾಲರನ್ನು ನಿಂದಿಸಿದವರ ಮೇಲೆ ಪೊಲೀಸರು ಸ್ವಯಂಪ್ರೇರಿತರಾಗಿ ಎಸ್‌ಸಿ, ಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎನ್ನುವ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ಕಲಬುರ್ಗಿಯಲ್ಲಿ ನಿರ್ಮಾಣವಾಗಿರುವ ಹೊಸ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಬಂದು ಸೇರಿಸಲು ಹೇಳಿ ಎಂದು ಹೇಳಿದರು.

2011 ರಲ್ಲಿ ಯಡಿಯೂರಪ್ಪ ಅವರನ್ನು ಜೈಲಿಗೆ ಹಾಕಿಸಲಾಯಿತು ಈಗ ಅದೇ ಸನ್ನಿವೇಶ ಸೃಷ್ಟಿಯಾಗಿದೆ ಎನ್ನುವ ಬಿಜೆಪಿ ಸಾಮಾಜಿಕ ಜಾಲತಾಣದ ಪೋಸ್ಟಿನ ಬಗ್ಗೆ ಕೇಳಿದಾಗ “ಅವರನ್ನು ಜೈಲಿಗೆ ಹಾಕಿಸಿದ್ದು ಕಾಂಗ್ರೆಸ್ ಅಲ್ಲ. ಇದೇ ದೇವೇಗೌಡರು, ಕುಮಾರಸ್ವಾಮಿ ನಾವಲ್ಲ” ಎಂದು ಹೇಳಿದರು.

ಕುಮಾರಸ್ವಾಮಿ ಅವರ ವಿರುದ್ದ Kannada Newsಲೋಕಾಯುಕ್ತ ದೋಷಾರೋಪ ಪಟ್ಟಿ ಸಲ್ಲಿಕೆಗೆ ರಾಜ್ಯಪಾಲರ ಅನುಮತಿ ಕೇಳಿರುವ ವಿಚಾರದ ಬಗ್ಗೆ ಪ್ರಶ್ನಿಸಿದಾಗ, ಇದರ ಬಗ್ಗೆ ನನಗೆ ಮಾಹಿತಿಯಿಲ್ಲ. ಸ್ವತಃ ನನ್ನ ಕಣ್ಣಿನಿಂದ ನೋಡಬೇಕು. ಯಾವುದಾದರೂ ದಾಖಲೆ ಇದ್ದರೆ ನೀಡಿ. ನಾನು (ಮಾಧ್ಯಮದವರನ್ನು) ನಿಮ್ಮನ್ನು ಆಶ್ರಯಿಸಲು ಆಗುವುದಿಲ್ಲ ಎಂದರು.

ಸಿಎಂ ದೆಹಲಿ ಭೇಟಿಯ ಬಗ್ಗೆ ಕೇಳಿದಾಗ “ಹೈಕಮಾಂಡಿಗೆ ವಾಸ್ತವಾಂಶ ತಿಳಿಸಬೇಕು ಎಂದು ಇಬ್ಬರೂ ಮಾತನಾಡಿಕೊಂಡಿದ್ದೆವು. ಅದಕ್ಕೆ ದೆಹಲಿಗೆ ಇಬ್ಬರೂ ತೆರಳೋಣ ಎಂದು ಮಾತುಕತೆ ನಡೆಸಿದ್ದೇವೆ” ಎಂದರು.

ಇದನ್ನೂ ಓದಿ: Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

ಬಿಜೆಪಿ ಹೊರತಾದ ಪಕ್ಷಗಳು ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪದ ವಿರುದ್ದ ಹೋರಾಟ ರೂಪಿಸಲು ಎಲ್ಲರನ್ನು ಒಗ್ಗೂಡಿಸಲು ದೆಹಲಿಗೆ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ ಎಂದಾಗ, ಮಾಧ್ಯಮಗಳಲ್ಲಿಯೇ ಎಲ್ಲವೂ ಬರುತ್ತಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಎಲ್ಲೆಲ್ಲಿ ಏನಾಗುತ್ತಿದೆ ಎಂಬುದು ನೀವು (ಮಾಧ್ಯಮಗಳು) ನೋಡಿದಲ್ಲವೇ? ಎಂದು ಮರು ಪ್ರಶ್ನಿಸಿದರು.

ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಬೆಂಬಲಿಸಬೇಕು ಎನ್ನುವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ, ಇಡೀ ಪಕ್ಷ, ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್ ಗಾಂಧಿ ಅವರು ಎಲ್ಲಾ ನಾಯಕರು ಅವರ ಪರವಾಗಿ ನಿಂತಿದ್ದೇವೆ ಎಂದರು.

ಇದನ್ನೂ ಓದಿ: Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ಎಲ್ಲಿಗೆ ತಲುಪಲಿದೆ ಎಂಬ ಪ್ರಶ್ನಿಸಿದಾಗ, ನಮ್ಮ ಮುಖ್ಯಮಂತ್ರಿಗಳು ತಪ್ಪು ಮಾಡಿಲ್ಲ. ಎಲ್ಲಿ ನ್ಯಾಯ ಇದೆಯೋ ಅದಕ್ಕೆ ಜಯ ದೊರಕಲಿದೆ. ಮುಡಾದವರು ಸಿಎಂ ಪತ್ನಿ ಅವರ ಜಮೀನು ಆಕ್ರಮಿಸಿಕೊಂಡರು, ಅದಕ್ಕೆ ಅವರು ಪರಿಹಾರ ಪಡೆದರು. ಪರಿಹಾರ ನೀಡಿ ಎಂದು ಸಿದ್ದರಾಮಯ್ಯ ಅವರು ಪತ್ರ ಬರೆದಿಲ್ಲ ಹಾಗೂ ಇವರ ಕಾಲದಲ್ಲಿ ಇದು ನಡೆದಿಲ್ಲ. ಬಿಜೆಪಿಯವರ ಕಾಲದಲ್ಲಿಯೇ ಸೈಟುಗಳ ಹಂಚಿಕೆಯಾಗಿದೆ ಎಂದರು.

Continue Reading

ಸಿನಿಮಾ

Naga Chaitanya Sobhita Dhulipala: ನಾಗ ಚೈತನ್ಯ, ಶೋಭಿತಾ ಧೂಳಿಪಾಲ ನಿಶ್ಚಿತಾರ್ಥದಿಂದ ಅಕ್ಕಿನೇನಿ- ದಗ್ಗುಬಾಟಿ ಕುಟುಂಬದಲ್ಲಿ ಬಿರುಕು?

ನಾಗ ಚೈತನ್ಯ ಮತ್ತು ಶೋಭಿತಾ (Naga Chaitanya Sobhita Dhulipala) ಅವರ ವಿವಾಹ ನಿಶ್ಚಿತಾರ್ಥದ ಸುದ್ದಿಯ ಮಧ್ಯೆ ಈಗ ಟಾಲಿವುಡ್ ಸ್ಟಾರ್ ನಾಗಾರ್ಜುನ ಅವರ ವಯಕ್ತಿಕ ಜೀವನವೂ ಹೆಚ್ಚು ಚರ್ಚೆಗೆ ಬಂದಿದೆ. ಶೋಭಿತಾ ಅವರನ್ನು ಕುಟುಂಬಕ್ಕೆ ಸ್ವಾಗತಿಸುವುದಾಗಿ ನಾಗಾರ್ಜುನ ಅವರು ಇತ್ತೀಚಿಗೆ ದೃಢಪಡಿಸಿದ್ದರು. ಆದರೆ ನಾಗ ಚೈತನ್ಯ ಅವರ ತಾಯಿಯ ಮನೆಯವರು ನಿಶ್ಚಿತಾರ್ಥದಿಂದ ದೂರ ಉಳಿದಿದ್ದಾರೆ. ಇದಕ್ಕೆ ಕಾರಣವೇನು ಎನ್ನುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

VISTARANEWS.COM


on

By

Naga Chaitanya Sobhita Dhulipala
Koo

ದಕ್ಷಿಣ ಭಾರತ ಸಿನಿಮಾ ರಂಗದಲ್ಲಿ ಟಾಲಿವುಡ್ ಸ್ಟಾರ್ (Tollywood star) ನಾಗಾರ್ಜುನ (Nagarjuna) ಅವರ ಮಗ ನಾಗ ಚೈತನ್ಯ (Naga Chaitanya Sobhita Dhulipala) ಅವರ ವಿವಾಹ ನಿಶ್ಚಿತಾರ್ಥದ (Engagement ) ಸುದ್ದಿಯೇ ಹೆಚ್ಚು ಚರ್ಚೆಯಲ್ಲಿದೆ. ನಟಿ ಸಮಂತಾ (Samantha) ಅವರೊಂದಿಗಿನ ವಿಚ್ಛೇದನದ ಬಳಿಕ ನಾಗ ಚೈತನ್ಯ ಮತ್ತು ಅವರ ಕುಟುಂಬದ ಕುರಿತು ಅನೇಕ ಸಂಗತಿಗಳು ಅವರ ಅಭಿಮಾನಿಗಳಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಅವರು ಆಗಸ್ಟ್ 8ರಂದು ಹೈದರಾಬಾದ್‌ನಲ್ಲಿ ಸಾಂಪ್ರದಾಯಿಕ ಸಮಾರಂಭದ ಮೂಲಕ ವಿವಾಹ ನಿಶ್ಚಿತಾರ್ಥ ಮಾಡಿಕೊಂಡರು. 2022ರಲ್ಲಿ ಯುರೋಪ್ ಪ್ರವಾಸದ ವೇಳೆ ಒಟ್ಟಿಗೆ ಕಾಣಿಸಿಕೊಂಡ ಬಳಿಕ ನಾಗ ಚೈತನ್ಯ ಮತ್ತು ಶೋಭಿತಾ ಡೇಟಿಂಗ್ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿತ್ತು.

ಇವರ ವಿವಾಹ ನಿಶ್ಚಿತಾರ್ಥದ ಸುದ್ದಿಯ ಮಧ್ಯೆ ಈಗ ಟಾಲಿವುಡ್ ಸ್ಟಾರ್ ನಾಗಾರ್ಜುನ ಅವರ ವಯಕ್ತಿಕ ಜೀವನವೂ ಹೆಚ್ಚು ಚರ್ಚೆಗೆ ಬಂದಿದೆ. ಶೋಭಿತಾ ಅವರನ್ನು ಕುಟುಂಬಕ್ಕೆ ಸ್ವಾಗತಿಸುವುದಾಗಿ ನಾಗಾರ್ಜುನ ಅವರು ಇತ್ತೀಚಿಗೆ ದೃಢಪಡಿಸಿದ್ದರು. ನಾಗಾರ್ಜುನ ದಂಪತಿ ನಡುವೆ ಎಲ್ಲವೂ ಸರಿಯಾಗಿದೆ ಎಂದು ತೋರುತ್ತಿರುವಾಗ ಅವರ ಮೊದಲ ಪತ್ನಿ ಲಕ್ಷ್ಮಿ ದಗ್ಗುಬಾಟಿ ಅವರೊಂದಿಗೆ ನಾಗಾರ್ಜುನ ಅವರ ಸಂಪರ್ಕದ ಕುರಿತು ಚರ್ಚೆಯಾಗುತ್ತಿದೆ. ದಗ್ಗುಬಾಟಿ ಕುಟುಂಬವು ಶೋಭಿತಾ ಅವರನ್ನು ಇನ್‌ಸ್ಟಾಗ್ರಾಮ್ ನಲ್ಲಿ ಅನುಸರಿಸುತ್ತಿಲ್ಲ ಎಂಬುದನ್ನು ನೆಟ್ಟಿಗರು ಇತ್ತೀಚೆಗೆ ಪತ್ತೆ ಹಚ್ಚಿದ್ದಾರೆ. ಲಕ್ಷ್ಮಿ ಮತ್ತು ನಾಗಾರ್ಜುನ ಅವರ ಮಗ ನಾಗ ಚೈತನ್ಯ.


ವೆಂಕಟೇಶ್ ದಗ್ಗುಬಾಟಿ, ರಾಣಾ ದಗ್ಗುಬಾಟಿ, ಅವರ ಸಹೋದರಿ ಮಾಳವಿಕಾ ದಗ್ಗುಬಾಟಿ ಮತ್ತು ಆಶ್ರಿತಾ ದಗ್ಗುಬಾಟಿ ಅವರು ಶೋಭಿತಾ ಧೂಳಿಪಾಲ ಅವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅನುಸರಿಸುತ್ತಿಲ್ಲ ಎಂದು ಸೂಚಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ ವೊಂದು ಈಗ ಸುದ್ದಿ ಮಾಡಿದೆ. ಆದರೆ ನಾಗ ಚೈತನ್ಯ ಅವರ ಮಾಜಿ ಪತ್ನಿ ಸಮಂತಾ ರೂತ್ ಪ್ರಭು ಅವರನ್ನು ಅನುಸರಿಸುತ್ತಿದ್ದಾರೆ. ಚೈತನ್ಯ ಈ ಹಿಂದೆ 2017ರಿಂದ 2021ರವರೆಗೆ ನಟ ಸಮಂತಾ ಅವರ ಜತೆಗಿದ್ದರು. ಶೋಭಿತಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವ ಚೈತನ್ಯ ಅವರ ನಿರ್ಧಾರವನ್ನು ದಗ್ಗುಬಾಟಿ ಅವರನ್ನು ಕುಟುಂಬಕ್ಕೆ ಇಷ್ಟವಾಗದಿರಬಹುದು ಎನ್ನುವ ವದಂತಿಗಳು ಹುಟ್ಟಿಕೊಂಡಿವೆ.


ದಗ್ಗುಬಾಟಿ ಕುಟುಂಬ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಅವರ ನಿಶ್ಚಿತಾರ್ಥ ಸಮಾರಂಭದಲ್ಲೂ ಪಾಲ್ಗೊಂಡಿರಲಿಲ್ಲ. ಈ ವೇಳೆ ಅವರು ತಾಯಿ ಲಕ್ಷ್ಮಿ ಅವರ ಎರಡನೇ ಪತಿ ಶರತ್ ವಿಜಯರಾಘವನ್ ಅವರೊಂದಿಗೆ ಹಬ್ಬಗಳಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Viral Video: ಐಷಾರಾಮಿ ಟೊಯೋಟಾ ಲೆಕ್ಸಸ್ ಕಾರು ಖರೀದಿಸಿದ ಜಾನ್ವಿ ಕಪೂರ್! ಇದರ ದರ ಎಷ್ಟು?

ಚೈತನ್ಯ ಅವರ ನಿಶ್ಚಿತಾರ್ಥದಲ್ಲಿ ರಾಣಾ ದಗ್ಗುಬಾಟಿ ಮತ್ತು ಅವರ ಸಹೋದರಿಯರು ಕಾಣಿಸಿಕೊಳ್ಳದೇ ಇರುವುದನ್ನು ನೆಟಿಜನ್‌ಗಳು ಈ ಹಿಂದೆ ಗಮನಿಸಿದ್ದರು. ಅಕ್ಕಿನೇನಿ ಮತ್ತು ದಗ್ಗುಬಾಟಿ ಕುಟುಂಬದಲ್ಲಿ ಹೇಳಲಾದ ಭಿನ್ನಾಭಿಪ್ರಾಯದ ಬಗ್ಗೆ ವದಂತಿಗಳು ಬಳಿಕ ಹುಟ್ಟಿಕೊಂಡಿತ್ತು. ಇದಕ್ಕೆ ಈವರೆಗೆ ಯಾರೂ ಸ್ಪಷ್ಟನೆಯನ್ನು ನೀಡಿಲ್ಲ.

Continue Reading

Latest

Viral Video: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಬಿದ್ದ; ಹೆಡ್ ಕಾನ್‌ಸ್ಟೇಬಲ್‌ ಹೀರೋನಂತೆ ಜೀವ ರಕ್ಷಿಸಿದ!

ಪ್ರಯಾಣಿಕನೊಬ್ಬ (Viral Video) ಚಲಿಸುತ್ತಿದ್ದ ರೈಲನ್ನು ಹತ್ತುವ ಪ್ರಯತ್ನದಲ್ಲಿ ಪ್ಲಾಟ್‌ಪಾರ್ಮ್‌ ಮತ್ತು ರೈಲಿನ ನಡುವೆ ಬಿದ್ದಿದ್ದಾನೆ. ಇನ್ನೇನು ಆತ ರೈಲಿನ ಚಕ್ರಕ್ಕೆ ಸಿಲುಕುವ ವೇಳೆ ಇದನ್ನು ನೋಡುತ್ತಿದ್ದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್‌) ಅಧಿಕಾರಿಯೊಬ್ಬರು ಆ ವ್ಯಕ್ತಿಯ ಕಡೆಗೆ ಓಡಿ ಹೊರಗೆಳೆದಿದ್ದಾರೆ. ಹೆಡ್ ಕಾನ್‌ಸ್ಟೇಬಲ್‌ ತಕ್ಷಣದ ಆಲೋಚನೆಯು ಆ ವ್ಯಕ್ತಿಯ ಜೀವವನ್ನು ಉಳಿಸಿತು. ಈ ಘಟನೆ ಪ್ಲಾಟ್‌ಫಾರ್ಮ್‌ನಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo


ಮಂಗಳೂರು: ಪ್ರಯಾಣಿಕರು ಬರುವುದು ಸ್ವಲ್ಪ ತಡವಾದಾಗ ಅವರು ಗಡಿಬಿಡಿಯಲ್ಲಿ ಮುಂದಿನ ಅಪಾಯವನ್ನು ಗಮನಕ್ಕೆ ತೆಗೆದುಕೊಳ್ಳದೇ ಚಲಿಸುತ್ತಿದ್ದ ರೈಲನ್ನೇ ಕೆಲವೊಮ್ಮೆ ಹತ್ತಿ ಬಿಡುತ್ತಾರೆ. ಆದರೆ ಇದು ತುಂಬಾ ಅಪಾಯಕಾರಿ. ಇದರಿಂದ ಜೀವ ಕಳೆದುಕೊಳ್ಳುವುದು ಮಾತ್ರವಲ್ಲ ತಮ್ಮ ದೇಹದ ಅಂಗಗಳನ್ನು ಕಳೆದುಕೊಂಡವರು ಹಲವರಿದ್ದಾರೆ. ಇದೀಗ ಅಂತಹದೊಂದು ಘಟನೆ ಮಂಗಳೂರು ಜಂಕ್ಷನ್ ನಿಲ್ದಾಣದ ಪ್ಲಾಟ್‍ಫಾರ್ಮ್ ನಂ.1ರಲ್ಲಿ ನಡೆದಿದ್ದು, ಆದರೆ ಹೆಡ್ ಕಾನ್ಸ್ಟೇಬಲ್ ಅವರ ತಕ್ಷಣದ ಕ್ರಮದಿಂದ ಆತ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ವಿಡಿಯೊದಲ್ಲಿ ಪ್ರಯಾಣಿಕನೊಬ್ಬ ತನ್ನ ಬೆನ್ನಿನ ಮೇಲೆ ಟೂರಿಸ್ಟ್ ಬ್ಯಾಗ್ ಹಿಡಿದುಕೊಂಡು ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ರಯತ್ನಿಸಿದ್ದಾನೆ. ಚಲಿಸುವ ರೈಲನ್ನು ಹತ್ತುವ ಪ್ರಯತ್ನದಲ್ಲಿ, ಆ ವ್ಯಕ್ತಿ ಪ್ಲಾಟ್‍ಫಾರ್ಮ್‍ ಮತ್ತು ರೈಲಿನ ನಡುವೆ ಬಿದ್ದಿದ್ದಾನೆ. ಇನ್ನೇನು ಆತ ರೈಲಿನ ಚಕ್ರಕ್ಕೆ ಸಿಲುಕುವ ವೇಳೆ ಇದನ್ನು ನೋಡುತ್ತಿದ್ದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್‌) ಅಧಿಕಾರಿಯೊಬ್ಬರು ಅವರ ಕಡೆಗೆ ಓಡಿ ಅವರನ್ನು ಹೊರಗೆಳೆದರು. ಹೆಡ್ ಕಾನ್ಸ್ಟೇಬಲ್‍ನ ತಕ್ಷಣದ ಆಲೋಚನೆಯು ಆ ವ್ಯಕ್ತಿಯ ಜೀವವನ್ನು ಉಳಿಸಿತು. ಈ ಘಟನೆ ಪ್ಲಾಟ್‍ಫಾರ್ಮ್‍ನಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ವರದಿ ಪ್ರಕಾರ ಈ ಘಟನೆ 11:35 ಕ್ಕೆ ಸಂಭವಿಸಿದ್ದು, ಚಲಿಸುವ ರೈಲನ್ನು ಹತ್ತಲು ಪ್ರಯತ್ನಿಸುತ್ತಿದ್ದ ವ್ಯಕ್ತಿ ಹೆಸರು ಸಸಾಂಗ್ ಎಂಬುದಾಗಿ ತಿಳಿದುಬಂದಿದೆ. ಆ ವೇಳೆ ಈತ ತನ್ನ ಸಮತೋಲನವನ್ನು ಕಳೆದುಕೊಂಡು ರೈಲು ಮತ್ತು ಪ್ಲಾಟ್‍ಫಾರ್ಮ್ ನಡುವೆ ಬಿದ್ದಿದ್ದಾನೆ. ಆ ಸಮಯದಲ್ಲಿ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೇಬಲ್‍ ಎಂ ರಾಘವನ್ ತಕ್ಷಣ ಅವರನ್ನು ಮೇಲಕ್ಕೆ ಎತ್ತಿದ್ದಾರೆ.

ಇದನ್ನೂ ಓದಿ:ಮಗನನ್ನು ಕೊಲ್ಲಲು ಕತ್ತಿ ಬೀಸಿದ ದುಷ್ಕರ್ಮಿಗಳನ್ನು ಕಲ್ಲೆಸೆದು ಓಡಿಸಿದ ತಾಯಿ! ವಿಡಿಯೊ ನೋಡಿ

ಮಂಗಳೂರು ಜಂಕ್ಷನ್‍ನಲ್ಲಿ ಬೀಡುಬಿಟ್ಟಿರುವ ರೈಲ್ವೆ ಸಂರಕ್ಷಣಾ ಪಡೆಯ ಸದಸ್ಯ ಎಂ. ರಾಘವನ್ ಅವರ ಈ ಜೀವ ಉಳಿಸುವ ಕಾರ್ಯವು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ರೈಲ್ವೆ ಸಿಬ್ಬಂದಿ ವಹಿಸುವ ನಿರ್ಣಾಯಕ ಪಾತ್ರವನ್ನು ನೆನಪಿಸುತ್ತದೆ. ಹಾಗೇ ಹೆಡ್ ಕಾನ್ಸ್ಟೇಬಲ್‍ ಕಾರ್ಯಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Continue Reading
Advertisement
ವೈರಲ್ ನ್ಯೂಸ್4 mins ago

Road Rage Incident: ಒಳಗೆ ಮಗು ಇದೆ ಅಂದ್ರೂ ಬಿಡದ ಕಿಡಿಗೇಡಿ; ಕಾರಿನ ಗ್ಲಾಸ್‌ ಒಡೆದು ದಾಂಧಲೆ!

Fashion Show news
ಫ್ಯಾಷನ್16 mins ago

Fashion Show news: ವೈವಿಧ್ಯಮಯ ವಜ್ರಾಭರಣ ಧರಿಸಿ ಫ್ಯಾಷನ್‌ ಶೋನಲ್ಲಿ ಮಿಂಚಿದ ರೂಪದರ್ಶಿಯರು

Manu Bhaker Dance
ಕ್ರೀಡೆ23 mins ago

Manu Bhaker Dance: ‘ಕಾಲಾ ಚಷ್ಮಾ’ ಹಾಡಿಗೆ ವಿದ್ಯಾರ್ಥಿಗಳ ಜತೆ ಹೆಜ್ಜೆ ಹಾಕಿದ ಒಲಿಂಪಿಯನ್​ ಮನು ಭಾಕರ್​

KEA
ಕರ್ನಾಟಕ37 mins ago

KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

badlapur tension vistara explainer
EXPLAINER59 mins ago

Vistara Explainer: ಪುಟ್ಟ ಹೆಣ್ಣುಮಕ್ಕಳ ಮೇಲೆ ಕಾಮುಕ ಅಟೆಂಡರ್‌ನಿಂದ ಅತ್ಯಾಚಾರದ ಬಳಿಕ ಬದ್ಲಾಪುರ ಉದ್ವಿಗ್ನ; ಏನಾಗ್ತಿದೆ ಅಲ್ಲಿ?

DK Shivakumar
ಕಲಬುರಗಿ1 hour ago

DK Shivakumar: ಆರ್ಟಿಕಲ್ 371 ಜೆ ಜಾರಿಗೆ 10 ವರ್ಷ; ಸಂಭ್ರಮಾಚರಣೆಗೆ ಸರ್ಕಾರದ ಸಿದ್ಧತೆ

DK Shivakumar
ಕಲಬುರಗಿ1 hour ago

DK Shivakumar: ಸಿದ್ದರಾಮಯ್ಯ ಅವರದು ಹೆದರುವ ರಕ್ತವಲ್ಲ ಎಂದ ಡಿ.ಕೆ.ಶಿವಕುಮಾರ್!

Congress Protest
ಕರ್ನಾಟಕ1 hour ago

Congress Protest: ಪ್ರಧಾನಿ, ಗವರ್ನರ್‌ಗೆ ಬೆದರಿಕೆ; ಐವನ್ ಡಿಸೋಜಾ, ಜಮೀರ್‌, ರಕ್ಷಿತ್ ಶಿವರಾಮ್ ವಿರುದ್ಧ ದೂರು

Mosquitoes Bite
ಆರೋಗ್ಯ1 hour ago

World Mosquito Day: ಸೊಳ್ಳೆಗಳಿಗೂ ಒಂದು ದಿನ! ಇವುಗಳ ಕುರಿತ 7 ಸುಳ್ಳುಗಳಿಗೆ ಇಲ್ಲಿದೆ ಉತ್ತರ!

Naga Chaitanya Sobhita Dhulipala
ಸಿನಿಮಾ1 hour ago

Naga Chaitanya Sobhita Dhulipala: ನಾಗ ಚೈತನ್ಯ, ಶೋಭಿತಾ ಧೂಳಿಪಾಲ ನಿಶ್ಚಿತಾರ್ಥದಿಂದ ಅಕ್ಕಿನೇನಿ- ದಗ್ಗುಬಾಟಿ ಕುಟುಂಬದಲ್ಲಿ ಬಿರುಕು?

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌