Self Harming: ಹೀಲಿಯಂ ಗ್ಯಾಸ್‌ ಬಳಸಿ ಟೆಕ್ಕಿ ಆತ್ಮಹತ್ಯೆ - Vistara News

ಕ್ರೈಂ

Self Harming: ಹೀಲಿಯಂ ಗ್ಯಾಸ್‌ ಬಳಸಿ ಟೆಕ್ಕಿ ಆತ್ಮಹತ್ಯೆ

Self Harming: ಪೀಣ್ಯದಲ್ಲಿ ಹೀಲಿಯಂ ಗ್ಯಾಸ್ ಖರೀದಿ ಮಾಡಿ ಲಾಡ್ಜ್‌ಗೆ ತಂದಿದ್ದಾನೆ. ಕಳೆದ ರಾತ್ರಿ ಲಾಡ್ಜ್‌ನ ಕೋಣೆಯಲ್ಲಿ ಪ್ಲಾಸ್ಟಿಕ್ ಕವರ್‌ಗೆ ಹೀಲಿಯಂ ಗ್ಯಾಸ್ ತುಂಬಿಸಿದ್ದಾನೆ. ಕವರ್ ಮೂಲಕ ಹೀಲಿಯಂ ಗ್ಯಾಸ್ ಇನ್‌ಹೇಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

self harming helium
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯಲ್ಲಿ (Bangalore news) 22 ವರ್ಷದ ಟೆಕ್ಕಿಯೊಬ್ಬ (techie) ಹೀಲಿಯಂ ಗ್ಯಾಸ್‌ (Helium Gas) ಬಳಸಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಪ್ರತಿಷ್ಟಿತ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿಯಾಗಿರುವ ಈತ, ಬಲೂನ್‌ಗೆ ತುಂಬಲು ಬಳಸುವ ಹೀಲಿಯಂ ಗ್ಯಾಸ್ ಮೂಲಕ ಜೀವ ತೆಗೆದುಕೊಂಡಿದ್ದಾನೆ.

ಹಾಸನ ಜಿಲ್ಲೆ ಸಕಲೇಶಪುರ ಮೂಲದ 22 ವರ್ಷದ ಯಾಜ್ಙಿಕ್ ಮೃತಪಟ್ಟ ಟೆಕ್ಕಿ. ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಘಟನೆ ನಡೆದಿದೆ. ಕಳೆದ ಕೆಲವು ತಿಂಗಳುಗಳಿಂದ ವರ್ಕ್ ಫ್ರಂ ಹೋಂನಲ್ಲಿದ್ದ ಟೆಕ್ಕಿ ಯಾಜ್ಙಿಕ್, ಎಂಟೆಕ್ ಎಕ್ಸಾಂ ಬರೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದ ಹೋಟೆಲ್‌ನಲ್ಲಿ ಆಗಸ್ಟ್ 16ರಂದು ರೂಂ ಬುಕ್ ಮಾಡಿದ್ದ. ನಿನ್ನೆ ದೊಡ್ಡ ಬ್ಯಾಗ್ ತೆಗೆದುಕೊಂಡು ಪೀಣ್ಯ ಕಡೆ ತೆರಳಿದ್ದಾನೆ.

ಪೀಣ್ಯದಲ್ಲಿ ಹೀಲಿಯಂ ಗ್ಯಾಸ್ ಖರೀದಿ ಮಾಡಿ ಲಾಡ್ಜ್‌ಗೆ ತಂದಿದ್ದಾನೆ. ಕಳೆದ ರಾತ್ರಿ ಲಾಡ್ಜ್‌ನ ಕೋಣೆಯಲ್ಲಿ ಪ್ಲಾಸ್ಟಿಕ್ ಕವರ್‌ಗೆ ಹೀಲಿಯಂ ಗ್ಯಾಸ್ ತುಂಬಿಸಿದ್ದಾನೆ. ಕವರ್ ಮೂಲಕ ಹೀಲಿಯಂ ಗ್ಯಾಸ್ ಇನ್‌ಹೇಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಯಾಜ್ಙಿಕ್ ಮೃತದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಮತ್ತೆ ರೋಡ್‌ ರೇಜ್‌, ಕಾರಿನ ಮೇಲೆ ಕಲ್ಲು ಎತ್ತಿಹಾಕಿದ ಭೂಪ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದಲ್ಲ ಎರಡಲ್ಲ ಹತ್ತಾರು ಕಡೆಗಳಲ್ಲಿ ರೋಡ್ ರೇಜ್ ಪ್ರಕರಣಗಳು ನಡೆಯುತ್ತಲೇ ಇವೆ. ಸದ್ಯ ಕಿಡಿಗೇಡಿಯೊಬ್ಬ ಕಾರಿನ ಗ್ಲಾಸ್ ಮೇಲೆ ಕಲ್ಲು ಎತ್ತು ಹಾಕಿ ಅಟ್ಟಹಾಸ (Assault Caseಮೆರೆದಿದ್ದಾನೆ. ಬೆಂಗಳೂರಿನ ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನೆಹಳ್ಳಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಎಕ್ಸ್‌ನಲ್ಲಿ ವಿಡಿಯೋ ಶೇರ್ ಮಾಡಲಾಗಿದೆ. ಸರ್ಜಾಪುರ ರಸ್ತೆಯ ದೊಡ್ಡಕನ್ನಲಿ ಬಳಿ ನಿನ್ನೆ ಸೋಮವಾರ ರಾತ್ರಿ‌ 10.30ರ ಸುಮಾರಿಗೆ ಘಟನೆ ನಡೆದಿದೆ. ಕಾರು ಅಡ್ಡಗಟ್ಟಿ ಗುಂಡಾ ವರ್ತನೆ ತೋರಿದ ಬೈಕ್ ಸವಾರನೊಬ್ಬ, ಕಾರಿನ ವೈಪರ್ ಕಿತ್ತು ಮುಂಭಾಗದ ಗಾಜಿಗೆ ಕಲ್ಲುಎತ್ತಿಹಾಕಿ ಹೊಡೆದು ಹಾಕಿದ್ದಾನೆ.

ಇತ್ತ ವ್ಯಕ್ತಿಯ ದೌರ್ಜನ್ಯ ಕಂಡು ಕಾರೊಳಗೆ ಇದ್ದ ಮಹಿಳೆ ಮತ್ತು ಮಗು ಕಿರುಚಾಡಿದ್ದಾರೆ. ಅಲ್ಲದೇ ಬೈಕ್ ಸವಾರನ ಗುಂಡಾ ವರ್ತನೆ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಇದೇ ವೇಳೆ ಸ್ಥಳೀಯರು ದರ್ಪ ತೋರುತ್ತಿದ್ದ ವ್ಯಕ್ತಿಯನ್ನು ತಡೆದು ನಿಲ್ಲಿಸಿ, ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬೈಕ್ ಸವಾರನನ್ನು ಬೆಳ್ಳಂದೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಅಸಲಿ ಕಾರಣ ಏನು ಎಂಬುದರ ಬಗ್ಗೆ ಇಬ್ಬರಿಂದ ಮಾಹಿತಿ ಪಡೆಯುತ್ತಿದ್ದಾರೆ.

ಕಾರು ಅಡ್ಡಗಟ್ಟಿ ಗಲಾಟೆ

ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣವು ಮುಂದುವರಿದಿದ್ದು, ಬೈಕ್‌ನಲ್ಲಿ ಬಂದವರು ಕಾರನ್ನು ಚೇಸ್ ಮಾಡಿ ಅಡ್ಡಗಟ್ಟಿ ಗಲಾಟೆ‌ ಮಾಡಿದ್ದಾರೆ. ಜಿತಿನ್ ರಾಜ್ ಎಂಬುವವರು ತಮ್ಮ ಕಾರಲ್ಲಿ ಗೆಳೆಯನ ಜತೆ ಇಂದಿರಾನಗರದ ಗೆಳೆಯನ ಮನೆಗೆ ಹೋಗುತ್ತಿದ್ದರು. ಈ ವೇಳೆ ಸಿಗ್ನಲ್ ವೇಳೆ ಅಡ್ಡ ಬಂದು ಮೂರ್ನಾಲ್ಕು ಕಿಲೋ ಮೀಟರ್ ಕಾರನ್ನು ಫಾಲೋ ಮಾಡಿದ್ದಾರೆ. ನಂತರ ಇಂದಿರಾನಗರದ ಬಳಿ ಪಲ್ಸರ್ ಬೈಕಲ್ಲಿ ಓವರ್ ಟೇಕ್ ಮಾಡಿ, ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಆರೋಪಿಗಳು ಕಾರು ಅಡ್ಡಗಟ್ಟುವ ದೃಶ್ಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರು ಚಾಲಕ ಜಿತಿನ್ ರಾಜ್ ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Rayara Aradhane 2024 : ಏಕಾಏಕಿ ಸುರಿದ ಮಳೆ; ಭಕ್ತರಿಗೆ ಮಠದ ಪ್ರಾಕಾರದಲ್ಲಿ ಮಲಗಲು ವ್ಯವಸ್ಥೆ ಮಾಡಿಕೊಟ್ಟ ಮಂತ್ರಾಲಯ ಶ್ರೀಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Murder Case: ಬೆಳ್ತಂಗಡಿ ಬಳಿ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಭೀಕರ ಕೊಲೆ

Murder Case: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲುವಿನ ಕೊಲೆ ಪ್ರಕರಣ ನಡೆದಿದೆ. ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

Murder Case
Koo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲುವಿನ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನನ್ನು ಭೀಕರವಾಗಿ ಕೊಲೆ (Murder Case) ಮಾಡಿರುವ ಘಟನೆ ನಡೆದಿದೆ. ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಶಿಕ್ಷಕ ಬಾಲಕೃಷ್ಣ ಭಟ್ (83) ಹತ್ಯೆಯಾದವರು. ಹತ್ತಿರದ ರಕ್ತ ಸಂಬಂಧಿಯಿಂದಲೇ ಹತ್ಯೆ ನಡೆದಿರುವ ಶಂಕೆ, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಬೆಳಾಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಇರುವ ಬಾಲಕೃಷ್ಣ ಭಟ್ ಅವರ ಮನೆಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಬಾಲಕೃಷ್ಣ ಭಟ್ ಅವರು ಕೊಲ್ಪಾಡಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಅವರ ಪತ್ನಿ ಲೀಲಾ ಅವರು ಕೂಡ ಬೆಳಾಲಿನಲ್ಲಿ ಶಿಕ್ಷಕಿಯಾಗಿದ್ದು ನಿವೃತ್ತಿ ಹೊಂದಿದ್ದರು. ಕೆಲವು ವರ್ಷಗಳ ಹಿಂದೆ ಅವರು ತೀರಿಕೊಂಡಿದ್ದರು. ಇದೀಗ ಬಾಲಕೃಷ್ಣ ಭಟ್ ಕೊಲೆಯಾಗಿದೆ. ತೀರ ಹತ್ತಿರದ ರಕ್ತ ಸಂಬಂಧಿಯಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ | Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

ಮಂಗಳೂರಿನಲ್ಲಿ ಫುಟ್ಬಾಲ್‌ ಆಟಕ್ಕೆ ಕಿರಿಕ್‌; ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್‌ ಮಾಡಿ ಅರೆಬೆತ್ತಲೆಗೊಳಿಸಿ ಹಲ್ಲೆ

ಮಂಗಳೂರು: ಫುಟ್ಬಾಲ್ ಆಟದಲ್ಲಿ ವಿದ್ಯಾರ್ಥಿಗಳ ಮಧ್ಯೆ ಕಿರಿಕ್ ಶುರುವಾಗಿದ್ದು, ಕಿಡ್ನ್ಯಾಪ್ ಮಾಡಿ ಹಲ್ಲೆ (Assault Case) ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್ ಮಾಡಿ ಯದ್ವಾತದ್ವಾ ಹಲ್ಲೆ ಮಾಡಿದ್ದು,ವಿಡಿಯೊ ವೈರಲ್‌ ಆಗಿದೆ.

ಮಂಗಳೂರಿನ ಎರಡು ಕಾಲೇಜಿನ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಮಂಗಳೂರಿನ ಯೆನಪೊಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್‌ ನಡೆದಿದೆ. ಘಟನೆಯಲ್ಲಿ ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜನ್ಮದ್ ಎಂಬ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದಾರೆ.

ಹಲ್ಲೆ ಮಾಡಿದ ದಿಯಾನ್,ಅನ್ನೈ, ತಸ್ಮಿನ್,ಸಲ್ಮಾನ್, ಅನಾಸ್ ಎಂಬ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಮಹಾಕಾಳಿ ಪಡ್ಪು ಬಳಿ ಮನಬಂದಂತೆ ಥಳಿಸಿ, ಸಿಗರೇಟ್‌ನಿಂದ ಸುಟ್ಟು ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೆ ಅರೆಬೆತ್ತಲು ಗೊಳಿಸಿ ಬಸ್ಕಿ ಹೊಡೆಸಿ ಕ್ಷಮೆ ಕೇಳುವಂತೆ ಥಳಿಸಿದ್ದಾರೆ. ಈ ವಿಡಿಯೊವೆಲ್ಲವೂ ವೈರಲ್‌ ಆಗಿದೆ. ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Dowry Death : ವರದಕ್ಷಿಣೆ ಕಿರುಕುಳ ಆರೋಪ, ಗೃಹಿಣಿ ಆತ್ಮಹತ್ಯೆಗೆ ಶರಣು

Continue Reading

EXPLAINER

Vistara Explainer: ಪುಟ್ಟ ಹೆಣ್ಣುಮಕ್ಕಳ ಮೇಲೆ ಕಾಮುಕ ಅಟೆಂಡರ್‌ನಿಂದ ಅತ್ಯಾಚಾರದ ಬಳಿಕ ಬದ್ಲಾಪುರ ಉದ್ವಿಗ್ನ; ಏನಾಗ್ತಿದೆ ಅಲ್ಲಿ?

Vistara Explainer: ಬದ್ಲಾಪುರದ ಶಾಲೆಯೊಂದರಲ್ಲಿ ಶಿಶುವಿಹಾರದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಪುರುಷ ಅಟೆಂಡರ್‌ನಿಂದ ಲೈಂಗಿಕ ದೌರ್ಜನ್ಯ ನಡೆದಿತ್ತು. ಆರೋಪಿಯನ್ನು ಕಳೆದ ವಾರ ಬಂಧಿಸಲಾಗಿತ್ತು. ಮಂಗಳವಾರ, ಕ್ರೋಧತಪ್ತರಾದ ಪೋಷಕರು ಮತ್ತು ನಾಗರಿಕರು ಶಾಲೆಗೆ ನುಗ್ಗಿ ಶಾಲೆಯನ್ನು ಧ್ವಂಸಗೊಳಿಸಿದ್ದರು.

VISTARANEWS.COM


on

badlapur tension vistara explainer
Koo

ಥಾಣೆ: ಮಹಾರಾಷ್ಟ್ರದ ಥಾಣೆಯ ಬದ್ಲಾಪುರ ಎಂಬಲ್ಲಿನ ಕಿಂಡರ್‌ ಗಾರ್ಟನ್‌ ಶಾಲೆಯೊಂದರಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ (Physical Abuse) ಕೃತ್ಯ ನಡೆದ ನಂತರ ಪ್ರದೇಶದಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಶಾಲೆಯ ಶೌಚಾಲಯದಲ್ಲಿ ಕಾಮುಕ ಅಟೆಂಡರನೊಬ್ಬ ಈ ಮಕ್ಕಳ ಮೇಲೆ ಅಮಾನುಷ ಕೃತ್ಯ ಎಸಗಿದ್ದಾನೆ. ಇದರ ಬಳಿಕ ಉದ್ವಿಗ್ನ ಪರಿಸ್ಥಿತಿ (Badlapur tension) ಉಂಟಾಗಿದ್ದು, ಹಲವೆಡೆ ಗಲಭೆ ತಲೆದೋರಿದೆ. ಈ ಕುರಿತ ವಿವರ (Vistara Explainer) ಇಲ್ಲಿದೆ.

ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಎಸಗಿದ ಆರೋಪದ ಮೇಲೆ ಬಂಧಿತ ಆರೋಪಿಯ ವಿರುದ್ಧ ಅತ್ಯಾಚಾರ ಆರೋಪ ದಾಖಲಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಂಗಳವಾರ ಪೊಲೀಸರಿಗೆ ಆದೇಶಿಸಿದ್ದಾರೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಿ ಪ್ರಕರಣವನ್ನು ಫಾಸ್ಟ್‌ ಟ್ರ್ಯಾಕ್‌ನಲ್ಲಿ ನಡೆಸಲಾಗುವುದು ಎಂದು ಸಿಎಂ ಹೇಳಿದ್ದಾರೆ. “ನಾನು ಥಾಣೆ ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ್ದೇನೆ. ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ತ್ವರಿತವಾಗಿ ತನಿಖೆ ಮಾಡಿ ಆರೋಪಿ ಮೇಲೆ ಅತ್ಯಾಚಾರ ಯತ್ನ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಆರೋಪ ದಾಖಲಿಸುವಂತೆ ಸೂಚಿಸಿದ್ದೇನೆ” ಎಂದು ಅವರು ಹೇಳಿದರು.

ಬದ್ಲಾಪುರದಲ್ಲಿ ಏನಾಯ್ತು?

ಬದ್ಲಾಪುರದ ಶಾಲೆಯೊಂದರಲ್ಲಿ ಶಿಶುವಿಹಾರದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಪುರುಷ ಅಟೆಂಡರ್‌ನಿಂದ ಲೈಂಗಿಕ ದೌರ್ಜನ್ಯ ನಡೆದಿತ್ತು. ಆರೋಪಿಯನ್ನು ಕಳೆದ ವಾರ ಬಂಧಿಸಲಾಗಿತ್ತು. ಮಂಗಳವಾರ, ಕ್ರೋಧತಪ್ತರಾದ ಪೋಷಕರು ಮತ್ತು ನಾಗರಿಕರು ಶಾಲೆಗೆ ನುಗ್ಗಿ ಶಾಲೆಯನ್ನು ಧ್ವಂಸಗೊಳಿಸಿದ್ದರು. ಬೆಳಗ್ಗೆ 8.30ರಿಂದ ಬದ್ಲಾಪುರ ರೈಲು ನಿಲ್ದಾಣದಲ್ಲಿ ರೈಲ್‌ ರೋಕೋ ನಡೆಸಿ ರೈಲುಗಳನ್ನು ತಡೆದರು. ಪ್ರತಿಭಟನೆಯ ವೇಳೆ ಕೆಲ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು.

ಕಾಮುಕನ ಕೈಗೆ ಸಿಕ್ಕಿದ ಸಂತ್ರಸ್ತರು ಮೂರು ಮತ್ತು ನಾಲ್ಕು ವರ್ಷ ವಯಸ್ಸಿನವರು. ಈತ ಶಾಲೆಯ ಶೌಚಾಲಯದಲ್ಲಿ ದೌರ್ಜನ್ಯ ಎಸಗಿದ್ದಾನೆ. ಕೃತ್ಯಕ್ಕೆ ಸಂಬಂಧಿಸಿ ಪ್ರಾಂಶುಪಾಲರು, ತರಗತಿ ಶಿಕ್ಷಕಿ ಹಾಗೂ ಮಹಿಳಾ ಅಟೆಂಡರ್‌ನನ್ನು ಶಾಲೆಯ ಆಡಳಿತ ಮಂಡಳಿ ಅಮಾನತುಗೊಳಿಸಿದೆ.

ಆರೋಪಿ 23 ವರ್ಷದ ಪುರುಷ ಸ್ವಚ್ಛತಾ ಸಿಬ್ಬಂದಿ. ಬಾಲಕಿಯರು ಶೌಚಾಲಯ ಬಳಸಲು ಹೋದಾಗ ಹಲ್ಲೆ ನಡೆದಿದೆ. ಬಾಲಕಿಯರ ಶೌಚಾಲಯಕ್ಕೆ ಶಾಲೆಯಿಂದ ಮಹಿಳಾ ಸಿಬ್ಬಂದಿಯನ್ನು ನೇಮಿಸಿಲ್ಲ. ಆರೋಪಿ ಅಕ್ಷಯ್ ಶಿಂಧೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲಾಗಿತ್ತು. ಹಲ್ಲೆಗೊಳಗಾದ ಬಾಲಕಿ ತನ್ನ ಖಾಸಗಿ ಅಂಗದಲ್ಲಿ ನೋವಿನ ಕುರಿತು ದೂರು ನೀಡಿದಾಗ ಈ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಶೌಚಾಲಯಕ್ಕೆ ತೆರಳಿದ್ದ ವೇಳೆ ಆರೋಪಿ ತನ್ನ ಖಾಸಗಿ ಅಂಗಗಳನ್ನು ಮುಟ್ಟಿದ್ದಾನೆ ಎಂದು ಪೋಷಕರಿಗೆ ಆಕೆ ತಿಳಿಸಿದ್ದಾಳೆ. ಪೋಷಕರು ಹುಡುಗಿಯ ಸ್ನೇಹಿತೆಯ ಪೋಷಕರನ್ನು ಸಂಪರ್ಕಿಸಿದ್ದು, ಅವರೂ ತಮ್ಮ ಮಗಳಿಗೆ ಶಾಲೆಗೆ ಹೋಗಲು ಭಯವಾಗುತ್ತಿದೆ ಎಂದು ಹೇಳಿದ್ದಾರೆ. ನಂತರ ಪೋಷಕರು ಬಾಲಕಿಯರನ್ನು ಸ್ಥಳೀಯ ವೈದ್ಯರ ಬಳಿ ಪರೀಕ್ಷಿಸಿದಾಗ, ಇಬ್ಬರೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದು ಬೆಳಕಿಗೆ ಬಂದಿದೆ.

ಸಿಎಂಒ ಕ್ರಮದ ಭರವಸೆ

ಶಾಲೆಯ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿದರೆ ಕಾನೂನು ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ. ಪ್ರಕರಣವನ್ನು ಅತ್ಯಂತ ತುರ್ತು ಮತ್ತು ದಕ್ಷತೆಯಿಂದ ನಿಭಾಯಿಸುವಂತೆ ಖಚಿತಪಡಿಸಿಕೊಳ್ಳಲು ಅವರು ಥಾಣೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ವಿದ್ಯಾರ್ಥಿಗಳನ್ನು ಬೆಂಬಲಿಸಲು ಮತ್ತು ರಕ್ಷಿಸಲು ವಿನ್ಯಾಸಗೊಳಿಸಲಾದ ಸಖಿ ಸಾವಿತ್ರಿ ಸಮಿತಿಗಳನ್ನು ಶಾಲೆಗಳಲ್ಲಿ ಸ್ಥಾಪಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಲು ಮುಖ್ಯಮಂತ್ರಿಗಳು ಪರಿಶೀಲನೆಗೆ ಕರೆ ನೀಡಿದ್ದಾರೆ.

ಶಾಲಾ ಸುರಕ್ಷತೆಯನ್ನು ಸುಧಾರಿಸುವ ಮತ್ತು ಭವಿಷ್ಯದ ದುರುಪಯೋಗವನ್ನು ತಡೆಗಟ್ಟುವ ಉದ್ದೇಶದಿಂದ, ಪ್ರತಿ ಶಾಲೆಯಲ್ಲೂ ದೂರು ಪೆಟ್ಟಿಗೆಗಳನ್ನು ಅಳವಡಿಸುವುದು, ವಿದ್ಯಾರ್ಥಿಗಳೊಂದಿಗೆ ಆಗಾಗ ಸಂವಹನ ನಡೆಸುವ, ಶಾಲಾ ಸಿಬ್ಬಂದಿಗಳ ಪರಿಶೀಲನೆ ಹೆಚ್ಚಿಸುವ ಮತ್ತಿತರ ಕ್ರಮಗಳನ್ನು ಸಿಎಂ ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: Stabbing Case: ಮುಸ್ಲಿಂ ಸಹಪಾಠಿಯಿಂದ ಇರಿತಕ್ಕೊಳಗಾದ ವಿದ್ಯಾರ್ಥಿ, ಸಹೋದರಿಯಿಂದ ರಾಖಿ ಕಟ್ಟಿಸಿಕೊಂಡು ಅಸುನೀಗಿದ

Continue Reading

ದೇಶ

Stabbing Case: ಮುಸ್ಲಿಂ ಸಹಪಾಠಿಯಿಂದ ಇರಿತಕ್ಕೊಳಗಾದ ವಿದ್ಯಾರ್ಥಿ, ಸಹೋದರಿಯಿಂದ ರಾಖಿ ಕಟ್ಟಿಸಿಕೊಂಡು ಅಸುನೀಗಿದ

Stabbing Case: ಆಗಸ್ಟ್​ 16ರಂದು ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟಿದ್ದ ಸಮಯದಲ್ಲಿ ಬಾಲಕರಿಬ್ಬರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಮುಸ್ಲಿಂ ವಿದ್ಯಾರ್ಥಿ ತನ್ನ ಸಹಪಾಠಿಗೆ ಚಾಕುವಿನಿಂದ ತೊಡೆ ಭಾಗಕ್ಕೆ ಇರಿದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

VISTARANEWS.COM


on

Stabbing Case
Koo

ಉದಯ್​ಪುರ: ಮುಸ್ಲಿಂ ಸಹಪಾಠಿಯಿಂದ ಇರಿತಕ್ಕೊಳಗಾಗಿ (Stabbing Case) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೊಬ್ಬ (Student Death) ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ. ದೇವರಾಜ್ (15)​ ಮೃತ ಬಾಲಕನಾಗಿದ್ದು, ಆತ ಕೊನೆಯುಸಿರೆಳೆಯುವ ಮೊದಲು ಸಹೋದರಿ ಆತನಿಗೆ ರಾಖಿ (Rakhi) ಕಟ್ಟಿದ್ದಳು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿ ಅರವಿಂದ್ ಪೋಸ್ವಾಲ್, ಸೋಮವಾರ ಚಿಕಿತ್ಸೆ ವೇಳೆ ಬಾಲಕ ಮೃತಪಟ್ಟಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಗರದಲ್ಲಿ ಭಾರಿ ಪೊಲೀಸ್ ನಿಯೋಜನೆ ಹಾಗೂ ನಗರದ ವಿವಿಧ ಭಾಗಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಗಸ್ಟ್​ 16ರಂದು ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟಿದ್ದ ಸಮಯದಲ್ಲಿ ಬಾಲಕರಿಬ್ಬರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಮುಸ್ಲಿಂ ವಿದ್ಯಾರ್ಥಿ ತನ್ನ ಸಹಪಾಠಿಗೆ ಚಾಕುವಿನಿಂದ ತೊಡೆ ಭಾಗಕ್ಕೆ ಇರಿದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಬಳಿಕ ಜಿಲ್ಲೆಯಲ್ಲಿ ಕೋಮು ಸಂಘರ್ಷ ಉಂಟಾಗಿತ್ತು. ಅದನ್ನು ಇದೀಗ ಹತೋಟಿಗೆ ತಂದಿರುವ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದು, ಗಾಳಿಸುದ್ದಿಗಳನ್ನು ತಡೆಯಲು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ.

ʼಯುವತಿಯರು ಕಾಮಾಸಕ್ತಿ ನಿಯಂತ್ರಿಸಿಕೊಳ್ಳಿʼ ಎಂದ ನ್ಯಾಯಾಧೀಶರ ಸಲಹೆಗೆ ಕನಲಿದ ಸುಪ್ರೀಂ ಕೋರ್ಟ್!‌

ನವದೆಹಲಿ: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಖುಲಾಸೆಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ (Kolkata high court) ಆದೇಶವನ್ನು ಸುಪ್ರೀಂ ಕೋರ್ಟ್ (Supreme Court) ಇಂದು ರದ್ದುಗೊಳಿಸಿದೆ. ಇದೇ ಪ್ರಕರಣದಲ್ಲಿ. “ಹದಿಹರೆಯದ ಹುಡುಗಿಯರು ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಕೊಳ್ಳಬೇಕು” ಎಂದು ನ್ಯಾಯಾಧೀಶರು ನೀಡಿದ ʼಸಲಹೆʼಯ ಬಗ್ಗೆ ಕಟುವಾಗಿ ಆಕ್ಷೇಪ ವ್ಯಕ್ತಪಡಿಸಿದೆ.

ನ್ಯಾಯಾಧೀಶರಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರು ಇದ್ದ ನ್ಯಾಯಪೀಠ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣಗಳನ್ನು ವ್ಯವಹರಿಸುವ ಕುರಿತು ನ್ಯಾಯಾಂಗ ಅಧಿಕಾರಿಗಳಿಗೆ ಹಲವಾರು ನಿರ್ದೇಶನಗಳನ್ನು ನೀಡಿದೆ ಎಂದು ಹೇಳಿದರು. ಪೀಠದ ಪರವಾಗಿ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಓಕಾ, ನ್ಯಾಯಾಲಯಗಳು ತೀರ್ಪುಗಳನ್ನು ಹೇಗೆ ಬರೆಯಬೇಕು ಎಂಬುದರ ಬಗ್ಗೆಯೂ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಹೇಳಿದರು.

ಕಳೆದ ವರ್ಷ ಡಿಸೆಂಬರ್ 8ರಂದು ಸುಪ್ರೀಂ ಕೋರ್ಟ್ ಈ ತೀರ್ಪನ್ನು ಟೀಕಿಸಿತ್ತು. ಕೋಲ್ಕತ್ತಾ ಉಚ್ಚ ನ್ಯಾಯಾಲಯದ ಕೆಲವು ಅವಲೋಕನಗಳನ್ನು “ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ” ಎಂದು ಬಣ್ಣಿಸಿತ್ತು. ಹೈಕೋರ್ಟ್‌ನ ವಿಭಾಗೀಯ ಪೀಠವು ಮಾಡಿದ ಕೆಲವು ಅವಲೋಕನಗಳನ್ನು ಗಮನಕ್ಕೆ ತೆಗೆದುಕೊಂಡ ಪೀಠ, ತೀರ್ಪುಗಳನ್ನು ಬರೆಯುವಾಗ ನ್ಯಾಯಾಧೀಶರು “ಬೋಧನೆ” ಮಾಡಬಾರದು ಎಂದು ಹೇಳಿತು.

ಇದನ್ನೂ ಓದಿ: Viral Video: ನೆರೆಹೊರೆಯವರೊಂದಿಗೆ ಜಗಳವಾಡುತ್ತಲೇ ಹೃದಯಾಘಾತದಿಂದ ಸತ್ತ ಮಹಿಳೆ!

Continue Reading

ಸಿನಿಮಾ

Celina Jaitley: ಮರ್ಮಾಂಗ ತೋರಿಸಿದ ದುಷ್ಟ; ಟೀಕೆಗೆ ಒಳಗಾದದ್ದು ನಾನು: ಕರಾಳ ನೆನಪು ಬಿಚ್ಚಿಟ್ಟ ನಟಿ

Celina Jaitley: ಬಾಲ್ಯದಲ್ಲಿ ತಮಗಾದ ಕೆಟ್ಟ ಅನುಭವವನ್ನು ಜೇಟ್ಲಿ ತೆರೆದಿಟ್ಟಿದ್ದಾರೆ. ತಮ್ಮ ಆರನೇ ತರಗತಿ ಫೋಟೋ ಒಂದನ್ನು ಪೋಸ್ಟ್‌ ಮಾಡಿದ ಸೆಲಿನಾ, ಇಂಥ ಪ್ರಕರಣಗಳಲ್ಲಿ ಯಾವಾಗಲೂ ಬಲಿಪಶುವನ್ನೇ ತಪ್ಪು ಮಾಡಿದವಳು ಎಂದು ಹೇಳಲಾಗುತ್ತದೆ ಎಂದಿದ್ದಾರೆ.

VISTARANEWS.COM


on

Celina Jaitley
Koo

ಮುಂಬಯಿ: ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ (Physical Abuse) ಪ್ರಕರಣ, ಅನೇಕ ಬಾಲಿವುಡ್‌ ಸೆಲೆಬ್ರಿಟಿಗಳು (Bollywood celebrity) ಕೂಡ ತಮಗಾದ ಲೈಂಗಿಕ ಕಿರುಕುಳ, ಯಾತನೆ, ನೋವುಗಳ ಬಗ್ಗೆ ಮಾತನಾಡುವಂತೆ ಮಾಡಿದೆ. ಅದೇ ಸರಣಿಯಲ್ಲಿ ನಟಿ ಸೆಲಿನಾ ಜೇಟ್ಲಿ (Celina Jaitley) ತಮ್ಮ ಜೀವನದಲ್ಲಿ ನಡೆದ ಆಘಾತಕಾರಿ ಘಟನೆಯೊಂದನ್ನು ಇದೀಗ ಬಿಚ್ಚಿಟ್ಟಿದ್ದಾರೆ.

ಬಾಲ್ಯದಲ್ಲಿ ತಮಗಾದ ಕೆಟ್ಟ ಅನುಭವವನ್ನು ಜೇಟ್ಲಿ ತೆರೆದಿಟ್ಟಿದ್ದಾರೆ. ತಮ್ಮ ಆರನೇ ತರಗತಿ ಫೋಟೋ ಒಂದನ್ನು ಪೋಸ್ಟ್‌ ಮಾಡಿದ ಸೆಲಿನಾ, ಇಂಥ ಪ್ರಕರಣಗಳಲ್ಲಿ ಯಾವಾಗಲೂ ಬಲಿಪಶುವನ್ನೇ ತಪ್ಪು ಮಾಡಿದವಳು ಎಂದು ಹೇಳಲಾಗುತ್ತದೆ. ಈ ಫೋಟೋ ನಾನು ಆರನೇ ತರಗತಿಯಲ್ಲಿದ್ದಾಗಿನದು. ಹತ್ತಿರದ ಕಾಲೇಜಿನ ಹುಡುಗನೊಬ್ಬ ನಾನು ಶಾಲೆಯಿಂದ ಹೊರಬರುವುದನ್ನು ಕಾಯುತ್ತಿದ್ದ. ಅವನು ಪ್ರತಿದಿನ ನನ್ನ ಶಾಲೆಯ ರಿಕ್ಷಾವನ್ನು ಹಿಂಬಾಲಿಸಿ ಮನೆಯವರೆಗೆ ಬರುತ್ತಿದ್ದ. ಕೆಲವು ದಿನಗಳ ನಂತರ, ನನ್ನ ಗಮನವನ್ನು ಸೆಳೆಯಲು, ಅವನು ರಸ್ತೆಯ ಮಧ್ಯದಲ್ಲಿ ನನ್ನ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದ್ದ. ಅಲ್ಲಿದ್ದವರು ಯಾರೂ ಆತನ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದಿದ್ದಾರೆ.

ಇದರ ಮಧ್ಯೆ ನನ್ನ ಟೀಚರ್‌ ನನ್ನ ಮೇಲೆಯೇ ಆರೋಪ ಮಾಡಿದ್ರು. ನಾನು ಬಿಗಿಯಾದ ಬಟ್ಟೆ ಧರಿಸುತ್ತೇನೆ, ಕೂದಲಿಗೆ ಎಣ್ಣೆ ಹಚ್ಚಿ, ಕೂದಲು ಕಟ್ಟೋದಿಲ್ಲ. ಹಾಗಾಗಿ ಹುಡುಗ ನನ್ನ ಹಿಂದೆ ಬಿದ್ದಿದ್ದಾನೆ ಎಂದು ಟೀಚರ್ಸ್‌ ನನಗೆ ಹೇಳುತ್ತಿದ್ದರು. ಶಿಕ್ಷಕರ ಈ ಮಾತಿನ ನಂತರ ನಾನು ತುಂಬಾ ದಿನ ನನ್ನನ್ನೇ ದೂಷಿಸಿಕೊಳ್ಳುತ್ತಿದ್ದೆ. ಒಂದು ದಿನ ಬೆಳಿಗ್ಗೆ ಶಾಲೆಗೆ ಹೋಗಲು ರಿಕ್ಷಾಕ್ಕೆ ಕಾಯುತ್ತಿದ್ದಾಗ ವ್ಯಕ್ತಿಯೊಬ್ಬ ತನ್ನ ಖಾಸಗಿ ಅಂಗ ತೋರಿಸಿದ. ತೀವ್ರ ಮುಜುಗರವಾಯಿತು. ಆದರೆ ಟೀಚರ್‌ ಮಾತನ್ನು ನೆನೆದುಕೊಂಡು ಆಗ್ಲೂ ನಾನು ನನ್ನನ್ನು ದೂಷಿಸಿಕೊಂಡಿದ್ದೆ ಎಂದು ಸೆಲಿನಾ ಹೇಳಿದ್ದಾರೆ.

ನಾನು 11ನೇ ತರಗತಿಯಲ್ಲಿದ್ದಾಗ, ಹುಡುಗರು ನನ್ನ ಸ್ಕೂಟಿ ಬ್ರೇಕ್‌ ಕಟ್‌ ಮಾಡಿದ್ದರು. ಅವರು ಅಶ್ಲೀಲವಾಗಿ ನಿಂದಿಸಿದ್ದರು. ನೀನು ಜೀನ್ಸ್‌ ಧರಿಸಿ, ಮಾಡರ್ನ್‌ ಆಗಿ ಕಾಣುವ ಕಾರಣ ಯುವಕರು ನಿನ್ನನ್ನು ತಪ್ಪು ತಿಳಿದಿದ್ದಾರೆಂದು ಶಿಕ್ಷಕಿ ಆಗ್ಲೂ ಹೇಳಿದ್ದರಂತೆ. ಇದ್ರಿಂದ ನಾನು ತುಂಬಾ ನೋವು ತಿಂದಿದ್ದೆ ಎಂದು ಸೆಲಿನಾ ಸುದೀರ್ಘ ಪೋಸ್ಟ್‌ ಹಾಕಿದ್ದಾರೆ.

ʼಯುವತಿಯರು ಕಾಮಾಸಕ್ತಿ ನಿಯಂತ್ರಿಸಿಕೊಳ್ಳಿʼ ಎಂದ ನ್ಯಾಯಾಧೀಶರ ಸಲಹೆಗೆ ಕನಲಿದ ಸುಪ್ರೀಂ ಕೋರ್ಟ್!‌

ನವದೆಹಲಿ: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಖುಲಾಸೆಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ (Kolkata high court) ಆದೇಶವನ್ನು ಸುಪ್ರೀಂ ಕೋರ್ಟ್ (Supreme Court) ಇಂದು ರದ್ದುಗೊಳಿಸಿದೆ. ಇದೇ ಪ್ರಕರಣದಲ್ಲಿ. “ಹದಿಹರೆಯದ ಹುಡುಗಿಯರು ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಕೊಳ್ಳಬೇಕು” ಎಂದು ನ್ಯಾಯಾಧೀಶರು ನೀಡಿದ ʼಸಲಹೆʼಯ ಬಗ್ಗೆ ಕಟುವಾಗಿ ಆಕ್ಷೇಪ ವ್ಯಕ್ತಪಡಿಸಿದೆ.

ನ್ಯಾಯಾಧೀಶರಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರು ಇದ್ದ ನ್ಯಾಯಪೀಠ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣಗಳನ್ನು ವ್ಯವಹರಿಸುವ ಕುರಿತು ನ್ಯಾಯಾಂಗ ಅಧಿಕಾರಿಗಳಿಗೆ ಹಲವಾರು ನಿರ್ದೇಶನಗಳನ್ನು ನೀಡಿದೆ ಎಂದು ಹೇಳಿದರು. ಪೀಠದ ಪರವಾಗಿ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಓಕಾ, ನ್ಯಾಯಾಲಯಗಳು ತೀರ್ಪುಗಳನ್ನು ಹೇಗೆ ಬರೆಯಬೇಕು ಎಂಬುದರ ಬಗ್ಗೆಯೂ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಹೇಳಿದರು.

ಕಳೆದ ವರ್ಷ ಡಿಸೆಂಬರ್ 8ರಂದು ಸುಪ್ರೀಂ ಕೋರ್ಟ್ ಈ ತೀರ್ಪನ್ನು ಟೀಕಿಸಿತ್ತು. ಕೋಲ್ಕತ್ತಾ ಉಚ್ಚ ನ್ಯಾಯಾಲಯದ ಕೆಲವು ಅವಲೋಕನಗಳನ್ನು “ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ” ಎಂದು ಬಣ್ಣಿಸಿತ್ತು. ಹೈಕೋರ್ಟ್‌ನ ವಿಭಾಗೀಯ ಪೀಠವು ಮಾಡಿದ ಕೆಲವು ಅವಲೋಕನಗಳನ್ನು ಗಮನಕ್ಕೆ ತೆಗೆದುಕೊಂಡ ಪೀಠ, ತೀರ್ಪುಗಳನ್ನು ಬರೆಯುವಾಗ ನ್ಯಾಯಾಧೀಶರು “ಬೋಧನೆ” ಮಾಡಬಾರದು ಎಂದು ಹೇಳಿತು.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

Continue Reading
Advertisement
EV charging
ಕರ್ನಾಟಕ2 mins ago

EV Charging: ಕರ್ನಾಟಕವೇ ಕಿಂಗ್;‌ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ರಾಜ್ಯ!

What is Lateral Entry?
ದೇಶ4 mins ago

What is Lateral Entry?: ಏನಿದು ಲ್ಯಾಟರಲ್ ಎಂಟ್ರಿ ವಿವಾದ? ಕಾಂಗ್ರೆಸ್‌ ಆರೋಪವೇನು? ಬಿಜೆಪಿಯ ವಾದವೇನು?

T20 World Cup
ಕ್ರಿಕೆಟ್8 mins ago

T20 World Cup: ಟಿ20 ವಿಶ್ವಕಪ್​ನ 3 ಪಿಚ್​ಗಳಿಗೆ ಕಳಪೆ ರೇಟಿಂಗ್​ ಕೊಟ್ಟ ಐಸಿಸಿ

Toyota Kirloskar Motor
ರಾಮನಗರ27 mins ago

Toyota Kirloskar Motor: ರಾಮನಗರ ಜಿಲ್ಲೆಯಲ್ಲಿ 3 ಹೊಸ ನೀರು ಶುದ್ಧೀಕರಣ ಘಟಕ ಸ್ಥಾಪಿಸಿದ ಟಿಕೆಎಂ

World Senior Citizens Day
ಬೆಂಗಳೂರು28 mins ago

World Senior Citizens Day: ವಿಶ್ವ ಹಿರಿಯ ನಾಗರಿಕರ ದಿನದ ಪ್ರಯುಕ್ತ ವೈದ್ಯರಿಂದ ಉಚಿತ ಸಮಾಲೋಚನೆ

KHIR City Project
ಬೆಂಗಳೂರು30 mins ago

KHIR City Project: ಬೆಂಗಳೂರಿನಲ್ಲಿ ನಾಲೆಜ್‌-ಹೆಲ್ತ್‌ ಸಿಟಿ ಮೊದಲ ಹಂತದ ಯೋಜನೆಗೆ ಸದ್ಯದಲ್ಲೇ ಚಾಲನೆ: ಎಂ.ಬಿ. ಪಾಟೀಲ

D Devaraja Arasu birth Anniversary
ಬೆಂಗಳೂರು35 mins ago

D Devaraja Arasu birth Anniversary: ಹಿಂದುಳಿದವರನ್ನು ತುಳಿಯಲು ಈಗಲೂ ನಿರಂತರ ಹುನ್ನಾರ; ಸಿದ್ದರಾಮಯ್ಯ ಆರೋಪ

ICC Women’s T20 World Cup
ಕ್ರಿಕೆಟ್1 hour ago

ICC Women’s T20 World Cup: ಯುಎಇಗೆ ಸ್ಥಳಾಂತರಗೊಂಡ ಮಹಿಳಾ ಟಿ20 ವಿಶ್ವಕಪ್

Kailash Vijayvargiya
ಪ್ರಮುಖ ಸುದ್ದಿ1 hour ago

Kailash Vijayvargiya: 30 ವರ್ಷದಲ್ಲಿ ದೇಶದೊಳಗೆ ಅಂತರ್ಯುದ್ಧ, ಹಿಂದೂಗಳು ಬದುಕುವುದೇ ಕಷ್ಟ: ಕೈಲಾಶ್‌ ವಿಜಯ್‌ವರ್ಗೀಯ

Murder Case
ಕರ್ನಾಟಕ1 hour ago

Murder Case: ಬೆಳ್ತಂಗಡಿ ಬಳಿ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಭೀಕರ ಕೊಲೆ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌