Naga Chaitanya Sobhita Dhulipala: ನಾಗ ಚೈತನ್ಯ, ಶೋಭಿತಾ ಧೂಳಿಪಾಲ ನಿಶ್ಚಿತಾರ್ಥದಿಂದ ಅಕ್ಕಿನೇನಿ- ದಗ್ಗುಬಾಟಿ ಕುಟುಂಬದಲ್ಲಿ ಬಿರುಕು? - Vistara News

ಸಿನಿಮಾ

Naga Chaitanya Sobhita Dhulipala: ನಾಗ ಚೈತನ್ಯ, ಶೋಭಿತಾ ಧೂಳಿಪಾಲ ನಿಶ್ಚಿತಾರ್ಥದಿಂದ ಅಕ್ಕಿನೇನಿ- ದಗ್ಗುಬಾಟಿ ಕುಟುಂಬದಲ್ಲಿ ಬಿರುಕು?

ನಾಗ ಚೈತನ್ಯ ಮತ್ತು ಶೋಭಿತಾ (Naga Chaitanya Sobhita Dhulipala) ಅವರ ವಿವಾಹ ನಿಶ್ಚಿತಾರ್ಥದ ಸುದ್ದಿಯ ಮಧ್ಯೆ ಈಗ ಟಾಲಿವುಡ್ ಸ್ಟಾರ್ ನಾಗಾರ್ಜುನ ಅವರ ವಯಕ್ತಿಕ ಜೀವನವೂ ಹೆಚ್ಚು ಚರ್ಚೆಗೆ ಬಂದಿದೆ. ಶೋಭಿತಾ ಅವರನ್ನು ಕುಟುಂಬಕ್ಕೆ ಸ್ವಾಗತಿಸುವುದಾಗಿ ನಾಗಾರ್ಜುನ ಅವರು ಇತ್ತೀಚಿಗೆ ದೃಢಪಡಿಸಿದ್ದರು. ಆದರೆ ನಾಗ ಚೈತನ್ಯ ಅವರ ತಾಯಿಯ ಮನೆಯವರು ನಿಶ್ಚಿತಾರ್ಥದಿಂದ ದೂರ ಉಳಿದಿದ್ದಾರೆ. ಇದಕ್ಕೆ ಕಾರಣವೇನು ಎನ್ನುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

VISTARANEWS.COM


on

Naga Chaitanya Sobhita Dhulipala
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಕ್ಷಿಣ ಭಾರತ ಸಿನಿಮಾ ರಂಗದಲ್ಲಿ ಟಾಲಿವುಡ್ ಸ್ಟಾರ್ (Tollywood star) ನಾಗಾರ್ಜುನ (Nagarjuna) ಅವರ ಮಗ ನಾಗ ಚೈತನ್ಯ (Naga Chaitanya Sobhita Dhulipala) ಅವರ ವಿವಾಹ ನಿಶ್ಚಿತಾರ್ಥದ (Engagement ) ಸುದ್ದಿಯೇ ಹೆಚ್ಚು ಚರ್ಚೆಯಲ್ಲಿದೆ. ನಟಿ ಸಮಂತಾ (Samantha) ಅವರೊಂದಿಗಿನ ವಿಚ್ಛೇದನದ ಬಳಿಕ ನಾಗ ಚೈತನ್ಯ ಮತ್ತು ಅವರ ಕುಟುಂಬದ ಕುರಿತು ಅನೇಕ ಸಂಗತಿಗಳು ಅವರ ಅಭಿಮಾನಿಗಳಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಅವರು ಆಗಸ್ಟ್ 8ರಂದು ಹೈದರಾಬಾದ್‌ನಲ್ಲಿ ಸಾಂಪ್ರದಾಯಿಕ ಸಮಾರಂಭದ ಮೂಲಕ ವಿವಾಹ ನಿಶ್ಚಿತಾರ್ಥ ಮಾಡಿಕೊಂಡರು. 2022ರಲ್ಲಿ ಯುರೋಪ್ ಪ್ರವಾಸದ ವೇಳೆ ಒಟ್ಟಿಗೆ ಕಾಣಿಸಿಕೊಂಡ ಬಳಿಕ ನಾಗ ಚೈತನ್ಯ ಮತ್ತು ಶೋಭಿತಾ ಡೇಟಿಂಗ್ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿತ್ತು.

ಇವರ ವಿವಾಹ ನಿಶ್ಚಿತಾರ್ಥದ ಸುದ್ದಿಯ ಮಧ್ಯೆ ಈಗ ಟಾಲಿವುಡ್ ಸ್ಟಾರ್ ನಾಗಾರ್ಜುನ ಅವರ ವಯಕ್ತಿಕ ಜೀವನವೂ ಹೆಚ್ಚು ಚರ್ಚೆಗೆ ಬಂದಿದೆ. ಶೋಭಿತಾ ಅವರನ್ನು ಕುಟುಂಬಕ್ಕೆ ಸ್ವಾಗತಿಸುವುದಾಗಿ ನಾಗಾರ್ಜುನ ಅವರು ಇತ್ತೀಚಿಗೆ ದೃಢಪಡಿಸಿದ್ದರು. ನಾಗಾರ್ಜುನ ದಂಪತಿ ನಡುವೆ ಎಲ್ಲವೂ ಸರಿಯಾಗಿದೆ ಎಂದು ತೋರುತ್ತಿರುವಾಗ ಅವರ ಮೊದಲ ಪತ್ನಿ ಲಕ್ಷ್ಮಿ ದಗ್ಗುಬಾಟಿ ಅವರೊಂದಿಗೆ ನಾಗಾರ್ಜುನ ಅವರ ಸಂಪರ್ಕದ ಕುರಿತು ಚರ್ಚೆಯಾಗುತ್ತಿದೆ. ದಗ್ಗುಬಾಟಿ ಕುಟುಂಬವು ಶೋಭಿತಾ ಅವರನ್ನು ಇನ್‌ಸ್ಟಾಗ್ರಾಮ್ ನಲ್ಲಿ ಅನುಸರಿಸುತ್ತಿಲ್ಲ ಎಂಬುದನ್ನು ನೆಟ್ಟಿಗರು ಇತ್ತೀಚೆಗೆ ಪತ್ತೆ ಹಚ್ಚಿದ್ದಾರೆ. ಲಕ್ಷ್ಮಿ ಮತ್ತು ನಾಗಾರ್ಜುನ ಅವರ ಮಗ ನಾಗ ಚೈತನ್ಯ.


ವೆಂಕಟೇಶ್ ದಗ್ಗುಬಾಟಿ, ರಾಣಾ ದಗ್ಗುಬಾಟಿ, ಅವರ ಸಹೋದರಿ ಮಾಳವಿಕಾ ದಗ್ಗುಬಾಟಿ ಮತ್ತು ಆಶ್ರಿತಾ ದಗ್ಗುಬಾಟಿ ಅವರು ಶೋಭಿತಾ ಧೂಳಿಪಾಲ ಅವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅನುಸರಿಸುತ್ತಿಲ್ಲ ಎಂದು ಸೂಚಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ ವೊಂದು ಈಗ ಸುದ್ದಿ ಮಾಡಿದೆ. ಆದರೆ ನಾಗ ಚೈತನ್ಯ ಅವರ ಮಾಜಿ ಪತ್ನಿ ಸಮಂತಾ ರೂತ್ ಪ್ರಭು ಅವರನ್ನು ಅನುಸರಿಸುತ್ತಿದ್ದಾರೆ. ಚೈತನ್ಯ ಈ ಹಿಂದೆ 2017ರಿಂದ 2021ರವರೆಗೆ ನಟ ಸಮಂತಾ ಅವರ ಜತೆಗಿದ್ದರು. ಶೋಭಿತಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವ ಚೈತನ್ಯ ಅವರ ನಿರ್ಧಾರವನ್ನು ದಗ್ಗುಬಾಟಿ ಅವರನ್ನು ಕುಟುಂಬಕ್ಕೆ ಇಷ್ಟವಾಗದಿರಬಹುದು ಎನ್ನುವ ವದಂತಿಗಳು ಹುಟ್ಟಿಕೊಂಡಿವೆ.


ದಗ್ಗುಬಾಟಿ ಕುಟುಂಬ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಅವರ ನಿಶ್ಚಿತಾರ್ಥ ಸಮಾರಂಭದಲ್ಲೂ ಪಾಲ್ಗೊಂಡಿರಲಿಲ್ಲ. ಈ ವೇಳೆ ಅವರು ತಾಯಿ ಲಕ್ಷ್ಮಿ ಅವರ ಎರಡನೇ ಪತಿ ಶರತ್ ವಿಜಯರಾಘವನ್ ಅವರೊಂದಿಗೆ ಹಬ್ಬಗಳಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Viral Video: ಐಷಾರಾಮಿ ಟೊಯೋಟಾ ಲೆಕ್ಸಸ್ ಕಾರು ಖರೀದಿಸಿದ ಜಾನ್ವಿ ಕಪೂರ್! ಇದರ ದರ ಎಷ್ಟು?

ಚೈತನ್ಯ ಅವರ ನಿಶ್ಚಿತಾರ್ಥದಲ್ಲಿ ರಾಣಾ ದಗ್ಗುಬಾಟಿ ಮತ್ತು ಅವರ ಸಹೋದರಿಯರು ಕಾಣಿಸಿಕೊಳ್ಳದೇ ಇರುವುದನ್ನು ನೆಟಿಜನ್‌ಗಳು ಈ ಹಿಂದೆ ಗಮನಿಸಿದ್ದರು. ಅಕ್ಕಿನೇನಿ ಮತ್ತು ದಗ್ಗುಬಾಟಿ ಕುಟುಂಬದಲ್ಲಿ ಹೇಳಲಾದ ಭಿನ್ನಾಭಿಪ್ರಾಯದ ಬಗ್ಗೆ ವದಂತಿಗಳು ಬಳಿಕ ಹುಟ್ಟಿಕೊಂಡಿತ್ತು. ಇದಕ್ಕೆ ಈವರೆಗೆ ಯಾರೂ ಸ್ಪಷ್ಟನೆಯನ್ನು ನೀಡಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ಟೀಸರ್‌ನಲ್ಲೇ ಕುತೂಹಲ ಮೂಡಿಸಿದೆ ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರ

ನಟ ರಿಷಿ ಅಭಿನಯದ, ನಿರ್ದೇಶಕ ನಂದೀಶ್ ನಿರ್ದೇಶನದ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರದ (Kannada New Movie) ಟೀಸರ್ ಅನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಬಿಡುಗಡೆ ಮಾಡಿ ಶುಭ ಕೋರಿದರು. ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಹಾಗೂ ಪ್ರಸ್ತುತ ತೆಲುಗು ಚಿತ್ರರಂಗದಲ್ಲೂ ಮನೆಮಾತಾಗಿರುವ ನಟ ರಿಷಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ‘ರುದ್ರ ಗರುಡ ಪುರಾಣ’ ಚಿತ್ರದ (Kannada New Movie) ಟೀಸರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ನಿರ್ದೇಶಕ ಜೇಕಬ್ ವರ್ಗೀಸ್, ಇತರರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದರು.

914 ವಿಮಾನ 1955ರಲ್ಲಿ ನ್ಯೂಯಾರ್ಕ್‌ನಿಂದ ಮಿಯಾನ್ ಸಿಟಿಗೆ ಹೊರಟಿದ್ದ ವಿಮಾನ ಮಿಸ್ ಆಗುತ್ತದೆ. ವಿಮಾನದ ಸುಳಿವು ಸಿಕ್ಕಿರುವುದಿಲ್ಲ. ಇದಾದ ಮೂವತ್ತು ವರ್ಷಗಳ (1985 ರಲ್ಲಿ) ನಂತರ ಮತ್ತೆ ಆ ವಿಮಾನ ವಾಪಸ್ ಬರುತ್ತದೆ ಅದು ಹೇಗೆ…? ಹಾಗೂ ಒಬ್ಬ ರಾಜ ಇಡೀ ಭೂಮಂಡಲನೇ ಗೆಲ್ಲಬೇಕು ಅಂತ ಆಸೆಯಿಂದ ತನ್ನ‌ ಪಕ್ಕದ ದೇಶದ ಮೇಲೆ ಯುದ್ದಕ್ಕೆ ಹೋಗಿ‌ ಲಕ್ಷಾಂತರ ಜನರನ್ನು ಕೊಂದು ಜಯ‌ ಸಾಧಿಸಿರುತ್ತಾನೆ.‌

ಯುದ್ಧ ಮುಗಿದ ಮೇಲೆ‌ ರಣರಂಗಕ್ಕೆ‌ ಹೋಗುತ್ತಾನೆ. ಅಲ್ಲಿ ಸಾಲುಸಾಲು ಹೆಣದ ರಾಶಿಗಳಿರುತ್ತಿದೆ.‌ ಸತ್ತಿದ್ದ ಸೈನಿಕನೊಬ್ಬನ ಮಾಂಸವನ್ನು ಮನುಷ್ಯನೊಬ್ಬ ತಿನ್ನುತ್ತಿರುತ್ತಾನೆ.‌ ಆ ಸಮಯಕ್ಕೆ‌ ರಾಜ ಅಲ್ಲಿಗೆ ಬರುತ್ತಾನೆ‌. ಆ‌ ಮನುಷ್ಯ ರಾಜನನ್ನು ಕುರಿತು, ಕ್ಷಮಿಸು ರಾಜ ನಾನು ನಿನ್ನ ಆಹಾರವನ್ನು ‌ತಿನ್ನುತ್ತಿದ್ದೇನೆ ಎನ್ನುತ್ತಾನೆ. ಆಗ ರಾಜ ನಾನು ನಿನ್ನ ಹಾಗೆ ನರಭಕ್ಷಕ ಅಲ್ಲ‌ ಎನುತ್ತಾನೆ.‌ ಆಗ ಆ ಮನುಷ್ಯ ಹಾಗಾದರೆ ಇಷ್ಟು ಜನರನ್ನು ಏಕೆ‌ ಸಾಯಿಸಿದಿಯಾ ಎಂದು ರಾಜನನ್ನು ಕೇಳುತ್ತಾನೆ?‌.‌ ಈ ಎರಡು ಉಪಕಥೆಗಳೇ ನಮ್ಮ‌ ಚಿತ್ರದ ಕಥೆಗೆ ಸ್ಫೂರ್ತಿ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ನಂದೀಶ್.

ನಮ್ಮ‌ ಸುತ್ತಮುತ್ತ ನಡೆಯುವ ಅನೇಕ ಸಮಸ್ಯೆಗಳನ್ನಿಟ್ಟುಕೊಂಡು ನಂದೀಶ್ ಈ ಚಿತ್ರದ ಕಥೆ ಮಾಡಿದ್ದಾರೆ. ಪುನೀತ್ ರಾಜಕುಮಾರ್ ಅವರ ನಿರ್ಮಾಣದ “ಕವಲುದಾರಿ” ಚಿತ್ರದ ನಂತರ ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ರುದ್ರ ನನ್ನ ಪಾತ್ರದ ಹೆಸರು ಎಂದರು ನಟ ರಿಷಿ.

ಇದು ನನ್ನ ಅಭಿನಯದ ಎರಡನೇ ಚಿತ್ರ.‌ ನನ್ನ‌ ಪಾತ್ರ ಕೂಡ ಚೆನ್ನಾಗಿದೆ‌ ಎಂದು ನಾಯಕಿ ಪ್ರಿಯಾಂಕ ಕುಮಾರ್‌ ತಿಳಿಸಿದರು. ‌

ಜೇಕಬ್ ವರ್ಗೀಸ್‌ ಹಾಗೂ ನಾನು ಸ್ನೇಹಿತರು. ಜೇಕಬ್ ಅವರ ಜತೆಗೆ ಕೆಲಸ ಮಾಡುತ್ತಿದ್ದಾಗಿನಿಂದಲೂ ನನಗೆ ನಂದೀಶ್ ಪರಿಚಯ.‌‌ ನಂದೀಶ್ ಈ ಚಿತ್ರದ ಕಥೆ ಹೇಳಿದಾಗ ಇಷ್ಟವಾಯಿತು. ಅಭಿನಯಿಸಿದ್ದೇನೆ ಎಂದರು ನಟ ವಿನೋದ್ ಆಳ್ವಾ.

ಚಿತ್ರದಲ್ಲಿ ನಟಿಸಿರುವ ಕೆ.ಎಸ್ ಶ್ರೀಧರ್, ಗಿರೀಶ್ ಶಿವಣ್ಣ, ಶಿವರಾಜ ಕೆ.ಆರ್. ಪೇಟೆ, ಸಂಗೀತ ನಿರ್ದೇಶಕ ಕೆಪಿ, ಛಾಯಾಗ್ರಾಹಕ ಸಂದೀಪ್ ಕುಮಾರ್ ಹಾಗೂ ಸಂಭಾಷಣೆ ಬರೆದಿರುವ ರಘು ನಿಡವಳ್ಳಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಇದನ್ನೂ ಓದಿ: World Senior Citizens Day: ವಿಶ್ವ ಹಿರಿಯ ನಾಗರಿಕರ ದಿನದ ಪ್ರಯುಕ್ತ ವೈದ್ಯರಿಂದ ಉಚಿತ ಸಮಾಲೋಚನೆ

ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಶ್ವಿನಿ ಅವರ ಪತಿ ಲೋಹಿತ್ ಅವರು ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದರು.

Continue Reading

ಕ್ರೀಡೆ

Rishabh Pant: ‘ಕಬಾಲಿ ಡಾ’, ‘ನೆರಪ್ಪು ಡಾ’; ತಲೈವಾ ರಜನಿಕಾಂತ್​ಗೆ ಸಡ್ಡು ಹೊಡೆದ ರಿಷಭ್​ ಪಂತ್​

Rishabh Pant: ರಿಷಭ್​ ಪಂತ್​ ಅವರು ರಜನಿಕಾಂತ್ ಶೈಲಿಯಲ್ಲೇ ಫೋಟೊ ಶೂಟ್​ ಮಾಡಿಸಿದನ್ನು ನೋಡುವಾಗ ಪಂತ್​ ಮುಂದಿನ ಆವೃತ್ತಿಯಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಪರ ಆಡುವುದು ಬಹುತೇಕ ಖಚಿತ ಎನ್ನುವ ಸುಳಿವು ಬಿಟ್ಟುಕೊಟ್ಟಂತಿದೆ

VISTARANEWS.COM


on

Rishabh Pant
Koo

ನವದೆಹಲಿ: ಟೀಮ್​ ಇಂಡಿಯಾದ ಸ್ಟಾರ್​ ಕ್ರಿಕೆಟಿಗ ರಿಷಭ್​ ಪಂತ್​(Rishabh Pant)​ ಅವರು ‘ತಲೈವಾ’ ಖ್ಯಾತಿಯ ಸ್ಟಾರ್​ ನಟ, ರಜನಿಕಾಂತ್(Star Actor Rajinikanth) ಅವರ ಶೈಲಿಯಲ್ಲೇ ಫೋಟೊ ಶೂಟ್​ ಮಾಡಿಸಿಕೊಂಡಿದ್ದಾರೆ. 2016ರಲ್ಲಿ ತೆರೆ ಕಂಡ ಕಬಾಲಿ ಸಿನಿಮಾದಲ್ಲಿ ರಜನಿಕಾಂತ್ ಅವರು ಸೋಫಾದ ರೀತಿಯ ಕುರ್ಚಿಯೊಂದರಲ್ಲಿ ಕುಳಿತ ಶೈಲಿಯಲ್ಲೇ ಪಂತ್​ ಕೂಡ ಕುಳಿತು ಫೋಟೊ(Thalaiva Look Rishabh Pant) ತೆಗೆಸಿಕೊಂಡಿದ್ದಾರೆ. ಈ ಫೋಟೊವನ್ನು ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿರುವ ಪಂತ್​ ‘ತಲೈವಾ’ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಫೋಟೊ ವೈರಲ್​ ಆಗುತ್ತಿದೆ.

ರಿಷಭ್​ ಪಂತ್​ ಅವರು ರಜನಿಕಾಂತ್ ಶೈಲಿಯಲ್ಲೇ ಫೋಟೊ ಶೂಟ್​ ಮಾಡಿಸಿದನ್ನು ನೋಡುವಾಗ ಪಂತ್​ ಮುಂದಿನ ಆವೃತ್ತಿಯಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಪರ ಆಡುವುದು ಬಹುತೇಕ ಖಚಿತ ಎನ್ನುವ ಸುಳಿವು ಬಿಟ್ಟುಕೊಟ್ಟಂತಿದೆ. ಕೆಲವು ದಿನಗಳ ಹಿಂದೆಯೇ ಪಂತ್​ ಡೆಲ್ಲಿ ತಂಡದ ಪರ ರಿಟೈನ್ ಆಸಕ್ತಿ ಹೊಂದಿಲ್ಲ ಅವರು ಚೆನ್ನೈ ತಂಡ ಸೇರಲಿದ್ದಾರೆ ಎನ್ನಲಾಗಿತ್ತು. ಇದೀಗ ತಲೈವಾ ಎಂದು ರಜನಿಕಾಂತ್ ಶೈಲಿಯಲ್ಲೇ ಫೋಟೊ ತೆಗೆಸಿಕೊಂಡಿರುವುದನ್ನು ನೋಡುವಾಗ ಈ ವರದಿ ಸತ್ಯವಾದಂತೆ ತೋರುತ್ತಿದೆ. ಧೋನಿ ಕೂಡ 2016ರಲ್ಲಿ ರಜನಿಕಾಂತ್ ಶೈಲಿಯಲ್ಲೇ ಫೋಟೊ ಶೂಟ್​ ಮಾಡಿಸಿದ್ದರು.

ಮಹೇಂದ್ರ ಸಿಂಗ್​ ಧೋನಿ ಮುಂದಿನ ವರ್ಷ ಐಪಿಎಲ್​ ಆಡುವುದು ಖಚಿತತೆ ಇಲ್ಲ. ಇಂಪ್ಯಾಕ್ಟ್​ ನಿಯಮ ಇದ್ದರೆ ಆಡುವುದಾಗಿ ಫ್ರಾಂಚೈಸಿ ಮೂಲಗಳು ಈಗಾಗಲೇ ಮಾಹಿತಿ ನೀಡಿದೆ. ಈ ಬಾರಿಯೇ ಧೋನಿ ನಿವೃತ್ತಿಯಾಗಬೇಕಿತ್ತು. ಆದರೆ ಅವರು ಇನ್ನೂ ನಿವೃತ್ತಿ ಪ್ರಕಟಿಸಿಲ್ಲ. ತಂಡದಲ್ಲಿ ಸೂಕ್ತ ವಿಕೆಟ್​ ಕೀಪರ್​ ಇಲ್ಲದ ಕಾರಣ ಧೋನಿ ತಮ್ಮ ಕಾಲು ನೋವಿನ ಮಧ್ಯೆಯೂ ಸಂಪೂರ್ಣವಾಗಿ ಕೀಪಿಂಗ್​ ನಡೆಸಿದ್ದರು. ಧೋನಿ ಸ್ಥಾನಕ್ಕೆ ಪಂತ್​ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯೊಂದು ಕಂಡುಬಂದಿದೆ.

ಮಹೇಂದ್ರ ಸಿಂಗ್​ ಧೋನಿ ಮನೆಯ ಯಾವುದೇ ವಿಶೇಷ ಕಾರ್ಯಕ್ರಮದಲ್ಲೂ, ರಿಷಭ್​ ಪಂತ್​ ಕಾಣಿಸಿಕೊಳ್ಳುವುದು ಸರ್ವೇ ಸಾಮಾನ್ಯ. ಅಣ್ಣನ ಸ್ಥಾನದಲ್ಲಿ ನಿಂತು ಧೋನಿ ಅವರು ಪಂತ್​ಗೆ ಸಲಹೆ ನೀಡುತ್ತಾರೆ. ಪಂತ್​ ಕೂಡ ಧೋನಿ ಪರಿವಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಧೋನಿಯೇ ಪಂತ್​ ಅವರನ್ನು ಸಿಎಸ್​ಕೆ ತಂಡಕ್ಕೆ ಆಹ್ವಾನಿಸಬಹುದು. ಪಂತ್​ ಚೆನ್ನೈ ಸೇರಿದರೆ ಕೀಪಿಂಗ್​ ನಡೆಸಬಹುದು. ಧೋನಿ ಇಂಪ್ಯಾಕ್ಟ್​ ಆಟಗಾರನಾಗಿ ಬ್ಯಾಟಿಂಗ್​ ಮಾತ್ರ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ Rishabh Pant: ಕೀಪಿಂಗ್​ ಬಿಟ್ಟು ಬೌಲಿಂಗ್​ ನಡೆಸಿದ ರಿಷಭ್​ ಪಂತ್​; ವಿಡಿಯೊ ವೈರಲ್​

ಬೌಲಿಂಗ್​ ನಡೆಸಿದ್ದ ಪಂತ್​


ಕೆಲ ದಿನಗಳ ಹಿಂದಷ್ಟೇ ರಿಷಭ್​ ಪಂತ್​ ದೆಹಲಿ ಪ್ರೀಮಿಯರ್ ಲೀಗ್ 2024 ರ(Delhi Premier League T20 2024) ಉದ್ಘಾಟನಾ ಆವೃತ್ತಿಯ ಪಂದ್ಯದಲ್ಲಿ ಬೌಲಿಂಗ್(rishabh pant bowling)​ ನಡೆಸುವ ಮೂಲಕ ಗಮನಸೆಳೆದಿದ್ದರು. ಪಂತ್ ಪಂದ್ಯದ ಅಂತಿಮ ಓವರ್​ನಲ್ಲಿ ಎದುರಾಳಿ ಸೌತ್​ ಡೆಲ್ಲಿ ತಂಡಕ್ಕೆ 6 ಎಸೆತಗಳಲ್ಲಿ ಗೆಲುವಿಗೆ ಒಂದು ರನ್​ ಬೇಕಿದ್ದಾಗ ಸ್ಪಿನ್​ ಬೌಲಿಂಗ್​ ನಡೆಸಿದ್ದರು. ಬೌಲಿಂಗ್​ ನಡೆಸಿದ್ದ ವಿಡಿಯೊ ವೈರಲ್ ಆಗಿತ್ತು.

Continue Reading

ಸಿನಿಮಾ

Celina Jaitley: ಮರ್ಮಾಂಗ ತೋರಿಸಿದ ದುಷ್ಟ; ಟೀಕೆಗೆ ಒಳಗಾದದ್ದು ನಾನು: ಕರಾಳ ನೆನಪು ಬಿಚ್ಚಿಟ್ಟ ನಟಿ

Celina Jaitley: ಬಾಲ್ಯದಲ್ಲಿ ತಮಗಾದ ಕೆಟ್ಟ ಅನುಭವವನ್ನು ಜೇಟ್ಲಿ ತೆರೆದಿಟ್ಟಿದ್ದಾರೆ. ತಮ್ಮ ಆರನೇ ತರಗತಿ ಫೋಟೋ ಒಂದನ್ನು ಪೋಸ್ಟ್‌ ಮಾಡಿದ ಸೆಲಿನಾ, ಇಂಥ ಪ್ರಕರಣಗಳಲ್ಲಿ ಯಾವಾಗಲೂ ಬಲಿಪಶುವನ್ನೇ ತಪ್ಪು ಮಾಡಿದವಳು ಎಂದು ಹೇಳಲಾಗುತ್ತದೆ ಎಂದಿದ್ದಾರೆ.

VISTARANEWS.COM


on

Celina Jaitley
Koo

ಮುಂಬಯಿ: ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ (Physical Abuse) ಪ್ರಕರಣ, ಅನೇಕ ಬಾಲಿವುಡ್‌ ಸೆಲೆಬ್ರಿಟಿಗಳು (Bollywood celebrity) ಕೂಡ ತಮಗಾದ ಲೈಂಗಿಕ ಕಿರುಕುಳ, ಯಾತನೆ, ನೋವುಗಳ ಬಗ್ಗೆ ಮಾತನಾಡುವಂತೆ ಮಾಡಿದೆ. ಅದೇ ಸರಣಿಯಲ್ಲಿ ನಟಿ ಸೆಲಿನಾ ಜೇಟ್ಲಿ (Celina Jaitley) ತಮ್ಮ ಜೀವನದಲ್ಲಿ ನಡೆದ ಆಘಾತಕಾರಿ ಘಟನೆಯೊಂದನ್ನು ಇದೀಗ ಬಿಚ್ಚಿಟ್ಟಿದ್ದಾರೆ.

ಬಾಲ್ಯದಲ್ಲಿ ತಮಗಾದ ಕೆಟ್ಟ ಅನುಭವವನ್ನು ಜೇಟ್ಲಿ ತೆರೆದಿಟ್ಟಿದ್ದಾರೆ. ತಮ್ಮ ಆರನೇ ತರಗತಿ ಫೋಟೋ ಒಂದನ್ನು ಪೋಸ್ಟ್‌ ಮಾಡಿದ ಸೆಲಿನಾ, ಇಂಥ ಪ್ರಕರಣಗಳಲ್ಲಿ ಯಾವಾಗಲೂ ಬಲಿಪಶುವನ್ನೇ ತಪ್ಪು ಮಾಡಿದವಳು ಎಂದು ಹೇಳಲಾಗುತ್ತದೆ. ಈ ಫೋಟೋ ನಾನು ಆರನೇ ತರಗತಿಯಲ್ಲಿದ್ದಾಗಿನದು. ಹತ್ತಿರದ ಕಾಲೇಜಿನ ಹುಡುಗನೊಬ್ಬ ನಾನು ಶಾಲೆಯಿಂದ ಹೊರಬರುವುದನ್ನು ಕಾಯುತ್ತಿದ್ದ. ಅವನು ಪ್ರತಿದಿನ ನನ್ನ ಶಾಲೆಯ ರಿಕ್ಷಾವನ್ನು ಹಿಂಬಾಲಿಸಿ ಮನೆಯವರೆಗೆ ಬರುತ್ತಿದ್ದ. ಕೆಲವು ದಿನಗಳ ನಂತರ, ನನ್ನ ಗಮನವನ್ನು ಸೆಳೆಯಲು, ಅವನು ರಸ್ತೆಯ ಮಧ್ಯದಲ್ಲಿ ನನ್ನ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದ್ದ. ಅಲ್ಲಿದ್ದವರು ಯಾರೂ ಆತನ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದಿದ್ದಾರೆ.

ಇದರ ಮಧ್ಯೆ ನನ್ನ ಟೀಚರ್‌ ನನ್ನ ಮೇಲೆಯೇ ಆರೋಪ ಮಾಡಿದ್ರು. ನಾನು ಬಿಗಿಯಾದ ಬಟ್ಟೆ ಧರಿಸುತ್ತೇನೆ, ಕೂದಲಿಗೆ ಎಣ್ಣೆ ಹಚ್ಚಿ, ಕೂದಲು ಕಟ್ಟೋದಿಲ್ಲ. ಹಾಗಾಗಿ ಹುಡುಗ ನನ್ನ ಹಿಂದೆ ಬಿದ್ದಿದ್ದಾನೆ ಎಂದು ಟೀಚರ್ಸ್‌ ನನಗೆ ಹೇಳುತ್ತಿದ್ದರು. ಶಿಕ್ಷಕರ ಈ ಮಾತಿನ ನಂತರ ನಾನು ತುಂಬಾ ದಿನ ನನ್ನನ್ನೇ ದೂಷಿಸಿಕೊಳ್ಳುತ್ತಿದ್ದೆ. ಒಂದು ದಿನ ಬೆಳಿಗ್ಗೆ ಶಾಲೆಗೆ ಹೋಗಲು ರಿಕ್ಷಾಕ್ಕೆ ಕಾಯುತ್ತಿದ್ದಾಗ ವ್ಯಕ್ತಿಯೊಬ್ಬ ತನ್ನ ಖಾಸಗಿ ಅಂಗ ತೋರಿಸಿದ. ತೀವ್ರ ಮುಜುಗರವಾಯಿತು. ಆದರೆ ಟೀಚರ್‌ ಮಾತನ್ನು ನೆನೆದುಕೊಂಡು ಆಗ್ಲೂ ನಾನು ನನ್ನನ್ನು ದೂಷಿಸಿಕೊಂಡಿದ್ದೆ ಎಂದು ಸೆಲಿನಾ ಹೇಳಿದ್ದಾರೆ.

ನಾನು 11ನೇ ತರಗತಿಯಲ್ಲಿದ್ದಾಗ, ಹುಡುಗರು ನನ್ನ ಸ್ಕೂಟಿ ಬ್ರೇಕ್‌ ಕಟ್‌ ಮಾಡಿದ್ದರು. ಅವರು ಅಶ್ಲೀಲವಾಗಿ ನಿಂದಿಸಿದ್ದರು. ನೀನು ಜೀನ್ಸ್‌ ಧರಿಸಿ, ಮಾಡರ್ನ್‌ ಆಗಿ ಕಾಣುವ ಕಾರಣ ಯುವಕರು ನಿನ್ನನ್ನು ತಪ್ಪು ತಿಳಿದಿದ್ದಾರೆಂದು ಶಿಕ್ಷಕಿ ಆಗ್ಲೂ ಹೇಳಿದ್ದರಂತೆ. ಇದ್ರಿಂದ ನಾನು ತುಂಬಾ ನೋವು ತಿಂದಿದ್ದೆ ಎಂದು ಸೆಲಿನಾ ಸುದೀರ್ಘ ಪೋಸ್ಟ್‌ ಹಾಕಿದ್ದಾರೆ.

ʼಯುವತಿಯರು ಕಾಮಾಸಕ್ತಿ ನಿಯಂತ್ರಿಸಿಕೊಳ್ಳಿʼ ಎಂದ ನ್ಯಾಯಾಧೀಶರ ಸಲಹೆಗೆ ಕನಲಿದ ಸುಪ್ರೀಂ ಕೋರ್ಟ್!‌

ನವದೆಹಲಿ: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಖುಲಾಸೆಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ (Kolkata high court) ಆದೇಶವನ್ನು ಸುಪ್ರೀಂ ಕೋರ್ಟ್ (Supreme Court) ಇಂದು ರದ್ದುಗೊಳಿಸಿದೆ. ಇದೇ ಪ್ರಕರಣದಲ್ಲಿ. “ಹದಿಹರೆಯದ ಹುಡುಗಿಯರು ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಕೊಳ್ಳಬೇಕು” ಎಂದು ನ್ಯಾಯಾಧೀಶರು ನೀಡಿದ ʼಸಲಹೆʼಯ ಬಗ್ಗೆ ಕಟುವಾಗಿ ಆಕ್ಷೇಪ ವ್ಯಕ್ತಪಡಿಸಿದೆ.

ನ್ಯಾಯಾಧೀಶರಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರು ಇದ್ದ ನ್ಯಾಯಪೀಠ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣಗಳನ್ನು ವ್ಯವಹರಿಸುವ ಕುರಿತು ನ್ಯಾಯಾಂಗ ಅಧಿಕಾರಿಗಳಿಗೆ ಹಲವಾರು ನಿರ್ದೇಶನಗಳನ್ನು ನೀಡಿದೆ ಎಂದು ಹೇಳಿದರು. ಪೀಠದ ಪರವಾಗಿ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಓಕಾ, ನ್ಯಾಯಾಲಯಗಳು ತೀರ್ಪುಗಳನ್ನು ಹೇಗೆ ಬರೆಯಬೇಕು ಎಂಬುದರ ಬಗ್ಗೆಯೂ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಹೇಳಿದರು.

ಕಳೆದ ವರ್ಷ ಡಿಸೆಂಬರ್ 8ರಂದು ಸುಪ್ರೀಂ ಕೋರ್ಟ್ ಈ ತೀರ್ಪನ್ನು ಟೀಕಿಸಿತ್ತು. ಕೋಲ್ಕತ್ತಾ ಉಚ್ಚ ನ್ಯಾಯಾಲಯದ ಕೆಲವು ಅವಲೋಕನಗಳನ್ನು “ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ” ಎಂದು ಬಣ್ಣಿಸಿತ್ತು. ಹೈಕೋರ್ಟ್‌ನ ವಿಭಾಗೀಯ ಪೀಠವು ಮಾಡಿದ ಕೆಲವು ಅವಲೋಕನಗಳನ್ನು ಗಮನಕ್ಕೆ ತೆಗೆದುಕೊಂಡ ಪೀಠ, ತೀರ್ಪುಗಳನ್ನು ಬರೆಯುವಾಗ ನ್ಯಾಯಾಧೀಶರು “ಬೋಧನೆ” ಮಾಡಬಾರದು ಎಂದು ಹೇಳಿತು.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

Continue Reading

ಬೆಂಗಳೂರು

Kannada New Movie: ʼಲಂಗೋಟಿ ಮ್ಯಾನ್ʼ ಚಿತ್ರದ ಟೀಸರ್ ಬಿಡುಗಡೆಗೊಳಿಸಿದ ನಟ ಶರಣ್

ನಿರ್ದೇಶಕಿ ಸಂಜೋತ ಭಂಡಾರಿ ಅವರು ಕಥೆ ಬರೆದು ನಿರ್ದೇಶಿಸಿರುವ “ಲಂಗೋಟಿ ಮ್ಯಾನ್” ಚಿತ್ರದ (Kannada New Movie) ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ ಶರಣ್, ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಸಂಜೋತ ಭಂಡಾರಿ ಕಥೆ ಬರೆದು ನಿರ್ದೇಶಿಸಿರುವ ʼಲಂಗೋಟಿ ಮ್ಯಾನ್ʼ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ ಶರಣ್, ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ (Kannada New Movie) ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇದನ್ನೂ ಓದಿ: Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

ನಾನು ಹತ್ತು ವರ್ಷಗಳ ಹಿಂದೆ “ಮಿರ್ಚಿ ಮಂಡಕ್ಕಿ ಖಡಕ್ ಚಾಯ್” ಚಿತ್ರವನ್ನು ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕಿ ಸಂಜೋತ ಭಂಡಾರಿ, ನಾನು ಬೇರೆ ಒಂದು ಚಿತ್ರದ ಕಥೆ ಮಾಡುತ್ತಿದ್ದಾಗ ಈ ಕಾನ್ಸೆಪ್ಟ್ ಬಂತು‌. ಆ ಚಿತ್ರದ ಕಥೆ ಮಾಡುತ್ತಿದ್ದಾಗಲೂ ನನಗೆ ಇದೇ ಕಥೆ ತಲೆಗೆ ಬರುತ್ತಿತ್ತು. ಕೊನೆಗೆ “ಲಂಗೋಟಿ ಮ್ಯಾನ್” ಸಿನಿಮಾ ಸ್ವರೂಪ ಪಡೆದುಕೊಂಡಿತು.

ಈ ಚಿತ್ರದಲ್ಲಿ ನಿಜವಾದ ಹೀರೋ ಅಂದರೆ “ಲಂಗೋಟಿ” ನೇ. ಆಕಾಶ್ ರಾಂಬೊ, ಧೀರೇಂದ್ರ, ಮಹಾಲಕ್ಷ್ಮಿ, ಹುಲಿ ಕಾರ್ತಿಕ್, ಸಂಹಿತ ವಿನ್ಯ, ಗಿಲ್ಲಿ ನಟ, ಸ್ನೇಹ ಋಷಿ, ಪವನ್, ಆಟೋ ನಾಗರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ‌. ಕಥೆ ಹಾಗೂ ಸಂಭಾಷಣೆಯಲ್ಲೂ ಅನೇಕ ಮಿತ್ರರು ಸಹಾಯ ಮಾಡಿದ್ದಾರೆ. ಚಿತ್ರ ಗೆಲುವ ವಿಶ್ವಾಸ ನನಗಂತೂ ಇದೆ‌. ಟೀಸರ್ ಬಿಡುಗಡೆ ಮಾಡಿಕೊಟ್ಟ ಶರಣ್ ಅವರಿಗೆ ಹಾಗೂ ಸಹಕಾರ ನೀಡಿದ ನನ್ನ ತಂಡಕ್ಕೆ ಧನ್ಯವಾದ ಎಂದರು‌.

ಈ ಸಮಾರಂಭಕ್ಕೆ ಬಂದು ನಿರ್ದೇಶಕರ ಮಾತು ಕೇಳಿದ ಮೇಲೆ ಅವರಿಗೆ ಚಿತ್ರದ ಮೇಲಿರುವ ಭರವಸೆ ಹಾಗೂ ತಾವೊಬ್ಬರೆ ಕ್ರೆಡಿಟ್ ತೆಗೆದುಕೊಳ್ಳದೆ, ಚಿತ್ರತಂಡದ ಪ್ರತಿಯೊಬ್ಬರನ್ನು ಪರಿಚಯಿಸಿದ ರೀತಿ ಕಂಡು ಸಂತೋಷವಾಯಿತು. ಈಗಂತೂ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನೇ ಜನ ಹೆಚ್ಚು ಇಷ್ಟಪಡುತ್ತಿದ್ದಾರೆ. ಆ ಸಾಲಿಗೆ “ಲಂಗೋಟಿ ಮ್ಯಾನ್” ಸಹ ಸೇರಲಿ ಎಂದು ನಟ ಶರಣ್ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸೌತ್ ಡಿಸಿಸಿ ಪ್ರೆಸಿಡೆಂಟ್ ಓ. ಮಂಜುನಾಥ್ ಅವರು ಚಿತ್ರತಂಡಕ್ಕೆ ಶುಭ ಹಾರೈಸಿದರು.

ಚಿತ್ರದಲ್ಲಿ ನಟಿಸಿರುವ ಆಕಾಶ್ ರಾಂಬೊ, ಧೀರೇಂದ್ರ, ಸಂಹಿತ ವಿನ್ಯ ಮುಂತಾದ ಕಾಲವಿದರು ಚಿತ್ರದ ಕುರಿತು ಮಾತನಾಡಿದರು.

ಇದನ್ನೂ ಓದಿ: Gold Rate Today: ಸ್ವರ್ಣ ಪ್ರಿಯರಿಗೆ ಕೊಂಚ ನಿರಾಳ; ಚಿನ್ನದ ದರ ಇಳಿಕೆ

“ಲಂಗೋಟಿ ಮ್ಯಾನ್” ಚಿತ್ರದ ಟೀಸರ್ ‌ಹಾಗೂ ಪೋಸ್ಟರ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟೀಸರ್ ನೋಡಿದಾಗ ಮನೋರಂಜನಾ ಪ್ರಧಾನ ಚಿತ್ರ ಎನಿಸಿದರೂ, ಚಿತ್ರದ ಮೂಲಕ‌‌ ಬೇರೊಂದು ವಿಷಯವನ್ನು ಹೇಳ ಹೊರಟಿರುವುದು ತಿಳಿಯುತ್ತದೆ.‌

Continue Reading
Advertisement
puttur stabbing case
ಕ್ರೈಂ2 mins ago

Stabbing Case: ಪುತ್ತೂರು ನಗರ ಉದ್ವಿಗ್ನತೆಗೆ ಕಾರಣವಾದ ವಿದ್ಯಾರ್ಥಿನಿಗೆ ಬ್ಲೇಡ್‌ ಇರಿತ ಪ್ರಕರಣ; ನಿಜಕ್ಕೂ ನಡೆದದ್ದೇನು?

Cincinnati Open
ಕ್ರೀಡೆ32 mins ago

ATP Cincinnati Open: ಚೊಚ್ಚಲ ಪ್ರಶಸ್ತಿ ಗೆದ್ದ ಜಾನಿಕ್‌ ಸಿನ್ನರ್‌, ಅರಿನಾ ಸಬಲೆಂಕಾ

students death
ಕ್ರೈಂ40 mins ago

Students Death: ಇಬ್ಬರು ಮಕ್ಕಳ ಜೀವ ಕಸಿದ ಮೊಬೈಲ್;‌ ತಂದೆ- ತಾಯಿ ಫೋನ್ ಕೊಡದಿದ್ದುದಕ್ಕೆ ಆತ್ಮಹತ್ಯೆ

Agritech India 2024
ಬೆಂಗಳೂರು1 hour ago

Agritech India 2024: ಬೆಂಗಳೂರಿನಲ್ಲಿ ʼಅಗ್ರಿಟೆಕ್ ಇಂಡಿಯಾ 2024ʼಕ್ಕೆ ಆ. 22ರಂದು ಚಾಲನೆ

ajmer pocso case
ಕ್ರೈಂ1 hour ago

Ajmer Pocso Case: 32 ವರ್ಷ ಹಿಂದಿನ ಅಜ್ಮೀರ್‌ ಪೋಕ್ಸೋ ಕೇಸ್‌ನಲ್ಲಿ 6 ಮಂದಿಗೆ ಜೀವಾವಧಿ ಶಿಕ್ಷೆ

Imran Khan
ವಿದೇಶ1 hour ago

Imran Khan: ಆಕ್ಸ್‌ಫರ್ಡ್ ವಿವಿ ಕುಲಪತಿಯಾಗಲು ಅರ್ಜಿ ಸಲ್ಲಿಸಿದ ಪಾಕ್‌ ಮಾಜಿ ಪ್ರಧಾನಿ!

Reliance Jio
ಕರ್ನಾಟಕ1 hour ago

Reliance Jio: ಜಿಯೋ ಟಿವಿ ಪ್ಲಸ್ 2 ಇನ್ 1 ಆಫರ್; ಒಂದೇ ಸಂಪರ್ಕದಲ್ಲಿ ನೋಡಿ ಎರಡು ಟಿವಿ!

Kannada New Movie
ಕರ್ನಾಟಕ2 hours ago

Kannada New Movie: ಟೀಸರ್‌ನಲ್ಲೇ ಕುತೂಹಲ ಮೂಡಿಸಿದೆ ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರ

EV charging
ಕರ್ನಾಟಕ2 hours ago

EV Charging: ಕರ್ನಾಟಕವೇ ಕಿಂಗ್;‌ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ರಾಜ್ಯ!

What is Lateral Entry?
ದೇಶ2 hours ago

What is Lateral Entry?: ಏನಿದು ಲ್ಯಾಟರಲ್ ಎಂಟ್ರಿ ವಿವಾದ? ಕಾಂಗ್ರೆಸ್‌ ಆರೋಪವೇನು? ಬಿಜೆಪಿಯ ವಾದವೇನು?

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌