KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ - Vistara News

ಕರ್ನಾಟಕ

KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

KEA : ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನವಾಗಿದೆ.

VISTARANEWS.COM


on

KEA
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಸಲ್ಲಿಸಿರುವ ಅರ್ಜಿ ಅಂಗೀಕೃತ ವಾಗಿರದಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಆ.26ರೊಳಗೆ ಪೂರಕ ದಾಖಲೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಈ ಬಗ್ಗೆ ಸೂಚನೆ ನೀಡಿದ್ದು, ಪ್ರಾಧಿಕಾರವು ಪೂರಕ ದಾಖಲೆಗಳನ್ನು ಪರಿಗಣಿಸಿ ಅರ್ಜಿಗಳನ್ನು ದೃಢೀಕರಿಸಲಿದೆ ಎಂದಿದ್ದಾರೆ. ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಯನ್ನು ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಪರಿಶೀಲಿಸಬಹುದು.

ಕಡ್ಡಾಯ ಕನ್ನಡ ಪರೀಕ್ಷೆ

ಗ್ರಾಮ ಆಡಳಿತ ಹುದ್ದೆಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಲೇಬೇಕು. ಸೆಪ್ಟೆಂಬರ್ 29ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗುವುದು.

ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಈ ಪರೀಕ್ಷೆಗೆ ತಪ್ಪದೇ ಹಾಜರಾಗಬೇಕೆಂದು ಸೂಚಿಸಲಾಗಿದೆ. ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021 ರ ಅನ್ವಯ, ಕನ್ನಡ ಭಾಷಾ ಪರೀಕ್ಷೆಯಲ್ಲಿ 150 ಅಂಕಗಳಿಗೆ ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಅಕ್ಟೋಬರ್ 27ರಂದು ಪತ್ರಿಕೆ- 1 ಮತ್ತು ಪತ್ರಿಕೆ-2 ಇವುಗಳನ್ನು ಒಳಗೊಂಡ ಸ್ಪರ್ಧಾತ್ಮಕ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ವಿವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Stabbing Case: ಪುತ್ತೂರು ನಗರ ಉದ್ವಿಗ್ನತೆಗೆ ಕಾರಣವಾದ ವಿದ್ಯಾರ್ಥಿನಿಗೆ ಬ್ಲೇಡ್‌ ಇರಿತ ಪ್ರಕರಣ; ನಿಜಕ್ಕೂ ನಡೆದದ್ದೇನು?

Stabbing Case: ವಿದ್ಯಾರ್ಥಿನಿ ಮುಸ್ಲಿಂ ಸಮುದಾಯಕ್ಕೆ ಹಾಗೂ ವಿದ್ಯಾರ್ಥಿ ಹಿಂದೂ ಸಮುದಾಯಕ್ಕೆ ಸೇರಿದ್ದು ಇಬ್ಬರ ಮಧ್ಯೆ ಸಣ್ಣ ವಿಷಯಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ. ಮಾತಿಗೆ ಮಾತು ಬೆಳೆದು ಹರಿತವಾದ ವಸ್ತುವಿನಿಂದ ಗೀರಿದ ಗಾಯ ಉಂಟಾಗಿದ್ದು ವಿದ್ಯಾರ್ಥಿ ತನಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವಿದ್ಯಾರ್ಥಿನಿ ದೂರಿದ್ದಾಳೆ.

VISTARANEWS.COM


on

puttur stabbing case
Koo

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು (Puttur) ನಗರದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ಸಹಪಾಠಿ ವಿದ್ಯಾರ್ಥಿಯೋರ್ವ ಬ್ಲೇಡ್‌ನಿಂದ ಗೀರಿರುವ (Stabbing Case) ಆರೋಪದ ಹಿನ್ನೆಲೆಯಲ್ಲಿ ನಗರದಲ್ಲಿ ತುಸು ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಇಬ್ಬರೂ ಭಿನ್ನ ಸಮುದಾಯಕ್ಕೆ ಸೇರಿದವರಾದ ಹಿನ್ನೆಲೆಯಲ್ಲಿ ಎರಡೂ ಕಡೆಯ ಮುಖಂಡರು ಆಸ್ಪತ್ರೆ ಮುಂಭಾಗ ಜಮಾಯಿಸಿದ ಪರಿಣಾಮ ಉದ್ವಿಗ್ನ ಸ್ಥಿತಿ (Puttur Tense) ನಿರ್ಮಾಣಗೊಂಡಿದೆ.

ಗಾಯಾಳು ವಿದ್ಯಾರ್ಥಿನಿ ಬನ್ನೂರಿನವಳಾಗಿದ್ದು, ವಿದ್ಯಾರ್ಥಿ ಕಬಕ ಸಮೀಪದವನು. ಇಬ್ಬರೂ ಒಂದೇ ಕಾಲೇಜಿನಲ್ಲಿ ಕಲಿಯುತ್ತಿದ್ದಾರೆ. ಇವರಿಬ್ಬರು ಕೊಂಬೆಟ್ಟು ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಗಳು. ವಾಣಿಜ್ಯ, ಕಲಾ ವಿಭಾಗದ ವಿದ್ಯಾರ್ಥಿಗಳಾಗಿದ್ದು ಇತಿಹಾಸ ವಿಷಯದಲ್ಲಿ ಒಂದೇ ತರಗತಿಯ ಸಹಪಾಠಿಗಳಾಗಿದ್ದರು. ವಿದ್ಯಾರ್ಥಿನಿ ಮುಸ್ಲಿಂ ಸಮುದಾಯಕ್ಕೆ ಹಾಗೂ ವಿದ್ಯಾರ್ಥಿ ಹಿಂದೂ ಸಮುದಾಯಕ್ಕೆ ಸೇರಿದ್ದು ಇಬ್ಬರ ಮಧ್ಯೆ ಸಣ್ಣ ವಿಷಯಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ. ಮಾತಿಗೆ ಮಾತು ಬೆಳೆದು ಹರಿತವಾದ ವಸ್ತುವಿನಿಂದ ಗೀರಿದ ಗಾಯ ಉಂಟಾಗಿದ್ದು ವಿದ್ಯಾರ್ಥಿ ತನಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವಿದ್ಯಾರ್ಥಿನಿ ದೂರಿದ್ದಾಳೆ.

ಬೆಳಗ್ಗೆ ಕಾಲೇಜು ಆರಂಭಕ್ಕೆ ಮೊದಲು ಪುತ್ತೂರು ಮುಖ್ಯ ಆಂಚೆ ಕಚೇರಿಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಬರುತ್ತಿರುವ ವೇಳೆ ಈ ಘಟನೆ ನಡೆದಿದೆ. ಇಲ್ಲಿ ಇಬ್ಬರ ನಡುವೆ ಜಗಳ ಸಂಭವಿಸಿ ಅದು ತರಗತಿ ತನಕವೂ ಮುಂದುವರಿದಿದೆ ಎನ್ನಲಾಗಿದೆ. ಇನ್ನೊಂದು ಮಾಹಿತಿ ಪ್ರಕಾರ, ಪ್ರಥಮ ಅವಧಿಯ ತರಗತಿಯಲ್ಲಿ ಇಬ್ಬರ ನಡುವೆ ಜಗಳ ಸಂಭವಿಸಿದ್ದು ಈ ವೇಳೆ ವಿದ್ಯಾರ್ಥಿ ಹರಿತವಾದ ವಸ್ತುವಿನಿಂದ ತಿವಿದಿದ್ದಾನೆ ಎನ್ನಲಾಗಿದೆ. ಆದರೆ ಕೆಲ ವಿದ್ಯಾರ್ಥಿಗಳ ಪ್ರಕಾರ ಆತ ತಿವಿದಿಲ್ಲ. ಗಾಯ ಹೇಗೆ ಸಂಭವಿಸಿದೆ ಅನ್ನುವುದೇ ಆಶ್ಚರ್ಯಕರ ಸಂಗತಿ ಎನ್ನುತ್ತಾರೆ.

ಘಟನೆಯ ಮಾಹಿತಿ ಪಡೆದ ವಿದ್ಯಾರ್ಥಿನಿ ತಾಯಿ ನೀಡಿದ ದೂರಿನ ಪ್ರಕಾರ ನಗರ ಠಾಣಾ ಪೊಲೀಸರು ಕಾಲೇಜಿಗೆ ಅಗಮಿಸಿ ಸಿಸಿಟಿವಿ ವೀಡಿಯೋ ಪರಿಶೀಲಿಸಿದ್ದಾರೆ. ಆಕೆಯ ಜತೆಗಿದ್ದ ಬೇರೆ ವಿದ್ಯಾರ್ಥಿಗಳ ಬಳಿಯೂ ಮಾಹಿತಿ ಕಲೆ ಹಾಕಿದ್ದಾರೆ. ಪೊಲೀಸರು ಆರೋಪಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ವಿದ್ಯಾರ್ಥಿಗಳಿಬ್ಬರ ಸಹಪಾಠಿಗಳನ್ನು ಕರೆಯಿಸಿ ವಾಸ್ತವ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

ಇಬ್ಬರೂ ಭಿನ್ನ ಧರ್ಮದ ವಿದ್ಯಾರ್ಥಿಗಳು ಎಂಬ ಮಾಹಿತಿ ಹರಡುತಿದ್ದಂತೆ ಆಸ್ಪತ್ರೆಗೆ ಒಂದು ಸಮುದಾಯದ ನೂರಾರು ಮಂದಿ ಆಗಮಿಸಿದ್ದು ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಪೊಲೀಸರು ಆಸ್ಪತ್ರೆ ಮುಂಭಾಗ ಬಿಗಿ ಬಂದೋಬಸ್ತು ಮಾಡಿ, ಮುಖಂಡರನ್ನು ಸಮಾಧಾನಿಸಿದರು.

ಗಾಯವು ಗಾಜು ತಗಲಿ ಆದದ್ದು ಎಂದು ಪೊಲೀಸರಿಗೆ ತಿಳಿಸುವಂತೆ ಕಾಲೇಜಿನ ಉಪನ್ಯಾಸಕಿಯೊಬ್ಬರು ಹೇಳಿದ್ದಾರೆ ಎಂದು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿ ಹೇಳಿದ್ದಾಳೆ. ಈ ಉಪನ್ಯಾಸಕಿ ವಿರುದ್ಧ ಪ್ರಕರಣ ದಾಖಲಿಸಿ ಕಾಲೇಜಿನಿಂದ ಅಮಾನತು ಮಾಡುವಂತೆ ವಿದ್ಯಾರ್ಥಿನಿ ಪರ ಹಾಜರಿದ್ದ ಹಲವಾರು ಮಂದಿ ಆಗ್ರಹಿಸಿದ್ದಾರೆ. ಬೆಳಗ್ಗೆ 9.20ಕ್ಕೆ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತ್ತು. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ಸತ್ಯಾಸತ್ಯತೆ ಆ ಮೇಲೆ ತಿಳಿಯಲಿದೆ. ಇದು ಕಾಲೇಜಿನ ಆವರಣದೊಳಗೆ ನಡೆದ ಘಟನೆ ಅಲ್ಲ ಅನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಕಾಲೇಜಿನ ಪ್ರಾಂಶುಪಾಲ ಗೋಪಾಲ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Murder Case: ಬೆಳ್ತಂಗಡಿ ಬಳಿ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಭೀಕರ ಕೊಲೆ

Continue Reading

ಕ್ರೈಂ

Students Death: ಇಬ್ಬರು ಮಕ್ಕಳ ಜೀವ ಕಸಿದ ಮೊಬೈಲ್;‌ ತಂದೆ- ತಾಯಿ ಫೋನ್ ಕೊಡದಿದ್ದುದಕ್ಕೆ ಆತ್ಮಹತ್ಯೆ

Students Death: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಕರಾಯದಲ್ಲಿ ನೀಲಮ್ ಎಂಬ ಬಾಲಕಿ ನೇಣು ಬಿಗಿದು ಸಾವನ್ನಪ್ಪಿದ್ದರೆ, ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ವಿದ್ಯಾರ್ಥಿ ಪ್ರಥಮೇಶ್ ಬ್ಯಾಗ್ ಸಹಿತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡೂ ಪ್ರಕರಣಗಳು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದೆ.

VISTARANEWS.COM


on

students death
Koo

ಮಂಗಳೂರು: ಮೊಬೈಲ್‌ ಬಳಕೆ ಸಾಕು ಮಾಡಿ (Smartphone Use) ಎಂದು ಪೋಷಕರು ಬುದ್ಧಿ ಹೇಳಿ ಫೋನ್‌ ಎತ್ತಿಟ್ಟದ್ದರಿಂದ ಕೋಪಗೊಂಡ ಇಬ್ಬರು ಮಕ್ಕಳು ಆತ್ಮಹತ್ಯೆ (Students Death) ಮಾಡಿಕೊಂಡಿದ್ದಾರೆ. ಈ ಎರಡು ಪ್ರತ್ಯೇಕ ಆತ್ಮಹತ್ಯೆ (Self Harming) ಪ್ರಕರಣಗಳು ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ (Udupi) ಜಿಲ್ಲೆಗಳಲ್ಲಿ ನಡೆದಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಕರಾಯದಲ್ಲಿ ನೀಲಮ್ ಎಂಬ ಬಾಲಕಿ ನೇಣು ಬಿಗಿದು ಸಾವನ್ನಪ್ಪಿದ್ದರೆ, ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ವಿದ್ಯಾರ್ಥಿ ಪ್ರಥಮೇಶ್ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡೂ ಪ್ರಕರಣಗಳು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದೆ.

ಪರೀಕ್ಷೆಗಳು ಹತ್ತಿರವಾಗುತ್ತಿವೆ, ಮೊಬೈಲ್ ಅನ್ನು ಪದೇ ಪದೇ ನೋಡಿ ಮಾರ್ಕ್ ಕಡಿಮೆ ಪಡೆಯಬೇಡ, ಓದುವುದರ ಕಡೆ ಗಮನ ಕೊಡು ಎಂದು ಹೆತ್ತವರು ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಹಾಗು ಅಂಜಾರು ಪೊಲೀಸ್ ಕ್ವಾರ್ಟರ್ಸ್ ಬಳಿ ನಿವಾಸಿ ಪ್ರಥಮೇಶ್ (17)ಗೆ ಆಗಾಗ್ಗೆ ಹೇಳುತ್ತಿದ್ದರು. ಇದಕ್ಕೆ ಪೂರಕವಾಗಿ ಆತನಿಗೆ ಪರೀಕ್ಷೆಗಳಲ್ಲಿ ಕಡಿಮೆ ಅಂಕಗಳು ಬರುತ್ತಿದ್ದವು. ಅತಿಯಾಗಿ ಮೊಬೈಲ್ ಬಳಸುತ್ತಿದ್ದ ಆತನ ಚಾಳಿ ಕಡಿಮೆ ಮಾಡಲು ಮನೆಯವರು ಬುದ್ಧಿ ಮಾತು ಹೇಳಿ ಮೊಬೈಲ್ ತೆಗೆದಿಟ್ಟಿದ್ದರು.

ಆದರೆ ಕಾಲೇಜಿಗೆಂದು ಹೋದ ವಿದ್ಯಾರ್ಥಿ, ಅತ್ತ ಕಾಲೇಜಿಗೂ ಹೋಗದೆ, ಮನೆಗೂ ಬಾರದೆ ನಾಪತ್ತೆಯಾಗಿದ್ದ. ಸೋಮವಾರ ಎಷ್ಟು ಹುಡುಕಿದರೂ ಪ್ರಥಮೇಶ್ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜಿನ ಸಮೀಪ ಜನವಸತಿರಹಿತ ಬಾವಿಯಲ್ಲಿ ಶಾಲಾ ಬ್ಯಾಗ್ ತೇಲುತ್ತಿರುವುದನ್ನು ಯಾರೋ ಕಂಡು ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ವಿದ್ಯಾರ್ಥಿಯ ಮೃತದೇಹ ಹೊರಕ್ಕೆ ತೆಗೆದಿದ್ದಾರೆ.

ತಾಯಿ ಮೇಲಿನ ಮುನಿಸಿಗೆ ಆತ್ಮಹತ್ಯೆ

ಪದೇ ಪದೇ ಮೊಬೈಲ್‌ನಲ್ಲಿ ವಿಡಿಯೋ ಕರೆ ಮಾಡಿ ಮಾತನಾಡುವುದನ್ನು ಆಕ್ಷೇಪಿಸಿದ ತಾಯಿಯ ಮೇಲೆ ಮುನಿಸಿಕೊಂಡ ಬಾಲಕಿ ಆತ್ಮಹತ್ಯೆ ಮಾಡಿಕೊಂಡು ಸೇಡು ತೀರಿಸಿಕೊಂಡಿದ್ದಾಳೆ. 14 ವರ್ಷದ ಈ ಬಾಲಕಿ ನೇಣು ಬಿಗಿದು ಸಾವನ್ನಪ್ಪಿದ್ದಾಳೆ. ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ.

ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ರಾಜ್ಯದ ಕುಟುಂಬದ ಬಾಲಕಿ ನೀಲಮ್ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಾರ್ಖಂಡ್‌ನ ಲಾತೆಹಾರ್ ಜಿಲ್ಲೆಯ ಜಲ್ತಾ ಪರ್ಸಾರಿ ಲೆಡ್‌ನ ನಿವಾಸಿಯಾಗಿರುವ ಸರ್ಜು ಬುಯ್ಯಾನ್ ಎಂಬವರು ತನ್ನ ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯದ ಕೊಂಬೆಟ್ಟಿ ಮಾರು ಎಂಬಲ್ಲಿ ಜಗದೀಶ್ ಸರಳಾಯ ಎಂಬವರ ತೋಟದ ಕೆಲಸಕ್ಕೆ ಆಗಮಿಸಿದ್ದರು.

ಭಾನುವಾರ ರಾತ್ರಿ 7.30ರ ಸುಮಾರಿಗೆ ತೋಟದ ಮಾಲೀಕರು ಒದಗಿಸಿದ ವಾಸ್ತವ್ಯದ ಕೋಣೆಯಲ್ಲಿ ನೀಲಮ್ ಮೊಬೈಲ್‌ನಲ್ಲಿ ಸಂಬಂಧಿಕಳೊಂದಿಗೆ ವಿಡಿಯೋ ಕರೆ ಮಾಡಿ ಮಾತನಾಡುತ್ತಿದ್ದಳು. ಇದಕ್ಕೆ ತಾಯಿ ಆಕ್ಷೇಪಿಸಿ, ಮೊಬೈಲ್ ಕಿತ್ತುಕೊಂಡಿದ್ದರು. ಇದರಿಂದ ಸಿಟ್ಟಾದ ಬಾಲಕಿ ತೋಟದ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ತಂದೆ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Murder Case: ಬೆಳ್ತಂಗಡಿ ಬಳಿ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಭೀಕರ ಕೊಲೆ

Continue Reading

ಬೆಂಗಳೂರು

Agritech India 2024: ಬೆಂಗಳೂರಿನಲ್ಲಿ ʼಅಗ್ರಿಟೆಕ್ ಇಂಡಿಯಾ 2024ʼಕ್ಕೆ ಆ. 22ರಂದು ಚಾಲನೆ

ದೇಶದ ಅತಿದೊಡ್ಡ ಕೃಷಿ ಮತ್ತು ಆಹಾರ ಉದ್ಯಮ ಮೇಳ ʼಅಗ್ರಿಟೆಕ್ ಇಂಡಿಯಾ 2024ʼ (Agritech India 2024) ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಗುರುವಾರ ಆರಂಭಗೊಳ್ಳಲಿದ್ದು, 3 ದಿನಗಳ ಕಾಲ ನಡೆಯಲಿರುವ ಈ ಬೃಹತ್ ಮೇಳವು ಆಗಸ್ಟ್‌ ‌22ರಂದು ಉದ್ಘಾಟನೆಗೊಳ್ಳಲಿದೆ. ಕೃಷಿ ಮತ್ತು ಆಹಾರ ಉದ್ಯಮ ಮೇಳವು 350 ಕ್ಕೂ ಹೆಚ್ಚು ಪ್ರದರ್ಶಕರನ್ನು ಒಳಗೊಂಡಿರುತ್ತದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Agritech India 2024
Koo

ಬೆಂಗಳೂರು: ದೇಶದ ಅತಿದೊಡ್ಡ ಕೃಷಿ ಮತ್ತು ಆಹಾರ ಉದ್ಯಮ ಮೇಳ ʼಅಗ್ರಿಟೆಕ್ ಇಂಡಿಯಾ 2024ʼ ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಗುರುವಾರ ಆರಂಭಗೊಳ್ಳಲಿದ್ದು, 3 ದಿನಗಳ ಕಾಲ ನಡೆಯಲಿರುವ ಈ ಬೃಹತ್ ಮೇಳವು (Agritech India 2024) ಆಗಸ್ಟ್‌ ‌22ರಂದು ಉದ್ಘಾಟನೆಗೊಳ್ಳಲಿದೆ. ಕೃಷಿ ಮತ್ತು ಆಹಾರ ಉದ್ಯಮ ಮೇಳವು 350 ಕ್ಕೂ ಹೆಚ್ಚು ಪ್ರದರ್ಶಕರನ್ನು ಒಳಗೊಂಡಿರುತ್ತದೆ. ಮೇಳಕ್ಕೆ ಅಂದಾಜು 25,000 ವ್ಯಾಪಾರ ಸಂದರ್ಶಕರು ಆಗಮಿಸುವ ನಿರೀಕ್ಷೆಯಿದೆ.

ಈ ಕುರಿತು ನಗರದ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಮುಖ್ಯಸ್ಥರು ಹಾಗೂ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಮಾತನಾಡಿ, “ಅಗ್ರಿಟೆಕ್ ಈವೆಂಟ್‌ ಮಹಿಳಾ ಉದ್ಯಮಿಗಳಿಗೆ ಉತ್ತಮ ವೇದಿಕೆಯನ್ನು ನೀಡುತ್ತಿದೆ. ಮಹಿಳೆಯರು ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುವ ಅವಕಾಶವನ್ನು ಈ ಬೃಹತ್‌ ಮೇಳವು ಒದಗಿಸಲಿದೆ. ಈ ಮೇಳದಲ್ಲಿ ಜಾಗತಿಕ ಮತ್ತು ರಾಷ್ಟ್ರೀಯ ಖರೀದಿದಾರರೊಂದಿಗೆ ಬಿ2ಬಿ ಸಭೆಗಳನ್ನು ಆಯೋಜಿಸಲಾಗುತ್ತದೆ. ಈ ಮೂಲಕ ಕರ್ನಾಟಕದ ಮಹಿಳಾ ಉದ್ಯಮಿಗಳಿಗೆ ತಮ್ಮ ಮಾರುಕಟ್ಟೆ ವ್ಯಾಪ್ತಿಯನ್ನು ವಿಸ್ತರಿಸಲು ಮತ್ತು ನಿಗದಿತ ಗ್ರಾಹಕರೊಂದಿಗೆ ಸಂಪರ್ಕ ಸಾಧಿಸಲು ಅವಕಾಶವನ್ನು ಒದಗಿಸುತ್ತದೆ. ವಿಶೇಷವಾಗಿ ಮಹಿಳಾ ಉದ್ಯಮಿಗಳನ್ನು ಬೆಂಬಲಿಸುವುದು ನಮ್ಮ ಉದ್ದೇಶವಾಗಿದ್ದು, 11 ರಾಜ್ಯಗಳಾದ್ಯಂತ 52 ಸಂಘಗಳು ಸೇರಿದಂತೆ 20,000 ಕ್ಕೂ ಹೆಚ್ಚು ಮಹಿಳಾ ಉದ್ಯಮಿಗಳ ಸಹಭಾಗಿತ್ವದಲ್ಲಿ ಈ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: World Senior Citizens Day: ವಿಶ್ವ ಹಿರಿಯ ನಾಗರಿಕರ ದಿನದ ಪ್ರಯುಕ್ತ ವೈದ್ಯರಿಂದ ಉಚಿತ ಸಮಾಲೋಚನೆ

ಉಬುಂಟು ಕನ್ಸೋರ್ಟಿಯಂ (ಒಕ್ಕೂಟ) ಕೃಷಿಯಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವಲ್ಲಿ ನಿರತವಾಗಿದೆ. ಅಲ್ಲದೆ ಮಹಿಳೆಯರಿಗೆ ಉದ್ಯಮದಲ್ಲಿ ತೊಡಗಿಕೊಳ್ಳಲು ಅಗತ್ಯ ತರಬೇತಿಯನ್ನು ನೀಡುತ್ತಾ ಬಂದಿದೆ ಎಂದು ಅವರು ವಿವರಿಸಿದರು.

ಈ ವೇಳೆ ಮೀಡಿಯಾ ಟುಡೇ ಪ್ರೈವೇಟ್ ಲಿಮಿಟೆಡ್‌ನ ಸಿಇಒ ಎನ್‌.ಬಿ. ನಖ್ವಿ ಮಾತನಾಡಿ, “ವಿವಿಧ ಕ್ಷೇತ್ರದಲ್ಲಿ ಮಹಿಳೆಯರು ಪ್ರಮುಖ ಪಾತ್ರವನ್ನು ವಹಿಸುತ್ತಿದ್ದಾರೆ. ಭಾರತದಾದ್ಯಂತ ಮಹಿಳೆಯರು ಹೂವು ಕೃಷಿ, ಹಸಿರುಮನೆ ನಿರ್ವಹಣೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರೆಲ್ಲರಿಗೂ ಈ ಅಗ್ರಿಟೆಕ್‌ ವೇದಿಕೆ ಉತ್ತಮ ಅವಕಾಶವನ್ನು ನೀಡುತ್ತಿದೆ. ಟರ್ಕಿ, ಚೀನಾ, ಜರ್ಮನಿ, ಥೈಲ್ಯಾಂಡ್, ಸ್ಪೇನ್, ನೆದರ್ಲ್ಯಾಂಡ್, ನೇಪಾಳ, ಶ್ರೀಲಂಕಾ, ಕುವೈತ್, ರಷ್ಯಾ, ತೈವಾನ್, ಫ್ರಾನ್ಸ್, ಇಟಲಿ, ಕೆನಡಾ, ಯುಎಇ, ಇಂಡೋನೇಷಿಯಾ, ಬಹ್ರೇನ್, ಸಿಂಗಾಪುರ್, ಇರಾನ್, ಆಸ್ಟ್ರೇಲಿಯಾ, ಭೂತಾನ್, ಮಲೇಷ್ಯಾ, ವಿಯೆಟ್ನಾಂ ಮತ್ತು ನ್ಯೂಜಿಲೆಂಡ್ ಸೇರಿದಂತೆ 25 ದೇಶಗಳ ಪ್ರತಿನಿಧಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದಾರೆ. ಈ ಮೂರು ದಿನಗಳ ಮೇಳವು ವ್ಯವಹಾರಗಳಿಗೆ ಸಂಪರ್ಕ ಸಾಧಿಸಲು ಮತ್ತು ಹೊಸ ಅವಕಾಶಗಳನ್ನು ಅನ್ವೇಷಿಸಲು, ವಲಯದಲ್ಲಿ ಬೆಳವಣಿಗೆ ಮತ್ತು ನಾವೀನ್ಯತೆಗೆ ಒಗ್ಗಿಕೊಳ್ಳಲು ಒಂದು ಅನನ್ಯ ಅವಕಾಶವನ್ನು ನೀಡುತ್ತದೆ ಎಂದರು.

ಮೀಡಿಯಾ ಟುಡೇ ಮುಖ್ಯ ಸಂಪಾದಕ ಜಾಫರ್ ನಖ್ವಿ ಮಾತನಾಡಿ, “ರೈತರನ್ನು ನೇರವಾಗಿ ಖರೀದಿದಾರರೊಂದಿಗೆ ಸಂಪರ್ಕಿಸಲು, ಮಧ್ಯವರ್ತಿಗಳ ಅಗತ್ಯವನ್ನು ನಿವಾರಿಸಲು ಅಗ್ರಿಟೆಕ್ ಅತ್ಯುತ್ತಮ ವೇದಿಕೆಯನ್ನು ಒದಗಿಸುತ್ತಿದೆ. ಅಗ್ರಿಟೆಕ್ ಇಂಡಿಯಾ 2024 ಕೃಷಿ ಮತ್ತು ಆಹಾರ ಪ್ರದರ್ಶನ ಮೇಳವು ಇಂಡಿಯಾ ಫುಡೆಕ್ಸ್ ಮತ್ತು ಗ್ರೇನ್ ಟೆಕ್ ಇಂಡಿಯಾ ಸಹಯೋಗದೊಂದಿಗೆ ನಡೆಯಲಿದ್ದು, ಕೃಷಿ ಮತ್ತು ಆಹಾರ ಉದ್ಯಮದ ಮೌಲ್ಯವನ್ನು ಪ್ರತಿಬಿಂಬಿಸುತ್ತದೆ. ಈ ಪ್ರದರ್ಶನವು ಆಹಾರ ಉತ್ಪನ್ನಗಳು, ಫ್ರೋಜನ್ ಆಹಾರಗಳು, ತಿಂಡಿಗಳು, ಬೇಕರಿ ವಸ್ತುಗಳು, ಅನುಕೂಲಕರ ಆಹಾರಗಳು, ಸಾವಯವ ಉತ್ಪನ್ನಗಳು, ತಾಜಾ ಹಣ್ಣುಗಳು, ಆಹಾರ ಚಿಲ್ಲರೆ ವ್ಯಾಪಾರ, ಡೈರಿ ಉತ್ಪನ್ನಗಳು, ಚಹಾ, ಕಾಫಿ ಮತ್ತು ಹಣ್ಣು ಆಧಾರಿತ ಪಾನೀಯಗಳನ್ನು ಒಳಗೊಂಡಂತೆ ವೈವಿಧ್ಯಮಯ ಆಹಾರ ವಲಯದ ವಿಭಾಗಗಳು ಪ್ರದರ್ಶನದಲ್ಲಿ ಇರಲಿವೆ. ಅದಲ್ಲದೆ ಈವೆಂಟ್ 13ನೇ ಡೈರಿಟೆಕ್ ಇಂಡಿಯಾ, ಪೌಲ್ಟ್ರಿ ಮತ್ತು ಜಾನುವಾರು ಎಕ್ಸ್ಪೋ ಮತ್ತು ಬೇಕರಿಟೆಕ್ ಇಂಡಿಯಾದೊಂದಿಗೆ ಏಕಕಾಲದಲ್ಲಿ ನಡೆಯಲಿದೆ. ಇದು ಫಾರ್ಮ್‌ನಿಂದ ಫೋರ್ಕ್‌ವರೆಗಿನ ಆಹಾರ ಉದ್ಯಮದ ಸಂಪೂರ್ಣ ಅವಲೋಕನವನ್ನು ನೀಡಲಿದೆ ಎಂದು ವಿವರಿಸಿದರು.

ಇದನ್ನೂ ಓದಿ: Kannada New Movie: ʼಲಂಗೋಟಿ ಮ್ಯಾನ್ʼ ಚಿತ್ರದ ಟೀಸರ್ ಬಿಡುಗಡೆಗೊಳಿಸಿದ ನಟ ಶರಣ್

ಆಗಸ್ಟ್ 22ರ (ಎರಡನೇ ದಿನ) ಕಾರ್ಯಕ್ರಮದಲ್ಲಿ “ವುಮೆನ್ ಇನ್ ಅಗ್ರಿಬಿಸಿನೆಸ್” – ಜಾಗತಿಕ ಸಮ್ಮೇಳನ, ಪ್ರದರ್ಶನ, ನೆಟ್ವರ್ಕಿಂಗ್ ಶೃಂಗಸಭೆ ಮತ್ತು ಪ್ರಶಸ್ತಿ ಸಮಾರಂಭವು ಕೃಷಿ ಮತ್ತು ಆಹಾರ ಕ್ಷೇತ್ರಗಳಲ್ಲಿನ ಮಹಿಳೆಯರ ಕೊಡುಗೆಗಳನ್ನು ಗೌರವಿಸಲಾಗುತ್ತದೆ. ಈ ಕಾರ್ಯಕ್ರಮವು ಮಹಿಳಾ ಉದ್ಯಮಿಗಳು ಮತ್ತು ವೃತ್ತಿಪರರಿಗೆ ಹೊಸ ಪರಿಚಯಗಳು ಮತ್ತು ಅವರ ವೈಯಕ್ತಿಕ ಸಾಧನೆಗಳನ್ನು ಪ್ರದರ್ಶಿಸಲು ಅಮೂಲ್ಯವಾದ ವೇದಿಕೆಯನ್ನು ನೀಡುತ್ತದೆ. ಆಗಸ್ಟ್ 23ರ ಅಂತಿಮ ದಿನದ ಮೇಳದಲ್ಲಿ ಧಾನ್ಯಗಳು ಮತ್ತು ಹಿಟ್ಟು ಮಿಲ್ಲಿಂಗ್ ಉದ್ಯಮದ ನೆಟ್ವರ್ಕಿಂಗ್ ಶೃಂಗಸಭೆಯನ್ನು ಏರ್ಪಡಿಸಲಾಗುತ್ತಿದೆ. ಧಾನ್ಯಗಳು ಮತ್ತು ಹಿಟ್ಟು ಮಿಲ್ಲಿಂಗ್ ಉದ್ಯಮದ ನಿರ್ದಿಷ್ಟ ಅಗತ್ಯಗಳನ್ನು ಈ ಮೇಳದಲ್ಲಿ ತಿಳಿಸಲಾಗುತ್ತದೆ. ಈ ಸಮ್ಮೇಳನದ ಅಧಿವೇಶನವು ಉದ್ಯಮದ ಮಧ್ಯಸ್ಥಗಾರರಿಗೆ ಎದುರಾಗುವ ಸವಾಲುಗಳು, ಅವಕಾಶಗಳು ಮತ್ತು ಹೊಸ ಸಾಧ್ಯತೆಗಳನ್ನು ಚರ್ಚಿಸಲು ವೇದಿಕೆಯನ್ನು ಒದಗಿಸುತ್ತದೆ.

ಆಗಸ್ಟ್ 22 ರಿಂದ 24, 2024ರವರೆಗೆ ಈ ಮೇಳವು ನಡೆಯಲಿದೆ. ಈ ವರ್ಷದ ಅಗ್ರಿಟೆಕ್ ಇಂಡಿಯಾ ಮೇಳವು ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಗುರುವಾರ ಆರಂಭಗೊಳ್ಳಲಿದೆ. ಮೂರು ದಿನಗಳ ಕಾಲ ನಡೆಯಲಿರುವ ಈ ಬೃಹತ್ ಮೇಳವು ಆಗಸ್ಟ್‌‌22ರಂದು ಉದ್ಘಾಟನೆಗೊಳ್ಳಲಿದೆ. ಕೆನಡಾ, ಟರ್ಕಿ, ಚೀನಾ, ಜರ್ಮನಿ, ಇಟಲಿ, ಸ್ಪೇನ್, ಹಾಲೆಂಡ್, ರಷ್ಯಾ, ತೈವಾನ್, ಥೈಲ್ಯಾಂಡ್, ಸಿಂಗಾಪುರ್, ಇಂಡೋನೇಷ್ಯಾ, ನೇಪಾಳ ಮತ್ತು ಬ್ರೆಜಿಲ್ ಸೇರಿದಂತೆ 20 ಕ್ಕೂ ಹೆಚ್ಚು ದೇಶಗಳ ಉತ್ಪನ್ನಗಳು ಮತ್ತು ಸೇವೆಗಳ ಪ್ರದರ್ಶನವನ್ನು ನೀಡುವ ಮೂಲಕ ಹಿಂದಿನ ಎಲ್ಲಾ ಆವೃತ್ತಿಗಳನ್ನು ಮೀರಿಸುವ ಭರವಸೆ ಇದೆ.

ಇದನ್ನೂ ಓದಿ: Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು APEDA ನ ಜನರಲ್ ಮ್ಯಾನೇಜರ್ ವಿನಿತಾ ಸುಧಾಂಶು, ಬೆಂಗಳೂರಿನ ರಾಷ್ಟ್ರೀಯ ಜೀವನೋಪಾಯ ಮಿಷನ್ ನಿರ್ದೇಶಕಿ ಪಿ.ಐ. ಶ್ರೀವಿದ್ಯಾ, ಗ್ಲೋಬಲ್ ಅಗ್ರಿಸಿಸ್ಟಮ್ ಪ್ರೈವೇಟ್ ಲಿಮಿಟೆಡ್‌ನ ಅಧ್ಯಕ್ಷ ಗೋಕುಲ್ ಪಟ್ನಾಯಕ್, ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯ (CFTRI) ನಿರ್ದೇಶಕಿ ಡಾ. ಶ್ರೀದೇವಿ ಅನ್ನಪೂರ್ಣ ಸಿಂಗ್ ಮತ್ತು FSSAI ಸಲಹೆಗಾರ ಮತ್ತು ಕೋಡೆಕ್ಸ್ನ ಮಾಜಿ ಅಧ್ಯಕ್ಷ ಸಂಜಯ್ ದವೆ ಸೇರಿದಂತೆ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ಅವರು ನೀಡಿದರು.

Continue Reading

ಕರ್ನಾಟಕ

Reliance Jio: ಜಿಯೋ ಟಿವಿ ಪ್ಲಸ್ 2 ಇನ್ 1 ಆಫರ್; ಒಂದೇ ಸಂಪರ್ಕದಲ್ಲಿ ನೋಡಿ ಎರಡು ಟಿವಿ!

ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗೆ ಜಿಯೋ ಟಿವಿ ಪ್ಲಸ್ ಟೂ ಇನ್ ಒನ್ ಅನ್ನು ಪರಿಚಯಿಸಿದೆ. ಈ ಆಫರ್‌ನಲ್ಲಿ ಗ್ರಾಹಕರು ಈಗ ಒಂದೇ ಜಿಯೋ ಏರ್ ಫೈಬರ್ ಸಂಪರ್ಕದಿಂದ ಎರಡು ಟಿವಿಗಳನ್ನು ಒಂದೇ ಸಮಯದಲ್ಲಿ ನೋಡಬಹುದು/ಬಳಸಬಹುದು. ಈ ಯೋಜನೆಯ ಅಡಿಯಲ್ಲಿ ಗ್ರಾಹಕರು 800ಕ್ಕೂ ಹೆಚ್ಚು ಡಿಜಿಟಲ್ ಟಿವಿ ಚಾನೆಲ್‌ಗಳು ಮತ್ತು 13 ಒಟಿಟಿ ಅಪ್ಲಿಕೇಷನ್‌ಗಳ ಸೌಲಭ್ಯವನ್ನು ಪಡೆಯುತ್ತಾರೆ. ಈ ಸೇವೆಯು ಜಿಯೋ ಟಿವಿ ಪ್ಲಸ್ ಅಪ್ಲಿಕೇಷನ್ ಮೂಲಕ ಲಭ್ಯವಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Reliance Jio
Koo

ನವದೆಹಲಿ: ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗೆ ಜಿಯೋ ಟಿವಿ ಪ್ಲಸ್ ಟೂ ಇನ್ ಒನ್ ಅನ್ನು ಪರಿಚಯಿಸಿದೆ. ಈ ಆಫರ್‌ನಲ್ಲಿ ಗ್ರಾಹಕರು ಈಗ ಒಂದೇ ಜಿಯೋ ಏರ್ ಫೈಬರ್ ಸಂಪರ್ಕದಿಂದ ಎರಡು ಟಿವಿಗಳನ್ನು ಒಂದೇ ಸಮಯದಲ್ಲಿ ನೋಡಬಹುದು/ಬಳಸಬಹುದು. ಈ ಯೋಜನೆಯ ಅಡಿಯಲ್ಲಿ ಗ್ರಾಹಕರು 800ಕ್ಕೂ ಹೆಚ್ಚು ಡಿಜಿಟಲ್ ಟಿವಿ ಚಾನೆಲ್‌ಗಳು ಮತ್ತು 13 ಒಟಿಟಿ ಅಪ್ಲಿಕೇಷನ್‌ಗಳ ಸೌಲಭ್ಯವನ್ನು ಪಡೆಯುತ್ತಾರೆ. ಈ ಸೇವೆಯು ಜಿಯೋ ಟಿವಿ ಪ್ಲಸ್ ಅಪ್ಲಿಕೇಷನ್ ಮೂಲಕ ಲಭ್ಯವಿದೆ.

ಜಿಯೋ ಟಿವಿ ಪ್ಲಸ್ ಅಪ್ಲಿಕೇಷನ್ 10 ಭಾಷೆಗಳಲ್ಲಿ ಮತ್ತು 20 ವಿಭಾಗಗಳಲ್ಲಿ 800 ಡಿಜಿಟಲ್ ಟಿವಿ ಚಾನೆಲ್‌ಗಳಿಗೆ ಸಂಪರ್ಕವನ್ನು ಒದಗಿಸುತ್ತದೆ. ಅಷ್ಟೇ ಅಲ್ಲ, ಜತೆಗೆ ಬಳಕೆದಾರರು ಒಂದೇ ಲಾಗಿನ್‌ನಿಂದ 13 ಜನಪ್ರಿಯ ಒಟಿಟಿ ಅಪ್ಲಿಕೇಷನ್‌ಗಳನ್ನು ಬಳಸಬಹುದು.

ಇದನ್ನೂ ಓದಿ: World Senior Citizens Day: ವಿಶ್ವ ಹಿರಿಯ ನಾಗರಿಕರ ದಿನದ ಪ್ರಯುಕ್ತ ವೈದ್ಯರಿಂದ ಉಚಿತ ಸಮಾಲೋಚನೆ

ಜಿಯೋ ಟಿವಿ ಪ್ಲಸ್ ಅಪ್ಲಿಕೇಷನ್‌ನ ಪ್ರಮುಖ ವೈಶಿಷ್ಟ್ಯಗಳು ಏನೆಂದರೆ, ಒಂದೇ ಸೈನ್ -ಆನ್ ಆಯ್ಕೆ, ಸ್ಮಾರ್ಟ್ ಟಿವಿ ರಿಮೋಟ್ ಹೊಂದಾಣಿಕೆ ಮತ್ತು ವೈಯಕ್ತಿಕಗೊಳಿಸಿದ ಕಂಟೆಂಟ್ ಒಳಗೊಂಡಿದೆ. ಗ್ರಾಹಕರು ಸ್ಮಾರ್ಟ್ ಫಿಲ್ಟರ್‌ಗಳನ್ನು ಬಳಸಿಕೊಂಡು ಚಾನಲ್‌ಗಳನ್ನು ಸುಲಭವಾಗಿ ಹುಡುಕಬಹುದು, ಪ್ಲೇಬ್ಯಾಕ್ ವೇಗವನ್ನು ನಿಯಂತ್ರಿಸಬಹುದು ಮತ್ತು ಈ ಹಿಂದೆ ಪ್ರಸಾರವಾದ ಕಾರ್ಯಕ್ರಮಗಳನ್ನು ವೀಕ್ಷಿಸಬಹುದು. ಈ ಸೇವೆಯು ಎಲ್ಲ ಜಿಯೋ ಏರ್ ಫೈಬರ್ ಯೋಜನೆಗಳಲ್ಲಿ ಲಭ್ಯವಿದೆ. ಆದರೆ ಜಿಯೋ ಫೈಬರ್ ಪೋಸ್ಟ್‌ಪೇಯ್ಡ್‌ನಲ್ಲಿ, ಇದು ರೂ. 599, ರೂ. 899 ಮತ್ತು ಹೆಚ್ಚಿನ ಮೊತ್ತದ ಯೋಜನೆಗಳಲ್ಲಿ ಲಭ್ಯವಿದೆ. ಜಿಯೋ ಫೈಬರ್ ಪ್ರಿಪೇಯ್ಡ್‌ನಲ್ಲಿ ಇದು ರೂ. 999 ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತದ ಯೋಜನೆಗಳಲ್ಲಿ ಲಭ್ಯವಿದೆ.

ಜಿಯೋ ಟಿವಿ ಅಪ್ಲಿಕೇಷನ್‌ನಲ್ಲಿ ಲಭ್ಯವಿರುವ ಪ್ರಮುಖ ಚಾನೆಲ್‌ಗಳು ಮತ್ತು ಒಟಿಟಿ ಅಪ್ಲಿಕೇಶನ್‌ಗಳಲ್ಲಿ ಜನಪ್ರಿಯ ನೆಟ್‌ವರ್ಕ್‌ಗಳಾದ ಕಲರ್ಸ್ ಟಿವಿ, ಸ್ಟಾರ್ ಪ್ಲಸ್ ಮತ್ತು ಝೀ ಟಿವಿಯನ್ನು ಒಳಗೊಂಡಿವೆ. ಇದರೊಂದಿಗೆ ಡಿಸ್ನಿ ಪ್ಲಸ್, ಹಾಟ್‌ಸ್ಟಾರ್, ಸೋನಿ ಲಿವ್ ಮತ್ತು ಜೀ ಫೈವ್‌ನಂತಹ ಒಟಿಟಿ ಪ್ಲಾಟ್‌ಫಾರ್ಮ್‌ಗಳು ಸಹ ದೊರೆಯುತ್ತವೆ.

ಇದನ್ನೂ ಓದಿ: Kannada New Movie: ʼಲಂಗೋಟಿ ಮ್ಯಾನ್ʼ ಚಿತ್ರದ ಟೀಸರ್ ಬಿಡುಗಡೆಗೊಳಿಸಿದ ನಟ ಶರಣ್

ಈ ಯೋಜನೆಯ ಲಾಭವನ್ನು ನೀವು ಕೂಡ ಪಡೆಯುವುದಕ್ಕಾಗಿ ನಿಮ್ಮ ಸ್ಮಾರ್ಟ್ ಟಿವಿಯ ಆಪ್ ಸ್ಟೋರ್‌ನಿಂದ ಜಿಯೋ ಟಿವಿ ಪ್ಲಸ್ (Jio TV Plus) ಅಪ್ಲಿಕೇಷನ್ ಅನ್ನು ಡೌನ್‌ಲೋಡ್ ಮಾಡಿ, ನಿಮ್ಮ ಜಿಯೋ ಫೈಬರ್ ಅಥವಾ ಜಿಯೋ ಏರ್ ಫೈಬರ್ ನೋಂದಾಯಿತ ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಮಾಡಿ ಮತ್ತು ದೊಡ್ಡ ಮಟ್ಟದ ಕಂಟೆಂಟ್ ಲೈಬ್ರರಿಯನ್ನು ತಕ್ಷಣವೇ ಆನಂದಿಸಲು ಪ್ರಾರಂಭಿಸಿ. ಈ ಆಫರ್‌ನೊಂದಿಗೆ, ಜಿಯೋ ಟಿವಿ ವೇಗವಾಗಿ ಬೆಳೆಯುತ್ತಿರುವ ಭಾರತದ ಅತಿದೊಡ್ಡ ಕಂಟೆಂಟ್ ಅಗ್ರಿಗೇಟರ್ ಪ್ಲಾಟ್‌ಫಾರ್ಮ್ ಆಗುತ್ತಿದೆ, ಯಾವುದೇ ಹೆಚ್ಚುವರಿ ಶುಲ್ಕಗಳು ಅಥವಾ ಸಂಪರ್ಕವಿಲ್ಲದೆ ಬಹು ಪ್ಲಾಟ್‌ಫಾರ್ಮ್‌ಗಳಲ್ಲಿ ಮನರಂಜನೆಗೆ ಯಾವುದೇ ಅಡೆತಡೆ ಇಲ್ಲದ ಸಂಪರ್ಕವನ್ನು ಒದಗಿಸುತ್ತದೆ.

Continue Reading
Advertisement
puttur stabbing case
ಕ್ರೈಂ11 mins ago

Stabbing Case: ಪುತ್ತೂರು ನಗರ ಉದ್ವಿಗ್ನತೆಗೆ ಕಾರಣವಾದ ವಿದ್ಯಾರ್ಥಿನಿಗೆ ಬ್ಲೇಡ್‌ ಇರಿತ ಪ್ರಕರಣ; ನಿಜಕ್ಕೂ ನಡೆದದ್ದೇನು?

Cincinnati Open
ಕ್ರೀಡೆ41 mins ago

ATP Cincinnati Open: ಚೊಚ್ಚಲ ಪ್ರಶಸ್ತಿ ಗೆದ್ದ ಜಾನಿಕ್‌ ಸಿನ್ನರ್‌, ಅರಿನಾ ಸಬಲೆಂಕಾ

students death
ಕ್ರೈಂ49 mins ago

Students Death: ಇಬ್ಬರು ಮಕ್ಕಳ ಜೀವ ಕಸಿದ ಮೊಬೈಲ್;‌ ತಂದೆ- ತಾಯಿ ಫೋನ್ ಕೊಡದಿದ್ದುದಕ್ಕೆ ಆತ್ಮಹತ್ಯೆ

Agritech India 2024
ಬೆಂಗಳೂರು1 hour ago

Agritech India 2024: ಬೆಂಗಳೂರಿನಲ್ಲಿ ʼಅಗ್ರಿಟೆಕ್ ಇಂಡಿಯಾ 2024ʼಕ್ಕೆ ಆ. 22ರಂದು ಚಾಲನೆ

ajmer pocso case
ಕ್ರೈಂ1 hour ago

Ajmer Pocso Case: 32 ವರ್ಷ ಹಿಂದಿನ ಅಜ್ಮೀರ್‌ ಪೋಕ್ಸೋ ಕೇಸ್‌ನಲ್ಲಿ 6 ಮಂದಿಗೆ ಜೀವಾವಧಿ ಶಿಕ್ಷೆ

Imran Khan
ವಿದೇಶ1 hour ago

Imran Khan: ಆಕ್ಸ್‌ಫರ್ಡ್ ವಿವಿ ಕುಲಪತಿಯಾಗಲು ಅರ್ಜಿ ಸಲ್ಲಿಸಿದ ಪಾಕ್‌ ಮಾಜಿ ಪ್ರಧಾನಿ!

Reliance Jio
ಕರ್ನಾಟಕ2 hours ago

Reliance Jio: ಜಿಯೋ ಟಿವಿ ಪ್ಲಸ್ 2 ಇನ್ 1 ಆಫರ್; ಒಂದೇ ಸಂಪರ್ಕದಲ್ಲಿ ನೋಡಿ ಎರಡು ಟಿವಿ!

Kannada New Movie
ಕರ್ನಾಟಕ2 hours ago

Kannada New Movie: ಟೀಸರ್‌ನಲ್ಲೇ ಕುತೂಹಲ ಮೂಡಿಸಿದೆ ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರ

EV charging
ಕರ್ನಾಟಕ2 hours ago

EV Charging: ಕರ್ನಾಟಕವೇ ಕಿಂಗ್;‌ ಅತಿ ಹೆಚ್ಚು ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ರಾಜ್ಯ!

What is Lateral Entry?
ದೇಶ2 hours ago

What is Lateral Entry?: ಏನಿದು ಲ್ಯಾಟರಲ್ ಎಂಟ್ರಿ ವಿವಾದ? ಕಾಂಗ್ರೆಸ್‌ ಆರೋಪವೇನು? ಬಿಜೆಪಿಯ ವಾದವೇನು?

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌