Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ಇಂದು ಅಂತಿಮ ದಿನ - Vistara News

ಕರ್ನಾಟಕ

Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ಇಂದು ಅಂತಿಮ ದಿನ

Banking Recruitment 2024: ದೇಶದ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 4455 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಗೆ ಆ.21 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಗೆ ಹೇಗೆ?, ಶುಲ್ಕ, ಪರೀಕ್ಷಾ ವಿಧಾನ ಮತ್ತಿತರ ವಿವರಗಳು ಇಲ್ಲಿವೆ.

VISTARANEWS.COM


on

Job Alert
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

| ಆರ್‌.ಕೆ. ಬಾಲಚಂದ್ರ, ಬ್ಯಾಂಕಿಂಗ್, ವ್ಯಕ್ತಿತ್ವ ವಿಕಸನ ಹಾಗೂ ಸಾಪ್ಟ್ ಸ್ಕಿಲ್ ತರಬೇತುದಾರರು, ವೃತ್ತಿ ಮಾರ್ಗದರ್ಶಕರು
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ದೇಶದ (Banking Recruitment 2024) ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿಮಾಡುವ ಪ್ರಕ್ರಿಯೆ ಆರಂಭಿಸಿದೆ. ಈ ವರ್ಷದಲ್ಲಿ ಇಲ್ಲಿಯವರೆಗೆ 20,566ಕ್ಕೂ ಹೆಚ್ಚಿನ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಂತಾಗಿದೆ. ಪದವೀಧರ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿದೆ. ಈಗ ಮತ್ತೊಂದು ಸುತ್ತಿನ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 4455 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಎಂದಿನಂತೆ, ಪೂರ್ವ ಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಒಟ್ಟು ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ 657, ಪರಿಶಿಷ್ಟ ಪಂಗಡಕ್ಕೆ 332, ಹಿಂದುಳಿದ ವರ್ಗದವರಿಗೆ 1185, ಆರ್ಥಿಕವಾಗಿ ಹಿಂದುಳಿದ ವರ್ಗ ದವರಿಗೆ 435 ಹಾಗೂ ಸಾಮಾನ್ಯ ವರ್ಗದವರಿಗೆ 1,846 ಹುದ್ದೆಗಳನ್ನು ಮೀಸಲಿಡಲಾಗಿದೆ. ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿನ ಒಟ್ಟು 4455 ಹುದ್ದೆಗೆ ಅರ್ಜಿ ಸಲ್ಲಿಸಲು ಆ.21 ಅಂತಿಮ ದಿನವಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಆಗಸ್ಟ್ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆನ್ಲೈ ನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಆಗಸ್ಟ್ 21, 2024 ಕೊನೆ ದಿನ.

ಯಾವ ಬ್ಯಾಂಕ್, ಎಷ್ಟು ಹುದ್ದೆ?

ಕೆನರಾ ಬ್ಯಾಂಕ್ 750, ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್ 360, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2000, ಬ್ಯಾಂಕ್ ಆಫ್ ಇಂಡಿಯಾ 885 ಪಂಜಾಬ್ ನ್ಯಾಷನಲ್ ಬ್ಯಾಂಕ್ 200, ಇಂಡಿಯನ್ ಒವರಸೀಸ್ ಬ್ಯಾಂಕ್ 260, ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿ ಪ್ರಕಟಿಸಿವೆ.

ಅರ್ಜಿ ಸಲ್ಲಿಸಲು ಹಾಗೂ ನೋಂದಣಿಗೆ ಈ ಲಿಂಕ್‌ಗಳನ್ನು ನೋಡಬಹುದು: www.ibps.in ಮತ್ತು https://www.ibps.in/index.php/management-trainees-xiv/

ಶೈಕ್ಷಣಿಕ ಅರ್ಹತೆ: (21.08.2024ಕ್ಕೆ ಅನ್ವಯಿಸುವಂತೆ)

ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ.

ವಯೋಮಿತಿ: 01.08.2024 ಕನಿಷ್ಠ 20 ವರ್ಷ ಹಾಗೂ ಗರಿಷ್ಡ 30 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ ಅಭ್ಯರ್ಥಿಗಳು 02.08.1994 ಕ್ಕಿಂತ ಮುಂಚಿತವಾಗಿ ಮತ್ತು 01.08.2004ರ ನಂತರ ಜನಿಸಿರಬಾರದು. ಸರ್ಕಾರದ ನಿಯಮಾನುಸಾರ ಎಸ್.ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳಷ್ಟು ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ , ಒಬಿಸಿ ಹಾಗೂ ಇತರೆ ಅಭ್ಯರ್ಥಿಗಳಿಗೆ: ₹850. ಪ.ಜಾ, ಪ.ಪಂ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಹಾಗೂ ಮಾಜಿ ಯೋಧರಿಗೆ ₹175. ನೋಂದಣಿ ನಂತರ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಶುಲ್ಕ/ಇಂಟಿಮೇಷನ್ ಶುಲ್ಕಗಳನ್ನು ಹಾಗೂ ಆನ್‌ಲೈನ್ ಪಾವತಿಗಾಗಿ ಬ್ಯಾಂಕ್ ವಹಿವಾಟು ಶುಲ್ಕಗಳನ್ನು ಅಭ್ಯರ್ಥಿಯು ಭರಿಸಬೇಕಾಗುತ್ತದೆ.

ಶುಲ್ಕ ಪಾವತಿ: ನೋಂದಣಿ ನಂತರ ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.

ನೆನಪಿಡಿ: ಒಬಿಸಿ ವರ್ಗಕ್ಕೆ ಸೇರಿದ, ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ. ಅವರು ಆನ್ಲೈನ್ ಅರ್ಜಿ ನಮೂನೆಯಲ್ಲಿ ತಮ್ಮ ವರ್ಗವನ್ನು ಸಾಮಾನ್ಯ ಎಂದು ಸೂಚಿಸಬೇಕು. ಅಭ್ಯರ್ಥಿಯು ಭಾರತ ಸರ್ಕಾರದ ಮಾರ್ಗ ಸೂಚಿಗಳ ಪ್ರಕಾರ ಕೆನೆ ಪದ ರಹಿತ (Non creamy layer) ಷರತ್ತಿನೊಂದಿಗೆ ಇತ್ತೀಚಿನ ಒಬಿಸಿ ಪ್ರಮಾಣಪತ್ರವನ್ನು ಹೊಂದಿರಬೇಕು.

ಪರೀಕ್ಷಾ ಪ್ರಕ್ರಿಯೆ: ಇದೇ ಅಕ್ಟೋಬರ್‌ನಲ್ಲಿ ಪೂರ್ವಭಾವಿ ಪರೀಕ್ಷೆ, ನವೆಂಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ಎರಡೂ ಪರೀಕ್ಷೆಗಳು ಆನ್‌ಲೈನ್‌ನಲ್ಲಿ ನಡೆಯುಲಿವೆ. ಸಂದರ್ಶನ 2025ರ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆ ಇದೆ. ರಾಜ್ಯದ 10 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವ ಭಾವಿ ಪರೀಕ್ಷೆ ಮತ್ತು 5 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಕೇಂದ್ರಗಳು

ಪೂರ್ವಭಾವಿ ಪರೀಕ್ಷೆ (ಪ್ರಿಲಿಮ್ಸ್): ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ- ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.

ಮುಖ್ಯ ಪರೀಕ್ಷೆ: ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು

ಪೂರ್ವ ಭಾವಿ ಪರೀಕ್ಷೆಗೆ ತರಬೇತಿ: ಐಬಿಪಿಎಸ್ ವತಿಯಿಂದ ಎಸ್.ಸಿ/ಎಸ್.ಟಿ/ಅಲ್ಪ ಸಂಖ್ಯಾತ ವರ್ಗದ ಅಭ್ಯರ್ಥಿಗಳು, ಮಾಜಿ ಸೈನಿಕರು, ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ತರಬೇತಿ ನೀಡಲಾಗುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸುವಾಗಲೇ ಅಭ್ಯರ್ಥಿಗಳು ಕೋರಿಕೆ ಸಲ್ಲಿಸಬೇಕು.  ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ಮತ್ತು ಮೈಸೂರಿನಲ್ಲಿ ಉಚಿತ ಪರೀಕ್ಷಾ ತರಬೇತಿಯನ್ನೂ ಸೆಪ್ಟೆಂಬರ್ ತಿಂಗಳಲ್ಲಿ ನೀಡಲಾಗುತ್ತದೆ. ತರಬೇತಿ ಸ್ಥಳದ ಖರ್ಚು ವೆಚ್ಚ ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳ ಭರಿಸಬೇಕಾಗುತ್ತದೆ.

ಕ್ರೆಡಿಟ್ ಇತಿಹಾಸ

(i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸ (Credit History) ಹೊಂದಿರಬೇಕು. ಬ್ಯಾಂಕ್ ಗೆ ಸೇರುವ ಸಮಯದಲ್ಲಿ ಕನಿಷ್ಠ ಸಿಬಿಲ್ (CIBIL)ಸ್ಕೋರ್ ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್ ಗಳ ನೀತಿಯ ಪ್ರಕಾರ ಇರುತ್ತದೆ. ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.

(ii) ಹುದ್ದೆಗೆ ಸೇರ್ಪಡೆಗೊಳ್ಳುವ ದಿನಾಂಕದ ಮೊದಲು CIBIL ಸ್ಥಿತಿ ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ ನಿರಾಪೇಕ್ಷಣಾ ಪತ್ರ (NOC)ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ /ರದ್ದುಗೊಳಿಸಲಾಗುತ್ತದೆ.

ಇದನ್ನೂ ಓದಿ: Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ 391 ಹುದ್ದೆ; ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

ಗಮನಿಸಿ: ಯಾವುದೇ ಬ್ಯಾಂಕ್ ಖಾತೆಯನ್ನು ಹೊಂದಿರದ ಅಭ್ಯರ್ಥಿಗಳು CIBIL ಸ್ಥಿತಿಯನ್ನು ಒದಗಿಸುವ ಅಗತ್ಯ ವಿಲ್ಲ.

ಅರ್ಜಿ ಸಲ್ಲಿಸುವಾಗ ಗಮನಿಸಿ:

  • ಅಭ್ಯರ್ಥಿ ಬ್ಯಾಂಕ್ ಆಯ್ಕೆ ಮಾಡಿಕೊಳ್ಳುವುದಕ್ಕೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ಬ್ಯಾಂಕ್ ಆದ್ಯ ತೆಯ ಆದೇಶವನ್ನು ಅಳವಡಿಸಲಾಗಿದೆ.
  • ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್‌ಗಳ ಆದ್ಯತೆಯ ಕ್ರಮವನ್ನು ಅಗತ್ಯ ವಾಗಿ ಸೂಚಿಸಬೇಕು.
  • ಯಾವ್ಯಾವ ಬ್ಯಾಂಕ್ ಗಳಲ್ಲಿ ಎಷ್ಟೆಷ್ಟು ಹುದ್ದೆಗಳಿವೆ ಹಾಗೂ ನಮ್ಮ ರಾಜ್ಯದಲ್ಲಿ ಶಾಖೆಗಳಿವೆಯಾ ಎಂಬುದರ ಮೇಲೆ ನಿಮ್ಮ ಆದ್ಯತೆಯ ಆಯ್ಕೆ ಇರಲಿ.
  • ಒಮ್ಮೆ ನೀವು ಆಯ್ಕೆಯಾದರೆ ನಂತರದ ದಿನಗಳಲ್ಲಿ ಬ್ಯಾಂಕ್/ಸ್ಥಳ ಬದಲಾವಣೆಗಾಗಿ ಸಲ್ಲಿಸುವ ವಿನಂತಿಯನ್ನು ಪರಿಗಣಿಸಲಾ ಗುವುದಿಲ್ಲ.
  • ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್ ಮೆಂಟ್ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹದಲ್ಲಿ ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯರ್ಥಿಯ ಉಮೇದುವಾರಿಕೆಯನ್ನು ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿಸಲ್ಲಿಸುವಾಗ ಬಹಳ ಎಚ್ಚರಿಕೆ ವಹಿಸುವುದು ಒಳಿತು.

ಆಫೀಸರ್ಸ್‌ ಆಯ್ಕೆಗೆ ಮೂರು ಹಂತಗಳ ಪರೀಕ್ಷೆ

ನೇಮಕಾತಿ ಪ್ರಕ್ರಿಯೆ

ಪೂರ್ವ ಭಾವಿ ಪರೀಕ್ಷೆ

ಪೂರ್ವ ಭಾವಿ ಪರೀಕ್ಷೆ ಒಂದು ಗಂಟೆಗಳ ಕಾಲ ನಡೆಯಲಿದೆ. ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕು. ಆದರೆ ಒಟ್ಟಾರೆ ಹೆಚ್ಚು ಅಂಕಗಳಿಸುವುದು ಮುಖ್ಯ . ಪೂರ್ವ ಭಾವಿ ಪರೀಕ್ಷೆ ಒಂದು ಗಂಟೆ ಅವಧಿಯದ್ದು (ಪ್ರತಿ ಪತ್ರಿಕೆಗೂ 20 ನಿಮಿಷಗಳು). 100 ಅಂಕಗಳಿರುತ್ತವೆ (ಅಂದರೆ ಪ್ರತಿ ಪ್ರಶ್ನೆಗೆ ಒಂದೊಂದು ಅಂಕ ನಿಗದಿ) ಇದರಲ್ಲಿ ಇಂಗ್ಲಿಷ್ ಭಾಷಾ ಪತ್ರಿಕೆಗೆ 30, ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್ ಗೆ 35 ಹಾಗೂ ರೀಸನಿಂಗ್ ಎಬಿಲಿಟಿಯ 35 ಪ್ರಶ್ನೆಗಳಿರಲಿವೆ. ಪ್ರತಿ ಪರೀಕ್ಷೆಯಲ್ಲೂ ಕನಿಷ್ಟ ಅಂಕ ಗಳಿಸಬೇಕೆಂಬ ನಿಯಮವಿದೆ. ಅದರೆ ಒಟ್ಟಾರೆ ಹೆಚ್ಚು ಅಂಕ ಗಳಿಸುವುದು ಮುಖ್ಯ.ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತದ ಅಂದರೆ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆಯುತ್ತಾರೆ.

ಮುಖ್ಯ ಪರೀಕ್ಷೆ ವಿವರಗಳು

ಕ್ರ. ಸಂವಿಷಯ ಹಾಗೂ ಪತ್ರಿಕೆಪ್ರಶ್ನೆಗಳುಅಂಕಗಳುಅವಧಿ
Iರೀಸನಿಂಗ್ ಮತ್ತು ಕಂಪ್ಯೂಟರ್ ಆಪ್ಟಿಟ್ಯೂಡ್456060 ನಿಮಿಷಗಳು
IIಜನರಲ್/ಎಕಾನಮಿ/ಬ್ಯಾಂಕಿಂಗ್ ಅವೇರ್ನೆ ಸ್404035 ನಿಮಿಷಗಳು
IIIಇಂಗ್ಲಿಷ್ ಭಾಷೆ354040 ನಿಮಿಷಗಳು
IVಡೇಟಾಅನಾಲಿಸಿಸ್ಆ್ಯಂಡ್ ಇಂಟರ್ ಪ್ರಿಟೇಷನ್356045 ನಿಮಿಷಗಳು
 ಒಟ್ಟು1552003 ಗಂಟೆಗಳು
Vಪತ್ರ ಬರವಣಿಗೆ ಮತ್ತು ಪ್ರಬಂಧ022530 ನಿಮಿಷಗಳು

ಇಂಗ್ಲೀಷ್ ಭಾಷೆ ಒಂದನ್ನು ಹೊರತುಪಡಿಸಿ ಮತ್ತೆಲ್ಲಾ ಪ್ರಶ್ನೆಗಳು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಇರುತ್ತವೆ. ಋಣಾತ್ಮಕ ಮೌಲ್ಯಮಾಪನದ ನಿಯಮದಂತೆ ತಪ್ಪು ಉತ್ತರ ಗುರುತಿಸಿದಲ್ಲಿ, ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಆಯಾ ವಿಷಯದ ಪ್ರತಿ ಪ್ರಶ್ನೆಗೆ ನಿಗದಿ ಪಡಿಸಿದ ಅಂಕದ 0.25 ಅಂಕ ವನ್ನು ಗಳಿಸಿದ ಅಂಕದಿಂದ ಕಳೆಯಲಾಗುತ್ತದೆ. ಪ್ರಶ್ನೆಗೆ ಉತ್ತರ ಗುರುತಿಸಲಾಗಿಲ್ಲದಿದ್ದರೆ ಅಂಕ ಕಳೆಯುವುದಿಲ್ಲ. ಮುಖ್ಯ ಪರೀಕ್ಷೆ ಮುಗಿಯುತ್ತಿದ್ದಂತೆ ಇಂಗ್ಲಿಷ್ ಭಾಷೆಗೆ (Letter Writing & Essay- with two questions) ಸಂಬಂಧಿಸಿದಂತೆ 25 ಅಂಕಗಳಿಗೆ ಡಿಸ್ಸ್ಕ್ರಿಟಿವ್ ಟೆಸ್ಟ್ ನಡೆಸಲಾಗುತ್ತದೆ. ಅವಧಿ 30 ನಿಮಿಷಗಳು. ಅಭ್ಯರ್ಥಿಗಳು ಕಂಪ್ಯೂಟರ್‌ನಲ್ಲಿಯೇ ಉತ್ತರ ಬರೆಯಬೇಕು. ಇಂಗ್ಲಿಷ್ ಭಾಷೆಯ ವಿವರಣಾತ್ಮಕ ಪೇಪರ್ (ಪತ್ರ ಬರವಣಿಗೆ ಮತ್ತು ಪ್ರಬಂಧ) ಅನ್ನು ಸ್ವಯಂಚಾಲಿತ ಸ್ಕೋರಿಂಗ್ ಮೂಲಕ ಮೌಲ್ಯಮಾಪನ ಮಾಡಲಾಗುತ್ತದೆ. ಬರವಣಿಗೆಯ ಪ್ರಾವೀಣ್ಯಕ್ಕೆ ಸಂಬಂಧಿಸಿದಂತೆ ವೈಶಿಷ್ಟಗಳನ್ನು ಗುರುತಿಸುವುದು ಇದರ ಕಾರ್ಯ ವಿಧಾನವಾಗಿದೆ. ಆಂಗ್ಲ ಭಾಷೆಯಲ್ಲಿ

ಇದನ್ನೂ ಓದಿ | Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

ನೆನಪಿಡಿ: ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ .

ಈ ಎರಡೂ ಪರೀಕ್ಷೆಗಳಲ್ಲಿ ಬ್ಯಾಂಕ್ ನಿಗದಿಪಡಿಸಿದಷ್ಟು ಅಂಕ ಪಡೆದವರು ಮಾತ್ರ ಮೂರನೇ ಹಂತ ಸಂದರ್ಶನಕ್ಕೆ ಅರ್ಹರಾಗುತ್ತಾರೆ.

ಹಂತ-III ಸಂದರ್ಶನ.

ಆಯ್ಕೆ ಪಟ್ಟಿ: ಅಂತಿಮ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಂತ-II ಮತ್ತು ಹಂತ-III ಎರಡರಲ್ಲೂ ಪ್ರತ್ಯೇಕವಾಗಿ ಅರ್ಹತೆ ಪಡೆದಿರಬೇಕು. ಸಂದರ್ಶನಕ್ಕೆ ನಿಗದಿ ಪಡಿಸಲಾದ ಒಟ್ಟು ಅಂಕಗಳು 100. ಸಂದರ್ಶನದಲ್ಲಿ ಕನಿಷ್ಠ ಅರ್ಹತಾ ಅಂಕಗಳು ಶೇ 40 (SC/ST/OBC/PWBD ಅಭ್ಯರ್ಥಿಗಳಿಗೆ ಶೇ 35).

ಪರೀಕ್ಷೆ ಕುರಿತು ಇನ್ನಷ್ಟು ವಿವರಗಳಿಗಾಗಿ www.ibps.in ಮತ್ತುhttps://www.ibps.in/index.php/management-trainees-xiv/ ಜಾಲ ತಾಣ ನೋಡಿ.

ಹಾಗೂ ಬರವಣಿಗೆಯಲ್ಲಿ ಪರೀಕ್ಷೆ ಬರೆಯುವವರ ಪ್ರಾವೀಣ್ಯವನ್ನು ವಸ್ತುನಿಷ್ಠ ರೀತಿಯಲ್ಲಿ ಮೌಲ್ಯಮಾಪನ ಮಾಡುವ ವಿಶಿಷ್ಟ ವಿಧಾನವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Couple Death: ಪತ್ನಿಯ ಅನುಮಾನಾಸ್ಪದ ಸಾವು; ಜನರ ಆಕ್ರೋಶಕ್ಕೆ ಹೆದರಿ ಗಂಡ ಕೂಡ ಆತ್ಮಹತ್ಯೆ

Couple Death: ನೆನ್ನೆ ರಾತ್ರಿ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.

VISTARANEWS.COM


on

Couple death
Koo

ಮಂಡ್ಯ: ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳ ಶವ ನೇಣು (Woman Self Harming) ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ (Couple Death) ಕೆರೆಯಲ್ಲಿ ಪತ್ತೆಯಾಗಿದೆ. ಗಂಡನ ಮನೆಯ ಉಳಿದವರು ನಾಪತ್ತೆಯಾಗಿದ್ದು, ಗೃಹಿಣಿ ಸಾವಿನಿಂದ ಜನರಲ್ಲಿ ಹುಟ್ಟಿಕೊಂಡಿರುವ ಆಕ್ರೋಶದ ಪರಿಣಾಮ ಅಂಜಿ ತಲೆ ಮರೆಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಕೆ‌.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ (Murder) ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.

ನೆನ್ನೆ ರಾತ್ರಿ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.

ಇಂದು ಬೆಳಿಗ್ಗೆ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಂಪತಿಗೆ ಒಂದುವರೆ ವರ್ಷದ ಹೆಣ್ಣು ಮಗುವಿದ್ದು, ದಂಪತಿಯ ಸಾವಿನಿಂದ ಅದು ಅನಾಥವಾಗಿದೆ.

ಬೆಂಗಳೂರಿನಲ್ಲಿ ಯುವಕನಿಗೆ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!

ಬೆಂಗಳೂರು: ಟೀ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನನ್ನು ಹೆದರಿಸಿ, ಬೆದರಿಸಿ ಮನೆಯಲ್ಲಿ (Assault Case) ಇರಿಸಿಕೊಂಡಿದ್ದ ಮಂಗಳಮುಖಿಯರು ಪ್ರಜ್ಞೆ ತಪ್ಪಿಸಿ ಆತನ ಮರ್ಮಾಂಗ ಕತ್ತರಿಸಿ, ಲಿಂಗ ಪರಿವರ್ತಿಸಿದ್ದಾರೆ. ಸುಲಭವಾಗಿ ಹಣ ಸಂಪಾದನೆ ಮಾಡುವ ದೃಷ್ಟಿಯಿಂದ ಇಂತಹ ಕೃತ್ಯ‌ ನಡೆಸಿದ್ದಾರೆ.

ಮೂರು ವರ್ಷಗಳ ಹಿಂದೆ ಅಂಬೇಡ್ಕರ್‌ ಕಾಲೇಜ ಸಮೀಪದಲ್ಲಿದ್ದ ಟೀ ಅಂಗಡಿಯಲ್ಲಿ ಸಂತ್ರಸ್ತ ಕೆಲಸ ಮಾಡಿಕೊಂಡಿದ್ದ. ಚಿತ್ರ, ಅಶ್ವಿನಿ, ಕಾಜಲ್‌, ಪ್ರೀತಿ, ಮುಗಿಲ ಎಂಬುವವರು ಟೀ ಕುಡಿಯುವ ನೆಪದಲ್ಲಿ ಬಂದು ಯುವಕನನ್ನು ಪರಿಚಯ ಮಾಡಿಕೊಂಡಿದ್ದರು.

ನಮ್ಮ ಜತೆಗೆ ಬಂದರೆ ನಿನ್ನನ್ನು ಒಳ್ಳೆಯ ಮನೆಯಲ್ಲಿರಿಸಿ, ಸಂಪಾದನೆಯ ದಾರಿಯನ್ನು ಮಾಡಿಕೊಡುವುದಾಗಿ ಯುವಕನನ್ನು ಪುಸಲಾಯಿಸಿದ್ದಾರೆ. ಆದರೆ ಯುವಕ ಇದಕ್ಕೆ ಒಪ್ಪದೆ ಇದ್ದಾಗ, ಬಲವಂತವಾಗಿ ಬೆದರಿಸಿ ಮನೆಗೆ ಕರೆದೊಯ್ದಿದ್ದಾರೆ.

ಟ್ಯಾನರಿ ರಸ್ತೆಯಲ್ಲಿದ್ದ ಮನೆಯಲ್ಲಿ ಯುವಕನನ್ನು ಇರಿಸಿಕೊಂಡಿದ್ದಾರೆ. ಬಳಿಕ ಭಿಕ್ಷೆ ಬೇಡು ಇಲ್ಲದಿದ್ದರೆ ರೌಡಿಗಳಿಗೆ ಹೇಳಿ ನಿನ್ನ ತಂದೆ-ತಾಯಿಯನ್ನು ಕೊಲೆ ಮಾಡಿಸುತ್ತೇವೆ ಎಂದು ಹೆದರಿಸಿದ್ದಾರೆ. ಇವರ ಬ್ಲ್ಯಾಕ್‌ಮೇಲ್‌ಗೆ ಹೆದರಿದ ಯುವಕ ಸುಮಾರು ಮೂರು ವರ್ಷಗಳ ಕಾಲ ಭಿಕ್ಷಾಟನೆ ಮಾಡಿಸಿ ಹಣ ಸಂಪಾದಿಸಿದ್ದಾರೆ.

ಇತ್ತೀಚೆಗೆ ಈ ಮಂಗಳಮುಖಿಯರು ಯುವಕನಾಗಿಯೇ ಇಷ್ಟು ದುಡಿಯುತ್ತಿದ್ದಯಾ, ಹೆಣ್ಣಾದರೆ ಇನ್ನೂ ಎಷ್ಟು ಹಣವನ್ನು ಸಂಪಾದನೆ ಮಾಡಬಹುದು ಎಂದಿದ್ದಾರೆ. ಲಿಂಗ ಪರಿವರ್ತಿಸಿಕೊಂಡು ಹೆಣ್ಣಾಗು ಎಂದು ಬಲವಂತ ಮಾಡಿದ್ದಾರೆ. ಒಪ್ಪದೆ ಇದ್ದಾಗ ಗಾಂಜಾ ಸೇವಿಸಿ, ಮದ್ಯಪಾನ ಮಾಡಿಕೊಂಡು ಬಂದು ಹಲ್ಲೆ ನಡೆಸಿದ್ದಾರೆ.

ಬಳಿಕ ಬಲವಂತವಾಗಿ ಇಂಜೆಕ್ಷನ್ ಕೊಟ್ಟು ಪ್ರಜ್ಞೆ ತಪ್ಪಿಸಿ ಮರ್ಮಾಂಗವನ್ನು ಕತ್ತರಿಸಿದ್ದಾರೆ. ಯುವಕ ಎಚ್ಚರಗೊಂಡ ಲಿಂಗ ಪರಿವರ್ತನೆ ಮಾಡಿದ್ದಾರೆ. ಅಕ್ರಮವಾಗಿ ಲಿಂಗ ಪರಿವರ್ತನೆ, ಅಶ್ಲೀಲ ಫೋಟೊ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಲ್ಲದೆ ಮನಬಂದಂತೆ ಥಳಿಸಿ ಚಿತ್ರ ಹಿಂಸೆ ಕೊಟ್ಟಿದ್ದಾರೆ.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

Continue Reading

ತುಮಕೂರು

Food Poisoning: ಬೀಗರೂಟ ಸೇವಿಸಿ ಮನೆಗೆ ಬಂದವರು ಅಸ್ವಸ್ಥ; 20ಕ್ಕೂ ಹೆಚ್ಚು ಮಂದಿ ಆಸ್ಪತ್ರೆಪಾಲು

Food Poisoning: ನಾಗೇನಹಳ್ಳಿ ತಾಂಡಾದವರು ಪಕ್ಕದ ಶ್ರೀರಂಗಪುರ ತಾಂಡಾದಲ್ಲಿ ಬೀಗರ ಊಟ ಸೇವಿಸಿದ್ದು, ಹಾಗೆ ಸೇವಿಸಿದವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಉಪಚರಿಸಲಾಗಿದೆ. ಶಾಸಕ ವೆಂಕಟೇಶ್ ಆಸ್ಪತ್ರೆಗೆ ಭೇಟಿ ನೀಡಿ ಎಲ್ಲರ ಆರೋಗ್ಯ ವಿಚಾರಿಸಿದ್ದಾರೆ.

VISTARANEWS.COM


on

food poisoning tumkur
Koo

ತುಮಕೂರು: ಬೀಗರ ಊಟ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ (food poisoning) ತುಮಕೂರು (tumkur news) ಜಿಲ್ಲೆ ಪಾವಗಡ ತಾಲೂಕಿನ ನಾಗೇನಹಳ್ಳಿ ತಾಂಡಾದಲ್ಲಿ ನಡೆದಿದೆ. ಅಸ್ವಸ್ಥಗೊಂಡವರನ್ನು ಪಾವಗಡ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ನಾಗೇನಹಳ್ಳಿ ತಾಂಡಾದವರು ಪಕ್ಕದ ಶ್ರೀರಂಗಪುರ ತಾಂಡಾದಲ್ಲಿ ಬೀಗರ ಊಟ ಸೇವಿಸಿದ್ದು, ಹಾಗೆ ಸೇವಿಸಿದವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಉಪಚರಿಸಲಾಗಿದೆ. ಶಾಸಕ ವೆಂಕಟೇಶ್ ಆಸ್ಪತ್ರೆಗೆ ಭೇಟಿ ನೀಡಿ ಎಲ್ಲರ ಆರೋಗ್ಯ ವಿಚಾರಿಸಿದ್ದಾರೆ. ಅಧಿಕಾರಿಗಳು ನಾಗೇನಹಳ್ಳಿ ತಾಂಡಾಗೆ ತೆರಳಿ ಕುಡಿಯುವ ನೀರಿನ ಪರೀಕ್ಷೆ ನಡೆಸಿದ್ದು, ನೀರಿನಿಂದ ಯಾವುದೇ ಸಮಸ್ಯೆ ಆಗಿಲ್ಲ ಎನ್ನುವುದು ಖಚಿತವಾಗಿದೆ. ಹೀಗಾಗಿ ಫುಡ್ ಪಾಯಿಸನಿಂಗ್‌ನಿಂದಲೇ ಆರೋಗ್ಯದಲ್ಲಿ ಏರುಪೇರಾಗಿರುವ ಶಂಕೆ ಮೂಡಿದೆ.

ಬೆಂಗಳೂರಿನಲ್ಲಿ ಯುವಕನಿಗೆ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!

ಬೆಂಗಳೂರು: ಟೀ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನನ್ನು ಹೆದರಿಸಿ, ಬೆದರಿಸಿ ಮನೆಯಲ್ಲಿ (Assault Case) ಇರಿಸಿಕೊಂಡಿದ್ದ ಮಂಗಳಮುಖಿಯರು ಪ್ರಜ್ಞೆ ತಪ್ಪಿಸಿ ಆತನ ಮರ್ಮಾಂಗ ಕತ್ತರಿಸಿ, ಲಿಂಗ ಪರಿವರ್ತಿಸಿದ್ದಾರೆ. ಸುಲಭವಾಗಿ ಹಣ ಸಂಪಾದನೆ ಮಾಡುವ ದೃಷ್ಟಿಯಿಂದ ಇಂತಹ ಕೃತ್ಯ‌ ನಡೆಸಿದ್ದಾರೆ.

ಮೂರು ವರ್ಷಗಳ ಹಿಂದೆ ಅಂಬೇಡ್ಕರ್‌ ಕಾಲೇಜ ಸಮೀಪದಲ್ಲಿದ್ದ ಟೀ ಅಂಗಡಿಯಲ್ಲಿ ಸಂತ್ರಸ್ತ ಕೆಲಸ ಮಾಡಿಕೊಂಡಿದ್ದ. ಚಿತ್ರ, ಅಶ್ವಿನಿ, ಕಾಜಲ್‌, ಪ್ರೀತಿ, ಮುಗಿಲ ಎಂಬುವವರು ಟೀ ಕುಡಿಯುವ ನೆಪದಲ್ಲಿ ಬಂದು ಯುವಕನನ್ನು ಪರಿಚಯ ಮಾಡಿಕೊಂಡಿದ್ದರು.

ನಮ್ಮ ಜತೆಗೆ ಬಂದರೆ ನಿನ್ನನ್ನು ಒಳ್ಳೆಯ ಮನೆಯಲ್ಲಿರಿಸಿ, ಸಂಪಾದನೆಯ ದಾರಿಯನ್ನು ಮಾಡಿಕೊಡುವುದಾಗಿ ಯುವಕನನ್ನು ಪುಸಲಾಯಿಸಿದ್ದಾರೆ. ಆದರೆ ಯುವಕ ಇದಕ್ಕೆ ಒಪ್ಪದೆ ಇದ್ದಾಗ, ಬಲವಂತವಾಗಿ ಬೆದರಿಸಿ ಮನೆಗೆ ಕರೆದೊಯ್ದಿದ್ದಾರೆ.

ಟ್ಯಾನರಿ ರಸ್ತೆಯಲ್ಲಿದ್ದ ಮನೆಯಲ್ಲಿ ಯುವಕನನ್ನು ಇರಿಸಿಕೊಂಡಿದ್ದಾರೆ. ಬಳಿಕ ಭಿಕ್ಷೆ ಬೇಡು ಇಲ್ಲದಿದ್ದರೆ ರೌಡಿಗಳಿಗೆ ಹೇಳಿ ನಿನ್ನ ತಂದೆ-ತಾಯಿಯನ್ನು ಕೊಲೆ ಮಾಡಿಸುತ್ತೇವೆ ಎಂದು ಹೆದರಿಸಿದ್ದಾರೆ. ಇವರ ಬ್ಲ್ಯಾಕ್‌ಮೇಲ್‌ಗೆ ಹೆದರಿದ ಯುವಕ ಸುಮಾರು ಮೂರು ವರ್ಷಗಳ ಕಾಲ ಭಿಕ್ಷಾಟನೆ ಮಾಡಿಸಿ ಹಣ ಸಂಪಾದಿಸಿದ್ದಾರೆ.

ಇತ್ತೀಚೆಗೆ ಈ ಮಂಗಳಮುಖಿಯರು ಯುವಕನಾಗಿಯೇ ಇಷ್ಟು ದುಡಿಯುತ್ತಿದ್ದಯಾ, ಹೆಣ್ಣಾದರೆ ಇನ್ನೂ ಎಷ್ಟು ಹಣವನ್ನು ಸಂಪಾದನೆ ಮಾಡಬಹುದು ಎಂದಿದ್ದಾರೆ. ಲಿಂಗ ಪರಿವರ್ತಿಸಿಕೊಂಡು ಹೆಣ್ಣಾಗು ಎಂದು ಬಲವಂತ ಮಾಡಿದ್ದಾರೆ. ಒಪ್ಪದೆ ಇದ್ದಾಗ ಗಾಂಜಾ ಸೇವಿಸಿ, ಮದ್ಯಪಾನ ಮಾಡಿಕೊಂಡು ಬಂದು ಹಲ್ಲೆ ನಡೆಸಿದ್ದಾರೆ.

ಬಳಿಕ ಬಲವಂತವಾಗಿ ಇಂಜೆಕ್ಷನ್ ಕೊಟ್ಟು ಪ್ರಜ್ಞೆ ತಪ್ಪಿಸಿ ಮರ್ಮಾಂಗವನ್ನು ಕತ್ತರಿಸಿದ್ದಾರೆ. ಯುವಕ ಎಚ್ಚರಗೊಂಡ ಲಿಂಗ ಪರಿವರ್ತನೆ ಮಾಡಿದ್ದಾರೆ. ಅಕ್ರಮವಾಗಿ ಲಿಂಗ ಪರಿವರ್ತನೆ, ಅಶ್ಲೀಲ ಫೋಟೊ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಲ್ಲದೆ ಮನಬಂದಂತೆ ಥಳಿಸಿ ಚಿತ್ರ ಹಿಂಸೆ ಕೊಟ್ಟಿದ್ದಾರೆ.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

Continue Reading

ಪ್ರಮುಖ ಸುದ್ದಿ

CM Siddaramaiah: ಮುಡಾ ತನಿಖೆಯಿಂದ ರಿಲೀಫ್‌ ಪಡೆದ ಸಿಎಂ ಸಿದ್ದರಾಮಯ್ಯ ಅವರಿಂದ ಇಂದು ಕೃಷ್ಣೆಗೆ ಬಾಗಿನ

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಲಾಲ್ ಬಹಾದ್ದೂರ್ ಶಾಸ್ರೀ ಸಾಗರ ಜಲಾಶಯ ತುಂಬಿದ್ದು, ಈ ಹಿನ್ನೆಲೆಯಲ್ಲಿ ಗಂಗಾಪೂಜೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಅವರೂ ಜೊತೆಗೂಡಲಿದ್ದಾರೆ.

VISTARANEWS.COM


on

cm siddaramaiah
Koo

ವಿಜಯಪುರ: ಮುಡಾ ಹಗರಣದಲ್ಲಿ (MUDA Scam, MUDA Case) ಸದ್ಯಕ್ಕೆ ನಿರಾಳರಾಗಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಇಂದು ಆಲಮಟ್ಟಿಯಲ್ಲಿರುವ (Alamatti) ಕೃಷ್ಣಾ ಅಣೆಕಟ್ಟಿಗೆ (Krishna Dam) ತೆರಳಿ ಗಂಗಾಪೂಜೆ ಮಾಡಿ ಬಾಗಿನ ಅರ್ಪಿಸಲಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಅವರೂ ಜೊತೆಗೂಡಲಿದ್ದಾರೆ.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಲಾಲ್ ಬಹಾದ್ದೂರ್ ಶಾಸ್ರೀ ಸಾಗರ ಜಲಾಶಯ ತುಂಬಿದ್ದು, ಈ ಹಿನ್ನೆಲೆಯಲ್ಲಿ ಗಂಗಾಪೂಜೆ ನಡೆಯಲಿದೆ. ಜಲಸಂಪನ್ಮೂಲ ಇಲಾಖೆ ಹಾಗೂ ಕೆ.ಬಿ.ಜೆ.ಎನ್.ಎಲ್ ವತಿಯಿಂದ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ಆಯೋಜನೆಯಾಗಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬಾಗಿನ ಅರ್ಪಣೆಗೆ ಸಿದ್ಧತಾ ಕಾರ್ಯ ಪೂರ್ಣವಾಗಿದೆ.

ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು, 10.50ಕ್ಕೆ ಕೊಪ್ಪಳದ ಗಿಣಿಗೇರಾ ಏರ್ ಸ್ಟ್ರಿಪ್‌ಗೆ ಆಗಮಿಸಲಿದ್ದಾರೆ. ಅಲ್ಲಿಂದ 11ಕ್ಕೆ ರಸ್ತೆ ಮೂಲಕ ಕುಷ್ಟಗಿ, ಇಲಕಲ್ ಮಾರ್ಗವಾಗಿ 12.30ಕ್ಕೆ ಆಲಮಟ್ಟಿ ತಲುಪಲಿದ್ದಾರೆ.

ಮದ್ಯಾಹ್ನ 1 ಗಂಟೆಗೆ ಕೃಷ್ಣೆಯ ಜಲಧಿಗೆ ಆಲಮಟ್ಟಿ ಜಲಾಶಯದಲ್ಲಿ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಶಿವಾನಂದ‌ ಪಾಟೀಲ, ಎಂ ಬಿ‌ ಪಾಟೀಲ, ಆರ್.ಬಿ.ತಿಮ್ಮಾಪೂರ ಹಾಗೂ ವಿಜಯಪುರ, ಬಾಗಲಕೋಟೆ ಅವಳಿ ಜಿಲ್ಲೆಯ ಶಾಸಕರು, ಇನ್ನಿತರ ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3ಕ್ಕೆ ಆಲಮಟ್ಟಿಯಿಂದ ಇಲಕಲ್, ಕುಷ್ಟಗಿ ರಸ್ತೆ ಮಾರ್ಗವಾಗಿ ಹೊರಟು, 4.30 ಕ್ಕೆ ಕೊಪ್ಪಳದ ಗಿಣಿಗೇರಾ ಏರ್ ಸ್ಟ್ರಿಪ್ ತಲುಪಿ, ಅಲ್ಲಿಂದ ನಿಗದಿತ ವಿಶೇಷ ವಿಮಾನದ ಮೂಲಕ ಪ್ರಯಾಣಿಸಿ ಸಾಯಂಕಾಲ 5.30ಕ್ಕೆ ಬೆಂಗಳೂರು ತಲುಪಲಿದ್ದಾರೆ.

ಈ ನಡುವೆ, ರಾಜ್ಯಪಾಲರು ಅನುಮತಿ ನೀಡಿದ ಮುಡಾ ಕೇಸ್‌ ತನಿಖೆ ಪ್ರಕರಣದಲ್ಲಿ ಸಿಎಂಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಹೈಕೋರ್ಟ್‌ ಈ ಕುರಿತ ವಿಚಾರಣೆಯನ್ನು ಆ.29ಕ್ಕೆ ಮುಂದೂಡಿದೆ. ಅರ್ಜಿ ವಿಚಾರಣೆ ವೇಳೆ ವಾದ-ಪ್ರತಿವಾದ ಆಲಿಸಿದ ಬಳಿಕ ಮಾತನಾಡಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ದೂರುದಾರರು ಹಾಗೂ ಸಿಎಂ ಪರ ವಕೀಲರು ವಾದ ಮಂಡಿಸಿದ್ದಾರೆ. ಪಿಸಿ ಆಕ್ಟ್ 17ಎ ಅಡಿ ಅನುಮತಿ ಪ್ರಶ್ನಿಸಲಾಗಿದ್ದು, ರಿಟ್ ಅರ್ಜಿಯೊಂದಿಗೆ ದಾಖಲೆಗಳನ್ನು ಉಲ್ಲೇಖಿಸಿದ್ದಾರೆ. ರಾಜ್ಯಪಾಲರು ವಿವೇಚನಾರಹಿತವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಸಿಎಂ ಪರ ವಕೀಲರು ವಾದ ಮಂಡಿಸಿದ್ದಾರೆ. ಇನ್ನು ರಾಜ್ಯಪಾಲರ ಆದೇಶಕ್ಕೆ ತಡೆ ನೀಡಬಾರದು ಎಂದು ಪ್ರಭುಲಿಂಗ ನಾವದಗಿ ವಾದಿಸಿದ್ದಾರೆ. ಎಲ್ಲಾ ವಾದವನ್ನು ಕೋರ್ಟ್‌ ಆಲಿಸಿದ್ದು, ಹೈಕೋರ್ಟ್ ಮುಂದಿನ ಆದೇಶ ನೀಡುವವರೆಗೂ ಅಂದರೆ ಆಗಸ್ಟ್ 29ರವರೆಗೆ ವಿಚಾರಣೆ ಮುಂದೂಡಬೇಕು ಎಂದು ಜನಪ್ರತಿನಿಧಿಗಳ ಕೋರ್ಟ್‌ಗೆ ಸೂಚನೆ ನೀಡಿದರು.

ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಾದ ಮಂಡಿಸಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿದ್ದರು. ಸಿಎಂ ಸಿದ್ದರಾಮಯ್ಯ ಪರ ವಕೀಲ ಮನು ಸಿಂಘ್ವಿ ವಾದ ಮಂಡಿಸಿ, ಪ್ರಕರಣದಲ್ಲಿ ಸಂವಿಧಾನಾತ್ಮಕ ಮತ್ತು ಆಡಳಿತಾತ್ಮಕ ವಿಚಾರಗಳಿವೆ. ನಾಳೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ಬಾಕಿ ಇದೆ. ಗವರ್ನರ್ ಆದೇಶ ನೀಡುವ ಮುನ್ನ ಕ್ಯಾಬಿನೆಟ್ ತೀರ್ಮಾನ ಮಾಡಿದೆ. ಆದರೆ, ಗವರ್ನರ್ ಯಾವ ಆಧಾರ ಇಲ್ಲದೆಯೂ ಅನುಮತಿ ನೀಡಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ: CM Siddaramaiah: ಹೊಟ್ಟೆಕಿಚ್ಚಿನಿಂದಾಗಿ ಬಿಜೆಪಿಯವರಿಂದ ನನ್ನ ವಿರುದ್ಧ ಸುಳ್ಳು ಆರೋಪ; ಸಿದ್ದರಾಮಯ್ಯ

Continue Reading

ಕರ್ನಾಟಕ

Kannada New Movie: ಅವಿನಾಶ್ ವಿಜಯಕುಮಾರ್ ನಿರ್ದೇಶನದ “ಮೈ ಹೀರೋ” ಚಿತ್ರ ಆ.30ಕ್ಕೆ ರಿಲೀಸ್‌

Kannada New Movie: ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ “ಮೈ ಹೀರೋ” ಚಿತ್ರ ಇದೇ ಆಗಸ್ಟ್ 30 ರಂದು ಬಿಡುಗಡೆಯಾಗಲಿದೆ. ಬಿಡುಗಡೆಗೆ ಪೂರ್ವಭಾವಿಯಾಗಿ ಟ್ರೇಲರ್ ಬಿಡುಗಡೆಯಾಗಿದೆ. ಹಾಲಿವುಡ್ ಕಲಾವಿದರಾದ ಜಿಲಾಲಿ ರಜ್ ಕಲ್ಲಹ್, ಎರಿಕ್ ರಾಬರ್ಟ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಮೈ ಹೀರೋ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಕಾಶ್ ಬೆಳವಾಡಿ ಅವರು ಜಿಲ್ಲಾಧಿಕಾರಿಯಾಗಿ, ಹಿರಿಯನಟ ದತ್ತಣ್ಣ ಅವರು ಪುರೋಹಿತರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಟಿ ಅಂಕಿತ ಅಮರ್ ಮಧ್ಯಪ್ರದೇಶದ ಯುವತಿಯಾಗಿ ನಟಿಸಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ “ಮೈ ಹೀರೋ” ಚಿತ್ರ (Kannada New Movie) ಇದೇ ಆಗಸ್ಟ್ 30 ರಂದು ಬಿಡುಗಡೆಯಾಗಲಿದೆ. ಬಿಡುಗಡೆಗೆ ಪೂರ್ವಭಾವಿಯಾಗಿ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು “ಮೈ ಹೀರೋ” ಬಗ್ಗೆ ಮಾತನಾಡಿದರು.

ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಅವಿನಾಶ್ ವಿಜಯ ಕುಮಾರ್, ನಟಿ ಅಂಕಿತ ಅಮರ್ ಹಾಗೂ ಸಂಗೀತ ನಿರ್ದೇಶಕ ಗಗನ್ ಭಡೇರಿಯಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಹಾಲಿವುಡ್ ಕಲಾವಿದರಾದ ಜಿಲಾಲಿ ರಜ್ ಕಲ್ಲಹ್, ಎರಿಕ್ ರಾಬರ್ಟ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಮೈ ಹೀರೋ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಕಾಶ್ ಬೆಳವಾಡಿ ಅವರು ಜಿಲ್ಲಾಧಿಕಾರಿಯಾಗಿ, ಹಿರಿಯನಟ ದತ್ತಣ್ಣ ಅವರು ಪುರೋಹಿತರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಟಿ ಅಂಕಿತ ಅಮರ್ ಮಧ್ಯಪ್ರದೇಶದ ಯುವತಿಯಾಗಿ ನಟಿಸಿದ್ದಾರೆ.

ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಅವಿನಾಶ್ ವಿಜಯಕುಮಾರ್, ನಾನು ಮೂಲತಃ ರಂಗಭೂಮಿ ಕಲಾವಿದ. ನನ್ನ ನಿರ್ದೇಶನದ ಮೊದಲ ಚಿತ್ರವಿದು. ಎ.ವಿ. ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ನಿರ್ಮಿಸಿದ್ದೇವೆ. ನಮ್ಮ ತಾಯಿ 2009 ರಲ್ಲಿ “ಚಿಲಿಪಿಲಿ ಹಕ್ಕಿಗಳು” ಎಂಬ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಹಿಂದುಳಿದವರ ಮೇಲೆ ನಡೆಯುವ ಶೋಷಣೆ ಕುರಿತಂತೆ ಮಾಡಿರುವ ಕಾನ್ಸೆಪ್ಟ್ ಇದು. ಇತ್ತೀಚೆಗೆ ಉತ್ತರ ಕರ್ನಾಟಕದಲ್ಲಿ ಒಂದು ಘಟನೆ ನಡೆದಿತ್ತು. ಅದನ್ನು ಇಟ್ಟುಕೊಂಡು ಈ ಚಿತ್ರಕಥೆ ರಚಿಸಿದ್ದೇನೆ. ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆಗಳಲ್ಲಿ ಸಂಭಾಷಣೆ ಇರುತ್ತದೆ. ಹಳ್ಳಿಗಳಲ್ಲಿ ಈಗಲೂ ಜಾತಿ ಪದ್ದತಿ ಇದೆ, ಬೇರೆ ಬೇರೆ ದೇಶಗಳಲ್ಲೂ ಸಹ ಇದೆ. ಇದನ್ನೇ ಪ್ರಮುಖವಾಗಿಟ್ಟಿಕೊಂಡು ಸಿನಿಮಾ‌ ಮಾಡಿದ್ದೇನೆ.

ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ನಿರ್ಮಾಣವಾಗಿರುವ ಈ ಕಂಟೆಂಟ್ ಓರಿಯಂಟೆಡ್ ಚಿತ್ರ “ಮೈ ಹೀರೋ” ಆಗಸ್ಟ್ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಪಿ.ವಿ.ಆರ್ ಐನಾಕ್ಸ್ ಅವರು ವಿತರಣೆ ಮಾಡುತ್ತಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ನಾನು ಈ ಚಿತ್ರದಲ್ಲಿ ಮಧ್ಯಪ್ರದೇಶದ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. “ಮೈ ಹೀರೋ” ಚಿತ್ರದಲ್ಲಿ ಎನ್ ಜಿ ಓ ಪಾತ್ರ ನನ್ನದು. ಮಧ್ಯಪ್ರದೇಶದ ಮಹೇಶ್ವರ ಎಂಬ ಸ್ಥಳದಲ್ಲಿ ವಾರಣಾಸಿಯಲ್ಲಿರುವಂತೆ ಅನೇಕ ಘಾಟ್‌ಗಳಿದೆ. ಅಹಿಲ್ಯ ಬಾಯಿ ಎಂಬ ಮಹಾರಾಣಿ ಈ ಘಾಟ್‌ಗಳನ್ನು ನಿರ್ಮಿಸಿದ್ದರು. ಅಲ್ಲಿ ಅವರ ಪ್ರತಿಮೆ ಕೂಡ ಇದೆ. ಈ ಚಿತ್ರದಲ್ಲಿ ನಟಿಸುವುದಕ್ಕೆ ಮುಂಚೆ ನಾನು ಅಲ್ಲಿನ ವಿಷಯಗಳನ್ನು ತಿಳಿದುಕೊಂಡು ನಟಿಸಿರುವುದಾಗಿ ನಟಿ ಅಂಕಿತ ಅಮರ್ ಹೇಳಿದರು.

ಇದನ್ನೂ ಓದಿ: Reliance Jio: ಜಿಯೋ ಟಿವಿ ಪ್ಲಸ್ 2 ಇನ್ 1 ಆಫರ್; ಒಂದೇ ಸಂಪರ್ಕದಲ್ಲಿ ನೋಡಿ ಎರಡು ಟಿವಿ!

ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಗಗನ್ ಭಡೇರಿಯಾ ಮಾತನಾಡಿದರು.

Continue Reading
Advertisement
Gold In Country
ವಾಣಿಜ್ಯ20 mins ago

Gold In Country: ಅತೀ ಹೆಚ್ಚು ಚಿನ್ನವನ್ನು ಹೊಂದಿರುವ ದೇಶಗಳಲ್ಲಿ ಭಾರತ ಯಾವ ಸ್ಥಾನದಲ್ಲಿದೆ?

Viral Video
Latest23 mins ago

Viral Video: ತಂದೆಯ ವಿರುದ್ಧ ಎಫ್ಐಆರ್ ದಾಖಲಿಸಿದ 5 ವರ್ಷದ ಬಾಲಕ; ಅಸಲಿ ಕಾರಣವೇನು ಗೊತ್ತಾ?

Viral Video
Latest24 mins ago

Viral Video: ಆ್ಯಪಲ್ ಹೀಗೂ ತಿನ್ನಬಹುದು; ನೀವೂ ಟ್ರೈ ಮಾಡಿ ನೋಡಿ!

Couple death
ಕ್ರೈಂ3 hours ago

Couple Death: ಪತ್ನಿಯ ಅನುಮಾನಾಸ್ಪದ ಸಾವು; ಜನರ ಆಕ್ರೋಶಕ್ಕೆ ಹೆದರಿ ಗಂಡ ಕೂಡ ಆತ್ಮಹತ್ಯೆ

Mimi Chakraborty
ಪ್ರಮುಖ ಸುದ್ದಿ3 hours ago

Mimi Chakraborty : ಕೋಲ್ಕೊತಾ ಅತ್ಯಾಚಾರ ಪ್ರಕರಣವನ್ನು ವಿರೋಧಿಸಿದ ನಟಿ ಮಿಮಿ ಚಕ್ರವರ್ತಿಗೆ ಅತ್ಯಾಚಾರ ಬೆದರಿಕೆ!

ದೇಶ3 hours ago

Physical Abuse : ಅಶ್ಲೀಲ ಚಿತ್ರ ತೋರಿಸಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷನ ಬಂಧನ

Rishab Shetty
ಪ್ರಮುಖ ಸುದ್ದಿ4 hours ago

Rishab Shetty : ಭಾರತವನ್ನು ಕೆಟ್ಟದಾಗಿ ತೋರಿಸುವ ಸಿನಿಮಾಗಳಿಗೆ ಹಿಗ್ಗಾಮುಗ್ಗಾ ಜಾಡಿಸಿದ ರಿಷಭ್‌ ಶೆಟ್ಟಿ

food poisoning tumkur
ತುಮಕೂರು4 hours ago

Food Poisoning: ಬೀಗರೂಟ ಸೇವಿಸಿ ಮನೆಗೆ ಬಂದವರು ಅಸ್ವಸ್ಥ; 20ಕ್ಕೂ ಹೆಚ್ಚು ಮಂದಿ ಆಸ್ಪತ್ರೆಪಾಲು

PM Modi to visits US
ಪ್ರಮುಖ ಸುದ್ದಿ4 hours ago

PM Modi US Visit : ಸೆಪ್ಟೆಂಬರ್‌ನಲ್ಲಿ ಅಮೆರಿಕ ಪ್ರವಾಸ ಮಾಡಲಿದ್ದಾರೆ ಮೋದಿ; ಅಮೆರಿಕ ಚುನಾವಣೆ ನಡುವೆ ಕುತೂಹಲ ಮೂಡಿಸಿದೆ ಅವರ ಭೇಟಿ

Job Alert
ಕರ್ನಾಟಕ4 hours ago

Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ಇಂದು ಅಂತಿಮ ದಿನ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌