Viral Video: ಸೂಪರ್ ಮಾರ್ಕೆಟ್‍ನೊಳಗೇ ಒಳ ಉಡುಪು ಕಳಚಿ ಬ್ರೆಡ್ ಟ್ರೇನಲ್ಲಿಟ್ಟ ಯುವತಿ! - Vistara News

ವೈರಲ್ ನ್ಯೂಸ್

Viral Video: ಸೂಪರ್ ಮಾರ್ಕೆಟ್‍ನೊಳಗೇ ಒಳ ಉಡುಪು ಕಳಚಿ ಬ್ರೆಡ್ ಟ್ರೇನಲ್ಲಿಟ್ಟ ಯುವತಿ!

Viral Video: ವಿಡಿಯೊದಲ್ಲಿ ಲೋಪೆಜ್ ಬ್ರೆಡ್ ವಿಭಾಗದಲ್ಲಿ ನಿಂತು, ಆಕೆ ತನ್ನ ಒಳ ಉಡುಪುಗಳನ್ನು ತೆಗೆದು, ಅದನ್ನು ಬ್ರೆಡ್ ಟ್ರೇಯಲ್ಲಿ ಇರಿಸಿ, ನಂತರ ತನ್ನ ಟ್ರಾಲಿಯೊಂದಿಗೆ ಹೊರಟು ಹೋಗುವಾಗ ಕ್ಯಾಮೆರಾವನ್ನು ನೋಡಿ ನಗುತ್ತಿರುವುದನ್ನು ಕಾಣಬಹುದು. ವೈರಲ್ ಆಗಿರುವ ಈ ವಿಡಿಯೊವನ್ನು ಕಂಡು ಅನೇಕರು ಅಸಹ್ಯವನ್ನು ವ್ಯಕ್ತಪಡಿಸಿದ್ದಾರೆ. ಮತ್ತು ವೀಕ್ಷಕರು ಆಕೆಯ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಫ್ರ್ಯಾಂಕ್ ಮಾಡುವಂತಹ ವಿಡಿಯೊಗಳು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಹರಿದಾಡುತ್ತಿರುತ್ತವೆ. ವ್ಯಕ್ತಿಗಳು ಎಲ್ಲೆಂದರಲ್ಲಿ ಜನರನ್ನು ಫ್ರ್ಯಾಂಕ್ ಮಾಡುತ್ತಾ ಹೆದರಿಸಿ ತಮಾಷೆ ಮಾಡುತ್ತಾರೆ. ಇದು ಅನೇಕ ವೀಕ್ಷಕರಿಗೆ ಖುಷಿಯನ್ನು ನಿಡುತ್ತದೆ ನಿಜ. ಆದರೆ ಅವರ ಈ ತಮಾಷೆ ಅತಿರೇಕಕ್ಕೆ ಹೋಗಬಾರದು. ಇದರಿಂದ ಸಾರ್ವಜನಿಕರು ಕೋಪಗೊಳ್ಳಬಹುದು. ಆದರೆ ಇತ್ತೀಚೆಗೆ ಫ್ರ್ಯಾಂಕ್ ಮಾಡಲು ಕ್ಲೋಯಿ ಲೋಪೆಜ್ ಎಂಬ ಮಹಿಳೆ ತನ್ನ ಒಳ ಉಡುಪುಗಳನ್ನು ತೆಗೆದು ಮರ್ಕಡೋನಾ ಸೂಪರ್ ಮಾರ್ಕೆಟ್‍ನಲ್ಲಿ ಬ್ರೆಡ್ ನಡುವೆ ಇಡುತ್ತಿರುವ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್ (Viral Video) ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ವಿಡಿಯೊದಲ್ಲಿ ಲೋಪೆಜ್ ಬ್ರೆಡ್ ವಿಭಾಗದಲ್ಲಿ ನಿಂತು, ಆಕೆ ತನ್ನ ಒಳ ಉಡುಪುಗಳನ್ನು ತೆಗೆದು, ಅದನ್ನು ಬ್ರೆಡ್ ಟ್ರೇಯಲ್ಲಿ ಇರಿಸಿ, ನಂತರ ತನ್ನ ಟ್ರಾಲಿಯೊಂದಿಗೆ ಹೊರಟು ಹೋಗುವಾಗ ಕ್ಯಾಮೆರಾವನ್ನು ನೋಡಿ ನಗುತ್ತಿರುವುದನ್ನು ಕಾಣಬಹುದು. ವೈರಲ್ ಆಗಿರುವ ಈ ವಿಡಿಯೊವನ್ನು ಕಂಡು ಅನೇಕರು ಅಸಹ್ಯವನ್ನು ವ್ಯಕ್ತಪಡಿಸಿದ್ದಾರೆ. ಮತ್ತು ವೀಕ್ಷಕರು ಆಕೆಯ ವಿರುದ್ಧ ಕ್ರಮಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಸೂಪರ್ ಮಾರ್ಕೆಟ್‍ನಲ್ಲಿ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಮತ್ತು ಗ್ರಾಹಕರ ಆರೋಗ್ಯಕ್ಕೆ ಆದ್ಯತೆ ನೀಡದಿದ್ದರೆ ಮರ್ಕಡೋನಾ ಸೂಪರ್ ಮಾರ್ಕೆಟ್ ಅನ್ನು ಬಹಿಷ್ಕರಿಸುವುದಾಗಿ ಕೆಲವರು ಬೆದರಿಕೆ ಹಾಕಿದ್ದಾರೆ.

ಮರ್ಕಡೋನಾ ಮಹಿಳೆಗೆ ಈ ಬಗ್ಗೆ ಎಚ್ಚರಿಕೆ ನೀಡಿ, ಅವರು ತಮ್ಮ ಗ್ರಾಹಕರ ಆರೋಗ್ಯಕ್ಕೆ ಆದ್ಯತೆ ನೀಡುತ್ತಿದ್ದಾರೆ ಎಂದು ಸಾರ್ವಜನಿಕವಾಗಿ ಮಾಹಿತಿ ನೀಡದಿದ್ದರೆ, ತಾವು ಮತ್ತೆ ಮರ್ಕಡೋನಾದಿಂದ ಬ್ರೆಡ್ ಖರೀದಿಸುವುದಿಲ್ಲ ಮತ್ತು ತಾವು ಅಂತಹ ಮಹಿಳೆ ಯಾವುದೇ ಸೂಪರ್ ಮಾರ್ಕೆಟ್‍, ಡಿಪಾರ್ಟ್ಮೆಂಟ್ ಸ್ಟೋರ್ ಅಥವಾ ಶಾಪಿಂಗ್ ಸೆಂಟರ್ ಗೆ ಪ್ರವೇಶಿಸುವುದನ್ನು ಜೀವನಪರ್ಯಂತ ನಿಷೇಧಿಸುತ್ತೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಜನರು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಈ ಮೀನಿನ ದೇಹದಲ್ಲಿದೆ 860 ವೋಲ್ಟ್ ವಿದ್ಯುತ್! ಇದನ್ನು ತಿನ್ನಲು ಹೋದ ಮೊಸಳೆ ಕತೆ ಏನಾಯ್ತು ನೋಡಿ!

ಟಿಕ್‍ಟಾಕ್‍ನಲ್ಲಿ ವಯಸ್ಕರಿಗೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ರೀಲ್ಸ್ ಮಾಡಲು ಹೆಸರುವಾಸಿಯಾದ ಲೋಪೆಜ್, ಈ ಕೃತ್ಯವನ್ನು ಮಾಡಿದ್ದಾರೆ ಎಂದು ವರದಿಯಾಗಿದೆ. ಮರ್ಕಡೋನಾ ಪ್ರಸ್ತುತ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಲೋಪೆಜ್ ಅವರ ಈ ನಡವಳಿಕೆಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Assault Case: ಫುಡ್ ಡೆಲಿವರಿ ಬಾಯ್‌ನ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ; ಸಿಸಿಟಿವಿಯಲ್ಲಿ ಸೆರೆ

Assault Case: ಬೆಂಗಳೂರಿನ ವಿನಾಯಕ ನಗರ ಲೇಔಟ್‌ನಲ್ಲಿ ಜೊಮ್ಯಾಟೊ ಡೆಲಿವರಿ ಬಾಯ್‌ ಮೇಲೆ ಹಲ್ಲೆ ನಡೆದಿದೆ. ಮೂವರು ಯುವಕರು, ಡೆಲಿವರಿ ಬಾಯ್ ಮೇಲೆ ಏಕಾಏಕಿ ಹಲ್ಲೆ ಮಾಡಿ, ಮೊಬೈಲ್ ಹಾಗೂ ಹಣ ದೋಚಿ ಎಸ್ಕೇಪ್ ಆಗಿದ್ದಾರೆ.

VISTARANEWS.COM


on

Assault Case
Koo

ಬೆಂಗಳೂರು: ಫುಡ್ ಡೆಲಿವರಿ ಮಾಡಲು ಬಂದಿದ್ದ ವೇಳೆ ಜೊಮ್ಯಾಟೊ ಡೆಲಿವರಿ ಬಾಯ್ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ (Assault Case) ನಗರದ ವಿನಾಯಕ ನಗರ ಲೇಔಟ್‌ನಲ್ಲಿ ನಡೆದಿದೆ. ಮಂಗಳವಾರ ಮಧ್ಯೆ ರಾತ್ರಿ 1 ಗಂಟೆ ವೇಳೆ ಡೆಲಿವರಿ ಬಾಯ್‌ ಮೇಲೆ ನಡೆದಿರುವ ಹಲ್ಲೆಯ ವಿಡಿಯೊ, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿನಾಯಕ ನಗರ ಲೇಔಟ್‌ನಲ್ಲಿ ಮನೆಯೊಂದರಿಂದ ಹೊರಬರುತ್ತಿದ್ದಾಗ ಡಿಯೋ ಸ್ಕೂಟರ್‌ನಲ್ಲಿ ಹೋದ ಮೂವರು ಯುವಕರು, ಡೆಲಿವರಿ ಬಾಯ್ ಮೇಲೆ ಏಕಾಏಕಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ಯುವಕರು ಮಾರಕಾಸ್ತ್ರ ತೆಗೆಯುತ್ತಿದ್ದಂತೆ ಡೆಲಿವರಿ ಬಾಯ್ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆತನನ್ನು ಅಟ್ಟಾಡಿಸಿಕೊಂಡು ಹೋಗಿರುವ ಯುವಕರು, ಮೊಬೈಲ್ ಹಾಗೂ ಹಣ ದೋಚಿ ಎಸ್ಕೇಪ್ ಆಗಿದ್ದಾರೆ. ಡೆಲಿವರಿ ಬಾಯ್‌ ಮೇಲೆ ನಡೆದ ದಾಳಿ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ | Viral Video: ರೀಲ್ ಶೋಕಿಗಾಗಿ ನಡುರಸ್ತೆಯಲ್ಲಿ ಮಳೆಯಲ್ಲಿ ಮೈಚಳಿ ಬಿಟ್ಟು ಕುಣಿದ ಮಹಿಳೆ!

ಬಸ್‌ನಿಂದ ಆಯತಪ್ಪಿ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು

ಉಡುಪಿ: ಬಸ್‌ನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ನಡೆದಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ. ಕಾರ್ಕಳದಿಂದ (Karkala News) ಬಸ್‌ನಲ್ಲಿ ಕಾಲೇಜಿಗೆ ಪ್ರಾಯಾಣಿಸುತ್ತಿದ್ದಾಗ ವಿದ್ಯಾರ್ಥಿ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ.

ಮೃತ ಜನಿತ್ ಶೆಟ್ಟಿ ನಿಟ್ಟೆ ವಿದ್ಯಾಸಂಸ್ಥೆಯ ದ್ವಿತೀಯ ಪಿಯು ವಿದ್ಯಾರ್ಥಿಯಾಗಿದ್ದು, ಕಾರ್ಕಳದಿಂದ ಬಸ್‌ನಲ್ಲಿ ಕಾಲೇಜಿಗೆ ಪ್ರಾಯಾಣಿಸುತ್ತಿದ್ದಾಗ ಕೆಳಗೆ ಬಿದ್ದಿದ್ದ. ಈ ವೇಳೆ ಹಿಂಬದಿಯ ಚಕ್ರ ಹರಿದು ಗಂಭೀರ ಗಾಯಗೊಂಡಿದ್ದ. ತಕ್ಷಣ ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಜನಿತ್ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿ ತಾಯಿ ಮತ್ತು ತಂಗಿಯನ್ನು ಅಗಲಿದ್ದಾನೆ.

ಫೇಸ್‌ಬುಕ್ ಸುಂದರಿ ಹಿಂದೆ ಬಿದ್ದು 1.4 ಲಕ್ಷ ಕಳೆದುಕೊಂಡ ಪುರೋಹಿತ!

ಮಂಡ್ಯ: ಫೇಸ್‌ಬುಕ್ ಸುಂದರಿ ಹಿಂದೆ ಬಿದ್ದ ಪುರೋಹಿತನಿಗೆ ಪಂಗನಾಮ ಬಿದ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸುಂದರಿ ಮಾತಿಗೆ ಮರುಳಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡ (Fraud Case) ಅರ್ಚಕ, ಇದೀಗ ನ್ಯಾಯಕ್ಕಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಮಂಡ್ಯದ ಪಾಂಡವಪುರದ ಪಟ್ಟಸೋಮನಹಳ್ಳಿ ಗ್ರಾಮದ ಶಿವಶೈಲ ದೇವಸ್ಥಾನದ ಅರ್ಚಕ‌ ವಿಜಯ್ ಕುಮಾರ್ ಹಣ ಕಳೆದುಕೊಂಡವರು. ಕುಟುಂಬದಿಂದ ದೂರವಾಗಿ ಅರ್ಚಕ ಒಬ್ಬರೇ ವಾಸಿಸುತ್ತಿದ್ದು, ಇವರಿಗೆ ಕೆಲ ದಿನಗಳ ಹಿಂದೆ ಫೇಸ್‌ಬುಕ್‌ನಲ್ಲಿ ಸಿರಿ ಶ್ರೇಷ ಸರಿತಾ ಎಂಬ ಸುಂದರಿ ಪರಿಚಯವಾಗಿದ್ದಾಳೆ. ಹೀಗಾಗಿ ಆಕೆ ಜತೆ ಪ್ರತಿ ದಿನ ವಿಜಯ್ ಕುಮಾರ್ ಚಾಟಿಂಗ್ ಮಾಡುತ್ತಿದ್ದರು.

ವಿಜಯ್ ಕುಮಾರ್ ಬಗ್ಗೆ ತಿಳಿದುಕೊಂಡ ಯುವತಿ, ವಸತಿ, ಆರೋಗ್ಯ ಸಮಸ್ಯೆ ಅಂತ ಹೇಳಿ ಹಂತ ಹಂತವಾಗಿ ಹಣ ಪೀಕಿದ್ದಾಳೆ. ಈ ರೀತಿ ಸುಮಾರು 1 ಲಕ್ಷದ 40 ಸಾವಿರದಷ್ಟು ಹಣವನ್ನು ಸುಂದರಿ ಪಡೆದಿದ್ದಾಳೆ. ಬಣ್ಣ ಬಣ್ಣದ ಮಾತುಗಳಿಂದ ವಿಜಯ್ ಕುಮಾರ್‌ಗೆ ಬಲೆ ಹಾಕಿದ ಸುಂದರಿ ಮಾತು ನಂಬಿ ಫೋನ್ ಪೇ ಮೂಲಕ ವಿಜಯ್ ಹಣ‌ ಕಳುಹಿಸಿದ್ದರು. ಹಣ ಕೊಟ್ಟ ಬಳಿಕ ಭೇಟಿ ಆಗುವಂತೆ ಸುಂದರಿಗೆ ವಿಜಯ್ ಒತ್ತಾಯ ಮಾಡಿದ್ದಾರೆ. ಆದರೆ, ಇಂದು, ನಾಳೆ ಎಂದು ಫೇಸ್‌ಬುಕ್‌ ಬ್ಲಾಕ್ ಮಾಡಿ ಎಸ್ಕೇಪ್ ಆಗಿದ್ದಾಳೆ.

ಸುಂದರಿ ಮಾಯವಾದ ಬಳಿಕ ತಾನು ಮೋಸ ಹೋಗಿರುವ ಬಗ್ಗೆ ವಿಜಯ್ ಕುಮಾರ್‌ಗೆ ಮನವರಿಕೆಯಾಗಿದ್ದು, ಹಣ ವಾಪಸ್ ಕೊಡಿಸುವಂತೆ ಪೊಲೀಸರ ಮೊರೆ ಹೋಗಿದ್ದಾರೆ. ಮಂಡ್ಯದ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದ್ದು, ಈ ಪೊಲೀಸರು ತನಿಖೆ ನಡೆಸಲು ಮುಂದಾಗಿದ್ದಾರೆ.

Kolkata Doctor Murder Case: ಕೋಲ್ಕತಾ ವೈದ್ಯೆಯ ಅತ್ಯಾಚಾರ- ಕೊಲೆ ಎಸಗುವ ಮುನ್ನ 2 ವೇಶ್ಯಾಗೃಹಗಳಿಗೆ ಭೇಟಿ ನೀಡಿದ್ದ ಕಾಮುಕ!

ಅರ್ಚಕನಿಗೆ ಮೋಸ ಮಾಡಿರುವ ಯುವತಿಯ ಫೇಸ್‌ಬುಕ್‌ ಪ್ರೊಫೈಲ್‌ನಲ್ಲಿ ತೆಲಂಗಾಣದ ಸೋಶಿಯಲ್‌ ಮೀಡಿಯಾ ಸ್ಟಾರ್‌ ಬರ‍್ರೆಲಕ್ಕ ಕರ್ನೆ ಶಿರೀಷಾ ಅವರ ಫೋಟೊ ಇದೆ. ಅಲ್ಲದೇ ಆ ಖಾತೆಯಲ್ಲಿ ಇನ್ನೂ ಅನೇಕ ಯುವತಿಯರ ಫೋಟೊಗಳೂ ಇವೆ. ಹೀಗಾಗಿ ಫೇಕ್‌ ಫೇಸ್‌ಬುಕ್‌ ಖಾತೆ ಸೃಷ್ಟಿಸಿ ಅರ್ಚಕನಿಗೆ ಮೋಸ ಮಾಡಿದವರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ಆಟಿಕೆ ಎಂದು ತಿಳಿದು ಹಾವನ್ನೇ ಕಚ್ಚಿದ ಮಗು! ಕಚ್ಚಿಸಿಕೊಂಡ ಹಾವು ಸಾವು!

ಬಿಹಾರದಲ್ಲಿ ಒಂದು ವರ್ಷದ ಮಗು ಟೆರೇಸ್‌ನಲ್ಲಿ ಆಟವಾಡುತ್ತಿದ್ದಾಗ ಹಾವನ್ನು ಕಂಡು ಆಟವಾಡುವ ಸಾಮಗ್ರಿ ಎಂದು ತಿಳಿದು ಕಚ್ಚಿದೆ. ಹಾವು ಸಾವನ್ನಪ್ಪಿದ್ದು, ಮಗು ಅಪಾಯದಿಂದ ಪಾರಾಗಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

By

Viral Video
Koo

ಅಂಬೆಗಾಲಿಡುವ ಮಗುವೊಂದು ಹಾವನ್ನು ಕಚ್ಚಿ (Boy Bites Snake) ಕೊಂದಿರುವ ಘಟನೆ ಬಿಹಾರದ ಗಯಾ (Gaya district) ಜಿಲ್ಲೆಯ ಜಮುಹರ್ ಗ್ರಾಮದಲ್ಲಿ ನಡೆದಿದ್ದು, ಮಗು ಅಪಾಯದಿಂದ ಪಾರಾಗಿದೆ. ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದ್ದು, ಬಳಿಕ ಸಾಕಷ್ಟು ಮಂದಿ ಮಗುವನ್ನು ಕಾಣಲು ಬರುತ್ತಿದ್ದಾರೆ ಎನ್ನಲಾಗಿದೆ.

ಮಗು ಟೆರೇಸ್‌ನಲ್ಲಿ ಆಟವಾಡುತ್ತಿದ್ದಾಗ ಹಾವನ್ನು ಕಂಡು ಆಟವಾಡುವ ಸಾಮಗ್ರಿ ಎಂದು ತಿಳಿದು ಕಚ್ಚಿದೆ. ಹಾವು ಸಾವನ್ನಪ್ಪಿದ್ದು, ಬಾಲಕ ಅಪಾಯದಿಂದ ಪಾರಾಗಿರುವುದು ಆತನ ಕುಟುಂಬ ಹಾಗೂ ವೈದ್ಯರಿಗೆ ಅಚ್ಚರಿ ಮೂಡಿಸಿದೆ.

ಮಗು ಹಾವನ್ನು ಜಗಿಯುತ್ತಿರುವುದನ್ನು ಕಂಡ ಕೂಡಲೇ ತಾಯಿ ಅದನ್ನು ಮಗುವಿನ ಬಾಯಿಯಿಂದ ತೆಗೆದು ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಳೆ. ಆರೋಗ್ಯ ಕೇಂದ್ರದ ವೈದ್ಯಕೀಯ ಸಿಬ್ಬಂದಿ ಮಗುವನ್ನು ಪರೀಕ್ಷಿಸಿ ದೈಹಿಕವಾಗಿ ಯಾವುದೇ ಹಾನಿಯಿಲ್ಲ ಎಂದು ದೃಢಪಡಿಸಿ, ಮಗು ಆರೋಗ್ಯವಾಗಿರುವುದಾಗಿ ಘೋಷಿಸಿದರು.

ಈ ಹಾವು ವಿಷಕಾರಿಯಲ್ಲ. ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ ಎಂದು ಅವರು ಹೇಳಿದರು.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ನೋಡಿ ಸಾಕಷ್ಟು ಮಂದಿ ಕಾಮೆಂಟ್ ಮಾಡಿದ್ದಾರೆ. ವ್ಯಕ್ತಿಯೊಬ್ಬ ಮಗುವಿನ ಬಾಯಿಯನ್ನು ತೆರೆಯುವಂತೆ ಪ್ರಯತ್ನಿಸಿದನು. ಸತ್ತ ಹಾವಿನ ಚಿತ್ರವನ್ನೂ ವಿಡಿಯೋದಲ್ಲಿ ತೋರಿಸಲಾಗಿದೆ.


ಇನ್ನೊಂದು ಘಟನೆಯಲ್ಲಿ ಕಳೆದ ತಿಂಗಳು ಬಿಹಾರದ ರಜೌಲಿಯಲ್ಲಿ ಹಾವೊಂದು ವ್ಯಕ್ತಿಯೊಬ್ಬನಿಗೆ ಕಚ್ಚಿದ್ದು, ಬಳಿಕ ಹಾವು ಸಾವನ್ನಪ್ಪಿತ್ತು. ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಸರಿಯಾದ ವೈದ್ಯಕೀಯ ಚಿಕಿತ್ಸೆಯಿಂದ ವ್ಯಕ್ತಿ ಬದುಕಿ ಉಳಿದನು.

ಇದನ್ನೂ ಓದಿ: Viral Video: ಬುರ್ಖಾ ಧರಿಸಿ ಬೈಕ್ ಸ್ಟಂಟ್ ಮಾಡಿದ ಯುವಕರು ಪೊಲೀಸರ ಅತಿಥಿಗಳಾದರು!

ಉತ್ತರ ಪ್ರದೇಶದ ಸೌರಾ ಗ್ರಾಮದಲ್ಲೂ 24 ವರ್ಷದ ವಿಕಾಸ್ ದುಬೆ ಎಂಬವರಿಗೆ ಹಾವು ಪದೇ ಪದೇ ಕಚ್ಚಿದ ವಿಲಕ್ಷಣ ಪ್ರಕರಣ ನಡೆದಿತ್ತು. ಸುಮಾರು 40 ದಿನಗಳಲ್ಲಿ ವಿಕಾಸ್‌ಗೆ ಏಳು ಬಾರಿ ಹಾವು ಕಚ್ಚಿತ್ತು.

ಜೂನ್ 2 ರಂದು ದುಬೆ ತನ್ನ ನಿವಾಸದಲ್ಲಿ ಹಾಸಿಗೆಯಿಂದ ಎದ್ದ ತಕ್ಷಣ ಹಾವು ಕಚ್ಚಿದ್ದು, ಅವರನ್ನು ಪಕ್ಕದ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಚಿಕಿತ್ಸೆ ನೀಡಲಾಯಿತು. ಜೂನ್ 2 ರಿಂದ ಜುಲೈ 6 ರ ನಡುವೆ ದುಬೆ ಅವರು ಆರು ಬಾರಿ ಹಾವು ಕಡಿತಕ್ಕೆ ಒಳಗಾಗಿದ್ದರು.

Continue Reading

Latest

Viral Video: ರೀಲ್ ಶೋಕಿಗಾಗಿ ನಡುರಸ್ತೆಯಲ್ಲಿ ಮಳೆಯಲ್ಲಿ ಮೈಚಳಿ ಬಿಟ್ಟು ಕುಣಿದ ಮಹಿಳೆ!

Viral Video: ರೀಲ್ಸ್ ಮಾಡಲು ರಸ್ತೆ ಮಧ್ಯದಲ್ಲಿ ಡ್ಯಾನ್ಸ್ ಮಾಡುವುದು, ಸ್ಟಂಟ್ ಮಾಡುವುದು, ಎತ್ತರದ ಕಟ್ಟಡಗಳಿಂದ ಜಿಗಿಯುವುದು ಈಗಿನವರಿಗೆ ಕ್ರೇಜ್ ಆಗಿದೆ. ಅಂತಹದ್ದೇ ಒಂದು ಘಟನೆ ಈಗ ನಡೆದಿದೆ. ಈ ವೈರಲ್ ವಿಡಿಯೊದಲ್ಲಿ, ಬಿಳಿ ಮತ್ತು ಹಸಿರು ಬಟ್ಟೆ ಧರಿಸಿದ ಮಹಿಳೆಯೊಬ್ಬರು ಮಳೆಯ ನಡುವೆ ಜನನಿಬಿಡ ರಸ್ತೆಯಲ್ಲಿ ಹರ್ಯಾನ್ವಿ ಹಾಡಿಗೆ ಮೈ ಚಳಿ ಬಿಟ್ಟು ನರ್ತಿಸಿದ್ದಾಳೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

VISTARANEWS.COM


on

Viral Video
Koo


ರೀಲ್‍ಗಳನ್ನು ಮಾಡುವ ಹುಚ್ಚು ಯುವಜನರಲ್ಲಿ ಹೆಚ್ಚಾಗುತ್ತಿದೆ. ಸೋಶಿಯಲ್ ಮೀಡಿಯಾಗಳಲ್ಲಿ ಫೇಮಸ್ ಆಗಲು ರೀಲ್ಸ್ ತಯಾರಿಸುವುದರಲ್ಲೇ ಅವರು ಮಗ್ನರಾಗಿರುತ್ತಾರೆ. ಅದರಿಂದಾಗುವ ಅಪಾಯದ ಬಗ್ಗೆ ಅವರಿಗೆ ಯಾವುದೇ ಅರಿವು ಇರುವುದಿಲ್ಲ. ರೀಲ್ಸ್ ಮಾಡಲು ಅವರು ರಸ್ತೆ ಮಧ್ಯದಲ್ಲಿ ಡ್ಯಾನ್ಸ್ ಮಾಡುವುದು, ಸ್ಟಂಟ್ ಮಾಡುವುದು, ಎತ್ತರದ ಕಟ್ಟಡಗಳಿಂದ ಜಿಗಿಯುವುದು ಹೀಗೆ ಅನೇಕ ಅಪಾಯಕಾರಿ ಕೃತ್ಯಗಳಲ್ಲಿ ತೊಡಗುತ್ತಾರೆ. ಇದೀಗ ರೀಲ್ಸ್ ಮಾಡುವುದಾಗಿ ಮಹಿಳೆಯೊಬ್ಬಳು ನಡುರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ವಿಡಿಯೊ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾದ ಈ ವೈರಲ್ ವಿಡಿಯೊದಲ್ಲಿ, ಬಿಳಿ ಮತ್ತು ಹಸಿರು ಬಟ್ಟೆ ಧರಿಸಿದ ಮಹಿಳೆಯೊಬ್ಬರು ಮಳೆಯ ನಡುವೆ ಜನನಿಬಿಡ ರಸ್ತೆಯಲ್ಲಿ ಹರ್ಯಾನ್ವಿ ಹಾಡಿಗೆ ನೃತ್ಯ ಮಾಡುತ್ತಿದ್ದಾಳೆ. ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ ನಲ್ಲಿ ಪೋಸ್ಟ್ ಮಾಡಲಾದ ಈ ವಿಡಿಯೊದಲ್ಲಿ, ಮಹಿಳೆ ತನ್ನ ಕಾರಿನಿಂದ ಹೊರಬಂದು, ಅದನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಮತ್ತು ತನ್ನ ಸುತ್ತಲೂ ವಾಹನಗಳು ಚಲಿಸುತ್ತಿದ್ದರೂ ತನ್ನ ಬಗ್ಗೆ ಕಾಳಜಿಯಿಲ್ಲದೆ ಡ್ಯಾನ್ಸ್ ಮಾಡುತ್ತಿರುವುದನ್ನು ಸೆರೆಹಿಡಿಯಲಾಗಿದೆ.

ಅವಳು ರೀಲ್ ಮಾಡುವುದರಲ್ಲಿ ಎಷ್ಟು ಮಗ್ನಳಾಗುತ್ತಾಳೆ ಎಂದರೆ ಅವಳು ರಸ್ತೆಯ ಬಳಿ ಇರುವ ಅಪಾಯದ ಗೆರೆಯನ್ನು ದಾಟುತ್ತಾಳೆ, ಆಕೆಗೆ ಇದರ ಬಗ್ಗೆಯೂ ತಿಳಿದಿರುವುದಿಲ್ಲ. ಈ ವಿಡಿಯೊವನ್ನು ಚಿತ್ರೀಕರಿಸಿದ ಸ್ಥಳವು ಇನ್ನೂ ತಿಳಿದಿಲ್ಲ. ಆದರೆ, ಈ ಕ್ಲಿಪ್ ತ್ವರಿತವಾಗಿ ಸೋಶಿಯಲ್ ಮೀಡಿಯಾದಲ್ಲಿ ಜನರ ಗಮನ ಸೆಳೆಯಿತು, ಅದರಲ್ಲೂ ಯುಪಿ ಟ್ರಾಫಿಕ್ ಪೊಲೀಸರ ಗಮನಸೆಳೆದ ಈ ವಿಡಿಯೊಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. “ದಯವಿಟ್ಟು ಅಗತ್ಯ ಕ್ರಮಕ್ಕಾಗಿ ವಾಹನದ ಸಂಖ್ಯೆ, ಸಮಯ, ದಿನಾಂಕ ಮತ್ತು ಸ್ಥಳವನ್ನು ಹಂಚಿಕೊಳ್ಳಿ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ, ಇದು ಅವರು ಈ ವಿಷಯವನ್ನು ತನಿಖೆ ಮಾಡುವ ಉದ್ದೇಶವನ್ನು ಸೂಚಿಸುತ್ತದೆ.

ಇದನ್ನೂ ಓದಿ: ಸೂಪರ್ ಮಾರ್ಕೆಟ್‍ನೊಳಗೇ ಒಳ ಉಡುಪು ಕಳಚಿ ಬ್ರೆಡ್ ಟ್ರೇನಲ್ಲಿಟ್ಟ ಯುವತಿ!

ಈ ವಿಡಿಯೊ 200,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ ಮತ್ತು ಪ್ಲಾಟ್‍ಫಾರ್ಮ್‍ನಲ್ಲಿ ವಿವಿಧ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. “ಅವರು ಸುಲಭವಾಗಿ ಹಣ ಗಳಿಸಲು ಏನು ಬೇಕಾದರೂ ಮಾಡುತ್ತಾರೆ” ಎಂದು ಒಬ್ಬ ಬಳಕೆದಾರರು ಬರೆದಿದ್ದಾರೆ. ಇನ್ನೊಬ್ಬರು “ಇದು ಅಸಹ್ಯಕರವಾಗಿ ಕಾಣುತ್ತದೆ.” ಎಂದು ಕಾಮೆಂಟ್ ಮಾಡಿದ್ದಾರೆ, ಮೂರನೇ ಬಳಕೆದಾರರು, “ಚಲನ್ ನೀಡುವ ಮೂಲಕ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು” ಎಂದು ಸಲಹೆ ನೀಡಿದರು. ರೀಲ್ ತಯಾರಕರಿಗೂ ರಸ್ತೆಯಲ್ಲಿ ಒಂದು ಸ್ಥಳ ಇರಬೇಕು” ಎಂದು ನಾಲ್ಕನೇ ಬಳಕೆದಾರರು ತಮಾಷೆ ಮಾಡಿದ್ದಾರೆ. “ಸಾರ್ವಜನಿಕ ಸ್ಥಳದಲ್ಲಿ ರೀಲ್‍ಗಳನ್ನು ತಯಾರಿಸುವುದನ್ನು ನಿಷೇಧಿಸಬೇಕು” ಎಂದು ಐದನೇ ಬಳಕೆದಾರರು ಸೇರಿಸಿದ್ದಾರೆ.

Continue Reading

ಕ್ರೀಡೆ

Manu Bhaker: ನಟ ವಿಜಯ್​ ಗೊತ್ತು, ಸಿಎಂ ಸ್ಟಾಲಿನ್‌ ಗೊತ್ತಿಲ್ಲ ಎಂದು ನಕ್ಕ ಮನು ಭಾಕರ್; ವಿಡಿಯೊ ವೈರಲ್​​

Manu Bhaker: ಮನು ಅವರು ವಿದ್ಯಾರ್ಥಿಗಳ ಜತೆಗೆ ಕತ್ರಿನಾ ಕೈಫ್ ಹೆಜ್ಜೆ ಹಾಕಿದ್ದ ಕಾಲಾ ಚಷ್ಮಾ(‘Kala Chashma’ Song) ಹಿಂದಿ ಹಾಡೊಂದಕ್ಕೆ ನೃತ್ಯ ಮಾಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

VISTARANEWS.COM


on

Manu Bhaker
Koo

ಚೆನ್ನೈ: ಅವಳಿ ಒಲಿಂಪಿಕ್ಸ್​ ಪಕದ ವಿಜೇತೆ ಮನು ಭಾಕರ್(Manu Bhaker) ಅವರು ಚೆನ್ನೈಯಲ್ಲಿ ನಡೆದಿದ್ದ ಶಾಲಾ ಕಾರ್ಯಕ್ರಮವೊಂದಲ್ಲಿ ಪಾಲ್ಗೊಂಡಿದ್ದರು. ಕ್ರೀಡಾ ಸ್ಕಾಲರ್‌ಷಿಪ್‌ ವಿತರಣಾ ಕಾರ್ಯಕ್ರಮ ಇದಾಗಿತ್ತು. ಈ ವೇಳೆ ಅವರಿಗೆ ತಮಿಳುನಾಡಿನ ಕುರಿತಾದ ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಇದರೊಲ್ಲೊಂದು ಪ್ರಶ್ನೆ, ತಮಿಳುನಾಡು ಮುಖ್ಯಮಂತ್ರಿ(Tamil Nadu CM) ಎಂ.ಕೆ. ಸ್ಟಾಲಿನ್‌(MK Stalin) ಗೊತ್ತೇ ಎಂಬುದಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಮನು ಭಾಕರ್​ ನನಗೆ ಅವರು ಯಾರೆಂದೆ ತಿಳಿದಿಲ್ಲ ಎಂದು ಹೇಳುವ ಮೂಲಕ ಜೋರಾಗಿ ನಕ್ಕರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರು ಕೂಡ ಮನು ಅವರ ಈ ಪ್ರತಿಕ್ರಿಯೆ ಕೇಳಿ ಜೋರಾಗಿ ನಕ್ಕರು. ಸದ್ಯ ಈ ವಿಡಿಯೊ ವೈರಲ್(viral video)​ ಆಗಿದೆ.

ತಮಿಳುನಾಡಿನ ವಿಶೇಷ ಖಾದ್ಯ ಪೊಂಗಲ್​, ಮಧುರೈ ಮೀನಾಕ್ಷಿ ದೇವಸ್ಥಾನ, ಸಿನಿಮಾ ನಟ ವಿಜಯ್(Vijay)​ ತಿಳಿದಿದೆಯಾ? ಹೀಗೆ ಹಲವು ಪ್ರಶ್ನೆಗಳನ್ನು ಮನು ಭಾಕರ್​ ಅವರಿಗೆ ಕೇಳಲಾಯಿತು. ನಟ ವಿಜಯ್​ ಅವರನ್ನು ಹೊರತುಪಡಿಸಿ ಉಳಿದ ಯಾವುದರ ಬಗ್ಗೆಯೂ ತಿಳಿದಿಲ್ಲ ಎಂದು ಹೇಳಿದರು. ಅದರಲ್ಲೂ ಸಿಎಂ ಸ್ಟಾಲಿನ್​ ತಿಳಿದಿಲ್ಲ ಎನ್ನುವ ಪ್ರತಿಕ್ರಿಯೆಯ ವಿಡಿಯೊ ಮಾತ್ರ ತುಂಬಾ ವೈರಲ್​ ಆಗಿದೆ. ಸ್ಟಾಲಿನ್​ ವಿರೋಧಿಗಳು ಈ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಟ್ರೋಲ್​ ಮಾಡಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಮನು ಅವರು ವಿದ್ಯಾರ್ಥಿಗಳ ಜತೆಗೆ ಕತ್ರಿನಾ ಕೈಫ್ ಹೆಜ್ಜೆ ಹಾಕಿದ್ದ ಕಾಲಾ ಚಷ್ಮಾ(‘Kala Chashma’ Song) ಹಿಂದಿ ಹಾಡೊಂದಕ್ಕೆ ನೃತ್ಯ ಮಾಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು. ಭರತನಾಟ್ಯ(Manu Bhaker Bharatnatyam) ಕಲಿಕೆಗಾಗಿ ಮನು ಭಾಕರ್​ ತಮಿಳುನಾಡಿಗೆ ಆಗಮಿಸಿದ್ದರು. ತಮಿಳುನಾಡಿನ ಶಿಕ್ಷಕರೊಬ್ಬರ ಸಹಾಯದಿಂದ ಆನ್​ಲೈನ್​ನಲ್ಲಿಯೇ ಭರತನಾಟ್ಯವನ್ನು ಅಭ್ಯಾಸ ಮಾಡುತ್ತಿದ್ದ 22 ವರ್ಷದ ಮನು ಭಾಕರ್​ ಇದೀಗ ಶೂಟಿಂಗ್​ನಿಂದ ಮೂರು ತಿಂಗಳ ವಿಶ್ರಾಂತಿ ಪಡೆದು ನೇರವಾಗಿ ತರಗತಿಗೆ ಹಾಜರಾಗಿ ನೃತ್ಯ ಕಲಿಯಲಿದ್ದಾರೆ. ಜತೆಗೆ ವಯೋಲಿನ್​ ಕಲಿಕೆ ಕೂಡ ಮಾಡಲಿದ್ದಾರೆ.

ಇದನ್ನೂ ಓದಿ Manu Bhaker: 3 ತಿಂಗಳ ರಜೆಯಲ್ಲಿ ಭರತನಾಟ್ಯ, ಕುದುರೆ ಸವಾರಿ, ಸ್ಕೇಟಿಂಗ್ ಕಲಿಯಲಿದ್ದಾರೆ ಮನು ಭಾಕರ್

ಪ್ಯಾರಿಸ್​ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಮನು ಭಾಕರ್​ ಪಾತ್ರರಾಗಿದ್ದರು. ಜತೆಗೆ 12 ವರ್ಷಗಳ ಬಳಿಕ ಒಲಿಂಪಿಕ್​ ಶೂಟಿಂಗ್​ನಲ್ಲಿ ದೇಶಕ್ಕೆ ಪದಕ ಗೆದ್ದ ಸಾಧನೆ ಮಾಡಿದ್ದರು. ಭಾಕರ್(Manu Bhaker)​ ಅವರ ಜಾಹೀರಾತು ಮೌಲ್ಯದಲ್ಲಿ ಇದೀಗ ಭಾರೀ ಏರಿಕೆ ಕಂಡಿದೆ. ಮನು ಅವರ ಬ್ರ್ಯಾಂಡ್​ ಮೌಲ್ಯ ಈಗ 1.5 ರೂ. ಆಗಿದೆ. ಅವರು ಪ್ರತಿ ಡಿಜಿಟಲ್​ ಜಾಹೀರಾತಿಗೂ 30 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್​ ಕೇರ್​, ನ್ಯೂಟ್ರೀಷಿಯನ್​ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ 40 ಕಂಪನಿಗಳು(40 brands chasing Manu Bhaker) ಮನು ಅವರನ್ನು ಸಂಪರ್ಕಿಸಿದ್ದವು ಎಂದು ವರದಿಯಾಗಿತ್ತು.

Continue Reading
Advertisement
PM Modi Poland Visit
ವಿದೇಶ10 mins ago

PM Modi Poland Visit: ಪೋಲೆಂಡ್‌ಗೆ ಬಂದಿಳಿದ ಪ್ರಧಾನಿ ಮೋದಿ- ಗುಜರಾತಿ ನೃತ್ಯದ ಮೂಲಕ ಭರ್ಜರಿ ಸ್ವಾಗತ

PR Sreejesh
ಕ್ರೀಡೆ26 mins ago

PR Sreejesh: ಹಾಕಿ ದಿಗ್ಗಜ ಶ್ರೀಜೇಶ್​ಗೆ 2 ಕೋಟಿ ಬಹುಮಾನ ಘೋಷಣೆ ಮಾಡಿದ ಕೇರಳ ಸರ್ಕಾರ

Physical Abuse
ಕರ್ನಾಟಕ28 mins ago

Physical Abuse: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Kids Denim Fashion
ಫ್ಯಾಷನ್32 mins ago

Kids Denim Fashion: ಮಾನ್ಸೂನ್ ಸೀಸನ್ ನಲ್ಲಿ ಟ್ರೆಂಡಿಯಾದ ಮಕ್ಕಳ ಡೆನಿಮ್ ಫ್ಯಾಷನ್

Shraddha Kapoor
ದೇಶ34 mins ago

Shraddha Kapoor: ಪ್ರಧಾನಿ ಮೋದಿಯನ್ನು ಹಿಂದಿಕ್ಕಿದ ನಟಿ ಶ್ರದ್ಧಾ;‌ ಸ್ತ್ರೀ-2 ಸಕ್ಸೆಸ್‌ ಬೆನ್ನಲ್ಲೇ ಹೊಸ ದಾಖಲೆ

Kolkata Doctor Murder Case
ದೇಶ1 hour ago

Kolkata Doctor Murder Case: ಕೋಲ್ಕತ್ತಾ ವೈದ್ಯೆ ಅತ್ಯಾಚಾರ; ಮತ್ತೆ ನೆನಪಿಗೆ ಬಂದಳು ಕರ್ನಾಟಕ ಮೂಲದ ನರ್ಸ್ ಅರುಣಾ ಶಾನ್‌ಬಾಗ್

bangaldesh Unrest
ದೇಶ1 hour ago

Bangladesh Unrest: ಬಾಂಗ್ಲಾದಲ್ಲಿ ಹಿಂದೂಗಳನ್ನು ರಕ್ಷಿಸಿ- ನಾಲ್ವರು ಶಂಕರಾಚಾರ್ಯರಿಂದ ಕೇಂದ್ರ ಸರ್ಕಾರಕ್ಕೆ ಮನವಿ

Assault Case
ಕರ್ನಾಟಕ1 hour ago

Assault Case: ಫುಡ್ ಡೆಲಿವರಿ ಬಾಯ್‌ನ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ; ಸಿಸಿಟಿವಿಯಲ್ಲಿ ಸೆರೆ

Viral Video
ವೈರಲ್ ನ್ಯೂಸ್1 hour ago

Viral Video: ಆಟಿಕೆ ಎಂದು ತಿಳಿದು ಹಾವನ್ನೇ ಕಚ್ಚಿದ ಮಗು! ಕಚ್ಚಿಸಿಕೊಂಡ ಹಾವು ಸಾವು!

Tofu
ಆಹಾರ/ಅಡುಗೆ1 hour ago

Homemade Tofu Recipe: ಸೋಯಾ ಹಾಲಿನ ತೋಫು ಮನೆಯಲ್ಲೇ ಮಾಡಿಕೊಳ್ಳುವುದು ಹೇಗೆ?

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌