PR Sreejesh: ಹಾಕಿ ದಿಗ್ಗಜ ಶ್ರೀಜೇಶ್​ಗೆ 2 ಕೋಟಿ ಬಹುಮಾನ ಘೋಷಣೆ ಮಾಡಿದ ಕೇರಳ ಸರ್ಕಾರ - Vistara News

ಕ್ರೀಡೆ

PR Sreejesh: ಹಾಕಿ ದಿಗ್ಗಜ ಶ್ರೀಜೇಶ್​ಗೆ 2 ಕೋಟಿ ಬಹುಮಾನ ಘೋಷಣೆ ಮಾಡಿದ ಕೇರಳ ಸರ್ಕಾರ

PR Sreejesh: ಒಟ್ಟು ನಾಲ್ಕು ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ ಗೋಲ್​ ಕೀಪರ್​ ಪಿ.ಆರ್‌.ಶ್ರೀಜೇಶ್(PR Sreejesh)2 ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

VISTARANEWS.COM


on

PR Sreejesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರಂ: ಪ್ಯಾರಿಸ್​ ಒಲಿಂಪಿಕ್ಸ್​ ಕಂಚಿನ ಪದಕ ವಿಜೇತ, ಭಾರತ ಹಾಕಿ ತಂಡದ ಮಾಜಿ ಗೋಲ್​ ಕೀಪರ್​ ಪಿ.ಆರ್‌.ಶ್ರೀಜೇಶ್(PR Sreejesh) ಅವರಿಗೆ ಕೇರಳ ಸರ್ಕಾರ(Kerala government) 2 ಕೋಟಿ ನಗದು ಬಹುಮಾನ ಪ್ರಕಟಿಸಿದೆ. ಬುಧವಾರ ಮುಖ್ಯಮಂತ್ರಿ ಪಿಣರಾಯಿ ವಿಜಯನ್(Pinarayi Vijayan) ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಸಂಬಂಧ ನಿರ್ಧಾರ ಕೈಗೊಳ್ಳಲಾಗಿದೆ.

‌ಕೇರಳದ ಎರ್ನಾಕುಲಂ ಜಿಲ್ಲೆಯವರಾದ ಶ್ರೀಜೇಶ್‌ ಭಾರತ ತಂಡ ಟೋಕಿಯೊ ಮತ್ತು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ​ ಯಶಸ್ಸು ಕಾಣುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಟೋಕಿಯೊದಲ್ಲಿ ಅಮೋಘ ಪ್ರದರ್ಶನ ನೀಡಿದ ಕಾರಣ ಅವರಿಗೆ ಅತ್ಯುತ್ತಮ ಗೋಲ್​ ಕೀಪರ್​ ಪ್ರಶಸ್ತಿಯೂ ಲಭಿಸಿತ್ತು. ಒಟ್ಟು ನಾಲ್ಕು ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಿ 2 ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

ಶ್ರೀಜೇಶ್ ಕೃಷಿ ಕುಟುಂಬದಿಂದ ಬಂದವರು. ಹಾಕಿ ಕಿಟ್ ಖರೀದಿಸಲು ತಮ್ಮ ಹಸುವನ್ನು ಮಾರಿದ ಅವರ ತಂದೆಯ ತ್ಯಾಗವು ಕ್ರೀಡೆಯಲ್ಲಿ ಅವರ ಆರಂಭಿಕ ಹಂತದ ಪ್ರಯಾಣವಾಗಿತ್ತು. ಸಾಂಪ್ರದಾಯಿಕ ಉಡುಗೆ ಮತ್ತು ಮಲಯಾಳಂ ಉಚ್ಚಾರಣೆಗಾಗಿ ಅಪಹಾಸ್ಯವನ್ನು ಎದುರಿಸುತ್ತಿದ್ದರೂ, ಶ್ರೀಜೇಶ್ ತನ್ನ ತಂದೆಯ ಅಚಲ ಬೆಂಬಲದಿಂದ ತಿರುವನಂತಪುರಂನ ಜಿವಿ ರಾಜಾ ಸ್ಪೋರ್ಟ್ಸ್ ಸ್ಕೂಲ್​ಗೆ ಸೇರಿದ್ದರು ಅಲ್ಲಿ ಅವರ ತರಬೇತುದಾರರು ಗೋಲ್ ಕೀಪಿಂಗ್ ಆಯ್ಕೆ ಮಾಡಲು ಸಲಹೆ ನೀಡಿದರು. ಈ ನಿರ್ಧಾರವು ಅವರ ವೃತ್ತಿಜೀವನವನ್ನು ರೂಪಿಸುವಲ್ಲಿ ನಿರ್ಣಾಯಕವಾಯಿತು.

ಇದನ್ನೂ ಓದಿ PR Sreejesh : ಕುಟುಂಬ ಸಮೇತ ಪ್ರಧಾನಿ ಮೋದಿಯನ್ನು ಭೇಟಿಯಾದ ಒಲಿಂಪಿಯನ್​ ಪಿ.ಆರ್ ಶ್ರೀಜೇಶ್​​

ಭಾರತೀಯ ಹಾಕಿಗೆ ಶ್ರೀಜೇಶ್​ ನೀಡಿದ ಅಪಾರ ಸೇವೆಯನ್ನು ಪರಿಗಣಿಸಿ ಹಾಕಿ ಇಂಡಿಯಾ(Hockey India) ಕಳೆದ ವಾರ ಶ್ರೀಜೇಶ್ ಅವರ ಜೆರ್ಸಿ ನಂ.16ಕ್ಕೆ ವಿದಾಯ ಹೇಳಿತ್ತು. ಇನ್ನು ಮುಂದೆ ಶ್ರೀಜೇಶ್ ಧರಿಸುತ್ತಿದ್ದ ಜೆರ್ಸಿ ಸಂಖ್ಯೆ 16 ಅನ್ನು ಹಾಕಿ ಹಿರಿಯರ ತಂಡದ ಯಾವೊಬ್ಬ ಆಟಗಾರರಿಗೂ ನೀಡಲಾಗುವುದಿಲ್ಲ. ಪ್ಯಾರಿಸ್​ ಒಲಿಂಪಿಕ್ಸ್​ ಕಂಚಿನ ಪದಕ ಪಂದ್ಯವನ್ನಾಡುವ ಮೂಲಕ ಶ್ರೀಜೇಶ್​ ತಮ್ಮ 18 ವರ್ಷಗಳ ಹಾಕಿ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದರು.​

ಶ್ರೀಜೇಶ್​ ಅವರಿಗೆ ಹಾಕಿ ಇಂಡಿಯಾ(Hockey India) ಭಾರತ ಜೂನಿಯರ್ ಪುರುಷರ ತಂಡದ ಹೊಸ ಮುಖ್ಯ ಕೋಚ್ ಆಗಿ ನೇಮಿಸಿದೆ. 36 ವಷದ ಕೇರಳದ ಶ್ರೀಜೇಶ್‌ ಭಾರತ ಪರ 336 ಪಂದ್ಯಗಳನ್ನು ಆಡಿದ್ದಾರೆ. 2 ಒಲಿಂಪಿಕ್ಸ್‌ ಕಂಚಿನ ಪದಕ, ಏಷ್ಯನ್‌ ಗೇಮ್ಸ್‌ನಲ್ಲಿ 2 ಚಿನ್ನ, 1 ಕಂಚು, ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ 2 ಬೆಳ್ಳಿ, ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿಯಲ್ಲಿ 2 ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Indian hockey team: ಭುವನೇಶ್ವರದಲ್ಲಿ ಭಾರತೀಯ ಹಾಕಿ ತಂಡದಿಂದ ರೋಡ್ ಶೋ

Indian hockey team: ಹಾಕಿ ತಂಡಕ್ಕೆ ಭವ್ಯ ಸ್ವಾಗತ ನೀಡಿರುವುದಕ್ಕೆ ಹಾಕಿ ಇಂಡಿಯಾ ಅಧ್ಯಕ್ಷ ದಿಲಿಪ್ ಟಿರ್ಕಿ ಅವರು ಒಡಿಶಾ ಸರಕಾರ ಹಾಗೂ ಮುಖ್ಯಮಂತ್ರಿ ಮೋಹನ್ ಚರಣ್‌ಗೆ ಕೃತಜ್ಞತೆ ವ್ಯಕ್ತಪಡಿಸಿದರು.

VISTARANEWS.COM


on

Indian hockey team
Koo

ಭುವನೇಶ್ವರ: ಪ್ಯಾರಿಸ್ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಕಂಚಿನ ಪದಕ ಜಯಿಸಿ ಇತಿಹಾಸ ನಿರ್ಮಿಸಿರುವ ಭಾರತೀಯ ಪುರುಷರ ಹಾಕಿ ತಂಡಕ್ಕೆ(Indian hockey team) ಬುಧವಾರ ಭುವನೇಶ್ವರದಲ್ಲಿ ವೀರೋಚಿತ ಸ್ವಾಗತ ನೀಡಲಾಯಿತು. ಐತಿಹಾಸಿಕ ಸಾಧನೆಯನ್ನು ಸಂಭ್ರಮಿಸಲು ಆಯೋಜಿಸಲಾಗಿದ್ದ ರೋಡ್ ಶೋನಲ್ಲಿ ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ತಂಡವು ಭಾಗವಹಿಸಿತು.

ಸೆಮಿಫೈನಲ್‌ನಲ್ಲಿ ಜರ್ಮನಿ ಎದುರು 2-3 ಅಂತರದಲ್ಲಿ ಸೋತು ಫೈನಲ್‌ ತಲುಪಲು ವಿಫಲಗೊಂಡಿದ್ದ ಭಾರತ ಹಾಕಿ ತಂಡ, ಆಗಸ್ಟ್‌ 8ರಂದು ನಡೆದಿದ್ದ ಕಂಚಿನ ಪದಕದ ಪಂದ್ಯದಲ್ಲಿ ಸ್ಪೇನ್‌ ತಂಡವನ್ನು 2-1 ಗೋಲ್‌ಗಳಿಂದ ಮಣಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿತ್ತು. ಈ ಮೂಲಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪುರುಷರ ಹಾಕಿ ತಂಡ 52 ವರ್ಷಗಳ ನಂತರ ಮೊದಲ ಬಾರಿ ಸತತ ಪದಕಗಳನ್ನು ಜಯಿಸಿದ ಸಾಧನೆ ಮಾಡಿತ್ತು.

ಹಾಕಿ ತಂಡಕ್ಕೆ ಭವ್ಯ ಸ್ವಾಗತ ನೀಡಿರುವುದಕ್ಕೆ ಹಾಕಿ ಇಂಡಿಯಾ ಅಧ್ಯಕ್ಷ ದಿಲಿಪ್ ಟಿರ್ಕಿ ಅವರು ಒಡಿಶಾ ಸರಕಾರ ಹಾಗೂ ಮುಖ್ಯಮಂತ್ರಿ ಮೋಹನ್ ಚರಣ್‌ಗೆ ಕೃತಜ್ಞತೆ ವ್ಯಕ್ತಪಡಿಸಿದರು. ರಾಜ್ಯದ ಆಟಗಾರ ಅಮಿತ್ ರೋಹಿದಾಸ್‌ಗೆ ಒಡಿಶಾ ಸರಕಾರವು 4 ಕೋ.ರೂ. ನಗದು ಬಹುಮಾನವನ್ನು ಘೋಷಿಸಿದೆ. ತಂಡದ ಪ್ರತಿ ಸದಸ್ಯರಿಗೆ ತಲಾ 15 ಲಕ್ಷ ರೂ. ಹಾಗೂ ಸಹಾಯಕ ಸಿಬ್ಬಂದಿ ತಲಾ 10 ಲಕ್ಷ ರೂ. ಬಹುಮಾನ ನೀಡಲಾಗಿದೆ.

ಹಾಕಿಗೆ ವಿದಾಯ ಹೇಳಿದ ದಿಗ್ಗಜ ಗೋಲ್​ ಕೀಪರ್​ ಪಿ.ಆರ್​ ಶ್ರೀಜೇಶ್​ಗೆ ವಿಶೇಷವಾಗಿ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.

ಮುಂದಿನ 10 ವರ್ಷಗಳವರೆಗೆ ಪುರುಷರು ಹಾಗೂ ಮಹಿಳೆಯರ ರಾಷ್ಟ್ರೀಯ ಹಾಕಿ ತಂಡದ ಅಧಿಕೃತ ಪ್ರಾಯೋಜಕತ್ವವನ್ನು ಒಡಿಶಾ ಸರ್ಕಾರ ತೆಗೆದುಕೊಂಡಿದೆ. ನೆನೆಗುದಿಗೆ ಬಿದ್ದಿದ್ದ ಭಾರತೀಯ ಹಾಕಿಯನ್ನು ಉದ್ದಾರ ಮಾಡಿದ್ದೇ ಒಡಿಶಾ ಸರಕಾರ. ಮಾಜಿ ಮುಖ್ಯಮಂತ್ರಿ ನವೀನ್ ಪಾಟ್ನಾಯಕ್ ಅವರ ಕೊಡುಗೆ ಅಪಾರ.

Continue Reading

ಕ್ರೀಡೆ

CEAT Cricket Awards: ವರ್ಷದ ಅತ್ಯುತ್ತಮ ಏಕದಿನ ಬ್ಯಾಟರ್​ ಪ್ರಶಸ್ತಿ ಗೆದ್ದ ವಿರಾಟ್​ ಕೊಹ್ಲಿ

CEAT Cricket Awards: 35 ವರ್ಷದ ವಿರಾಟ್ ಕೊಹ್ಲಿ ಅವರು ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಸಚಿನ್ ತೆಂಡೂಲ್ಕರ್​​ ಅವರ ಏಕದಿನ ಕ್ರಿಕೆಟ್​ನ ಸಾರ್ವಕಾಲಿಕ 49 ಶತಕದ ದಾಖಲೆಯನ್ನು ಮುರಿದಿದ್ದರು

VISTARANEWS.COM


on

CEAT Cricket Awards
Koo

ಮುಂಬಯಿ: ಟೀಮ್​ ಇಂಡಿಯಾದ ಸ್ಟಾರ್​ ಕ್ರಿಕೆಟಿಗ ವಿರಾಟ್​ ಕೊಹ್ಲಿ(Virat Kohli) ‘ಸಿಯೆಟ್ ಅವಾರ್ಡ್ಸ್'(CEAT Cricket Awards) ಪ್ರಸ್ತುತ ಪಡಿಸಿದ ವರ್ಷದ ಅತ್ಯುತ್ತಮ ಏಕದಿನ ಬ್ಯಾಟರ್​ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ನಾಯಕನಾಗಿ ತಂಡವನ್ನು 2 ಬಾರಿ ಫೈನಲ್‌ ತಲುಪಿಸಿದ ಹೆಗ್ಗಳಿಕೆಗೆ ಶ್ರೇಯಸ್ ಅಯ್ಯರ್(Shreyas Iyer) ವರ್ಷದ T20 ನಾಯಕತ್ವ ಪ್ರಶಸ್ತಿಯನ್ನು ಗೆದ್ದರು. ನಾಯಕ ರೋಹಿತ್​ ಶರ್ಮ(Rohit Sharma) ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾದರು.

35 ವರ್ಷದ ವಿರಾಟ್ ಕೊಹ್ಲಿ ಅವರು ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಸಚಿನ್ ತೆಂಡೂಲ್ಕರ್​​ ಅವರ ಏಕದಿನ ಕ್ರಿಕೆಟ್​ನ ಸಾರ್ವಕಾಲಿಕ 49 ಶತಕದ ದಾಖಲೆಯನ್ನು ಮುರಿದಿದ್ದರು. ಈ ಮೂಲಕ ಏಕದಿನ ಕ್ರಿಕೆಟ್​ನೂತನ ಸಾಮ್ರಾಟನಾಗಿ ಹೊರಹೊಮ್ಮಿದ್ದರು. ಇದುವರೆಗೆ ಕೊಹ್ಲಿ ಒಟ್ಟು 295 ಏಕದಿನ ಪಂದ್ಯಗಳನ್ನು ಆಡಿದ್ದು 58.18 ರ ಸರಾಸರಿಯಲ್ಲಿ ಬ್ಯಾಟ್​ ಬೀಸಿ 13906 ರನ್ ಗಳಿಸಿದ್ದಾರೆ. ಇದರಲ್ಲಿ 50 ಶತಕ ಮತ್ತು 72 ಅರ್ಧಶತಕ ಒಳಗೊಂಡಿದೆ. ಬೌಲಿಂಗ್​ನಲ್ಲೂ 5 ವಿಕೆಟ್ ಪಡೆದಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಬಳಿಕ ಕೊಹ್ಲಿ ಭಾರತ ತೊರೆದು ಕುಟುಂಬ ಸಮೇತರಾಗಿ ಲಂಡನ್​ನಲ್ಲಿ ನೆಲೆಸಲಿದ್ದಾರೆ ಎಂಬ ಮಾತುಗಳು ಈಗಾಗಲೇ ಕೇಳಿ ಬಂದಿವೆ. ಅಭಿಮಾನಿಗಳ ಜಂಜಾಟದಿಂದ ತಪ್ಪಿಸಿಕೊಂಡು ಸಾಮಾನ್ಯರಂತೆ ಜೀವಿಸಲು ಇಷ್ಟ ಪಡುತ್ತಿರುವ ಕೊಹ್ಲಿ ಮುಂದಿನ ದಿನದಲ್ಲಿ ಲಂಡನ್​ನಲ್ಲಿಯೇ ನೆಲೆಸುವ ಸಾಧ್ಯತೆ ಇದೆ ಎಂದು ಕೆಲ ಮೂಲಗಳು ತಿಳಿಸಿವೆ.

ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಅನುಷ್ಕಾ ಮತ್ತು ವಿರಾಟ್ ಯುಕೆ ಮೂಲದ ಕಂಪನಿಯ ನಿರ್ದೇಶಕರಾಗಿದ್ದಾರೆ. ಯುಕೆ ಸರ್ಕಾರದ ಫೈಂಡ್ ಅಂಡ್ ಅಪ್ಡೇಟ್ ಕಂಪನಿಯ ಮಾಹಿತಿ ಸೇವೆಯ ಪ್ರಕಾರ, ದಂಪತಿಗಳು ಮ್ಯಾಜಿಕ್ ಲ್ಯಾಂಪ್​​ನ ಮೂವರು ನಿರ್ದೇಶಕರಲ್ಲಿ ಇಬ್ಬರು. ಇದು ಆಗಸ್ಟ್ 1, 2022 ರಂದು ಆರಂಭಗೊಂಡ ಸಲಹಾ ಸಂಸ್ಥೆಯಾಗಿದೆ. ಕಂಪನಿಯ ಅಧಿಕೃತ ಕಚೇರಿ ವಿಳಾಸವು ಯುಕೆಯ ವೆಸ್ಟ್ ಯಾರ್ಕ್​ಶೈರ್​ನಲ್ಲಿದೆ.

ಇದನ್ನೂ ಓದಿ

ಶ್ರೇಯಸ್​ ಅಯ್ಯರ್​ ಅವರು ಐಪಿಎಲ್​ನಲ್ಲಿ ಡೆಲ್ಲಿ ತಂಡದ ನಾಯಕನಾಗಿ ತಂಡವನ್ನು ಒಮ್ಮೆ ಫೈನಲ್​ ತಲುಪಿಸಿದ್ದರು. ಅಲ್ಲಿ ಮುಂಬೈ ವಿರುದ್ಧ ತಂಡ ಸೋಲು ಕಂಡು ರನ್ನರ್​ ಅಪ್​ ಪ್ರಶಸ್ತಿ ಪಡೆದಿತ್ತು. ಈ ಬಾರಿಯ ಆವೃತ್ತಿಯಲ್ಲಿ ಕೆಕೆಆರ್​ ತಂಡದ ನಾಯಕನಾಗಿ ಟ್ರೋಫಿ ಗೆದ್ದ ಸಾಧನೆ ಮಾಡಿದ್ದರು. ಹೀಗಾಗಿ ಅವರಿಗೆ ಸಿಯೆಟ್ ಅವಾರ್ಡ್ಸ್​ನಲ್ಲಿ ವರ್ಷದ T20 ನಾಯಕತ್ವ ಪ್ರಶಸ್ತಿ ನೀಡಲಾಯಿತು.

ಅಯ್ಯರ್​ ಇದುವೆರೆಗೆ 115 ಐಪಿಎಲ್​ ಪಂದ್ಯವನ್ನಾಡಿ 3127 ರನ್​ ಬಾರಿಸಿದ್ದಾರೆ. ಇದರಲ್ಲಿ 21 ಅರ್ಧಶತಕ ಒಳಗೊಂಡಿದೆ. 96 ಗರಿಷ್ಠ ವೈಯಕ್ತಿ ಮೊತ್ತವಾಗಿದೆ. ಭಾರತ ತಂಡದ ಪರ 51 ಟಿ20, 62 ಏಕದಿನ ಮತ್ತು 14 ಟೆಸ್ಟ್​ ಪಂದ್ಯಗಳನ್ನಾಡಿ ಒಟ್ಟು 4,336 ರನ್​ ಗಳಿಸಿದ್ದಾರೆ. ಟೆಸ್ಟ್​ನಲ್ಲಿ 1, ಏಕದಿನದಲ್ಲಿ 5 ಶತಕ ಬಾರಿಸಿದ್ದಾರೆ.

Continue Reading

ಕ್ರಿಕೆಟ್

Viral News: ಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಟಿ20 ವಿಶ್ವಕಪ್​ ಟ್ರೋಫಿಗೆ ಪೂಜೆ ಸಲ್ಲಿಸಿದ ರೋಹಿತ್​ ಶರ್ಮ, ಜಯ್​ ಶಾ

Viral News: ರೋಹಿತ್​ ಶರ್ಮ(Rohit Sharma) ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಮುಂಬಯಿಯ ಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಟಿ20 ವಿಶ್ವಕಪ್​ ಟ್ರೋಫಿಗೆ ಪೂಜೆ ಸಲ್ಲಿಸಿದ್ದಾರೆ.

VISTARANEWS.COM


on

Viral News
Koo

ಮುಂಬಯಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ(t20 world cup 2024) ಭಾರತ ತಂಡ ಕಪ್​ ಗೆದ್ದು ಸರಿ ಸುಮಾರು 2 ತಿಂಗಳು ಕಳೆದಿದೆ. ಇದೀಗ ತಂಡದ ನಾಯಕ ರೋಹಿತ್​ ಶರ್ಮ(Rohit Sharma) ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಮುಂಬಯಿಯ ಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಬುಧವಾರ ಟ್ರೋಫಿಗೆ ಪೂಜೆ ಸಲ್ಲಿಸಿದರು. ಈ ಫೋಟೊ ವೈರಲ್(Viral News)​ ಆಗಿದೆ.

17ನೇ ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup final)​ ಗೆದ್ದ ಭಾರತ ತಂಡದ ಈ ಅಭೂತಪೂರ್ವ ಗೆಲುವನ್ನು ಅಭಿಮಾನಿಗಳು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದರು. ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ಕ್ರಿಕೆಟ್ ತಂಡದ ಆಟಗಾರರನ್ನು ಮುಂಬೈಯಲ್ಲಿ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ಮರೀನ್ ಡ್ರೈವ್‌ ಪ್ರೇದೇಶದಲ್ಲಿ ಸಾಗರೋಪಾದಿಯಲ್ಲಿ ಜನ ಸೇರಿದ್ದರು.

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29ರಂದು ನಡೆದಿದ್ದ ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿತ್ತು.

ಟೀಮ್​ ಇಂಡಿಯಾ ಬಳಿ ಇರುವುದು ನಕಲಿ ವಿಶ್ವಕಪ್​ ಟ್ರೋಫಿ

ಟೀಮ್​ ಇಂಡಿಯಾ ಭಾರತಕ್ಕೆ ತಂದಿರುವುದು ಡುಪ್ಲಿಕೇಟ್ ಟಿ20 ವಿಶ್ವಕಪ್​ ಟ್ರೋಫಿ. ಸಾಮಾನ್ಯವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆಯೋಜಿಸುವ ಯಾವುದೇ ವಿಶ್ವಕಪ್​ ಟೂರ್ನಿಯಲ್ಲಿ ಫೋಟೋಶೂಟ್‌ಗೆ ಮಾತ್ರ ಮೂಲ ಟ್ರೋಫಿಯನ್ನು ನೀಡಲಾಗುತ್ತದೆ. ಆ ಬಳಿಕ ಐಸಿಸಿ ವರ್ಷದ ಲಾಂಛನದೊಂದಿಗೆ ನಕಲಿ ಬೆಳ್ಳಿಯ ಟ್ರೋಫಿಯನ್ನು ವಿನ್ಯಾಸಗೊಳಿಸುತ್ತದೆ ಮತ್ತು ಇದರನ್ನು ವಿಜೇತ ತಂಡಕ್ಕೆ ನೀಡಲಾಗುತ್ತದೆ. ಮೂಲ ಟ್ರೋಫಿ ಐಸಿಸಿ ಬಳಿಯೇ ಇರುತ್ತದೆ.

ಅಸಲಿ ಟ್ರೋಫಿ ದುಬೈನಲ್ಲಿರುವ ಐಸಿಸಿ ಕೇಂದ್ರ ಕಚೇರಿಯಲ್ಲಿದೆ. ಫೋಟೋಶೂಟ್​ ನಡೆಸಿದ ಬಳಿಕ ಮೂಲ ಟ್ರೋಫಿಯನ್ನು ಕೇಂದ್ರ ಕಚೇರಿಗೆ ನೀಡಲಾಗುತ್ತದೆ. ಯಾವುದೇ ತಂಡ ಕಪ್ ಗೆದ್ದರೂ ಅದನ್ನು ಸಂಭ್ರಮಾಚರಣೆ ಮತ್ತು ಫೋಟೋ ಸೆಷನ್​ವರೆಗೂ ಮಾತ್ರ ಪ್ರಸ್ತುತಪಡಿಸಲಾಗುತ್ತದೆ. ಅದರ ನಂತರ, ಗೆದ್ದವರು ನಕಲಿ ಟ್ರೋಫಿಯೊಂದಿಗೆ ತವರಿಗೆ ಹಿಂದಿರುಗುತ್ತಾರೆ.

Continue Reading

ಕ್ರಿಕೆಟ್

Danish Kaneria: ರಕ್ಷಾ ಬಂಧನ ಆಚರಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Danish Kaneria: ಕರಾಚಿ ಮೂಲದ ದಾನಿಶ್ ಕನೇರಿಯಾ 2000ರಿಂದ 2010ರವರೆಗೆ ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡದ ಮುಖ್ಯ ಸ್ಪಿನ್ ಬೌಲರ್ ಆಗಿ ಸೇವೆ ಸಲ್ಲಿಸಿದ್ದರು. ತಮ್ಮ ವೃತ್ತಿಜೀವನದುದ್ದಕ್ಕೂ ಕನೇರಿಯಾ ಇಸ್ಲಾಂ ದೇಶದಲ್ಲಿ ತಾರತಮ್ಯ ಎದುರಿಸಿದ್ದರು.

VISTARANEWS.COM


on

Danish Kaneria
Koo

ಲಂಡನ್​: ಭಾರತದಲ್ಲಿ ಹೆಚ್ಚು ಮಹತ್ವವಿರುವ, ಸಹೋದರ ಮತ್ತು ಸಹೋದರಿಯ ನಡುವಿನ ಬಾಂಧವ್ಯವನ್ನು ಬಲಪಡಿಸುವ ಹಬ್ಬವೆಂದರೆ ರಕ್ಷಾ ಬಂಧನವನ್ನು(Raksha Bandhan) ಸೋಮವಾರವಷ್ಟೇ ಎಲ್ಲಡೆ ಅದ್ಧೂರಿಯಾಗಿ ಆಚರಿಸಲಾಗಿತ್ತು. ಸಹೋದರ-ಸಹೋದರಿಯರು ಪರಸ್ಪರ ರಾಖಿ ಕಟ್ಟುವ ಮೂಲಕ ಈ ಸಂಭ್ರಮಾಚರಣೆ ಮಾಡಿದ್ದರು. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ (Danish Kaneria) ಕೂಡ ತಮ್ಮ ಪರಿವಾರದೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಈ ಫೋಟೊವನ್ನು ಕನೇರಿಯಾ ತಮ್ಮ ಅಧಿಕೃತ ಟ್ವಿಟರ್ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.​ ಜತೆಗೆ ರಕ್ಷಾ ಬಂಧನ ಆಚರಣೆಯ ಕೆಲವು ಝಲಕ್‌ಗಳನ್ನು ಹಂಚಿಕೊಳ್ಳುತ್ತಿದ್ದೇವೆ! ಎಂದು ಬರೆದುಕೊಂಡಿದ್ದಾರೆ.

ಯಾರು ಈ ದಾನಿಶ್ ಕನೇರಿಯಾ?


ಕರಾಚಿ ಮೂಲದ ದಾನಿಶ್ ಕನೇರಿಯಾ 2000ರಿಂದ 2010ರವರೆಗೆ ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡದ ಮುಖ್ಯ ಸ್ಪಿನ್ ಬೌಲರ್ ಆಗಿ ಸೇವೆ ಸಲ್ಲಿಸಿದ್ದರು. ತಮ್ಮ ವೃತ್ತಿಜೀವನದುದ್ದಕ್ಕೂ ಕನೇರಿಯಾ ಇಸ್ಲಾಂ ದೇಶದಲ್ಲಿ ತಾರತಮ್ಯ ಎದುರಿಸಿದ್ದರು. ಈ ವಿಚಾರವನ್ನು ಸ್ವತಃ ಅವರೇ ಹೇಳಿದ್ದರು. ಹಿಂದೊಮ್ಮೆ ಸಂದರ್ಶನವೊಂದರಲ್ಲಿ ಮಾತನಾಡುವ ವೇಳೆ ಇಸ್ಲಾಂಗೆ ಮತಾಂತರಗೊಳ್ಳಲು ಕೆಲವು ಸಹ ಆಟಗಾರರಿಂದ ಒತ್ತಾಯ ಬಂದಿತ್ತು ಎಂದು ದೂರಿದ್ದರು. ಕ್ರಿಕೆಟ್​ನಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಿದ ಎರಡನೇ ಹಿಂದೂ ಎಂಬ ಹೆಗ್ಗಳಿಕೆಗೆ ಕನೇರಿಯಾ ಅವರದ್ದು . ಟೆಸ್ಟ್ ಕ್ರಿಕೆಟ್​ನಲ್ಲಿ 250 ಕ್ಕೂ ಹೆಚ್ಚು ವಿಕೆಟ್​ಗಳ ಪ್ರಭಾವಶಾಲಿ ಪ್ರದರ್ಶನ ನೀಡಿದ್ದರು.

ಗೂಗ್ಲಿ ಬೌಲಿಂಗ್ ಮಾಡಬಲ್ಲ ಬಲಗೈ ಲೆಗ್ ಸ್ಪಿನ್ನರ್ ಆಗಿದ್ದ ಕನೇರಿಯಾ ಪಾಕಿಸ್ತಾನ ಪರ 61 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 34.79 ಸರಾಸರಿಯಲ್ಲಿ 261 ವಿಕೆಟ್‌ ಪಡೆದುಕೊಂಡಿದ್ದಾರೆ. ಜತೆಗೆ 18 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಅವರು ತಮ್ಮ ಸೋದರ ಸಂಬಂಧಿ ಅನಿಲ್ ದಳಪತ್ ನಂತರ ಪಾಕಿಸ್ತಾನ ತಂಡವನ್ನು ಪ್ರತಿನಿಧಿಸಿದ ಎರಡನೇ ಹಿಂದೂ ಮತ್ತು ಒಟ್ಟಾರೆಯಾಗಿ ಏಳನೇ ಮುಸ್ಲಿಮೇತರ ಆಟಗಾರರಾಗಿದ್ದರು.

ಇದನ್ನೂ ಓದಿ Sanju Samson | ಸಂಜು ಸ್ಯಾಮ್ಸನ್​ಗೆ ಅವಕಾಶ ನೀಡದಕ್ಕೆ ಬೇಸರ ವ್ಯಕ್ತಪಡಿಸಿದ ಪಾಕ್​ ಕ್ರಿಕೆಟಿಗ ಕನೇರಿಯಾ

ರಾಮಮಂದಿರ ಉದ್ಘಾಟನೆಯ ವೇಳೆಯೂ ಕನೇರಿಯಾ ತಮ್ಮ ಅಧಿಕೃತ ಟ್ವೀಟರ್​ ಎಕ್ಸ್​​ ಖಾತೆಯಲ್ಲಿ ರಾಮಮಂದಿರದ ಫೋಟೊ ಹಂಚಿಕೊಂಡು ಜೈಶ್ರೀರಾಮ್. ಎಲ್ಲ ಹಿಂದೂಗಳಿಗೂ ಅಭಿನಂದನೆಗಳು ಎಂದು ಬರೆದುಕೊಂಡಿದ್ದರು.

2012ರ ಇಂಗ್ಲಿಷ್‌ ಕೌಂಟಿ ಕ್ರಿಕೆಟ್‌ ಪಂದ್ಯಾವಳಿಯ ವೇಳೆ ಸ್ಪಾಟ್‌ ಫಿಕ್ಸಿಂಗ್‌ ನಡೆಸಿದ್ದು ಸಾಬೀತಾದ ಕಾರಣ ದಾನಿಶ್‌ ಕನೇರಿಯಾ ಅವರಿಗೆ ಪಿಸಿಬಿ ಆಜೀವ ಕ್ರಿಕೆಟ್‌ ನಿಷೇಧ ವಿಧಿಸಿತ್ತು. ಪಾಕಿಸ್ತಾನದಲ್ಲಿ ಐತಿಹಾಸಿಕ ಹಿಂದೂ ದೇಗುಲಗಳನ್ನು ನೆಲಸಮ ಮಾಡುತ್ತಿರುವ ಬಗ್ಗೆಯೂ ಕನೇರಿಯಾ ಧ್ವನಿ ಎತ್ತಿದ್ದರು.

ಪಾಕಿಸ್ತಾನದಲ್ಲಿ ಹಿಂದೂಗಳ ಮೇಲೆ ಪ್ರತಿದಿನ ಲೆಕ್ಕವಿಲ್ಲದಷ್ಟು ಮತಾಂತರ, ಅಪಹರಣ, ಅತ್ಯಾಚಾರ, ಹತ್ಯೆ ಸೇರಿದಂತೆ ಅನೇಕ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ. ಈ ಅನ್ಯಾಯದ ವಿರುದ್ಧ ವಿಶ್ವಾದ್ಯಂತ ಇರುವ ಹಿಂದೂಗಳು ಒಂದಾಗಿ ಹೋರಾಟ ನಡೆಸಬೇಕು ಎಂದು ಅವರು ಟ್ವೀಟ್‌ ಮೂಲಕ ಹಿಂದೊಮ್ಮೆ ಮನವಿ ಮಾಡಿದ್ದರು.

Continue Reading
Advertisement
Census
ದೇಶ11 mins ago

Census: ಮುಂದಿನ ತಿಂಗಳಿಂದ ಜನಗಣತಿ ಆರಂಭ ಸಾಧ್ಯತೆ; ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ

Air store Released
ದೇಶ39 mins ago

Air store released: ಪೋಖ್ರಾನ್‌ ಬಳಿ ತಪ್ಪಿದ ಭಾರೀ ಅವಘಡ; ಏಕಾಏಕಿ ಏರ್‌ಸ್ಟೋರ್‌ ರಿಲೀಸ್‌ ಮಾಡಿದ ಯುದ್ಧ ವಿಮಾನ

Indian hockey team
ಕ್ರೀಡೆ52 mins ago

Indian hockey team: ಭುವನೇಶ್ವರದಲ್ಲಿ ಭಾರತೀಯ ಹಾಕಿ ತಂಡದಿಂದ ರೋಡ್ ಶೋ

Fetus In Baby
ವಿಜ್ಞಾನ2 hours ago

Fetus In Baby: ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ!

CEAT Cricket Awards
ಕ್ರೀಡೆ2 hours ago

CEAT Cricket Awards: ವರ್ಷದ ಅತ್ಯುತ್ತಮ ಏಕದಿನ ಬ್ಯಾಟರ್​ ಪ್ರಶಸ್ತಿ ಗೆದ್ದ ವಿರಾಟ್​ ಕೊಹ್ಲಿ

Pharma Company Blast
ದೇಶ2 hours ago

Pharma Company Blast: ಫಾರ್ಮಾ ಕಂಪನಿಯಲ್ಲಿ ಭಾರೀ ಬ್ಲಾಸ್ಟ್‌- 17ಮಂದಿ ಬಲಿ; ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಭೀತಿ

Starbucks CEO
ವಿದೇಶ2 hours ago

Starbucks CEO: ಸಿಕ್ರೆ ಇಂಥಾ ಕೆಲ್ಸ ಸಿಗ್ಬೇಕಪ್ಪಾ! 1600 ಕಿ.ಮೀ ದೂರ ಆಫೀಸ್‌..ದಿನಾ ಓಡಾಡೋಕೆ ಕಂಪನಿ ಜೆಟ್‌! ಈತ ಪುಣ್ಯವಂತನೇ ಸರಿ

Viral News
ಕ್ರಿಕೆಟ್3 hours ago

Viral News: ಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಟಿ20 ವಿಶ್ವಕಪ್​ ಟ್ರೋಫಿಗೆ ಪೂಜೆ ಸಲ್ಲಿಸಿದ ರೋಹಿತ್​ ಶರ್ಮ, ಜಯ್​ ಶಾ

ಕರ್ನಾಟಕ3 hours ago

Almatti Dam: ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

Danish Kaneria
ಕ್ರಿಕೆಟ್3 hours ago

Danish Kaneria: ರಕ್ಷಾ ಬಂಧನ ಆಚರಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌