Areca Nut Price: ವಿದೇಶಿ ಅಕ್ರಮ ಅಡಿಕೆ ಸಾಗಾಣಿಕೆಯಿಂದ ದೇಶಿಯ ಅಡಿಕೆ ದರ ಕುಸಿತ; ರೈತರಲ್ಲಿ ಆತಂಕ - Vistara News

ಪರಿಸರ

Areca Nut Price: ವಿದೇಶಿ ಅಕ್ರಮ ಅಡಿಕೆ ಸಾಗಾಣಿಕೆಯಿಂದ ದೇಶಿಯ ಅಡಿಕೆ ದರ ಕುಸಿತ; ರೈತರಲ್ಲಿ ಆತಂಕ

Domestic Areca Nut Price: ಕಳೆದ ಮೂರು ವರ್ಷಗಳ ಈ ವಿದೇಶಿ ಕಳ್ಳ ಸಾಗಾಣಿಕೆಯ ಸಂಖ್ಯೆ ಮತ್ತು ತೂಕದ ಪ್ರಮಾಣ ಗಮನಿಸಿದರೆ ಅದು ಸ್ಟಾಕ್ ಮಾರ್ಕೇಟ್‌ನ ಏರು ಗತಿಯ ಗ್ರಾಫ್‌ ನಂತೆಯೇ ಇದೆ! ಅಂದರೆ ದಿನದಿಂದ ದಿನಕ್ಕೆ ವಿದೇಶಿ ಕಳಪೆ ಗುಣ ಮಟ್ಟದ ಕಳ್ಳ ಅಡಿಕೆ ದೇಶದ ಒಳಗೆ ಬರುತ್ತಲೇ ಇದೆ. ದೇಶೀಯ ಅಡಿಕೆ ಜತೆ ಈ ಅಡಿಕೆಯನ್ನು ಮಿಶ್ರಣ ಮಾಡಿ ಮಾರುವ ಪ್ರಕ್ರಿಯೆ ಎಡಬಿಡದೆ ನೆಡೆಯುತ್ತಿದೆ. ಅಡಿಕೆ ಬೆಳೆಗಾರರನ್ನು ಇದು ಕಂಗಾಲು ಮಾಡಿದೆ.

VISTARANEWS.COM


on

Areca nut
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

-ಅರವಿಂದ ಸಿಗದಾಳ್, ಮೇಲುಕೊಪ್ಪ
ಇದು ಪ್ರತೀ ಅಡಿಕೆ ಬೆಳೆಗಾರನೂ ಗಂಭೀರವಾಗಿ ಚಿಂತಿಸಬೇಕಾದ ವಿಚಾರ. ಡಾ. ವೀರೇಂದ್ರ ಹೆಗ್ಗಡೆಯವರು ಸಂಸದ್‌ನಲ್ಲಿ ಕೇಳಿ ಪಡೆದ ಅಧಿಕೃತ ಮಾಹಿತಿ ಪ್ರಕಾರ ಮೂರು ತಿಂಗಳಲ್ಲಿ 184 ಪ್ರಕರಣಗಳಲ್ಲಿ ವಿದೇಶಿ ಅಡಿಕೆ ಕಳ್ಳ ದಾರಿಯಲ್ಲಿ ದೇಶದ ಒಳಗೆ ಬಂದು ಉದುರಿದೆ! ಮೂರು ತಿಂಗಳ ಹಿಂದಕ್ಕೆ ಹೋಗಿ ಕಳೆದ ಮೂರು ವರ್ಷಗಳ ಈ ವಿದೇಶಿ ಕಳ್ಳ ಸಾಗಾಣಿಕೆಯ ಸಂಖ್ಯೆ ಮತ್ತು ತೂಕದ ಪ್ರಮಾಣ ಗಮನಿಸಿದರೆ ಅದು ಸ್ಟಾಕ್ ಮಾರ್ಕೇಟ್‌ನ ಏರು ಗತಿಯ ಗ್ರಾಫ್‌ ನಂತೆಯೇ ಇದೆ! ಅಂದರೆ ದಿನದಿಂದ ದಿನಕ್ಕೆ ವಿದೇಶಿ ಕಳಪೆ ಗುಣ ಮಟ್ಟದ ಕಳ್ಳ ಅಡಿಕೆ ದೇಶದ (Areca Nut Price) ಒಳಗೆ ಬರುತ್ತಲೇ ಇದೆ. ದೇಶೀಯ ಅಡಿಕೆ ಜತೆ ಈ ಅಡಿಕೆಯನ್ನು ಮಿಶ್ರಣ ಮಾಡಿ ಮಾರುವ ಪ್ರಕ್ರಿಯೆ ಎಡಬಿಡದೆ ನೆಡೆಯುತ್ತಿದೆ.

184 ಪ್ರಕರಣಗಳು ಎನ್ನುವುದು ಸೆರೆ ಸಿಕ್ಕ ದಾಖಲಾದ ಪ್ರಕರಣಗಳು. ದಾಖಲಾಗದ ಪ್ರಕರಣಗಳು ಇದರ ಹತ್ತರಷ್ಟಿವೆಯೋ? ನೂರರಷ್ಟಿವೆಯೋ! ವಿದೇಶಿ ಅಕ್ರಮ ಅಡಿಕೆ ಆಮದಿನ ವಿಚಾರದಲ್ಲಿ ಸ್ಪಷ್ಟವಾದ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ಮುಂದಾಗಿಲ್ಲ ಎನ್ನುವುದು ಪ್ರಕರಣಗಳು ಹೆಚ್ಚುತ್ತಿರುವ ಮಾಹಿತಿಯಿಂದ ಸ್ಪಷ್ಟ. ವಿದೇಶಿ ಅಧಿಕೃತ ನೇರ ಆಮದು ಸಾಧ್ಯವೇ ಇಲ್ಲ. ಯಾಕೆಂದರೆ, ಆಮದು ದರ ₹.351 + 100% (₹.752 ಪ್ರತಿ ಕೆಜಿ) ಆಮದು ಸುಂಕ ಇರುವುದರಿಂದ ಯಾರೂ ವಿದೇಶಿ ಅಡಿಕೆಯನ್ನು ಅಷ್ಟು ದುಬಾರಿಯಲ್ಲಿ ಕೊಟ್ಟು ಖರೀಧಿಸುತ್ತಾರೆ? ಪರಿಣಾಮ ಅಕ್ರಮ ವಿದೇಶಿ ಅಡಿಕೆ ಆಮದು ಕಳ್ಳರು ಹುಟ್ಟಿಕೊಂಡಿರುವುದು. ಅವರ ಮೇಲೆ ಯಾವುದೇ ಕಠಿಣ ಕಾನೂನು ಕ್ರಮ ಇಲ್ಲದಿರುವುದು ಮತ್ತು ಆ ಅಡಿಕೆ ಬರುತ್ತಿರುವ ಕಳ್ಳ ದಾರಿ ಗೆ ನಿಯಂತ್ರಣದ ಚಕ್ ಪೋಸ್ಟ್ ಇಲ್ಲದಿರುವುದು.

arecanut price

ಅಕ್ರಮ ವಿದೇಶಿ ಅಡಿಕೆ ಆಮದು ಕಳ್ಳರ ಮೇಲೆ FIR, ವಿಚಾರಣೆ, ಜೈಲೂಟ, ಪ್ರಾಸಿಕ್ಯುಷನ್ ತನಿಖೆ ಅನುಮತಿ, ತನಿಖೆ ಆದೇಶ, ಜಾಮೀನು, ವಿಚಾರಣೆಗೆ ನೋಟೀಸು, ಪ್ರಕರಣ ಸಿವಿಲ್ ಕೋರ್ಟ್‌‌ನಿಂದ ಹೈ ಕೋರ್ಟಿಗೆ-ಸುಪ್ರೀಮ್ ಕೋರ್ಟ್‌ಗೆ, ಕಠಿಣ ಜೈಲು ಶಿಕ್ಷೆ…….. ಉಹೂಂ ಒಂದೇ ಒಂದು ಪ್ರಕರಣದ ಸುದ್ದಿ ಪತ್ರಿಕೆಗಳಲ್ಲಿ ಬಂದಿಲ್ಲ, ಟಿವಿಯಲ್ಲಿ ‘ದರ್ಶನ’ ವಾಗಿಲ್ಲ. ಎಷ್ಟು ‘ಶೆಡ್‌ಗಳಲ್ಲಿ’ ಈ ವಿದೇಶಿ ಅಕ್ರಮ ಅಡಿಕೆಯನ್ನು ಸಂಗ್ರಹಿಸಿಟ್ಟಿದ್ದರ ಮೇಲೆ ದಾಳಿ ಆದ ಸುದ್ದಿಗಳಿಲ್ಲ! ಎಲ್ಲದರ ಪರಿಣಾಮ ಕಳಪೆ ಗುಣಮಟ್ಟದ ಅಡಿಕೆ ಮಂಗಳೂರಿನಲ್ಲಿ ಬೇಕಾಬಿಟ್ಟಿಯಾಗಿ ದೊರೆಯುತ್ತದೆ ಎಂದು ಹೇಳಲಾಗುತ್ತಿದೆ. ಅದನ್ನು ತಂದು ದೇಶೀಯ ರೈತರ ಅಡಿಕೆ ಜೊತೆ ಹದವಾಗಿ ಮಿಶ್ರಣ ಮಾಡಿ ಅಡಿಕೆ ಮಾರುಕಟ್ಟೆಗೆ ಬಿಡಲಾಗುತ್ತಿದೆ. ಮಾಧ್ಯಮಗಳಲ್ಲಿ ಆಗಾಗ ಪ್ರಕಟವಾಗಿ, ಅಲ್ಲೇ ಸೈಲಂಟ್ ಆಗುವ ಉಡುಪಿ, ಮಂಗಳೂರು, ಶಿವಮೊಗ್ಗ, ಬೆಂಗಳೂರು ಕಾಲೇಜ್‌ಗಳಲ್ಲಿನ ವಿದೇಶಿ ಡ್ರಗ್ಸ್ ದಂದೆಯಂತೆ, ಈ ವಿದೇಶಿ ಕಳಪೆ ಅಡಿಕೆ ಸುಲಭವಾಗಿ ದೊರೆಯುವಂತಾಗಿದೆ ಎನ್ನುವುದು ಸ್ಪಷ್ಟ. ವಿದೇಶಿ ಡ್ರಗ್ಸ್ ಮತ್ತು ವಿದೇಶಿ ಕಳ್ಳ ಅಡಿಕೆ ಅಮದು ನಿಲ್ಲಿಸಲು ಕೇಂದ್ರ ತನ್ನ ಭೀಮ ಶಕ್ತಿಯನ್ನು ಪ್ರಯೋಗಿಸಬೇಕಿದೆ. ಇಲ್ಲದೇ ಇದ್ದರೆ, ಅಡಿಕೆ ದರ ಇನ್ನಷ್ಟು ನೆಲ ಕಚ್ಚುವುದು ನಿಶ್ಚಿತ. ಮಲೆನಾಡು, ಕರಾವಳಿಯ ಎಲ್ಲ ಸಂಸದರು ಅಡಿಕೆ ಬೆಳೆಗಾರರ ಪರವಾಗಿ ಒಂದು ದಿಟ್ಟ ಕ್ರಮದ ಹೆಜ್ಜೆಗೆ ಮುಂದಾಗಬಹುದಾ?

ಇದನ್ನೂ ಓದಿ: Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪರಿಸರ

Wildlife: ಹುಟ್ಟಿದ ತಕ್ಷಣ ತಾಯಿಯನ್ನೇ ಕೊಂದು ತಿನ್ನುವ ಜೀವಿ ಇದು!

ಪ್ರತಿಯೊಂದು ಜೀವಿಗೂ (wildlife) ತಾಯಿಯೇ ದೇವರಾಗಿರುತ್ತದೆ. ತಾಯಿಯ ಆಶ್ರಯ ಇಲ್ಲದೆ ಬೆಳೆಯುವ ಜೀವಿಗಳು ಅಪರೂಪವೆಂದೇ ಹೇಳಬಹುದು. ಆದರೆ ಇದೊಂದು ಜೀವಿ ಮಾತ್ರ ಹುಟ್ಟಿದ ಕ್ಷಣವೇ ತಾಯಿಯನ್ನು ಕೊಂದು ತಿನ್ನುತ್ತದೆ ಎಂದರೆ ಎಲ್ಲರಿಗೂ ಅಚ್ಚರಿಯಾಗಬಹುದು. ಈ ಕುರಿತ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Wildlife
Koo

ಭೂಮಿ ಮೇಲೆ ಅಸಂಖ್ಯಾತ ಜೀವಿಗಳಿವೆ. ಕಣ್ಣಿಗೆ ಕಾಣದ ಜೀವಿಗಳಿಂದ (wildlife) ಹಿಡಿದು ಬೃಹತ್ ಗಾತ್ರದವರೆಗಿನ ಜೀವರಾಶಿಗಳು ತಮ್ಮದೇ ಆದ ಜೀವನಶೈಲಿ (Lifestyle), ಆಹಾರ ಶೈಲಿಯನ್ನು (food style) ಹೊಂದಿದೆ. ಭೂಮಿ (earth) ಮೇಲೆ ಇರುವ ಎಲ್ಲ ಜೀವರಾಶಿಗಳ ಪರಿಚಯ ಮಾನವನಿಗೆ ಇನ್ನೂ ಆಗಿಲ್ಲ. ಕೆಲವು ಜೀವಿಗಳ ಪರಿಚಯವಿದ್ದರೆ ಇನ್ನು ಕೆಲವು ನಮಗೆ ತಿಳಿದೇ ಇಲ್ಲ. ನಾವು ಗುರುತಿಸಬಲ್ಲ ಅನೇಕ ಜೀವಿಗಳ ಬಗ್ಗೆ ನಮಗೆ ಇನ್ನೂ ಸ್ಪಷ್ಟತೆ ಇಲ್ಲ.

ಪ್ರತಿಯೊಂದು ಜೀವಿಗೂ ತಾಯಿಯೇ ದೇವರಾಗಿರುತ್ತದೆ. ತಾಯಿಯ ಆಶ್ರಯ ಇಲ್ಲದೆ ಬೆಳೆಯುವ ಜೀವಿಗಳು ಅಪರೂಪವೆಂದೇ ಹೇಳಬಹುದು. ಆದರೆ ಇದೊಂದು ಜೀವಿ ಮಾತ್ರ ಹುಟ್ಟಿದ ಕ್ಷಣವೇ ತಾಯಿಯನ್ನು ಕೊಂದು ತಿನ್ನುತ್ತದೆ ಎಂದರೆ ಎಲ್ಲರಿಗೂ ಅಚ್ಚರಿಯಾಗಬಹುದು.

Wildlife
Wildlife


ಹುಟ್ಟಿದ ಕ್ಷಣದಿಂದ ತಾಯಿಗೇ ಅಪಾಯವನ್ನುಂಟು ಮಾಡುವ ಜೀವಿಯೆಂದರೆ ಚೇಳು (scorpions). ಅತ್ಯಂತ ಪ್ರಬಲ ವಿಷವನ್ನು ಹೊಂದಿರುವ ಚೇಳಿನ ಸಣ್ಣ ಪ್ರಮಾಣ ವಿಷವೂ ಮನುಷ್ಯನಿಗೆ ಅಪಾಯ ತರಬಹುದು. ಚಿಕಿತ್ಸೆ ನೀಡದೆ ಬಿಟ್ಟರೆ ಚೇಳು ಕಡಿತವು ಮರಣದ ಅಪಾಯವನ್ನು ಹೆಚ್ಚಿಸುತ್ತದೆ.

ಚೇಳುಗಳು ಸಾಮಾನ್ಯವಾಗಿ ಸಣ್ಣ ಜೀವಿಗಳನ್ನು ಬೇಟೆಯಾಡುತ್ತವೆ. ಕುಟುಕು ಮೂಲಕ ತಮ್ಮ ವಿಷವನ್ನು ಉಣಿಸುತ್ತದೆ. ಈ ವಿಷವು ಪಾರ್ಶ್ವವಾಯುವಿಗೆ ಕಾರಣವಾಗುತ್ತದೆ. ಚೇಳು ತನ್ನ ಬೇಟೆಯನ್ನು ಜೀವಂತವಾಗಿ ಸೇವಿಸಲು ಅನುವು ಮಾಡಿಕೊಡುತ್ತದೆ. ಇದಲ್ಲದೆ ಹೆಣ್ಣು ಚೇಳುಗಳು ಒಂದೇ ಬಾರಿಗೆ ಸರಿಸುಮಾರು 100 ಮರಿಗಳಿಗೆ ಜನ್ಮ ನೀಡುತ್ತವೆ. ಅವುಗಳು ಸೇರಿ ಅಂತಿಮವಾಗಿ ತಾಯಿಯನ್ನೇ ತಿನ್ನುತ್ತದೆ. ಆಶ್ಚರ್ಯಕರ ಸಂಗತಿಯೆಂದರೆ ತಾಯಿ ಚೇಳು ತನ್ನ ಮರಿಗಳನ್ನು ಪೋಷಿಸುತ್ತದೆ ಮತ್ತು ರಕ್ಷಿಸುತ್ತದೆ.


ಹೆಣ್ಣು ಚೇಳು ಮರಿಗಳನ್ನು ಬೆನ್ನಿನ ಮೇಲೆ ಇರಿಸಿ ಸಾಕುತ್ತದೆ. ಕ್ರಮೇಣ ಅವುಗಳು ತಾಯಿಯನ್ನೇ ಸಂಪೂರ್ಣವಾಗಿ ತಿನ್ನುತ್ತವೆ. ಮರಿಗಳು ಜನನದ ಅನಂತರ ತಕ್ಷಣವೇ ತಾಯಿಯ ಬೆನ್ನಿಗೆ ಅಂಟಿಕೊಳ್ಳುತ್ತವೆ. ತಾಯಿ ಕ್ಷೀಣಿಸಿ ನಾಶವಾಗುವವರೆಗೆ ಅದರ ಮಾಂಸವನ್ನು ತಿನ್ನುತ್ತವೆ. ತಾಯಿಯ ಎಲ್ಲಾ ಮಾಂಸವನ್ನು ಕಬಳಿಸಿದ ಅನಂತರವೇ ಚೇಳುಗಳು ಬೆನ್ನಿನಿಂದ ಬೇರ್ಪಟ್ಟು ಸ್ವತಂತ್ರವಾಗಿ ಬದುಕಲು ಪ್ರಾರಂಭಿಸುತ್ತವೆ!

ಇದನ್ನೂ ಓದಿ: Mosquito Repellent Plants: ನಿಮಗೆ ಗೊತ್ತೆ? ಈ 5 ಬಗೆಯ ಗಿಡಗಳು ಸೊಳ್ಳೆಗಳನ್ನು ಓಡಿಸುತ್ತವೆ!


ಚೇಳುಗಳು ಸಾಮಾನ್ಯವಾಗಿ ಕೀಟಗಳು ಮತ್ತು ಇತರ ಅಕಶೇರುಕಗಳನ್ನು ಬೇಟೆಯಾಗಿ ಗುರಿಯಾಗಿಸಿಕೊಳ್ಳುತ್ತವೆ. ಆದರೆ ಕೆಲವು ಪ್ರಭೇದಗಳು ಕಶೇರುಕಗಳನ್ನು ಬೇಟೆಯಾಡುತ್ತವೆ. ಅವುಗಳ ವಿಷಕಾರಿ ಕುಟುಕು ಆಕ್ರಮಣಕಾರಿ ಮತ್ತು ರಕ್ಷಣಾತ್ಮಕ ಉದ್ದೇಶಗಳಿಗಾಗಿ ಕಾರ್ಯನಿರ್ವಹಿಸುತ್ತದೆ.

ಪ್ರಣಯದ ಸಮಯದಲ್ಲಿ ಗಂಡು ಮತ್ತು ಹೆಣ್ಣು ಚೇಳುಗಳು ನೃತ್ಯದಲ್ಲಿ ತೊಡಗುತ್ತವೆ. ಎಲ್ಲಾ ಪ್ರಭೇದದ ಚೇಳುಗಳು ಮರಿಗಳಿಗೆ ಜನ್ಮ ನೀಡುತ್ತವೆ.

Continue Reading

ಪರಿಸರ

International Cat Day: ಇಂದು ಬೆಕ್ಕಿನ ದಿನ; ಇದರ ಆಯುಷ್ಯ, ನಿದ್ದೆ, ಶೃಂಗಾರ ಇತ್ಯಾದಿ ಸಂಗತಿಗಳು ಕುತೂಹಲಕರ!

International Cat Day: ನಿರ್ಭೀತ ಮತ್ತು ಸ್ನೇಹ ಮನೋಭಾವದಿಂದ ಮನೆಯಲ್ಲಿ ಎಲ್ಲರನ್ನೂ ಆಕರ್ಷಿಸುವ ಬೆಕ್ಕುಗಳ ಕುರಿತ ಹಲವು ಸಂಗತಿಗಳು ಕುತೂಹಲಕರ. ಮಾನವನ ಬದುಕಿನಲ್ಲಿ ಬೆಕ್ಕುಗಳು ವಿಶೇಷ ಸ್ಥಾನವನ್ನು ಪಡೆದಿವೆ. ಸ್ನೇಹಿತನಂತೆ ಒಲವು ತೋರುವ ಬೆಕ್ಕುಗಳು ಬೇಗನೆ ಹೊಂದಿಕೊಂಡು, ಮಾನವನ ಭಾಷೆಯನ್ನು ಅರ್ಥೈಸಿಕೊಳ್ಳುತ್ತವೆ. ಇಂದು ಅಂತಾರಾಷ್ಟ್ರೀಯ ಬೆಕ್ಕು ದಿನಾಚರಣೆ (International Cat Day). ಈ ವಿಶೇಷ ಸಂದರ್ಭದಲ್ಲಿ ಬೆಕ್ಕುಗಳ ಕುರಿತು ಹಲವು ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ.

VISTARANEWS.COM


on

By

International Cat Day
Koo

ನಾವು ಸಾಕುವ ಮುದ್ದಿನ ಪ್ರಾಣಿಗಳಲ್ಲಿ ಬೆಕ್ಕು (cat) ಕೂಡ ಒಂದಾಗಿದೆ. ವಿಶ್ವದಾದ್ಯಂತ ಇಂದು ಬೆಕ್ಕಿನ ದಿನವನ್ನು (International Cat Day) ಆಚರಿಸಲಾಗುತ್ತದೆ. ಪ್ರತಿ ವರ್ಷ ಆಗಸ್ಟ್ 8ರಂದು ಆಚರಿಸಲಾಗುವ ಈ ದಿನದಂದು ಮಾನವನ ಅತ್ಯಂತ ಹಳೆಯ ಮತ್ತು ಪ್ರೀತಿಯ ಪ್ರಾಣಿ ಸಹಚರರಲ್ಲಿ ಒಂದಾದ ಬೆಕ್ಕನ್ನು ಗೌರವಿಸಲಾಗುತ್ತದೆ.

ಮಾನವನ ಬದುಕಿನಲ್ಲಿ ಬೆಕ್ಕುಗಳು ವಿಶೇಷ ಸ್ಥಾನವನ್ನು ಪಡೆದಿವೆ. ಸ್ನೇಹಿತನಂತೆ ಒಲವು ತೋರುವ ಬೆಕ್ಕುಗಳು ಕೂಡ ಬೇಗನೆ ಹೊಂದಿಕೊಂಡು, ಮಾನವನ ಭಾಷೆಯನ್ನು ಅರ್ಥೈಸಿಕೊಳ್ಳುತ್ತವೆ. ಪ್ರಾಚೀನ ಈಜಿಪ್ಟ್‌ನಲ್ಲಿ ಬೆಕ್ಕುಗಳನ್ನು ದೈವಿಕ ಜೀವಿಯಾಗಿ ಪೂಜಿಸಲಾಗುತ್ತಿತ್ತು. ಅವುಗಳು ತಮ್ಮ ಸ್ವಾತಂತ್ರ್ಯ, ಕುತೂಹಲ ಮತ್ತು ನಿರ್ಭೀತ ಮನೋಭಾವದಿಂದ ಎಲ್ಲರನ್ನೂ ಆಕರ್ಷಿಸುತ್ತವೆ. ಅವುಗಳ ಸೊಗಸಾದ ದೈಹಿಕ ಲಕ್ಷಣಗಳು ಮತ್ತು ಸಣ್ಣಪುಟ್ಟ ಗಾಯ, ಆರೋಗ್ಯ ಸಮಸ್ಯೆಗಳನ್ನು ಸ್ವಯಂ ಗುಣಪಡಿಸುವ ಸಾಮರ್ಥ್ಯವು ಅವುಗಳನ್ನು ವಿಶೇಷವನ್ನಾಗಿ ಮಾಡಿವೆ.

ಅಂತಾರಾಷ್ಟ್ರೀಯ ಬೆಕ್ಕು ದಿನಾಚರಣೆಯ ಈ ಸಂದರ್ಭದಲ್ಲಿ ಬೆಕ್ಕುಗಳ ಕುರಿತು ಹಲವು ಆಸಕ್ತಿದಾಯಕ ಸಂಗತಿಗಳನ್ನು ತಿಳಿಯೋಣ.


ಬೆಕ್ಕುಗಳ ವಯಸ್ಸು ಎಷ್ಟು?

ಸಾಮಾನ್ಯವಾಗಿ ಬೆಕ್ಕುಗಳು ಮಾನವನ ವಯಸ್ಸಿಗೆ ಹೋಲಿಸಿದರೆ 116 ವರ್ಷಗಳ ಕಾಲ ಬದುಕುತ್ತವೆ. ಅವುಗಳ ಜೀವನವು ಆರು ಹಂತಗಳನ್ನು ಹೊಂದಿರುತ್ತದೆ. ಅದರಲ್ಲಿ ಆರು ತಿಂಗಳವರೆಗೆ ಅದು ಮಗುವಾಗಿರುತ್ತದೆ. ಬಳಿಕ 7 ತಿಂಗಳಿನಿಂದ 2 ವರ್ಷಗಳವರೆಗೆ ಜೂನಿಯರ್, 3ರಿಂದ 6 ವರ್ಷಗಳವರೆಗೆ ವಯಸ್ಕ, 7 ರಿಂದ 10 ವರ್ಷಗಳವರೆಗೆ ಪ್ರಬುದ್ಧ, 11ರಿಂದ 14 ವರ್ಷಗಳವರೆಗೆ ಹಿರಿಯ, 15 ರಿಂದ 25 ವರ್ಷಗಳವರೆಗೆ ಬಹು ಹಿರಿಯ ವಯಸ್ಕ ಆಗಿರುತ್ತದೆ.


ವಿಶೇಷ ಸಾಮರ್ಥ್ಯ

ಬೆಕ್ಕುಗಳು ಹೆಚ್ಚು ಪ್ರಭಾವಶಾಲಿ ಕಿವಿಗಳ ಸಾಮರ್ಥ್ಯವನ್ನು ಹೊಂದಿವೆ. ಅವುಗಳು ತಮ್ಮ ಕಿವಿಗಳನ್ನು 180 ಡಿಗ್ರಿಗಳಷ್ಟು ತಿರುಗಿಸಬಲ್ಲವು! ಪ್ರತಿ ಕಿವಿಯಲ್ಲಿ 32 ಸ್ನಾಯುಗಳಿವೆ. ಮಾನವನಲ್ಲಿ ಕೇವಲ ಆರು ಕಿವಿ ಸ್ನಾಯುಗಳಿವೆ. ಅವುಗಳು ಮನುಷ್ಯರಂತೆ ಶಬ್ದಗಳ ಮೂಲವನ್ನು ನಿಖರವಾಗಿ ಗುರುತಿಸುತ್ತವೆ.

ಅತ್ಯುತ್ತಮ ದೃಷ್ಟಿಯ ಹೊರತಾಗಿ ಬೆಕ್ಕುಗಳು ಉತ್ತಮ ಗ್ರಹಿಕಾ ಸಾಮರ್ಥ್ಯ ಹೊಂದಿರುತ್ತವೆ. ಬೇಟೆಯು ಸಮೀಪಿಸಿದಾಗ ಅವುಗಳ ವಾಸನೆಯ ಪ್ರಜ್ಞೆ ಜಾಗೃತವಾಗುತ್ತದೆ. ಅವುಗಳ ವಾಸನೆಯ ಅಸಾಧಾರಣ ಪ್ರಜ್ಞೆಯಿಂದ 200 ವಿಭಿನ್ನ ಪರಿಮಳಗಳನ್ನು ನೆನಪಿಸಿಕೊಳ್ಳುತ್ತವೆ.


ಬೆಕ್ಕುಗಳು ಕಾಲ್ಬೆರಳುಗಳ ಸಂಖ್ಯೆಯಲ್ಲಿ ವ್ಯತ್ಯಾಸಗಳಿರುತ್ತವೆ. ಕೆಲವು ಹೆಚ್ಚುವರಿ ಕಾಲ್ಬೆರಳುಗಳನ್ನು ಹೊಂದಿರುತ್ತವೆ. ಒಂದು ಬೆಕ್ಕಿನ ಮೇಲೆ ಅತಿ ಹೆಚ್ಚು ಕಾಲ್ಬೆರಳುಗಳ ದಾಖಲೆ 32 ಆಗಿದೆ.

ದಿನಚರಿ ಏನು?

ಸಾಕು ಬೆಕ್ಕುಗಳು ತಮ್ಮ ದಿನದಲ್ಲಿ ಶೇ. 70ರಷ್ಟು ಸಮಯವನ್ನು ನಿದ್ದೆಯಲ್ಲಿ ಕಳೆಯುತ್ತವೆ. ಶೇ. 15ರಷ್ಟು ಸಮಯವನ್ನು ಶೃಂಗಾರದಲ್ಲಿ ಕಳೆಯುತ್ತವೆ. ಮನೆಯಲ್ಲಿ ಬೇಟೆಯಾಡದೇ ಇದ್ದರೂ ಬೇಟೆಗಾಗಿ ತಮ್ಮನ್ನು ತಾವು ಸಜ್ಜುಗೊಳಿಸುತ್ತವೆ ಮತ್ತು ಶಕ್ತಿಯನ್ನು ಉಳಿಸುತ್ತದೆ. ವಯಸ್ಕ ಬೆಕ್ಕುಗಳು ದಿನಕ್ಕೆ 16- 20 ಗಂಟೆಗಳ ಕಾಲ ನಿದ್ರಿಸುತ್ತವೆ. ವಯಸ್ಸಾದ ಬೆಕ್ಕುಗಳು ಸುಮಾರು 24 ಗಂಟೆಗಳ ಕಾಲ ಮಲಗುವುದೂ ಉಂಟು!


ತಳಿಗಳು

ಬೆಕ್ಕುಗಳಲ್ಲಿ ಸೈಬೀರಿಯನ್, ರಾಗ್ಡಾಲ್, ಮೈನೆ ಕೂನ್ ಮತ್ತು ಬ್ರಿಟಿಷ್ ಶೋರ್ಥೈರ್‌ನಂತಹ ಪ್ರಮುಖ ತಳಿಗಳಿವೆ. ದೊಡ್ಡ ಗಂಡು ಬೆಕ್ಕುಗಳು ಸುಮಾರು 20 ಪೌಂಡ್ ತೂಗುತ್ತವೆ. ಈ ತಳಿಗಳು ತಮ್ಮ ದೊಡ್ಡ ಗಾತ್ರ ಮತ್ತು ಸ್ನೇಹಪರ ವ್ಯಕ್ತಿತ್ವಗಳಿಗೆ ಹೆಸರುವಾಸಿಯಾಗಿದೆ.


ಸಂವಹನ ಹೇಗೆ?

ಮಿಯಾಂವ್ ಎನ್ನುವುದು ಬೆಕ್ಕುಗಳಿಗೆ ಸಹಜ ಭಾಷೆಯಲ್ಲ. ಅವು ಮನುಷ್ಯರೊಂದಿಗೆ ಸಂವಹನ ನಡೆಸಲು ಇದನ್ನು ಅಭಿವೃದ್ಧಿಪಡಿಸಲಾಯಿತು. ಕಾಡಿನಲ್ಲಿ ವಯಸ್ಕ ಬೆಕ್ಕುಗಳು ವಾಸನೆ, ಮುಖದ ಅಭಿವ್ಯಕ್ತಿ, ದೇಹ ಭಾಷೆ ಮತ್ತು ಸ್ಪರ್ಶದಂತಹ ವಿವಿಧ ಮೌಖಿಕ ಸೂಚನೆಗಳೊಂದಿಗೆ ಸಂವಹನ ನಡೆಸುತ್ತವೆ. ಆದರೆ ಸಾಕು ಬೆಕ್ಕುಗಳು ತಮ್ಮ ಅಗತ್ಯಗಳನ್ನು ಮನುಷ್ಯರಿಗೆ ತಿಳಿಸಲು ಮಿಯಾಂವ್ ಶಬ್ದದ ಬಳಕೆ ಮಾಡುತ್ತವೆ.


ನಂಬಿಕೆ

ಅನೇಕ ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಬಿಳಿ ಬೆಕ್ಕುಗಳು ಶುದ್ಧತೆ ಮತ್ತು ಸಂತೋಷವನ್ನು ಸಂಕೇತಿಸುತ್ತವೆ. ಬಿಳಿ ಬೆಕ್ಕಿನ ಕನಸು ಬಿದ್ದರೆ ಅದೃಷ್ಟವನ್ನು ತರುತ್ತದೆ ಎಂದು ನಂಬಲಾಗುತ್ತದೆ.

ಇದನ್ನೂ ಓದಿ:International Tiger Day 2024: 150 ವರ್ಷಗಳಲ್ಲಿ ಹುಲಿಗಳ ಸಂಖ್ಯೆ ಶೇ. 95ರಷ್ಟು ಕುಸಿತ!

ಇದರ ಬಳಕೆ ಹೇಗೆ?

ಬೆಕ್ಕುಗಳನ್ನು ಸಂಚಾರ ಮತ್ತು ಸಂವಹನಕ್ಕೆ ಮಾರ್ಗದರ್ಶಿಯಾಗಿ ಬಳಸಲಾಗುತ್ತದೆ. ವಿಶೇಷ ಕೂದಲುಗಳಿರುವ ಬೆಕ್ಕುಗಳು ಇತರ ಪ್ರಾಣಿಗಳು ಮತ್ತು ಮನುಷ್ಯರಿಗೆ ಸಂದೇಶಗಳನ್ನು ರವಾನಿಸಲು ಅನುವು ಮಾಡಿಕೊಡುತ್ತದೆ. ಉದಾಹರಣೆಗೆ ಬೆಕ್ಕಿನ ಮೀಸೆಯನ್ನು ಮುಂದಕ್ಕೆ ತೋರಿಸಿದಾಗ ಅದು ಆತ್ಮವಿಶ್ವಾಸ ಮತ್ತು ನಿರಾಳತೆಯ ಭಾವನೆಯನ್ನು ಸೂಚಿಸುತ್ತದೆ. ವ್ಯತಿರಿಕ್ತವಾಗಿ, ಅವುಗಳನ್ನು ಹಿಂದಕ್ಕೆ ಎಳೆದರೆ ಅದು ಹೆದರಿಕೆ ಅಥವಾ ಬೆದರಿಕೆಯನ್ನು ಅನುಭವಿಸುತ್ತಿದೆ ಎಂಬುದು ಅರ್ಥ.

ಬೆಕ್ಕುಗಳ ಗುಂಪನ್ನು “ಕ್ಲೋಡರ್” ಎಂದು ಕರೆಯಲಾಗುತ್ತದೆ ಮತ್ತು ಗಂಡು ಬೆಕ್ಕನ್ನು ಸಾಮಾನ್ಯವಾಗಿ “ಟಾಮ್” ಎಂದು ಕರೆಯಲಾಗುತ್ತದೆ. ಆದರೆ ಹೆಣ್ಣು ಬೆಕ್ಕನ್ನು ಸಾಮಾನ್ಯವಾಗಿ ʼರಾಣಿʼ ಎಂದು ಕರೆಯಲಾಗುತ್ತದೆ.

Continue Reading

ಪರಿಸರ

ವಿಸ್ತಾರ ಗ್ರಾಮ ದನಿ: ಪರಿಸರ ಸೂಕ್ಷ್ಮ ಪ್ರದೇಶದ ಅಧಿಸೂಚನೆ; ನಮ್ಮ ಶಾಸಕರು, ಸಂಸದರು, ಸಚಿವರು, ಅಧಿಕಾರಿಗಳು ಕೃಷಿಕರಿಗಾಗಿ ಏನು ಮಾಡಬಹುದು?

Vistara Gramadani: ಈಗ ಪರಿಸರ ಸೂಕ್ಷ್ಮ ವ್ಯಾಪ್ತಿ ಪ್ರದೇಶದ ಸಾರ್ವಜನಿಕರು, ರೈತರು ಆಕ್ಷೇಪಣೆ ಅರ್ಜಿ ಕೊಡಲೇ ಬೇಕಾಗಿದೆಯಾ? ಯಾರ್ಯಾರೆಲ್ಲ ಕೊಡಬೇಕು? ಯಾರಿಗೆ ಕೊಡಬೇಕು? ಹೇಗೆ ಕೊಡಬೇಕು? 5-6 ವರ್ಷಗಳ ಹಿಂದೆ, ಹಿಂದಿನ ಕರಡು ಅಧಿ ಸೂಚನೆಗೆ ಆಕ್ಷೇಪಣೆ ಕೊಟ್ಟಾಗಿದೆಯಲ್ಲ? ಮತ್ತೆ ಕೊಡಬೇಕಾ? ಹೌದಾದರೆ ಕಾರಣ ಏನು? ಈ ಎಲ್ಲಾ ಹಿನ್ನೆಲೆಯಲ್ಲಿ ನಮ್ಮ ಶಾಸಕರು, ಸಂಸದರು, ಸಚಿವರು ಮತ್ತು ಅಧಿಕಾರಿಗಳು ತಕ್ಷಣ ಒಂದಿಷ್ಟು ಕ್ರಮಗಳನ್ನು ಸ್ಥಳೀಯ ನಿವಾಸಿಗಳ ಪರವಾಗಿ ಮಾಡಬಹುದಾ?

VISTARANEWS.COM


on

ವಿಸ್ತಾರ ಗ್ರಾಮ ದನಿ
Koo

-ಅರವಿಂದ ಸಿಗದಾಳ್, ಮೇಲುಕೊಪ್ಪ
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ (ವಿಸ್ತಾರ ಗ್ರಾಮ ದನಿ) ಎಂದು ಅಧಿಸೂಚನೆ ಹೊರಡಿಸಿದ ಕರ್ನಾಟಕದ 20,668 ಹೆಕ್ಟೇರ್‌ಗಳಲ್ಲಿ ನಮ್ಮ ಯಾರ್ಯಾರ ಜಮೀನು, ತೋಟ, ಗದ್ದೆ, ಮನೆಗಳು ಸೇರಿಕೊಂಡಿವೆಯೋ ಗೊತ್ತಿಲ್ಲ. 60 ದಿನಗಳೊಳಗೆ ಸಾರ್ವಜನಿಕರು ಆಕ್ಷೇಪಣೆ ಇದ್ದರೆ ಸಲ್ಲಿಸುವಂತೆ ಅಧಿಸೂಚನೆಯಲ್ಲಿ ಕಾಲಾವಕಾಶ ಕೊಡಲಾಗಿದೆ. ಈಗ ಪರಿಸರ ಸೂಕ್ಷ್ಮ ವ್ಯಾಪ್ತಿ ಪ್ರದೇಶದ ಸಾರ್ವಜನಿಕರು, ರೈತರು ಆಕ್ಷೇಪಣೆ ಅರ್ಜಿ ಕೊಡಲೇ ಬೇಕಾಗಿದೆಯಾ? ಯಾರ್ಯಾರೆಲ್ಲ ಕೊಡಬೇಕು? ಯಾರಿಗೆ ಕೊಡಬೇಕು? ಹೇಗೆ ಕೊಡಬೇಕು? 5-6 ವರ್ಷಗಳ ಹಿಂದೆ, ಹಿಂದಿನ ಕರಡು ಅಧಿ ಸೂಚನೆಗೆ ಆಕ್ಷೇಪಣೆ ಕೊಟ್ಟಾಗಿದೆಯಲ್ಲ? ಮತ್ತೆ ಕೊಡಬೇಕಾ? ಹೌದಾದರೆ ಕಾರಣ ಏನು?
ಈ ಎಲ್ಲಾ ಹಿನ್ನೆಲೆಯಲ್ಲಿ ನಮ್ಮ ನಮ್ಮ ಕ್ಷೇತ್ರಗಳ ಶಾಸಕರು, ಸಂಸದರು, ಸಚಿವರು ಮತ್ತು ಅಧಿಕಾರಿಗಳು ತಕ್ಷಣ ಒಂದಿಷ್ಟು ಕ್ರಮಗಳನ್ನು ಸ್ಥಳೀಯ ನಿವಾಸಿಗಳ, ರೈತರ ಪರವಾಗಿ ಮಾಡಬಹುದಾ?

Western Ghats

ಏನೇನು ಮಾಡಬಹುದು?

  • ಈಗಾಗಲೆ ಪರಿಸರ ಸೂಕ್ಷ್ಮ ಪ್ರದೇಶ ಅಂತ ಗುರುತು ಮಾಡಿದ ಪ್ರತಿ ಗ್ರಾಮದ ಸರ್ವೇ ಸ್ಕೆಚ್ ಕಾಪಿಯನ್ನು ಸುಲಭವಾಗಿ ರೈತರಿಗೆ ದೊರೆಯುವಂತೆ ಮಾಡುವುದು.
  • ಸೂಕ್ಷ್ಮ ಪ್ರದೇಶ ಎಂದು ಗುರುತಿಸಿದ ಪ್ರತಿ ಗ್ರಾಮಗಳ ಸರ್ವೇ ನಂಬರ್‌ಗಳ ಪಟ್ಟಿ ರೈತರಿಗೆ ದೊರೆಯುವಂತೆ ಮಾಡುವುದು. (ಆನ್‌ಲೈನ್‌ನಲ್ಲಿ ದೊರೆಯುವಂತೆ ಮಾಡುವುದು ಹೆಚ್ಚು ಸೂಕ್ತ.)
  • ಈಗಾಗಲೆ ಒತ್ತುವರಿಗೆ 50,53, 57, 94c ಗಳಲ್ಲಿ ಅರ್ಜಿ ಕೊಟ್ಟಿದ್ದು, ಅದನ್ನು ಸಕ್ರಮಗೊಳಿಸುವ ಕೆಲಸ ಆಗಿಲ್ಲ. ಹಕ್ಕು ಪತ್ರ, ಖಾತಾ ವರ್ಗಾವಣೆ ಆಗದೆ ಬಾಕಿ ಉಳಿದಿರುತ್ತದೆ. ಸಮರೋಪಾದಿಯಲ್ಲಿ ಅವುಗಳನ್ನು ಪರಿಶೀಲಿಸಿ ಕ್ಲಿಯರ್ ಮಾಡಿಸುವುದು.
  • ಪರಿಸರ ಸೂಕ್ಷ್ಮ ಪ್ರದೇಶದ ವಿಚಾರದಲ್ಲೇ 5-6 ವರ್ಷಗಳ ಹಿಂದೆ ಅಧಿಕೃತವಾಗಿ ಆಕ್ಷೇಪಣಾ ಅರ್ಜಿಗಳನ್ನು ಸರಕಾರ ಪ್ರತೀ ಪಂಚಾಯತಿಯಲ್ಲೂ ಅಧಿಕಾರಿಗಳನ್ನು ನೇಮಿಸಿ, ಅವರ ಮೂಲಕ ಸ್ವೀಕರಿಸಿತ್ತು. ಇದುವರೆಗೆ ಆ ಆಕ್ಷೇಪಣಾ ಅರ್ಜಿಗಳ ಯಾವುದೇ ಕ್ರಮಗಳನ್ನು ಕೈಗೊಂಡ ಮಾಹಿತಿ ಇರುವುದಿಲ್ಲ. ಈಗ ಮತ್ತೆ ಆಕ್ಷೇಪಣಾ ಅರ್ಜಿಗಳನ್ನು ಪಡೆಯಲು ಹೊರಟಿರುವುದರ ಅಗತ್ಯತೆ ಏನು ಎಂದು ಪರಶೀಲಿಸುವುದು.
  • 5-6 ವರ್ಷಗಳ ಹಿಂದೆ ಅಧಿಕೃತವಾಗಿ ಸ್ವೀಕರಿಸಿದ ಆಕ್ಷೇಪಣಾ ಅರ್ಜಿಗಳ ಮೇಲೆ ಸರಕಾರ ಏನೇನು ಕ್ರಮ ಕೈಗೊಂಡಿದೆ ಎಂದು ಸರಕಾರದಿಂದ ಪಡೆದು ಸಾರ್ವಜನಿಕರ ಗಮನಕ್ಕೆ ತರುವುದು.
  • ಈಗ ಬಿಡುಗಡೆಗೊಳಿಸಿದ 5ನೇ ಕರಡು ಅಧಿಸೂಚನೆಯ ಅನುಷ್ಠಾನದಿಂದ ಆಗುವ ಸ್ಪಷ್ಟ ಪರಿಣಾಮಗಳೇನು ಎಂಬ ಮಾಹಿತಿಯನ್ನು ಸಾಮಾನ್ಯ ಸಾರ್ವಜನಿಕರಿಗೆ ಅರ್ಥವಾಗುವ ಹಾಗೆ ತಜ್ಞರಿಂದ ಸರಳೀಕರಿಸಿ ತಿಳಿಸುವುದು.
  • ಹಿಂದಿನ ಕರಡು ಅಧಿಸೂಚನೆಗೂ ಈಗಿನ ಕರಡು ಅಧಿಸೂಚನೆಗೂ ಇರುವ ವ್ಯತ್ಯಾಸಗಳೇನು? ಏನೂ ವ್ಯತ್ಯಾಸ ಇಲ್ಲ ಮತ್ತು ಹಿಂದೆ ಸಾರ್ವಜನಿಕರು ಕೊಟ್ಟ ಆಕ್ಷೇಪಣೆಗಳನ್ನು ಪರಿಗಣಿಸಿಲ್ಲ ಅಂತಾದರೆ ಪದೇಪದೇ ಕರಡು ಅಧಿಸೂಚನೆ ಮತ್ತು ಆಕ್ಷೇಪಣೆ ಸ್ವೀಕರಿಸುವ ಪ್ರಕ್ರಿಯೆಯ ವ್ಯರ್ಥ ಕಸರತ್ತಿನ ಉದ್ದೇಶ ಏನು ಎಂದು ಮಾಹಿತಿ ಸಂಗ್ರಹಿಸಿ ಸಾರ್ವಜನಿಕರಿಗೆ ಕೊಡುವುದು.
  • 5ನೇ ಕರಡು ಅಧಿಸೂಚನೆಗೆ ಆಕ್ಷೇಪಣೆಗಳನ್ನು 60 ದಿನಗಳಲ್ಲಿ ಸಲ್ಲಿಸಲು ಒಂದು ಸರಳ ಆ್ಯಪ್/ವೆಬ್‌ಸೈಟ್ ಅಭಿವೃದ್ಧಿಪಡಿಸಿ ಆನ್‌ಲೈನ್‌ನಲ್ಲಿ ಆಕ್ಷೇಪಣೆ ಸಲ್ಲಿಸಲು ಅನುವು ಮಾಡಿಕೊಡುವುದು. (ಬೆಳೆ ವಿಮೆ ನೋಂದಣಿಗೆ ಮಾಡಿದ ಸಂವರಕ್ಷಣ ವೆಬ್‌ಸೈಟ್ ಅಥವಾ ಬೆಳೆಸರ್ವೆ ಆ್ಯಪ್ ರೀತಿ ಗೊಂದಲ, ಗೊಜಲುಗಳು ಈ ವೆಬ್‌ಸೈಟ್/ಆ್ಯಪ್‌ಗಳಲ್ಲಿ ಇರಬಾರದು)
  • ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಪರಿಸರಕ್ಕೆ ಹಾನಿಕಾರಕವಾಗಿರುವ ಅಕೇಶಿಯ, ನೀಲಗಿರಿ ಮರಗಳೇ ‘ಒತ್ತುವರಿ’ ಮಾಡಿಕೊಂಡು ಬೆಳೆದಿವೆ! (ಅಥವಾ ಬೆಳಸಲಾಗಿದೆ). ಅವುಗಳನ್ನು ಮೊದಲು ‘ತೆರವು’ಗೊಳಿಸಿ, ಅಲ್ಲಿ ಪರಿಸರ ಸ್ನೇಹಿ ಸಹಜ ಕಾಡುಗಳನ್ನು ಬೆಳೆಯಲು ಕ್ರಮ ವಹಿಸುವುದು.
  • ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿನ ಸೂಕ್ಷ್ಮತೆಯನ್ನು ಕಾಪಾಡಿಕೊಳ್ಳಲು ಬೇಕಾದ ಕೆಲವು ಸಾಮಾನ್ಯ ಚಟುವಟಿಕೆಗಳಿಗೆ ತೀವ್ರವಾದ ಗಮನ ಕೊಟ್ಟು ಅನುಷ್ಠಾನಕ್ಕೆ ತರುವುದು. ಉದಾಹರಣೆಗೆ ಏಕ ಬಳಿಕೆ ಪ್ಲಾಸ್ಟಿಕ್ ನಿಷೇಧ, 50 ಮೈಕ್ರಾನ್ ಪ್ಲಾಸ್ಟಿಕ್ ಬಳಸಲು ನಿಷೇಧವಿದ್ದರೂ ಬಳಕೆ ಆಗುತ್ತಿರುವುದಕ್ಕೆ ಕಡಿವಾಣ, ಗ್ರಾಮ, ಪಟ್ಟಣ, ಜಿಲ್ಲಾ ಪಂಚಾಯಿತಿಗಳಲ್ಲಿ ಸಂಗ್ರಹವಾಗುತ್ತಿರುವ ಒಣ ಕಸಗಳನ್ನು ಹೆಚ್ಚಿನ ಕಡೆಗಳಲ್ಲಿ ಡಂಪಿಂಗ್ ಮಾಡಲಾಗುತ್ತಿದೆ – ವೈಜ್ಞಾನಿಕ ಸಂಸ್ಕರಣೆ ಮತ್ತು ವೈಜ್ಞಾನಿಕ ವಿಲೇವಾರಿಗೆ ಕ್ರಮ ಕೈಗೊಳ್ಳುವುದು.
  • ಪರಿಸರ ಸೂಕ್ಷ್ಮ ಪ್ರದೇಶಗಳು ಹಾಳಾಗುತ್ತಿರುವುದು ಮರಳು ಮೈನಿಂಗ್, JCB, ಪ್ಲಾಸ್ಟಿಕ್ ತ್ಯಾಜ್ಯದ ನಿರ್ವಹಣೆ ಕೊರತೆ ಮತ್ತು ಅರಿವಿನ ಕೊರತೆ, ವಿಪರೀತವಾದ ಬೋರ್‌ವೆಲ್‌ಗಳು, ಅವೈಜ್ಞಾನಿಕವಾಗಿ ಬೆಳೆಸುತ್ತಿರುವ ಅಕೇಶಿ ಮತ್ತು ನೀಲಗಿರಿ, ಅವೈಜ್ಞಾನಿಕ ಹೈಟೆಕ್ ರೆಸಾರ್ಟ್‌ಗಳು… ಇವುಗಳಿಂದ ಎನ್ನಲಾಗುತ್ತಿದೆ. ಇವುಗಳ ಮೇಲೆ ಸಮರ್ಪಕ ಕ್ರಮ ಕೈಗೊಳ್ಳುವುದು. (ಮರಳು ಮೈನಿಂಗ್, JCB ಕೆಲಸಗಳು, ಎಲ್ಲಾ ಪ್ಲಾಸ್ಟಿಕ್, ಬೋರ್‌ವೆಲ್‌ಗಳನ್ನು ನಿಷೇಧಿಸುವುದಲ್ಲ, ವೈಜ್ಞಾನಿಕವಾಗಿ ಪರಿಶೀಲನೆಯೊಂದಿಗೆ ಮತ್ತು ಭ್ರಷ್ಟತೆ ಇಲ್ಲದೆ ಪರವಾನಗಿ/ಅನುಮತಿಗಳೊಂದಿಗೆ ಸಮರ್ಪಕ ಕ್ರಮಕ್ಕೆ ಕ್ರಮ ಕೈಗೊಳ್ಳುವುದು)

ವಿಸ್ತಾರ ಗ್ರಾಮ ದನಿ: ಅಡಿಕೆ ಬೆಳೆಗಾರರೂ ‘ಇನ್‌ಕಮ್ ಟ್ಯಾಕ್ಸ್ ರಿಟರ್ನ್ಸ್ʼ ಸಲ್ಲಿಸಬೇಕಾ? ಸಲ್ಲಿಸದಿದ್ದರೆ ಏನಾಗುತ್ತದೆ?ಇದನ್ನೂ ಓದಿ:

ಕಸ್ತೂರಿ ರಂಗನ್ ವರದಿ, ಸೆಕ್ಷನ್ 4, ಸೆಕ್ಷನ್ 17, ಎಲ್ಲಾ ಒತ್ತುವರಿಗಳನ್ನು ತೆರವುಗೊಳಿಸಿ ಎಂಬ ಸರಕಾರದ ಖಡಕ್ ಆದೇಶಗಳು ಒಂದು ಕಡೆ, ಅಭಿವೃದ್ಧಿಯ ಭಾಗವಾಗಿ ನೆಡೆಯುತ್ತಿರುವ ವಿಶಾಲ ಹೈವೇ ರಸ್ತೆಗಳು, ಕಾಡು ಕಡಿದು ನೂರಾರು ಎಕರೆ ಕಾಫಿ ತೋಟ ಮಾಡಿಕೊಳ್ಳುತ್ತಿರುವ ಶ್ರೀಮಂತರು, ಅಪಾಯಕಾರಿ ಅಕೇಶಿಯ ಕಾಡುಗಳು, ಮೈನಿಂಗ್… ಇತ್ಯಾದಿಗಳು ಇನ್ನೊಂದು ಕಡೆ. ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಯಾವುದೇ ದೊಡ್ಡ ತೊಂದರೆ ಮಾಡದೆ, ಸೂಕ್ಷ್ಮ ಪ್ರದೇಶದ ಭಾಗವಾಗಿ ಬದುಕುತ್ತಿರುವ, ತಲೆತಲಾಂತರಗಳಿಂದ ಸಣ್ಣ, ಅತಿ ಸಣ್ಣ, ಮಧ್ಯಮ ವರ್ಗದ ರೈತರಾಗಿ, ರೈತ ಕಾರ್ಮಿಕಾರಾಗಿ ಬದುಕುತ್ತಿರುವ ಲಕ್ಷಾಂತರ ರೈತ, ರೈತ ಕಾರ್ಮಿಕರ ಬದುಕು ಮಗದೊಂದು ಕಡೆ. ಪರಿಸರ ಸೂಕ್ಷ್ಮ ಪ್ರದೇಶದ ವಿಚಾರ ಬಂದಾಗ ಆತಂಕಕ್ಕೆ ಒಳಗಾಗುವುದು, ಸಂಕಷ್ಟ ಒದಗುವುದು, ಗಾಬರಿಯಾಗುವುದು ಎಲ್ಲ ಸೂಕ್ಷ್ಮ ಪ್ರದೇಶದ ಭಾಗವಾಗಿ ಬದುಕುತ್ತಿರುವ ಸಣ್ಣ, ಅತಿ ಸಣ್ಣ, ಮಧ್ಯಮ ವರ್ಗದ ರೈತರಿಗೆ, ರೈತ ಕಾರ್ಮಿಕರು. ಮತ್ತೆ ಪರಿಸರ ಸೂಕ್ಷ್ಮ ಪ್ರದೇಶದ ಅಧಿಸೂಚನೆ ಇದೇ ಬಡ ರೈತರ, ರೈತ ಕಾರ್ಮಿಕರ ಅಂಗಳಕ್ಕೆ ಬಂದು ನಿಂತಿದೆ. ಸೂಕ್ಷ್ಮ ಪ್ರದೇಶಗಳ ಶಾಸಕರು, ಸಂಸದರು ಮಂತ್ರಿಗಳು ಮತ್ತು ಅಧಿಕಾರಿಗಳು ಈಗಲೂ ಏನಾದರು ಮಾಡಬಹುದು ಎಂಬ ಆಶಾ ಭಾವದಲ್ಲೇ ರೈತರು, ರೈತ ಕಾರ್ಮಿಕರು ಇದ್ದಾರೆ. ಒಳ್ಳೆಯದಾಗುವ ಹಾಗೆ, ಪರಿಸರ ಸೂಕ್ಷ್ಮ ಪ್ರದೇಶದ ಶಾಸಕರು, ಸಂಸದರು ಮಂತ್ರಿಗಳು ಮತ್ತು ಅಧಿಕಾರಿಗಳು ಏನಾದರು ಮಾಡಬಹುದಾ? ಇದು ರೈತರ, ಕೃಷಿಕರ ಕಳಕಳಿಯ ಪ್ರಶ್ನೆ.

Continue Reading

ಶಿವಮೊಗ್ಗ

Hosanagara News: ಹಡ್ಲುಬೈಲು ಸರ್ಕಾರಿ ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

Hosanagara News: ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಡ್ಲುಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಾಜ್ಯಮಟ್ಟದ ‘ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ’ ಲಭಿಸಿದೆ.

VISTARANEWS.COM


on

State Level hasiru nairmalya shala abhyudaya Award for Hadlubailu Government School
Koo

ಹೊಸನಗರ: ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಡ್ಲುಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ (Hosanagara News) ಲಭಿಸಿದೆ.

ಪರಿಸರ ಮಿತ್ರ, ಹೊಸನಗರ ತಾಲೂಕಿನ ಅತ್ಯುತ್ತಮ ಕಿರಿಯ ಪ್ರಾಥಮಿಕ ಶಾಲೆ ಪ್ರಶಸ್ತಿಗಳಿಗೆ ಪಾತ್ರವಾಗಿದ್ದ ಹಚ್ಚ ಹಸಿರಿನ ಅತ್ಯುತ್ತಮ ಉದ್ಯಾನವನ, ಪರಿಸರ ಕಲಿಕೆ, ಬಾಲವನವನ್ನು ಹೊಂದಿರುವ ಹುಂಚ ಗ್ರಾ.ಪಂ. ವ್ಯಾಪ್ತಿಯ ಸ.ಕಿ.ಪ್ರಾ. ಶಾಲೆ ಹಡ್ಲುಬೈಲು ಮತ್ತೊಂದು ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

ಇದನ್ನೂ ಓದಿ: Pralhad Joshi: ಹಸಿರು ಜಲಜನಕ ಮಿಷನ್‌ಗೆ 19744 ಕೋಟಿ ರೂ. ಮೀಸಲು; ಪ್ರಲ್ಹಾದ್‌ ಜೋಶಿ

ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಇತ್ತೀಚೆಗೆ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ ನೀಡಿದ್ದು, ಇದು 40 ಮಾನದಂಡಗಳನ್ನು ಹೊಂದಿರುವ ಶಾಲೆಗಳಿಗೆ ನೀಡಲಾಯಿತು.

ಈ ಪ್ರಶಸ್ತಿಯನ್ನು ಸಂಸ್ಥಾಪಕ, ಸದ್ಗುರು ಮಧುಸೂದನ್ ಸಾಯಿ ಅವರು, ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಎಚ್.ವೈ. ಅವರಿಗೆ ಪ್ರದಾನ ಮಾಡಿದರು‌. ಪ್ರಶಸ್ತಿಯು ಪ್ರಶಸ್ತಿ ಪತ್ರ ಹಾಗೂ 10 ಸಾವಿರ ರೂ. ನಗದು, 8 ಸಾವಿರ ರೂ. ಬೆಲೆಯ ಗ್ರಂಥಾಲಯ ಪುಸ್ತಕಗಳು, ದಿನಚರಿಗಳು, ಎಲ್ಲಾ ಮಕ್ಕಳಿಗೂ ಚಾಕೊಲೇಟ್ ಹಾಗೂ ಮುಖ್ಯ ಶಿಕ್ಷಕರಿಗೆ ಕೈಗಡಿಯಾರವನ್ನೊಳಗೊಂಡಿದೆ.

ಇದನ್ನೂ ಓದಿ: 7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ಶೀಘ್ರದಲ್ಲೇ ತುಟ್ಟಿ ಭತ್ಯೆಯಲ್ಲಿ ಶೇ.3ರಷ್ಟು ಏರಿಕೆ

ಈ ಕುರಿತು ಮುಖ್ಯ ಶಿಕ್ಷಕ ಚಂದ್ರಶೇಖರ ಮಾತನಾಡಿ, ಮಲೆನಾಡಿನ ಹೊಸನಗರ ತಾಲೂಕಿನ ಕಾಡಂಚಿನ ಕುಗ್ರಾಮದಲ್ಲಿರುವ ಹಡ್ಲುಬೈಲು ಶಾಲೆಗೆ ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿರುವುದು ನಮಗೆ ಸಂಭ್ರಮ ತಂದಿದೆ ಎಂದು ತಿಳಿಸಿದ್ದಾರೆ.

Continue Reading
Advertisement
Jagan Mohan Reddy
ದೇಶ47 mins ago

Jagan Mohan Reddy: ಬರೀ ಎಗ್‌ ಪಫ್ಸ್‌ಗಾಗಿ ಒಂದಲ್ಲ.. ಎರಡಲ್ಲ ಬರೋಬ್ಬರಿ 3.6 ಕೋಟಿ ರೂ. ವೆಚ್ಚ- ಜಗನ್‌ ಮತ್ತೊಂದು ಹಗರಣ ಬಯಲು

Census
ದೇಶ1 hour ago

Census: ಮುಂದಿನ ತಿಂಗಳಿಂದ ಜನಗಣತಿ ಆರಂಭ ಸಾಧ್ಯತೆ; ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ

Air store Released
ದೇಶ2 hours ago

Air store released: ಪೋಖ್ರಾನ್‌ ಬಳಿ ತಪ್ಪಿದ ಭಾರೀ ಅವಘಡ; ಏಕಾಏಕಿ ಏರ್‌ಸ್ಟೋರ್‌ ರಿಲೀಸ್‌ ಮಾಡಿದ ಯುದ್ಧ ವಿಮಾನ

Indian hockey team
ಕ್ರೀಡೆ2 hours ago

Indian hockey team: ಭುವನೇಶ್ವರದಲ್ಲಿ ಭಾರತೀಯ ಹಾಕಿ ತಂಡದಿಂದ ರೋಡ್ ಶೋ

Fetus In Baby
ವಿಜ್ಞಾನ3 hours ago

Fetus In Baby: ಏಳು ತಿಂಗಳ ಮಗುವಿನ ಹೊಟ್ಟೆಯಲ್ಲಿ ಭ್ರೂಣ ಪತ್ತೆ!

CEAT Cricket Awards
ಕ್ರೀಡೆ3 hours ago

CEAT Cricket Awards: ವರ್ಷದ ಅತ್ಯುತ್ತಮ ಏಕದಿನ ಬ್ಯಾಟರ್​ ಪ್ರಶಸ್ತಿ ಗೆದ್ದ ವಿರಾಟ್​ ಕೊಹ್ಲಿ

Pharma Company Blast
ದೇಶ3 hours ago

Pharma Company Blast: ಫಾರ್ಮಾ ಕಂಪನಿಯಲ್ಲಿ ಭಾರೀ ಬ್ಲಾಸ್ಟ್‌- 17ಮಂದಿ ಬಲಿ; ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಭೀತಿ

Starbucks CEO
ವಿದೇಶ3 hours ago

Starbucks CEO: ಸಿಕ್ರೆ ಇಂಥಾ ಕೆಲ್ಸ ಸಿಗ್ಬೇಕಪ್ಪಾ! 1600 ಕಿ.ಮೀ ದೂರ ಆಫೀಸ್‌..ದಿನಾ ಓಡಾಡೋಕೆ ಕಂಪನಿ ಜೆಟ್‌! ಈತ ಪುಣ್ಯವಂತನೇ ಸರಿ

Viral News
ಕ್ರಿಕೆಟ್4 hours ago

Viral News: ಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಟಿ20 ವಿಶ್ವಕಪ್​ ಟ್ರೋಫಿಗೆ ಪೂಜೆ ಸಲ್ಲಿಸಿದ ರೋಹಿತ್​ ಶರ್ಮ, ಜಯ್​ ಶಾ

ಕರ್ನಾಟಕ4 hours ago

Almatti Dam: ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌