Neeraj Chopra: ಬ್ರ್ಯಾಂಡ್ ಮೌಲ್ಯದಲ್ಲಿ ಹಾರ್ದಿಕ್​ ಪಾಂಡ್ಯ ಹಿಂದಿಕ್ಕಿದ ನೀರಜ್​ ಚೋಪ್ರಾ - Vistara News

ಕ್ರಿಕೆಟ್

Neeraj Chopra: ಬ್ರ್ಯಾಂಡ್ ಮೌಲ್ಯದಲ್ಲಿ ಹಾರ್ದಿಕ್​ ಪಾಂಡ್ಯ ಹಿಂದಿಕ್ಕಿದ ನೀರಜ್​ ಚೋಪ್ರಾ

Neeraj Chopra: ಎಕನಾಮಿಕ್ ಟೈಮ್ಸ್ ಪ್ರಕಾರ, ಹಣಕಾಸು ಸಲಹಾ ಸಂಸ್ಥೆ ಕ್ರೋಲ್‌ನ ಅಂಕಿ ಅಂಶಗಳ ವರದಿಯ ಪ್ರಕಾರ ನೀರಜ್ ಚೋಪ್ರಾ ಅವರ ಬ್ರ್ಯಾಂಡ್ ಮೌಲ್ಯ 29.6 ದಶಲಕ್ಷ ಡಾಲರ್ ನಿಂದ 40 ದಶಲಕ್ಷ ಡಾಲರ್​ಗೆ ಏರಿಕೆಯಾಗಿದೆ.

VISTARANEWS.COM


on

Neeraj Chopra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದ ಜಾವೆಲಿನ್ ಎಸೆತಗಾರ ನೀರಜ್​ ಚೋಪ್ರಾ(Neeraj Chopra) ಅವರ ಬ್ರಾಂಡ್ ಮೌಲ್ಯ ಬರೋಬ್ಬರಿ 330 ಕೋಟಿ ರೂ.ಗೆ ಜಿಗಿತ ಕಂಡಿದೆ. ಜತೆಗೆ ಶೂಟಿಂಗ್​ನಲ್ಲಿ ಅವಳಿ ಪದಕ ಗೆದ್ದ ಮನು ಭಾಕರ್(Manu Bhaker) ಮೌಲ್ಯ ಕೂಡ ಕೋಟಿಗೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಎಕನಾಮಿಕ್ ಟೈಮ್ಸ್ ಪ್ರಕಾರ, ಹಣಕಾಸು ಸಲಹಾ ಸಂಸ್ಥೆ ಕ್ರೋಲ್‌ನ ಅಂಕಿಅಂಶಗಳ ವರದಿಯ ಪ್ರಕಾರ ನೀರಜ್ ಚೋಪ್ರಾ ಅವರ ಬ್ರ್ಯಾಂಡ್ ಮೌಲ್ಯ 29.6 ದಶಲಕ್ಷ ಡಾಲರ್ ನಿಂದ 40 ದಶಲಕ್ಷ ಡಾಲರ್​ಗೆ ಏರಿಕೆಯಾಗಿದೆ. ಅಂದರೆ ಭಾರತೀಯ ರೂಪಾಯಿ ಪ್ರಕಾರ ಅವರ ಬ್ರ್ಯಾಂಡ್ ಮೌಲ್ಯ 330 ಕೋಟಿ ರೂ. ಆಗಿದೆ. ಇದು ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ(hardik pandya) ಬ್ರ್ಯಾಂಡ್ ಮೌಲ್ಯಕ್ಕಿಂತ ಹೆಚ್ಚಾಗಿದೆ. ನೀರಜ್ ಭಾರತೀಯ ಕ್ರೀಡಾಪಟುಗಳಲ್ಲಿ ಅತ್ಯುನ್ನತ ಮೌಲ್ಯಯುತ ಕ್ರಿಕೆಟಿಗರಲ್ಲದ ಕ್ರೀಡಾಪಟು ಎನಿಸಿಕೊಂಡಿದ್ದಾರೆ.

ನೀರಜ್ ಪ್ರಸ್ತುತ 24 ವಿವಿಧ ವರ್ಗಗಳಲ್ಲಿ 21 ಬ್ರ್ಯಾಂಡ್‌ಗಳನ್ನು ಅನುಮೋದಿಸಿದ್ದಾರೆ. ಮನಿ ಕಂಟ್ರೋಲ್ ವರದಿಯ ಪ್ರಕಾರ, ಹಾರ್ದಿಕ್ ಪಾಂಡ್ಯ 20 ಬ್ರಾಂಡ್‌ಗಳನ್ನು ಮಾತ್ರ ಹೊಂದಿದ್ದಾರೆ ಎನ್ನಲಾಗಿದೆ. ಪಾಂಡ್ಯಗಿಂತ ಶೇ.50ರಷ್ಟು ಬ್ರ್ಯಾಂಡ್‌ ಮೌಲ್ಯ ಹೆಚ್ಚಳವಾಗಿದೆ ಎಂದು ವರದಿಯಾಗಿದೆ.

ಹಿಂದೆ ಭಾರತದಲ್ಲಿ ಕ್ರಿಕೆಟಿಗರು ಮಾತ್ರ ಬ್ರಾಂಡ್ ಮೌಲ್ಯ ಹೊಂದಿದ್ದರು. ಇದೀಗ ಇತರ ಕ್ರೀಡೆಗಳಲ್ಲಿಯೂ ಕ್ರೀಡಾಪಟುಗಳು ಬ್ರಾಂಡ್ ಮೌಲ್ಯ ಗಳಿಸುವಲ್ಲಿ ಯಶಸ್ಸು ಸಾಧಿಸುತ್ತಿದ್ದಾರೆ. ಅಲ್ಲದೆ ಕ್ರಿಕೆಟಿಗರನ್ನು ಹಿಂದಿಕ್ಕಿ ಮುಂದಕ್ಕೆ ಸಾಗುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ಟೊಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಬರೆದಿದ್ದ ನೀರಜ್ ಚೋಪ್ರಾ ಈ ಬಾರಿ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದರು.

ಇದನ್ನೂ ಓದಿ Neeraj Chopra: ಲಾಸಾನ್ನೆ ಡೈಮಂಡ್‌ ಲೀಗ್‌ನಲ್ಲಿ ನೀರಜ್‌ ಸ್ಪರ್ಧೆ; ಆಗಸ್ಟ್​ 22ಕ್ಕೆ ಟೂರ್ನಿ

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 2 ಕಂಚಿನ ಪದಕ ಗೆದ್ದು ಇತಿಹಾಸ ಬರೆದ 22 ವರ್ಷದ ಮನು ಭಾಕರ್ ಬ್ರ್ಯಾಂಡ್ ಮೌಲ್ಯ 1.5 ಕೋಟಿ ರೂ.ಗೆ ಏರಿಕೆಯಾಗಿದೆ. ಮನು ಬಾಕರ್ ಥಂಬ್ಸಪ್ ಕಂಪನಿಯ ಜಾಹಿರಾತಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಪ್ಯಾರಿಸ್ ಒಲಿಂಪಿಕ್ಸ್​ಗೂ ಮುನ್ನ ಮನು ಬಾಕರ್ ಬ್ರ್ಯಾಂಡ್ ಮೌಲ್ಯ 25 ಲಕ್ಷ ರೂ. ಆಗಿತ್ತು. ಇದೀಗ ಅವರ ಜಾಹಿರಾತುಗಳಲ್ಲಿ ಪಡೆಯುವ ಸಂಭಾವನೆ ಮೊತ್ತ ಕೋಟಿಗೆ ಏರಿಕೆಯಾಗಿದೆ.

 ಮನು ಅವರ ಬ್ರ್ಯಾಂಡ್​ ಮೌಲ್ಯ ಈಗ 1.5 ರೂ. ಆಗಿದೆ. ಅವರು ಪ್ರತಿ ಡಿಜಿಟಲ್​ ಜಾಹೀರಾತಿಗೂ 30 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್​ ಕೇರ್​, ನ್ಯೂಟ್ರೀಷಿಯನ್​ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ.

ನಿಗದಿತ ತೂಕಕ್ಕಿಂದ ಅಧಿಕ ತೂಕ ಹೊಂದಿದ್ದ ಕಾರಣ ಕುಸ್ತಿ ಫೈನಲ್​ನಿಂದ ಅನರ್ಹಗೊಂಡ ವಿನೇಶ್​ ಫೋಗಟ್​ ಅವರ ಬ್ರ್ಯಾಂಡ್ ಮೌಲ್ಯ ಕೂಡ ಅಚ್ಚರಿ ಎಂಬಂತೆ ಹೆಚ್ಚಳವಾಗಿದೆ. ಕ್ರೀಡಾಕೂಟಕ್ಕೂ ಮುನ್ನ ಅವರ ಬ್ರ್ಯಾಂಡ್ ಮೌಲ್ಯ 25 ಲಕ್ಷ ರೂ. ಆಗಿದ್ದು, ಇದೀಗ 1 ಕೋಟಿ ರೂ.ಗೆ ಏರಿಕೆಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs ENG Test Series 2025: ಇಂಗ್ಲೆಂಡ್ ವಿರುದ್ಧ ಟೆಸ್ಟ್​ ಸರಣಿ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

IND vs ENG Test Series 2025:5 ಪಂದ್ಯಗಳ ಟೆಸ್ಟ್​ ಸರಣಿ ಲೀಡ್ಸ್‌, ಬರ್ಮಿಂಗ್ಹ್ಯಾಮ್‌, ಲಾರ್ಡ್ಸ್, ಮ್ಯಾಂಚೆಸ್ಟರ್ ಮತ್ತು ಓವಲ್ ಮೈದಾನದಲ್ಲಿ ನಡೆಯಲಿದೆ. ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಪ್ರಕಟಿಸಿದೆ.

VISTARANEWS.COM


on

IND vs ENG Test Series 2025
Koo

ಮುಂಬಯಿ: ರೋಹಿತ್ ಶರ್ಮಾ ನೇತೃತ್ವದ ಭಾರತೀಯ ಪುರುಷರ ಕ್ರಿಕೆಟ್ ತಂಡವು ಐದು ಪಂದ್ಯಗಳ ಟೆಸ್ಟ್(IND vs ENG Test Series 2025) ಸರಣಿಗಾಗಿ ಮುಂದಿನ ವರ್ಷ ಇಂಗ್ಲೆಂಡ್‌ಗೆ ಪ್ರಯಾಣಿಸಲಿದೆ. ಸರಣಿಯ ಮೊದಲ ಪಂದ್ಯ ಜೂನ್ 20 ರಂದು ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ಪ್ರಾರಂಭವಾಗಲಿದೆ. ಜೂನ್​ನಲ್ಲಿ ನಡೆಯುವ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದ ಬಳಿಕ ಈ ಸರಣಿ ಆರಂಭವಾಗಲಿದೆ. ಇತ್ತಂಡಗಳಿಗೂ ಇದು ನಾಲ್ಕನೇ ಆವೃತ್ತಿಯ ವಿಶ್ವ ಟೆಸ್ಟ್​ ಚಾಂಪಿನ್​ಶಿಪ್​ ಋತುವಿನ(2025-27) ಮೊದಲ ಸರಣಿಯಾಗಲಿದೆ.

5 ಪಂದ್ಯಗಳ ಟೆಸ್ಟ್​ ಸರಣಿ ಲೀಡ್ಸ್‌, ಬರ್ಮಿಂಗ್ಹ್ಯಾಮ್‌, ಲಾರ್ಡ್ಸ್, ಮ್ಯಾಂಚೆಸ್ಟರ್ ಮತ್ತು ಓವಲ್ ಮೈದಾನದಲ್ಲಿ ನಡೆಯಲಿದೆ. ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಪ್ರಕಟಿಸಿದೆ. ಬರೋಬ್ಬರಿ ಒಂದು ತಿಂಗಳ ಕಾಲ ಈ ಸರಣಿ ನಡೆಯಲಿದೆ.


2007 ರಲ್ಲಿ ಪಟೌಡಿ ಟ್ರೋಫಿಯಲ್ಲಿ ಮೈಕೆಲ್ ವಾನ್ ನೇತೃತ್ವದ ತಂಡವನ್ನು ಭಾರತ ಸೋಲಿಸಿದ ಬಳಿಕ ಇಂಗ್ಲೆಂಡ್‌ನಲ್ಲಿ ಇದುವರೆಗೂ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಆ ಪ್ರವಾಸದ ಸಮಯದಲ್ಲಿ, ರಾಹುಲ್ ದ್ರಾವಿಡ್ ನೇತೃತ್ವದ ಭಾರತವು ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಸರಣಿ ಗೆದ್ದುಕೊಂಡಿತ್ತು. ಒಟ್ಟು ಮೂರು ಪಂದ್ಯಗಳ ಸರಣಿ ಇದಾಗಿತ್ತು. 2 ಪಂದ್ಯಗಳು ಡ್ರಾ ಆಗಿದ್ದವು.

ಇದನ್ನೂ ಓದಿ IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

2021-22ರ ಇಂಗ್ಲೆಂಡ್‌ ಪ್ರವಾಸದಲ್ಲಿ ಭಾರತ ತಂಡ ಲಾರ್ಡ್ಸ್ ಮತ್ತು ಓವಲ್‌ನಲ್ಲಿ ಆಡಿದ ಎರಡನೇ ಮತ್ತು ನಾಲ್ಕನೇ ಟೆಸ್ಟ್ ಗೆಲುವು ಸಾಧಿಸಿದ್ದರೂ, ಲೀಡ್ಸ್ ಮತ್ತು ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಪಂದ್ಯದಲ್ಲಿ ಸೋಲು ಕಂಡ ಕಾರಣ ಸರಣಿ 2-2 ಅಂತರದಿಂದ ಸಮಬಲಗೊಂಡಿತು. ಒಂದು ಪಂದ್ಯ ಡ್ರಾ ಗೊಂಡಿತ್ತು.

ಭಾರತವು ಇಲ್ಲಿಯವರೆಗೆ ಆಡಿರುವ 2 ಆವೃತ್ತಿಯ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ ಪ್ರವೇಶಿಸಿತ್ತು. ಲಂಡನ್​ನಲ್ಲಿ ನಡೆದಿದ್ದ ಈ 2 ಫೈನಲ್​ನಲ್ಲಿಯೂ​ ಭಾರತ ಕ್ರಮವಾಗಿ ನ್ಯೂಜಿಲ್ಯಾಂಡ್​ ಮತ್ತು ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತ್ತು. ಸದ್ಯ ಮೂರನೇ ಆವೃತ್ತಿಯಲ್ಲಿ ಭಾರತ ಫೈನಲ್​ ಪ್ರವೇಶಿಸಬೇಕಿದ್ದರೆ, ಭಾರತ 10 ಟೆಸ್ಟ್​ ಪಂದ್ಯಗಳ ಪೈಕಿ ಕನಿಷ್ಠ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ನೇರವಾಗಿ ಫೈನಲ್​ ಪ್ರವೇಶಿಸಲಿದೆ. ಈ ಮೂಲಕ ಸತತ ಮೂರನೇ ಬಾರಿಗೆ ಫೈನಲ್‌ಗೆ ಅರ್ಹತೆ ಪಡೆದ ಸಾಧನೆ ಮಾಡಲಿದೆ.

ವೇಳಾಪಟ್ಟಿ ಹೀಗಿದೆ

ಪಂದ್ಯಗಳುದಿನಾಂಕತಾಣ
ಮೊದಲ ಟೆಸ್ಟ್​ಜೂನ್​ 20-24ಹೆಡಿಂಗ್ಲಿ, ಲೀಡ್ಸ್
ದ್ವಿತೀಯ ಟೆಸ್ಟ್​ಜುಲೈ 2-6ಎಡ್ಜ್‌ಬಾಸ್ಟನ್, ಬರ್ಮಿಂಗ್ಹ್ಯಾಮ್
ಮೂರನೇ ಟೆಸ್ಟ್​ಜುಲೈ 10-14ಲಾರ್ಡ್ಸ್, ಲಂಡನ್
ನಾಲ್ಕನೇ ಟೆಸ್ಟ್ಜುಲೈ 23-27ಓಲ್ಡ್ ಟ್ರಾಫರ್ಡ್, ಮ್ಯಾಂಚೆಸ್ಟರ್
ಐದನೇ ಟೆಸ್ಟ್​July 31-August 4ಓವಲ್, ಲಂಡನ್
Continue Reading

ಕ್ರೀಡೆ

Kolkata Doctor Murder Case: ‘ಖಾಸಗಿ ಅಂಗಕ್ಕೆ ಹೊಡೆದು ಗಲ್ಲಿಗೇರಿಸಿ’; ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ಕ್ರಿಕೆಟಿಗ ಚಹಲ್​ ಪೋಸ್ಟ್​

Kolkata Doctor Murder Case: ಭಾರತ ತಂಡದ ಮಾಜಿ ಕ್ರಿಕೆಟಿಗ ಸೌರವ್​ ಗಂಗೂಲಿ ಕೂಡ ವೈದ್ಯೆಯ ಅತ್ಯಾಚಾರ, ಕೊಲೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು.

VISTARANEWS.COM


on

Kolkata Doctor Murder Case
Koo

ಕೊಲ್ಕತ್ತಾ: ಕೋಲ್ಕತ್ತಾದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ(Kolkata Doctor Murder Case) ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡುವ ಮೂಲಕ ಈಗಾಗಲೇ ಹಲವು ಕ್ರಿಕೆಟಿಗರು ಮತ್ತು ಸಿನಿಮಾ ನಟ-ನಟಿಯರು ಒತ್ತಾಯಿಸಿದ್ದಾರೆ. ಇದೀಗ ಟೀಮ್​ ಇಂಡಿಯಾದ ಹಿರಿಯ ಸ್ಪಿನ್ನರ್ ಯಜುವೇಂದ್ರ ಚಹಲ್(Yuzvendra Chahal)​ ಕೂಡ ಈ ಪ್ರಕರಣದ ವಿರುದ್ಧ ಧ್ವನಿ ಎತ್ತಿದ್ದಾರೆ.

ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿ ಹಾಕಿರುವ ಚಹಲ್​, ‘ಈ ಪ್ರಕರಣದ ಆರೋಪಿಯ ಕಾಲನ್ನು 90 ಡಿಗ್ರಿಗಳಲ್ಲಿ ಮುರಿಯಬೇಕು. ಖಾಸಗಿ ಭಾಗಗಳಿಗೆ ಗಾಯ ಮಾಡಿ. ಎಲ್ಲಾ ಭಯಾನಕ ಚಿತ್ರಹಿಂಸೆಗಳನ್ನು ಅನುಭವಿಸುವಂತೆ ಮಾಡಬೇಕು. ಬಳಿಕ ಗಲ್ಲಿಗೇರಿಸಿ’ ಎಂದು ಬರೆದುಕೊಂಡಿದ್ದರು. ಆಕ್ರೋಶಭರಿತ ಪೋಸ್ಟ್​ನಿಂದ ಪ್ರತಿಭಟನಾಕಾರರು ಹಿಂಸಾತ್ಮಕ ಕೃತ್ಯಗಳನ್ನು ಮಾಡುವ ಸಾಧ್ಯತೆ ಇದೆ ಎಂಬ ಭಯದಿಂದ ಚಹಲ್​ ತಾವು ಪೋಸ್ಟ್​ ಮಾಡಿದ ಒಂದು ಗಂಟೆ ಬಳಿಕ ಈ ಪೋಸ್ಟ್​ ಡಿಲೀಟ್​ ಮಾಡಿದ್ದಾರೆ. ಆದರೂ ಕೆಲ ನೆಟ್ಟಿಗರು ಈ ಪೋಸ್ಟ್​ನ ಸ್ಕ್ರೀನ್ ಶಾಟ್ ತೆಗೆದಿದ್ದಾರೆ. ಈ ಪೋಸ್ಟ್​ ಇದೀಗ ವೈರಲ್​ ಆಗುತ್ತಿದೆ. ಚಹಲ್ ಅವರ ಈ ಪೋಸ್ಟ್​ಗೆ ಹಲವರು ಬೆಂಬಲ ಸೂಚಿಸಿದ್ದಾರೆ.


ಭಾರತ ತಂಡದ ಮಾಜಿ ಕ್ರಿಕೆಟಿಗ ಸೌರವ್​ ಗಂಗೂಲಿ ಕೂಡ ವೈದ್ಯೆಯ ಅತ್ಯಾಚಾರ, ಕೊಲೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು. ಬುಧವಾರ ಗಂಗೂಲಿ ಅವರ ಪತ್ನಿ ಡೊನ್ನಾ ಅವರ ನೃತ್ಯ ಶಾಲೆ ದೀಕ್ಷಾ ಮಂಜರಿಯಿಂದ ಪ್ರತಿಭಟನಾ ರ್ಯಾಲಿ ಆಯೋಜಿಸಿತ್ತು. ಇದರಲ್ಲಿ ಗಂಗೂಲಿ ಕೂಡ ಪಾಲ್ಗೊಂಡಿದ್ದರು.

ಕೋಲ್ಕತಾದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, “ದೇಶದಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಬದಲಾವಣೆಯಾಗಲು ಮತ್ತೊಂದು ಅತ್ಯಾಚಾರ ಪ್ರಕರಣಕ್ಕಾಗಿ ದೇಶ ಕಾಯಲು ಸಾಧ್ಯವಿಲ್ಲ” ಎಂದು ಕಟುವಾಗಿ ಹೇಳಿದ್ದರು. ಅಸ್ತಿತ್ವದಲ್ಲಿರುವ ಕಾಯ್ದೆಗಳು ವೈದ್ಯರು ಮತ್ತು ವೈದ್ಯಕೀಯ ಕಾರ್ಯಕರ್ತರ ಸಾಂಸ್ಥಿಕ ಸುರಕ್ಷತಾ ಮಾನದಂಡಗಳನ್ನು ಖಾತರಿಪಡಿಸುವುದಿಲ್ಲ. ಪುರುಷಪ್ರಭುತ್ವದಿಂದಾಗಿ ಮಹಿಳಾ ವೈದ್ಯರೇ ಹೆಚ್ಚು ಗುರಿಯಾಗುತ್ತಿದ್ದಾರೆ ಎಂದು ಸಿಜೆಐ ಚಂದ್ರಚೂಡ್ ಗಮನಿಸಿದ್ದರು.

ಇದನ್ನೂ ಓದಿ Sourav Ganguly : ಕೊಲೆಗಡುಕರಿಗೆ ಈ ರೀತಿ ಮಾಡಿ; ಕೋಲ್ಕೊತಾ ವೈದ್ಯೆಯ ಅತ್ಯಾಚಾರ, ಕೊಲೆ ಬಗ್ಗೆ ಸೌರವ್​ ಗಂಗೂಲಿ ಅಭಿಪ್ರಾಯ ಹೀಗಿತ್ತು

ಪ್ರತಿಭಟಿಸುವ ವೈದ್ಯರ ಮೇಲೆ ನಿಮ್ಮ ಅಧಿಕಾರವನ್ನು ಪ್ರದರ್ಶಿಸಬೇಡಿ ಎಂದು ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹೇಳಿದೆ. ಕೋರ್ಟ್‌ ವೈದ್ಯರಿಗೆ ಕೆಲಸವನ್ನು ಪುನರಾರಂಭಿಸಲು ಕೇಳಿದೆ. ವೈದ್ಯರ ಕಳವಳವನ್ನು ಅತ್ಯಂತ ಪ್ರಾಮುಖ್ಯತೆಯೊಂದಿಗೆ ಸ್ವೀಕರಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದ್ದು, ಕಾರ್ಯಪಡೆಯು ತನ್ನ ಮಧ್ಯಂತರ ವರದಿಯನ್ನು ಮೂರು ವಾರಗಳಲ್ಲಿ ಮತ್ತು ಅಂತಿಮ ವರದಿಯನ್ನು ಎರಡು ತಿಂಗಳೊಳಗೆ ಸಲ್ಲಿಸಲಿದೆ ಎಂದು ಹೇಳಿದೆ.

ಆರ್‌ಜಿ ಕರ್ ಮೆಡಿಕಲ್ ಕಾಲೇಜಿನ ಮಾಜಿ ಪ್ರಾಂಶುಪಾಲರು ಸೇರಿದಂತೆ ಶಂಕಿತರನ್ನು ಸಿಬಿಐ ತನಿಖೆಗೊಳಪಡಿಸಿದೆ. ನಿನ್ನೆ ಮುಂಜಾನೆ ಪ್ರಕರಣದ ಹಲವಾರು ಶಂಕಿತರು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ) ಯಿಂದ ಸರಣಿ ತನಿಖೆಗೆ ಒಳಗಾದರು. ಸುಪ್ರೀಂ ಕೋರ್ಟ್ ಪ್ರಕರಣವನ್ನು ತನ್ನ ವ್ಯಾಪ್ತಿಗೆ ತೆಗೆದುಕೊಂಡಿದ್ದು, ಆಗಸ್ಟ್ 22ರೊಳಗೆ ತನಿಖೆಯ ಸ್ಥಿತಿಗತಿಯ ವರದಿಯನ್ನು ಸಲ್ಲಿಸುವಂತೆ ಏಜೆನ್ಸಿಯನ್ನು ಕೇಳಿದೆ.

Continue Reading

ಕ್ರೀಡೆ

Shreyas Gopal: ಕೇರಳ ಬಿಟ್ಟು ಮತ್ತೆ ಕರ್ನಾಟಕ ತಂಡಕ್ಕೆ ಮರಳಿದ ಶ್ರೇಯಸ್ ಗೋಪಾಲ್

Shreyas Gopal: ಕಳೆದ ವರ್ಷ ತಂಡದಲ್ಲಿ ಸರಿಯಾದ ಅವಕಾಶ ಸಿಗುತ್ತಿಲ್ಲ ಎನ್ನುವ ಕಾರಣದಿಂದ ಶ್ರೇಯಸ್ ಗೋಪಾಲ್ ರಾಜ್ಯ ತಂಡವನ್ನು ತೊರೆದು ಕೇರಳ ತಂಡಕ್ಕೆ ಸೇರ್ಪಡೆಗೊಂಡಿದ್ದರು. ಈ ಬಾರಿ ಮತ್ತೆ ಕರ್ನಾಟಕದ ಪರ ಆಡಲು ನಿರ್ಧರಿಸಿದ್ದಾರೆ.

VISTARANEWS.COM


on

Shreyas Gopal
Koo

ಬೆಂಗಳೂರು: ಕರ್ನಾಟಕ ತಂಡ ತೊರೆದು ಕೇರಳ ತಂಡಕ್ಕೆ ಹೋಗಿದ್ದ ಶ್ರೇಯಸ್ ಗೋಪಾಲ್(Shreyas Gopal) ಮತ್ತೆ ತವರು ತಂಡಕ್ಕೆ ವಾಪಸ್​ ಆಗಿದ್ದಾರೆ. ಕಳೆದ ವರ್ಷ ರಣಜಿ ಟೂರ್ನಿಯ ವೇಳೆ ಅವರು ಕೇರಳ ತಂಡ ಸೇರಿದ್ದರು. ರಾಜ್ಯ ತಂಡಕ್ಕೆ ಮರಳಿದ ವಿಚಾರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್​ ಸಂಸ್ಥೆಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

30 ವರ್ಷದ ಶ್ರೇಯಸ್ ಗೋಪಾಲ್ 2013ರಿಂದ 10 ವರ್ಷಗಳ ಕಾಲ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. ಆದರೆ, ಕಳೆದ ವರ್ಷ ತಂಡದಲ್ಲಿ ಸರಿಯಾದ ಅವಕಾಶ ಸಿಗುತ್ತಿಲ್ಲ ಎನ್ನುವ ಕಾರಣದಿಂದ ಅವರು ರಾಜ್ಯ ತಂಡವನ್ನು ತೊರೆದು ಕೇರಳ ತಂಡಕ್ಕೆ ಸೇರ್ಪಡೆಗೊಂಡಿದ್ದರು. ಈ ಬಾರಿ ಮತ್ತೆ ಕರ್ನಾಟಕದ ಪರ ಆಡಲು ನಿರ್ಧರಿಸಿದ್ದಾರೆ. ಕೆರಳ ತಂಡದಿಂದ ನಿರಾಕ್ಷೇಪಣಾ ಪತ್ರವನ್ನು ಕೂಡ ಪಡೆದುಕೊಂಡಿದ್ದಾರೆ. ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಕೇರಳ ಪರ ಆಡಿದ್ದ ಅವರು ಕೇವಲ 7 ಪಂದ್ಯಗಳಲ್ಲಿ 12 ವಿಕೆಟ್​​ಗಳನ್ನು ಪಡೆದಿದ್ದರು.

ಇದನ್ನೂ ಓದಿ Ranji Trophy : ರಣಜಿ ಟ್ರೋಫಿಯಲ್ಲಿ ಕಳೆಗುಂದಿದ ಕರ್ನಾಟಕ ತಂಡ

ಶ್ರೇಯಸ್ ಗೋಪಾಲ್ ಇದುವರೆಗೆ 82 ಪ್ರಥಮ ದರ್ಜೆ, 65 ಲಿಸ್ಟ್​ ‘ಎ’ ಹಾಗೂ 97 ಟಿ20 ಪಂದ್ಯ ಆಡಿದ್ದಾರೆ. ಪ್ರಸ್ತುತ ಸಾಗುತ್ತಿರುವ ಮಹಾರಾಜಾ ಟಿ20 ಟ್ರೋಫಿಯಲ್ಲಿ ಮಂಗಳೂರು ತಂಡದ ಪರ ಆಡುತ್ತಿದ್ದಾರೆ.  ಶ್ರೇಯಸ್​ ಗೋಪಾಲ್ ಅತ್ಯುತ್ತಮ ಲೆಗ್ ಸ್ಪಿನ್ನರ್. ವಿರಾಟ್​ ಕೊಹ್ಲಿಗೂ ಅವರ ಎಸೆತವನ್ನು ಎದುರಿಸಲು ಕಷ್ಟವಾಗುತ್ತದೆ. ಐಪಿಎಲ್​ನಲ್ಲಿ ಒಟ್ಟು ಮೂರು ಬಾರಿ ಕೊಹ್ಲಿಯನ್ನು ಔಟ್​ ಮಾಡಿದ್ದಾರೆ.

ಆಫ್ಘನ್ ಕ್ರಿಕೆಟ್​ ತಂಡಕ್ಕೆ ಶ್ರೀಧರ್ ಸಹಾಯಕ ಕೋಚ್

ಭಾರತ ತಂಡದ ಮಾಜಿ ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್(R Sridhar) ಅವರು ಅಫಘಾನಿಸ್ತಾನ(Afghanistan) ಕ್ರಿಕೆಟ್ ತಂಡದ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದಾರೆ. ನ್ಯೂಜಿಲ್ಯಾಂಡ್​ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಸರಣಿಯಲ್ಲಿ ಶ್ರೀಧರ್ ಆಫ್ಘನ್​ ತಂಡದ ಸಹಾಯಕ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

ಶ್ರೀಧರ್​ ಭಾರತ ಕ್ರಿಕೆಟ್ ತಂಡದಲ್ಲಿ 2014ರಿಂದ ಸತತ 7 ವರ್ಷಗಳ ಕಾಲ ಫೀಲ್ಡಿಂಗ್ ಕೋಚ್ ಆಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ರವಿಶಾಸ್ತ್ರಿ ಕೋಚ್​ ಆಗಿದ್ದ ವೇಳೆ ಅವರ ಸಹಾಯಕ ಸಿಬ್ಬಂದಿಯ ಭಾಗವಾಗಿ ಕೆಲಸ ಮಾಡಿದ್ದರು. ನ್ಯೂಜಿಲ್ಯಾಂಡ್​ ವಿರುದ್ಧ ಅಫಫ್ಘಾನಿಸ್ತಾನ ಒಂದು ಟೆಸ್ಟ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ.

ಹೈದರಾಬಾದ್ ಮೂಲದ ಆರ್.ಶ್ರೀಧರ್ 35 ಪ್ರಥಮ ದರ್ಜೆ ಮತ್ತು 15 ‘ಎ’ ದರ್ಜೆಯ ಕ್ರಿಕೆಟ್ ಪಂದ್ಯಗಳನ್ನು ಆಡಿದ್ದಾರೆ. 2015 ಮತ್ತು 2019ರ ಏಕದಿನ ವಿಶ್ವಕಪ್ ಮತ್ತು 2016 ಮತ್ತು 2021ರ ಟಿ-20 ವಿಶ್ವಕಪ್​ಗಳಲ್ಲಿ ಭಾರತ ತಂಡದ ಫೀಲ್ಡಿಂಗ್ ಕೋಚ್ ಆಗಿ ಸೇವೆ ಸಲ್ಲಿಸಿದ್ದರು.

Continue Reading

ಕ್ರೀಡೆ

Anushka Sharma: ಲಂಡನ್​ ಬಿಟ್ಟು ಮಗನ ಜತೆ ಮತ್ತೆ ಮುಂಬೈಗೆ ಮರಳಲಿದ್ದಾರೆ ಕೊಹ್ಲಿ ಪತ್ನಿ ಅನುಷ್ಕಾ!

Anushka Sharma: ಫೆಬ್ರವರಿ 15 ರಂದು ಲಂಡನ್​ನಲ್ಲಿ ಅನುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಅಕಾಯ್​ ಎಂದು ಹೆಸರಿಡಲಾಗಿದೆ. ಮಗನನ್ನು ಇದುವರೆಗೂ ಭಾರತಕ್ಕೆ ಕರೆ ತಂದಿಲ್ಲ. ಅನುಷ್ಕಾ ಐಪಿಎಲ್​ ವೇಳೆ ಭಾರತಕ್ಕೆ ಬಂದಿದ್ದರೂ ಕೂಡ ಮಗನನ್ನು ಲಂಡನ್​ನಲ್ಲಿಯೇ ಬಿಟ್ಟು ಬಂದಿದ್ದರು.

VISTARANEWS.COM


on

Anushka Sharma
Koo

ಮುಂಬಯಿ: ಸರಿ ಸುಮಾರು ಒಂದು ವರ್ಷದಿಂದ ಲಂಡನ್‌ನಲ್ಲಿಯೇ ನೆಲೆಸಿರುವ ಟೀಮ್​ ಇಂಡಿಯಾದ ಸ್ಟಾರ್​ ಕ್ರಿಕೆಟಿಗ ವಿರಾಟ್​ ಕೊಹ್ಲಿ(virat kohli) ಅವರ ಪತ್ನಿ, ಬಾಲಿವುಡ್​ ನಟಿ ಅನುಷ್ಕಾ ಶರ್ಮಾ(Anushka Sharma) ಇದೀಗ ಮತ್ತೆ ತಮ್ಮ ತವರಾದ ಮುಂಬೈಗೆ(Anushka Sharma Return to Mumbai) ಮರಳಲಿದ್ದಾರೆ ಎಂದು ತಿಳಿದುಬಂದಿದೆ. ಮಗ ಅಕಾಯ್​(Akaay) ಅವರನ್ನು ಮೊದಲ ಬಾರಿಗೆ ಭಾರತಕ್ಕೆ ಕರೆತರಲು ಸಿದ್ಧತೆಯಲ್ಲಿದ್ದಾರೆ ಎನ್ನಲಾಗಿದೆ.

ಫೆಬ್ರವರಿ 15 ರಂದು ಲಂಡನ್​ನಲ್ಲಿ ಅನುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಅಕಾಯ್​ ಎಂದು ಹೆಸರಿಡಲಾಗಿದೆ. ಮಗನನ್ನು ಇದುವರೆಗೂ ಭಾರತಕ್ಕೆ ಕರೆ ತಂದಿಲ್ಲ. ಅನುಷ್ಕಾ ಐಪಿಎಲ್​ ವೇಳೆ ಭಾರತಕ್ಕೆ ಬಂದಿದ್ದರೂ ಕೂಡ ಮಗನನ್ನು ಲಂಡನ್​ನಲ್ಲಿಯೇ ಬಿಟ್ಟು ಬಂದಿದ್ದರು. ಮಗನ ಆರೈಕೆಗೆಂದೇ ಅನುಷ್ಕಾ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಟೂರ್ನಿಯ ವೇಳೆ ಕೊಹ್ಲಿ ಜತೆ ಪ್ರಯಾಣಿಸಿರಲಿಲ್ಲ. ಸದ್ಯ ಕೊಹ್ಲಿ ಕೂಡ ಲಂಡನ್​ನಲ್ಲಿಯೇ ಪತ್ನಿ ಮತ್ತು ಮಕ್ಕಳ ಜತೆಗಿದ್ದಾರೆ.

ಕೆಲ ತಿಂಗಳುಗಳ ಹಿಂದೆ ವಿರಾಟ್​ ಕೊಹ್ಲಿ ಮತ್ತು ಅನುಷ್ಕಾ ಅವರು ಲಂಡನ್​ನಲ್ಲಿಯೇ ನೆಲೆಸಲಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಇದೀಗ ವರದಿಯಾದ ಪ್ರಕಾರ ಮಗ ಅನುಷ್ಕಾ ಮತ್ತೆ ಭಾರತಕ್ಕೆ ಬಂದು ಮುಂಬೈಯಲ್ಲಿ ನೆಲೆಸಲಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿ ಎಂಬತೆ ಅನುಷ್ಕಾ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೀಘ್ರದಲ್ಲೇ ನಿಮ್ಮನ್ನು ಭೇಟಿಯಾಗಲಿದ್ದೇನೆ ಎಂದು ಬರೆದುಕೊಂಡು ಆರೋಗ್ಯಕರ ಆಹಾರ ಮತ್ತು ತಿಂಡಿಗಳ ಬ್ರ್ಯಾಂಡ್‌ನ ಪ್ರಚಾರದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್​ ಕಂಡ ನೆಟ್ಟಿಗರು ಇದು ಅನುಷ್ಕಾ ಮತ್ತೆ ಮುಂಬೈಗೆ ಬರುವ ಸುಳಿವು ಎಂದು ಹೇಳಿದ್ದಾರೆ.


ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಅನುಷ್ಕಾ ಮತ್ತು ವಿರಾಟ್ ಯುಕೆ ಮೂಲದ ಕಂಪನಿಯ ನಿರ್ದೇಶಕರಾಗಿದ್ದಾರೆ. ಯುಕೆ ಸರ್ಕಾರದ ಫೈಂಡ್ ಅಂಡ್ ಅಪ್ಡೇಟ್ ಕಂಪನಿಯ ಮಾಹಿತಿ ಸೇವೆಯ ಪ್ರಕಾರ, ದಂಪತಿಗಳು ಮ್ಯಾಜಿಕ್ ಲ್ಯಾಂಪ್​​ನ ಮೂವರು ನಿರ್ದೇಶಕರಲ್ಲಿ ಇಬ್ಬರು. ಇದು ಆಗಸ್ಟ್ 1, 2022 ರಂದು ಆರಂಭಗೊಂಡ ಸಲಹಾ ಸಂಸ್ಥೆಯಾಗಿದೆ. ಕಂಪನಿಯ ಅಧಿಕೃತ ಕಚೇರಿ ವಿಳಾಸವು ಯುಕೆಯ ವೆಸ್ಟ್ ಯಾರ್ಕ್​ಶೈರ್​ನಲ್ಲಿದೆ.

ಇದನ್ನೂ ಓದಿ Anushka Sharma : ಪತ್ನಿ ಅನುಷ್ಕಾ ಬರ್ತ್​​ಡೇಗೆ ಕೊಹ್ಲಿ ಕೇಕ್​ ಆರ್ಡರ್​ ಮಾಡಿದ್ದು ಬೆಂಗಳೂರಿನಿಂದ; ತಿಂಗಳುಗಳ ಬಳಿಕ ಮಾಹಿತಿ ಬಹಿರಂಗ

ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್​ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.

Continue Reading
Advertisement
Kannada New Movie
ಬೆಂಗಳೂರು28 seconds ago

Kannada New Movie: ಮುಖದಲ್ಲಿ ರಕ್ತ, ಕೈಯಲ್ಲಿ ಲಾಂಗ್; ಮಾಸ್ ಅವತಾರದಲ್ಲಿ ನಿರೂಪ್ ಭಂಡಾರಿ

CM Siddaramaiah
ಬೆಂಗಳೂರು7 mins ago

CM Siddaramaiah: ಬುಡಕ್ಕೆ ನೀರು ಬಂದಾಗ ಬಿಜೆಪಿ ನಾಯಕರಿಗೆ ಜಾತಿ ನೆನಪಾಗುತ್ತದೆ! ಸಿದ್ದರಾಮಯ್ಯ ಗೇಲಿ

Jammu-Kashmir Election
ದೇಶ9 mins ago

Jammu-Kashmir Election: ರಂಗೇರಿದ ಚುನಾವಣೆ- ಫಾರೂಖ್‌ ಭೇಟಿಯಾದ ರಾಹುಲ್‌, ಖರ್ಗೆ; ಕಾಂಗ್ರೆಸ್‌-NC ಮೈತ್ರಿ ಕನ್ಫರ್ಮ್‌

Lung Cancer
ಆರೋಗ್ಯ11 mins ago

Lung Cancer: ಸಿಗರೇಟ್ ಮಾತ್ರವಲ್ಲ, ಶ್ವಾಸಕೋಶದ ಕ್ಯಾನ್ಸರ್‌‌ಗೆ ಇನ್ನೂ ಹಲವು ಕಾರಣಗಳಿವೆ!

Archana Kamath
ಕ್ರೀಡೆ51 mins ago

Archana Kamath: 24ನೇ ವಯಸ್ಸಿಗೆ ಟೇಬಲ್ ಟೆನಿಸ್​ಗೆ ವಿದಾಯ ಹೇಳಿದ ಕನ್ನಡತಿ, ಒಲಿಂಪಿಯನ್​ ಅರ್ಚನಾ ಕಾಮತ್

Belgavi News
ಬೆಳಗಾವಿ58 mins ago

Belgavi News : ಪರಿಹಾರ ನೀಡಲು ವಿಳಂಬ; ಬೆಳಗಾವಿ ಎಸಿ ಕಚೇರಿಯ ಕಂಪ್ಯೂಟರ್, ಪ್ರಿಂಟರ್ ಹೊತ್ತೊಯ್ದ ರೈತರು!

Kolkata Doctor murder case
ದೇಶ1 hour ago

Kolkata Doctor murder case: 36 ಗಂಟೆಗಳ ಶಿಫ್ಟ್‌ನಲ್ಲಿ ವೈದ್ಯರು ಕರ್ತವ್ಯ ನಿರ್ವಹಿಸುವುದು ಅಮಾನವೀಯ- ಸುಪ್ರೀಂ ಅಭಿಪ್ರಾಯ

IND vs ENG Test Series 2025
ಕ್ರೀಡೆ2 hours ago

IND vs ENG Test Series 2025: ಇಂಗ್ಲೆಂಡ್ ವಿರುದ್ಧ ಟೆಸ್ಟ್​ ಸರಣಿ; ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

sexual abuse
ದೇಶ2 hours ago

Badlapur Horror: ಶಾಲೆಗಳೇ ಸುರಕ್ಷಿತ ಸ್ಥಳವಲ್ಲದಿದ್ದ ಮೇಲೆ ಶಿಕ್ಷಣದ ಹಕ್ಕಿಗೆ ಅರ್ಥವೇನಿದೆ? ಬಾಂಬೆ ಹೈಕೋರ್ಟ್‌ ಗರಂ

Road Accident
ಕೋಲಾರ2 hours ago

Road Accident : ಬಂಗಾರಪೇಟೆಯಲ್ಲಿ ವ್ಹೀಲಿಂಗ್ ಹಾವಳಿಗೆ ಅರ್ಚಕ ಬಲಿ; ರಸ್ತೆ ದಾಟುತ್ತಿದ್ದವನಿಗೆ ಕಾರು ಡಿಕ್ಕಿ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌