Road Accident : ಬಂಗಾರಪೇಟೆಯಲ್ಲಿ ವ್ಹೀಲಿಂಗ್ ಹಾವಳಿಗೆ ಅರ್ಚಕ ಬಲಿ; ರಸ್ತೆ ದಾಟುತ್ತಿದ್ದವನಿಗೆ ಕಾರು ಡಿಕ್ಕಿ - Vistara News

ಕೋಲಾರ

Road Accident : ಬಂಗಾರಪೇಟೆಯಲ್ಲಿ ವ್ಹೀಲಿಂಗ್ ಹಾವಳಿಗೆ ಅರ್ಚಕ ಬಲಿ; ರಸ್ತೆ ದಾಟುತ್ತಿದ್ದವನಿಗೆ ಕಾರು ಡಿಕ್ಕಿ

Road Accident : ಕೋಲಾರದಲ್ಲಿ ವ್ಹೀಲಿಂಗ್‌ ಹಾವಳಿಗೆ ಅರ್ಚಕರೊಬ್ಬರು ಮೃತಪಟ್ಟಿದ್ದಾರೆ. ದೇವನಹಳ್ಳಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದಿದೆ.

VISTARANEWS.COM


on

Road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ವ್ಹೀಲಿಂಗ್ ಹಾವಳಿಗೆ (Road Accident) ದೇಗುಲದ ಅರ್ಚಕರೊಬ್ಬರು ಬಲಿಯಾಗಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ನಗರದ ವಿವೇಕಾನಂದ ರಸ್ತೆ ಬಸ್ ನಿಲ್ದಾಣ ಬಳಿ ಘಟನೆ ನಡೆದಿದೆ. ಗಾಂಧಿನಗರದ ಆಂಜನೇಯಸ್ವಾಮಿ ದೇವಾಲಯದ ಅರ್ಚಕ ಗೋಪಾಲ (45) ಮೃತ ದುರ್ದೈವಿ.

ನಿನ್ನೆ ರಾತ್ರಿ 10 ಗಂಟೆ ಸಮಯದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರಿಂದ ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಗಾಯಗೊಂಡಿದ್ದ ಗೋಪಾಲರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅರ್ಚಕ ಗೋಪಾಲ್ ಮೃತಪಟ್ಟಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಕಾರು ಡಿಕ್ಕಿ ಪಾದಚಾರಿ ಸಾವು

ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವ್ಯಕ್ತಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಸೋಲೂರು ಗ್ರಾಮದ ಕೃಷ್ಣಪ್ಪ (80) ಮೃತ ದುರ್ದೈವಿ. ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ತಾಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಡಿಕ್ಕಿ ಹೊಡೆದ ಬಳಿಕ ಕಾರು ನಿಲ್ಲಿಸದೆ ಚಾಲಕ ಎಸ್ಕೇಪ್ ಆಗಿದ್ದಾನೆ. ಅಪಘಾತ ಮಾಡಿ ಕಾರು ಚಾಲಕ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ರಾಷ್ಟ್ರೀಯ ಹೆದ್ಧಾರಿ 207ರಲ್ಲಿ ದೊಡ್ಡಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವಿಶ್ವನಾಥಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Gas Cylinder Blast: ಸಿಲಿಂಡರ್‌ ಸ್ಫೋಟಕ್ಕೆ ಸುಟ್ಟುಕರಕಲಾದ ವ್ಯಕ್ತಿ; ಮನೆ ಗೋಡೆ ಬಿದ್ದು ಮಕ್ಕಳು ಗಾಯ

ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಲಾರಿ

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕಕ್ಕೆ ಬಿದ್ದಿದೆ. ಲಾರಿ ಚಾಲಕ ಸೇರಿ ಮೂವರಿಗೆ ಗಾಯವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯ ದೋಣಿಗಲ್ ಬಳಿ ಅಪಘಾತ ನಡೆದಿದೆ. ಲಾರಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಸರಕು ತುಂಬಿಕೊಂಡು ತೆರಳುತ್ತಿತ್ತು.

ಕೆಲ ದಿನಗಳ ಹಿಂದೆ ಭಾರಿ ಮಳೆಯಿಂದ ನೀರು ಹರಿದು ಹೆದ್ದಾರಿ ಪಕ್ಕದಲ್ಲಿ ಬೃಹತ್ ಗುಂಡಿ ಸೃಷ್ಟಿಯಾಗಿತ್ತು. ತಡರಾತ್ರಿ ತಿರುವಿನಲ್ಲಿ ಚಾಲಕನಿಗೆ ನಿಯಂತ್ರಣ ಸಿಗದೆ ಲಾರಿ ಕಂದಕಕ್ಕೆ ಪಲ್ಟಿಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ದಳದ ಸಿಬ್ಬಂದಿ. ಲಾರಿಯಲ್ಲಿ ಸಿಲುಕಿದ್ದ ಕುಣಿಗಲ್ ಮೂಲದ ಲಾರಿ ಚಾಲಕ ಜಾಫರ್, ಸಿಮ್ರಾನ್ ಮತ್ತು ಹತಾಹುಲ್ಲರನ್ನು ರಕ್ಷಿಸಿದ್ದಾರೆ. ಗಾಯಾಳುಗಳಿಗೆ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೀದಿನಾಯಿ ದಾಳಿಗೆ 15 ಕುರಿ ಮರಿ ದಾರುಣ ಸಾವು

ಬೀದಿ ನಾಯಿ ದಾಳಿಗೆ 15 ಕುರಿಮರಿ ದಾರುಣವಾಗಿ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಜಿ.ಪಿ ರಂಗಪ್ಪ ಬಡಾವಣೆಯಲ್ಲಿ ಮಾರಣ್ಣ ಎಂಬುವವರಿಗೆ ಸೇರಿದ ಕುರಿಮರಿಗಳನ್ನು ಮೇಯಿಸಲು ಹೋದಾಗ ನಾಯಿ ದಾಳಿ ನಡೆದಿದೆ. ಸುಮಾರು 50 ಸಾವಿರ ಬೆಲೆ ಬಾಳುತ್ತಿದ್ದ ಕುರಿಮರಿ ಮೃತಪಟ್ಟಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather: ಅಲೆಗಳ ಅಬ್ಬರಕ್ಕೆ ಅಂಕೋಲಾದಲ್ಲಿ ಕೊಚ್ಚಿ ಹೋದ ಮನೆ; ಭಾರಿ ಮಳೆಗೆ ಚಾರ್ಮಾಡಿಯಲ್ಲಿ ಧರೆಗುರುಳಿದ ಬಂಡೆಗಳು

Karnataka Weather Forecast: ಕರಾವಳಿಯಲ್ಲಿ ಅಲೆಗಳ ಅಬ್ಬರ ಜೋರಾಗಿದ್ದರೆ, ಇತ್ತ ಮಲೆನಾಡಿನಲ್ಲಿ ಭಾರಿ ಮಳೆಗೆ (Rain News) ಚಾರ್ಮಾಡಿ ಘಾಟ್‌ನಲ್ಲಿ ಬಂಡೆ ಕಲ್ಲುಗಳು ಧರೆಗುರುಳಿವೆ. ವಿಜಯಪುರ, ವಿಜಯನಗರದಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ.

VISTARANEWS.COM


on

By

Karnataka weather Forecast
Koo

ಕಾರವಾರ: ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಅಲೆಗಳ ಅಬ್ಬರ (Karnataka Weather Forecast) ಜೋರಾಗಿದೆ. ಭಾರೀ ಅಲೆಗಳ ಅಬ್ಬರಕ್ಕೆ (Rain News) ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಹಾರವಾಡದ ತರಂಗಮೇಟ ಪ್ರದೇಶದಲ್ಲಿ ಮನೆಯೊಂದು ಕೊಚ್ಚಿಹೋಗಿದೆ. ಮೀನುಗಾರ ಅಶೋಕ್ ಹರಿಕಂತ್ರ ಎಂಬುವವರ ಮನೆ ಸಮುದ್ರಪಾಲಾಗಿದೆ.

ತರಂಗಮೇಟ ತೀರದ ಸುಮಾರು 200 ಮೀಟರ್ ವ್ಯಾಪ್ತಿಯಲ್ಲಿ ಅಲೆಗಳ ಅಬ್ಬರಕ್ಕೆ ಕಳೆದ ಮೂರು ತಿಂಗಳಿಂದ ಕಡಲಕೊರೆತ ಉಂಟಾಗಿತ್ತು. ಕುಟುಂಬಸ್ಥರು ಎರಡು ತಿಂಗಳ ಹಿಂದೆಯೇ ಮನೆ ಬಿಟ್ಟು ಬೇರೆಡೆ ಉಳಿದುಕೊಂಡಿದ್ದರು. ಇಂದು ಗುರುವಾರ ಅಲೆಗಳ ಅಬ್ಬರಕ್ಕೆ ಮನೆ, ತೆಂಗಿನಮರ ನೀರುಪಾಲಾಗಿದೆ. ಮನೆ, ತೆಂಗಿನಮರ ಕೊಚ್ಚಿಹೋಗುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ತರಂಗಮೇಟ ಕಡಲತೀರಕ್ಕೆ ಹೊಂದಿಕೊಂಡು 30ಕ್ಕೂ ಅಧಿಕ ಮೀನುಗಾರರ ಮನೆಗಳು ಇವೆ. ಕಡಲತೀರಕ್ಕೆ ಅಲೆತಡೆಗೋಡೆ ನಿರ್ಮಿಸುವಂತೆ ಮನವಿ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್‌ನ ತಪ್ಪಲಿನಲ್ಲಿ ಭಾರಿ ಮಳೆಯಾಗಿದೆ. ಧಾರಾಕಾರ ಮಳೆಗೆ ಚಾರ್ಮಾಡಿಯಲ್ಲಿ ಬಂಡೆಗಳು ಧರೆಗುರುಳಿವೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್‌ನ 8 ಮತ್ತು 9ನೇ ತಿರುವಿನಲ್ಲಿ ಘಟನೆ ನಡೆದಿದೆ.

ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆಯಲ್ಲೇ ನೀರು ತುಂಬಿ ಹರಿಯುತ್ತಿದೆ. ಮಳೆ ನೀರಿನ ಜತೆ ರಸ್ತೆಗೆ ಕಲ್ಲುಗಳು ತೇಲಿ ಬಂದಿದೆ. ಗುಡ್ಡ ಕುಸಿದು ರಸ್ತೆ ಮೇಲೆ ಬಂಡೆ ಕಲ್ಲುಗಳು ಉರುಳಿವೆ. ಸ್ಥಳಕ್ಕೆ ಚಾರ್ಮಾಡಿ ಘಾಟಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ‌ ಸಂಚಾರ ಎಂದಿನಂತೆ ಇದ್ದು, ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ.

ಇನ್ನೂ ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಗ್ರಾಮಸ್ಥರ ಕಣ್ಣೆದುರೆ ಮನೆಗೆ ಸಿಡಿಲು ಬಡಿದು, ಮನೆ ಚಾವಣಿ ಸಂಪೂರ್ಣ ಹಾನಿಯಾಗಿ, ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಮಾಳಿಗನಾಡು ಗ್ರಾಮದಲ್ಲಿ ಘಟನೆ ನಡೆದಿದೆ.

ಗ್ರಾಮದ ಸೀತು ಎಂಬುವವರ ಮನೆಗೆ ಸಂಪೂರ್ಣ ಹಾನಿಯಾಗಿದೆ. ಮನೆಯ ಸದಸ್ಯರು ತೋಟದ ಕೆಲಸಕ್ಕೆ ಹೋಗಿದ್ದರಿಂದ ಅವಘಡ ಸಂಭವಿಸಿದಾಗ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಮನೆಯ ಹೆಂಚುಗಳು, ಬಾಗಿಲು ಕಿಟಕಿ ಸುಟ್ಟ ಸ್ಥಿತಿ ತಲುಪಿದೆ.

ಇದನ್ನೂ ಓದಿ: Belgavi News : ಪರಿಹಾರ ನೀಡಲು ವಿಳಂಬ; ಬೆಳಗಾವಿ ಎಸಿ ಕಚೇರಿಯ ಕಂಪ್ಯೂಟರ್, ಪ್ರಿಂಟರ್ ಹೊತ್ತೊಯ್ದ ರೈತರು!

ವಿಜಯಪುರದಲ್ಲಿ ಉಕ್ಕಿ ಹರಿಯುತ್ತಿರುವ ಹಳ್ಳ

ಇತ್ತ ರೋಣಿಹಾಳ ಹಳ್ಳ ಉಕ್ಕಿ ಹರಿಯುತ್ತಿದ್ದು, ಜನರು ಹಳ್ಳದಲ್ಲೆ ಓಡಾಡುತ್ತಿದ್ದಾರೆ. ನಿನ್ನೆ ಬುಧವಾರ ತಡರಾತ್ರಿ ಸುರಿದ ಮಳೆಗೆ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ರೋಣಿಹಾಳ. ಗರಸಂಗಿ, ಆಸಂಗಿ ಹಳ್ಳಗಳು ಉಕ್ಕಿ ಹರಿದಿದೆ. ಅಪಾಯದ ನಡುವೆಯೂ ಗ್ರಾಮಸ್ಥರು ಜೀವದ ಹಂಗು ತೊರೆದು ಹಳ್ಳ ದಾಟಲು ಯತ್ನಿಸುತ್ತಿದ್ದಾರೆ. ವಿಜಯಪುರ ತಾಲೂಕಿನ ಲೋಗಾಂವಿ ಗ್ರಾಮದಲ್ಲಿ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ. ರಾಜು ಹುನ್ನೂರ್ ಎಂಬುವವರಿಗೆ ಸೇರಿದ ದ್ರಾಕ್ಷಿ ಬೆಳೆ ಭಾರಿ ಮಳೆಗೆ ಬೆಳೆಯ ಕಂಬಗಳು ಹಾಗೂ ದ್ರಾಕ್ಷಿ ಬೆಳೆ ನೆಲಕ್ಕುರುಳಿವೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ದ್ರಾಕ್ಷಿ ಹಾನಿಯಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ರೈತರ ಮನವಿ ಮಾಡಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ತಡ ರಾತ್ರಿ ಭರ್ಜರಿ ಮಳೆಗೆ ಬಹುತೇಕ ಕಡೆ ರಸ್ತೆಗಳು ಜಲಾವೃತಗೊಂಡಿದ್ದವು. ದಾವಣಗೆರೆ ನಗರ ಹಾಗೂ ಹೊನ್ನಾಳಿ ಪಟ್ಟಣ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಸುರಿದ ಮಳೆಯಿಂದಾಗಿ ಜಮೀನಿಗೆ ನೀರು ನುಗ್ಗಿದೆ. ವಿಜಯನಗರ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೈತರ ಜಮೀನಿ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಭಾರಿ ಮಳೆಗೆ ಬೈಲುವದ್ದಿಗೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ಕೆರೆ ಕೋಡಿ ಬಿದ್ದು ಗುಲಾಬಿ ತೋಟ, ಮೆಣಸಿನಕಾಯಿ ತೋಟ, ಹತ್ತಿ, ಹಾಗೂ ಮೆಕ್ಕೆಜೋಳ ಬೆಳೆದಿದ್ದ ಜಮೀನಿಗೆ ನೀರು ನುಗ್ಗಿದೆ. ಹತ್ತಾರು ಸಾವಿರ ಖರ್ಚು ಮಾಡಿದ್ದ ಬೆಳೆ ಮಳೆಗೆ ಮುಕ್ಕಾಲು ಭಾಗ ಹಾನಿಯಾಗಿದೆ. ಬೆಳೆ ಹಾನಿಯಾಗಿದ್ದಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಗುಲಾಬಿ ಬೆಳೆಗಾರ ಕಂಗಾಲಾಗಿದ್ದಾರೆ. ಪರಿಹಾರಕ್ಕಾಗಿ ಹತ್ತಿ, ಮೆಣಸಿನಕಾಯಿ, ಮೆಕ್ಕೆಜೋಳ ಬೆಳೆದ ರೈತರಿಂದ ಆಗ್ರಹಿಸಿದ್ದಾರೆ.

ಬಿರುಗಾಳಿಗೆ ವಾಲಿದ ಸಿಗ್ನಲ್ ಕಂಬ!

ಬಿರುಗಾಳಿಗೆ ಸಿಗ್ನಲ್‌ ಕಂಬ ವಾಲಿದ ಘಟನೆ ಗದಗ ನಗರದ ಮುಳಗುಂದ ನಾಕಾದ ಸಿಗ್ನಲ್‌ನಲ್ಲಿ ಘಟನೆ ನಡೆದಿದೆ. ವಾಹನಗಳ ಓಡಾಡುವ ಸಂದರ್ಭದಲ್ಲಿ ಕಂಬ ವಾಲಿದ್ದು, ಸವಾರರು ಕಕ್ಕಾಬಿಕ್ಕಿಯಾದರು. ತಕ್ಷಣ ಅಲರ್ಟ್ ಟ್ರಾಫಿಕ್ ಪೊಲೀಸರು ಬ್ಯಾರಿಕೆಡ್ ಹಾಕಿ ಪರ್ಯಾಯ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಸ್ಥಳಕ್ಕೆ ಟ್ರಾಫಿಕ್ ಪಿಎಸ್ಐ ಶಕುಂತಲಾ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಾಳೆಗೂ ಇರಲಿದೆ ಮಳೆ ಅಬ್ಬರ

ನಾಳೆ ಶುಕ್ರವಾರ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ನಿರಂತರ ಗಾಳಿಯ ವೇಗ 40-50 ಕಿ.ಮೀ ಬೀಸುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : 23 ಜಿಲ್ಲೆಗಳಲ್ಲಿ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಸುಮಾರು 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬುಧವಾರ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗಲಿದೆ (Heavy Rain News) ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲೂ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ಯುವಕನಿಗೆ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ ಸೇರಿದಂತೆ ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಂದುವರಿದ ಮಳೆ ಅವಾಂತರ; ನಾಳೆ ಒಳನಾಡು, ಕರಾವಳಿಯಲ್ಲಿ ಅಬ್ಬರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ಮುಂದುವರಿದಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಕೊಪ್ಪಳ, ತುಮಕೂರು, ವಿಜಯಪುರ ಸುತ್ತಮುತ್ತ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಮೀನುಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನಾಳೆ ಬುಧವಾರ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಧರೆಗುರುಳಿದ ಮರ

ಇನ್ನೂ ಮಂಗಳವಾರವೂ ಮಳೆ ಅವಾಂತರ ಮುಂದುವರಿದಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ವೇಳೆಗೆ ಹಲವೆಡೆ ಮಳೆಯು ಅಬ್ಬರಿಸಿತ್ತು. ವಿಧಾನಸೌಧ, ಶಿವಾಜಿನಗರ, ಕಬ್ಬನ್‌ಪಾರ್ಕ್‌,ಕಸ್ತೂರಬಾ ರಸ್ತೆ ಸೇರಿದಂತೆ ಮೆಜೆಸ್ಟಿಕ್‌ ಸುತ್ತಮುತ್ತ ಮಳೆಯಾಗಿದೆ. ಸದಾಶಿವನಗರ ಪೊಲೀಸ್ ಠಾಣೆ ಮುಂಭಾಗ ಮರವೊಂದು ಧರೆಗುರುಳಿದೆ. ಮರ ಬಿದ್ದ ಪರಿಣಾಮ ರಸ್ತೆಯಲ್ಲಿ ನಿಂತಿದ್ದ ಒಂದು ಕಾರು ಜಖಂಗೊಂಡಿದೆ. ಬಿಬಿಎಂಪಿ ಸಿಬ್ಬಂದಿ ಬರಲು ತಡವಾದ ಹಿನ್ನೆಲೆಯಲ್ಲಿ ಪೊಲೀಸರಿಂದಲೇ ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಬೃಹತ್ ಮರ ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಗ್ರಾಮಕ್ಕೆ ನುಗ್ಗಿದ ಹಳ್ಳದ ನೀರು

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮುದೇನೂರು ಗ್ರಾಮದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದವು. ಮಾರಾಟವಾಗಬೇಕಿದ್ದ ತರಕಾರಿಗಳು ಕೊಚ್ಚಿಹೋಗಿದ್ದು ಕಂಡು ವ್ಯಾಪಾರಸ್ಥರು ಕಣ್ಣೀರು ಹಾಕಿದರು. ಕೊಪ್ಪಳದ ಕುಷ್ಟಗಿ ತಾಲೂಕಿನ ಅಡವಿಬಾವಿ ಗ್ರಾಮದ ಕೊಳ್ಳದ ಅಮರೇಶ್ವರ ದೇವಸ್ಥಾನ ಜಲಾವೃತಗೊಂಡಿತ್ತು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದಲ್ಲದೇ ಜುಮಲಾಪುರದ ಸರಕಾರಿ ಪ್ರಾಥಮಿಕ ಶಾಲಾ ಆವರಣ ನದಿಯಂತಾಗಿತ್ತು.

ವಿಜಯನಗರದ ಹಂಪಿಯಲ್ಲೂ ಉತ್ತಮ ಮಳೆಯಾಗಿದೆ. ಹೊಸಪೇಟೆ ತಾಲೂಕಿನ ಹಂಪಿ ಸುತ್ತಮುತ್ತಲಿನ ಪ್ರದೇಶದ ಬಾಳೆ ತೋಟಕ್ಕೆ ಮಳೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು. ಹೊಸಪೇಟೆ ತಾಲೂಕಿನ ಗುಂಡ್ಲಕೇರಿಯ ಬಳಿ ಇರುವ ಕಾಲುವೆಯ ಸೇತುವೆ ಮೇಲೆ ನೀರು ಹರಿದಿದೆ. ಸೀತಾರಾಮ್ ತಾಂಡ- ಕಮಲಾಪುರ ರಸ್ತೆಯ ಮಧ್ಯದ ಸೇತುವೆ, ಹಗರಿಬೊಮ್ಮನ ಹಳ್ಳಿ ತಾಲೂಕಿನ ಮುತ್ಕೂರು- ವಲ್ಲಭಾಪುರ ಸೇತುವೆ ಮುಳುಗಡೆಯಾಗಿದೆ.

ಹೊಸಪೇಟೆ ತಾಲೂಕಿನ ಭಾಗದ ಗ್ರಾಮಗಳಲ್ಲಿ ಭಾರೀ ಮಳೆಗೆ ಹತ್ತಿ, ಮೆಣಸಿನ ಕಾಯಿ ಬೆಳೆಗಳು ನೀರಿಗೆ ಆಹುತಿಯಾಗಿವೆ. ಧರ್ಮಸಾಗರ ಗ್ರಾಮದ ನಾಯಕರ ಹುಲಗಪ್ಪ ಎಂಬವರಿಗೆ ಸೇರಿದ ಜಮೀನಿನಲ್ಲಿ ಬೆಳೆದ ಬೆಳೆಯು ಮಳೆಗೆ ಕೊಚ್ಚಿ ಹೋಗಿದೆ. ರೈತ ನಾಯಕರ ಹುಲಗಪ್ಪ ಸಾಲಸೊಲ ಮಾಡಿ ಬೆಳೆಯನ್ನು ಬೆಳೆದಿದ್ದರು. ಇದೀಗ ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ಜಮೀನುಗಳಿಗೆ ನೀರು ನುಗ್ಗಿದೆ.

ಇದನ್ನೂ ಓದಿ: Celina Jaitley: ಮರ್ಮಾಂಗ ತೋರಿಸಿದ ದುಷ್ಟ; ಟೀಕೆಗೆ ಒಳಗಾದದ್ದು ನಾನು: ಕರಾಳ ನೆನಪು ಬಿಚ್ಚಿಟ್ಟ ನಟಿ

ತುಮಕೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಒಂದೇ ದಿನಕ್ಕೆ ಜಯಮಂಗಲಿ ನದಿ ತುಂಬಿ ಹರಿದಿದೆ. ಪರಿಣಾಮ ಮಧುಗಿರಿ ತಾಲ್ಲೂಕಿನ ವೀರೇನಹಳ್ಳಿ -ಕಾಳೇನಹಳ್ಳಿ ರಸ್ತೆ ಜಲಾವೃತಗೊಂಡಿತ್ತು. ತುಮಕೂರಿನ ದೇವರಾಯನದುರ್ಗ ತಪ್ಪಲಲ್ಲಿ ಹುಟ್ಟುವ ಜಯಮಂಗಲಿ ನದಿ, ಕೊರಟಗೆರೆ, ಮಧುಗಿರಿ ಮಾರ್ಗವಾಗಿ ಆಂಧ್ರದ ಪರ್ಗಿ ಕೆರೆಗೆ ಸೇರಲಿದೆ. ಕಳೆದ ಎರಡು ವರ್ಷಗಳ ಹಿಂದೆ ಸುರಿದ ಮಳೆಗೆ ತುಂಬಿ ಹರಿದಿದ್ದ ಜಯಮಂಗಲಿ ನದಿ ಆ ನಂತರ ನೀರು ಖಾಲಿಯಾಗಿತ್ತು. ಇದೀಗ ರಾತ್ರಿ ಸುರಿದ ಧಾರಕಾರ ಮಳೆಗೆ ತುಂಬಿ ಹರಿಯುತ್ತಿದೆ. ಕೊರಟಗೆರೆ ಪಟ್ಟಣದ ಕನಕ ವೃತ್ತ ಬಳಿ 15ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿತ್ತು. ಶಿವಗಂಗಾ ಥಿಯೇಟರ್ ಬಳಿರುವ ಸಿಮೆಂಟ್ ಅಂಗಡಿಗೆ ಮುಳುಗಿ 200 ಹೆಚ್ಚು ಸಿಮೆಂಟ್ ಮೂಟೆಗಳು ನೀರುಪಾಲಾಗಿದ್ದವು.

ವರುಣನ ಆರ್ಭಟಕ್ಕೆ ಬಳ್ಳಾರಿಯ ಕಂಪ್ಲಿಯ ಅನ್ನ ದಾತರು ನಲುಗಿ ಹೋಗಿದ್ದಾರೆ. ಮಳೆ ನೀರು ನುಗ್ಗಿ ಜಮೀನುಗಳು ಹಳ್ಳಗಳಂತೆ ಗೋಚರಿಸುತ್ತಿದೆ. ಕಂಪ್ಲಿ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲೆಡೆ ಬೆಳಗಿನ ಜಾವ ಮಳೆಯಾಗಿದೆ. ಕಂಪ್ಲಿ ಪಟ್ಟಣ, ರಾಮಸಾಗರ, ದೇವಲಾಪುರ, ಮೆಟ್ರಿ, ದೇವಸಮುದ್ರ, ನಂ.10 ಮುದ್ದಾಪುರ, ಸಣಾಪುರ, ಬೆಳಗೋಡ್ ಹಾಳ್ ಸೇರಿ ರೈತರ ಜಮೀನುಗಳಿಗೆ ನೀರು ನುಗ್ಗಿದೆ. ಪರಿಣಾಮ ಭತ್ತ, ಹೂ, ಬಾಳೆ, ಕಬ್ಬು, ಸೊಪ್ಪು ಸೇರಿದಂತೆ ನೂರಾರು ಹೆಕ್ಟರ್ ಬೆಳೆ ಜಲಾವೃತ‌ಗೊಂಡು ಹಾಳಾಗಿದೆ. ಲಕ್ಷಾಂತರ ರೂ ವ್ಯಯಿಸಿ ಬಿತ್ತನೆ ಮಾಡಿರುವ ರೈತರಲ್ಲಿ ಬೆಳೆ ನಷ್ಟದ ಆತಂಕ ಹೆಚ್ಚಾಗಿದೆ.

ರಾಜ್ಯ ಹೆದ್ದಾರಿ-29ರ ಮಾರೆಮ್ಮ ದೇವಸ್ಥಾನ ಬಳಿ ನೀರಿನ ರಭಸಕ್ಕೆ ರಸ್ತೆಯ ಕೆಳಭಾಗ ಕೊಚ್ಚಿ ಹೋಗಿದೆ. ಜವುಕು-ಜೀರಿಗನೂರು ಮತ್ತು ಚಿನ್ನಾಪುರ-ಮೆಟ್ರಿ ಸೇತುವೆ ಮೇಲೆ ನೀರು ಹರಿದು ‌ಸಂಪರ್ಕ ಕಡಿತಗೊಂಡಿದೆ. ದೇವಲಾಪುರ ಗ್ರಾಮದ ರಾಜನ ಮಟ್ಟಿಯ ಚರಂಡಿ ಭರ್ತಿಯಾಗಿ ಮನೆಗಳಿಗೆ ನೀರು ನುಗ್ಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಇಂದು ಭಾರಿ ಮಳೆ ಎಚ್ಚರಿಕೆ

Karnataka Weather Forecast : ಮುಕ್ಕಾಲು ಕರ್ನಾಟಕಕ್ಕೆ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದ ಕರಾವಳಿ ಪ್ರದೇಶದಿಂದ ಮಾಲ್ಡಿವ್ಸ್ ದ್ವೀಪದವರೆಗೆ 1.5 ಮತ್ತು 1.8ಕಿ.ಮೀ ಟ್ರಪ್ ಎದ್ದಿದೆ. ಇದರ ಪ್ರಭಾವದಿಂದಾಗಿ ಇಂದು ರಾಜ್ಯಾದ್ಯಂತ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain news) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather Forecast) ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲೂ ಮಳೆಯು ಅಬ್ಬರಿಸಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.

karnataka weather Forecast
karnataka weather Forecast

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಮತ್ತು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

karnataka weather Forecast
karnataka weather Forecast

ಆರೆಂಜ್ ಅಲರ್ಟ್‌

ಇಂದು ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
PM Modi Poland Visit
ವಿದೇಶ39 seconds ago

PM Modi Poland Visit: ಯುದ್ಧಭೂಮಿಯಲ್ಲಿ ಯಾವ ಸಮಸ್ಯೆಯೂ ಬಗೆಹರಿಯಲ್ಲ; ರಷ್ಯಾ-ಉಕ್ರೇನ್‌ ಸಂಘರ್ಷದ ಬಗ್ಗೆ ಪ್ರಧಾನಿ ಮೋದಿ ರಿಯಾಕ್ಟ್‌

Viral Video
Latest11 mins ago

Viral Video: ಸೈಕಲ್‌ ಮೇಲೆ ಶಾಲೆಗೆ ಹೋಗುತ್ತಿದ್ದ ಮಕ್ಕಳಿಬ್ಬರಿಗೆ ವಿದ್ಯುತ್‌ ಶಾಕ್‌; ಕ್ಯಾಮೆರಾದಲ್ಲಿ ಸೆರೆಯಾಯ್ತು ಘೋರ ದೃಶ್ಯ

Viral Video
ಸಿನಿಮಾ22 mins ago

Viral Video: ‘ಶೀಲಾ ಕಿ ಜವಾನಿ’ ಹಾಡಿಗೆ ಸಖತ್ ಆಗಿ ಸೊಂಟ ಬಳುಕಿಸಿದ ಬೆಡಗಿ! ವಿಡಿಯೊ ನೋಡಿ

Kannada New Movie
ಬೆಂಗಳೂರು25 mins ago

Kannada New Movie: ವಿನೋದ್ ಪ್ರಭಾಕರ್ ಅಭಿನಯದ ʼಬಲರಾಮನ ದಿನಗಳುʼ ಚಿತ್ರ ತಂಡದಿಂದ ಬಿಗ್ ಅನೌನ್ಸ್‌ಮೆಂಟ್!

HD Kumaraswamy
ಕರ್ನಾಟಕ28 mins ago

HD Kumaraswamy: ಕಪ್ಪುಚುಕ್ಕೆ ಇಲ್ಲವೆನ್ನುವ ಸಿದ್ದರಾಮಯ್ಯ ವೈಟ್ನರ್ ಉಜ್ಜಿ ʼಕಪ್ಪುಚುಕ್ಕೆʼ ತೆಗೆದಿದ್ದೇಕೆ?; ಕುಮಾರಸ್ವಾಮಿ ಪ್ರಶ್ನೆ

MonkeyPox
ಆರೋಗ್ಯ43 mins ago

MonkeyPox: ತೀವ್ರಗೊಳ್ಳುತ್ತಿದೆ ಮಂಕಿ ಪಾಕ್ಸ್; ಮತ್ತೊಮ್ಮೆ ಲಾಕ್‌ಡೌನ್ ಘೋಷಣೆ?

Monsoon Fashion
ಫ್ಯಾಷನ್45 mins ago

Monsoon Fashion: ಟೀನೇಜ್‌ ಹುಡುಗಿಯರ ಮಾನ್ಸೂನ್‌ ಸ್ಟೈಲಿಂಗ್‌‌‌ಗೆ ಸಾಥ್‌ ನೀಡುತ್ತಿರುವ 3 ಫ್ಯಾಷನ್‌ ವೇರ್ಸ್

Home Remedies For Cough And Cold
ಆರೋಗ್ಯ53 mins ago

Home Remedies: ಮಕ್ಕಳನ್ನು ಕಾಡುವ ಶೀತ-ಕೆಮ್ಮಿಗೆ ಮನೆಯಲ್ಲೇ ಇದೆ ಉಪಶಮನ

kolkata Doctor murder case
ದೇಶ1 hour ago

Kolkata Doctor Murder Case: ಟ್ರೈನಿ ವೈದ್ಯೆ ಕೊಲೆ ಪ್ರಕರಣ- ಪ್ರಧಾನಿ ಮೋದಿಗೆ ದಿಢೀರ್‌ ಪತ್ರ ಬರೆದ ಮಮತಾ ಬ್ಯಾನರ್ಜಿ

rishab shetty
ಸಿನಿಮಾ1 hour ago

Rishab Shetty : ಕಂಬಳ ಬಳಿಕ ಕಾಂತಾರ- 2ನಲ್ಲಿ ಕಳರಿ ಪಯಟ್ಟು ಪ್ರದರ್ಶನಕ್ಕೆ ಸಜ್ಜಾದ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌