Jammu-Kashmir Election: ರಂಗೇರಿದ ಚುನಾವಣೆ- ಫಾರೂಖ್‌ ಭೇಟಿಯಾದ ರಾಹುಲ್‌, ಖರ್ಗೆ; ಕಾಂಗ್ರೆಸ್‌-NC ಮೈತ್ರಿ ಕನ್ಫರ್ಮ್‌ - Vistara News

ದೇಶ

Jammu-Kashmir Election: ರಂಗೇರಿದ ಚುನಾವಣೆ- ಫಾರೂಖ್‌ ಭೇಟಿಯಾದ ರಾಹುಲ್‌, ಖರ್ಗೆ; ಕಾಂಗ್ರೆಸ್‌-NC ಮೈತ್ರಿ ಕನ್ಫರ್ಮ್‌

Jammu-Kashmir Election: ಗುಪ್ಕಾರ್‌ ರಸ್ತೆಯಲ್ಲಿರುವ ಫಾರೂಖ್‌ ಅಬ್ದುಲ್ಲಾ ಅವರ ನಿವಾಸದಲ್ಲಿ ಈ ಸಭೆ ನಡೆದಿದ್ದು, ಎನ್‌ಸಿ ಪಕ್ಷದ ಉಪಾಧ್ಯಕ್ಷ ಓಮರ್‌ ಅಬ್ದುಲ್ಲಾ ಮತ್ತು ಸಿಪಿಐ(ಎಂ) (ಎಂವೈ) ತಾರಿಗಾಮಿ ಕೂಡ ಭಾಗಿಯಾಗಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಫಾರೂಖ್‌ ಅಬ್ದುಲ್ಲಾ, ಸಭೆ ಅತ್ಯಂತ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು. ಮೈತ್ರಿಯು ಹಾದಿಯಲ್ಲಿದ್ದೇವೆ. ಮತ್ತು ಅದು ದೇವರ ದಯೆಯಿಂದ ಉತ್ತಮವಾಗಿ ಮುಂದುವರಿಯುತ್ತದೆ. ಇಂದು ಸಂಜೆಯೊಳಗೆ ಎಲ್ಲಾ ಅಂತಿಮಗೊಳ್ಳಲಿದ್ದು, ಎಲ್ಲಾ 90 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ರಾಜ್ಯದ ಜನ ನಮ್ಮ ಜೊತೆ ಇರುತ್ತಾರೆ ಎಂಬ ನಂಬಿಕೆ ನಮಗಿದೆ ಎಂದು ಹೇಳಿದ್ದಾರೆ.

VISTARANEWS.COM


on

Jammu-Kashmir Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ: ಬರೋಬ್ಬರಿ ಹತ್ತು ವರ್ಷಗಳ ನಂತರ ಚುನಾವಣೆ ಘೋಷಣೆಯಾಗಿರುವ ಜಮ್ಮು ಮತ್ತು ಕಾಶ್ಮೀರ(Jammu-Kashmir Election)ದಲ್ಲಿ ಚುನಾವಣೆ ಕಾವು ಶುರುವಾಗಿದೆ. ಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಮತ್ತು ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi) ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಶ್ರೀನಗರಕ್ಕೆ ಬಂದಿಳಿದ ಉಭಯ ನಾಯಕರು ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷ(NC) ಅಧ್ಯಕ್ಷ ಫಾರೂಖ್‌ ಅಬ್ದುಲ್ಲಾ ಅವರನ್ನು ಭೇಟಿ ಮಾಡಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ರಚನೆ ಬಗ್ಗೆ ಚರ್ಚೆ ನಡೆಸಿದ್ದಾರೆ.

ಗುಪ್ಕಾರ್‌ ರಸ್ತೆಯಲ್ಲಿರುವ ಫಾರೂಖ್‌ ಅಬ್ದುಲ್ಲಾ ಅವರ ನಿವಾಸದಲ್ಲಿ ಈ ಸಭೆ ನಡೆದಿದ್ದು, ಎನ್‌ಸಿ ಪಕ್ಷದ ಉಪಾಧ್ಯಕ್ಷ ಓಮರ್‌ ಅಬ್ದುಲ್ಲಾ ಮತ್ತು ಸಿಪಿಐ(ಎಂ) (ಎಂವೈ) ತಾರಿಗಾಮಿ ಕೂಡ ಭಾಗಿಯಾಗಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಫಾರೂಖ್‌ ಅಬ್ದುಲ್ಲಾ, ಸಭೆ ಅತ್ಯಂತ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು. ಮೈತ್ರಿಯು ಹಾದಿಯಲ್ಲಿದ್ದೇವೆ. ಮತ್ತು ಅದು ದೇವರ ದಯೆಯಿಂದ ಉತ್ತಮವಾಗಿ ಮುಂದುವರಿಯುತ್ತದೆ. ಇಂದು ಸಂಜೆಯೊಳಗೆ ಎಲ್ಲಾ ಅಂತಿಮಗೊಳ್ಳಲಿದ್ದು, ಎಲ್ಲಾ 90 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ರಾಜ್ಯದ ಜನ ನಮ್ಮ ಜೊತೆ ಇರುತ್ತಾರೆ ಎಂಬ ನಂಬಿಕೆ ನಮಗಿದೆ ಎಂದು ಹೇಳಿದ್ದಾರೆ.

ಖರ್ಗೆ ಅವರು ಎಕ್ಸ್‌ನಲ್ಲಿ ಸಭೆಯ ಫೊಟೋಗಳನ್ನು ಹಂಚಿಕೊಂಡಿದ್ದಾರೆ. ನಾವು ರಾಹುಲ್ ಗಾಂಧಿಯವರೊಂದಿಗೆ ಇಂದು ಶ್ರೀನಗರದಲ್ಲಿ ಶ್ರೀ ಫಾರೂಕ್ ಅಬ್ದುಲ್ಲಾ ಮತ್ತು ಜೆಕೆಎನ್‌ಸಿ ಉಪಾಧ್ಯಕ್ಷ ಶ್ರೀ ಒಮರ್ ಅಬ್ದುಲ್ಲಾ ಅವರನ್ನು ಸೌಜನ್ಯಯುತವಾಗಿ ಭೇಟಿ ಮಾಡಿ ಮೈತ್ರಿ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಆರ್ಟಿಕಲ್‌ 370 ರದ್ದುಗೊಳಿಸಿದ ಬಳಿಕ ಅಂದರೆ ಬರೋಬ್ಬರಿ ಹತ್ತು ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಜಮ್ಮು-ಕಾಶ್ಮೀರ ಮೂರು ಹಂತಗಳಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಸೆ. 18, ಸೆ.15 ಮತ್ತು ಅಕ್ಟೋಬರ್‌ 1 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್‌ 4 ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: Assembly Election Date: ಆರ್ಟಿಕಲ್‌ 370 ರದ್ಧತಿ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮೊದಲ ಚುನಾವಣೆಗೆ ಮುಹೂರ್ತ ಫಿಕ್ಸ್‌; ದಿನಾಂಕ ಘೋಷಿಸಿದ EC

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Fixed Deposits: ಪೋಸ್ಟ್ ಆಫೀಸ್ ಎಫ್‌ಡಿ; ಬಡ್ಡಿ ದರ ಎಷ್ಟು, ಏನೆಲ್ಲ ಲಾಭ?

ಕಷ್ಟಪಟ್ಟುಗಳಿಸಿದ ಹಣವನ್ನು ಹೂಡಿಕೆ ಮಾಡಲು ಸುರಕ್ಷಿತ ಆಯ್ಕೆಯನ್ನು ಹುಡುಕುತ್ತಿದ್ದರೆ ಭದ್ರತೆಯನ್ನು ಒದಗಿಸುವ ಯೋಜನೆಗಿಂತ ಉತ್ತಮವಾದದ್ದು ಯಾವುದೂ ಇಲ್ಲ. ಅಂಚೆ ಕಚೇರಿಯ ಫಿಕ್ಸೆಡ್ ಡೆಪಾಸಿಟ್‌ನಲ್ಲಿ (Fixed Deposits) ಹೂಡಿಕೆ ಮಾಡಿದರೆ ಉತ್ತಮ ಆದಾಯದೊಂದಿಗೆ ಸಾಕಷ್ಟು ಪ್ರಯೋಜನವನ್ನು ಪಡೆಯಬಹುದು. ಈ ಕುರಿತ ಸರಳ ಮಾಹಿತಿ ಇಲ್ಲಿದೆ.

VISTARANEWS.COM


on

By

Fixed Deposits
Koo

ಸುರಕ್ಷಿತ ಮತ್ತು ವಿಶ್ವಾಸಾರ್ಹ ಹೂಡಿಕೆಯಾಗಿ ಎಲ್ಲರ ಗಮನ ಸೆಳೆಯುವ ಪೋಸ್ಟ್ ಆಫೀಸ್‌ನ (post office) ಫಿಕ್ಸೆಡ್ ಡೆಪಾಸಿಟ್‌ಗಳನ್ನು (Fixed Deposits) ಟರ್ಮ್ ಡಿಪಾಸಿಟ್‌ಗಳು (term deposits) ಎಂದೂ ಕರೆಯಲಾಗುತ್ತದೆ. ಇದೊಂದು ಅದ್ಭುತ ಯೋಜನೆಯಾಗಿದ್ದು, ಹೂಡಿಕೆ ಬಗ್ಗೆ ಯೋಚನೆ ಮಾಡುತ್ತಿದ್ದರೆ ಇದರಲ್ಲಿ ಹೂಡಿಕೆ (investment) ಮಾಡಬಹುದು. ಅದಕ್ಕೂ ಮೊದಲು ಇದರ ಬಗ್ಗೆ ಸಂಪೂರ್ಣ ತಿಳಿದುಕೊಂಡರೆ ಒಳ್ಳೆಯದು.

ಪೋಸ್ಟ್ ಆಫೀಸ್ ಎಫ್‌ಡಿ ಅಥವಾ ಟರ್ಮ್ ಡೆಪಾಸಿಟ್‌ಗಳು ಇಂಡಿಯಾ ಪೋಸ್ಟ್ ಮೂಲಕ ಉಳಿತಾಯ ಮಾಡುವ ಸುರಕ್ಷಿತ ಮತ್ತು ಸುಲಭವಾದ ಮಾರ್ಗಗಳಾಗಿವೆ.

ಬ್ಯಾಂಕ್‌ಗಳು ಎಲ್ಲ ಕಡೆ ಲಭ್ಯವಿರುವುದಿಲ್ಲ. ಹೀಗಾಗಿ ಹತ್ತಿರದ ಪೋಸ್ಟ್ ಆಫೀಸ್‌ನಲ್ಲಿ ಸಿಗುವ ಕೆಲವೊಂದು ಪ್ರಯೋಜನಗಳನ್ನು ನಾವು ಸುಲಭವಾಗಿ ಪಡೆಯಬಹುದು. ಪೋಸ್ಟ್ ಆಫೀಸ್‌ನಲ್ಲಿ ಲಭ್ಯವಿರುವ ಎಫ್‌ಡಿ ಯೋಜನೆಯು ಠೇವಣಿದಾರರಿಗೆ ಹೆಚ್ಚಿನ ಬಡ್ಡಿದರದೊಂದಿಗೆ ತಮ್ಮ ಹಣವನ್ನು ಉಳಿಸಲು ಅವಕಾಶ ನೀಡುತ್ತದೆ. ಪೋಸ್ಟ್ ಆಫೀಸ್ ಎಫ್‌ಡಿ ಯೋಜನೆಯು ಗ್ರಾಮೀಣ ಜನರಲ್ಲಿ ವಿಶೇಷವಾಗಿ ಅಚ್ಚುಮೆಚ್ಚಿನದ್ದಾಗಿದೆ. ಯಾಕೆಂದರೆ ಇದು ಭಾರತದಲ್ಲಿನ ಅಗ್ರ ಸ್ಥಿರ ಠೇವಣಿ ಪೂರೈಕೆದಾರರಲ್ಲಿ ಒಂದಾಗಿದೆ.

2024ರ ಬಡ್ಡಿ ದರಗಳು

ಪೋಸ್ಟ್ ಆಫೀಸ್‌ನಲ್ಲಿ ಎಫ್‌ಡಿ ಬಡ್ಡಿ ದರ ಇಂತಿದೆ. 1 ವರ್ಷಕ್ಕೆ ಶೇ. 6, 1 ವರ್ಷ 1 ದಿನದಿಂದ 2 ವರ್ಷಗಳ ವರೆಗೆ ಶೇ. 7, 2 ವರ್ಷ 1 ದಿನದಿಂದ 3 ವರ್ಷಗಳ ವರೆಗೆ ಶೇ. 7.1, 3 ವರ್ಷಗಳಿಂದ 5 ವರ್ಷಗಳವರೆಗೆ ಶೇ. 7.5ರಷ್ಟು ಬಡ್ಡಿ ದರವನ್ನು ನೀಡಲಾಗುತ್ತದೆ.

ಪ್ರಯೋಜನಗಳು ಏನೇನು?

ಪೋಸ್ಟ್ ಆಫೀಸ್‌ನ ಎಫ್‌ಡಿಯಲ್ಲಿ ಒಂದು ವರ್ಷದಿಂದ ಐದು ವರ್ಷಗಳವರೆಗೆ ಹೂಡಿಕೆಯ ಅವಧಿಯನ್ನು ಆಯ್ಕೆ ಮಾಡಬಹುದು. ಒಬ್ಬ ವ್ಯಕ್ತಿಯು ಯಾವುದೇ ಅಂಚೆ ಕಚೇರಿಯಲ್ಲಿ ತನಗೆ ಬೇಕಾದಷ್ಟು ಎಫ್‌ಡಿ ಖಾತೆಗಳನ್ನು ತೆರೆಯಬಹುದು. ಖಾತೆಗಳನ್ನು 10 ವರ್ಷ ಮತ್ತು ಮೇಲ್ಪಟ್ಟವರು ಯಾರಾದರೂ ತೆರೆಯಬಹುದು. ಅಂತಹ ಖಾತೆಗಳನ್ನು 18 ವರ್ಷ ತುಂಬಿದ ಅನಂತರ ಅಪ್ರಾಪ್ತರ ಹೆಸರಿಗೆ ವರ್ಗಾಯಿಸಬಹುದು.

ಠೇವಣಿ ಮಾಡಬೇಕಾದ ಕನಿಷ್ಠ ಮೊತ್ತ 200 ರೂ. ಆಗಿದ್ದು, ಗರಿಷ್ಠ ಮೊತ್ತಕ್ಕೆ ಮಿತಿ ಇಲ್ಲ. ಇದರಲ್ಲಿ ಜಂಟಿ ಖಾತೆಯನ್ನು ತೆರೆಯಲು ಅವಕಾಶವಿದೆ. ಅಗತ್ಯವಿರುವಂತೆ ಏಕ ಮತ್ತು ಜಂಟಿ ಖಾತೆ ನಡುವೆ ಬದಲಾಯಿಸಲೂಬಹುದು.
5 ವರ್ಷಗಳ ಹೂಡಿಕೆ ಮಾಡಿರುವ ಠೇವಣಿಗಳಿಗೆ ತೆರಿಗೆ ಕಾಯಿದೆಯ ಸೆಕ್ಷನ್ 80ಸಿ ಅಡಿಯಲ್ಲಿ ತೆರಿಗೆ ವಿನಾಯಿತಿಯನ್ನೂ ಪಡೆಯಬಹುದು. ಖಾತೆಗಳನ್ನು ಸುಲಭವಾಗಿ ಒಂದು ಅಂಚೆ ಕಚೇರಿಯಿಂದ ಇನ್ನೊಂದು ಅಂಚೆ ಕಚೇರಿಗೆ ವರ್ಗಾಯಿಸಬಹುದಾಗಿದೆ. ಎಲ್ಲ ಖಾತೆಗಳು ಆಯಾ ಕಾಲದ ಬಡ್ಡಿ ದರಗಳೊಂದಿಗೆ ಮುಕ್ತಾಯದ ಸಮಯದಲ್ಲಿ ಸ್ವಯಂ ಚಾಲಿತವಾಗಿ ಮರುಸಮತೋಲನಗೊಳ್ಳುತ್ತವೆ.

ಇದನ್ನೂ ಓದಿ: National Pension Scheme: ಎನ್‌ಪಿಎಸ್‌ನಲ್ಲಿ ದಿನಕ್ಕೆ 200 ರೂ. ಹೂಡಿಕೆ ಮಾಡಿದರೆ ಸಿಗುವ ಮಾಸಿಕ ಪಿಂಚಣಿ ಎಷ್ಟು ಗೊತ್ತೇ?

ಅಗತ್ಯವಿರುವ ದಾಖಲೆಗಳು ಏನೇನು?

ಭಾರತೀಯ ನಿವಾಸಿಗಳಿಗೆ ಒಂಟಿಯಾಗಿ ಅಥವಾ ಜಂಟಿಯಾಗಿ, ಪೋಷಕರ ಆರೈಕೆಯಲ್ಲಿ ಅಪ್ರಾಪ್ತ ವಯಸ್ಕರು ಈ ಖಾತೆಗಳನ್ನು ತೆರೆಯಬಹುದು. ಆದರೆ ಎನ್‌ಆರ್‌ಐಗಳು ಮತ್ತು ಸಂಸ್ಥೆಗಳಿಗೆ ಈ ಖಾತೆ ತೆರೆಯಲು ಅವಕಾಶವಿಲ್ಲ.

ಆಧಾರ್, ಪಾನ್ ಕಾರ್ಡ್ ಗುರುತಿನ ಪುರಾವೆಯಾಗಿ, ವಿದ್ಯುತ್ ಬಿಲ್, ನೀರಿನ ಸಂಪರ್ಕ, ಪಾಸ್‌ಪೋರ್ಟ್ ಇತ್ಯಾದಿಗಳನ್ನು ವಿಳಾಸ ಪುರಾವೆಯಾಗಿ, ಸಾಕ್ಷಿ ಸಹಿಯೊಂದಿಗೆ ನಾಮಿನಿ ವಿವರಗಳನ್ನು ಒಳಗೊಂಡಂತೆ ದಾಖಲೆ ಪುರಾವೆಗಳನ್ನು ಒದಗಿಸಬಹುದು.

Continue Reading

ದೇಶ

Kolkata Doctor Murder Case: ಬರೋಬ್ಬರಿ 11ದಿನಗಳ ಬಳಿಕ ಮುಷ್ಕರ ಹಿಂಪಡೆದ ವೈದ್ಯರು

Kolkata Doctor Murder Case: ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿರುವ ಡಾ.ಆರ್‌.ಎಂ.ಎಲ್.ಆಸ್ಪತ್ರೆ ವೈದ್ಯರ ಸಂಘವು, ಸುಪ್ರೀಂಕೋರ್ಟ್​ ತಮ್ಮ ಬೇಡಿಕೆಗಳು ಮತ್ತು ಕಾಳಜಿಯನ್ನು ಅರ್ಥ ಮಾಡಿಕೊಂಡಿದೆ. ಕೋರ್ಟ್​ನ ಮೇಲಿನ ನಂಬಿಕೆಯಿಂದಾಗಿ ಮುಷ್ಕರ ಅಂತ್ಯಗೊಳಿಸುತ್ತಿದ್ದೇವೆ. ವೈದ್ಯರು ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. 11 ದಿನಗಳ ಮುಷ್ಕರ ಅಂತ್ಯವಾಗಲಿದೆ ಎಂದು ತಿಳಿಸಿದೆ.

VISTARANEWS.COM


on

kolkata Doctor murder case
Koo

ನವದೆಹಲಿ: ಕೊಲ್ಕತ್ತಾ ಟ್ರೈನಿ ವೈದ್ಯೆ ಕೊಲೆ ಅತ್ಯಾಚಾರ ಕೊಲೆ ಪ್ರಕರಣ(Kolkata Doctor Murder Case) ಖಂಡಿಸಿ ದೇಶವ್ಯಾಪಿ ವೈದ್ಯರು ಕಳೆದ 11 ದಿನಗಳಿಂದ ನಡೆಸುತ್ತಿರುವ ಮುಷ್ಕರವನ್ನು ಹಿಂಪಡೆದಿದ್ದಾರೆ(Doctors Strike Called Off). ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಸುಪ್ರೀಂಕೋರ್ಟ್‌(Supreme Court) ಭರವಸೆ ನೀಡಿರುವ ಬೆನ್ನಲ್ಲೇ ವೈದ್ಯರು ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ. ಅಲ್ಲದೇ ಆಗಸ್ಟ್ 23ರಂದು ಅಂದರೆ ನಾಳೆ ಬೆಳಿಗ್ಗೆ 8 ಗಂಟೆಯಿಂದ ಸೇವೆಯನ್ನು ಮರು ಆರಂಭಿಸಲಾಗುವುದು ಎಂದು ವೈದ್ಯಕೀಯ ಸಂಘ ತಿಳಿಸಿದೆ.

ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿರುವ ಡಾ.ಆರ್‌.ಎಂ.ಎಲ್.ಆಸ್ಪತ್ರೆ ವೈದ್ಯರ ಸಂಘವು, ಸುಪ್ರೀಂಕೋರ್ಟ್​ ತಮ್ಮ ಬೇಡಿಕೆಗಳು ಮತ್ತು ಕಾಳಜಿಯನ್ನು ಅರ್ಥ ಮಾಡಿಕೊಂಡಿದೆ. ಕೋರ್ಟ್​ನ ಮೇಲಿನ ನಂಬಿಕೆಯಿಂದಾಗಿ ಮುಷ್ಕರ ಅಂತ್ಯಗೊಳಿಸುತ್ತಿದ್ದೇವೆ. ವೈದ್ಯರು ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. 11 ದಿನಗಳ ಮುಷ್ಕರ ಅಂತ್ಯವಾಗಲಿದೆ ಎಂದು ತಿಳಿಸಿದೆ.

ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವ ಮೂಲಕ ಕೋಲ್ಕತ್ತಾ ಹೈಕೋರ್ಟ್‌ ನಮ್ಮ ಮೊದಲ ಬೇಡಿಕೆಯನ್ನು ಈಡೇರಿಸಿದೆ. ಬಳಿಕ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಕೊಲೆ ಕೇಸ್​ ಅನ್ನು ತನಿಖೆ ನಡೆಸುತ್ತಿದೆ. ಹೀಗಾಗಿ ವೈದ್ಯರ ಮುಷ್ಕರವನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದು ದೆಹಲಿಯ ಏಮ್ಸ್​ ಆಸ್ಪತ್ರೆಯ ಜನರಲ್​ ಸೆಕ್ರೆಟರಿ ರಘುನಂದನ್​​ ದೀಕ್ಷಿತ್​ ಅವರು ಹೇಳಿದ್ದಾರೆ.

ಇದನ್ನೂ ಓದಿ: Kolkata Doctor Murder Case: ಟ್ರೈನಿ ವೈದ್ಯೆ ಕೊಲೆ ಪ್ರಕರಣ- ಪ್ರಧಾನಿ ಮೋದಿಗೆ ದಿಢೀರ್‌ ಪತ್ರ ಬರೆದ ಮಮತಾ ಬ್ಯಾನರ್ಜಿ

Continue Reading

ವಿದೇಶ

PM Modi Poland Visit: ಯುದ್ಧಭೂಮಿಯಲ್ಲಿ ಯಾವ ಸಮಸ್ಯೆಯೂ ಬಗೆಹರಿಯಲ್ಲ; ರಷ್ಯಾ-ಉಕ್ರೇನ್‌ ಸಂಘರ್ಷದ ಬಗ್ಗೆ ಪ್ರಧಾನಿ ಮೋದಿ ರಿಯಾಕ್ಟ್‌

PM Modi Poland Visit: 2022ರಲ್ಲಿ ಉಕ್ರೇನ್ ಸಂಘರ್ಷದ ಸಂದರ್ಭದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ನೀವು ನೀಡಿದ ಸಹಾಯವನ್ನು ಭಾರತದ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದಕ್ಕಾಗಿ ನಾನು ಸರ್ಕಾರ ಮತ್ತು ಪೋಲೆಂಡ್ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದರು. ಇದೇ ವೇಳೆ ಪೋಲೆಂಡ್‌ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರಿಗೆ ಆತ್ಮೀಯ ಸ್ವಾಗತಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.

VISTARANEWS.COM


on

PM Modi Poland Visit
Koo

ವಾರ್ಸೋ: ಪೋಲೆಂಡ್‌ ಪ್ರವಾಸ(PM Modi Poland Visit)ದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಪ್ರಸ್ತುತ ನಡೆಯುತ್ತಿರುವ ರಷ್ಯಾ-ಉಕ್ರೇನ್‌(Russia-Ukraine War) ಯುದ್ಧದ ಬಗ್ಗೆ ಪ್ರತಿಕ್ರಿಯಿಸಿದ್ದು, ಯುದ್ಧ ಭೂಮಿಯಲ್ಲಿ ಯಾವುದೇ ಸಮಸ್ಯೆ ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಪುನರುಚ್ಛರಿಸಿದ್ದಾರೆ. ಇದೇ ವೇಳೆ ಅವರು 2022ರಲ್ಲಿ ಉಕ್ರೇನ್‌-ರಷ್ಯಾ ಯುದ್ಧದ ಸಂದರ್ಭದಲ್ಲಿ ಅಲ್ಲಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಸಹಾಯ ಮಾಡಿದ ಪೋಲೆಂಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

2022 ರಲ್ಲಿ ಉಕ್ರೇನ್ ಸಂಘರ್ಷದ ಸಂದರ್ಭದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ನೀವು ನೀಡಿದ ಸಹಾಯವನ್ನು ಭಾರತದ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದಕ್ಕಾಗಿ ನಾನು ಸರ್ಕಾರ ಮತ್ತು ಪೋಲೆಂಡ್ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದರು. ಇದೇ ವೇಳೆ ಪೋಲೆಂಡ್‌ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರಿಗೆ ಆತ್ಮೀಯ ಸ್ವಾಗತಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.

ಸುಂದರವಾದ ನಗರವಾದ ವಾರ್ಸಾದಲ್ಲಿ ನನಗೆ ಆತ್ಮೀಯ ಸ್ವಾಗತ ನೀಡಿದ ಪಿಎಂ ಟಸ್ಕ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನೀವು ದೀರ್ಘಕಾಲದವರೆಗೆ ಭಾರತದ ಸ್ನೇಹಿತರಾಗಿದ್ದೀರಿ ಮತ್ತು ಭಾರತ ಮತ್ತು ಪೋಲೆಂಡ್ ನಡುವಿನ ಸಂಬಂಧವನ್ನು ಹೆಚ್ಚಿಸಲು ನೀವು ದೊಡ್ಡ ಕೊಡುಗೆ ನೀಡಿದ್ದೀರಿ ಎಂದು ಅವರು ಹೇಳಿದರು.

ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಘರ್ಷಣೆಗಳ ಕುರಿತು, ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದ್ದು, ನಿಜಕ್ಕೂ ಆತಂಕಕಾರಿ ವಿಚಾರ ಎಂದು ಹೇಳಿದ್ದಾರೆ. ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಭಾರತ ದೃಢವಾಗಿ ನಂಬುತ್ತದೆ. ಯಾವುದೇ ಬಿಕ್ಕಟ್ಟಿನಲ್ಲಿ ಅಮಾಯಕರ ಜೀವಗಳನ್ನು ಕಳೆದುಕೊಳ್ಳುವುದು ಇಡೀ ಮಾನವಕುಲಕ್ಕೆ ದೊಡ್ಡ ಸವಾಲಾಗಿದೆ. ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಮರುಸ್ಥಾಪನೆಗಾಗಿ ನಾವು ಸಂಭಾಷಣೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತೇವೆ ಎಂದು ಅವರು ಹೇಳಿದರು.

ಬುಧವಾರ ಪೋಲೆಂಡ್‌ಗೆ ಬಂದಿಳಿದಿರುವ ಪ್ರಧಾನಿ ಮೋದಿ, ಪ್ರಸ್ತುತ ದೇಶಕ್ಕೆ ಅಧಿಕೃತ ಭೇಟಿಯಲ್ಲಿದ್ದಾರೆ. ಇದರ ನಂತರ, ಅವರು ಉನ್ನತ ಮಟ್ಟದ ಸಭೆಗಳಿಗಾಗಿ ಆಗಸ್ಟ್ 23 ರಂದು ಉಕ್ರೇನ್‌ನ ಕೈವ್‌ಗೆ ಪ್ರಯಾಣಿಸಲಿದ್ದಾರೆ. ಕಳೆದ 45 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್‌ಗೆ ಭೇಟಿ ನೀಡುತ್ತಿರುವ ಮೊದಲ ಪ್ರವಾಸ ಇದಾಗಿದೆ. ಅವರ ಭೇಟಿಯು ನವದೆಹಲಿ ಮತ್ತು ವಾರ್ಸಾ ನಡುವಿನ 70 ವರ್ಷಗಳ ಅಧಿಕೃತ ದ್ವಿಪಕ್ಷೀಯ ಸಂಬಂಧಗಳನ್ನು ಸೂಚಿಸುತ್ತದೆ.

ಇದನ್ನೂ ಓದಿ: PM Modi Poland Visit: ಪೋಲೆಂಡ್‌ಗೆ ಬಂದಿಳಿದ ಪ್ರಧಾನಿ ಮೋದಿ- ಗುಜರಾತಿ ನೃತ್ಯದ ಮೂಲಕ ಭರ್ಜರಿ ಸ್ವಾಗತ

Continue Reading

ದೇಶ

Kolkata Doctor Murder Case: ಟ್ರೈನಿ ವೈದ್ಯೆ ಕೊಲೆ ಪ್ರಕರಣ- ಪ್ರಧಾನಿ ಮೋದಿಗೆ ದಿಢೀರ್‌ ಪತ್ರ ಬರೆದ ಮಮತಾ ಬ್ಯಾನರ್ಜಿ

Kolkata Doctor Murder Case: ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಬ್ಯಾನರ್ಜಿ, ಈ ದಿನ ನಾನು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದೇನೆ ಎಂದು ಪೋಸ್ಟ್‌ ಮಾಡಿದ್ದಾರೆ. ದಿನೇ ದಿನೇ ದೇಶಾದ್ಯಂತ ಹೆಚ್ಚಾಗುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಬಗ್ಗೆ ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದರೆ ಕಟ್ಟುನಿಟ್ಟಿನ ಕಾನೂನು ಜಾರಿಯಾದರೆ ಮಾತ್ರ ಸಾಧ್ಯ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

VISTARANEWS.COM


on

kolkata Doctor murder case
Koo

ಕೋಲ್ಕತ್ತಾ: ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ(Kolkata Doctor Murder Case)ಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ(West Bengal CM) ಮಮತಾ ಬ್ಯಾನರ್ಜಿ(Mamata Banerjee) ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರಿಗೆ ಪತ್ರ ಬರೆದಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕೋರಿದ್ದಾರೆ.

ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಬ್ಯಾನರ್ಜಿ, ಈ ದಿನ ನಾನು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದೇನೆ ಎಂದು ಪೋಸ್ಟ್‌ ಮಾಡಿದ್ದಾರೆ. ದಿನೇ ದಿನೇ ದೇಶಾದ್ಯಂತ ಹೆಚ್ಚಾಗುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಬಗ್ಗೆ ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದರೆ ಕಟ್ಟುನಿಟ್ಟಿನ ಕಾನೂನು ಜಾರಿಯಾದರೆ ಮಾತ್ರ ಸಾಧ್ಯ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಮುಖ್ಯ ಸಲಹೆಗಾರ ಅಲಾಪನ್ ಬಂಡೋಪಾಧ್ಯಾಯ, “ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಗೌರವಾನ್ವಿತ ಪ್ರಧಾನ ಮಂತ್ರಿಯವರೇ, ದೇಶಾದ್ಯಂತ ನಿಯಮಿತವಾಗಿ ಮತ್ತು ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ ಮತ್ತು ಲಭ್ಯವಿರುವ ದತ್ತಾಂಶಗಳ ಪ್ರಕಾರ ಅನೇಕ ಪ್ರಕರಣಗಳಲ್ಲಿ ಕೊಲೆಯೊಂದಿಗೆ ಅತ್ಯಾಚಾರಗಳು ನಡೆಯುತ್ತಿವೆ. ಪ್ರತಿನಿತ್ಯ ಸುಮಾರು 90 ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆಯುತ್ತಿವೆ. ಇದರಿಂದ ಕಾನೂನಿನ ಮೇಲೆ ಸಮಾಜ ಮತ್ತು ದೇಶದ ಜನರಿಗಿರುವ ನಂಬಿಕೆ ದಿನೇ ಕುಸಿಯುತ್ತಿದೆ. ಮಹಿಳೆಯರು ಸಮಾಜದಲ್ಲಿ ತಾವು ಸುರಕ್ಷಿತರು ಎಂಬುದನ್ನು ಭಾವಿಸಬೇಕೆಂದರೆ ಇಂತಹ ಹೇಯ ಕೃತ್ಯಗಳಿಗೆ ಕಡಿವಾಣ ಹಾಕಲೇಬೇಕಿದೆ ಎಂದು ಬರೆದಿರುವ ಬಗ್ಗೆ ತಿಳಿಸಿದ್ದಾರೆ.

ಏನಿದು ಘಟನೆ?

ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್‌ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್‌ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆಗೈದಿರುವುದು ಬೆಳಕಿಗೆ ಬಂದಿತ್ತು. ಕುತ್ತಿಗೆ ಮುರಿದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಇನ್ನು ವೈದ್ಯೆ ಕೊಲೆ ಪ್ರಕರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್‌ ರಾಷ್ಟ್ರೀಯ ಕಾರ್ಯಪಡೆಯನ್ನು ನೇಮಕ ಮಾಡಿದೆ. ಈ ಕಾರ್ಯಪಡೆಯಲ್ಲಿ ಸರ್ಜನ್‌ ವೈಸ್‌ ಅಡ್ಮಿರಲ್‌ ಆರ್‌.ಕೆ. ಸರಿನ್‌, ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ನ್ಯಾಷನಲ್ ಗ್ಯಾಸ್ಟ್ರೋಲಜಿ ವ್ಯವಸ್ಥಾಪಕ ನಿರ್ದೇಶಕ ಡಾ. ನಾಗೇಶ್ವರ ರೆಡ್ಡಿ ಇದ್ದಾರೆ.

ಇದನ್ನೂ ಓದಿ: Kolkata Doctor murder case: 36 ಗಂಟೆಗಳ ಶಿಫ್ಟ್‌ನಲ್ಲಿ ವೈದ್ಯರು ಕರ್ತವ್ಯ ನಿರ್ವಹಿಸುವುದು ಅಮಾನವೀಯ- ಸುಪ್ರೀಂ ಅಭಿಪ್ರಾಯ

Continue Reading
Advertisement
CM Siddaramaiah
ಕರ್ನಾಟಕ21 mins ago

CM Siddaramaiah: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿದ್ದರಾಮಯ್ಯ ಸೂಚನೆ

Fixed Deposits
ಮನಿ-ಗೈಡ್24 mins ago

Fixed Deposits: ಪೋಸ್ಟ್ ಆಫೀಸ್ ಎಫ್‌ಡಿ; ಬಡ್ಡಿ ದರ ಎಷ್ಟು, ಏನೆಲ್ಲ ಲಾಭ?

Water Price hike
ಬೆಂಗಳೂರು32 mins ago

Water Price Hike: ಎಷ್ಟೇ ವಿರೋಧ ಬಂದರೂ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಖಚಿತ; ಡಿ.ಕೆ.ಶಿವಕುಮಾರ್

DK Shivakumar
ಬೆಂಗಳೂರು36 mins ago

DK Shivakumar: ನನಗೆ ಸಿಬಿಐಗಿಂತ ಲೋಕಾಯುಕ್ತದಿಂದಲೇ ಹೆಚ್ಚಿನ ಹಿಂಸೆ; ಡಿ.ಕೆ.ಶಿವಕುಮಾರ್ ಆರೋಪ!

kolkata Doctor murder case
ದೇಶ37 mins ago

Kolkata Doctor Murder Case: ಬರೋಬ್ಬರಿ 11ದಿನಗಳ ಬಳಿಕ ಮುಷ್ಕರ ಹಿಂಪಡೆದ ವೈದ್ಯರು

CLP Meeting
ಬೆಂಗಳೂರು1 hour ago

CLP Meeting: ಮುಡಾ ಹಗರಣ; ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಪರ ನಿಂತ ಶಾಸಕರು

Actor Darshan
ಕರ್ನಾಟಕ1 hour ago

Actor Darshan: ಅವರ ಋಣ ನಮ್ಮ ಕುಟುಂಬದ ಮೇಲಿದೆ… ದರ್ಶನ್‌ ಭೇಟಿ ಬಳಿಕ ರಚಿತಾ ರಾಮ್‌ ಕಣ್ಣೀರು

PM Modi Poland Visit
ವಿದೇಶ2 hours ago

PM Modi Poland Visit: ಯುದ್ಧಭೂಮಿಯಲ್ಲಿ ಯಾವ ಸಮಸ್ಯೆಯೂ ಬಗೆಹರಿಯಲ್ಲ; ರಷ್ಯಾ-ಉಕ್ರೇನ್‌ ಸಂಘರ್ಷದ ಬಗ್ಗೆ ಪ್ರಧಾನಿ ಮೋದಿ ರಿಯಾಕ್ಟ್‌

Viral Video
Latest2 hours ago

Viral Video: ಸೈಕಲ್‌ ಮೇಲೆ ಶಾಲೆಗೆ ಹೋಗುತ್ತಿದ್ದ ಮಕ್ಕಳಿಬ್ಬರಿಗೆ ವಿದ್ಯುತ್‌ ಶಾಕ್‌; ಕ್ಯಾಮೆರಾದಲ್ಲಿ ಸೆರೆಯಾಯ್ತು ಘೋರ ದೃಶ್ಯ

Viral Video
ಸಿನಿಮಾ2 hours ago

Viral Video: ‘ಶೀಲಾ ಕಿ ಜವಾನಿ’ ಹಾಡಿಗೆ ಸಖತ್ ಆಗಿ ಸೊಂಟ ಬಳುಕಿಸಿದ ಬೆಡಗಿ! ವಿಡಿಯೊ ನೋಡಿ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌