Sukanya Samriddhi Yojana: ಸುಕನ್ಯಾ ಸಮೃದ್ಧಿ ಯೋಜನೆ; ನಿಮ್ಮ ಮಗಳು 71 ಲಕ್ಷ ರೂ. ಪಡೆಯಲು ಸಾಧ್ಯ! - Vistara News

ಮನಿ-ಗೈಡ್

Sukanya Samriddhi Yojana: ಸುಕನ್ಯಾ ಸಮೃದ್ಧಿ ಯೋಜನೆ; ನಿಮ್ಮ ಮಗಳು 71 ಲಕ್ಷ ರೂ. ಪಡೆಯಲು ಸಾಧ್ಯ!

ಸುಕನ್ಯಾ ಸಮೃದ್ಧಿ ಯೋಜನೆಯನ್ನು (Sukanya Samriddhi Yojana) ಕೇಂದ್ರ ಸರ್ಕಾರ ಹೆಣ್ಣುಮಕ್ಕಳಿಗಾಗಿ ಮಾಡಿರುವ ಯೋಜನೆಯಾಗಿದೆ. ದೇಶದ ಯಾವುದೇ ನಾಗರಿಕರು ತಮ್ಮ 10 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಗಳಿಗೆ ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಬಹುದು. ಇದರ ಅಡಿಯಲ್ಲಿ ಹೂಡಿಕೆ ಮಾಡಿದರೆ ಮಗಳಿಗೆ 21 ವರ್ಷವಾದಾಗ ಅವಳನ್ನು ಲಕ್ಷಾಧಿಪತಿಯನ್ನಾಗಿ ಮಾಡಬಹುದು. ಅದು ಹೇಗೆ ಎನ್ನುವ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

Sukanya Samriddhi Yojana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಣವನ್ನು ತ್ವರಿತವಾಗಿ ಹೆಚ್ಚಿಸಬೇಕು ಎನ್ನುವ ಯೋಚನೆ ಇದ್ದರೆ ಅದನ್ನು ಬ್ಯಾಂಕ್ ನಲ್ಲಿ ಸುಮ್ಮನೆ ಇರಿಸುವ ಬದಲು ಪೋಸ್ಟ್ ಆಫೀಸ್ ನ (post office) ವಿವಿಧ ಯೋಜನೆಗಳಲ್ಲಿ ಒಂದಾದ ಸುಕನ್ಯಾ ಸಮೃದ್ಧಿ ಯೋಜನೆಯಂತಹ (Sukanya Samriddhi Yojana) ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಉತ್ತಮ ಆಯ್ಕೆ. ಇತ್ತೀಚಿನ ದಿನಗಳಲ್ಲಿ ಷೇರು ಮಾರುಕಟ್ಟೆ (share market), ಮ್ಯೂಚುವಲ್ ಫಂಡ್‌ಗಳಂತಹ (mutual fund) ಯೋಜನೆಗಳಲ್ಲಿ ಹೂಡಿಕೆದಾರರ ಸಂಖ್ಯೆ ವೇಗವಾಗಿ ಹೆಚ್ಚುತ್ತಿರುವುದು ಇದೇ ಕಾರಣಕ್ಕೆ.

ಹೂಡಿಕೆ ಮಾಡಲು ಜೊತೆಗೆ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದಾರೆ ಅನೇಕ ಸರ್ಕಾರಿ ಯೋಜನೆಗಳಿವೆ. ಭಾರತ ಸರ್ಕಾರವು ಮಕ್ಕಳ ಭವಿಷ್ಯದ ಮೇಲೆ ಕೇಂದ್ರೀಕೃತವಾಗಿರುವ ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಇದು ಉತ್ತಮ ಆದಾಯವನ್ನು ನೀಡುತ್ತದೆ. ಇಲ್ಲಿ ಅಂತಹ ಒಂದು ಸರ್ಕಾರಿ ಯೋಜನೆಯ ಬಗ್ಗೆ ತಿಳಿಸುತ್ತೇವೆ.

ಕೇಂದ್ರ ಸರ್ಕಾರದ ಈ ಯೋಜನೆಯು ಹೆಣ್ಣುಮಕ್ಕಳ ಮೇಲೆ ಕೇಂದ್ರೀಕೃತವಾಗಿದೆ. ದೇಶದ ಯಾವುದೇ ನಾಗರಿಕರು ತಮ್ಮ 10 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಗಳಿಗೆ ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಬಹುದು. ಇದು ಸುಕನ್ಯಾ ಸಮೃದ್ಧಿ ಯೋಜನೆ. ಇದರ ಅಡಿಯಲ್ಲಿ ಯಾರಾದರೂ ವಾರ್ಷಿಕವಾಗಿ ಕನಿಷ್ಠ 250 ರೂ. ನಿಂದ ಗರಿಷ್ಠ 1.5 ಲಕ್ಷ ರೂ. ವರೆಗೆ ಠೇವಣಿ ಮಾಡಬಹುದು.

ಬಡ್ಡಿ ದರ

ಸುಕನ್ಯಾ ಸಮೃದ್ಧಿ ಯೋಜನೆಯ ದೊಡ್ಡ ವೈಶಿಷ್ಟ್ಯವೆಂದರೆ ದೇಶಾದ್ಯಂತ ನಡೆಯುತ್ತಿರುವ ಸರ್ಕಾರಿ ಯೋಜನೆಗಳಲ್ಲಿ ಇದು ಹೆಚ್ಚಿನ ಬಡ್ಡಿಯನ್ನು ನೀಡುವ ಯೋಜನೆಗಳಲ್ಲಿ ಒಂದಾಗಿದೆ. ಖಾತೆದಾರರಿಗೆ ಪ್ರತಿ ವರ್ಷ ಶೇ. 8.2 ದರದಲ್ಲಿ ಬಡ್ಡಿಯನ್ನು ನೀಡಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕೆಲವು ವರ್ಷಗಳವರೆಗೆ ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡುವ ಮೂಲಕ ಮಗಳಿಗಾಗಿ 71 ಲಕ್ಷಕ್ಕಿಂತ ಹೆಚ್ಚಿನ ಮೊತ್ತವನ್ನು ಸಿದ್ಧಪಡಿಸಬಹುದು.

Sukanya Samriddhi Yojana
Sukanya Samriddhi Yojana


ಸುಕನ್ಯಾ ಸಮೃದ್ಧಿ ಯೋಜನೆ ಎಂದರೇನು?

ಕೇಂದ್ರ ಸರ್ಕಾರ ಆರಂಭಿಸಿರುವ ಈ ಯೋಜನೆಯಡಿ ಯಾವುದೇ ಭಾರತೀಯ ಪ್ರಜೆ ತಮ್ಮ ಮಗಳ ಹೆಸರಿನಲ್ಲಿ ಈ ಯೋಜನೆಯನ್ನು ಆರಂಭಿಸಬಹುದು. ಈ ಯೋಜನೆಗೆ ಅರ್ಹರಾಗಲು ಮಗಳ ವಯಸ್ಸು 0 ರಿಂದ 10 ವರ್ಷಗಳ ನಡುವೆ ಇರಬೇಕು. ಈ ಯೋಜನೆಯನ್ನು ಅಂಚೆ ಕಚೇರಿಯ ಯಾವುದೇ ಶಾಖೆಯಲ್ಲಿ ತೆರೆಯಬಹುದು. ಈ ಯೋಜನೆಯಡಿಯಲ್ಲಿ, ನೀವು ಒಟ್ಟು 15 ವರ್ಷಗಳವರೆಗೆ ಹೂಡಿಕೆ ಮಾಡಬಹುದು. ಅದರ ಅನಂತರ 21 ವರ್ಷಗಳು ಪೂರ್ಣಗೊಂಡ ತಕ್ಷಣ ಪೂರ್ಣ ಮೊತ್ತವನ್ನು ಮುಕ್ತಾಯದ ಮೇಲೆ ನೀಡಲಾಗುತ್ತದೆ.

ವಿಶೇಷ ನಿಯಮಗಳು

ಸರ್ಕಾರವು ಪ್ರತಿ ತ್ರೈಮಾಸಿಕದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಗೆ ನೀಡುವ ಬಡ್ಡಿಯನ್ನು ಪರಿಷ್ಕರಿಸುತ್ತದೆ. ಬಡ್ಡಿಯ ಹೆಚ್ಚಳ ಅಥವಾ ಇಳಿಕೆಯು ಮುಕ್ತಾಯದ ಮೇಲೆ ಸ್ವೀಕರಿಸಿದ ಮೊತ್ತದ ಮೇಲೆ ಪರಿಣಾಮ ಬೀರುತ್ತದೆ. ಸುಕನ್ಯಾ ಸಮೃದ್ಧಿ ಖಾತೆಯಲ್ಲಿ ಹೂಡಿಕೆ ಮಾಡಿದ ಮೊತ್ತವನ್ನು ಪ್ರತಿ ವರ್ಷ ಏಪ್ರಿಲ್ 5 ರ ಮೊದಲು ಠೇವಣಿ ಮಾಡಬೇಕು. ಇದರಿಂದ ಮಗಳು ಗರಿಷ್ಠ ಬಡ್ಡಿ ಪಡೆಯಬಹುದು.

ಖಾತೆಯನ್ನು ತೆರೆಯುವ ಸಮಯದಲ್ಲಿ ಮಗಳಿಗೆ ಒಂದು ವರ್ಷವೂ ಆಗದೇ ಇದ್ದರೆ ಖಾತೆಯು 21 ವರ್ಷಗಳನ್ನು ಪೂರೈಸಿದಾಗ ಮಗಳು ಮೆಚ್ಯೂರಿಟಿ ಮೊತ್ತವನ್ನು ಪಡೆಯುತ್ತಾಳೆ. ಇದರ ಅರ್ಥ ಮಗಳು 21 ವರ್ಷಕ್ಕೆ ಬಂದಾಗ ಅಲ್ಲ. ಖಾತೆಯನ್ನು ತೆರೆದು 21 ವರ್ಷ ಪೂರ್ಣಗೊಂಡಾಗ.

ಇದನ್ನೂ ಓದಿ Fixed Deposits: ಪೋಸ್ಟ್ ಆಫೀಸ್ ಎಫ್‌ಡಿ; ಬಡ್ಡಿ ದರ ಎಷ್ಟು, ಏನೆಲ್ಲ ಲಾಭ?

71 ಲಕ್ಷ ಹೇಗೆ ಸಿಗುತ್ತದೆ?

ಈ ಯೋಜನೆಯಡಿಯಲ್ಲಿ ವಾರ್ಷಿಕವಾಗಿ 1.5 ಲಕ್ಷ ರೂಪಾಯಿಗಳನ್ನು 15 ವರ್ಷಗಳವರೆಗೆ ಠೇವಣಿ ಮಾಡಬಹುದು. ಅದರ ಮೇಲೆ ನಿಮಗೆ ಗರಿಷ್ಠ ಪ್ರಯೋಜನವನ್ನು ನೀಡಲಾಗುತ್ತದೆ. ಈ ಮೊತ್ತವನ್ನು 15 ವರ್ಷಗಳವರೆಗೆ ಠೇವಣಿ ಮಾಡಿದರೆ ಒಟ್ಟು 22,50,000 ರೂ. ಮುಕ್ತಾಯದ ಅನಂತರ 71,82,119 ರೂ. ಗಳನ್ನು ಪಡೆಯಬಹುದು. ಇದರಲ್ಲಿ ಬಡ್ಡಿಯಿಂದ ಪಡೆದ ಒಟ್ಟು ಮೊತ್ತ 49,32,119 ರೂ. ಮೆಚ್ಯೂರಿಟಿಯಲ್ಲಿ ಪಡೆದ ಈ ಮೊತ್ತದ ಮೇಲೆ ಯಾವುದೇ ತೆರಿಗೆ ಇರುವುದಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Recurring Deposit: ಸಣ್ಣ, ಆರಂಭಿಕ ಹೂಡಿಕೆದಾರರಿಗೆ ಸೂಕ್ತ ಪೋಸ್ಟ್ ಆಫೀಸ್‌ನ ಆರ್‌ಡಿ; ಏನಿದರ ಲಾಭ?

ಪೋಸ್ಟ್ ಆಫೀಸ್‌ನಲ್ಲಿರುವ ಆರ್‌ಡಿ (Recurring Deposit) ಸಣ್ಣ ಹೂಡಿಕೆದಾರರು ಅಥವಾ ಆರಂಭಿಕರು ತೆರೆಯಬಹುದಾದ ರಾಷ್ಟ್ರೀಯ ಉಳಿತಾಯ ಮರುಕಳಿಸುವ ಠೇವಣಿ ಖಾತೆಯಾಗಿದೆ. ಈ ಉಳಿತಾಯ ಯೋಜನೆಯಲ್ಲಿ ಹಣಕಾಸಿನ ಅವಶ್ಯಕತೆಗಳಿಗೆ ಸಾಕಷ್ಟು ಹಣವನ್ನು ಸಂಗ್ರಹಿಸಬಹುದು. ಮಾತ್ರವಲ್ಲದೆ ಇನ್ನೂ ಹಲವು ವೈಶಿಷ್ಟ್ಯಗಳನ್ನು ಹೊಂದಿರುವ ಈ ಯೋಜನೆಯ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Recurring Deposit
Koo

ಪ್ರತಿಯೊಬ್ಬರಿಗೂ ದೊಡ್ಡ ಪ್ರಮಾಣದಲ್ಲಿ ಹಣವನ್ನು ಹೂಡಿಕೆ (investment) ಮಾಡುವುದು ಸಾಧ್ಯವಿಲ್ಲ. ವಿಶೇಷವಾಗಿ ಉದ್ಯೋಗಕ್ಕೆ ಇತ್ತೀಚೆಗಷ್ಟೇ ಸೇರಿದವರು, ಸಣ್ಣ ಹೂಡಿಕೆದಾರರು ಅಥವಾ ಆರಂಭಿಕರಿಗಾಗಿ (small investors or beginners) ಸಹಾಯ ಮಾಡಲು ಕೇಂದ್ರ ಸರ್ಕಾರವು (Indian Govt) ಉಳಿತಾಯ ಯೋಜನೆಯೊಂದನ್ನು (Recurring Deposit) ಪರಿಚಯಿಸಿದೆ.

ಇದು ಕೇಂದ್ರ ಸರ್ಕಾರದಿಂದ ನಿಯಂತ್ರಿಸಲ್ಪಟ್ಟಿರುವುದರಿಂದ ಹೂಡಿಕೆ ಮಾಡಲು ಸುರಕ್ಷಿತ ಆಯ್ಕೆಯಾಗಿದೆ. ಹಾಗಾದರೆ ಈ ಉಳಿತಾಯ ಯೋಜನೆ ಯಾವುದು, ಅದರ ವಿಶೇಷತೆಗಳು ಏನು ಎಂಬುದನ್ನು ನೋಡೋಣ.
ಪೋಸ್ಟ್ ಆಫೀಸ್‌ನಲ್ಲಿರುವ ಆರ್ ಡಿ ಸಣ್ಣ ಹೂಡಿಕೆದಾರರು ಅಥವಾ ಆರಂಭಿಕರು ತೆರೆಯಬಹುದಾದ ರಾಷ್ಟ್ರೀಯ ಉಳಿತಾಯ ಮರುಕಳಿಸುವ ಠೇವಣಿ ಖಾತೆಯಾಗಿದೆ.

ಆರ್ ಡಿ ಯೋಜನೆ

ಈ ಉಳಿತಾಯ ಯೋಜನೆಯು ನಿರ್ದಿಷ್ಟವಾಗಿ ಸಣ್ಣ ಹೂಡಿಕೆದಾರರಿಗಾಗಿ ಮಾಡಲ್ಪಟ್ಟಿದೆ. ಇದರಿಂದ ಅವರು ತಮ್ಮ ಹಣಕಾಸಿನ ಅವಶ್ಯಕತೆಗಳಿಗೆ ಸಾಕಷ್ಟು ಹಣವನ್ನು ಸಂಗ್ರಹಿಸಬಹುದು. ಇದಲ್ಲದೆ, ಠೇವಣಿಯ ಮೇಲೆ ಯಾವುದೇ ಗರಿಷ್ಠ ಮಿತಿಯಿಲ್ಲ.

ಯೋಜನೆ ಅವಧಿ ಎಷ್ಟು?

ರಾಷ್ಟ್ರೀಯ ಉಳಿತಾಯ ಮರುಕಳಿಸುವ ಠೇವಣಿ ಖಾತೆಯು 5 ವರ್ಷಗಳ ಮೆಚುರಿಟಿ ಅವಧಿಯ ಸಣ್ಣ ಉಳಿತಾಯ ಯೋಜನೆಯಾಗಿದೆ. ಈ ಉಳಿತಾಯ ಯೋಜನೆಯೊಂದಿಗೆ ಮಾಸಿಕ ಆಧಾರದ ಮೇಲೆ ಹೂಡಿಕೆ ಮಾಡಬಹುದು. ಇದಲ್ಲದೆ ಈ ಯೋಜನೆಯು ಒಬ್ಬ ವ್ಯಕ್ತಿಗೆ ಏಕ ಮತ್ತು ಜಂಟಿ ಖಾತೆಯನ್ನು ತೆರೆಯಲು ಅನುಮತಿಸುತ್ತದೆ.


ಹೂಡಿಕೆ ಹೇಗೆ?

ತಿಂಗಳಿಗೆ ಕನಿಷ್ಠ 100 ರೂ.ನಿಂದ ಹೂಡಿಕೆಯನ್ನು ಪ್ರಾರಂಭಿಸಬಹುದು. ಯಾವುದೇ ಗರಿಷ್ಠ ಮಿತಿ ಇಲ್ಲದಿರುವುದರಿಂದ ಎಷ್ಟು ಸಾಧ್ಯವೋ ಅಷ್ಟು ಹೂಡಿಕೆ ಮಾಡಬಹುದು. ಆದರೆ ಕ್ಯಾಲೆಂಡರ್ ತಿಂಗಳ 15ರಂದು ಖಾತೆಯನ್ನು ತೆರೆದರೆ ತಿಂಗಳ 15ನೇ ದಿನದವರೆಗೆ ಠೇವಣಿ ಮಾಡಬೇಕು ಎಂಬುದನ್ನು ಗಮನಿಸಬೇಕು. ಕ್ಯಾಲೆಂಡರ್ ತಿಂಗಳ 16ನೇ ದಿನ ಮತ್ತು ಕೊನೆಯ ಕೆಲಸದ ದಿನದ ನಡುವೆ ಖಾತೆಯನ್ನು ತೆರೆದರೆ, ಅನಂತರದ ಠೇವಣಿ ತಿಂಗಳ ಕೊನೆಯ ಕೆಲಸದ ದಿನದವರೆಗೆ ಮಾಡಲಾಗುತ್ತದೆ.

ಖಾತೆಯ ಬಡ್ಡಿ ದರ

ಈ ಉಳಿತಾಯ ಯೋಜನೆಯು ವಾರ್ಷಿಕ ಶೇ. 6.7ರಷ್ಟು ಬಡ್ಡಿ ದರವನ್ನು ನೀಡುತ್ತದೆ. ಐದು ವರ್ಷಗಳವರೆಗೆ 10,000 ರೂ. ಮಾಸಿಕ ಹೂಡಿಕೆಯೊಂದಿಗೆ 7 ಲಕ್ಷ ರೂ.ಗಳಿಗಿಂತ ಹೆಚ್ಚಿನ ಲಾಭವನ್ನು ಪಡೆಯಬಹುದು.

ಇದನ್ನೂ ಓದಿ: Anil Ambani: ಅನಿಲ್‌ ಅಂಬಾನಿಗೆ ಸೆಬಿ ಶಾಕ್‌; 5 ವರ್ಷ ಸೆಕ್ಯೂರಿಟೀಸ್‌ ಮಾರುಕಟ್ಟೆಯಿಂದ ನಿಷೇಧ, 25 ಕೋಟಿ ರೂ. ದಂಡ

ಯಾರು ಅರ್ಜಿ ಸಲ್ಲಿಸಬಹುದು?

ಯಾವುದೇ ಒಬ್ಬ ವಯಸ್ಕ, ಅಪ್ರಾಪ್ತ ವಯಸ್ಕ, ಅಸ್ವಸ್ಥ ಮನಸ್ಸಿನ ವ್ಯಕ್ತಿಯ ಪರವಾಗಿ ಪೋಷಕರು, 10 ವರ್ಷಕ್ಕಿಂತ ಮೇಲ್ಪಟ್ಟ ಅಪ್ರಾಪ್ತರು ತಮ್ಮ ಹೆಸರಿನಲ್ಲಿ ಈ ಖಾತೆಯನ್ನು ತೆರೆಯಬಹುದು. ಇದರ ಹೊರತಾಗಿ ಈ ಯೋಜನೆಯು ಹೂಡಿಕೆದಾರರಿಗೆ ಜಂಟಿ ಖಾತೆಯನ್ನು ತೆರೆಯಲು ಅವಕಾಶವಿದೆ. ಇದಲ್ಲದೆ ಬಹು ಖಾತೆಗಳನ್ನು ತೆರೆಯಲು ಅವಕಾಶವಿದೆ.

Continue Reading

ವಾಣಿಜ್ಯ

Cheapest Currency: ವಿಶ್ವದಲ್ಲೇ ಅಗ್ಗದ ಕರೆನ್ಸಿ ಹೊಂದಿರುವ ದೇಶಗಳಲ್ಲಿ ಭಾರತದ 1 ರೂ.ನ ಮೌಲ್ಯ ಎಷ್ಟಾಗುತ್ತೆ ನೋಡಿ!

ವಿಶ್ವದ ಬಹುತೇಕ ಕರೆನ್ಸಿಗಳ ಬಗ್ಗೆ ನಾವು ಪರಿಚಿತರಾಗಿದ್ದೇವೆ. ಕೆಲವೊಂದು ದೇಶಗಳ ಕರೆನ್ಸಿಗಳು ಹೆಚ್ಚು ಮೌಲ್ಯ, ಇನ್ನು ಕೆಲವು ದೇಶದ ಕರೆನ್ಸಿಗಳು ಕಡಿಮೆ ಮೌಲ್ಯವನ್ನು (Cheapest Currency) ಹೊಂದಿದೆ. ಅದರಲ್ಲೂ ಕೆಲವು ದೇಶಗಳ ಕರೆನ್ಸಿಗಳು ಅತ್ಯಂತ ಕಡಿಮೆ ಮೌಲ್ಯವನ್ನು ಹೊಂದಿದೆ. ಅಂತಹ ಕರೆನ್ಸಿಗಳು ಯಾವುದು, ಯಾವ ದೇಶದ್ದು ಎಂಬುದು ಗೊತ್ತಿದೆಯೇ? ಈ ಕುರಿತ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Cheapest Currency
Koo

ವಿಶ್ವದಲ್ಲೇ ಅತ್ಯಂತ ಪ್ರಬಲ ಮತ್ತು ಪ್ರಭಾವಶಾಲಿ ಕರೆನ್ಸಿಗಳ (currency) ಬಗ್ಗೆ ನಮಗೆ ತಿಳಿದಿದೆ. ಆದರೆ ಅತ್ಯಂತ ಕಡಿಮೆ ಮೌಲ್ಯವಿರುವ ಕರೆನ್ಸಿ (Cheapest Currency) ಬಗ್ಗೆ ಎಷ್ಟು ಮಂದಿಗೆ ಗೊತ್ತು? ಕೆಲವು ದೇಶಗಳ ಕರೆನ್ಸಿಗಳು ತೀರಾ ಕಡಿಮೆ ಮೌಲ್ಯವನ್ನು ಹೊಂದಿದೆ. ಒಂದಲ್ಲ ಒಂದು ರೀತಿಯ ವ್ಯವಹಾರ ನಡೆಸುವ ನಾವು ಈ ಅಗ್ಗದ ಕರೆನ್ಸಿಗಳ ಬಗ್ಗೆ ತಿಳಿದುಕೊಳ್ಳಬೇಕಿದೆ.

ಬ್ರಿಟಿಷ್ ಪೌಂಡ್ ಸ್ಟರ್ಲಿಂಗ್ (British Pound Sterling), ಸ್ವಿಸ್ ಫ್ರಾಂಕ್ (Swiss Franc) ಮತ್ತು ಯುಎಸ್ ಡಾಲರ್‌ (US Dollar) ವಿಶ್ವದಲ್ಲೇ ಎಲ್ಲರಿಗೂ ಪರಿಚಿತ ದುಬಾರಿ ಮೌಲ್ಯ ಹೊಂದಿರುವ ಕರೆನ್ಸಿಗಳಾಗಿವೆ. ಆದರೆ ವಿಶ್ವದ ಅತ್ಯಂತ ಕಡಿಮೆ ಬೆಲೆಬಾಳುವ ಕರೆನ್ಸಿಗಳ ಪಟ್ಟಿ ಮಾಡುವುದು ತುಸು ಕಷ್ಟ. ಯಾಕೆಂದರೆ ಆರ್ಥಿಕ ಪರಿಸ್ಥಿಗಳು ಅತ್ಯಂತ ವೇಗವಾಗಿ ಬದಲಾಗುತ್ತದೆ. ಇದು ಒಂದು ರೀತಿಯಲ್ಲಿ ಎಲ್ಲರಿಗೂ ಸವಾಲಾಗಿರುತ್ತದೆ.

ಇತ್ತೀಚೆಗೆ ಗಮನಾರ್ಹವಾದ ಅಪಮೌಲ್ಯೀಕರಣವನ್ನು ಅನುಭವಿಸಿದ ನಿರ್ದಿಷ್ಟ ರಾಷ್ಟ್ರೀಯ ಕರೆನ್ಸಿಗಳನ್ನು ಗುರುತಿಸಲಾಗಿದೆ. ಇದರಲ್ಲಿ ಯುಎಸ್ ಡಾಲರ್ ಮತ್ತು ಭಾರತೀಯ ರೂಪಾಯಿಗೆ ಹೋಲಿಸಿದರೆ ವಿಶ್ವದ ಹತ್ತು ದೇಶಗಳ ಕರೆನ್ಸಿಗಳು ಅತ್ಯಂತ ಕಡಿಮೆ ಮೌಲ್ಯ ಹೊಂದಿದೆ. ಇದರಲ್ಲಿ ಇರಾನಿನ ರಿಯಾಲ್, ವಿಯೆಟ್ನಾಮೀಸ್ ಡಾಂಗ್, ಸಿಯೆರಾ ಲಿಯೋನಿಯನ್ ಲಿಯೋನ್, ಲಾವೊ/ಲಾವೋಟಿಯನ್ ಕಿಪ್, ಇಂಡೋನೇಷಿಯನ್ ರುಪಿಯಾ, ಉಜ್ಬೇಕಿಸ್ತಾನಿ ಸೋಮ್, ಗಿನಿಯನ್ ಫ್ರಾಂಕ್, ಪರಾಗ್ವೆಯ ಗೌರಾನಿ, ಕಾಂಬೋಡಿಯನ್ ರಿಯಲ್, ಉಗಾಂಡಾದ ಶಿಲ್ಲಿಂಗ್ ಸೇರಿದೆ.

Cheapest Currency
Cheapest Currency


ಇರಾನಿನ ರಿಯಾಲ್ (IRR)

ಪ್ರಸ್ತುತ 1 ಭಾರತೀಯ ರೂಪಾಯಿಯು 501.73 ಐಆರ್‌ಆರ್‌ಗೆ ಸಮನಾಗಿದೆ. ಇರಾನಿನ ರಿಯಾಲ್ ಅನ್ನು ವಿಶ್ವದ ಅತ್ಯಂತ ಕಡಿಮೆ ಮೌಲ್ಯಯುತ ಕರೆನ್ಸಿ ಎಂದು ಗುರುತಿಸಲಾಗಿದೆ. ಇದಕ್ಕೆ ದೇಶದಲ್ಲಿ ನಡೆಯುವ ರಾಜಕೀಯ ಅಶಾಂತಿ, ಇರಾನ್-ಇರಾಕ್ ಯುದ್ಧ ಮತ್ತು ಪರಮಾಣು ಕಾರ್ಯಕ್ರಮದಂತಹ ಅಂಶಗಳು ಕಾರಣ ಎನ್ನಲಾಗುತ್ತದೆ.


ವಿಯೆಟ್ನಾಮೀಸ್ ಡಾಂಗ್ (VND)

ವಿಯೆಟ್ನಾಂ ಐತಿಹಾಸಿಕವಾಗಿ ಕೇಂದ್ರೀಕೃತ ಆರ್ಥಿಕತೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಮಾರುಕಟ್ಟೆ ಆರ್ಥಿಕತೆಯನ್ನು ಸ್ಥಾಪಿಸಲು ಪ್ರಯತ್ನಗಳನ್ನು ಮಾಡಲಾಗಿದ್ದರೂ ಇನ್ನೂ ಬಹಳ ದೂರ ಹೋಗಬೇಕಾಗಿದೆ. ಪ್ರಸ್ತುತ, ವಿಯೆಟ್ನಾಮೀಸ್ ಡಾಂಗ್ ಗಣನೀಯ ಅಪಮೌಲ್ಯವನ್ನು ಅನುಭವಿಸುತ್ತಿದೆ. ಇಲ್ಲಿ 1 ಭಾರತೀಯ ರೂಪಾಯಿಯು 297.72ವಿಎನ್ ಡಿಗೆ ಸಮನಾಗಿದೆ.


ಲಾವೋ/ಲಾವೋಟಿಯನ್ ಕಿಪ್ (LAK)

1952ರಲ್ಲಿ ಸ್ಥಾಪನೆಯಾದಾಗಿನಿಂದ ಲಾವೊ ಕರೆನ್ಸಿಯ ಮೌಲ್ಯವು ತುಲನಾತ್ಮಕವಾಗಿ ಕಡಿಮೆಯಾಗಿದೆ. ಇಲ್ಲಿ ಪ್ರಸ್ತುತ 1 ಭಾರತೀಯ ರೂಪಾಯಿಯು 263.00 ಎಲ್‌ಎಕೆಗೆ ಸಮವಾಗಿದೆ.


ಸಿಯೆರಾ ಲಿಯೋನಿಯನ್ ಲಿಯೋನ್ (SLL)

ಆಫ್ರಿಕನ್ ರಾಷ್ಟ್ರವಾದ ಸಿಯೆರಾ ಲಿಯೋನ್ ತೀವ್ರ ಬಡತನವನ್ನು ಎದುರಿಸುತ್ತಿದೆ. ವಿನಾಶಕಾರಿ ಅಂತರ್ಯುದ್ಧ ಸೇರಿದಂತೆ ಪಶ್ಚಿಮ ಆಫ್ರಿಕಾದಲ್ಲಿ ಹಗರಣಗಳು, ಭ್ರಷ್ಟಾಚಾರ ಮತ್ತು ಯುದ್ಧಗಳ ಇತಿಹಾಸವನ್ನು ದೇಶ ಹೊಂದಿದೆ. ಇದರಿಂದಾಗಿ ಕರೆನ್ಸಿ ಮೌಲ್ಯ ಮತ್ತು ದೇಶದ ಆರ್ಥಿಕತೆ ಎರಡೂ ಕುಸಿದಿದೆ. ಇಲ್ಲಿ ಭಾರತೀಯ 1 ರೂಪಾಯಿಯು 267.39 ಎಸ್ ಎಲ್ ಎಲ್‌ಗೆ ಸಮವಾಗಿದೆ.


ಇಂಡೋನೇಷಿಯನ್ ರುಪಿಯಾ (IDR)

ಕಳೆದ ಏಳು ವರ್ಷಗಳಿಂದ ಇಂಡೋನೇಷ್ಯಾದ ರೂಪಾಯಿ ಯಾವುದೇ ಸುಧಾರಣೆಯನ್ನು ತೋರಿಸಿಲ್ಲ. ವಿದೇಶಿ ವಿನಿಮಯ ಮೀಸಲು ಕಡಿಮೆಯಾಗುವುದು, ಕರೆನ್ಸಿಯನ್ನು ರಕ್ಷಿಸುವಲ್ಲಿ ಕೇಂದ್ರೀಯ ಬ್ಯಾಂಕ್ ವಿಫಲತೆ ಮತ್ತು ಸರಕು ರಫ್ತಿನ ಮೇಲೆ ದೇಶದ ಭಾರೀ ಅವಲಂಬನೆ ಸೇರಿದಂತೆ ವಿವಿಧ ಅಂಶಗಳು ಇದಕ್ಕೆ ಕಾರಣ. ಇದಲ್ಲದೆ, ಸರಕುಗಳ ಬೆಲೆಗಳಲ್ಲಿನ ಕುಸಿತವು ಕರೆನ್ಸಿಯ ಮೌಲ್ಯದಲ್ಲಿನ ಇಳಿಕೆಗೆ ಮತ್ತಷ್ಟು ಕೊಡುಗೆ ನೀಡಿದೆ. ರೂಪಾಯಿಯ ಸಾರ್ವಭೌಮ ಬಾಂಡ್‌ಗಳ ಗಮನಾರ್ಹ ಭಾಗವನ್ನು ಹೊಂದಿರುವ ವಿದೇಶಿ ಹೂಡಿಕೆದಾರರ ಉಪಸ್ಥಿತಿಯು ಬಂಡವಾಳದ ಹರಿವಿಗೆ ಅಪಾಯವನ್ನುಂಟು ಮಾಡುತ್ತದೆ. ಇಲ್ಲಿ ಪ್ರಸ್ತುತ ಭಾರತೀಯ 1 ರೂಪಾಯಿಯು 185.66 ಐಡಿಆರ್‌ಗೆ ಸಮವಾಗಿದೆ.


ಉಜ್ಬೇಕಿಸ್ತಾನಿ ಸೋಮ್ (UZS)

ಉಜ್ಬೇಕಿಸ್ತಾನ್‌ನ ಆರ್ಥಿಕತೆಯು ದುರ್ಬಲವಾಗಿದೆ. ಇದು ದುರ್ಬಲ ಕರೆನ್ಸಿಗೆ ಕಾರಣವಾಗಿದೆ. ಸಾಂಕ್ರಾಮಿಕ ರೋಗವು ರಾಷ್ಟ್ರದ ಆರ್ಥಿಕತೆಯ ಮೇಲೆ ಪ್ರಭಾವ ಬೀರಿದ್ದರೂ, 2022ರ ಮೂರನೇ ತ್ರೈಮಾಸಿಕದಲ್ಲಿ ಆಂತರಿಕ ಕಾರ್ಯಾಚರಣೆಗಳು ಪುನರಾರಂಭಗೊಂಡಿದೆ. ಆದರೂ ಕೈಗಾರಿಕಾ ಉತ್ಪಾದನೆಯಲ್ಲಿನ ಕುಸಿತವು ಕರೆನ್ಸಿಯ ಭವಿಷ್ಯದ ಬಗ್ಗೆ ಅನಿಶ್ಚಿತತೆಯನ್ನು ಸೃಷ್ಟಿಸಿದೆ. ಇಲ್ಲಿ ಪ್ರಸ್ತುತ ಭಾರತೀಯ 1 ರೂಪಾಯಿಯು 150.24 ಯುಝೆಡ್‌ಎಸ್‌ಗೆ ಸಮವಾಗಿದೆ.


ಗಿನಿಯನ್ ಫ್ರಾಂಕ್ (GNF)

ಗಿನಿಯನ್ ಫ್ರಾಂಕ್ ಗಿನಿಯಾದ ಅಧಿಕೃತ ಕರೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ. ರಾಷ್ಟ್ರವು ವ್ಯಾಪಕ ಭ್ರಷ್ಟಾಚಾರ ಮತ್ತು ರಾಜಕೀಯ ಅಶಾಂತಿಯಿಂದ ಬಳಲುತ್ತಿದೆ. ಇದು ಅದರ ಕರೆನ್ಸಿಯನ್ನು ದುರ್ಬಲಗೊಳಿಸಿದೆ. ವರ್ಷದಿಂದ ವರ್ಷಕ್ಕೆ, ರಾಷ್ಟ್ರದ ಕರೆನ್ಸಿಯ ಮೌಲ್ಯವು ಕಡಿಮೆಯಾಗುತ್ತಲೇ ಇದೆ.ಇಲ್ಲಿ ಪ್ರಸ್ತುತ ಭಾರತೀಯ 1 ರೂಪಾಯಿಯು 102.41 ಜಿಎನ್ ಎಫ್ ಗೆ ಸಮವಾಗಿದೆ.


ಪರಗ್ವೆಯ ಗೌರಾನಿ (PYG)

ಹೆಚ್ಚಿನ ಹಣದುಬ್ಬರ, ಭ್ರಷ್ಟಾಚಾರ, ಹೆಚ್ಚಿನ ನಿರುದ್ಯೋಗ ಮತ್ತು ಹೆಚ್ಚಿದ ಬಡತನದ ಪರಿಣಾಮವಾಗಿ ದೇಶವು ವಿನಾಶಕಾರಿ ಆರ್ಥಿಕ ಕುಸಿತವನ್ನು ಅನುಭವಿಸಿತು. ಈ ಪ್ರತಿಯೊಂದು ಅಂಶಗಳು ಕರೆನ್ಸಿಯ ಮೇಲೆ ಹಾನಿಕಾರಕ ಪರಿಣಾಮವನ್ನು ಬೀರಿವೆ. ಇಲ್ಲಿ ಪ್ರಸ್ತುತ ಭಾರತೀಯ 1 ರೂಪಾಯಿಯು 89.88 ಪಿವೈಜಿಗೆ ಸಮವಾಗಿದೆ.


ಕಾಂಬೋಡಿಯನ್ ರಿಯಲ್ (KHR)

ದುರ್ಬಲವಾದ ಕಾಂಬೋಡಿಯನ್ ರಿಯಲ್ ಹಿಂದಿನ ಪ್ರಮುಖ ಕಾರಣವೆಂದರೆ ದೇಶದ ಹೆಚ್ಚಿನ ಡಾಲರೀಕರಣ. 80ರ ದಶಕದ ಉತ್ತರಾರ್ಧ ಮತ್ತು 90ರ ದಶಕದ ಆರಂಭದಲ್ಲಿ ರಾಜಕೀಯ ಅಸಾಮರ್ಥ್ಯಗಳಿಂದಾಗಿ ದೇಶದ ರಿಯಲ್‌ನಲ್ಲಿ ವಿದೇಶಿ ಹೂಡಿಕೆಯನ್ನು ನಡೆಸಿ ಸಾರ್ವಜನಿಕ ವಿಶ್ವಾಸವನ್ನು ಗಳಿಸಲಾಯಿತು. 90 ರ ದಶಕದಲ್ಲಿ ಯುಎಸ್ ಡಾಲರ್ ಜನರಿಗೆ ಅನುಕೂಲಕರವಾಯಿತು. ಅತ್ಯಧಿಕ ಮಟ್ಟದಲ್ಲಿ ಯುಎಸ್ ಡಾಲರ್ ದೇಶದಲ್ಲಿ ಚಲಾವಣೆಯಾಯಿತು. ಹೀಗಾಗಿ ಶೇ. 90 ರಷ್ಟು ರಿಯಲ್ ಡಾಲರ್ ರೂಪದಲ್ಲಿದೆ. ಕಳೆದ ಎರಡು ದಶಕಗಳಲ್ಲಿ ನ್ಯಾಷನಲ್ ಬ್ಯಾಂಕ್ ಆಫ್ ಕಾಂಬೋಡಿಯಾ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಇದು ರಿಯಲ್ ಚಲಾವಣೆಯಲ್ಲಿ ಶೇ. 80ರಷ್ಟು ಹೆಚ್ಚಳಕ್ಕೆ ಕಾರಣವಾಯಿತು. ಆದರೂ ಇದು ಇನ್ನೂ ಹೆಚ್ಚು ಯುಎಸ್ ಡಾಲರ್ ಅನ್ನು ಅವಲಂಬಿಸಿದೆ. ಇಲ್ಲಿ ಪ್ರಸ್ತುತ ಭಾರತೀಯ 1 ರೂಪಾಯಿಯು 48.62 ರಿಯಲ್ ಗೆ ಸಮವಾಗಿದೆ.

ಇದನ್ನೂ ಓದಿ: Richest Village: ಗುಜರಾತ್‌ನಲ್ಲಿದೆ ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ! ಇಲ್ಲಿಯ ಜನ ಇಟ್ಟಿರುವ ಫಿಕ್ಸೆಡ್‌ ಡಿಪಾಸಿಟ್‌ ಮೌಲ್ಯ 7,000 ಕೋಟಿ ರೂ!


ಉಗಾಂಡಾ ಶಿಲ್ಲಿಂಗ್ (UGX)

1966ರಲ್ಲಿ ಉಗಾಂಡಾದ ಶಿಲ್ಲಿಂಗ್ ಪೂರ್ವ ಆಫ್ರಿಕಾದ ಶಿಲ್ಲಿಂಗ್ ಅನ್ನು ಬದಲಿಸಿತು. ಪ್ರಸ್ತುತ ಉಗಾಂಡಾದ ಶಿಲ್ಲಿಂಗ್ ಅತ್ಯಂತ ಕಡಿಮೆ ಬೆಲೆಬಾಳುವ ಕರೆನ್ಸಿಗಳಲ್ಲಿ ಒಂದಾಗಿದೆ. ಇದಿ ಅಮೀನ್ ಆಳ್ವಿಕೆಯ ಅಡಿಯಲ್ಲಿ ಉಗಾಂಡಾವು ರಾಷ್ಟ್ರದ ಆರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ವಲಸೆ ಕಾನೂನುಗಳಂತಹ ಕ್ರಮಗಳಿಂದ ಗಮನಾರ್ಹ ಹಿನ್ನಡೆ ಅನುಭವಿಸಿತು. ಅಧ್ಯಕ್ಷರ ಆರ್ಥಿಕ ಕುಸಿತದ ಪರಿಣಾಮಗಳು ದೇಶದ ಪ್ರಗತಿಗೆ ಅಡ್ಡಿಯಾಗುತ್ತಲೇ ಇವೆ. ಆದರೂ ಇತ್ತೀಚಿನ ವರ್ಷಗಳಲ್ಲಿ ಕರೆನ್ಸಿಯ ಮೌಲ್ಯವು ಹೆಚ್ಚಿದೆ. ಇಲ್ಲಿ ಪ್ರಸ್ತುತ ಭಾರತೀಯ 1 ರೂಪಾಯಿಯು 44.22 ಯುಜಿಎಕ್ಸ್ ಆಗಿದೆ.

ಈ ಹತ್ತು ಅಗ್ಗದ ದೇಶಗಳ ಕರೆನ್ಸಿಯೊಂದಿಗೆ ಭಾರತೀಯ ರೂಪಾಯಿ ಮೌಲ್ಯದ ಹೋಲಿಕೆಯು 2024ರ ಆಗಸ್ಟ್ 19ರ ಅಂಕಿ ಅಂಶಗಳನ್ನು ಆಧರಿಸಿ ನೀಡಲಾಗಿದೆ. ಇದು ಕೆಲವೊಮ್ಮೆ ಕೊಂಚ ಏರಿಳಿತ ಕಾಣಬಹುದು.

Continue Reading

ದೇಶ

Richest Village: ಗುಜರಾತ್‌ನಲ್ಲಿದೆ ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ! ಇಲ್ಲಿಯ ಜನ ಇಟ್ಟಿರುವ ಫಿಕ್ಸೆಡ್‌ ಡಿಪಾಸಿಟ್‌ ಮೌಲ್ಯ 7,000 ಕೋಟಿ ರೂ!

ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮವೊಂದು (Richest Village) ಗುಜರಾತ್‌ನಲ್ಲಿದೆ. ಅದರ ಸಮೃದ್ಧಿಯ ಹಿಂದಿನ ಕಾರಣ ಅಚ್ಚರಿಯನ್ನು ಉಂಟು ಮಾಡುತ್ತದೆ. ಇಲ್ಲಿನ ನಿವಾಸಿಗಳು ಕನಿಷ್ಠ 7,000 ಕೋಟಿ ರೂ. ಮೌಲ್ಯದ ಸ್ಥಿರ ಠೇವಣಿಗಳನ್ನು ಹೊಂದಿದ್ದಾರೆ. ಇದು ಅವರು ಎಷ್ಟು ಶ್ರೀಮಂತರು ಎಂಬುದರ ಒಂದು ಸಣ್ಣ ನೋಟವಷ್ಟೇ! ಈ ಕುರಿತ ಕುತೂಹಲಕರ ವರದಿ ಇಲ್ಲಿದೆ.

VISTARANEWS.COM


on

By

Richest Village
Koo

ಗುಜರಾತ್ (Gujarat) ಭಾರತದ ಪ್ರಮುಖ ವ್ಯಾಪಾರ ತಾಣಗಳಲ್ಲಿ ಒಂದಾಗಿದ್ದು, ಇದು ದೇಶಕ್ಕೆ ಕೆಲವು ಉನ್ನತ ಕೈಗಾರಿಕೋದ್ಯಮಿಗಳನ್ನು ನೀಡಿದೆ. ಆದರೆ ಸಮೃದ್ಧಿ ಕೇವಲ ನಗರಗಳಿಗೆ ಸೀಮಿತವಾಗಿಲ್ಲ. ಇಲ್ಲಿರುವ ಪುಟ್ಟ ಗ್ರಾಮವೊಂದು ಏಷ್ಯಾದ ಶ್ರೀಮಂತ (richest village in Asia) ಗ್ರಾಮವಾಗಿ (Richest Village) ಗುರುತಿಸಿಕೊಂಡಿದೆ.

ಕಛ್‌ನಲ್ಲಿರುವ ಮಾಧಾಪರ್ ಅನ್ನು ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ ಎಂದು ಕರೆಯಲಾಗುತ್ತದೆ. ಯಾಕೆಂದರೆ ಇಲ್ಲಿ ಆರ್ಥಿಕ ಸಮೃದ್ಧಿಗೇನೂ ಕೊರತೆಯಿಲ್ಲ. ಭುಜ್‌ನ ಹೊರವಲಯದಲ್ಲಿರುವ ಈ ಗ್ರಾಮದ ನಿವಾಸಿಗಳು 7,000 ಕೋಟಿ ರೂ. ಮೌಲ್ಯದ ಸ್ಥಿರ ಠೇವಣಿಗಳನ್ನು ಹೊಂದಿದ್ದಾರೆ. ಇದು ಅವರು ಎಷ್ಟು ಶ್ರೀಮಂತರು ಎಂಬುದನ್ನು ಹೇಳುತ್ತದೆ.

ಮಾಧಾಪರ್‌ನಲ್ಲಿ ಪಟೇಲ್ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಇವರ ಜನಸಂಖ್ಯೆಯು ಸುಮಾರು 32,000 ಎಂದು ಅಂದಾಜಿಸಲಾಗಿದೆ. ಇದು 2011 ರಲ್ಲಿ 17,000 ಆಗಿತ್ತು.

ಈ ಹಳ್ಳಿಯು ಹೆಚ್ ಡಿಎಫ್ ಸಿ ಬ್ಯಾಂಕ್, ಎಸ್‌ಬಿಐ, ಪಿಎನ್‌ಬಿ, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್ ಮುಂತಾದ ಪ್ರಮುಖ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳನ್ನು ಒಳಗೊಂಡಂತೆ 17 ಬ್ಯಾಂಕ್‌ಗಳನ್ನು ಹೊಂದಿದೆ. ಇದು ಒಂದೇ ಹಳ್ಳಿಗೆ ಅಸಾಮಾನ್ಯವಾಗಿದೆ. ಅದರ ಹೊರತಾಗಿಯೂ ಹೆಚ್ಚಿನ ಬ್ಯಾಂಕ್‌ಗಳು ಇಲ್ಲಿ ತಮ್ಮ ಶಾಖೆಗಳನ್ನು ತೆರೆಯಲು ಆಸಕ್ತಿ ಹೊಂದಿವೆ.


ಗ್ರಾಮದ ಈ ಏಳಿಗೆಯ ಹಿಂದಿನ ಕಾರಣವೆಂದರೆ ಅನಿವಾಸಿ ಭಾರತೀಯ ಕುಟುಂಬಗಳು. ಅವರು ಸ್ಥಳೀಯ ಬ್ಯಾಂಕು ಮತ್ತು ಅಂಚೆ ಕಚೇರಿಗಳಲ್ಲಿ ಪ್ರತಿ ವರ್ಷ ಕೋಟಿ ರೂ. ಗಳನ್ನು ಠೇವಣಿ ಮಾಡುತ್ತಾರೆ. ಗ್ರಾಮವು ಸುಮಾರು 20,000 ಮನೆಗಳನ್ನು ಹೊಂದಿದೆ. ಆದರೆ ಸುಮಾರು 1,200 ಕುಟುಂಬಗಳು ವಿದೇಶದಲ್ಲಿ ಅದರಲ್ಲೂ ಹೆಚ್ಚಾಗಿ ಆಫ್ರಿಕನ್ ದೇಶಗಳಲ್ಲಿ ವಾಸಿಸುತ್ತಿವೆ.

ಮಧ್ಯ ಆಫ್ರಿಕಾದಲ್ಲಿನ ನಿರ್ಮಾಣ ವ್ಯವಹಾರಗಳಲ್ಲಿ ಗುಜರಾತಿಗಳು ಹೆಚ್ಚು ಪ್ರಾಬಲ್ಯ ಹೊಂದಿದ್ದಾರೆ. ಈ ಪ್ರದೇಶ ದೊಡ್ಡ ವಲಸಿಗ ಜನಸಂಖ್ಯೆಯ ಭಾಗವಾಗಿದೆ. ಅನೇಕರು ಯುಕೆ, ಆಸ್ಟ್ರೇಲಿಯಾ, ಅಮೆರಿಕ ಮತ್ತು ನ್ಯೂಜಿಲೆಂಡ್‌ನಲ್ಲಿಯೂ ವಾಸಿಸುತ್ತಿದ್ದಾರೆ.

ಅನೇಕ ಗ್ರಾಮಸ್ಥರು ವಿದೇಶದಲ್ಲಿ ವಾಸಿಸುತ್ತಿದ್ದರೂ, ಅಲ್ಲೇ ಕೆಲಸ ಮಾಡಿಕೊಂಡಿದ್ದರೂ ಅವರು ತಮ್ಮ ಗ್ರಾಮದೊಂದಿಗೆ ನಂಟು ಹೊಂದಿದ್ದಾರೆ ಮತ್ತು ಅವರು ವಾಸಿಸುವ ಸ್ಥಳಕ್ಕಿಂತ ಹೆಚ್ಚಾಗಿ ತಮ್ಮ ಹಣವನ್ನು ಇಲ್ಲಿನ ಬ್ಯಾಂಕ್‌ಗಳಲ್ಲಿ ಇಡಲು ಬಯಸುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಪಾರುಲ್ಬೆನ್ ಕಾರ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

ಇದನ್ನೂ ಓದಿ: Job market: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ; ವರ್ಷಾಂತ್ಯದೊಳಗೆ ಹೊಸಬರ ನೇಮಕಕ್ಕೆ ಮುಂದಾದ ಶೇ. 72ರಷ್ಟು ಕಂಪನಿಗಳು!

ಗ್ರಾಮದ ಬ್ಯಾಂಕ್ ಗಳಲ್ಲಿ ಅಪಾರ ಠೇವಣಿ ಇಡುವುದರಿಂದ ಗ್ರಾಮ ಸಮೃದ್ಧಿಯಾಗಿದೆ. ನೀರು, ನೈರ್ಮಲ್ಯ ಮತ್ತು ರಸ್ತೆಯಂತಹ ಎಲ್ಲಾ ಮೂಲ ಸೌಕರ್ಯಗಳನ್ನು ಹೊಂದಿದೆ. ಸಾರ್ವಜನಿಕ ಮತ್ತು ಖಾಸಗಿ ಶಾಲೆಗಳು, ಕೆರೆಗಳು ಮತ್ತು ದೇವಾಲಯಗಳು ಬಂಗಲೆಗಳಿವೆ ಎನ್ನುತ್ತಾರೆ ಗ್ರಾಮದ ರಾಷ್ಟ್ರೀಕೃತ ಬ್ಯಾಂಕ್‌ನ ಸ್ಥಳೀಯ ಶಾಖಾ ವ್ಯವಸ್ಥಾಪಕರು.

Continue Reading

ಮನಿ-ಗೈಡ್

Fixed Deposits: ಪೋಸ್ಟ್ ಆಫೀಸ್ ಎಫ್‌ಡಿ; ಬಡ್ಡಿ ದರ ಎಷ್ಟು, ಏನೆಲ್ಲ ಲಾಭ?

ಕಷ್ಟಪಟ್ಟುಗಳಿಸಿದ ಹಣವನ್ನು ಹೂಡಿಕೆ ಮಾಡಲು ಸುರಕ್ಷಿತ ಆಯ್ಕೆಯನ್ನು ಹುಡುಕುತ್ತಿದ್ದರೆ ಭದ್ರತೆಯನ್ನು ಒದಗಿಸುವ ಯೋಜನೆಗಿಂತ ಉತ್ತಮವಾದದ್ದು ಯಾವುದೂ ಇಲ್ಲ. ಅಂಚೆ ಕಚೇರಿಯ ಫಿಕ್ಸೆಡ್ ಡೆಪಾಸಿಟ್‌ನಲ್ಲಿ (Fixed Deposits) ಹೂಡಿಕೆ ಮಾಡಿದರೆ ಉತ್ತಮ ಆದಾಯದೊಂದಿಗೆ ಸಾಕಷ್ಟು ಪ್ರಯೋಜನವನ್ನು ಪಡೆಯಬಹುದು. ಈ ಕುರಿತ ಸರಳ ಮಾಹಿತಿ ಇಲ್ಲಿದೆ.

VISTARANEWS.COM


on

By

Fixed Deposits
Koo

ಸುರಕ್ಷಿತ ಮತ್ತು ವಿಶ್ವಾಸಾರ್ಹ ಹೂಡಿಕೆಯಾಗಿ ಎಲ್ಲರ ಗಮನ ಸೆಳೆಯುವ ಪೋಸ್ಟ್ ಆಫೀಸ್‌ನ (post office) ಫಿಕ್ಸೆಡ್ ಡೆಪಾಸಿಟ್‌ಗಳನ್ನು (Fixed Deposits) ಟರ್ಮ್ ಡಿಪಾಸಿಟ್‌ಗಳು (term deposits) ಎಂದೂ ಕರೆಯಲಾಗುತ್ತದೆ. ಇದೊಂದು ಅದ್ಭುತ ಯೋಜನೆಯಾಗಿದ್ದು, ಹೂಡಿಕೆ ಬಗ್ಗೆ ಯೋಚನೆ ಮಾಡುತ್ತಿದ್ದರೆ ಇದರಲ್ಲಿ ಹೂಡಿಕೆ (investment) ಮಾಡಬಹುದು. ಅದಕ್ಕೂ ಮೊದಲು ಇದರ ಬಗ್ಗೆ ಸಂಪೂರ್ಣ ತಿಳಿದುಕೊಂಡರೆ ಒಳ್ಳೆಯದು.

ಪೋಸ್ಟ್ ಆಫೀಸ್ ಎಫ್‌ಡಿ ಅಥವಾ ಟರ್ಮ್ ಡೆಪಾಸಿಟ್‌ಗಳು ಇಂಡಿಯಾ ಪೋಸ್ಟ್ ಮೂಲಕ ಉಳಿತಾಯ ಮಾಡುವ ಸುರಕ್ಷಿತ ಮತ್ತು ಸುಲಭವಾದ ಮಾರ್ಗಗಳಾಗಿವೆ.

ಬ್ಯಾಂಕ್‌ಗಳು ಎಲ್ಲ ಕಡೆ ಲಭ್ಯವಿರುವುದಿಲ್ಲ. ಹೀಗಾಗಿ ಹತ್ತಿರದ ಪೋಸ್ಟ್ ಆಫೀಸ್‌ನಲ್ಲಿ ಸಿಗುವ ಕೆಲವೊಂದು ಪ್ರಯೋಜನಗಳನ್ನು ನಾವು ಸುಲಭವಾಗಿ ಪಡೆಯಬಹುದು. ಪೋಸ್ಟ್ ಆಫೀಸ್‌ನಲ್ಲಿ ಲಭ್ಯವಿರುವ ಎಫ್‌ಡಿ ಯೋಜನೆಯು ಠೇವಣಿದಾರರಿಗೆ ಹೆಚ್ಚಿನ ಬಡ್ಡಿದರದೊಂದಿಗೆ ತಮ್ಮ ಹಣವನ್ನು ಉಳಿಸಲು ಅವಕಾಶ ನೀಡುತ್ತದೆ. ಪೋಸ್ಟ್ ಆಫೀಸ್ ಎಫ್‌ಡಿ ಯೋಜನೆಯು ಗ್ರಾಮೀಣ ಜನರಲ್ಲಿ ವಿಶೇಷವಾಗಿ ಅಚ್ಚುಮೆಚ್ಚಿನದ್ದಾಗಿದೆ. ಯಾಕೆಂದರೆ ಇದು ಭಾರತದಲ್ಲಿನ ಅಗ್ರ ಸ್ಥಿರ ಠೇವಣಿ ಪೂರೈಕೆದಾರರಲ್ಲಿ ಒಂದಾಗಿದೆ.

2024ರ ಬಡ್ಡಿ ದರಗಳು

ಪೋಸ್ಟ್ ಆಫೀಸ್‌ನಲ್ಲಿ ಎಫ್‌ಡಿ ಬಡ್ಡಿ ದರ ಇಂತಿದೆ. 1 ವರ್ಷಕ್ಕೆ ಶೇ. 6, 1 ವರ್ಷ 1 ದಿನದಿಂದ 2 ವರ್ಷಗಳ ವರೆಗೆ ಶೇ. 7, 2 ವರ್ಷ 1 ದಿನದಿಂದ 3 ವರ್ಷಗಳ ವರೆಗೆ ಶೇ. 7.1, 3 ವರ್ಷಗಳಿಂದ 5 ವರ್ಷಗಳವರೆಗೆ ಶೇ. 7.5ರಷ್ಟು ಬಡ್ಡಿ ದರವನ್ನು ನೀಡಲಾಗುತ್ತದೆ.

ಪ್ರಯೋಜನಗಳು ಏನೇನು?

ಪೋಸ್ಟ್ ಆಫೀಸ್‌ನ ಎಫ್‌ಡಿಯಲ್ಲಿ ಒಂದು ವರ್ಷದಿಂದ ಐದು ವರ್ಷಗಳವರೆಗೆ ಹೂಡಿಕೆಯ ಅವಧಿಯನ್ನು ಆಯ್ಕೆ ಮಾಡಬಹುದು. ಒಬ್ಬ ವ್ಯಕ್ತಿಯು ಯಾವುದೇ ಅಂಚೆ ಕಚೇರಿಯಲ್ಲಿ ತನಗೆ ಬೇಕಾದಷ್ಟು ಎಫ್‌ಡಿ ಖಾತೆಗಳನ್ನು ತೆರೆಯಬಹುದು. ಖಾತೆಗಳನ್ನು 10 ವರ್ಷ ಮತ್ತು ಮೇಲ್ಪಟ್ಟವರು ಯಾರಾದರೂ ತೆರೆಯಬಹುದು. ಅಂತಹ ಖಾತೆಗಳನ್ನು 18 ವರ್ಷ ತುಂಬಿದ ಅನಂತರ ಅಪ್ರಾಪ್ತರ ಹೆಸರಿಗೆ ವರ್ಗಾಯಿಸಬಹುದು.

ಠೇವಣಿ ಮಾಡಬೇಕಾದ ಕನಿಷ್ಠ ಮೊತ್ತ 200 ರೂ. ಆಗಿದ್ದು, ಗರಿಷ್ಠ ಮೊತ್ತಕ್ಕೆ ಮಿತಿ ಇಲ್ಲ. ಇದರಲ್ಲಿ ಜಂಟಿ ಖಾತೆಯನ್ನು ತೆರೆಯಲು ಅವಕಾಶವಿದೆ. ಅಗತ್ಯವಿರುವಂತೆ ಏಕ ಮತ್ತು ಜಂಟಿ ಖಾತೆ ನಡುವೆ ಬದಲಾಯಿಸಲೂಬಹುದು.
5 ವರ್ಷಗಳ ಹೂಡಿಕೆ ಮಾಡಿರುವ ಠೇವಣಿಗಳಿಗೆ ತೆರಿಗೆ ಕಾಯಿದೆಯ ಸೆಕ್ಷನ್ 80ಸಿ ಅಡಿಯಲ್ಲಿ ತೆರಿಗೆ ವಿನಾಯಿತಿಯನ್ನೂ ಪಡೆಯಬಹುದು. ಖಾತೆಗಳನ್ನು ಸುಲಭವಾಗಿ ಒಂದು ಅಂಚೆ ಕಚೇರಿಯಿಂದ ಇನ್ನೊಂದು ಅಂಚೆ ಕಚೇರಿಗೆ ವರ್ಗಾಯಿಸಬಹುದಾಗಿದೆ. ಎಲ್ಲ ಖಾತೆಗಳು ಆಯಾ ಕಾಲದ ಬಡ್ಡಿ ದರಗಳೊಂದಿಗೆ ಮುಕ್ತಾಯದ ಸಮಯದಲ್ಲಿ ಸ್ವಯಂ ಚಾಲಿತವಾಗಿ ಮರುಸಮತೋಲನಗೊಳ್ಳುತ್ತವೆ.

ಇದನ್ನೂ ಓದಿ: National Pension Scheme: ಎನ್‌ಪಿಎಸ್‌ನಲ್ಲಿ ದಿನಕ್ಕೆ 200 ರೂ. ಹೂಡಿಕೆ ಮಾಡಿದರೆ ಸಿಗುವ ಮಾಸಿಕ ಪಿಂಚಣಿ ಎಷ್ಟು ಗೊತ್ತೇ?

ಅಗತ್ಯವಿರುವ ದಾಖಲೆಗಳು ಏನೇನು?

ಭಾರತೀಯ ನಿವಾಸಿಗಳಿಗೆ ಒಂಟಿಯಾಗಿ ಅಥವಾ ಜಂಟಿಯಾಗಿ, ಪೋಷಕರ ಆರೈಕೆಯಲ್ಲಿ ಅಪ್ರಾಪ್ತ ವಯಸ್ಕರು ಈ ಖಾತೆಗಳನ್ನು ತೆರೆಯಬಹುದು. ಆದರೆ ಎನ್‌ಆರ್‌ಐಗಳು ಮತ್ತು ಸಂಸ್ಥೆಗಳಿಗೆ ಈ ಖಾತೆ ತೆರೆಯಲು ಅವಕಾಶವಿಲ್ಲ.

ಆಧಾರ್, ಪಾನ್ ಕಾರ್ಡ್ ಗುರುತಿನ ಪುರಾವೆಯಾಗಿ, ವಿದ್ಯುತ್ ಬಿಲ್, ನೀರಿನ ಸಂಪರ್ಕ, ಪಾಸ್‌ಪೋರ್ಟ್ ಇತ್ಯಾದಿಗಳನ್ನು ವಿಳಾಸ ಪುರಾವೆಯಾಗಿ, ಸಾಕ್ಷಿ ಸಹಿಯೊಂದಿಗೆ ನಾಮಿನಿ ವಿವರಗಳನ್ನು ಒಳಗೊಂಡಂತೆ ದಾಖಲೆ ಪುರಾವೆಗಳನ್ನು ಒದಗಿಸಬಹುದು.

Continue Reading
Advertisement
Actor darshan
ಸ್ಯಾಂಡಲ್ ವುಡ್5 mins ago

Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

Western Ghats
ಕರ್ನಾಟಕ30 mins ago

Western Ghats: ಭೂ ಕುಸಿತ ಹಿನ್ನೆಲೆ; ಪಶ್ಚಿಮ ಘಟ್ಟಗಳಲ್ಲಿನ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ

Israel vs Hezbollah War
ವಿದೇಶ48 mins ago

Israel vs Hezbollah War: ಹೆಜ್ಬುಲ್ಲಾ ಉಗ್ರರ ಅಟ್ಟಹಾಸ; ಲೆಬನಾನ್‌ ಮೇಲೆ ರಾಕೆಟ್​ ದಾಳಿ ಆರಂಭಿಸಿದ ಇಸ್ರೇಲ್​; ಭಯಾನಕ ವಿಡಿಯೊ ಇಲ್ಲಿದೆ

Dhanya Ramkumar-Vicky Varun starrer Kaalapathar to release on September 13
ಸಿನಿಮಾ1 hour ago

Dhanya Ramkumar: ತೆರೆಗೆ ಸಿದ್ಧವಾಯ್ತು ಕಾಲಾಪತ್ಥರ್‌; ಸೆ.13ಕ್ಕೆ ಧನ್ಯಾ ರಾಮ್‌ಕುಮಾರ್- ವಿಕ್ಕಿ ವರುಣ್‌ ನಟನೆ ಮೋಡಿ

Karkala Shocker
ಕರ್ನಾಟಕ1 hour ago

Karkala Shocker: ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿದ ಅಲ್ತಾಫ್‌ಗೆ ಕಠಿಣ ಶಿಕ್ಷೆಯಾಗಲಿ ಎಂದ ಮುಸ್ಲಿಂ ಒಕ್ಕೂಟ

Pavel Durov Arrest
ವಿದೇಶ1 hour ago

Pavel Durov Arrest: ಟೆಲಿಗ್ರಾಂ ಸಿಇಒ ಪಾವೆಲ್‌‌ ಫ್ರಾನ್ಸ್‌‌ನಲ್ಲಿ ಬಂಧನ; ಕಾರಣ ಏನು?

CBI Raid
ದೇಶ2 hours ago

CBI Raid: ಆರ್‌.ಜಿ. ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ನಿವಾಸದ ಮೇಲೆ ಸಿಬಿಐ ದಾಳಿ

Israel strike
ವಿದೇಶ2 hours ago

Israel strike: ರಾಕೆಟ್ ದಾಳಿ; ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

Rohit Sharma
ಕ್ರೀಡೆ3 hours ago

Rohit Sharma: ಪಾರ್ಕ್​ನಲ್ಲಿ ಅಭ್ಯಾಸ ನಡೆಸಿದ ರೋಹಿತ್​; ವಿಡಿಯೊ ವೈರಲ್​

Chain snatching Case
ಕ್ರೈಂ3 hours ago

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿದ; ಚೈನ್ ಸ್ನಾಚಿಂಗ್‌ಗೆ ಇಳಿದು ಸಿಕ್ಕಿಬಿದ್ದ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ21 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌