Cash Limit At Home: ಮನೆಯಲ್ಲಿ ಎಷ್ಟು ಹಣ ಇರಿಸಿಕೊಳ್ಳಬಹುದು? ಮಿತಿಗಿಂತ ಹೆಚ್ಚಿದ್ದರೆ ಏನಾಗುತ್ತದೆ? - Vistara News

ವಾಣಿಜ್ಯ

Cash Limit At Home: ಮನೆಯಲ್ಲಿ ಎಷ್ಟು ಹಣ ಇರಿಸಿಕೊಳ್ಳಬಹುದು? ಮಿತಿಗಿಂತ ಹೆಚ್ಚಿದ್ದರೆ ಏನಾಗುತ್ತದೆ?

ಮನೆಯಲ್ಲಿ ಹಣವನ್ನು (Cash Limit At Home) ಇಡಲು ಆದಾಯ ತೆರಿಗೆ ಕೆಲವು ನಿಯಮಗಳನ್ನು ಮಾಡಿದೆ. ಈ ನಿಯಮಗಳನ್ನು ಅನುಸರಿಸದಿದ್ದರೆ ಅಥವಾ ತಪ್ಪು ಮಾಡಿದರೆ ಅದಕ್ಕೆ ಉತ್ತರಿಸಬೇಕಾಗಬಹುದು ಮಾತ್ರವಲ್ಲದೇ ಜೈಲು ಶಿಕ್ಷೆಗೂ ಒಳಗಾಗಬೇಕಾಗಬಹುದು. ಈ ಕುರಿತ ಮಾಹಿತಿ ಇಲ್ಲಿ ಕೊಡಲಾಗಿದೆ.

VISTARANEWS.COM


on

Cash Limit At Home
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಾವೀಗ ಡಿಜಿಟಲ್ (digital) ಯುಗದಲ್ಲಿದ್ದೇವೆ. ಹೀಗಾಗಿ ಜೇಬಿಗಿಂತ ಹಣವನ್ನು ಬ್ಯಾಂಕ್ ಖಾತೆಯಲ್ಲಿ (bank account) ಇರಿಸುವುದು ಸುರಕ್ಷಿತ ಎಂದು ಎಲ್ಲರೂ ಭಾವಿಸುತ್ತಾರೆ. ಆದರೆ ಇನ್ನೂ ಬಹಳಷ್ಟು ಮಂದಿ ಬ್ಯಾಂಕ್, ಡಿಜಿಟಲ್ ವಹಿವಾಟಿನ ಜಂಜಾಟ ಯಾಕೆಂದುಕೊಂಡು ಮನೆಯಲ್ಲೇ ಹಣವನ್ನು ಇಟ್ಟುಕೊಂಡಿರುತ್ತಾರೆ. ಮನೆಯಲ್ಲಿ ಬೇಕಾಬಿಟ್ಟಿ ಹಣ (Cash Limit At Home) ಇಟ್ಟುಕೊಳ್ಳುವಂತಿಲ್ಲ ಎಂಬುದು ಹೆಚ್ಚಿನವರಿಗೆ ಗೊತ್ತಿಲ್ಲ.

ಮನೆಯಲ್ಲಿ ಇಟ್ಟುಕೊಳ್ಳಬಹುದಾದ ನಗದಿಗೆ ನಿರ್ದಿಷ್ಟ ಮಿತಿ ಇದೆ. ಅಷ್ಟು ಹಣವನ್ನು ಮಾತ್ರ ಇಟ್ಟುಕೊಳ್ಳಬಹುದು. ಮಿತಿಯ ಒಳಗೆ ಮನೆಯಲ್ಲಿ ನಗದು ಇಟ್ಟುಕೊಂಡರೆ ಅದಕ್ಕೆ ತೆರಿಗೆ ಇಲ್ಲ. ಮನೆಯಲ್ಲಿ ಹಣವನ್ನು ಇಡಲು ಆದಾಯ ತೆರಿಗೆ ಕೆಲವು ನಿಯಮಗಳನ್ನು ಮಾಡಿದೆ. ಈ ನಿಯಮಗಳನ್ನು ಅನುಸರಿಸದಿದ್ದರೆ ಅಥವಾ ತಪ್ಪು ಮಾಡಿದರೆ ಅದಕ್ಕೆ ಉತ್ತರಿಸಬೇಕಾಗಬಹುದು ಮಾತ್ರವಲ್ಲದೇ ಜೈಲು ಶಿಕ್ಷೆಗೂ ಒಳಗಾಗಬೇಕಾಗಬಹುದು.

ಮನೆಯಲ್ಲಿ ಹಣ ಇಡುವುದು ಏಕೆ?

ವೇಗವಾಗಿ ಬೆಳೆಯುತ್ತಿರುವ ಡಿಜಿಟಲ್ ಯುಗದಲ್ಲಿ ಜನರು ಮನೆಯಲ್ಲಿ ಹಣವನ್ನು ಇಡುವುದನ್ನು ಕಡಿಮೆ ಮಾಡಿದ್ದಾರೆ. ಆದರೆ ಹಿಂದೆ ಅಜ್ಜಿಯ ಕಾಲದಲ್ಲಿ ಯಾವುದೇ ತುರ್ತು ಪರಿಸ್ಥಿತಿಗೆ ಮನೆಯಲ್ಲಿ ನಗದನ್ನು ಇಟ್ಟುಕೊಳ್ಳಲು ಸಲಹೆ ನೀಡುತ್ತಿದ್ದರು ಎಂಬುದು ಎಲ್ಲರಿಗೂ ನೆನಪಿರಬಹುದು. ಅದಕ್ಕೂ ಮೊದಲು ಜನರು ಬ್ಯಾಂಕ್‌ಗಳಲ್ಲಿ ಹಣವನ್ನು ಠೇವಣಿ ಮಾಡಲು ನಿರಾಕರಿಸುತ್ತಿದ್ದರು ಮತ್ತು ಸಂಗ್ರಹಿಸಿದ ಹಣವನ್ನು ತಮ್ಮ ಮನೆಗಳಲ್ಲಿ ಎಲ್ಲೋ ಬಚ್ಚಿಡುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಜನರು ಡಿಜಿಟಲ್ ವ್ಯಾಲೆಟ್‌ಗಳ ಮೂಲಕ ಖರ್ಚು ಮಾಡುತ್ತಾರೆ.

ಮನೆಯಲ್ಲಿ ಎಷ್ಟು ಹಣ ಇಡಬಹುದು?

ಮನೆಯಲ್ಲಿ ಎಷ್ಟು ಹಣವನ್ನು ಇರಿಸಬಹುದು, ಹೆಚ್ಚಿನ ಹಣ ಇಟ್ಟುಕೊಂಡರೆ ಎಷ್ಟು ದಂಡವನ್ನು ವಿಧಿಸಲಾಗುತ್ತದೆ ಇಂತಹ ಹಲವು ಪ್ರಶ್ನೆಗಳು ಈಗ ಮನದಲ್ಲಿ ಹುಟ್ಟಿಕೊಂಡಿರಬಹುದು. ಆದಾಯ ತೆರಿಗೆ ನಿಯಮಗಳ ಪ್ರಕಾರ, ನಾವು ಎಷ್ಟು ಆದಾಯ ಮತ್ತು ಆದಾಯ ಮೂಲಗಳನ್ನು ಘೋಷಣೆ ಮಾಡುತ್ತೇವೋ ಅಷ್ಟು ಪ್ರಮಾಣದ ಹಣವನ್ನು ಮನೆಯಲ್ಲಿ ಇರಿಸಿಕೊಳ್ಳಲು ಅವಕಾಶವಿದೆ.

ಒಂದು ವೇಳೆ ಹೆಚ್ಚಿನ ಹಣ ಇಟ್ಟುಕೊಂಡಿದ್ದರೆ ತನಿಖಾ ಸಂಸ್ಥೆ ಕೇಳುವ ಪ್ರಶ್ನೆಗಳಿಗೆ ಮುಖ್ಯವಾಗಿ ಆದಾಯ ಅಥವಾ ಆ ಹಣದ ಮೂಲವನ್ನು ಹೇಳಬೇಕಾಗುತ್ತದೆ. ಒಂದು ವೇಳೆ ತೆರಿಗೆ ಫೈಲ್ ಮಾಡಿದರೆ ಚಿಂತೆ ಇರುವುದಿಲ್ಲ.


ದಾಖಲೆಗಳಿರಲಿ

ನಗದು ಹರಿವಿನ ಸಂಪೂರ್ಣ ಮೂಲವನ್ನು ತಿಳಿದಿರುವುದು ಮತ್ತು ಆದಾಯದ ಮೂಲವನ್ನು ಸಹ ತಿಳಿದುಕೊಳ್ಳುವುದು ಮುಖ್ಯ. ಇದಕ್ಕಾಗಿ ಸಂಪೂರ್ಣ ದಾಖಲೆಗಳನ್ನು ಹೊಂದಿರಬೇಕು. ಅಗತ್ಯವಿದ್ದಾಗ ಇದನ್ನು ತೋರಿಸಬಹುದು. ಪ್ರತಿ ವರ್ಷ ಆದಾಯ ತೆರಿಗೆ ರಿಟರ್ನ್ ಸಲ್ಲಿಸಿದರೆ, ಚಿಂತಿಸಬೇಕಾಗಿಲ್ಲ. ಆದರೆ ನಗದು ಆದಾಯ ತೆರಿಗೆ ನಿಯಮಗಳ ಪ್ರಕಾರ ಇರಬೇಕು. ಆದಾಯ ತೆರಿಗೆ ನಿಯಮಗಳ ಪ್ರಕಾರ ವಾರ್ಷಿಕವಾಗಿ 5ರಿಂದ 50 ಲಕ್ಷ ರೂಪಾಯಿ ನಗದು ಇಟ್ಟುಕೊಂಡರೆ ಸಮಸ್ಯೆ ಇರುವುದಿಲ್ಲ. ಆದರೆ ಇದಕ್ಕೆ ಸೂಕ್ತ ದಾಖಲೆಗಳು ಇರಬೇಕು.

ಸಮಸ್ಯೆ ಯಾವಾಗ ಉಂಟಾಗುತ್ತದೆ?

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯ ಸಮಯದಲ್ಲಿ ಆದಾಯ ತೆರಿಗೆ ಅಧಿಕಾರಿಗಳಿಗೆ ನಗದು ಖಾತೆಯ ಮಾಹಿತಿಯನ್ನು ನೀಡಲು ಸಾಧ್ಯವಾಗದಿದ್ದರೆ ಸಮಸ್ಯೆ ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: National Pension Scheme: ಎನ್‌ಪಿಎಸ್‌ನಲ್ಲಿ ದಿನಕ್ಕೆ 200 ರೂ. ಹೂಡಿಕೆ ಮಾಡಿದರೆ ಸಿಗುವ ಮಾಸಿಕ ಪಿಂಚಣಿ ಎಷ್ಟು ಗೊತ್ತೇ?

ಆದಾಯ ತೆರಿಗೆ ಇಲಾಖೆಯ ದಾಳಿಯ ಸಮಯದಲ್ಲಿ ಆದಾಯದ ಬಗ್ಗೆ ಖಚಿತವಾದ ಮಾಹಿತಿಯನ್ನು ನೀಡಬೇಕಾಗುತ್ತದೆ. ಸರಿಯಾದ ಮಾಹಿತಿಯನ್ನು ಹೊಂದಿದ್ದರೆ ಯಾವುದೇ ರೀತಿಯ ದಂಡವನ್ನು ಪಾವತಿಸಬೇಕಾಗಿಲ್ಲ. ಆದರೆ ಮಾಹಿತಿಯನ್ನು ನೀಡಲು ಸಾಧ್ಯವಾಗದಿದ್ದರೆ ಪತ್ತೆಯಾದ ನಗದಿನ ಮೇಲೆ ಶೇ. 137ರಷ್ಟು ತೆರಿಗೆಯನ್ನು ವಿಧಿಸಬಹುದು. ಅಂದರೆ, ನೀವು ನಗದು ಜೊತೆಗೆ ಶೇ. 37ರಷ್ಟು ಹೆಚ್ಚುವರಿ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಜತೆಗೆ ದಂಡ ಮತ್ತು ಶಿಕ್ಷೆಗೂ ಗುರಿಯಾಗಬೇಕಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Industrial City: ಹೊಸೂರಿನಲ್ಲಿ ಟಾಟಾ ಗ್ರೂಪ್‌ನಿಂದ ಇಂಡಸ್ಟ್ರಿಯಲ್‌ ಸಿಟಿ ನಿರ್ಮಾಣಕ್ಕೆ ಸಿದ್ಧತೆ; ಬೆಂಗಳೂರಿನ ಐಟಿ ಸಿಟಿ ಪಟ್ಟಕ್ಕೆ ಕುತ್ತು?

Industrial City: ಐಟಿ ಸಿಟಿ ಎನ್ನುವ ಹೆಗ್ಗಳಿಕೆಯನ್ನು ಬೆಂಗಳೂರು ಕಳೆದುಕೊಳ್ಳುತ್ತಾ? ಸದ್ಯ ಹೀಗೊಂದು ಚರ್ಚೆ ಸೋಷಿಯಲ್‌ ಮೀಡಿಯಾದಲ್ಲಿ ಆರಂಭವಾಗಿದೆ. ಐಟಿ ಕಂಪನಿಗಳನ್ನು ನೆರೆಯ ತಮಿಳುನಾಡು ಸೆಳೆದುಕೊಳ್ಳುತ್ತಿರುವುದೇ ಈ ಆತಂಕಕ್ಕೆ ಕಾರಣ. ತಮಿಳುನಾಡಿನ ಹೊಸೂರಿನಲ್ಲಿ ಈಗಾಗಲೇ ಏರ್‌ಪೋರ್ಟ್ ನಿರ್ಮಾಣದ ಘೋಷಣೆಯಾಗಿದೆ. ಇದರ ಬೆನ್ನಲೆ ಟಾಟಾ ಗ್ರೂಪ್ ಹೊಸೂರಿನಲ್ಲಿ ಇಂಡಸ್ಟ್ರಿಯಲ್‌ ಸಿಟಿ (ಕೈಗಾರಿಕಾ ನಗರ) ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ. ಈ ಎಲ್ಲ ಬೆಳವಣಿಗೆ ಬೆಂಗಳೂರಿನ ಐಟಿ ಸಿಟಿ ಪಟ್ಟಕ್ಕೆ ಕುತ್ತು ತರಲಿದೆ ಎನ್ನಲಾಗಿದೆ.

VISTARANEWS.COM


on

Industrial City
Koo

ಬೆಂಗಳೂರು: ಐಟಿ ಸಿಟಿ ಎನ್ನುವ ಹೆಗ್ಗಳಿಕೆಯನ್ನು ಬೆಂಗಳೂರು ಕಳೆದುಕೊಳ್ಳುತ್ತಾ? ಸದ್ಯ ಹೀಗೊಂದು ಚರ್ಚೆ ಸೋಷಿಯಲ್‌ ಮೀಡಿಯಾದಲ್ಲಿ ಆರಂಭವಾಗಿದೆ. ಐಟಿ ಕಂಪನಿಗಳನ್ನು ನೆರೆಯ ತಮಿಳುನಾಡು ಸೆಳೆದುಕೊಳ್ಳುತ್ತಿರುವುದೇ ಈ ಆತಂಕಕ್ಕೆ ಕಾರಣ. ತಮಿಳುನಾಡಿನ ಹೊಸೂರಿನಲ್ಲಿ (Hosur) ಈಗಾಗಲೇ ಏರ್‌ಪೋರ್ಟ್ ನಿರ್ಮಾಣದ ಘೋಷಣೆಯಾಗಿದೆ. ಇದರ ಬೆನ್ನಲೆ ಟಾಟಾ ಗ್ರೂಪ್ ಹೊಸೂರಿನಲ್ಲಿ ಇಂಡಸ್ಟ್ರಿಯಲ್‌ ಸಿಟಿ (ಕೈಗಾರಿಕಾ ನಗರ) ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ. ಈ ಎಲ್ಲ ಬೆಳವಣಿಗೆ ಬೆಂಗಳೂರಿನ ಐಟಿ ಸಿಟಿ ಪಟ್ಟಕ್ಕೆ ಕುತ್ತು ತರಲಿದೆ ಎನ್ನಲಾಗಿದೆ (Industrial City).

ಜಾರ್ಖಂಡ್‌ನ ಜಮ್ಶೆಡ್ಪುರ್ ಮಾದರಿಯಲ್ಲಿ ಹೊಸೂರಿನಲ್ಲಿ ಕೈಗಾರಿಕಾ ನಗರಿ ಸ್ಥಾಪನೆಗೆ ಟಾಟಾ ಗ್ರೂಪ್‌ ತಯಾರಿ ನಡೆಸಿರುವುದು ರಾಜ್ಯದ ಐಟಿ ಕಂಪನಿಗಳಿಗೆ ಕಳವಳ ಉಂಟು ಮಾಡಿದೆ. ಬೆಂಗಳೂರಿನಿಂದ ಕೇವಲ 40 ಕಿ.ಮೀ. ದೂರದಲ್ಲಿರುವ ಹೊಸೂರಿನಲ್ಲಿ ಟಾಟಾ ಕಂಪನಿಯಿಂದ ಇಂಡಸ್ಟ್ರಿಯಲ್‌ ಸಿಟಿ ನಿರ್ಮಾಣವಾದರೆ ಉದ್ಯಮಗಳು ಅತ್ತ ವಲಸೆ ಹೋಗುವ ಆತಂಕ ಎದುರಾಗಿದೆ. ಈ ಮೂಲಕ ರಾಜ್ಯದಲ್ಲಿ ಹೂಡಿಕೆ ಮಾಡುವವರನ್ನು ಸೆಳೆಯುತ್ತಿರುವ ತಮಿಳುನಾಡು ಬೆಂಗಳೂರಿಗೆ ಟಕ್ಕರ್ ನೀಡಲು ತಯಾರಿ ನಡೆಸಿದೆ. ಸದ್ಯ ಈ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಟ್ರೆಂಡಿಂಗ್‌ನಲ್ಲಿದೆ.

ಐಟಿ ನೌಕರರಿಗೆ ದಿನಕ್ಕೆ 14 ಗಂಟೆ ಕೆಲಸದ ಪ್ರಸ್ತಾವ

ಕಾನೂನುಬದ್ಧವಾಗಿಯೇ ಕೆಲಸದ ಸಮಯವನ್ನು 14 ಗಂಟೆಗೆ ವಿಸ್ತರಿಸಬೇಕು ಎನ್ನುವ ಐಟಿ ಕಂಪನಿಗಳ ಪ್ರಸ್ತಾವನೆಯನ್ನು ಪರಿಗಣಿಸಿ 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯಿದೆಗೆ ತಿದ್ದುಪಡಿ ತರಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದ್ದು ಇತ್ತೀಚೆಗೆ ಭಾರೀ ಸದ್ದು ಮಾಡಿತ್ತು. ಐಟಿ ಉದ್ಯೋಗಿಗಳು ಪ್ರತಿಭಟನೆಯನ್ನೂ ನಡೆಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಐಟಿ, ಐಟಿ ಆಧಾರಿತ ಸೇವೆಗಳ ಉದ್ಯೋಗಿಗಳ ಒಕ್ಕೂಟವು (KITU) ಭಾರಿ ವಿರೋಧ ವ್ಯಕ್ತಪಡಿಸಿದೆ. “ಐಟಿ ಉದ್ಯೋಗಿಗಳ ಕೆಲಸವನ್ನು ನಾಲ್ಕು ಗಂಟೆ ಹೆಚ್ಚಿಸುವುದರಿಂದ ನೌಕರರ ಖಾಸಗಿ ಹಾಗೂ ವೃತ್ತಿ ಜೀವನದ ಮೇಲೆ ಭಾರಿ ಪರಿಣಾಮ ಬೀರಲಿದೆ. ಉದ್ಯೋಗಿಗಳು ವೃತ್ತಿ ಮಾಡುವ ಬದಲು ಮಷೀನ್‌ಗಳಾಗಿ ಬದಲಾಗುತ್ತಾರೆ. ಅವರ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮ ಬೀರಲಿದೆ. ಹಾಗಾಗಿ, ರಾಜ್ಯ ಸರ್ಕಾರವು ಪ್ರಸ್ತಾಪವನ್ನು ಪರಿಷ್ಕರಿಸಬೇಕು” ಎಂದು ಒಕ್ಕೂಟ ಆಗ್ರಹಿಸಿದೆ.

ಸಾಮಾಜಿಕ ಜಾಲತಾಣಗಳಲ್ಲೂ ಈ ಕುರಿತು ವಿರೋಧ ವ್ಯಕ್ತವಾಗುತ್ತಿದೆ. ಐಟಿ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಈಗಾಗಲೇ ಒತ್ತಡ, ಬಿಪಿ, ಶುಗರ್‌ ಸೇರಿ ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈಗ 14 ಗಂಟೆಗೆ ನೌಕರರ ಕೆಲಸದ ಅವಧಿಯನ್ನು ಹೆಚ್ಚಿಸಿದರೆ ನೌಕರರು ಹಣಕ್ಕಿಂತ ಹೆಚ್ಚು ಕಾಯಿಲೆಗಳನ್ನು ಗಳಿಸುತ್ತಾರೆ ಎಂಬುದಾಗಿ ಜನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಯ್ದೆ ಪ್ರಕಾರ ಈಗ ಐಟಿ ಉದ್ಯೋಗಿಗಳ ಕೆಲಸದ ಅವಧಿಯು 10 ಗಂಟೆ ಆಗಿದೆ.

ಈ ಎಲ್ಲ ಬೆಳವಣಿಗೆಗಳು ಬೆಂಗಳೂರಿಗೆ ಇದ್ದ ಐಟಿ ಹಬ್ ಪಟ್ಟಕ್ಕೆ ಪೆಟ್ಟು ನೀಡಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಮಾಡಲಾಗುತ್ತಿದೆ. ಐಟಿ ಉದ್ಯೋಗಿಗಳು ದೇಶದ ಇತರ ಭಾಗಗಳಾದ ಹೈದರಾಬಾದ್, ಪುಣೆ ಮತ್ತು ಗುರುಗ್ರಾಮ್‌ ಕಡೆಗೆ ಮುಖ ಮಾಡಲಿದ್ದಾರೆ. ಅಹಮದಾಬಾದ್ ಕೂಡ ಈಗ ಐಟಿ ಹಬ್ ಆಗಿ ವಿಕಸನಗೊಳ್ಳುತ್ತಿದೆ ಎನ್ನುವುದಕ್ಕೂ ಪೂರಕ ಮಾಹಿತಿಗಳಿವೆ. ಒಟ್ಟಿನಲ್ಲಿ ಸರ್ಕಾರದ 14 ಗಂಟೆ ಕೆಲಸದ ನಿಯಮ, ಕನ್ನಡಿಗರಿಗೆ ಮೀಸಲಾತಿ, ಇದೀಗ ಹೊಸೂರಿನಲ್ಲಿ ಇಂಡಸ್ಟ್ರಿಯಲ್‌ ಸಿಟಿ ನಿರ್ಮಾಣ ಆತಂಕಕ್ಕೆ ದೂಡಿರುವುದು ಸುಳ್ಳಲ್ಲ.

ಇದನ್ನೂ ಓದಿ: IT Employees: ಕರ್ನಾಟಕದ ಐಟಿ ಉದ್ಯೋಗಿಗಳೇ, ದಿನಕ್ಕೆ 14 ಗಂಟೆ ಕೆಲಸ ಮಾಡಲು ಸಜ್ಜಾಗಿ; ರಾಜ್ಯ ಸರ್ಕಾರದ ನಿರ್ಧಾರ ಹೀಗಿದೆ

Continue Reading

ಚಿನ್ನದ ದರ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬಂಗಾರ ಖರೀದಿಯ ಮುನ್ನ ಬೆಲೆ ಚೆಕ್‌ ಮಾಡಿ

Gold Rate Today: ಸತತವಾಗಿ ಇಳಿಕೆಯಾಗಿದ್ದ ಚಿನ್ನದ ದರ ಶನಿವಾರ ಏರಿಕೆಯಾಗಿದ್ದು, ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,695 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,304 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ಸತತವಾಗಿ ಇಳಿಕೆಯಾಗಿದ್ದ ಚಿನ್ನದ ದರ ಶನಿವಾರ ಏರಿಕೆಯಾಗಿದ್ದು, ಇಂದು (ಆಗಸ್ಟ್‌ 25) ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,695 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,304 ಇದೆ.

22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,560 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,950 ಮತ್ತು ₹ 6,69,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 58,432 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 73,040 ಮತ್ತು ₹ 7,30,400 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,710₹ 7,319
ಮುಂಬೈ₹ 6,695₹ 7,304
ಬೆಂಗಳೂರು₹ 6,695₹ 7,304
ಚೆನ್ನೈ₹ 6,695₹ 7,304

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿಯೂ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಬೆಳ್ಳಿ 1 ಗ್ರಾಂಗೆ ₹ 84.50 ಹಾಗೂ 8 ಗ್ರಾಂಗೆ ₹ 676 ಇದೆ. 10 ಗ್ರಾಂ ₹ 845 ಹಾಗೂ 1 ಕಿಲೋಗ್ರಾಂ ₹ 84,500 ಬೆಲೆ ಬಾಳುತ್ತದೆ.

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ (BIS) ಹಾಲ್‌ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ ಬಿಐಎಸ್ ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್‌ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Cash Limit At Home: ಮನೆಯಲ್ಲಿ ಎಷ್ಟು ಹಣ ಇರಿಸಿಕೊಳ್ಳಬಹುದು? ಮಿತಿಗಿಂತ ಹೆಚ್ಚಿದ್ದರೆ ಏನಾಗುತ್ತದೆ?

Continue Reading

ದೇಶ

UPS: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು

UPS: ಯುಪಿಎಸ್ ಯೋಜನೆ ಏಪ್ರಿಲ್ 1, 2025 ರಿಂದ ಅನ್ವಯವಾಗುತ್ತದೆ. ಮೊದಲ ವರ್ಷದಲ್ಲಿ ಈ ಯೋಜನೆ ಜಾರಿಗೊಳಿಸಲು ಬರೋಬ್ಬರಿ 6250 ಕೋಟಿ ರೂ. ವೆಚ್ಚ ತಗುಲುತ್ತದೆ. 2004 ರಿಂದ ಎನ್‌ಪಿಎಸ್ ಅಡಿಯಲ್ಲಿ ನಿವೃತ್ತರಾದ ಎಲ್ಲರಿಗೂ ಯುಪಿಎಸ್ ಅನ್ವಯಿಸುತ್ತದೆ.

VISTARANEWS.COM


on

UPS
Koo

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಶನಿವಾರ ಏಕೀಕೃತ ಪಿಂಚಣಿ ಯೋಜನೆಗೆ (UPS) ಹಸಿರು ನಿಶಾನೆ ತೋರಿದೆ. ಕೇಂದ್ರ ಸರ್ಕಾರಿ ನೌಕರರು ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ (NPS) ಉಳಿಯಬೇಕೆ ಅಥವಾ ಏಕೀಕೃತ ಪಿಂಚಣಿ ಯೋಜನೆಗೆ ಸೇರಬೇಕೆ ಎಂದು ನಿರ್ಧರಿಸುವ ಹಕ್ಕನ್ನು ಅವರಿಗೆ ನೋಡಲಾಗಿದೆ. ಅಂತೆಯೇ, ಯುಪಿಎಸ್‌ನ ಈ ಹೊಸ ಮಾಡ್ಯೂಲ್ ಅನ್ನು ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರಗಳು ಸಹ ನಿರ್ಧರಿಸಬಹುದು.

ಯುಪಿಎಸ್ ಏಪ್ರಿಲ್ 1, 2025 ರಿಂದ ಅನ್ವಯವಾಗುತ್ತದೆ. ಮೊದಲ ವರ್ಷದಲ್ಲಿ ಈ ಯೋಜನೆ ಜಾರಿಗೊಳಿಸಲು ಬರೋಬ್ಬರಿ 6250 ಕೋಟಿ ರೂ. ವೆಚ್ಚ ತಗುಲುತ್ತದೆ. 2004 ರಿಂದ ಎನ್‌ಪಿಎಸ್ ಅಡಿಯಲ್ಲಿ ನಿವೃತ್ತರಾದ ಎಲ್ಲರಿಗೂ ಯುಪಿಎಸ್ ಅನ್ವಯಿಸುತ್ತದೆ.

UPSನ ಪ್ರಮುಖ ಗುಣಲಕ್ಷಣಗಳು ಹೀಗಿವೆ

ಪಿಂಚಣಿ ಖಚಿತ: 25 ವರ್ಷಗಳ ಕನಿಷ್ಠ ಅರ್ಹತಾ ಸೇವೆಗಾಗಿ ನಿವೃತ್ತಿಗೆ ಮುಂಚಿತವಾಗಿ ಕಳೆದ 12 ತಿಂಗಳುಗಳಲ್ಲಿ ಪಡೆದ ಸರಾಸರಿ ಮೂಲ ವೇತನದ 50%. ಕನಿಷ್ಠ 10 ವರ್ಷಗಳ ಸೇವೆಯವರೆಗಿನ ಕಡಿಮೆ ಸೇವಾ ಅವಧಿಗೆ ಅನುಪಾತದಲ್ಲಿರುತ್ತದೆ.

ಖಚಿತವಾದ ಕುಟುಂಬ ಪಿಂಚಣಿ: ಅವಳ/ಅವನ ಮರಣದ ತಕ್ಷಣ ನೌಕರನ ಪಿಂಚಣಿಯ ಶೇ. 60ರಷ್ಟು ಅವರ ಕುಟುಂಬಕ್ಕೆ ನೀಡಲಾಗುತ್ತದೆ.

ಖಚಿತವಾದ ಕನಿಷ್ಠ ಪಿಂಚಣಿ: ಕನಿಷ್ಠ 10 ವರ್ಷಗಳ ಸೇವೆಯ ನಂತರ ನಿವೃತ್ತಿಯ ಮೇಲೆ ಪ್ರತಿ ತಿಂಗಳಿಗೆ 10000 ರೂ.

ಹಣದುಬ್ಬರ ಸೂಚ್ಯಂಕ: ಖಚಿತವಾದ ಪಿಂಚಣಿ ಮೇಲೆ, ಖಚಿತವಾದ ಕುಟುಂಬ ಪಿಂಚಣಿ ಮತ್ತು ಖಚಿತವಾದ ಕನಿಷ್ಠ ಪಿಂಚಣಿಯ ಮೇಲೆ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ಕೈಗಾರಿಕಾ ಕಾರ್ಮಿಕರಿಗೆ (AICPI-IW) ಸೇವೆ ಸಲ್ಲಿಸುತ್ತಿರುವ ಉದ್ಯೋಗಿಗಳಿಗೆ ಪರಿಹಾರ

ಇದನ್ನೂ ಓದಿ: National Pension Scheme: ಎನ್‌ಪಿಎಸ್‌ನಲ್ಲಿ ದಿನಕ್ಕೆ 200 ರೂ. ಹೂಡಿಕೆ ಮಾಡಿದರೆ ಸಿಗುವ ಮಾಸಿಕ ಪಿಂಚಣಿ ಎಷ್ಟು ಗೊತ್ತೇ?

Continue Reading

ಚಿನ್ನದ ದರ

Gold Rate Today: ಸತತವಾಗಿ ಇಳಿದಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ; ಬಂಗಾರ ಇಂದು ಇಷ್ಟು ದುಬಾರಿ

Gold Rate Today: ಸತತವಾಗಿ ಇಳಿಕೆಯಾಗಿದ್ದ ಚಿನ್ನದ ದರ ಇಂದು (ಆಗಸ್ಟ್‌ 24) ಮತ್ತೆ ಏರಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 35 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 39 ಹೆಚ್ಚಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,695 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,304 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ಸತತವಾಗಿ ಇಳಿಕೆಯಾಗಿದ್ದ ಚಿನ್ನದ ದರ ಇಂದು (ಆಗಸ್ಟ್‌ 24) ಮತ್ತೆ ಏರಿಕೆಯಾಗಿದೆ (Gold Rate Today). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 35 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 39 ಹೆಚ್ಚಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,695 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,304 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,560 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,950 ಮತ್ತು ₹ 6,69,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 58,432 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 73,040 ಮತ್ತು ₹ 7,30,400 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,695 ₹ 7,304
ಮುಂಬೈ₹ 6,695 ₹ 7,304
ಬೆಂಗಳೂರು₹ 6,695 ₹ 7,304
ಚೆನ್ನೈ₹ 6,695 ₹ 7,304

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿಯೂ ಹೆಚ್ಚಳ ಕಂಡು ಬಂದಿದೆ. ಬೆಳ್ಳಿ 1 ಗ್ರಾಂಗೆ ₹ 84.50 ಹಾಗೂ 8 ಗ್ರಾಂಗೆ ₹ 676 ಇದೆ. 10 ಗ್ರಾಂ ₹ 845 ಹಾಗೂ 1 ಕಿಲೋಗ್ರಾಂ ₹ 84,500 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು: ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ: ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

ಹೂಡಿಕೆ ಮಾಡಬಹುದೆ?: ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

    ಇದನ್ನೂ ಓದಿ: Cheapest Currency: ವಿಶ್ವದಲ್ಲೇ ಅಗ್ಗದ ಕರೆನ್ಸಿ ಹೊಂದಿರುವ ದೇಶಗಳಲ್ಲಿ ಭಾರತದ 1 ರೂ.ನ ಮೌಲ್ಯ ಎಷ್ಟಾಗುತ್ತೆ ನೋಡಿ!

    Continue Reading
    Advertisement
    Revathy Sampath
    ಸಿನಿಮಾ6 mins ago

    Revathy Sampath: ನಟಿಯ ಮೇಲೆ ಹಿರಿಯ ನಟನಿಂದ ಲೈಂಗಿಕ ದೌರ್ಜನ್ಯ; ಕೇರಳ ಚಿತ್ರರಂಗದಲ್ಲಿ ಮತ್ತೊಂದು ಕರಾಳ ವಿದ್ಯಮಾನ!

    Health Expenditure
    ಪ್ರಮುಖ ಸುದ್ದಿ16 mins ago

    MLCs Health Expenditure: ಆರೋಗ್ಯಕ್ಕಾಗಿ ಲಕ್ಷ ಲಕ್ಷ ಕ್ಲೇಮ್; ಅತಿ ಹೆಚ್ಚು ಸರ್ಕಾರದ ಹಣ ಪಡೆದ ಎಂಎಲ್‌ಸಿಗಳು ಇವರೇ ನೋಡಿ!

    Industrial City
    ಬೆಂಗಳೂರು51 mins ago

    Industrial City: ಹೊಸೂರಿನಲ್ಲಿ ಟಾಟಾ ಗ್ರೂಪ್‌ನಿಂದ ಇಂಡಸ್ಟ್ರಿಯಲ್‌ ಸಿಟಿ ನಿರ್ಮಾಣಕ್ಕೆ ಸಿದ್ಧತೆ; ಬೆಂಗಳೂರಿನ ಐಟಿ ಸಿಟಿ ಪಟ್ಟಕ್ಕೆ ಕುತ್ತು?

    Yuvraj Singh
    ಕ್ರೀಡೆ57 mins ago

    Yuvraj Singh: ಐಪಿಎಲ್​ ಕೋಚಿಂಗ್​ ನಡೆಸಲಿದ್ದಾರೆ ಯುವರಾಜ್​ ಸಿಂಗ್; ಯಾವ ತಂಡ?

    Physical abuse attempted rape of school girl The public who beat up the man
    ಚಿಕ್ಕೋಡಿ1 hour ago

    Physical Abuse : ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಥಳಿಸಿದ ಸಾರ್ವಜನಿಕರು

    ಬೆಂಗಳೂರು ಗ್ರಾಮಾಂತರ2 hours ago

    Love Case : ಪ್ರೀತಿಗೆ ಪೋಷಕರ ವಿರೋಧ; ಒಬ್ಬರಿಗೊಬ್ಬರು ತಬ್ಬಿಕೊಂಡು ನೇಣಿಗೆ ಶರಣಾದ ಪ್ರೇಮಿಗಳು

    Cricket meets shooting
    ಕ್ರೀಡೆ2 hours ago

    Cricket Meets Shooting: ವಿಭಿನ್ನ ಶೈಲಿಯಲ್ಲಿ ಫೋಟೊಗೆ ಪೋಸ್​ ಕೊಟ್ಟ ಸೂರ್ಯಕುಮಾರ್​-ಮನು ಭಾಕರ್​

    Gold Rate Today
    ಚಿನ್ನದ ದರ2 hours ago

    Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬಂಗಾರ ಖರೀದಿಯ ಮುನ್ನ ಬೆಲೆ ಚೆಕ್‌ ಮಾಡಿ

    Actor darshan
    ಸ್ಯಾಂಡಲ್ ವುಡ್2 hours ago

    Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

    Western Ghats
    ಕರ್ನಾಟಕ2 hours ago

    Western Ghats: ಭೂ ಕುಸಿತ ಹಿನ್ನೆಲೆ; ಪಶ್ಚಿಮ ಘಟ್ಟಗಳಲ್ಲಿನ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ

    Kannada Serials
    ಕಿರುತೆರೆ11 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Sharmitha Gowda in bikini
    ಕಿರುತೆರೆ11 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ11 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ9 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ12 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    ಮಳೆ23 hours ago

    Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

    karnataka Weather Forecast
    ಮಳೆ2 weeks ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ2 weeks ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ2 weeks ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು3 weeks ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ3 weeks ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ3 weeks ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    karnataka rain
    ಮಳೆ3 weeks ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ3 weeks ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ3 weeks ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    ಟ್ರೆಂಡಿಂಗ್‌