Valmiki Corporation Scam: ವಾಲ್ಮೀಕಿ ನಿಗಮ ಹಗರಣದ ಚಾರ್ಜ್‌ಶೀಟ್‌ ಸಲ್ಲಿಕೆ, ನಾಗೇಂದ್ರಗೆ ಕ್ಲೀನ್‌ ಚಿಟ್!‌ - Vistara News

ಪ್ರಮುಖ ಸುದ್ದಿ

Valmiki Corporation Scam: ವಾಲ್ಮೀಕಿ ನಿಗಮ ಹಗರಣದ ಚಾರ್ಜ್‌ಶೀಟ್‌ ಸಲ್ಲಿಕೆ, ನಾಗೇಂದ್ರಗೆ ಕ್ಲೀನ್‌ ಚಿಟ್!‌

Valmiki Corporation Scam: ಲೆಕ್ಕಪರಿಶೋಧಕ ಚಂದ್ರಶೇಖರ್ (Chandrashekhar) ಆತ್ಮಹತ್ಯೆ (Sucied) ಪ್ರಕರಣ ಸಂಬಂಧ ಸಿಐಡಿ (CID) ಅಧಿಕಾರಿಗಳು ಸಲ್ಲಿಸರುವ ಚಾರ್ಜ್‌ಶೀಟ್‌ನಲ್ಲಿ ಅಧಿಕಾರಿಗಳಾದ ಪದ್ಮನಾಭ, ಪರುಶುರಾಮ್ ಅವರ ಒತ್ತಡದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

VISTARANEWS.COM


on

Valmiki Corporation Scam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Corporation Scam) ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿ ತನಿಖೆಗಾಗಿ ರಚಿಸಲಾಗಿರುವ ಎಸ್‌ಐಟಿ ಚಾರ್ಜ್‌ಶೀಟ್‌ (SIT Charge Sheet) ಸಲ್ಲಿಸಿದೆ. ಇದರಲ್ಲಿ ಅಧಿಕಾರಿಗಳಾದ ಪದ್ಮನಾಭ, ಪರುಶುರಾಮ್ ಅವರನ್ನು ಹೊಣೆಯಾಗಿಸಲಾಗಿದೆ. ಆದರೆ ಮಾಜಿ ಸಚಿವ ನಾಗೇಂದ್ರ (EX Minister Nagendra) ಹೆಸರೇ ಇಲ್ಲ!

ಲೆಕ್ಕಪರಿಶೋಧಕ ಚಂದ್ರಶೇಖರ್ (Chandrashekhar) ಆತ್ಮಹತ್ಯೆ (Sucied) ಪ್ರಕರಣ ಸಂಬಂಧ ಸಿಐಡಿ (CID) ಅಧಿಕಾರಿಗಳು ಸಲ್ಲಿಸರುವ ಚಾರ್ಜ್‌ಶೀಟ್‌ನಲ್ಲಿ ಅಧಿಕಾರಿಗಳಾದ ಪದ್ಮನಾಭ, ಪರುಶುರಾಮ್ ಅವರ ಒತ್ತಡದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಎಸ್‌ಐಟಿ (SIT) ಅಧಿಕಾರಿಗಳ ತಂಡ 300 ಪುಟಗಳ ಚಾರ್ಜ್‌ಶೀಟ್ ಅನ್ನು ಶಿವಮೊಗ್ಗ ಕೋರ್ಟ್‌ಗೆ ಸಲ್ಲಿಸಿದೆ. ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿರುವ ಸಿಐಡಿ ಅಧಿಕಾರಿಗಳು ಈ ಪ್ರಕರಣದಲ್ಲಿ ನಾಗೇಂದ್ರ ಹೆಸರನ್ನು ಕೈ ಬಿಟ್ಟಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಚಂದ್ರಶೇಖರ್ ಅವರ ಡೆತ್ ನೋಟ್ ಹಾಗೂ ನಾಗೇಂದ್ರ ಪತ್ನಿ ನೀಡಿದ್ದ ದೂರು ಆಧರಿಸಿ ತನಿಖೆ ನಡೆಸಿರುವ ಎಸ್‌ಐಟಿ ತಂಡ 300 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದೆ. ಈ ಹಗರಣದಲ್ಲಿ ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ (52) ಅವರು ಶಿವಮೊಗ್ಗದ ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರನ್.ಪಿ ಬರೆದಿರುವ ಡೆತ್‌ ನೋಟ್‌ನಲ್ಲಿ ಹೆಸರು ಹೇಳದೆ ಸಚಿವ ಬಿ.ನಾಗೇಂದ್ರ ಅವರ ಬಗ್ಗೆ ಉಲ್ಲೇಖ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆಕ್ರೋಶ ಎದ್ದ ಪರಿಣಾಮ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಆತ್ಮಹತ್ಯೆಗೆ ಪ್ರಚೋದನೆಗೆ ನಿಗಮದ ಎಂಡಿ ಪದ್ಮನಾಭ್ ಮತ್ತು ಪರುಶರಾಮ್ ಕಾರಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿ ಒತ್ತಡ ನೀಡಿದ್ದಾರೆ ಎಂದು ಇಬ್ಬರ ಹೆಸರು ಉಲ್ಲೇಖಿಸಿದ್ದಾರೆ. ನಿಗಮದ ಹಗರಣದಲ್ಲಿ ಒಂದಿಷ್ಟು ಹಣವನ್ನು ಚಂದ್ರಶೇಖರ್ ಪಡೆದಿರುವುದಾಗಿ, ಪ್ರಕರಣ ಬೆಳಕಿಗೆ ಬಂದರೆ ಸಿಕ್ಕಿಬೀಳುವ ಭಯದಿಂದಾಗಿ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಪದ್ಮನಾಭ್ ಅವರು ಗೋವಾ ಮತ್ತು ಹೈದ್ರಾಬಾದ್‌ಗೆ ಕರೆದುಕೊಂಡು ಹೋಗಿ ಒತ್ತಡ ಹಾಕಿದ್ದರು. ನೀನು ಹಣ ಪಡೆದಿದ್ದೀಯ, ಪ್ರಕರಣ ಬೆಳಕಿಗೆ ಬಂದ್ರೆ ನೀನೊಬ್ಬನೇ ಜೈಲಿಗೆ ಹೋಗ್ತಿಯಾ ಎಂದು ಬೆದರಿಕೆ ಹಾಕಿದ್ದರು. ನಿನ್ನ ವಿರುದ್ಧ ನಾನೇ ದೂರು ಕೊಡ್ತೀನಿ ಎಂದು ಚಂದ್ರಶೇಖರ್‌ಗೆ ಬೆದರಿಸಿದ್ದರು. ಹೀಗಾಗಿ ಪದ್ಮನಾಭ್ ಮತ್ತು ಪರುಶರಾಮ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಈ ಪ್ರಕರಣದಲ್ಲಿ ವಿರೋಧಪಕ್ಷಗಳು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಿ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದ್ದರು. ಬಳಿಕ ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದರು. ಆದ್ರೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿರುವ ಎಸ್‌ಐಟಿ ತಂಡ ಈ ಪ್ರಕರಣದಲ್ಲಿ ನಾಗೇಂದ್ರ ಹೆಸರನ್ನು ಕೈಬಿಟ್ಟಿದೆ. ಎಸ್‌ಐಟಿ ಹಗರಣಕ್ಕೆ ಸಂಬಂಧಿಸಿದಂತೆ 300 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಚಂದ್ರಶೇಖರ ಹೆಂಡತಿ ಮತ್ತು ನಿಗಮದ ಅಧಿಕಾರಿಗಳನ್ನು ಸಾಕ್ಷ್ಯ ಮಾಡಿದ್ದಾರೆ.

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮುಖ್ಯ ಖಾತೆಯಲ್ಲಿ ಹಿಂದಿನ ಸಾಲಿನ ಹಾಗೂ 2024-25 ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ಹಣದಲ್ಲಿ 88 ಕೋಟಿ ಹಣವನ್ನು ನಿಗಮದ ಅಧ್ಯಕ್ಷರ ಗಮನಕ್ಕೂ ಬಾರದೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯ ಅನಧಿಕೃತ ಖಾತೆಗೆ ವರ್ಗಾವಣೆ ಮಾಡಲಾಗಿತ್ತು. ಫೆ.26ರಂದು ಬ್ಯಾಂಕ್‌ನವರು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಲೆಕ್ಕಾಧಿಕಾರಿಗಳ ಸಹಿ ಪಡೆದು ನಿಗಮದ ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ಹಂತ ಹಂತವಾಗಿ 187.33 ಕೋಟಿ ರೂ ಹಣವನ್ನು ವರ್ಗಾವಣೆ ಮಾಡಿದ್ದರು. ಮಾ.4ರಂದು 25 ಕೋಟಿ ರೂ., ಮಾ.6ರಂದು 25 ಕೋಟಿ ರೂ., ಮಾ.21ರಂದು 44 ಕೋಟಿ ರೂ., ಮಾ.22ರಂದು 43.33 ಕೋಟಿ ರೂ. ಹಾಗೂ ಮೇ 21ರಂದು 50 ಕೋಟಿ ರೂ. ವರ್ಗಾವಣೆ ಮಾಡಲಾಗಿತ್ತು.

ಇದನ್ನೂ ಓದಿ: R Ashok: ವಾಲ್ಮೀಕಿ ಹಗರಣ; ಮುಖ್ಯಮಂತ್ರಿ ಏನು ಕತ್ತೆ ಕಾಯುತ್ತಿದ್ದರೇ ಎಂದ ಆರ್‌. ಅಶೋಕ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Water Price Hike: ಬೆಂಗಳೂರಿನಲ್ಲಿ ನೀರಿನ ದರ ಏರಿಕೆಗೆ ವೇಗ; ನಿಮಗೆ ಎಷ್ಟಾಗುತ್ತೆ ಚೆಕ್‌ ಮಾಡಿ

bwssb water price hike: 2014ರಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿ ಅಲ್ಪಪ್ರಮಾಣದ ದರ ಏರಿಕೆ ಮಾಡಿದ ಬಳಿಕ, ನಗರದಲ್ಲಿ ನೀರಿನ ದರ ಏರಿಕೆ ಮಾಡಿಲ್ಲ. ಇದೀಗ ಹತ್ತು ವರ್ಷದ ನಂತರ ದರ ಏರಿಕೆಗೆ ಪ್ರಸ್ತಾವನೆ ಸಿದ್ಧವಾಗುತ್ತಿದೆ. ಶೀಘ್ರದಲ್ಲೇ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಕೆಯಾಗಲಿದೆ.

VISTARANEWS.COM


on

bwssb water price hike
Koo

ಬೆಂಗಳೂರು: ʼಯಾರು ಎಷ್ಟೇ ವಿರೋಧಿಸಿದರೂ ನಾನು ಬೆಂಗಳೂರಿನಲ್ಲಿ (Bangalore) ಕುಡಿಯುವ ನೀರಿನ ದರ (Drinking Water price hike) ಏರಿಸುವವನೇʼ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ನಿನ್ನೆ ಹೇಳಿದ ಬೆನ್ನಲ್ಲೇ, ನೀರಿನ ದರ ಏರಿಕೆ ಪ್ರಕ್ರಿಯೆಗೆ ಬೆಂಗಳೂರು ಜಲಮಂಡಳಿ (BWSSB) ವೇಗ ನೀಡಿದೆ.

2014ರಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿ ಅಲ್ಪಪ್ರಮಾಣದ ದರ ಏರಿಕೆ ಮಾಡಿದ ಬಳಿಕ, ನಗರದಲ್ಲಿ ನೀರಿನ ದರ ಏರಿಕೆ ಮಾಡಿಲ್ಲ. ಇದೀಗ ಹತ್ತು ವರ್ಷದ ನಂತರ ದರ ಏರಿಕೆಗೆ ಪ್ರಸ್ತಾವನೆ ಸಿದ್ಧವಾಗುತ್ತಿದೆ. ಶೀಘ್ರದಲ್ಲೇ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಕೆಯಾಗಲಿದೆ.

ಹಾಲಿ ನೀರಿನ ದರ

ಪ್ರಸ್ತುತ ನೀರಿನ ದರಗಳು ಹೀಗಿವೆ. 0- 8000 ಸಾವಿರ ಲೀಟರ್ ನೀರು ಬಳಕೆ ಮಾಡುವವರಿಗೆ ಒಂದು‌ ಸಾವಿರ ಲೀಟರ್‌ಗೆ 7 ರೂಪಾಯಿ. 8000-25000 ಸಾವಿರ ಲೀಟರ್ ನೀರು ಬಳಕೆ ಮಾಡುವವರಿಗೆ ಒಂದು ಸಾವಿರ ಲೀಟರ್‌ಗೆ 11 ರೂಪಾಯಿ. 25,000 – 50000 ಸಾವಿರ ಲೀಟರ್ ನೀರು ಬಳಕೆ ಮಾಡುವವರಿಗೆ ಒಂದು ಸಾವಿರ ಲೀಟರ್‌ಗೆ 26 ರೂಪಾಯಿ ಶುಲ್ಕ ಬೀಳುತ್ತಿದೆ.

ಪರಿಷ್ಕರಣೆ ಮಾಡಲು ಯೋಚಿಸಿರುವ ದರ

8000 ಸಾವಿರ ನೀರು ಬಳಕೆ ದರ ಏರಿಕೆ ಮಾಡದಿರಲು ಶಿಫಾರಸು ಮಾಡಲಾಗಿದೆ. 8000-25000 ಸಾವಿರ ಲೀಟರ್ ನೀರು ಬಳಕೆ ಮಾಡುವವರಿಗೆ ಒಂದು ಸಾವಿರ ಲೀಟರ್‌ಗೆ 11 ರೂ. ಯಿಂದ 15 ರೂ. ಏರಿಕೆ. 25,000 – 50000 ಸಾವಿರ ಲೀಟರ್ ನೀರು ಬಳಕೆ ಮಾಡುವವರಿಗೆ 1 ಸಾವಿರ ಲೀಟರ್ ಗೆ 26 ರೂ. ಯಿಂದ 30 ರೂ.ಗೆ ಏರಿಕೆ. ನಾನ್ ಡೊಮೆಸ್ಟಿಕ್ ಬಳಕೆದಾರರಿಗೆ ಶೇ.25%ರಷ್ಟು ನೀರಿನ ದರ ಏರಿಕೆಗೆ ಪ್ರಸ್ತಾವನೆ ಮಾಡಲಾಗಿದೆ.

ಎಷ್ಟೇ ವಿರೋಧ ಬಂದರೂ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಖಚಿತ; ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂ ಎಸ್‌ಎಸ್‌ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ (Water Price Hike) ಅನಿವಾರ್ಯ. ಅದನ್ನು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರನ್ನು ಒದಗಿಸಲೇ ಬೇಕು. ಇದಕ್ಕಾಗಿ ಸಾಲ ಮಾಡಿ, ಸಂಪರ್ಕ ಜಾಲವನ್ನು ಹೆಚ್ಚಿಸದ ಹೊರತು ನೀರು ಕೊಡಲು ಕಷ್ಟವಾಗುತ್ತದೆ. ದರ ಹೆಚ್ಚಳ ಮಾಡದಿದ್ದರೇ ನೀರು ಸರಬರಾಜು ಕಂಪನಿ ಉಳಿಯುವುದಿಲ್ಲ, ನೌಕರರು ಬದುಕಲು ಆಗುವುದಿಲ್ಲ. ಸಂಸ್ಥೆಗೆ ವಿದ್ಯುತ್ ಬಿಲ್ ಕಟ್ಟಲು ಆಗುತ್ತಿಲ್ಲ. ಎಲ್ಲರಿಗೂ ನೀರಿನ ದರ ಹೆಚ್ಚಳ ಮಾಡುವುದಿಲ್ಲ. ಎಷ್ಟು ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧರಿಸಿಲ್ಲ. ಚರ್ಚೆ ಮಾಡಲಿ. ಧರಣಿ ಮಾಡಲಿ ನಾನು ಇದಕ್ಕೆ ಬದ್ಧವಾಗಿದ್ದೇನೆ ಎಂದು ಹೇಳಿದರು.

ಇಲಾಖೆಗೆ ಪ್ರತ್ಯೇಕ ವಿದ್ಯುತ್ ತಯಾರಿಕಾ ಕಂಪನಿ

14 ವರ್ಷಗಳಲ್ಲಿ ಸಾಕಷ್ಟು ಬಾರಿ ವಿದ್ಯುತ್ ಬಿಲ್ ಹೆಚ್ಚಳವಾಗಿದೆ. ಇದಕ್ಕಾಗಿ ಇಲಾಖೆಯದ್ದೇ ಪ್ರತ್ಯೇಕ ಕಂಪನಿ ಸ್ಥಾಪಿಸಿ ನೀವೇ ಸೋಲಾರ್ ಸೇರಿದಂತೆ ಇತರೇ ಮೂಲಗಳಿಂದ ವಿದ್ಯುತ್ ತಯಾರಿಸಿದರೆ ಹಣ ಉಳಿತಾಯವಾಗುತ್ತದೆ. ಬೆಂಗಳೂರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸಬಹುದು. ದೂರಾಲೋಚನೆ ಇಟ್ಟುಕೊಂಡು ಈಗಾಗಲೇ ಕಂಪನಿ ಸಿದ್ಧಪಡಿಸಲಾಗಿದೆ. ಪಾವಗಡದಲ್ಲಿ ಸೋಲಾರ್ ಪಾರ್ಕ್ ಮಾಡಿದ ಕಾರಣಕ್ಕೆ ಮೂರುವರೆ ರೂಪಾಯಿಗೆ ವಿದ್ಯುತ್ ಸಿಗುತ್ತಿದೆ. ಆಗ ಹಲವರು ತಲೆಕೆಟ್ಟಿದೆಯಾ ಎಂದು ಆಡಿಕೊಂಡರು. ಇದರಿಂದ ಸರಬರಾಜು ಮಾಡುವ ಖರ್ಚು ಉಳಿತಾಯವಾಗಿದೆ ಎಂದು ಹೇಳಿದರು.

ನಾನಿರುವ ತನಕ ಖಾಸಗೀಕರಣ ಆಗುವುದಿಲ್ಲ

ಬಿಡಬ್ಲ್ಯೂ ಎಸ್‌ಎಸ್‌ಬಿ ನನ್ನ ಬಳಿಯೇ ಇರುವ ಕಾರಣ ಅನೇಕರು ನೂತನ ಯೋಜನೆ ಕುರಿತು ಚರ್ಚೆ ನಡೆಸಲು ಬಂದರು. ಈ ಹಿಂದೆ ಇಂಧನ ಇಲಾಖೆಯಲ್ಲಿ ಇದ್ದಾಗಲು ಇದೇ ಪ್ರಸ್ತಾವನೆ ಬಂದಿತ್ತು. ಮುಂಬೈ ಸೇರಿದಂತೆ ಇತರೆಡೆ ಅದಾನಿ ಹಾಗೂ ಇತರೆ ಕಂಪೆನಿಗಳು ವಿದ್ಯುತ್ ಸರಬರಾಜು ಮಾಡುತ್ತಿವೆ. ನಾನು ಇರುವ ತನಕ ಇದೆಲ್ಲವೂ ಸಾಧ್ಯವಿಲ್ಲ. ಈ ವಿಚಾರ ಇಲ್ಲಿಗೆ ಬಿಟ್ಟುಬಿಡಿ, ಇದರ ಸುದ್ದಿಗೆ ಬರಬೇಡಿ ಎಂದು ವಾಪಸ್ ಕಳುಹಿಸಿದೆ ಎಂದರು.

ಜಲ ಹಾಗೂ ಇಂಧನ ಇವೆರಡೂ ಬಹಳ ಮುಖ್ಯವಾದವುಗಳು. ಈ ಹಿಂದೆ ನಾನು ಇಂಧನ ಸಚಿವನಾಗಿದ್ದೆ. ಈಗ ನೀರಾವರಿ ಸಚಿವನಾಗಿದ್ದೇನೆ. ಜೆ.ಎಚ್. ಪಟೇಲ್ ಅವರ ಕಾಲದಲ್ಲಿ ನೀರು ಸರಬರಾಜನ್ನು ಖಾಸಗಿಯವರಿಗೆ ನೀಡಬೇಕು ಎನ್ನುವ ಪ್ರಸ್ತಾವನೆ ಬಂದಿತ್ತು. ನಂತರ ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗಲೂ ಈ ಬಗ್ಗೆ ದೊಡ್ಡ ಚರ್ಚೆಯಾಯಿತು ಎಂದರು.

ಇದನ್ನೂ ಓದಿ: CLP Meeting: ಮುಡಾ ಹಗರಣ; ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಪರ ನಿಂತ ಶಾಸಕರು

Continue Reading

Latest

Sexual Abuse: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ!

Sexual Abuse: ಬಹಿರಿ ಪಂಚಚೋವಾ ಗ್ರಾಮ ಪಂಚಾಯತ್ ಪ್ರದೇಶದ ಕರೀಂಪುರದ ನಿವಾಸಿಯಾದ ಫಿರೋಜ್ ಖಾನ್ ಎಂಬಾತ ವಿವಾಹಿತ ಮಹಿಳೆಯನ್ನು ಬಂದೂಕು ತೋರಿಸಿ ಬಲವಂತವಾಗಿ ಅಪಹರಿಸಿ ದನದ ಕೊಟ್ಟಿಗೆಗೆ ಕರೆದೊಯ್ದು, ಅಲ್ಲಿ ಆಕೆಯ ಕೈ ಮತ್ತು ಕಾಲುಗಳನ್ನು ಕಟ್ಟಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ಆರೋಪಿಯು ಸಂತ್ರಸ್ತೆಯ ಜನನಾಂಗಕ್ಕೆ ಗನ್ ತೂರಿಸುವ ಮೂಲಕ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

VISTARANEWS.COM


on

Sexual Abuse
Koo


ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ (Sexual Abuse)ಮತ್ತು ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ವಿರುದ್ಧ ಬಿರ್ಭುಮ್ ಜಿಲ್ಲೆಯ ಬೋಲ್ಪುರ್ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಿಸಲಾಗಿದೆ. ಆರೋಪಿ ಫಿರೋಜ್ ಖಾನ್ ಎಂಬುದಾಗಿ ತಿಳಿದುಬಂದಿದ್ದು, ಘಟನೆಯ ನಂತರ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

ಬಹಿರಿ ಪಂಚಚೋವಾ ಗ್ರಾಮ ಪಂಚಾಯತ್ ಪ್ರದೇಶದ ಕರೀಂಪುರದ ನಿವಾಸಿಯಾದ ಫಿರೋಜ್ ಖಾನ್, ವಿವಾಹಿತ ಮಹಿಳೆಯನ್ನು ಗನ್ ತೋರಿಸಿ ಬಲವಂತವಾಗಿ ಅಪಹರಿಸಿ ದನದ ಕೊಟ್ಟಿಗೆಗೆ ಕರೆದೊಯ್ದು, ಅಲ್ಲಿ ಆಕೆಯ ಕೈ ಮತ್ತು ಕಾಲುಗಳನ್ನು ಕಟ್ಟಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ಆರೋಪಿಯು ಸಂತ್ರಸ್ತೆಯ ಜನನಾಂಗಕ್ಕೆ ಗನ್ ತೂರಿಸುವ ಮೂಲಕ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಹಲ್ಲೆಯ ಸಮಯದಲ್ಲಿ ಆತ ಸಂತ್ರಸ್ತೆಯ ಪೋಟೊಗಳನ್ನು ಸಹ ತೆಗೆದುಕೊಂಡಿದ್ದಾನೆ ಎನ್ನಲಾಗಿದೆ. ನಂತರ ಅವಳ ನಾಲ್ಕು ವರ್ಷದ ಮಗ, ತನ್ನ ತಾಯಿಯನ್ನು ಹುಡುಕುತ್ತಾ ದನದ ಕೊಟ್ಟಿಗೆಗೆ ಬಂದಾಗ ತಾಯಿಯನ್ನು ಆ ಸ್ಥಿತಿಯಲ್ಲಿ ನೋಡಿದ ಮಗು ಅಳಲು ಪ್ರಾರಂಭಿಸಿತು. ಆಗ ಆರೋಪಿ ಟಿಎಂಸಿ ಕಾರ್ಯಕರ್ತ ಮಗುವನ್ನು ಬೆದರಿಸಿ ಗೋಣಿ ಚೀಲದಲ್ಲಿ ಕಟ್ಟಿಹಾಕಿದ್ದಾನೆ ಎಂಬುದಾಗಿ ವರದಿಯಾಗಿದೆ.

ಆರೋಪಿ ಫಿರೋಜ್ ಖಾನ್ ಹಲವಾರು ದಿನಗಳಿಂದ ತನಗೆ ಕಿರುಕುಳ ನೀಡುತ್ತಿದ್ದ. ಅವನು ತನ್ನೊಂದಿಗೆ ಅಕ್ರಮ ಸಂಬಂಧ ಹೊಂದುವಂತೆ ಅವಳಿಗೆ ಮುಂಗಡ ಹಣವನ್ನು ನೀಡಿದ್ದ. ಆದರೆ ಅವಳು ಅವನ ಪ್ರಸ್ತಾಪವನ್ನು ತಿರಸ್ಕರಿಸಿದಾಗ, ಅವನು ಅವಳ ತಲೆಗೆ ಗನ್ ಹಿಡಿದು ಕೊಲ್ಲುವುದಾಗ ಬೆದರಿಕೆ ಹಾಕಿದ. ಆನಂತರ ಆಕೆ ನೀರು ತರಲು ಹೋಗಿದಾಗ ಆಕೆ ಒಂಟಿಯಾಗಿರುವುದನ್ನು ತಿಳಿದ ಖಾನ್ ಅವಳನ್ನು ಗನ್‍ಪಾಯಿಂಟ್‌ನಲ್ಲಿ ಬೆದರಿಸಿ ಬಲವಂತವಾಗಿ ಏಕಾಂತ ಸ್ಥಳಕ್ಕೆ ಕರೆದೊಯ್ದನು, ಅಲ್ಲಿ ಅವನು ಅತ್ಯಾಚಾರ ಮಾಡಿದ. ಹಾಗೇ ಆಕೆಯ ಮಗನನ್ನು ಗೋಣಿಚೀಲದಲ್ಲಿ ಕಟ್ಟಿ ಕೊಲ್ಲಲು ಪ್ರಯತ್ನಿಸಿದ. ಘಟನೆಯ ನಂತರ, ಆಕೆ ಆತ್ಮಹತ್ಯೆಗೆ ಪ್ರಯತ್ನಿಸಿದಳು ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಳೆ. ಹಲ್ಲೆಯ ನಂತರ, ಸಂತ್ರಸ್ತೆಯನ್ನು ಬೋಲ್ಪುರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಶವಾಗಾರದಲ್ಲಿ ಶವಗಳ ಪಕ್ಕದಲ್ಲೇ ಲೈಂಗಿಕ ಕ್ರಿಯೆ! ಸಂಚಲನ ಮೂಡಿಸಿದೆ ಈ ವಿಡಿಯೊ

ಪೊಲೀಸರ ಪ್ರಕಾರ, ಮರ್ಯಾದೆಗೆ ಹೆದರಿ ಸಂತ್ರಸ್ತೆ ಹಲವಾರು ದಿನಗಳವರೆಗೆ ಘಟನೆಯನ್ನು ವರದಿ ಮಾಡಲು ಹಿಂಜರಿಯುತ್ತಿದ್ದಳು. ಅಂತಿಮವಾಗಿ, ಆಕೆಯ ಪತಿ ಆರೋಪಿಗಳ ವಿರುದ್ಧ ದೂರು ದಾಖಲಿಸಲು ಹೇಳಿದ್ದಾರೆ. ಹಾಗಾಗಿ ಸಂತ್ರಸ್ತೆ ಆಕೆಯ ಪತಿಯೊಂದಿಗೆ ನೀಡಿದ ದೂರಿನ ಆಧಾರದ ಮೇಲೆ ಬೋಲ್ಪುರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಆರೋಪಿ ಖಾನ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆಗಸ್ಟ್ 21 ರ ಬುಧವಾರ ಸಂತ್ರಸ್ತೆ ಮತ್ತು ಆಕೆಯ ಪತಿಯ ಹೇಳಿಕೆಯನ್ನು ದಾಖಲಿಸಿದ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಖಾನ್ ನಿವಾಸ ಮತ್ತು ಇತರ ಅಡಗುತಾಣಗಳ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಈ ಘಟನೆಯು ಬೋಲ್ಪುರದ ಸಾರ್ವಜನಿಕರಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ.

Continue Reading

ಕ್ರೀಡೆ

Neeraj Chopra: ಈ ವರ್ಷದ ಅತ್ಯುತ್ತಮ ಎಸೆತದೊಂದಿಗೆ ಡೈಮಂಡ್ ಲೀಗ್​ ಫೈನಲ್​ ಪ್ರವೇಶಿಸಿದ ನೀರಜ್ ಚೋಪ್ರಾ

Neeraj Chopra: ತೊಡೆಸಂಧು ನೋವಿನಿಂದ ಬಳಲುತ್ತಿರುವ ನೀರಜ್​ ಡೈಮಂಡ್ ಲೀಗ್ ಫೈನಲ್​ ಬಳಿಕ ವೈದ್ಯರನ್ನು ಸಂಪರ್ಕಿಸಿ ಶಸ್ತ್ರಚಿಕಿತ್ಸೆ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Neeraj Chopra
Koo

ಲೌಸನ್ನೆ: ಪ್ಯಾರಿಸ್ ಒಲಂಪಿಕ್ಸ್​ ಬೆಳ್ಳಿ ಪದಕ ವಿಜೇತ, ಭಾರತದ ಸ್ಟಾರ್‌ ಜಾವೆಲಿನ್‌ ಎಸೆತಗಾರ ನೀರಜ್ ಚೋಪ್ರಾ ಅವರು ಲಾಸೆನ್‌ ಡೈಮಂಡ್ ಲೀಗ್​ನಲ್ಲಿ(Lausanne Diamond League) 89.49 ಮೀ. ಜಾವೆಲಿನ್​ ಎಸೆಯುವ ಮೂಲಕ ಋತುವಿನ ಅತ್ಯುತ್ತಮ ಎಸೆತದೊಂದಿಗೆ 2 ನೇ ಸ್ಥಾನ ಪಡೆದು ಫೈನಲ್​ ಪ್ರವೇಶಿಸಿದ್ದಾರೆ. ಮುಂದಿನ ತಿಂಗಳು ಸೆಪ್ಟೆಂಬರ್ 13 ಮತ್ತು 14ರಂದು ಬ್ರಸೆಲ್ಸ್‌ನಲ್ಲಿ ನಡೆಯುವ ಕೊನೆಯ ಡೈಮಂಡ್‌ ಲೀಗ್​ನಲ್ಲಿ ಪದಕಕ್ಕಾಗಿ ಹೋರಾಟ ನಡೆಸಲಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ಫೈನಲ್‌ನಲ್ಲಿ 89.45 ಮೀ.ದೂರಕ್ಕೆ ಜಾವೆಲಿನ್ ಎಸೆದು ಬೆಳ್ಳಿ ಪದಕ ಗೆದ್ದಿದ್ದರು. ಈ ಎಸೆತವನ್ನು ಇಲ್ಲಿ ಉತ್ತಮಪಡಿಸಿಕೊಂಡರು.

ಗುರುವಾರ ತಡರಾತ್ರಿ ನಡೆದಿದ್ದ ಈ ಟೂರ್ನಿಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಗ್ರೆನಡಾದ ಆಂಡರ್ಸನ್ ಪೀಟರ್ಸ್ 90.61 ಮೀಟರ್ ದೂರ ಎಸೆದು ಪ್ರಥಮ ಸ್ಥಾನ ಪಡೆದರು. ನೀರಜ್ ಕೊನೆಯ ಪ್ರಯತ್ನದಲ್ಲಿ 89.49 ಮೀಟರ್‌ ದೂರವನ್ನು ಎಸೆಯುವ ಮೂಲಕ ಎರಡನೇ ಸ್ಥಾನ ಪಡೆದರು. ನೀರಜ್​ ಈ ಸ್ಪರ್ಧೆಗೂ ಮುನ್ನ ಅಂಕಪಟ್ಟಿಯಲ್ಲಿ 7 ಅಂಕದೊಂದಿಗೆ 4ನೇ ಸ್ಥಾನದಲ್ಲಿದ್ದರು. ಇದೀಗ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಫೈನಲ್​ನಲ್ಲಿ 6 ಮಂದಿ ಕಣಕ್ಕಿಳಿಯಲಿದ್ದಾರೆ. ಪ್ಯಾರಿಸ್‌ನಲ್ಲಿ ಒಲಿಂಪಿಕ್ಸ್ ದಾಖಲೆಯೊಂದಿಗೆ ಚಿನ್ನದ ಪದಕ ಜಯಿಸಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದ ಪಾಕಿಸ್ತಾನದ ಅರ್ಷದ್ ನದೀಮ್(Arshad Nadeem) ಈ ಕ್ರೀಡಾಕೂಟದಲ್ಲಿ ಭಾಗವಹಿಸಿರಲಿಲ್ಲ.

ನೀರಜ್ ಆರಂಭದಲ್ಲಿ ನೀರಸ ಪ್ರದರ್ಶನ ನೀಡಿದ್ದರು. ಮೊದಲ ಐದು ಪ್ರಯತ್ನಗಳಲ್ಲಿ ನೀರಜ್ ಕ್ರಮವಾಗಿ 82.10, 83.21, 83.13, 82.34 ಮತ್ತು 85.58 ಮೀ. ದೂರ ಎಸೆದರು. ಆದರೆ ಆರನೇ ಹಾಹೂ ಅಂತಿಮ ಪ್ರಯತ್ನದಲ್ಲಿ 89.49 ಮೀಟರ್‌ ದೂರ ಎಸೆಯುವ ಮೂಲಕ ಎರಡನೇ ಸ್ಥಾನಕ್ಕೆ ಏರಿದರು. ನೀರಜ್​ರ ಇದುವರೆಗಿನ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. ಇದೇ ಆವೃತ್ತಿಯಲ್ಲಿ ಅವರು ಚಿನ್ನದ ಪದಕ ಜಯಿಸಿದ್ದರು.

ತೊಡೆಸಂಧು ನೋವಿನಿಂದ ಬಳಲುತ್ತಿರುವ ನೀರಜ್​ ಡೈಮಂಡ್ ಲೀಗ್ ಫೈನಲ್​ ಬಳಿಕ ವೈದ್ಯರನ್ನು ಸಂಪರ್ಕಿಸಿ ಶಸ್ತ್ರಚಿಕಿತ್ಸೆ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ Paris Olympics: “ಇಂಡಿಯಾ ಹೌಸ್‌”ನಲ್ಲಿ ನೀರಜ್​ ಚೋಪ್ರಾ ಸೇರಿ ಪದಕ ವಿಜೇತರನ್ನು ಗೌರವಿಸಿದ ನೀತಾ ಅಂಬಾನಿ

ಬ್ರ್ಯಾಂಡ್ ಮೌಲ್ಯ ಹೆಚ್ಚಿಸಿಕೊಂಡ ನೀರಜ್​


ನೀರಜ್​ ಚೋಪ್ರಾ(Neeraj Chopra) ಅವರ ಬ್ರಾಂಡ್ ಮೌಲ್ಯ ಬರೋಬ್ಬರಿ 330 ಕೋಟಿ ರೂ.ಗೆ ಜಿಗಿತ ಕಂಡಿದೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.  ಅಂಕಿಅಂಶಗಳ ವರದಿಯ ಪ್ರಕಾರ ನೀರಜ್ ಚೋಪ್ರಾ ಅವರ ಬ್ರ್ಯಾಂಡ್ ಮೌಲ್ಯ 29.6 ದಶಲಕ್ಷ ಡಾಲರ್ ನಿಂದ 40 ದಶಲಕ್ಷ ಡಾಲರ್​ಗೆ ಏರಿಕೆಯಾಗಿದೆ. ಅಂದರೆ ಭಾರತೀಯ ರೂಪಾಯಿ ಪ್ರಕಾರ ಅವರ ಬ್ರ್ಯಾಂಡ್ ಮೌಲ್ಯ 330 ಕೋಟಿ ರೂ. ಆಗಿದೆ. ಇದು ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ(hardik pandya) ಬ್ರ್ಯಾಂಡ್ ಮೌಲ್ಯಕ್ಕಿಂತ ಹೆಚ್ಚಾಗಿದೆ. ನೀರಜ್ ಭಾರತೀಯ ಕ್ರೀಡಾಪಟುಗಳಲ್ಲಿ ಅತ್ಯುನ್ನತ ಮೌಲ್ಯಯುತ ಕ್ರಿಕೆಟಿಗರಲ್ಲದ ಕ್ರೀಡಾಪಟು ಎನಿಸಿಕೊಂಡಿದ್ದಾರೆ.

ನೀರಜ್ ಪ್ರಸ್ತುತ 24 ವಿವಿಧ ವರ್ಗಗಳಲ್ಲಿ 21 ಬ್ರ್ಯಾಂಡ್‌ಗಳನ್ನು ಅನುಮೋದಿಸಿದ್ದಾರೆ. ಮನಿ ಕಂಟ್ರೋಲ್ ವರದಿಯ ಪ್ರಕಾರ, ಹಾರ್ದಿಕ್ ಪಾಂಡ್ಯ 20 ಬ್ರಾಂಡ್‌ಗಳನ್ನು ಮಾತ್ರ ಹೊಂದಿದ್ದಾರೆ ಎನ್ನಲಾಗಿದೆ. ಪಾಂಡ್ಯಗಿಂತ ಶೇ.50ರಷ್ಟು ಬ್ರ್ಯಾಂಡ್‌ ಮೌಲ್ಯ ಹೆಚ್ಚಳವಾಗಿದೆ ಎಂದು ವರದಿಯಾಗಿದೆ.

Continue Reading

Latest

Eye Care Food: ನೀವು ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಈ ಆಹಾರಗಳನ್ನು ಸೇವಿಸಿ

ಕೆಲವರು ಇಡೀ ದಿನ (Eye Care Food) ಕಂಪ್ಯೂಟರ್, ಲ್ಯಾಪ್ಟಾಪ್ ಮುಂದೆ ಕುಳಿತು ಕೆಲಸ ಮಾಡುತ್ತಾರೆ. ಅಂತವರು ತಮ್ಮ ಕಣ್ಣುಗಳ ಆರೋಗ್ಯದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ ಇದರಿಂದ ಮುಂದೆ ಅನೇಕ ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು. ಅಲ್ಲದೇ ಕಣ್ಣುಗಳ ಮೇಲೆ ಒತ್ತಡ ಹೆಚ್ಚಾಗಿ ಜನರು ಕನ್ನಡಕವನ್ನು ಧರಿಸಬೇಕಾಗುತ್ತದೆ. ಹಾಗಾಗಿ ಕಣ್ಣಿನ ದೃಷ್ಟಿ ಸಮಸ್ಯೆಗಳನ್ನು ನಿವಾರಿಸಲು ಈ ಆಹಾರವನ್ನು ತಪ್ಪದೇ ಸೇವಿಸಿ.

VISTARANEWS.COM


on

Eye Care Food
Koo


ಹೆಚ್ಚಿನ ಜನರು ಕೆಲಸದ ಒತ್ತಡದಲ್ಲಿ ಆರೋಗ್ಯದ ಬಗ್ಗೆ ಗಮನಹರಿಸುವುದಿಲ್ಲ. ಕೆಲವರು ಇಡೀ ದಿನ ಕಂಪ್ಯೂಟರ್, ಲ್ಯಾಪ್‍ಟಾಪ್ ಮುಂದೆ ಕುಳಿತು ಕೆಲಸ ಮಾಡುತ್ತಾರೆ. ಅಂತವರು ತಮ್ಮ ಕಣ್ಣುಗಳ ಆರೋಗ್ಯದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ ಇದರಿಂದ ಮುಂದೆ ಅನೇಕ ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು. ಅಲ್ಲದೇ ಕಣ್ಣುಗಳ ಮೇಲೆ ಒತ್ತಡ ಹೆಚ್ಚಾಗಿ ಜನರು ಕನ್ನಡಕವನ್ನು ಧರಿಸಬೇಕಾಗುತ್ತದೆ. ಹಾಗಾಗಿ ಕಣ್ಣಿನ ದೃಷ್ಟಿ ಸಮಸ್ಯೆಗಳನ್ನು ನಿವಾರಿಸಲು ಪ್ರತಿದಿನ ಈ ಆಹಾರ(Eye Care Food)ಗಳನ್ನು ಸೇವಿಸಿ.

ಟೊಮೆಟೊ

ಇದರಲ್ಲಿ ಲೈಕೋಪೀನ್ ಸಮೃದ್ಧವಾಗಿದೆ, ಇದು ಪ್ರಬಲ ಉತ್ಕರ್ಷಣ ನಿರೋಧಕವಾಗಿದೆ. ಲೈಕೋಪೀನ್ ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ಕಣ್ಣಿನ ಪೊರೆ ಮತ್ತು ವಯಸ್ಸಿಗೆ ಸಂಬಂಧಿಸಿದ ಮ್ಯಾಕ್ಯುಲರ್ ಡಿಜೆನರೇಶನ್ (ಎಎಂಡಿ) ಅಪಾಯವನ್ನು ಕಡಿಮೆ ಮಾಡುತ್ತದೆ. ಇದಲ್ಲದೆ, ಟೊಮೆಟೊದಲ್ಲಿ ವಿಟಮಿನ್ ಸಿ ಸಹ ಇದೆ, ಇದು ಕಣ್ಣಿನ ಉರಿಯೂತವನ್ನು ಕಡಿಮೆ ಮಾಡಲು ಮತ್ತು ದೃಷ್ಟಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಕೆಂಪು ಬಣ್ಣದ ಕ್ಯಾಪ್ಸಿಕಂ

ಇದರಲ್ಲಿ ವಿಟಮಿನ್ ಸಿ ಮತ್ತು ಲ್ಯೂಟಿನ್ ಮತ್ತು ಜಿಯಾಕ್ಸಾಂಥಿನ್‍ನಂತಹ ಕ್ಯಾರೊಟಿನಾಯ್ಡ್ ಗಳನ್ನು ಹೊಂದಿರುತ್ತದೆ. ವಿಟಮಿನ್ ಸಿ ಕಣ್ಣುಗಳ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ಲ್ಯೂಟಿನ್ ಮತ್ತು ಜಿಯಾಕ್ಸಾಂಥಿನ್ ಕಣ್ಣಿನ ಕೋಶಗಳನ್ನು ಹಾನಿಕಾರಕ ಯುವಿ ಕಿರಣಗಳಿಂದ ರಕ್ಷಿಸುತ್ತದೆ. ಈ ಅಂಶಗಳು ದೃಷ್ಟಿಯನ್ನು ಸುಧಾರಿಸಲು ಮತ್ತು ವಯಸ್ಸಿಗೆ ಸಂಬಂಧಿಸಿದ ಕಣ್ಣಿನ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಸ್ಟ್ರಾಬೆರಿ

ಸ್ಟ್ರಾಬೆರಿ ವಿಟಮಿನ್ ಸಿಯ ಅತ್ಯುತ್ತಮ ಮೂಲವಾಗಿದೆ. ಇದು ಕಣ್ಣಿನ ಆರೋಗ್ಯಕ್ಕೆ ಉತ್ತಮವಾಗಿದೆ. ವಿಟಮಿನ್ ಸಿ ಕಣ್ಣಿನ ಕೋಶಗಳನ್ನು ಹಾನಿಯಿಂದ ರಕ್ಷಿಸುತ್ತದೆ ಮತ್ತು ದೃಷ್ಟಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಸ್ಟ್ರಾಬೆರಿಯಲ್ಲಿ ಆಂಟಿಆಕ್ಸಿಡೆಂಟ್‍ಗಳಿದ್ದು, ಇದು ಕಣ್ಣಿನ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ದೃಷ್ಟಿಯನ್ನು ಆರೋಗ್ಯಕರವಾಗಿರಿಸುತ್ತದೆ.

ಕೆಂಪು ದ್ರಾಕ್ಷಿ

ಕೆಂಪು ದ್ರಾಕ್ಷಿಯಲ್ಲಿ ರೆಸ್ವೆರಾಟ್ರಾಲ್ ಮತ್ತು ಉತ್ಕರ್ಷಣ ನಿರೋಧಕಗಳಿವೆ, ಇದು ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ರೆಸ್ವೆರಾಟ್ರಾಲ್ ಕಣ್ಣಿನ ಕೋಶಗಳನ್ನು ಫ್ರೀ ರಾಡಿಕಲ್‌ಗಳಿಂದ ರಕ್ಷಿಸುತ್ತದೆ ಮತ್ತು ದೃಷ್ಟಿಯನ್ನು ಸುಧಾರಿಸುತ್ತದೆ. ದ್ರಾಕ್ಷಿಯ ನಿಯಮಿತ ಸೇವನೆಯು ಕಣ್ಣಿನ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಕೆಂಪು ಸೇಬು

ಕೆಂಪು ಸೇಬುಗಳು ವಿಟಮಿನ್ ಎ, ಸಿ ಮತ್ತು ವಿವಿಧ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ, ಇದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ರೆಟಿನಾದ ಆರೋಗ್ಯಕರ ಸ್ಥಿತಿಯನ್ನು ಕಾಪಾಡಿಕೊಳ್ಳಲು ವಿಟಮಿನ್ ಎ ಮುಖ್ಯವಾಗಿದೆ, ಹಾಗೇ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಕಣ್ಣಿನ ಉರಿಯೂತವನ್ನು ಕಡಿಮೆ ಮಾಡಲು ಮತ್ತು ದೃಷ್ಟಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಹಾಗಾಗಿ ದಿನವಿಡೀ ಕಂಪ್ಯೂಟರ್, ಲ್ಯಾಪ್‍ಟಾಪ್ ಮುಂದೆ ಕೆಲಸ ಮಾಡುವವರು ತಮ್ಮ ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಈ ಆಹಾರಗಳನ್ನು ಪ್ರತಿದಿನ ಸೇವಿಸಿ ನಿಮ್ಮ ಕಣ್ಣಿನ ದೃಷ್ಟಿಯನ್ನು ಕಾಪಾಡಿಕೊಂಡು ಜಗತ್ತಿನ ಸೌಂದರ್ಯವನ್ನು ಕಣ್ತುಂಬಿಕೊಳ್ಳಿ.

Continue Reading
Advertisement
Gold Rate Today
ಚಿನ್ನದ ದರ10 mins ago

Gold Rate Today: ಆಭರಣ ಪ್ರಿಯರಿಗೆ ಗೋಲ್ಡನ್‌ ಟೈಮ್‌; ಚಿನ್ನದ ದರ ಇಂದು ಕೂಡ ಇಳಿಮುಖ

Cheteshwar Pujara
ಕ್ರೀಡೆ17 mins ago

Cheteshwar Pujara: ಕೌಂಟಿಯಿಂದಲೂ ಹೊರಬಿದ್ದ ಚೇತೇಶ್ವರ ಪೂಜಾರ

Murder case
ಉಡುಪಿ17 mins ago

Murder Case : ಉಡುಪಿಯಲ್ಲಿ ಪತ್ನಿಯನ್ನು ಕಡಿದು ಕೊಂದು ಹಾಕಿದ ಪತಿ!

student missing
ಬೆಂಗಳೂರು31 mins ago

Student Missing: ಓದಿಲ್ಲ ಎಂದು ಬೈದದ್ದಕ್ಕೆ ಮನೆ ಬಿಟ್ಟು ಹೋದ ಬಾಲಕ

Triple Talaq
ದೇಶ37 mins ago

Triple Talaq: ಯೋಗಿ ಆದಿತ್ಯನಾಥ್‌, ಮೋದಿಯನ್ನು ಹೊಗಳಿದ ಮಹಿಳೆಗೆ ಘೋರ ಶಿಕ್ಷೆ; ಬೆಂಕಿ ಹಚ್ಚಿ, ತ್ರಿವಳಿ ತಲಾಖ್‌ ನೀಡಿದ ಪಾಪಿ ಪತಿ

assault case
ರಾಮನಗರ52 mins ago

Assault Case : ಹುಡುಗಿ ವಿಷ್ಯಕ್ಕೆ ನಡುರಸ್ತೆಯಲ್ಲಿ ಲಾಂಗ್‌ ಝಳಪಿಸಿದ ಯುವಕರು

Hasin Jahan
ಕ್ರೀಡೆ1 hour ago

Hasin Jahan: ‘ಹೆಣ್ಣು ಎಂದರೆ ನಿಮಗೆ ಮಜಾ​ ಮಾಡೋ ವಸ್ತು’; ಗಂಗೂಲಿ ವಿರುದ್ಧ ಹರಿಹಾಯ್ದ ಶಮಿ ಮಾಜಿ ಪತ್ನಿ

bwssb water price hike
ಪ್ರಮುಖ ಸುದ್ದಿ1 hour ago

Water Price Hike: ಬೆಂಗಳೂರಿನಲ್ಲಿ ನೀರಿನ ದರ ಏರಿಕೆಗೆ ವೇಗ; ನಿಮಗೆ ಎಷ್ಟಾಗುತ್ತೆ ಚೆಕ್‌ ಮಾಡಿ

Bulldozer Action
ದೇಶ2 hours ago

Bulldozer Action: ಅಯೋಧ್ಯೆಯಲ್ಲಿ ಬುಲ್ಡೋಜರ್‌ ಸದ್ದು; ಅಪ್ರಾಪ್ತೆಯ ಅತ್ಯಾಚಾರ ಆರೋಪಿ ಮೊಯೀದ್‌ ಖಾನ್‌ಗೆ ಸೇರಿದ ಕಟ್ಟಡ ಪುಡಿಪುಡಿ

Viral Video
Latest2 hours ago

Viral Video: ಹರಿದ ಬಟ್ಟೆ ಧರಿಸಿ ತನ್ನ ಮೇಲೆ ಅತ್ಯಾಚಾರ ಆಗಿದೆ ಎಂದ ಮಹಿಳೆ; ಅಸಲಿಗೆ ಆಗಿದ್ದೇನು?

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌