KL Rahul Retirement: ಕ್ರಿಕೆಟ್​ಗೆ ದಿಢೀರ್​ ನಿವೃತ್ತಿ ಘೋಷಿಸಿದ ಕೆ.ಎಲ್​ ರಾಹುಲ್?; ಇನ್​ಸ್ಟಾಗ್ರಾಮ್​ ಪೋಸ್ಟ್​ ವೈರಲ್​​ - Vistara News

ಕ್ರೀಡೆ

KL Rahul Retirement: ಕ್ರಿಕೆಟ್​ಗೆ ದಿಢೀರ್​ ನಿವೃತ್ತಿ ಘೋಷಿಸಿದ ಕೆ.ಎಲ್​ ರಾಹುಲ್?; ಇನ್​ಸ್ಟಾಗ್ರಾಮ್​ ಪೋಸ್ಟ್​ ವೈರಲ್​​

KL Rahul Retirement: ರಾಹುಲ್​ ಮಾಡಿದ ಪೋಸ್ಟ್​ನಲ್ಲಿ “ನಾನು ನಿಮ್ಮ ಬಳಿ ಏನ್ನನ್ನೋ ಹೇಳಬೇಕಿದೆ.. ಕಾಯುತ್ತಿರಿ‘ (I have an announcement to make, stay tuned) ಎಂದು ಬರೆದುಕೊಂಡಿದ್ದರು. ಆದರೆ, ಕೆಲ ಕಿಡಿಗೇಡಿಗಳು ಈ ಪೋಸ್ಟ್​ ತಿರುಚಿ ರಾಹುಲ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ ಎಂಬ ವದಂತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿದ್ದಾರೆ.

VISTARANEWS.COM


on

KL Rahul announces retirement?
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟೀಮ್​ ಇಂಡಿಯಾದ ಸ್ಟಾರ್​ ಕ್ರಿಕೆಟಿಗ, ಕನ್ನಡಿಗ ಕೆ.ಎಲ್​ ರಾಹುಲ್(KL Rahul) ​ ಅವರು ದೀಢಿರ್​ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ(KL Rahul Retirement) ಹೇಳಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ರಾಹುಲ್​ ನಿವೃತ್ತಿಯ ಬಗ್ಗೆ ಪೋಸ್ಟ್​ ಕಂಡ ಅವರ ಅಭಿಮಾನಿಗಳು ಅಚ್ಚರಿಯ ಜತೆಗೆ ಆತಂಕ ಪಡುವಂತಾಗಿದೆ. ರಾಹುಲ್​ ವಿದಾಯದ ಪೋಸ್ಟರ್​ನ ಅಸಲಿ ಸತ್ಯ ಇಲ್ಲಿದೆ.

ವೈರಲ್​ ಪೋಸ್ಟ್​ ಹೇಗಿದೆ?


ವೈರಲ್‌ ಆಗುತ್ತಿರುವ ಪೋಸ್ಟ್‌ನಲ್ಲಿ ಕೆ.ಎಲ್ ರಾಹುಲ್ ವೃತ್ತಿಪರ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ. “ಭಾರತ ತಂಡವನ್ನು ಪ್ರತಿನಿಧಿಸಿದ ಹೆಮ್ಮೆ ನನ್ನದು. ಅನೆಕ ಪ್ರತಿಭಾನ್ವಿತ ಆಟಗಾರರೊಂದಿಗೆ ಆಡಿದ ಸವಿ ನೆನಪು ಇದೆ. ನಾನು ವೃತ್ತಿಪರ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ. ಈ ನಿರ್ಧಾರವು ಸುಲಭವಲ್ಲ, ಏಕೆಂದರೆ ಅನೇಕ ವರ್ಷಗಳಿಂದ ಕ್ರಿಕೆಟ್ ನನ್ನ ಜೀವನದ ಪ್ರಮುಖ ಭಾಗವಾಗಿದೆ. ನನ್ನ ವೃತ್ತಿಜೀವನದುದ್ದಕ್ಕೂ ನನ್ನನ್ನು ಬೆಂಬಲಿಸಿದ ನನ್ನ ಕುಟುಂಬ, ಸ್ನೇಹಿತರು, ತಂಡದ ಸಹ ಆಟಗಾರರು ಮತ್ತು ಅಭಿಮಾನಿಗಳಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಮೈದಾನದ ಒಳಗೆ ಮತ್ತು ಹೊರಗೆ ನಾನು ಪಡೆದ ಅನುಭವಗಳು ಮತ್ತು ನೆನಪುಗಳು ನಿಜವಾಗಿಯೂ ಬೆಲೆಕಟ್ಟಲಾಗದವು. ಈ ಅದ್ಭುತ ಪ್ರಯಾಣದ ಭಾಗವಾಗಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು’ ಎಂದು ಬರೆದಿದೆ.

ರಾಹುಲ್​ ಅವರು ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕ ಭಾರತ ತಂಡದ ಪರ ಸ್ಥಿರ ಪ್ರದರ್ಶನ ತೋರುವಲ್ಲಿ ವಿಫಲರಾಗುತ್ತಲೇ ಬಂದಿದ್ದಾರೆ. ಇದೇ ಕಾರಣಕ್ಕೆ ಅವರನ್ನು ಟಿ20 ವಿಶ್ವಕಪ್​ಗೂ ಆಯ್ಕೆ ಮಾಡಿರಲಿಲ್ಲ. ಕಳೆದ ಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿಯೂ ಕಳಪೆ ಪ್ರದರ್ಶನ ತೋರಿದ್ದರು. ಹೀಗಾಗಿ ಅವರಿಗೆ ತಂಡದಲ್ಲಿ ಇನ್ನು ಸ್ಥಾನ ಸಿಗುವುದು ಅನುಮಾನ ಎನ್ನಲಾಗಿತ್ತು. ಹೀಗಾಗಿ ರಾಹುಲ್​ ಅವರ ನಿವೃತ್ತಿಯ ಪೋಸ್ಟ್ ಭಾರೀ ಸದ್ದು ಮಾಡಿತು. ಅಸಲಿ ಸತ್ಯ ಬೇರೆಯೇ ಇದೆ.​

ರಾಹುಲ್​ ಮಾಡಿದ್ದ ಪೋಸ್ಟ್​ ಏನು?


ರಾಹುಲ್ ಮತ್ತು ಪತ್ನಿ ಅಥಿಯಾ ಶೆಟ್ಟಿ (Athiya Shetty) ಅವರು ವಿಶೇಷ ಮಕ್ಕಳ ಶಾಲೆಯ (Special Needs School) ನೆರವಿಗಾಗಿ ಮುಂಬೈನ BKC ಯಲ್ಲಿನ ವಿಶೇಷ ಮಕ್ಕಳ ಶಾಲೆಗೆ ಅಗತ್ಯವಿರುವ ಬೆಂಬಲ ನೀಡುವ ಸಲುವಾಗಿ ವಿಪ್ಲಾ ಫೌಂಡೇಶನ್‌ಗೆ (Vipla Foundation) ನಿಧಿ ಸಂಗ್ರಹಿಸಲು ಇತರೆ ಕ್ರಿಕೆಟಿಗರ ಜತೆ ಕೈಜೋಡಿಸಿದ್ದಾರೆ. ಈ ವಿಚಾರವನ್ನು ಅವರು ಕೆಲ ದಿನಗಳ ಹಿಂದೆ ಫೋಷಿಸಿದ್ದರು. ಇದರ ಭಾಗವಾಗಿ ರಾಹುಲ್​ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್​ ಒಂದನ್ನು ಮಾಡಿದ್ದರು.


ಇದನ್ನೂ ಓದಿ KL Rahul: ಆರ್‌ಸಿಬಿ ಸೇರದಂತೆ ಕೆ.ಎಲ್​ ರಾಹುಲ್‌ಗೆ 25 ಕೋಟಿ ಆಫರ್ ಮಾಡಿದ ಫ್ರಾಂಚೈಸಿ!

ರಾಹುಲ್​ ಮಾಡಿದ ಪೋಸ್ಟ್​ನಲ್ಲಿ “ನಾನು ನಿಮ್ಮ ಬಳಿ ಏನ್ನನ್ನೋ ಹೇಳಬೇಕಿದೆ.. ಕಾಯುತ್ತಿರಿ‘ (I have an announcement to make, stay tuned) ಎಂದು ಬರೆದುಕೊಂಡಿದ್ದರು. ಆದರೆ, ಕೆಲ ಕಿಡಿಗೇಡಿಗಳು ಈ ಪೋಸ್ಟ್​ ತಿರುಚಿ ರಾಹುಲ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ ಎಂಬ ವದಂತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿದ್ದಾರೆ. ಅಸಲಿಗೆ ರಾಹುಲ್​ ಕ್ರಿಕೆಟ್​ಗೆ ನಿವೃತ್ತಿ ಹೇಳಲು ಬಯಸಿಲ್ಲ. ಪೋಸ್ಟ್​ನ ಅಸಲಿ ಸತ್ಯ ತಿಳಿದ ಬಳಿಕ ಅವರ ಅಭಿಮಾನಿಗಳು ಸದ್ಯ ನಿಟ್ಟುಸಿರುಬಿಟ್ಟಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Shraddha Kapoor- Shreyas Iyer: ಕ್ರಿಕೆಟಿಗ ಅಯ್ಯರ್​ ಜತೆ ಡೇಟಿಂಗ್ ಆರಂಭಿಸಿದ ನಟಿ ಶ್ರದ್ಧಾ ಕಪೂರ್‌; ಫೋಟೊ ವೈರಲ್​

Shraddha Kapoor- Shreyas Iyer: ಬಾಲಿವುಡ್‌ ಸ್ಟಾರ್‌ ನಟಿ ಶ್ರದ್ಧಾ ಕಪೂರ್‌(Shraddha Kapoor) ಇನ್‌ಸ್ಟಾಗ್ರಾಂ ಫಾಲೋವರ್ಸ್‌ ಸಂಖ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರನ್ನೇ ಹಿಂದಿಕ್ಕಿದ್ದಾರೆ.

VISTARANEWS.COM


on

Shraddha Kapoor- Shreyas Iyer
Koo

ಮುಂಬಯಿ: ಬಾಲಿವುಡ್‌ ನಟಿ ಶ್ರದ್ಧಾ ಕಪೂರ್‌(Shraddha Kapoor) ಅವರು ಟೀಮ್​ ಇಂಡಿಯಾದ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್​ ಅಯ್ಯರ್(Shreyas Iyer)​ ಜತೆ ಡೇಟಿಂಗ್​ ನಡೆಸಲು ಆರಂಭಿಸಿದಂತಿದೆ. ಇಬ್ಬರು ಜತೆಯಾಗಿ ಕಾಣಿಸಿಕೊಂಡ ಫೋಟೊ ಒಂದು ವೈರಲ್​ ಆಗಿದ್ದು, ಅಯ್ಯರ್​ ಬಗ್ಗೆ ಶ್ರದ್ಧಾ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಹೀಗಾಗಿ ಇಬ್ಬರು ಡೇಟಿಂಗ್​ ನಡೆಸುತ್ತಿರುವುದು ಪಕ್ಕಾ ಎಂದು ನೆಟ್ಟಿಗರು ಹೇಳಲಾರಂಭಿಸಿದ್ದಾರೆ.

ಸಿಯಟ್​ ಕ್ರಿಕೆಟ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಶ್ರದ್ಧಾ ಕಪೂರ್‌, ಮಾಧ್ಯಮದ ಜತೆ ಮಾತನಾಡುವ ವೇಳೆ “ನಾನು ಇಡೀ ಭಾರತ ತಂಡವನ್ನು ಬೆಂಬಲಿಸುತ್ತೇನೆ ಆದರೆ ನಾನು ಒಬ್ಬ ಆಟಗಾರನನ್ನು ಮಾತ್ರ ಆಯ್ಕೆ ಮಾಡಬೇಕಾದರೆ ಅದು ಶ್ರೇಯಸ್ ಅಯ್ಯರ್ ಆಗಿರುತ್ತದೆ. ಏಕೆಂದರೆ ನಾನು ಅವರ ವ್ಯಕ್ತಿತ್ವವನ್ನು ನಿಜವಾಗಿಯೂ ಇಷ್ಟಪಡುತ್ತೇನೆ” ಎಂದಿದ್ದರು. ಇದೀಗ ಈ ಜೋಡಿ ಬಹಳ ಆತ್ಮೀಯವಾಗಿ ಕಾಣಿಸಿಕೊಂಡಿರುವ ಫೋಟೊ ವೈರಲ್​ ಆಗಿದ್ದು ಶೀಘ್ರದಲ್ಲೇ ಇವರಿಬ್ಬರು ಹಸೆಮಣೆ ಏರುವ ಸಾಧ್ಯತೆ ಇದೆ ಎಂದು ನೆಟ್ಟಿಗರು ಕಮೆಂಟ್ ಮಾಡಲಾರಂಭಿಸಿದ್ದಾರೆ.

ಶ್ರೇಯಸ್​ ಅಯ್ಯರ್​ ‘ಸಿಯೆಟ್ ಅವಾರ್ಡ್ಸ್'(CEAT Cricket Awards)ನಲ್ಲಿ ವರ್ಷದ T20 ನಾಯಕತ್ವ ಪ್ರಶಸ್ತಿಯನ್ನು ಗೆದಿದ್ದರು. ಐಪಿಎಲ್ ಟೂರ್ನಿಯಲ್ಲಿ ನಾಯಕನಾಗಿ ತಂಡವನ್ನು 2 ಬಾರಿ ಫೈನಲ್‌ ತಲುಪಿಸಿದ ಸಾಧನೆಗೆ ಈ ಪ್ರಶಸ್ತಿ ಲಭಿಸಿತ್ತು. ಶ್ರೇಯಸ್​ ಅಯ್ಯರ್​ ಅವರು ಐಪಿಎಲ್​ನಲ್ಲಿ ಡೆಲ್ಲಿ ತಂಡದ ನಾಯಕನಾಗಿ ತಂಡವನ್ನು ಒಮ್ಮೆ ಫೈನಲ್​ ತಲುಪಿಸಿದ್ದರು. ಅಲ್ಲಿ ಮುಂಬೈ ವಿರುದ್ಧ ತಂಡ ಸೋಲು ಕಂಡು ರನ್ನರ್​ ಅಪ್​ ಪ್ರಶಸ್ತಿ ಪಡೆದಿತ್ತು. ಈ ಬಾರಿಯ ಆವೃತ್ತಿಯಲ್ಲಿ ಕೆಕೆಆರ್​ ತಂಡದ ನಾಯಕನಾಗಿ ಟ್ರೋಫಿ ಗೆದ್ದ ಸಾಧನೆ ಮಾಡಿದ್ದರು. 

ಇದನ್ನೂ ಓದಿ Shraddha Kapoor: ಮದುವೆ ಬಗ್ಗೆ ಶ್ರದ್ಧಾ ಕಪೂರ್ ಹೇಳಿದ್ದೇನು? ಹುಡುಗ ಯಾರು?

ಅಯ್ಯರ್​ ಇದುವೆರೆಗೆ 115 ಐಪಿಎಲ್​ ಪಂದ್ಯವನ್ನಾಡಿ 3127 ರನ್​ ಬಾರಿಸಿದ್ದಾರೆ. ಇದರಲ್ಲಿ 21 ಅರ್ಧಶತಕ ಒಳಗೊಂಡಿದೆ. 96 ಗರಿಷ್ಠ ವೈಯಕ್ತಿ ಮೊತ್ತವಾಗಿದೆ. ಭಾರತ ತಂಡದ ಪರ 51 ಟಿ20, 62 ಏಕದಿನ ಮತ್ತು 14 ಟೆಸ್ಟ್​ ಪಂದ್ಯಗಳನ್ನಾಡಿ ಒಟ್ಟು 4,336 ರನ್​ ಗಳಿಸಿದ್ದಾರೆ. ಟೆಸ್ಟ್​ನಲ್ಲಿ 1, ಏಕದಿನದಲ್ಲಿ 5 ಶತಕ ಬಾರಿಸಿದ್ದಾರೆ.

ಮೋದಿಯನ್ನು ಹಿಂದಿಕ್ಕಿದ ಶ್ರದ್ಧಾ ಕಪೂರ್‌


ಇತ್ತೀಚೆಗಷ್ಟೇ ತೆರೆ ಕಂಡು ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿರುವ ಸ್ತ್ರೀ 2 ಸಿನಿಮಾದ ಸಕ್ಸೆಸ್‌ ಸಂಭ್ರಮದಲ್ಲಿರುವ ಬಾಲಿವುಡ್‌ ಸ್ಟಾರ್‌ ನಟಿ ಶ್ರದ್ಧಾ ಕಪೂರ್‌(Shraddha Kapoor) ಸಿನಿಮಾ ಯಶಸ್ಸಿನ ಬೆನ್ನಲ್ಲೇ ಅವರ ಇನ್‌ಸ್ಟಾಗ್ರಾಂ ಫಾಲೋವರ್ಸ್‌ ಸಂಖ್ಯೆಯೂ ಭಾರೀ ಏರಿಕೆ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi)ಯವರನ್ನೇ ಹಿಂದಿಕ್ಕಿದ್ದಾರೆ.

ಶ್ರದ್ಧಾ ಕಪೂರ್ ಇನ್‌ಸ್ಟಾಗ್ರಾಂ ಫಾಲೋವರ್ಸ್ ಸಂಖ್ಯೆ ಬರೋಬ್ಬರಿ 91.4 ಮಿಲಿಯನ್‌ಗೆ ಎರಿಕೆಯಾಗಿದೆ. ಪ್ರಧಾನಿ ಮೋದಿ ಇನ್‌ಸ್ಟಾಗ್ರಾಂನಲ್ಲಿ 91.3 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಟ್ವಿಟರ್‌ನಲ್ಲಿ ಮೋದಿ 101.2 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಆಮೂಲಕ ಅತಿ ಹೆಚ್ಚು ಫಾಲೋವರ್ಸ್‌ ಹೊಂದಿರುವ ಸೆಲೆಬ್ರಿಟಿಗಳಲ್ಲಿ ಶ್ರದ್ಧಾ ಮೂರನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಬರೋಬ್ಬರಿ 271 ಮಿಲಿಯನ್ ಇನ್‌ಸ್ಟಾ ಫಾಲೋವರ್ಸ್ ಹೊಂದಿದ್ದಾರೆ. ಎರಡನೇ ಸ್ಥಾನದಲ್ಲಿರುವ ನಟಿ ಪ್ರಿಯಾಂಕಾ ಚೋಪ್ರಾ 91.8 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಮೂರನೇ ಸ್ಥಾನವವನ್ನು ಇದೀಗ ಶ್ರದ್ಧ ಕಪೂರ್ ಆಕ್ರಮಿಸಿಕೊಂಡರೆ, ನರೇಂದ್ರ ಮೋದಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

Continue Reading

ಕ್ರೀಡೆ

Ritika Sajdeh: ಜೂನಿಯರ್​ ಹಿಟ್​ಮ್ಯಾನ್​ ನಿರೀಕ್ಷೆಯಲ್ಲಿ ರೋಹಿತ್​; ಪತ್ನಿಯ ಬೇಬಿ ಬಂಪ್‌ ವಿಡಿಯೊ ವೈರಲ್​

Ritika Sajdeh: ಬ್ಯುಸಿನೆಸ್ ಮ್ಯಾನೇಜರ್ ಆಗಿದ್ದ ರಿತಿಕಾ ಸಜ್ದೇಹ್ ಅವರನ್ನು ರೋಹಿತ್ ಶರ್ಮಾ 2015ರಲ್ಲಿ ಮದುವೆಯಾಗಿದ್ದರು. ಮದುವೆಗೂ ಮುನ್ನ ರೋಹಿತ್-ರಿತಿಕಾ ಇಬ್ಬರೂ 6 ವರ್ಷಗಳಿಂದ ಡೇಟಿಂಗ್‌ನಲ್ಲಿದ್ದರು

VISTARANEWS.COM


on

Ritika Sajdeh
Koo

ಮುಂಬಯಿ: ಹಿಟ್​ಮ್ಯಾನ್​ ಖ್ಯಾತಿಯ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮ(Rohit Sharma) ಅವರು ಸದ್ಯದಲ್ಲೇ ಎರಡನೇ ಮಗುವಿನ ತಂದೆಯಾಗುವ ನಿರೀಕ್ಷೆಯಲ್ಲಿದ್ದಾರೆ. ಹೌದು, ರೋಹಿತ್​ ಪತ್ನಿ ರಿತಿಕಾ ಸಜ್ದೇಹ್ (Ritika Sajdeh) ಗರ್ಭಿಣಿಯಾಗಿದ್ದಾರೆ ಎಂದು ವರದಿಯಾಗಿದೆ. ರಿತಿಕಾ ಬೇಬಿ ಬಂಪ್‌ ವಿಡಿಯೊ ಒಂದು ವೈರಲ್​ ಆಗುತ್ತಿದ್ದು, ರೋಹಿತ್​ ಅಭಿಮಾನಿಗಳು ಜೂನಿಯರ್​ ಹಿನ್​ಮ್ಯಾನ್​ ಶೀಘ್ರದಲ್ಲೇ ಬರಲಿದ್ದಾರೆ ಎಂದು ಕಮೆಂಟ್​ ಮಾಡಿದ್ದಾರೆ.

ರೋಹಿತ್​ ಶರ್ಮ ಮತ್ತು ರಿತಿಕಾ ಸಜ್ದೇಹ್(Ritika Sajdeh) ದಂಪತಿಗೆ ಈಗಾಗಲೇ ಓರ್ವ ಪುತ್ರಿ ಇದ್ದಾಳೆ. ಈಕೆಯ ಹೆಸರು ಸಮೈರಾ. ಇದೀಗ ಈ ಜೋಡಿ 2ನೇ ಮಗುವಿನ ನಿರೀಕ್ಷೆಯಲ್ಲಿ ಇದ್ದ ಹಾಗಿದೆ. ರಿತಿಯಾ ಮುಂಬೈಯಲ್ಲಿ ತಿರುಗಾಡುವುದನ್ನು ಪಾಪರಾಜಿಗಳು ಸೆರೆ ಹಿಡಿದಿದ್ದಾರೆ. ಈ ವಿಡಿಯೊದಲ್ಲಿ ರಿತಿಕಾ ಅವರ ಬೆಬಿ ಬಂಪ್‌ ದೃಶ್ಯವು ಸೆರೆಯಾಗಿದೆ. ಹಾಗಾಗಿ, ರೋಹಿತ್​ ಪತ್ನಿಯು ಗರ್ಭಿಣಿಯಾಗಿರುವುದು ದೃಢಪಟ್ಟಿದೆ.

ತನ್ನ ಬ್ಯುಸಿನೆಸ್ ಮ್ಯಾನೇಜರ್ ಆಗಿದ್ದ ರಿತಿಕಾ ಸಜ್ದೇಹ್ ಅವರನ್ನು ರೋಹಿತ್ ಶರ್ಮಾ 2015ರಲ್ಲಿ ಮದುವೆಯಾಗಿದ್ದರು. ಮದುವೆಗೂ ಮುನ್ನ ರೋಹಿತ್-ರಿತಿಕಾ ಇಬ್ಬರೂ 6 ವರ್ಷಗಳಿಂದ ಡೇಟಿಂಗ್‌ನಲ್ಲಿದ್ದರು. ಮದುವೆಯಾದ ಬಳಿಕವೂ ಕ್ರಿಕೆಟ್‌ ಪಂದ್ಯಗಳ ವೇಳೆ ಮೈದಾನದಲ್ಲಿದ್ದು ತನ್ನ ಪತಿ ರೋಹಿತ್​ಗೆ ರಿತಿಕಾ ಚಿಯರ್ ಮಾಡುತ್ತಿರುತ್ತಾರೆ.

ಇದನ್ನೂ ಓದಿ Rohit Sharma: ಮುಂಬೈ ಸ್ಟ್ರೀಟ್​ನಲ್ಲಿ ಜಾಲಿ ರೈಡ್‌ ಮಾಡಿದ ರೋಹಿತ್​; ವಿಡಿಯೊ ವೈರಲ್​

ಸದ್ಯ ರೋಹಿತ್​ ಶರ್ಮ(Rohit Sharma) ಅವರು ಯಾವುದೇ ಸರಣಿ ಇಲ್ಲದ ಕಾರಣ ವಿಶ್ರಾಂತಿಯಲ್ಲಿದ್ದಾರೆ. ತವರಾದ ಮುಂಬೈನಲ್ಲಿ ಜಾಲಿ ಮೂಡ್​ನಲ್ಲಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಮುಂಬೈಯ ಸ್ಟ್ರೀಟ್​ ಒಂದರಲ್ಲಿ ರೋಹಿತ್​ ನೀಲಿ ಬಣ್ಣದ ಲ್ಯಾಂಬೋರ್ಗಿನಿ(Lamborghini) ಕಾರಿನಲ್ಲಿ ಜಾಲಿ ರೈಡ್​ ಮಾಡಿರುವ ವಿಡಿಯೊ ವೈರಲ್​ ಆಗಿತ್ತು.

ರೋಹಿತ್​ ಅವರು ಲ್ಯಾಂಬೋರ್ಗಿನಿ ಕಾರಿನಲ್ಲಿ ಬರುತ್ತಿರುವ ವಿಡಿಯೊವನ್ನು ನೆಟ್ಟಿಗರೊಬ್ಬರು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ರೋಹಿತ್​ ರಸ್ತೆ ಬದಿಯಲ್ಲಿ ನಿಂತಿದ್ದ ಅಭಿಮಾನಿಗಳನ್ನು ಕಂಡು ಥಮ್ಸ್ ಅಪ್‌ ಮಾಡಿ ಮುಂದೆ ಸಾಗಿದ್ದರು. ರೋಹಿತ್​ ಏಕದಿನದಲ್ಲಿ ಲಂಕಾ ವಿರುದ್ಧ 264 ರನ್ ಬಾರಿಸಿದ್ದರು. ಇದೇ ಸಂಖ್ಯೆಯನ್ನು ತಮ್ಮ ಕಾರ್​ ನಂಬರ್​ ಆಗಿ ಬಳಸಿಕೊಂಡಿದ್ದಾರೆ.​

ಟಿ20 ವಿಶ್ವಕಪ್​ ಮುಗಿದ ಬಳಿಕ ಕುಟುಂಬ ಸಮೇತರಾಗಿ ವಿದೇಶಕ್ಕೆ ಪ್ರವಾಸ ಹೋಗಿದ್ದ ರೋಹಿತ್​ ಮುಂಬೈಗೆ ಮರಳಿದ್ದ ವೇಳೆಯೂ ಇದೇ ಕಾರಿನಲ್ಲಿ ವಿಮಾನ ನಿಲ್ದಾಣದಿಂದ ಮನೆಗೆ ತೆರಳಿದ್ದ ವಿಡಿಯೊ ಮೂರು ವಾರಗಳ ಹಿಂದೆ ವೈರಲ್​ ಆಗಿತ್ತು. ಸದ್ಯ ವಿಶ್ರಾಂತಿಯಲ್ಲಿರುವ ರೋಹಿತ್​ ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಸರಣಿ ವೇಳೆಗೆ ತಂಡ ಸೇರಲಿದ್ದಾರೆ.

Continue Reading

ಕ್ರೀಡೆ

Cheteshwar Pujara: ಕೌಂಟಿಯಿಂದಲೂ ಹೊರಬಿದ್ದ ಚೇತೇಶ್ವರ ಪೂಜಾರ

Cheteshwar Pujara: ಎಡಗೈ ಬ್ಯಾಟರ್‌ ಹ್ಯೂಸ್‌‍ ಅವರು ಮುಂದಿನ ಋತುವಿನಲ್ಲಿ ಕೌಂಟಿ ಕ್ರಿಕೆಟ್‌ನ ಎಲ್ಲ ಚಾಂಪಿಯನ್‌ಷಿಪ್‌ ಮತ್ತು ಟಿ20 ವಿಟಾಲಿಟಿ ಬ್ಲಾಸ್ಟ್‌ ಪಂದ್ಯಗಳಿಗೆ ಲಭ್ಯವಿರುವ ಕಾರಣ ಚೇತೇಶ್ವರ ಪೂಜಾರ ಅವರನ್ನು ಕೈಬಿಡಲಾಗುವುದು ಎಂದು ಸಸೆಕ್ಸ್‌ ಕೌಂಟಿ ಕ್ಲಬ್​ ತಿಳಿಸಿದೆ.

VISTARANEWS.COM


on

Cheteshwar Pujara
Koo

ಲಂಡನ್​: ಟೀಮ್​ ಇಂಡಿಯಾದ ಟೆಸ್ಟ್‌ ಸ್ಪೆಷಲಿಸ್ಟ್‌, ಚೇತೇಶ್ವರ ಪೂಜಾರ(Cheteshwar Pujara) ಅವರ ಸಸೆಕ್ಸ್‌ ಕೌಂಟಿ(Sussex stint) ಕ್ರಿಕೆಟ್‌ ಕ್ಲಬ್‌ ಜತೆಗಿನ ಪಯಣ ಅಂತ್ಯ ಕಂಡಿದೆ. ಆಸ್ಟ್ರೇಲಿಯಾದ ಡೇನಿಯಲ್‌ ಹ್ಯೂಸ್‌‍(Daniel Hughes) ಅವರ ಸೇವೆ ಉಳಿಸಿಕೊಳ್ಳುವುದಕ್ಕಾಗಿ ಸಸೆಕ್ಸ್‌ ಕೌಂಟಿ ಕ್ರಿಕೆಟ್‌ ಕ್ಲಬ್‌ ತಂಡವು ಪೂಜಾರ ಅವರನ್ನು ಕೈಬಿಡಲು ನಿರ್ಧರಿಸಿದೆ.

ಎಡಗೈ ಬ್ಯಾಟರ್‌ ಹ್ಯೂಸ್‌‍ ಅವರು ಮುಂದಿನ ಋತುವಿನಲ್ಲಿ ಕೌಂಟಿ ಕ್ರಿಕೆಟ್‌ನ ಎಲ್ಲ ಚಾಂಪಿಯನ್‌ಷಿಪ್‌ ಮತ್ತು ಟಿ20 ವಿಟಾಲಿಟಿ ಬ್ಲಾಸ್ಟ್‌ ಪಂದ್ಯಗಳಿಗೆ ಲಭ್ಯವಿರುವ ಕಾರಣ ಚೇತೇಶ್ವರ ಪೂಜಾರ ಅವರನ್ನು ಕೈಬಿಡಲಾಗುವುದು ಎಂದು ಸಸೆಕ್ಸ್‌ ಕೌಂಟಿ ಕ್ಲಬ್​ ತಿಳಿಸಿದೆ.

ಪೂಜಾರ 2024ರಲ್ಲಿ ಸತತ ಮೂರನೇ ಬಾರಿಗೆ ಸಸೆಕ್ಸ್‌ ತಂಡಕ್ಕೆ ಮರಳಿದ್ದರು. ಹ್ಯೂಸ್‌‍ ತಂಡಕ್ಕೆ ಬರುವ ಮೊದಲು ಅವರು ಮೊದಲ ಏಳು ಚಾಂಪಿಯನ್‌ಷಿಪ್‌ ಪಂದ್ಯಗಳನ್ನು ಆಡಿದ್ದರು. ಹ್ಯೂಸ್‌‍ ಈ ವರ್ಷದ ಬ್ಲಾಸ್ಟ್‌ನ ಗುಂಪು ಹಂತಗಳಲ್ಲಿ ಐದು ಅರ್ಧಶತಕಗಳು ಸೇರಿದಂತೆ 43.07 ಸರಾಸರಿಯಲ್ಲಿ 560 ರನ್‌ ಗಳಿಸಿ ಗಮನ ಸೆಳೆದಿದ್ದರು. ಪೂಜಾರ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಇದೇ ಕಾರಣಕ್ಕೆ ಅವರನ್ನು ಕೈ ಬಿಟ್ಟು ಹ್ಯೂಸ್‌‍ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲು ಕ್ಲಬ್​ ನಿರ್ಧರಿಸಿದೆ. ರಾಷ್ಟ್ರೀಯ ತಂಡದ ಪರ ರನ್‌ ಕಲೆ ಹಾಕುವಲ್ಲಿ ವಿಫಲರಾದ ಕಾರಣ ಪೂಜಾರ ಅವರು ಟೀಮ್​ ಇಂಡಿಯಾದಿಂದ ದೂರ ಉಳಿದಿದ್ದಾರೆ.

ಇದನ್ನೂ ಓದಿ ತಾಯಿ ಕುಸಿದು ಬಿದ್ದ ಕೂಡಲೇ ಅಶ್ವಿನ್​ ನೆರವಿಗೆ ಬಂದದ್ದು ಚೇತೇಶ್ವರ ಪೂಜಾರ

​35 ವರ್ಷದ ಪೂಜಾರ ಕೊನೆಯ ಬಾರಿ ಭಾರತ ಪರ ಆಡಿದ್ದು ಜುಲೈ 2023 ರಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ. ಕಳಪೆ ಬ್ಯಾಟಿಂಗ್​ ಫಾರ್ಮ್​ನಿಂದಾಗಿ ಅವರು ತಂಡದಿಂದ ಹೊರಬಿದ್ದಿದ್ದರು. ಪೂಜಾರ ಎರಡೂ ಇನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಅದರಲ್ಲೂ ಮೊದಲ ಇನಿಂಗ್ಸ್​ನಲ್ಲಿ ವಿಕೆಟ್​ಗೆ ಬಂದ ಚೆಂಡನ್ನು ಬ್ಯಾಟ್​ ಎತ್ತಿ ಹಿಡಿದು ಕ್ಲೀನ್​ ಬೌಲ್ಡ್​ ಆಗಿದ್ದರು. ಪೂಜಾರ ಈ ರೀತಿ ವಿಕೆಟ್​ ಒಪ್ಪಿಸಿದ್ದನ್ನು ಕಂಡು ಅನೇಕ ಮಾಜಿ ಕ್ರಿಕೆಟಿಗರು ಟೀಕೆ ವ್ಯಕ್ತಪಡಿಸಿದ್ದರು. ಪೂಜಾರ ಇದುವರೆಗೆ ಭಾರತ ಪರ 103 ಟೆಸ್ಟ್​ ಪಂದ್ಯ ಆಡಿ 7195 ರನ್​ ಬಾರಿಸಿದ್ದಾರೆ. ಇದರಲ್ಲಿ 19 ಶತಕ ಮತ್ತು 35 ಅರ್ಧಶತಕ ಒಳಗೊಂಡಿದೆ.

ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಅತ್ಯಧಿಕ ದ್ವಿಶತಕ ಬಾರಿಸಿದ ಮೊದಲ ಭಾರತೀಯ ಎಂಬ ದಾಖಲೆ ಚೇತೇಶ್ವರ ಹೆಸರಿನಲ್ಲಿದೆ. ಅವರು ಒಟ್ಟು 17* ದ್ವಿಶತಕ ಬಾರಿಸಿದ್ದಾರೆ. 61 ಶತಕಗಳು ಹಾಗೂ 78 ಅರ್ಧಶತಕಗಳು ಕೂಡ ಬಾರಿಸಿದ್ದಾರೆ. ಇನ್ನು ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 20 ಸಾವಿರ ರನ್ ಪೂರೈಸಿದ ಭಾರತದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಯೂ ಪೂಜಾರ ಅವರದ್ದಾಗಿದೆ.

Continue Reading

ಕ್ರೀಡೆ

Hasin Jahan: ‘ಹೆಣ್ಣು ಎಂದರೆ ನಿಮಗೆ ಮಜಾ​ ಮಾಡೋ ವಸ್ತು’; ಗಂಗೂಲಿ ವಿರುದ್ಧ ಹರಿಹಾಯ್ದ ಶಮಿ ಮಾಜಿ ಪತ್ನಿ

Hasin Jahan: ಗಂಗೂಲಿ ನೀಡಿದ ಈ ಹೇಳಿಕೆಯ ವಿಡಿಯೋ ತುಣಕನ್ನು ತಮ್ಮ ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಶೇರ್​ ಮಾಡಿರುವ ಹಸೀನಾ ಜಹಾನ್​, “ಸೌರವ್ ಗಂಗೂಲಿಯಂತಹವರಿಗೆ ಮಹಿಳೆಯರು ಬಹುಶಃ ಮನರಂಜನೆ ಮತ್ತು ಮೋಜಿನ ವಸ್ತುವಾಗಿದೆ ಎಂದು ಕಿಡಿಕಾರಿದ್ದಾರೆ.

VISTARANEWS.COM


on

Hasin Jahan
Koo

ಕೋಲ್ಕತಾ: ಟೀಮ್​ ಇಂಡಿಯಾದ ಸ್ಟಾರ್​ ವೇಗಿ ಮೊಹಮ್ಮದ್​ ಶಮಿ(Mohammed Shami) ಅವರ ವಿರುದ್ಧ ಸದಾ ಒಂದಿಲ್ಲೊಂದು ಕಾರಣಗಳಿಂದ ಟೀಕಿಸುತ್ತಿರುವ ಅವರ ವಿಚ್ಛೇದಿತ ಪತ್ನಿ ಹಸೀನ್ ಜಹಾನ್(Hasin Jahan) ಈ ಬಾರಿ ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಹಾಗೂ ಆಟಗಾರ ಸೌರವ್​ ಗಂಗೂಲಿ(sourav ganguly) ವಿರುದ್ಧ ಹರಿಹಾಯ್ದಿದ್ದಾರೆ.

ಆರ್​ಜಿ ಕರ್​ ಮೆಡಿಕಲ್​ ಕಾಲೇಜು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಗುರಿಯಾಗಿದೆ. ಸಾಕಷ್ಟು ಸೆಲೆಬ್ರಿಟಿಗಳು ಈ ಘಟನೆಯನ್ನು ಖಂಡಿಸುತ್ತಿದ್ದಾರೆ. ಸುಪ್ರೀಂಕೋರ್ಟ್ ಕೂಡ​ ವಿಷಾದ ವ್ಯಕ್ತಪಡಿಸಿದೆ. ಇದೇ ಪ್ರಕರಣದ ಬಗ್ಗೆ ಸೌರವ್​ ಗಂಗೂಲಿ ಕೂಡ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಆದರೆ, ಗಂಗೂಲಿ ನೀಡಿದ್ದ ಒಂದು ಹೇಳಿಕೆ ಬಗ್ಗೆ ಹಸೀನಾ ಜಹಾನ್​ ಕಿಡಿಕಾರಿದ್ದಾರೆ.

ಮಾಧ್ಯಮದ ಜತೆ ಮಾತನಾಡು ವೇಳೆ ಗಂಗೂಲಿ, “ಏನು ನಡೆದೆಯೋ ಅದು ತಪ್ಪು. ಆದರೆ, ಇಂತಹ ಘಟನೆಗಳು ಪ್ರಪಂಚದಾದ್ಯಂತ ನಡೆಯುತ್ತದೆ. ಇದನ್ನೇ ಗುರಿಯಾಗಿಸಿಕೊಂಡು ಕೇವಲ ಪಶ್ಚಿಮ ಬಂಗಾಳದ ಸುರಕ್ಷತೆಯನ್ನು ಪ್ರಶ್ನೆ ಮಾಡುವುದು ಸರಿಯಲ್ಲ. ಭಾರತ ಒಂದು ಅದ್ಭುತ ದೇಶ. ಪಶ್ಚಿಮ ಬಂಗಾಳ ಕೂಡ ಒಂದು ಶ್ರೇಷ್ಠ ರಾಜ್ಯ. ಇದೊಂದು ಪ್ರಕರಣದಿಂದ ಇಡೀ ರಾಜ್ಯವನ್ನು ಬೊಟ್ಟು ಮಾಡಿ ದೂಷಿಸುವುದು ಸರಿಯಲ್ಲ. ಈ ಪ್ರಕರಣದಲ್ಲಿ ಆರೋಪಿ ಯಾರೇ ಇರಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಗಂಗೂಲಿ ಹೇಳಿದ್ದರು.

ಗಂಗೂಲಿ ನೀಡಿದ ಈ ಹೇಳಿಕೆಯ ವಿಡಿಯೋ ತುಣಕನ್ನು ತಮ್ಮ ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಶೇರ್​ ಮಾಡಿರುವ ಹಸೀನಾ ಜಹಾನ್​, “ಸೌರವ್ ಗಂಗೂಲಿಯಂತಹವರಿಗೆ ಮಹಿಳೆಯರು ಬಹುಶಃ ಮನರಂಜನೆ ಮತ್ತು ಮೋಜಿನ ವಸ್ತುವಾಗಿದೆ. ಆದ್ದರಿಂದಲೇ ವಿಶ್ವದೆಲ್ಲೆಡೆ ಇಂತಹ ಅತ್ಯಾಚಾರದಂತಹ ಘಟನೆಗಳು ನಡೆಯುತ್ತಿದೆ. ಪಶ್ಚಿಮ ಬಂಗಾಳ ಮತ್ತು ಭಾರತ ಮಹಿಳೆಯರಿಗೆ ಸುರಕ್ಷಿತವಾಗಿದೆ. ನಿಜವಾಗಿ ಸೌರವ್, ನಿಮ್ಮ ಸ್ವಂತ ಮಗಳು ಸುರಕ್ಷಿತವಾಗಿದ್ದಾರೆ ಮತ್ತು ಅದಕ್ಕಾಗಿಯೇ ನೀವು ಇತರರ ಸುರಕ್ಷತೆಯ ಬಗ್ಗೆ ಚಿಂತಿಸುವುದಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ Hasin Jahan: ‘ನಾಯಿಗಳ ದಂಡು’… ಎಂದು ಶಮಿಯನ್ನು ಅನಗತ್ಯವಾಗಿ ಕೆಣಕಿದರೇ ವಿಚ್ಛೇದಿತ ಪತ್ನಿ?; ವಿಡಿಯೊ ವೈರಲ್​

16 ಆಗಸ್ಟ್ 2018 ರಂದು, ಹಸಿನ್ ಜಹಾನ್(Hasin Jahan) ಮೊಹಮ್ಮದ್ ಶಮಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ ಹಲ್ಲೆ, ಅತ್ಯಾಚಾರ, ಕೊಲೆ ಯತ್ನ ಮತ್ತು ಕೌಟುಂಬಿಕ ಹಿಂಸಾಚಾರದ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಕ್ರಿಕೆಟಿಗನ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ಮಗಳ ಖರ್ಚಿಗೆ ಹಾಗೂ ತನಗೆ ಯಾವುದೇ ರೀತಿಯ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಹಸಿನ್ ಜಹಾನ್ ದೂರಿನಲ್ಲಿ ಅಪಾದಿಸಿದ್ದರು.

2018 ರಲ್ಲಿ ಹಸಿನ್ ಜಹಾನ್ ಅವರು ಮಾಸಿಕ 10 ಲಕ್ಷ ರೂ ಜೀವನಾಂಶವನ್ನು ಕೋರಿ ಶಮ್ಮಿ ವಿರುದ್ಧ ಕಾನೂನು ಮೊಕದ್ದಮೆ ಹೂಡಿದ್ದರು. ವೈಯಕ್ತಿಕ ವೆಚ್ಚಕ್ಕಾಗಿ 7 ಲಕ್ಷ ರೂ., ತಮ್ಮ ಮಗಳ ನಿರ್ವಹಣೆಗಾಗಿ 3 ಲಕ್ಷ ರೂ. ಕೇಳಿದ್ದರು. ಇದರ ವಿಚಾರಣೆ ನಡೆಸಿದ ಕೋಲ್ಕೊತಾ ನ್ಯಾಯಾಲಯ ಇದೇ ವರ್ಷದ ಜನವರಿಯಲ್ಲಿ ತೀರ್ಪು ಪ್ರಕಟಿಸಿ, ಶಮಿ ಅವರು ಪತ್ಯೇಕವಾಗಿ ವಾಸಿಸುತ್ತಿರುವ ಪತ್ನಿ ಜಹಾನ್​ಗೆ ತಿಂಗಳಿಗೆ 50 ಸಾವಿರ ರೂ. ನೀಡುವಂತೆ ಸೂಚಿಸಿತ್ತು. ಕೋರ್ಟ್​ ಸೂಚನೆಯಂತೆ ಶಮಿ ಅವರು ಈ ಮೊತ್ತವನ್ನು ನೀಡಿತ್ತಲೇ ಬರುತ್ತಿದ್ದಾರೆ.

Continue Reading
Advertisement
DK Shivakumar
ಪ್ರಮುಖ ಸುದ್ದಿ6 mins ago

DK Shivakumar: ಬಿಜೆಪಿಯವರ ಮಾತು ಕೇಳಿ 15 ಬಿಲ್ ವಾಪಸ್ ಕಳುಹಿಸಿದ ರಾಜ್ಯಪಾಲರು: ಕಿಡಿಕಾರಿದ ಡಿಕೆಶಿ

Yettinahole project
ಬೆಂಗಳೂರು17 mins ago

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಏತ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ

Salman Khan
ಸಿನಿಮಾ28 mins ago

Salman Khan: ನಿಮ್ಮ ಚಿತ್ರವನ್ನು ನಾವು ಒಪ್ಪುತ್ತೇವೆ, ಆದರೆ ನಮ್ಮ ಚಿತ್ರವನ್ನು ನೀವು ಒಪ್ಪುವುದಿಲ್ಲವಲ್ಲ? ಚಿರುಗೆ ಸಲ್ಲು ಹೀಗೆ ಹೇಳಿದ್ದೇಕೆ?

Accident case
ಶಿವಮೊಗ್ಗ39 mins ago

Accident Case : ಈಜಲು ಚಂಪಕ ಸರಸು ಕಲ್ಯಾಣಿಗೆ ಜಿಗಿದ ಎಂಜಿನಿಯರ್‌ ಶವವಾಗಿ ಹೊರ ಬಂದ

Shraddha Kapoor- Shreyas Iyer
ಕ್ರೀಡೆ42 mins ago

Shraddha Kapoor- Shreyas Iyer: ಕ್ರಿಕೆಟಿಗ ಅಯ್ಯರ್​ ಜತೆ ಡೇಟಿಂಗ್ ಆರಂಭಿಸಿದ ನಟಿ ಶ್ರದ್ಧಾ ಕಪೂರ್‌; ಫೋಟೊ ವೈರಲ್​

Road Accident
ವಿದೇಶ55 mins ago

ನೇಪಾಳ: ನದಿಗೆ ಉರುಳಿದ ಭಾರತೀಯರು ಸೇರಿ 40 ಮಂದಿ ಪ್ರಯಾಣಿಸುತ್ತಿದ್ದ ಬಸ್‌; 14 ಮಂದಿ ಸಾವು?

Kolkata Doctor Murder Case
ಕ್ರೈಂ1 hour ago

Kolkata Doctor Murder Case: ಮಮತಾ ಬ್ಯಾನರ್ಜಿ ಆಡಳಿತದ ಕರಾಳ ಅಧ್ಯಾಯ ತೆರೆದಿಟ್ಟಿದೆ ಕೋಲ್ಕತಾ ವೈದ್ಯೆ ಕೊಲೆ ಪ್ರಕರಣ

Bwssb water price hike
ಪ್ರಮುಖ ಸುದ್ದಿ1 hour ago

Water Price Hike: ಬೆಂಗಳೂರು ಜಲಮಂಡಳಿಗೆ ₹87 ಕೋಟಿ ಬಾಕಿ ಉಳಿಸಿಕೊಂಡು ಶ್ರೀಸಾಮಾನ್ಯನ ಬೆನ್ನಿಗೆ ಬರೆ ಹಾಕಲು ಮುಂದಾದ ರಾಜ್ಯ ಸರ್ಕಾರ!

Ritika Sajdeh
ಕ್ರೀಡೆ2 hours ago

Ritika Sajdeh: ಜೂನಿಯರ್​ ಹಿಟ್​ಮ್ಯಾನ್​ ನಿರೀಕ್ಷೆಯಲ್ಲಿ ರೋಹಿತ್​; ಪತ್ನಿಯ ಬೇಬಿ ಬಂಪ್‌ ವಿಡಿಯೊ ವೈರಲ್​

Narendra Modi
ವಿದೇಶ2 hours ago

Narendra Modi: ಉಕ್ರೇನ್‌ಗೆ ಬಂದಿಳಿದ ಪ್ರಧಾನಿ ಮೋದಿ; ರಷ್ಯಾ ಜತೆಗಿನ ಸಂಘರ್ಷದ ಚರ್ಚೆ ಸಾಧ್ಯತೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌