Murder Case: ತಾಯಿ, ಹೆಂಡತಿಯನ್ನು ಕೊಂದು ಪರಾರಿಯಾದ ಆಸ್ಪತ್ರೆ ನೌಕರ - Vistara News

ಕ್ರೈಂ

Murder Case: ತಾಯಿ, ಹೆಂಡತಿಯನ್ನು ಕೊಂದು ಪರಾರಿಯಾದ ಆಸ್ಪತ್ರೆ ನೌಕರ

Murder Case: ಮುದ್ಗಲ್ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್ ನೌಕರನಾದ ದುರಗಪ್ಪನ ಕುಟುಂಬ ಇಲ್ಲಿನ ಆಸ್ಪತ್ರೆಯ ಕ್ವಾರ್ಟರ್ಸ್‌ನಲ್ಲಿ ವಾಸವಾಗಿತ್ತು. ಪ್ರತಿನಿತ್ಯ ಮನೆಯಲ್ಲಿ ಕಲಹ ನಡೆಯುತ್ತಿತ್ತು. ದುರಗಪ್ಪ ಮದ್ಯ ಸೇವಿಸಿ ಬಂದು ತಾಯಿ ಹಾಗೂ ಹೆಂಡತಿಗೆ ಮನಸೋಇಚ್ಛೆ ಥಳಿಸುತ್ತಿದ್ದ ಎಂದು ಗೊತ್ತಾಗಿದೆ.

VISTARANEWS.COM


on

raichur double murder case
ಕೊಲೆ ಆರೋಪಿ ದುರಗಪ್ಪ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ಕೌಟುಂಬಿಕ ಕಲಹ ಉಲ್ಬಣಿಸಿ ತನ್ನ ತಾಯಿ ಹಾಗೂ ಹೆಂಡತಿಯನ್ನು (Double Murder Case) ಬರ್ಬರವಾಗಿ ಹತ್ಯೆ ಮಾಡಿ ವ್ಯಕ್ತಿ ಪರಾರಿಯಾಗಿದ್ದಾನೆ. ರಾಯಚೂರು (Raichur news) ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದ್ಗಲ್ ಪಟ್ಟಣದಲ್ಲಿ ದುರ್ಘಟನೆ ನಡೆದಿದೆ.

ದ್ಯಾಮಮ್ಮ (66) ಹಾಗೂ ಜ್ಯೋತಿ (23) ಕೊಲೆಯಾದ ದುರ್ದೈವಿಗಳು. ದುರಗಪ್ಪ ಇಬ್ಬರನ್ನೂ ಹತ್ಯೆಗೈದ ಆರೋಪಿ. ಮುದ್ಗಲ್ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್ ನೌಕರನಾದ ದುರಗಪ್ಪನ ಕುಟುಂಬ ಇಲ್ಲಿನ ಆಸ್ಪತ್ರೆಯ ಕ್ವಾರ್ಟರ್ಸ್‌ನಲ್ಲಿ ವಾಸವಾಗಿತ್ತು. ಪ್ರತಿನಿತ್ಯ ಮನೆಯಲ್ಲಿ ಕಲಹ ನಡೆಯುತ್ತಿತ್ತು. ದುರಗಪ್ಪ ಮದ್ಯ ಸೇವಿಸಿ ಬಂದು ತಾಯಿ ಹಾಗೂ ಹೆಂಡತಿಗೆ ಮನಸೋಇಚ್ಛೆ ಥಳಿಸುತ್ತಿದ್ದ ಎಂದು ಗೊತ್ತಾಗಿದೆ. ಕೊಲೆ ಬಳಿಕ ಸ್ಥಳದಿಂದ ಆರೋಪಿ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಮುದ್ಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟೀ ಕುಡಿಯಲು ಹೋದವ ಹಾಲು ತರಲು ಬಂದಿದ್ದವನಿಂದ ಹತ್ಯೆಯಾದ! ರೋಡ್‌ ರೇಜ್‌ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ರಾಜಧಾನಿಯಲ್ಲಿ ದಿನೇ ದಿನೆ ರೋಡ್ ರೇಜ್ (Road Rage) ಕೇಸ್‌ಗಳು ಹೆಚ್ಚಾಗುತ್ತಿವೆ ಎಂಬ ಕಳವಳದ ನಡುವೆಯೇ, ಇಂಥದೇ ಒಂದು ಪ್ರಕರಣದಲ್ಲಿ ರಸ್ತೆಯ ಮೇಲೆ ಒಂದು ಕೊಲೆ (Murder Case) ನಡೆದಿದೆ. ರೋಡ್‌ ರೇಜ್‌, ಮರ್ಡರ್‌ ಆಗಿ ಪರಿವರ್ತನೆ ಆಗಿದೆ. ಇಲ್ಲಿಯವರೆಗೆ ರಸ್ತೆ ಮೇಲೆ ಹಲ್ಲೆ ಪ್ರಕರಣ, ಗಲಾಟೆ ನಡೆದದ್ದನ್ನು ನಾವು ನೋಡಿದ್ದೇವೆ. ಆದರೆ ನಿನ್ನೆ ನಡೆದ ಒಂದು ರೋಡ್ ರೇಜ್ ಘಟನೆಯಿಂದ ಒಬ್ಬ ಯುವಕನ ಕೊಲೆಯಾಗಿದೆ.

ಇಲ್ಲಿ ರೋಡ್ ರೇಜ್‌ನಲ್ಲಿ ಕೊಲೆಯಾದವನು ಮಹೇಶ್ ಎಂಬಾತ. ಕೊಂದವನು ಅರವಿಂದ್. ವೃತ್ತಿಯಲ್ಲಿ ಡೆಲಿವರಿ ಬಾಯ್ ಆಗಿದ್ದ ಮಹೇಶ್ ಆತನ ಗೆಳೆಯರಾದ ಬಾಲಾಜಿ ಮತ್ತು ನಿಕಿಲ್ ಜೊತೆಗೆ ಟೀ ಕುಡಿಯಲು ಹೋಗಿದ್ದಾರೆ. ಟೀ ಕುಡಿದು ಬೈಕ್‌ನಲ್ಲಿ ರಸ್ತೆಯಲ್ಲಿ ಬರುತ್ತಿದ್ದಾಗ, ಅರವಿಂದ್‌ ಚಲಾಯಿಸುತ್ತಿದ್ದ ಕಾರು ಸ್ಪೀಡ್ ಆಗಿ ಬಂದಿದೆ. ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಹತ್ತಿರಕ್ಕೆ ಬಂದು ಹಾರ್ನ್ ಮಾಡಿದ್ದಾನೆ.

ಇದೇ ವೇಳೆ ಬೈಕು, ಕಾರ್‌ಗೆ ಸ್ವಲ್ಪ ಟಚ್ ಆಗಿದೆ ಎಂದು ಕಾರು ಚಾಲಕ ಅರವಿಂದ್ ಬೈಕ್ ಸವಾರರನ್ನು ವೇಗವಾಗಿ ಚೇಸ್ ಮಾಡಲು ಮುಂದಾಗಿದ್ದಾನೆ. ದಾರಿಯಲ್ಲಿ ಇಬ್ಬರು ಯುವಕರು ಮೇನ್ ರೋಡ್‌ನಿಂದ ಸಣ್ಣ ರೋಡ್‌ಗೆ ಬಂದಾಗ ಕೆಳಗೆ ಬಿದ್ದಿದ್ದಾರೆ. ಬೈಕ್ ಸವಾರನನ್ನು ಫಾಲೋ ಮಾಡಿ ವೇಗವಾಗಿ ಬಂದ ಕಾರು ಚಾಲಕ ಜಿ.ಕೆ.ವಿ.ಕೆ ಲೇಔಟ್‌ಲ್ಲಿ ಬೈಕ್‌ಗೆ ಡಿಕ್ಕಿ ಹೊಡೆಸಿದ್ದಾನೆ. ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಮುಂದೆ ಇದ್ದ ಮನೆಗೆ ರಭಸವಾಗಿ ಬೈಕ್ ಗುದ್ದಿ ಸ್ಥಳದಲ್ಲೆ ಬೈಕ್‌ ಸವಾರ ಮಹೇಶ್ ಮೃತಪಟ್ಟಿದ್ದಾನೆ.

ಕೊಲೆಯಾದ ಮಹೇಶ್ ನಿನ್ನೆ ಸಂಜೆ ಆತನ ಗೆಳೆಯರ ಜೊತೆಗೆ ಟೀ ಕುಡಿಯಲು ಹೋಗಿದ್ದ. ಇತ್ತ ಖಾಸಗಿ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿರುವ ಅರವಿಂದ್ ಆತನ ಗೆಳೆಯ ಕೇಶವ್ ಜೊತೆಗೆ ಹಾಲು ತರಲು ಹೋಗಿದ್ದನಂತೆ. ಸಂಬಂಧವೇ ಇಲ್ಲದ ಇಬ್ಬರು ಅವರವರ ಕೆಲಸ ಮುಗಿಸಿ ಮನೆಗೆ ಬಂದಿದ್ದರೆ ಇವತ್ತು ಪರಿಸ್ಥಿತಿ ಹೀಗಿರುತ್ತಿರಲಿಲ್ಲ! ಸದ್ಯ ಕೇಸ್ ದಾಖಲು ಮಾಡಿಕೊಂಡಿರುವ ವಿದ್ಯಾರಣ್ಯಪುರ ಪೊಲೀಸರು ಕೇಶವ್ ಮತ್ತು ಅರವಿಂದರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಬಾಯ್‌ಗೆ ಹಿಗ್ಗಾಮುಗ್ಗ ಥಳಿತ

ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್ ಸಮೀಪ ಮಂಗಳವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಫುಡ್‌ ಡೆಲಿವರಿ ಬಾಯ್‌ಗೆ ನಾಲ್ಕೈದು ಮಂದಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸೌತ್ ಎಂಡ್ ಸರ್ಕಲ್ ಸಿಗ್ನಲ್ ಬಳಿಯೇ‌ ಮನಸೋ ಇಚ್ಚೆ ಹಲ್ಲೆ ಮಾಡಿದ್ದು, ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಇನ್ನೂ ಘಟನೆ ಸಂಬಂಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ಬಿಎಂಟಿಸಿ ಬಸ್‌ನಲ್ಲಿ ತೆರಳುತ್ತಿದ್ದ ಪ್ರಯಾಣಿಕರ ಮೊಬೈಲ್‌ನಲ್ಲಿ ಗಲಾಟೆ ವಿಡಿಯೋ ಸೆರೆಯಾಗಿದೆ. ಸದ್ಯ ಹೊಡೆದಾಟದ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ನಿಲ್ಲದ ರೋಡ್‌ ರೇಜ್‌ ಕಿರಿಕ್‌; ಕಾರಿನ ಮೇಲೆ ಕಲ್ಲು ಎತ್ತಿಹಾಕಿ ಪುಂಡಾಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Accident Case : ಈಜಲು ಚಂಪಕ ಸರಸು ಕಲ್ಯಾಣಿಗೆ ಜಿಗಿದ ಎಂಜಿನಿಯರ್‌ ಶವವಾಗಿ ಹೊರ ಬಂದ

Accident Case : ಬೆಂಗಳೂರಿನಿಂದ ಸ್ನೇಹಿತರೊಟ್ಟಿಗೆ ಪ್ರವಾಸಕ್ಕೆ ಹೋದ ಯುವಕರ್ನೊವ ಹೆಣವಾಗಿ ಪತ್ತೆಯಾಗಿದ್ದಾನೆ. ಕಲ್ಯಾಣಿಯಲ್ಲಿ ಈಜಲು ಹೀಗಿ ನೀರುಪಾಲಾಗಿದ್ದಾನೆ.

VISTARANEWS.COM


on

By

Accident case
Koo

ಶಿವಮೊಗ್ಗ : ಚಂಪಕ ಸರಸು ಕಲ್ಯಾಣಿಯಲ್ಲಿ ಈಜಲು ಹೋಗಿದ್ದ (Drowned in water) ಎಂಜಿನಿಯರ್‌ ಮೃತಪಟ್ಟಿದ್ದಾನೆ. ಶಿವಮೊಗ್ಗದ ಸಾಗರದ ಆನಂದಪುರ ಬಳಿ ಇರುವ ಚಂಪಕ ಸರಸು ಕಲ್ಯಾಣಿಯಲ್ಲಿ ಘಟನೆ (Accident Case) ನಡೆದಿದೆ. ಬೆಂಗಳೂರು ಮೂಲದ ಕುಶಾಲ್ (22) ಎಂಬ ಇಂಜಿನಿಯರ್ ಸಾವನ್ನಪ್ಪಿರುವ ದುರ್ದೈವಿ.

ಬೆಂಗಳೂರಿನ ಕುಶಾಲ್‌ ತನ್ನಿಬ್ಬರು ಸ್ನೇಹಿತರೊಡನೆ ಪ್ರವಾಸಕ್ಕೆಂದು ಕಾರಿನಲ್ಲಿ ಆಗಮಿಸಿದ್ದ. ಕುಶಾಲ್, ಸಾಯಿರಾಂ ಹಾಗೂ ಯಶವಂತ ಈ ಮೂವರು ಇತಿಹಾಸ ಹೊಂದಿರುವ ಮಹಂತಿನ ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕುಶಾಲ್‌ ಚಂಪಕ ಸರಸು ಕಲ್ಯಾಣಿಯಲ್ಲಿ ಈಜಲು ಹೋಗಿದ್ದಾನೆ. ಆದರೆ ಉಸಿರುಗಟ್ಟಿ ನೀರಿಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಹಲವಾರು ವರ್ಷಗಳ ಕಾಲ ಪಾಳು ಬಿದ್ದಿದ್ದ ಚಂಪಕ ಸರಸು ಕಲ್ಯಾಣಿಯನ್ನು ಚಲನಚಿತ್ರ ನಟ ಯಶ್ ಅವರ ಯಶೋಮಾರ್ಗ ಸಂಸ್ಥೆ ಕಳೆದೆರೆಡು ವರ್ಷಗಳ ಹಿಂದೆಯಷ್ಟೇ ಸ್ವಚ್ಚಗೊಳಿಸಿದ್ದರು. ಸ್ನೇಹಿತರೊಂದಿಗೆ ಈಜಾಡಲು ಬಂದ ಕುಶಾಲ್‌ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಕಲ್ಯಾಣಿಯಿಂದ ಶವ ಮೇಲಕ್ಕೇತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Assault Case : ಬೀದಿಯಲ್ಲೇ ಲೇಟ್‌ ನೈಟ್‌ ಪಾರ್ಟಿ; ಪ್ರಶ್ನಿಸಿದ್ದಕ್ಕೆ ಯುವಕನಿಂದ ಪೊಲೀಸರಿಗೆ ಅವಾಜ್

ಗದಗದಲ್ಲಿ ಬಸ್‌ ಹರಿದು 30 ಕುರಿಗಳು ಸಾವು

ಗದಗದ ಗಜೇಂದ್ರಗಡ-ರೋಣ ರಸ್ತೆ ಮಾರ್ಗದ ದಿಂಡೂರ ಗ್ರಾಮದ ಕ್ರಾಸ್‌ನಲ್ಲಿ ಬಸ್‌ ಹರಿದು 30 ಕುರಿಗಳು ಮೃತಪಟ್ಟಿವೆ. ಓವರ್ ಟೆಕ್ ಮಾಡಲು ಹೋಗಿ ಮೂವತ್ತು ಕುರಿಗಳ ಮೇಲೆ ಬಸ್‌ ಹರಿದಿದೆ. ಬದಾಮಿ ಘಟಕದ ಸರ್ಕಾರಿ ಬಸ್ ಚಾಲಕ ನಿರ್ಲಕ್ಷ್ಯದಿಂದ ಸುಮಾರು 4.5 ಲಕ್ಷ‌ ಮೌಲ್ಯದ ಕುರಿಗಳು ಮೃತಪಟ್ಟಿವೆ. ಕುರಿಗಳನ್ನು ಕಳೆದುಕೊಂಡು ಕುರಿಗಾಯಿಗಳು ಗೋಳಾಡಿದ್ದರು.

ಚಿಕ್ಕಬಳ್ಳಾಪುರದಲ್ಲಿ ಚಲಿಸುವ ರೈಲಿಗೆ ಸಿಲುಕಿ ವಯೋವೃದ್ಧ ಸಾವು

ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದ ರೈಲ್ವೇ‌ ನಿಲ್ದಾಣದ ಬಳಿ ಚಲಿಸುವ ರೈಲಿಗೆ ಸಿಲುಕಿ ಅಪರಿಚಿತ ವಯೋವೃದ್ಧ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದಿಂದ ಬಂಗಾರಪೇಟೆಗೆ ಹೋಗುತಿದ್ದ ರೈಲಿಗೆ ಸಿಲುಕಿದ್ದಾರೆ. ವೈಯುಕ್ತಿಕ‌ ಕಾರಣ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸದ್ಯ ವೃದ್ಧನ ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಕೋಲಾರದಲ್ಲಿ ರಸ್ತೆ ಬದಿ ಅಂಗಡಿಗೆ ನುಗ್ಗಿದ ಕಾರು

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ಅಂಗಡಿಗೆ ನುಗ್ಗಿದೆ. ಅಪಘಾತದಲ್ಲಿ ಅಂಗಡಿಯಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದೆ. ಕೋಲಾರ ಜಿ. ಶ್ರೀನಿವಾಸಪುರ ತಾ.ಕಶೆಟ್ಟಿಪಲ್ಲಿ ಕ್ರಾಸ್‌ನಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಮರಿಪಲ್ಲಿ ಗ್ರಾಮದ ನಾಗರತ್ನಮ್ಮ ಎಂಬವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಡಪಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಾಗರತ್ಮಮ್ಮ ಟೀ- ಕಾಫಿ, ಟಿಫನ್ ತಿಂಡಿ ತಿನಿಸುಗಳನ್ನು ಇಟ್ಟಿಕೊಂಡಿದ್ದರು. ಅಪಘಾತದಲ್ಲಿ ಒಂದು ದ್ವಿಚಕ್ರ ವಾಹನ ಹಾಗೂ ಅಂಗಡಿ ಜಖಂಗೊಂಡಿದೆ. ಸ್ಥಳೀಯರ ಸಹಾಯದೊಂದಿಗೆ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Kolkata Doctor Murder Case: ಮಮತಾ ಬ್ಯಾನರ್ಜಿ ಆಡಳಿತದ ಕರಾಳ ಅಧ್ಯಾಯ ತೆರೆದಿಟ್ಟಿದೆ ಕೋಲ್ಕತಾ ವೈದ್ಯೆ ಕೊಲೆ ಪ್ರಕರಣ

ಕೋಲ್ಕತಾ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯು (Kolkata Doctor Murder Case) ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಖ್ಯವಾಗಿ ಪಶ್ಚಿಮ ಬಂಗಾಳ ಸರ್ಕಾರದ ನಡೆಯ ಬಗ್ಗೆ ಸುಪ್ರೀಂ ಕೋರ್ಟ್ ಅನೇಕ ಪ್ರಶ್ನೆಗಳನ್ನು ಎತ್ತಿದೆ. ಇದು ರಾಜ್ಯದಲ್ಲಿ ನಡೆದ ಹಿಂಸಾಚಾರ, ಮಹಿಳೆಯರ ಸುರಕ್ಷತೆ ಮತ್ತು ಅಧಿಕಾರದಲ್ಲಿರುವವರ ಸಮಗ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸುವಂತೆ ಮಾಡಿದೆ.

VISTARANEWS.COM


on

By

Kolkata Doctor Murder Case
Koo

ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ (Kolkata Doctor Murder Case) ಪಶ್ಚಿಮ ಬಂಗಾಳದ (West Bengal) ಆಡಳಿತದಲ್ಲಿ ಒಂದು ಕರಾಳ ಅಧ್ಯಾಯ. ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಸರ್ಕಾರ ಎಡವಿದೆ ಎಂದು ಸುಪ್ರೀಂ ಕೋರ್ಟ್‌ (Supreme Court) ಖಾರವಾಗಿ ಹೇಳಿರುವುದು ಅಲ್ಲಿಯ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ನೀಡಿರುವ ತಪರಾಕಿ ಎನ್ನಬಹುದಾಗಿದೆ. ಸರ್ಕಾರದ ಕ್ರಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ನ್ಯಾಯಾಲಯವು, ಪಶ್ಚಿಮ ಬಂಗಾಳ ಸರ್ಕಾರವು (west bengal govt) ಪ್ರಕರಣವನ್ನು ನಿಭಾಯಿಸುವಲ್ಲಿ ಅಸಮರ್ಥವಾಗಿತ್ತು ಎಂದು ತಿಳಿಸಿದೆ.

ಜನಸಮೂಹವು ಆರ್‌ಜಿ ಕರ್ ಆಸ್ಪತ್ರೆಯನ್ನು ಧ್ವಂಸಗೊಳಿಸಲು ಪಶ್ಚಿಮ ಬಂಗಾಳ ಹೇಗೆ ಅವಕಾಶ ಮಾಡಿಕೊಟ್ಟಿತು ಎಂದು ಪ್ರಶ್ನಿಸಿರುವ ನ್ಯಾಯಾಲಯ, ‘ಅಪರಾಧ ನಡೆದ ಸ್ಥಳದಲ್ಲಿ 24 ಗಂಟೆಯೂ ಭದ್ರತೆ ನೀಡುವುದು ಪೊಲೀಸರ ಕರ್ತವ್ಯವಾಗಿತ್ತು. ಬೆಳಗ್ಗೆಯೇ ಅಪರಾಧ ಪತ್ತೆಯಾಗಿದ್ದು, ವೈದ್ಯಕೀಯ ಕಾಲೇಜು ಪ್ರಾಂಶುಪಾಲರು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆʼ ಎಂದು ಖಾರವಾಗಿ ಹೇಳಿದೆ. ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ, ದುಃಖಿತ ಪೋಷಕರಿಗೆ ಸಂತ್ರಸ್ತೆಯ ದೇಹವನ್ನು ನೋಡಲು ಬಿಡದಿರುವುದು ಹಲವು ಅನುಮಾನಕ್ಕೆ ಕಾರಣವಾಗಿತ್ತು ಎಂದು ತಿಳಿಸಿದೆ.

ಸುಪ್ರೀಂ ಕೋರ್ಟ್ ನ ಈ ಅವಲೋಕನ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಪೊಲೀಸರ ಕರ್ತವ್ಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತದಲ್ಲಿ ಆಸ್ಪತ್ರೆ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರದ ಕ್ರಮಗಳ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ.

Kolkata Doctor Murder Case
Kolkata Doctor Murder Case


ಯುವ ಮಹಿಳಾ ವೈದ್ಯೆಯ ಸಾವು ಆರಂಭದಲ್ಲಿ ದುರಂತ ಆತ್ಮಹತ್ಯೆಯಂತೆ ಕಂಡು ಬಂದಿತು. ಆದರೆ ವಿವರಗಳು ಹೊರಬರುತ್ತಿದ್ದಂತೆ ಆಕೆಯನ್ನು ಕ್ರೂರವಾಗಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂಬುದು ಸ್ಪಷ್ಟವಾಯಿತು. ಕಾಲೇಜು ಪ್ರಾಂಶುಪಾಲರಾದ ಸಂದೀಪ್ ಘೋಷ್ ಅವರು ಘಟನೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದರು. ಇದು ಅನಂತರ ಭಾರೀ ಟೀಕೆಗೆ ಗುರಿಯಾಯಿತು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಾಗಿ ಮಮತಾ ಬ್ಯಾನರ್ಜಿ ಅವರು ಘಟನೆಯ ಮಹತ್ವದ ಜವಾಬ್ದಾರಿಯನ್ನು ಹೊಂದಿದ್ದಾರೆ. ಮಮತಾ ಗಂಭೀರ ಸಮಸ್ಯೆಯನ್ನು ಪರಿಹರಿಸುವ ಬದಲು, ತಮ್ಮದೇ ಆಡಳಿತದ ವೈಫಲ್ಯಗಳ ವಿರುದ್ಧ ಪ್ರತಿಭಟನೆಗಳನ್ನು ಆಯೋಜಿಸಿದ್ದು ಹಾಸ್ಯಾಸ್ಪದವಾಗಿದೆ.

ರಾಜ್ಯದ ನಾಯಕಿಯಾಗಿ 14 ವರ್ಷಗಳ ಅಧಿಕಾರಾವಧಿ ಮತ್ತು ಕೇಂದ್ರ ಸಚಿವರಾಗಿ ಅನುಭವ ಇರುವ ಅವರು, ಈ ವಿಷಯದ ಬಗ್ಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಅವರು ನೀಡಿರುವ ಕರೆಗಳು ವಿರೋಧಾಭಾಸವೆಂದು ತೋರುತ್ತದೆ. ಅವಾಸ್ತವಿಕ ಡೆಡ್‌ಲೈನ್‌ನೊಂದಿಗೆ ತ್ವರಿತಗತಿಯ ಸಿಬಿಐ ತನಿಖೆಗಾಗಿ ಅವರ ಬೇಡಿಕೆಯು ನ್ಯಾಯವನ್ನು ಪಡೆಯುವ ನಿಜವಾದ ಪ್ರಯತ್ನಕ್ಕಿಂತ ಹೆಚ್ಚಾಗಿ ರಾಜಕೀಯ ಸಾಹಸವಾಗಿದೆ ಎಂದು ಅನೇಕ ವಿಮರ್ಶಕರು ವಾದಿಸಿದ್ದಾರೆ.

ಮಮತಾ ಅವರು ಮುಚ್ಚಿಟ್ಟ ಆರೋಪಗಳು, ತಡರಾತ್ರಿ ಆಸ್ಪತ್ರೆ ಆವರಣದಲ್ಲಿ ಭುಗಿಲೆದ್ದ ಗಲಭೆಯಿಂದ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಆಡಳಿತ ಪಕ್ಷ ಟಿಎಂಸಿಗೆ ಸಂಬಂಧವಿದೆ ಎಂದು ನಂಬಲಾದ ಗೂಂಡಾಗಳು, ತಮ್ಮ ಸಹೋದ್ಯೋಗಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ವೈದ್ಯರು ನಡೆಸಿದ ಶಾಂತಿಯುತ ಪ್ರದರ್ಶನಗಳನ್ನು ಅಡ್ಡಿಪಡಿಸಿದ್ದರು. ಈ ಗಲಭೆಯು ಪ್ರಕರಣಕ್ಕೆ ಸಂಬಂಧಿಸಿದ ನಿರ್ಣಾಯಕ ಸಾಕ್ಷ್ಯಗಳನ್ನು ನಾಶಪಡಿಸಲು ಕಾರಣವಾಯಿತು. ಇದು ತನಿಖೆಗೆ ಅಡ್ಡಿಪಡಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ಹಲವರು ಊಹಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳು ಹಿಂಸಾತ್ಮಕ ಏಕಾಏಕಿ ಟಿಎಂಸಿ ಸದಸ್ಯರಿಗೆ ಹತ್ತಿರವಿರುವ ವ್ಯಕ್ತಿಗಳ ಒಳಗೊಳ್ಳುವಿಕೆಯನ್ನು ತೋರಿಸುತ್ತವೆ. ಇದು ಮುಚ್ಚಿಡುವಿಕೆಯ ಅನುಮಾನಗಳನ್ನು ಮತ್ತಷ್ಟು ಹೆಚ್ಚಿಸಿದೆ.


ಹಲವು ಪ್ರಶ್ನೆಗಳು

ಸಂತ್ರಸ್ತೆಯ ದೇಹವನ್ನು ಪೋಷಕರಿಗೆ ಏಕೆ ತೋರಿಸಲಿಲ್ಲ ಮತ್ತು ಇದಕ್ಕೆ ಆದೇಶಿಸಿದವರು ಯಾರು, ಅಪರಾಧದ ಸ್ಥಳದಲ್ಲಿ ಏನು ನಡೆಯಿತು, ಅಪರಾಧ ನಡೆದಿದೆ ಎನ್ನಲಾದ ಇಲಾಖೆಯಲ್ಲಿಯೇ ಹಠಾತ್ ನಿರ್ವಹಣೆ ಕಾರ್ಯವನ್ನು ಏಕೆ ಪ್ರಾರಂಭಿಸಲಾಯಿತು, ಔಷಧ ಮಾಫಿಯಾ ಆರೋಪಗಳು ಎಷ್ಟು ಸರಿ ಈ ಎಲ್ಲ ಪ್ರಶ್ನೆಗಳು ವೈದ್ಯೆಯ ಸಾವಿನ ಬಳಿಕ ಎಲ್ಲರಲ್ಲೂ ಉದ್ಭವಿಸಿದೆ.

ಇದನ್ನೂ ಓದಿ: Kolkata Doctor Murder Case: ಟ್ರೈನಿ ವೈದ್ಯೆ ಕೊಲೆ ಪ್ರಕರಣ- ಪ್ರಧಾನಿ ಮೋದಿಗೆ ದಿಢೀರ್‌ ಪತ್ರ ಬರೆದ ಮಮತಾ ಬ್ಯಾನರ್ಜಿ

ಈ ಘಟನೆಯಲ್ಲಿ ರಾಜ್ಯದೊಳಗಿನ ಪ್ರಬಲ ಶಕ್ತಿಗಳೇ ಸಂಚು ರೂಪಿಸಿರುವ ಸಾಧ್ಯತೆ ಇದೆ. ಭ್ರಷ್ಟಾಚಾರ ಮತ್ತು ಪ್ರಕರಣದ ದುರುಪಯೋಗ ಎರಡರ ಆರೋಪ ಹೊತ್ತಿರುವ ಕಾಲೇಜು ಪ್ರಾಂಶುಪಾಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಹಿಂದೇಟು ಹಾಕುತ್ತಿರುವುದು ಅನೇಕ ಊಹಾಪೋಹಗಳಿಗೆ ಇನ್ನಷ್ಟು ಪುಷ್ಟಿ ನೀಡಿದೆ. ಈ ಪ್ರಕರಣವು ಪಶ್ಚಿಮ ಬಂಗಾಳದ ಕಾನೂನು ಜಾರಿ ಮತ್ತು ಆಡಳಿತದಲ್ಲಿನ ಗಂಭೀರ ನ್ಯೂನತೆಗಳನ್ನು ಬಹಿರಂಗಪಡಿಸಿದೆ. ಹೀಗಾಗಿ ಇದು ಮಮತಾ ಬ್ಯಾನರ್ಜಿಗೆ ಇದು ಅಗ್ನಿಪರೀಕ್ಷೆ ಎನ್ನಬಹುದಾಗಿದೆ.

Continue Reading

ಬೆಂಗಳೂರು

Assault Case : ಬೀದಿಯಲ್ಲೇ ಲೇಟ್‌ ನೈಟ್‌ ಪಾರ್ಟಿ; ಪ್ರಶ್ನಿಸಿದ್ದಕ್ಕೆ ಯುವಕನಿಂದ ಪೊಲೀಸರಿಗೆ ಅವಾಜ್

Assault Case : ಬೀದಿಯಲ್ಲೇ ಲೇಟ್‌ ನೈಟ್‌ ಪಾರ್ಟಿ ಮಾಡುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆ ಅಟ್ರಾಸಿಟಿ ಹಾಗು ಲೈಂಗಿಕ ದೌರ್ಜನ್ಯ ಕೇಸ್ ಹಾಕುವುದಾಗಿ ಯುವಕ-ಯುವತಿಯರು ಬೆದರಿಕೆ ಹಾಕಿದ್ದಾರೆ. ಮಾತ್ರವಲ್ಲದೇ ಪೊಲೀಸರನ್ನು ತಳ್ಳಿ ಎಳೆದಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ.

VISTARANEWS.COM


on

By

assault case
Koo


ಬೆಂಗಳೂರಿನ ಲೇಕ್ ವ್ಯೂ ಅಪಾರ್ಟ್ಮೆಂಟ್‌ ಎದುರು ಯುವಕ-ಯುವತಿಯರು ಪಾರ್ಟಿ ಮಾಡುತ್ತಿದ್ದರು. ಕಂಟ್ರೋಲ್ ರೂಂಗೆ ಕರೆ ಬಂದ ಹಿನ್ನೆಲೆ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಮಹಿಳಾ ಜಾಗೃತಿ ಸಂಬಂಧಿಸಿದಂತೆ ಪಾರ್ಟಿ ಮಾಡುವಂತಿಲ್ಲ ಮನೆಗೆ ಹೋಗಿ ಎಂದು ಮೈಕ್ ಮೂಲಕ ಅನೌನ್ಸ್ ಮಾಡಿದ್ದರು. ಈ ವೇಳೆ ಪೊಲೀಸರೊಂದಿಗೆ ಜಗಳಕ್ಕೆ ಇಳಿದಿದ್ದ ಯುವಕನೊಬ್ಬ ನಮಗೆ ಡಿಸಿಪಿ ಹಾಗೂ ಇನ್‌ಸ್ಪೆಕ್ಟರ್‌ ಪರಿಚಯ ಎಂದು ಅವಾಜ್‌ (Assault case) ಹಾಕಿದ್ದಾನೆ. ಪೊಲೀಸರ ಮೇಲೆ ಅಟ್ರಾಸಿಟಿ ಹಾಗು ಲೈಂಗಿಕ ದೌರ್ಜನ್ಯ ಕೇಸ್ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ. ಮಾತ್ರವಲ್ಲದೇ ಪೊಲೀಸರನ್ನು ತಳ್ಳಿ ಎಳೆದಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ.

ಡಿಸಿಪಿ ಸಾರಾಫಾತೀಮಾ, ಇನ್‌ಸ್ಪೆಕ್ಟರ್ ಮಹೇಶ್ ಅವರ ಹೆಸರು ಹೇಳಿ ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಸುನೀಲ್ ಹಾಗು ಇನ್ನಿತರ ಯುವಕರಿಂದ ಕೃತ್ಯ ನಡೆದಿದೆ. ಅಮೀನ ಸಾ ಬಿರಾದರ್ , ವೆಂಕಟೇಶ್ , ಹಸಿಂ ಪಟೇಲ್ ದೀಪು ಆರ್ ಎಂಬ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದೆ. ಈ ಸಂಬಂಧ ಪೊಲೀಸರಿಂದಲೇ ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Murder Case : ಉಡುಪಿಯಲ್ಲಿ ಪತ್ನಿಯನ್ನು ಕಡಿದು ಕೊಂದು ಹಾಕಿದ ಪತಿ!

ಬಾಡಿಗೆ ಮನೆ ಪಡೆದು ಡ್ರಗ್ಸ್ ಸೇವನೆ

ಕನಕಪುರ ರಸ್ತೆ ಬಳಿ ಇರುವ ಬಾಡಿಗೆ ಮನೆಯಲ್ಲಿ ಯುವಕರಿಂದ ಡ್ರಗ್ ಸೇವನೆ ಆರೋಪ ಕೇಳಿ ಬಂದಿದೆ. ಸ್ಥಳೀಯರೇ ಯುವಕರನ್ನು ಪೊಲೀಸರಿಗೆ ಹಿಡಿದು ಕೊಟ್ಟಿದ್ದಾರೆ. ಮನೆಯೊಂದರಲ್ಲಿ ಡ್ರಗ್ಸ್‌ಗೆ ಬಳಸುವ ನಾಲ್ಕೈದು ಸಿರೆಂಜ್‌ಗಳು ಪತ್ತೆಯಾಗಿವೆ. ಪ್ರತಿದಿನ ಸಿರೆಂಜ್‌ನಿಂದ ಡ್ರಗ್ಸ್ ಚುಚ್ಚಿಕೊಳ್ಳುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯುವಕರಿದ್ದ ಮನಗೆ ಬೀಗ ಹಾಕಿದ ಸ್ಥಳೀಯರು ಪೊಲೀಸರನ್ನು ಕರೆಸಿದ್ದಾರೆ. ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯುವಕರು ಡ್ರಗ್ ಸೇವನೆ ಮಾಡುತ್ತಿದ್ದರಾ ಎಂಬುದರ ಪತ್ತೆಗಾಗಿ ಯುವಕನಿಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Murder Case : ಉಡುಪಿಯಲ್ಲಿ ಪತ್ನಿಯನ್ನು ಕಡಿದು ಕೊಂದು ಹಾಕಿದ ಪತಿ!

Murder Case : ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಂದಿರುವ ಆರೋಪ ಕೇಳಿ ಬಂದಿದ್ದು, ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

murder case
Koo

ಉಡುಪಿ: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ನೆತ್ತರು (Murder Case ) ಹರಿದಿದೆ. ಪತಿಯೇ ತನ್ನ ಪತ್ನಿಯನ್ನು ಕಡಿದು ಕೊಲೆ ಮಾಡಿರುವ ಶಂಕೆ ಇದೆ. ಜಯಶ್ರೀ (28) ಕೊಲೆಯಾದವಳು. ಕಿರಣ್ ಉಪಾಧ್ಯ(30) ಕೊಲೆ ಆರೋಪಿಯಾಗಿದ್ದಾನೆ.

ಉಡುಪಿಯಲ್ಲಿ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ಘಟನೆ ನಡೆದಿದೆ. ಈ ಜೋಡಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ಮುಂಜಾನೆ ಪತ್ನಿಯನ್ನು ಕಿರಣ್ ಉಪಾಧ್ಯ ಕೊಲೆ ಮಾಡಿದ್ದ ಎನ್ನುವ ಮಾಹಿತಿ ಇದೆ.

ಶಂಕೆ ಮೇರೆಗೆ ಪತಿ ಕಿರಣ್ ಉಪಾಧ್ಯ ಗುಂಡ್ಮಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು,ಈ ಕುರಿತು ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Murder case
Murder case

ಟ್ಯಾರೆಸ್‌ನಿಂದ ಬಿದ್ದು ಗಾಯಗೊಂಡಿದ್ದಳು ಜಯಶ್ರೀ!

ಜಯಶ್ರೀ (31) ಬೀದರ್ ದೊಣಗಪುರ ಮೂಲದವರು. ಕಿರಣ್‌ ಗುರು ನರಸಿಂಹ ದೇವಸ್ಥಾನದಲ್ಲಿ ಎರಡು ವರ್ಷದಿಂದ ಅಡುಗೆ ಕೆಲಸ ಮಾಡುತ್ತಿದ್ದ. ಮನೆಯ ಟ್ಯಾರೆಸ್‌ನಿಂದ ಬಿದ್ದು ಜಯಶ್ರೀ ಗಾಯಗೊಂಡಿರುವುದಾಗಿ ಕಿರಣ್‌ ಹೇಳಿದ್ದಾನೆ. ಗಾಯಾಳು ಪತ್ನಿಯನ್ನು ಆಸ್ಪತ್ರೆಗೆ ಸೇರಿಸಿದ್ದ ಎನ್ನಲಾಗಿದೆ. ಸದ್ಯ ಉಡುಪಿಯ ಅಜ್ಜರ ಕಾಡು ಸರಕಾರಿ ಆಸ್ಪತ್ರೆಯಲ್ಲಿ ಮೃತದೇಹ ಇದ್ದು, ಜಯಶ್ರೀ ಕುಟುಂಬಸ್ಥರ ಆಗಮನಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆ.

ಇದನ್ನೂ ಓದಿ: Assault Case : ಹುಡುಗಿ ವಿಷ್ಯಕ್ಕೆ ನಡುರಸ್ತೆಯಲ್ಲಿ ಲಾಂಗ್‌ ಝಳಪಿಸಿದ ಯುವಕರು

ಮಂಡ್ಯದಲ್ಲಿ ದಾಯಾದಿಗಳ ಕಲಹ

ದೇವಸ್ಥಾನದ ವಿಚಾರವಾಗಿ ದಾಯಾದಿಗಳ ನಡುವೆ ಕಲಹ ಉಂಟಾಗಿದೆ. ಸ್ನೇಹಿತರೊಂದಿಗೆ ಬಂದ ಯುವಕನೊಬ್ಬ ಬುಕ್ ಸ್ಟೋರ್‌ಗೆ ನುಗ್ಗಿ ದೊಡ್ಡಪ್ಪನ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ಘಟನೆ ನಡೆದಿದೆ. ಪರಶಿವಮೂರ್ತಿ ಎಂಬುವವರ ಮೇಲೆ ಹಲ್ಲೆ ನಡೆದಿದೆ. ಪರಶಿವಮೂರ್ತಿ ಅವರ ಸೋದರನ ಮಗ ಲಿಖಿತ್ ಕುಮಾರ್ ಎಂಬಾತನಿಂದ ಹಲ್ಲೆ ನಡೆದಿದೆ. ಗಾಯಾಳು ಪರಶಿವಮೂರ್ತಿ ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪಾರ್ಟಿ ಮಾಡುತ್ತಿದ್ದ ಯುವಕರನ್ನು ಪ್ರಶ್ನಿಸಿದ್ದಕ್ಕೆ ಪೊಲೀಸರಿಗೆ ಅವಾಜ್

ಬೆಂಗಳೂರಿನ ಲೇಕ್ ವ್ಯೂ ಅಪಾರ್ಟ್ಮೆಂಟ್‌ ಎದುರು ಯುವಕ-ಯುವತಿಯರು ಪಾರ್ಟಿ ಮಾಡುತ್ತಿದ್ದರು. ಕಂಟ್ರೋಲ್ ರೂಂಗೆ ಕರೆ ಬಂದ ಹಿನ್ನೆಲೆ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಮಹಿಳಾ ಜಾಗೃತಿ ಸಂಬಂಧಿಸಿದಂತೆ ಪಾರ್ಟಿ ಮಾಡುವಂತಿಲ್ಲ ಮನೆಗೆ ಹೋಗಿ ಎಂದು ಮೈಕ್ ಮೂಲಕ ಅನೌನ್ಸ್ ಮಾಡಿದ್ದರು.

ಈ ವೇಳೆ ಪೊಲೀಸರೊಂದಿಗೆ ಜಗಳಕ್ಕೆ ಇಳಿದಿದ್ದ ಯುವಕನೊಬ್ಬ ನಮಗೆ ಡಿಸಿಪಿ ಹಾಗೂ ಇನ್‌ಸ್ಪೆಕ್ಟರ್‌ ಪರಿಚಯ ಎಂದು ಅವಾಜ್‌ ಹಾಕದ್ದಾನೆ. ಪೊಲೀಸರ ಮೇಲೆ ಅಟ್ರಾಸಿಟಿ ಹಾಗು ಲೈಂಗಿಕ ದೌರ್ಜನ್ಯ ಕೇಸ್ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ. ಮಾತ್ರವಲ್ಲದೇ ಪೊಲೀಸರನ್ನು ತಳ್ಳಿ ಎಳೆದಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ.

ಡಿಸಿಪಿ ಸಾರಾಫಾತೀಮಾ, ಇನ್‌ಸ್ಪೆಕ್ಟರ್ ಮಹೇಶ್ ಅವರ ಹೆಸರು ಹೇಳಿ ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಸುನೀಲ್ ಹಾಗು ಇನ್ನಿತರ ಯುವಕರಿಂದ ಕೃತ್ಯ ನಡೆದಿದೆ. ಅಮೀನ ಸಾ ಬಿರಾದರ್ , ವೆಂಕಟೇಶ್ , ಹಸಿಂ ಪಟೇಲ್ ದೀಪು ಆರ್ ಎಂಬ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದೆ. ಈ ಸಂಬಂಧ ಪೊಲೀಸರಿಂದಲೇ ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
DK Shivakumar
ಪ್ರಮುಖ ಸುದ್ದಿ5 mins ago

DK Shivakumar: ಬಿಜೆಪಿಯವರ ಮಾತು ಕೇಳಿ 15 ಬಿಲ್ ವಾಪಸ್ ಕಳುಹಿಸಿದ ರಾಜ್ಯಪಾಲರು: ಕಿಡಿಕಾರಿದ ಡಿಕೆಶಿ

Yettinahole project
ಬೆಂಗಳೂರು17 mins ago

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಏತ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ

Salman Khan
ಸಿನಿಮಾ28 mins ago

Salman Khan: ನಿಮ್ಮ ಚಿತ್ರವನ್ನು ನಾವು ಒಪ್ಪುತ್ತೇವೆ, ಆದರೆ ನಮ್ಮ ಚಿತ್ರವನ್ನು ನೀವು ಒಪ್ಪುವುದಿಲ್ಲವಲ್ಲ? ಚಿರುಗೆ ಸಲ್ಲು ಹೀಗೆ ಹೇಳಿದ್ದೇಕೆ?

Accident case
ಶಿವಮೊಗ್ಗ39 mins ago

Accident Case : ಈಜಲು ಚಂಪಕ ಸರಸು ಕಲ್ಯಾಣಿಗೆ ಜಿಗಿದ ಎಂಜಿನಿಯರ್‌ ಶವವಾಗಿ ಹೊರ ಬಂದ

Shraddha Kapoor- Shreyas Iyer
ಕ್ರೀಡೆ42 mins ago

Shraddha Kapoor- Shreyas Iyer: ಕ್ರಿಕೆಟಿಗ ಅಯ್ಯರ್​ ಜತೆ ಡೇಟಿಂಗ್ ಆರಂಭಿಸಿದ ನಟಿ ಶ್ರದ್ಧಾ ಕಪೂರ್‌; ಫೋಟೊ ವೈರಲ್​

Road Accident
ವಿದೇಶ55 mins ago

ನೇಪಾಳ: ನದಿಗೆ ಉರುಳಿದ ಭಾರತೀಯರು ಸೇರಿ 40 ಮಂದಿ ಪ್ರಯಾಣಿಸುತ್ತಿದ್ದ ಬಸ್‌; 14 ಮಂದಿ ಸಾವು?

Kolkata Doctor Murder Case
ಕ್ರೈಂ1 hour ago

Kolkata Doctor Murder Case: ಮಮತಾ ಬ್ಯಾನರ್ಜಿ ಆಡಳಿತದ ಕರಾಳ ಅಧ್ಯಾಯ ತೆರೆದಿಟ್ಟಿದೆ ಕೋಲ್ಕತಾ ವೈದ್ಯೆ ಕೊಲೆ ಪ್ರಕರಣ

Bwssb water price hike
ಪ್ರಮುಖ ಸುದ್ದಿ1 hour ago

Water Price Hike: ಬೆಂಗಳೂರು ಜಲಮಂಡಳಿಗೆ ₹87 ಕೋಟಿ ಬಾಕಿ ಉಳಿಸಿಕೊಂಡು ಶ್ರೀಸಾಮಾನ್ಯನ ಬೆನ್ನಿಗೆ ಬರೆ ಹಾಕಲು ಮುಂದಾದ ರಾಜ್ಯ ಸರ್ಕಾರ!

Ritika Sajdeh
ಕ್ರೀಡೆ2 hours ago

Ritika Sajdeh: ಜೂನಿಯರ್​ ಹಿಟ್​ಮ್ಯಾನ್​ ನಿರೀಕ್ಷೆಯಲ್ಲಿ ರೋಹಿತ್​; ಪತ್ನಿಯ ಬೇಬಿ ಬಂಪ್‌ ವಿಡಿಯೊ ವೈರಲ್​

Narendra Modi
ವಿದೇಶ2 hours ago

Narendra Modi: ಉಕ್ರೇನ್‌ಗೆ ಬಂದಿಳಿದ ಪ್ರಧಾನಿ ಮೋದಿ; ರಷ್ಯಾ ಜತೆಗಿನ ಸಂಘರ್ಷದ ಚರ್ಚೆ ಸಾಧ್ಯತೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌