Murder Case: ತನ್ನದೇ ಹೆಸರಿನವನ ಮೂಲಕ, ಸಾವಿನ ಮನೆಯಿಂದಲೇ ಹಿಂಬಾಲಿಸಿ ಬಂತು ಸಾವು! ಬೆಂಗಳೂರಿನಲ್ಲೊಂದು ವಿಲಕ್ಷಣ ಕೊಲೆ - Vistara News

ಕ್ರೈಂ

Murder Case: ತನ್ನದೇ ಹೆಸರಿನವನ ಮೂಲಕ, ಸಾವಿನ ಮನೆಯಿಂದಲೇ ಹಿಂಬಾಲಿಸಿ ಬಂತು ಸಾವು! ಬೆಂಗಳೂರಿನಲ್ಲೊಂದು ವಿಲಕ್ಷಣ ಕೊಲೆ

Murder Case: ಶರತ್ ಎಂಬಾತ ಸಾವನ್ನಪ್ಪಿದ ವ್ಯಕ್ತಿ. ಇನ್ನೊಬ್ಬ ಶರತ್ ಎಂಬ ಹೆಸರಿನ ಆಟೋ ಚಾಲಕನಿಂದಲೇ ಈ ಕೃತ್ಯ ನಡೆದಿದೆ. ಕಾಟನ್ ಪೇಟೆಯ ಅಂಜನಪ್ಪ ಗಾರ್ಡನ್‌ನಲ್ಲಿ ಕೊಲೆ ನಡೆದಿದೆ. ಅದೂ ವಿಚಿತ್ರ ಸಂದರ್ಭದಲ್ಲಿ.

VISTARANEWS.COM


on

murder case bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನಲ್ಲಿ (Bangalore news) ಒಂದು ವಿಲಕ್ಷಣ ಕೊಲೆ (Murder Case) ಪ್ರಕರಣ ನಡೆದಿದೆ. ಸಾವು ಸಂಭವಿಸಿದ ಮನೆಗೆ ಭೇಟಿ ನೀಡಿ ತೆರಳಿದ ವ್ಯಕ್ತಿಯನ್ನು ಮೃತ್ಯು (Death) ಹಿಂಬಾಲಿಸಿದೆ. ಅದರಲ್ಲೂ, ತನ್ನದೇ ಹೆಸರಿನ ಇನ್ನೊಬ್ಬ ವ್ಯಕ್ತಿಯಿಂದ ಆತ ಕೊಲೆ ಆಗಿದ್ದಾನೆ.

ಶರತ್ ಎಂಬಾತ ಸಾವನ್ನಪ್ಪಿದ ವ್ಯಕ್ತಿ. ಇನ್ನೊಬ್ಬ ಶರತ್ ಎಂಬ ಹೆಸರಿನ ಆಟೋ ಚಾಲಕನಿಂದಲೇ ಈ ಕೃತ್ಯ ನಡೆದಿದೆ. ಕಾಟನ್ ಪೇಟೆಯ ಅಂಜನಪ್ಪ ಗಾರ್ಡನ್‌ನಲ್ಲಿ ಕೊಲೆ ನಡೆದಿದೆ. ಅದೂ ವಿಚಿತ್ರ ಸಂದರ್ಭದಲ್ಲಿ. ಅಂಜನಪ್ಪ ಗಾರ್ಡನ್‌ನಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಅವರ ಶವದ ಅಂತಿಮ ದರ್ಶನ ಪಡೆಯಲು ಈ ಇಬ್ಬರೂ ಆಗಮಿಸಿದ್ದರು.

ಮೃತ ಶರತ್, ಕೆ.ಪಿ ಅಗ್ರಹಾರ ಮಾರ್ಕಂಡೇಶ್ವರ ನಗರದ ನಿವಾಸಿ. ಈತ ನಿನ್ನೆ ಬೆಳಗ್ಗೆ ಅಂಜನಪ್ಪ ಗಾರ್ಡನ್‌ನಲ್ಲಿರುವ ತನ್ನ ಅಣ್ಣನ ಮನೆಗೆ ಬಂದಿದ್ದ. ಬೆಳಿಗ್ಗೆ 6:30ರ ಸುಮಾರಿಗೆ ಸಾವಿನ ಮನೆಯಿಂದ ವಾಪಸು ತೆರಳುವ ವೇಳೆ ಗಲಾಟೆ ಸೃಷ್ಟಿಯಾಗಿದೆ. ಈತ ಮೂರ್ನಾಲ್ಕು ಜನರೊಂದಿಗೆ ಜಗಳ ಮಾಡಿಕೊಂಡಿದ್ದಾನೆ. ಈ ವೇಳೆ ಆರೋಪಿಗಳು ಮಾರಕಾಸ್ತ್ರದಿಂದ ಶರತ್ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಶರತ್‌ಗೆ ಮತ್ತೋರ್ವ ಶರತ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ.

ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ‌ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಮೃತನ ಪತ್ನಿ ಕಾಟನ್ ಪೇಟೆ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Murder Case: ತಾಯಿ, ಹೆಂಡತಿಯನ್ನು ಕೊಂದು ಪರಾರಿಯಾದ ಆಸ್ಪತ್ರೆ ನೌಕರ

ರಾಯಚೂರು: ಕೌಟುಂಬಿಕ ಕಲಹ ಉಲ್ಬಣಿಸಿ ತನ್ನ ತಾಯಿ ಹಾಗೂ ಹೆಂಡತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ವ್ಯಕ್ತಿ ಪರಾರಿಯಾಗಿದ್ದಾನೆ. ಲಿಂಗಸಗೂರು ತಾಲೂಕಿನ ಮುದ್ಗಲ್ ಪಟ್ಟಣದಲ್ಲಿ ದುರ್ಘಟನೆ ನಡೆದಿದೆ.

ದ್ಯಾಮಮ್ಮ (66) ಹಾಗೂ ಜ್ಯೋತಿ (23) ಕೊಲೆಯಾದ ದುರ್ದೈವಿಗಳು. ದುರಗಪ್ಪ ಇಬ್ಬರನ್ನೂ ಹತ್ಯೆಗೈದ ಆರೋಪಿ. ಮುದ್ಗಲ್ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್ ನೌಕರನಾದ ದುರಗಪ್ಪನ ಕುಟುಂಬ ಇಲ್ಲಿನ ಆಸ್ಪತ್ರೆಯ ಕ್ವಾರ್ಟರ್ಸ್‌ನಲ್ಲಿ ವಾಸವಾಗಿತ್ತು. ಪ್ರತಿನಿತ್ಯ ಮನೆಯಲ್ಲಿ ಕಲಹ ನಡೆಯುತ್ತಿತ್ತು. ದುರಗಪ್ಪ ಮದ್ಯ ಸೇವಿಸಿ ಬಂದು ತಾಯಿ ಹಾಗೂ ಹೆಂಡತಿಗೆ ಮನಸೋಇಚ್ಛೆ ಥಳಿಸುತ್ತಿದ್ದ ಎಂದು ಗೊತ್ತಾಗಿದೆ. ಕೊಲೆ ಬಳಿಕ ಸ್ಥಳದಿಂದ ಆರೋಪಿ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಮುದ್ಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Road Accident : ಕುಡಿದು ಕಾರು ಓಡಿಸಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು ; ಕಾರ್ಕಳದಲ್ಲಿ ಸಿಲಿಂಡರ್ ಸ್ಫೋಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Consolidated Fund Misuse: 1,494 ಕೋಟಿ ಸಂಚಿತ ನಿಧಿ ದುರ್ಬಳಕೆ; ಸಿಎಂ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು!

Consolidated Fund Misuse: ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಹಣ ದುರ್ಬಳಕೆ ಸಂಬಂಧ ಎಂಎಲ್‌ಸಿ ಡಿ.ಎಸ್‌.ಅರುಣ್‌ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಕರ್ನಾಟಕ ಸರ್ಕಾರವು ಸಂವಿಧಾನದ ನಿಬಂಧನೆಗಳನ್ನು ಉಲ್ಲಂಘಿಸಿರುವ ಕಾರಣ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸಲು ಕೋರಿದ್ದಾರೆ.

VISTARANEWS.COM


on

Consolidated Fund Misuse
Koo

ಬೆಂಗಳೂರು: ವಾಲ್ಮೀಕಿ ನಿಗಮ ಅಕ್ರಮ, ಮುಡಾ ನಿವೇಶನ ಹಗರಣದ ಬೆನ್ನಲ್ಲೇ ರಾಜ್ಯ ಸರ್ಕಾರದಲ್ಲಿ ಮತ್ತೊಂದು ಭಾರಿ ಹಗರಣ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದೆ. 2022-23ನೇ ಸಾಲಿನಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತಿಗಳಲ್ಲಿ ಬಳಕೆಯಾಗದೆ ಉಳಿದಿರುವ 1,494 ಕೋಟಿ ರೂ.ಗಳ ಬಗ್ಗೆ ಪತ್ರ ಬರೆದಿದ್ದರೂ ರಾಜ್ಯ ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ. ರಾಜ್ಯ ಸಂಚಿತ ನಿಧಿಗೆ ಸೇರಬೇಕಾದ ಸಾವಿರಾರು ಕೋಟಿ ರೂ.ಗಳು ದುರ್ಬಳಕೆಯಾಗಿದ್ದು (Consolidated Fund Misuse), ಈ ಬಗ್ಗೆ ತನಿಖೆಗೆ ಕ್ರಮ ಕೈಗೊಂಡು ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ವಜಾ ಮಾಡಬೇಕು ಎಂದು ರಾಜ್ಯಪಾಲರಿಗೆ ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ದೂರು ನೀಡಿದ್ದಾರೆ.

2023ರ ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿಗಳ ನಿಧಿ-IIರಲ್ಲಿ ಖರ್ಚು ಮಾಡದೆ ಬಾಕಿ ಇರುವ ಹಣಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಲಾಗಿತ್ತು. ಅದಕ್ಕೆ ಸಿಎಂ ಸಿದ್ದರಾಮಯ್ಯ ಅವರು, ಬಳಕೆಯಾಗದ ಜಿಲ್ಲಾ ಪಂಚಾಯಿತಿಗಳ 459 ಕೋಟಿ ಹಾಗೂ ತಾಲೂಕು ಪಂಚಾಯಿತಿಗಳ 1,494 ಕೋಟಿ ರೂ.ಗಳನ್ನು ಸಂಚಿತ ನಿಧಿಗೆ ಜಮಾ ಮಾಡಲಾಗಿದೆ ಎಂದು ಲಿಖಿತ ಉತ್ತರ ನೀಡಿದ್ದರು. ಆದರೆ, ಇದನ್ನು ಪರಿಶೀಲಿಸಿದ ಬಳಿಕ ಮುಖ್ಯಮಂತ್ರಿಯವರು ನೀಡಿದ ಉತ್ತರ ಸುಳ್ಳು ಎಂದು ಸಾಬೀತಾಗಿದೆ.

MUDA Scam: ಮುಡಾದಲ್ಲಿ ಇನ್ನೊಂದು ಗೋಲ್‌ಮಾಲ್, ಇಲ್ಲದ ವ್ಯಕ್ತಿ ಸೃಷ್ಟಿಸಿ ನಿವೇಶನ ಪಡೆದ ಅಧಿಕಾರಿಗಳು!

ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳ ನಿಧಿ-IIನ ಖರ್ಚು ಮಾಡದ 1494 ಕೋಟಿಗಳನ್ನು ಖಜಾನೆಗೆ ಜಮಾ ಮಾಡಿಲ್ಲ ಎಂದು ಏ.20ರಂದು ಕರ್ನಾಟಕ ಖಜಾನೆ ಇಲಾಖೆ ಸ್ಪಷ್ಟಪಡಿಸಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ತಿನ ಮುಂದೆ ಉದ್ದೇಶಪೂರ್ವಕವಾಗಿ ಸುಳ್ಳು ಅಥವಾ ದಾರಿತಪ್ಪಿಸುವ ಹೇಳಿಕೆಗಳನ್ನು ನೀಡಿ ಸತ್ಯವನ್ನು ಮರೆಮಾಚುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿರುವ ಡಿ.ಎಸ್.ಅರುಣ್‌, ಕರ್ನಾಟಕ ಸರ್ಕಾರವು ಸಂವಿಧಾನದ 202, 205 ಮತ್ತು 206 ವಿಧಿಯಡಿಯ ನಿಬಂಧನೆಗಳನ್ನು ಉಲ್ಲಂಘಿಸಿದೆ. ಸಾವಿರಾರು ಕೋಟಿ ರೂ. ಅವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಸಿ, ಸಿಎಂ ಸಿದ್ದರಾಮಯ್ಯ ಅವರನ್ನು ವಜಾ ಮಾಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.

    Continue Reading

    ಕ್ರೈಂ

    Physical Abuse : 10 ವರ್ಷದ ಅಪ್ರಾಪ್ತೆ ಮೇಲೆ ಎರಗಿದ ಕಾಮುಕ; ಅತ್ಯಾಚಾರದ ವೇಳೆ ಕಿರುಚಾಡಿದ್ದಕ್ಕೆ ಕೊಲೆಗೈದ ಹಂತಕ

    Physical Abuse : ಅಪ್ರಾಪ್ತೆ ಮೇಲೆ ಎರಗಿದ ದುಷ್ಟನೊಬ್ಬ ಅತ್ಯಾಚಾರವೆಸಗಿ ಬಳಿಕ ಬಾಲಕಿ ಕಿರುಚಾಡಿದ್ದಕ್ಕೆ ಕೊಂದು ಹಾಕಿದ್ದಾನೆ. ಕೃತ್ಯದ ಬಳಿಕ ಪರಾರಿ ಆಗಿದ್ದ ಕಿರಾತಕನನ್ನು ಪೊಲೀಸರು ಬಂಧಿಸಿದ್ದಾರೆ.

    VISTARANEWS.COM


    on

    By

    Physical abuse
    Koo

    ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ (Physical Abuse) ಬಂದಿದೆ. ದುರುಳನೊಬ್ಬ 10 ವರ್ಷ ವಯಸ್ಸಿನ ಅಪ್ರಾಪ್ತೆ ಮೇಲೆ ಅತ್ಯಾಚಾರಗೈದು ಕೊಲೆಗೈದಿದ್ದಾನೆ. ಅತ್ಯಾಚಾರದ ವೇಳೆ ಬಾಲಕಿ ಕಿರಿಚಾಡಿದ್ದಕ್ಕೆ ಆಕೆಯನ್ನು ಕೊಲೆಗೈದು ಕಾಮುಕ ಪರಾರಿ ಆಗಿದ್ದಾನೆ. ಮಹಾರಾಷ್ಟ್ರದ ಕೊಲ್ಲಾಪುರ ಹೊರವಲಯದ ಶೇಯೇ ಪ್ರದೇಶದಲ್ಲಿ ಘಟನೆ ನಡೆದಿದೆ.

    ಬಾಲಕಿ ತಾಯಿಯ ನಿಕಟ ಸಂಬಂಧಿಯಿಂದಲೇ ಈ ಕೃತ್ಯ ನಡೆದಿದೆ. ಕಾಮುಕ ಕಳೆದ 3 ತಿಂಗಳಿಂದ ಸಂಬಂಧಿಕರ ಮನೆಯಲ್ಲಿ ವಾಸವಿದ್ದ. ಬಾಲಕಿ ಮನೆಯಿಂದ ಕೆಲವೇ ಅಂತರದಲ್ಲಿದ್ದ ಹೊಲದಲ್ಲಿ ಅತ್ಯಾಚಾರವೆಸಗಿ, ಕೊಂದಿದ್ದಾನೆ. ಅರೆಬೆತ್ತಲೆ ಸ್ಥಿತಿಯಲ್ಲಿ ಬಿದ್ದಿದ್ದ ಬಾಲಕಿ ಶವ ಕಂಡು ಬೆಚ್ಚಿಬಿದ್ದ ಸ್ಥಳೀಯರು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಪ್ರಕರಣ ನಡೆದು ಐದೇ ಗಂಟೆಗಳಲ್ಲಿ ಆರೋಪಿಯನ್ನು ಕೊಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮುಂದೆ ಆರೋಪಿ ದಿನೇಶಕುಮಾರ್ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಹಾಗೂ ಅಪ್ರಾಪ್ತೆಯ ಪೋಷಕರು ಬಿಹಾರ ಮೂಲದವರೆಂಬ ಮಾಹಿತಿ ಇದೆ. ಕೊಲ್ಹಾಪುರದ ಶಿರೋಳಿ ಎಂಐಡಿಸಿ ( MIDC) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಇದನ್ನೂ ಓದಿ: Murder Case : ಟಿಡಿಪಿ ಶಾಸಕ ಬೆಂಬಲಿಗನ ಕೊಲೆಗೆ ಸ್ಕೆಚ್; ಆಂಧ್ರ ಪೊಲೀಸರಿಂದ ಕರ್ನಾಟಕ ಪೊಲೀಸ್‌ ಅರೆಸ್ಟ್‌!

    ನವವಿವಾಹಿತೆಗೆ ವಿಷ ಕುಡಿಸಿದ್ದನಾ ಬಿಜೆಪಿ ಮುಖಂಡ?

    ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದ ಮಹಿಳೆ ಯೂಟರ್ನ್ ಹೊಡೆದಿದ್ದಾರೆ. ಬಿಜೆಪಿ ಮುಖಂಡನೊಬ್ಬ ನವವಿವಾಹಿತೆಗೆ ವಿಷ ಕುಡಿಸಿದ ಆರೋಪ ಕೇಳಿ ಬಂದಿದೆ. ಕೀಚಕನೊಬ್ಬ ಮಹಿಳೆಯನ್ನು ಹೆದರಿಸಿ ಬೆದರಿಸಿ ಗಂಡ ಹಾಗೂ ಮಾವನ ಮೇಲೆ ದೂರು ಕೊಡಿಸಿದ್ದ ಎನ್ನಲಾಗಿದೆ.

    ತನ್ನ ಮೇಲೆ ಒತ್ತಡ ಹಾಕಿ ಸಂಸಾರಕ್ಕೆ ಸಂಚಕಾರ ತಂದವರ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದಾರೆ. ಬೆಳಗಾವಿಯಲ್ಲಿ ಬಿಜೆಪಿ ಮುಖಂಡ ಪೃಥ್ವಿಸಿಂಗ್ ಹಾಗೂ ಆತನ ಮಗ ಜಶ್ವಿರ್ ಸಿಂಗ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ತನಗೆ ವಿಷ ಕುಡಿಸಿ ಆಸ್ಪತ್ರೆಗೆ ದಾಖಲಿಸಿ ಗಂಡ ಹಾಗೂ ಮಾವನ ವಿರುದ್ಧ ಹೇಳಿಕೆ ಕೊಡುವಂತೆ ಒತ್ತಡ ಹಾಕಿದ್ದರು. ಕೆಲ ದಿನಗಳ ಹಿಂದೆ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಕನ್ವಿಕಾ ಗೋಡ್ಯಾಲ್ಕರ್ ಎಂಬುವವರು ಪೃಥ್ವಿ ಸಿಂಗ್ ವಿರುದ್ಧ ಆರೋಪಿಸಿದ್ದಾರೆ.

    ಈ ಹಿಂದೆ ಗಂಡ ಹಾಗೂ ಮಾವನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ್ದೆ ಎಂದು ಕನ್ವಿಕಾ ಹೇಳಿಕೆ ನೀಡಿದ್ದರು. ಆಸ್ಪತ್ರೆಯಿಂದ ಹೊರ‌ ಬಂದು ತಿಂಗಳ ಬಳಿಕ ಯೂ ಟರ್ನ್ ಹೊಡೆದ ಕನ್ವಿಕಾ ಗೊಡ್ಯಾಳಕರ್, ಹೆದರಿಸಿ ಗಂಡ ಹಾಗೂ ಮಾವನ ವಿರುದ್ಧ ದೂರು ನೀಡುವ ಹಾಗೆ ಮಾಡಿದ್ದರು. ಬಳಿಕ ತನ್ನ ಮೇಲೆ ಪೃಥ್ವಿ ಸಿಂಗ್ ಮತ್ತು ಆತನ ಮಗ ಜಶ್ವೀರ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಆರೋಪಿಸಿದ್ದಾರೆ. ತಡರಾತ್ರಿ ನ್ಯಾಯಕ್ಕಾಗಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಕನ್ವಿಕಾ ‌ಮೆಟ್ಟಿಲೇರಿದ್ದಾರೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading

    ಕೋಲಾರ

    Murder Case : ಟಿಡಿಪಿ ಶಾಸಕ ಬೆಂಬಲಿಗನ ಕೊಲೆಗೆ ಸ್ಕೆಚ್; ಆಂಧ್ರ ಪೊಲೀಸರಿಂದ ಕರ್ನಾಟಕ ಪೊಲೀಸ್‌ ಅರೆಸ್ಟ್‌!

    Murder Case : ಟಿಡಿಪಿ ಶಾಸಕ ಬೆಂಬಲಿಗನ ಕೊಲೆಗೆ ಸ್ಕೆಚ್‌ ಹಾಕಿ ಸುಪಾರಿ ಕೊಟ್ಟಿದ್ದ ಕೋಲಾರ ಪೊಲೀಸ್‌ ಪೇದೆಯನ್ನು ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

    VISTARANEWS.COM


    on

    By

    Murder case
    ಪೇದೆ ವಿನಾಯಕ ಹಾಗೂ ಲಕ್ಕಹಳ್ಳಿ ಶ್ರೀನಿವಾಸ ರೆಡ್ಡಿ ಸುಪಾರಿ ಕೊಟ್ಟವರು
    Koo

    ಕೋಲಾರ: ಟಿಡಿಪಿ ಶಾಸಕ ಬೆಂಬಲಿಗನ ಕೊಲೆಗೆ (Attempt to murder case) ಸ್ಕೆಚ್ ಹಾಕಿದ್ದಕ್ಕೆ, ಕೋಲಾರ ಪೊಲೀಸ್ ಪೇದೆ ವಿನಾಯಕ ಎಂಬಾತನನ್ನು ಆಂಧ್ರಪ್ರದೇಶದ ಗಂಗವರಂ ಪೊಲೀಸರು ಬಂಧಿಸಿದ್ದಾರೆ. ವಿನಾಯಕ ಕೋಲಾರ ಪೊಲೀಸ್ ಠಾಣೆ ಅಪರಾಧ ಕಾನ್ಸ್‌ಟೇಬಲ್‌ ಆಗಿದ್ದು, ಟಿಡಿಪಿ ಶಾಸಕನ ಬೆಂಬಲಿಗನನ್ನು ಕೊಲ್ಲಲು ಸುಪಾರಿ ನೀಡಿದ್ದ (Murder case) ಎನ್ನಲಾಗಿದೆ.

    ಇಚರ್ ವಾಹನದಿಂದ ಅಪಘಾತ ಮಾಡುವಂತೆ ವಿನಾಯಕ ಐಡಿಯಾ ಕೊಟ್ಟಿದ್ದ. ಕೊಲೆಗೆ ಯೋಜನೆ ರೂಪಿಸಿ , ಅಪಘಾತಕ್ಕೆ ವಾಹನವನ್ನು ಸಿದ್ಧಪಡಿಸಿದ್ದ. ಆದರೆ ಅದೃಷ್ಟವಶಾತ್ ಟಿಡಿಪಿ ಕಾರ್ಯಕರ್ತ ಪ್ರಾಣಾಪಾಯದಿಂದ ಪಾರಾಗಿದ್ದರು. ಲಕ್ಕಹಳ್ಳಿ ಶ್ರೀನಿವಾಸ ರೆಡ್ಡಿ ಹಾಗೂ ಪೇದೆ ವಿನಾಯಕ ಸೇರಿ ಟಿಡಿಪಿ ನಾಯಕ ರವಿಚಂದ್ರ ಗುಪ್ತರ ಕಾರಿಗೆ ಡಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ್ದರು. ಸದ್ಯ ಸುಪಾರಿ ನೀಡಿದ ವಿನಾಯಕ ವಿರುದ್ಧ ಗಂಗವಾರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    murder case
    ಟಿಡಿಪಿ ನಾಯಕ ರವಿಚಂದ್ರ ಗುಪ್ತ

    ಇದನ್ನೂ ಓದಿ: Accident Case : ಈಜಲು ಚಂಪಕ ಸರಸು ಕಲ್ಯಾಣಿಗೆ ಜಿಗಿದ ಎಂಜಿನಿಯರ್‌ ಶವವಾಗಿ ಹೊರ ಬಂದ

    ತುಮಕೂರಿನಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದವನ ಮೇಲೆ ಅಟ್ಯಾಕ್‌

    ಹಾಡಹಗಲೇ ಬೈಕ್‌ನಲ್ಲಿ ಹೋಗುತ್ತಿದ್ದವನ ಮೇಲೆ ಅಟ್ಯಾಕ್ ಮಾಡಿ ಕೊಲೆಗೆ ಯತ್ನಿಸಲಾಗಿದೆ. ದುಷ್ಕರ್ಮಿಗಳು ಸ್ಕಾರ್ಫಿಯೋ ಕಾರಿನಲ್ಲಿ ಬಂದು ಗುಬ್ಬಿ ಪಟ್ಟಣದ ಮನೋಜ್ (29) ಎಂಬಾತನ ಕೊಲೆಗೆ ಯತ್ನಿಸಲಾಗಿದೆ. ಕೊಲೆಗೆ ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಗುಬ್ಬಿ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ @ ಡೆಲ್ಲಿ ಸೀನಾ, ನಾಗರಾಜು, ದುಷ್ಯಾಂತ, ದರ್ಶನ್ ಬಂಧಿತ ಆರೋಪಿಗಳು.

    ಕಳೆದ ಎರಡು ವರ್ಷಗಳ ಹಿಂದೆ ಹಣಕಾಸು ವಿಚಾರಕ್ಕೆ ಗುಬ್ಬಿ ಡಿಎಸ್‌ಎಸ್ ಮುಖಂಡ ನರಸಿಂಹ ಮೂರ್ತಿ@ ಕುರಿ ಮೂರ್ತಿಯನ್ನು ಗುಬ್ಬಿ ಪಟ್ಟಣದ ಬಿ.ಹೆಚ್ ರಸ್ತೆಯಲ್ಲಿ ಹಾಡಹಗಲೇ ಕೊಲೆ ಮಾಡಲಾಗಿತ್ತು. ಈ ಬಳಿಕ ನರಸಿಂಹ ಮೂರ್ತಿ ಪುತ್ರ ಮನೋಜ್ ಕೊಲೆಗೆ ಯತ್ನಿಸಲಾಗಿತ್ತು.

    ಇದೇ ಬುಧವಾರ ಗುಬ್ಬಿ ತಾಲೂಕು ಕಚೇರಿ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ಮನೋಜ್ ಮೇಲೆ ಅಟ್ಯಾಕ್ ಮಾಡಲಾಗಿತ್ತು. ಈ ವೇಳೆ ದುಷ್ಕರ್ಮಿಗಳ ಕೈಗೆ ಸಿಗದೇ ಮನೋಜ್‌ ತಪ್ಪಿಸಿಕೊಂಡಿದ್ದ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿದ ಗುಬ್ಬಿ ಪೊಲೀಸರು, ಸ್ಕಾರ್ಫಿಯೋ ಕಾರಿನಲ್ಲಿ ಬಂದು ಕೊಲೆಗೆ ಯತ್ನಿಸಿದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ. ಪೊಲೀಸ್ ತನಿಖೆ ವೇಳೆ ಮೇಲ್ನೋಟಕ್ಕೆ ಹಳೆ ವೈಷಮ್ಯಕ್ಕೆ ಕೊಲೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading

    ಶಿವಮೊಗ್ಗ

    Accident Case : ಈಜಲು ಚಂಪಕ ಸರಸು ಕಲ್ಯಾಣಿಗೆ ಜಿಗಿದ ಎಂಜಿನಿಯರ್‌ ಶವವಾಗಿ ಹೊರ ಬಂದ

    Accident Case : ಬೆಂಗಳೂರಿನಿಂದ ಸ್ನೇಹಿತರೊಟ್ಟಿಗೆ ಪ್ರವಾಸಕ್ಕೆ ಹೋದ ಯುವಕರ್ನೊವ ಹೆಣವಾಗಿ ಪತ್ತೆಯಾಗಿದ್ದಾನೆ. ಕಲ್ಯಾಣಿಯಲ್ಲಿ ಈಜಲು ಹೀಗಿ ನೀರುಪಾಲಾಗಿದ್ದಾನೆ.

    VISTARANEWS.COM


    on

    By

    Accident case
    Koo

    ಶಿವಮೊಗ್ಗ : ಚಂಪಕ ಸರಸು ಕಲ್ಯಾಣಿಯಲ್ಲಿ ಈಜಲು ಹೋಗಿದ್ದ (Drowned in water) ಎಂಜಿನಿಯರ್‌ ಮೃತಪಟ್ಟಿದ್ದಾನೆ. ಶಿವಮೊಗ್ಗದ ಸಾಗರದ ಆನಂದಪುರ ಬಳಿ ಇರುವ ಚಂಪಕ ಸರಸು ಕಲ್ಯಾಣಿಯಲ್ಲಿ ಘಟನೆ (Accident Case) ನಡೆದಿದೆ. ಬೆಂಗಳೂರು ಮೂಲದ ಕುಶಾಲ್ (22) ಎಂಬ ಇಂಜಿನಿಯರ್ ಸಾವನ್ನಪ್ಪಿರುವ ದುರ್ದೈವಿ.

    ಬೆಂಗಳೂರಿನ ಕುಶಾಲ್‌ ತನ್ನಿಬ್ಬರು ಸ್ನೇಹಿತರೊಡನೆ ಪ್ರವಾಸಕ್ಕೆಂದು ಕಾರಿನಲ್ಲಿ ಆಗಮಿಸಿದ್ದ. ಕುಶಾಲ್, ಸಾಯಿರಾಂ ಹಾಗೂ ಯಶವಂತ ಈ ಮೂವರು ಇತಿಹಾಸ ಹೊಂದಿರುವ ಮಹಂತಿನ ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕುಶಾಲ್‌ ಚಂಪಕ ಸರಸು ಕಲ್ಯಾಣಿಯಲ್ಲಿ ಈಜಲು ಹೋಗಿದ್ದಾನೆ. ಆದರೆ ಉಸಿರುಗಟ್ಟಿ ನೀರಿಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

    ಹಲವಾರು ವರ್ಷಗಳ ಕಾಲ ಪಾಳು ಬಿದ್ದಿದ್ದ ಚಂಪಕ ಸರಸು ಕಲ್ಯಾಣಿಯನ್ನು ಚಲನಚಿತ್ರ ನಟ ಯಶ್ ಅವರ ಯಶೋಮಾರ್ಗ ಸಂಸ್ಥೆ ಕಳೆದೆರೆಡು ವರ್ಷಗಳ ಹಿಂದೆಯಷ್ಟೇ ಸ್ವಚ್ಚಗೊಳಿಸಿದ್ದರು. ಸ್ನೇಹಿತರೊಂದಿಗೆ ಈಜಾಡಲು ಬಂದ ಕುಶಾಲ್‌ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಕಲ್ಯಾಣಿಯಿಂದ ಶವ ಮೇಲಕ್ಕೇತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

    ಇದನ್ನೂ ಓದಿ: Assault Case : ಬೀದಿಯಲ್ಲೇ ಲೇಟ್‌ ನೈಟ್‌ ಪಾರ್ಟಿ; ಪ್ರಶ್ನಿಸಿದ್ದಕ್ಕೆ ಯುವಕನಿಂದ ಪೊಲೀಸರಿಗೆ ಅವಾಜ್

    ಗದಗದಲ್ಲಿ ಬಸ್‌ ಹರಿದು 30 ಕುರಿಗಳು ಸಾವು

    ಗದಗದ ಗಜೇಂದ್ರಗಡ-ರೋಣ ರಸ್ತೆ ಮಾರ್ಗದ ದಿಂಡೂರ ಗ್ರಾಮದ ಕ್ರಾಸ್‌ನಲ್ಲಿ ಬಸ್‌ ಹರಿದು 30 ಕುರಿಗಳು ಮೃತಪಟ್ಟಿವೆ. ಓವರ್ ಟೆಕ್ ಮಾಡಲು ಹೋಗಿ ಮೂವತ್ತು ಕುರಿಗಳ ಮೇಲೆ ಬಸ್‌ ಹರಿದಿದೆ. ಬದಾಮಿ ಘಟಕದ ಸರ್ಕಾರಿ ಬಸ್ ಚಾಲಕ ನಿರ್ಲಕ್ಷ್ಯದಿಂದ ಸುಮಾರು 4.5 ಲಕ್ಷ‌ ಮೌಲ್ಯದ ಕುರಿಗಳು ಮೃತಪಟ್ಟಿವೆ. ಕುರಿಗಳನ್ನು ಕಳೆದುಕೊಂಡು ಕುರಿಗಾಯಿಗಳು ಗೋಳಾಡಿದ್ದರು.

    ಚಿಕ್ಕಬಳ್ಳಾಪುರದಲ್ಲಿ ಚಲಿಸುವ ರೈಲಿಗೆ ಸಿಲುಕಿ ವಯೋವೃದ್ಧ ಸಾವು

    ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದ ರೈಲ್ವೇ‌ ನಿಲ್ದಾಣದ ಬಳಿ ಚಲಿಸುವ ರೈಲಿಗೆ ಸಿಲುಕಿ ಅಪರಿಚಿತ ವಯೋವೃದ್ಧ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದಿಂದ ಬಂಗಾರಪೇಟೆಗೆ ಹೋಗುತಿದ್ದ ರೈಲಿಗೆ ಸಿಲುಕಿದ್ದಾರೆ. ವೈಯುಕ್ತಿಕ‌ ಕಾರಣ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸದ್ಯ ವೃದ್ಧನ ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

    ಕೋಲಾರದಲ್ಲಿ ರಸ್ತೆ ಬದಿ ಅಂಗಡಿಗೆ ನುಗ್ಗಿದ ಕಾರು

    ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ಅಂಗಡಿಗೆ ನುಗ್ಗಿದೆ. ಅಪಘಾತದಲ್ಲಿ ಅಂಗಡಿಯಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದೆ. ಕೋಲಾರ ಜಿ. ಶ್ರೀನಿವಾಸಪುರ ತಾ.ಕಶೆಟ್ಟಿಪಲ್ಲಿ ಕ್ರಾಸ್‌ನಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಮರಿಪಲ್ಲಿ ಗ್ರಾಮದ ನಾಗರತ್ನಮ್ಮ ಎಂಬವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಡಪಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಾಗರತ್ಮಮ್ಮ ಟೀ- ಕಾಫಿ, ಟಿಫನ್ ತಿಂಡಿ ತಿನಿಸುಗಳನ್ನು ಇಟ್ಟಿಕೊಂಡಿದ್ದರು. ಅಪಘಾತದಲ್ಲಿ ಒಂದು ದ್ವಿಚಕ್ರ ವಾಹನ ಹಾಗೂ ಅಂಗಡಿ ಜಖಂಗೊಂಡಿದೆ. ಸ್ಥಳೀಯರ ಸಹಾಯದೊಂದಿಗೆ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading
    Advertisement
    PM Modi Ukraine Visit
    ವಿದೇಶ2 mins ago

    PM Modi Ukraine Visit: ಉಕ್ರೇನ್‌ಗೆ ಬಂದಿಳಿದ ಪ್ರಧಾನಿ ಮೋದಿ- ಝೆಲೆನ್ಸ್ಕಿಗೆ ಆತ್ಮೀಯ ಅಪ್ಪುಗೆ

    Consolidated Fund Misuse
    ಪ್ರಮುಖ ಸುದ್ದಿ4 mins ago

    Consolidated Fund Misuse: 1,494 ಕೋಟಿ ಸಂಚಿತ ನಿಧಿ ದುರ್ಬಳಕೆ; ಸಿಎಂ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು!

    Physical abuse
    ಕ್ರೈಂ15 mins ago

    Physical Abuse : 10 ವರ್ಷದ ಅಪ್ರಾಪ್ತೆ ಮೇಲೆ ಎರಗಿದ ಕಾಮುಕ; ಅತ್ಯಾಚಾರದ ವೇಳೆ ಕಿರುಚಾಡಿದ್ದಕ್ಕೆ ಕೊಲೆಗೈದ ಹಂತಕ

    governor thawar chand gehlot dinesh kallahalli mb patil
    ಪ್ರಮುಖ ಸುದ್ದಿ20 mins ago

    MB Patil: ಸಿಎಂ ಆಯ್ತು, ಈಗ ಸಚಿವ ಎಂಬಿ ಪಾಟೀಲ್‌ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು

    Anil Ambani
    ವಾಣಿಜ್ಯ24 mins ago

    Anil Ambani: ಅನಿಲ್‌ ಅಂಬಾನಿಗೆ ಸೆಬಿ ಶಾಕ್‌; 5 ವರ್ಷ ಸೆಕ್ಯೂರಿಟೀಸ್‌ ಮಾರುಕಟ್ಟೆಯಿಂದ ನಿಷೇಧ, 25 ಕೋಟಿ ರೂ. ದಂಡ

    Dinesh Karthik Apologises
    ಕ್ರೀಡೆ54 mins ago

    Dinesh Karthik Apologises: ಧೋನಿ ಅಭಿಮಾನಿಗಳಿಗೆ ಕೈ ಮುಗಿದು ಕ್ಷಮೆಯಾಚಿಸಿದ ದಿನೇಶ್​ ಕಾರ್ತಿಕ್​; ಕಾರಣವೇನು?

    jindal land deal
    ಪ್ರಮುಖ ಸುದ್ದಿ60 mins ago

    Jindal Land Deal: ಅಂದು ಜಿಂದಾಲ್‌ಗೆ ಜಮೀನು ಕೊಡುವುದನ್ನು ವಿರೋಧಿಸಿದ್ದ ಕಾಂಗ್ರೆಸ್‌ ಈಗ 3677 ಎಕರೆ ಬರೆದು ಕೊಟ್ಟದ್ದೇಕೆ?

    PM Modi Ukraine Visit
    ವಿದೇಶ1 hour ago

    PM Modi Ukraine Visit: ಜಗತ್ತಿಗೆ ಶಾಂತಿ ಸಂದೇಶ ಸಾರಲು ಭಾರತ ಬದ್ಧ; ಉಕ್ರೇನ್‌ ಭೇಟಿ ಮೂಲಕ ನಿಲುವು ಸ್ಪಷ್ಟಪಡಿಸಿದ ಮೋದಿ

    Ganesh Chaturthi 2024
    ಪ್ರಮುಖ ಸುದ್ದಿ1 hour ago

    Ganesh Chaturthi 2024: ಪಿಒಪಿ ಗಣೇಶ ಮೂರ್ತಿಗೆ ನಿಷೇಧ; ಹಬ್ಬ ಆಚರಣೆಗೆ ಏನೆಲ್ಲಾ ನಿಯಮಗಳು? ಇಲ್ಲಿದೆ ವಿವರ

    Murder case
    ಕೋಲಾರ2 hours ago

    Murder Case : ಟಿಡಿಪಿ ಶಾಸಕ ಬೆಂಬಲಿಗನ ಕೊಲೆಗೆ ಸ್ಕೆಚ್; ಆಂಧ್ರ ಪೊಲೀಸರಿಂದ ಕರ್ನಾಟಕ ಪೊಲೀಸ್‌ ಅರೆಸ್ಟ್‌!

    Kannada Serials
    ಕಿರುತೆರೆ11 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Sharmitha Gowda in bikini
    ಕಿರುತೆರೆ11 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ11 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ9 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    karnataka Weather Forecast
    ಮಳೆ2 weeks ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ2 weeks ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ2 weeks ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು2 weeks ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ2 weeks ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ3 weeks ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    karnataka rain
    ಮಳೆ3 weeks ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ3 weeks ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ3 weeks ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    karnataka Rain
    ಮಳೆ3 weeks ago

    Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

    ಟ್ರೆಂಡಿಂಗ್‌