Salman Khan: ನಿಮ್ಮ ಚಿತ್ರವನ್ನು ನಾವು ಒಪ್ಪುತ್ತೇವೆ, ಆದರೆ ನಮ್ಮ ಚಿತ್ರವನ್ನು ನೀವು ಒಪ್ಪುವುದಿಲ್ಲವಲ್ಲ? ಚಿರುಗೆ ಸಲ್ಲು ಹೀಗೆ ಹೇಳಿದ್ದೇಕೆ? - Vistara News

ಸಿನಿಮಾ

Salman Khan: ನಿಮ್ಮ ಚಿತ್ರವನ್ನು ನಾವು ಒಪ್ಪುತ್ತೇವೆ, ಆದರೆ ನಮ್ಮ ಚಿತ್ರವನ್ನು ನೀವು ಒಪ್ಪುವುದಿಲ್ಲವಲ್ಲ? ಚಿರುಗೆ ಸಲ್ಲು ಹೀಗೆ ಹೇಳಿದ್ದೇಕೆ?

ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಒಟ್ಟಿಗೆ ಕಾಣಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಸಲ್ಮಾನ್ ಖಾನ್ ಕಠಿಣವಾದ ಧ್ವನಿಯಲ್ಲಿ ದಕ್ಷಿಣದಲ್ಲಿ ಬಾಲಿವುಡ್ ಚಿತ್ರಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಚಿರಂಜೀವಿಗೆ ಹೇಳಿದ್ದಾರೆ. ಈ ಮಾತನ್ನು ಹೇಳಿದ್ದು ಕೇಳಿ ಚಿರಂಜೀವಿ ಅವರು ಜೋರಾಗಿ ನಕ್ಕಿದ್ದಾರೆ. ಈ ಸಂವಾದದ ತುಣುಕು ರೆಡ್ಡಿಟ್‌ನಲ್ಲಿ ವೈರಲ್ ಆಗಿದೆ.

VISTARANEWS.COM


on

Salman Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಿಮ್ಮ ಚಿತ್ರವನ್ನು ಬಾಲಿವುಡ್‌ನವರು (bollywood) ಒಪ್ಪಿಕೊಳ್ಳುತ್ತಾರೆ. ಆದರೆ ನಮ್ಮ ಚಿತ್ರವನ್ನು ದಕ್ಷಿಣದವರು ಒಪ್ಪಿಕೊಳ್ಳುವುದಿಲ್ಲ ಎಂದು ಬಾಲಿವುಡ್‌ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರು ಮೆಘಾಸ್ಟಾರ್‌ ಚಿರಂಜೀವಿ (Chiranjeevi) ಅವರಿಗೆ ಹೇಳಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (viral news) ಆಗಿದೆ. ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬರುತ್ತಿವೆ.

ಸಂವಾದ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ ಒಟ್ಟಿಗೆ ಕಾಣಿಸಿಕೊಂಡರು. ಈ ಸಂದರ್ಭದಲ್ಲಿ ಸಲ್ಮಾನ್ ಖಾನ್ ಈ ಮಾತನ್ನು ಹೇಳಿದ್ದು ಕೇಳಿ ಚಿರಂಜೀವಿ ಅವರು ಜೋರಾಗಿ ನಕ್ಕರು. ಕಠಿಣವಾದ ಧ್ವನಿಯಲ್ಲಿ ಸಲ್ಮಾನ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ದಕ್ಷಿಣದಲ್ಲಿ ಬಾಲಿವುಡ್ ಚಿತ್ರಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಚಿರಂಜೀವಿಗೆ ಹೇಳಿದ್ದಾರೆ.

ರೆಡಿಟ್‌ನಲ್ಲಿ ವೈರಲ್ ಆಗಿರುವ ಕ್ಲಿಪ್‌ನಲ್ಲಿ ಸಲ್ಮಾನ್ ಖಾನ್ “”ಚಿರುಗಾರು, ನಿಮ್ಮ ಚಿತ್ರಗಳನ್ನು ಉತ್ತರ ಭಾರತದಲ್ಲಿ ಸ್ವೀಕರಿಸಲಾಗಿದೆ. ಆದರೆ ಅಲ್ಲಿಯ ಜನ ನಮ್ಮ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲʼʼ ಎಂದು ಚಿರಂಜೀವಿ ಹೇಳುತ್ತಲೇ ಜೋರಾಗಿ ನಗಲು ಪ್ರಾರಂಭಿಸಿದರು.

ʼರೆಡ್ಡಿಟರ್‌ʼಗಳು ಸ್ಟಾರ್ ಗಳ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಒಬ್ಬ, ಇದು ತಪ್ಪಾದ ಹೇಳಿಕೆಯಾಗಿದೆ. ಹಿಂದಿ ಸಿನಿಮಾಗಳ ಪ್ರಾದೇಶಿಕ ಡಬ್ಬಿಂಗ್ ಗೆ ದಕ್ಷಿಣದಲ್ಲಿ ಅಷ್ಟಾಗಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿಲ್ಲ. ಆದರೆ ಹಿಂದಿ ಚಲನಚಿತ್ರಗಳ ಹಿಂದಿ ಆವೃತ್ತಿಗಳು ದಕ್ಷಿಣದಲ್ಲಿ ಉತ್ತಮ ವ್ಯಾಪಾರವನ್ನು ಮಾಡುತ್ತವೆ ಎಂದು ಹೇಳಿದ್ದಾರೆ.

ಮತ್ತೊಬ್ಬರು ಬಾಲಿವುಡ್ ಚಿತ್ರಗಳನ್ನು ಉತ್ತರದಲ್ಲಿ ಸ್ವೀಕರಿಸಲಾಗುತ್ತಿದೆಯಂತೆ ಎಂದು ಹೇಳಿದ್ದಾರೆ. ಅವರ ಚಿತ್ರಗಳು ಇಲ್ಲಿ ಸಾರ್ವಕಾಲಿಕ ಉತ್ತಮ ವ್ಯಾಪಾರವನ್ನು ಮಾಡುತ್ತವೆ ಎಂಬುದು ತಪ್ಪು ಹೇಳಿಕೆಯಾಗಿದೆ. ಉತ್ತರ ಭಾರತದಲ್ಲಿ ಸೌತ್ ಚಿತ್ರಗಳು ಹಿಟ್ ಅಂಡ್ ಮಿಸ್ ಆಗಿವೆ. ಅವು ಫ್ಲಾಪ್ ಆಗಿರಲೂಬಹುದು. ಅಪರೂಪಕ್ಕೆ ಹಿಟ್ ಆಗುತ್ತೆ. ಹಿಟ್ ಆಗಿದ್ದು ಕೂಡ ಸಾಮಾನ್ಯವಾಗಿ ಪ್ಯಾನ್ ಇಂಡಿಯಾ ಚಿತ್ರಗಳು ಎಂದಿದ್ದಾರೆ. ಇನ್ನೊಬ್ಬರು ಶಾರುಖ್ ಚಲನಚಿತ್ರಗಳನ್ನು ದಕ್ಷಿಣದಲ್ಲಿ ಚೆನ್ನಾಗಿ ಸ್ವೀಕರಿಸಲಾಗಿದೆ. ಕೇರಳದ ಜನರು ವಿಶೇಷವಾಗಿ ಅವರನ್ನು ಮತ್ತು ಅವರ ಪಾತ್ರಗಳನ್ನು ತುಂಬಾ ಇಷ್ಟಪಡುತ್ತಾರೆ ಎಂದಿದ್ದಾರೆ.


ಇತ್ತೀಚೆಗೆ ಗಮನ ಸೆಳೆದಿರುವ ಪ್ರಭಾಸ್ ಕುರಿತ ಅರ್ಷದ್ ವಾರ್ಸಿ ಅವರ ಕಾಮೆಂಟ್‌ಗಳ ನಡುವೆ ಸಲ್ಮಾನ್ ಅವರ ಈ ವಿಡಿಯೋ ಮರುಕಳಿಸಿದೆ. ಕಲ್ಕಿ 2898 ಎಡಿಯಲ್ಲಿ ಪ್ರಭಾಸ್ ‘ಜೋಕರ್’ನಂತೆ ಕಾಣುತ್ತಿದ್ದರು ಎಂದು ಅರ್ಷದ್ ವಾರ್ಸಿ ಹೇಳಿದ್ದರು. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರದಲ್ಲಿ ಅಶ್ವತ್ಥಾಮ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಅವರನ್ನು ನೋಡಲು ಇಷ್ಟವಾದರೂ ಪ್ರಭಾಸ್ ಅವರು ಪ್ರಭಾವಿತರಾಗಲಿಲ್ಲ ಎಂದು ಅರ್ಷದ್ ಹೇಳಿದ್ದರು.

ಇದನ್ನೂ ಓದಿ: Rishab Shetty : ಕಂಬಳ ಬಳಿಕ ಕಾಂತಾರ- 2ನಲ್ಲಿ ಕಳರಿ ಪಯಟ್ಟು ಪ್ರದರ್ಶನಕ್ಕೆ ಸಜ್ಜಾದ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ

ಅರ್ಷದ್ ಅವರ ಈ ಹೇಳಿಕೆಯು ಪ್ರಭಾಸ್ ಅಭಿಮಾನಿಗಳನ್ನು ಕೆರಳಿಸಿತ್ತು. ಸಾಕಷ್ಟು ಮಂದಿ ಇದಕ್ಕೆ ಕಾಮೆಂಟ್ ಮಾಡಿ ಅರ್ಷದ್ ಅವರನ್ನು ದೂಷಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kannada New Movie: ಪ್ರಜ್ವಲ್ ದೇವರಾಜ್-ಅದಿತಿ‌ ಪ್ರಭುದೇವ ಅಭಿನಯದ ʼಮಾಫಿಯಾʼ ಚಿತ್ರ ಸದ್ಯದಲ್ಲೇ ತೆರೆಗೆ

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಎಚ್. ನಿರ್ದೇಶಿಸಿರುವ ಬಹು ನಿರೀಕ್ಷಿತ “ಮಾಫಿಯಾ” ಚಿತ್ರ (Kannada New Movie) ಸದ್ಯದಲ್ಲೇ ಬಿಡುಗಡೆಯಾಗಲಿದೆ. ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆದಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಎಚ್. ನಿರ್ದೇಶಿಸಿರುವ ಬಹು ನಿರೀಕ್ಷಿತ “ಮಾಫಿಯಾ” ಚಿತ್ರವನ್ನು (Kannada New Movie) ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ ಅಥವಾ ಮ್ಯೂಟ್ ಹೇಳದೆ ಯು\ಎ ಪ್ರಮಾಣಪತ್ರ ನೀಡಿದೆ. ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ “ಮಾಫಿಯಾ” ಚಿತ್ರದ ಬಿಡುಗಡೆ ದಿನಾಂಕವನ್ನು ಸದ್ಯದಲ್ಲೇ ಘೋಷಿಸುವುದಾಗಿ ನಿರ್ಮಾಪಕ ಕುಮಾರ್ ತಿಳಿಸಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಬಿಡುಗಡೆಗೆ ಪ್ರಜ್ವಲ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ದೇವರಾಜ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.

ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗೋಲ್ಡನ್‌ ಟೈಮ್‌; ಚಿನ್ನದ ದರ ಇಂದು ಕೂಡ ಇಳಿಮುಖ

ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಾಗೂ ಗಗನ್ ಭಡೇರಿಯಾ ಸಂಗೀತ ನೀಡಿದ್ದಾರೆ. ಎಸ್. ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

Continue Reading

ಬೆಂಗಳೂರು

Kannada New Movie: ಐವರು ನಿರ್ದೇಶಕರ 5 ಕಥೆಗಳ ʼಬಿಟಿಎಸ್ʼ ಚಿತ್ರದ ಟ್ರೇಲರ್ ರಿಲೀಸ್‌; ಹೊಸ ಪ್ರಯತ್ನಕ್ಕೆ ರಾಜ್ ಬಿ ಶೆಟ್ಟಿ ಸಾಥ್‌

ಐವರು ನಿರ್ದೇಶಕರು, ಐದು ಕಥೆಗಳನ್ನಿಟ್ಟುಕೊಂಡು “ಬಿಟಿಎಸ್” ಎಂಬ ಸಿನಿಮಾ (Kannada New Movie) ಮಾಡಿದ್ದಾರೆ. ಆಸಕ್ತಿಕರ ವಿಷಯಗಳನ್ನಿಟ್ಟುಕೊಂಡು ಜನರ ಮನಸ್ಸು ಗೆಲ್ಲಲ್ಲು ಮುಂದಾಗಿದ್ದಾರೆ‌. ಯುವ ಪ್ರತಿಭಾನ್ವಿತರ ತಂಡಕ್ಕೆ ನಟ ರಾಜ್ ಬಿ ಶೆಟ್ಟಿ ಸಾಥ್ ನೀಡಿ, ಪ್ರಯತ್ನ ಯಶಸ್ವಿ ಆಗಲಿ ಎಂದು ಹಾರೈಸಿದ್ದಾರೆ. ಟ್ರೇಲರ್ ಅನ್ನು “ಭೀಮ” ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ಬಿಡುಗಡೆ ಮಾಡಿದ್ದಾರೆ. ಬಿಟಿಎಸ್ (ಬಿಹೈಂಡ್ ದಿ ಸ್ಕ್ರೀನ್) ಚಿತ್ರವನ್ನು ಪ್ರಜ್ಚಲ್ ರಾಜು, ಸಾಯಿ ಶ್ರೀನಿಧಿ, ಕುಲದೀಪ್ ಕಾರಿಯಪ್ಪ, ರಾಜೇಶ್ ಎನ್ ಶಂಕದ್, ಅಪೂರ್ವ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಒಂದು ಚಿತ್ರವನ್ನು ಇಬ್ಬರು ನಿರ್ದೇಶಕರು ಸೇರಿ ನಿರ್ದೇಶಿಸಿರುವ ಉದಾಹರಣೆ ಸಾಕಷ್ಟಿದೆ. ಆದರೆ ಐದು ಜನ ನಿರ್ದೇಶಕರು, ಐದು ಕಥೆಗಳನ್ನಿಟ್ಟುಕೊಂಡು “ಬಿಟಿಎಸ್” ಎಂಬ ಸಿನಿಮಾ (Kannada New Movie) ಮಾಡಿದ್ದಾರೆ. ಆಸಕ್ತಿಕರ ವಿಷಯಗಳನ್ನಿಟ್ಟುಕೊಂಡು ಜನರ ಮನಸ್ಸು ಗೆಲ್ಲಲು ಮುಂದಾಗಿದ್ದಾರೆ‌. ಯುವ ಪ್ರತಿಭಾನ್ವಿತರ ತಂಡಕ್ಕೆ ನಟ ರಾಜ್ ಬಿ ಶೆಟ್ಟಿ ಸಾಥ್ ನೀಡಿ, ಪ್ರಯತ್ನ ಯಶಸ್ವಿ ಆಗಲಿ ಎಂದು ಹಾರೈಸಿದ್ದಾರೆ. ಟ್ರೇಲರ್ ಅನ್ನು “ಭೀಮ” ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ಬಿಡುಗಡೆ ಮಾಡಿದ್ದಾರೆ.

ಬಿಟಿಎಸ್ (ಬಿಹೈಂಡ್ ದಿ ಸ್ಕ್ರೀನ್) ಚಿತ್ರವನ್ನು ಪ್ರಜ್ಚಲ್ ರಾಜು, ಸಾಯಿ ಶ್ರೀನಿಧಿ, ಕುಲದೀಪ್ ಕಾರಿಯಪ್ಪ, ರಾಜೇಶ್ ಎನ್ ಶಂಕದ್, ಅಪೂರ್ವ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ.

ತೆರೆಯ ಹಿಂದಿನ ವಿಷಯಗಳನ್ನು ಐವರು ನಿರ್ದೇಶಕರು ತೆರೆಯ ಮೇಲೆ ತರುವ ಮೂಲಕ ಹೊಸ ಪ್ರಯತ್ನ ಮಾಡಿದ್ದಾರೆ. ಚಿತ್ರದ ಟ್ರೇಲರ್ ಬಿಡುಗಡೆ ಚೆನ್ನಾಗಿದೆ. ಚಿತ್ರತಂಡಕ್ಕೆ ಶುಭವಾಗಲಿ ಎಂದು ಭೀಮ ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ತಂಡಕ್ಕೆ ಒಳ್ಳೆಯದಾಗಲಿ ಎಂದರು.

ಈ ವೇಳೆ ನಿರ್ದೇಶಕರಲ್ಲಿ ಒಬ್ಬರಾದ ಕುಲದೀಪ್ ಕಾರಿಯಪ್ಪ ಮಾತನಾಡಿ, ಜೀವನದಲ್ಲಿ ಸಾಧನೆ ಮಾಡಲು ಮುಂದಾದಾಗ ನಮ್ಮನ್ನು ಯಾರು ಬೆಂಬಲಿಸುವುದಿಲ್ಲ ಎಂದು ಸಮಾಜವನ್ನು ಬಯ್ಯುವುದಕ್ಕೆ ಮುಂದಾಗುತ್ತೇವೆ. ಸಾಧನೆ ಮಾಡಲು ಮುಂದಾದಾಗ ಏನೆಲ್ಲಾ ಸಮಸ್ಯೆ ಎದುರಾಗುತ್ತದೆ ಎನ್ನುವುದು ಕಥೆಯ ತಿರುಳು. ನನ್ನ ಕಥೆಯ ಹೆಸರು “ಹೀರೋ” ಅಪರೂಪದ ವಿಷಯಗಳನ್ನು ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಲಾಗಿದೆ ಎಂದು ವಿವರಿಸಿದರು.

ಮತ್ತೊಬ್ಬ ನಿರ್ದೇಶಕ ಸಾಯಿ ಶ್ರೀನಿಧಿ ಮಾತನಾಡಿ, ಸಾಲ ಮಾಡಿಯಾದರೂ ಚಿತ್ರ ಮಾಡಬೇಕು ಎನ್ನುವ ಆಸೆ ನನಗೆ. ನನ್ನ ಆಸೆಗೆ ನಿರ್ಮಾಪಕ ಮುರುಳಿ ಕೃಷ್ಣ ನೆರವಾದರು. ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ‌. ಕಾಫಿ, ಸಿಗರೆಟ್ ಮತ್ತು ಲೈನ್ ಎನ್ನುವುದು ನನ್ನ ಕಥೆಯ ಭಾಗ ಎಂದರು.

ಪ್ರಜ್ವಲ್ ರಾಜ್, “ಬಾನಿಗೊಂದು ಎಲ್ಲೆ ಎಲ್ಲಿದೆ” ಎನ್ನುವುದು ನಾನು ನಿರ್ದೇಶನ ಮಾಡಿರುವ ಕಥೆಯ ಭಾಗ ಎಂದು ಹೇಳಿಕೊಂಡರು.

ಇದನ್ನೂ ಓದಿ: Ganesh Chaturthi 2024: ಪಿಒಪಿ ಗಣೇಶ ಮೂರ್ತಿಗೆ ನಿಷೇಧ; ಹಬ್ಬ ಆಚರಣೆಗೆ ಏನೆಲ್ಲಾ ನಿಯಮಗಳು? ಇಲ್ಲಿದೆ ವಿವರ

ನಿರ್ದೇಶಕಿ ಅಪೂರ್ವ ಭಾರದ್ವಾಜ್ ಮಾತನಾಡಿ, ಇಷ್ಟು ವರ್ಷ ನಟಿಯಾಗಿ ಕಾಣಿಸಿಕೊಂಡಿದ್ದೆ. ಈಗ ನಿರ್ದೇಶಕಿಯಾಗಿದ್ದೇನೆ. ಐದು ನಿರ್ದೇಶಕರು ಐದು ಕಥೆ ಹೇಳುವುದು ಎನ್ನುವ ವಿಷಯ ಆಸಕ್ತಿಕರವಾದದ್ದು, ಹೀಗಾಗಿ ಒಂದು ಕಥೆಯನ್ನು ನಿರ್ದೇಶನ ಮಾಡಲು ಒಪ್ಪಿಕೊಂಡೆ. ಮಹದೇವ ಪ್ರಸಾದ್ ಮತ್ತು ಶ್ರೀಪ್ರಿಯಾ ನನ್ನ ಕಥೆಯಲ್ಲಿ ಕಾಣಿಸಿಕೊಂಡಿದ್ದಾರೆ.‌‌ ಮೇಕಪ್ ಕುರಿತ ಕಥೆ. ಮೇಕಪ್ ಮ್ಯಾನ್ ಮತ್ತು ಟಚ್ಚಪ್ ಬಾಯ್‌ಗೆ ಚಿತ್ರ ಅರ್ಪಿಸುವೆ ಎಂದು ಮಾಹಿತಿ ಹಂಚಿಕೊಂಡರು.

ಕಥೆ ಹೇಳುವಾಗ ಬಹಳಷ್ಟು ನಿರ್ದೇಶಕರು ನಿರ್ಮಾಪಕರ ಮನಸ್ಸು ಗೆದ್ದು ಬಿಡ್ತಾರೆ. ಆದರೆ ಅದು ಸಿನಿಮಾದಲ್ಲಿ ಯಶಸ್ಸು ಗಳಿಸಲು ವಿಫಲರಾಗುತ್ತಾರೆ. ಅದ್ಯಾಕೋ ಗೊತ್ತಿಲ್ಲ. ಕನ್ನಡದಲ್ಲಿ ಬಹಳಷ್ಟು ಕಥೆಗಾರರು ಇದ್ದಾರೆ. ಆದರೆ ಯಶಸ್ಸು ಮಾತ್ರ ಕಡಿಮೆ ಎಂದರು ನಟ ಮೂಗು ಸುರೇಶ್.

ನಿರ್ಮಾಪಕ ಮುರುಳಿ ಕೃಷ್ಣ ಮಾತನಾಡಿ, ಐದು ಜನ ನಿರ್ದೇಶಕರ ಐದು ಕಥೆಗಳು ಸೇರಿ “ಬಿಟಿಎಸ್” ಚಿತ್ರವಾಗಿದೆ. ಐದು ಮಂದಿ‌ ನಿರ್ದೇಶಕರು ಅವರೇ ಚಿತ್ರದ ಆಧಾರ ಸ್ತಂಭ. ಚಿತ್ರ ಎಲ್ಲರಿಗೂ ಇಷ್ಟವಾಗಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರದಲ್ಲಿ ನಟಿಸಿರುವ ವಿಜಯ್ ಕೃಷ್ಣ, ಮಹದೇವ ಪ್ರಸಾದ್, ಶ್ರೀಪ್ರಿಯ, ಕೌಶಿಕ್, ಚಂದನ, ವಿಜಯ್ ಕೃಷ್ಣ ಸೇರಿದಂತೆ ಮತ್ತಿತರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗೋಲ್ಡನ್‌ ಟೈಮ್‌; ಚಿನ್ನದ ದರ ಇಂದು ಕೂಡ ಇಳಿಮುಖ

“ಬಿಟಿಎಸ್” ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ನಿರ್ದೇಶಕರಾದ ರಾಮೇನಹಳ್ಳಿ ಜಗನ್ನಾಥ್, ವಿನಯ್ ಪ್ರೀತಂ, ಗುರುರಾಜ ಕುಲಕರ್ಣಿ, ಶ್ರೀಧರ್ ಶಿಕಾರಿಪುರ, ಜೈಶಂಕರ್, ದೇವನೂರು ಚಂದ್ರು, ಚೇತನ್ ಕೇಶವ್, ಇಸ್ಲಾವುದ್ದೀನ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Continue Reading

ಬೆಂಗಳೂರು

Kannada New Movie: ಭೀಮ, ಕೃಷ್ಣಂ ಪ್ರಣಯ ಸಖಿ ಹವಾ; ʼರಾನಿʼ ಚಿತ್ರ ಬಿಡುಗಡೆ ಮುಂದಕ್ಕೆ!

ಆರಂಭದಿಂದಲೂ ಸದ್ದು ಮಾಡುತ್ತಿರುವ ಕಿರಣ್‍ ರಾಜ್‍ ಅಭಿನಯದ ‘ರಾನಿʼ ಚಿತ್ರ (Kannada New Movie) ಆಗಸ್ಟ್ 30ರ ಬದಲು ಸೆಪ್ಟೆಂಬರ್ 12ರಂದು ತೆರೆಗೆ ಬರಲಿದೆ. ಪ್ರಸ್ತುತ ಬಿಡುಗಡೆಯಾಗಿರುವ ಕನ್ನಡ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿದೆ‌. ಹಾಗಾಗಿ ಚಿತ್ರಮಂದಿರಗಳ ಸಮಸ್ಯೆ ಎದುರಾಗಬಾರದು ಎಂದು ಈ ನಿರ್ಧಾರ ತೆಗದುಕೊಂಡಿರುವುದಾಗಿ ಚಿತ್ರತಂಡ ತಿಳಿಸಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಕಿರಣ್‍ ರಾಜ್‍ ಅಭಿನಯದ ‘ರಾನಿʼ ಚಿತ್ರ (Kannada New Movie) ಆರಂಭದಿಂದಲೂ ಸದ್ದು ಮಾಡುತ್ತಿದೆ. ಮೊದಲು ಹೇಳಿದ ಹಾಗೆ ಆಗಸ್ಟ್ 30ರಂದು ಬಿಡುಗಡೆ ಆಗಬೇಕಿತ್ತು. ಆದರೆ ಈಗ ‘ರಾನಿ’ ಆಗಸ್ಟ್ 30ರ ಬದಲು ಸೆಪ್ಟೆಂಬರ್ 12ರಂದು ತೆರೆಗೆ ಬರಲಿದೆ. ಪ್ರಸ್ತುತ ಬಿಡುಗಡೆಯಾಗಿರುವ ಕನ್ನಡ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿದೆ‌. ಹಾಗಾಗಿ ಚಿತ್ರಮಂದಿರಗಳ ಸಮಸ್ಯೆ ಎದುರಾಗಬಾರದು ಎಂದು ಈ ನಿರ್ಧಾರ ತೆಗದುಕೊಂಡಿರುವುದಾಗಿ ಚಿತ್ರತಂಡ ತಿಳಿಸಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಗುರುತೇಜ್ ಶೆಟ್ಟಿ, ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ಕೃಷ್ಣಂ ಪ್ರಣಯ ಸಖಿ’ ಮತ್ತು ‘ಭೀಮʼ ಚಿತ್ರತಂಡಗಳಿಗೆ ಧನ್ಯವಾದ ಹೇಳಿದರು. ಆಗಸ್ಟ್ 20ರಂದು ನಮ್ಮ ಚಿತ್ರದ ಟ್ರೇಲರ್ ಬರಬೇಕಿತ್ತು. ಚಿತ್ರ ಆಗಸ್ಟ್ 30ರಂದು ಬಿಡುಗಡೆ ಆಗಬೇಕಿತ್ತು. ಭೀಮ ಹಾಗೂ ಕೃಷ್ಣಂ ಪ್ರಣಯ ಸಖಿ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿರುವುದರಿಂದ, ನಮಗೆ ಚಿತ್ರಮಂದಿರಗಳ ಸಮಸ್ಯೆ ಆಗಬಹುದು ಎಂದು ವಿತರಕರು ಹೇಳಿದರು. ಹೀಗಾಗಿ ಮುಂದೆ ಹೋಗುತ್ತಿದ್ದೇವೆ. ಮುಂದೆ ಹೋಗುತ್ತಿರುವುದಕ್ಕೆ ಬೇಸರವಿಲ್ಲ. ಖುಷಿಯದೆ. ಏಕೆಂದರೆ, ಜನ ಈಗ ಚಿತ್ರಮಂದಿರದತ್ತ ಬರುತ್ತಿದ್ದಾರೆ. ಸೆಪ್ಟೆಂಬರ್ 12ರಂದು ಬಿಡುಗಡೆ ಮಾಡುತ್ತಿದ್ದೇವೆ. ನಮ್ಮದು ದೊಡ್ಡ ಬಜೆಟ್‍ನ ಸಿನಿಮಾ. ಹಾಗಾಗಿ ಸ್ವಲ್ಪ ತಡೆದು ದೊಡ್ಡಮಟ್ಟದಲ್ಲೇ ರಿಲೀಸ್ ಮಾಡಬೇಕು. ಹಾಗಾಗಿ ಬಿಡುಗಡೆ ದಿನಾಂಕ ಮುಂದೆ ಹೋಗಿದೆ ಎಂದು ಹೇಳಿದರು.

ಈ ಚಿತ್ರ ನಿರೀಕ್ಷೆಗಳನ್ನು ಹುಸಿಗೊಳಿಸುವುದಿಲ್ಲ. ನಿಮ್ಮ ನಿರೀಕ್ಷೆಗೆ ತಕ್ಕ ಹಾಗೆ ಚಿತ್ರ ಇದೆ. ಚಿತ್ರ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ ಅಷ್ಟೇ. ಇಷ್ಟು ದಿನಗಳಿಂದ ನೀವು ನನ್ನ ಮೇಲಿಟ್ಟಿರುವ ಪ್ರೀತಿಗೆ ಚಿರಋಣಿ, ಆ ಪ್ರೀತಿ ಈ ಚಿತ್ರದಿಂದ ಇನ್ನಷ್ಟು ಜಾಸ್ತಿಯಾಗುತ್ತದೆ. ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಪಟ್ಟಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ. ಎಂಟು ವರ್ಷಗಳ ಅಂತರದಲ್ಲಿ ಕಥೆ ನಡೆಯುತ್ತದೆ. ಎರಡು ಗೆಟಪ್‍ಗಳಲ್ಲಿ ಕಾಣಿಸಿಕೊಂಡಿದ್ದೇನೆ ಎನ್ನುವ ನಾಯಕ ಕಿರಣ್ ರಾಜ್, ಈ ಚಿತ್ರ ನನ್ನ ಪಾಲಿಗೆ ಬಹಳ ಮಹತ್ವದ್ದು. ಈ ಗೆಲುವು ನನಗೆ ಬಹಳ ಮುಖ್ಯ. ಏನೇ ಕನಸು ಮತ್ತು ಗುರಿ ಇದ್ದರೂ, ಒಂದು ಶಕ್ತಿ ಬಹಳ ಮುಖ್ಯವಾಗುತ್ತದೆ. ಆ ಶಕ್ತಿ ಬರಬೇಕು ಎಂದರೆ ನಮ್ಮ ಮೇಲೆ ನಂಬಿಕೆ ಇರಬೇಕು. ಆ ನಂಬಿಕೆ ಬರಬೇಕು ಎಂದರೆ ಈ ಚಿತ್ರ ಗೆಲ್ಲಲೇಬೇಕು. ಇಲ್ಲವಾದರೆ, ನಾನು ಪುನಃ ಮೊದಲಿನಿಂದಲೂ ಶುರು ಮಾಡಬೇಕು ಎಂದು ತಿಳಿಸಿದರು.

ಈ ಚಿತ್ರಕ್ಕೆ ನಿರ್ದೇಶಕ ಗುರು ತೇಜ್ ಶೆಟ್ಟಿ ಸುಮ್ಮನೆ ಸ್ಕ್ರೀನ್ ಪ್ಲೇ ಮಾಡಿಲ್ಲ. ಒಂದಿಷ್ಟು‌ ಊರುಗಳಲ್ಲಿ ಸರ್ವೆ ಮಾಡಿ ಅಲ್ಲಿನ ಜನ ನನ್ನನ್ನು ಯಾವರೀತಿ ಪಾತ್ರದಲ್ಲಿ ನೋಡಿದರೆ ಇಷ್ಟ ಪಡುತ್ತಾರೆ ಎಂದು ತಿಳಿದುಕೊಂಡು ಸರ್ವೆ ಮಾಡಿದ್ದಾರೆ ಎಂದು ಸಹ ಕಿರಣ್ ರಾಜ್ ತಿಳಿಸಿದರು.

ಇದನ್ನೂ ಓದಿ: Narendra Modi: ಉಕ್ರೇನ್‌ಗೆ ಬಂದಿಳಿದ ಪ್ರಧಾನಿ ಮೋದಿ; ರಷ್ಯಾ ಜತೆಗಿನ ಸಂಘರ್ಷದ ಚರ್ಚೆ ಸಾಧ್ಯತೆ

ʼರಾನಿʼ ಚಿತ್ರದಲ್ಲಿ ಕಿರಣ್ ರಾಜ್ ಜತೆಗೆ ಸಮೀಕ್ಷಾ, ಅಪೂರ್ವ, ರಾಧ್ಯ, ರವಿಶಂಕರ್, ಮೈಕೋ ನಾಗರಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಾಘವೇಂದ್ರ ಬಿ. ಕೋಲಾರ ಈ ಚಿತ್ರದ ಮೂಲಕ ಛಾಯಾಗ್ರಾಹಕರಾಗಿದ್ದಾರೆ. ಈ ಚಿತ್ರವನ್ನು ಸ್ಟಾರ್ ಕ್ರಿಯೇಷನ್ಸ್ ಲಾಂಛನದಲ್ಲಿ ಚಂದ್ರಕಾಂತ್ ಪೂಜಾರಿ ಮತ್ತು ಉಮೇಶ್ ಹೆಗಡೆ ನಿರ್ಮಿಸಿದ್ದಾರೆ.

Continue Reading

ಸಿನಿಮಾ

Prabhas: ಶಾರುಖ್, ಸಲ್ಮಾನ್ ಹಿಂದಿಕ್ಕಿ ‘ಅತ್ಯಂತ ಜನಪ್ರಿಯ ಪುರುಷ ತಾರೆ’ಯಾಗಿ ಹೊರಹೊಮ್ಮಿದ ಪ್ರಭಾಸ್!

ನಾಗ್ ಅಶ್ವಿನ್ ನಿರ್ದೇಶನದ (Prabhas) ಚಿತ್ರದಲ್ಲಿ ನಟ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ಅಭಿನಯಿಸಿದ್ದರು. ಪ್ರಭಾಸ್ ಅವರ ಪಾತ್ರದ ಬಗ್ಗೆ ನಟ ಅರ್ಷದ್ ವಾರ್ಸಿ ಅವರ ನೆಗೆಟಿವ್ ಕಮೆಂಟ್‌ಗಳ ಬೆನ್ನಲ್ಲೇ ಈ ನಟನಿಗೆ ಭಾರತದ ಅತ್ಯಂತ ಜನಪ್ರಿಯ ಪುರುಷ ಚಲನಚಿತ್ರ ತಾರೆ ಎಂಬ ಪಟ್ಟ ಸಿಕ್ಕಿದೆ.

VISTARANEWS.COM


on

By

Prabhas
Koo

ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನದ ಬಳಿಕ ಕಲ್ಕಿ 2898ಎಡಿ (Kalki 2898 AD) ಚಿತ್ರದ ನಾಯಕ ಪ್ರಭಾಸ್ (Prabhas) ಭಾರತದ ಅತ್ಯಂತ ಜನಪ್ರಿಯ ಪುರುಷ ಚಲನಚಿತ್ರ ತಾರೆಯಾಗಿ (Most Popular Male Film Star) ಹೊರಹೊಮ್ಮಿದ್ದಾರೆ. ಕಲ್ಕಿ 2898 ಎಡಿ ಜೂನ್ ಅಂತ್ಯದ ವೇಳೆಗೆ ಬಿಡುಗಡೆಯಾಗಿ ಅಪಾರ ಮೆಚ್ಚುಗೆಯನ್ನು ಗಳಿಸಿತ್ತು.

ನಾಗ್ ಅಶ್ವಿನ್ ನಿರ್ದೇಶನದ ಚಿತ್ರದಲ್ಲಿ ನಟ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ಅಭಿನಯಿಸಿದ್ದರು. ಪ್ರಭಾಸ್ ಅವರ ಪಾತ್ರದ ಬಗ್ಗೆ ಅರ್ಷದ್ ವಾರ್ಸಿ ಅವರ ನೆಗೆಟಿವ್ ಕಾಮೆಂಟ್‌ಗಳ ಬೆನ್ನಲ್ಲೇ ಪ್ರಭಾಸ್ ಅವರಿಗೆ ಭಾರತದ ಅತ್ಯಂತ ಜನಪ್ರಿಯ ಪುರುಷ ಚಲನಚಿತ್ರ ತಾರೆ ಎಂಬ ಪಟ್ಟ ಸಿಕ್ಕಿದೆ.

ಜುಲೈ ತಿಂಗಳ ವರದಿಯ ಪ್ರಕಾರ ಭಾರತದ ಅತ್ಯಂತ ಜನಪ್ರಿಯ ಪುರುಷ ಚಲನಚಿತ್ರ ತಾರೆಯಾಗಿ ಮೊದಲ ಸ್ಥಾನದಲ್ಲಿ ಪ್ರಭಾಸ್ ಗುರುತಿಸಿಕೊಂಡಿದ್ದಾರೆ. ಬಳಿಕ ಕ್ರಮವಾಗಿ ವಿಜಯ್, ಶಾರುಖ್ ಖಾನ್, ಮಹೇಶ್ ಬಾಬು, ಜೂನಿಯರ್ ಎನ್‌ಟಿಆರ್, ಅಕ್ಷಯ್ ಕುಮಾರ್, ಅಲ್ಲು ಅರ್ಜುನ್, ಸಲ್ಮಾನ್ ಖಾನ್, ರಾಮ್ ಚರಣ್, ಅಜಿತ್ ಕುಮಾರ್ ಸ್ಥಾನ ಪಡೆದಿದ್ದಾರೆ.

ಕಲ್ಕಿ 2898 ಎಡಿ ಚಿತ್ರದ ಹಿಂದಿ ಆವೃತ್ತಿಯು ಆರಂಭಿಕ ವಾರಾಂತ್ಯದಲ್ಲಿ 112.15 ಕೋಟಿ ರೂ. ಸಂಗ್ರಹಿಸಿದೆ. ಹಿಂದಿ ಭಾಷೆಯಲ್ಲೇ 294.25 ಕೋಟಿ ರೂ. ಗಳಿಸಿದೆ. ಇತ್ತೀಚೆಗೆ ನೆಟ್‌ಫ್ಲಿಕ್ಸ್ ಮತ್ತು ಪ್ರೈಮ್ ವಿಡಿಯೋದಲ್ಲಿ ಬಹು ಭಾಷೆಗಳಲ್ಲಿ ಬಿಡುಗಡೆಯಾದ ಅನಂತರ ಚಿತ್ರವು ಮತ್ತೆ ಎಲ್ಲರ ಗಮನ ಸೆಳೆದಿದೆ. ಆದರೆ ಹೆಚ್ಚು ಗಮನಾರ್ಹವಾಗಿ ಪ್ರಭಾಸ್ ಪಾತ್ರದ ಬಗ್ಗೆ ಅರ್ಷದ್ ವಾರ್ಸಿ ಅವರ ಟೀಕೆ ವೈರಲ್ ಆದ ಬಳಿಕ ಚಿತ್ರದ ಬಗ್ಗೆ ಮತ್ತೆ ಚರ್ಚೆ ಪ್ರಾರಂಭವಾಗಿದೆ.

ಕಲ್ಕಿ 2898 ಎಡಿಯಲ್ಲಿ ಪ್ರಭಾಸ್ ‘ಜೋಕರ್’ನಂತೆ ಕಾಣುತ್ತಿದ್ದರು ಎಂದು ಇತ್ತೀಚೆಗೆ ಅರ್ಷದ್ ವಾರ್ಸಿ ಹೇಳಿದ್ದಾರೆ. ನಟನಿಗೆ ತಾನು ವೀಕ್ಷಿಸಿದ ಮತ್ತು ಇಷ್ಟವಾಗದ ಇತ್ತೀಚಿನ ಚಲನಚಿತ್ರವನ್ನು ಹೆಸರಿಸಲು ಕೇಳಲಾಯಿತು. ಕಲ್ಕಿ ಒಂದು ಗೋಲ್ಮಾಲ್ ನಕ್ಷತ್ರ ಎಂಬುದಾಗಿ ಅವರು ಕಾಮೆಂಟ್ ಮಾಡಿದ್ದಾರೆ. ಕಲ್ಕಿ 2898ಎಡಿ ನಾಗ್ ಅಶ್ವಿನ್ ನಿರ್ದೇಶನದ ಅಶ್ವತ್ಥಾಮ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಅವರ ಅಭಿನಯ ನನಗೆ ಇಷ್ಟವಾದರೂ ಪ್ರಭಾಸ್ ಅವರು ಪ್ರಭಾವಿತರಾಗಿ ಕಾಣಲಿಲ್ಲ ಎಂದು ಅರ್ಷದ್ ಹೇಳಿದ್ದಾರೆ.


ಪ್ರಭಾಸ್ ಅವರನ್ನು ಮೆಲ್ ಗಿಬ್ಸನ್‌ನಂತೆ ಕಾಣು ಹಾಗೆ ಮಾಡಬೇಕಿತ್ತು ಎಂಬುದು ಅವರ ಅಭಿಮತ. ಈ ಹೇಳಿಕೆಯ ಬೆನ್ನಲ್ಲೇ, ಪ್ರಭಾಸ್ ಅವರ ಪಾತ್ರದ ಬಗ್ಗೆ ಅನೇಕರು ಇದು ಪ್ರಭಾಸ್‌ ಮೇಲಿನ ದಾಳಿ ಎಂದು ಕೋಪಗೊಂಡು ಅರ್ಷದ್ ಅವರನ್ನು ದೂಷಿಸಲು ಪ್ರಾರಂಭಿಸಿದರು.

ಅರ್ಷದ್ ಅವರ ಕಾಮೆಂಟ್ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟ ನಾನಿ, ಅದು “ಅಮುಖ್ಯ ವಿಷಯ” ಎಂದು ಅಭಿಪ್ರಾಯಪಟ್ಟಿದ್ದರು. ರಚನಾತ್ಮಕವಾಗಿ ಟೀಕಿಸುವುದು ಸರಿಯೇ. ಆದರೆ ಕೆಟ್ಟದಾಗಿ ಮಾತನಾಡುವುದು ಎಂದಿಗೂ ಸರಿಯಲ್ಲ. ಅರ್ಷದ್ ವಾರ್ಸಿಯಂಥ ನಟನಿಂದ ಈ ರೀತಿ ವೃತ್ತಿಪರತೆಯ ಕೊರತೆಯನ್ನು ಎಂದಿಗೂ ನಿರೀಕ್ಷಿಸಿರಲಿಲ್ಲ. ಸಣ್ಣ ಮನಸ್ಸಿನಿಂದ ಬರುವ ಕಾಮೆಂಟ್‌ಗಳಿಗೆ ಪ್ರಭಾಸ್ ಅವರ ನಿಲುವು ತುಂಬಾ ದೊಡ್ಡದಾಗಿರುತ್ತದೆ ಎಂದು ಮತ್ತೊಬ್ಬ ನಟ ಸುಧೀರ್ ಬಾಬು ಹೇಳಿದ್ದಾರೆ.

ಇದನ್ನೂ ಓದಿ: Shraddha Kapoor- Shreyas Iyer: ಕ್ರಿಕೆಟಿಗ ಅಯ್ಯರ್​ ಜತೆ ಡೇಟಿಂಗ್ ಆರಂಭಿಸಿದ ನಟಿ ಶ್ರದ್ಧಾ ಕಪೂರ್‌; ಫೋಟೊ ವೈರಲ್​

ಇದಕ್ಕೂ ಮೊದಲು, ನಿರ್ದೇಶಕ ಅಜಯ್ ಭೂಪತಿ ಕೂಡ ಪ್ರಭಾಸ್ ಬಗ್ಗೆ ಅರ್ಷದ್ ವಾರ್ಸಿ ಅವರ ಕಾಮೆಂಟ್‌ಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಅವರು ಭಾರತೀಯ ಚಿತ್ರರಂಗಕ್ಕೆ ಪ್ರಭಾಸ್ ಅವರ ಕೊಡುಗೆಗಳ ಬಗ್ಗೆ ಮಾತನಾಡಿದ್ದರು. ʼಬಾಹುಬಲಿʼಯಂಥ ಸೂಪರ್‌ ಹಿಟ್‌ ಚಿತ್ರದಲ್ಲಿ ನಟಿಸಿದ ನಟನ ಬಗ್ಗೆ ವಾರ್ಸಿ ಅಸೂಯೆ ಹೊಂದಿದ್ದಾರೆ ಎಂದು ಅವರು ಆರೋಪಿಸಿದ್ದರು.

Continue Reading
Advertisement
Bomb threat to Wonderla Amusement Park in Urdu
ರಾಮನಗರ2 mins ago

Bomb Threat : ಉರ್ದು ಭಾಷೆಯಲ್ಲಿ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್‌ ಬೆದರಿಕೆ

Railway Line
ವಾಣಿಜ್ಯ3 mins ago

Railway Line: ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಇನ್ನೂ ಬ್ರಿಟಿಷರ ಅಧೀನದಲ್ಲಿದೆ ಈ ರೈಲು ಮಾರ್ಗ!

Kannada New Movie
ಬೆಂಗಳೂರು12 mins ago

Kannada New Movie: ಪ್ರಜ್ವಲ್ ದೇವರಾಜ್-ಅದಿತಿ‌ ಪ್ರಭುದೇವ ಅಭಿನಯದ ʼಮಾಫಿಯಾʼ ಚಿತ್ರ ಸದ್ಯದಲ್ಲೇ ತೆರೆಗೆ

Viral Video
Latest16 mins ago

Viral Video: ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ

Viral News
ವೈರಲ್ ನ್ಯೂಸ್20 mins ago

Viral News: ಹೆಂಡ್ತಿ ತವರಿಗೆ ಹೋಗ್ತಿದ್ದಂತೆ ಪ್ರೇಯಸಿ ಜೊತೆ ಲವ್ವಿಡವ್ವಿ- ಸ್ಕೂಲ್‌ ಮೇಸ್ಟ್ರನ್ನು ರೆಡ್‌ಹ್ಯಾಂಡಾಗಿ ಹಿಡಿದು ಅಲ್ಲೇ ಮದ್ವೆ

Kannada New Movie
ಬೆಂಗಳೂರು27 mins ago

Kannada New Movie: ಐವರು ನಿರ್ದೇಶಕರ 5 ಕಥೆಗಳ ʼಬಿಟಿಎಸ್ʼ ಚಿತ್ರದ ಟ್ರೇಲರ್ ರಿಲೀಸ್‌; ಹೊಸ ಪ್ರಯತ್ನಕ್ಕೆ ರಾಜ್ ಬಿ ಶೆಟ್ಟಿ ಸಾಥ್‌

Prajwal Revanna Case
ಕರ್ನಾಟಕ28 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ವಿರುದ್ಧ 2144 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Here are 4 ideas for krishna janmashtami photoshoot
ಶ್ರೀ ಕೃಷ್ಣ ಜನ್ಮಾಷ್ಟಮಿ30 mins ago

Krishna janmastami: ಕೃಷ್ಣ ಜನ್ಮಾಷ್ಟಮಿಯ ಫೋಟೋಶೂಟ್‌‌ಗೆ ಇಲ್ಲಿದೆ 4 ಐಡಿಯಾ

Air India
ದೇಶ38 mins ago

Air India: ನಿಯಮ ಉಲ್ಲಂಘನೆ: ಏರ್‌ ಇಂಡಿಯಾಕ್ಕೆ ಬಿತ್ತು ಬರೋಬ್ಬರಿ 90 ಲಕ್ಷ ರೂ. ದಂಡ

Viral Video
Latest38 mins ago

Viral Video: ಬೇಟೆಯಾಡಲು ಗೋಡೆ ಹತ್ತಿದ ದೈತ್ಯ ಹೆಬ್ಬಾವು; ಗಾಬರಿಗೊಳಿಸುವ ವಿಡಿಯೊ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌