Dinesh Karthik Apologises: ಧೋನಿ ಅಭಿಮಾನಿಗಳಿಗೆ ಕೈ ಮುಗಿದು ಕ್ಷಮೆಯಾಚಿಸಿದ ದಿನೇಶ್​ ಕಾರ್ತಿಕ್​; ಕಾರಣವೇನು? - Vistara News

ಕ್ರೀಡೆ

Dinesh Karthik Apologises: ಧೋನಿ ಅಭಿಮಾನಿಗಳಿಗೆ ಕೈ ಮುಗಿದು ಕ್ಷಮೆಯಾಚಿಸಿದ ದಿನೇಶ್​ ಕಾರ್ತಿಕ್​; ಕಾರಣವೇನು?

Dinesh Karthik Apologises: ವಿಕೆಟ್ ಕೀಪರ್ ಆಗಿರುವ ನಾನು ಒಂದು ತಂಡವನ್ನು ಆಯ್ಕೆ ಮಾಡುವಾಗ ವಿಕೆಟ್ ಕೀಪರ್ ಆಯ್ಕೆಯನ್ನೇ ಮರೆತಿರುವುದು ನಿಜಕ್ಕೂ ಬೇಸರದ ಸಂಗತಿ. ನನ್ನಿಂದ ತಪ್ಪಾಗಿದೆ. ಧೋನಿ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು ಎಂದು ಹೇಳುವ ಮೂಲಕ ದಿನೇಶ್​ ಕಾರ್ತಿಕ್ ಅವರು ಧೋನಿ(MS Dhoni)ಅಭಿಮಾನಿಗಳಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.

VISTARANEWS.COM


on

Dinesh Karthik Apologises
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಭಾರತಕ್ಕೆ 2 ವಿಶ್ವಕಪ್​ ಟ್ರೋಫಿ ಗೆದ್ದು ಕೊಟ್ಟ ಟೀಮ್​ ಇಂಡಿಯಾದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್ ಧೋನಿ(MS Dhoni) ಅವರ ಅಭಿಮಾನಿಗಳಲ್ಲಿ ಕ್ರಿಕೆಟಿಗ ದಿನೇಶ್​ ಕಾರ್ತಿಕ್​(Dinesh Karthik) ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ(Dinesh Karthik Apologises).

ದಿನೇಶ್​ ಕಾರ್ತಿಕ್​ ಅವರು ಧೋನಿ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಲು ಕಾರಣವೆಂದರೆ, ಕೆಲ ದಿನಗಳ ಹಿಂದಷ್ಟೇ ದಿನೇಶ್​ ಕಾರ್ತಿಕ್​ ಅವರು ಸಾರ್ವಕಾಲಿಕ(All-Time India Playing XI) ನೆಚ್ಚಿನ ಟೀಮ್ ಇಂಡಿಯಾ ಪ್ಲೇಯಿಂಗ್​ ಇಲೆವೆನ್ ತಂಡವೊಂದನ್ನು ಘೋಷಿಸಿದ್ದರು. ಈ ತಂಡದಲ್ಲಿ ಮಹೇಂದ್ರ ಸಿಂಗ್​ ಧೋನಿಯ ಹೆಸರನ್ನು ಬಿಟ್ಟಿದ್ದರು. ಇದೇ ಕಾರಣಕ್ಕೆ ಕಾರ್ತಿಕ್​ ವಿರುದ್ಧ ಧೋನಿ ಅಭಿಮಾನಿಗಳು ರೊಚ್ಚಿಗೆದ್ದಿದ್ದರು. ನಿಮ್ಮ ಈ ತಂಡ ಸರಿಯಿಲ್ಲ. ದಿಗ್ಗಜ ಆಟಗಾರರನ್ನು ನೀಡು ಕಡೆಗಣಿಸಿದ್ದೀರಿ ಹೀಗೆ ಹಲವು ಕಮೆಂಟ್​ಗಳ ಮೂಲಕ ಡಿಕೆ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ Dinesh Karthik : ದಕ್ಷಿಣ ಆಫ್ರಿಕಾದ ಲೀಗ್​ನಲ್ಲಿ ಪಾರ್ಲ್​ ರಾಯಲ್ಸ್​ ತಂಡ ಸೇರಿದ ದಿನೇಶ್ ಕಾರ್ತಿಕ್​

ಇದೀಗ ದಿನೇಶ್​ ಕಾರ್ತಿಕ್​, ಈ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಾನು ದೊಡ್ಡ ತಪ್ಪು ಮಾಡಿದೆ. ಇದು ಆಕಸ್ಮಿಕವಾಗಿ ಸಂಭವಿಸಿದೆ. ನಾನು ಪ್ರಕಟಿಸಿದ ತಂಡದಲ್ಲಿ ವಿಕೆಟ್ ಕೀಪರ್ ಸ್ಥಾನವನ್ನೇ ಮರೆತಿದ್ದೇನೆ. ಹಲವರು ರಾಹುಲ್ ದ್ರಾವಿಡ್ ಅವರನ್ನೇ ವಿಕೆಟ್ ಕೀಪರ್ ಎಂದು ತಪ್ಪಾಗಿ ಆಯ್ಕೆ ಮಾಡಿದ್ದಾರೆ. ಆದರೆ ನಾನು ದ್ರಾವಿಡ್ ಅವರನ್ನು ಕೀಪರ್ ಎಂದು ಪರಿಗಣಿಸಲಿಲ್ಲ. ಹನ್ನೊಂದರ ಬಳಗದಲ್ಲಿ ಧೋನಿ ಅವರನ್ನು ನಾನು ತೆಗೆದುಕೊಂಡಿಲ್ಲ. ನನ್ನಿಂದ ತಪ್ಪಾಗಿದೆ ಎಂದು ಧೋನಿ ಅಭಿಮಾನಿಗಳ ಬಳಿ ದಿನೇಶ್​ ಕಾರ್ತಿಕ್ ಕ್ಷಮೆ ಕೋರಿದರು.

“ವಿಕೆಟ್ ಕೀಪರ್ ಆಗಿರುವ ನಾನು ಒಂದು ತಂಡವನ್ನು ಆಯ್ಕೆ ಮಾಡುವಾಗ ವಿಕೆಟ್ ಕೀಪರ್ ಆಯ್ಕೆಯನ್ನೇ ಮರೆತಿರುವುದು ನಿಜಕ್ಕೂ ಬೇಸರದ ಸಂಗತಿ. ನನ್ನಿಂದ ತಪ್ಪಾಗಿದೆ. ಮಾಹಿ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರು. ಸಾರ್ವಕಾಲಿಕ ಹನ್ನೊಂದರ ಬಳಗವನ್ನು ಮತ್ತೊಮ್ಮೆ ಘೋಷಿಸಬೇಕಾದರೆ, ಒಂದು ಬದಲಾವಣೆ ಮಾಡಲಾಗುತ್ತದೆ. ಧೋನಿಯನ್ನು ಏಳನೇ ಕ್ರಮಾಂಕದಲ್ಲಿ ತೆಗೆದುಕೊಳ್ಳಲಾಗುವುದು. ಧೋನಿ ವಿಚಾರದಲ್ಲಿ ತಪ್ಪು ಮಾಡಿದ್ದೇನೆ. ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದು ದಿನೇಶ್​ ಕಾರ್ತಿಕ್​ ಹೇಳಿದ್ದಾರೆ.

ಐಪಿಎಲ್​ನಲ್ಲಿ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ದಾಖಲೆ ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ. ದಿನೇಶ್ ಕಾರ್ತಿಕ್ 257 ಪಂದ್ಯಗಳಲ್ಲಿ 22 ಅರ್ಧಶತಕಗಳನ್ನು ಬಾರಿಸಿ 4,842 ರನ್‌ ಬಾರಿಸಿದ್ದಾರೆ. ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ 15 ಪಂದ್ಯಗಳಲ್ಲಿ 326 ರನ್​ ಬಾರಿಸಿದ್ದಾರೆ. ಇದೇ ವರ್ಷ ನಡೆದಿದ್ದ ಐಪಿಎಲ್​ 17ನೇ ಆವೃತ್ತಿಯಲ್ಲಿ ಅವರು ನಿವೃತ್ತಿ ಘೋಷಿಸಿದ್ದರು.

2004 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪದಾರ್ಪಣೆ ಮಾಡಿದ ಕಾರ್ತಿಕ್​ ಭಾರತ ಪರ 26 ಟೆಸ್ಟ್‌ಗಳನ್ನು ಆಡಿ 1025 ರನ್ ಗಳಿಸಿದ್ದಾರೆ. 57 ಕ್ಯಾಚ್‌ಗಳು ಮತ್ತು 6 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ. ಅವರು ತಮ್ಮ ಕೊನೆಯ ಟೆಸ್ಟ್ ಆಡಿದ್ದು 2018 ರಲ್ಲಿ. ಏಕದಿನದಲ್ಲಿ 94 ಪಂದ್ಯಗಳನ್ನು ಆಡಿ 1752 ರನ್ ಗಳಿಸಿದ್ದಾರೆ. 64 ಕ್ಯಾಚ್‌ಗಳು ಮತ್ತು 7 ಸ್ಟಂಪಿಂಗ್‌ಗಳನ್ನು ನಿರ್ವಹಿಸಿದ್ದಾರೆ. 60 ಟಿ20 ಪಂದ್ಯಗಳಿಂದ 686 ರನ್ ಗಳಿಸಿ, 30 ಕ್ಯಾಚ್‌ಗಳು ಮತ್ತು 8 ಸ್ಟಂಪಿಂಗ್‌ಗಳನ್ನು ಮಾಡಿದ್ದಾರೆ.

ಕಾರ್ತಿಕ್​ ಘೋಷಿಸಿದ್ದ ತಂಡ


ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮ, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅನಿಲ್ ಕುಂಬ್ಳೆ, ಜಸ್​ಪ್ರೀತ್​ ಬುಮ್ರಾ, ಜಹೀರ್ ಖಾನ್. 12ನೇ ಆಟಗಾರನಾಗಿ ಹರ್ಭಜನ್ ಸಿಂಗ್​.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Harry Singh: ಇಂಗ್ಲೆಂಡ್​ ಟೆಸ್ಟ್​ ತಂಡದಲ್ಲಿ ಕಾಣಿಸಿಕೊಂಡ ಭಾರತದ ಮಾಜಿ ವೇಗಿ ಆರ್​.ಪಿ. ಸಿಂಗ್​ ಪುತ್ರ; ಇದು ಯಾವ ಆರ್​.ಪಿ. ಸಿಂಗ್​ ಎಂದ ನೆಟ್ಟಿಗರು!

Harry Singh:ಲಂಕಾ ವಿರುದ್ಧ ಬದಲಿ ಆಟಗಾರನಾಗಿ ಫೀಲ್ಡಿಂಗ್​ಗೆ ಬಂದ 20 ವರ್ಷದ ಹ್ಯಾರಿ ಸಿಂಗ್‌ ಅವರು ಟೀಮ್​ ಇಂಡಿಯಾದ ಮಾಜಿ ಆಟಗಾರ ರುದ್ರ ಪ್ರತಾಪ್‌ ಸಿಂಗ್‌ ಸೀನಿಯರ್‌ (Rudra Pratap Singh Senior) ಅವರ ಪುತ್ರ.

VISTARANEWS.COM


on

Harry Singh
Koo

ಲಂಡನ್:‌ ಇಂಗ್ಲೆಂಡ್‌ ಮತ್ತು ಶ್ರೀಲಂಕಾ (ENGvsSL) ನಡುವಿನ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಬದಲಿ ಆಟಗಾರನಾಗಿ ಕಣಕ್ಕಿಳಿದ 20 ವರ್ಷದ ಹ್ಯಾರಿ ಸಿಂಗ್‌(Harry Singh) ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಇದಕ್ಕೆ ಕಾರಣ ಹ್ಯಾರಿ ಸಿಂಗ್‌ ಟೀಮ್​ ಇಂಡಿಯಾದ ಮಾಜಿ ವೇಗಿ ರುದ್ರ ಪ್ರತಾಪ್‌ ಸಿಂಗ್‌ ಅವರ ಮಗ ಎನ್ನುವುದು. ಹೌದು, ಭಾರತ ತಂಡದ ಪರ ಇಬ್ಬರು ರುದ್ರ ಪ್ರತಾಪ್ ಸಿಂಗ್(RP Singh) ಎನ್ನುವ ಹೆಸರಿನ ವೇಗಿಗಳು ಆಡಿದ್ದಾರೆ. ಹೀಗಾಗಿ ಹ್ಯಾರಿ ಸಿಂಗ್‌ ಯಾವ ರುದ್ರ ಪ್ರತಾಪ್ ಸಿಂಗ್ ಅವರ ಮಗ ಎಂದು ನೆಟ್ಟಿಗರು ಚರ್ಚಿಸುತ್ತಿದ್ದಾರೆ.

ಹೌದು, ಲಂಕಾ ವಿರುದ್ಧ ಬದಲಿ ಆಟಗಾರನಾಗಿ ಫೀಲ್ಡಿಂಗ್​ಗೆ ಬಂದ 20 ವರ್ಷದ ಹ್ಯಾರಿ ಸಿಂಗ್‌ ಅವರು ಟೀಮ್​ ಇಂಡಿಯಾದ ಮಾಜಿ ಆಟಗಾರ ರುದ್ರ ಪ್ರತಾಪ್‌ ಸಿಂಗ್‌ ಸೀನಿಯರ್‌ (Rudra Pratap Singh Senior) ಅವರ ಪುತ್ರ. ಕೆಲವರು ಆರ್.ಪಿ ಸಿಂಗ್‌ ಎಂದರೆ 2007ರ ಟಿ20 ವಿಶ್ವಕಪ್‌ ಗೆದ್ದ ಭಾರತ ತಂಡದ ಸದಸ್ಯ ಎಂದೆನಿಸಿಕೊಂಡಿದ್ದರು. ಇಬ್ಬರು ಕೂಡ ಆರ್.ಪಿ ಸಿಂಗ್‌ ಆದ ಕಾರಣ ಗೊಂದಲ ಉಂಟಾಗಿತ್ತು. ಇದೀಗ ಹ್ಯಾರಿ ಸಿಂಗ್​ ಯಾವ ಆರ್​.ಪಿ. ಸಿಂಗ್ ಅವರ ಮಗ ಎನ್ನುವುದು ನೆಟ್ಟಿಗರಿಗೆ ತಿಳಿದಿದೆ.​

ಇದನ್ನೂ ಓದಿ Shakib Al Hasan: ಬಾಂಗ್ಲಾ ತಂಡದ ನಾಯಕ ಶಕಿಬ್​ ವಿರುದ್ಧ ಕೊಲೆ ಪ್ರಕರಣ ದಾಖಲು

80ರ ದಶಕದಲ್ಲಿ ಆರ್.ಪಿ.ಸಿಂಗ್ ಸೀನಿಯರ್​ ಭಾರತ ತಂಡದ ಪರ ಎರಡು ಪಂದ್ಯವಾಡಿದ್ದರು. 1986ರಲ್ಲಿ ಆಸ್ಟ್ರೇಲಿಯಾ ವಿರುದ್ದ ಎರಡು ಏಕದಿನ ಪಂದ್ಯ ಇದಾಗಿತ್ತು. ಕ್ರಿಕೆಟ್‌ ವೃತ್ತಿಜೀವನದ ಬಳಿಕ ಆರ್.ಪಿ.ಸಿಂಗ್ ಇಂಗ್ಲೆಂಡ್​ನಲ್ಲಿಯೇ ನೆಲೆಸಿದ್ದಾರೆ. ಮಗನನ್ನು ಕೂಡ ಕ್ರಿಕೆಟ್​ ಆಗಿ ಮಾಡಿದ್ದಾರೆ. ಆಲ್​ರೌಂಡರ್​ ಆಗಿರುವ ಹ್ಯಾರಿ ಸಿಂಗ್‌ ಇಂಗ್ಲೆಂಡ್​ ತಂಡದ ಪರ ಖಾಯಂ ಸದಸ್ಯನಾಗಿ ಶೀಘ್ರದಲ್ಲೇ ಆಡುವ ಸಾಧ್ಯತೆ ಇದೆ. ಇಂಗ್ಲೆಂಡ್​ ಪರ ಲಿಸ್ಟ್​ ‘ಎ’ ಟೂರ್ನಿಯಲ್ಲಿ ಹ್ಯಾರಿ ಇದುವರೆಗೆ 7 ಪಂದ್ಯಗಳನ್ನು ಆಡಿ 87 ರನ್ ಗಳಿಸಿದ್ದಾರೆ.

ಎಡಗೈ ವೇಗಿಯಾಗಿ ಮಿಂಚಿದ್ದ ಜೂನಿಯರ್ ಆರ್.ಪಿ.ಸಿಂಗ್ ಭಾರತ ಪರ 14 ಟೆಸ್ಟ್, 58 ಏಕದಿನ ಮತ್ತು 10 ಟಿ20 ಪಂದ್ಯಗಳನ್ನು ಆಡಿದ್ದಾರೆ. 2007ರ ಚೊಚ್ಚಲ ಟಿ20 ವಿಶ್ವಕಪ್ ಕೂಟದಲ್ಲಿ ಆರ್.ಪಿ.ಸಿಂಗ್ ಅವರು ಭಾರತ ತಂಡದ ಪ್ರಮುಖ ಬೌಲರ್ ಆಗಿದ್ದರು. 2018ರಲ್ಲಿ ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ ಅವರು ಸದ್ಯ ಕಮೆಂಟೇಟರ್ ಆಗಿ ಮಿಂಚುತ್ತಿದ್ದಾರೆ.

Continue Reading

ಕ್ರೀಡೆ

Shakib Al Hasan: ಬಾಂಗ್ಲಾ ತಂಡದ ನಾಯಕ ಶಕಿಬ್​ ವಿರುದ್ಧ ಕೊಲೆ ಪ್ರಕರಣ ದಾಖಲು

Shakib Al Hasan: ಬಾಂಗ್ಲಾದೇಶದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಆಪಾದಿತ ಕೊಲೆಗೆ ಸಂಬಂಧಿಸಿದಂತೆ 147 ಜನರಲ್ಲಿ ಶಕಿಬ್​ ಕೂಡ ಸೇರಿದ್ದಾರೆ ಎಂದು ಢಾಕಾದ ಅಡಾಬೋರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಇಎಸ್‌ಪಿಎನ್‌ ಕ್ರಿಕ್‌ ಇನ್‌ಫೋಗೆ ಖಚಿತಪಡಿಸಿದ್ದಾರೆ.

VISTARANEWS.COM


on

Shakib Al Hasan
Koo

ಢಾಕಾ: ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರದ ಸಮಯದಲ್ಲಿ ಕಿರಾಣಿ ಅಂಗಡಿಯ ಮಾಲಕರೊಬ್ಬರ ಹತ್ಯೆಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಮಂತ್ರಿ ಶೇಖ್‌ ಹಸೀನಾ(Sheikh Hasina) ವಿರುದ್ಧ ಕೆಲ ದಿನಗಳ ಹಿಂದೆ ಕೊಲೆ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ಶಕಿಬ್ ಅಲ್ ಹಸನ್(Shakib Al Hasan) ವಿರುದ್ಧವೂ ಕೊಲೆ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದೆ.

ಬಾಂಗ್ಲಾದೇಶದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಆಪಾದಿತ ಕೊಲೆಗೆ ಸಂಬಂಧಿಸಿದಂತೆ 147 ಜನರಲ್ಲಿ ಶಕಿಬ್​ ಕೂಡ ಸೇರಿದ್ದಾರೆ ಎಂದು ಢಾಕಾದ ಅಡಾಬೋರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಇಎಸ್‌ಪಿಎನ್‌ ಕ್ರಿಕ್‌ ಇನ್‌ಫೋಗೆ ಖಚಿತಪಡಿಸಿದ್ದಾರೆ.

ರಫೀಕುಲ್ ಇಸ್ಲಾಂ ಎನ್ನುವ ವ್ಯಕ್ತಿ ಪ್ರಕರಣ ದಾಖಲಿಸಿದ್ದು, ಢಾಕಾದಲ್ಲಿ ನಡೆದ ಪ್ರತಿಭಟನೆಯ ವೇಳೆ ತನ್ನ ತಂದೆಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಢಾಕಾದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಶಕಿಬ್​ ಅಲ್ ಹಸನ್ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಕಿಬ್ ಮಾತ್ರವಲ್ಲ, ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ ಒಟ್ಟು 500 ಮಂದಿಯನ್ನು ಇದರಲ್ಲಿ ಆರೋಪಿಗಳನ್ನಾಗಿ ಮಾಡಲಾಗಿದೆ.

ಮೀಸಲಾತಿಯ ವಿರುದ್ಧ ಸಾರ್ವಜನಿಕರು ದಂಗೆ ಎದ್ದ ಬಳಿಕ ಶೇಖ್ ಹಸೀನಾ ದೇಶದಿಂದ ಪಲಾಯನ ಮಾಡಿದ್ದರು. ಶಕೀಬ್ ಅಲ್ ಹಸನ್, ಶೇಖ್ ಹಸೀನಾಗೆ ಆತ್ಮೀಯರಾಗಿರುವ ಕಾರಣ ಅವರ ವಿರುದ್ಧ ಈ ಸುಳ್ಳು ಆರೋಪವನ್ನು ಕೂಡ ಮಾಡಿರುವ ಸಾಧ್ಯತೆ ಇದೆ. ಶಕಿಬ್ ಅಲ್ ಹಸನ್ ಅವರು ಕಳೆದ ಬಾಂಗ್ಲಾದೇಶ ಸಂಸತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಶೇಖ್‌ ಹಸೀನಾ ಅವರ ಪಕ್ಷವಾದ ಅವಾಮಿ ಲೀಗ್ ಪಕ್ಷದ ಪರವಾಗಿ ಮಗುರಾ-1ರಲ್ಲಿ ಚುನಾವಣೆ ಸ್ಪರ್ಧಿಸಿದ್ದ ಶಕೀಬ್ ಅಲ್ ಹಸನ್ ಭರ್ಜರಿ ಗೆಲುವು ಸಾಧಿಸಿದ್ದರು. ಇದೀಗ ಕೊಲೆ ಕೇಸ್​ನಲ್ಲಿ ಅವರ ಹೆಸರು ಕೇಳಿ ಬಂದಿದೆ.

ಎಫ್‌ಐಆರ್​ನಲ್ಲಿ ಶಕೀಬ್ 27 ಅಥವಾ 28ನೇ ಆರೋಪಿ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಕ್ರಿಕ್‌ಇನ್ಫೋ ವರದಿ ಮಾಡಿದೆ. ಆದಾಗ್ಯೂ, ಶಕೀಬ್ ಆಗಸ್ಟ್ 5 ರಂದು ಬಾಂಗ್ಲಾದೇಶದಲ್ಲಿ ಇರಲಿಲ್ಲ, ಅಥವಾ ಹಸೀನಾ ರಾಜೀನಾಮೆಗೆ ಕಾರಣವಾದ ಪ್ರತಿಭಟನೆಯ ಸಮಯದಲ್ಲಿ ಶಕಿಬ್​ ಕೆನಡಾದಲ್ಲಿದ್ದರು. ಬ್ರಾಂಪ್ಟನ್‌ನಲ್ಲಿ ಆಡಲಾಗುತ್ತಿರುವ ಗ್ಲೋಬಲ್ ಟಿ 20 ಕೆನಡಾ ಲೀಗ್‌ನಲ್ಲಿ ಬಾಂಗ್ಲಾ ಟೈಗರ್ಸ್ ತಂಡವನ್ನು ಮುನ್ನಡೆಸುತ್ತಿದ್ದರು. ಅದಕ್ಕೂ ಮೊದಲು, ಶಕೀಬ್ ಮೇಜರ್ ಲೀಗ್ ಕ್ರಿಕೆಟ್‌ನಲ್ಲಿ ಭಾಗವಹಿಸಲು ಯುಎಸ್‌ಎಯಲ್ಲಿದ್ದರು. ಒಟ್ಟಾರೆ ಈ ಕೇಸ್​ ಹಲವು ಅನುಮಾನ ಹುಟ್ಟಿಸಿದೆ.

Continue Reading

ಕ್ರೀಡೆ

Shraddha Kapoor- Shreyas Iyer: ಕ್ರಿಕೆಟಿಗ ಅಯ್ಯರ್​ ಜತೆ ಡೇಟಿಂಗ್ ಆರಂಭಿಸಿದ ನಟಿ ಶ್ರದ್ಧಾ ಕಪೂರ್‌; ಫೋಟೊ ವೈರಲ್​

Shraddha Kapoor- Shreyas Iyer: ಬಾಲಿವುಡ್‌ ಸ್ಟಾರ್‌ ನಟಿ ಶ್ರದ್ಧಾ ಕಪೂರ್‌(Shraddha Kapoor) ಇನ್‌ಸ್ಟಾಗ್ರಾಂ ಫಾಲೋವರ್ಸ್‌ ಸಂಖ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರನ್ನೇ ಹಿಂದಿಕ್ಕಿದ್ದಾರೆ.

VISTARANEWS.COM


on

Shraddha Kapoor- Shreyas Iyer
Koo

ಮುಂಬಯಿ: ಬಾಲಿವುಡ್‌ ನಟಿ ಶ್ರದ್ಧಾ ಕಪೂರ್‌(Shraddha Kapoor) ಅವರು ಟೀಮ್​ ಇಂಡಿಯಾದ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್​ ಅಯ್ಯರ್(Shreyas Iyer)​ ಜತೆ ಡೇಟಿಂಗ್​ ನಡೆಸಲು ಆರಂಭಿಸಿದಂತಿದೆ. ಇಬ್ಬರು ಜತೆಯಾಗಿ ಕಾಣಿಸಿಕೊಂಡ ಫೋಟೊ ಒಂದು ವೈರಲ್​ ಆಗಿದ್ದು, ಅಯ್ಯರ್​ ಬಗ್ಗೆ ಶ್ರದ್ಧಾ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಹೀಗಾಗಿ ಇಬ್ಬರು ಡೇಟಿಂಗ್​ ನಡೆಸುತ್ತಿರುವುದು ಪಕ್ಕಾ ಎಂದು ನೆಟ್ಟಿಗರು ಹೇಳಲಾರಂಭಿಸಿದ್ದಾರೆ.

ಸಿಯಟ್​ ಕ್ರಿಕೆಟ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಶ್ರದ್ಧಾ ಕಪೂರ್‌, ಮಾಧ್ಯಮದ ಜತೆ ಮಾತನಾಡುವ ವೇಳೆ “ನಾನು ಇಡೀ ಭಾರತ ತಂಡವನ್ನು ಬೆಂಬಲಿಸುತ್ತೇನೆ ಆದರೆ ನಾನು ಒಬ್ಬ ಆಟಗಾರನನ್ನು ಮಾತ್ರ ಆಯ್ಕೆ ಮಾಡಬೇಕಾದರೆ ಅದು ಶ್ರೇಯಸ್ ಅಯ್ಯರ್ ಆಗಿರುತ್ತದೆ. ಏಕೆಂದರೆ ನಾನು ಅವರ ವ್ಯಕ್ತಿತ್ವವನ್ನು ನಿಜವಾಗಿಯೂ ಇಷ್ಟಪಡುತ್ತೇನೆ” ಎಂದಿದ್ದರು. ಇದೀಗ ಈ ಜೋಡಿ ಬಹಳ ಆತ್ಮೀಯವಾಗಿ ಕಾಣಿಸಿಕೊಂಡಿರುವ ಫೋಟೊ ವೈರಲ್​ ಆಗಿದ್ದು ಶೀಘ್ರದಲ್ಲೇ ಇವರಿಬ್ಬರು ಹಸೆಮಣೆ ಏರುವ ಸಾಧ್ಯತೆ ಇದೆ ಎಂದು ನೆಟ್ಟಿಗರು ಕಮೆಂಟ್ ಮಾಡಲಾರಂಭಿಸಿದ್ದಾರೆ.

ಶ್ರೇಯಸ್​ ಅಯ್ಯರ್​ ‘ಸಿಯೆಟ್ ಅವಾರ್ಡ್ಸ್'(CEAT Cricket Awards)ನಲ್ಲಿ ವರ್ಷದ T20 ನಾಯಕತ್ವ ಪ್ರಶಸ್ತಿಯನ್ನು ಗೆದಿದ್ದರು. ಐಪಿಎಲ್ ಟೂರ್ನಿಯಲ್ಲಿ ನಾಯಕನಾಗಿ ತಂಡವನ್ನು 2 ಬಾರಿ ಫೈನಲ್‌ ತಲುಪಿಸಿದ ಸಾಧನೆಗೆ ಈ ಪ್ರಶಸ್ತಿ ಲಭಿಸಿತ್ತು. ಶ್ರೇಯಸ್​ ಅಯ್ಯರ್​ ಅವರು ಐಪಿಎಲ್​ನಲ್ಲಿ ಡೆಲ್ಲಿ ತಂಡದ ನಾಯಕನಾಗಿ ತಂಡವನ್ನು ಒಮ್ಮೆ ಫೈನಲ್​ ತಲುಪಿಸಿದ್ದರು. ಅಲ್ಲಿ ಮುಂಬೈ ವಿರುದ್ಧ ತಂಡ ಸೋಲು ಕಂಡು ರನ್ನರ್​ ಅಪ್​ ಪ್ರಶಸ್ತಿ ಪಡೆದಿತ್ತು. ಈ ಬಾರಿಯ ಆವೃತ್ತಿಯಲ್ಲಿ ಕೆಕೆಆರ್​ ತಂಡದ ನಾಯಕನಾಗಿ ಟ್ರೋಫಿ ಗೆದ್ದ ಸಾಧನೆ ಮಾಡಿದ್ದರು. 

ಇದನ್ನೂ ಓದಿ Shraddha Kapoor: ಮದುವೆ ಬಗ್ಗೆ ಶ್ರದ್ಧಾ ಕಪೂರ್ ಹೇಳಿದ್ದೇನು? ಹುಡುಗ ಯಾರು?

ಅಯ್ಯರ್​ ಇದುವೆರೆಗೆ 115 ಐಪಿಎಲ್​ ಪಂದ್ಯವನ್ನಾಡಿ 3127 ರನ್​ ಬಾರಿಸಿದ್ದಾರೆ. ಇದರಲ್ಲಿ 21 ಅರ್ಧಶತಕ ಒಳಗೊಂಡಿದೆ. 96 ಗರಿಷ್ಠ ವೈಯಕ್ತಿ ಮೊತ್ತವಾಗಿದೆ. ಭಾರತ ತಂಡದ ಪರ 51 ಟಿ20, 62 ಏಕದಿನ ಮತ್ತು 14 ಟೆಸ್ಟ್​ ಪಂದ್ಯಗಳನ್ನಾಡಿ ಒಟ್ಟು 4,336 ರನ್​ ಗಳಿಸಿದ್ದಾರೆ. ಟೆಸ್ಟ್​ನಲ್ಲಿ 1, ಏಕದಿನದಲ್ಲಿ 5 ಶತಕ ಬಾರಿಸಿದ್ದಾರೆ.

ಮೋದಿಯನ್ನು ಹಿಂದಿಕ್ಕಿದ ಶ್ರದ್ಧಾ ಕಪೂರ್‌


ಇತ್ತೀಚೆಗಷ್ಟೇ ತೆರೆ ಕಂಡು ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿರುವ ಸ್ತ್ರೀ 2 ಸಿನಿಮಾದ ಸಕ್ಸೆಸ್‌ ಸಂಭ್ರಮದಲ್ಲಿರುವ ಬಾಲಿವುಡ್‌ ಸ್ಟಾರ್‌ ನಟಿ ಶ್ರದ್ಧಾ ಕಪೂರ್‌(Shraddha Kapoor) ಸಿನಿಮಾ ಯಶಸ್ಸಿನ ಬೆನ್ನಲ್ಲೇ ಅವರ ಇನ್‌ಸ್ಟಾಗ್ರಾಂ ಫಾಲೋವರ್ಸ್‌ ಸಂಖ್ಯೆಯೂ ಭಾರೀ ಏರಿಕೆ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi)ಯವರನ್ನೇ ಹಿಂದಿಕ್ಕಿದ್ದಾರೆ.

ಶ್ರದ್ಧಾ ಕಪೂರ್ ಇನ್‌ಸ್ಟಾಗ್ರಾಂ ಫಾಲೋವರ್ಸ್ ಸಂಖ್ಯೆ ಬರೋಬ್ಬರಿ 91.4 ಮಿಲಿಯನ್‌ಗೆ ಎರಿಕೆಯಾಗಿದೆ. ಪ್ರಧಾನಿ ಮೋದಿ ಇನ್‌ಸ್ಟಾಗ್ರಾಂನಲ್ಲಿ 91.3 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಟ್ವಿಟರ್‌ನಲ್ಲಿ ಮೋದಿ 101.2 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಆಮೂಲಕ ಅತಿ ಹೆಚ್ಚು ಫಾಲೋವರ್ಸ್‌ ಹೊಂದಿರುವ ಸೆಲೆಬ್ರಿಟಿಗಳಲ್ಲಿ ಶ್ರದ್ಧಾ ಮೂರನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಬರೋಬ್ಬರಿ 271 ಮಿಲಿಯನ್ ಇನ್‌ಸ್ಟಾ ಫಾಲೋವರ್ಸ್ ಹೊಂದಿದ್ದಾರೆ. ಎರಡನೇ ಸ್ಥಾನದಲ್ಲಿರುವ ನಟಿ ಪ್ರಿಯಾಂಕಾ ಚೋಪ್ರಾ 91.8 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಮೂರನೇ ಸ್ಥಾನವವನ್ನು ಇದೀಗ ಶ್ರದ್ಧ ಕಪೂರ್ ಆಕ್ರಮಿಸಿಕೊಂಡರೆ, ನರೇಂದ್ರ ಮೋದಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

Continue Reading

ಕ್ರೀಡೆ

Ritika Sajdeh: ಜೂನಿಯರ್​ ಹಿಟ್​ಮ್ಯಾನ್​ ನಿರೀಕ್ಷೆಯಲ್ಲಿ ರೋಹಿತ್​; ಪತ್ನಿಯ ಬೇಬಿ ಬಂಪ್‌ ವಿಡಿಯೊ ವೈರಲ್​

Ritika Sajdeh: ಬ್ಯುಸಿನೆಸ್ ಮ್ಯಾನೇಜರ್ ಆಗಿದ್ದ ರಿತಿಕಾ ಸಜ್ದೇಹ್ ಅವರನ್ನು ರೋಹಿತ್ ಶರ್ಮಾ 2015ರಲ್ಲಿ ಮದುವೆಯಾಗಿದ್ದರು. ಮದುವೆಗೂ ಮುನ್ನ ರೋಹಿತ್-ರಿತಿಕಾ ಇಬ್ಬರೂ 6 ವರ್ಷಗಳಿಂದ ಡೇಟಿಂಗ್‌ನಲ್ಲಿದ್ದರು

VISTARANEWS.COM


on

Ritika Sajdeh
Koo

ಮುಂಬಯಿ: ಹಿಟ್​ಮ್ಯಾನ್​ ಖ್ಯಾತಿಯ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮ(Rohit Sharma) ಅವರು ಸದ್ಯದಲ್ಲೇ ಎರಡನೇ ಮಗುವಿನ ತಂದೆಯಾಗುವ ನಿರೀಕ್ಷೆಯಲ್ಲಿದ್ದಾರೆ. ಹೌದು, ರೋಹಿತ್​ ಪತ್ನಿ ರಿತಿಕಾ ಸಜ್ದೇಹ್ (Ritika Sajdeh) ಗರ್ಭಿಣಿಯಾಗಿದ್ದಾರೆ ಎಂದು ವರದಿಯಾಗಿದೆ. ರಿತಿಕಾ ಬೇಬಿ ಬಂಪ್‌ ವಿಡಿಯೊ ಒಂದು ವೈರಲ್​ ಆಗುತ್ತಿದ್ದು, ರೋಹಿತ್​ ಅಭಿಮಾನಿಗಳು ಜೂನಿಯರ್​ ಹಿನ್​ಮ್ಯಾನ್​ ಶೀಘ್ರದಲ್ಲೇ ಬರಲಿದ್ದಾರೆ ಎಂದು ಕಮೆಂಟ್​ ಮಾಡಿದ್ದಾರೆ.

ರೋಹಿತ್​ ಶರ್ಮ ಮತ್ತು ರಿತಿಕಾ ಸಜ್ದೇಹ್(Ritika Sajdeh) ದಂಪತಿಗೆ ಈಗಾಗಲೇ ಓರ್ವ ಪುತ್ರಿ ಇದ್ದಾಳೆ. ಈಕೆಯ ಹೆಸರು ಸಮೈರಾ. ಇದೀಗ ಈ ಜೋಡಿ 2ನೇ ಮಗುವಿನ ನಿರೀಕ್ಷೆಯಲ್ಲಿ ಇದ್ದ ಹಾಗಿದೆ. ರಿತಿಯಾ ಮುಂಬೈಯಲ್ಲಿ ತಿರುಗಾಡುವುದನ್ನು ಪಾಪರಾಜಿಗಳು ಸೆರೆ ಹಿಡಿದಿದ್ದಾರೆ. ಈ ವಿಡಿಯೊದಲ್ಲಿ ರಿತಿಕಾ ಅವರ ಬೆಬಿ ಬಂಪ್‌ ದೃಶ್ಯವು ಸೆರೆಯಾಗಿದೆ. ಹಾಗಾಗಿ, ರೋಹಿತ್​ ಪತ್ನಿಯು ಗರ್ಭಿಣಿಯಾಗಿರುವುದು ದೃಢಪಟ್ಟಿದೆ.

ತನ್ನ ಬ್ಯುಸಿನೆಸ್ ಮ್ಯಾನೇಜರ್ ಆಗಿದ್ದ ರಿತಿಕಾ ಸಜ್ದೇಹ್ ಅವರನ್ನು ರೋಹಿತ್ ಶರ್ಮಾ 2015ರಲ್ಲಿ ಮದುವೆಯಾಗಿದ್ದರು. ಮದುವೆಗೂ ಮುನ್ನ ರೋಹಿತ್-ರಿತಿಕಾ ಇಬ್ಬರೂ 6 ವರ್ಷಗಳಿಂದ ಡೇಟಿಂಗ್‌ನಲ್ಲಿದ್ದರು. ಮದುವೆಯಾದ ಬಳಿಕವೂ ಕ್ರಿಕೆಟ್‌ ಪಂದ್ಯಗಳ ವೇಳೆ ಮೈದಾನದಲ್ಲಿದ್ದು ತನ್ನ ಪತಿ ರೋಹಿತ್​ಗೆ ರಿತಿಕಾ ಚಿಯರ್ ಮಾಡುತ್ತಿರುತ್ತಾರೆ.

ಇದನ್ನೂ ಓದಿ Rohit Sharma: ಮುಂಬೈ ಸ್ಟ್ರೀಟ್​ನಲ್ಲಿ ಜಾಲಿ ರೈಡ್‌ ಮಾಡಿದ ರೋಹಿತ್​; ವಿಡಿಯೊ ವೈರಲ್​

ಸದ್ಯ ರೋಹಿತ್​ ಶರ್ಮ(Rohit Sharma) ಅವರು ಯಾವುದೇ ಸರಣಿ ಇಲ್ಲದ ಕಾರಣ ವಿಶ್ರಾಂತಿಯಲ್ಲಿದ್ದಾರೆ. ತವರಾದ ಮುಂಬೈನಲ್ಲಿ ಜಾಲಿ ಮೂಡ್​ನಲ್ಲಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಮುಂಬೈಯ ಸ್ಟ್ರೀಟ್​ ಒಂದರಲ್ಲಿ ರೋಹಿತ್​ ನೀಲಿ ಬಣ್ಣದ ಲ್ಯಾಂಬೋರ್ಗಿನಿ(Lamborghini) ಕಾರಿನಲ್ಲಿ ಜಾಲಿ ರೈಡ್​ ಮಾಡಿರುವ ವಿಡಿಯೊ ವೈರಲ್​ ಆಗಿತ್ತು.

ರೋಹಿತ್​ ಅವರು ಲ್ಯಾಂಬೋರ್ಗಿನಿ ಕಾರಿನಲ್ಲಿ ಬರುತ್ತಿರುವ ವಿಡಿಯೊವನ್ನು ನೆಟ್ಟಿಗರೊಬ್ಬರು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ರೋಹಿತ್​ ರಸ್ತೆ ಬದಿಯಲ್ಲಿ ನಿಂತಿದ್ದ ಅಭಿಮಾನಿಗಳನ್ನು ಕಂಡು ಥಮ್ಸ್ ಅಪ್‌ ಮಾಡಿ ಮುಂದೆ ಸಾಗಿದ್ದರು. ರೋಹಿತ್​ ಏಕದಿನದಲ್ಲಿ ಲಂಕಾ ವಿರುದ್ಧ 264 ರನ್ ಬಾರಿಸಿದ್ದರು. ಇದೇ ಸಂಖ್ಯೆಯನ್ನು ತಮ್ಮ ಕಾರ್​ ನಂಬರ್​ ಆಗಿ ಬಳಸಿಕೊಂಡಿದ್ದಾರೆ.​

ಟಿ20 ವಿಶ್ವಕಪ್​ ಮುಗಿದ ಬಳಿಕ ಕುಟುಂಬ ಸಮೇತರಾಗಿ ವಿದೇಶಕ್ಕೆ ಪ್ರವಾಸ ಹೋಗಿದ್ದ ರೋಹಿತ್​ ಮುಂಬೈಗೆ ಮರಳಿದ್ದ ವೇಳೆಯೂ ಇದೇ ಕಾರಿನಲ್ಲಿ ವಿಮಾನ ನಿಲ್ದಾಣದಿಂದ ಮನೆಗೆ ತೆರಳಿದ್ದ ವಿಡಿಯೊ ಮೂರು ವಾರಗಳ ಹಿಂದೆ ವೈರಲ್​ ಆಗಿತ್ತು. ಸದ್ಯ ವಿಶ್ರಾಂತಿಯಲ್ಲಿರುವ ರೋಹಿತ್​ ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಸರಣಿ ವೇಳೆಗೆ ತಂಡ ಸೇರಲಿದ್ದಾರೆ.

Continue Reading
Advertisement
Shreyas Patel
ಕರ್ನಾಟಕ5 mins ago

Shreyas Patel: ಸಂಸದ ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್‌

karnataka weather forecast
ಮಳೆ11 mins ago

Karnataka Weather : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು; ಹಳ್ಳ ದಾಟಲು ಗ್ರಾಮಸ್ಥರ ಪರದಾಟ

Fortis Hospital
ಬೆಂಗಳೂರು25 mins ago

Fortis Hospital: ಜನನಾಂಗದಿಂದ ಹೊರಗೆ ಚಾಚಿದ್ದ ಗರ್ಭಕೋಶ ರೋಬೋಟಿಕ್‌ ಮೂಲಕ ಮರುಸ್ಥಾಪನೆ!

Self Harming
ಕರ್ನಾಟಕ35 mins ago

Self Harming: ಪ್ರಿನ್ಸಿಪಾಲ್ ಬೈದರೆಂದು 3ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

Village Administrative Officer
ಉದ್ಯೋಗ46 mins ago

Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ

Bomb threat to Wonderla Amusement Park in Urdu
ರಾಮನಗರ54 mins ago

Bomb Threat : ಉರ್ದು ಭಾಷೆಯಲ್ಲಿ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್‌ ಬೆದರಿಕೆ

Railway Line
ವಾಣಿಜ್ಯ56 mins ago

Railway Line: ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಇನ್ನೂ ಬ್ರಿಟಿಷರ ಅಧೀನದಲ್ಲಿದೆ ಈ ರೈಲು ಮಾರ್ಗ!

Kannada New Movie
ಬೆಂಗಳೂರು1 hour ago

Kannada New Movie: ಪ್ರಜ್ವಲ್ ದೇವರಾಜ್-ಅದಿತಿ‌ ಪ್ರಭುದೇವ ಅಭಿನಯದ ʼಮಾಫಿಯಾʼ ಚಿತ್ರ ಸದ್ಯದಲ್ಲೇ ತೆರೆಗೆ

Viral Video
Latest1 hour ago

Viral Video: ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ

Viral News
ವೈರಲ್ ನ್ಯೂಸ್1 hour ago

Viral News: ಹೆಂಡ್ತಿ ತವರಿಗೆ ಹೋಗ್ತಿದ್ದಂತೆ ಪ್ರೇಯಸಿ ಜೊತೆ ಲವ್ವಿಡವ್ವಿ- ಸ್ಕೂಲ್‌ ಮೇಸ್ಟ್ರನ್ನು ರೆಡ್‌ಹ್ಯಾಂಡಾಗಿ ಹಿಡಿದು ಅಲ್ಲೇ ಮದ್ವೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌