Kannada New Movie: ಐವರು ನಿರ್ದೇಶಕರ 5 ಕಥೆಗಳ ʼಬಿಟಿಎಸ್ʼ ಚಿತ್ರದ ಟ್ರೇಲರ್ ರಿಲೀಸ್‌; ಹೊಸ ಪ್ರಯತ್ನಕ್ಕೆ ರಾಜ್ ಬಿ ಶೆಟ್ಟಿ ಸಾಥ್‌ - Vistara News

ಬೆಂಗಳೂರು

Kannada New Movie: ಐವರು ನಿರ್ದೇಶಕರ 5 ಕಥೆಗಳ ʼಬಿಟಿಎಸ್ʼ ಚಿತ್ರದ ಟ್ರೇಲರ್ ರಿಲೀಸ್‌; ಹೊಸ ಪ್ರಯತ್ನಕ್ಕೆ ರಾಜ್ ಬಿ ಶೆಟ್ಟಿ ಸಾಥ್‌

ಐವರು ನಿರ್ದೇಶಕರು, ಐದು ಕಥೆಗಳನ್ನಿಟ್ಟುಕೊಂಡು “ಬಿಟಿಎಸ್” ಎಂಬ ಸಿನಿಮಾ (Kannada New Movie) ಮಾಡಿದ್ದಾರೆ. ಆಸಕ್ತಿಕರ ವಿಷಯಗಳನ್ನಿಟ್ಟುಕೊಂಡು ಜನರ ಮನಸ್ಸು ಗೆಲ್ಲಲ್ಲು ಮುಂದಾಗಿದ್ದಾರೆ‌. ಯುವ ಪ್ರತಿಭಾನ್ವಿತರ ತಂಡಕ್ಕೆ ನಟ ರಾಜ್ ಬಿ ಶೆಟ್ಟಿ ಸಾಥ್ ನೀಡಿ, ಪ್ರಯತ್ನ ಯಶಸ್ವಿ ಆಗಲಿ ಎಂದು ಹಾರೈಸಿದ್ದಾರೆ. ಟ್ರೇಲರ್ ಅನ್ನು “ಭೀಮ” ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ಬಿಡುಗಡೆ ಮಾಡಿದ್ದಾರೆ. ಬಿಟಿಎಸ್ (ಬಿಹೈಂಡ್ ದಿ ಸ್ಕ್ರೀನ್) ಚಿತ್ರವನ್ನು ಪ್ರಜ್ಚಲ್ ರಾಜು, ಸಾಯಿ ಶ್ರೀನಿಧಿ, ಕುಲದೀಪ್ ಕಾರಿಯಪ್ಪ, ರಾಜೇಶ್ ಎನ್ ಶಂಕದ್, ಅಪೂರ್ವ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಒಂದು ಚಿತ್ರವನ್ನು ಇಬ್ಬರು ನಿರ್ದೇಶಕರು ಸೇರಿ ನಿರ್ದೇಶಿಸಿರುವ ಉದಾಹರಣೆ ಸಾಕಷ್ಟಿದೆ. ಆದರೆ ಐದು ಜನ ನಿರ್ದೇಶಕರು, ಐದು ಕಥೆಗಳನ್ನಿಟ್ಟುಕೊಂಡು “ಬಿಟಿಎಸ್” ಎಂಬ ಸಿನಿಮಾ (Kannada New Movie) ಮಾಡಿದ್ದಾರೆ. ಆಸಕ್ತಿಕರ ವಿಷಯಗಳನ್ನಿಟ್ಟುಕೊಂಡು ಜನರ ಮನಸ್ಸು ಗೆಲ್ಲಲು ಮುಂದಾಗಿದ್ದಾರೆ‌. ಯುವ ಪ್ರತಿಭಾನ್ವಿತರ ತಂಡಕ್ಕೆ ನಟ ರಾಜ್ ಬಿ ಶೆಟ್ಟಿ ಸಾಥ್ ನೀಡಿ, ಪ್ರಯತ್ನ ಯಶಸ್ವಿ ಆಗಲಿ ಎಂದು ಹಾರೈಸಿದ್ದಾರೆ. ಟ್ರೇಲರ್ ಅನ್ನು “ಭೀಮ” ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ಬಿಡುಗಡೆ ಮಾಡಿದ್ದಾರೆ.

ಬಿಟಿಎಸ್ (ಬಿಹೈಂಡ್ ದಿ ಸ್ಕ್ರೀನ್) ಚಿತ್ರವನ್ನು ಪ್ರಜ್ಚಲ್ ರಾಜು, ಸಾಯಿ ಶ್ರೀನಿಧಿ, ಕುಲದೀಪ್ ಕಾರಿಯಪ್ಪ, ರಾಜೇಶ್ ಎನ್ ಶಂಕದ್, ಅಪೂರ್ವ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ.

ತೆರೆಯ ಹಿಂದಿನ ವಿಷಯಗಳನ್ನು ಐವರು ನಿರ್ದೇಶಕರು ತೆರೆಯ ಮೇಲೆ ತರುವ ಮೂಲಕ ಹೊಸ ಪ್ರಯತ್ನ ಮಾಡಿದ್ದಾರೆ. ಚಿತ್ರದ ಟ್ರೇಲರ್ ಬಿಡುಗಡೆ ಚೆನ್ನಾಗಿದೆ. ಚಿತ್ರತಂಡಕ್ಕೆ ಶುಭವಾಗಲಿ ಎಂದು ಭೀಮ ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ತಂಡಕ್ಕೆ ಒಳ್ಳೆಯದಾಗಲಿ ಎಂದರು.

ಈ ವೇಳೆ ನಿರ್ದೇಶಕರಲ್ಲಿ ಒಬ್ಬರಾದ ಕುಲದೀಪ್ ಕಾರಿಯಪ್ಪ ಮಾತನಾಡಿ, ಜೀವನದಲ್ಲಿ ಸಾಧನೆ ಮಾಡಲು ಮುಂದಾದಾಗ ನಮ್ಮನ್ನು ಯಾರು ಬೆಂಬಲಿಸುವುದಿಲ್ಲ ಎಂದು ಸಮಾಜವನ್ನು ಬಯ್ಯುವುದಕ್ಕೆ ಮುಂದಾಗುತ್ತೇವೆ. ಸಾಧನೆ ಮಾಡಲು ಮುಂದಾದಾಗ ಏನೆಲ್ಲಾ ಸಮಸ್ಯೆ ಎದುರಾಗುತ್ತದೆ ಎನ್ನುವುದು ಕಥೆಯ ತಿರುಳು. ನನ್ನ ಕಥೆಯ ಹೆಸರು “ಹೀರೋ” ಅಪರೂಪದ ವಿಷಯಗಳನ್ನು ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಲಾಗಿದೆ ಎಂದು ವಿವರಿಸಿದರು.

ಮತ್ತೊಬ್ಬ ನಿರ್ದೇಶಕ ಸಾಯಿ ಶ್ರೀನಿಧಿ ಮಾತನಾಡಿ, ಸಾಲ ಮಾಡಿಯಾದರೂ ಚಿತ್ರ ಮಾಡಬೇಕು ಎನ್ನುವ ಆಸೆ ನನಗೆ. ನನ್ನ ಆಸೆಗೆ ನಿರ್ಮಾಪಕ ಮುರುಳಿ ಕೃಷ್ಣ ನೆರವಾದರು. ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ‌. ಕಾಫಿ, ಸಿಗರೆಟ್ ಮತ್ತು ಲೈನ್ ಎನ್ನುವುದು ನನ್ನ ಕಥೆಯ ಭಾಗ ಎಂದರು.

ಪ್ರಜ್ವಲ್ ರಾಜ್, “ಬಾನಿಗೊಂದು ಎಲ್ಲೆ ಎಲ್ಲಿದೆ” ಎನ್ನುವುದು ನಾನು ನಿರ್ದೇಶನ ಮಾಡಿರುವ ಕಥೆಯ ಭಾಗ ಎಂದು ಹೇಳಿಕೊಂಡರು.

ಇದನ್ನೂ ಓದಿ: Ganesh Chaturthi 2024: ಪಿಒಪಿ ಗಣೇಶ ಮೂರ್ತಿಗೆ ನಿಷೇಧ; ಹಬ್ಬ ಆಚರಣೆಗೆ ಏನೆಲ್ಲಾ ನಿಯಮಗಳು? ಇಲ್ಲಿದೆ ವಿವರ

ನಿರ್ದೇಶಕಿ ಅಪೂರ್ವ ಭಾರದ್ವಾಜ್ ಮಾತನಾಡಿ, ಇಷ್ಟು ವರ್ಷ ನಟಿಯಾಗಿ ಕಾಣಿಸಿಕೊಂಡಿದ್ದೆ. ಈಗ ನಿರ್ದೇಶಕಿಯಾಗಿದ್ದೇನೆ. ಐದು ನಿರ್ದೇಶಕರು ಐದು ಕಥೆ ಹೇಳುವುದು ಎನ್ನುವ ವಿಷಯ ಆಸಕ್ತಿಕರವಾದದ್ದು, ಹೀಗಾಗಿ ಒಂದು ಕಥೆಯನ್ನು ನಿರ್ದೇಶನ ಮಾಡಲು ಒಪ್ಪಿಕೊಂಡೆ. ಮಹದೇವ ಪ್ರಸಾದ್ ಮತ್ತು ಶ್ರೀಪ್ರಿಯಾ ನನ್ನ ಕಥೆಯಲ್ಲಿ ಕಾಣಿಸಿಕೊಂಡಿದ್ದಾರೆ.‌‌ ಮೇಕಪ್ ಕುರಿತ ಕಥೆ. ಮೇಕಪ್ ಮ್ಯಾನ್ ಮತ್ತು ಟಚ್ಚಪ್ ಬಾಯ್‌ಗೆ ಚಿತ್ರ ಅರ್ಪಿಸುವೆ ಎಂದು ಮಾಹಿತಿ ಹಂಚಿಕೊಂಡರು.

ಕಥೆ ಹೇಳುವಾಗ ಬಹಳಷ್ಟು ನಿರ್ದೇಶಕರು ನಿರ್ಮಾಪಕರ ಮನಸ್ಸು ಗೆದ್ದು ಬಿಡ್ತಾರೆ. ಆದರೆ ಅದು ಸಿನಿಮಾದಲ್ಲಿ ಯಶಸ್ಸು ಗಳಿಸಲು ವಿಫಲರಾಗುತ್ತಾರೆ. ಅದ್ಯಾಕೋ ಗೊತ್ತಿಲ್ಲ. ಕನ್ನಡದಲ್ಲಿ ಬಹಳಷ್ಟು ಕಥೆಗಾರರು ಇದ್ದಾರೆ. ಆದರೆ ಯಶಸ್ಸು ಮಾತ್ರ ಕಡಿಮೆ ಎಂದರು ನಟ ಮೂಗು ಸುರೇಶ್.

ನಿರ್ಮಾಪಕ ಮುರುಳಿ ಕೃಷ್ಣ ಮಾತನಾಡಿ, ಐದು ಜನ ನಿರ್ದೇಶಕರ ಐದು ಕಥೆಗಳು ಸೇರಿ “ಬಿಟಿಎಸ್” ಚಿತ್ರವಾಗಿದೆ. ಐದು ಮಂದಿ‌ ನಿರ್ದೇಶಕರು ಅವರೇ ಚಿತ್ರದ ಆಧಾರ ಸ್ತಂಭ. ಚಿತ್ರ ಎಲ್ಲರಿಗೂ ಇಷ್ಟವಾಗಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರದಲ್ಲಿ ನಟಿಸಿರುವ ವಿಜಯ್ ಕೃಷ್ಣ, ಮಹದೇವ ಪ್ರಸಾದ್, ಶ್ರೀಪ್ರಿಯ, ಕೌಶಿಕ್, ಚಂದನ, ವಿಜಯ್ ಕೃಷ್ಣ ಸೇರಿದಂತೆ ಮತ್ತಿತರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗೋಲ್ಡನ್‌ ಟೈಮ್‌; ಚಿನ್ನದ ದರ ಇಂದು ಕೂಡ ಇಳಿಮುಖ

“ಬಿಟಿಎಸ್” ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ನಿರ್ದೇಶಕರಾದ ರಾಮೇನಹಳ್ಳಿ ಜಗನ್ನಾಥ್, ವಿನಯ್ ಪ್ರೀತಂ, ಗುರುರಾಜ ಕುಲಕರ್ಣಿ, ಶ್ರೀಧರ್ ಶಿಕಾರಿಪುರ, ಜೈಶಂಕರ್, ದೇವನೂರು ಚಂದ್ರು, ಚೇತನ್ ಕೇಶವ್, ಇಸ್ಲಾವುದ್ದೀನ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Muda Scam: ದೆಹಲಿಯಲ್ಲಿ ರಾಹುಲ್‌ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ; ಕಾನೂನು ಹೋರಾಟದ ಬಗ್ಗೆ ಚರ್ಚೆ

Muda Scam: ಮುಡಾ ಪ್ರಕರಣದಲ್ಲಿ ನಾವು ಎಲ್ಲರೂ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಇದ್ದೇವೆ. ಅವರ ವಿರುದ್ಧ ನಡೆಯುತ್ತಿರುವ ಕುತಂತ್ರದ ಬಗ್ಗೆ ರಾಷ್ಟ್ರಪತಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಹೇಳಿದ್ದಾರೆ.

VISTARANEWS.COM


on

Koo

ನವದೆಹಲಿ: ಮುಡಾ ಹಗರಣದಲ್ಲಿ (Muda Scam) ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಹೈ ಕಮಾಂಡ್‌ ನಾಯಕರಾದ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ನವದೆಹಲಿಯಲ್ಲಿ ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ಬಳಿಕ ಮಾಧ್ಯಮಗಳೊಂದಿಗೆ ಕರ್ನಾಟಕ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಮಾತನಾಡಿ, ಸಿಎಂ, ಡಿಸಿಎಂ ಜೊತೆ ಚರ್ಚೆ ಮಾಡಿದ್ದೇವೆ. ಕರ್ನಾಟಕದಲ್ಲಿ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ಆಗಿದ್ದು, ಬಿಜೆಪಿಯವರು ರಾಜ್ಯಪಾಲರನ್ನು ಕೈಗೊಂಬೆಯಾಗಿ ಮಾಡಿಕೊಂಡು ಯಾವ ರೀತಿ ರಾಜಕಾರಣ ಮಾಡುತ್ತಿದ್ದಾರೆ ನೋಡುತ್ತಿದ್ದೇವೆ. ಐದು ಗ್ಯಾರಂಟಿಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ. ಇದು ಸಿಎಂ, ಡಿಸಿಎಂ ಮೇಲಿನ ದಾಳಿ ಅಲ್ಲ, ಇದು ಕರ್ನಾಟಕದ ಜನರ ಮೇಲಿನ ದಾಳಿಯಾಗಿದೆ. ಪ್ರಧಾನಿ, ಗೃಹ ಸಚಿವರು ರಾಜ್ಯಪಾಲರನ್ನು ಬಳಸಿ ಕರ್ನಾಟಕದಲ್ಲಿ ಸರ್ಕಾರ ಅಸ್ಥಿರಗೊಳಿಸಲು ಯತ್ನ ಮಾಡುತ್ತಿದ್ದಾರೆ. ರಾಜ್ಯಪಾಲರು ಬಿಜೆಪಿ, ಜೆಡಿಎಸ್‌ನವರ ಮೇಲಿನ ವರ್ಷಗಳ ಹಿಂದಿನ ಪ್ರಕರಣಗಳ ತನಿಖೆಗೆ ಯಾಕೆ ಆದೇಶ ನೀಡಿಲ್ಲ ಎಂದು ಕಿಡಿಕಾರಿದರು.

ಈ ಪ್ರಕರಣದಲ್ಲಿ ನಾವು ಎಲ್ಲರೂ ಸಿಎಂ ಬೆನ್ನಿಗೆ ಇದ್ದೇವೆ. ಪ್ರಕರಣದಲ್ಲಿ ನಡೆಯುತ್ತಿರುವ ಕುತಂತ್ರದ ಬಗ್ಗೆ ರಾಷ್ಟ್ರಪತಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಇವತ್ತು ನಾವು ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದೇವೆ. ನಮ್ಮ ಸರ್ಕಾರ ಅಭದ್ರಗೊಳಿಸಲು ಪ್ರಯತ್ನ ನಡೆಯುತ್ತಿದೆ. ಈ ವಿಚಾರವಾಗಿ ನಾವು‌ ಮನದಟ್ಟು ಮಾಡಿದ್ದೇವೆ. ಬಡವರಿಗಾಗಿ ಹೋರಾಟ ಮಾಡಿ ಅಂತ ಹೈಕಮಾಂಡ್ ಹೇಳಿದೆ. ರಾಷ್ಟ್ರ ಮತ್ತು ರಾಜ್ಯ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಇದೆ ಎಂದು ಹೇಳಿದರು.

ಇದನ್ನೂ ಓದಿ | 7th pay commission : 7ನೇ ವೇತನ ಆಯೋಗ ಜಾರಿ ಬಳಿಕ ನೌಕರರ ಸಂಬಳ ಏರಿಕೆ ಎಷ್ಟು? ಅಧಿಕೃತ ಪಟ್ಟಿ ಬಿಡುಗಡೆ

ಸಿಎಂ ಸಿದ್ದರಾಮಯ್ಯ ಮಾತನಾಡಿ, ಹೈಕಮಾಂಡ್‌ಗೆ ಧನ್ಯವಾದ ತಿಳಿಸುತ್ತೇವೆ. ಅಧ್ಯಕ್ಷರಾದ ಖರ್ಗೆ ಹಾಗೂ ರಾಹುಲ್ ಗಾಂಧಿಗೆ ಧನ್ಯವಾದಗಳು. ನಾವು ನ್ಯಾಯಾಲಯ ಮತ್ತು ಕಾನೂನು ನಂಬಿದ್ದೇವೆ. ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದೆ ಎಂದು ತಿಳಿಸಿದರು.

Continue Reading

ಬೆಂಗಳೂರು

Invest Karnataka: ಇಂಧನ ತಂತ್ರಜ್ಞಾನ; ರಾಜ್ಯದಲ್ಲಿ 8,300 ಕೋಟಿ ರೂ. ಹೂಡಿಕೆ ಮಾಡಲಿರುವ ಷೆರ್ವನ್‌ ಇಂಡಿಯಾ

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರ ಜತೆಗೆ ಷೆರ್ವನ್‌ ಇಂಡಿಯಾ ನಿಯೋಗವು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಬೆಂಗಳೂರಿನಲ್ಲಿ ತನ್ನ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ (ಇಎನ್‌ಜಿಐಎನ್‌ಇ) ಸ್ಥಾಪಿಸಲು 8,300 ಕೋಟಿ ರೂ. ಹೂಡಿಕೆ (Invest Karnataka) ಮಾಡುವುದಾಗಿ ಘೋಷಿಸಿದೆ. ಸಭೆಯಲ್ಲಿ ಷೆರ್ವನ್‌ ಇಂಡಿಯಾ ಮುಖ್ಯಸ್ಥ ಡಾ. ಅಕ್ಷಯ್‌ ಸಾಹ್ನಿ, ಜನರಲ್‌ ಮ್ಯಾನೇಜರ್‌ ಕೇಟ್‌ ಕಲಘನ್‌ ಇದ್ದರು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Invest Karnataka
Koo

ಬೆಂಗಳೂರು: ಇಂಧನ ಪರಿಹಾರಗಳನ್ನು ನೀಡುವಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಷೆರ್ವನ್‌ ಕಂಪನಿಯು ಬೆಂಗಳೂರಿನಲ್ಲಿ ತನ್ನ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ (ಇಎನ್‌ಜಿಐಎನ್‌ಇ) ಸ್ಥಾಪಿಸಲು 8,300 ಕೋಟಿ ರೂ. ಹೂಡಿಕೆ (Invest Karnataka) ಮಾಡುವುದಾಗಿ ಇಂದು ಇಲ್ಲಿ ಪ್ರಕಟಿಸಿದೆ.

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರ ಜತೆಗೆ ಷೆರ್ವನ್‌ ನಿಯೋಗವು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಈ ಹೂಡಿಕೆ ಘೋಷಿಸಲಾಗಿದೆ. ಸಭೆಯಲ್ಲಿ ಷೆರ್ವನ್‌ ಇಂಡಿಯಾ ಮುಖ್ಯಸ್ಥ ಡಾ. ಅಕ್ಷಯ್‌ ಸಾಹ್ನಿ, ಜನರಲ್‌ ಮ್ಯಾನೇಜರ್‌ ಕೇಟ್‌ ಕಲಘನ್‌ ಅವರು ಉಪಸ್ಥಿತರಿದ್ದರು.

ಇದನ್ನೂ ಓದಿ: Kannada New Movie: ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೇಲರ್ ರಿಲೀಸ್‌; ಸಿನಿಮಾ ಬಿಡುಗಡೆ ಯಾವಾಗ?

ಈ ಬಗ್ಗೆ ಸಚಿವ ಎಂ.ಬಿ.ಪಾಟೀಲ ಮಾತನಾಡಿ, “ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿ ಉತ್ತೇಜಿಸುವಲ್ಲಿ ಕರ್ನಾಟಕವು ನಿರಂತರವಾಗಿ ಮುನ್ನಡೆ ಸಾಧಿಸುತ್ತಿದೆ. ₹8,300 ಕೋಟಿ ಮೊತ್ತದ ಈ ಹೂಡಿಕೆ ಕಾರ್ಯಗತಗೊಳಿಸುವಲ್ಲಿ ರಾಜ್ಯ ಸರ್ಕಾರ ಮತ್ತು ಷೆರ್ವನ್‌ ಕಂಪನಿ ನಡುವಣ ಸಹಯೋಗವು ಕರ್ನಾಟಕದ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಕ್ಷೇತ್ರದಲ್ಲಿನ ಮಹತ್ವದ ಪ್ರಗತಿಗೆ ಸ್ಪಷ್ಟ ನಿದರ್ಶನವಾಗಿದೆ. ನಾವೀನ್ಯತೆ, ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿ ಉತ್ತೇಜಿಸಲು ರಾಜ್ಯ ಸರ್ಕಾರವು ಬದ್ಧವಾಗಿದೆʼ ಎಂದು ತಿಳಿಸಿದ್ದಾರೆ.

ಷೆರ್ವನ್‌ ಇಂಡಿಯಾದ ಮುಖ್ಯಸ್ಥ ಅಕ್ಷಯ್ ಸಾಹ್ನಿ ಮಾತನಾಡಿ,”ಕೈಗೆಟುಕುವ, ವಿಶ್ವಾಸಾರ್ಹವಾದ ಶುದ್ಧ ಇಂಧನ ಒದಗಿಸಲು ಭಾರತದ ಅಸಾಧಾರಣ ಪ್ರತಿಭಾನ್ವಿತರು ನಮ್ಮ ಜಾಗತಿಕ ಜಾಲದ ಸಂಪನ್ಮೂಲ ಹಾಗೂ ಪರಿಣತಿ ಜತೆಗೆ ಕೆಲಸ ಮಾಡಲು ಈ ಕೇಂದ್ರವು ಅವಕಾಶ ಒದಗಿಸಲಿದೆʼ ಎಂದು ಹೇಳಿದ್ದಾರೆ.

ಈ ಕೇಂದ್ರದಲ್ಲಿ ಇಂಧನ ವ್ಯವಸ್ಥೆಯ ತಂತ್ರಜ್ಞಾನ ಆವಿಷ್ಕಾರಗಳಿಗೆ ವೇಗ ನೀಡಲು ಎಂಜಿನಿಯರಿಂಗ್‌ ಮತ್ತು ಡಿಜಿಟಲ್‌ ಸೇವೆಗಳಿಗೆ ಸಂಬಂಧಿಸಿದಂತೆ 2025ರ ವೇಳೆಗೆ 600 ತಂತ್ರಜ್ಞರನ್ನು ನೇಮಕ ಮಾಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಆವಿಷ್ಕಾರಕ್ಕೆ ಪೂರಕ ವಾತಾವರಣ ಸೃಷ್ಟಿಸಿರುವ ಪ್ರಗತಿಪರ ನೀತಿಗಳ ಮೂಲಕ ತಾಂತ್ರಿಕ ಪ್ರಗತಿ ಉತ್ತೇಜಿಸಲು ರಾಜ್ಯವು ಅನುಕರಣೀಯ ಕ್ರಮಗಳನ್ನು ತೆಗೆದುಕೊಂಡಿದೆ. ಬೆಂಗಳೂರು ಈಗಾಗಲೇ 500ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ (ಜಿಸಿಸಿ) ನೆಲೆಯಾಗಿದ್ದು, ಹಣಕಾಸು, ಆರೋಗ್ಯ, ರಿಟೇಲ್‌ ವ್ಯಾಪಾರ, ತಯಾರಿಕಾ ಮತ್ತಿತರ ವಲಯಗಳು ಸೇರಿದಂತೆ ಭಾರತದ ʼಜಿಸಿಸಿʼಗಳಲ್ಲಿ ಶೇ 30ಕ್ಕಿಂತ ಹೆಚ್ಚು ಪಾಲು ಹೊಂದಿದೆ ಎಂದು ಸಚಿವರು ವಿವರಿಸಿದರು.

ಷೆರ್ವನ್‌ ಶ್ರೇಷ್ಠತಾ ಕೇಂದ್ರವು (ಇಎನ್‌ಜಿಐಎನ್‌ಇ) ಸ್ಥಳೀಯ ವೃತ್ತಿಪರರಿಗೆ ಗಮನಾರ್ಹ ಪ್ರಮಾಣದಲ್ಲಿ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲಿದೆ. ಸದ್ಯದ ಜಾಗತಿಕ ಇಂಧನ ಬೇಡಿಕೆಗಳನ್ನು ಪೂರೈಸುವ ಸವಾಲಿಗೆ ಸ್ಪಂದಿಸಲು ಮತ್ತು ಭವಿಷ್ಯದಲ್ಲಿ ಕಡಿಮೆ ಇಂಗಾಲ ಹೊರಸೂಸುವ ಶುದ್ಧ ಇಂಧನ ತಯಾರಿಸುವುದಕ್ಕೆ ಕೊಡುಗೆ ನೀಡಲು ಅವರಿಗೆ ಅವಕಾಶ ನೀಡಲಿದೆ. ಇಲ್ಲಿ ಕಾರ್ಯನಿರ್ವಹಿಸಲಿರುವ ಷೆರ್ವನ್‌ ತಂಡವು ಅಂತಾರಾಷ್ಟ್ರೀಯ ಭಾಗಿದಾರರ ಸಹಭಾಗಿತ್ವದಲ್ಲಿ ಸಂಕೀರ್ಣ ಸ್ವರೂಪದ ಜಾಗತಿಕ ಕಾರ್ಯಾಚರಣೆಗಳು ಮತ್ತು ಇಂಧನ ಯೋಜನೆಗಳನ್ನು ಕಾರ್ಯಗತಗೊಳಿಸಲಿದೆ ಎಂದು ಸಚಿವ ಎಂ.ಬಿ. ಪಾಟೀಲ ವಿವರಿಸಿದರು.

ಬೆಂಗಳೂರಿನಲ್ಲಿ ಷೆರ್ವನ್‌ ಶ್ರೇಷ್ಠತಾ ಕೇಂದ್ರದ ಸ್ಥಾಪನೆಯು ತಂತ್ರಜ್ಞಾನ, ನಾವೀನ್ಯತೆ ಮತ್ತು ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಆದ್ಯತೆಗಳಿಗೆ ಸೂಕ್ತವಾಗಿ ಹೊಂದಿಕೊಳ್ಳಲಿದೆ. ಈ ಹೂಡಿಕೆಯು ಜಾಗತಿಕ ಕಂಪನಿಗಳ ಪಾಲಿಗೆ ಕರ್ನಾಟಕವು ಪ್ರಮುಖ ತಾಣವಾಗಿರುವುದರ ಮಹತ್ವವನ್ನು ಬಿಂಬಿಸುತ್ತದೆ. ರಾಜ್ಯದ ಅಭಿವೃದ್ಧಿಯಲ್ಲಿ ಉದ್ಯಮ, ನಾವೀನ್ಯತೆ ಮತ್ತು ತಂತ್ರಜ್ಞಾನವನ್ನು ಉತ್ತೇಜಿಸುವ ಕರ್ನಾಟಕ ಸರ್ಕಾರದ ಅಚಲ ಬದ್ಧತೆಗೂ ಇದು ಸಾಕ್ಷಿಯಾಗಿದೆ ಎಂದೂ ಸಚಿವರು ಹೇಳಿದರು.

ಇದನ್ನೂ ಓದಿ: Kannada New Movie: ʼಪೆನ್ ಡ್ರೈವ್ʼ ಚಿತ್ರದಲ್ಲಿ ಮಾಲಾಶ್ರೀ; ಇದು ತನಿಷಾ ಕುಪ್ಪಂಡ ಅಭಿನಯದ ಚಿತ್ರ

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಮತ್ತು ಷೆರ್ವನ್‌ನ ಪ್ರತಿನಿಧಿಗಳು ಉಪಸ್ಥಿತರಿದ್ದರು.

Continue Reading

ಕರ್ನಾಟಕ

7th pay commission: ರಾಜ್ಯ ಸರ್ಕಾರಿ ನೌಕರರ ಪರಿಷ್ಕೃತ ವೇತನ ಶ್ರೇಣಿ ಪ್ರಕಟ; ಯಾರಿಗೆ ಎಷ್ಟು ಏರಿಕೆ?

7th pay commission: ರಾಜ್ಯ 7ನೇ ವೇತನ ಆಯೋಗದ ಶಿಫಾರಸುಗಳ ಅನ್ವಯ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು 25 ಪರಿಷ್ಕೃತ ಸ್ಥಾಯಿ ವೇತನ ಶ್ರೇಣಿಗಳನ್ನು, ವೇತನ ಸಂಬಂಧಿತ ಭತ್ಯೆಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಿ ಸರ್ಕಾರದ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

VISTARANEWS.COM


on

7th pay commission
Koo

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಿಸಲು ರಚನೆ ಮಾಡಿದ್ದ ರಾಜ್ಯ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳನ್ನು ಆ.1ರಿಂದ ಜಾರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಇದೀಗ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು 25 ಪರಿಷ್ಕೃತ ಸ್ಥಾಯಿ ವೇತನ ಶ್ರೇಣಿಗಳನ್ನು, ವೇತನ ಸಂಬಂಧಿತ ಭತ್ಯೆಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಿ ಸರ್ಕಾರದ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ.ರೇಜು ಆದೇಶ ಹೊರಡಿಸಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಾಗಲಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

2022ರ ನ.19ರಂದು ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯನ್ನು ಸಲ್ಲಿಸಿತ್ತು. 7ನೇ ರಾಜ್ಯ ವೇತನ ಆಯೋಗವು ಶಿಫಾರಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಜುಲೈ 1ರಿಂದ ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ತಿಳಿಸಲಾಗಿದೆ.

1. ಪರಿಷ್ಕೃತ ವೇತನ ಶ್ರೇಣಿಗಳು

ಔದ್ಯಮಿಕ ಕೆಲಸಗಾರರ ಅಖಿಲ ಭಾರತ ಸರಾಸರಿ ಗ್ರಾಹಕ ಬೆಲೆ ಸೂಚ್ಯಂಕ (ಸಾಮಾನ್ಯ) 361.704 (ಆಧಾರ ವರ್ಷ 2001=100) ಅಂಶಗಳ ಸೂಚ್ಯಂಕ ಸರಾಸರಿಯಿಂದ ನಿರೂಪಿಸಲಾದ 2022ರ ಜುಲೈ 1ರ ಜೀವನ ಪರಿಸ್ಥಿತಿ ವೆಚ್ಚಕ್ಕೆ ಪರಿಷ್ಕೃತ ವೇತನ ಶ್ರೇಣಿಗಳು ಹೊಂದಿಕೊಂಡಿರುತ್ತವೆ.

ಪರಿಷ್ಕೃತ ವೇತನ ಶ್ರೇಣಿಗಳು ಮುಖ್ಯ ವೇತನ ಶ್ರೇಣಿ ರೂ.27000-650-29600-725- 32500-800-35700-900-39300-1000-43300-1125-47800-1250-52800-1375-58300- 1500-64300-1650-74200-1900-85600-2300-99400-2700-115600-3100-134200- 3500-155200-4000-179200-4500-206200-5000-2412000 ನಿರ್ದಿಷ್ಟ ಭಾಗಗಳಾಗಿವೆ.

1ನೇ ಜುಲೈ 2012ಕ್ಕೆ ಅನ್ವಯಿಸುವಂತೆ ಹುದ್ದೆಗಳಿಗೆ ಅನ್ವಯವಾಗುವ ಪ್ರಸಕ್ತ ವೇತನ ಶ್ರೇಣಿ ಮತ್ತು ಅದಕ್ಕೆ ಸಂವಾದಿ ಸಮಾನಾಂತರ ಪರಿಷ್ಕೃತ ವೇತನ ಶ್ರೇಣಿಗಳು ಮೇಲಿನ ಕಂಡಿಕೆ 1.1 ರ (2) ಮತ್ತು (3)ನೇ ಅಂಕಣಗಳಲ್ಲಿ ನಿರ್ದಿಷ್ಟಪಡಿಸಿದಂತೆ ಇರತಕ್ಕದ್ದು.

ಜಾರಿಗೆ ಬರುವ ದಿನಾಂಕ:

2024ರ ಪರಿಷ್ಕೃತ ವೇತನ ಶ್ರೇಣಿಗಳು 1ನೇ ಜುಲೈ 2022ರಿಂದ ಜಾರಿಗೆ ಬರುವಂತೆ ಅನ್ವಯವಾಗುತ್ತವೆ. ಪರಿಷ್ಕೃತ ವೇತನ ಶ್ರೇಣಿಗಳ ಅನುಷ್ಠಾನದ ಕಾರಣದಿಂದ ಉಂಟಾಗುವ ವೇತನ ಮತ್ತು ಪಿಂಚಣಿಯ ಆರ್ಥಿಕ ಲಾಭವು ಆಗಸ್ಟ್ 1ರಿಂದ ಲಭ್ಯವಾಗುತ್ತದೆ.

ವೇತನ ಶ್ರೇಣಿಗಳ ಮತ್ತು ಪಿಂಚಣಿಯ ಪರಿಷ್ಕರಣೆಯ ಕಾರಣದಿಂದ ಉಂಟಾಗುವ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿಯ ಮೊತ್ತದಲ್ಲಿನ ಹೆಚ್ಚಳವನ್ನು 1ನೇ ಆಗಸ್ಟ್ 2024 ರಿಂದ ನಗದಾಗಿ ಸಂದಾಯ ಮಾಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Continue Reading

ಬೆಂಗಳೂರು

Kannada New Movie: ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೇಲರ್ ರಿಲೀಸ್‌; ಸಿನಿಮಾ ಬಿಡುಗಡೆ ಯಾವಾಗ?

ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ಅವರು ನಿರ್ಮಿಸಿರುವ, ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶಿಸಿರುವ ಹಾಗೂ ಯುವ ಕಲಾವಿದರಾದ ವಿಹಾನ್, ಅಂಕಿತ ಅಮರ್ ಮತ್ತು ಮಯೂರಿ ನಟರಾಜ ನಟಿಸಿರುವ ಸುಂದರ ದೃಶ್ಯ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರದ (Kannada New Movie) ಟ್ರೇಲರ್ ಬಿಡುಗಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ಅವರು ನಿರ್ಮಿಸಿರುವ, ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶಿಸಿರುವ ಹಾಗೂ ಯುವ ಕಲಾವಿದರಾದ ವಿಹಾನ್, ಅಂಕಿತ ಅಮರ್ ಮತ್ತು ಮಯೂರಿ ನಟರಾಜ ನಟಿಸಿರುವ ಸುಂದರ ದೃಶ್ಯ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ (Kannada New Movie) ಸೆಪ್ಟೆಂಬರ್ 5ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

ಚಿತ್ರದ ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟ್ರೇಲರ್ ಹಾಗೂ ಹಾಡುಗಳನ್ನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರೇಕ್ಷಕರು ಚಿತ್ರಮಂದಿರಗಳಿಗೂ ಬಂದು ಚಿತ್ರವನ್ನು ನೋಡಿ ಪ್ರೋತ್ಸಾಹಿಸುತ್ತಾರೆ ಎಂಬ ಭರವಸೆ ಚಿತ್ರತಂಡಕ್ಕಿದೆ‌. ಟ್ರೇಲರ್ ಬಿಡುಗಡೆ ಸಮಾರಂಭದ ಆದಿಯಲ್ಲಿ ಚಿತ್ರ ತಂಡ ಪವರ್ ಸ್ಟಾರ್ ಅವರಿಗೆ ಗೌರವ ಸಲ್ಲಿಸುವ ಕಾರಣದಿಂದ ಅವರ ಚಿತ್ರಗಳ ಗೀತೆ ಹಾಡಿ ಅಭಿಮಾನ ಮೆರೆದರು.

ನಂತರ ನಿರ್ಮಾಪಕ ರಕ್ಷಿತ್ ಶೆಟ್ಟಿ ಮಾತನಾಡಿ, ನಿರ್ದೇಶಕ ಚಂದ್ರಜಿತ್ ಅವರು 9 ವರ್ಷಗಳ ಹಿಂದೆ ಬ್ಲಾಗ್‌ನಲ್ಲಿ ಮೆಸೇಜ್ ಮಾಡಿದ್ದರು. ಲಿಂಕ್ ಓಪನ್ ಮಾಡಿದೆ. ಬರವಣಿಗೆ ವಿಶೇಷ ಅನಿಸಿತು. ನಂತರ ಚಂದ್ರಜಿತ್ ಅವರು ಭೇಟಿಯಾದರು‌‌. ಅವರು ಬರೆದ ಕಥೆ ಸಿನಿಮಾವಾಗಿ ರೂಪಾಂತರವಾಯಿತು. ಕನ್ನಡದಲ್ಲಿ ಈ ಕಥೆಯನ್ನು ಹೋಲುವ ಚಿತ್ರಗಳು ಬಂದಿರಬಹುದು.‌ ಆದರೆ ಈ ರೀತಿಯ ನಿರೂಪಣೆಯಿರುವ ಚಿತ್ರ ಬಂದಿಲ್ಲ. ನಾನು ಈಗಾಗಲೇ ಮೂರು ಸಲ ಚಿತ್ರ ನೋಡಿದ್ದೇನೆ. ಟ್ರೇಲರ್ ಹಾಗೂ ಸಿ‌ನಿಮಾ‌‌ ಎರಡು ಬಹಳ ಇಷ್ಟವಾಗಿದೆ. ವಿಹಾನ್ ಹಾಗು ಅಂಕಿತ ಇಬ್ಬರದು ಪ್ರಶಸ್ತಿ ಬರುವಂತಹ ಅಭಿನಯ. ಜತೆಗೆ ಮಯೂರಿ ಕೆಲವೇ ಸನ್ನಿವೇಶದಲ್ಲಿ ಕಾಣಿಸಿಕೊಂಡರೂ ಎಲ್ಲರ ಗಮನ ಸೆಳೆಯುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇಂದು ಟ್ರೇಲರ್ ಬಿಡುಗಡೆಯಾಗಿದೆ. ಸೆಪ್ಟೆಂಬರ್ 5 ಚಿತ್ರ ತೆರೆ ಕಾಣಲಿದೆ. ನಾನು ಯಾವುದಕ್ಕೂ ಬೇಗ ಕಾಂಪ್ರಮೈಸ್ ಆಗುವುದಿಲ್ಲ.‌ ಆದರೆ ನನ್ನ ತಂಡ ಟ್ರೇಲರ್ ಅನ್ನು ಎರಡೇ ದಿನದಲ್ಲಿ‌‌ ಸಿದ್ದ ಮಾಡಿತು. ನನಗೂ ನೋಡಿ ಖುಷಿಯಾಯಿತು. ಇನ್ನು, ನಿರ್ಮಾಪಕ ರಕ್ಷಿತ್ ಶೆಟ್ಟಿ ಸೇರಿದಂತೆ ಇಡೀ ತಂಡದ ಸಹಕಾರದಿಂದ ಚಿತ್ರ ಕೂಡ ಚೆನ್ನಾಗಿ ಮೂಡಿಬಂದಿದೆ. ವಿಹಾನ್, ಅಂಕಿತ ಅಮರ್ ಹಾಗೂ ಮಯೂರಿ ಅವರ ಜತೆಗೆ ಈ ಚಿತದಲ್ಲಿ “ಗೀತಾಂಜಲಿ” ಚಿತ್ರದ ಖ್ಯಾತಿಯ ಗಿರಿಜಾ ಶೆಟ್ಟರ್ ಅಭಿನಯಿಸಿದ್ದಾರೆ. ಇಪ್ಪತ್ತು ವರ್ಷಗಳ ನಂತರ ಅವರು ಮತ್ತೆ ನಮ್ಮ ಚಿತ್ರದಲ್ಲಿ ನಟಿಸಿದ್ದು, ಬಹಳ ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮ ಸಹಕಾರ, ಪ್ರೋತ್ಸಾಹ ಇರಲಿ ಎಂದರು ಚಂದ್ರಜಿತ್ ಬೆಳ್ಳಿಯಪ್ಪ.

ನಟ ವಿಹಾನ್ ಮಾತನಾಡಿ, ಹಾಡು ಎಲ್ಲರಿಗೂ ಇಷ್ಟವಾಗಿದೆ ಸಿನಿಮಾ ಕೂಡ ಇಷ್ಟವಾಗಲಿದೆ. ಸಿನಿಮಾ ನೋಡಿದವರು ಇನ್ನಷ್ಟು ಜನರನ್ನು ಚಿತ್ರಮಂದಿರಕ್ಕೆ ಕರೆತರುತ್ತಾರೆ ಎಂಬ ಭರವಸೆ ಇದೆ. ನಿರ್ದೇಶಕ ಚಂದ್ರಜಿತ್ ಹೇಳಿದ ಕಥೆ ಆಸಕ್ತಿಕರವಾಗಿತ್ತು. ಪ್ರತಿಭೆ ನೋಡಿ ಆಯ್ಕೆ ಮಾಡಿಕೊಳ್ಳುವಲ್ಲಿ ರಕ್ಷಿತ್ ಶೆಟ್ಟಿ ಕೂಡ ಒಬ್ಬರು. ಸಿನಿಮಾಗೆ ಆಯ್ಕೆಯಾದ ಮೇಲೆ ಅವರಿಗೆ ಮೆಸೇಜ್ ಮಾಡಿ ಧನ್ಯವಾದ ಹೇಳಿದ್ದೆ ಎಂದರು.

ಇದನ್ನೂ ಓದಿ: Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ

ನಟಿ ಅಂಕಿತ ಅಮರ್ ಮಾತನಾಡಿ, ಪ್ರತಿಯೊಬ್ಬರಿಗೂ ಸಾಕಷ್ಟು ಕನಸುಗಳಿವೆ. ಕನಸು, ಹೊಂಬಿಸಲಾಗಿ ಬಂದ ಚಿತ್ರ ಇಬ್ಬನಿ‌ ತಬ್ಬಿದ ಇಳೆಯಲಿ ಚಿತ್ರ. ಒಂದು ರೀತಿ ಮ್ಯಾಜಿಕ್ ಕ್ರಿಯೇಟ್ ಮಾಡಿದೆ “ಇಬ್ಬನಿ ತಬ್ಬಿದ ಇಳೆಯಲಿ”. ಈ ಚಿತ್ರದಲ್ಲಿ ಸಂದರ್ಭ ಖಳನಾಯಕ. ಸಂದರ್ಭದ ಅನುಸಾರ ಪಾತ್ರಗಳ ಪರಿಚಯ ಮಾಡಿಸಿದ್ದಾರೆ. ಕಲಾವಿದರಿಗೆ ನಿರ್ದೇಶಕ ಎನ್ನುವ ರೋಲ್ ಬಹು ಮುಖ್ಯ. ಪ್ರತಿಯೊಂದು ನಿರ್ದೇಶಕ ಚಂದ್ರಜಿತ್ ಅವರಿಂದ ಆಗಿರುವುದು. ಪ್ರೀತಿಯ ಆಚರಣೆಯನ್ನು ಸಂಗೀತ ಮತ್ತು ವಿಶ್ಯುಯಲ್ ಮೂಲಕ ಕಟ್ಟಿಕೊಡಲಾಗಿದೆ. ಈ ಆಚರಣೆಗೆ ಮತ್ತಷ್ಟು ಕಳೆ ಬರಬೇಕಾದರೆ ಚಿತ್ರಮಂದಿರಕ್ಕೆ ಬಂದು ಎಲ್ಲರೂ ಸಿನಿಮಾ‌ ನೋಡಿ ಹೊಸ ಕಲಾವಿದರು ಹಾಗೂ ತಂತ್ರಜ್ಞರಿಗೆ ಪ್ರೋತ್ಸಾಹ ನೀಡಿ ಎಂದು ಕೇಳಿಕೊಂಡರು.

ನಟಿ ಮಯೂರಿ ನಟರಾಜ್ ಮಾತನಾಡಿ, ಟ್ರೇಲರ್ ಬಿಡುಗಡೆಯಾಗಿರುವುದು ಖುಷಿ ಆಗಿದೆ. ಕಣ್ಣಲ್ಲೇ ಅಭಿನಯಿಸಬೇಕು ಎನ್ನುವುದು ಸವಾಲಾಗಿತ್ತು. ಸಿನಿಮಾ ನೋಡಿ ತಿಳಿಸಿ. ಹೊಸಬರು ಇರುವ ಚಿತ್ರವನ್ನು ಈ‌ ಮಟ್ಟವನ್ನು ತೆರೆಗೆ ತರುವುದು ದೊಡ್ಡ ವಿಷಯ. ಹೊಸಬರಿಗೂ ದೊಡ್ಡಮಟ್ಟದಲ್ಲಿ ಸಿನಿಮಾ ಮಾಡಲಿ ಎಂದು ಹಾರೈಸಿದರು.

ಪರಂವಃ ಸಂಸ್ಥೆಯ ಸಿಇಓ ಶ್ರೀನಿಶ್ ಶೆಟ್ಟಿ, ಚಿತ್ರ ಕನ್ನಡದಲ್ಲಿ ಮತ್ತೊಂದು ಬ್ಲಾಕ್ ಬ್ಲಸ್ಟರ್ ಚಿತ್ರವಾಗಲಿದೆ. ಚಿತ್ರ ನೋಡಿದ ತಂಡ ನಿರ್ದೇಶಕ ಚಂದ್ರಜಿತ್ ಅವರನ್ನು ತಬ್ಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದೇವೆ ಎಂದರು.

ಚಾರ್ಲಿ 777 ನಿರ್ದೇಶಕ ಕಿರಣ್ ರಾಜ್ ಮಾತನಾಡಿ, ಟ್ರೈಲರ್ ಚೆನ್ನಾಗಿ ಮೂಡಿಬಂದಿದೆ. ನಿರ್ದೇಶಕ ಚಂದ್ರಜಿತ್ ನಾನು ಕಿರಿಕ್ ಪಾರ್ಟಿಯಿಂದ ಜತೆಯಾಗಿ ಕೆಲಸ ಮಾಡಿದ್ದೇವೆ ಎಂದ ಅವರು, ಗೆಲ್ಲಲು ಎಲ್ಲಾ ಅರ್ಹತೆ ಇರುವ ಸಿನಿಮಾ. ಚಿತ್ರದಲ್ಲಿ ನನ್ನಗೊಂದು ಪಾತ್ರ ನೀಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Vande Bharat Express: ಇನ್ನು ಮುಂದೆ ತುಮಕೂರಿನಲ್ಲೂ ನಿಲ್ಲಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು; ಟಿಕೆಟ್‌ ದರ ಎಷ್ಟು?

ಸಂಗೀತ ನಿರ್ದೇಶಕ ಗಗನ್ ಬಡೇರಿಯಾ, ಛಾಯಾಗ್ರಾಹಕ ಶ್ರೀವತ್ಸನ್ ಸೆಲ್ವರಾಜನ್, ಸಂಕಲನಕಾರ ರಕ್ಷಿತ್ ಕಾಪು ಮತ್ತಿತರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

Continue Reading
Advertisement
ಕರ್ನಾಟಕ18 mins ago

Muda Scam: ದೆಹಲಿಯಲ್ಲಿ ರಾಹುಲ್‌ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ; ಕಾನೂನು ಹೋರಾಟದ ಬಗ್ಗೆ ಚರ್ಚೆ

Uttara Kannada News
ಉತ್ತರ ಕನ್ನಡ27 mins ago

Uttara Kannada News: ಹೊಸ ಆಧಾರ್ ನೋಂದಣಿ, ತಿದ್ದುಪಡಿಗೆ ಅವಕಾಶ

Invest Karnataka
ಬೆಂಗಳೂರು29 mins ago

Invest Karnataka: ಇಂಧನ ತಂತ್ರಜ್ಞಾನ; ರಾಜ್ಯದಲ್ಲಿ 8,300 ಕೋಟಿ ರೂ. ಹೂಡಿಕೆ ಮಾಡಲಿರುವ ಷೆರ್ವನ್‌ ಇಂಡಿಯಾ

UPSC Exam calendar
ದೇಶ56 mins ago

UPSC Exam calendar: UPSC ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್‌ ರಿಲೀಸ್‌; ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

7th pay commission
ಕರ್ನಾಟಕ1 hour ago

7th pay commission: ರಾಜ್ಯ ಸರ್ಕಾರಿ ನೌಕರರ ಪರಿಷ್ಕೃತ ವೇತನ ಶ್ರೇಣಿ ಪ್ರಕಟ; ಯಾರಿಗೆ ಎಷ್ಟು ಏರಿಕೆ?

Viral Video
Latest1 hour ago

Viral Video: ವಿಮಾನ ನಿಲ್ದಾಣದಲ್ಲಿ ಹೃದಯಾಘಾತ; ಸಿಪಿಆರ್ ಮಾಡಿ ಜೀವ ಉಳಿಸಿದ ಅಧಿಕಾರಿಗಳು

Recurring Deposit
ಮನಿ-ಗೈಡ್2 hours ago

Recurring Deposit: ಸಣ್ಣ, ಆರಂಭಿಕ ಹೂಡಿಕೆದಾರರಿಗೆ ಸೂಕ್ತ ಪೋಸ್ಟ್ ಆಫೀಸ್‌ನ ಆರ್‌ಡಿ; ಏನಿದರ ಲಾಭ?

Kannada New Movie
ಬೆಂಗಳೂರು2 hours ago

Kannada New Movie: ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೇಲರ್ ರಿಲೀಸ್‌; ಸಿನಿಮಾ ಬಿಡುಗಡೆ ಯಾವಾಗ?

UPSC Admit Card
ಪ್ರಮುಖ ಸುದ್ದಿ2 hours ago

UPSC Admit Card: NDA ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆಗೊಳಿಸಿದ UPSC; ಎಲ್ಲಿ ಡೌನ್ಲೋಡ್‌ ಮಾಡಬಹುದು?

Non Vegetarian Population
ಆಹಾರ/ಅಡುಗೆ2 hours ago

Non Vegetarian Population: ಜಗತ್ತಿನಲ್ಲಿ ಕುಸಿಯುತ್ತಿದೆ ಮಾಂಸಾಹಾರಿಗಳ ಸಂಖ್ಯೆ! ಕಡಿಮೆ ಮಾಂಸಾಹಾರದ ದೇಶಗಳಲ್ಲಿ ಭಾರತವೇ ನಂ.1

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌