MB Patil: ಸಿಎಂ ಆಯ್ತು, ಈಗ ಸಚಿವ ಎಂಬಿ ಪಾಟೀಲ್‌ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು - Vistara News

ಪ್ರಮುಖ ಸುದ್ದಿ

MB Patil: ಸಿಎಂ ಆಯ್ತು, ಈಗ ಸಚಿವ ಎಂಬಿ ಪಾಟೀಲ್‌ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು

ಕೆಐಎಡಿಬಿ ನಿವೇಶನ ಹಂಚಿಕೆಯಲ್ಲಿ (KIADB site allotment) ಅಕ್ರಮ ಎಸಗಿದ ಆರೋಪದಲ್ಲಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ವಿರುದ್ಧ ಪ್ರಾಸಿಕ್ಯೂ‌ಶನ್‌ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ‌ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.

VISTARANEWS.COM


on

Minister MB Patil statement in janandolana programme by congress party at ramanagara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಪ್ರಾಸಿಕ್ಯೂಶನ್‌ (Prosecution) ಅನುಮತಿ ಕಂಟಕದ ಬಳಿಕ ಇದೀಗ ಸಚಿವ ಎಂ.ಬಿ ಪಾಟೀಲ್‌ (MB Patil) ಅವರಿಗೆ ಸಂಕಷ್ಟ ತಗುಲಿಕೊಂಡಿದೆ. ಎಂಬಿ ಪಾಟೀಲ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ (Governor Thawar Chand Gehlot) ದೂರು ಸಲ್ಲಿಸಲಾಗಿದೆ.

ಕೆಐಎಡಿಬಿ ನಿವೇಶನ ಹಂಚಿಕೆಯಲ್ಲಿ (KIADB site allotment) ಅಕ್ರಮ ಎಸಗಿದ ಆರೋಪದಲ್ಲಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ವಿರುದ್ಧ ಪ್ರಾಸಿಕ್ಯೂ‌ಶನ್‌ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ‌ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಮನವಿ ಮಾಡಿದ್ದಾರೆ. ಬಿಡದಿ, ವಸಂತನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ‌ ಹಂಚಿಕೆಯಲ್ಲಿ ಅಕ್ರಮ‌ ಎಸಗಲಾಗಿದೆ. ಕಾನೂನು ಬಾಹಿರವಾಗಿ ನಿಯಮಗಳನ್ನು ಗಾಳಿಗೆ ತೂರಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ದಿನೇಶ್‌ ಕಲ್ಲಹಳ್ಳಿ ಇಂದು ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದ್ದಾರೆ.

ಇತ್ತೀಚೆಗೆ ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಎಂಬವರು ಮನವಿ ಮಾಡಿದ್ದರು. ಅವರಿಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಇದೀಗ ಈ ಕೇಸು ಹೈಕೋರ್ಟ್‌ನಲ್ಲಿದೆ.

ಸಿದ್ದರಾಮಯ್ಯ ತಡೆಯಾಜ್ಞೆ ಕೋರಿದ ಅರ್ಜಿ ವಿಚಾರಣೆ 29ಕ್ಕೆ

ಮುಡಾ ಹಗರಣದಲ್ಲಿ (Muda Scam) ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಸೋಮವಾರ ನಡೆದಿದೆ. ಸುದೀರ್ಘ ಒಂದೂವರೆ ಗಂಟೆ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆಯನ್ನು ಆ.29ರ ಮಧ್ಯಾಹ್ನ 2.30ಕ್ಕೆ ಮುಂದೂಡಿದರು.

ಅರ್ಜಿ ವಿಚಾರಣೆ ವೇಳೆ ವಾದ-ಪ್ರತಿವಾದ ಆಲಿಸಿದ ಬಳಿಕ ಮಾತನಾಡಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ದೂರುದಾರರು ಹಾಗೂ ಸಿಎಂ ಪರ ವಕೀಲರು ವಾದ ಮಂಡಿಸಿದ್ದಾರೆ. ಪಿಸಿ ಆಕ್ಟ್ 17ಎ ಅಡಿ ಅನುಮತಿ ಪ್ರಶ್ನಿಸಲಾಗಿದ್ದು, ರಿಟ್ ಅರ್ಜಿಯೊಂದಿಗೆ ದಾಖಲೆಗಳನ್ನು ಉಲ್ಲೇಖಿಸಿದ್ದಾರೆ. ರಾಜ್ಯಪಾಲರು ವಿವೇಚನಾರಹಿತವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಸಿಎಂ ಪರ ವಕೀಲರು ವಾದ ಮಂಡಿಸಿದ್ದಾರೆ. ಇನ್ನು ರಾಜ್ಯಪಾಲರ ಆದೇಶಕ್ಕೆ ತಡೆ ನೀಡಬಾರದು ಎಂದು ಪ್ರಭುಲಿಂಗ ನಾವದಗಿ ವಾದಿಸಿದ್ದಾರೆ. ಎಲ್ಲಾ ವಾದವನ್ನು ಕೋರ್ಟ್‌ ಆಲಿಸಿದ್ದು,
ಹೈಕೋರ್ಟ್ ಮುಂದಿನ ಆದೇಶ ನೀಡುವವರೆಗೂ ಅಂದರೆ ಆಗಸ್ಟ್ 29ರವರೆಗೆ ವಿಚಾರಣೆ ಮುಂದೂಡಬೇಕು ಎಂದು ಜನಪ್ರತಿನಿಧಿಗಳ ಕೋರ್ಟ್‌ಗೆ ಸೂಚನೆ ನೀಡಿದರು.

ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಾದ ಮಂಡಿಸಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿದ್ದರು. ಸಿಎಂ ಸಿದ್ದರಾಮಯ್ಯ ಪರ ವಕೀಲ ಮನು ಸಿಂಘ್ವಿ ವಾದ ಮಂಡಿಸಿ, ಪ್ರಕರಣದಲ್ಲಿ ಸಂವಿಧಾನಾತ್ಮಕ ಮತ್ತು ಆಡಳಿತಾತ್ಮಕ ವಿಚಾರಗಳಿವೆ. ನಾಳೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ಬಾಕಿ ಇದೆ. ಗವರ್ನರ್ ಆದೇಶ ನೀಡುವ ಮುನ್ನ ಕ್ಯಾಬಿನೆಟ್ ತೀರ್ಮಾನ ಮಾಡಿದೆ. ಆದರೆ, ಗವರ್ನರ್ ಯಾವ ಆಧಾರ ಇಲ್ಲದೆಯೂ ಅನುಮತಿ ನೀಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ | CM Siddaramaiah: ನಾನು ಡಲ್‌ ಆಗಿಲ್ಲ, ನನ್ನ ಹೋರಾಟದ ಜೋಶ್‌ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Vande Bharat Express: ಇನ್ನು ಮುಂದೆ ತುಮಕೂರಿನಲ್ಲೂ ನಿಲ್ಲಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು; ಟಿಕೆಟ್‌ ದರ ಎಷ್ಟು?

Vande Bharat Express: ತುಮಕೂರಿನಲ್ಲಿ ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ಹೊತ್ತು 2 ನಿಮಿಷಗಳ‌ ಕಾಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ ನೀಡಲಿದೆ. ಇದರಿಂದ ತುಮಕೂರಿನಿಂದ ಬೆಂಗಳೂರು ಹಾಗೂ ಧಾರವಾಡಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ.

VISTARANEWS.COM


on

Koo

ತುಮಕೂರು: ನಗರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು (Vande Bharat Express) ಅಧಿಕೃತ ನಿಲುಗಡೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ಹಸಿರು ನಿಶಾನೆ ತೋರಿದರು. ತುಮಕೂರು ರೈಲು ನಿಲ್ದಾಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರೈಲು ನಿಲುಗಡೆಗೆ ಸಚಿವರು ಗ್ರೀನ್ ಸಿಗ್ನಲ್ ನೀಡಿದರು. ಇದರಿಂದ ಇನ್ನು ಮುಂದೆ‌ ನಗರದಲ್ಲಿ ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ಹೊತ್ತು 2 ನಿಮಿಷಗಳ‌ ಕಾಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ ನೀಡಲಿದೆ.

ಧಾರವಾಡ-ಬೆಂಗಳೂರು, ಬೆಂಗಳೂರು- ಧಾರವಾಡಕ್ಕೆ ಸಂಚರಿಸುವ ವಂದೇ ಭಾರತ್ ರೈಲು, ಪ್ರತಿದಿನ ಬೆಳಗ್ಗೆ 6.32ಕ್ಕೆ ಬೆಂಗಳೂರಿನಿಂದ ತುಮಕೂರಿಗೆ ಬರಲಿದೆ. ಸಂಜೆ 6.18ಕ್ಕೆ ಧಾರವಾಡದಿಂದ ತುಮಕೂರಿಗೆ ಆಗಮಿಸಲಿದೆ. ಎರಡರಿಂದ ಮೂರು ನಿಮಿಷಗಳ ಕಾಲ‌ ನಿಲುಗಡೆ ನೀಡಿ ಮುಂದೆ ಸಾಗಲಿದೆ. ಎಸಿ ಚೇರ್ ತುಮಕೂರಿನಿಂದ ಬೆಂಗಳೂರಿಗೆ 440‌ ರೂ, ಎಕ್ಸಿಕ್ಯುಟಿವ್ ಕ್ಲಾಸ್ 825 ರೂ. ಟಿಕೆಟ್ ದರ ಇದೆ.

ಧಾರವಾಡದಿಂದ ತುಮಕೂರಿಗೆ ಬಂದ ರೈಲಿಗೆ ವಿ.ಸೋಮಣ್ಣ ಅವರು ಹಸಿರು ನಿಶಾನೆ ತೋರಿದರು. ಶಾಸಕರಾದ ಜ್ಯೋತಿಗಣೇಶ್, ಗ್ರಾಮಾಂತರ ಶಾಸಕ ಸುರೇಶ್ ಗೌಡ, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ, ಮಾಜಿ ಸಂಸದ ಜಿ. ಎಸ್. ಬಸವರಾಜು ಹಾಗೂ ರೈಲ್ವೆ ಅಧಿಕಾರಿಗಳ ಉಪಸ್ಥಿತರಿದ್ದರು.

ನಗರದಲ್ಲಿ ವಂದೇ ಭಾರತ್ ರೈಲು ನಿಲುಗಡೆಯಿಂದ ತುಮಕೂರಿನಿಂದ ಬೆಂಗಳೂರು ಹಾಗೂ ಧಾರವಾಡಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ. ಯಾತ್ರಿಕರು ಹಾಗೂ ಪ್ರವಾಸಿಗರು ಸಿದ್ಧಗಂಗಾ ಮಠ ಸೇರಿ ಇನ್ನಿತರ ಸ್ಥಳಗಳನ್ನು ತಲುಪಲು ಪ್ರಯೋಜನವಾಗಲಿದೆ ಎಂದು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ

Continue Reading

ದೇಶ

Goodbye to black Robes: ಘಟಿಕೋತ್ಸವದಲ್ಲಿ ಧರಿಸುವ ಕಪ್ಪು ನಿಲುವಂಗಿ, ಟೋಪಿಗೆ ಗುಡ್‌ಬೈ- ಕೇಂದ್ರದಿಂದ ಮಹತ್ವದ ಘೋಷಣೆ

Goodbye to black robes: ಕಪ್ಪು ನಿಲುವಂಗಿ ಧರಿಸುವುದು ವಸಾಹತುಶಾಹಿ ಪರಂಪರೆಯಾಗಿದ್ದು ಅದನ್ನು ಬದಲಾಯಿಸಬೇಕಾಗಿದೆ. ಅದಕ್ಕೆ ಅನುಗುಣವಾಗಿ ವೈದ್ಯಕೀಯ ಶಿಕ್ಷಣವನ್ನು ನೀಡುವಲ್ಲಿ ತೊಡಗಿರುವ AIIMS / INIS ಸೇರಿದಂತೆ ಸಚಿವಾಲಯದ ವಿವಿಧ ಸಂಸ್ಥೆಗಳು ತಮ್ಮ ಸಂಸ್ಥೆಯ ಘಟಿಕೋತ್ಸವ ಸಮಾರಂಭಕ್ಕೆ ಸೂಕ್ತವಾದ ಭಾರತೀಯ ಡ್ರೆಸ್ ಕೋಡ್ ಅನ್ನು ವಿನ್ಯಾಸಗೊಳಿಸಲು ಸಚಿವಾಲಯವು ನಿರ್ಧರಿಸಿದೆ. ಹೊಸ ಡ್ರೆಸ್ ಕೋಡ್‌ನ ಪ್ರಸ್ತಾವನೆಗಳನ್ನು ಅನುಮೋದನೆಗಾಗಿ ಸಚಿವಾಲಯಕ್ಕೆ ಸಲ್ಲಿಸುವಂತೆ ಸರ್ಕಾರ ಕೇಳಿದೆ.

VISTARANEWS.COM


on

Goodbye to black robes
Koo

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಶುಕ್ರವಾರ ಏಮ್ಸ್‌(AIIMS)ನಂತಹ ಪ್ರತಿಷ್ಠಿತ ಸಂಸ್ಥೆಗಳು ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲಾ ವೈದ್ಯಕೀಯ ಬೋಧನಾ ಸಂಸ್ಥೆಗಳಿಗೆ ತಮ್ಮ ಘಟಿಕೋತ್ಸವ ಸಮಾರಂಭಗಳಲ್ಲಿ ಧರಿಸುವ ವಸ್ತ್ರ ಸಂಹಿತೆ(Goodbye to black robes)ಯನ್ನು ಇನ್ನು ಮುಂದೆ ಬದಲಿಸುವಂತೆ ನಿರ್ದೇಶನ ನೀಡಿದೆ. ವಸಾಹತುಶಾಹಿ ಪರಂಪರೆಗಳನ್ನು ತೊಡೆದುಹಾಕಲು ಮತ್ತು ಭಾರತೀಯ ಸಂಪ್ರದಾಯಗಳನ್ನು ಅಳವಡಿಸಿಕೊಳ್ಳುವ ಗುರಿಯನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸರ್ಕಾರ ಮಹತ್ವದ ಘೋಷಣೆ ಹೊರಡಿಸಿದೆ.

ಆಗಸ್ಟ್ 23 ರ ಪತ್ರದಲ್ಲಿ ಸಚಿವಾಲಯವು ಘಟಿಕೋತ್ಸವದ ಸಮಯದಲ್ಲಿ ಕಪ್ಪು ನಿಲುವಂಗಿ ಮತ್ತು ಟೋಪಿಗಳನ್ನು ಧರಿಸುವ ಪ್ರಸ್ತುತ ಅಭ್ಯಾಸವು ಮಧ್ಯಯುಗದಲ್ಲಿ ಯುರೋಪಿನಿಂದ ಹುಟ್ಟಿಕೊಂಡಿತು ಮತ್ತು ಬ್ರಿಟಿಷ್ ವಸಾಹತು ಆಳ್ವಿಕೆಯಲ್ಲಿ ಭಾರತದಲ್ಲಿ ಪರಿಚಯಿಸಲಾಯಿತು. ಪ್ರತಿ ಸಂಸ್ಥೆಯು ನೆಲೆಗೊಂಡಿರುವ ರಾಜ್ಯದ ಸ್ಥಳೀಯ ಸಂಪ್ರದಾಯಗಳು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಹೊಸ ಘಟಿಕೋತ್ಸವದ ಉಡುಪನ್ನು ವಿನ್ಯಾಸಗೊಳಿಸಲು ಸಚಿವಾಲಯವು ಸಂಸ್ಥೆಗಳನ್ನು ಒತ್ತಾಯಿಸಿತು.

ಕಪ್ಪು ನಿಲುವಂಗಿ ಧರಿಸುವುದು ವಸಾಹತುಶಾಹಿ ಪರಂಪರೆಯಾಗಿದ್ದು ಅದನ್ನು ಬದಲಾಯಿಸಬೇಕಾಗಿದೆ. ಅದಕ್ಕೆ ಅನುಗುಣವಾಗಿ ವೈದ್ಯಕೀಯ ಶಿಕ್ಷಣವನ್ನು ನೀಡುವಲ್ಲಿ ತೊಡಗಿರುವ AIIMS / INIS ಸೇರಿದಂತೆ ಸಚಿವಾಲಯದ ವಿವಿಧ ಸಂಸ್ಥೆಗಳು ತಮ್ಮ ಸಂಸ್ಥೆಯ ಘಟಿಕೋತ್ಸವ ಸಮಾರಂಭಕ್ಕೆ ಸೂಕ್ತವಾದ ಭಾರತೀಯ ಡ್ರೆಸ್ ಕೋಡ್ ಅನ್ನು ವಿನ್ಯಾಸಗೊಳಿಸಲು ಸಚಿವಾಲಯವು ನಿರ್ಧರಿಸಿದೆ. ಹೊಸ ಡ್ರೆಸ್ ಕೋಡ್‌ನ ಪ್ರಸ್ತಾವನೆಗಳನ್ನು ಅನುಮೋದನೆಗಾಗಿ ಸಚಿವಾಲಯಕ್ಕೆ ಸಲ್ಲಿಸುವಂತೆ ಸರ್ಕಾರ ಕೇಳಿದೆ.

ಪಂಚಪ್ರಾಣ ಎಂದರೇನು?

2022 ರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಿ ಮೋದಿ ಅವರು ಮುಂದಿನ 25 ವರ್ಷಗಳಲ್ಲಿ ಭಾರತದ ಪ್ರಗತಿಗೆ ಮಾರ್ಗದರ್ಶನ ನೀಡಲು ಪಂಚ ಪ್ರಾಣ್ ಅಥವಾ “ಐದು ನಿರ್ಣಯಗಳನ್ನು” ಪ್ರಸ್ತಾಪಿಸಿದ್ದರು. ಶಿಕ್ಷಣ ಮತ್ತು ಸಾಂಸ್ಕೃತಿಕ ಆಚರಣೆಗಳು ಸೇರಿದಂತೆ ಜೀವನದ ವಿವಿಧ ಅಂಶಗಳಿಂದ ವಸಾಹತುಶಾಹಿ ಪ್ರಭಾವಗಳನ್ನು ತೊಡೆದುಹಾಕಲು ಮತ್ತು ಭಾರತೀಯ ಸಂಸ್ಕೃತಿ ಬಗ್ಗೆ ಹೆಮ್ಮೆ ಪಡುವುದು ಪ್ರಮುಖ ನಿರ್ಣಯಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: Narendra Modi: ಉಕ್ರೇನ್‌ಗೆ ಬಂದಿಳಿದ ಪ್ರಧಾನಿ ಮೋದಿ; ರಷ್ಯಾ ಜತೆಗಿನ ಸಂಘರ್ಷದ ಚರ್ಚೆ ಸಾಧ್ಯತೆ

Continue Reading

ಉದ್ಯೋಗ

Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ

Village Administrative Officer: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇಮಕಾತಿಗೆ ಸಂಬಂಧಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಪರೀಕ್ಷೆಗಳನ್ನು ನಡೆಸಲಿದ್ದು, ಈಗಾಗಲೇ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯ ಸ್ಥಿತಿ ಮತ್ತು ಶುಲ್ಕ ಪಾವತಿ ಸ್ಥಿತಿ ಪರಿಶೀಲಿಸಲು ಕೆಇಎ ಕೆಲವೊಂದು ಸೂಚನೆಗಳನ್ನು ನೀಡಿದೆ. ಅರ್ಜಿ, ಶುಲ್ಕ ಪಾವತಿಯ ಸ್ಟೇಟಸ್‌ ಪರಿಶೀಲಿಸುವ ವಿಧಾನ ಇಲ್ಲಿದೆ.

VISTARANEWS.COM


on

Village Administrative Officer
Koo

ಬೆಂಗಳೂರು: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಯ ನೇಮಕಾತಿಗೆ ಸಂಬಂಧಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ವು ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಪರೀಕ್ಷೆಗಳನ್ನು ನಡೆಸಲಿದ್ದು, ಈಗಾಗಲೇ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯ ಸ್ಥಿತಿ ಮತ್ತು ಶುಲ್ಕ ಪಾವತಿ ಸ್ಥಿತಿ ಪರಿಶೀಲಿಸಲು ಕೆಇಎ ಕೆಲವೊಂದು ಸೂಚನೆಗಳನ್ನು ನೀಡಿದೆ (Job Alert).

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಸಲ್ಲಿಸಿರುವ ಅರ್ಜಿ ಅಂಗೀಕೃತವಾಗಿರದಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಆಗಸ್ಟ್‌ 26ರೊಳಗೆ ಪೂರಕ ದಾಖಲೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಪೂರಕ ದಾಖಲೆಗಳಿಲ್ಲದ ಅರ್ಜಿಗಳು ತಿರಸ್ಕೃತಗೊಳ್ಳಲಿವೆ. ಹೀಗಾಗಿ ಅರ್ಜಿ, ಶುಲ್ಕ ಪಾವತಿಯ ಸ್ಟೇಟಸ್‌ ಪರಿಶೀಲಿಸಿ. ಅದಕ್ಕಾಗಿ ನೀವು ಮಾಡಬೇಕಾಗಿರುವುದು ಇಷ್ಟೇ:

  • ಸ್ಟೇಟಸ್‌ ಪರಿಶೀಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://cetonline.karnataka.gov.in/kea/indexnew)
  • ʼನೇಮಕಾತಿʼ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ʼಗ್ರಾಮ ಆಡಳಿತಾಧಿಕಾರಿ-ಅರ್ಜಿ ಮತ್ತು ಶುಲ್ಕ ಸ್ಥಿತಿ ಲಿಂಕ್‌ʼ ಆಪ್ಶನ್‌ ಆಯ್ಕೆ ಮಾಡಿ.
  • ನಂತರ ತೆರೆಯುವ ಹೊಸ ಪುಟದಲ್ಲಿ ಅಪ್ಲಿಕೇಶನ್‌ ನಂಬರ್, ಜನ್ಮ ದಿನಾಂಕ ಮಾಹಿತಿ, ಕ್ಯಾಪ್ಚಾ ಕೋಡ್‌ ನಮೂದಿಸಿ.
  • ‘Search’ ಎಂದಿರುವಲ್ಲಿ ಕ್ಲಿಕ್ ಮಾಡಿ.
  • ಈಗ ನಿಮ್ಮ ಅರ್ಜಿ ಸ್ಥಿತಿ, ಶುಲ್ಕ ಸ್ಥಿತಿ ಕುರಿತು ಮಾಹಿತಿ ಮೂಡುತ್ತದೆ.

ಪ್ರಕಟಿತ ಲಿಂಕ್‌ನಲ್ಲಿ ಅಭ್ಯರ್ಥಿಗಳ ಅರ್ಜಿಯು ಅಂಗೀಕೃತವಾಗದಿದ್ದಲ್ಲಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ ಶುಲ್ಕ ಪಾವತಿಸಿರುವ ಬಗ್ಗೆ ಪೂರಕ ದಾಖಲೆಗಳನ್ನು ಆಗಸ್ಟ್‌ 26ರೊಳಗೆ ಪ್ರಾಧಿಕಾರಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು. ಗ್ರಾಮ ಆಡಳಿತ ಹುದ್ದೆಗೆ ಅರ್ಜಿ ಸಲ್ಲಿಸಿರುವ ಎಲ್ಲ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಲೇಬೇಕು. ಸೆಪ್ಟೆಂಬರ್ 29ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ. ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಿ 150 ಅಂಕಗಳಿಗೆ ಕನಿಷ್ಠ 50 ಅಂಕಗಳನ್ನು ಗಳಿಸುವುದು ಕಡ್ಡಾಯ. ಒಂದು ವೇಳೆ ಈ ಪರೀಕ್ಷೆಯಲ್ಲಿ ಅರ್ಹತೆ ಪಡೆಯದಿದ್ದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ.

ʼʼಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಅಕ್ಟೋಬರ್ 27ರಂದು ಪತ್ರಿಕೆ- 1 ಮತ್ತು ಪತ್ರಿಕೆ-2 ಇವುಗಳನ್ನು ಒಳಗೊಂಡ ಸ್ಪರ್ಧಾತ್ಮಕ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆʼʼ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ವಿವರಿಸಿದ್ದಾರೆ.

ಪರೀಕ್ಷೆಯ ವೇಳಾಪಟ್ಟಿ

29-09-2024 ಭಾನುವಾರ ಬೆಳಿಗ್ಗೆ 10-30ರಿಂದ 12-30ರವರೆಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ.
27-10-2024 ಭಾನುವಾರ ಬೆಳಿಗ್ಗೆ 10-30ರಿಂದ 12-30ರವರೆಗೆ ಪತ್ರಿಕೆ -1.
27-10-2024 ಭಾನುವಾರ ಮಧ್ಯಾಹ್ನ 2-30ರಿಂದ 04-30ರವರೆಗೆ ಪತ್ರಿಕೆ -2.

ಪರೀಕ್ಷೆ ವಿಧಾನ

ಈ ಪರೀಕ್ಷೆಯನ್ನು ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರುತ್ತದೆ. ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲದಿಂದ ಆಯ್ಕೆ ವಿಧಾನವನ್ನು ಬದಲಾಯಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಬಳಿಕ ಅಭ್ಯರ್ಥಿಗಳ ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರನ್ನು ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯೋಜನೆಗೊಳಿಸಲಾಗುತ್ತದೆ. ನಿಗದಿತ ಮೀಸಲಾತಿಯಂತೆ ಹುದ್ದೆಗಳನ್ನು ಗುರುತಿಸಿ, ಆ ಪ್ರಕಾರ ಹುದ್ದೆ ಭರ್ತಿಯಾಗಲಿವೆ. 

ಇದನ್ನೂ ಓದಿ: KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

Continue Reading

Latest

Viral Video: ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ

ಪಶ್ಚಿಮ ದೆಹಲಿಯ ಸಾಗರ್‌ಪುರ ಪ್ರದೇಶದಲ್ಲಿ ಅಪಾರ್ಟ್ಮೆಂಟ್ ಒಂದರ ಮೂರನೇ ಮಹಡಿಯಿಂದ ಬಿದ್ದು (Viral Video) ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ. ಇಡೀ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ.

VISTARANEWS.COM


on

Viral Video
Koo


ನವದೆಹಲಿ: ಪೋಷಕರು ಮಕ್ಕಳ ಬಗ್ಗೆ ನಿಗಾ ಇಡಬೇಕು. ಅವರು ಆಟವಾಡುವಾಗ ಅವರ ಪಾಡಿಗೆ ಅವರನ್ನು ಬಿಡುವಂತಹ ತಪ್ಪುಗಳನ್ನು ಮಾಡಬೇಡಿ. ಇದರಿಂದ ಅನಾಹುತಗಳೇ ಸಂಭವಿಸುತ್ತವೆ. ಅಷ್ಟೆ ಅಲ್ಲದೇ ಮಕ್ಕಳನ್ನು ಮನೆಯ ಬಾಲ್ಕನಿಯಲ್ಲಿ ಆಡಲು ಬಿಡುವ ತಾಯಂದಿರು ಅವರು ಸುರಕ್ಷಿತವಾಗಿರುತ್ತಾರೆ ಎಂದು ಭಾವಿಸುತ್ತಾರೆ. ಆದರೆ ಇದು ತುಂಬಾ ಅಪಾಯಕಾರಿ ಎಂಬುದನ್ನು ಮೊದಲು ತಿಳಿಯಿರಿ. ಪಶ್ಚಿಮ ದೆಹಲಿಯ ಸಾಗರ್‌ಪುರ ಪ್ರದೇಶದಲ್ಲಿ ಅಪಾರ್ಟ್‍ಮೆಂಟ್ ಒಂದರ ಮೂರನೇ ಮಹಡಿಯಿಂದ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ. ಇಡೀ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಗು ಇದ್ದಕ್ಕಿದ್ದಂತೆ ಕೆಳಗಿನ ಬೀದಿಗೆ ಬಿದ್ದಿದೆ. ಸ್ವಲ್ಪ ಹೊತ್ತಿನ ನಂತರ, ಮಹಿಳೆಯೊಬ್ಬಳು ರಕ್ತದ ಮಡುವಿನಲ್ಲಿ ಬಿದ್ದ ಮಗುವನ್ನು ಕಂಡು ಭಯಭೀತಳಾಗಿ ಮಗುವಿನ ಬಳಿ ಓಡಿಬರುತ್ತಾಳೆ. ಸ್ವಲ್ಪ ಸಮಯದ ನಂತರ ಬಾಲಕಿಯ ಕುಟುಂಬದವರು ಘಟನಾ ಸ್ಥಳಕ್ಕೆ ಬರುತ್ತಾರೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ. ಮಗು ಸ್ಥಳದಲ್ಲೇ ಸಾವನಪ್ಪಿದೆ ಎಂದು ವೈದ್ಯರು ಕೈ ಚೆಲ್ಲಿದರು.‌

ಬಾಲಕಿ ಮೂರನೇ ಮಹಡಿಯಿಂದ ಬಿದ್ದಿದ್ದು ಹೇಗೆ ಎಂಬುದನ್ನು ಕಂಡುಹಿಡಿಯಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಾಲ್ಕನಿಯಲ್ಲಿ ಒಬ್ಬಂಟಿಯಾಗಿ ಆಡುತ್ತಿದ್ದಾಗ ಬಾಲಕಿ ಆಕಸ್ಮಿಕವಾಗಿ ಬಿದ್ದಿರಬಹುದು. ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ಪೊಲೀಸರು ಆ ಪ್ರದೇಶದ ಇತರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ನೋಯ್ಡಾದಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ, ಮೂರು ವರ್ಷದ ಬಾಲಕಿ ಆಟವಾಡುವಾಗ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಳು.

ಇದನ್ನೂ ಓದಿ: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ!

ಮತ್ತೊಂದು ಘಟನೆಯಲ್ಲಿ, ದೆಹಲಿಯ ಜಫ್ರಾಬಾದ್ ಪ್ರದೇಶದಲ್ಲಿ ಮನೆಯ ಕಿಟಕಿಯ ಬಳಿ ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿತ್ತು. ಬ್ಯಾಲೆನ್ಸ್‌ ಕಳೆದುಕೊಂಡು ಮಗು ಕೆಳಗೆ ಬಿದ್ದಿತ್ತು. ಮಗುವನ್ನು ಉಳಿಸಲು ವೈದ್ಯರು ಎಲ್ಲ ಪ್ರಯತ್ನಗಳನ್ನು ಮಾಡಿದರೂ ಸಾಧ್ಯವಾಗಿರಲಿಲ್ಲ.

Continue Reading
Advertisement
Cheapest Currency
ವಾಣಿಜ್ಯ14 mins ago

Cheapest Currency: ವಿಶ್ವದಲ್ಲೇ ಅಗ್ಗದ ಕರೆನ್ಸಿ ಹೊಂದಿರುವ ದೇಶಗಳಲ್ಲಿ ಭಾರತದ 1 ರೂ.ನ ಮೌಲ್ಯ ಎಷ್ಟಾಗುತ್ತೆ ನೋಡಿ!

ಪ್ರಮುಖ ಸುದ್ದಿ22 mins ago

Vande Bharat Express: ಇನ್ನು ಮುಂದೆ ತುಮಕೂರಿನಲ್ಲೂ ನಿಲ್ಲಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು; ಟಿಕೆಟ್‌ ದರ ಎಷ್ಟು?

Health Tips
ಆರೋಗ್ಯ23 mins ago

Health Tips: ಮಲಗುವ ಮುನ್ನ ಹಾಲು, ಬೆಲ್ಲ ಸೇವಿಸಿದರೆ ಹಲವು ಸಮಸ್ಯೆಗಳಿಗೆ ಪರಿಹಾರ

Goodbye to black robes
ದೇಶ38 mins ago

Goodbye to black Robes: ಘಟಿಕೋತ್ಸವದಲ್ಲಿ ಧರಿಸುವ ಕಪ್ಪು ನಿಲುವಂಗಿ, ಟೋಪಿಗೆ ಗುಡ್‌ಬೈ- ಕೇಂದ್ರದಿಂದ ಮಹತ್ವದ ಘೋಷಣೆ

Kolkata Doctor Murder Case
ಕ್ರೈಂ41 mins ago

Kolkata Doctor Murder Case: ಕೋಲ್ಕತಾ ವೈದ್ಯೆಯ ಹಂತಕನಲ್ಲಿ ಕ್ರೂರ ಮೃಗದ ಲಕ್ಷಣ! ಪಶ್ಚಾತ್ತಾಪವೇ ಇಲ್ಲ

Kannada New Movie
ಬೆಂಗಳೂರು50 mins ago

Kannada New Movie: ʼಪೆನ್ ಡ್ರೈವ್ʼ ಚಿತ್ರದಲ್ಲಿ ಮಾಲಾಶ್ರೀ; ಇದು ತನಿಷಾ ಕುಪ್ಪಂಡ ಅಭಿನಯದ ಚಿತ್ರ

Viral Video
Latest57 mins ago

Viral Video: ಹೆದ್ದಾರಿ ಅಪಘಾತದಲ್ಲಿ ಕೆಳಗೆ ಬಿದ್ದ ತಂದೆ, ತಾಯಿ; ಮಗುವಿನೊಂದಿಗೆ ಬಹುದೂರ ಚಲಿಸಿದ ಬೈಕ್! ಹಳೆಯ ವಿಡಿಯೊ ಮತ್ತೆ ವೈರಲ್‌

Shreyas Patel
ಕರ್ನಾಟಕ1 hour ago

Shreyas Patel: ಸಂಸದ ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್‌

karnataka weather forecast
ಮಳೆ1 hour ago

Karnataka Weather : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು; ಹಳ್ಳ ದಾಟಲು ಗ್ರಾಮಸ್ಥರ ಪರದಾಟ

Fortis Hospital
ಬೆಂಗಳೂರು2 hours ago

Fortis Hospital: ಜನನಾಂಗದಿಂದ ಹೊರಗೆ ಚಾಚಿದ್ದ ಗರ್ಭಕೋಶ ರೋಬೋಟಿಕ್‌ ಮೂಲಕ ಮರುಸ್ಥಾಪನೆ!

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌