Viral Video: ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ - Vistara News

Latest

Viral Video: ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ

ಪಶ್ಚಿಮ ದೆಹಲಿಯ ಸಾಗರ್‌ಪುರ ಪ್ರದೇಶದಲ್ಲಿ ಅಪಾರ್ಟ್ಮೆಂಟ್ ಒಂದರ ಮೂರನೇ ಮಹಡಿಯಿಂದ ಬಿದ್ದು (Viral Video) ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ. ಇಡೀ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ನವದೆಹಲಿ: ಪೋಷಕರು ಮಕ್ಕಳ ಬಗ್ಗೆ ನಿಗಾ ಇಡಬೇಕು. ಅವರು ಆಟವಾಡುವಾಗ ಅವರ ಪಾಡಿಗೆ ಅವರನ್ನು ಬಿಡುವಂತಹ ತಪ್ಪುಗಳನ್ನು ಮಾಡಬೇಡಿ. ಇದರಿಂದ ಅನಾಹುತಗಳೇ ಸಂಭವಿಸುತ್ತವೆ. ಅಷ್ಟೆ ಅಲ್ಲದೇ ಮಕ್ಕಳನ್ನು ಮನೆಯ ಬಾಲ್ಕನಿಯಲ್ಲಿ ಆಡಲು ಬಿಡುವ ತಾಯಂದಿರು ಅವರು ಸುರಕ್ಷಿತವಾಗಿರುತ್ತಾರೆ ಎಂದು ಭಾವಿಸುತ್ತಾರೆ. ಆದರೆ ಇದು ತುಂಬಾ ಅಪಾಯಕಾರಿ ಎಂಬುದನ್ನು ಮೊದಲು ತಿಳಿಯಿರಿ. ಪಶ್ಚಿಮ ದೆಹಲಿಯ ಸಾಗರ್‌ಪುರ ಪ್ರದೇಶದಲ್ಲಿ ಅಪಾರ್ಟ್‍ಮೆಂಟ್ ಒಂದರ ಮೂರನೇ ಮಹಡಿಯಿಂದ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ. ಇಡೀ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಗು ಇದ್ದಕ್ಕಿದ್ದಂತೆ ಕೆಳಗಿನ ಬೀದಿಗೆ ಬಿದ್ದಿದೆ. ಸ್ವಲ್ಪ ಹೊತ್ತಿನ ನಂತರ, ಮಹಿಳೆಯೊಬ್ಬಳು ರಕ್ತದ ಮಡುವಿನಲ್ಲಿ ಬಿದ್ದ ಮಗುವನ್ನು ಕಂಡು ಭಯಭೀತಳಾಗಿ ಮಗುವಿನ ಬಳಿ ಓಡಿಬರುತ್ತಾಳೆ. ಸ್ವಲ್ಪ ಸಮಯದ ನಂತರ ಬಾಲಕಿಯ ಕುಟುಂಬದವರು ಘಟನಾ ಸ್ಥಳಕ್ಕೆ ಬರುತ್ತಾರೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ. ಮಗು ಸ್ಥಳದಲ್ಲೇ ಸಾವನಪ್ಪಿದೆ ಎಂದು ವೈದ್ಯರು ಕೈ ಚೆಲ್ಲಿದರು.‌

ಬಾಲಕಿ ಮೂರನೇ ಮಹಡಿಯಿಂದ ಬಿದ್ದಿದ್ದು ಹೇಗೆ ಎಂಬುದನ್ನು ಕಂಡುಹಿಡಿಯಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಾಲ್ಕನಿಯಲ್ಲಿ ಒಬ್ಬಂಟಿಯಾಗಿ ಆಡುತ್ತಿದ್ದಾಗ ಬಾಲಕಿ ಆಕಸ್ಮಿಕವಾಗಿ ಬಿದ್ದಿರಬಹುದು. ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ಪೊಲೀಸರು ಆ ಪ್ರದೇಶದ ಇತರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ನೋಯ್ಡಾದಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ, ಮೂರು ವರ್ಷದ ಬಾಲಕಿ ಆಟವಾಡುವಾಗ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಳು.

ಇದನ್ನೂ ಓದಿ: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ!

ಮತ್ತೊಂದು ಘಟನೆಯಲ್ಲಿ, ದೆಹಲಿಯ ಜಫ್ರಾಬಾದ್ ಪ್ರದೇಶದಲ್ಲಿ ಮನೆಯ ಕಿಟಕಿಯ ಬಳಿ ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿತ್ತು. ಬ್ಯಾಲೆನ್ಸ್‌ ಕಳೆದುಕೊಂಡು ಮಗು ಕೆಳಗೆ ಬಿದ್ದಿತ್ತು. ಮಗುವನ್ನು ಉಳಿಸಲು ವೈದ್ಯರು ಎಲ್ಲ ಪ್ರಯತ್ನಗಳನ್ನು ಮಾಡಿದರೂ ಸಾಧ್ಯವಾಗಿರಲಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Invest Karnataka: ಇಂಧನ ತಂತ್ರಜ್ಞಾನ; ರಾಜ್ಯದಲ್ಲಿ 8,300 ಕೋಟಿ ರೂ. ಹೂಡಿಕೆ ಮಾಡಲಿರುವ ಷೆರ್ವನ್‌ ಇಂಡಿಯಾ

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರ ಜತೆಗೆ ಷೆರ್ವನ್‌ ಇಂಡಿಯಾ ನಿಯೋಗವು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಬೆಂಗಳೂರಿನಲ್ಲಿ ತನ್ನ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ (ಇಎನ್‌ಜಿಐಎನ್‌ಇ) ಸ್ಥಾಪಿಸಲು 8,300 ಕೋಟಿ ರೂ. ಹೂಡಿಕೆ (Invest Karnataka) ಮಾಡುವುದಾಗಿ ಘೋಷಿಸಿದೆ. ಸಭೆಯಲ್ಲಿ ಷೆರ್ವನ್‌ ಇಂಡಿಯಾ ಮುಖ್ಯಸ್ಥ ಡಾ. ಅಕ್ಷಯ್‌ ಸಾಹ್ನಿ, ಜನರಲ್‌ ಮ್ಯಾನೇಜರ್‌ ಕೇಟ್‌ ಕಲಘನ್‌ ಇದ್ದರು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Invest Karnataka
Koo

ಬೆಂಗಳೂರು: ಇಂಧನ ಪರಿಹಾರಗಳನ್ನು ನೀಡುವಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಷೆರ್ವನ್‌ ಕಂಪನಿಯು ಬೆಂಗಳೂರಿನಲ್ಲಿ ತನ್ನ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ (ಇಎನ್‌ಜಿಐಎನ್‌ಇ) ಸ್ಥಾಪಿಸಲು 8,300 ಕೋಟಿ ರೂ. ಹೂಡಿಕೆ (Invest Karnataka) ಮಾಡುವುದಾಗಿ ಇಂದು ಇಲ್ಲಿ ಪ್ರಕಟಿಸಿದೆ.

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರ ಜತೆಗೆ ಷೆರ್ವನ್‌ ನಿಯೋಗವು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಈ ಹೂಡಿಕೆ ಘೋಷಿಸಲಾಗಿದೆ. ಸಭೆಯಲ್ಲಿ ಷೆರ್ವನ್‌ ಇಂಡಿಯಾ ಮುಖ್ಯಸ್ಥ ಡಾ. ಅಕ್ಷಯ್‌ ಸಾಹ್ನಿ, ಜನರಲ್‌ ಮ್ಯಾನೇಜರ್‌ ಕೇಟ್‌ ಕಲಘನ್‌ ಅವರು ಉಪಸ್ಥಿತರಿದ್ದರು.

ಇದನ್ನೂ ಓದಿ: Kannada New Movie: ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೇಲರ್ ರಿಲೀಸ್‌; ಸಿನಿಮಾ ಬಿಡುಗಡೆ ಯಾವಾಗ?

ಈ ಬಗ್ಗೆ ಸಚಿವ ಎಂ.ಬಿ.ಪಾಟೀಲ ಮಾತನಾಡಿ, “ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿ ಉತ್ತೇಜಿಸುವಲ್ಲಿ ಕರ್ನಾಟಕವು ನಿರಂತರವಾಗಿ ಮುನ್ನಡೆ ಸಾಧಿಸುತ್ತಿದೆ. ₹8,300 ಕೋಟಿ ಮೊತ್ತದ ಈ ಹೂಡಿಕೆ ಕಾರ್ಯಗತಗೊಳಿಸುವಲ್ಲಿ ರಾಜ್ಯ ಸರ್ಕಾರ ಮತ್ತು ಷೆರ್ವನ್‌ ಕಂಪನಿ ನಡುವಣ ಸಹಯೋಗವು ಕರ್ನಾಟಕದ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಕ್ಷೇತ್ರದಲ್ಲಿನ ಮಹತ್ವದ ಪ್ರಗತಿಗೆ ಸ್ಪಷ್ಟ ನಿದರ್ಶನವಾಗಿದೆ. ನಾವೀನ್ಯತೆ, ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿ ಉತ್ತೇಜಿಸಲು ರಾಜ್ಯ ಸರ್ಕಾರವು ಬದ್ಧವಾಗಿದೆʼ ಎಂದು ತಿಳಿಸಿದ್ದಾರೆ.

ಷೆರ್ವನ್‌ ಇಂಡಿಯಾದ ಮುಖ್ಯಸ್ಥ ಅಕ್ಷಯ್ ಸಾಹ್ನಿ ಮಾತನಾಡಿ,”ಕೈಗೆಟುಕುವ, ವಿಶ್ವಾಸಾರ್ಹವಾದ ಶುದ್ಧ ಇಂಧನ ಒದಗಿಸಲು ಭಾರತದ ಅಸಾಧಾರಣ ಪ್ರತಿಭಾನ್ವಿತರು ನಮ್ಮ ಜಾಗತಿಕ ಜಾಲದ ಸಂಪನ್ಮೂಲ ಹಾಗೂ ಪರಿಣತಿ ಜತೆಗೆ ಕೆಲಸ ಮಾಡಲು ಈ ಕೇಂದ್ರವು ಅವಕಾಶ ಒದಗಿಸಲಿದೆʼ ಎಂದು ಹೇಳಿದ್ದಾರೆ.

ಈ ಕೇಂದ್ರದಲ್ಲಿ ಇಂಧನ ವ್ಯವಸ್ಥೆಯ ತಂತ್ರಜ್ಞಾನ ಆವಿಷ್ಕಾರಗಳಿಗೆ ವೇಗ ನೀಡಲು ಎಂಜಿನಿಯರಿಂಗ್‌ ಮತ್ತು ಡಿಜಿಟಲ್‌ ಸೇವೆಗಳಿಗೆ ಸಂಬಂಧಿಸಿದಂತೆ 2025ರ ವೇಳೆಗೆ 600 ತಂತ್ರಜ್ಞರನ್ನು ನೇಮಕ ಮಾಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಆವಿಷ್ಕಾರಕ್ಕೆ ಪೂರಕ ವಾತಾವರಣ ಸೃಷ್ಟಿಸಿರುವ ಪ್ರಗತಿಪರ ನೀತಿಗಳ ಮೂಲಕ ತಾಂತ್ರಿಕ ಪ್ರಗತಿ ಉತ್ತೇಜಿಸಲು ರಾಜ್ಯವು ಅನುಕರಣೀಯ ಕ್ರಮಗಳನ್ನು ತೆಗೆದುಕೊಂಡಿದೆ. ಬೆಂಗಳೂರು ಈಗಾಗಲೇ 500ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ (ಜಿಸಿಸಿ) ನೆಲೆಯಾಗಿದ್ದು, ಹಣಕಾಸು, ಆರೋಗ್ಯ, ರಿಟೇಲ್‌ ವ್ಯಾಪಾರ, ತಯಾರಿಕಾ ಮತ್ತಿತರ ವಲಯಗಳು ಸೇರಿದಂತೆ ಭಾರತದ ʼಜಿಸಿಸಿʼಗಳಲ್ಲಿ ಶೇ 30ಕ್ಕಿಂತ ಹೆಚ್ಚು ಪಾಲು ಹೊಂದಿದೆ ಎಂದು ಸಚಿವರು ವಿವರಿಸಿದರು.

ಷೆರ್ವನ್‌ ಶ್ರೇಷ್ಠತಾ ಕೇಂದ್ರವು (ಇಎನ್‌ಜಿಐಎನ್‌ಇ) ಸ್ಥಳೀಯ ವೃತ್ತಿಪರರಿಗೆ ಗಮನಾರ್ಹ ಪ್ರಮಾಣದಲ್ಲಿ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲಿದೆ. ಸದ್ಯದ ಜಾಗತಿಕ ಇಂಧನ ಬೇಡಿಕೆಗಳನ್ನು ಪೂರೈಸುವ ಸವಾಲಿಗೆ ಸ್ಪಂದಿಸಲು ಮತ್ತು ಭವಿಷ್ಯದಲ್ಲಿ ಕಡಿಮೆ ಇಂಗಾಲ ಹೊರಸೂಸುವ ಶುದ್ಧ ಇಂಧನ ತಯಾರಿಸುವುದಕ್ಕೆ ಕೊಡುಗೆ ನೀಡಲು ಅವರಿಗೆ ಅವಕಾಶ ನೀಡಲಿದೆ. ಇಲ್ಲಿ ಕಾರ್ಯನಿರ್ವಹಿಸಲಿರುವ ಷೆರ್ವನ್‌ ತಂಡವು ಅಂತಾರಾಷ್ಟ್ರೀಯ ಭಾಗಿದಾರರ ಸಹಭಾಗಿತ್ವದಲ್ಲಿ ಸಂಕೀರ್ಣ ಸ್ವರೂಪದ ಜಾಗತಿಕ ಕಾರ್ಯಾಚರಣೆಗಳು ಮತ್ತು ಇಂಧನ ಯೋಜನೆಗಳನ್ನು ಕಾರ್ಯಗತಗೊಳಿಸಲಿದೆ ಎಂದು ಸಚಿವ ಎಂ.ಬಿ. ಪಾಟೀಲ ವಿವರಿಸಿದರು.

ಬೆಂಗಳೂರಿನಲ್ಲಿ ಷೆರ್ವನ್‌ ಶ್ರೇಷ್ಠತಾ ಕೇಂದ್ರದ ಸ್ಥಾಪನೆಯು ತಂತ್ರಜ್ಞಾನ, ನಾವೀನ್ಯತೆ ಮತ್ತು ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಆದ್ಯತೆಗಳಿಗೆ ಸೂಕ್ತವಾಗಿ ಹೊಂದಿಕೊಳ್ಳಲಿದೆ. ಈ ಹೂಡಿಕೆಯು ಜಾಗತಿಕ ಕಂಪನಿಗಳ ಪಾಲಿಗೆ ಕರ್ನಾಟಕವು ಪ್ರಮುಖ ತಾಣವಾಗಿರುವುದರ ಮಹತ್ವವನ್ನು ಬಿಂಬಿಸುತ್ತದೆ. ರಾಜ್ಯದ ಅಭಿವೃದ್ಧಿಯಲ್ಲಿ ಉದ್ಯಮ, ನಾವೀನ್ಯತೆ ಮತ್ತು ತಂತ್ರಜ್ಞಾನವನ್ನು ಉತ್ತೇಜಿಸುವ ಕರ್ನಾಟಕ ಸರ್ಕಾರದ ಅಚಲ ಬದ್ಧತೆಗೂ ಇದು ಸಾಕ್ಷಿಯಾಗಿದೆ ಎಂದೂ ಸಚಿವರು ಹೇಳಿದರು.

ಇದನ್ನೂ ಓದಿ: Kannada New Movie: ʼಪೆನ್ ಡ್ರೈವ್ʼ ಚಿತ್ರದಲ್ಲಿ ಮಾಲಾಶ್ರೀ; ಇದು ತನಿಷಾ ಕುಪ್ಪಂಡ ಅಭಿನಯದ ಚಿತ್ರ

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಮತ್ತು ಷೆರ್ವನ್‌ನ ಪ್ರತಿನಿಧಿಗಳು ಉಪಸ್ಥಿತರಿದ್ದರು.

Continue Reading

Latest

Viral Video: ವಿಮಾನ ನಿಲ್ದಾಣದಲ್ಲಿ ಹೃದಯಾಘಾತ; ಸಿಪಿಆರ್ ಮಾಡಿ ಜೀವ ಉಳಿಸಿದ ಅಧಿಕಾರಿಗಳು

ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ನಿಂತಿದ್ದ ಪ್ರಯಾಣಿಕರೊಬ್ಬರು (Viral Video) ಹೃದಯಾಘಾತದಿಂದ ಕೆಳಗೆ ಕುಸಿದು ಬಿದ್ದಿದ್ದರು. ತಕ್ಷಣ ಅಲ್ಲೇ ಇದ್ದ ಸಿಐಎಸ್ಎಫ್ ಸಿಬ್ಬಂದಿಯೊಬ್ಬರು ಹೃದಯ ಸ್ತಂಭನದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವವನ್ನು ಸಿಪಿಆರ್ ಮಾಡಿ ಉಳಿಸಿದ್ದಾರೆ. ಅವರನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಇದಕ್ಕೆ ಸಂಬಂಧಪಟ್ಟ ಸಿಸಿಟಿವಿ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo


ನವದೆಹಲಿ: ದೆಹಲಿಯ ಐಜಿಐ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ನಿಂತಿದ್ದ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಕೆಳಗೆ ಕುಸಿದು ಬಿದ್ದಿದ್ದರು. ತಕ್ಷಣ ಅಲ್ಲೇ ಇದ್ದ ಸಿಐಎಸ್ಎಫ್ ಸಿಬ್ಬಂದಿಯೊಬ್ಬರು ಸಿಪಿಆರ್ ಮಾಡಿ ಹೃದಯ ಸ್ತಂಭನದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ಸಿಸಿಟಿವಿ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಹೃದಯಾಘಾತಕ್ಕೊಳಗಾದ ವ್ಯಕ್ತಿಯನ್ನು ಅರ್ಷಿದ್ ಅಯೂಬ್ ಎಂದು ಗುರುತಿಸಲಾಗಿದ್ದು, ಅವರು ಆ ಸಮಯದಲ್ಲಿ ವಿಮಾನ ಹತ್ತಲು ತಯಾರಿ ನಡೆಸುತ್ತಿದ್ದರು. ಆದರೆ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಆಗ ಅವರ ಸುತ್ತ ಜನರು ತುಂಬಿಕೊಂಡರು. ಆಗ ಅಲ್ಲಿಗೆ ಬಂದ ಸಿಐಎಸ್ಎಫ್ ಸಿಬ್ಬಂದಿಗಳಲ್ಲಿ ಒಬ್ಬರು ಅವರಿಗೆ ಸಿಪಿಆರ್ ಮಾಡಿ ಜೀವ ಉಳಿಸಿದ್ದಾರೆ. ತಮ್ಮ ಸಿಬ್ಬಂದಿಯ ತ್ವರಿತ ಕ್ರಮವು ಪ್ರಯಾಣಿಕ ಅರ್ಷಿದ್ ಅಯೂಬ್ ಜೀವ ಉಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ ಎಂದು ಸಿಐಎಸ್ಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಬುಧವಾರ ಬೆಳಗ್ಗೆ ಐಜಿಐ ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಅಯೂಬ್ ಹೃದಯ ಸ್ತಂಭನದಿಂದಾಗಿ ಕುಸಿದುಬಿದ್ದಿದ್ದರು. ಅವರನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸಿಐಎಸ್ಎಫ್ ತಿಳಿಸಿದೆ.

ಸಾಮಾನು ಸರಂಜಾಮಿನ ಟ್ರಾಲಿಯೊಂದಿಗೆ ನಿಂತಿದ್ದಾಗ ಅಯೂಬ್ ನೆಲಕ್ಕೆ ಬಿದ್ದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಸ್ತು ತಿರುಗುತ್ತಿದ್ದ ಸಿಐಎಸ್ಎಫ್ ಅಧಿಕಾರಿ ಡಾ. ಪ್ರಿಯಾ ಸಹಾಯಕ್ಕೆ ಧಾವಿಸಿದರು. ಹೃದಯ ನಿಂತಾಗ ಉಸಿರಾಟ ಮತ್ತು ರಕ್ತಪರಿಚಲನೆಯನ್ನು ಪುನಃಸ್ಥಾಪಿಸಲು ಬಳಸುವ ನಿರ್ಣಾಯಕ ತುರ್ತು ಕಾರ್ಯವಿಧಾನವಾದ ಸಿಪಿಆರ್‌ಅನ್ನು ಅವರು ಮಾಡಿದರು. ಈ ವಿಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿ ಅನೇಕರು ಸಿಬ್ಬಂದಿಯ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ನಾವು ಆ ದಿನ ಅಮರನಾಥ ಯಾತ್ರೆಯಿಂದ ಹಿಂದಿರುಗಿದೆವು. ನಮ್ಮ ವಿಮಾನ ಬರುವುದು ತಡವಾಗಿತ್ತು. ಆ ಸಮಯದಲ್ಲಿ, ನಾವು ಫುಡ್ ಕೋರ್ಟ್ ಪ್ರದೇಶದಲ್ಲಿದ್ದೆವು. ಹತ್ತಿರದ ಸ್ಟಾಲ್‌ನಲ್ಲಿ ವೃದ್ಧರೊಬ್ಬರು ಇದ್ದಕ್ಕಿದ್ದಂತೆ ಬಿದ್ದರು. ದೇವರ ಸ್ಥಾನವನ್ನು ಯಾರೂ ತೆಗೆದುಕೊಳ್ಳಲು ಸಾಧ್ಯವಿಲ್ಲ. ನಾವು ಯಾವುದೇ ಕೆಲಸವನ್ನು ದೇವರ ಸಂಕೇತಗಳೊಂದಿಗೆ ಮಾತ್ರ ಮಾಡಲು ಸಾಧ್ಯವಾಗುತ್ತದೆ. ಹಾಗಾಗಿ ಕನಿಷ್ಠ ಸಮಯೋಚಿತ ಸಿಪಿಆರ್ ಈ ಜೀವ ಉಳಿಸುವ ಪ್ರಯತ್ನದಲ್ಲಿ ಪ್ರಮುಖ ಪಾತ್ರ ವಹಿಸಿದೆ. ತುರ್ತು ಸಂದರ್ಭಗಳಲ್ಲಿ ಸಮಯೋಚಿತ ವೈದ್ಯಕೀಯ ಪ್ರತಿಕ್ರಿಯೆ ಒಂದು ಪ್ರಮುಖ ಅಂಶವಾಗಿದೆ” ಎಂದು ಡಾ. ಪ್ರಿಯಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಶವಾಗಾರದಲ್ಲಿ ಶವಗಳ ಪಕ್ಕದಲ್ಲೇ ಲೈಂಗಿಕ ಕ್ರಿಯೆ! ಸಂಚಲನ ಮೂಡಿಸಿದೆ ಈ ವಿಡಿಯೊ

Continue Reading

ಮನಿ-ಗೈಡ್

Recurring Deposit: ಸಣ್ಣ, ಆರಂಭಿಕ ಹೂಡಿಕೆದಾರರಿಗೆ ಸೂಕ್ತ ಪೋಸ್ಟ್ ಆಫೀಸ್‌ನ ಆರ್‌ಡಿ; ಏನಿದರ ಲಾಭ?

ಪೋಸ್ಟ್ ಆಫೀಸ್‌ನಲ್ಲಿರುವ ಆರ್‌ಡಿ (Recurring Deposit) ಸಣ್ಣ ಹೂಡಿಕೆದಾರರು ಅಥವಾ ಆರಂಭಿಕರು ತೆರೆಯಬಹುದಾದ ರಾಷ್ಟ್ರೀಯ ಉಳಿತಾಯ ಮರುಕಳಿಸುವ ಠೇವಣಿ ಖಾತೆಯಾಗಿದೆ. ಈ ಉಳಿತಾಯ ಯೋಜನೆಯಲ್ಲಿ ಹಣಕಾಸಿನ ಅವಶ್ಯಕತೆಗಳಿಗೆ ಸಾಕಷ್ಟು ಹಣವನ್ನು ಸಂಗ್ರಹಿಸಬಹುದು. ಮಾತ್ರವಲ್ಲದೆ ಇನ್ನೂ ಹಲವು ವೈಶಿಷ್ಟ್ಯಗಳನ್ನು ಹೊಂದಿರುವ ಈ ಯೋಜನೆಯ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Recurring Deposit
Koo

ಪ್ರತಿಯೊಬ್ಬರಿಗೂ ದೊಡ್ಡ ಪ್ರಮಾಣದಲ್ಲಿ ಹಣವನ್ನು ಹೂಡಿಕೆ (investment) ಮಾಡುವುದು ಸಾಧ್ಯವಿಲ್ಲ. ವಿಶೇಷವಾಗಿ ಉದ್ಯೋಗಕ್ಕೆ ಇತ್ತೀಚೆಗಷ್ಟೇ ಸೇರಿದವರು, ಸಣ್ಣ ಹೂಡಿಕೆದಾರರು ಅಥವಾ ಆರಂಭಿಕರಿಗಾಗಿ (small investors or beginners) ಸಹಾಯ ಮಾಡಲು ಕೇಂದ್ರ ಸರ್ಕಾರವು (Indian Govt) ಉಳಿತಾಯ ಯೋಜನೆಯೊಂದನ್ನು (Recurring Deposit) ಪರಿಚಯಿಸಿದೆ.

ಇದು ಕೇಂದ್ರ ಸರ್ಕಾರದಿಂದ ನಿಯಂತ್ರಿಸಲ್ಪಟ್ಟಿರುವುದರಿಂದ ಹೂಡಿಕೆ ಮಾಡಲು ಸುರಕ್ಷಿತ ಆಯ್ಕೆಯಾಗಿದೆ. ಹಾಗಾದರೆ ಈ ಉಳಿತಾಯ ಯೋಜನೆ ಯಾವುದು, ಅದರ ವಿಶೇಷತೆಗಳು ಏನು ಎಂಬುದನ್ನು ನೋಡೋಣ.
ಪೋಸ್ಟ್ ಆಫೀಸ್‌ನಲ್ಲಿರುವ ಆರ್ ಡಿ ಸಣ್ಣ ಹೂಡಿಕೆದಾರರು ಅಥವಾ ಆರಂಭಿಕರು ತೆರೆಯಬಹುದಾದ ರಾಷ್ಟ್ರೀಯ ಉಳಿತಾಯ ಮರುಕಳಿಸುವ ಠೇವಣಿ ಖಾತೆಯಾಗಿದೆ.

ಆರ್ ಡಿ ಯೋಜನೆ

ಈ ಉಳಿತಾಯ ಯೋಜನೆಯು ನಿರ್ದಿಷ್ಟವಾಗಿ ಸಣ್ಣ ಹೂಡಿಕೆದಾರರಿಗಾಗಿ ಮಾಡಲ್ಪಟ್ಟಿದೆ. ಇದರಿಂದ ಅವರು ತಮ್ಮ ಹಣಕಾಸಿನ ಅವಶ್ಯಕತೆಗಳಿಗೆ ಸಾಕಷ್ಟು ಹಣವನ್ನು ಸಂಗ್ರಹಿಸಬಹುದು. ಇದಲ್ಲದೆ, ಠೇವಣಿಯ ಮೇಲೆ ಯಾವುದೇ ಗರಿಷ್ಠ ಮಿತಿಯಿಲ್ಲ.

ಯೋಜನೆ ಅವಧಿ ಎಷ್ಟು?

ರಾಷ್ಟ್ರೀಯ ಉಳಿತಾಯ ಮರುಕಳಿಸುವ ಠೇವಣಿ ಖಾತೆಯು 5 ವರ್ಷಗಳ ಮೆಚುರಿಟಿ ಅವಧಿಯ ಸಣ್ಣ ಉಳಿತಾಯ ಯೋಜನೆಯಾಗಿದೆ. ಈ ಉಳಿತಾಯ ಯೋಜನೆಯೊಂದಿಗೆ ಮಾಸಿಕ ಆಧಾರದ ಮೇಲೆ ಹೂಡಿಕೆ ಮಾಡಬಹುದು. ಇದಲ್ಲದೆ ಈ ಯೋಜನೆಯು ಒಬ್ಬ ವ್ಯಕ್ತಿಗೆ ಏಕ ಮತ್ತು ಜಂಟಿ ಖಾತೆಯನ್ನು ತೆರೆಯಲು ಅನುಮತಿಸುತ್ತದೆ.


ಹೂಡಿಕೆ ಹೇಗೆ?

ತಿಂಗಳಿಗೆ ಕನಿಷ್ಠ 100 ರೂ.ನಿಂದ ಹೂಡಿಕೆಯನ್ನು ಪ್ರಾರಂಭಿಸಬಹುದು. ಯಾವುದೇ ಗರಿಷ್ಠ ಮಿತಿ ಇಲ್ಲದಿರುವುದರಿಂದ ಎಷ್ಟು ಸಾಧ್ಯವೋ ಅಷ್ಟು ಹೂಡಿಕೆ ಮಾಡಬಹುದು. ಆದರೆ ಕ್ಯಾಲೆಂಡರ್ ತಿಂಗಳ 15ರಂದು ಖಾತೆಯನ್ನು ತೆರೆದರೆ ತಿಂಗಳ 15ನೇ ದಿನದವರೆಗೆ ಠೇವಣಿ ಮಾಡಬೇಕು ಎಂಬುದನ್ನು ಗಮನಿಸಬೇಕು. ಕ್ಯಾಲೆಂಡರ್ ತಿಂಗಳ 16ನೇ ದಿನ ಮತ್ತು ಕೊನೆಯ ಕೆಲಸದ ದಿನದ ನಡುವೆ ಖಾತೆಯನ್ನು ತೆರೆದರೆ, ಅನಂತರದ ಠೇವಣಿ ತಿಂಗಳ ಕೊನೆಯ ಕೆಲಸದ ದಿನದವರೆಗೆ ಮಾಡಲಾಗುತ್ತದೆ.

ಖಾತೆಯ ಬಡ್ಡಿ ದರ

ಈ ಉಳಿತಾಯ ಯೋಜನೆಯು ವಾರ್ಷಿಕ ಶೇ. 6.7ರಷ್ಟು ಬಡ್ಡಿ ದರವನ್ನು ನೀಡುತ್ತದೆ. ಐದು ವರ್ಷಗಳವರೆಗೆ 10,000 ರೂ. ಮಾಸಿಕ ಹೂಡಿಕೆಯೊಂದಿಗೆ 7 ಲಕ್ಷ ರೂ.ಗಳಿಗಿಂತ ಹೆಚ್ಚಿನ ಲಾಭವನ್ನು ಪಡೆಯಬಹುದು.

ಇದನ್ನೂ ಓದಿ: Anil Ambani: ಅನಿಲ್‌ ಅಂಬಾನಿಗೆ ಸೆಬಿ ಶಾಕ್‌; 5 ವರ್ಷ ಸೆಕ್ಯೂರಿಟೀಸ್‌ ಮಾರುಕಟ್ಟೆಯಿಂದ ನಿಷೇಧ, 25 ಕೋಟಿ ರೂ. ದಂಡ

ಯಾರು ಅರ್ಜಿ ಸಲ್ಲಿಸಬಹುದು?

ಯಾವುದೇ ಒಬ್ಬ ವಯಸ್ಕ, ಅಪ್ರಾಪ್ತ ವಯಸ್ಕ, ಅಸ್ವಸ್ಥ ಮನಸ್ಸಿನ ವ್ಯಕ್ತಿಯ ಪರವಾಗಿ ಪೋಷಕರು, 10 ವರ್ಷಕ್ಕಿಂತ ಮೇಲ್ಪಟ್ಟ ಅಪ್ರಾಪ್ತರು ತಮ್ಮ ಹೆಸರಿನಲ್ಲಿ ಈ ಖಾತೆಯನ್ನು ತೆರೆಯಬಹುದು. ಇದರ ಹೊರತಾಗಿ ಈ ಯೋಜನೆಯು ಹೂಡಿಕೆದಾರರಿಗೆ ಜಂಟಿ ಖಾತೆಯನ್ನು ತೆರೆಯಲು ಅವಕಾಶವಿದೆ. ಇದಲ್ಲದೆ ಬಹು ಖಾತೆಗಳನ್ನು ತೆರೆಯಲು ಅವಕಾಶವಿದೆ.

Continue Reading

ಬೆಂಗಳೂರು

Kannada New Movie: ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೇಲರ್ ರಿಲೀಸ್‌; ಸಿನಿಮಾ ಬಿಡುಗಡೆ ಯಾವಾಗ?

ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ಅವರು ನಿರ್ಮಿಸಿರುವ, ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶಿಸಿರುವ ಹಾಗೂ ಯುವ ಕಲಾವಿದರಾದ ವಿಹಾನ್, ಅಂಕಿತ ಅಮರ್ ಮತ್ತು ಮಯೂರಿ ನಟರಾಜ ನಟಿಸಿರುವ ಸುಂದರ ದೃಶ್ಯ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರದ (Kannada New Movie) ಟ್ರೇಲರ್ ಬಿಡುಗಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ಅವರು ನಿರ್ಮಿಸಿರುವ, ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶಿಸಿರುವ ಹಾಗೂ ಯುವ ಕಲಾವಿದರಾದ ವಿಹಾನ್, ಅಂಕಿತ ಅಮರ್ ಮತ್ತು ಮಯೂರಿ ನಟರಾಜ ನಟಿಸಿರುವ ಸುಂದರ ದೃಶ್ಯ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ (Kannada New Movie) ಸೆಪ್ಟೆಂಬರ್ 5ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

ಚಿತ್ರದ ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟ್ರೇಲರ್ ಹಾಗೂ ಹಾಡುಗಳನ್ನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರೇಕ್ಷಕರು ಚಿತ್ರಮಂದಿರಗಳಿಗೂ ಬಂದು ಚಿತ್ರವನ್ನು ನೋಡಿ ಪ್ರೋತ್ಸಾಹಿಸುತ್ತಾರೆ ಎಂಬ ಭರವಸೆ ಚಿತ್ರತಂಡಕ್ಕಿದೆ‌. ಟ್ರೇಲರ್ ಬಿಡುಗಡೆ ಸಮಾರಂಭದ ಆದಿಯಲ್ಲಿ ಚಿತ್ರ ತಂಡ ಪವರ್ ಸ್ಟಾರ್ ಅವರಿಗೆ ಗೌರವ ಸಲ್ಲಿಸುವ ಕಾರಣದಿಂದ ಅವರ ಚಿತ್ರಗಳ ಗೀತೆ ಹಾಡಿ ಅಭಿಮಾನ ಮೆರೆದರು.

ನಂತರ ನಿರ್ಮಾಪಕ ರಕ್ಷಿತ್ ಶೆಟ್ಟಿ ಮಾತನಾಡಿ, ನಿರ್ದೇಶಕ ಚಂದ್ರಜಿತ್ ಅವರು 9 ವರ್ಷಗಳ ಹಿಂದೆ ಬ್ಲಾಗ್‌ನಲ್ಲಿ ಮೆಸೇಜ್ ಮಾಡಿದ್ದರು. ಲಿಂಕ್ ಓಪನ್ ಮಾಡಿದೆ. ಬರವಣಿಗೆ ವಿಶೇಷ ಅನಿಸಿತು. ನಂತರ ಚಂದ್ರಜಿತ್ ಅವರು ಭೇಟಿಯಾದರು‌‌. ಅವರು ಬರೆದ ಕಥೆ ಸಿನಿಮಾವಾಗಿ ರೂಪಾಂತರವಾಯಿತು. ಕನ್ನಡದಲ್ಲಿ ಈ ಕಥೆಯನ್ನು ಹೋಲುವ ಚಿತ್ರಗಳು ಬಂದಿರಬಹುದು.‌ ಆದರೆ ಈ ರೀತಿಯ ನಿರೂಪಣೆಯಿರುವ ಚಿತ್ರ ಬಂದಿಲ್ಲ. ನಾನು ಈಗಾಗಲೇ ಮೂರು ಸಲ ಚಿತ್ರ ನೋಡಿದ್ದೇನೆ. ಟ್ರೇಲರ್ ಹಾಗೂ ಸಿ‌ನಿಮಾ‌‌ ಎರಡು ಬಹಳ ಇಷ್ಟವಾಗಿದೆ. ವಿಹಾನ್ ಹಾಗು ಅಂಕಿತ ಇಬ್ಬರದು ಪ್ರಶಸ್ತಿ ಬರುವಂತಹ ಅಭಿನಯ. ಜತೆಗೆ ಮಯೂರಿ ಕೆಲವೇ ಸನ್ನಿವೇಶದಲ್ಲಿ ಕಾಣಿಸಿಕೊಂಡರೂ ಎಲ್ಲರ ಗಮನ ಸೆಳೆಯುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇಂದು ಟ್ರೇಲರ್ ಬಿಡುಗಡೆಯಾಗಿದೆ. ಸೆಪ್ಟೆಂಬರ್ 5 ಚಿತ್ರ ತೆರೆ ಕಾಣಲಿದೆ. ನಾನು ಯಾವುದಕ್ಕೂ ಬೇಗ ಕಾಂಪ್ರಮೈಸ್ ಆಗುವುದಿಲ್ಲ.‌ ಆದರೆ ನನ್ನ ತಂಡ ಟ್ರೇಲರ್ ಅನ್ನು ಎರಡೇ ದಿನದಲ್ಲಿ‌‌ ಸಿದ್ದ ಮಾಡಿತು. ನನಗೂ ನೋಡಿ ಖುಷಿಯಾಯಿತು. ಇನ್ನು, ನಿರ್ಮಾಪಕ ರಕ್ಷಿತ್ ಶೆಟ್ಟಿ ಸೇರಿದಂತೆ ಇಡೀ ತಂಡದ ಸಹಕಾರದಿಂದ ಚಿತ್ರ ಕೂಡ ಚೆನ್ನಾಗಿ ಮೂಡಿಬಂದಿದೆ. ವಿಹಾನ್, ಅಂಕಿತ ಅಮರ್ ಹಾಗೂ ಮಯೂರಿ ಅವರ ಜತೆಗೆ ಈ ಚಿತದಲ್ಲಿ “ಗೀತಾಂಜಲಿ” ಚಿತ್ರದ ಖ್ಯಾತಿಯ ಗಿರಿಜಾ ಶೆಟ್ಟರ್ ಅಭಿನಯಿಸಿದ್ದಾರೆ. ಇಪ್ಪತ್ತು ವರ್ಷಗಳ ನಂತರ ಅವರು ಮತ್ತೆ ನಮ್ಮ ಚಿತ್ರದಲ್ಲಿ ನಟಿಸಿದ್ದು, ಬಹಳ ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮ ಸಹಕಾರ, ಪ್ರೋತ್ಸಾಹ ಇರಲಿ ಎಂದರು ಚಂದ್ರಜಿತ್ ಬೆಳ್ಳಿಯಪ್ಪ.

ನಟ ವಿಹಾನ್ ಮಾತನಾಡಿ, ಹಾಡು ಎಲ್ಲರಿಗೂ ಇಷ್ಟವಾಗಿದೆ ಸಿನಿಮಾ ಕೂಡ ಇಷ್ಟವಾಗಲಿದೆ. ಸಿನಿಮಾ ನೋಡಿದವರು ಇನ್ನಷ್ಟು ಜನರನ್ನು ಚಿತ್ರಮಂದಿರಕ್ಕೆ ಕರೆತರುತ್ತಾರೆ ಎಂಬ ಭರವಸೆ ಇದೆ. ನಿರ್ದೇಶಕ ಚಂದ್ರಜಿತ್ ಹೇಳಿದ ಕಥೆ ಆಸಕ್ತಿಕರವಾಗಿತ್ತು. ಪ್ರತಿಭೆ ನೋಡಿ ಆಯ್ಕೆ ಮಾಡಿಕೊಳ್ಳುವಲ್ಲಿ ರಕ್ಷಿತ್ ಶೆಟ್ಟಿ ಕೂಡ ಒಬ್ಬರು. ಸಿನಿಮಾಗೆ ಆಯ್ಕೆಯಾದ ಮೇಲೆ ಅವರಿಗೆ ಮೆಸೇಜ್ ಮಾಡಿ ಧನ್ಯವಾದ ಹೇಳಿದ್ದೆ ಎಂದರು.

ಇದನ್ನೂ ಓದಿ: Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ

ನಟಿ ಅಂಕಿತ ಅಮರ್ ಮಾತನಾಡಿ, ಪ್ರತಿಯೊಬ್ಬರಿಗೂ ಸಾಕಷ್ಟು ಕನಸುಗಳಿವೆ. ಕನಸು, ಹೊಂಬಿಸಲಾಗಿ ಬಂದ ಚಿತ್ರ ಇಬ್ಬನಿ‌ ತಬ್ಬಿದ ಇಳೆಯಲಿ ಚಿತ್ರ. ಒಂದು ರೀತಿ ಮ್ಯಾಜಿಕ್ ಕ್ರಿಯೇಟ್ ಮಾಡಿದೆ “ಇಬ್ಬನಿ ತಬ್ಬಿದ ಇಳೆಯಲಿ”. ಈ ಚಿತ್ರದಲ್ಲಿ ಸಂದರ್ಭ ಖಳನಾಯಕ. ಸಂದರ್ಭದ ಅನುಸಾರ ಪಾತ್ರಗಳ ಪರಿಚಯ ಮಾಡಿಸಿದ್ದಾರೆ. ಕಲಾವಿದರಿಗೆ ನಿರ್ದೇಶಕ ಎನ್ನುವ ರೋಲ್ ಬಹು ಮುಖ್ಯ. ಪ್ರತಿಯೊಂದು ನಿರ್ದೇಶಕ ಚಂದ್ರಜಿತ್ ಅವರಿಂದ ಆಗಿರುವುದು. ಪ್ರೀತಿಯ ಆಚರಣೆಯನ್ನು ಸಂಗೀತ ಮತ್ತು ವಿಶ್ಯುಯಲ್ ಮೂಲಕ ಕಟ್ಟಿಕೊಡಲಾಗಿದೆ. ಈ ಆಚರಣೆಗೆ ಮತ್ತಷ್ಟು ಕಳೆ ಬರಬೇಕಾದರೆ ಚಿತ್ರಮಂದಿರಕ್ಕೆ ಬಂದು ಎಲ್ಲರೂ ಸಿನಿಮಾ‌ ನೋಡಿ ಹೊಸ ಕಲಾವಿದರು ಹಾಗೂ ತಂತ್ರಜ್ಞರಿಗೆ ಪ್ರೋತ್ಸಾಹ ನೀಡಿ ಎಂದು ಕೇಳಿಕೊಂಡರು.

ನಟಿ ಮಯೂರಿ ನಟರಾಜ್ ಮಾತನಾಡಿ, ಟ್ರೇಲರ್ ಬಿಡುಗಡೆಯಾಗಿರುವುದು ಖುಷಿ ಆಗಿದೆ. ಕಣ್ಣಲ್ಲೇ ಅಭಿನಯಿಸಬೇಕು ಎನ್ನುವುದು ಸವಾಲಾಗಿತ್ತು. ಸಿನಿಮಾ ನೋಡಿ ತಿಳಿಸಿ. ಹೊಸಬರು ಇರುವ ಚಿತ್ರವನ್ನು ಈ‌ ಮಟ್ಟವನ್ನು ತೆರೆಗೆ ತರುವುದು ದೊಡ್ಡ ವಿಷಯ. ಹೊಸಬರಿಗೂ ದೊಡ್ಡಮಟ್ಟದಲ್ಲಿ ಸಿನಿಮಾ ಮಾಡಲಿ ಎಂದು ಹಾರೈಸಿದರು.

ಪರಂವಃ ಸಂಸ್ಥೆಯ ಸಿಇಓ ಶ್ರೀನಿಶ್ ಶೆಟ್ಟಿ, ಚಿತ್ರ ಕನ್ನಡದಲ್ಲಿ ಮತ್ತೊಂದು ಬ್ಲಾಕ್ ಬ್ಲಸ್ಟರ್ ಚಿತ್ರವಾಗಲಿದೆ. ಚಿತ್ರ ನೋಡಿದ ತಂಡ ನಿರ್ದೇಶಕ ಚಂದ್ರಜಿತ್ ಅವರನ್ನು ತಬ್ಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದೇವೆ ಎಂದರು.

ಚಾರ್ಲಿ 777 ನಿರ್ದೇಶಕ ಕಿರಣ್ ರಾಜ್ ಮಾತನಾಡಿ, ಟ್ರೈಲರ್ ಚೆನ್ನಾಗಿ ಮೂಡಿಬಂದಿದೆ. ನಿರ್ದೇಶಕ ಚಂದ್ರಜಿತ್ ನಾನು ಕಿರಿಕ್ ಪಾರ್ಟಿಯಿಂದ ಜತೆಯಾಗಿ ಕೆಲಸ ಮಾಡಿದ್ದೇವೆ ಎಂದ ಅವರು, ಗೆಲ್ಲಲು ಎಲ್ಲಾ ಅರ್ಹತೆ ಇರುವ ಸಿನಿಮಾ. ಚಿತ್ರದಲ್ಲಿ ನನ್ನಗೊಂದು ಪಾತ್ರ ನೀಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Vande Bharat Express: ಇನ್ನು ಮುಂದೆ ತುಮಕೂರಿನಲ್ಲೂ ನಿಲ್ಲಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು; ಟಿಕೆಟ್‌ ದರ ಎಷ್ಟು?

ಸಂಗೀತ ನಿರ್ದೇಶಕ ಗಗನ್ ಬಡೇರಿಯಾ, ಛಾಯಾಗ್ರಾಹಕ ಶ್ರೀವತ್ಸನ್ ಸೆಲ್ವರಾಜನ್, ಸಂಕಲನಕಾರ ರಕ್ಷಿತ್ ಕಾಪು ಮತ್ತಿತರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

Continue Reading
Advertisement
ಕರ್ನಾಟಕ15 mins ago

Muda Scam: ದೆಹಲಿಯಲ್ಲಿ ರಾಹುಲ್‌ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ; ಕಾನೂನು ಹೋರಾಟದ ಬಗ್ಗೆ ಚರ್ಚೆ

Uttara Kannada News
ಉತ್ತರ ಕನ್ನಡ24 mins ago

Uttara Kannada News: ಹೊಸ ಆಧಾರ್ ನೋಂದಣಿ, ತಿದ್ದುಪಡಿಗೆ ಅವಕಾಶ

Invest Karnataka
ಬೆಂಗಳೂರು25 mins ago

Invest Karnataka: ಇಂಧನ ತಂತ್ರಜ್ಞಾನ; ರಾಜ್ಯದಲ್ಲಿ 8,300 ಕೋಟಿ ರೂ. ಹೂಡಿಕೆ ಮಾಡಲಿರುವ ಷೆರ್ವನ್‌ ಇಂಡಿಯಾ

UPSC Exam calendar
ದೇಶ53 mins ago

UPSC Exam calendar: UPSC ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್‌ ರಿಲೀಸ್‌; ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

7th pay commission
ಕರ್ನಾಟಕ1 hour ago

7th pay commission: ರಾಜ್ಯ ಸರ್ಕಾರಿ ನೌಕರರ ಪರಿಷ್ಕೃತ ವೇತನ ಶ್ರೇಣಿ ಪ್ರಕಟ; ಯಾರಿಗೆ ಎಷ್ಟು ಏರಿಕೆ?

Viral Video
Latest1 hour ago

Viral Video: ವಿಮಾನ ನಿಲ್ದಾಣದಲ್ಲಿ ಹೃದಯಾಘಾತ; ಸಿಪಿಆರ್ ಮಾಡಿ ಜೀವ ಉಳಿಸಿದ ಅಧಿಕಾರಿಗಳು

Recurring Deposit
ಮನಿ-ಗೈಡ್1 hour ago

Recurring Deposit: ಸಣ್ಣ, ಆರಂಭಿಕ ಹೂಡಿಕೆದಾರರಿಗೆ ಸೂಕ್ತ ಪೋಸ್ಟ್ ಆಫೀಸ್‌ನ ಆರ್‌ಡಿ; ಏನಿದರ ಲಾಭ?

Kannada New Movie
ಬೆಂಗಳೂರು2 hours ago

Kannada New Movie: ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೇಲರ್ ರಿಲೀಸ್‌; ಸಿನಿಮಾ ಬಿಡುಗಡೆ ಯಾವಾಗ?

UPSC Admit Card
ಪ್ರಮುಖ ಸುದ್ದಿ2 hours ago

UPSC Admit Card: NDA ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆಗೊಳಿಸಿದ UPSC; ಎಲ್ಲಿ ಡೌನ್ಲೋಡ್‌ ಮಾಡಬಹುದು?

Non Vegetarian Population
ಆಹಾರ/ಅಡುಗೆ2 hours ago

Non Vegetarian Population: ಜಗತ್ತಿನಲ್ಲಿ ಕುಸಿಯುತ್ತಿದೆ ಮಾಂಸಾಹಾರಿಗಳ ಸಂಖ್ಯೆ! ಕಡಿಮೆ ಮಾಂಸಾಹಾರದ ದೇಶಗಳಲ್ಲಿ ಭಾರತವೇ ನಂ.1

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌