Uttara Kannada News: ಹೊಸ ಆಧಾರ್ ನೋಂದಣಿ, ತಿದ್ದುಪಡಿಗೆ ಅವಕಾಶ - Vistara News

ಉತ್ತರ ಕನ್ನಡ

Uttara Kannada News: ಹೊಸ ಆಧಾರ್ ನೋಂದಣಿ, ತಿದ್ದುಪಡಿಗೆ ಅವಕಾಶ

ಉತ್ತರ ಕನ್ನಡ ಜಿಲ್ಲೆಯಲ್ಲಿ (Uttara Kannada News) ಒಟ್ಟು 137 ಆಧಾರ್ ಸೇವಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಎಲ್ಲಾ ಕೇಂದ್ರಗಳಲ್ಲಿ ಹೊಸದಾಗಿ ಆಧಾರ್ ನೋಂದಣಿ, ತಿದ್ದುಪಡಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಆಧಾರ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಮತ್ತು ಲಿಂಗ ಬದಲಾವಣೆಗೆ ಕೇವಲ ಒಂದು ಬಾರಿ, ಹೆಸರು ಬದಲಾವಣೆಗೆ 2 ಬಾರಿ ಅವಕಾಶವಿದ್ದು, ವಿಳಾಸ ಬದಲಾವಣೆಗೆ ಯಾವುದೇ ಮಿತಿಯಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

VISTARANEWS.COM


on

Uttara Kannada News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ (Uttara Kannada News) ಒಟ್ಟು 137 ಆಧಾರ್ ಸೇವಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಎಲ್ಲಾ ಕೇಂದ್ರಗಳಲ್ಲಿ ಹೊಸದಾಗಿ ಆಧಾರ್ ನೋಂದಣಿ, ತಿದ್ದುಪಡಿ ಕಾರ್ಯಗಳನ್ನು ಮಾಡಲಾಗುತ್ತಿದೆ.

ಆಧಾರ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಮತ್ತು ಲಿಂಗ ಬದಲಾವಣೆಗೆ ಕೇವಲ ಒಂದು ಬಾರಿ, ಹೆಸರು ಬದಲಾವಣೆಗೆ 2 ಬಾರಿ ಅವಕಾಶವಿದ್ದು, ವಿಳಾಸ ಬದಲಾವಣೆಗೆ ಯಾವುದೇ ಮಿತಿಯಿರುವುದಿಲ್ಲ.

ಇದನ್ನೂ ಓದಿ: 7th pay commission: ರಾಜ್ಯ ಸರ್ಕಾರಿ ನೌಕರರ ಪರಿಷ್ಕೃತ ವೇತನ ಶ್ರೇಣಿ ಪ್ರಕಟ; ಯಾರಿಗೆ ಎಷ್ಟು ಏರಿಕೆ?

ಜಿಲ್ಲೆಯ 19 ಅಟಲ್ ಜನ ಸ್ನೇಹಿ ಕೇಂದ್ರಗಳು, 41 ಕರ್ನಾಟಕ ಒನ್ ಕೇಂದ್ರಗಳು, 1 ಜಿಲ್ಲಾ ಜನಸ್ಪಂದನ ಕೇಂದ್ರ, 13 ಸಾಮಾನ್ಯ ಸೇವಾ ಕೇಂದ್ರಗಳು, 45 ಭಾರತೀಯ ಅಂಚೆ ಕಚೇರಿಗಳು ಮತ್ತು 11 ಬ್ಯಾಂಕ್ ಗಳಲ್ಲಿ ಸೇರಿದಂತೆ ಒಟ್ಟು 137 ಆಧಾರ್ ಸೇವಾ ಕೇಂದ್ರಗಳಲ್ಲಿ ಆಧಾರ್ ಸಂಬಂಧಿತ ಸಮಸ್ಯೆಗಳನ್ನು ಸರಿಪಡಿಸಲಾಗುತ್ತಿದೆ. ಅಲ್ಲದೇ ಯು.ಐ.ಡಿ.ಐ. ತಂತ್ರಾಂಶದಲ್ಲಿ (ಆನ್‌ಲೈನ್) ಮೂಲಕ ಆಧಾರ ದಾಖಲೆ ನವೀಕರಣ ಅವಕಾಶ ಕೂಡಾ ಇದ್ದು, ಆಧಾರ್ ಕಾರ್ಡ್‌ನಲ್ಲಿ 18 ವರ್ಷ ಮೇಲ್ಪಟ್ಟವರ ಹೆಸರು ಬದಲಾವಣೆ ಇದ್ದಲ್ಲಿ ಸರಿಪಡಿಸಿಕೊಂಡು ಆಧಾರ್ ಕಾರ್ಡ್‌ನಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: Kannada New Movie: ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೇಲರ್ ರಿಲೀಸ್‌; ಸಿನಿಮಾ ಬಿಡುಗಡೆ ಯಾವಾಗ?

ಆಧಾರ್ ಮೊಬೈಲ್ ಅಪ್‌ಡೇಶನ್ ಕುರಿತು ಉತ್ತರ ಕನ್ನಡ ಜಿಲ್ಲೆಯಲ್ಲಿ 16,43,471 ಆಧಾರ್ ಸೃಜಿಸಲಾಗಿದ್ದು, 15,38,406 ಮೊಬೈಲ್ ಸೀಡೆಡ್ ಆಗಿದ್ದು, ಒಟ್ಟು 1,05,065 ಬಾಕಿ ಇರುತ್ತದೆ. ಬಾಕಿ ಇರುವ ಆಧಾರ್ ಕಾರ್ಡ್‌ಗಳನ್ನು ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಅಂಚೆ ಕಛೇರಿ ಕೇಂದ್ರ, ನಾಡಕಛೇರಿಗಳಲ್ಲಿ ನವೀಕರಿಸಿಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು; ಹಳ್ಳ ದಾಟಲು ಗ್ರಾಮಸ್ಥರ ಪರದಾಟ

Karnataka Weather Forecast : ಹಾವೇರಿ, ಬಾಗಲಕೋಟೆ, ಬಳ್ಳಾರಿಯಲ್ಲಿ ಭಾರಿ ಮಳೆಯಿಂದಾಗಿ (Rain News) ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಅವಾಂತರವೇ ಸೃಷ್ಟಿಯಾಗಿದೆ. ಹಳ್ಳದ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಜನರು ಜೀವ ಭಯದಲ್ಲೇ ದಾಟುತ್ತಿದ್ದಾರೆ.

VISTARANEWS.COM


on

By

karnataka weather forecast
Koo

ಹಾವೇರಿ: ಭಾರಿ ಮಳೆಗೆ (Rain News) ಕೆರೆ ಕೋಡಿ ಬಿದ್ದು ಗ್ರಾಮದ ಹಲವು ಮನೆಗಳು ಜಲಾವೃತಗೊಂಡಿದೆ. ಸುಮಾರು 30 ಹೆಚ್ಚು ಮನೆಗಳಿಗೆ ಕೆರೆ ನೀರು ನುಗ್ಗಿದೆ. ಹಾವೇರಿಯ ಹಿರೇಕೇರೂರು ತಾಲೂಕಿನ ಕಚವಿ ಗ್ರಾಮವು ಜಲಾವೃತಗೊಂಡಿದೆ. ಕೊಪ್ಪದ ಕೆರೆ ಕೋಡಿ ಬಿದ್ದು ಕಚವಿ ಗ್ರಾಮದತ್ತ ನೀರು (Karnataka Weather Forecast) ನುಗ್ಗಿದೆ.

karnataka Weather Forecast
karnataka weather Forecast

ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಕೊಪ್ಪದ ಕೆರೆ ತುಂಬಿ ಕೋಡಿ ಬಿದ್ದು ಗ್ರಾಮದತ್ತ ಹರಿದು ಬಂದಿದೆ. ಕಚವಿ ಗ್ರಾಮಸ್ಥರ ಬದುಕು ಬೀದಿಗೆ ಬಿದಿದ್ದು, ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿದ್ದಾರೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ರಾತ್ರಿ ಪೂರ್ತಿ ನೀರು ಹೊರ ಹಾಕಿದ್ದಾರೆ. ಇಷ್ಟೆಲ್ಲಾ ಸಮಸ್ಯೆ ಆದರೂ ಜಿಲ್ಲಾಡಳಿತ ಕ್ಯಾರೆ ಎನ್ನುತ್ತಿಲ್ಲ. ಗ್ರಾಮದ ವಯೋವೃದ್ದರು, ವಾಹನ ಸವಾರರರು, ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ರಸ್ತೆ ಮೇಲೆ ನೀರು ನದಿಯಂತೆ ಹರಿಯುತ್ತಿದೆ.

karnataka weather Forecast
karnataka weather Forecast

ಬಳ್ಳಾರಿಯಲ್ಲಿ ಭತ್ತದ ಬೆಳೆಗೆ ಹಾನಿ

ಮಳೆಯಿಂದ ಹಳ್ಳಗಳು ತುಂಬಿ ನೀರು ಹರಿದು ಭತ್ತದ ಬೆಳೆಗೆ ಹಾನಿಯಾಗಿದೆ. ಬಳ್ಳಾರಿ ಜಿಲ್ಲೆಯ ಜಾಲಿಹಾಳ್ ಗ್ರಾಮದ ನಾಲ್ಕು ಹಳ್ಳಗಳ ರೈತರು ಜರ್ಜರಿತರಾಗಿದ್ದಾರೆ. ಭಾರಿ ಮಳೆಗೆ ಹಳ್ಳಗಳು ಹರಿದ ಪರಿಣಾಮ 500 ಎಕರೆ ಭತ್ತ ಜಲಾವೃತಗೊಂಡಿದೆ. ಜಾಲಿಹಾಳ್ ಗ್ರಾಮದ ಸುತ್ತ ಕಟ್ರಳ್ಳ, ಕೈಮುರುಕನಹಳ್ಳ, ಗಂಗಮ್ಮನಹಳ್ಳ, ಈರ್ಲಹಳ್ಳಗಳು ಹರಿಯುತ್ತಿದೆ. ಭತ್ತ ನಾಟಿ ಮಾಡಿದ ಕೆಲ ದಿನಗಳಿಂದ ಭರ ಸಿಡಿಲಾಗಿ ಎರಗಿದ ಹಳ್ಳದ ನೀರಿನಿಂದ ಲಕ್ಷಾಂತರ ರೂ.ಗಳು ನಷ್ಟವಾಗಿದೆ.

ರಸ್ತೆಯ ಮೇಲೂ ಹಳ್ಳ ಹರಿದು ಜಾಲಿಹಾಳ್ ಮತ್ತು ಕಾರೇಕಲ್ಲು ಮಧ್ಯದ ರಸ್ತೆ ಕೊಚ್ಚಿ ಹೋಗಿದೆ. ಎಕರೆಗೆ 15 ರಿಂದ 20 ಸಾವಿರ ವೆಚ್ಚ ಮಾಡಿ ಭತ್ತ ನಾಟಿ ಮಾಡಿದ್ದರು. ಕಳೆದ ಐದಾರು ದಿನಗಳಿಂದ ರೈತರ ಗದ್ದೆಯಲ್ಲಿ ನೀರು ಹರಿದಿದ್ದರಿಂದ ಭತ್ತದ ಸಸಿಗಳು ಕೊಳೆತು ಹೋಗಿದೆ.

ಇದನ್ನೂ ಓದಿ: Bomb Threat : ಉರ್ದು ಭಾಷೆಯಲ್ಲಿ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್‌ ಬೆದರಿಕೆ

ತುಂಬಿ ಹರಿಯುತ್ತಿರುವ ಕರಡಿ ಗ್ರಾಮದ ಹಳ್ಳ

ಬಾಗಲಕೋಟೆಯ ಇಳಕಲ್ಲ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಕರಡಿ ಗ್ರಾಮದ ಹಳ್ಳ ತುಂಬಿ ಹರಿದಿದೆ. ರಸ್ತೆ ಮೇಲೆ ಹಳ್ಳದ ನೀರು ಹರಿಯುತ್ತಿರುವ ಪರಿಣಾಮ ಕರಡಿ ಗ್ರಾಮಸ್ಥರ ಸಂಚಾರಕ್ಕೆ ಅಡತಡೆಯಾಗಿದೆ. ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದ ನೀರಲ್ಲೇ ನಡೆದು ಗ್ರಾಮಕ್ಕೆ ಹೋಗುವಂತಾಗಿದೆ. ಪುಟ್ಟ ಮಗು ಹೊತ್ತು ಹಳ್ಳ ದಾಟೋಕೆ ಪರದಾಡುತ್ತಿದ್ದಾರೆ. ಪ್ರತಿ ಬಾರಿ ಮಳೆ ಸುರಿದಾಗ ಕರಡಿ, ದಾಸಬಾಳ , ಪಾಲತಿ , ಕೊಣ್ಣೂರ ಹುನಗುಂದ ಸಂಪರ್ಕ ಕಡಿತಗೊಂಡಿದೆ. ಶೀಘ್ರ ಮೇಲ್ಸೇತುವೆ ಕಾರ್ಯ ಮುಗಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಮಳೆ ಅಬ್ಬರದ ಜತೆಗೆ ಭೂ ಕಂಪನದ ಅನುಭವ

ಶುಕ್ರವಾರ ಕೊಡಗು, ಹಾಸನ, ಮೈಸೂರು ಗಡಿಭಾಗದಲ್ಲಿ ಭೂಕಂಪನದ ಅನುಭವವಾಗಿದೆ. ಹೆಬ್ಬಾಲೆ ಸಮೀಪ, ಸೂಳೆಕೋಟೆ, ಅಡಗೂರು‌‌ ಹಾಗೂ ಕಣಗಾಲು ಹಾಗೂ ಕುಶಾಲನಗರ ಜ್ಞಾನಭಾರತಿ ಶಾಲೆ ಹಿಂಭಾಗ, ಭಸವತ್ತೂರು ಸೇರಿ ಹಲವೆಡೆ ಕಂಪನದ ಅನುಭವವಾಗಿದೆ. ಶುಕ್ರವಾರ ಮುಂಜಾನೆ 6.30ರ ಸಮಯಕ್ಕೆ 2ರಿಂದ3 ಸೆಕೆಂಡ್ ಭೂಮಿ ಕಂಪಿಸಿದೆ. ಭೂಕಂಪನ ಹಿನ್ನೆಲೆಯಲ್ಲಿ ಕೆಲಕಾಲ ಜನರು ಆತಂಕಗೊಂಡರು.

ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಯಲ್ಲಿ ರಭಸವಾಗಿ ಬೀಸಲಿದೆ ಗಾಳಿ; ಸಾಧಾರಣ ಮಳೆ ಸಾಧ್ಯತೆ

Karnataka Weather Forecast : ಕರಾವಳಿಯ ಸಮುದ್ರ ತೀರದಲ್ಲಿ ಗಾಳಿ ವೇಗ ಹೆಚ್ಚಾಗಿರಲಿದ್ದು, ಮಲೆನಾಡು ಹಾಗೂ ಒಳನಾಡಿನಲ್ಲಿ ಹಗುರದಿಂದ ಸಾಧಾರಣ (Rain News) ಮಳೆಯಾಗಲಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲಿ ಹಗುರದಿಂದ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 , ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Weather: ಅಲೆಗಳ ಅಬ್ಬರಕ್ಕೆ ಅಂಕೋಲಾದಲ್ಲಿ ಕೊಚ್ಚಿ ಹೋದ ಮನೆ; ಭಾರಿ ಮಳೆಗೆ ಚಾರ್ಮಾಡಿಯಲ್ಲಿ ಧರೆಗುರುಳಿದ ಬಂಡೆಗಳು

ಯೆಲ್ಲೋ ಅಲರ್ಟ್‌

ಗುಡಗು ಸಹಿತ ಭಾರಿ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಬೆಳಗಾವಿ, ವಿಜಯಪುರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್‌ 24ರಂದು ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather: ಅಲೆಗಳ ಅಬ್ಬರಕ್ಕೆ ಅಂಕೋಲಾದಲ್ಲಿ ಕೊಚ್ಚಿ ಹೋದ ಮನೆ; ಭಾರಿ ಮಳೆಗೆ ಚಾರ್ಮಾಡಿಯಲ್ಲಿ ಧರೆಗುರುಳಿದ ಬಂಡೆಗಳು

Karnataka Weather Forecast: ಕರಾವಳಿಯಲ್ಲಿ ಅಲೆಗಳ ಅಬ್ಬರ ಜೋರಾಗಿದ್ದರೆ, ಇತ್ತ ಮಲೆನಾಡಿನಲ್ಲಿ ಭಾರಿ ಮಳೆಗೆ (Rain News) ಚಾರ್ಮಾಡಿ ಘಾಟ್‌ನಲ್ಲಿ ಬಂಡೆ ಕಲ್ಲುಗಳು ಧರೆಗುರುಳಿವೆ. ವಿಜಯಪುರ, ವಿಜಯನಗರದಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ.

VISTARANEWS.COM


on

By

Karnataka weather Forecast
Koo

ಕಾರವಾರ: ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಅಲೆಗಳ ಅಬ್ಬರ (Karnataka Weather Forecast) ಜೋರಾಗಿದೆ. ಭಾರೀ ಅಲೆಗಳ ಅಬ್ಬರಕ್ಕೆ (Rain News) ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಹಾರವಾಡದ ತರಂಗಮೇಟ ಪ್ರದೇಶದಲ್ಲಿ ಮನೆಯೊಂದು ಕೊಚ್ಚಿಹೋಗಿದೆ. ಮೀನುಗಾರ ಅಶೋಕ್ ಹರಿಕಂತ್ರ ಎಂಬುವವರ ಮನೆ ಸಮುದ್ರಪಾಲಾಗಿದೆ.

ತರಂಗಮೇಟ ತೀರದ ಸುಮಾರು 200 ಮೀಟರ್ ವ್ಯಾಪ್ತಿಯಲ್ಲಿ ಅಲೆಗಳ ಅಬ್ಬರಕ್ಕೆ ಕಳೆದ ಮೂರು ತಿಂಗಳಿಂದ ಕಡಲಕೊರೆತ ಉಂಟಾಗಿತ್ತು. ಕುಟುಂಬಸ್ಥರು ಎರಡು ತಿಂಗಳ ಹಿಂದೆಯೇ ಮನೆ ಬಿಟ್ಟು ಬೇರೆಡೆ ಉಳಿದುಕೊಂಡಿದ್ದರು. ಇಂದು ಗುರುವಾರ ಅಲೆಗಳ ಅಬ್ಬರಕ್ಕೆ ಮನೆ, ತೆಂಗಿನಮರ ನೀರುಪಾಲಾಗಿದೆ. ಮನೆ, ತೆಂಗಿನಮರ ಕೊಚ್ಚಿಹೋಗುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ತರಂಗಮೇಟ ಕಡಲತೀರಕ್ಕೆ ಹೊಂದಿಕೊಂಡು 30ಕ್ಕೂ ಅಧಿಕ ಮೀನುಗಾರರ ಮನೆಗಳು ಇವೆ. ಕಡಲತೀರಕ್ಕೆ ಅಲೆತಡೆಗೋಡೆ ನಿರ್ಮಿಸುವಂತೆ ಮನವಿ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್‌ನ ತಪ್ಪಲಿನಲ್ಲಿ ಭಾರಿ ಮಳೆಯಾಗಿದೆ. ಧಾರಾಕಾರ ಮಳೆಗೆ ಚಾರ್ಮಾಡಿಯಲ್ಲಿ ಬಂಡೆಗಳು ಧರೆಗುರುಳಿವೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್‌ನ 8 ಮತ್ತು 9ನೇ ತಿರುವಿನಲ್ಲಿ ಘಟನೆ ನಡೆದಿದೆ.

ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆಯಲ್ಲೇ ನೀರು ತುಂಬಿ ಹರಿಯುತ್ತಿದೆ. ಮಳೆ ನೀರಿನ ಜತೆ ರಸ್ತೆಗೆ ಕಲ್ಲುಗಳು ತೇಲಿ ಬಂದಿದೆ. ಗುಡ್ಡ ಕುಸಿದು ರಸ್ತೆ ಮೇಲೆ ಬಂಡೆ ಕಲ್ಲುಗಳು ಉರುಳಿವೆ. ಸ್ಥಳಕ್ಕೆ ಚಾರ್ಮಾಡಿ ಘಾಟಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ‌ ಸಂಚಾರ ಎಂದಿನಂತೆ ಇದ್ದು, ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ.

ಇನ್ನೂ ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಗ್ರಾಮಸ್ಥರ ಕಣ್ಣೆದುರೆ ಮನೆಗೆ ಸಿಡಿಲು ಬಡಿದು, ಮನೆ ಚಾವಣಿ ಸಂಪೂರ್ಣ ಹಾನಿಯಾಗಿ, ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಮಾಳಿಗನಾಡು ಗ್ರಾಮದಲ್ಲಿ ಘಟನೆ ನಡೆದಿದೆ.

ಗ್ರಾಮದ ಸೀತು ಎಂಬುವವರ ಮನೆಗೆ ಸಂಪೂರ್ಣ ಹಾನಿಯಾಗಿದೆ. ಮನೆಯ ಸದಸ್ಯರು ತೋಟದ ಕೆಲಸಕ್ಕೆ ಹೋಗಿದ್ದರಿಂದ ಅವಘಡ ಸಂಭವಿಸಿದಾಗ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಮನೆಯ ಹೆಂಚುಗಳು, ಬಾಗಿಲು ಕಿಟಕಿ ಸುಟ್ಟ ಸ್ಥಿತಿ ತಲುಪಿದೆ.

ಇದನ್ನೂ ಓದಿ: Belgavi News : ಪರಿಹಾರ ನೀಡಲು ವಿಳಂಬ; ಬೆಳಗಾವಿ ಎಸಿ ಕಚೇರಿಯ ಕಂಪ್ಯೂಟರ್, ಪ್ರಿಂಟರ್ ಹೊತ್ತೊಯ್ದ ರೈತರು!

ವಿಜಯಪುರದಲ್ಲಿ ಉಕ್ಕಿ ಹರಿಯುತ್ತಿರುವ ಹಳ್ಳ

ಇತ್ತ ರೋಣಿಹಾಳ ಹಳ್ಳ ಉಕ್ಕಿ ಹರಿಯುತ್ತಿದ್ದು, ಜನರು ಹಳ್ಳದಲ್ಲೆ ಓಡಾಡುತ್ತಿದ್ದಾರೆ. ನಿನ್ನೆ ಬುಧವಾರ ತಡರಾತ್ರಿ ಸುರಿದ ಮಳೆಗೆ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ರೋಣಿಹಾಳ. ಗರಸಂಗಿ, ಆಸಂಗಿ ಹಳ್ಳಗಳು ಉಕ್ಕಿ ಹರಿದಿದೆ. ಅಪಾಯದ ನಡುವೆಯೂ ಗ್ರಾಮಸ್ಥರು ಜೀವದ ಹಂಗು ತೊರೆದು ಹಳ್ಳ ದಾಟಲು ಯತ್ನಿಸುತ್ತಿದ್ದಾರೆ. ವಿಜಯಪುರ ತಾಲೂಕಿನ ಲೋಗಾಂವಿ ಗ್ರಾಮದಲ್ಲಿ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ. ರಾಜು ಹುನ್ನೂರ್ ಎಂಬುವವರಿಗೆ ಸೇರಿದ ದ್ರಾಕ್ಷಿ ಬೆಳೆ ಭಾರಿ ಮಳೆಗೆ ಬೆಳೆಯ ಕಂಬಗಳು ಹಾಗೂ ದ್ರಾಕ್ಷಿ ಬೆಳೆ ನೆಲಕ್ಕುರುಳಿವೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ದ್ರಾಕ್ಷಿ ಹಾನಿಯಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ರೈತರ ಮನವಿ ಮಾಡಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ತಡ ರಾತ್ರಿ ಭರ್ಜರಿ ಮಳೆಗೆ ಬಹುತೇಕ ಕಡೆ ರಸ್ತೆಗಳು ಜಲಾವೃತಗೊಂಡಿದ್ದವು. ದಾವಣಗೆರೆ ನಗರ ಹಾಗೂ ಹೊನ್ನಾಳಿ ಪಟ್ಟಣ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಸುರಿದ ಮಳೆಯಿಂದಾಗಿ ಜಮೀನಿಗೆ ನೀರು ನುಗ್ಗಿದೆ. ವಿಜಯನಗರ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೈತರ ಜಮೀನಿ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಭಾರಿ ಮಳೆಗೆ ಬೈಲುವದ್ದಿಗೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ಕೆರೆ ಕೋಡಿ ಬಿದ್ದು ಗುಲಾಬಿ ತೋಟ, ಮೆಣಸಿನಕಾಯಿ ತೋಟ, ಹತ್ತಿ, ಹಾಗೂ ಮೆಕ್ಕೆಜೋಳ ಬೆಳೆದಿದ್ದ ಜಮೀನಿಗೆ ನೀರು ನುಗ್ಗಿದೆ. ಹತ್ತಾರು ಸಾವಿರ ಖರ್ಚು ಮಾಡಿದ್ದ ಬೆಳೆ ಮಳೆಗೆ ಮುಕ್ಕಾಲು ಭಾಗ ಹಾನಿಯಾಗಿದೆ. ಬೆಳೆ ಹಾನಿಯಾಗಿದ್ದಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಗುಲಾಬಿ ಬೆಳೆಗಾರ ಕಂಗಾಲಾಗಿದ್ದಾರೆ. ಪರಿಹಾರಕ್ಕಾಗಿ ಹತ್ತಿ, ಮೆಣಸಿನಕಾಯಿ, ಮೆಕ್ಕೆಜೋಳ ಬೆಳೆದ ರೈತರಿಂದ ಆಗ್ರಹಿಸಿದ್ದಾರೆ.

ಬಿರುಗಾಳಿಗೆ ವಾಲಿದ ಸಿಗ್ನಲ್ ಕಂಬ!

ಬಿರುಗಾಳಿಗೆ ಸಿಗ್ನಲ್‌ ಕಂಬ ವಾಲಿದ ಘಟನೆ ಗದಗ ನಗರದ ಮುಳಗುಂದ ನಾಕಾದ ಸಿಗ್ನಲ್‌ನಲ್ಲಿ ಘಟನೆ ನಡೆದಿದೆ. ವಾಹನಗಳ ಓಡಾಡುವ ಸಂದರ್ಭದಲ್ಲಿ ಕಂಬ ವಾಲಿದ್ದು, ಸವಾರರು ಕಕ್ಕಾಬಿಕ್ಕಿಯಾದರು. ತಕ್ಷಣ ಅಲರ್ಟ್ ಟ್ರಾಫಿಕ್ ಪೊಲೀಸರು ಬ್ಯಾರಿಕೆಡ್ ಹಾಕಿ ಪರ್ಯಾಯ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಸ್ಥಳಕ್ಕೆ ಟ್ರಾಫಿಕ್ ಪಿಎಸ್ಐ ಶಕುಂತಲಾ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಾಳೆಗೂ ಇರಲಿದೆ ಮಳೆ ಅಬ್ಬರ

ನಾಳೆ ಶುಕ್ರವಾರ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ನಿರಂತರ ಗಾಳಿಯ ವೇಗ 40-50 ಕಿ.ಮೀ ಬೀಸುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : 23 ಜಿಲ್ಲೆಗಳಲ್ಲಿ ವಿಪರೀತ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಸುಮಾರು 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬುಧವಾರ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗಲಿದೆ (Heavy Rain News) ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲೂ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Assault Case : ಬೆಂಗಳೂರಿನಲ್ಲಿ ಯುವಕನಿಗೆ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ ಸೇರಿದಂತೆ ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Love jihad
ಕರ್ನಾಟಕ2 hours ago

Love Jihad: ಹಿಂದೂ ಯುವತಿಯ ಕರೆದೊಯ್ದ ಮುಸ್ಲಿಂ ಯುವಕ; ಕಾರ್ಕಳ ಪ್ರಕ್ಷುಬ್ಧ

assault case
ಕರ್ನಾಟಕ2 hours ago

Assault Case: ಮಾರ್ಕ್ಸ್‌ ಕಡಿಮೆ ಬಂತೆಂದು 4ನೇ ತರಗತಿ ಬಾಲಕನಿಗೆ ಬಾಸುಂಡೆ ಬರುವಂತೆ ಬಾರಿಸಿದ ಶಿಕ್ಷಕ

pm modi Ukraine Visit
ವಿದೇಶ2 hours ago

PM Modi Ukraine Visit: ಉಕ್ರೇನ್‌ಗೆ ಭೀಷ್ಮ್‌ ಕ್ಯೂಬ್‌ ಉಡುಗೊರೆ ನೀಡಿದ ಪ್ರಧಾನಿ ಮೋದಿ…ಏನಿದರ ವಿಶೇಷತೆ?

Yadgiri News
ಧಾರ್ಮಿಕ3 hours ago

Yadgiri News: ಶ್ರೀ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

viral video
ವೈರಲ್ ನ್ಯೂಸ್4 hours ago

Viral Video: ಮೈಮೇಲೆ ಒಂದಲ್ಲ..ಎರಡಲ್ಲ ಬರೋಬ್ಬರಿ 25ಕೆ.ಜಿ ಚಿನ್ನ; ತಿಮ್ಮಪ್ಪನ ಸನ್ನಿಧಿಗೆ ಬಂದ ವಿಶೇಷ ಭಕ್ತರು ಇವರೇ ನೋಡಿ

Lorry Accident
ಕರ್ನಾಟಕ4 hours ago

Lorry Accident: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; 16 ಕಾರ್ಮಿಕರಿಗೆ ಗಂಭೀರ ಗಾಯ

ಕರ್ನಾಟಕ4 hours ago

Muda Scam: ದೆಹಲಿಯಲ್ಲಿ ರಾಹುಲ್‌ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ; ಕಾನೂನು ಹೋರಾಟದ ಬಗ್ಗೆ ಚರ್ಚೆ

Uttara Kannada News
ಉತ್ತರ ಕನ್ನಡ4 hours ago

Uttara Kannada News: ಹೊಸ ಆಧಾರ್ ನೋಂದಣಿ, ತಿದ್ದುಪಡಿಗೆ ಅವಕಾಶ

Invest Karnataka
ಬೆಂಗಳೂರು4 hours ago

Invest Karnataka: ಇಂಧನ ತಂತ್ರಜ್ಞಾನ; ರಾಜ್ಯದಲ್ಲಿ 8,300 ಕೋಟಿ ರೂ. ಹೂಡಿಕೆ ಮಾಡಲಿರುವ ಷೆರ್ವನ್‌ ಇಂಡಿಯಾ

UPSC Exam calendar
ದೇಶ5 hours ago

UPSC Exam calendar: UPSC ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್‌ ರಿಲೀಸ್‌; ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌