Viral Video: ಮೈಮೇಲೆ ಒಂದಲ್ಲ..ಎರಡಲ್ಲ ಬರೋಬ್ಬರಿ 25ಕೆ.ಜಿ ಚಿನ್ನ; ತಿಮ್ಮಪ್ಪನ ಸನ್ನಿಧಿಗೆ ಬಂದ ವಿಶೇಷ ಭಕ್ತರು ಇವರೇ ನೋಡಿ - Vistara News

ವೈರಲ್ ನ್ಯೂಸ್

Viral Video: ಮೈಮೇಲೆ ಒಂದಲ್ಲ..ಎರಡಲ್ಲ ಬರೋಬ್ಬರಿ 25ಕೆ.ಜಿ ಚಿನ್ನ; ತಿಮ್ಮಪ್ಪನ ಸನ್ನಿಧಿಗೆ ಬಂದ ವಿಶೇಷ ಭಕ್ತರು ಇವರೇ ನೋಡಿ

viral video: ಪುಣೆ ಮೂಲದ ಈ ಕುಟುಂಬವು ತಿರುಪತಿಗೆ ಭೇಟಿ ನೀಡಿದ್ದು, ಮೈ ಮೇಲೆ ಬರೋಬ್ಬರಿ 25 ಕೆಜಿ ಚಿನ್ನವನ್ನು ಧರಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇಂದು ಮುಂಜಾನೆ ತಿರುಮಲದ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ವೀಡಿಯೋದಲ್ಲಿ ನಾಲ್ವರ ಕುಟುಂಬವೊಂದು ಕೈಮುಗಿದು ನಿಂತಿರುವ ದೃಶ್ಯವಿದೆ.

VISTARANEWS.COM


on

viral video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ಇಡೀ ಪ್ರಪಂಚದಲ್ಲಿಯೇ ಚಿನ್ನದ ಮೇಲಿನ ಮೋಹ ಭಾರತೀಯರಿಗಿರುವಷ್ಟು ಬೇರೆ ಯಾವ ದೇಶದಲ್ಲೂ ಕಾಣಲು ಸಾಧ್ಯವೇ ಇಲ್ಲ. ಇಲ್ಲಿ ಚಿನ್ನಕ್ಕೆ ತನ್ನದೇ ಆದ ಸ್ಪೆಶಲ್‌ ಸ್ಥಾನವಿದೆ. ದರ ಎಷ್ಟೇ ಏರಿಕೆಯಾದ್ರೂ ಚಿನ್ನ ಖರೀದಿಸುವವರ ಸಂಖ್ಯೆಯ ಮಾತ್ರ ಕಡಿಮೆ ಆಗಿಲ್ಲ. ಇದಕ್ಕೆ ಪೂರಕವೆಂಬಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಇದೀಗ ಭಾರೀ ವೈರಲ್‌(Viral Video) ಆಗುತ್ತಿದೆ.

ತಿರುಪತಿ ತಿರುಮಲದಲ್ಲಿರುವ ವೆಂಕಟೇಶ್ವರ ದೇವಸ್ಥಾನಕ್ಕೆ ಕುಟುಂಬವೊಂದು ಭೇಟಿ ಭೇಟಿ ನೀಡಿರುವ ವಿಡಿಯೋವೊಂದು ಅಸಾಮಾನ್ಯ ಕಾರಣಕ್ಕೆ ವೈರಲ್ ಆಗಿದೆ. ಕ್ಲಿಪ್‌ನಲ್ಲಿ, ಒಂದು ಕುಟುಂಬವು ಭಾರೀ ಚಿನ್ನಾಭರಣಗಳನ್ನು ಧರಿಸಿರುವುದನ್ನು ಕಾಣಬಹುದು. ಅವರು 25 ಕೆಜಿ ಚಿನ್ನದೊಂದಿಗೆ ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.

ಪುಣೆ ಮೂಲದ ಈ ಕುಟುಂಬವು ತಿರುಪತಿಗೆ ಭೇಟಿ ನೀಡಿದ್ದು, ಮೈ ಮೇಲೆ ಬರೋಬ್ಬರಿ 25 ಕೆಜಿ ಚಿನ್ನವನ್ನು ಧರಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇಂದು ಮುಂಜಾನೆ ತಿರುಮಲದ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ವೀಡಿಯೋದಲ್ಲಿ ನಾಲ್ವರ ಕುಟುಂಬವೊಂದು ಕೈಮುಗಿದು ನಿಂತಿರುವ ದೃಶ್ಯವಿದೆ. ಬಿಳಿಯ ವಸ್ತ್ರಗಳು ಮತ್ತು ಧೋತಿಗಳನ್ನು ಧರಿಸಿರುವ ಇಬ್ಬರು ಪುರುಷರು ಕುತ್ತಿಗೆಯಲ್ಲಿ ದಪ್ಪ ಸರಪಳಿಯಂತಹ ಚಿನ್ನ ಧರಿಸಿದ್ದಾರೆ. ಚಿನ್ನದ ಬಣ್ಣದ ಸೀರೆಯುಟ್ಟ ಮಹಿಳೆಯು ಸಂಪೂರ್ಣವಾಗಿ ಚಿನ್ನದ ಆಭರಣದಿಂದ ಮುಚ್ಚಲ್ಪಟ್ಟಿದ್ದಾರೆ. ಇವರ ಜೊತೆ ಒಂದು ಮಗು ನಿಂತಿರುವುದು ಸಹ ಕಂಡುಬರುತ್ತದೆ.

ವೀಡಿಯೊ ಮುಂದುವರೆದಂತೆ, ಪುಣೆಯ ಕುಟುಂಬವು ಪೊಲೀಸ್ ಸಿಬ್ಬಂದಿಯೊಂದಿಗೆ ದೇವಾಲಯದ ಆವರಣದೊಳಗೆ ನಡೆಯುತ್ತಿರುವುದು ಕಂಡುಬರುತ್ತದೆ. ಇನ್ನು ಈ ವಿಡಿಯೋ 1.4 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳೊಂದಿಗೆ, ಶೇರ್ 400 ಕ್ಕೂ ಹೆಚ್ಚು ಲೈಕ್ಸ್‌ ಬಂದಿದೆ. ಅಲ್ಲದೇ ಅನೇಕರು ನಾನಾ ರೀತಿಯಲ್ಲಿ ಕಮೆಂಟ್‌ ಮಾಡಿದ್ದಾರೆ. ಆದಾಯ ತೆರಿಗೆ ಇಲಾಖೆ ಕಣ್ಣು ನಿಮ್ಮ ಮೇಲಿದೆ ಎಂದು ಹಲವರು ತಮಾಷೆ ಮಾಡಿದ್ದಾರೆ. ದೇವರ ಮುಂದೆ ಈ ಪ್ರದರ್ಶನ ಏಕೆ?” ನಾಲ್ಕನೆಯವರು ಬರೆದಿದ್ದಾರೆ, “ಇದು ತುಂಬಾ ಹುಚ್ಚುತನ ಎಂದು ಮತ್ತೆ ಕೆಲವರು ಕಮೆಂಟ್‌ ಮಾಡಿದ್ದಾರೆ.

ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿರುವ ಈ ದೇವಾಲಯವು ದಟ್ಟವಾದ ಕಾಡಿನ ನಡುವೆ ನೆಲೆಸಿದೆ. ಹಿಂದೂ ಧರ್ಮದ ಅನುಯಾಯಿಗಳಿಂದ ಇದು ಅತ್ಯಂತ ಪವಿತ್ರ ಸ್ಥಳಗಳಲ್ಲಿ ಒಂದಾಗಿದೆ. ಹಿಂದೂ ಧರ್ಮದ ಪ್ರಕಾರ, ಈ ದೇವಾಲಯವು ಭಗವಾನ್ ವಿಷ್ಣುವಿನ ಅವತಾರವೆಂದು ನಂಬಲಾದ ವೆಂಕಟೇಶ್ವರನಿಗೆ ಸಮರ್ಪಿತವಾಗಿದೆ. ದೇವಾಲಯವು ಕೇವಲ ಧಾರ್ಮಿಕವಲ್ಲ, ವಾಸ್ತುಶಿಲ್ಪದ ಮಹತ್ವವನ್ನು ಹೊಂದಿದೆ. ಇಲ್ಲಿಗೆ ಗಣ್ಯಾತಿಗಣ್ಯರು ಭೇಟಿ ನೀಡುತ್ತಲೇ ಇರುತ್ತಾರೆ.

ಇದನ್ನೂ ಓದಿ: ಕೋತಿಗಳ ಮುಂದೆ ಮಂಗಾಟ ಮಾಡುವ ಮುನ್ನ ಈ ವೈರಲ್‌ ವಿಡಿಯೋ ನೋಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ವಿಮಾನ ನಿಲ್ದಾಣದಲ್ಲಿ ಹೃದಯಾಘಾತ; ಸಿಪಿಆರ್ ಮಾಡಿ ಜೀವ ಉಳಿಸಿದ ಅಧಿಕಾರಿಗಳು

ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ನಿಂತಿದ್ದ ಪ್ರಯಾಣಿಕರೊಬ್ಬರು (Viral Video) ಹೃದಯಾಘಾತದಿಂದ ಕೆಳಗೆ ಕುಸಿದು ಬಿದ್ದಿದ್ದರು. ತಕ್ಷಣ ಅಲ್ಲೇ ಇದ್ದ ಸಿಐಎಸ್ಎಫ್ ಸಿಬ್ಬಂದಿಯೊಬ್ಬರು ಹೃದಯ ಸ್ತಂಭನದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವವನ್ನು ಸಿಪಿಆರ್ ಮಾಡಿ ಉಳಿಸಿದ್ದಾರೆ. ಅವರನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಇದಕ್ಕೆ ಸಂಬಂಧಪಟ್ಟ ಸಿಸಿಟಿವಿ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo


ನವದೆಹಲಿ: ದೆಹಲಿಯ ಐಜಿಐ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ನಿಂತಿದ್ದ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಕೆಳಗೆ ಕುಸಿದು ಬಿದ್ದಿದ್ದರು. ತಕ್ಷಣ ಅಲ್ಲೇ ಇದ್ದ ಸಿಐಎಸ್ಎಫ್ ಸಿಬ್ಬಂದಿಯೊಬ್ಬರು ಸಿಪಿಆರ್ ಮಾಡಿ ಹೃದಯ ಸ್ತಂಭನದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ಸಿಸಿಟಿವಿ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಹೃದಯಾಘಾತಕ್ಕೊಳಗಾದ ವ್ಯಕ್ತಿಯನ್ನು ಅರ್ಷಿದ್ ಅಯೂಬ್ ಎಂದು ಗುರುತಿಸಲಾಗಿದ್ದು, ಅವರು ಆ ಸಮಯದಲ್ಲಿ ವಿಮಾನ ಹತ್ತಲು ತಯಾರಿ ನಡೆಸುತ್ತಿದ್ದರು. ಆದರೆ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಆಗ ಅವರ ಸುತ್ತ ಜನರು ತುಂಬಿಕೊಂಡರು. ಆಗ ಅಲ್ಲಿಗೆ ಬಂದ ಸಿಐಎಸ್ಎಫ್ ಸಿಬ್ಬಂದಿಗಳಲ್ಲಿ ಒಬ್ಬರು ಅವರಿಗೆ ಸಿಪಿಆರ್ ಮಾಡಿ ಜೀವ ಉಳಿಸಿದ್ದಾರೆ. ತಮ್ಮ ಸಿಬ್ಬಂದಿಯ ತ್ವರಿತ ಕ್ರಮವು ಪ್ರಯಾಣಿಕ ಅರ್ಷಿದ್ ಅಯೂಬ್ ಜೀವ ಉಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ ಎಂದು ಸಿಐಎಸ್ಎಫ್ ಹೇಳಿಕೆಯಲ್ಲಿ ತಿಳಿಸಿದೆ.

ಬುಧವಾರ ಬೆಳಗ್ಗೆ ಐಜಿಐ ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಅಯೂಬ್ ಹೃದಯ ಸ್ತಂಭನದಿಂದಾಗಿ ಕುಸಿದುಬಿದ್ದಿದ್ದರು. ಅವರನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸಿಐಎಸ್ಎಫ್ ತಿಳಿಸಿದೆ.

ಸಾಮಾನು ಸರಂಜಾಮಿನ ಟ್ರಾಲಿಯೊಂದಿಗೆ ನಿಂತಿದ್ದಾಗ ಅಯೂಬ್ ನೆಲಕ್ಕೆ ಬಿದ್ದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಸ್ತು ತಿರುಗುತ್ತಿದ್ದ ಸಿಐಎಸ್ಎಫ್ ಅಧಿಕಾರಿ ಡಾ. ಪ್ರಿಯಾ ಸಹಾಯಕ್ಕೆ ಧಾವಿಸಿದರು. ಹೃದಯ ನಿಂತಾಗ ಉಸಿರಾಟ ಮತ್ತು ರಕ್ತಪರಿಚಲನೆಯನ್ನು ಪುನಃಸ್ಥಾಪಿಸಲು ಬಳಸುವ ನಿರ್ಣಾಯಕ ತುರ್ತು ಕಾರ್ಯವಿಧಾನವಾದ ಸಿಪಿಆರ್‌ಅನ್ನು ಅವರು ಮಾಡಿದರು. ಈ ವಿಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿ ಅನೇಕರು ಸಿಬ್ಬಂದಿಯ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ನಾವು ಆ ದಿನ ಅಮರನಾಥ ಯಾತ್ರೆಯಿಂದ ಹಿಂದಿರುಗಿದೆವು. ನಮ್ಮ ವಿಮಾನ ಬರುವುದು ತಡವಾಗಿತ್ತು. ಆ ಸಮಯದಲ್ಲಿ, ನಾವು ಫುಡ್ ಕೋರ್ಟ್ ಪ್ರದೇಶದಲ್ಲಿದ್ದೆವು. ಹತ್ತಿರದ ಸ್ಟಾಲ್‌ನಲ್ಲಿ ವೃದ್ಧರೊಬ್ಬರು ಇದ್ದಕ್ಕಿದ್ದಂತೆ ಬಿದ್ದರು. ದೇವರ ಸ್ಥಾನವನ್ನು ಯಾರೂ ತೆಗೆದುಕೊಳ್ಳಲು ಸಾಧ್ಯವಿಲ್ಲ. ನಾವು ಯಾವುದೇ ಕೆಲಸವನ್ನು ದೇವರ ಸಂಕೇತಗಳೊಂದಿಗೆ ಮಾತ್ರ ಮಾಡಲು ಸಾಧ್ಯವಾಗುತ್ತದೆ. ಹಾಗಾಗಿ ಕನಿಷ್ಠ ಸಮಯೋಚಿತ ಸಿಪಿಆರ್ ಈ ಜೀವ ಉಳಿಸುವ ಪ್ರಯತ್ನದಲ್ಲಿ ಪ್ರಮುಖ ಪಾತ್ರ ವಹಿಸಿದೆ. ತುರ್ತು ಸಂದರ್ಭಗಳಲ್ಲಿ ಸಮಯೋಚಿತ ವೈದ್ಯಕೀಯ ಪ್ರತಿಕ್ರಿಯೆ ಒಂದು ಪ್ರಮುಖ ಅಂಶವಾಗಿದೆ” ಎಂದು ಡಾ. ಪ್ರಿಯಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಶವಾಗಾರದಲ್ಲಿ ಶವಗಳ ಪಕ್ಕದಲ್ಲೇ ಲೈಂಗಿಕ ಕ್ರಿಯೆ! ಸಂಚಲನ ಮೂಡಿಸಿದೆ ಈ ವಿಡಿಯೊ

Continue Reading

Latest

Viral Video: ಹೆದ್ದಾರಿ ಅಪಘಾತದಲ್ಲಿ ಕೆಳಗೆ ಬಿದ್ದ ತಂದೆ, ತಾಯಿ; ಮಗುವಿನೊಂದಿಗೆ ಬಹುದೂರ ಚಲಿಸಿದ ಬೈಕ್! ಹಳೆಯ ವಿಡಿಯೊ ಮತ್ತೆ ವೈರಲ್‌

ಈ ಘಟನೆಯಲ್ಲಿ ಮಗು (Viral Video) ಸುಮಾರು 500 ಮೀಟರ್ ದೂರದವರೆಗೆ ಬೈಕಿನಲ್ಲಿ ಸಾಗಿ ನಂತರ ರಸ್ತೆ ಪಕ್ಕದ ಹುಲ್ಲುಗಾವಲು ಜಾಗಕ್ಕೆ ಹೋಗಿ ಬಿದ್ದಿದೆ. ವೈರಲ್ ಆದ ಈ ವಿಡಿಯೊವನ್ನು ಮತ್ತೊಂದು ಕಾರಿನ ಡ್ಯಾಶ್ ಕ್ಯಾಮ್ ಸೆರೆಹಿಡಿದಿದೆ. ಬಿದ್ದ ಮಗುವಿನ ಬಳಿ ಕೆಲವು ವ್ಯಕ್ತಿಗಳು ಬಂದು ಏನಾಯಿತು ಎಂಬುದನ್ನು ನೋಡಿದ ನಂತರ ಮಗುವನ್ನು ರಕ್ಷಿಸಿ ಎತ್ತಿಕೊಂಡು ಹೋಗಿದ್ದರು. ಈ ಭಯಾನಕ ವಿಡಿಯೊ ಎಲ್ಲರ ಮೈನಡುಗಿಸಿದೆ ಎಂಬುದರಲ್ಲಿ ಸಂಶಯವಿಲ್ಲ. ಹಲವಾರು ಜನರು ತಮ್ಮ ಆಘಾತವನ್ನು ವ್ಯಕ್ತಪಡಿಸಲು ವಿಡಿಯೊಗೆ ಕಾಮೆಂಟ್ ಮಾಡಿದ್ದಾರೆ.

VISTARANEWS.COM


on

Viral Video
Koo


ತಂದೆ ತಾಯಿಯ ಜೊತೆ ಮಗುವೊಂದು ಬೈಕ್‍ನಲ್ಲಿ ಹೋಗುತ್ತಿದ್ದಾಗ ಬೈಕ್ ಅಪಘಾತಕ್ಕೀಡಾಗಿ ತಂದೆ ತಾಯಿ ಬೈಕ್‍ನಿಂದ ರಸ್ತೆಗೆ ಬಿದ್ದರೆ, ಮಗು ಮಾತ್ರ ಚಲಿಸುತ್ತಿದ್ದ ಬೈಕ್‍ನಲ್ಲಿ ಬಹುದೂರದವರೆಗೆ ಸಾಗಿ ನಂತರ ಕೆಳಗೆ ಬಿದ್ದ ಘಟನೆ ನಡೆದಿದೆ. ಈ ಘಟನೆಯ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಇದು ವೈರಲ್ (Viral Video) ಆಗಿದೆ. ಈ ದೃಶ್ಯ ನೋಡಿ ಹಲವರು ದಂಗಾಗಿದ್ದಾರೆ. ವೇಗವಾಗಿ ಸಾಗುತ್ತಿದ್ದ ಹಲವು ವಾಹನಗಳ ನಡುವೆ ಈ ಮಗು ಅಪಾಯದಿಂದ ಪಾರಾಗಿದ್ದೇ ಅಚ್ಚರಿಯಾಗಿದೆ. ಇದು ಕೆಲವು ವರ್ಷಗಳ ಹಿಂದೆ ಬೆಂಗಳೂರಿನ ಹೊರ ವಲಯದ ನೆಲಮಂಗಲದ ಹೆದ್ದಾರಿಯಲ್ಲಿ ನಡೆದ ಘಟನೆಯಾಗಿದ್ದು, ಈ ಹಳೆಯ ವಿಡಿಯೊ ಮತ್ತೆ ವೈರಲ್‌ ಆಗಿದೆ.

ಈ ಘಟನೆಯಲ್ಲಿ ಮಗು ಸುಮಾರು 500 ಮೀಟರ್ ದೂರದವರೆಗೆ ಬೈಕಿನಲ್ಲಿ ಸಾಗಿ ನಂತರ ರಸ್ತೆ ಪಕ್ಕದ ಹುಲ್ಲುಗಾವಲು ಜಾಗಕ್ಕೆ ಹೋಗಿ ಬಿದ್ದಿದೆ. ವೈರಲ್ ಆದ ಈ ವಿಡಿಯೊವನ್ನು ಮತ್ತೊಂದು ಕಾರಿನ ಡ್ಯಾಶ್ ಕ್ಯಾಮ್ ಸೆರೆಹಿಡಿದಿದೆ. ಬಿದ್ದ ಮಗುವಿನ ಬಳಿ ಕೆಲವು ವ್ಯಕ್ತಿಗಳು ಬಂದು ಏನಾಯಿತು ಎಂಬುದನ್ನು ನೋಡಿದ ನಂತರ ಮಗುವನ್ನು ರಕ್ಷಿಸಿ ಎತ್ತಿಕೊಂಡು ಹೋಗಿದ್ದರು. ಈ ಭಯಾನಕ ವಿಡಿಯೊ ಎಲ್ಲರ ಮೈನಡುಗಿಸಿದೆ ಎಂಬುದರಲ್ಲಿ ಸಂಶಯವಿಲ್ಲ. ಹಲವಾರು ಜನರು ತಮ್ಮ ಆಘಾತವನ್ನು ವ್ಯಕ್ತಪಡಿಸಲು ವಿಡಿಯೊಗೆ ಕಾಮೆಂಟ್ ಮಾಡಿದ್ದಾರೆ.

ವಿಡಿಯೊದಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಮಗುವಿನೊಂದಿಗೆ ಹೆದ್ದಾರಿಯಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದಾರೆ. ಅದೇ ರೀತಿ ಇತರ ವಾಹನಗಳು ರಸ್ತೆಯಲ್ಲಿ ಹೋಗುತ್ತಿದ್ದವು. ಈ ಮಧ್ಯೆ ಅನಿರೀಕ್ಷಿತವಾಗಿ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬ ಬೈಕ್‌ ನಿಲ್ಲಿಸಿಕೊಂಡು ನಿಂತಿದ್ದ. ಆ ಬೈಕ್‌ಗೆ ದಂಪತಿ ಇದ್ದ ಬೈಕ್‌ ಡಿಕ್ಕಿ ಹೊಡೆದಿದೆ. ಆಗ ಅದರ ಮೇಲೆ ಕುಳಿತ ದಂಪತಿ ಕೆಳಗೆ ಬಿದ್ದು ರಸ್ತೆಯಲ್ಲಿ ಉರುಳಿದ್ದಾರೆ. ಆದರೆ ಬೈಕ್‍ನಲ್ಲಿದ್ದ ಪುಟ್ಟ ಮಗು ಮಾತ್ರ ತನ್ನ ಸೀಟಿನಲ್ಲಿ ಇನ್ನೂ ಕುಳಿತಿರುವುದು ವಿಡಿಯೊದಲ್ಲಿ ತೋರುತ್ತಿದೆ. ವಿಚಿತ್ರವೇನೆಂದರೆ ಮಗು ಇದ್ದ ಬೈಕ್ ಬೇರೆ ಯಾವುದೇ ವಾಹನಗಳಿಗೆ ಡಿಕ್ಕಿ ಹೊಡೆಯದೆ ಚಾಲಕನೇ ಇಲ್ಲದೆ ಸಹಾಯವಿಲ್ಲದೆ ಸುಮಾರು 500 ಮೀಟರ್ ದೂರ ಹೋಗಿದೆ. ನಂತರ ರಸ್ತೆ ಬದಿಗೆ ಹೋಗಿ ಬಿದ್ದಿದೆ. ಮುಂದೆಯೇ ಒಂದು ಲಾರಿ ವೇಗವಾಗಿ ಹೋಗುತ್ತಿತ್ತು. ಅದೇನಾದರೂ ಡಿಕ್ಕಿ ಹೊಡೆದಿದ್ದರೆ ಮಗುವಿನ ಜೀವಕ್ಕೆ ಅಪಾಯವಾಗುತ್ತಿತ್ತು.

ಇದನ್ನೂ ಓದಿ:ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ!

ಈ ಹಳೆಯ ವಿಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದ್ದು, 4 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಕಾಮೆಂಟ್ ವಿಭಾಗದಲ್ಲಿ, ಬಳಕೆದಾರರೊಬ್ಬರು “ಇದು ಪವಾಡ. ಮಗು ಸುರಕ್ಷಿತವಾಗಿದೆ ಎಂದು ಸಂತೋಷವಾಗಿದೆ. ಆದರೂ ಇದು ಸಂಭವಿಸಿರುವುದು ಭಯಾನಕವಾಗಿದೆ.” ಎಂದಿದ್ದಾರೆ. ಮತ್ತೊಬ್ಬರು ಇದು ನಿಜವಾಗಿಯೂ ಪವಾಡ” ಎಂದು ಹೇಳಿದ್ದಾರೆ. ಒಬ್ಬ ಬಳಕೆದಾರರು ತಮಾಷೆಯಾಗಿ “ಟಾರ್ಜೆನ್, ಅದ್ಭುತ ಬೈಕ್.” ಎಂದಿದ್ದಾರೆ. ಇನ್ನೊಬ್ಬ ಬಳಕೆದಾರರು, “ಇದು ಬೆಂಗಳೂರು ಬಳಿಯ ನೆಲಮಂಗಲದಲ್ಲಿ ನಡೆದ ಹಳೆಯ ವೀಡಿಯೊ” ಎಂದು ತಿಳಿಸಿದ್ದಾರೆ.

Continue Reading

Latest

Viral Video: ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ

ಪಶ್ಚಿಮ ದೆಹಲಿಯ ಸಾಗರ್‌ಪುರ ಪ್ರದೇಶದಲ್ಲಿ ಅಪಾರ್ಟ್ಮೆಂಟ್ ಒಂದರ ಮೂರನೇ ಮಹಡಿಯಿಂದ ಬಿದ್ದು (Viral Video) ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ. ಇಡೀ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ.

VISTARANEWS.COM


on

Viral Video
Koo


ನವದೆಹಲಿ: ಪೋಷಕರು ಮಕ್ಕಳ ಬಗ್ಗೆ ನಿಗಾ ಇಡಬೇಕು. ಅವರು ಆಟವಾಡುವಾಗ ಅವರ ಪಾಡಿಗೆ ಅವರನ್ನು ಬಿಡುವಂತಹ ತಪ್ಪುಗಳನ್ನು ಮಾಡಬೇಡಿ. ಇದರಿಂದ ಅನಾಹುತಗಳೇ ಸಂಭವಿಸುತ್ತವೆ. ಅಷ್ಟೆ ಅಲ್ಲದೇ ಮಕ್ಕಳನ್ನು ಮನೆಯ ಬಾಲ್ಕನಿಯಲ್ಲಿ ಆಡಲು ಬಿಡುವ ತಾಯಂದಿರು ಅವರು ಸುರಕ್ಷಿತವಾಗಿರುತ್ತಾರೆ ಎಂದು ಭಾವಿಸುತ್ತಾರೆ. ಆದರೆ ಇದು ತುಂಬಾ ಅಪಾಯಕಾರಿ ಎಂಬುದನ್ನು ಮೊದಲು ತಿಳಿಯಿರಿ. ಪಶ್ಚಿಮ ದೆಹಲಿಯ ಸಾಗರ್‌ಪುರ ಪ್ರದೇಶದಲ್ಲಿ ಅಪಾರ್ಟ್‍ಮೆಂಟ್ ಒಂದರ ಮೂರನೇ ಮಹಡಿಯಿಂದ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ. ಇಡೀ ಘಟನೆಯು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಗಳಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಗು ಇದ್ದಕ್ಕಿದ್ದಂತೆ ಕೆಳಗಿನ ಬೀದಿಗೆ ಬಿದ್ದಿದೆ. ಸ್ವಲ್ಪ ಹೊತ್ತಿನ ನಂತರ, ಮಹಿಳೆಯೊಬ್ಬಳು ರಕ್ತದ ಮಡುವಿನಲ್ಲಿ ಬಿದ್ದ ಮಗುವನ್ನು ಕಂಡು ಭಯಭೀತಳಾಗಿ ಮಗುವಿನ ಬಳಿ ಓಡಿಬರುತ್ತಾಳೆ. ಸ್ವಲ್ಪ ಸಮಯದ ನಂತರ ಬಾಲಕಿಯ ಕುಟುಂಬದವರು ಘಟನಾ ಸ್ಥಳಕ್ಕೆ ಬರುತ್ತಾರೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವೈದ್ಯರು ಅವಳನ್ನು ಉಳಿಸಲು ಸಾಧ್ಯವಾಗಲಿಲ್ಲ. ಮಗು ಸ್ಥಳದಲ್ಲೇ ಸಾವನಪ್ಪಿದೆ ಎಂದು ವೈದ್ಯರು ಕೈ ಚೆಲ್ಲಿದರು.‌

ಬಾಲಕಿ ಮೂರನೇ ಮಹಡಿಯಿಂದ ಬಿದ್ದಿದ್ದು ಹೇಗೆ ಎಂಬುದನ್ನು ಕಂಡುಹಿಡಿಯಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಾಲ್ಕನಿಯಲ್ಲಿ ಒಬ್ಬಂಟಿಯಾಗಿ ಆಡುತ್ತಿದ್ದಾಗ ಬಾಲಕಿ ಆಕಸ್ಮಿಕವಾಗಿ ಬಿದ್ದಿರಬಹುದು. ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ಪೊಲೀಸರು ಆ ಪ್ರದೇಶದ ಇತರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ನೋಯ್ಡಾದಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ, ಮೂರು ವರ್ಷದ ಬಾಲಕಿ ಆಟವಾಡುವಾಗ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಳು.

ಇದನ್ನೂ ಓದಿ: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ!

ಮತ್ತೊಂದು ಘಟನೆಯಲ್ಲಿ, ದೆಹಲಿಯ ಜಫ್ರಾಬಾದ್ ಪ್ರದೇಶದಲ್ಲಿ ಮನೆಯ ಕಿಟಕಿಯ ಬಳಿ ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿತ್ತು. ಬ್ಯಾಲೆನ್ಸ್‌ ಕಳೆದುಕೊಂಡು ಮಗು ಕೆಳಗೆ ಬಿದ್ದಿತ್ತು. ಮಗುವನ್ನು ಉಳಿಸಲು ವೈದ್ಯರು ಎಲ್ಲ ಪ್ರಯತ್ನಗಳನ್ನು ಮಾಡಿದರೂ ಸಾಧ್ಯವಾಗಿರಲಿಲ್ಲ.

Continue Reading

ವೈರಲ್ ನ್ಯೂಸ್

Viral News: ಹೆಂಡ್ತಿ ತವರಿಗೆ ಹೋಗ್ತಿದ್ದಂತೆ ಪ್ರೇಯಸಿ ಜೊತೆ ಲವ್ವಿಡವ್ವಿ- ಸ್ಕೂಲ್‌ ಮೇಸ್ಟ್ರನ್ನು ರೆಡ್‌ಹ್ಯಾಂಡಾಗಿ ಹಿಡಿದು ಅಲ್ಲೇ ಮದ್ವೆ

Viral News: ಪರೋರ ಪಂಚಾಯತ್‌ನ ಬೆಲ್‌ಘಟ್ಟಿ ಬುಡಕಟ್ಟು ಕುಗ್ರಾಮದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರ ಪ್ರಕಾರ, ಜುನ್ನಿ ಇಸ್ತಂಬ್ರಾರ್ ಪಂಚಾಯತ್‌ನ ಬೇಗಂಪುರದ ಸರ್ಕಾರಿ ಶಾಲೆಯ ಶಿಕ್ಷಕ ಶೇಖರ್ ಪಾಸ್ವಾನ್ ಅಲಿಯಾಸ್ ರಾಜೇಶ್ ಕುಮಾರ್ ಗ್ರಾಮದ ಬುಡಕಟ್ಟು ಹುಡುಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಎರಡು ದಿನಗಳ ಹಿಂದೆ ಶಿಕ್ಷಕ ರಾಜೇಶ್ ಕುಮಾರ್ ಈ ಹುಡುಗಿಯ ಜೊತೆ ಮೋಜಿನಲ್ಲಿ ತೊಡಗಿದ್ದ ವೇಳೆ ಗ್ರಾಮಸ್ಥರ ಕೈಗೆ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದಿದ್ದ.

VISTARANEWS.COM


on

Viral News
Koo

ಪಾಟ್ನಾ: ಶಾಲೆ ಶುರುವಾಗಿ ಗಂಟೆಗಳು ಕಳೆದರೂ ತರಗತಿ ನಡೆಸಬೇಕಾಗಿದ್ದ ಶಿಕ್ಷಕ ಬಂದೇ ಇರಲಿಲ್ಲ. ಇತರ ಶಿಕ್ಷಕರು ಮಕ್ಕಳನ್ನು ವಿಚಾರಿಸಿದಾಗ ಶಿಕ್ಷಕನನ್ನು ಊರಿನ ಜನರೆಲ್ಲಾ ಸೇರಿಕೊಂಡು ಮರಕ್ಕೆ ಕಟ್ಟಿ ಹಾಕಿರುವ ಬಗ್ಗೆ ವಿದ್ಯಾರ್ಥಿಯೊಬ್ಬ ಬಾಯ್ಬಿಟ್ಟಿದ್ದಾನೆ. ಏನಾಯ್ತಪ್ಪಾ ಅಂತಾ ಸ್ಥಳಕ್ಕೆ ಓಡೋಡಿ ಬಂದವರಿಗೆ ಶಾಕ್‌ ಕಾದಿತ್ತು. ಹೆಂಡ್ತಿ ತವರಿಗೆ ಹೋದ ಕೂಡಲೇ ಇತ್ತ ಪ್ರೇಯಸಿ ಜೊತೆ ಮಜಾ ಮಾಡಿ ಸಿಕ್ಕಿಬಿದ್ದಿದ್ದ ಶಿಕ್ಷಕನನ್ನು ಗ್ರಾಮಸ್ಥರು ರೆಡ್‌ ಹ್ಯಾಂಡಾಗಿ ಹಿಡಿದು ಮರಕ್ಕೆ ಕಟ್ಟಿ ಹಾಕಿದ್ದಾರೆ. ಅಷ್ಟೇ ಅಲ್ಲದೇ ಆ ಯುವತಿ ಜೊತೆಗೆ ಮದ್ವೆ ಮಾಡಿಸಿದ್ದಾರೆ. ಈ ವಿಚಿತ್ರ ಘಟನೆ(Viral News) ನಡೆದಿರುವುದು ಬಿಹಾರ(Bihar)ದ ಪುರ್ನಿಯಾದಲ್ಲಿ.

ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರೋರ ಪಂಚಾಯತ್‌ನ ಬೆಲ್‌ಘಟ್ಟಿ ಬುಡಕಟ್ಟು ಕುಗ್ರಾಮದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರ ಪ್ರಕಾರ, ಜುನ್ನಿ ಇಸ್ತಂಬ್ರಾರ್ ಪಂಚಾಯತ್‌ನ ಬೇಗಂಪುರದ ಸರ್ಕಾರಿ ಶಾಲೆಯ ಶಿಕ್ಷಕ ಶೇಖರ್ ಪಾಸ್ವಾನ್ ಅಲಿಯಾಸ್ ರಾಜೇಶ್ ಕುಮಾರ್ ಗ್ರಾಮದ ಬುಡಕಟ್ಟು ಹುಡುಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಎರಡು ದಿನಗಳ ಹಿಂದೆ ಶಿಕ್ಷಕ ರಾಜೇಶ್ ಕುಮಾರ್ ಈ ಹುಡುಗಿಯ ಜೊತೆ ಮೋಜಿನಲ್ಲಿ ತೊಡಗಿದ್ದ ವೇಳೆ ಗ್ರಾಮಸ್ಥರ ಕೈಗೆ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದಿದ್ದ.

ಇದಾದ ಬಳಿಕ ಗ್ರಾಮಸ್ಥರು ಅದೇ ಸ್ಥಿತಿಯಲ್ಲಿ ಆತನನ್ನು ಮರಕ್ಕೆ ಕಟ್ಟಿ ಹಾಕಿ ಹುಡುಗಿಯ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಶಿಕ್ಷಕನ ಮನೆಯವರು ಸ್ಥಳಕ್ಕಾಗಮಿಸಿದಾಗ ಗ್ರಾಮಸ್ಥರು ಆತನಿಗೆ ಬಾಲಕಿಯೊಂದಿಗೆ ಮದುವೆ ಮಾಡಿಸಿದ್ದರು. ಮಾಹಿತಿ ಪಡೆದ ಪೊಲೀಸರು ಕೂಡ ಸ್ಥಳಕ್ಕಾಗಮಿಸಿ ಬಾಲಕಿಯನ್ನು ಶಿಕ್ಷಕ ಹಾಗೂ ಸಂಬಂಧಪಟ್ಟವರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಆದರೆ, ಈ ಅವಧಿಯಲ್ಲಿ ಯಾರ ವಿರುದ್ಧವೂ ದೂರು ನೀಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಪೊಲೀಸರು ಆತನನ್ನು ಆತನ ಮನೆಗೆ ಕಳುಹಿಸಿದ್ದಾರೆ. ಗ್ರಾಮಸ್ಥರು ಹೇಳುವ ಪ್ರಕಾರ ಶಿಕ್ಷಕ ರಾಜೇಶ್ ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ.

ಶಿಕ್ಷಕ ತನ್ನ ಸಹೋದರಿಯೊಂದಿಗೆ ಸುಮಾರು 7 ವರ್ಷಗಳಿಂದ ಸಂಪರ್ಕದಲ್ಲಿದ್ದಾರೆ ಎಂದು ಯುವತಿಯ ಸಹೋದರಿ ಹೇಳಿದ್ದಾರೆ. ಇತ್ತ, ತಂದೆ-ತಾಯಿಯ ಮನೆಯಿಂದ ಪತ್ನಿ ವಾಪಸಾದ ಬಳಿಕ ಶಿಕ್ಷಕನ ಮದುವೆ ಸುದ್ದಿ ಸಂಚಲನ ಮೂಡಿಸಿದೆ. ಅಣ್ಣನಿಗೆ ರಾಖಿ ಕಟ್ಟಲು ಹೋಗಿದ್ದೆ. ಅಷ್ಟರಲ್ಲಿ ವಂಚಕ ಪತಿ ಈ ಕೃತ್ಯ ಎಸಗಿದ್ದಾನೆ. ಶಿಕ್ಷಕನ ತಂದೆ ವೈದ್ಯನಾಥ ಪಾಸ್ವಾನ್, ಮಗನಿಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಆತನ ಎರಡನೇ ಮದುವೆಯನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಅಲ್ಲದೇ ಬುಡಕಟ್ಟು ಜನರಿಗೆ ವಾಮಾಚಾರದ ಬಗ್ಗೆ ಗೊತ್ತಿದ್ದು, ವಾಮಾಚಾರದ ಮೂಲಕ ಮಗನನ್ನು ಬಲೆಗೆ ಬೀಳಿಸಿರುವುದು ಖಚಿತ ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video: ಬೇಟೆಯಾಡಲು ಗೋಡೆ ಹತ್ತಿದ ದೈತ್ಯ ಹೆಬ್ಬಾವು; ಗಾಬರಿಗೊಳಿಸುವ ವಿಡಿಯೊ

Continue Reading
Advertisement
Love jihad
ಕರ್ನಾಟಕ3 hours ago

Love Jihad: ಹಿಂದೂ ಯುವತಿಯ ಕರೆದೊಯ್ದ ಮುಸ್ಲಿಂ ಯುವಕ; ಕಾರ್ಕಳ ಪ್ರಕ್ಷುಬ್ಧ

assault case
ಕರ್ನಾಟಕ3 hours ago

Assault Case: ಮಾರ್ಕ್ಸ್‌ ಕಡಿಮೆ ಬಂತೆಂದು 4ನೇ ತರಗತಿ ಬಾಲಕನಿಗೆ ಬಾಸುಂಡೆ ಬರುವಂತೆ ಬಾರಿಸಿದ ಶಿಕ್ಷಕ

pm modi Ukraine Visit
ವಿದೇಶ3 hours ago

PM Modi Ukraine Visit: ಉಕ್ರೇನ್‌ಗೆ ಭೀಷ್ಮ್‌ ಕ್ಯೂಬ್‌ ಉಡುಗೊರೆ ನೀಡಿದ ಪ್ರಧಾನಿ ಮೋದಿ…ಏನಿದರ ವಿಶೇಷತೆ?

Yadgiri News
ಧಾರ್ಮಿಕ4 hours ago

Yadgiri News: ಶ್ರೀ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

viral video
ವೈರಲ್ ನ್ಯೂಸ್5 hours ago

Viral Video: ಮೈಮೇಲೆ ಒಂದಲ್ಲ..ಎರಡಲ್ಲ ಬರೋಬ್ಬರಿ 25ಕೆ.ಜಿ ಚಿನ್ನ; ತಿಮ್ಮಪ್ಪನ ಸನ್ನಿಧಿಗೆ ಬಂದ ವಿಶೇಷ ಭಕ್ತರು ಇವರೇ ನೋಡಿ

Lorry Accident
ಕರ್ನಾಟಕ5 hours ago

Lorry Accident: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; 16 ಕಾರ್ಮಿಕರಿಗೆ ಗಂಭೀರ ಗಾಯ

ಕರ್ನಾಟಕ5 hours ago

Muda Scam: ದೆಹಲಿಯಲ್ಲಿ ರಾಹುಲ್‌ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ; ಕಾನೂನು ಹೋರಾಟದ ಬಗ್ಗೆ ಚರ್ಚೆ

Uttara Kannada News
ಉತ್ತರ ಕನ್ನಡ5 hours ago

Uttara Kannada News: ಹೊಸ ಆಧಾರ್ ನೋಂದಣಿ, ತಿದ್ದುಪಡಿಗೆ ಅವಕಾಶ

Invest Karnataka
ಬೆಂಗಳೂರು5 hours ago

Invest Karnataka: ಇಂಧನ ತಂತ್ರಜ್ಞಾನ; ರಾಜ್ಯದಲ್ಲಿ 8,300 ಕೋಟಿ ರೂ. ಹೂಡಿಕೆ ಮಾಡಲಿರುವ ಷೆರ್ವನ್‌ ಇಂಡಿಯಾ

UPSC Exam calendar
ದೇಶ6 hours ago

UPSC Exam calendar: UPSC ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್‌ ರಿಲೀಸ್‌; ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌