Yadgiri News: ಶ್ರೀ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ - Vistara News

ಧಾರ್ಮಿಕ

Yadgiri News: ಶ್ರೀ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

ಯಾದಗಿರಿ ಜಿಲ್ಲೆಯ (Yadgiri News) ಗುರುಮಠಕಲ್ ತಾಲೂಕಿನ ಬೋರಬಂಡಾ ಗ್ರಾಮದ ಶ್ರೀ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದಲ್ಲಿ ಶುಕ್ರವಾರ 101 ದಂಪತಿಗಳಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ಶ್ರದ್ಧಾ ಭಕ್ತಿಯಿಂದ ನೆರವೇರಿತು.

VISTARANEWS.COM


on

Yadgiri News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಬೋರಬಂಡಾ ಗ್ರಾಮದ ಶ್ರೀ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದಲ್ಲಿ ಶುಕ್ರವಾರ 101 ದಂಪತಿಗಳಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ಶ್ರದ್ಧಾ ಭಕ್ತಿಯಿಂದ (Yadgiri News) ನೆರವೇರಿತು.

ಶ್ರಾವಣ ಮಾಸದ ಅಂಗವಾಗಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮ ನಡೆಸಲಾಯಿತು. ಶ್ರೀ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಂಘದ ವ್ಯವಸ್ಥಾಪಕ ನರೇಂದ್ರ ರಾಠೋಡ ಅವರ ನೇತೃತ್ವದಲ್ಲಿ ಪೂಜೆ ಕಾರ್ಯಕ್ರಮ ನಡೆಸಲಾಯಿತು. ವಿವಿಧ ಭಾಗದಿಂದ ಆಗಮಿಸಿದ ದಂಪತಿಗಳು ಶ್ರೀ ಲಕ್ಷ್ಮಿ ದೇವಿಯ ಮೂರ್ತಿಗೆ ಪೂಜೆ ಸಲ್ಲಿಸಿದರು.

ಇದನ್ನೂ ಓದಿ: 7th pay commission: ರಾಜ್ಯ ಸರ್ಕಾರಿ ನೌಕರರ ಪರಿಷ್ಕೃತ ವೇತನ ಶ್ರೇಣಿ ಪ್ರಕಟ; ಯಾರಿಗೆ ಎಷ್ಟು ಏರಿಕೆ?

ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಗುರುಮಠಕಲ್‌ನ ಖಾಸಾಮಠದ ಶಾಂತವೀರ ಮುರುಘರಾಜೇಂದ್ರ ಆಶೀರ್ವಚನ ನೀಡಿ‌ ಮಾತನಾಡಿ, ಶ್ರಾವಣ ಮಾಸದ ಸಂದರ್ಭದಲ್ಲಿ ಶ್ರೀ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಮ್ಮಿಕೊಂಡಿದ್ದು ಉತ್ತಮ ಧಾರ್ಮಿಕ ಕಾರ್ಯ ಇದಾಗಿದೆ ಎಂದರು.

ಮಹಾ ನೈವೇದ್ಯ, ಮಹಾಮಂಗಳಾರತಿ ವಿವಿಧ ಪೂಜಾ ಕಾರ್ಯಗಳನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ಜಿಲ್ಲೆಯ ವಿವಿಧ ಭಾಗದಿಂದ ಭಕ್ತರು ಆಗಮಿಸಿ, ಶ್ರೀ ಲಕ್ಷ್ಮಿ ದೇವಿಯ ದರ್ಶನ ಪಡೆದರು.

ಇದನ್ನೂ ಓದಿ:UPSC Exam calendar: UPSC ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್‌ ರಿಲೀಸ್‌; ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ಕಾರ್ಯಕ್ರಮದಲ್ಲಿ ಗುರುಮಠಕಲ್ ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ, ಅನಂತಪ್ಪ ಯದ್ಲಾಪುರ, ಕಾಶಿನಾಥ ರಾಠೋಡ, ವಿರೇಶ್ ಆವಂಟಿ, ಗುರು ತಲಾರಿ, ಶಂಕರ ನಾಯಕ, ಶರಣು, ಸಂಜೀವ್ ಚಂದಾಪುರ, ಅಯ್ಯಪ್ಪ ರಾಠೋಡ, ಮನೋಹರ್ ರಾಠೋಡ, ರಾಮು ಪವಾರ್, ರವಿಕುಮಾರ ಹಾಗೂ ಇನ್ನಿತರರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶ್ರೀ ಕೃಷ್ಣ ಜನ್ಮಾಷ್ಟಮಿ

Krishna janmastami: ಕೃಷ್ಣ ಜನ್ಮಾಷ್ಟಮಿಯ ಫೋಟೋಶೂಟ್‌‌ಗೆ ಇಲ್ಲಿದೆ 4 ಐಡಿಯಾ

Krishna janmastami: ಇನ್ನೇನು ಕೃಷ್ಣಜನ್ಮಾಷ್ಟಮಿ ಸಮೀಪಿಸುತ್ತಿದೆ. ಆಗಲೇ ಎಲ್ಲೆಡೆ ಬಾಲಗೋಪಾಲನ ನಾನಾ ಅವತಾರಗಳ ಫೋಟೋಶೂಟ್‌ಗಳು ಆರಂಭಗೊಂಡಿದೆ. ಮುದ್ದು ಬೆಣ್ಣೆ ಕೃಷ್ಣನಿಂದಿಡಿದು, ರಾಧಾ-ಕೃಷ್ಣರ ಅಂದದ ಪೋಟ್ರೈಟ್‌ಗಳಿಗೆ ಮಾನ್ಯತೆ ಹೆಚ್ಚಾಗಿದೆ. ಈ ಎಲ್ಲದರ ಕುರಿತಂತೆ ಇಲ್ಲಿದೆ ವರದಿ.

VISTARANEWS.COM


on

By

Here are 4 ideas for krishna janmashtami photoshoot
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ಕೃಷ್ಣಜನ್ಮಾಷ್ಟಮಿ (Krishna janmastami) ಸಮೀಪಿಸುತ್ತಿದೆ. ಆಗಲೇ ಎಲ್ಲೆಡೆ ಕೃಷ್ಣನ ನಾನಾ ಅವತಾರಗಳ ಫೋಟೋಶೂಟ್‌ ಮಾಡಿಸುವವರ ಸಂಖ್ಯೆ ಹೆಚ್ಚಾಗಿದೆ. ಪರಿಣಾಮ, ಎಲ್ಲೆಡೆ ಕೃಷ್ಣಜನ್ಮಾಷ್ಟಮಿ ಥೀಮ್‌ ಫೋಟೋಶೂಟ್‌ ಟ್ರೆಂಡಿಯಾಗಿದೆ.

Here are 4 ideas for krishna janmashtami photoshoot
Here are 4 ideas for krishna janmashtami photoshoot

ಕೃಷ್ಣನ ಅವತಾರಕ್ಕೂ ಫೋಟೋಶೂಟ್‌ :

“ಪ್ರತಿ ಮನೆಯಲ್ಲೂ ಮಕ್ಕಳಿಗೆ ಒಮ್ಮೆಯಾದರೂ ಸರಿಯೇ! ಕೃಷ್ಣ ಅಥವಾ ರಾಧೆಯ ಅವತಾರವನ್ನು ಹಾಕಿಸಿರುತ್ತಾರೆ. ಫೋಟೋ ತೆಗೆಸಿ ಸಂತಸ ಪಟ್ಟಿರುತ್ತಾರೆ. ಬಾಲ ಕೃಷ್ಣನಿಂದಿಡಿದು ರಾಧಾ-ಕೃಷ್ಣನಂತೆ ಫೋಟೋಶೂಟ್‌ ಮಾಡಿಸುವುದು ಹೆಚ್ಚಾಗಿದೆ. ಈ ಕಾನ್ಸೆಪ್ಟ್ ಇದೀಗ ಮತ್ತಷ್ಟು ಬೆಳವಣಿಗೆ ಕಂಡಿದೆ. ಚಿಣ್ಣರಿಗೆ ಮಾತ್ರವಲ್ಲ, ಇದೀಗ ಟೀನೇಜ್‌ ಹುಡುಗ-ಹುಡುಗಿಯರು ಕೂಡ ರಾಧಾ-ಕೃಷ್ಣರ ಫೋಟೋಶೂಟ್‌ ಮಾಡಿಸಲಾರಂಭಿಸಿದ್ದಾರೆ.

Here are 4 ideas for krishna janmashtami photoshoot
Here are 4 ideas for krishna janmashtami photoshoot

ಇದಕ್ಕೆ ಪೂರಕ ಎಂಬಂತೆ, ಪೌರಾಣಿಕ ಹಿನ್ನೆಲೆಯ ಫೋಟೋಶೂಟ್‌ ಮಾಡುವ ಫೋಟೋಗ್ರಾಫರ್ಸ್ ಕೂಡ ಸುಲಭವಾಗಿ ದೊರೆಯುತ್ತಿದ್ದಾರೆ. ಪ್ರಿ ಹಾಗೂ ವೆಡ್ಡಿಂಗ್‌ ಶೂಟ್‌ ಮಾಡುವವರು ಒಂದು ಹೆಜ್ಜೆ ಮುಂದೆ ಹೋಗಿ, ಈ ಕಾನ್ಸೆಪ್ಟ್ಗಳಿಗೂ ಫೋಟೋಶೂಟ್‌ ಮಾಡಿಕೊಡುತ್ತಿದ್ದಾರೆ. ಹಾಗಾಗಿ ಕೃಷ್ಣಜನ್ಮಾಷ್ಟಮಿಯ ಫೋಟೋಶೂಟ್‌ ಇತ್ತೀಚೆಗೆ ಹೆಚ್ಚಾಗಿದೆ ಎನ್ನುತ್ತಾರೆ ಫೋಟೋಗ್ರಾಫರ್‌ .

Here are 4 ideas for krishna janmashtami photoshoot

ಜನ್ಮಾಷ್ಟಮಿ ಫೋಟೋಶೂಟ್‌ ಪ್ಯಾಕೇಜ್‌ :

ಪ್ರತಿ ವರ್ಷವೂ ಕೃಷ್ಣನ ಫೋಟೋಶೂಟ್‌ಗಾಗಿಯೇ ಸಾಕಷ್ಟು ಸ್ಟುಡಿಯೋಗಳು ಪ್ಯಾಕೇಜ್‌ ರೀತಿಯಲ್ಲಿ ಸೌಲಭ್ಯಗಳನ್ನು ನೀಡುತ್ತವೆ. ಅಲ್ಲದೇ ಕೃಷ್ಣನ ಅಲಂಕಾರಕ್ಕೆ ಬೇಕಾಗಿರುವ ಎಲ್ಲಾ ಬಗೆಯ ಅಲಂಕಾರಿಕ ಸಾಮಗ್ರಿಗಳನ್ನು ಒದಗಿಸುತ್ತವೆ. ಅಷ್ಟೇಕೆ? ಈ ಪ್ಯಾಕೇಜ್‌ನಲ್ಲಿ ಫೋಟೋಗ್ರಾಫರ್‌ನಿಂದಿಡಿದು, ಬಾಡಿಗೆಗೆ ಫೋಟೋ ಕ್ಲಿಕ್ಕಿಸುವ ಸ್ಥಳ ಅಂದರೇ, ಸ್ಟಾಟ್‌ ಸೇರಿದಂತೆ ಎಲ್ಲವನ್ನೂ ಪ್ಯಾಕೇಜ್‌ಗೆ ತಕ್ಕಂತೆ ಒದಗಿಸುತ್ತವೆ. ಹಣ ನೀಡಿದರಾಯಿತಷ್ಟೇ! ಎನ್ನುತ್ತಾರೆ ಬಾಲಕೃಷ್ಣನ ಫೋಟೋಶೂಟ್‌ ಮಾಡಿಸಿದ ಪೋಷಕರಾದ ಕಿರಣ್‌ ಹಾಗೂ ಲಕ್ಷ್ಮಿ.

Here are 4 ideas for krishna janmashtami photoshoot

ಕೃಷ್ಣ ಜನ್ಮಾಷ್ಟಮಿ ಫೋಟೋಶೂಟ್‌ಗೆ 4 ಐಡಿಯಾ :

· ಆನ್‌ಲೈನ್‌ನಲ್ಲೂ ಸಾಕಷ್ಟು ಫೋಟೋ ಸ್ಟುಡಿಯೋಗಳು ಬಜೆಟ್‌ ಫ್ರೆಂಡ್ಲಿ ಜನ್ಮಾಷ್ಟಮಿ ಫೋಟೋಶೂಟ್‌ ಪ್ಯಾಕೇಜ್‌ ನೀಡುತ್ತವೆ ಉಪಯೋಗಿಸಿಕೊಳ್ಳಿ.
· ಆಯಾ ವಯಸ್ಸಿಗೆ ತಕ್ಕಂತೆ ಥೀಮ್‌ ಆಯ್ಕೆ ಮಾಡಿ, ಸ್ಟೈಲಿಂಗ್‌ ಮಾಡಿ.
· ಫೋಟೋ ಕಾಂಪಿಟೇಷನ್‌ಗೆ ಕಳುಹಿಸುವುದಾದಲ್ಲಿ, ಪ್ರೊಫೆಷನಲ್‌ ಫೋಟೋಗ್ರಾಫಿ ಮಾಡಿಸಿ.
· ನೀವೇ ಖುದ್ದು ಫೋಟೋಶೂಟ್‌ ಮಾಡುವುದಾದಲ್ಲಿ ಬಾಡಿಗೆಗೆ
ಔಟ್‌ಫಿಟ್ಸ್ ಪಡೆದು ಮಾಡಿ. ಖರ್ಚು ಕಡಿಮೆಯಾಗುವುದು.

Here are 4 ideas for krishna janmashtami photoshoot
Here are 4 ideas for krishna janmashtami photoshoot

( ಲೇಖಕಿ ಫ್ಯಾಷನ್‌ ಪತ್ರಕರ್ತೆ)

Continue Reading

ಧಾರ್ಮಿಕ

Rayara Aradhane 2024 : ಏಕಾಏಕಿ ಸುರಿದ ಮಳೆ; ಭಕ್ತರಿಗೆ ಮಠದ ಪ್ರಾಕಾರದಲ್ಲಿ ಮಲಗಲು ವ್ಯವಸ್ಥೆ ಮಾಡಿಕೊಟ್ಟ ಮಂತ್ರಾಲಯ ಶ್ರೀಗಳು

Rayara Aradhane 2024 :

VISTARANEWS.COM


on

Rayara Aradhane 2024
Koo

ಮಂತ್ರಾಲಯ : ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಸೋಮವಾರ ರಾತ್ರಿ ಏಕಾಏಕಿ ಭರ್ಜರಿ ಮಳೆಯಾಗಿದೆ. ಅಂತೆಯೇ ಪುಣ್ಯ ಕ್ಷೇತ್ರವಾದ ಮಂತ್ರಾಲಯದಲ್ಲೂ ಏಕಾಏಕಿ ಭಾರೀ ಪ್ರಮಾಣದಲ್ಲಿ ಮಳೆ ಬಂದಿದೆ. ಇದರಿಂದಾಗಿ ರಾಯರ ಆರಾಧನೆಗೆ (Rayara Aradhane 2024) ಬಂದಿದ್ದ ಭಕ್ತರಿಗೆ ಸಮಸ್ಯೆ ಉಂಟಾಗಿದೆ. ಅವರೆಲ್ಲರಿಗೂ ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥರು ಮಠದ ಪ್ರಾಕಾರದಲ್ಲಿ ಮಲಗಲು ಅವಕಾಶ ಮಾಡಿಕೊಟ್ಟು ಭಕ್ತರ ಪಾಲಿಗೆ ಆಪದ್ಬಾಂಧವರೆನಿಸಿಕೊಂಡಿದ್ದಾರೆ.

ಆಗಸ್ಟ್‌ 20ರಿಂದ ಮಂತ್ರಾಲಯದಲ್ಲಿ 353ನೇ ಗುರುರಾಯರ ಆರಾಧಾನ ಮಹೋತ್ಸವ ಆಯೋಜನೆಗೊಂಡಿದೆ. ಇಂದು ಪೂರ್ವಾರಾಧನೆ ನಡೆಯಲಿದೆ. ಹೀಗಾಗಿ ದೊಡ್ಡ ಪ್ರಮಾಣದ ಭಕ್ತರು ಮಂತ್ರಾಲಯಕ್ಕೆ ಸೋಮವಾರ ರಾತ್ರಿಯೇ ಆಗಮಿಸಿದ್ದರು. ಅವರಲ್ಲಿ ಕೊಠಡಿ ಪಡೆಯದವರು ಮಠದ ಕಾರಿಡಾರ್‌ನಲ್ಲಿಯೇ ಮಲಗಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ರಾತ್ರಿ ವೇಳೆ ಏಕಾಏಕಿ ಮಳೆ ಸುರಿದಿದೆ.

ಮಳೆ ಸುರಿಯುತ್ತಿರುವ ಮತ್ತು ಭಕ್ತರು ಸಂಕಷ್ಟದಲ್ಲಿರುವ ವಿಷಯ ತಿಳಿಸದ ಸುಬುಧೇಂದ್ರ ಶ್ರೀಗಳು ತಕ್ಷಣ ಅಲ್ಲಿಗೆ ಬಂದಿದ್ದು ಮಳೆಯಲ್ಲಿ ನೆನೆಯುತ್ತಿದ್ದ ಭಕ್ತರಿಗೆ ಮಠದ ಪ್ರಾಕಾರ ಹಾಗೂ ಪ್ರವಚನ ಮಂಟಪದಲ್ಲಿ ಉಳಿದುಕೊಳ್ಳುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ತಮ್ಮ ಸಮಸ್ಯೆಗೆ ತಕ್ಷಣವೇ ಸ್ಪಂದಿಸಿದ ಶ್ರೀಗಳಿಗೆ ಭಕ್ತರು ಅಪಾರ ಗೌರವ ಸಲ್ಲಿಸಿದ್ದಾರೆ.

ಗುರುಗಳ ಜೀವನ ಹೇಗಿತ್ತು, ಸಂದೇಶ ಏನಾಗಿತ್ತು?

ಮಂತ್ರಾಲಯ ಗುರು (Mantralaya guru) ರಾಘವೇಂದ್ರ ಸ್ವಾಮಿಗಳ (Rayara Aradhane 2024) 353ನೇ ಆರಾಧನಾ ಮಹೋತ್ಸವ (Raghavendra Aradhana Mahotsava) ಮಂಗಳವಾರದಿಂದ ಮೂರು ದಿನಗಳ ಕಾಲ ನಡೆಯಲಿದೆ. ಗುರುಗಳು ಬೃಂದಾವನ ಪ್ರವೇಶಿಸಿದ ಈ ದಿನವನ್ನು ದೇಶ, ವಿದೇಶಗಳಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಆಗಸ್ಟ್ 20ರಂದು ಪೂರ್ವಾರಾಧನೆ, 21ರಂದು ಮಧ್ಯ ಆರಾಧನೆ ಮತ್ತು 22ರಂದು ಉತ್ತರಾರಾಧನೆ ನಡೆಯಲಿದೆ.

16ನೇ ಶತಮಾನದ ಸಂತರು ಮತ್ತು ಗುರುಗಳಾದ ಶ್ರೀ ರಾಘವೇಂದ್ರ ಸ್ವಾಮಿಗಳು ವೈಷ್ಣವ ಧರ್ಮವನ್ನು ಪ್ರತಿಪಾದಿಸಿದ್ದು, ಮಧ್ವಾಚಾರ್ಯರ ದ್ವೈತ ತತ್ತ್ವವನ್ನು ಜನಪ್ರಿಯಗೊಳಿಸಿದರು. ಗುರುಗಳು ಬೃಂದಾವನ ಪ್ರವೇಶಿಸಿರುವ ಕ್ಷೇತ್ರವಾಗಿರುವ ಮಂತ್ರಾಲಯದಲ್ಲಿ ಗುರುಗಳ ಆರಾಧನೆ ಆಗಸ್ಟ್ 21ರಂದು ನಡೆಯಲಿದೆ.
ಗುರುಗಳ ಆರಾಧನೆ ಎಂದರೇನು?

ರಾಘವೇಂದ್ರ ಸ್ವಾಮಿ ಆರಾಧನೆ ಎಂದರೆ ರಾಯರು ಜೀವಂತವಾಗಿ ಬೃಂದಾವನವನ್ನು ಪ್ರವೇಶಿಸಿರುವ ದಿನ. ದೇಶ ವಿದೇಶಗಳಲ್ಲಿ ಆಚರಿಸಲ್ಪಡುವ ಗುರುಗಳ ಆರಾಧನೆಯು ಹೆಚ್ಚಿನ ಮಠಗಳು ಮತ್ತು ಸಂಸ್ಥೆಗಳಲ್ಲಿ ಪೂರ್ವಾರಾಧನೆಯಿಂದ ಪ್ರಾರಂಭವಾಗುತ್ತದೆ. ಇದನ್ನು ವಾರ್ಷಿಕವಾಗಿ ಶ್ರಾವಣ ಕೃಷ್ಣ ಪಕ್ಷ ದ್ವಿತೀಯ ಅಥವಾ ಕರ್ನಾಟಕದಲ್ಲಿ ಅನುಸರಿಸುವ ಸಾಂಪ್ರದಾಯಿಕ ಹಿಂದೂ ಚಂದ್ರನ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದಲ್ಲಿ ಚಂದ್ರನ ಕ್ಷೀಣಿಸುತ್ತಿರುವ ಎರಡನೇ ದಿನದಂದು ಆಚರಿಸಲಾಗುತ್ತದೆ.

ರಾಘವೇಂದ್ರ ಸ್ವಾಮಿಯು ವಿಷ್ಣುವಿನ ಶ್ರೇಷ್ಠ ಭಕ್ತರಾಗಿದ್ದರು. 1621 ರಿಂದ 1671ರವರೆಗೆ ಅವರು ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದ ಶ್ರೀ ಮಠದ ಮುಖ್ಯಸ್ಥರಾಗಿದ್ದರು. ತಮ್ಮ ಜೀವನದಲ್ಲಿ ಹಲವಾರು ಪವಾಡಗಳನ್ನು ನಡೆಸಿರುವ ಅವರು ಮಧ್ವಾಚಾರ್ಯರ ಬೋಧನೆಗಳ ಮೇಲೆ ಹಲವಾರು ಭಜನೆ ಮತ್ತು ವ್ಯಾಖ್ಯಾನಗಳನ್ನು ರಚಿಸಿದ್ದಾರೆ. ಗುರು ಶ್ರೀ ರಾಘವೇಂದ್ರ ಸ್ವಾಮಿಗಳು 1671 ರಲ್ಲಿ ಸಮಾಧಿಯನ್ನು ಪ್ರವೇಶಿಸದರು. ಆವರ ಸಮಾಧಿ ಸ್ಥಳವನ್ನು ಬೃಂದಾವನ ಎಂದು ಕರೆಯಲಾಗುತ್ತದೆ. ಇದು ಮಂತ್ರಾಲಯದಲ್ಲಿದೆ.
ಮಂತ್ರಾಲಯದಲ್ಲಿ ಅದ್ಧೂರಿ ಆಚರಣೆ

ಗುರುಗಳ ಆರಾಧನೆಯನ್ನು ಮಂತ್ರಾಲಯದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಹಬ್ಬವನ್ನು ಮಹಾ ಆರಾಧನೆ ಎಂದೂ ಕರೆಯಲಾಗುತ್ತದೆ. ಈ ಸಂದರ್ಭದಲ್ಲಿ, ಮಠದ ಸಂಕೀರ್ಣವನ್ನು ಹಾಗೂ ಮಂತ್ರಾಲಯ ಪಟ್ಟಣವನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಗುರುಗಳ ಮಹಾ ಆರಾಧನೆಯ ಅಂಗವಾಗಿ ನಡೆಯುವ ಮಹಾರಥೋತ್ಸವದಲ್ಲಿ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಾರೆ.

ಇದನ್ನೂ ಓದಿ: Raichur News : ಉಸಿರಾಡುತ್ತಿವೆ ಮುಸ್ಲಿಂ ಧರ್ಮಗುರುಗಳ ಗೋರಿಗಳು, ಪವಾಡ ಎಂದ ಭಕ್ತರು

ವಿವಿಧ ಆಚರಣೆಗಳು

ಕಲಿಯುಗದ ಕಾಮಧೇನು ಎಂದೇ ಜಗತ್ಪ್ರಸಿದ್ಧಿ ಪಡೆದ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಮಂತ್ರಾಲಯದಲ್ಲಿ ಭಾನುವಾರವೇ ಆರಂಭಗೊಂಡಿದ್ದು, ಆಗಸ್ಟ್ 24ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ರಾಯರ ಉತ್ಸವ ಮೂರ್ತಿಯ ಬಲಿ, ರಥೋತ್ಸವ, ಗೋ ಪೂಜೆ, ಗಜಪೂಜೆ ಮತ್ತಿತರ ಪೂಜೆಗಳು ನಡೆಯುತ್ತವೆ. ಇದಕ್ಕೂ ಮೊದಲು ಧ್ವಜಾರೋಹಣ ನಡೆಸಿ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ.

ಪೂರ್ವ ಆರಾಧನಾ ದಿನದಂದು ಸಿಂಹ ವಾಹನ ಸವಾರಿ, ಮಧ್ಯ ಆರಾಧನಾ ದಿನದಂದು ಮಹಾ ಪಂಚಾಮೃತ ಅಭಿಷೇಕ, ಉತ್ತರ ಆರಾಧನಾ ದಿನದಂದು ಸ್ವರ್ಣ ರಥೋತ್ಸವವನ್ನು ನಡೆಸಲಾಗುತ್ತದೆ. ಮಠವು ಪ್ರತಿ ವರ್ಷ ಸಮಾಜ ಸೇವೆ ಮಾಡಿದ ಗಣ್ಯರಿಗೆ ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ. ಈ ಸಂದರ್ಭದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳನ್ನೂ ನಡೆಸಲಾಗುತ್ತದೆ.

Continue Reading

ಧಾರ್ಮಿಕ

Vastu Tips: ಸ್ನಾನಗೃಹದಲ್ಲಿ ಯಾವ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ!

ವಾಸ್ತು ಶಾಸ್ತ್ರವು (Vastu Tips) ಹಿಂದೂ ಧರ್ಮದ ಪ್ರಮುಖ ಭಾಗವಾಗಿದೆ. ಇದು ಭಾರತೀಯರ ಪ್ರಾಚೀನ ವಿಜ್ಞಾನವು ಹೌದು. ಜೀವನದಲ್ಲಿ ನಕಾರಾತ್ಮಕತೆಯನ್ನು ತೊಡೆದುಹಾಕಲು ಮತ್ತು ಸಕಾರಾತ್ಮಕತೆಯನ್ನು ಹೆಚ್ಚಿಸಲು ಜೀವನದ ವಿವಿಧ ಅಂಶಗಳ ಕುರಿತು ಮಾರ್ಗಸೂಚಿಗಳನ್ನು ಇದು ಒದಗಿಸುತ್ತದೆ. ಕೆಲವು ಪ್ರಾಚೀನ ತತ್ತ್ವ ಗಳನ್ನು ಅನುಸರಿಸುವ ಮೂಲಕ ಮನೆಯಲ್ಲಿ ಸಮೃದ್ಧಿಯನ್ನು ಉತ್ತೇಜಿಸಬಹುದು ಮತ್ತು ದುರದೃಷ್ಟವನ್ನು ತಪ್ಪಿಸಬಹುದು.

VISTARANEWS.COM


on

By

Vastu Tips
Koo

ನಾವು ಮಾಡುವ ಕೆಲವು ಸಣ್ಣಪುಟ್ಟ ತಪ್ಪುಗಳು ಮನೆಯಲ್ಲಿ ವಾಸ್ತು (Vastu Tips) ದೋಷವನ್ನು ಉಂಟು ಮಾಡಿ ನಕಾರಾತ್ಮಕತೆಯ (Negativity) ಪ್ರವೇಶಕ್ಕೆ ಅನುಮತಿ ಮಾಡಿಕೊಡಬಹುದು. ಇನ್ನು ಕೆಲವು ನಿಯಮಗಳ ಪಾಲನೆಯಿಂದ ವಾಸ್ತು ದೋಷವನ್ನು (vastu dosha) ದೂರ ಮಾಡಬಹುದು ಮಾತ್ರವಲ್ಲ, ಮನೆಯೊಳಗೇ ಸುಖ, ಶಾಂತಿ, ಸಮೃದ್ಧಿ ಹೆಚ್ಚಳಕ್ಕೆ ಕಾರಣವಾಗಬಹುದು.

ವಾಸ್ತು ಶಾಸ್ತ್ರವು ಹಿಂದೂ ಧರ್ಮದ ಪ್ರಮುಖ ಭಾಗವಾಗಿದೆ. ಇದು ಭಾರತೀಯರ ಪ್ರಾಚೀನ ವಿಜ್ಞಾನವು ಹೌದು. ಜೀವನದಲ್ಲಿ ನಕಾರಾತ್ಮಕತೆಯನ್ನು ತೊಡೆದುಹಾಕಲು ಮತ್ತು ಸಕಾರಾತ್ಮಕತೆಯನ್ನು ಹೆಚ್ಚಿಸಲು ಜೀವನದ ವಿವಿಧ ಅಂಶಗಳ ಕುರಿತು ಮಾರ್ಗಸೂಚಿಗಳನ್ನು ಇದು ಒದಗಿಸುತ್ತದೆ.

ಕೆಲವು ಪ್ರಾಚೀನ ತತ್ತ್ವ ಗಳನ್ನು ಅನುಸರಿಸುವ ಮೂಲಕ ಮನೆಯಲ್ಲಿ ಸಮೃದ್ಧಿಯನ್ನು ಉತ್ತೇಜಿಸಬಹುದು ಮತ್ತು ದುರದೃಷ್ಟವನ್ನು ತಪ್ಪಿಸಬಹುದು. ಮನೆಯ ಸ್ನಾನಗೃಹದಲ್ಲಿ ಮಾಡುವ ಕೆಲವು ತಪ್ಪುಗಳು ನಮ್ಮ ಅದೃಷ್ಟದ ಮೇಲೆ ಪರಿಣಾಮ ಬೀರುತ್ತದೆ. ಅವು ಯಾವುದು, ಅವುಗಳಿಗೆ ವಾಸ್ತು ಶಾಸ್ತ್ರದಲ್ಲಿ ಸೂಚಿಸಿರುವ ಪರಿಹಾರಗಳೇನು ಎನ್ನುವ ಕುರಿತು ಇಲ್ಲಿದೆ ಮಾಹಿತಿ.


ಖಾಲಿ ಬಕೆಟ್ ಇಟ್ಟುಕೊಳ್ಳಬೇಡಿ

ಖಾಲಿ ಬಕೆಟ್ ಅನ್ನು ಎಂದಿಗೂ ಸ್ನಾನಗೃಹದಲ್ಲಿ ಇಡಬಾರದು. ನೆರಳು ಗ್ರಹವಾದ ರಾಹುವು ಖಾಲಿ ಬಕೆಟ್‌ನಲ್ಲಿ ವಾಸಿಸುತ್ತಾನೆ. ವಾಸ್ತು ದೋಷ ಮತ್ತು ನಕಾರಾತ್ಮಕತೆಯನ್ನು ಇದು ಉತ್ತೇಜಿಸುತ್ತದೆ ಎಂದು ನಂಬಲಾಗಿದೆ. ಇದು ಮಾನಸಿಕ ತೊಂದರೆ ಮತ್ತು ಆರ್ಥಿಕ ನಷ್ಟ ಎರಡನ್ನೂ ಉಂಟುಮಾಡಬಹುದು.

Vastu Tips
Vastu Tips


ಒದ್ದೆಯಾದ ಬಟ್ಟೆ ಇಡಬೇಡಿ

ಬಾತ್ ರೂಮ್‌ನಲ್ಲಿ ಒದ್ದೆಯಾದ ಬಟ್ಟೆಗಳನ್ನು ಬಿಡುವುದು ನಕಾರಾತ್ಮಕ ಶಕ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಇದು ಸೂರ್ಯ ದೋಷವನ್ನು ಉಂಟುಮಾಡುತ್ತದೆ. ಜೀವನದಲ್ಲಿ ಪ್ರಗತಿಗೆ ಅಡ್ಡಿಯಾಗುತ್ತದೆ.


ಒಡೆದ ಕನ್ನಡಿ ಇಡಬೇಡಿ

ಸ್ನಾನ ಗೃಹದಲ್ಲಿ ಮುರಿದ ಕನ್ನಡಿಗಳು ಗಂಭೀರವಾದ ವಾಸ್ತು ದೋಷಗಳನ್ನು ಉಂಟು ಮಾಡಬಹುದು. ಇದು ಆರ್ಥಿಕ ತೊಂದರೆಗಳಿಗೂ ಕಾರಣವಾಗಬಹುದು. ಆರ್ಥಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ತಕ್ಷಣವೇ ಬಾತ್ ರೂಮ್ ನಿಂದ ಮುರಿದ ಕನ್ನಡಿಗಳನ್ನು ತೆಗೆದುಹಾಕಿ.


ನೀರು ಸೋರಿಕೆಯಾಗದಿರಲಿ

ಸ್ನಾನಗೃಹದಲ್ಲಿ ಯಾವುದೇ ಸೋರಿಕೆ ಅಥವಾ ತೊಟ್ಟಿಕ್ಕುವ ನಲ್ಲಿಗಳಿದ್ದರೆ ಕೂಡಲೇ ಸರಿಪಡಿಸಿ. ಯಾಕೆಂದರೆ ನೀರಿನ ವ್ಯರ್ಥ ಅಥವಾ ಸೋರಿಕೆಯು ಚಂದ್ರನ ದೋಷವನ್ನು ಉಂಟು ಮಾಡುತ್ತದೆ ಮತ್ತು ಲಕ್ಷ್ಮಿ ದೇವಿಯನ್ನು ಕೋಪಗೊಳಿಸುತ್ತದೆ. ಇದು ಮಾನಸಿಕ ಒತ್ತಡ ಮತ್ತು ಆರ್ಥಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಇದನ್ನೂ ಓದಿ: Vastu Tips: ಮಲಗುವ ದಿಕ್ಕು ಸತಿಪತಿ ನಡುವಿನ ವಿರಸಕ್ಕೆ ಕಾರಣ ಆಗಬಹುದು!


ಬಕೆಟ್ ಬಣ್ಣ

ಬಾತ್ ರೂಮ್‌ನಲ್ಲಿ ಕಪ್ಪು ಬಕೆಟ್ ಅನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಯಾಕೆಂದರೆ ಇದು ಮನೆಗೆ ತೊಂದರೆಗಳನ್ನು ತರುತ್ತದೆ. ನೀಲಿ ಬಕೆಟ್ ಅನ್ನು ಹೆಚ್ಚು ಮಂಗಳಕರವೆಂದು ಪರಿಗಣಿಸಲಾಗುತ್ತದೆ.

Continue Reading

ಧಾರ್ಮಿಕ

Rayara Aradhane 2024: ಇಂದಿನಿಂದ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ; ಗುರುಗಳ ಜೀವನ ಹೇಗಿತ್ತು, ಸಂದೇಶ ಏನಾಗಿತ್ತು?

ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳು ಬೃಂದಾವನವನ್ನು (Rayara Aradhane 2024) ಪ್ರವೇಶಿಸಿರುವ ದಿನವನ್ನು ಆರಾಧನಾ ಮಹೋತ್ಸವವಾಗಿ (Raghavendra Aradhana Mahotsava) ಆಚರಿಸಲಾಗುತ್ತದೆ. ದೇಶ ವಿದೇಶಗಳಲ್ಲಿ ಈ ಬಾರಿ ಗುರುಗಳ 353ನೇ ಆರಾಧನಾ ಮಹೋತ್ಸವವನ್ನು ಆಚರಿಸಲಾಗುತ್ತದೆ. ಗುರುಗಳ ಆರಾಧನೆಯು ಹೆಚ್ಚಿನ ಮಠಗಳು ಮತ್ತು ಸಂಸ್ಥೆಗಳಲ್ಲಿ ಪೂರ್ವಾರಾಧನೆಯಿಂದ ಪ್ರಾರಂಭವಾಗುತ್ತದೆ. ಆಗಸ್ಟ್ 20ರಂದು ಪೂರ್ವಾರಾಧನೆ, 21ರಂದು ಮಧ್ಯ ಆರಾಧನೆ ಮತ್ತು 22ರಂದು ಉತ್ತರಾರಾಧನೆ ನಡೆಯಲಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Rayara Aradhane 2024
Koo

ಮಂತ್ರಾಲಯ ಗುರು (Mantralaya guru) ರಾಘವೇಂದ್ರ ಸ್ವಾಮಿಗಳ (Rayara Aradhane 2024) 353ನೇ ಆರಾಧನಾ ಮಹೋತ್ಸವ (Raghavendra Aradhana Mahotsava) ಮಂಗಳವಾರದಿಂದ ಮೂರು ದಿನಗಳ ಕಾಲ ನಡೆಯಲಿದೆ. ಗುರುಗಳು ಬೃಂದಾವನ ಪ್ರವೇಶಿಸಿದ ಈ ದಿನವನ್ನು ದೇಶ, ವಿದೇಶಗಳಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಆಗಸ್ಟ್ 20ರಂದು ಪೂರ್ವಾರಾಧನೆ, 21ರಂದು ಮಧ್ಯ ಆರಾಧನೆ ಮತ್ತು 22ರಂದು ಉತ್ತರಾರಾಧನೆ ನಡೆಯಲಿದೆ.

16ನೇ ಶತಮಾನದ ಸಂತರು ಮತ್ತು ಗುರುಗಳಾದ ಶ್ರೀ ರಾಘವೇಂದ್ರ ಸ್ವಾಮಿಗಳು ವೈಷ್ಣವ ಧರ್ಮವನ್ನು ಪ್ರತಿಪಾದಿಸಿದ್ದು, ಮಧ್ವಾಚಾರ್ಯರ ದ್ವೈತ ತತ್ತ್ವವನ್ನು ಜನಪ್ರಿಯಗೊಳಿಸಿದರು. ಗುರುಗಳು ಬೃಂದಾವನ ಪ್ರವೇಶಿಸಿರುವ ಕ್ಷೇತ್ರವಾಗಿರುವ ಮಂತ್ರಾಲಯದಲ್ಲಿ ಗುರುಗಳ ಆರಾಧನೆ ಆಗಸ್ಟ್ 21ರಂದು ನಡೆಯಲಿದೆ.


ಗುರುಗಳ ಆರಾಧನೆ ಎಂದರೇನು?

ರಾಘವೇಂದ್ರ ಸ್ವಾಮಿ ಆರಾಧನೆ ಎಂದರೆ ರಾಯರು ಜೀವಂತವಾಗಿ ಬೃಂದಾವನವನ್ನು ಪ್ರವೇಶಿಸಿರುವ ದಿನ. ದೇಶ ವಿದೇಶಗಳಲ್ಲಿ ಆಚರಿಸಲ್ಪಡುವ ಗುರುಗಳ ಆರಾಧನೆಯು ಹೆಚ್ಚಿನ ಮಠಗಳು ಮತ್ತು ಸಂಸ್ಥೆಗಳಲ್ಲಿ ಪೂರ್ವಾರಾಧನೆಯಿಂದ ಪ್ರಾರಂಭವಾಗುತ್ತದೆ. ಇದನ್ನು ವಾರ್ಷಿಕವಾಗಿ ಶ್ರಾವಣ ಕೃಷ್ಣ ಪಕ್ಷ ದ್ವಿತೀಯ ಅಥವಾ ಕರ್ನಾಟಕದಲ್ಲಿ ಅನುಸರಿಸುವ ಸಾಂಪ್ರದಾಯಿಕ ಹಿಂದೂ ಚಂದ್ರನ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದಲ್ಲಿ ಚಂದ್ರನ ಕ್ಷೀಣಿಸುತ್ತಿರುವ ಎರಡನೇ ದಿನದಂದು ಆಚರಿಸಲಾಗುತ್ತದೆ.

ರಾಘವೇಂದ್ರ ಸ್ವಾಮಿಯು ವಿಷ್ಣುವಿನ ಶ್ರೇಷ್ಠ ಭಕ್ತರಾಗಿದ್ದರು. 1621 ರಿಂದ 1671ರವರೆಗೆ ಅವರು ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದ ಶ್ರೀ ಮಠದ ಮುಖ್ಯಸ್ಥರಾಗಿದ್ದರು. ತಮ್ಮ ಜೀವನದಲ್ಲಿ ಹಲವಾರು ಪವಾಡಗಳನ್ನು ನಡೆಸಿರುವ ಅವರು ಮಧ್ವಾಚಾರ್ಯರ ಬೋಧನೆಗಳ ಮೇಲೆ ಹಲವಾರು ಭಜನೆ ಮತ್ತು ವ್ಯಾಖ್ಯಾನಗಳನ್ನು ರಚಿಸಿದ್ದಾರೆ. ಗುರು ಶ್ರೀ ರಾಘವೇಂದ್ರ ಸ್ವಾಮಿಗಳು 1671 ರಲ್ಲಿ ಸಮಾಧಿಯನ್ನು ಪ್ರವೇಶಿಸದರು. ಆವರ ಸಮಾಧಿ ಸ್ಥಳವನ್ನು ಬೃಂದಾವನ ಎಂದು ಕರೆಯಲಾಗುತ್ತದೆ. ಇದು ಮಂತ್ರಾಲಯದಲ್ಲಿದೆ.


ಗುರುಗಳ ಜನನ ಕಥೆ

ಗುರು ರಾಘವೇಂದ್ರ ಸ್ವಾಮಿಗಳು 1595ರಲ್ಲಿ ತಮಿಳುನಾಡಿನ ಭುವನಗಿರಿಯಲ್ಲಿ ತಿಮ್ಮಣ್ಣ ಭಟ್ಟ ಹಾಗೂ ಗೋಪಿಕಾಂಬೆ ಅವರ ಎರಡನೇ ಮಗನಾಗಿ ಜನಿಸಿದರು. ಇವರ ಮೊದಲ ಹೆಸರು ವೆಂಕಣ್ಣ ಭಟ್ಟ. ಇವರನ್ನು ವೆಂಕಟನಾಥ, ವೆಂಕಟಾಚಾರ್ಯ ಎಂದೂ ಕರೆಯುತ್ತಾರೆ. ಇವರಿಗೆ ಗುರುರಾಜ ಎಂಬ ಹೆಸರಿನ ಸಹೋದರ ಹಾಗೂ ವೆಂಕಟಾಂಬೆ ಎಂಬ ಸಹೋದರಿಯೂ ಇದ್ದರು. ರಾಯರ ತಂದೆ, ತಾಯಿಗೆ ಮಕ್ಕಳಾಗದೇ ಆಗದೇ ಇದ್ದಾಗ ಅವರು ತಿರುಪತಿಗೆ ಹೋಗಿ ದೇವರನ್ನು ಬೇಡಿಕೊಂಡ ಮೇಲೆ ಮಕ್ಕಳು ಜನಿಸಿದರು.

ರಾಘವೇಂದ್ರ ಅವರ ಹುಟ್ಟಿಗೂ ಮೊದಲು ತಿಮ್ಮಣ್ಣ ಭಟ್ಟ ದಂಪತಿ ತಿರುಪತಿಗೆ ತೆರಳಿ ಭಗವಂತನ ಸೇವೆ ಮಾಡುತ್ತಾರೆ. ಆಗ ಅವರ ಕನಸಿನಲ್ಲಿ ಬಂದು ವೆಂಕಟೇಶ, ಒಂದು ಮಹಾನ್ ಆತ್ಮ ಹಾಗೂ ಖ್ಯಾತಿ ಶಿಖರವನ್ನೇರುವ ಮಗನನ್ನು ನೀಡುವುದಾಗಿ ಆಶೀರ್ವದಿಸುತ್ತಾನೆ. ತಿರುಪತಿ ದೇವರ ಅನುಗ್ರಹದಿಂದ ರಾಯರು ಜನಿಸಿದರು ಎನ್ನಲಾಗುತ್ತದೆ.

Raghavendra Aradhana Mahotsava
Raghavendra Aradhana Mahotsava


ಕಡು ಬಡತನದಲ್ಲೇ ಜೀವನ

ವೆಂಕಟನಾಥ (ರಾಘವೇಂದ್ರ) ಅವರಿಗೆ ಸರಸ್ವತಿ ಎಂಬಾಕೆಯೊಂದಿಗೆ ವಿವಾಹವಾಗುತ್ತದೆ. ಇವರಿಗೆ ಒಬ್ಬ ಮಗ ಜನಿಸುತ್ತಾನೆ. ಅವನಿಗೆ ಲಕ್ಷಣರಾಯ ಎಂದು ಹೆಸರಿಡಲಾಗುತ್ತದೆ. ನುರಿತ ಸಂಗೀತಗಾರ ಮತ್ತು ಶ್ರೇಷ್ಠ ವಿದ್ವಾಂಸರೂ ಆಗಿದ್ದ ವೆಂಕಟನಾಥ ಅವರು ತಮ್ಮ ಸೇವೆಗಳಿಗೆ ಎಂದಿಗೂ ಹಣ ಕೇಳುತ್ತಿರಲಿಲ್ಲ. ಇದರಿಂದ ಅವರು ಕಡು ಬಡತನದಲ್ಲೇ ಜೀವನ ಸಾಗಿಸಬೇಕಾಯಿತು. ಆದರೂ ಭಗವಂತನ ಮೇಲೆ ಅಚಲವಾದ ನಂಬಿಕೆ ಇಟ್ಟಿದ್ದರು.

ಬಳಿಕ ಅವರು ಶ್ರೀ ಸುಧೀಂದ್ರ ತೀರ್ಥರ ಆಶ್ರಯ ಪಡೆದರು. ಅವರ ಬಳಿ ತಮ್ಮ ಶಿಕ್ಷಣವನ್ನು ಮುಂದುವರಿಸಿದರು.
ಅವರ ಜ್ಞಾನ ಮತ್ತು ವ್ಯಾಕರಣದ ಮೇಲಿನ ಪಾಂಡಿತ್ಯವನ್ನು ನೋಡಿ ಸಂತೋಷಗೊಂಡ ಸುಧೀಂದ್ರ ತೀರ್ಥರು ಅವರಿಗೆ “ಮಹಾಭಾಷ್ಯಾಚಾರ್ಯ” ಎಂಬ ಬಿರುದನ್ನು ನೀಡಿದರು.


ರಾಘವೇಂದ್ರ ಹೆಸರಿನ ವಿಶೇಷ

ಸುಧೀಂದ್ರ ತೀರ್ಥರು ಬೃಂದಾವನ ಪ್ರವೇಶಿಸಿದ ಮೇಲೆ ರಾಯರು ಮಠದ ಮುಖ್ಯಸ್ಥರಾದರು. ಇದಕ್ಕೂ ಮೊದಲು ಸನ್ಯಾಸ ದೀಕ್ಷೆ ಸ್ವೀಕರಿಸಿದ್ದ ವೆಂಕಟನಾಥನ ಹೆಸರನ್ನು ರಾಘವೇಂದ್ರ ಎಂದು ಬದಲಾಯಿಸಲಾಗಿತ್ತು.
ರಾಘವೇಂದ್ರ ಎನ್ನುವುದು ಭಗವಾನ್ ರಾಮನ ಹೆಸರು. ಇದರ ಅರ್ಥ ‘ಪಾಪಗಳನ್ನು ನಾಶಪಡಿಸುವ ಮತ್ತು ಬಯಸಿದ ವಸ್ತುಗಳನ್ನು ಕೊಡುವವನು’ ಎಂಬುದಾಗಿದೆ.

ಬೃಂದಾವನ ಪ್ರವೇಶ

ರಾಘವೇಂದ್ರ ಸ್ವಾಮಿಗಳು 1671ರ ಶ್ರಾವಣ ಕೃಷ್ಣ ಪಕ್ಷದ ದ್ವಿತೀಯ ದಿನದಂದು ಜೀವಂತ ಸಮಾಧಿ ಸೇರುತ್ತಾರೆ. ಆ ಕಾರಣದಿಂದ ಪ್ರತಿ ವರ್ಷ ಈ ದಿನದಂದು ರಾಯರ ಆರಾಧನಾ ಮಹೋತ್ಸವವನ್ನು ಆಚರಿಸಲಾಗುತ್ತದೆ.

ಅಂತಿಮ ಸಂದೇಶ

ಸಮಾಧಿ ಪಡೆಯುವ ಮುನ್ನ ಗುರುಗಳು ತಮ್ಮ ನಿತ್ಯದ ವಿಧಿವಿಧಾನಗಳನ್ನು ಅನುಸರಿಸಿ ಭಕ್ತರಿಗೆ ತಮ್ಮ ಕೊನೆಯ ಪ್ರವಚನವನ್ನು ನೀಡಿದರು. ಈ ವೇಳೆ ಅವರು, ನಾನು ನನ್ನ ದೇಹವನ್ನು ಮಾತ್ರ ತ್ಯಜಿಸುತ್ತೇನೆ. ಎಲ್ಲರ ಯೋಗಕ್ಷೇಮವನ್ನು ಕಾಪಾಡಲು ಭೌತಿಕವಾಗಿ ಇರುತ್ತೇನೆ ಎಂದು ಹೇಳಿದ್ದರು.

ಮಂತ್ರಾಲಯದಲ್ಲಿ ಅದ್ಧೂರಿ ಆಚರಣೆ

ಗುರುಗಳ ಆರಾಧನೆಯನ್ನು ಮಂತ್ರಾಲಯದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಹಬ್ಬವನ್ನು ಮಹಾ ಆರಾಧನೆ ಎಂದೂ ಕರೆಯಲಾಗುತ್ತದೆ. ಈ ಸಂದರ್ಭದಲ್ಲಿ, ಮಠದ ಸಂಕೀರ್ಣವನ್ನು ಹಾಗೂ ಮಂತ್ರಾಲಯ ಪಟ್ಟಣವನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಗುರುಗಳ ಮಹಾ ಆರಾಧನೆಯ ಅಂಗವಾಗಿ ನಡೆಯುವ ಮಹಾರಥೋತ್ಸವದಲ್ಲಿ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಾರೆ.


ವಿವಿಧ ಆಚರಣೆಗಳು

ಕಲಿಯುಗದ ಕಾಮಧೇನು ಎಂದೇ ಜಗತ್ಪ್ರಸಿದ್ಧಿ ಪಡೆದ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಮಂತ್ರಾಲಯದಲ್ಲಿ ಭಾನುವಾರವೇ ಆರಂಭಗೊಂಡಿದ್ದು, ಆಗಸ್ಟ್ 24ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ರಾಯರ ಉತ್ಸವ ಮೂರ್ತಿಯ ಬಲಿ, ರಥೋತ್ಸವ, ಗೋ ಪೂಜೆ, ಗಜಪೂಜೆ ಮತ್ತಿತರ ಪೂಜೆಗಳು ನಡೆಯುತ್ತವೆ. ಇದಕ್ಕೂ ಮೊದಲು ಧ್ವಜಾರೋಹಣ ನಡೆಸಿ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ.

ಪೂರ್ವ ಆರಾಧನಾ ದಿನದಂದು ಸಿಂಹ ವಾಹನ ಸವಾರಿ, ಮಧ್ಯ ಆರಾಧನಾ ದಿನದಂದು ಮಹಾ ಪಂಚಾಮೃತ ಅಭಿಷೇಕ, ಉತ್ತರ ಆರಾಧನಾ ದಿನದಂದು ಸ್ವರ್ಣ ರಥೋತ್ಸವವನ್ನು ನಡೆಸಲಾಗುತ್ತದೆ. ಮಠವು ಪ್ರತಿ ವರ್ಷ ಸಮಾಜ ಸೇವೆ ಮಾಡಿದ ಗಣ್ಯರಿಗೆ ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ. ಈ ಸಂದರ್ಭದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳನ್ನೂ ನಡೆಸಲಾಗುತ್ತದೆ.

ಇದನ್ನೂ ಓದಿ: Shravan 2024: ಶ್ರಾವಣ ಸೋಮವಾರದ ವಿಶೇಷತೆಗಳೇನು? ಶಿವನಿಗೆ ಏನು ಅರ್ಪಿಸಬೇಕು? ಏನನ್ನು ಅರ್ಪಿಸಬಾರದು?

ವಿಶೇಷತೆ

ರಾಘವೇಂದ್ರ ಸ್ವಾಮಿಯ ಬೃಂದಾವನಕ್ಕೆ ಪ್ರತಿ ವರ್ಷ ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) ಅಧಿಕಾರಿಗಳು ಅರ್ಪಿಸುವ ಭಗವಾನ್ ವೆಂಕಟೇಶ್ವರ ಸ್ವಾಮಿಯ ಶೇಷವಸ್ತ್ರವನ್ನು ಅರ್ಪಿಸುವುದು ವಾಡಿಕೆಯಾಗಿದೆ. ತಿರುಪತಿ ಬಾಲಾಜಿ ದೇವಸ್ಥಾನದಿಂದ ಅಧಿಕಾರಿಗಳು ಮತ್ತು ಅರ್ಚಕರ ತಂಡ ತಂದ ಶೇಷವಸ್ತ್ರವನ್ನು ಮಠದ ಮುಖ್ಯಸ್ಥರು ಬೃಂದಾವನಕ್ಕೆ ಸ್ವೀಕರಿಸಿ ವಿಶೇಷ ಪಂಚಾಮೃತ ಅಭಿಷೇಕವನ್ನು ಮಾಡುತ್ತಾರೆ.

Continue Reading
Advertisement
Love jihad
ಕರ್ನಾಟಕ4 hours ago

Love Jihad: ಹಿಂದೂ ಯುವತಿಯ ಕರೆದೊಯ್ದ ಮುಸ್ಲಿಂ ಯುವಕ; ಕಾರ್ಕಳ ಪ್ರಕ್ಷುಬ್ಧ

assault case
ಕರ್ನಾಟಕ4 hours ago

Assault Case: ಮಾರ್ಕ್ಸ್‌ ಕಡಿಮೆ ಬಂತೆಂದು 4ನೇ ತರಗತಿ ಬಾಲಕನಿಗೆ ಬಾಸುಂಡೆ ಬರುವಂತೆ ಬಾರಿಸಿದ ಶಿಕ್ಷಕ

pm modi Ukraine Visit
ವಿದೇಶ4 hours ago

PM Modi Ukraine Visit: ಉಕ್ರೇನ್‌ಗೆ ಭೀಷ್ಮ್‌ ಕ್ಯೂಬ್‌ ಉಡುಗೊರೆ ನೀಡಿದ ಪ್ರಧಾನಿ ಮೋದಿ…ಏನಿದರ ವಿಶೇಷತೆ?

Yadgiri News
ಧಾರ್ಮಿಕ5 hours ago

Yadgiri News: ಶ್ರೀ ಲಕ್ಷ್ಮಿ ತಿಮ್ಮಪ್ಪ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

viral video
ವೈರಲ್ ನ್ಯೂಸ್6 hours ago

Viral Video: ಮೈಮೇಲೆ ಒಂದಲ್ಲ..ಎರಡಲ್ಲ ಬರೋಬ್ಬರಿ 25ಕೆ.ಜಿ ಚಿನ್ನ; ತಿಮ್ಮಪ್ಪನ ಸನ್ನಿಧಿಗೆ ಬಂದ ವಿಶೇಷ ಭಕ್ತರು ಇವರೇ ನೋಡಿ

Lorry Accident
ಕರ್ನಾಟಕ6 hours ago

Lorry Accident: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; 16 ಕಾರ್ಮಿಕರಿಗೆ ಗಂಭೀರ ಗಾಯ

ಕರ್ನಾಟಕ6 hours ago

Muda Scam: ದೆಹಲಿಯಲ್ಲಿ ರಾಹುಲ್‌ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ; ಕಾನೂನು ಹೋರಾಟದ ಬಗ್ಗೆ ಚರ್ಚೆ

Uttara Kannada News
ಉತ್ತರ ಕನ್ನಡ6 hours ago

Uttara Kannada News: ಹೊಸ ಆಧಾರ್ ನೋಂದಣಿ, ತಿದ್ದುಪಡಿಗೆ ಅವಕಾಶ

Invest Karnataka
ಬೆಂಗಳೂರು6 hours ago

Invest Karnataka: ಇಂಧನ ತಂತ್ರಜ್ಞಾನ; ರಾಜ್ಯದಲ್ಲಿ 8,300 ಕೋಟಿ ರೂ. ಹೂಡಿಕೆ ಮಾಡಲಿರುವ ಷೆರ್ವನ್‌ ಇಂಡಿಯಾ

UPSC Exam calendar
ದೇಶ7 hours ago

UPSC Exam calendar: UPSC ಪರಿಷ್ಕೃತ ಪರೀಕ್ಷಾ ಕ್ಯಾಲೆಂಡರ್‌ ರಿಲೀಸ್‌; ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌