Self Harming: ಐಶ್ವರ್ಯ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಪಿಪಿ ನೇಮಕ, ತಡೆಯಾಜ್ಞೆ ತಂದ ಪ್ರಕರಣಕ್ಕೆ ಮರುಜೀವ - Vistara News

ಕ್ರೈಂ

Self Harming: ಐಶ್ವರ್ಯ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಪಿಪಿ ನೇಮಕ, ತಡೆಯಾಜ್ಞೆ ತಂದ ಪ್ರಕರಣಕ್ಕೆ ಮರುಜೀವ

Aishwarya Self harming Case: ಡೆತ್‌ ನೋಟ್‌ನಲ್ಲಿ ತನ್ನ ಸಾವಿಗೆ ಕಾರಣರೆಂದು ಅತ್ತೆ, ಮಾವ, ಸೋದರತ್ತೆ, ಸೋದರ ಮಾವ ಸೇರಿ ಒಂಬತ್ತು ಜನರ ಹೆಸರನ್ನು ಐಶ್ವರ್ಯ ಬರೆದಿಟ್ಟಿದ್ದರು. ಚಾರಿತ್ರ್ಯವಧೆ ಮಾಡಿ ಕಿರುಕುಳ ನೀಡಿದ್ದಾಗಿ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದರು.

VISTARANEWS.COM


on

self harming Aishwarya case
ಪತಿ ಜೊತೆಗೆ ಐಶ್ವರ್ಯ. ಒಳಚಿತ್ರದಲ್ಲಿ ನೂತನ ಪಿಪಿ ಶ್ಯಾಮ್ ಸುಂದರ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹೈಕೋರ್ಟ್‌ನಿಂದ (High Court) ತನಿಖೆಗೆ ತಡೆಯಾಜ್ಞೆ (Stay order) ತರಲಾದ ಮಹಿಳೆ ಆತ್ಮಹತ್ಯೆ (Self Harming) ಪ್ರಕರಣದಲ್ಲಿ ನೂತನ ಪಬ್ಲಿಕ್‌ ಪ್ರಾಸಿಕ್ಯೂಟರ್‌ (Public Prosecutor) ನೇಮಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಬಿಇ ಪದವೀಧರೆ, ವಿವಾಹಿತೆ ಐಶ್ವರ್ಯ ಆತ್ಮಹತ್ಯೆ (Aishwarya Self harming Case) ಪ್ರಕರಣದಲ್ಲಿ ಸರ್ಕಾರದ ಪರ ಹೈಕೋರ್ಟ್‌ಗೆ ಹಿರಿಯ ವಕೀಲ ಶ್ಯಾಮ್ ಸುಂದರ್ ಅವರನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ರಾಜ್ಯ ಸರ್ಕಾರ ನೇಮಿಸಿದೆ.

2023ರ ಅಕ್ಟೋಬರ್ 26ರಂದು ಐಶ್ವರ್ಯ ಗೋವಿಂದರಾಜ ನಗರದ ತಮ್ಮ ತಂದೆಯ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ವರದಕ್ಷಿಣೆ ಕಿರುಕುಳ ಆರೋಪದಡಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಡೆತ್‌ ನೋಟ್‌ನಲ್ಲಿ ತನ್ನ ಸಾವಿಗೆ ಕಾರಣರೆಂದು ಅತ್ತೆ, ಮಾವ, ಸೋದರತ್ತೆ, ಸೋದರ ಮಾವ ಸೇರಿ ಒಂಬತ್ತು ಜನರ ಹೆಸರನ್ನು ಐಶ್ವರ್ಯ ಬರೆದಿಟ್ಟಿದ್ದರು. ಚಾರಿತ್ರ್ಯವಧೆ ಮಾಡಿ ಕಿರುಕುಳ ನೀಡಿದ್ದಾಗಿ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದರು.

ಮಾವ ಗಿರಿಯಪ್ಪ, ಅತ್ತೆ ಸೀತಮ್ಮ, ಪತಿ ರಾಜೇಶ್, ನಾದಿನಿ ತಸ್ಮೇ, ಸೋದರತ್ತೆ ಗೀತಾ, ಸೋದರ ಮಾವ ರವೀಂದ್ರನಾಥ್, ಸೋದರ ಅತ್ತೆ ಮಗಳು ಲಿಪಿ, ಚಿಕ್ಕಮ್ಮ ಶಾಲಿನಿ ಓಂಪ್ರಕಾಶ್, ಚಿಕ್ಕಪ್ಪ ಓಂಪ್ರಕಾಶ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಒಂಬತ್ತು ಆರೋಪಿಗಳು ಹೈಕೋರ್ಟ್‌ನಲ್ಲಿ ಜಾಮೀನು ಪಡೆದಿದ್ದರು. ಆತ್ಮಹತ್ಯೆ ಪ್ರಕರಣದ ತನಿಖೆಗೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ತಂದಿದ್ದರು.

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ತಂದೆಯ ಬಂಧನ

ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪದ ಮೇರೆಗೆ ವಿಕೃಕಾಮಿ ತಂದೆಯೊಬ್ಬನನ್ನು ಮೂಡುಬಿದಿರೆ ಪೋಲಿಸರು ಬಂಧಿಸಿದ್ದಾರೆ.

55 ವರ್ಷ ಪ್ರಾಯದ ಕೂಲಿ ಕಾರ್ಮಿಕ ಬಂಧಿತನಾಗಿದ್ದು, ಈತ ಪ್ರೌಢಶಾಲೆಯಲ್ಲಿ ಓದುತ್ತಿರುವ ಮಗಳ ಮೇಲೆ ಆರು ತಿಂಗಳ ಹಿಂದೆ ಮನೆಯಲ್ಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಗಳು 6 ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ.

ಈ ಬಗ್ಗೆ ಬಾಲಕಿಯ ತಂದೆಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಆರಂಭದಲ್ಲಿ ಬೇರೆಯವರ ಹೆಸರು ಹೇಳಿದ್ದನೆನ್ನಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದೆ. ಆರೋಪಿ ಮೂಲತಃ ಕಾರ್ಕಳದವನಾಗಿದ್ದು ದಶಕಗಳ ಹಿಂದೆ ಮೂಡುಬಿದಿರೆ ತಾಲೂಕಿನ ಗ್ರಾಮವೊಂದರ ಸರಕಾರಿ ಜಾಗದಲ್ಲಿ ಮನೆ ಕಟ್ಟಿ ನೆಲೆಸಿದ್ದ.

ಇದನ್ನೂ ಓದಿ: Murder Case: ಇನ್ಶೂರೆನ್ಸ್‌ ಹಣಕ್ಕಾಗಿ ದಂಪತಿಯ ಖತರ್ನಾಕ್ ಪ್ಲಾನ್, ತನ್ನನ್ನೇ ಹೋಲುವ ವ್ಯಕ್ತಿಯ ಕೊಲೆ ಮಾಡಿ ಡ್ರಾಮಾ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕೋಡಿ

Physical Abuse : ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಥಳಿಸಿದ ಸಾರ್ವಜನಿಕರು

Physical Abuse : ಚಿಕ್ಕೋಡಿಯಲ್ಲಿ ಡ್ರಾಪ್‌ ಕೊಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಆರೋಪಿಯನ್ನು ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ.

VISTARANEWS.COM


on

By

Physical abuse attempted rape of school girl The public who beat up the man
Koo

ಚಿಕ್ಕೋಡಿ: ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ (Physical Abuse) ಯತ್ನಿಸಿದ ಕಾಮುಕನನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಯಬಾಗ ಪಟ್ಟಣದ ಕೈರಕೋಡಿ ನಿವಾಸಿ ಸುನೀಲ್ ದೀಪಾಳೆ ಎಂಬಾತನಿಂದ ಕೃತ್ಯ ನಡೆದಿದೆ.

ಸುನೀಲ್ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಪಟ್ಟಣದ ಕಂಚರವಾಡಿ ರೋಡ್ ಕಡೆಯಿಂದ ತೆರಳುತ್ತಿದ್ದಳು. ಈ ವೇಳೆ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ಮೇಲೆ ಕೂರಿಸಿಕೊಂಡಿದ್ದಾನೆ. ನಂತರ ನಿರ್ಜನ ಪ್ರದೇಶದ ಕಡೆಗೆ ಕರೆದ್ಯೊಯಲು ಯತ್ನಿಸಿದ್ದಾನೆ. ಇದರಿಂದ ಗಾಬರಿಗೊಂಡ ಬಾಲಕಿ ಗಾಡಿ ನಿಲ್ಲಿಸಲು ಹೇಳಿದ್ದಾಳೆ. ಆದರೆ ನಿಲ್ಲಸದೇ ಇದ್ದಾಗ ಬಾಲಕಿ ಕಿರುಚಾಡಿದ್ದಾಳೆ. ಆಕೆಯ ಕಿರುಚಾಟ ಕೇಳಿ ಸ್ಥಳಕ್ಕೆ ಸ್ಥಳೀಯರು ದೌಡಾಯಿಸಿದ್ದಾರೆ.

ಕೂಡಲೇ ಸುನೀಲ್‌ನನ್ನು ಹಿಡಿದುಕೊಂಡ ಸ್ಥಳೀಯರು ಅತ್ಯಾಚಾರಕ್ಕೆ ಯತ್ನಿಸಿದ್ದು ತಿಳಿಯುತ್ತಿದ್ದಂತೆ ಧರ್ಮದೇಟು ನೀಡಿ ರಾಯಬಾಗ ಪೊಲೀಸ್‌ರಿಗೆ ಒಪ್ಪಿಸಿದ್ದಾರೆ. ಆರೋಪಿಗೆ ರಾಯಬಾಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Love Case : ಪ್ರೀತಿಗೆ ಪೋಷಕರ ವಿರೋಧ; ಒಬ್ಬರಿಗೊಬ್ಬರು ತಬ್ಬಿಕೊಂಡು ನೇಣಿಗೆ ಶರಣಾದ ಪ್ರೇಮಿಗಳು

ಹೊಸಕೋಟೆಯಲ್ಲಿ ಬಾಲ್ಯ ವಿವಾಹಕ್ಕೆ ಯತ್ನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕನಕ‌ ಭವನದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಪ್ಪಿಸಿದ್ದಾರೆ. 15 ವರ್ಷದ ಬಾಲಕಿಗೆ ಮದುವೆ ಮಾಡಲು ಪೋಷಕರು ಮುಂದಾಗಿದ್ದರು. ಆರತಕ್ಷತೆ ಮುಗಿಸಿ ಮದುವೆಗೆ ಅರಿಶಿನ ಶಾಸ್ತ್ರ ಮಾಡುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಅಧಿಕಾರಿಗಳು ಮದುವೆ ನಿಲ್ಲಿಸಿದ್ದಾರೆ.

ಹೊಸಕೋಟೆ ನಗರದ ಕನಕ ಭವನದಲ್ಲಿ ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಿದ್ದಾರೆ. ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ‌ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮೀ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಮದುವೆ ನಿಲ್ಲಿಸಿ, ಬಾಲಕಿಯನ್ನು ವಶಕ್ಕೆ ಪಡೆದು ಮಹಿಳಾ ಕೇಂದ್ರಕ್ಕೆ ಕರೆತಂದಿದ್ದಾರೆ. ಪೋಷಕರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Love Case : ಪ್ರೀತಿಗೆ ಪೋಷಕರ ವಿರೋಧ; ಒಬ್ಬರಿಗೊಬ್ಬರು ತಬ್ಬಿಕೊಂಡು ನೇಣಿಗೆ ಶರಣಾದ ಪ್ರೇಮಿಗಳು

Love Case : ಪ್ರೀತಿಗೆ ಯುವತಿ ಪೋಷಕರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು (Self Harming) ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

VISTARANEWS.COM


on

By

Koo

ಆನೇಕಲ್: ಪ್ರೀತಿಗೆ ಪೋಷಕರ (Love Case) ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಪ್ರಿಯಕರನ ಮನೆಯ ಫ್ಯಾನಿಗೆ ಇಬ್ಬರು ಒಬ್ಬರಿಗೊಬ್ಬರು ತಬ್ಬಿಕೊಂಡು ನೇಣು ಬಿಗಿದುಕೊಂಡಿದ್ದಾರೆ. ತಮಿಳುನಾಡಿನ ಡೆಂಕಣಿಕೋಟೆಯ ಕೆಳಮಂಗಲ ಸಮೀಪದ ಗೌತಾಲಂ ಗ್ರಾಮದಲ್ಲಿ ಘಟನೆ ನಡೆದಿದೆ.

ಗೌತಾಲಂ ಗ್ರಾಮದ ನರಸಿಂಹಮೂರ್ತಿ (22), ಬಾಚಪ್ಪನಟ್ಟಿ ಗ್ರಾಮದ ಯುವಶ್ರೀ (17) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ನರಸಿಂಹಮೂರ್ತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಯುವಶ್ರೀ ಕೃಷ್ಣಗಿರಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು.

Love case
Love case

ಕೆಲ ವರ್ಷಗಳಿಂದ ನರಸಿಂಹ ಮೂರ್ತಿ ಹಾಗೂ ಯುವಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿ ವಿಚಾರ ತಿಳಿದ ಯುವತಿ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಾತ್ರವಲ್ಲದೇ ಕಳೆದ ತಿಂಗಳು ಯುವತಿ ಪೋಷಕರಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನರಸಿಂಹಮೂರ್ತಿ ಯುವಶ್ರೀಗೆ ಕಿರುಕುಳ ನೀಡುತ್ತಿದ್ದಾನೆಂದು ದೂರು ಕೊಟ್ಟಿದ್ದರು.

ಇದನ್ನೂ ಓದಿ: Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

ಡೆಂಕಣಿಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಯುವತಿ ಪೋಷಕರು ಪ್ರಕರಣ ದಾಖಲಿಸಿದ್ದರು. ಪೊಲೀಸರು ನರಸಿಂಹಮೂರ್ತಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಕಳೆದ ಹತ್ತು‌ ದಿನಗಳ ಹಿಂದೆಯಷ್ಟೇ ನರಸಿಂಹಮೂರ್ತಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ.

ಜೈಲಿನಿಂದ ಹೊರಬಂದ ಬಳಿಕ ಯುವತಿ ಜತೆ ನರಸಿಂಹಮೂರ್ತಿ ನಿರಂತರ ಫೋನ್‌ ಸಂಪರ್ಕ ಬೆಳೆಸಿದ್ದ. ನಿನ್ನೆ ಶನಿವಾರ ಸಂಜೆ ಕಾಲೇಜು ಮುಗಿಸಿ ನರಸಿಂಹಮೂರ್ತಿ ಮನೆಗೆ ಹೋಗಿದ್ದ ಯುವಶ್ರೀ ಇಬ್ಬರು ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಪ್ರೀತಿಗೆ ಯುವತಿ ಪೋಷಕರು ವಿರೋಧದಿಂದ ಬೇಸತ್ತ ಇವರಿಬ್ಬರು ಬಾಗಿಲು ಹಾಕಿಕೊಂಡು ಮನೆಯೊಳಗೆ ಇಬ್ಬರು ಫ್ಯಾನಿಗೆ ನೇಣಿಗೆ ಶರಣಾಗಿದ್ದಾರೆ.

ಮನೆಯ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡ ಯುವಕನ ಪೋಷಕರು, ಬಾಗಿಲು ಮುರಿದು ಒಳ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಡೆಂಕಣಿಕೋಟೆ ಡಿವೈಎಸ್‌ಪಿ ಶಾಂತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಡೆಂಕಣಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

Actor Darshan : ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ ಬಂಧನವಾಗಿದೆ. ಈ ಮಧ್ಯೆ ನಟನ ಗೆಳತಿ ಪವಿತ್ರಾ (Pavithra Gowda) ಲಾಕ್‌ ಆಗಿದ್ದೆ ರೋಚಕವಾಗಿದೆ. ಇನ್ನೂ ತನ್ನ ಜತೆಗೆ ಇದ್ದ ಹುಡುಗರನ್ನು ನಂಬಿಯೇ ನಾನು ಕೆಟ್ಟಿದ್ದು ಎಂದು ದರ್ಶನ್‌ ಅಳಲು ತೊಡಿಕೊಂಡಿದ್ದಾರೆ. ಇಷ್ಟಕ್ಕೂ ಬಂಧನದ ದಿನ ಏನೆಲ್ಲ ಆಯಿತು ಎಂಬ ಇಂಟರೆಸ್ಟಿಂಗ್‌ ಸ್ಟೋರಿ ಇಲ್ಲಿದೆ.

VISTARANEWS.COM


on

By

Actor darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌(Actor Darshan) ಗ್ಯಾಂಗ್‌ ಜೈಲುಪಾಲಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಪೊಲೀಸರು ಶುರು ಮಾಡಿದ್ದಾರೆ. ಈ ಮಧ್ಯೆ ಪೊಲೀಸರ ಬಳಿ ದರ್ಶನ್‌ ಆಪ್ತೆ ಪವಿತ್ರಾಗೌಡ ಲಾಕ್ ಆಗಿದ್ದೆ ರೋಚಕವಾಗಿದೆ.

ದರ್ಶನ್ ಬಂಧನಕ್ಕೆ ಹೊರಟಿದ್ದ ವೇಳೆಯೇ ಪೊಲೀಸರು ಪವಿತ್ರಾಗೂ ಬಲೆ ಬೀಸಿದ್ದರು. ಜೂನ್ 11ರ ಬೆಳಗ್ಗೆ ದರ್ಶನ್ ಬಂಧಿಸಲು ಮೈಸೂರಿಗೆ ತೆರಳಿದ್ದಾಗ, ಈ ವೇಳೆ ಎರಡು ತಂಡ ರಚಿಸಿ ಪವಿತ್ರಾ ಗೌಡಗೂ ಬಲೆ ಬೀಸಿದ್ದರು. ಆದರೆ ಪೊಲೀಸರ ಎರಡೂ ತಂಡಕ್ಕೂ ಚಾಲಾಕಿ ಪವಿತ್ರಾ ಸಿಕ್ಕಿರಲಿಲ್ಲ.

ಹೀಗಾಗಿ ಮಾಸ್ಟರ್‌ ಪ್ಲ್ಯಾನ್‌ ಮಾಡಿದ್ದ ಪೊಲೀಸರು ಮೈಸೂರಿನಲ್ಲೇ ದರ್ಶನ್ ಮೂಲಕವೇ ಪವಿತ್ರಾಳನ್ನು ಸಂಪರ್ಕಿಸಿದ್ದರು. ದರ್ಶನ್ ಫೋನ್‌ನಿಂದಲೇ ಪವಿತ್ರಾಗೌಡಗೆ ಫೋನ್ ಮಾಡಿಸಿ ಎಲ್ಲೂ ಹೋಗದಂತೆ ಸೂಚನೆ ನೀಡಲಾಗಿತ್ತು. ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ಹೋಗು ಎಂದು ದರ್ಶನ್‌ ಪವಿತ್ರಾಗೆ ಹೇಳಿದ್ದರು. ಹೀಗಾಗಿ ದರ್ಶನ್ ಮಾತಿನಂತೆ ಪೊಲೀಸ್ ಠಾಣೆಗೆ ಪವಿತ್ರಾ ಹಾಜರಾಗಿದ್ದರು. ಪವಿತ್ರಾ ಕಾಮಾಕ್ಷಿಪಾಳ್ಯ ಠಾಣೆಯ ಬದಲು ಆರ್ ಆರ್ ನಗರ ಠಾಣೆಗೆ ಹಾಜರಾಗಿದ್ದಳು. ತದನಂತರ ಕಾಮಾಕ್ಷಿಪಾಳ್ಯ ಪೊಲೀಸರು ಕರೆತಂದು ಬಂಧಿಸಿದ್ದರು.

ಇದನ್ನೂ ಓದಿ:Actor Darshan: ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಅರ್ಜಿ ವಿಚಾರಣೆ ಸೆ.5ಕ್ಕೆ ಮುಂದೂಡಿದ ಹೈಕೋರ್ಟ್

ಠಾಣೆಗೆ ಬಂದ ಕೂಡಲೇ ಪೊಲೀಸರ ಮುಂದೆ ದರ್ಶನ್ ಹೇಳಿದ್ದೇನು?

ಮೈಸೂರಿನಲ್ಲಿ ಬಂಧಿಸಿ ದರ್ಶನ್‌ನನ್ನು ಬೆಂಗಳೂರಿಗೆ ಕರೆತರಲಾಗಿತ್ತು. ಠಾಣೆಗೆ ಬರುತ್ತಿದ್ದಂತೇ ದರ್ಶನ್ ಹೇಳಿದ ಮೊದಲ ಮಾತೇನು ಗೊತ್ತಾ? ನನ್ನ ಜತೆ‌ ಇದ್ದ ಈ ಹುಡುಗರಿಂದ ನಾನು ಹಾಳಾದೆ ಎಂದಿದ್ದರಂತೆ. ಹುಡುಗರನ್ನು ನಂಬಿ ನಾನು ಕೆಟ್ಟೆ ಎಂದು ಹೇಳಿಕೊಂಡಿದ್ದರಂತೆ.

ಚಾರ್ಜ್‌ಶೀಟ್‌ ಸಲ್ಲಿಸಲು ತಯಾರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರಿಂದ ತಯಾರಿ ನಡೆದಿದೆ. ಇಲ್ಲಿಯವರೆಗೆ ಸಾಕ್ಷ್ಯ ಕಲೆ‌ ಹಾಕಿ,ಸ್ಥಳ ಮಹಜರು ನಡೆಸಿ,ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದೆ. ಬರೋಬ್ಬರಿ 52 ಸ್ಥಳ ಮಹಜರು,150 ಜನರ ಹೇಳಿಕೆ ದಾಖಲಿಸಿದ್ದಾರೆ. ಚಿತ್ರದುರ್ಗದ ಕಿಡ್ನ್ಯಾಪ್ ಜಾಗದಿಂದ ಹಿಡಿದು ಮೃತದೇಹ ಎಸೆದಿದ್ದ ಜಾಗದವರೆಗೆ ಮಹಜರ್ ಮಾಡಲಾಗಿದೆ.

ಪಟ್ಟಣಗೆರೆ ಶೆಡ್, ದರ್ಶನ್ ನಿವಾಸ, ಪವಿತ್ರಾ ಗೌಡ ನಿವಾಸ ಸೇರಿದಂತೆ ಸ್ಟೋನಿ ಬ್ರೂಕ್ ಪಬ್, ಮೃತ ದೇಹ ಎಸೆದ ಸತ್ವ ಅಪಾರ್ಟ್ ಮೆಂಟ್ ಎದುರಿನ‌ ಕಾಲುವೆ ಸೇರಿದಂತೆ ಕೊಲೆಯ ನಂತರದ‌ ಮಾತುಕತೆ ಜಾಗಗಳು ಸೇರಿ 52 ಕಡೆ ಸ್ಥಳ ಮಹಜರು ಮಾಡಲಾಗಿದೆ. ಪ್ರಕರಣದಲ್ಲಿ ಸಾಕ್ಷಿಯಾಗಿರುವ 150 ಜನರ‌ ಹೇಳಿಕೆ‌ ದಾಖಲಾಗಿದೆ.

ಘಟನೆ ಸಂಬಂಧಿಸಿದಂತೆ ಆರೋಪಿಗಳು ಎಲ್ಲೆಲ್ಲಿ ತೆರಳಿದ್ದರು. ಯಾರ್ಯಾರ ಸಂಪರ್ಕ ಮಾಡಿದ್ದರು? ಪೆಟ್ರೋಲ್ ಬಂಕ್ ಸಿಬ್ಬಂದಿ‌, ಹೋಟೆಲ್ ಸಿಬ್ಬಂದಿ, ಸಹಚರರ ಹೇಳಿಕೆ ಸೇರಿ ಒಟ್ಟಾರೆಯಾಗಿ ಬರೋಬ್ಬರಿ 150 ಕ್ಕೂ ಹೆಚ್ಚು ಜನರ ಹೇಳಿಕೆ ದಾಖಲಾಗಿದೆ.

ಪುಸ್ತಕದ ಮೊರೆ ಹೋದ ದರ್ಶನ್‌

ನಟ ದರ್ಶನ್ ಜೈಲಿನಲ್ಲಿ ಕಳೆದ 64 ದಿನದಿಂದ ಮಂಕಾಗಿ ಕಾಲ ಕಳೆಯುತ್ತಿದ್ದಾರೆ. ನಿಧಾನವಾಗಿ ಜೈಲಿನ ಪರಿಸರಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ. ಬೇಜಾರು ಕಳೆಯೋದಕ್ಕೆ ವಾಲಿಬಾಲ್ ಆಟಕ್ಕೆ ಇಳಿದಿದ್ದಾರೆ. ಈಗಾಗಲೇ ಜೈಲೊಳಗಡೆ ಪುಸ್ತಕದ ಮೊರೆ ಹೋಗಿದ್ದು, ಜತೆಗೆ ಬೇಜಾರು ಕಳೆಯಲು ವಾಲಿಬಾಲ್ ಕೂಡ ಆಡುತ್ತಿದ್ದಾರೆ. ಜೈಲಿನ‌ ಇತರೆ ಖೈದಿಗಳ‌ ಜತೆ ಸೇರಿ ವಾಲಿಬಾಲ್ ಆಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karkala Shocker: ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿದ ಅಲ್ತಾಫ್‌ಗೆ ಕಠಿಣ ಶಿಕ್ಷೆಯಾಗಲಿ ಎಂದ ಮುಸ್ಲಿಂ ಒಕ್ಕೂಟ

Karkala Shocker: ಕಾರ್ಕಳದಲ್ಲಿ ಹಿಂದೂ ಯುವತಿಗೆ ಮತ್ತು ಬರಿಸುವ ಔಷಧ ನೀಡಿ ಮುಸ್ಲಿಂ ಯುವಕ ಅತ್ಯಾಚಾರ ಎಸಗಿದ ಪ್ರಕರಣದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟವೂ ಪ್ರಕರಣವನ್ನು ಖಂಡಿಸಿದೆ. ಹಿಂದೂ ಸಹೋದರಿ ಮೇಲಿನ ಅತ್ಯಾಚಾರವನ್ನು ಖಂಡಿಸುತ್ತೇವೆ ಎಂದು ಮುಸ್ಲಿಂ ಜಿಲ್ಲಾ ಒಕ್ಕೂಟದ ಮಾಜಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶರೀಫ್ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Karkala Shocker
Koo

ಉಡುಪಿ: ಕಾರ್ಕಳದಲ್ಲಿ (Karkala News) ಹಿಂದೂ ಯುವತಿಗೆ (Hindu Girl) ಮತ್ತು ಬರಿಸುವ ಔಷಧ ನೀಡಿ ಮುಸ್ಲಿಂ ಯುವಕ ಅತ್ಯಾಚಾರ ಎಸಗಿದ (Physical Abuse) ಪ್ರಕರಣದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟವೂ ಪ್ರಕರಣವನ್ನು ಖಂಡಿಸಿದೆ. ಹಿಂದೂ ಸಹೋದರಿ ಮೇಲಿನ ಅತ್ಯಾಚಾರವನ್ನು ಖಂಡಿಸುತ್ತೇವೆ ಎಂದು ಮುಸ್ಲಿಂ ಜಿಲ್ಲಾ ಒಕ್ಕೂಟದ ಮಾಜಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶರೀಫ್ ಪ್ರತಿಕ್ರಿಯಿಸಿದ್ದಾರೆ.

ʼʼಯುವತಿಯನ್ನ ಕರೆದುಕೊಂಡು ಹೋಗಿ ಮಾದಕ ದ್ರವ್ಯ ನೀಡಿ ಅತ್ಯಾಚಾರ ಮಾಡಲಾಗಿದೆ. ಅತ್ಯಾಚಾರ ಮಾಡಿದ ವಿಕೃತ ಮನಸ್ಸಿನ ಕಾಮುಕ ಅಲ್ತಾಫ್ ಕಠಿಣ ಶಿಕ್ಷೆಯಾಗಲಿ. ಕಾರ್ಕಳದಲ್ಲಿ ನಾವು ಸೌಹಾರ್ದತೆಯನ್ನು ಬಯಸುತ್ತೇವೆ. ಕಾರ್ಕಳಕ್ಕೆ ಸೌಹಾರ್ದತೆಯ ಇತಿಹಾಸವಿದೆʼʼ ಎಂದು ಅವರು ತಿಳಿಸಿದ್ದಾರೆ.

ʼʼಇದುವರೆಗೂ ಕಾರ್ಕಳದಲ್ಲಿ ಸೌಹಾರ್ದತೆ ಕಾಪಾಡಿಕೊಂಡು ಬಂದಿದ್ದೇವೆ. ಮುಂದೆಯೂ ಕಾಪಾಡಿಕೊಳ್ಳುತ್ತೇವೆ. ಹೊರ ಜಿಲ್ಲೆಯಿಂದ ಬಂದಂತಹ ಅಲ್ತಾಫ್‌ನಂತಹ ವ್ಯಕ್ತಿಗಳು ಬಾಡಿಗೆ ಮನೆಯಲ್ಲಿ ಉಳಿದು ಇಂತಹ ಪ್ರಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಅಲ್ತಾಫ್ ಈ ಹಿಂದೆ ಬಂಗ್ಲೆ ಗುಡ್ಡೆ ಪ್ರದೇಶದಲ್ಲಿ ಇಂತಹದ್ದೇ ಕೃತ್ಯ ಎಸಗಲು ಹೋಗಿ ಯುವಕರಿಂದ ಪೆಟ್ಟು ತಿಂದಿದ್ದ. ಇದೀಗ ಮತ್ತೆ ನೀಚ ಕೃತ್ಯ ಎಸಗಿದ್ದಾನೆʼʼ ಎಂದು ಮೊಹಮ್ಮದ್ ಶರೀಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ʼʼಈ ಕೃತ್ಯ ಮಾನವ ಸಮುದಾಯಕ್ಕೆ ಮಾಡಿದಂತಹ ಘೋರ ಅನಾಚಾರ. ಕೇವಲ ಹಿಂದೂ ಸಮಾಜವಲ್ಲ ಪೂರ್ಣ ಸಮಾಜವೇ ಎಚ್ಚೆತ್ತುಕೊಳ್ಳಬೇಕಾದ ಪರಿಸ್ಥಿತಿ ಇದೆ. ಪ್ರಕರಣದಲ್ಲಿ ಮಾದಕ ದ್ರವ್ಯ ಬಳಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಾದಕ ದ್ರವ್ಯ ಸುಲಭದಲ್ಲಿ ಸಿಗುವಂತಿದೆ. ಮಾದಕ ದ್ರವ್ಯ ಜಾಲದ ತಂಡವನ್ನ ಪತ್ತೆ ಹಚ್ಚಿ ಅವರಿಗೂ ಕಠಿಣ ಶಿಕ್ಷೆಯನ್ನು ನೀಡಬೇಕುʼʼ ಎಂದು ಆಗ್ರಹಿಸಿದ್ದಾರೆ.

ʼʼಘಟನೆ ನಡೆದ ಒಂದು ಗಂಟೆಯೊಳಗೆ ಆರೋಪಿಯನ್ನ ಪತ್ತೆ ಹಚ್ಚಿದ ಪೊಲೀಸ್ ಇಲಾಖೆಗೆ ಅಭಿನಂದನೆಗಳು. ಇಂದು ನಾವು ನಮ್ಮ ಸಮುದಾಯದಿಂದಲೇ ಅಲ್ತಾಫ್‌ನನ್ನು ಹೊರಗಿಡುವ ನಿರ್ಣಯವನ್ನು ಕೈಗೊಂಡಿದ್ದೇವೆ. ಇಂತಹ ವ್ಯಕ್ತಿಗಳಿಂದ ನಮ್ಮ ಸಮುದಾಯಕ್ಕೆ ಕೆಟ್ಟ ಹೆಸರು. ಇನ್ನು ನಮ್ಮ ಸಮುದಾಯದ ಯಾವುದೇ ವಕೀಲರು ಆರೋಪಿಯ ಪರವಾಗಿ ವಾದ ಮಾಡಬಾರದು. ಇದು ನಮ್ಮ ಮನವಿ. ಪೊಲೀಸ್ ಇಲಾಖೆ ಈ ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕುʼʼ ಎಂದು ಮೊಹಮ್ಮದ್ ಶರೀಫ್ ಹೇಳಿದ್ದಾರೆ.

ಇದನ್ನೂ ಓದಿ: Love Jihad: ಹಿಂದೂ ಯುವತಿಯ ಕರೆದೊಯ್ದ ಮುಸ್ಲಿಂ ಯುವಕ; ಕಾರ್ಕಳ ಪ್ರಕ್ಷುಬ್ಧ

ಏನಿದು ಪ್ರಕರಣ?

ಇನ್‌ಸ್ಟಾಗ್ರಾಂನಲ್ಲಿ (Instagram) ಸ್ನೇಹ ಬೆಳೆಸಿ ಹಿಂದೂ ಯುವತಿಯನ್ನು ಕರೆದೊಯ್ದ ಮುಸ್ಲಿಂ ಯುವಕ ಅಲ್ತಾಫ್, ಆಕೆಗೆ ಬಿಯರ್‌ನಲ್ಲಿ ಮತ್ತು ಬರಿಸುವ ಔಷಧ ಸೇರಿಸಿ ಕುಡಿಸಿ ಅತ್ಯಾಚಾರ ಎಸಗಿದ್ದ. ಇದಕ್ಕೆ ಆತನ ಇಬ್ಬರು ಸ್ನೇಹಿತರು ಸಹಕರಿಸಿದ್ದು, ಸಾಮೂಹಿಕ ಅತ್ಯಾಚಾರ ನಡೆದಿದೆಯೇ ಎಂಬುದು ಇನ್ನೂ ದೃಢಪಡಬೇಕಿದೆ. ಸದ್ಯ ಈ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಅಲ್ತಾಫ್ ಮತ್ತು ಇಬ್ಬರ ವಿರುದ್ಧ ಕಾರಿನಲ್ಲಿ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ರೇಪ್ ಮಾಡಿದ ಆರೋಪ ಪ್ರಕರಣ ದಾಖಲಾಗಿದೆ. ಮಧ್ಯಾಹ್ನ ಆಕೆಯನ್ನು ಕರೆದೊಯ್ದಿದ್ದ ಅಲ್ತಾಫ್, ಮಾದಕ ಪಾನೀಯ ಕುಡಿಸಿ ಮತ್ತು ಬರಿಸಿ ಸಂಜೆಯವರೆಗೆ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

Continue Reading
Advertisement
Mann Ki Baat
ದೇಶ54 seconds ago

Mann Ki Baat: ಚಂದ್ರಯಾನ-3ರ ಯಶಸ್ಸನ್ನು ದೇಶ ಮರೆಯಲು ಸಾಧ್ಯವೇ ಇಲ್ಲ: ʼಮನ್​ ಕಿ ಬಾತ್​ʼನಲ್ಲಿ ಮೋದಿ ಬಣ್ಣನೆ

Revathy Sampath
ಸಿನಿಮಾ9 mins ago

Revathy Sampath: ನಟಿಯ ಮೇಲೆ ಹಿರಿಯ ನಟನಿಂದ ಲೈಂಗಿಕ ದೌರ್ಜನ್ಯ; ಕೇರಳ ಚಿತ್ರರಂಗದಲ್ಲಿ ಮತ್ತೊಂದು ಕರಾಳ ವಿದ್ಯಮಾನ!

Health Expenditure
ಪ್ರಮುಖ ಸುದ್ದಿ19 mins ago

MLCs Health Expenditure: ಆರೋಗ್ಯಕ್ಕಾಗಿ ಲಕ್ಷ ಲಕ್ಷ ಕ್ಲೇಮ್; ಅತಿ ಹೆಚ್ಚು ಸರ್ಕಾರದ ಹಣ ಪಡೆದ ಎಂಎಲ್‌ಸಿಗಳು ಇವರೇ ನೋಡಿ!

Industrial City
ಬೆಂಗಳೂರು54 mins ago

Industrial City: ಹೊಸೂರಿನಲ್ಲಿ ಟಾಟಾ ಗ್ರೂಪ್‌ನಿಂದ ಇಂಡಸ್ಟ್ರಿಯಲ್‌ ಸಿಟಿ ನಿರ್ಮಾಣಕ್ಕೆ ಸಿದ್ಧತೆ; ಬೆಂಗಳೂರಿನ ಐಟಿ ಸಿಟಿ ಪಟ್ಟಕ್ಕೆ ಕುತ್ತು?

Yuvraj Singh
ಕ್ರೀಡೆ1 hour ago

Yuvraj Singh: ಐಪಿಎಲ್​ ಕೋಚಿಂಗ್​ ನಡೆಸಲಿದ್ದಾರೆ ಯುವರಾಜ್​ ಸಿಂಗ್; ಯಾವ ತಂಡ?

Physical abuse attempted rape of school girl The public who beat up the man
ಚಿಕ್ಕೋಡಿ1 hour ago

Physical Abuse : ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಥಳಿಸಿದ ಸಾರ್ವಜನಿಕರು

ಬೆಂಗಳೂರು ಗ್ರಾಮಾಂತರ2 hours ago

Love Case : ಪ್ರೀತಿಗೆ ಪೋಷಕರ ವಿರೋಧ; ಒಬ್ಬರಿಗೊಬ್ಬರು ತಬ್ಬಿಕೊಂಡು ನೇಣಿಗೆ ಶರಣಾದ ಪ್ರೇಮಿಗಳು

Cricket meets shooting
ಕ್ರೀಡೆ2 hours ago

Cricket Meets Shooting: ವಿಭಿನ್ನ ಶೈಲಿಯಲ್ಲಿ ಫೋಟೊಗೆ ಪೋಸ್​ ಕೊಟ್ಟ ಸೂರ್ಯಕುಮಾರ್​-ಮನು ಭಾಕರ್​

Gold Rate Today
ಚಿನ್ನದ ದರ2 hours ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬಂಗಾರ ಖರೀದಿಯ ಮುನ್ನ ಬೆಲೆ ಚೆಕ್‌ ಮಾಡಿ

Actor darshan
ಸ್ಯಾಂಡಲ್ ವುಡ್2 hours ago

Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ23 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌