ಸಹಾಯಕ್ಕಾಗಿ ಮೊರೆ ಇಡುತ್ತಿದ್ದವರ ಬಳಿ ತೆರಳಲು ಪರದಾಡಿದೆವು; ನೇಪಾಳ ಬಸ್‌ ದುರಂತದ ಪ್ರತ್ಯಕ್ಷದರ್ಶಿಯ ಭಯಾನಕ ಅನುಭವ - Vistara News

ವಿದೇಶ

ಸಹಾಯಕ್ಕಾಗಿ ಮೊರೆ ಇಡುತ್ತಿದ್ದವರ ಬಳಿ ತೆರಳಲು ಪರದಾಡಿದೆವು; ನೇಪಾಳ ಬಸ್‌ ದುರಂತದ ಪ್ರತ್ಯಕ್ಷದರ್ಶಿಯ ಭಯಾನಕ ಅನುಭವ

Tragic Bus Crash: ನೇಪಾಳದಲ್ಲಿ ಶುಕ್ರವಾರ ಭಾರತದ ಪ್ರಯಾಣಿಕರನ್ನೊಳಗೊಂಡ ಬಸ್‌ ನದಿಗೆ ಉರುಳಿ ಬಿದ್ದಿದ್ದು, ಈ ಅವಘಡದಲ್ಲಿ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ ಎಂದು ವರದಿಯೊಂದು ತಿಳಿಸಿದೆ. ನೇಪಾಳದ ತನಾಹುನ್ ಜಿಲ್ಲೆಯ ಮಾರ್ಸ್ಯಾಂಗ್ಡಿ ನದಿಗೆ ಬಸ್‌ ಉರುಳಿ ಈ ದುರಂತ ಸಂಭವಿಸಿದೆ. ಇದೀಗ ಪ್ರತ್ಯಕ್ಷದರ್ಶಿಯೊಬ್ಬರು ಈ ಮೈ ನಡುಗಿಸುವ ಅನುಭವವನ್ನು ವಿವರಿಸಿದ್ದಾರೆ.

VISTARANEWS.COM


on

Tragic Bus Crash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಠ್ಮಂಡು: ನೇಪಾಳದಲ್ಲಿ ಶುಕ್ರವಾರ ಭಾರತದ ಪ್ರಯಾಣಿಕರನ್ನೊಳಗೊಂಡ ಬಸ್‌ ನದಿಗೆ ಉರುಳಿ ಬಿದ್ದಿದ್ದು, ಈ ಅವಘಡದಲ್ಲಿ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ ಎಂದು ವರದಿಯೊಂದು ತಿಳಿಸಿದೆ. ಬಸ್‌ನಲ್ಲಿದ್ದ 43 ಪ್ರಯಾಣಿಕರ ಪೈಕಿ ಬಹುತೇಕರು ಭಾರತದವರು. ನೇಪಾಳದ ತನಾಹುನ್ ಜಿಲ್ಲೆಯ ಮಾರ್ಸ್ಯಾಂಗ್ಡಿ ನದಿಗೆ ಬಸ್‌ ಉರುಳಿ ಈ ದುರಂತ ಸಂಭವಿಸಿದೆ. ಇದೀಗ ಪ್ರತ್ಯಕ್ಷದರ್ಶಿಯೊಬ್ಬರು ಈ ಮೈ ನಡುಗಿಸುವ ಅನುಭವವನ್ನು ವಿವರಿಸಿದ್ದಾರೆ (Tragic Bus Crash).

“ಘಟನೆ ನಡೆದ 5ರಿಂದ 7 ನಿಮಿಷಗಳಲ್ಲಿ ನಾವು ಅಲ್ಲಿಗೆ ತಲುಪಿದೆವು. ಅಲ್ಲಿನ ದೃಶ್ಯ ನಿಜಕ್ಕೂ ಭಯಾನಕವಾಗಿತ್ತು” ಎಂದು ಪ್ರತ್ಯಕ್ಷದರ್ಶಿ, ಉದ್ಯಮಿ ಅರ್ಜುನ್ ಖನಾಲ್ ಕಠ್ಮಂಡು ಪೋಸ್ಟ್‌ಗೆ ತಿಳಿಸಿದ್ದಾರೆ. “ಬಸ್ ರಸ್ತೆಯಿಂದ ಸುಮಾರು 150 ಮೀಟರ್ ಕೆಳಗಡೆ ಹರಿಯುತ್ತಿರುವ ನದಿಗೆ ಬಿದ್ದಿತ್ತು. ಪ್ರಯಾಣಿಕರು ಸಹಾಯಕ್ಕಾಗಿ ಮೊರೆ ಇಡುತ್ತಿದ್ದರು. ಗಾಯಗೊಂಡ ಮೂವರು ಬಸ್ ಕಿಟಕಿಗಳ ಮೂಲಕ ಹೊರಗೆ ಹಾರಲು ಯತ್ನಿಸುತ್ತಿದ್ದರು. ಸಹಾಯಕ್ಕಾಗಿ ಮೊರೆ ಇಡುತ್ತಿರುವ ಜನರ ಬಳಿಗೆ ತೆರಳುವುದು ತುಂಬ ಕಷ್ಟವಾಗಿತ್ತುʼʼ ಎಂದು ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ನರೇಂದ್ರ ಮೋದಿ ಸಂತಾಪ

ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ”ನೇಪಾಳದ ತನಾಹುನ್ ಜಿಲ್ಲೆಯಲ್ಲಿ ನಡೆದ ಬಸ್‌ ದುರಂತದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಭಾರತೀಯ ರಾಯಭಾರ ಕಚೇರಿ ಸಂತ್ರಸ್ತರಿಗೆ ಎಲ್ಲ ರೀತಿಯ ನೆರವು ನೀಡಲು ಬದ್ಧವಾಗಿದೆʼʼ ಎಂದು ತಿಳಿಸಿದ್ದಾರೆ.

ನೇಪಾಳದ ಪ್ರಧಾನಿ ಕೆ.ಪಿ.ಶರ್ಮ ಒಲಿ (KP Sharma Oli) ಅವರೂ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. “ತನಾಹುನ್‌ನ ಅಬು ಖೈರೇನಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಪೋಖರಾದಿಂದ ಕಠ್ಮಂಡುವಿಗೆ ಪ್ರಯಾಣಿಸುತ್ತಿದ್ದ ಭಾರತೀಯ ನಾಗರಿಕರು ಮೃತಪಟ್ಟಿದ್ದಾರೆ. ಅವರಿಗೆ ಸಂತಾಪ ಸಲ್ಲಿಸುತ್ತಿದ್ದೇನೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಉತ್ತರ ಪ್ರದೇಶದ ನಂಬರ್‌ ಪ್ಲೇಟ್‌ ಹೊಂದಿರುವ ಈ ಬಸ್‌ನ ಅಪಘಾತಕ್ಕೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.

ವರದಿಯೊಂದರ ಪ್ರಕಾರ ಈ ಬಸ್‌ನಲ್ಲಿದ್ದ ಬಹುತೇಕ ಭಾರತೀಯರು ಮಹಾರಾಷ್ಟ್ರ ಮೂಲದವರು. ಸುಮಾರು 104 ಮಂದಿಯನ್ನು ಒಳಗೊಂಡ ಪ್ರಯಾಣಿಕರು 3 ಬಸ್‌ಗಳಲ್ಲಿ ನೇಪಾಳ ಪ್ರವಾಸ ಕೈಗೊಂಡಿದ್ದರು. ಮೃತರು ಮುಂಬೈನಿಂದ 470 ಕಿ.ಮೀ. ದೂರದಲ್ಲಿರುವ ಜಲ್ಗಾಂವ್ ಜಿಲ್ಲೆಯ ವರಗಾಂವ್, ದರಿಯಾಪುರ್, ತಲ್ವೇಲ್ ಮತ್ತು ಭೂಸಾವಲ್ ಮೂಲದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ನೇಪಾಳ: ನದಿಗೆ ಉರುಳಿದ ಭಾರತೀಯರು ಸೇರಿ 40 ಮಂದಿ ಪ್ರಯಾಣಿಸುತ್ತಿದ್ದ ಬಸ್‌; 14 ಮಂದಿ ಸಾವು?

ಮಹಾರಾಷ್ಟ್ರ ಸಚಿವರು ಹೇಳಿದ್ದೇನು?

ಮಹಾರಾಷ್ಟ್ರ ಸಚಿವ ಗಿರೀಶ್ ಮಹಾಜನ್ ಶುಕ್ರವಾರ ಮುಂಬೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ. ʼʼನೇಪಾಳದಲ್ಲಿ ನದಿಗೆ ಬಸ್‌ ಬಿದ್ದು 41 ಜನರು ಮೃತಪಟ್ಟಿದ್ದಾರೆ. ನಾವು ದೆಹಲಿಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದೇವೆ. 12 ಜನರನ್ನು ನೇಪಾಳ ಸೇನೆಯು ಆಸ್ಪತ್ರೆಗೆ ಸ್ಥಳಾಂತರಿಸಿದೆʼʼ ಎಂದು ತಿಳಿಸಿದ್ದಾರೆ. ಬಸ್ ನೇಪಾಳದ ಪೋಖಾರಾದಿಂದ ಕಠ್ಮಂಡುವಿಗೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Israel vs Hezbollah War: ಹೆಜ್ಬುಲ್ಲಾ ಉಗ್ರರ ಅಟ್ಟಹಾಸ; ಲೆಬನಾನ್‌ ಮೇಲೆ ರಾಕೆಟ್​ ದಾಳಿ ಆರಂಭಿಸಿದ ಇಸ್ರೇಲ್​; ಭಯಾನಕ ವಿಡಿಯೊ ಇಲ್ಲಿದೆ

Israel vs Hezbollah War: ಇಸ್ರೇಲ್‌ ವಾಯುಪಡೆಯ ಸಮರ ಹೆಲಿಕಾಪ್ಟರ್‌ಗಳು ಲೆಬನಾನ್‌ ಅನ್ನು ಟಾರ್ಗೆಟ್‌ ಮಾಡಿದ್ದಲ್ಲದೇ, ಗಡಿ ದಾಟಿ ಬಂದ ಬಂದೂಕುಧಾರಿಗಳನ್ನೂ ಹತ್ಯೆಗೈದಿದೆ. ಜತೆಗೆ ರಾಕೆಟ್​ ದಾಳಿ ಕೂಡ ನಡೆಸಿ ಹಲವು ಕಟ್ಟಡಗಳನ್ನು ನಾಶಪಡಿಸಿದೆ.

VISTARANEWS.COM


on

Israel vs Hezbollah War
Koo

ಟೆಲ್‌ ಅವಿವ್‌: ತಮ್ಮ ಮೇಲೆ ಹಠಾತ್‌ ಆಕ್ರಮಣಗೈಯಲು ಮುಂದಾಗಿರುವ ಹೆಜ್ಬುಲ್ಲಾ ಉಗ್ರ ಸಂಘಟನೆಗೆ ಇಸ್ರೇಲ್(Israel vs Hezbollah War)​ವೈಮಾನಿಕ ರಾಕೆಟ್​ ದಾಳಿಯ ಬಿಸಿ ಮುಟ್ಟಿಸಲು ಆರಂಭಿಸಿದೆ. ಭಾನುವಾರ ಬೆಳಗ್ಗಿನ ಜಾವ ಲೆಬನಾನ್​ ಮೇಲೆ ದಾಳಿ ಆರಂಭಿಸಿದೆ. ಅತ್ತ ಹೆಜ್ಬುಲ್ಲಾ ಉಗ್ರ ಸಂಘಟನೆ ಕೂಡ ಪ್ರತಿ ದಾಳಿ ನಡೆಸುತ್ತಿರುವ ಕಾರಣ ಇಸ್ರೇಲ್​ನಲ್ಲಿ ಮುಂದಿನ 48 ಗಂಟೆಗಳ ಕಾಲ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಲಾಗಿದೆ. ದಾಳಿಯ ಭೀಕರ ವಿಡಿಯೊಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ದೀಪಾವಳಿಯಲ್ಲಿ ಪಟಾಕಿ ಸಿಡಿಸಿದಂತೆ ರಾಕೆಟ್​ಗಳು ಸಿಡಿಯುತ್ತಿವೆ.

ಇಸ್ರೇಲ್‌ ವಾಯುಪಡೆಯ ಸಮರ ಹೆಲಿಕಾಪ್ಟರ್‌ಗಳು ಲೆಬನಾನ್‌ ಅನ್ನು ಟಾರ್ಗೆಟ್‌ ಮಾಡಿದ್ದಲ್ಲದೇ, ಗಡಿ ದಾಟಿ ಬಂದ ಬಂದೂಕುಧಾರಿಗಳನ್ನೂ ಹತ್ಯೆಗೈದಿದೆ. ಜತೆಗೆ ರಾಕೆಟ್​ ದಾಳಿ ಕೂಡ ನಡೆಸಿ ಹಲವು ಕಟ್ಟಡಗಳನ್ನು ನಾಶಪಡಿಸಿದೆ. ವರದಿಗಳ ಪ್ರಕಾರ 300 ರಾಕೆಟ್​ಗಳ ದಾಳಿಯನ್ನು ನಡೆಸಲು ಇಸ್ರೇಲ್​ ಮಿಲಿಟರಿ ಪಡೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಸದ್ಯ ಯಾವುದೇ ಸಾವು ನೋವುಗಳ ಬಗ್ಗೆ ತಿಳಿದುಬಂದಿಲ್ಲ. ಹಲವು ಕಟ್ಟಡಗಳು ಈಗಾಗಲೇ ದ್ವಂಸಗೊಂಡಿದೆ. ಲೆಬನಾನ್ ಗಡಿ ಭಾಗದಲ್ಲಿರುವ ನಾಗರಿಕರಿಗೆ ಇಸ್ರೇಲ್​ ಈಗಾಗಲೇ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚನೆಯನ್ನು ಕೂಡ ನೀಡಿದೆ.

ಹೆಜ್ಬುಲ್ಲಾ ಲೆಬನಾನ್‌ನಿಂದ ಇಸ್ರೇಲಿ ಪ್ರದೇಶದ ಕಡೆಗೆ 150 ಕ್ಕೂ ಹೆಚ್ಚು ಸ್ಪೋಟಕಗಳನ್ನು ಉಡಾವಣೆ ಮಾಡಿದೆ. ನಾವು ಭಯೋತ್ಪಾದಕರ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡಿದ್ದೇವೆ, ಅವರು ನಾಗರಿಕರನ್ನು ಗುರಿಯಾಗಿಸುತ್ತಾರೆ ಎಂದು ಇಸ್ರೇಲಿ ರಕ್ಷಣಾ ಪಡೆಗಳು ಎಕ್ಸ್​ನಲ್ಲಿ ಪೋಸ್ಟ್‌ ಮಾಡಿದೆ. ಮೂರು ದಿನಗಳ ಹಿಂದಷ್ಟೇ ಹೆಜ್ಬುಲ್ಲಾ ಉಗ್ರ ಸಂಘಟನೆ ಇಸ್ರೇಲ್‌ ತನ್ನ ವಶಕ್ಕೆ ಪಡೆದು­ಕೊಂಡಿರುವ ಗೋಲನ್‌ ಹೈಟ್ಸ್‌ ಮೇಲೆ 50ಕ್ಕೂ ಅಧಿಕ ರಾಕೆಟ್‌ಗಳನ್ನು ಉಡಾ­ಯಿಸಿತ್ತು. ಕಳೆದ ಒಂದು ವಾರದ ಹಿಂದೆ ಇಸ್ರೇಲ್, ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ (Ismail Haniyeh)ಅವರನ್ನು ಹತ್ಯೆಗೈದಿತ್ತು. ಇದರಿಂದ ಇರಾನ್, ಪ್ರತೀಕಾರ ತೀರಿಸಿಕೊಳ್ಳುವ ಮಾತನ್ನಾಡಿತ್ತು.

ಇದನ್ನೂ ಓದಿ Israel strike: ರಾಕೆಟ್ ದಾಳಿ; ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಯುದ್ಧದಲ್ಲೇ ಮುಳುಗಿರುವ ಇಸ್ರೇಲ್​​ಗೆ ಮತ್ತಷ್ಟು ಭಿಕ್ಕಟ್ಟಿನ ಸ್ಥಿತಿ ಇದೀಗ ನಿರ್ಮಾಣ ಆಗಿದೆ. ಒಂದೆಡೆ ಗಾಜಾ, ಇನ್ನೊಂದು ಕಡೆ ರಫಾದಲ್ಲಿ ಹಮಾಸ್​ ವಿರುದ್ಧ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿದೆ. ಜುಲೈ 28 ರಂದು Hezbollah, ಇಸ್ರೇಲ್ ಆಕ್ರಮಿತ ಗೋಲನ್ ಹೈಟ್ಸ್​ ಮೇಲೆ ರಾಕೆಟ್ ದಾಳಿ ನಡೆಸಿತ್ತು. ದಾಳಿ ವೇಳೆ 12 ಮಕ್ಕಳು ಸಾವನ್ನಪ್ಪಿದ್ದರು. ಇದರಿಂದ ರೊಚ್ಚಿಗೆದ್ದಿದ್ದ ಇಸ್ರೇಲ್, ಹಮಾಸ್​ಗೆ ಪಾಠ ಕಲಿಸಿದಂತೆ ಹೆಜ್ಬೊಲ್ಲಾಗೂ ಬುದ್ಧಿ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿತ್ತು. ಹೆಜ್ಬೊಲ್ಲಾ ರಾಕೆಟ್ ದಾಳಿಯ ಎರಡು ದಿನಗಳ ನಂತರ ಜುಲೈ 30 ರಂದು ಇಸ್ರೇಲ್, ಹೆಜ್ಬೊಲ್ಲಾದ ಉನ್ನತ ಕಮಾಂಡರ್​​ ಫೌದ್ ಶುಕರ್​ ಅವರನ್ನು ಹತ್ಯೆಗೈದಿತ್ತು. ಇಸ್ರೇಲ್​ನ 12 ಮಕ್ಕಳ ಸಾವಿಗೆ ಶುಕರ್ ಕಾರಣ ಎಂದು ಇಸ್ರೇಲ್ ಆರೋಪಿಸಿತ್ತು.

Continue Reading

ವಿದೇಶ

Pavel Durov Arrest: ಟೆಲಿಗ್ರಾಂ ಸಿಇಒ ಪಾವೆಲ್‌‌ ಫ್ರಾನ್ಸ್‌‌ನಲ್ಲಿ ಬಂಧನ; ಕಾರಣ ಏನು?

Pavel Durov Arrest:ರಷ್ಯಾ ಮೂಲದ ಪಾವೆಲ್‌ ದುರೋವ್‌, ದುಬೈನಲ್ಲಿ ನೆಲೆಸಿದ್ದಾರೆ. ಹಿಂದೊಮ್ಮೆ ಅವರು ಕೆಲವು ಸರ್ಕಾರಗಳು ತನ್ನ ಮೇಲೆ ಒತ್ತಡ ಹೇರಿದ್ದರೂ, ಟೆಲಿಗ್ರಾಮ್ “ತಟಸ್ಥ ವೇದಿಕೆ”ಯಾಗಿ ಉಳಿಯಬೇಕು ಎಂದು ಹೇಳಿದ್ದರು.

VISTARANEWS.COM


on

Pavel Durov Arrest
Koo

ಪ್ಯಾರಿಸ್​: ವಾಟ್ಸ್‌ಆ್ಯಪ್‌ ರೀತಿಯ ಮೆಸೆಂಜರ್‌ ಆ್ಯಪ್‌ ಆಗಿರುವ ಟೆಲಿಗ್ರಾಂ(Telegram) ಸಿಇಒ ಪಾವೆಲ್‌ ದುರೋವ್‌ (Pavel Durov) ಅವರನ್ನು ಪ್ಯಾರಿಸ್‌ ವಿಮಾನ ನಿಲ್ದಾಣದಲ್ಲಿ ಫ್ರೆಂಚ್(Pavel Durov Arrest) ಅಧಿಕಾರಿಗಳು ಬಂಧಿಸಿದ್ದಾರೆ. 39 ವರ್ಷದ ಟೆಕ್ ಉದ್ಯಮಿ ತನ್ನ ಖಾಸಗಿ ಜೆಟ್‌ನಲ್ಲಿ ಬಂದ ನಂತರ ಬಂಧಿಸಲಾಯಿತು ಎಂದು ಫ್ರೆಂಚ್ ಮಾಧ್ಯಮ ವರದಿ ಮಾಡಿದೆ. ಟೆಲಿಗ್ರಾಮ್ ಪ್ಲಾಟ್‌ಫಾರ್ಮ್‌ಗೆ ಸಂಬಂಧಿಸಿದ ಅಪರಾಧಗಳಿಗೆ ಸಂಬಂಧಿಸಿದ ವಾರಂಟ್ ಅಡಿಯಲ್ಲಿ ಡುರೊವ್ ಅವರನ್ನು ಬಂಧನವನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದುರೋವ್‌ ಅವರ ಬಂಧನದ ಸುದ್ದಿ ಕೇಳಿ ಕೆಲವು ರಷ್ಯಾದ ರಾಜಕಾರಣಿಗಳು ಮತ್ತು ರಾಜತಾಂತ್ರಿಕರು ಫ್ರಾನ್ಸ್‌ನ ಕ್ರಮಗಳನ್ನು ಟೀಕಿಸಿದ್ದಾರೆ. ವಿಶ್ವಾದ್ಯಂತ ಫ್ರೆಂಚ್ ರಾಯಭಾರ ಕಚೇರಿಗಳಲ್ಲಿ ಪ್ರತಿಭಟನೆಗೆ ಕರೆಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿವೆ. ಸುಮಾರು 900 ಮಿಲಿಯನ್ ಸಕ್ರಿಯ ಬಳಕೆದಾರರನ್ನು ಹೊಂದಿರುವ ಟೆಲಿಗ್ರಾಮ್, ಜಾಗತಿಕ ಸಂವಹನಗಳಲ್ಲಿ, ವಿಶೇಷವಾಗಿ ರಷ್ಯಾ, ಉಕ್ರೇನ್ ಮತ್ತು ಹಿಂದಿನ ಸೋವಿಯತ್ ಗಣರಾಜ್ಯಗಳಲ್ಲಿ ಗಮನಾರ್ಹವಾಗಿ ಮಾರ್ಪಟ್ಟಿದೆ. ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಶೋಧಿಸದ ಮಾಹಿತಿಯ ಮೂಲವಾಗಿ ಟೆಲಿಗ್ರಾಮ್ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಸರ್ಕಾರಿ ಅಧಿಕಾರಿಗಳು ಮತ್ತು ನಾಗರಿಕರು ಇಲ್ಲಿ ಹೆಚ್ಚಾಗಿ ಈ ಆ್ಯಪ್​ ಬಳಸುತ್ತಾರೆ.

ರಷ್ಯಾ ಮೂಲದ ಪಾವೆಲ್‌ ದುರೋವ್‌, ದುಬೈನಲ್ಲಿ ನೆಲೆಸಿದ್ದಾರೆ. ಹಿಂದೊಮ್ಮೆ ಅವರು ಕೆಲವು ಸರ್ಕಾರಗಳು ತನ್ನ ಮೇಲೆ ಒತ್ತಡ ಹೇರಿದ್ದರೂ, ಟೆಲಿಗ್ರಾಮ್ “ತಟಸ್ಥ ವೇದಿಕೆ”ಯಾಗಿ ಉಳಿಯಬೇಕು ಎಂದು ಹೇಳಿದ್ದರು.

ಕೆಲವು ದಿನಗಳ ಹಿಂದೆ ಪಾವೆಲ್‌ ದುರೋವ್‌ ಅವರು ಸ್ಫೋಟಕ ವಿಷಯವೊಂದನ್ನು ಬಹಿರಂಗಪಡಿದ್ದರು. ನಾನು ಮದುವೆಯನ್ನೇ ಆಗದೆ 100 ಮಕ್ಕಳ ತಂದೆಯಾಗಿದ್ದೇನೆ” ಎಂದು ಟೆಲಿಗ್ರಾಂ ಆ್ಯಪ್‌ನಲ್ಲಿಯೇ (Telegram App) ಹಂಚಿಕೊಂಡಿದ್ದಾರೆ. ವೀರ್ಯ ದಾನದ ಮೂಲಕ 100 ಮಕ್ಕಳ ಜನನಕ್ಕೆ ಕಾರಣರಾಗಿದ್ದೇನೆ ಎಂದು ಹೇಳಿದ್ದರು.

“ನಾನು 100 ಮಕ್ಕಳ ತಂದೆ ಎಂಬುದಾಗಿ ತಿಳಿಸಿದ್ದಾರೆ. ಒಮ್ಮೆಯೂ ಮದುವೆಯಾಗದ, ಏಕಾಂಗಿಯಾಗಿಯೇ ಬದುಕಲು ಇಚ್ಛಿಸಿರುವ ನನಗೆ ಇದು ಹೇಗೆ ಸಾಧ್ಯ” ಎಂದು ಅವರು ಪ್ರಶ್ನೆ ಹಾಕಿದ್ದಾರೆ. ಬಳಿಕ ಇದು ಹೇಗೆ ಸಾಧ್ಯ ಎಂಬುದನ್ನು ವಿವರಿಸಿದ್ದಾರೆ. “15 ವರ್ಷದ ಹಿಂದೆ ನನ್ನ ಗೆಳೆಯನೊಬ್ಬ ವಿಚಿತ್ರ ಮನವಿಯೊಂದಿಗೆ ನನ್ನ ಬಳಿ ಬಂದ. ಫಲವತ್ತತೆ (Fertility) ಸಮಸ್ಯೆಯಿಂದ ಬಳಲುತ್ತಿದ್ದು, ನಾನು ನನ್ನ ಹೆಂಡತಿ ಮಕ್ಕಳನ್ನು ಹೊಂದಲು ನೀನು ವೀರ್ಯ ದಾನ ಮಾಡಬೇಕು” ಎಂದ. “ಇದೆಲ್ಲ ತಮಾಷೆ ಎಂಬುದಾಗಿ ನಾನು ನಕ್ಕೆ. ಆದರೆ, ಆತ ಸೀರಿಯಸ್‌ ಆಗಿದ್ದ” ಎಂಬುದಾಗಿ ಪಾವೆಲ್‌ ದುರೋವ್‌ ತಿಳಿಸಿದ್ದರು.

ಇದನ್ನೂ ಓದಿ Pavel Durov: ಮದುವೆಯಾಗದೆ 100 ಮಕ್ಕಳಿಗೆ ತಂದೆಯಾದ ಟೆಲಿಗ್ರಾಂ ಸಿಇಒ ಪಾವೆಲ್‌ ದುರೋವ್! ಈತ ರಿಯಲ್‌ ಲೈಫ್‌ ‘ವಿಕ್ಕಿ ಡೋನರ್’

“ಮಕ್ಕಳ ಜನನಕ್ಕೆ ಕಾರಣವಾಗುವ ಸಾಮರ್ಥ್ಯ ಇರುವ ವ್ಯಕ್ತಿಯಿಂದ ವೀರ್ಯ ಪಡೆಯಬೇಕು ಎಂಬುದಾಗಿ ವೈದ್ಯರು ಹೇಳಿದ್ದಾರೆ” ಎಂದು ಗೆಳೆಯ ಮನವರಿಕೆ ಮಾಡಿದ. “ವೈದ್ಯರು ಕೂಡ ವೀರ್ಯ ದಾನ ಮಾಡುವುದು ನಾಗರಿಕ ಕರ್ತವ್ಯವಾಗಿದೆ” ಎಂಬುದಾಗಿ ನನ್ನನ್ನು ಒಪ್ಪಿಸಿದರು. “ವೈದ್ಯರು ಮನವರಿಕೆ ಮಾಡಿದ ಬಳಿಕ ನಾನು ವೀರ್ಯ ದಾನ ಮಾಡುತ್ತಲೇ ಬಂದೆ. ಈಗ ನಾನು 100 ಮಕ್ಕಳ ಜನನಕ್ಕೆ ಕಾರಣನಾಗಿದ್ದೇನೆ” ಎಂಬುದಾಗಿ ಟೆಲಿಗ್ರಾಂನಲ್ಲಿ ಪಾವೆಲ್‌ ದುರೋವ್‌ ಹೆಮ್ಮೆಯಿಂದ ಹೇಳಿಕೊಂಡಿದ್ದರು.

Continue Reading

ವಿದೇಶ

Israel strike: ರಾಕೆಟ್ ದಾಳಿ; ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

Israel strike: ಇಸ್ರೇಲ್ ನಾಗರಿಕರ ವಿರುದ್ಧ ನಡೆಯುತ್ತಿರುವ ದಾಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಲೆಬನಾನ್‌ನ್​ ವಿರುದ್ಧ ಸಮರಕ್ಕೆ ಇಳಿದಿರುವ ಇಸ್ರೇಲ್ ಮಿಲಿಟರಿ ಪಡೆ ಮುಂದಿನ 48 ಗಂಟೆಗಳ ಕಾಲ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿದೆ.

VISTARANEWS.COM


on

Israel strike
Koo

ಟೆಲ್ ಅವಿವ್​​​(ಇಸ್ರೇಲ್): ಲೆಬನಾನ್ ಗಡಿಯಲ್ಲಿ ಹೆಜ್ಬುಲ್ಲಾ ಉಗ್ರ ಸಂಘಟನೆಯೊಂದಿಗೆ (Hezbollah) ಸಂಘರ್ಷಕ್ಕೆ ಇಳಿದಿರುವ ಇಸ್ರೇಲ್(Israel strike)​, ಭಾನುವಾರ ಲೆಬನಾನ್‌ ಕಡೆ ಪೂರ್ವಭಾವಿ ದಾಳಿ ನಡೆಸಲು ತೀರ್ಮಾನಿಸಿದೆ. ಹೀಗಾಗಿ ಮುಂದಿನ 48 ಗಂಟೆಗಳ ಕಾಲ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಲಾಗಿದೆ. ಮೂರು ದಿನಗಳ ಹಿಂದಷ್ಟೇ ಹೆಜ್ಬುಲ್ಲಾ ಉಗ್ರ ಸಂಘಟನೆ ಇಸ್ರೇಲ್‌ ತನ್ನ ವಶಕ್ಕೆ ಪಡೆದು­ಕೊಂಡಿರುವ ಗೋಲನ್‌ ಹೈಟ್ಸ್‌ ಮೇಲೆ 50ಕ್ಕೂ ಅಧಿಕ ರಾಕೆಟ್‌ಗಳನ್ನು ಉಡಾ­ಯಿಸಿತ್ತು.

ಯುದ್ಧದಲ್ಲೇ ಮುಳುಗಿರುವ ಇಸ್ರೇಲ್​​ಗೆ ಮತ್ತಷ್ಟು ಭಿಕ್ಕಟ್ಟಿನ ಸ್ಥಿತಿ ಇದೀಗ ನಿರ್ಮಾಣ ಆಗಿದೆ. ಒಂದೆಡೆ ಗಾಜಾ, ಇನ್ನೊಂದು ಕಡೆ ರಫಾದಲ್ಲಿ ಹಮಾಸ್​ ವಿರುದ್ಧ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿದೆ. ಇದೀಗ ಲೆಬನಾನ್ ಗಡಿಯಲ್ಲಿ ಹೆಜ್ಬೊಲ್ಲಾದೊಂದಿಗೆ ಸಂಘರ್ಷಕ್ಕೆ ಇಳಿಯಬೇಕಾದ ಅನಿವಾರ್ಯತೆ ಎದುರಾಗಿದೆ.

“ಇಸ್ರೇಲ್ ನಾಗರಿಕರ ವಿರುದ್ಧ ನಡೆಯುತ್ತಿರುವ ದಾಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಲೆಬನಾನ್‌ನ್​ ವಿರುದ್ಧ ಸಮರಕ್ಕೆ ಇಳಿಯಲಿದ್ದೇವೆ, ಬೈರುತ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನಿಕಟವಾಗಿ ಗಮನಿಸುತ್ತಿದ್ದೇವೆ. ನಮ್ಮ ನಾಗರಿಕರನ್ನು ರಕ್ಷಿಸುವ ಸಲುವಾಗಿ ಎಲ್ಲ ರೀತಿಯ ಕಾರ್ಯ ವಿಧಾನವನ್ನು ಕಾರ್ಯಗತ ಮಾಡಲು ನಿರ್ಧರಿಸಿದ್ದೇವೆ” ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ತಿಳಿಸಿರುವುದಾಗಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

2 ದಿನಗಳ ಹಿಂದೆ ಲೆಬನಾನಿನ ಶಿಯಾ ಇಸ್ಲಾಮಿಸ್ಟ್​ ಪೊಲಿಟಿಕಲ್ ಪಾರ್ಟಿ ಮತ್ತು ಉಗ್ರರ ಗುಂಪು ಹೆಜ್ಬುಲ್ಲಾ, ಉತ್ತರ ಇಸ್ರೇಲ್ ಮೇಲೆ ರಾಕೆಟ್ ದಾಳಿ ಮಾಡಿತ್ತು. ದಾಳಿಯ ಬಗ್ಗೆ ಮೊದಲೇ ಅರಿತಿದ್ದ ಇಸ್ರೇಲ್, ಹೆಜ್ಬೊಲ್ಲಾಗೆ ದಿಟ್ಟ ಉತ್ತರ ನೀಡಿತ್ತು ಎನ್ನಲಾಗಿದ್ದು, ರಾಕೆಟ್​​ಗಳನ್ನು ಮಧ್ಯದಲ್ಲಿಯೇ ತಡೆದು ಅದನ್ನು ನಾಶ ಮಾಡಿದೆ ಎಂದು ವರದಿಯಾಗಿತ್ತು. ಇದೀಗ ಇಸ್ರೇಲ್​ ನೇರವಾಗಿ ಲೆಬನಾನಿನ ಮೇಲೆ ದಾಳಿಗೆ ಮುಂದಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ Ismail Haniyh Killing: ಹನಿಯೆಹ್‌ ಹತ್ಯೆ ಹಿಂದೆ ಇಸ್ರೇಲ್‌ನ ಮಾಸ್ಟರ್‌ ಪ್ಲ್ಯಾನ್‌? ಮೊಸಾದ್‌ನ ಸೀಕ್ರೆಟ್‌ ಏಜೆಂಟ್‌ಗಳಿಂದ ಬಾಂಬ್‌ ಸ್ಫೋಟ?

ದಕ್ಷಿಣ ಲೆಬನಾನ್​​ನ ಡೀರ್ ಸಿರಿಯಾನ್​​ನ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿತ್ತು. ಈ ವೇಳೆ 17 ವರ್ಷದ ಬಾಲಕ ಸಾವನ್ನಪ್ಪಿ 6 ಜನರು ಗಾಯಗೊಂಡಿದ್ದರು. ಇದಾದ ಬಳಿಕ ಹೆಜ್ಬೊಲ್ಲಾ, ಇಸ್ರೇಲ್ ಮೇಲೆ ರಾಕೆಟ್ ಉಡಾಯಿಸಿತ್ತು. ಕಳೆದ ಒಂದು ವಾರದ ಹಿಂದೆ ಇಸ್ರೇಲ್, ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ (Ismail Haniyeh)ಅವರನ್ನು ಹತ್ಯೆಗೈದಿತ್ತು. ಇದರಿಂದ ಇರಾನ್, ಪ್ರತೀಕಾರ ತೀರಿಸಿಕೊಳ್ಳುವ ಮಾತನ್ನಾಡಿತ್ತು.

ಜುಲೈ 28 ರಂದು Hezbollah, ಇಸ್ರೇಲ್ ಆಕ್ರಮಿತ ಗೋಲನ್ ಹೈಟ್ಸ್​ ಮೇಲೆ ರಾಕೆಟ್ ದಾಳಿ ನಡೆಸಿತ್ತು. ದಾಳಿ ವೇಳೆ 12 ಮಕ್ಕಳು ಸಾವನ್ನಪ್ಪಿದ್ದರು. ಇದರಿಂದ ರೊಚ್ಚಿಗೆದ್ದಿದ್ದ ಇಸ್ರೇಲ್, ಹಮಾಸ್​ಗೆ ಪಾಠ ಕಲಿಸಿದಂತೆ ಹೆಜ್ಬೊಲ್ಲಾಗೂ ಬುದ್ಧಿ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿತ್ತು. ಹೆಜ್ಬೊಲ್ಲಾ ರಾಕೆಟ್ ದಾಳಿಯ ಎರಡು ದಿನಗಳ ನಂತರ ಜುಲೈ 30 ರಂದು ಇಸ್ರೇಲ್, ಹೆಜ್ಬೊಲ್ಲಾದ ಉನ್ನತ ಕಮಾಂಡರ್​​ ಫೌದ್ ಶುಕರ್​ ಅವರನ್ನು ಹತ್ಯೆಗೈದಿತ್ತು. ಇಸ್ರೇಲ್​ನ 12 ಮಕ್ಕಳ ಸಾವಿಗೆ ಶುಕರ್ ಕಾರಣ ಎಂದು ಇಸ್ರೇಲ್ ಆರೋಪಿಸಿತ್ತು.

Continue Reading

ದೇಶ

Sunita Williams: ಮುಂದಿನ ವರ್ಷ ಫೆಬ್ರುವರಿಯಲ್ಲಿ ಭೂಮಿಗೆ ಮರಳಲಿದ್ದಾರೆ ಸುನೀತಾ ವಿಲಿಯಮ್ಸ್;‌ ನಾಸಾ ಘೋಷಣೆ

Sunita Williams: ಮುಂದಿನ ಫೆಬ್ರವರಿಯಲ್ಲಿ ಬುಚ್ ಮತ್ತು ಸುನಿತಾ ಕ್ರ್ಯೂ -9 ರೊಂದಿಗೆ ಹಿಂತಿರುಗುತ್ತಾರೆ ಮತ್ತು ಸ್ಟಾರ್ಲೈನರ್ ಸಿಬ್ಬಂದಿಯಿಲ್ಲದೆ ಹಿಂತಿರುಗುತ್ತಾರೆ ಎಂದು ನಾಸಾ ನಿರ್ಧರಿಸಿದೆ” ಎಂದು ನಾಸಾ ನಿರ್ವಾಹಕ ಬಿಲ್ ನೆಲ್ಸನ್ ಹೇಳಿದ್ದಾರೆ. ಬೋಯಿಂಗ್ ಬಾಹ್ಯಾಕಾಶ ನೌಕೆಯ ಥ್ರಸ್ಟರ್ ಅಸಮರ್ಪಕ ಕಾರ್ಯಗಳಿಂದ ಸುನಿತಾ ವಿಲಿಯಮ್ಸ್‌ ಮತ್ತು ಬುಚ್‌ ಹಿಂತಿರುಗುವುದು ವಿಳಂಬವಾಗಿದೆ ಎಂದು ಅವರು ಹೇಳಿದರು.

VISTARANEWS.COM


on

Sunita Williams
Koo

ವಾಷಿಂಗ್ಟನ್: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಆದರೆ, ಸುನೀತಾ ವಿಲಿಯಮ್ಸ್‌ ಹಾಗೂ ಮತ್ತೊಬ್ಬ ಗಗನಯಾತ್ರಿ ಬುಚ್ ವಿಲ್ಮೋರ್ (Butch Wilmore) ತಾಂತ್ರಿಕ ದೋಷದಿಂದಾಗಿ ಬಾಹ್ಯಕಾಶದಲ್ಲೇ ಸಿಲುಕಿರುವ ವಿಚಾರ ಎಲ್ಲರಿಗೂ ತಿಳಿದೇ ಇದೆ. ಇದೀಗ ಅವರು ವಾಪಾಸಾಗುವ ಬಗ್ಗೆ ಅಮೆರಿಕಸ ಬಾಹ್ಯಾಕಾಶ ಸಂಸ್ಥೆ(NASA) ಮಹತ್ವದ ಸುದ್ದಿಯೊಂದನ್ನು ಹೊರಹಾಕಿದೆ. ಈ ಇಬ್ಬರು ಗಗನಯಾತ್ರಿಗಳು ಮುಂದಿನ ವರ್ಷ ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ಹೇಳಿದೆ.

ಮುಂದಿನ ಫೆಬ್ರವರಿಯಲ್ಲಿ ಬುಚ್ ಮತ್ತು ಸುನಿತಾ ಕ್ರ್ಯೂ -9 ರೊಂದಿಗೆ ಹಿಂತಿರುಗುತ್ತಾರೆ ಮತ್ತು ಸ್ಟಾರ್ಲೈನರ್ ಸಿಬ್ಬಂದಿಯಿಲ್ಲದೆ ಹಿಂತಿರುಗುತ್ತಾರೆ ಎಂದು ನಾಸಾ ನಿರ್ವಾಹಕ ಬಿಲ್ ನೆಲ್ಸನ್ ಹೇಳಿದ್ದಾರೆ. ಬೋಯಿಂಗ್ ಬಾಹ್ಯಾಕಾಶ ನೌಕೆಯ ಥ್ರಸ್ಟರ್ ಅಸಮರ್ಪಕ ಕಾರ್ಯಗಳಿಂದ ಸುನಿತಾ ವಿಲಿಯಮ್ಸ್‌ ಮತ್ತು ಬುಚ್‌ ಹಿಂತಿರುಗುವುದು ವಿಳಂಬವಾಗಿದೆ ಎಂದು ಅವರು ಹೇಳಿದರು.

ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನವನ್ನು ಜೂನ್‌ 5ರಂದು ಆರಂಭಿಸಿದ್ದರು. ಜೂನ್‌ 6ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ಸ್ಟೇಷನ್‌ ತಲುಪಿದ್ದ ಅವರು ಒಂದು ವಾರ ಸಂಶೋಧನೆ ನಡೆಸಿ ವಾಪಸಾಗಬೇಕಿತ್ತು. ಆದರೆ, ತಾಂತ್ರಿಕ ಕಾರಣದಿಂದ ಅವರು ಅಲ್ಲಿಯೇ ಸಿಲುಕಿದ್ದಾರೆ. ಇವರು ಯಾವಾಗ ಬರುತ್ತಾರೆ ಎಂಬುದರ ಕುರಿತು ನಾಸಾ ಈಗ ಮಾಹಿತಿ ನೀಡಿದೆ.

“ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿರುವ ಸುನೀತಾ ವಿಲಿಯಮ್ಸ್‌ ಅವರು 2025ರ ಫೆಬ್ರವರಿಯಲ್ಲಿ ವಾಪಸಾಗಲಿದ್ದಾರೆ. ಇವರು ಬೋಯಿಂಗ್‌ ಸ್ಟಾರ್‌ಲೈನರ್‌ ಬದಲು ಸ್ಪೇಸ್‌ಎಕ್ಸ್‌ನ ಕ್ರ್ಯೂ ಡ್ರ್ಯಾಗನ್‌ನಲ್ಲಿ ವಾಪಸಾಗಲಿದ್ದಾರೆ. ಸ್ಟಾರ್‌ಲೈನರ್‌ನಲ್ಲಿ ಹಲವು ತಾಂತ್ರಿಕ ದೋಷಗಳು ಉಂಟಾಗಿರುವ ಕಾರಣ ಕ್ರ್ಯೂ ಡ್ರ್ಯಾಗನ್‌ನಲ್ಲಿ ಕರೆದುಕೊಂಡು ಬರಲು ತೀರ್ಮಾನಿಸಲಾಗಿದೆ” ಎಂಬುದಾಗಿ ನಾಸಾ ತಿಳಿಸಿದೆ.

ಸುನೀತಾ ವಿಲಿಯಮ್ಸ್‌ ಹಿನ್ನೆಲೆ

ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.

ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.

ಇದನ್ನೂ ಓದಿ: Sunita Williams: 2025ರವರೆಗೂ ಬಾಹ್ಯಾಕಾಶದಲ್ಲೇ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌; ನಾಸಾ ಘೋಷಣೆ

Continue Reading
Advertisement
Virat Kohli
ಕ್ರೀಡೆ3 mins ago

Virat Kohli: ಧವನ್‌ ವಿದಾಯದ ಕುರಿತು ವಿರಾಟ್​ ಕೊಹ್ಲಿ ಭಾವನಾತ್ಮಕ ಸಂದೇಶ

ಕರ್ನಾಟಕ27 mins ago

KAS Prelims exam: ಕೆಎಎಸ್‌ ಪರೀಕ್ಷೆ ಮುಂದೂಡಲು ಕೆಲವರಿಂದ ಲಾಬಿ; ಆದರೆ ಮುಂದೂಡುವುದಿಲ್ಲ ಎಂದ ಸರ್ಕಾರ

Nissan Magnite EZ
ಆಟೋಮೊಬೈಲ್31 mins ago

Nissan Magnite : ನಿಸ್ಸಾನ್‌ ಮ್ಯಾಗ್ನೈಟ್‌ ಇಜಡ್‌- ಶಿಫ್ಟ್‌ ಕಾರು ಹೇಗಿದೆ?; ಪವರ್‌, ಫೀಚರ್‌ಗಳು ಹೇಗಿವೆ? ಇಲ್ಲಿದೆ ವಿವರ

Narendra Modi
ದೇಶ31 mins ago

Narendra Modi: ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಸಾಧ್ಯವೇ ಇಲ್ಲದ ಪಾಪ; ಪ್ರಧಾನಿ ಮೋದಿ ಗುಡುಗು

Unified Pension Scheme
ವಾಣಿಜ್ಯ35 mins ago

Unified Pension Scheme: ಏಕೀಕೃತ ಪಿಂಚಣಿ ಯೋಜನೆ; ನೌಕರರಿಗೆ ಸಿಗುವ ಟಾಪ್‌ 9 ಪ್ರಯೋಜನಗಳಿವು

Actor Darshan Bindass in jail smoking cigarettes with rowdy-sheeters
ಸ್ಯಾಂಡಲ್ ವುಡ್37 mins ago

Actor Darshan : ರೌಡಿಶೀಟರ್‌ಗಳ ಜತೆಗೆ ಸಿಗರೇಟ್‌ ಸೇದುತ್ತಾ ಜೈಲಿನಲ್ಲಿ ನಟ ದರ್ಶನ್‌ ಬಿಂದಾಸ್‌ ಲೈಫ್!‌ ವೈರಲ್‌ ಆಯ್ತು ಫೋಟೊ

PAK vs BNG
ಕ್ರೀಡೆ53 mins ago

PAK vs BNG: ಪಾಕ್​ಗೆ ತವರಿನಲ್ಲೇ 10 ವಿಕೆಟ್​ ಹೀನಾಯ ಸೋಲು; ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾ

ಕರ್ನಾಟಕ1 hour ago

Price Support Scheme: ರೈತರಿಗೆ ಕೇಂದ್ರದಿಂದ ಗುಡ್‌ ನ್ಯೂಸ್; ಬೆಂಬಲ ಬೆಲೆಯಲ್ಲಿ ಹೆಸರು, ಸೂರ್ಯಕಾಂತಿ ಖರೀದಿಸಲು ರಾಜ್ಯಕ್ಕೆ ಸೂಚನೆ

Physical Abuse
ಕಲಬುರಗಿ1 hour ago

Physical Abuse : ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಎಸ್ಕೇಪ್; ಆತ್ಮಹತ್ಯೆಗೆ ಯತ್ನಿಸಿದ ಯುವತಿ

Viral News
ವೈರಲ್ ನ್ಯೂಸ್1 hour ago

ಸೋಷಿಯಲ್‌ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಬೆಂಗಳೂರು ಮೂಲದ ಯುವತಿಯ ಬೈಸೆಪ್ಸ್ ಫೋಟೊ; ಜಾತೀಯತೆಯ ಚರ್ಚೆಗೆ ಕಾರಣವೇನು?

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ1 day ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌