KEA : ಕೆಯುಡಬ್ಲ್ಯೂಎಸ್‌ಡಿಬಿ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿ ಪ್ರಕಟ; ಆ.27ರವರೆಗೆ ಆಕ್ಷೇಪಣೆಗೆ ಅವಕಾಶ - Vistara News

ಬೆಂಗಳೂರು

KEA : ಕೆಯುಡಬ್ಲ್ಯೂಎಸ್‌ಡಿಬಿ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿ ಪ್ರಕಟ; ಆ.27ರವರೆಗೆ ಆಕ್ಷೇಪಣೆಗೆ ಅವಕಾಶ

KEA: ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯ(Karnataka Urban Water Supply and Drainage Board) ಖಾಲಿ ಇರುವ ಸಿವಿಲ್‌ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಕೀ ಉತ್ತರ ಮತ್ತು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ.

VISTARANEWS.COM


on

KEA
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA), ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯ (KUWSDB) ಖಾಲಿ ಇರುವ ಒಟ್ಟು 50 ಎಇ ಹುದ್ದೆಗಳಿಗೆ ಫೆ.10 ರಿಂದ ಮಾ.10 ರವರೆಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ನಂತರ ಇದೇ ಆಗಸ್ಟ್‌ 11ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಅದರ ಕೀ ಉತ್ತರಗಳನ್ನು ಆ.12 ರಂದು ಪ್ರಕಟಿಸಲಾಗಿತ್ತು. ಆ. 15 ರವರೆಗೆ ಆಕ್ಷೇಪಣೆಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿತ್ತು. ಅದರಂತೆ ಪ್ರಾಧಿಕಾರದಲ್ಲಿ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರಿಂದ ಪರಿಶೀಲಿಸಿ ವಿಷಯ ತಜ್ಞರ ಶಿಫಾರಸ್ಸಿನಂತೆ ಆ. 20 ರಂದು ಪರಿಷ್ಕೃತ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಅದರಂತೆ ಆ. 11 ರಂದು ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಆ. 23ರಂದು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಪ್ರಕಟಿತ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಆ.27ರ ಸಂಜೆ 5:30ರ ಒಳಗೆ ಪೂರಕ ದಾಖಲೆಗಳೊಂದಿಗೆ ಕೆಇಎ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆಕ್ಷೇಪಣೆ ಲಿಂಕ್‌ನಲ್ಲಿ ಮಾತ್ರ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಅಂಚೆ/ಪತ್ರದ ಮೂಲಕ ಅಥವಾ ಇ-ಮೇಲ್ ಮೂಲಕ ಸಲ್ಲಿಸುವ ಅಥವಾ ಪೂರಕ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಎಕ್ಸ್‌ಮೂಲಕ ತಿಳಿಸಲಾಗಿದೆ.

ಇದನ್ನೂ ಓದಿ: Students Fighting: ಹುಡುಗಿ ವಿಷ್ಯಕ್ಕೆ ಕಿರಿಕ್‌; ಬೆಂಗಳೂರು-ತುಮಕೂರು ಹುಡುಗರ ಮಧ್ಯೆ ಹೊಡಿಬಡಿ‌

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಸಲ್ಲಿಸಿರುವ ಅರ್ಜಿ ಅಂಗೀಕೃತ ವಾಗಿರದಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಆ.26ರೊಳಗೆ ಪೂರಕ ದಾಖಲೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಈ ಬಗ್ಗೆ ಸೂಚನೆ ನೀಡಿದ್ದು, ಪ್ರಾಧಿಕಾರವು ಪೂರಕ ದಾಖಲೆಗಳನ್ನು ಪರಿಗಣಿಸಿ ಅರ್ಜಿಗಳನ್ನು ದೃಢೀಕರಿಸಲಿದೆ ಎಂದಿದ್ದಾರೆ. ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಯನ್ನು ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಪರಿಶೀಲಿಸಬಹುದು.

ಕಡ್ಡಾಯ ಕನ್ನಡ ಪರೀಕ್ಷೆ

ಗ್ರಾಮ ಆಡಳಿತ ಹುದ್ದೆಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಲೇಬೇಕು. ಸೆಪ್ಟೆಂಬರ್ 29ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗುವುದು.

ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಈ ಪರೀಕ್ಷೆಗೆ ತಪ್ಪದೇ ಹಾಜರಾಗಬೇಕೆಂದು ಸೂಚಿಸಲಾಗಿದೆ. ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021 ರ ಅನ್ವಯ, ಕನ್ನಡ ಭಾಷಾ ಪರೀಕ್ಷೆಯಲ್ಲಿ 150 ಅಂಕಗಳಿಗೆ ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಅಕ್ಟೋಬರ್ 27ರಂದು ಪತ್ರಿಕೆ- 1 ಮತ್ತು ಪತ್ರಿಕೆ-2 ಇವುಗಳನ್ನು ಒಳಗೊಂಡ ಸ್ಪರ್ಧಾತ್ಮಕ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ವಿವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

MLCs Health Expenditure: ಆರೋಗ್ಯಕ್ಕಾಗಿ ಲಕ್ಷ ಲಕ್ಷ ಕ್ಲೇಮ್; ಅತಿ ಹೆಚ್ಚು ಸರ್ಕಾರದ ಹಣ ಪಡೆದ ಎಂಎಲ್‌ಸಿಗಳು ಇವರೇ ನೋಡಿ!

MLCs Health Expenditure: ಆರೋಗ್ಯಕ್ಕಾಗಿ ಸರ್ಕಾರದಿಂದ ಹಣ ಕ್ಲೇಮ್ ಮಾಡಲು ಎಂಎಲ್‌ಸಿಗಳಿಗೆ ಅವಕಾಶವಿದೆ. ಸಾಮಾಜಿಕ ಹೋರಾಟಗಾರರೊಬ್ಬರು ಆರ್‌ಟಿಐ ಸಲ್ಲಿಸಿದ ಹಿನ್ನೆಲೆಯಲ್ಲಿ 2023ರ ಮೇ 1 ರಿಂದ 2024ರ ಜುಲೈ ತಿಂಗಳವರೆಗೆ ಯಾರು ಎಷ್ಟು ಹಣ ಪಡೆದಿದ್ದಾರೆ ಎಂಬ ಮಾಹಿತಿಯನ್ನು ವಿಧಾನ ಪರಿಷತ್‌ ಸಚಿವಾಲಯ ಮಾಹಿತಿ ನೀಡಿದೆ.

VISTARANEWS.COM


on

Health Expenditure
Koo

ಬೆಂಗಳೂರು: ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ರಾಜ್ಯದ ವಿಧಾನ ಪರಿಷತ್ ಸದಸ್ಯರು ಲಕ್ಷ ಲಕ್ಷ ಹಣ ಕ್ಲೇಮ್ ಮಾಡಿರುವುದು ಕಂಡುಬಂದಿದೆ. ಕೇವಲ ಒಂದು ವರ್ಷದಲ್ಲಿ ಲಕ್ಷಾಂತರ ರೂ.ಗಳನ್ನು ಸರ್ಕಾರದಿಂದ ಎಂಎಲ್‌ಸಿಗಳು ಪಡೆದಿರುವ ಮಾಹಿತಿ ಬಹಿರಂಗವಾಗಿದೆ. ಸಾಮಾಜಿಕ ಹೋರಾಟಗಾರ ಎಚ್‌.ಎಂ.ವೆಂಕಟೇಶ್‌ ಅವರು ಮಾಹಿತಿ ಹಕ್ಕು ಕಾಯ್ದೆ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಎಂಎಲ್‌ಸಿಗಳು ಆರೋಗ್ಯಕ್ಕಾಗಿ (MLCs Health Expenditure) ಪಡೆದಿರುವ ಹಣದ ಕುರಿತ ಮಾಹಿತಿಯನ್ನು ಸಚಿವಾಲಯವು ನೀಡಿದೆ.

ಆರೋಗ್ಯಕ್ಕಾಗಿ ಸರ್ಕಾರದಿಂದ ಹಣ ಕ್ಲೇಮ್ ಮಾಡಲು ಎಂಎಲ್‌ಸಿಗಳಿಗೆ ಅವಕಾಶವಿದೆ. ಹೀಗಾಗಿ 2023ರ ಮೇ 1 ರಿಂದ 2024ರ ಜುಲೈ ತಿಂಗಳವರೆಗೆ ಯಾರು ಎಷ್ಟು ಹಣ ಪಡೆದಿದ್ದಾರೆ ಎಂಬ ಮಾಹಿತಿಯನ್ನು ವಿಧಾನ ಪರಿಷತ್‌ ಸಚಿವಾಲಯ ಮಾಹಿತಿ ನೀಡಿದೆ.

ಎಂಎಲ್‌ಸಿಗಳ ಪೈಕಿ ಯಾರು ಎಷ್ಟು ಪಡೆದಿದ್ದಾರೆ ಎಂದು ನೋಡುವುದಾದರೆ, ಎಂಎಲ್‌ಸಿ ಭಾರತಿ ಶೆಟ್ಟಿ ಅವರು ಒಂದು ವರ್ಷದಲ್ಲಿ 48.70 ಲಕ್ಷ ರೂಪಾಯಿ ಕ್ಲೇಮ್ ಮಾಡುವ ಮೂಲಕ ಅತಿ ಹೆಚ್ಚು ಹಣ ಕ್ಲೇಮ್ ಮಾಡಿರುವ ವಿಧಾನ ಪರಿಷತ್ ಸದಸ್ಯೆಯಾಗಿದ್ದಾರೆ. ಎರಡನೇ ಸ್ಥಾನದಲ್ಲಿದ್ದಾರೆ ಕೊಟ್ಯಧೀಶ್ವರ ಸಿ.ಪಿ.ಯೋಗೇಶ್ವರ್ ಇದ್ದಾರೆ. ಇವರು 39.64 ಲಕ್ಷ ರೂ.ಗಳನ್ನು ಸರ್ಕಾರದಿಂದ ಆರೋಗ್ಯಕ್ಕಾಗಿ ಖರ್ಚು ಮಾಡಿದ್ದಾರೆ. ಮೂರನೇ ಸ್ಥಾನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಇದ್ದು, ಅಕ್ಕ ಸಚಿವರಾಗಿದ್ದರೂ ಕೂಡ ಆರೋಗ್ಯಕ್ಕಾಗಿ 17.03 ಲಕ್ಷ ರೂ.ಗಳನ್ನು ಪಡೆದಿದ್ದಾರೆ.

ಎಂಎಲ್‌ಸಿ ಭಾರತಿ ಶೆಟ್ಟಿ ಮತ್ತು ಸಿ.ಪಿ.ಯೋಗೇಶ್ವರ್

ಇನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಕೂಡ ಅತಿ ಹೆಚ್ಚು ಸರ್ಕಾರದ ಹಣ ಖರ್ಚು ಮಾಡಿರುವುದು ಕಂಡುಬಂದಿದೆ. ಒಂದೇ ವರ್ಷದಲ್ಲಿ ಇವರು ಆರೋಗ್ಯಕ್ಕಾಗಿ 7.26 ಲಕ್ಷ ರೂಪಾಯಿ ಸರ್ಕಾರದ ಹಣ ಖರ್ಚು ಮಾಡಿದ್ದಾರೆ. ಹಿರಿಯ ಶಾಸಕ ಲಕ್ಷ್ಮಣ್ ಸವದಿಯಿಂದ ಕೂಡ ಸರ್ಕಾರದ ಹಣ ಖರ್ಚಾಗಿದೆ. ಇವರು 2,41,574 ರೂ.ಗಳನ್ನು ಪಡೆದಿದ್ದು, ಟಿ.ಎ. ಶರವಣ ಅವರು 2,14,770 ರೂಪಾಯಿ ಖರ್ಚು ಮಾಡಿದ್ದಾರೆ.

ಸರ್ಕಾರದ ಹಣ ಪಡೆದ ಎಂಎಲ್‌ಸಿಗಳ ಪಟ್ಟಿ

  • ಹರೀಶ್ ಕುಮಾರ್- 2 ಲಕ್ಷ ರೂ.
  • ಮರಿತಿಬ್ಬೇಗೌಡ- 1,54,995 ರೂ.
  • ವೈ.ಎ. ನಾರಾಯಣಸ್ವಾಮಿ- 3 ಲಕ್ಷ
  • ಅಬ್ದುಲ್ ಜಬ್ಬಾರ್- 1,1,345 ರೂ.
  • ಸುಧಾಮ್ ದಾಸ್- 2,04,542 ರೂ.
  • ಸುನೀಲ್ ವಲ್ಯಾಪುರೆ- 2,75,000 ರೂ.
  • ಛಲವಾದಿ ನಾರಾಯಣಸ್ವಾಮಿ- 1,18,828 ರೂ.
  • ವೈ.ಎಂ. ಸತೀಶ್- 2,77,559 ರೂ.
  • ಮಧು ಮಾದೇಗೌಡ- 2,46,233 ರೂ.
  • ರಘುನಾಥ್ ಮಲ್ಕಾಪುರೆ- 1,34,823 ರೂ.
  • ಎಂ.ಜಿ.ಮುಳೆ- 2,24,282 ರೂಪಾಯಿ
  • ಅಡಗೂರು ವಿಶ್ವನಾಥ್-‌ 52, 127 ರೂ.
  • ರಘುನಾಥ್‌ ರಾವ್‌ ಮಲ್ಕಾಪೂರೆ- 1,34,823
  • ಸುಜಾ ಕುಶಾಲಪ್ಪ- 85,000 ರೂ.
  • ಸಲೀಂ ಅಹ್ಮದ್‌-66,402 ರೂ.

ಇದನ್ನೂ ಓದಿ | Industrial City: ಹೊಸೂರಿನಲ್ಲಿ ಟಾಟಾ ಗ್ರೂಪ್‌ನಿಂದ ಇಂಡಸ್ಟ್ರಿಯಲ್‌ ಸಿಟಿ ನಿರ್ಮಾಣಕ್ಕೆ ಸಿದ್ಧತೆ; ಬೆಂಗಳೂರಿನ ಐಟಿ ಸಿಟಿ ಪಟ್ಟಕ್ಕೆ ಕುತ್ತು?

Continue Reading

ಬೆಂಗಳೂರು

Industrial City: ಹೊಸೂರಿನಲ್ಲಿ ಟಾಟಾ ಗ್ರೂಪ್‌ನಿಂದ ಇಂಡಸ್ಟ್ರಿಯಲ್‌ ಸಿಟಿ ನಿರ್ಮಾಣಕ್ಕೆ ಸಿದ್ಧತೆ; ಬೆಂಗಳೂರಿನ ಐಟಿ ಸಿಟಿ ಪಟ್ಟಕ್ಕೆ ಕುತ್ತು?

Industrial City: ಐಟಿ ಸಿಟಿ ಎನ್ನುವ ಹೆಗ್ಗಳಿಕೆಯನ್ನು ಬೆಂಗಳೂರು ಕಳೆದುಕೊಳ್ಳುತ್ತಾ? ಸದ್ಯ ಹೀಗೊಂದು ಚರ್ಚೆ ಸೋಷಿಯಲ್‌ ಮೀಡಿಯಾದಲ್ಲಿ ಆರಂಭವಾಗಿದೆ. ಐಟಿ ಕಂಪನಿಗಳನ್ನು ನೆರೆಯ ತಮಿಳುನಾಡು ಸೆಳೆದುಕೊಳ್ಳುತ್ತಿರುವುದೇ ಈ ಆತಂಕಕ್ಕೆ ಕಾರಣ. ತಮಿಳುನಾಡಿನ ಹೊಸೂರಿನಲ್ಲಿ ಈಗಾಗಲೇ ಏರ್‌ಪೋರ್ಟ್ ನಿರ್ಮಾಣದ ಘೋಷಣೆಯಾಗಿದೆ. ಇದರ ಬೆನ್ನಲೆ ಟಾಟಾ ಗ್ರೂಪ್ ಹೊಸೂರಿನಲ್ಲಿ ಇಂಡಸ್ಟ್ರಿಯಲ್‌ ಸಿಟಿ (ಕೈಗಾರಿಕಾ ನಗರ) ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ. ಈ ಎಲ್ಲ ಬೆಳವಣಿಗೆ ಬೆಂಗಳೂರಿನ ಐಟಿ ಸಿಟಿ ಪಟ್ಟಕ್ಕೆ ಕುತ್ತು ತರಲಿದೆ ಎನ್ನಲಾಗಿದೆ.

VISTARANEWS.COM


on

Industrial City
Koo

ಬೆಂಗಳೂರು: ಐಟಿ ಸಿಟಿ ಎನ್ನುವ ಹೆಗ್ಗಳಿಕೆಯನ್ನು ಬೆಂಗಳೂರು ಕಳೆದುಕೊಳ್ಳುತ್ತಾ? ಸದ್ಯ ಹೀಗೊಂದು ಚರ್ಚೆ ಸೋಷಿಯಲ್‌ ಮೀಡಿಯಾದಲ್ಲಿ ಆರಂಭವಾಗಿದೆ. ಐಟಿ ಕಂಪನಿಗಳನ್ನು ನೆರೆಯ ತಮಿಳುನಾಡು ಸೆಳೆದುಕೊಳ್ಳುತ್ತಿರುವುದೇ ಈ ಆತಂಕಕ್ಕೆ ಕಾರಣ. ತಮಿಳುನಾಡಿನ ಹೊಸೂರಿನಲ್ಲಿ (Hosur) ಈಗಾಗಲೇ ಏರ್‌ಪೋರ್ಟ್ ನಿರ್ಮಾಣದ ಘೋಷಣೆಯಾಗಿದೆ. ಇದರ ಬೆನ್ನಲೆ ಟಾಟಾ ಗ್ರೂಪ್ ಹೊಸೂರಿನಲ್ಲಿ ಇಂಡಸ್ಟ್ರಿಯಲ್‌ ಸಿಟಿ (ಕೈಗಾರಿಕಾ ನಗರ) ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ. ಈ ಎಲ್ಲ ಬೆಳವಣಿಗೆ ಬೆಂಗಳೂರಿನ ಐಟಿ ಸಿಟಿ ಪಟ್ಟಕ್ಕೆ ಕುತ್ತು ತರಲಿದೆ ಎನ್ನಲಾಗಿದೆ (Industrial City).

ಜಾರ್ಖಂಡ್‌ನ ಜಮ್ಶೆಡ್ಪುರ್ ಮಾದರಿಯಲ್ಲಿ ಹೊಸೂರಿನಲ್ಲಿ ಕೈಗಾರಿಕಾ ನಗರಿ ಸ್ಥಾಪನೆಗೆ ಟಾಟಾ ಗ್ರೂಪ್‌ ತಯಾರಿ ನಡೆಸಿರುವುದು ರಾಜ್ಯದ ಐಟಿ ಕಂಪನಿಗಳಿಗೆ ಕಳವಳ ಉಂಟು ಮಾಡಿದೆ. ಬೆಂಗಳೂರಿನಿಂದ ಕೇವಲ 40 ಕಿ.ಮೀ. ದೂರದಲ್ಲಿರುವ ಹೊಸೂರಿನಲ್ಲಿ ಟಾಟಾ ಕಂಪನಿಯಿಂದ ಇಂಡಸ್ಟ್ರಿಯಲ್‌ ಸಿಟಿ ನಿರ್ಮಾಣವಾದರೆ ಉದ್ಯಮಗಳು ಅತ್ತ ವಲಸೆ ಹೋಗುವ ಆತಂಕ ಎದುರಾಗಿದೆ. ಈ ಮೂಲಕ ರಾಜ್ಯದಲ್ಲಿ ಹೂಡಿಕೆ ಮಾಡುವವರನ್ನು ಸೆಳೆಯುತ್ತಿರುವ ತಮಿಳುನಾಡು ಬೆಂಗಳೂರಿಗೆ ಟಕ್ಕರ್ ನೀಡಲು ತಯಾರಿ ನಡೆಸಿದೆ. ಸದ್ಯ ಈ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಟ್ರೆಂಡಿಂಗ್‌ನಲ್ಲಿದೆ.

ಐಟಿ ನೌಕರರಿಗೆ ದಿನಕ್ಕೆ 14 ಗಂಟೆ ಕೆಲಸದ ಪ್ರಸ್ತಾವ

ಕಾನೂನುಬದ್ಧವಾಗಿಯೇ ಕೆಲಸದ ಸಮಯವನ್ನು 14 ಗಂಟೆಗೆ ವಿಸ್ತರಿಸಬೇಕು ಎನ್ನುವ ಐಟಿ ಕಂಪನಿಗಳ ಪ್ರಸ್ತಾವನೆಯನ್ನು ಪರಿಗಣಿಸಿ 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯಿದೆಗೆ ತಿದ್ದುಪಡಿ ತರಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದ್ದು ಇತ್ತೀಚೆಗೆ ಭಾರೀ ಸದ್ದು ಮಾಡಿತ್ತು. ಐಟಿ ಉದ್ಯೋಗಿಗಳು ಪ್ರತಿಭಟನೆಯನ್ನೂ ನಡೆಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಐಟಿ, ಐಟಿ ಆಧಾರಿತ ಸೇವೆಗಳ ಉದ್ಯೋಗಿಗಳ ಒಕ್ಕೂಟವು (KITU) ಭಾರಿ ವಿರೋಧ ವ್ಯಕ್ತಪಡಿಸಿದೆ. “ಐಟಿ ಉದ್ಯೋಗಿಗಳ ಕೆಲಸವನ್ನು ನಾಲ್ಕು ಗಂಟೆ ಹೆಚ್ಚಿಸುವುದರಿಂದ ನೌಕರರ ಖಾಸಗಿ ಹಾಗೂ ವೃತ್ತಿ ಜೀವನದ ಮೇಲೆ ಭಾರಿ ಪರಿಣಾಮ ಬೀರಲಿದೆ. ಉದ್ಯೋಗಿಗಳು ವೃತ್ತಿ ಮಾಡುವ ಬದಲು ಮಷೀನ್‌ಗಳಾಗಿ ಬದಲಾಗುತ್ತಾರೆ. ಅವರ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮ ಬೀರಲಿದೆ. ಹಾಗಾಗಿ, ರಾಜ್ಯ ಸರ್ಕಾರವು ಪ್ರಸ್ತಾಪವನ್ನು ಪರಿಷ್ಕರಿಸಬೇಕು” ಎಂದು ಒಕ್ಕೂಟ ಆಗ್ರಹಿಸಿದೆ.

ಸಾಮಾಜಿಕ ಜಾಲತಾಣಗಳಲ್ಲೂ ಈ ಕುರಿತು ವಿರೋಧ ವ್ಯಕ್ತವಾಗುತ್ತಿದೆ. ಐಟಿ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಈಗಾಗಲೇ ಒತ್ತಡ, ಬಿಪಿ, ಶುಗರ್‌ ಸೇರಿ ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈಗ 14 ಗಂಟೆಗೆ ನೌಕರರ ಕೆಲಸದ ಅವಧಿಯನ್ನು ಹೆಚ್ಚಿಸಿದರೆ ನೌಕರರು ಹಣಕ್ಕಿಂತ ಹೆಚ್ಚು ಕಾಯಿಲೆಗಳನ್ನು ಗಳಿಸುತ್ತಾರೆ ಎಂಬುದಾಗಿ ಜನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಯ್ದೆ ಪ್ರಕಾರ ಈಗ ಐಟಿ ಉದ್ಯೋಗಿಗಳ ಕೆಲಸದ ಅವಧಿಯು 10 ಗಂಟೆ ಆಗಿದೆ.

ಈ ಎಲ್ಲ ಬೆಳವಣಿಗೆಗಳು ಬೆಂಗಳೂರಿಗೆ ಇದ್ದ ಐಟಿ ಹಬ್ ಪಟ್ಟಕ್ಕೆ ಪೆಟ್ಟು ನೀಡಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಮಾಡಲಾಗುತ್ತಿದೆ. ಐಟಿ ಉದ್ಯೋಗಿಗಳು ದೇಶದ ಇತರ ಭಾಗಗಳಾದ ಹೈದರಾಬಾದ್, ಪುಣೆ ಮತ್ತು ಗುರುಗ್ರಾಮ್‌ ಕಡೆಗೆ ಮುಖ ಮಾಡಲಿದ್ದಾರೆ. ಅಹಮದಾಬಾದ್ ಕೂಡ ಈಗ ಐಟಿ ಹಬ್ ಆಗಿ ವಿಕಸನಗೊಳ್ಳುತ್ತಿದೆ ಎನ್ನುವುದಕ್ಕೂ ಪೂರಕ ಮಾಹಿತಿಗಳಿವೆ. ಒಟ್ಟಿನಲ್ಲಿ ಸರ್ಕಾರದ 14 ಗಂಟೆ ಕೆಲಸದ ನಿಯಮ, ಕನ್ನಡಿಗರಿಗೆ ಮೀಸಲಾತಿ, ಇದೀಗ ಹೊಸೂರಿನಲ್ಲಿ ಇಂಡಸ್ಟ್ರಿಯಲ್‌ ಸಿಟಿ ನಿರ್ಮಾಣ ಆತಂಕಕ್ಕೆ ದೂಡಿರುವುದು ಸುಳ್ಳಲ್ಲ.

ಇದನ್ನೂ ಓದಿ: IT Employees: ಕರ್ನಾಟಕದ ಐಟಿ ಉದ್ಯೋಗಿಗಳೇ, ದಿನಕ್ಕೆ 14 ಗಂಟೆ ಕೆಲಸ ಮಾಡಲು ಸಜ್ಜಾಗಿ; ರಾಜ್ಯ ಸರ್ಕಾರದ ನಿರ್ಧಾರ ಹೀಗಿದೆ

Continue Reading

ಸ್ಯಾಂಡಲ್ ವುಡ್

Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

Actor Darshan : ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ ಬಂಧನವಾಗಿದೆ. ಈ ಮಧ್ಯೆ ನಟನ ಗೆಳತಿ ಪವಿತ್ರಾ (Pavithra Gowda) ಲಾಕ್‌ ಆಗಿದ್ದೆ ರೋಚಕವಾಗಿದೆ. ಇನ್ನೂ ತನ್ನ ಜತೆಗೆ ಇದ್ದ ಹುಡುಗರನ್ನು ನಂಬಿಯೇ ನಾನು ಕೆಟ್ಟಿದ್ದು ಎಂದು ದರ್ಶನ್‌ ಅಳಲು ತೊಡಿಕೊಂಡಿದ್ದಾರೆ. ಇಷ್ಟಕ್ಕೂ ಬಂಧನದ ದಿನ ಏನೆಲ್ಲ ಆಯಿತು ಎಂಬ ಇಂಟರೆಸ್ಟಿಂಗ್‌ ಸ್ಟೋರಿ ಇಲ್ಲಿದೆ.

VISTARANEWS.COM


on

By

Actor darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌(Actor Darshan) ಗ್ಯಾಂಗ್‌ ಜೈಲುಪಾಲಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಪೊಲೀಸರು ಶುರು ಮಾಡಿದ್ದಾರೆ. ಈ ಮಧ್ಯೆ ಪೊಲೀಸರ ಬಳಿ ದರ್ಶನ್‌ ಆಪ್ತೆ ಪವಿತ್ರಾಗೌಡ ಲಾಕ್ ಆಗಿದ್ದೆ ರೋಚಕವಾಗಿದೆ.

ದರ್ಶನ್ ಬಂಧನಕ್ಕೆ ಹೊರಟಿದ್ದ ವೇಳೆಯೇ ಪೊಲೀಸರು ಪವಿತ್ರಾಗೂ ಬಲೆ ಬೀಸಿದ್ದರು. ಜೂನ್ 11ರ ಬೆಳಗ್ಗೆ ದರ್ಶನ್ ಬಂಧಿಸಲು ಮೈಸೂರಿಗೆ ತೆರಳಿದ್ದಾಗ, ಈ ವೇಳೆ ಎರಡು ತಂಡ ರಚಿಸಿ ಪವಿತ್ರಾ ಗೌಡಗೂ ಬಲೆ ಬೀಸಿದ್ದರು. ಆದರೆ ಪೊಲೀಸರ ಎರಡೂ ತಂಡಕ್ಕೂ ಚಾಲಾಕಿ ಪವಿತ್ರಾ ಸಿಕ್ಕಿರಲಿಲ್ಲ.

ಹೀಗಾಗಿ ಮಾಸ್ಟರ್‌ ಪ್ಲ್ಯಾನ್‌ ಮಾಡಿದ್ದ ಪೊಲೀಸರು ಮೈಸೂರಿನಲ್ಲೇ ದರ್ಶನ್ ಮೂಲಕವೇ ಪವಿತ್ರಾಳನ್ನು ಸಂಪರ್ಕಿಸಿದ್ದರು. ದರ್ಶನ್ ಫೋನ್‌ನಿಂದಲೇ ಪವಿತ್ರಾಗೌಡಗೆ ಫೋನ್ ಮಾಡಿಸಿ ಎಲ್ಲೂ ಹೋಗದಂತೆ ಸೂಚನೆ ನೀಡಲಾಗಿತ್ತು. ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ಹೋಗು ಎಂದು ದರ್ಶನ್‌ ಪವಿತ್ರಾಗೆ ಹೇಳಿದ್ದರು. ಹೀಗಾಗಿ ದರ್ಶನ್ ಮಾತಿನಂತೆ ಪೊಲೀಸ್ ಠಾಣೆಗೆ ಪವಿತ್ರಾ ಹಾಜರಾಗಿದ್ದರು. ಪವಿತ್ರಾ ಕಾಮಾಕ್ಷಿಪಾಳ್ಯ ಠಾಣೆಯ ಬದಲು ಆರ್ ಆರ್ ನಗರ ಠಾಣೆಗೆ ಹಾಜರಾಗಿದ್ದಳು. ತದನಂತರ ಕಾಮಾಕ್ಷಿಪಾಳ್ಯ ಪೊಲೀಸರು ಕರೆತಂದು ಬಂಧಿಸಿದ್ದರು.

ಇದನ್ನೂ ಓದಿ:Actor Darshan: ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಅರ್ಜಿ ವಿಚಾರಣೆ ಸೆ.5ಕ್ಕೆ ಮುಂದೂಡಿದ ಹೈಕೋರ್ಟ್

ಠಾಣೆಗೆ ಬಂದ ಕೂಡಲೇ ಪೊಲೀಸರ ಮುಂದೆ ದರ್ಶನ್ ಹೇಳಿದ್ದೇನು?

ಮೈಸೂರಿನಲ್ಲಿ ಬಂಧಿಸಿ ದರ್ಶನ್‌ನನ್ನು ಬೆಂಗಳೂರಿಗೆ ಕರೆತರಲಾಗಿತ್ತು. ಠಾಣೆಗೆ ಬರುತ್ತಿದ್ದಂತೇ ದರ್ಶನ್ ಹೇಳಿದ ಮೊದಲ ಮಾತೇನು ಗೊತ್ತಾ? ನನ್ನ ಜತೆ‌ ಇದ್ದ ಈ ಹುಡುಗರಿಂದ ನಾನು ಹಾಳಾದೆ ಎಂದಿದ್ದರಂತೆ. ಹುಡುಗರನ್ನು ನಂಬಿ ನಾನು ಕೆಟ್ಟೆ ಎಂದು ಹೇಳಿಕೊಂಡಿದ್ದರಂತೆ.

ಚಾರ್ಜ್‌ಶೀಟ್‌ ಸಲ್ಲಿಸಲು ತಯಾರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರಿಂದ ತಯಾರಿ ನಡೆದಿದೆ. ಇಲ್ಲಿಯವರೆಗೆ ಸಾಕ್ಷ್ಯ ಕಲೆ‌ ಹಾಕಿ,ಸ್ಥಳ ಮಹಜರು ನಡೆಸಿ,ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದೆ. ಬರೋಬ್ಬರಿ 52 ಸ್ಥಳ ಮಹಜರು,150 ಜನರ ಹೇಳಿಕೆ ದಾಖಲಿಸಿದ್ದಾರೆ. ಚಿತ್ರದುರ್ಗದ ಕಿಡ್ನ್ಯಾಪ್ ಜಾಗದಿಂದ ಹಿಡಿದು ಮೃತದೇಹ ಎಸೆದಿದ್ದ ಜಾಗದವರೆಗೆ ಮಹಜರ್ ಮಾಡಲಾಗಿದೆ.

ಪಟ್ಟಣಗೆರೆ ಶೆಡ್, ದರ್ಶನ್ ನಿವಾಸ, ಪವಿತ್ರಾ ಗೌಡ ನಿವಾಸ ಸೇರಿದಂತೆ ಸ್ಟೋನಿ ಬ್ರೂಕ್ ಪಬ್, ಮೃತ ದೇಹ ಎಸೆದ ಸತ್ವ ಅಪಾರ್ಟ್ ಮೆಂಟ್ ಎದುರಿನ‌ ಕಾಲುವೆ ಸೇರಿದಂತೆ ಕೊಲೆಯ ನಂತರದ‌ ಮಾತುಕತೆ ಜಾಗಗಳು ಸೇರಿ 52 ಕಡೆ ಸ್ಥಳ ಮಹಜರು ಮಾಡಲಾಗಿದೆ. ಪ್ರಕರಣದಲ್ಲಿ ಸಾಕ್ಷಿಯಾಗಿರುವ 150 ಜನರ‌ ಹೇಳಿಕೆ‌ ದಾಖಲಾಗಿದೆ.

ಘಟನೆ ಸಂಬಂಧಿಸಿದಂತೆ ಆರೋಪಿಗಳು ಎಲ್ಲೆಲ್ಲಿ ತೆರಳಿದ್ದರು. ಯಾರ್ಯಾರ ಸಂಪರ್ಕ ಮಾಡಿದ್ದರು? ಪೆಟ್ರೋಲ್ ಬಂಕ್ ಸಿಬ್ಬಂದಿ‌, ಹೋಟೆಲ್ ಸಿಬ್ಬಂದಿ, ಸಹಚರರ ಹೇಳಿಕೆ ಸೇರಿ ಒಟ್ಟಾರೆಯಾಗಿ ಬರೋಬ್ಬರಿ 150 ಕ್ಕೂ ಹೆಚ್ಚು ಜನರ ಹೇಳಿಕೆ ದಾಖಲಾಗಿದೆ.

ಪುಸ್ತಕದ ಮೊರೆ ಹೋದ ದರ್ಶನ್‌

ನಟ ದರ್ಶನ್ ಜೈಲಿನಲ್ಲಿ ಕಳೆದ 64 ದಿನದಿಂದ ಮಂಕಾಗಿ ಕಾಲ ಕಳೆಯುತ್ತಿದ್ದಾರೆ. ನಿಧಾನವಾಗಿ ಜೈಲಿನ ಪರಿಸರಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ. ಬೇಜಾರು ಕಳೆಯೋದಕ್ಕೆ ವಾಲಿಬಾಲ್ ಆಟಕ್ಕೆ ಇಳಿದಿದ್ದಾರೆ. ಈಗಾಗಲೇ ಜೈಲೊಳಗಡೆ ಪುಸ್ತಕದ ಮೊರೆ ಹೋಗಿದ್ದು, ಜತೆಗೆ ಬೇಜಾರು ಕಳೆಯಲು ವಾಲಿಬಾಲ್ ಕೂಡ ಆಡುತ್ತಿದ್ದಾರೆ. ಜೈಲಿನ‌ ಇತರೆ ಖೈದಿಗಳ‌ ಜತೆ ಸೇರಿ ವಾಲಿಬಾಲ್ ಆಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿದ; ಚೈನ್ ಸ್ನಾಚಿಂಗ್‌ಗೆ ಇಳಿದು ಸಿಕ್ಕಿಬಿದ್ದ

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟ ಮೈಗೂಡಿಸಿಕೊಂಡು ಮೈತುಂಬ ಸಾಲ ಮಾಡಿಕೊಂಡಿದ್ದವನೊಬ್ಬ ಸಾಲ ತೀರಿಸಲು ಸರಗಳ್ಳತನಕ್ಕೆ ಇಳಿದು ಇದೀಗ ಸಿಕ್ಕಿಬಿದ್ದಿದ್ದಾನೆ. ಕತ್ರಿಗುಪ್ಪೆ ನಿವಾಸಿ ಕುಮಾರ್ ಬಂಧಿತ. ಆನ್‌ಲೈನ್‌ನಲ್ಲಿ ಬೆಟ್ಟಿಂಗ್ ಗೇಮ್ ಆಡುತ್ತಿದ್ದ ಆರೋಪಿ ಕುಮಾರ್ ಈ ವೇಳೆ ಸಾಕಷ್ಟು ಹಣ ಕಳೆದುಕೊಂಡಿದ್ದ. ಬೆಟ್ಟಿಂಗ್‌ ಕಾರಣಕ್ಕೆ ಒಂದಲ್ಲ, ಎರಡಲ್ಲ ಬರೋಬ್ಬರಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಸಾಲ ತೋರಿಸಲು ಸರಗಳ್ಳತನಕ್ಕೆ ಇಳಿದಿದ್ದ.

VISTARANEWS.COM


on

Chain snatching Case
Koo

ಬೆಂಗಳೂರು: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದವರು ಹಣಕ್ಕಾಗಿ ಯಾವ ಅಡ್ಡ ದಾರಿಯನ್ನಾದರೂ ಹಿಡಿಯಲು ತಯಾರಿರುತ್ತಾರೆ ಎನ್ನುವುದಕ್ಕೆ ಈತನೇ ಉತ್ತಮ ನಿದರ್ಶನ. ಹೌದು, ಆನ್‌ಲೈನ್‌ ಬೆಟ್ಟಿಂಗ್ ಚಟ ಮೈಗೂಡಿಸಿಕೊಂಡು ಮೈತುಂಬ ಸಾಲ ಮಾಡಿಕೊಂಡಿದ್ದವನೊಬ್ಬ ಮಾಡಿದ ಸಾಲ ತೀರಿಸಲು ಸರಗಳ್ಳತನಕ್ಕೆ (Chain snatching case)  ಇಳಿದು ಇದೀಗ ಸಿಕ್ಕಿಬಿದ್ದಿದ್ದಾನೆ. ಕತ್ರಿಗುಪ್ಪೆ ನಿವಾಸಿ ಕುಮಾರ್ ಬಂಧಿತ ಆರೋಪಿ.

ಆನ್‌ಲೈನ್‌ನಲ್ಲಿ ಬೆಟ್ಟಿಂಗ್ ಗೇಮ್ ಆಡುತ್ತಿದ್ದ ಆರೋಪಿ ಕುಮಾರ್ ಈ ವೇಳೆ ಸಾಕಷ್ಟು ಹಣ ಕಳೆದುಕೊಂಡಿದ್ದ. ಬೆಟ್ಟಿಂಗ್‌ ಕಾರಣಕ್ಕೆ ಒಂದಲ್ಲ, ಎರಡಲ್ಲ ಬರೋಬ್ಬರಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಹಣ ಸಾಲ ಕೊಟ್ಟವರು ವಾಪಾಸ್ ನೀಡುವಂತೆ ಕೇಳತೊಡಗಿದಾಗ ಕುಮಾರ್‌ ಸರಗಳ್ಳತನಕ್ಕೆ ಇಳಿದಿದ್ದ.

ವಿಳಾಸ ಕೇಳುವ ನೆಪ

ಸರಗಳ್ಳತನಕ್ಕೆ ಕುಮಾರ್‌ ಖತರ್ನಾಕ್‌ ಯೋಜನೆ ರೂಪಿಸಿದ್ದ. ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರ ಗಮನ ಬೇರೆಡೆ ಸೆಳೆದು ಸರಕಳವು ಮಾಡುತ್ತಿದ್ದ. ಗಿರಿನಗರದ ಬೈರಪ್ಪ ಲೇಔಟ್‌ನಲ್ಲಿ ಕೃತ್ಯ ಎಸಗಿದ್ದ ವೇಳೆ ಸಿಕ್ಕಿಬಿದ್ದಿದ್ದ. ಸದ್ಯ ಕುಮಾರ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಪೊಲೀಸರಿಂದ ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಕುಮಾರ್‌ ಮಾಡಿದ ಸಾಲ ತೀರಿಸಲು ಆಟೋವನ್ನೂ ಅಡವಿಟ್ಟಿದ್ದ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಸಾಲದ ಸಂಗತಿ ಬೆಳೆಕಿಗೆ ಬಂದಿದ್ದು, ತನಿಖೆ ಮುಂದುವರಿದಿದೆ.

ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದವ ಬಂಧನ

ಬೆಂಗಳೂರು: ಸುಲಭವಾಗಿ ಹಣ ಮಾಡಲು ಖತರ್ನಾಕ್ ಪ್ಲ್ಯಾನ್‌ ಮಾಡಿದ್ದ ವಂಚಕನೊಬ್ಬ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದು ಕಾರು ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ ಜಮೀಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಖತರ್ನಾಕ್ ಪ್ಲ್ಯಾನ್‌?

ಹಾಗಾದರೆ ಈತ ಮಾಡುತ್ತಿದ್ದ ಖತರ್ನಾಕ್ ಕೆಲಸ ಏನು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ. ಕಾರು ಚಾಲಕರೇ ಈತನ ಟಾರ್ಗೆಟ್. ಕಾರಿಗೆ ಬೇಕಂದೇ ಬೈಕ್ ಟಚ್ ಮಾಡಿ ಹಣ ಕೀಳುತ್ತಿದ್ದ. ʼʼಕಾರು ಹೋಗುವಾಗ ಜಮೀಲ್‌ ತನ್ನ ಬೈಕ್‌ ಅನ್ನು ಬೇಕಂತಲೇ ಟಚ್ ಮಾಡುತ್ತಿದ್ದ. ಬಳಿಕ ದೂರು ಕೊಡುತ್ತೇನೆ ಎಂದು ಬೆದರಿಸಿ ಚಾಲಕರಿಂದ ಹಣ ಕೀಳುತ್ತಿದ್ದʼʼ ಎಂದು ಪೊಲೀಸರು ತಿಳಿಸಿದ್ದಾರೆ. ʼʼಕಾರು ಟಚ್ ಅಗಿದೆ ಎಂದು ಮಧ್ಯ ರಸ್ತೆಯಲ್ಲಿ ಅಡ್ಡ ಹಾಕುತ್ತಿದ್ದ. ಡ್ಯಾಮೇಜ್ ಸರಿಪಡಿಸಲು ದುಡ್ಡು ಕೊಡಿ ಎಂದು ಬಲ ಪ್ರಯೋಗ ಮಾಡುತ್ತಿದ್ದ. ದುಡ್ಡು ಕೊಡದೆ ಹೋದ್ರೆ ದೂರು ಕೊಡ್ತೀನಿ ಎಂದು ಹೆದರಿಸುತ್ತಿದ್ದʼʼ ಎಂದು ಹೇಳಿದ್ದಾರೆ.

ಈತನ ಮೇಲೆ ಇದುವರೆಗೆ ಒಟ್ಟು 17 ಪ್ರಕರಣ ದಾಖಲಾಗಿದೆ. ರಾಜ್ಯದ ವಿವಿಧ ಠಾಣೆಗಳಲ್ಲಿ ಈತನ ವಿರುದ್ಧ ವಿವಿಧ ಪ್ರಕರಣಗಳಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಕ್ಕಿ ಬಿದ್ದಿದ್ದು ಹೇಗೆ?

ಜಯನಗರ ಠಾಣಾ ವ್ಯಾಪ್ತಿಯಲ್ಲೂ ಕೂಡ ಇದೇ ರೀತಿ ಮಾಡಿ 30,000 ರೂ. ಪಡೆದಿದ್ದ ಜಮೀಲ್‌ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ. ಈ ಬಗ್ಗೆ ಜಯನಗರ ಠಾಣೆಗೆ ಕಾರು ಚಾಲಕ ದೂರು ಕೊಟ್ಟಿದ್ದ. ಹೀಗಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Chain snatching Case : ಜಾಬ್‌ಗೆ ಹೋಗುವ ಹೆಣ್ಮಕ್ಕಳೇ ಟಾರ್ಗೆಟ್‌‌ ; ಸರಗಳ್ಳರ ಗ್ಯಾಂಗ್‌ಗೆ ಸಖತ್ ಗೂಸಾಇದನ್ನೂ ಓದಿ:

Continue Reading
Advertisement
Revathy Sampath
ಸಿನಿಮಾ7 mins ago

Revathy Sampath: ನಟಿಯ ಮೇಲೆ ಹಿರಿಯ ನಟನಿಂದ ಲೈಂಗಿಕ ದೌರ್ಜನ್ಯ; ಕೇರಳ ಚಿತ್ರರಂಗದಲ್ಲಿ ಮತ್ತೊಂದು ಕರಾಳ ವಿದ್ಯಮಾನ!

Health Expenditure
ಪ್ರಮುಖ ಸುದ್ದಿ17 mins ago

MLCs Health Expenditure: ಆರೋಗ್ಯಕ್ಕಾಗಿ ಲಕ್ಷ ಲಕ್ಷ ಕ್ಲೇಮ್; ಅತಿ ಹೆಚ್ಚು ಸರ್ಕಾರದ ಹಣ ಪಡೆದ ಎಂಎಲ್‌ಸಿಗಳು ಇವರೇ ನೋಡಿ!

Industrial City
ಬೆಂಗಳೂರು52 mins ago

Industrial City: ಹೊಸೂರಿನಲ್ಲಿ ಟಾಟಾ ಗ್ರೂಪ್‌ನಿಂದ ಇಂಡಸ್ಟ್ರಿಯಲ್‌ ಸಿಟಿ ನಿರ್ಮಾಣಕ್ಕೆ ಸಿದ್ಧತೆ; ಬೆಂಗಳೂರಿನ ಐಟಿ ಸಿಟಿ ಪಟ್ಟಕ್ಕೆ ಕುತ್ತು?

Yuvraj Singh
ಕ್ರೀಡೆ59 mins ago

Yuvraj Singh: ಐಪಿಎಲ್​ ಕೋಚಿಂಗ್​ ನಡೆಸಲಿದ್ದಾರೆ ಯುವರಾಜ್​ ಸಿಂಗ್; ಯಾವ ತಂಡ?

Physical abuse attempted rape of school girl The public who beat up the man
ಚಿಕ್ಕೋಡಿ1 hour ago

Physical Abuse : ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಥಳಿಸಿದ ಸಾರ್ವಜನಿಕರು

ಬೆಂಗಳೂರು ಗ್ರಾಮಾಂತರ2 hours ago

Love Case : ಪ್ರೀತಿಗೆ ಪೋಷಕರ ವಿರೋಧ; ಒಬ್ಬರಿಗೊಬ್ಬರು ತಬ್ಬಿಕೊಂಡು ನೇಣಿಗೆ ಶರಣಾದ ಪ್ರೇಮಿಗಳು

Cricket meets shooting
ಕ್ರೀಡೆ2 hours ago

Cricket Meets Shooting: ವಿಭಿನ್ನ ಶೈಲಿಯಲ್ಲಿ ಫೋಟೊಗೆ ಪೋಸ್​ ಕೊಟ್ಟ ಸೂರ್ಯಕುಮಾರ್​-ಮನು ಭಾಕರ್​

Gold Rate Today
ಚಿನ್ನದ ದರ2 hours ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬಂಗಾರ ಖರೀದಿಯ ಮುನ್ನ ಬೆಲೆ ಚೆಕ್‌ ಮಾಡಿ

Actor darshan
ಸ್ಯಾಂಡಲ್ ವುಡ್2 hours ago

Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

Western Ghats
ಕರ್ನಾಟಕ2 hours ago

Western Ghats: ಭೂ ಕುಸಿತ ಹಿನ್ನೆಲೆ; ಪಶ್ಚಿಮ ಘಟ್ಟಗಳಲ್ಲಿನ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ23 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌