KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ: ಸಿಎಂ ಸ್ಪಷ್ಟನೆ - Vistara News

ಕರ್ನಾಟಕ

KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ: ಸಿಎಂ ಸ್ಪಷ್ಟನೆ

KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮುಂದೂಡಬೇಕು ಎಂದು ಎಂದು ಅಭ್ಯರ್ಥಿಗಳು ಹೇಳುತ್ತಿದ್ದಾರೆ. ಆದರೆ, ನಾವು ಪರೀಕ್ಷೆಯನ್ನು ಮುಂದಕ್ಕೆ ಹಾಕಲು ಆಗೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Muda Scam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಎಎಸ್‌ ಪೂರ್ವಭಾವಿ ಪರೀಕ್ಷೆ (KAS Prelims Exam) ಮುಂದೂಡುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಅಭ್ಯರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿದ್ದಾರೆ. ತರಾತುರಿಯಲ್ಲಿ ಆ.27ಕ್ಕೆ ಪರೀಕ್ಷೆಯನ್ನು ಕೆಪಿಎಸ್‌ಸಿ ನಿಗದಿ ಮಾಡಿದೆ. ಇದರಿಂದ ಅಭ್ಯರ್ಥಿಗಳಿಗೆ ತೊಂದರೆಯಾಗಿದ್ದು, ಪೂರ್ವಭಾವಿ ಪರೀಕ್ಷೆಯನ್ನು ಸರ್ಕಾರ ಮುಂದೂಡಿಕೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಆದರೆ, ನಾವು ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದಕ್ಕೆ ಹಾಕಲು ಆಗೋದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಕೆಎಎಸ್ ಪರೀಕ್ಷೆ ಗೊಂದಲದ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಪರೀಕ್ಷೆಯಲ್ಲಿ ಗೊಂದಲ ಏನೂ ಇಲ್ಲ. ಎಕ್ಸಾಂ ಮುಂದಕ್ಕೆ ಹಾಕಬೇಕು ಎಂದು ಅಭ್ಯರ್ಥಿಗಳು ಹೇಳುತ್ತಿದ್ದಾರೆ. ಆದರೆ, ನಾವು ಮುಂದಕ್ಕೆ ಹಾಕಲು ಆಗೋದಿಲ್ಲ. ಒಂದು ಪೇಪರ್ ಮಾತ್ರ ಕೃಷ್ಣ ಜನ್ಮಾಷ್ಠಮಿ ದಿನ ಇದೆ. ಅದನ್ನು ಮುಂದಕ್ಕೆ ಹಾಕುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಅಭ್ಯರ್ಥಿಗಳ ಬೇಡಿಕೆ ಏನು?

ಮಂಗಳವಾರ ಪರೀಕ್ಷೆ ನಡೆಯುವುದರಿಂದ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ರಜೆ ಸಿಗುವುದಿಲ್ಲ. ಅಲ್ಲದೇ ಅಭ್ಯರ್ಥಿಗಳಿರುವ ಸ್ಥಳದಿಂದ 200, 300 ಕಿ.ಮೀ. ದೂರದ ನಗರಗಳಲ್ಲಿ ಪರೀಕ್ಷಾ ಕೇಂದ್ರ ಹಾಕಿದ್ದಾರೆ. ಇದರಿಂದ ದೂರದ ಊರುಗಳ ಅಭ್ಯರ್ಥಿಗಳು ಒಂದು ದಿನ ಮೊದಲೇ ಪ್ರಯಾಣ ಬೆಳೆಸಬೇಕು. ಇನ್ನು ಮಂಗಳವಾರ ರಜೆ ಇಲ್ಲದ ಕಾರಣ ಅಂಧ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ರೈಟರ್ ಸಿಗುವುದಿಲ್ಲ. ಹೀಗಾಗಿ ರಜೆ ದಿನಗಳನ್ನು ನೋಡಿಕೊಂಡು ಪರೀಕ್ಷೆಗೆ ದಿನಾಂಕ ನಿಗದಿ ಮಾಡಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ವಿಶೇಷ ಸಾರ್ವತ್ರಿಕ ರಜೆ ಘೋಷಣೆ

2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ಆ.27ರಂದು ಪರೀಕ್ಷೆಗೆ ಅನುವಾಗುವ 214 ಸರ್ಕಾರಿ, 189 ಅನುದಾನಿತ ಮತ್ತು 161 ಶಾಸಗಿ ಶಾಲಾ-ಕಾಲೇಜುಗಳು ಸೇರಿದಂತೆ, ಒಟ್ಟಾರೆ 564 ಪರೀಕ್ಷಾ ಉಪ ಕೇಂದ್ರಗಳಿಗೆ, ಅನ್ವಯಿಸಿದಂತೆ ಒಂದು ದಿನದ ವಿಶೇಷ/ ಸಾರ್ವತ್ರಿಕ ರಜೆಯನ್ನು ರಾಜ್ಯ ಸರ್ಕಾರ ಘೋಷಿಸಿದೆ.

ಮುಂದುವರಿದು ಪರೀಕ್ಷಾ ಉಪ ಕೇಂದ್ರಗಳಲ್ಲಿ ಆ.27ರಂದು ಯಾವುದೇ ಶೈಕ್ಷಣಿಕ ಪರೀಕ್ಷೆಗಳು ಹಾಗೂ ಇನ್ನಿತರೆ ಪೂರ್ವನಿರ್ಧರಿತ ಕಾರ್ಯಕ್ರಮಗಳು ನಿಗದಿಯಾಗಿದ್ದಲ್ಲಿ ಸೂಕ್ತ ಕ್ರಮಕೈಗೊಂಡು ಪ್ರಸಕ್ತ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ನಡೆಸಲು ಅಡಚಣೆಯಾಗದಿರುವುದನ್ನು ಸಂಬಂಧಿತ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು/ಆಡಳಿತ ಮಂಡಳಿಯು ಖಾತರಿ ಪಡಿಸಿಕೊಳ್ಳಬೇಕು. ಇನ್ನು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪರೀಕ್ಷೆಗೆ ಯಾವುದೇ ಅಡಚಣೆ ಉಂಟಾಗದಂತೆ ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಸಂಪೂರ್ಣ ಸಹಕಾರ ನೀಡಬೇಕು ಎಂದು ಸೂಚಿಸಲಾಗಿದೆ.

ಇನ್ನು ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರದ, ಶಾಲಾ ಕಾಲೇಜುಗಳ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಸೇವಾ ನಿರತ ಅಭ್ಯರ್ಥಿಗಳಿಗೆ, ಪರೀಕ್ಷಾ ಪ್ರವೇಶ ಪತ್ರವನ್ನು ರಜಾ ಮಂಜೂರು ಮಾಡುವ ಸಂಬಂಧಿತ ಪ್ರಾಧಿಕಾರಕ್ಕೆ ಕಡ್ಡಾಯವಾಗಿ ಒದಗಿಸಿ, ಷರತ್ತಿಗೊಳಪಟ್ಟು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲು ತಿಳಿಸಲಾಗಿದೆ.

Bus Fare Hike: ಶೀಘ್ರದಲ್ಲೇ ಏರಲಿದೆ ಬಸ್ ಟಿಕೆಟ್ ದರ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಮರ್ಥನೆ!

ಹಾಲ್‌ ಟಿಕೆಟ್‌ ಬಿಡುಗಡೆ

ಆ.27 ರಂದು ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ಪ್ರವೇಶ ಪತ್ರವನ್ನು ಕೆಪಿಎಸ್‌ಸಿ ಬಿಡುಗಡೆ ಮಾಡಿದೆ. ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

Actor Darshan : ಕೊಲೆ ಪ್ರಕರಣದಲ್ಲಿ (Renukaswamy Murder Case) ನಟ ದರ್ಶನ ಬಂಧನವಾಗಿದೆ. ಈ ಮಧ್ಯೆ ನಟನ ಗೆಳತಿ ಪವಿತ್ರಾ (Pavithra Gowda) ಲಾಕ್‌ ಆಗಿದ್ದೆ ರೋಚಕವಾಗಿದೆ. ಇನ್ನೂ ತನ್ನ ಜತೆಗೆ ಇದ್ದ ಹುಡುಗರನ್ನು ನಂಬಿಯೇ ನಾನು ಕೆಟ್ಟಿದ್ದು ಎಂದು ದರ್ಶನ್‌ ಅಳಲು ತೊಡಿಕೊಂಡಿದ್ದಾರೆ. ಇಷ್ಟಕ್ಕೂ ಬಂಧನದ ದಿನ ಏನೆಲ್ಲ ಆಯಿತು ಎಂಬ ಇಂಟರೆಸ್ಟಿಂಗ್‌ ಸ್ಟೋರಿ ಇಲ್ಲಿದೆ.

VISTARANEWS.COM


on

By

Actor darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌(Actor Darshan) ಗ್ಯಾಂಗ್‌ ಜೈಲುಪಾಲಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಿದ್ಧಪಡಿಸುವ ಪ್ರಕ್ರಿಯೆಯನ್ನು ಪೊಲೀಸರು ಶುರು ಮಾಡಿದ್ದಾರೆ. ಈ ಮಧ್ಯೆ ಪೊಲೀಸರ ಬಳಿ ದರ್ಶನ್‌ ಆಪ್ತೆ ಪವಿತ್ರಾಗೌಡ ಲಾಕ್ ಆಗಿದ್ದೆ ರೋಚಕವಾಗಿದೆ.

ದರ್ಶನ್ ಬಂಧನಕ್ಕೆ ಹೊರಟಿದ್ದ ವೇಳೆಯೇ ಪೊಲೀಸರು ಪವಿತ್ರಾಗೂ ಬಲೆ ಬೀಸಿದ್ದರು. ಜೂನ್ 11ರ ಬೆಳಗ್ಗೆ ದರ್ಶನ್ ಬಂಧಿಸಲು ಮೈಸೂರಿಗೆ ತೆರಳಿದ್ದಾಗ, ಈ ವೇಳೆ ಎರಡು ತಂಡ ರಚಿಸಿ ಪವಿತ್ರಾ ಗೌಡಗೂ ಬಲೆ ಬೀಸಿದ್ದರು. ಆದರೆ ಪೊಲೀಸರ ಎರಡೂ ತಂಡಕ್ಕೂ ಚಾಲಾಕಿ ಪವಿತ್ರಾ ಸಿಕ್ಕಿರಲಿಲ್ಲ.

ಹೀಗಾಗಿ ಮಾಸ್ಟರ್‌ ಪ್ಲ್ಯಾನ್‌ ಮಾಡಿದ್ದ ಪೊಲೀಸರು ಮೈಸೂರಿನಲ್ಲೇ ದರ್ಶನ್ ಮೂಲಕವೇ ಪವಿತ್ರಾಳನ್ನು ಸಂಪರ್ಕಿಸಿದ್ದರು. ದರ್ಶನ್ ಫೋನ್‌ನಿಂದಲೇ ಪವಿತ್ರಾಗೌಡಗೆ ಫೋನ್ ಮಾಡಿಸಿ ಎಲ್ಲೂ ಹೋಗದಂತೆ ಸೂಚನೆ ನೀಡಲಾಗಿತ್ತು. ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ಹೋಗು ಎಂದು ದರ್ಶನ್‌ ಪವಿತ್ರಾಗೆ ಹೇಳಿದ್ದರು. ಹೀಗಾಗಿ ದರ್ಶನ್ ಮಾತಿನಂತೆ ಪೊಲೀಸ್ ಠಾಣೆಗೆ ಪವಿತ್ರಾ ಹಾಜರಾಗಿದ್ದರು. ಪವಿತ್ರಾ ಕಾಮಾಕ್ಷಿಪಾಳ್ಯ ಠಾಣೆಯ ಬದಲು ಆರ್ ಆರ್ ನಗರ ಠಾಣೆಗೆ ಹಾಜರಾಗಿದ್ದಳು. ತದನಂತರ ಕಾಮಾಕ್ಷಿಪಾಳ್ಯ ಪೊಲೀಸರು ಕರೆತಂದು ಬಂಧಿಸಿದ್ದರು.

ಇದನ್ನೂ ಓದಿ:Actor Darshan: ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಅರ್ಜಿ ವಿಚಾರಣೆ ಸೆ.5ಕ್ಕೆ ಮುಂದೂಡಿದ ಹೈಕೋರ್ಟ್

ಠಾಣೆಗೆ ಬಂದ ಕೂಡಲೇ ಪೊಲೀಸರ ಮುಂದೆ ದರ್ಶನ್ ಹೇಳಿದ್ದೇನು?

ಮೈಸೂರಿನಲ್ಲಿ ಬಂಧಿಸಿ ದರ್ಶನ್‌ನನ್ನು ಬೆಂಗಳೂರಿಗೆ ಕರೆತರಲಾಗಿತ್ತು. ಠಾಣೆಗೆ ಬರುತ್ತಿದ್ದಂತೇ ದರ್ಶನ್ ಹೇಳಿದ ಮೊದಲ ಮಾತೇನು ಗೊತ್ತಾ? ನನ್ನ ಜತೆ‌ ಇದ್ದ ಈ ಹುಡುಗರಿಂದ ನಾನು ಹಾಳಾದೆ ಎಂದಿದ್ದರಂತೆ. ಹುಡುಗರನ್ನು ನಂಬಿ ನಾನು ಕೆಟ್ಟೆ ಎಂದು ಹೇಳಿಕೊಂಡಿದ್ದರಂತೆ.

ಚಾರ್ಜ್‌ಶೀಟ್‌ ಸಲ್ಲಿಸಲು ತಯಾರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರಿಂದ ತಯಾರಿ ನಡೆದಿದೆ. ಇಲ್ಲಿಯವರೆಗೆ ಸಾಕ್ಷ್ಯ ಕಲೆ‌ ಹಾಕಿ,ಸ್ಥಳ ಮಹಜರು ನಡೆಸಿ,ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದೆ. ಬರೋಬ್ಬರಿ 52 ಸ್ಥಳ ಮಹಜರು,150 ಜನರ ಹೇಳಿಕೆ ದಾಖಲಿಸಿದ್ದಾರೆ. ಚಿತ್ರದುರ್ಗದ ಕಿಡ್ನ್ಯಾಪ್ ಜಾಗದಿಂದ ಹಿಡಿದು ಮೃತದೇಹ ಎಸೆದಿದ್ದ ಜಾಗದವರೆಗೆ ಮಹಜರ್ ಮಾಡಲಾಗಿದೆ.

ಪಟ್ಟಣಗೆರೆ ಶೆಡ್, ದರ್ಶನ್ ನಿವಾಸ, ಪವಿತ್ರಾ ಗೌಡ ನಿವಾಸ ಸೇರಿದಂತೆ ಸ್ಟೋನಿ ಬ್ರೂಕ್ ಪಬ್, ಮೃತ ದೇಹ ಎಸೆದ ಸತ್ವ ಅಪಾರ್ಟ್ ಮೆಂಟ್ ಎದುರಿನ‌ ಕಾಲುವೆ ಸೇರಿದಂತೆ ಕೊಲೆಯ ನಂತರದ‌ ಮಾತುಕತೆ ಜಾಗಗಳು ಸೇರಿ 52 ಕಡೆ ಸ್ಥಳ ಮಹಜರು ಮಾಡಲಾಗಿದೆ. ಪ್ರಕರಣದಲ್ಲಿ ಸಾಕ್ಷಿಯಾಗಿರುವ 150 ಜನರ‌ ಹೇಳಿಕೆ‌ ದಾಖಲಾಗಿದೆ.

ಘಟನೆ ಸಂಬಂಧಿಸಿದಂತೆ ಆರೋಪಿಗಳು ಎಲ್ಲೆಲ್ಲಿ ತೆರಳಿದ್ದರು. ಯಾರ್ಯಾರ ಸಂಪರ್ಕ ಮಾಡಿದ್ದರು? ಪೆಟ್ರೋಲ್ ಬಂಕ್ ಸಿಬ್ಬಂದಿ‌, ಹೋಟೆಲ್ ಸಿಬ್ಬಂದಿ, ಸಹಚರರ ಹೇಳಿಕೆ ಸೇರಿ ಒಟ್ಟಾರೆಯಾಗಿ ಬರೋಬ್ಬರಿ 150 ಕ್ಕೂ ಹೆಚ್ಚು ಜನರ ಹೇಳಿಕೆ ದಾಖಲಾಗಿದೆ.

ಪುಸ್ತಕದ ಮೊರೆ ಹೋದ ದರ್ಶನ್‌

ನಟ ದರ್ಶನ್ ಜೈಲಿನಲ್ಲಿ ಕಳೆದ 64 ದಿನದಿಂದ ಮಂಕಾಗಿ ಕಾಲ ಕಳೆಯುತ್ತಿದ್ದಾರೆ. ನಿಧಾನವಾಗಿ ಜೈಲಿನ ಪರಿಸರಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ. ಬೇಜಾರು ಕಳೆಯೋದಕ್ಕೆ ವಾಲಿಬಾಲ್ ಆಟಕ್ಕೆ ಇಳಿದಿದ್ದಾರೆ. ಈಗಾಗಲೇ ಜೈಲೊಳಗಡೆ ಪುಸ್ತಕದ ಮೊರೆ ಹೋಗಿದ್ದು, ಜತೆಗೆ ಬೇಜಾರು ಕಳೆಯಲು ವಾಲಿಬಾಲ್ ಕೂಡ ಆಡುತ್ತಿದ್ದಾರೆ. ಜೈಲಿನ‌ ಇತರೆ ಖೈದಿಗಳ‌ ಜತೆ ಸೇರಿ ವಾಲಿಬಾಲ್ ಆಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Western Ghats: ಭೂ ಕುಸಿತ ಹಿನ್ನೆಲೆ; ಪಶ್ಚಿಮ ಘಟ್ಟಗಳಲ್ಲಿನ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ

Western Ghats: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಭೂಕುಸಿತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವುಗೊಳಿಸಲು ಮುಂದಾಗಿದೆ. ಇದೀಗ ಎಲ್ಲ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ / ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಭೂ ದಾಖಲೆ) ವಸ್ತು ನಿಷ್ಠ ಮಾಹಿತಿಯನ್ನು ಕೂಡಲೇ ಸಲ್ಲಿಸುವಂತೆ ಸೂಚಿಸಿದ್ದಾರೆ.

VISTARANEWS.COM


on

Western Ghats
Koo

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಭೂಕುಸಿತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವುಗೊಳಿಸಲು ಮುಂದಾಗಿದೆ. ಈ ಸಂಬಂಧ ಕೆಲವು ದಿನಗಳ ಹಿಂದೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ (Eshwar Khandre) ಅವರು ಸುತ್ತೋಲೆ ಹೊರಡಿಸಿದ್ದು, ಪಶ್ಚಿಮ ಘಟ್ಟದಲ್ಲಿ (Western Ghats) 2015ರಿಂದ ಈಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದರು. ಇದೀಗ ಎಲ್ಲ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ / ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಭೂ ದಾಖಲೆ) ವಸ್ತು ನಿಷ್ಠ ಮಾಹಿತಿಯನ್ನು ಕೂಡಲೇ ಸಲ್ಲಿಸುವಂತೆ ಸೂಚಿಸಿದ್ದಾರೆ.

2015ರ ನಂತರದಲ್ಲಿ ರಾಜ್ಯದ ಪಶ್ಚಿಮ ಘಟ್ಟ ಮತ್ತು ಇತರ ಘಟ್ಟ ಪ್ರದೇಶದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್‌, ಹೋಂ ಸ್ಟೇ, ತೋಟ, ಬಡಾವಣೆ ಹಾಗೂ ಇನ್ನಿತರ ಅರಣ್ಯ ಒತ್ತುವರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ವೈಯಕ್ತಿಕ ಗಮನ ಹರಿಸಿ ಪರಿಶೀಲಿಸಿ ವಸ್ತು ನಿಷ್ಠ ಮಾಹಿತಿಯನ್ನು ಕೂಡಲೇ ಸಲ್ಲಿಸಲು ನೀಡಿರುವ ನಿರ್ದೇಶನಗಳನ್ನು ಪುನರುಚ್ಚರಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತವಾಗಿ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.

ಸಚಿವರು ಹೇಳಿದ್ದೇನು?

ಈ ಬಗ್ಗೆ ಮಾತನಾಡಿದ್ದ ಸಚಿವ ಈಶ್ವರ್‌ ಖಂಡ್ರೆ, ʼʼರಾಜ್ಯದ ಪಶ್ಚಿಮ ಘಟ್ಟಗಳಲ್ಲಿ 2015ರ ನಂತರ ಅರಣ್ಯ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ನಿರ್ಮಿಸಿರುವ ಹೋಮ್ ಸ್ಟೇ , ರೆಸಾರ್ಟ್ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಕೃತಿ ವಿಕೋಪದಿಂದ ಆಗುತ್ತಿರುವ ಅನಾಹುತಗಳನ್ನು ನೋಡುತ್ತಿದ್ದೇವೆ. ಕೇರಳದಲ್ಲಿ ಆದ ಘಟನೆಯಿಂದ ನಾಲ್ಕೈದು ಹಳ್ಳಿ ನಾಪತ್ತೆಯಾಗಿ ನೂರಾರು ಜನರು ಸಾವಿಗೀಡಾಗಿದ್ದಾರೆ. ವಿಶೇಷವಾಗಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ರಸ್ತೆ ಮಾಡುತ್ತಾರೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸುತ್ತಾರೆ. ಇವುಗಳಿಂದ ಅನಾಹುತ ಆಗುತ್ತದೆ. ಮೊದಲು ಕೃಷಿ ಚಟುವಟಿಕೆಗಳನ್ನು ಶುರುಮಾಡಿ ನಂತರ ರೆಸಾರ್ಟ್ ಮಾಡುತ್ತಾರೆ. ಹೀಗಾಗಿ ಅನಧಿಕೃತ ಹೋಂ ಸ್ಟೇ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಿದೆʼʼ ಎಂದು ತಿಳಿಸಿದ್ದರು.

ಇದನ್ನೂ ಓದಿ: Tiger Nail : ಹುಲಿ ಉಗುರು ಧರಿಸಿದ ಅರಣ್ಯಾಧಿಕಾರಿಗಳ ಸಸ್ಪೆಂಡ್; ಸಚಿವ ಈಶ್ವರ್‌ ಖಂಡ್ರೆ ಸೂಚನೆ

Continue Reading

ಕರ್ನಾಟಕ

Karkala Shocker: ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿದ ಅಲ್ತಾಫ್‌ಗೆ ಕಠಿಣ ಶಿಕ್ಷೆಯಾಗಲಿ ಎಂದ ಮುಸ್ಲಿಂ ಒಕ್ಕೂಟ

Karkala Shocker: ಕಾರ್ಕಳದಲ್ಲಿ ಹಿಂದೂ ಯುವತಿಗೆ ಮತ್ತು ಬರಿಸುವ ಔಷಧ ನೀಡಿ ಮುಸ್ಲಿಂ ಯುವಕ ಅತ್ಯಾಚಾರ ಎಸಗಿದ ಪ್ರಕರಣದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟವೂ ಪ್ರಕರಣವನ್ನು ಖಂಡಿಸಿದೆ. ಹಿಂದೂ ಸಹೋದರಿ ಮೇಲಿನ ಅತ್ಯಾಚಾರವನ್ನು ಖಂಡಿಸುತ್ತೇವೆ ಎಂದು ಮುಸ್ಲಿಂ ಜಿಲ್ಲಾ ಒಕ್ಕೂಟದ ಮಾಜಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶರೀಫ್ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

Karkala Shocker
Koo

ಉಡುಪಿ: ಕಾರ್ಕಳದಲ್ಲಿ (Karkala News) ಹಿಂದೂ ಯುವತಿಗೆ (Hindu Girl) ಮತ್ತು ಬರಿಸುವ ಔಷಧ ನೀಡಿ ಮುಸ್ಲಿಂ ಯುವಕ ಅತ್ಯಾಚಾರ ಎಸಗಿದ (Physical Abuse) ಪ್ರಕರಣದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟವೂ ಪ್ರಕರಣವನ್ನು ಖಂಡಿಸಿದೆ. ಹಿಂದೂ ಸಹೋದರಿ ಮೇಲಿನ ಅತ್ಯಾಚಾರವನ್ನು ಖಂಡಿಸುತ್ತೇವೆ ಎಂದು ಮುಸ್ಲಿಂ ಜಿಲ್ಲಾ ಒಕ್ಕೂಟದ ಮಾಜಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶರೀಫ್ ಪ್ರತಿಕ್ರಿಯಿಸಿದ್ದಾರೆ.

ʼʼಯುವತಿಯನ್ನ ಕರೆದುಕೊಂಡು ಹೋಗಿ ಮಾದಕ ದ್ರವ್ಯ ನೀಡಿ ಅತ್ಯಾಚಾರ ಮಾಡಲಾಗಿದೆ. ಅತ್ಯಾಚಾರ ಮಾಡಿದ ವಿಕೃತ ಮನಸ್ಸಿನ ಕಾಮುಕ ಅಲ್ತಾಫ್ ಕಠಿಣ ಶಿಕ್ಷೆಯಾಗಲಿ. ಕಾರ್ಕಳದಲ್ಲಿ ನಾವು ಸೌಹಾರ್ದತೆಯನ್ನು ಬಯಸುತ್ತೇವೆ. ಕಾರ್ಕಳಕ್ಕೆ ಸೌಹಾರ್ದತೆಯ ಇತಿಹಾಸವಿದೆʼʼ ಎಂದು ಅವರು ತಿಳಿಸಿದ್ದಾರೆ.

ʼʼಇದುವರೆಗೂ ಕಾರ್ಕಳದಲ್ಲಿ ಸೌಹಾರ್ದತೆ ಕಾಪಾಡಿಕೊಂಡು ಬಂದಿದ್ದೇವೆ. ಮುಂದೆಯೂ ಕಾಪಾಡಿಕೊಳ್ಳುತ್ತೇವೆ. ಹೊರ ಜಿಲ್ಲೆಯಿಂದ ಬಂದಂತಹ ಅಲ್ತಾಫ್‌ನಂತಹ ವ್ಯಕ್ತಿಗಳು ಬಾಡಿಗೆ ಮನೆಯಲ್ಲಿ ಉಳಿದು ಇಂತಹ ಪ್ರಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಅಲ್ತಾಫ್ ಈ ಹಿಂದೆ ಬಂಗ್ಲೆ ಗುಡ್ಡೆ ಪ್ರದೇಶದಲ್ಲಿ ಇಂತಹದ್ದೇ ಕೃತ್ಯ ಎಸಗಲು ಹೋಗಿ ಯುವಕರಿಂದ ಪೆಟ್ಟು ತಿಂದಿದ್ದ. ಇದೀಗ ಮತ್ತೆ ನೀಚ ಕೃತ್ಯ ಎಸಗಿದ್ದಾನೆʼʼ ಎಂದು ಮೊಹಮ್ಮದ್ ಶರೀಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ʼʼಈ ಕೃತ್ಯ ಮಾನವ ಸಮುದಾಯಕ್ಕೆ ಮಾಡಿದಂತಹ ಘೋರ ಅನಾಚಾರ. ಕೇವಲ ಹಿಂದೂ ಸಮಾಜವಲ್ಲ ಪೂರ್ಣ ಸಮಾಜವೇ ಎಚ್ಚೆತ್ತುಕೊಳ್ಳಬೇಕಾದ ಪರಿಸ್ಥಿತಿ ಇದೆ. ಪ್ರಕರಣದಲ್ಲಿ ಮಾದಕ ದ್ರವ್ಯ ಬಳಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಾದಕ ದ್ರವ್ಯ ಸುಲಭದಲ್ಲಿ ಸಿಗುವಂತಿದೆ. ಮಾದಕ ದ್ರವ್ಯ ಜಾಲದ ತಂಡವನ್ನ ಪತ್ತೆ ಹಚ್ಚಿ ಅವರಿಗೂ ಕಠಿಣ ಶಿಕ್ಷೆಯನ್ನು ನೀಡಬೇಕುʼʼ ಎಂದು ಆಗ್ರಹಿಸಿದ್ದಾರೆ.

ʼʼಘಟನೆ ನಡೆದ ಒಂದು ಗಂಟೆಯೊಳಗೆ ಆರೋಪಿಯನ್ನ ಪತ್ತೆ ಹಚ್ಚಿದ ಪೊಲೀಸ್ ಇಲಾಖೆಗೆ ಅಭಿನಂದನೆಗಳು. ಇಂದು ನಾವು ನಮ್ಮ ಸಮುದಾಯದಿಂದಲೇ ಅಲ್ತಾಫ್‌ನನ್ನು ಹೊರಗಿಡುವ ನಿರ್ಣಯವನ್ನು ಕೈಗೊಂಡಿದ್ದೇವೆ. ಇಂತಹ ವ್ಯಕ್ತಿಗಳಿಂದ ನಮ್ಮ ಸಮುದಾಯಕ್ಕೆ ಕೆಟ್ಟ ಹೆಸರು. ಇನ್ನು ನಮ್ಮ ಸಮುದಾಯದ ಯಾವುದೇ ವಕೀಲರು ಆರೋಪಿಯ ಪರವಾಗಿ ವಾದ ಮಾಡಬಾರದು. ಇದು ನಮ್ಮ ಮನವಿ. ಪೊಲೀಸ್ ಇಲಾಖೆ ಈ ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕುʼʼ ಎಂದು ಮೊಹಮ್ಮದ್ ಶರೀಫ್ ಹೇಳಿದ್ದಾರೆ.

ಇದನ್ನೂ ಓದಿ: Love Jihad: ಹಿಂದೂ ಯುವತಿಯ ಕರೆದೊಯ್ದ ಮುಸ್ಲಿಂ ಯುವಕ; ಕಾರ್ಕಳ ಪ್ರಕ್ಷುಬ್ಧ

ಏನಿದು ಪ್ರಕರಣ?

ಇನ್‌ಸ್ಟಾಗ್ರಾಂನಲ್ಲಿ (Instagram) ಸ್ನೇಹ ಬೆಳೆಸಿ ಹಿಂದೂ ಯುವತಿಯನ್ನು ಕರೆದೊಯ್ದ ಮುಸ್ಲಿಂ ಯುವಕ ಅಲ್ತಾಫ್, ಆಕೆಗೆ ಬಿಯರ್‌ನಲ್ಲಿ ಮತ್ತು ಬರಿಸುವ ಔಷಧ ಸೇರಿಸಿ ಕುಡಿಸಿ ಅತ್ಯಾಚಾರ ಎಸಗಿದ್ದ. ಇದಕ್ಕೆ ಆತನ ಇಬ್ಬರು ಸ್ನೇಹಿತರು ಸಹಕರಿಸಿದ್ದು, ಸಾಮೂಹಿಕ ಅತ್ಯಾಚಾರ ನಡೆದಿದೆಯೇ ಎಂಬುದು ಇನ್ನೂ ದೃಢಪಡಬೇಕಿದೆ. ಸದ್ಯ ಈ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಅಲ್ತಾಫ್ ಮತ್ತು ಇಬ್ಬರ ವಿರುದ್ಧ ಕಾರಿನಲ್ಲಿ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ರೇಪ್ ಮಾಡಿದ ಆರೋಪ ಪ್ರಕರಣ ದಾಖಲಾಗಿದೆ. ಮಧ್ಯಾಹ್ನ ಆಕೆಯನ್ನು ಕರೆದೊಯ್ದಿದ್ದ ಅಲ್ತಾಫ್, ಮಾದಕ ಪಾನೀಯ ಕುಡಿಸಿ ಮತ್ತು ಬರಿಸಿ ಸಂಜೆಯವರೆಗೆ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

Continue Reading

ಕ್ರೈಂ

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿದ; ಚೈನ್ ಸ್ನಾಚಿಂಗ್‌ಗೆ ಇಳಿದು ಸಿಕ್ಕಿಬಿದ್ದ

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟ ಮೈಗೂಡಿಸಿಕೊಂಡು ಮೈತುಂಬ ಸಾಲ ಮಾಡಿಕೊಂಡಿದ್ದವನೊಬ್ಬ ಸಾಲ ತೀರಿಸಲು ಸರಗಳ್ಳತನಕ್ಕೆ ಇಳಿದು ಇದೀಗ ಸಿಕ್ಕಿಬಿದ್ದಿದ್ದಾನೆ. ಕತ್ರಿಗುಪ್ಪೆ ನಿವಾಸಿ ಕುಮಾರ್ ಬಂಧಿತ. ಆನ್‌ಲೈನ್‌ನಲ್ಲಿ ಬೆಟ್ಟಿಂಗ್ ಗೇಮ್ ಆಡುತ್ತಿದ್ದ ಆರೋಪಿ ಕುಮಾರ್ ಈ ವೇಳೆ ಸಾಕಷ್ಟು ಹಣ ಕಳೆದುಕೊಂಡಿದ್ದ. ಬೆಟ್ಟಿಂಗ್‌ ಕಾರಣಕ್ಕೆ ಒಂದಲ್ಲ, ಎರಡಲ್ಲ ಬರೋಬ್ಬರಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಸಾಲ ತೋರಿಸಲು ಸರಗಳ್ಳತನಕ್ಕೆ ಇಳಿದಿದ್ದ.

VISTARANEWS.COM


on

Chain snatching Case
Koo

ಬೆಂಗಳೂರು: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದವರು ಹಣಕ್ಕಾಗಿ ಯಾವ ಅಡ್ಡ ದಾರಿಯನ್ನಾದರೂ ಹಿಡಿಯಲು ತಯಾರಿರುತ್ತಾರೆ ಎನ್ನುವುದಕ್ಕೆ ಈತನೇ ಉತ್ತಮ ನಿದರ್ಶನ. ಹೌದು, ಆನ್‌ಲೈನ್‌ ಬೆಟ್ಟಿಂಗ್ ಚಟ ಮೈಗೂಡಿಸಿಕೊಂಡು ಮೈತುಂಬ ಸಾಲ ಮಾಡಿಕೊಂಡಿದ್ದವನೊಬ್ಬ ಮಾಡಿದ ಸಾಲ ತೀರಿಸಲು ಸರಗಳ್ಳತನಕ್ಕೆ (Chain snatching case)  ಇಳಿದು ಇದೀಗ ಸಿಕ್ಕಿಬಿದ್ದಿದ್ದಾನೆ. ಕತ್ರಿಗುಪ್ಪೆ ನಿವಾಸಿ ಕುಮಾರ್ ಬಂಧಿತ ಆರೋಪಿ.

ಆನ್‌ಲೈನ್‌ನಲ್ಲಿ ಬೆಟ್ಟಿಂಗ್ ಗೇಮ್ ಆಡುತ್ತಿದ್ದ ಆರೋಪಿ ಕುಮಾರ್ ಈ ವೇಳೆ ಸಾಕಷ್ಟು ಹಣ ಕಳೆದುಕೊಂಡಿದ್ದ. ಬೆಟ್ಟಿಂಗ್‌ ಕಾರಣಕ್ಕೆ ಒಂದಲ್ಲ, ಎರಡಲ್ಲ ಬರೋಬ್ಬರಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಹಣ ಸಾಲ ಕೊಟ್ಟವರು ವಾಪಾಸ್ ನೀಡುವಂತೆ ಕೇಳತೊಡಗಿದಾಗ ಕುಮಾರ್‌ ಸರಗಳ್ಳತನಕ್ಕೆ ಇಳಿದಿದ್ದ.

ವಿಳಾಸ ಕೇಳುವ ನೆಪ

ಸರಗಳ್ಳತನಕ್ಕೆ ಕುಮಾರ್‌ ಖತರ್ನಾಕ್‌ ಯೋಜನೆ ರೂಪಿಸಿದ್ದ. ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರ ಗಮನ ಬೇರೆಡೆ ಸೆಳೆದು ಸರಕಳವು ಮಾಡುತ್ತಿದ್ದ. ಗಿರಿನಗರದ ಬೈರಪ್ಪ ಲೇಔಟ್‌ನಲ್ಲಿ ಕೃತ್ಯ ಎಸಗಿದ್ದ ವೇಳೆ ಸಿಕ್ಕಿಬಿದ್ದಿದ್ದ. ಸದ್ಯ ಕುಮಾರ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಪೊಲೀಸರಿಂದ ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಕುಮಾರ್‌ ಮಾಡಿದ ಸಾಲ ತೀರಿಸಲು ಆಟೋವನ್ನೂ ಅಡವಿಟ್ಟಿದ್ದ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಸಾಲದ ಸಂಗತಿ ಬೆಳೆಕಿಗೆ ಬಂದಿದ್ದು, ತನಿಖೆ ಮುಂದುವರಿದಿದೆ.

ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದವ ಬಂಧನ

ಬೆಂಗಳೂರು: ಸುಲಭವಾಗಿ ಹಣ ಮಾಡಲು ಖತರ್ನಾಕ್ ಪ್ಲ್ಯಾನ್‌ ಮಾಡಿದ್ದ ವಂಚಕನೊಬ್ಬ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದು ಕಾರು ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ ಜಮೀಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಖತರ್ನಾಕ್ ಪ್ಲ್ಯಾನ್‌?

ಹಾಗಾದರೆ ಈತ ಮಾಡುತ್ತಿದ್ದ ಖತರ್ನಾಕ್ ಕೆಲಸ ಏನು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ. ಕಾರು ಚಾಲಕರೇ ಈತನ ಟಾರ್ಗೆಟ್. ಕಾರಿಗೆ ಬೇಕಂದೇ ಬೈಕ್ ಟಚ್ ಮಾಡಿ ಹಣ ಕೀಳುತ್ತಿದ್ದ. ʼʼಕಾರು ಹೋಗುವಾಗ ಜಮೀಲ್‌ ತನ್ನ ಬೈಕ್‌ ಅನ್ನು ಬೇಕಂತಲೇ ಟಚ್ ಮಾಡುತ್ತಿದ್ದ. ಬಳಿಕ ದೂರು ಕೊಡುತ್ತೇನೆ ಎಂದು ಬೆದರಿಸಿ ಚಾಲಕರಿಂದ ಹಣ ಕೀಳುತ್ತಿದ್ದʼʼ ಎಂದು ಪೊಲೀಸರು ತಿಳಿಸಿದ್ದಾರೆ. ʼʼಕಾರು ಟಚ್ ಅಗಿದೆ ಎಂದು ಮಧ್ಯ ರಸ್ತೆಯಲ್ಲಿ ಅಡ್ಡ ಹಾಕುತ್ತಿದ್ದ. ಡ್ಯಾಮೇಜ್ ಸರಿಪಡಿಸಲು ದುಡ್ಡು ಕೊಡಿ ಎಂದು ಬಲ ಪ್ರಯೋಗ ಮಾಡುತ್ತಿದ್ದ. ದುಡ್ಡು ಕೊಡದೆ ಹೋದ್ರೆ ದೂರು ಕೊಡ್ತೀನಿ ಎಂದು ಹೆದರಿಸುತ್ತಿದ್ದʼʼ ಎಂದು ಹೇಳಿದ್ದಾರೆ.

ಈತನ ಮೇಲೆ ಇದುವರೆಗೆ ಒಟ್ಟು 17 ಪ್ರಕರಣ ದಾಖಲಾಗಿದೆ. ರಾಜ್ಯದ ವಿವಿಧ ಠಾಣೆಗಳಲ್ಲಿ ಈತನ ವಿರುದ್ಧ ವಿವಿಧ ಪ್ರಕರಣಗಳಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಕ್ಕಿ ಬಿದ್ದಿದ್ದು ಹೇಗೆ?

ಜಯನಗರ ಠಾಣಾ ವ್ಯಾಪ್ತಿಯಲ್ಲೂ ಕೂಡ ಇದೇ ರೀತಿ ಮಾಡಿ 30,000 ರೂ. ಪಡೆದಿದ್ದ ಜಮೀಲ್‌ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ. ಈ ಬಗ್ಗೆ ಜಯನಗರ ಠಾಣೆಗೆ ಕಾರು ಚಾಲಕ ದೂರು ಕೊಟ್ಟಿದ್ದ. ಹೀಗಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Chain snatching Case : ಜಾಬ್‌ಗೆ ಹೋಗುವ ಹೆಣ್ಮಕ್ಕಳೇ ಟಾರ್ಗೆಟ್‌‌ ; ಸರಗಳ್ಳರ ಗ್ಯಾಂಗ್‌ಗೆ ಸಖತ್ ಗೂಸಾಇದನ್ನೂ ಓದಿ:

Continue Reading
Advertisement
Gold Rate Today
ಚಿನ್ನದ ದರ44 seconds ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬಂಗಾರ ಖರೀದಿಯ ಮುನ್ನ ಬೆಲೆ ಚೆಕ್‌ ಮಾಡಿ

Actor darshan
ಸ್ಯಾಂಡಲ್ ವುಡ್7 mins ago

Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

Western Ghats
ಕರ್ನಾಟಕ32 mins ago

Western Ghats: ಭೂ ಕುಸಿತ ಹಿನ್ನೆಲೆ; ಪಶ್ಚಿಮ ಘಟ್ಟಗಳಲ್ಲಿನ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ

Israel vs Hezbollah War
ವಿದೇಶ50 mins ago

Israel vs Hezbollah War: ಹೆಜ್ಬುಲ್ಲಾ ಉಗ್ರರ ಅಟ್ಟಹಾಸ; ಲೆಬನಾನ್‌ ಮೇಲೆ ರಾಕೆಟ್​ ದಾಳಿ ಆರಂಭಿಸಿದ ಇಸ್ರೇಲ್​; ಭಯಾನಕ ವಿಡಿಯೊ ಇಲ್ಲಿದೆ

Dhanya Ramkumar-Vicky Varun starrer Kaalapathar to release on September 13
ಸಿನಿಮಾ1 hour ago

Dhanya Ramkumar: ತೆರೆಗೆ ಸಿದ್ಧವಾಯ್ತು ಕಾಲಾಪತ್ಥರ್‌; ಸೆ.13ಕ್ಕೆ ಧನ್ಯಾ ರಾಮ್‌ಕುಮಾರ್- ವಿಕ್ಕಿ ವರುಣ್‌ ನಟನೆ ಮೋಡಿ

Karkala Shocker
ಕರ್ನಾಟಕ1 hour ago

Karkala Shocker: ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿದ ಅಲ್ತಾಫ್‌ಗೆ ಕಠಿಣ ಶಿಕ್ಷೆಯಾಗಲಿ ಎಂದ ಮುಸ್ಲಿಂ ಒಕ್ಕೂಟ

Pavel Durov Arrest
ವಿದೇಶ1 hour ago

Pavel Durov Arrest: ಟೆಲಿಗ್ರಾಂ ಸಿಇಒ ಪಾವೆಲ್‌‌ ಫ್ರಾನ್ಸ್‌‌ನಲ್ಲಿ ಬಂಧನ; ಕಾರಣ ಏನು?

CBI Raid
ದೇಶ2 hours ago

CBI Raid: ಆರ್‌.ಜಿ. ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ನಿವಾಸದ ಮೇಲೆ ಸಿಬಿಐ ದಾಳಿ

Israel strike
ವಿದೇಶ2 hours ago

Israel strike: ರಾಕೆಟ್ ದಾಳಿ; ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

Rohit Sharma
ಕ್ರೀಡೆ3 hours ago

Rohit Sharma: ಪಾರ್ಕ್​ನಲ್ಲಿ ಅಭ್ಯಾಸ ನಡೆಸಿದ ರೋಹಿತ್​; ವಿಡಿಯೊ ವೈರಲ್​

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ21 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌