Jammu-Kashmir Election: ಪಿಡಿಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ; 200 ಯೂನಿಟ್‌ ಫ್ರೀ ಕರೆಂಟ್‌ ಭರವಸೆ; ಮೈತ್ರಿ ಬಗ್ಗೆ ಮುಫ್ತಿ ಕಿಡಿ - Vistara News

ದೇಶ

Jammu-Kashmir Election: ಪಿಡಿಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ; 200 ಯೂನಿಟ್‌ ಫ್ರೀ ಕರೆಂಟ್‌ ಭರವಸೆ; ಮೈತ್ರಿ ಬಗ್ಗೆ ಮುಫ್ತಿ ಕಿಡಿ

Jammu-Kashmir Election: ಮುಂಬರುವ ವಿಧಾನಸಭೆ ಚುನಾವಣೆಗೆ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ ಮುಫ್ತಿ, ಆ ಎರಡೂ ಪಕ್ಷಗಳು ಯಾವುದೇ ಅಜೆಂಡಾ ಹೊಂದಿಲ್ಲ ಮತ್ತು ಕೇವಲ ಸೀಟು ಹಂಚಿಕೊಂಡು ಅಧಿಕಾರಕ್ಕೆ ಬರುವುದಷ್ಟೇ ಅವರ ಮೈತ್ರಿ ಉದ್ದೇಶ. ತಮ್ಮ ಪಕ್ಷವು ಯಾವುದೇ ಅಜೆಂಡಾ ಇಲ್ಲದೇ ಕೇವಲ ಸೀಟು ಹಂಚಿಕೆಯ ಮಾತುಕತೆಯಿಂದಾಗಿ ಯಾವುದೇ ಮೈತ್ರಿ ಅಡಿಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಹೇಳಿದರು.

VISTARANEWS.COM


on

Jammu-Kashmir Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ(Jammu-Kashmir Election) ಚುನಾವಣೆ ದಿನೇ ದಿನೇ ರಂಗೇರುತ್ತಿದ್ದು, ಮಾಜಿ ಮುಖ್ಯಮಂತ್ರಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ(Mehbooba Mufti) ನೇತೃತ್ವದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಶನಿವಾರ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ವಿಧಾನಸಭೆ ಚುನಾವಣೆ(Assembly Election)ಯಲ್ಲಿ ತಮ್ಮ ಪಿಡಿಪಿ ಅಧಿಕಾರಕ್ಕೆ ಬಂದರೆ ಉಚಿತ 200 ಯೂನಿಟ್ ವಿದ್ಯುತ್(Free Electricity) ನೀಡುವುದಾಗಿ ಮತ್ತು ಹಳೆಯ ಪಿಂಚಣಿ ಯೋಜನೆ(Old pension scheme)ಯನ್ನು ಜಾರಿಗೊಳಿಸುವುದಾಗಿ ಘೋಷಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಫ್ತಿ, ದೇವಸ್ಥಾನಗಳು, ಮಸೀದಿಗಳು ಮತ್ತು ಗುರುದ್ವಾರಗಳಿಗೆ ತಮ್ಮ ಪಕ್ಷವು ಉಚಿತ ವಿದ್ಯುತ್ ಅನ್ನು ಖಚಿತಪಡಿಸುತ್ತದೆ ಎಂದು ಅವರು ಭರವಸೆ ನೀಡಿದರು. ತಮ್ಮ ಪಕ್ಷವು ಗುತ್ತಿಗೆ ಶಿಕ್ಷಕರ ಗೌರವಧನವನ್ನು ಹೆಚ್ಚಿಸಲಿದೆ. ಇನ್ನು ಕಂಬಿಗಳ ಹಿಂದೆ ಇರುವವರಿಗೆ ಉಚಿತ ಕಾನೂನು ಸೌಲಭ್ಯ ಒದಗಿಸಲಾಗುವುದು ಎಂದು ಅವರು ಹೇಳಿದರು.

ಮೈತ್ರಿ ಬಗ್ಗೆ ಮುಫ್ತಿ ಏನಂದ್ರು?

ಮುಂಬರುವ ವಿಧಾನಸಭೆ ಚುನಾವಣೆಗೆ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ ಮುಫ್ತಿ, ಆ ಎರಡೂ ಪಕ್ಷಗಳು ಯಾವುದೇ ಅಜೆಂಡಾ ಹೊಂದಿಲ್ಲ ಮತ್ತು ಕೇವಲ ಸೀಟು ಹಂಚಿಕೊಂಡು ಅಧಿಕಾರಕ್ಕೆ ಬರುವುದಷ್ಟೇ ಅವರ ಮೈತ್ರಿ ಉದ್ದೇಶ. ತಮ್ಮ ಪಕ್ಷವು ಯಾವುದೇ ಅಜೆಂಡಾ ಇಲ್ಲದೇ ಕೇವಲ ಸೀಟು ಹಂಚಿಕೆಯ ಮಾತುಕತೆಯಿಂದಾಗಿ ಯಾವುದೇ ಮೈತ್ರಿ ಅಡಿಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಹೇಳಿದರು.

ನಮ್ಮ ಅಜೆಂಡಾವನ್ನು ಎನ್‌ಸಿ ಮತ್ತು ಕಾಂಗ್ರೆಸ್‌ ಒಪ್ಪಿದರೆ ಅವರು ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧಿಸಲಿ. ನಾವೂ ಅವರನ್ನು ಬೆಂಬಲಿಸುತ್ತೇವೆ. ನನಗೆ ಕಾಶ್ಮೀರದ ಸಮಸ್ಯೆಯನ್ನು ಪರಿಹರಿಸುವುದು ಎಲ್ಲಕ್ಕಿಂತ ಮುಖ್ಯವಾಗಿದೆ. 2014 ರಿಂದ 2018 ರವರೆಗೆ ಬಿಜೆಪಿಯೊಂದಿಗೆ ತಮ್ಮ ಪಕ್ಷದ ಮೈತ್ರಿ ಕುರಿತು ಮಾತನಾಡಿದ ಮುಫ್ತಿ, “ನಾವು ಈ ಹಿಂದೆ ಮೈತ್ರಿ ಮಾಡಿಕೊಂಡಾಗ ನಮಗೆ ಒಂದು ಅಜೆಂಡಾ ಇತ್ತು, ನಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಾಗ, ಅವರು ನಮ್ಮ ಅಜೆಂಡಾವನ್ನು ಒಪ್ಪಿದ ಬಳಿಕವಷ್ಟೇ ಮೈತ್ರಿ ಮಾಡಿಕೊಂಡಿದ್ದೆವು.

ಶಾರದಾ ಪೀಠಕ್ಕೆ ಮಾರ್ಗ ಓಪನ್‌

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಹಿಂದೂ ಯಾತ್ರಾಸ್ಥಳ ಶಾರದಾ ಪೀಠಕ್ಕೆ ಮಾರ್ಗವನ್ನು ತೆರೆಯಲು ಮತ್ತು ಪಾಕಿಸ್ತಾನದೊಂದಿಗೆ ರಾಜಿ ಮತ್ತು ಸಂವಾದವನ್ನು ತಮ್ಮ ಪಕ್ಷವು ಬಯಸುತ್ತದೆ ಎಂದು ಅವರು ಹೇಳಿದರು. ನಾಗರಿಕರಿಗಾಗಿ ನಿಯಂತ್ರಣ ರೇಖೆ (ಎಲ್‌ಒಸಿ) ತೆರೆಯುವ ಮೂಲಕ ಜನರ-ಜನರ ನಡುವಿನ ಸಂಬಂಧವನ್ನು ಸುಧಾರಿಸಲು ಅವರು ಕರೆ ನೀಡಿದರು.

ಇದನ್ನೂ ಓದಿ: Jammu-Kashmir Election: ರಂಗೇರಿದ ಚುನಾವಣೆ- ಫಾರೂಖ್‌ ಭೇಟಿಯಾದ ರಾಹುಲ್‌, ಖರ್ಗೆ; ಕಾಂಗ್ರೆಸ್‌-NC ಮೈತ್ರಿ ಕನ್ಫರ್ಮ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mann Ki Baat: ಚಂದ್ರಯಾನ-3ರ ಯಶಸ್ಸನ್ನು ದೇಶ ಮರೆಯಲು ಸಾಧ್ಯವೇ ಇಲ್ಲ: ʼಮನ್​ ಕಿ ಬಾತ್​ʼನಲ್ಲಿ ಮೋದಿ ಬಣ್ಣನೆ

Mann Ki Baat: ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿದ್ದು, ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಐತಿಹಾಸಿಕ ಕ್ಷಣವನ್ನು ಮರೆಯಲು ಸಾಧ್ಯವೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ʼಮನ್​ ಕಿ ಬಾತ್​ʼ ನ 113ನೇ ಸಂಚಿಕೆಯಲ್ಲಿ ಬಣ್ಣಿಸಿದರು. 21ನೇ ಶತಮಾನದಲ್ಲಿ ಭಾರತದಲ್ಲಿ ಬಹಳಷ್ಟು ಅತ್ಯುತ್ತಮ ಕಾರ್ಯಗಳು ನಡೆಯುತ್ತಿವೆ. ಇವು ಅಭಿವೃದ್ಧಿ ಹೊಂದಿದ ರಾಷ್ಟ್ರ ನಿರ್ಮಾಣದ ಗುರಿಯನ್ನು ಇನ್ನಷ್ಟು ಬಲಪಡಿಸುತ್ತಿದೆ ಎಂದು ಪ್ರಧಾನಿ ಹೇಳಿದರು.

VISTARANEWS.COM


on

Mann Ki Baat
Koo

ನವದೆಹಲಿ: ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿದ್ದು, ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದ ಐತಿಹಾಸಿಕ ಕ್ಷಣವನ್ನು ಮರೆಯಲು ಸಾಧ್ಯವೇ ಇಲ್ಲ. ಚಂದ್ರಯಾನ-3ರ ಯಶಸ್ಸನ್ನು ದೇಶ ಎಂದಿಗೂ ಸ್ಮರಿಸಿಕೊಳ್ಳುತ್ತದೆ. ಜನರ ಸಾಮೂಹಿಕ ಪ್ರಯತ್ನಗಳಿಂದಾಗಿ ವೈಜ್ಞಾನಿಕ ಬೆಳವಣಿಗೆ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬಣ್ಣಿಸಿದರು. ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ʼಮನ್​ ಕಿ ಬಾತ್​ʼ (Mann Ki Baat)ನ 113ನೇ ಸಂಚಿಕೆಯನ್ನುದ್ದೇಶಿಸಿ ಅವರು ಮಾತನಾಡಿದರು.

21ನೇ ಶತಮಾನದಲ್ಲಿ ಭಾರತದಲ್ಲಿ ಬಹಳಷ್ಟು ಅತ್ಯುತ್ತಮ ಕಾರ್ಯಗಳು ನಡೆಯುತ್ತಿವೆ. ಇವು ಅಭಿವೃದ್ಧಿ ಹೊಂದಿದ ರಾಷ್ಟ್ರ ನಿರ್ಮಾಣದ ಗುರಿಯನ್ನು ಇನ್ನಷ್ಟು ಬಲಪಡಿಸುತ್ತಿದೆ ಎಂದು ಪ್ರಧಾನಿ ಹೇಳಿದರು. “ಉದಾಹರಣೆಗೆ ಆಗಸ್ಟ್ 23ರಂದು ದೇಶವು ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿತು. ನೀವೆಲ್ಲರೂ ಈ ದಿನವನ್ನು ಆಚರಿಸಿದ್ದೀರಿ ಎನ್ನುವ ನಂಬಿಕೆ ನನಗಿದೆ. ಮತ್ತೊಮ್ಮೆ ನೀವೆಲ್ಲರೂ ಚಂದ್ರಯಾನ -3ರ ಯಶಸ್ಸನ್ನು ನೆನಪಿಸಿಕೊಳ್ಳಬೇಕು. ಕಳೆದ ವರ್ಷ ಆಗಸ್ಟ್ 23ರಂದು ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್‌ನಲ್ಲಿ ಯಶಸ್ವಿಯಾಗಿ ಇಳಿಯಿತು. ಈ ಸಾಧನೆ ಮಾಡಿದ ವಿಶ್ವದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ” ಎಂದು ಪ್ರಧಾನಿ ಮೋದಿ ಅಭಿಮಾನದಿಂದ ನುಡಿದರು.

ಯುವಜನತೆಗೆ ಕರೆ

ʼʼಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಅಭಿವೃದ್ಧಿ ಹೊಂದಿದ ಭಾರತ ಹಾಗೂ ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ಒಂದು ಲಕ್ಷದಷ್ಟು ಯುವಜನತೆ ರಾಜಕೀಯಕ್ಕೆ ಪ್ರವೇಶಿಸಲು ಕರೆ ನೀಡಿದ್ದೆ. ಇದಕ್ಕೆ ವ್ಯಾಪಕ ಪ್ರತಿಕ್ರಿಯೆ ದೊರಕುತ್ತಿದೆʼʼ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. ʼʼದೊಡ್ಡ ಸಂಖ್ಯೆಯಲ್ಲಿ ಯುವಜನತೆ ರಾಜಕೀಯಕ್ಕೆ ಸೇರಲು ಸಿದ್ಧರಿದ್ದಾರೆ. ಅವರಿಗೆ ಸರಿಯಾದ ಅವಕಾಶ ಹಾಗೂ ಮಾರ್ಗದರ್ಶನದ ಅಗತ್ಯವಿದೆʼʼ ಎಂದು ಅಭಿಪ್ರಾಯಪಟ್ಟರು.

ʼʼಸ್ವಾತಂತ್ರ್ಯ ಚಳುವಳಿಯಲ್ಲಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದವರು, ಸಮಾಜದ ಎಲ್ಲ ವರ್ಗದ ಅಸಂಖ್ಯಾತ ಜನರು ಭಾಗವಹಿಸಿದ್ದರು. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮೆಲ್ಲವನ್ನು ಅರ್ಪಿಸಿಕೊಂಡಿದ್ದರು. ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸಲು ನಾವು ಶ್ರಮಪಡಬೇಕುʼʼ ಎಂದು ಕರೆ ನೀಡಿದರು.

ಬಾಹ್ಯಾಕಾಶ ಕ್ಷೇತ್ರದಲ್ಲಿನ ಸುಧಾರಣೆಯಿಂದ ದೇಶದ ಯುವ ಜನತೆ ಸಾಕಷ್ಟು ಪ್ರಯೋಜನ ಪಡೆದಿದ್ದಾರೆ ಎಂದು ಮೋದಿ ಹೇಳಿದರು. ಇದೇ ವೇಳೆ ಸ್ಟಾರ್ಟ್ಅಪ್ ಸ್ಪೇಸ್‌ಟೆಕ್‌ ಗ್ಯಾಲಕ್ಸಿ ತಂಡವನ್ನು ಕಟ್ಟಿದ ಐಐಟಿ ಮದ್ರಾಸ್‌ನ ಹಿರಿಯ ವಿದ್ಯಾರ್ಥಿಗಳೊಂದಿಗೆ ಮೋದಿ ಸಂವಾದ ನಡೆಸಿದರು.

ಯುವ ವಿಜ್ಞಾನಿಗಳಲ್ಲಿ ಒಬ್ಬರಾದ ಸುಯಾಶ್ ಮಾತನಾಡಿ, “ನಾವೆಲ್ಲರೂ ಐಐಟಿ ಮದ್ರಾಸ್‌ನಲ್ಲಿ ಭೇಟಿಯಾದೆವು. ಆ ಸಮಯದಲ್ಲಿ ‘ಹೈಪರ್ ಲೂಪ್’ ಎಂಬ ಯೋಜನೆ ಹೊಳೆಯಿತು. ಅದರಂತೆ ನಾವು ‘ಅವಿಷ್ಕಾರ್‌ ಹೈಪರ್ ಲೂಪ್’ ಎಂಬ ತಂಡವನ್ನು ಪ್ರಾರಂಭಿಸಿದೆವು. ಆ ಯೋಜನೆಯೊಂದಿಗೆ ಅಮೆರಿಕಕ್ಕೆ ತೆರಳಿದೆವು. ಏಷ್ಯಾದಿಂದ ಅಲ್ಲಿಗೆ ಹೋಗಿ ದೇಶದ ಧ್ವಜವನ್ನು ಹಾರಿಸಿದ ಏಕೈಕ ತಂಡ ನಮ್ಮದುʼʼ ಎಂದು ವಿವರಿಸಿದರು.

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ರಕ್ಷಿತ್ ತಮ್ಮ ಸ್ಟಾರ್ಟ್ಅಪ್ ತಂತ್ರಜ್ಞಾನದ ಪ್ರಯೋಜನಗಳ ಬಗ್ಗೆ ಮಾತನಾಡಿದರು. ʼʼನಮ್ಮ ಈ ತಂತ್ರಜ್ಞಾನ (‘ಹೈಪರ್ ಲೂಪ್’)ದಿಂದ ಪ್ರತಿದಿನ ದೇಶದ ಯಾವುದೇ ಮೂಲೆಯ ಸ್ಪಷ್ಟ ಚಿತ್ರವನ್ನು ತೆಗೆದುಕೊಳ್ಳಬಹುದು ಮತ್ತು ನಾವು ಸಂಗ್ರಹಿಸುವ ಡೇಟಾವನ್ನು ಎರಡು ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲು ಬಳಸಲಾಗುತ್ತದೆ. ಮೊದಲನೆಯದು ಗಡಿಗಳು, ಸಾಗರಗಳು ಮತ್ತು ಸಮುದ್ರಗಳನ್ನು ಮೇಲ್ವಿಚಾರಣೆ ಮಾಡುವ ಮೂಲಕ ಭಾರತವನ್ನು ಸಂರಕ್ಷಿಸಲಾಗುತ್ತದೆ. ಜತೆಗೆ ಶತ್ರು ಚಟುವಟಿಕೆಗಳನ್ನು ಪ್ರತಿದಿನ ಗಮನಿಸಲಾಗುತ್ತದೆ. ಎರಡನೆಯದಾಗಿ ಭಾರತದ ರೈತರನ್ನು ಸಬಲೀಕರಣಗೊಳಿಸಲಾಗುತ್ತದೆʼʼ ಎಂದು ತಿಳಿಸಿದರು.

ಇದನ್ನೂ ಓದಿ: Mann Ki Baat: ಪ್ಯಾರಿಸ್ ಒಲಿಂಪಿಕ್ಸ್​: ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ʼಮನ್​ ಕಿ ಬಾತ್​ʼನಲ್ಲಿ ಮೋದಿ ಕರೆ

Continue Reading

ದೇಶ

CBI Raid: ಆರ್‌.ಜಿ. ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ನಿವಾಸದ ಮೇಲೆ ಸಿಬಿಐ ದಾಳಿ

CBI Raid: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ನಿವಾಸದ ಮೇಲೆ ಕೇಂದ್ರ ತನಿಖಾ ದಳ ದಾಳಿ ನಡೆಸಿದೆ. ಕೋಲ್ಕತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜಿನಲ್ಲಿ ಆಗಸ್ಟ್ 9ರಂದು ತರಬೇತಿ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪದ ಮೇಲೆ ಸಿಬಿಐ ಈಗಾಗಲೇ ಪ್ರಕರಣ ದಾಖಲಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

VISTARANEWS.COM


on

CBI Raid
Koo

ಕೋಲ್ಕತ್ತಾ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ (Sandip Ghosh) ನಿವಾಸದ ಮೇಲೆ ಕೇಂದ್ರ ತನಿಖಾ ದಳ (Central Bureau of Investigation) ಭಾನುವಾರ (ಆಗಸ್ಟ್‌ 25) ದಾಳಿ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಇತರ 14 ಸ್ಥಳಗಳಲ್ಲಿಯೂ ಸಿಬಿಐ ಶೋಧ ನಡೆಸುತ್ತಿದೆ (CBI Raid).

ಕೋಲ್ಕತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜಿನಲ್ಲಿ ಆಗಸ್ಟ್ 9ರಂದು ತರಬೇತಿ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪದ ಮೇಲೆ ಸಿಬಿಐ ಈಗಾಗಲೇ ಪ್ರಕರಣ ದಾಖಲಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಕೋಲ್ಕತ್ತಾ ಹೈಕೋರ್ಟ್ ನಿರ್ದೇಶನದ ಮೇರೆಗೆ ಪಶ್ಚಿಮ ಬಂಗಾಳ ಸರ್ಕಾರ ರಚಿಸಿದ ವಿಶೇಷ ತನಿಖಾ ತಂಡ (SIT) ವಿಚಾರಣೆ ನಡೆಸುತ್ತಿದೆ.

ಸಿಬಿಐಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಿಧಿವಿಜ್ಞಾನ ಔಷಧ ತಜ್ಞ ಡಾ.ದೇಬಶಿಶ್ ಸೋಮ್ ಅವರ ನಿವಾಸದಲ್ಲಿಯೂ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಉಪ ಅಧೀಕ್ಷಕ ಅಖ್ತರ್ ಅಲಿ ಅವರು ಮೂರು ದಿನಗಳ ಹಿಂದೆ ಭ್ರಷ್ಟಾಚಾರ ಮತ್ತು ಅಕ್ರಮಗಳ ವಿರುದ್ಧ ದೂರು ದಾಖಲಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಹೆಚ್ಚಿನ ವಿವರ ಕಲೆ ಹಾಕಲಾಗುತ್ತಿದೆ. ಈ ಮಧ್ಯೆ ಕೋಲ್ಕತಾ ಪೊಲೀಸರು ಸರ್ಕಾರಿ ಸ್ವಾಮ್ಯದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಬಳಿ ನಿಷೇಧಾಜ್ಞೆಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಹೈಕೋರ್ಟ್ ಈಗಾಗಲೇ ಸಿಬಿಐಗೆ ಹಸ್ತಾಂತರಿಸಿದೆ. ಜತೆಗೆ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅಧಿಕಾರಾವಧಿಯಲ್ಲಿ ನಡೆದ ಹಣಕಾಸು ಅಕ್ರಮಗಳ ತನಿಖೆಯನ್ನೂ ಸಿಬಿಐಗೆ ವರ್ಗಾಯಿಸಿದೆ. ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ಖಚಿತಪಡಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಅಖ್ತರ್ ಅಲಿ ಹೇಳಿದ್ದೇನು?

ಅಖ್ತರ್ ಅಲಿ ಅವರು ಸಂದೀಪ್ ಘೋಷ್ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಂದೀಪ್ ಘೋಷ್ ವಾರಸುದಾರರಿಲ್ಲದ ಶವಗಳನ್ನು ಅಕ್ರಮವಾಗಿ ಬಳಸಿದ್ದಾರೆ, ಬಯೋಮೆಡಿಕಲ್ ತ್ಯಾಜ್ಯವನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂದು ದೂರಿದ್ದಾರೆ. ಮಾತ್ರವಲ್ಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು 5ರಿಂದ 8 ಲಕ್ಷ ರೂ.ಗಳವರೆಗೆ ಪಾವತಿಸುವಂತೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಿದ್ದಾರೆ ಎಂದೂ ಅಲಿ ತಿಳಿಸಿದ್ದಾರೆ. ʼʼ2023ರಲ್ಲಿಯೇ ನಾನು ಈ ಬಗ್ಗೆ ದೂರು ನೀಡಿದ್ದೆ. ಆದರೆ ಕ್ರಮ ಕೈಗೊಂಡಿರಲಿಲ್ಲʼʼ ಎಂದು ಅಖ್ತರ್ ಅಲಿ ಹೇಳಿದ್ದಾರೆ. ಆಗಸ್ಟ್‌ 9ರಂದು 31 ವರ್ಷದ ವಿದ್ಯಾರ್ಥಿನಿಯ ಶವ ಆಸ್ಪತ್ರೆಯ ಸೆಮಿನಾರ್‌ ಹಾಲ್‌ನಲ್ಲಿ ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ಅಗಸ್ಟ್‌ 10ರಂದು ಡಾ.ಸಂದೀಪ್ ಘೋಷ್‌ನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Kolkata Doctor Murder Case: ಕೋಲ್ಕತ್ತಾ ವೈದ್ಯೆಯ ಹತ್ಯೆ; ಹಂತಕನ ಬಗ್ಗೆ ಸಹೋದರಿ ಬಿಚ್ಚಿಟ್ಟ ರಹಸ್ಯವೇನು?

Continue Reading

ದೇಶ

Sunita Williams: ಮುಂದಿನ ವರ್ಷ ಫೆಬ್ರುವರಿಯಲ್ಲಿ ಭೂಮಿಗೆ ಮರಳಲಿದ್ದಾರೆ ಸುನೀತಾ ವಿಲಿಯಮ್ಸ್;‌ ನಾಸಾ ಘೋಷಣೆ

Sunita Williams: ಮುಂದಿನ ಫೆಬ್ರವರಿಯಲ್ಲಿ ಬುಚ್ ಮತ್ತು ಸುನಿತಾ ಕ್ರ್ಯೂ -9 ರೊಂದಿಗೆ ಹಿಂತಿರುಗುತ್ತಾರೆ ಮತ್ತು ಸ್ಟಾರ್ಲೈನರ್ ಸಿಬ್ಬಂದಿಯಿಲ್ಲದೆ ಹಿಂತಿರುಗುತ್ತಾರೆ ಎಂದು ನಾಸಾ ನಿರ್ಧರಿಸಿದೆ” ಎಂದು ನಾಸಾ ನಿರ್ವಾಹಕ ಬಿಲ್ ನೆಲ್ಸನ್ ಹೇಳಿದ್ದಾರೆ. ಬೋಯಿಂಗ್ ಬಾಹ್ಯಾಕಾಶ ನೌಕೆಯ ಥ್ರಸ್ಟರ್ ಅಸಮರ್ಪಕ ಕಾರ್ಯಗಳಿಂದ ಸುನಿತಾ ವಿಲಿಯಮ್ಸ್‌ ಮತ್ತು ಬುಚ್‌ ಹಿಂತಿರುಗುವುದು ವಿಳಂಬವಾಗಿದೆ ಎಂದು ಅವರು ಹೇಳಿದರು.

VISTARANEWS.COM


on

Sunita Williams
Koo

ವಾಷಿಂಗ್ಟನ್: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಆದರೆ, ಸುನೀತಾ ವಿಲಿಯಮ್ಸ್‌ ಹಾಗೂ ಮತ್ತೊಬ್ಬ ಗಗನಯಾತ್ರಿ ಬುಚ್ ವಿಲ್ಮೋರ್ (Butch Wilmore) ತಾಂತ್ರಿಕ ದೋಷದಿಂದಾಗಿ ಬಾಹ್ಯಕಾಶದಲ್ಲೇ ಸಿಲುಕಿರುವ ವಿಚಾರ ಎಲ್ಲರಿಗೂ ತಿಳಿದೇ ಇದೆ. ಇದೀಗ ಅವರು ವಾಪಾಸಾಗುವ ಬಗ್ಗೆ ಅಮೆರಿಕಸ ಬಾಹ್ಯಾಕಾಶ ಸಂಸ್ಥೆ(NASA) ಮಹತ್ವದ ಸುದ್ದಿಯೊಂದನ್ನು ಹೊರಹಾಕಿದೆ. ಈ ಇಬ್ಬರು ಗಗನಯಾತ್ರಿಗಳು ಮುಂದಿನ ವರ್ಷ ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ಹೇಳಿದೆ.

ಮುಂದಿನ ಫೆಬ್ರವರಿಯಲ್ಲಿ ಬುಚ್ ಮತ್ತು ಸುನಿತಾ ಕ್ರ್ಯೂ -9 ರೊಂದಿಗೆ ಹಿಂತಿರುಗುತ್ತಾರೆ ಮತ್ತು ಸ್ಟಾರ್ಲೈನರ್ ಸಿಬ್ಬಂದಿಯಿಲ್ಲದೆ ಹಿಂತಿರುಗುತ್ತಾರೆ ಎಂದು ನಾಸಾ ನಿರ್ವಾಹಕ ಬಿಲ್ ನೆಲ್ಸನ್ ಹೇಳಿದ್ದಾರೆ. ಬೋಯಿಂಗ್ ಬಾಹ್ಯಾಕಾಶ ನೌಕೆಯ ಥ್ರಸ್ಟರ್ ಅಸಮರ್ಪಕ ಕಾರ್ಯಗಳಿಂದ ಸುನಿತಾ ವಿಲಿಯಮ್ಸ್‌ ಮತ್ತು ಬುಚ್‌ ಹಿಂತಿರುಗುವುದು ವಿಳಂಬವಾಗಿದೆ ಎಂದು ಅವರು ಹೇಳಿದರು.

ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನವನ್ನು ಜೂನ್‌ 5ರಂದು ಆರಂಭಿಸಿದ್ದರು. ಜೂನ್‌ 6ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ಸ್ಟೇಷನ್‌ ತಲುಪಿದ್ದ ಅವರು ಒಂದು ವಾರ ಸಂಶೋಧನೆ ನಡೆಸಿ ವಾಪಸಾಗಬೇಕಿತ್ತು. ಆದರೆ, ತಾಂತ್ರಿಕ ಕಾರಣದಿಂದ ಅವರು ಅಲ್ಲಿಯೇ ಸಿಲುಕಿದ್ದಾರೆ. ಇವರು ಯಾವಾಗ ಬರುತ್ತಾರೆ ಎಂಬುದರ ಕುರಿತು ನಾಸಾ ಈಗ ಮಾಹಿತಿ ನೀಡಿದೆ.

“ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿರುವ ಸುನೀತಾ ವಿಲಿಯಮ್ಸ್‌ ಅವರು 2025ರ ಫೆಬ್ರವರಿಯಲ್ಲಿ ವಾಪಸಾಗಲಿದ್ದಾರೆ. ಇವರು ಬೋಯಿಂಗ್‌ ಸ್ಟಾರ್‌ಲೈನರ್‌ ಬದಲು ಸ್ಪೇಸ್‌ಎಕ್ಸ್‌ನ ಕ್ರ್ಯೂ ಡ್ರ್ಯಾಗನ್‌ನಲ್ಲಿ ವಾಪಸಾಗಲಿದ್ದಾರೆ. ಸ್ಟಾರ್‌ಲೈನರ್‌ನಲ್ಲಿ ಹಲವು ತಾಂತ್ರಿಕ ದೋಷಗಳು ಉಂಟಾಗಿರುವ ಕಾರಣ ಕ್ರ್ಯೂ ಡ್ರ್ಯಾಗನ್‌ನಲ್ಲಿ ಕರೆದುಕೊಂಡು ಬರಲು ತೀರ್ಮಾನಿಸಲಾಗಿದೆ” ಎಂಬುದಾಗಿ ನಾಸಾ ತಿಳಿಸಿದೆ.

ಸುನೀತಾ ವಿಲಿಯಮ್ಸ್‌ ಹಿನ್ನೆಲೆ

ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.

ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.

ಇದನ್ನೂ ಓದಿ: Sunita Williams: 2025ರವರೆಗೂ ಬಾಹ್ಯಾಕಾಶದಲ್ಲೇ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌; ನಾಸಾ ಘೋಷಣೆ

Continue Reading

ದೇಶ

Rahul Gandhi: ಮಿಸ್‌ ಇಂಡಿಯಾ ಪಟ್ಟಿಯಲ್ಲಿ ದಲಿತ, ಬುಡಕಟ್ಟು, ಒಬಿಸಿ ಮಹಿಳೆಯರು ಇಲ್ಲವೇ ಇಲ್ಲ-ರಾಹುಲ್‌ ಗಾಂಧಿ ಹೊಸ ಆರೋಪ

Rahul Gandhi: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸಂವಿಧಾನ ಸಮ್ಮಾನ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಮಿಸ್ ಇಂಡಿಯಾ ಪಟ್ಟಿಯಲ್ಲಿ ದಲಿತ ಅಥವಾ ಬುಡಕಟ್ಟು ಮಹಿಳೆ ಇರಬಹುದೇ ಎಂದು ನೋಡಲು ನಾನು ಪರಿಶೀಲಿಸಿದೆ. ಆದರೆ ಅಲ್ಲಿ ದಲಿತ, ಬುಡಕಟ್ಟು ಅಥವಾ ಒಬಿಸಿ ಮಹಿಳೆ ಇರಲಿಲ್ಲ. ಮಾಧ್ಯಮಗಳು ನೃತ್ಯ, ಸಂಗೀತ, ಕ್ರಿಕೆಟ್, ಬಾಲಿವುಡ್ ಬಗ್ಗೆ ಮಾತನಾಡುತ್ತವೆ. ರೈತರು ಮತ್ತು ಕಾರ್ಮಿಕರ ಬಗ್ಗೆ ಮಾತನಾಡುವವರೇ ಇಲ್ಲ ಎಂದು ಕಿಡಿ ಕಾರಿದರು.

VISTARANEWS.COM


on

Rahul Gandhi
Koo

ನವದೆಹಲಿ: ಸದಾ ಪ್ರಧಾನಿ ನರೇಂದ್ರ ಮೋದಿ(PM Narendra Modi) ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಒಂದಿಲ್ಲೊಂದು ಆರೋಪ ಮಾಡುತ್ತಾ ಕೆಂಡ ಕಾರುವ ವಿಪಕ್ಷ ನಾಯಕರ ರಾಹುಲ್‌ ಗಾಂಧಿ(Rahul Gandhi) ಇದೀಗ ಹೊಸ ಆರೋಪದೊಂದಿಗೆ ವಾಗ್ದಾಳಿ ನಡೆಸಿದ್ದಾರೆ. ಮಿಸ್‌ ಇಂಡಿಯಾ ಸ್ಪರ್ಧೆ(Miss India) ವಿಜೇತರ ಪಟ್ಟಿಯಲ್ಲಿ ಇದುವರೆಗೆ ದಲಿತ, ಬುಡಕಟ್ಟು ಅಥವಾ ಒಬಿಸಿ ಸಮುದಾಯಕ್ಕೆ ಸೇರಿದ ಯಾವುದೇ ಮಹಿಳೆಯ ಹೆಸರು ಬಂದೇ ಇಲ್ಲ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸಂವಿಧಾನ ಸಮ್ಮಾನ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಮಿಸ್ ಇಂಡಿಯಾ ಪಟ್ಟಿಯಲ್ಲಿ ದಲಿತ ಅಥವಾ ಬುಡಕಟ್ಟು ಮಹಿಳೆ ಇರಬಹುದೇ ಎಂದು ನೋಡಲು ನಾನು ಪರಿಶೀಲಿಸಿದೆ. ಆದರೆ ಅಲ್ಲಿ ದಲಿತ, ಬುಡಕಟ್ಟು ಅಥವಾ ಒಬಿಸಿ ಮಹಿಳೆ ಇರಲಿಲ್ಲ. ಮಾಧ್ಯಮಗಳು ನೃತ್ಯ, ಸಂಗೀತ, ಕ್ರಿಕೆಟ್, ಬಾಲಿವುಡ್ ಬಗ್ಗೆ ಮಾತನಾಡುತ್ತವೆ. ರೈತರು ಮತ್ತು ಕಾರ್ಮಿಕರ ಬಗ್ಗೆ ಮಾತನಾಡುವವರೇ ಇಲ್ಲ ಎಂದು ಕಿಡಿ ಕಾರಿದರು.

ಇದೇ ವೇಳೆ ಅವರು ರಾಷ್ಟ್ರವ್ಯಾಪಿ ಜಾತಿ ಗಣತಿಯನ್ನು ನಡೆಸುವ ಮಹತ್ವವನ್ನು ಪುನರುಚ್ಚರಿಸಿದರು, ಇದು ಕೇವಲ ಜನಗಣತಿಯಾಗಿರುವುದಿಲ್ಲ ಆದರೆ ಪರಿಣಾಮಕಾರಿ ನೀತಿ ನಿರೂಪಣೆಗೆ ಅಡಿಪಾಯವಾಗಿದೆ ಎಂದು ಹೇಳಿದರು.
ಅಗತ್ಯವಿರುವ ಕೌಶಲ್ಯ, ಪ್ರತಿಭೆ ಮತ್ತು ಜ್ಞಾನವನ್ನು ಹೊಂದಿದ್ದರೂ ಜನಸಂಖ್ಯೆಯ 90 ಪ್ರತಿಶತದಷ್ಟು ಜನರು ವ್ಯವಸ್ಥೆಯೊಂದಿಗೆ ಸಂಪರ್ಕ ಹೊಂದಿಲ್ಲ ಎಂದು ಹೇಳಿದರು.

ಜಾತಿ ಗಣತಿ ನಡೆಸುವುದರ ಹೊರತಾಗಿ ಯಾವುದೇ ಪ್ರಯೋಜನಗಳಿಲ್ಲದ ಶೇಕಡಾ 90 ರಷ್ಟು ಜನಸಂಖ್ಯೆಯ ನಡುವೆ ಸಂಪತ್ತು ಹೇಗೆ ಹಂಚಿಕೆಯಾಗುತ್ತಿದೆ ಎಂಬುದನ್ನು ಗಮನಿಸುವುದು ಮುಖ್ಯ. ಶೇ.90ರಷ್ಟು ಜನರು ವ್ಯವಸ್ಥೆಯ ಭಾಗವಾಗಿಲ್ಲ, ಅವರಿಗೆ ಅಗತ್ಯವಿರುವ ಕೌಶಲ್ಯ, ಪ್ರತಿಭೆ ಮತ್ತು ಜ್ಞಾನವಿದೆ, ಆದರೆ ಅವರು ವ್ಯವಸ್ಥೆಯೊಂದಿಗೆ ಸಂಪರ್ಕ ಹೊಂದಿಲ್ಲ, ಅದಕ್ಕಾಗಿಯೇ ನಾವು ಜಾತಿ ಗಣತಿಗೆ ಒತ್ತಾಯಿಸುತ್ತೇವೆ ಎಂದರು.

ನಮಗೆ ವಿವಿಧ ಸಮುದಾಯಗಳ ಪಟ್ಟಿ ಬೇಕು, ನಮಗೆ ಜಾತಿ ಗಣತಿ ಕೇವಲ ಜನಗಣತಿಯಲ್ಲ, ನೀತಿ ನಿರೂಪಣೆಗೆ ಅಡಿಪಾಯವಾಗಿದೆ. ಕೇವಲ ಜಾತಿ ಗಣತಿ ನಡೆಸುವುದು ಸಾಕಾಗುವುದಿಲ್ಲ, ಸಂಪತ್ತು ಹೇಗೆ ಹಂಚಿಕೆಯಾಗುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಸಹ ಮುಖ್ಯವಾಗಿದೆ. ಒಬಿಸಿಗಳು, ದಲಿತರು ಮತ್ತು ಅಧಿಕಾರಶಾಹಿ, ನ್ಯಾಯಾಂಗ ಮತ್ತು ಮಾಧ್ಯಮಗಳಲ್ಲಿ ಕಾರ್ಮಿಕರ ಭಾಗವಹಿಸುವಿಕೆ ಎಷ್ಟು ಎಂಬುದನ್ನು ಕಂಡುಹಿಡಿಯುವುದು ಸಹ ಮುಖ್ಯವಾಗಿದೆ ಎಂದರು.

ಇದನ್ನೂ ಓದಿ: Muda Scam: ದೆಹಲಿಯಲ್ಲಿ ರಾಹುಲ್‌ ಗಾಂಧಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ; ಕಾನೂನು ಹೋರಾಟದ ಬಗ್ಗೆ ಚರ್ಚೆ

Continue Reading
Advertisement
IPL 2025
ಕ್ರಿಕೆಟ್49 seconds ago

IPL 2025: ಮುಂಬೈ ಇಂಡಿಯನ್ಸ್​ಗೆ ಶ್ರೇಯಸ್​ ಅಯ್ಯರ್​, ಕೆಕೆಆರ್​ಗೆ ಸೂರ್ಯಕುಮಾರ್​ ನಾಯಕ!​

Mann Ki Baat
ದೇಶ3 mins ago

Mann Ki Baat: ಚಂದ್ರಯಾನ-3ರ ಯಶಸ್ಸನ್ನು ದೇಶ ಮರೆಯಲು ಸಾಧ್ಯವೇ ಇಲ್ಲ: ʼಮನ್​ ಕಿ ಬಾತ್​ʼನಲ್ಲಿ ಮೋದಿ ಬಣ್ಣನೆ

Revathy Sampath
ಸಿನಿಮಾ12 mins ago

Revathy Sampath: ನಟಿಯ ಮೇಲೆ ಹಿರಿಯ ನಟನಿಂದ ಲೈಂಗಿಕ ದೌರ್ಜನ್ಯ; ಕೇರಳ ಚಿತ್ರರಂಗದಲ್ಲಿ ಮತ್ತೊಂದು ಕರಾಳ ವಿದ್ಯಮಾನ!

Health Expenditure
ಪ್ರಮುಖ ಸುದ್ದಿ21 mins ago

MLCs Health Expenditure: ಆರೋಗ್ಯಕ್ಕಾಗಿ ಲಕ್ಷ ಲಕ್ಷ ಕ್ಲೇಮ್; ಅತಿ ಹೆಚ್ಚು ಸರ್ಕಾರದ ಹಣ ಪಡೆದ ಎಂಎಲ್‌ಸಿಗಳು ಇವರೇ ನೋಡಿ!

Industrial City
ಬೆಂಗಳೂರು57 mins ago

Industrial City: ಹೊಸೂರಿನಲ್ಲಿ ಟಾಟಾ ಗ್ರೂಪ್‌ನಿಂದ ಇಂಡಸ್ಟ್ರಿಯಲ್‌ ಸಿಟಿ ನಿರ್ಮಾಣಕ್ಕೆ ಸಿದ್ಧತೆ; ಬೆಂಗಳೂರಿನ ಐಟಿ ಸಿಟಿ ಪಟ್ಟಕ್ಕೆ ಕುತ್ತು?

Yuvraj Singh
ಕ್ರೀಡೆ1 hour ago

Yuvraj Singh: ಐಪಿಎಲ್​ ಕೋಚಿಂಗ್​ ನಡೆಸಲಿದ್ದಾರೆ ಯುವರಾಜ್​ ಸಿಂಗ್; ಯಾವ ತಂಡ?

Physical abuse attempted rape of school girl The public who beat up the man
ಚಿಕ್ಕೋಡಿ1 hour ago

Physical Abuse : ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಥಳಿಸಿದ ಸಾರ್ವಜನಿಕರು

ಬೆಂಗಳೂರು ಗ್ರಾಮಾಂತರ2 hours ago

Love Case : ಪ್ರೀತಿಗೆ ಪೋಷಕರ ವಿರೋಧ; ಒಬ್ಬರಿಗೊಬ್ಬರು ತಬ್ಬಿಕೊಂಡು ನೇಣಿಗೆ ಶರಣಾದ ಪ್ರೇಮಿಗಳು

Cricket meets shooting
ಕ್ರೀಡೆ2 hours ago

Cricket Meets Shooting: ವಿಭಿನ್ನ ಶೈಲಿಯಲ್ಲಿ ಫೋಟೊಗೆ ಪೋಸ್​ ಕೊಟ್ಟ ಸೂರ್ಯಕುಮಾರ್​-ಮನು ಭಾಕರ್​

Gold Rate Today
ಚಿನ್ನದ ದರ2 hours ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬಂಗಾರ ಖರೀದಿಯ ಮುನ್ನ ಬೆಲೆ ಚೆಕ್‌ ಮಾಡಿ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ23 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌