Kannada New Movie: 'ಕಲ್ಕಿ' ಚಿತ್ರದ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಕನ್ನಡಕ್ಕೆ ಎಂಟ್ರಿ! - Vistara News

ಬೆಂಗಳೂರು

Kannada New Movie: ‘ಕಲ್ಕಿ’ ಚಿತ್ರದ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಕನ್ನಡಕ್ಕೆ ಎಂಟ್ರಿ!

“ಆ ದಿನಗಳು” ಖ್ಯಾತಿಯ ಕೆ‌.ಎಂ. ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್‌ ಪ್ರಭಾಕರ್‌ ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರ “ಬಲರಾಮನ ದಿನಗಳು” ಚಿತ್ರಕ್ಕೆ ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ‌. ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಸಂತೋಷ್ ನಾರಾಯಣನ್ ಅವರನ್ನು “ಬಲರಾಮನ ದಿನಗಳು” ಚಿತ್ರತಂಡ ಅದ್ದೂರಿಯಾಗಿ ಕನ್ನಡಕ್ಕೆ ಬರಮಾಡಿಕೊಂಡರು. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ‌.ಎಂ. ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್‌ ಪ್ರಭಾಕರ್‌ ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರ “ಬಲರಾಮನ ದಿನಗಳು”. ಕಳೆದ ಕೆಲವು ತಿಂಗಳ ಹಿಂದಷ್ಟೇ ಈ ಚಿತ್ರದ ಘೋಷಣೆಯಾಗಿತ್ತು. ಈಗ ಈ ಚಿತ್ರದ (Kannada New Movie) ಕುರಿತು ಮತ್ತೊಂದು ಮಹತ್ವದ ಸುದ್ದಿ ಹೊರಬಂದಿದೆ. ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ‌. ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಸಂತೋಷ್ ನಾರಾಯಣನ್ ಅವರನ್ನು “ಬಲರಾಮನ ದಿನಗಳು” ಚಿತ್ರತಂಡ ಅದ್ದೂರಿಯಾಗಿ ಕನ್ನಡಕ್ಕೆ ಬರಮಾಡಿಕೊಂಡರು. ನಂತರ ಸಂತೋಷ್ ನಾರಾಯಣನ್ ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

ಪ.ರಂಜಿತ್ ಅವರ “ಅಟ್ಟಕತ್ತಿ” ಚಿತ್ರದ ಮೂಲಕ ಸ್ವತಂತ್ರ ಸಂಗೀತ ನಿರ್ದೇಶಕರಾದ ಇವರು, “ಕಾಲ”, ” ಕಬಾಲಿ”, “ಭೈರವ”, ” ದಸರಾ” ಹಾಗೂ ಇತ್ತೀಚಿಗೆ ತೆರೆಕಂಡ “ಕಲ್ಕಿ” ಸಿನಿಮಾವರೆಗೂ 50 ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಹಲವು ಚಿತ್ರಗಳಲ್ಲಿ ಹಾಡಿದ್ದಾರೆ ಕೂಡ‌.

“ನನ್ನ ತಾಯಿಗೆ ಕನ್ನಡ ಬರುತ್ತದೆ. ಅವರು ನನಗೂ ಸ್ವಲ್ಪ ಕನ್ನಡ ಹೇಳಿಕೊಟ್ಟಿದ್ದಾರೆ. ಬೆಂಗಳೂರಿಗೆ ಆಗಾಗ ಬರುತ್ತಿರುತ್ತೇನೆ. “ಬಲರಾಮನ ದಿನಗಳು” ನನ್ನ 51ನೇ ಚಿತ್ರ ಹಾಗೂ ನಾನು ಸಂಗೀತ ನೀಡುತ್ತಿರುವ ಕನ್ನಡದ ಮೊದಲ ಚಿತ್ರ. ಪದ್ಮಾವತಿ ಫಿಲಂಸ್, ಚೈತನ್ಯ ಹಾಗೂ ವಿನೋದ್ ಪ್ರಭಾಕರ್ ಅವರ ಜತೆಗೆ ಕೆಲಸ ಮಾಡುತ್ತಿರುವುದು ಖುಷಿಯಾಗಿದೆ. ಈ ಸಂದರ್ಭದಲ್ಲಿ ಗುರುಗಳಾದ ಇಳಯರಾಜ, ಎ.ಆರ್.ರೆಹಮಾನ್ ಅವರನ್ನು ನೆನಪಿಸಿಕೊಳ್ಳುತ್ತೇನೆ. ರಘು ದೀಕ್ಷಿತ್ ಅವರ “ನಿನ್ನ ಪೂಜೆಗೆ ಬಂದೆ ಮಾದೇಶ್ವರ” ಸೇರಿದಂತೆ ಕೆಲವು ಹಾಡುಗಳಿಗೆ ಪ್ರೋಗ್ರಾಮರ್ ಆಗಿ ಕೆಲಸ ಮಾಡಿದ್ದೇನೆ. ಅಜನೀಶ್ ಲೋಕನಾಥ್ ಹಾಗೂ ರವಿ ಬಸ್ರೂರ್ ಅವರ ಸಂಗಿತ ಇಷ್ಟ ಎಂದು ಹೇಳಿದ ಸಂತೋಷ್ ನಾರಾಯಣನ್, ಈ ಚಿತ್ರದಲ್ಲೂ ಒಳ್ಳೆಯ ಹಾಡುಗಳನ್ನು ಕೊಡುವ ಪ್ರಯತ್ನ ಮಾಡುತ್ತೇನೆ ಎಂದರು.

ಇದು ನನ್ನ 25ನೇ ಸಿನಿಮಾ, ಕೆ.ಎಂ. ಚೈತನ್ಯ ನಿರ್ದೇಶನದ 10ನೇ ಸಿನಿಮಾ. “ಬಲರಾಮನ ದಿನಗಳು” ಗೆ ಬಲ ನೀಡುವುದಕ್ಕೆ ಸಂತೋಷ್‍ ನಾರಾಯಣನ್ ಅವರು ಇಲ್ಲಿಗೆ ಬಂದಿದ್ದಾರೆ. ಸಂತೋಷ್‍ ನಾರಾಯಣನ್ ಅವರೇ ಯಾಕೆ? ಎಂಬ ಪ್ರಶ್ನೆ ಬರಬಹುದು. ಅವರ ಕೆಲಸವನ್ನು ನಮ್ಮಲ್ಲಿ ಜನ ಒಪ್ಪಿಕೊಂಡಿದ್ದಾರೆ. ಅವರು ಯಾರು ಎಂದು ಗೊತ್ತಿಲ್ಲದಿರಬಹುದು, ಅವರ ಮುಖ ನೋಡದಿರಬಹುದು. ಆದರೆ, ಗ್ಯಾಂಗ್‍ಸ್ಟರ್ ಸಿನಿಮಾ ಸಂಬಂಧಪಟ್ಟ ಯಾವುದೇ ಪೋಸ್ಟ್ ನೋಡಿ, ಇವರ ಸಿಗ್ನೇಚರ್ ಸಂಗೀತ ಇದ್ದೇ ಇರುತ್ತದೆ. ಹಾಗಾಗಿ, ನಮ್ಮ ಚಿತ್ರತಂಡದವರೆಲ್ಲಾ ನಿರ್ಧಾರ ತೆಗೆದುಕೊಂಡು ಅವರನ್ನು ಕರೆಸಿದ್ದೇವೆ. ಇದೊಂದು ಗ್ಯಾಂಗ್‍ಸ್ಟರ್ & ಕಲ್ಟ್ ಸಿನಿಮಾ ಆಗಿರುವುದರಿಂದ ಅವರೇ ಸೂಕ್ತ ಎಂದನಿಸಿತು. ಅವರು ದೊಡ್ಡ ಸಂಗೀತ ನಿರ್ದೇಶಕ. ಅವರನ್ನು ಕರೆದುಕೊಂಡು ಬರುವುದು ಅಷ್ಟು ಸುಲಭವಾಗಿರಲಿಲ್ಲ. ಬಹಳ ಕಷ್ಟಪಟ್ಟು ಅವರನ್ನು ಕರೆದುಕೊಂಡು ಬಂದಿದ್ದೇವೆ. ‘ಕಲ್ಕಿ’ ಬಿಡುಗಡೆಗೂ ಮೊದಲೇ, ಮೇ ತಿಂಗಳಲ್ಲಿ ಅವರನ್ನು ಮಾತನಾಡಿಸಿದ್ದೆವು. ಅವರಿಗೆ ಚಿತ್ರಕಥೆ ರೀಡಿಂಗ್‍ ಕೊಡುತ್ತಿದ್ದಂತೆಯೇ ಒಪ್ಪಿಕೊಂಡರು. ಚಿತ್ರ ವಿಭಿನ್ನವಾಗಿದೆ, 70-80ರ ಕಾಲಘಟ್ಟದ ಚಿತ್ರವಾಗಿರುವುದರಿಂದ ಸಾಕಷ್ಟು ಪ್ರಯೋಗ ಮಾಡಬಹುದು ಎಂದು ಖುಷಿಪಟ್ಟು ಒಪ್ಪಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಕನ್ನಡಕ್ಕೆ ಕರೆದುಕೊಂಡು ಬಂದಿರುವ ಹೆಮ್ಮೆ ಇದೆ. ಚಿತ್ರದ ಕುರಿತು ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದರು ನಾಯಕ ಟೈಗರ್.

ಇದು 90 ರ ದಶಕದ ಕಾಲಘಟ್ಟದ ಭೂಗತಲೋಕದ ಕಥೆ. ಯಾವುದೇ ನೈಜ ಘಟನೆ ಅಥವಾ ವ್ಯಕ್ತಿಯ ಕುರಿತಾದ ಚಿತ್ರವಲ್ಲ. ಕಾಲ್ಪನಿಕ ಕಥೆ. ಟೈಗರ್ ಅವರ ಚಿತ್ರವನ್ನು ನಿರ್ದೇಶಿಸುವ ಆಸೆಯಿತ್ತು. ಅದು ಈ ಚಿತ್ರದ ಮೂಲಕ ಈಡೇರಿದೆ. ನಿರ್ಮಾಪಕರಾದ ಪದ್ಮಾವತಿ ಜಯರಾಂ ಮತ್ತು ಶ್ರೇಯಸ್‍ ಗೆ ವಂದನೆಗಳು. ಸಂತೋಷ್ ನಾರಾಯಣ್ ಅವರ ಸಂಗೀತ ನಿರ್ದೇಶನದಲ್ಲಿ ಒಳ್ಳೆಯ ಹಾಡುಗಳು ಬರಲಿದೆ ಎಂದು ನಿರ್ದೇಶಕ ಕೆ.ಎಂ.ಚೈತನ್ಯ ತಿಳಿಸಿದರು.

ಇದನ್ನೂ ಓದಿ: Bengaluru Power Cut: ಗಮನಿಸಿ, ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ!

ನಾನು ಚಿಕ್ಕ ವಯಸ್ಸಿನಿಂದ ಟೈಗರ್ ಅವರ ಅಭಿಮಾನಿ ಎಂದು ಮಾತನಾಡಿದ ನಿರ್ಮಾಪಕ ಶ್ರೇಯಸ್, ಇಂದು ಅವರು ನಾಯಕರಾಗಿ ನಟಿಸುತ್ತಿರುವ ಚಿತ್ರ ನಿರ್ಮಾಣ ಮಾಡುತ್ತಿರುವುದು ಸಂತೋಷವಾಗಿದೆ. ನಮ್ಮ ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾವಿದು. ನಮ್ಮ ಮೊದಲ ಚಿತ್ರಕ್ಕೆ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ ಹಾಗೂ ಕೆ.ಎಂ.ಚೈತನ್ಯ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ನಮ್ಮ ಚಿತ್ರದ ಘೋಷಣೆ ಮಾಡಿದಾಗ ತಾವೆಲ್ಲರು ನೀಡಿದ ಪ್ರೋತ್ಸಾಹಕ್ಕೆ ಚಿರ ಋಣಿ. ನನ್ನ ಕನಸಿಗೆ ಆಸರೆಯಾದ ಅಪ್ಪ ಅಮ್ಮನಿಗೆ ಧನ್ಯವಾದ. ಮುಂದೆ ಕೂಡ ನಿಮ್ಮ ಪ್ರೋತ್ಸಾಹ ಹೀಗೆ ಇರಲಿ ಎಂದರು ನಿರ್ಮಾಪಕ ಶ್ರೇಯಸ್. ನಿರ್ಮಾಪಕಿ ಪದ್ಮಾವತಿ ಜಯರಾಂ ಹಾಗೂ ಜಯರಾಂ ಅವರು ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿದ; ಚೈನ್ ಸ್ನಾಚಿಂಗ್‌ಗೆ ಇಳಿದು ಸಿಕ್ಕಿಬಿದ್ದ

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟ ಮೈಗೂಡಿಸಿಕೊಂಡು ಮೈತುಂಬ ಸಾಲ ಮಾಡಿಕೊಂಡಿದ್ದವನೊಬ್ಬ ಸಾಲ ತೀರಿಸಲು ಸರಗಳ್ಳತನಕ್ಕೆ ಇಳಿದು ಇದೀಗ ಸಿಕ್ಕಿಬಿದ್ದಿದ್ದಾನೆ. ಕತ್ರಿಗುಪ್ಪೆ ನಿವಾಸಿ ಕುಮಾರ್ ಬಂಧಿತ. ಆನ್‌ಲೈನ್‌ನಲ್ಲಿ ಬೆಟ್ಟಿಂಗ್ ಗೇಮ್ ಆಡುತ್ತಿದ್ದ ಆರೋಪಿ ಕುಮಾರ್ ಈ ವೇಳೆ ಸಾಕಷ್ಟು ಹಣ ಕಳೆದುಕೊಂಡಿದ್ದ. ಬೆಟ್ಟಿಂಗ್‌ ಕಾರಣಕ್ಕೆ ಒಂದಲ್ಲ, ಎರಡಲ್ಲ ಬರೋಬ್ಬರಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಸಾಲ ತೋರಿಸಲು ಸರಗಳ್ಳತನಕ್ಕೆ ಇಳಿದಿದ್ದ.

VISTARANEWS.COM


on

Chain snatching Case
Koo

ಬೆಂಗಳೂರು: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದವರು ಹಣಕ್ಕಾಗಿ ಯಾವ ಅಡ್ಡ ದಾರಿಯನ್ನಾದರೂ ಹಿಡಿಯಲು ತಯಾರಿರುತ್ತಾರೆ ಎನ್ನುವುದಕ್ಕೆ ಈತನೇ ಉತ್ತಮ ನಿದರ್ಶನ. ಹೌದು, ಆನ್‌ಲೈನ್‌ ಬೆಟ್ಟಿಂಗ್ ಚಟ ಮೈಗೂಡಿಸಿಕೊಂಡು ಮೈತುಂಬ ಸಾಲ ಮಾಡಿಕೊಂಡಿದ್ದವನೊಬ್ಬ ಮಾಡಿದ ಸಾಲ ತೀರಿಸಲು ಸರಗಳ್ಳತನಕ್ಕೆ (Chain snatching case)  ಇಳಿದು ಇದೀಗ ಸಿಕ್ಕಿಬಿದ್ದಿದ್ದಾನೆ. ಕತ್ರಿಗುಪ್ಪೆ ನಿವಾಸಿ ಕುಮಾರ್ ಬಂಧಿತ ಆರೋಪಿ.

ಆನ್‌ಲೈನ್‌ನಲ್ಲಿ ಬೆಟ್ಟಿಂಗ್ ಗೇಮ್ ಆಡುತ್ತಿದ್ದ ಆರೋಪಿ ಕುಮಾರ್ ಈ ವೇಳೆ ಸಾಕಷ್ಟು ಹಣ ಕಳೆದುಕೊಂಡಿದ್ದ. ಬೆಟ್ಟಿಂಗ್‌ ಕಾರಣಕ್ಕೆ ಒಂದಲ್ಲ, ಎರಡಲ್ಲ ಬರೋಬ್ಬರಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಹಣ ಸಾಲ ಕೊಟ್ಟವರು ವಾಪಾಸ್ ನೀಡುವಂತೆ ಕೇಳತೊಡಗಿದಾಗ ಕುಮಾರ್‌ ಸರಗಳ್ಳತನಕ್ಕೆ ಇಳಿದಿದ್ದ.

ವಿಳಾಸ ಕೇಳುವ ನೆಪ

ಸರಗಳ್ಳತನಕ್ಕೆ ಕುಮಾರ್‌ ಖತರ್ನಾಕ್‌ ಯೋಜನೆ ರೂಪಿಸಿದ್ದ. ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರ ಗಮನ ಬೇರೆಡೆ ಸೆಳೆದು ಸರಕಳವು ಮಾಡುತ್ತಿದ್ದ. ಗಿರಿನಗರದ ಬೈರಪ್ಪ ಲೇಔಟ್‌ನಲ್ಲಿ ಕೃತ್ಯ ಎಸಗಿದ್ದ ವೇಳೆ ಸಿಕ್ಕಿಬಿದ್ದಿದ್ದ. ಸದ್ಯ ಕುಮಾರ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಪೊಲೀಸರಿಂದ ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಕುಮಾರ್‌ ಮಾಡಿದ ಸಾಲ ತೀರಿಸಲು ಆಟೋವನ್ನೂ ಅಡವಿಟ್ಟಿದ್ದ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಸಾಲದ ಸಂಗತಿ ಬೆಳೆಕಿಗೆ ಬಂದಿದ್ದು, ತನಿಖೆ ಮುಂದುವರಿದಿದೆ.

ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದವ ಬಂಧನ

ಬೆಂಗಳೂರು: ಸುಲಭವಾಗಿ ಹಣ ಮಾಡಲು ಖತರ್ನಾಕ್ ಪ್ಲ್ಯಾನ್‌ ಮಾಡಿದ್ದ ವಂಚಕನೊಬ್ಬ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ. ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದು ಕಾರು ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ ಜಮೀಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಖತರ್ನಾಕ್ ಪ್ಲ್ಯಾನ್‌?

ಹಾಗಾದರೆ ಈತ ಮಾಡುತ್ತಿದ್ದ ಖತರ್ನಾಕ್ ಕೆಲಸ ಏನು ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ. ಕಾರು ಚಾಲಕರೇ ಈತನ ಟಾರ್ಗೆಟ್. ಕಾರಿಗೆ ಬೇಕಂದೇ ಬೈಕ್ ಟಚ್ ಮಾಡಿ ಹಣ ಕೀಳುತ್ತಿದ್ದ. ʼʼಕಾರು ಹೋಗುವಾಗ ಜಮೀಲ್‌ ತನ್ನ ಬೈಕ್‌ ಅನ್ನು ಬೇಕಂತಲೇ ಟಚ್ ಮಾಡುತ್ತಿದ್ದ. ಬಳಿಕ ದೂರು ಕೊಡುತ್ತೇನೆ ಎಂದು ಬೆದರಿಸಿ ಚಾಲಕರಿಂದ ಹಣ ಕೀಳುತ್ತಿದ್ದʼʼ ಎಂದು ಪೊಲೀಸರು ತಿಳಿಸಿದ್ದಾರೆ. ʼʼಕಾರು ಟಚ್ ಅಗಿದೆ ಎಂದು ಮಧ್ಯ ರಸ್ತೆಯಲ್ಲಿ ಅಡ್ಡ ಹಾಕುತ್ತಿದ್ದ. ಡ್ಯಾಮೇಜ್ ಸರಿಪಡಿಸಲು ದುಡ್ಡು ಕೊಡಿ ಎಂದು ಬಲ ಪ್ರಯೋಗ ಮಾಡುತ್ತಿದ್ದ. ದುಡ್ಡು ಕೊಡದೆ ಹೋದ್ರೆ ದೂರು ಕೊಡ್ತೀನಿ ಎಂದು ಹೆದರಿಸುತ್ತಿದ್ದʼʼ ಎಂದು ಹೇಳಿದ್ದಾರೆ.

ಈತನ ಮೇಲೆ ಇದುವರೆಗೆ ಒಟ್ಟು 17 ಪ್ರಕರಣ ದಾಖಲಾಗಿದೆ. ರಾಜ್ಯದ ವಿವಿಧ ಠಾಣೆಗಳಲ್ಲಿ ಈತನ ವಿರುದ್ಧ ವಿವಿಧ ಪ್ರಕರಣಗಳಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿಕ್ಕಿ ಬಿದ್ದಿದ್ದು ಹೇಗೆ?

ಜಯನಗರ ಠಾಣಾ ವ್ಯಾಪ್ತಿಯಲ್ಲೂ ಕೂಡ ಇದೇ ರೀತಿ ಮಾಡಿ 30,000 ರೂ. ಪಡೆದಿದ್ದ ಜಮೀಲ್‌ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ. ಈ ಬಗ್ಗೆ ಜಯನಗರ ಠಾಣೆಗೆ ಕಾರು ಚಾಲಕ ದೂರು ಕೊಟ್ಟಿದ್ದ. ಹೀಗಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Chain snatching Case : ಜಾಬ್‌ಗೆ ಹೋಗುವ ಹೆಣ್ಮಕ್ಕಳೇ ಟಾರ್ಗೆಟ್‌‌ ; ಸರಗಳ್ಳರ ಗ್ಯಾಂಗ್‌ಗೆ ಸಖತ್ ಗೂಸಾಇದನ್ನೂ ಓದಿ:

Continue Reading

ಪ್ರಮುಖ ಸುದ್ದಿ

Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

Unified pension scheme: ಕೇಂದ್ರ ಸರ್ಕಾರ ಸಚಿವ ಸಂಪುಟದಲ್ಲಿ ಯುಪಿಎಸ್ ಪಿಂಚಣಿ ಯೋಜನೆ ಜಾರಿಗೆ ಶೇಕಡ 50ರಷ್ಟು ಪಿಂಚಣಿ ನೀಡಲು ತೆಗೆದುಕೊಂಡಿರುವ ತೀರ್ಮಾನ ತೃಪ್ತಿ ತಂದಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದಾರೆ. ನಮ್ಮ ಬೇಡಿಕೆ ಹಳೆ ಪಿಂಚಣಿಯ ಮರು ಸ್ಥಾಪನೆ ಮಾತ್ರ ಎಂದು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ಹೇಳಿದ್ದಾರೆ.

VISTARANEWS.COM


on

unified pension scheme
Koo


ಬೆಂಗಳೂರು: ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಹೊಸ ಯುಪಿಎಸ್ ಪಿಂಚಣಿ ಯೋಜನೆ(Unified pension scheme)ಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ(Karnataka government employees) ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ಈ ನಿರ್ಧಾರ ತೃಪ್ತಿಕರವಲ್ಲ ಎಂದು ಈ ಸಂಘಗಳು ಅಭಿಪ್ರಾಯಪಟ್ಟಿವೆ

ಕೇಂದ್ರ ಸರ್ಕಾರ ಸಚಿವ ಸಂಪುಟದಲ್ಲಿ ಯುಪಿಎಸ್ ಪಿಂಚಣಿ ಯೋಜನೆ ಜಾರಿಗೆ ಶೇಕಡ 50ರಷ್ಟು ಪಿಂಚಣಿ ನೀಡಲು ತೆಗೆದುಕೊಂಡಿರುವ ತೀರ್ಮಾನ ತೃಪ್ತಿ ತಂದಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಮತ್ತೊಮ್ಮೆ ಪುನರ್ ಪರಿಶೀಲಿಸಿ ಶೇಕಡ 100ರಷ್ಟು ಪಿಂಚಣಿ ನೀಡಲು ಆಗ್ರಹಿಸುತ್ತೇವೆ ಎಂದು ಷಡಾಕ್ಷರಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘವು ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಪೂರ್ಣವಾಗಿ ವಿರೋಧಿಸುತ್ತದೆ ಎಂದು ಈ ಸಂಘದ ಅಧ್ಯಕ್ಷ ಶಾಂತಾರಾಮ್ ಅವರು ಹೇಳಿಕೆ ನೀಡಿದ್ದಾರೆ. ನಮ್ಮ ಬೇಡಿಕೆ ಹಳೆ ಪಿಂಚಣಿಯ ಮರು ಸ್ಥಾಪನೆ ಮಾತ್ರ ಎಂದು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ಹೇಳಿದ್ದಾರೆ.

ಏನಿದು ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆ?:

ಇದು ಸರ್ಕಾರಿ ನೌಕರರಿಗೆ ಇತ್ತೀಚಿನ ಪಿಂಚಣಿ ಯೋಜನೆಯಾಗಿದೆ. ಸರ್ಕಾರಿ ನೌಕರರಿಗೆ ನಿಶ್ಚಿತ ಪಿಂಚಣಿ ಮೊತ್ತದ ಭರವಸೆ ನೀಡುವ ಯೋಜನೆ ಇದಾಗಿದೆ. UPS ಅಡಿಯಲ್ಲಿ, ನಿಗದಿತ ಪಿಂಚಣಿಯು ಕಳೆದ 12 ತಿಂಗಳುಗಳ ಅವಧಿಯಲ್ಲಿ ಪಡೆದ ಸರಾಸರಿ ಮೂಲ ವೇತನದ 50 ಪ್ರತಿಶತದಷ್ಟಿರುತ್ತದೆ.ಇದು ಖಚಿತವಾದ ಕುಟುಂಬ ಪಿಂಚಣಿಯನ್ನು ಸಹ ಹೊಂದಿರುತ್ತದೆ, ಇದು ಉದ್ಯೋಗಿಯ ಮೂಲ ವೇತನದ 60 ಪ್ರತಿಶತವಾಗಿದೆ. ನೌಕರನ ಮರಣದ ಸಂದರ್ಭದಲ್ಲಿ ಅದನ್ನು ತಕ್ಷಣವೇ ನೀಡಲಾಗುವುದು. ಕನಿಷ್ಠ 10 ವರ್ಷಗಳ ಸೇವೆಯ ನಂತರ ನಿವೃತ್ತಿಯ ಸಂದರ್ಭದಲ್ಲಿ, UPS ತಿಂಗಳಿಗೆ 10,000 ರೂ.ಗಳ ಖಚಿತವಾದ ಕನಿಷ್ಠ ಪಿಂಚಣಿಯನ್ನು ಒದಗಿಸುತ್ತದೆ.

ಯುಪಿಎಸ್‌ಗೆ ಯಾರು ಸೇರಬಹುದು?

“ಕೇಂದ್ರ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆಯಲ್ಲಿ (ಎನ್‌ಪಿಎಸ್) ಉಳಿಯಲು ಅಥವಾ ಏಕೀಕೃತ ಪಿಂಚಣಿ ಯೋಜನೆಗೆ (ಯುಪಿಎಸ್) ಸೇರಲು ನಿರ್ಧರಿಸುವ ಹಕ್ಕನ್ನು ಹೊಂದಿರುತ್ತಾರೆ” ಎಂದು ವೈಷ್ಣವ್ ಹೇಳಿದರು. ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿ ನಿಯೋಜಿತ ಟಿ ವಿ ಸೋಮನಾಥನ್ ಅವರು, “ಇದು ಈಗಾಗಲೇ ಎನ್‌ಪಿಎಸ್ ಅಡಿಯಲ್ಲಿ 2004 ರಿಂದ ನಿವೃತ್ತರಾದ ಎಲ್ಲರಿಗೂ ಅನ್ವಯಿಸುತ್ತದೆ. ಹೊಸ ಯೋಜನೆಯು ಏಪ್ರಿಲ್ 1, 2025 ರಿಂದ ಜಾರಿಗೆ ಬರಲಿದೆಯಾದರೂ, NPS ಪ್ರಾರಂಭವಾದ ಸಮಯದಿಂದ ನಿವೃತ್ತರಾದ ಪ್ರತಿಯೊಬ್ಬರೂ ಮತ್ತು ಮಾರ್ಚ್ 31, 2025 ರವರೆಗೆ ನಿವೃತ್ತರಾದವರು ಸೇರಿದಂತೆ, UPS ನ ಈ ಎಲ್ಲಾ ಐದು ಪ್ರಯೋಜನಗಳಿಗೆ ಅರ್ಹರಾಗಿರುತ್ತಾರೆ” ಎಂದಿದ್ದಾರೆ.

ಇದನ್ನೂ ಓದಿ: NPS v/s UPS: ಏಕೀಕೃತ ಪಿಂಚಣಿ ಯೋಜನೆ ಅಂದ್ರೆ ಏನು? ಇದು NPSಗಿಂತ ಹೇಗೆ ಭಿನ್ನ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

Continue Reading

ಮಳೆ

Karnataka Weather : ಬೆಂಗಳೂರು ಸೇರಿದಂತೆ ಉಡುಪಿ, ಉತ್ತರ ಕನ್ನಡದಲ್ಲಿಂದು ಭಾರಿ ಮಳೆ ಎಚ್ಚರ

Karnataka Rain : ಕರಾವಳಿಯಲ್ಲಿ ಇಂದಿನಿಂದ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿಗೂ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Karnataka Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಉತ್ತರ ಒಳನಾಡು, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Assault Case : ಹುಡ್ಗಿ ವಿಷ್ಯಕ್ಕೆ ರೂಮ್‌ನಲ್ಲಿ ಕೂಡಿ ಹಾಕಿ ಯುವಕನಿಗೆ ರಕ್ತ ಬರುವಂತೆ ಥಳಿತ; ವಿಡಿಯೊ ವೈರಲ್‌

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ. ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆ ಇವೆ.

ಕರಾವಳಿಗೂ ಮಳೆ ಅಲರ್ಟ್‌

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಆಗಸ್ಟ್‌ 27 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮೇಲಿನ ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಮುಂದಿನ 48 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Sudha Murthy: ವೈದ್ಯಕೀಯ ಸೇವೆಯಲ್ಲಿ ಬದ್ಧತೆ, ನೈತಿಕತೆ ಇಂದಿನ ಅಗತ್ಯ: ಸುಧಾಮೂರ್ತಿ

ಬೆಂಗಳೂರಿನ ನಿಮ್ಹಾನ್ಸ್ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಎನ್‌ಯು ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಸುಧಾಮೂರ್ತಿ (Sudha Murthy) ಅವರು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಖಾಸಗಿ ಆಸ್ಪತ್ರೆಯೊಂದು ಬದ್ಧತೆ ಹಾಗೂ ನೈತಿಕತೆ ಇಟ್ಟುಕೊಂಡು ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯ ಎಂದು ತಿಳಿಸಿದ್ದಾರೆ.

VISTARANEWS.COM


on

Sudha Murthy
Koo

ಬೆಂಗಳೂರು: ಸ್ಪರ್ಧಾತ್ಮಕ ಜಗತ್ತಿನಲ್ಲಿ ಖಾಸಗಿ ಆಸ್ಪತ್ರೆಯೊಂದು ಬದ್ಧತೆ ಹಾಗೂ ನೈತಿಕತೆ ಇಟ್ಟುಕೊಂಡು ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯ ಎಂದು ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ (Sudha Murthy) ತಿಳಿಸಿದರು.

ನಗರದ ನಿಮ್ಹಾನ್ಸ್ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಎನ್‌ಯು ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಆಸ್ಪತ್ರೆ ನಡೆಸುವುದು ಸುಲಭದ ಕೆಲಸವಲ್ಲ. ನಾನು ಈ ಕಷ್ಟವನ್ನು ಹತ್ತಿರದಿಂದ ಕಂಡಿದ್ದೇನೆ. ಇಂತಹ ಸ್ಪರ್ಧಾತ್ಮಕ ವ್ಯವಸ್ಥೆಯಲ್ಲಿ ಆಸ್ಪತ್ರೆ 25 ವರ್ಷಗಳನ್ನು ಪೂರ್ಣಗೊಳಿಸುವುದು ಸಾಹಸವೇ ಸರಿ. ಆ ನಿಟ್ಟಿನಲ್ಲಿ ಎನ್‌ಯು ಆಸ್ಪತ್ರೆಯ ಈ ಪಯಣ ನಿಜಕ್ಕೂ ಅಭಿನಂದನಾರ್ಹ. ಇಂದು ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ ಆಸ್ಪತ್ರೆ ನಡೆಸುವುದು ಅಸಾಧ್ಯದ ಮಾತು. ಹಾಗೆಯೇ ಕೇವಲ ಹಣ ಮಾಡುವುದಕ್ಕಷ್ಟೇ ಆಸ್ಪತ್ರೆ ನಡೆಸುವುದು ಸರಿಯಾದುದಲ್ಲ. ಆದರೆ ಬದ್ಧತೆ ಹಾಗೂ ನೈತಿಕತೆ ಇಟ್ಟುಕೊಂಡು ಸೇವೆ ನೀಡುವ ಕೆಲಸ ನಿಜಕ್ಕೂ ಸ್ವಾಗತಾರ್ಹ. ಅಂತಹ ಕೆಲಸ ಎನ್‌ಯು ಆಸ್ಪತ್ರೆ ಮಾಡುತ್ತಾ ಬರುತ್ತಿರುವುದು ಬಹು ದೊಡ್ಡ ಸಾಧನೆ ಎಂದು ತಿಳಿಸಿದರು.

ಇದನ್ನೂ ಓದಿ: MB Patil: ವಿಮಾನ‌ ನಿಲ್ದಾಣ, ಏರ್ ಸ್ಟ್ರಿಪ್ ಪ್ರಗತಿ ಪರಿಶೀಲನೆ; ತಾಂತ್ರಿಕ ಅಡಚಣೆ ನಿವಾರಣೆಗೆ ಸಚಿವ ಎಂ‌.ಬಿ. ಪಾಟೀಲ ಸೂಚನೆ

ರಜತ ಮಹೋತ್ಸವದ ಕುರಿತು ಎನ್‌ಯು ಆಸ್ಪತ್ರೆಯ ಅಧ್ಯಕ್ಷ ಡಾ. ವೆಂಕಟೇಶ್ ಕೃಷ್ಣಮೂರ್ತಿ ಮಾತನಾಡಿ, ನಮ್ಮ ವೈದ್ಯಕೀಯ ಸಿಬ್ಬಂದಿ ಹಾಗೂ ವೈದ್ಯರು ನಿಯಮಿತವಾಗಿ ಪ್ರತಿಷ್ಠಿತ ವೈದ್ಯಕೀಯ ನಿಯತಕಾಲಿಕಗಳಲ್ಲಿ ಸಂಶೋಧನೆಗಳನ್ನು ಪ್ರಕಟಿಸುತ್ತಾ ಬಂದಿದ್ದಾರೆ. ಹಾಗೆಯೇ ಈ ಮೂಲಕ ರೋಗಿಗಳಲ್ಲಿನ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿವೆ. ರೋಗಿಯು ಶೀಘ್ರ ಗುಣಮುಖಗೊಳ್ಳುತ್ತಿದ್ದಾರೆ. ಮತ್ತೆ ರೋಗಕ್ಕೆ ತುತ್ತಾಗುವುದು ಹಾಗೂ ಮರಣ ಪ್ರಮಾಣವು ಗಣನೀಯವಾಗಿ ಕಡಿಮೆಯಾಗುತ್ತಿದೆ. ಈ ಪ್ರಯತ್ನದಲ್ಲಿ ಎನ್‌ಯು ಆಸ್ಪತ್ರೆಯು ಮುಂಚೂಣಿಯಲ್ಲಿದೆ ಹಾಗೂ ಇದೇ ಆಸ್ಪತ್ರೆಯ ಯಶಸ್ಸಿಗೆ ಕಾರಣವಾಗಿದೆ. ಅಲ್ಲದೆ ಆಸ್ಪತ್ರೆಯು ಅತ್ಯಾಧುನಿಕ ಐಸಿಯು ಸೌಲಭ್ಯಗಳು, 24/7 ಡಯಾಲಿಸಿಸ್, ಸುಧಾರಿತ ಪ್ರಯೋಗಾಲಯ ಮತ್ತು ರೇಡಿಯೊ ಡಯಾಗ್ನೋಸಿಸ್ ಸೇವೆಗಳು ಮತ್ತು ಯುರೊಡೈನಾಮಿಕ್ಸ್ ಸೌಲಭ್ಯಗಳನ್ನು ಹೊಂದಿದೆ. ಇದರಿಂದ ಉತ್ತಮ ರೀತಿಯಲ್ಲಿ ಸೇವೆ ನೀಡಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಖ್ಯಾತ ಯುರಾಲಜಿಸ್ಟ್ ಮತ್ತು ಎನ್‌ಯು ಆಸ್ಪತ್ರೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಸನ್ನ ವೆಂಕಟೇಶ್ ಮಾತನಾಡಿ, ಎನ್‌ಯು ಆಸ್ಪತ್ರೆಯು 25 ವರ್ಷಗಳನ್ನು ಪೂರೈಸುತ್ತಿದ್ದು, ತನ್ನ ರಜತ ಮಹೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಿದೆ. ಕಳೆದ ಕಾಲು ಶತಮಾನದಲ್ಲಿ ಎನ್‌ಯು ಆಸ್ಪತ್ರೆ ಹಲವಾರು ಮೈಲಿಗಲ್ಲುಗಳನ್ನು ತಲುಪಿದೆ. 2018ರಲ್ಲಿ ನಾನ್ ಇನ್ವೇಸಿವ್ ರೋಗಿಗಳ ಮೇಲ್ವಿಚಾರಣಾ ವ್ಯವಸ್ಥೆಯಲ್ಲಿ ವಿಶ್ವದಲ್ಲೇ ಮುಂಚೂಣಿಯಲ್ಲಿರುವ ಯುಎಸ್ ಮೂಲದ ಮಾಸಿಮೊ ಸಹಯೋಗದೊಂದಿಗೆ ‘ಪೇಷಂಟ್ ಸೇಫ್ಟಿನೆಟ್’ ಅನ್ನು ಅಳವಡಿಸಿಕೊಂಡ ಭಾರತದ ಮೊದಲ ಆಸ್ಪತ್ರೆಯಾಗಿದೆ. ಈ ಆಸ್ಪತ್ರೆಯು ಸಿಎಂಆರ್ ವರ್ಸಿಯಸ್ ಸರ್ಜಿಕಲ್ ರೊಬೊಟಿಕ್ ಸಿಸ್ಟಮ್ ಅನ್ನು ಪರಿಚಯಿಸಿದ ಭಾರತದಲ್ಲಿ ಮೊದಲನೆಯ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಕಾರಣವಾಗಿದೆ. ಈ ವಿಧಾನಗಳ ಚಿಕಿತ್ಸೆಯ ಮೂಲಕ ರೋಗಿಗೆ ಎದುರಾಗಬಹುದಾದಂತಹ ತೊಂದರೆಗಳನ್ನು ತಪ್ಪಿಸುವಲ್ಲಿ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ತಿಳಿಸಿದರು.

2015ರಲ್ಲಿ ಎನ್‌ಯು ಆಸ್ಪತ್ರೆಯು ಬೆಂಗಳೂರಿನ ರಾಜಾಜಿನಗರದಲ್ಲಿ ಎರಡನೇ ಅತ್ಯಾಧುನಿಕ ಘಟಕವನ್ನು ಆರಂಭಿಸುವ ಮೂಲಕ ತನ್ನ ಶಾಖೆಯನ್ನು ವಿಸ್ತರಿಸಿತು. ರಿಪಬ್ಲಿಕ್ ಆಫ್ ಮಾಲ್ಡೀವ್ಸ್‌ನ ಮಾಲೆಯಲ್ಲಿರುವ ಇಂದಿರಾ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಯುರಾಲಜಿ ರೆನಲ್ ಮತ್ತು ಫಲವತ್ತತೆ ಕೇಂದ್ರವನ್ನು 2016 ರಲ್ಲಿ ತೆರೆಯುವ ಮೂಲಕ ಆಸ್ಪತ್ರೆಯ ವ್ಯಾಪ್ತಿಯು ವಿದೇಶಕ್ಕೆ ವಿಸ್ತರಿಸಿತು. 2020ರಲ್ಲಿ ಕರ್ನಾಟಕದ ಶಿವಮೊಗ್ಗ ಮತ್ತು ತಮಿಳುನಾಡಿನ ಅಂಬೂರಿನಲ್ಲಿ ಆಸ್ಪತ್ರೆಗಳ ಸ್ಥಾಪನೆಯೊಂದಿಗೆ ದಕ್ಷಿಣ ಭಾರತದಲ್ಲಿ ಶಾಖೆಗಳನ್ನು ಮತ್ತಷ್ಟು ವಿಸ್ತರಣೆ ಮಾಡಲಾಯಿತು. ಎಲ್ಲಾ ಎನ್‌ಯು ಆಸ್ಪತ್ರೆಗಳ ಘಟಕಗಳು ಎನ್‌ಎಬಿಎಚ್‌ (NABH) ಮತ್ತು ಎನ್‌ಎಬಿಎಲ್‌ (NABL) ಮಾನ್ಯತೆ ಪಡೆದಿವೆ. ಸಂಸ್ಥೆಯು ಡಿಎನ್‌ಬಿ (DNB) ನ್ಯಾಷನಲ್ ಬೋರ್ಡ್-ಮಾನ್ಯತೆ ಪಡೆದ ಸ್ನಾತಕೋತ್ತರ ಕಾರ್ಯಕ್ರಮಗಳನ್ನು ನೀಡುವ ಮೂಲಕ ಮುಂದಿನ ಪೀಳಿಗೆಯ ಯುರಾಲಜಿಸ್ಟ್ ಮತ್ತು ನೆಫ್ರಾಲಜಿಸ್ಟ್ ತಜ್ಞರಿಗೆ ತರಬೇತಿ ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ: UPS: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು

25ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಅಂಗವಾಗಿ ಕಾರ್ಯಕ್ರಮದಲ್ಲಿ ಆಸ್ಪತ್ರೆಗೆ ದೀರ್ಘ ಹಾಗೂ ವಿಶೇಷ ಸೇವೆ ಸಲ್ಲಿಸಿದ ಸಿಬ್ಬಂದಿಗಳನ್ನು ಗೌರವಿಸಲಾಯಿತು.

Continue Reading
Advertisement
Rohit Sharma
ಕ್ರೀಡೆ38 mins ago

Rohit Sharma: ಪಾರ್ಕ್​ನಲ್ಲಿ ಅಭ್ಯಾಸ ನಡೆಸಿದ ರೋಹಿತ್​; ವಿಡಿಯೊ ವೈರಲ್​

Chain snatching Case
ಕ್ರೈಂ50 mins ago

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿದ; ಚೈನ್ ಸ್ನಾಚಿಂಗ್‌ಗೆ ಇಳಿದು ಸಿಕ್ಕಿಬಿದ್ದ

Polluted Water
ಕರ್ನಾಟಕ1 hour ago

Polluted Water: ಕಲುಷಿತ ನೀರಿಗೆ ಮತ್ತೊಂದು ಬಲಿ; ಚಿಕಿತ್ಸೆ ಫಲಿಕಾರಿಯಾಗದೆ ಮಹಿಳೆ ಸಾವು

Wild Animals Attack
ಕರ್ನಾಟಕ2 hours ago

Wild Animals Attack: ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

unified pension scheme
ಪ್ರಮುಖ ಸುದ್ದಿ4 hours ago

Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

Sunita Williams
ದೇಶ4 hours ago

Sunita Williams: ಮುಂದಿನ ವರ್ಷ ಫೆಬ್ರುವರಿಯಲ್ಲಿ ಭೂಮಿಗೆ ಮರಳಲಿದ್ದಾರೆ ಸುನೀತಾ ವಿಲಿಯಮ್ಸ್;‌ ನಾಸಾ ಘೋಷಣೆ

karnataka weather forecast
ಮಳೆ4 hours ago

Karnataka Weather : ಬೆಂಗಳೂರು ಸೇರಿದಂತೆ ಉಡುಪಿ, ಉತ್ತರ ಕನ್ನಡದಲ್ಲಿಂದು ಭಾರಿ ಮಳೆ ಎಚ್ಚರ

Dina Bhavishya
ಭವಿಷ್ಯ5 hours ago

Dina Bhavishya : ಈ ರಾಶಿಯವರ ಬಹು ದಿನಗಳ ಕನಸು ನನಸು; ಕುಟುಂಬದ ಆಪ್ತರಿಂದ ಶುಭ ಸುದ್ದಿ

Rahul Gandhi
ದೇಶ10 hours ago

Rahul Gandhi: ಮಿಸ್‌ ಇಂಡಿಯಾ ಪಟ್ಟಿಯಲ್ಲಿ ದಲಿತ, ಬುಡಕಟ್ಟು, ಒಬಿಸಿ ಮಹಿಳೆಯರು ಇಲ್ಲವೇ ಇಲ್ಲ-ರಾಹುಲ್‌ ಗಾಂಧಿ ಹೊಸ ಆರೋಪ

Sudha Murthy
ಬೆಂಗಳೂರು11 hours ago

Sudha Murthy: ವೈದ್ಯಕೀಯ ಸೇವೆಯಲ್ಲಿ ಬದ್ಧತೆ, ನೈತಿಕತೆ ಇಂದಿನ ಅಗತ್ಯ: ಸುಧಾಮೂರ್ತಿ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ19 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌