MLCs Health Expenditure: ಆರೋಗ್ಯಕ್ಕಾಗಿ ಲಕ್ಷ ಲಕ್ಷ ಕ್ಲೇಮ್; ಅತಿ ಹೆಚ್ಚು ಸರ್ಕಾರದ ಹಣ ಪಡೆದ ಎಂಎಲ್‌ಸಿಗಳು ಇವರೇ ನೋಡಿ! - Vistara News

ಪ್ರಮುಖ ಸುದ್ದಿ

MLCs Health Expenditure: ಆರೋಗ್ಯಕ್ಕಾಗಿ ಲಕ್ಷ ಲಕ್ಷ ಕ್ಲೇಮ್; ಅತಿ ಹೆಚ್ಚು ಸರ್ಕಾರದ ಹಣ ಪಡೆದ ಎಂಎಲ್‌ಸಿಗಳು ಇವರೇ ನೋಡಿ!

MLCs Health Expenditure: ಆರೋಗ್ಯಕ್ಕಾಗಿ ಸರ್ಕಾರದಿಂದ ಹಣ ಕ್ಲೇಮ್ ಮಾಡಲು ಎಂಎಲ್‌ಸಿಗಳಿಗೆ ಅವಕಾಶವಿದೆ. ಸಾಮಾಜಿಕ ಹೋರಾಟಗಾರರೊಬ್ಬರು ಆರ್‌ಟಿಐ ಸಲ್ಲಿಸಿದ ಹಿನ್ನೆಲೆಯಲ್ಲಿ 2023ರ ಮೇ 1 ರಿಂದ 2024ರ ಜುಲೈ ತಿಂಗಳವರೆಗೆ ಯಾರು ಎಷ್ಟು ಹಣ ಪಡೆದಿದ್ದಾರೆ ಎಂಬ ಮಾಹಿತಿಯನ್ನು ವಿಧಾನ ಪರಿಷತ್‌ ಸಚಿವಾಲಯ ಮಾಹಿತಿ ನೀಡಿದೆ.

VISTARANEWS.COM


on

Health Expenditure
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ರಾಜ್ಯದ ವಿಧಾನ ಪರಿಷತ್ ಸದಸ್ಯರು ಲಕ್ಷ ಲಕ್ಷ ಹಣ ಕ್ಲೇಮ್ ಮಾಡಿರುವುದು ಕಂಡುಬಂದಿದೆ. ಕೇವಲ ಒಂದು ವರ್ಷದಲ್ಲಿ ಲಕ್ಷಾಂತರ ರೂ.ಗಳನ್ನು ಸರ್ಕಾರದಿಂದ ಎಂಎಲ್‌ಸಿಗಳು ಪಡೆದಿರುವ ಮಾಹಿತಿ ಬಹಿರಂಗವಾಗಿದೆ. ಸಾಮಾಜಿಕ ಹೋರಾಟಗಾರ ಎಚ್‌.ಎಂ.ವೆಂಕಟೇಶ್‌ ಅವರು ಮಾಹಿತಿ ಹಕ್ಕು ಕಾಯ್ದೆ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಎಂಎಲ್‌ಸಿಗಳು ಆರೋಗ್ಯಕ್ಕಾಗಿ (MLCs Health Expenditure) ಪಡೆದಿರುವ ಹಣದ ಕುರಿತ ಮಾಹಿತಿಯನ್ನು ಸಚಿವಾಲಯವು ನೀಡಿದೆ.

ಆರೋಗ್ಯಕ್ಕಾಗಿ ಸರ್ಕಾರದಿಂದ ಹಣ ಕ್ಲೇಮ್ ಮಾಡಲು ಎಂಎಲ್‌ಸಿಗಳಿಗೆ ಅವಕಾಶವಿದೆ. ಹೀಗಾಗಿ 2023ರ ಮೇ 1 ರಿಂದ 2024ರ ಜುಲೈ ತಿಂಗಳವರೆಗೆ ಯಾರು ಎಷ್ಟು ಹಣ ಪಡೆದಿದ್ದಾರೆ ಎಂಬ ಮಾಹಿತಿಯನ್ನು ವಿಧಾನ ಪರಿಷತ್‌ ಸಚಿವಾಲಯ ಮಾಹಿತಿ ನೀಡಿದೆ.

ಎಂಎಲ್‌ಸಿಗಳ ಪೈಕಿ ಯಾರು ಎಷ್ಟು ಪಡೆದಿದ್ದಾರೆ ಎಂದು ನೋಡುವುದಾದರೆ, ಎಂಎಲ್‌ಸಿ ಭಾರತಿ ಶೆಟ್ಟಿ ಅವರು ಒಂದು ವರ್ಷದಲ್ಲಿ 48.70 ಲಕ್ಷ ರೂಪಾಯಿ ಕ್ಲೇಮ್ ಮಾಡುವ ಮೂಲಕ ಅತಿ ಹೆಚ್ಚು ಹಣ ಕ್ಲೇಮ್ ಮಾಡಿರುವ ವಿಧಾನ ಪರಿಷತ್ ಸದಸ್ಯೆಯಾಗಿದ್ದಾರೆ. ಎರಡನೇ ಸ್ಥಾನದಲ್ಲಿದ್ದಾರೆ ಕೊಟ್ಯಧೀಶ್ವರ ಸಿ.ಪಿ.ಯೋಗೇಶ್ವರ್ ಇದ್ದಾರೆ. ಇವರು 39.64 ಲಕ್ಷ ರೂ.ಗಳನ್ನು ಸರ್ಕಾರದಿಂದ ಆರೋಗ್ಯಕ್ಕಾಗಿ ಖರ್ಚು ಮಾಡಿದ್ದಾರೆ. ಮೂರನೇ ಸ್ಥಾನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಇದ್ದು, ಅಕ್ಕ ಸಚಿವರಾಗಿದ್ದರೂ ಕೂಡ ಆರೋಗ್ಯಕ್ಕಾಗಿ 17.03 ಲಕ್ಷ ರೂ.ಗಳನ್ನು ಪಡೆದಿದ್ದಾರೆ.

ಎಂಎಲ್‌ಸಿ ಭಾರತಿ ಶೆಟ್ಟಿ ಮತ್ತು ಸಿ.ಪಿ.ಯೋಗೇಶ್ವರ್

ಇನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಕೂಡ ಅತಿ ಹೆಚ್ಚು ಸರ್ಕಾರದ ಹಣ ಖರ್ಚು ಮಾಡಿರುವುದು ಕಂಡುಬಂದಿದೆ. ಒಂದೇ ವರ್ಷದಲ್ಲಿ ಇವರು ಆರೋಗ್ಯಕ್ಕಾಗಿ 7.26 ಲಕ್ಷ ರೂಪಾಯಿ ಸರ್ಕಾರದ ಹಣ ಖರ್ಚು ಮಾಡಿದ್ದಾರೆ. ಹಿರಿಯ ಶಾಸಕ ಲಕ್ಷ್ಮಣ್ ಸವದಿಯಿಂದ ಕೂಡ ಸರ್ಕಾರದ ಹಣ ಖರ್ಚಾಗಿದೆ. ಇವರು 2,41,574 ರೂ.ಗಳನ್ನು ಪಡೆದಿದ್ದು, ಟಿ.ಎ. ಶರವಣ ಅವರು 2,14,770 ರೂಪಾಯಿ ಖರ್ಚು ಮಾಡಿದ್ದಾರೆ.

ಸರ್ಕಾರದ ಹಣ ಪಡೆದ ಎಂಎಲ್‌ಸಿಗಳ ಪಟ್ಟಿ

  • ಹರೀಶ್ ಕುಮಾರ್- 2 ಲಕ್ಷ ರೂ.
  • ಮರಿತಿಬ್ಬೇಗೌಡ- 1,54,995 ರೂ.
  • ವೈ.ಎ. ನಾರಾಯಣಸ್ವಾಮಿ- 3 ಲಕ್ಷ
  • ಅಬ್ದುಲ್ ಜಬ್ಬಾರ್- 1,1,345 ರೂ.
  • ಸುಧಾಮ್ ದಾಸ್- 2,04,542 ರೂ.
  • ಸುನೀಲ್ ವಲ್ಯಾಪುರೆ- 2,75,000 ರೂ.
  • ಛಲವಾದಿ ನಾರಾಯಣಸ್ವಾಮಿ- 1,18,828 ರೂ.
  • ವೈ.ಎಂ. ಸತೀಶ್- 2,77,559 ರೂ.
  • ಮಧು ಮಾದೇಗೌಡ- 2,46,233 ರೂ.
  • ರಘುನಾಥ್ ಮಲ್ಕಾಪುರೆ- 1,34,823 ರೂ.
  • ಎಂ.ಜಿ.ಮುಳೆ- 2,24,282 ರೂಪಾಯಿ
  • ಅಡಗೂರು ವಿಶ್ವನಾಥ್-‌ 52, 127 ರೂ.
  • ರಘುನಾಥ್‌ ರಾವ್‌ ಮಲ್ಕಾಪೂರೆ- 1,34,823
  • ಸುಜಾ ಕುಶಾಲಪ್ಪ- 85,000 ರೂ.
  • ಸಲೀಂ ಅಹ್ಮದ್‌-66,402 ರೂ.

ಇದನ್ನೂ ಓದಿ | Industrial City: ಹೊಸೂರಿನಲ್ಲಿ ಟಾಟಾ ಗ್ರೂಪ್‌ನಿಂದ ಇಂಡಸ್ಟ್ರಿಯಲ್‌ ಸಿಟಿ ನಿರ್ಮಾಣಕ್ಕೆ ಸಿದ್ಧತೆ; ಬೆಂಗಳೂರಿನ ಐಟಿ ಸಿಟಿ ಪಟ್ಟಕ್ಕೆ ಕುತ್ತು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Delhi News : ಆಟಿಕೆಯೆಂದು ಭಾವಿಸಿ ಅಪ್ಪನ ಪಿಸ್ತೂಲ್‌ ಶಾಲೆಗೆ ತೆಗೆದುಕೊಂಡು ಹೋದ 10 ವರ್ಷದ ಬಾಲಕ

Delhi News : ಪರಿಶೀಲನೆಯ ನಂತರ ಪಿಸ್ತೂಲ್‌‌ನ ಪರವಾನಗಿ ಮಾನ್ಯವೆಂದು ಕಂಡುಬಂದಿದ್ದರಿಂದ ಗುರುತಿಸಬಹುದಾದ ಅಪರಾಧ ನಡೆದಿಲ್ಲ ಎಂದು ಪೊಲೀಸರು ತೀರ್ಮಾನಿಸಿದ್ದಾರೆ. ವಿದ್ಯಾರ್ಥಿಯ ತಾಯಿ ಪಿಸ್ತೂಲ್ ಅನ್ನು ಪೊಲೀಸ್ ಠಾಣೆಯಲ್ಲಿ ಡೆಪಾಸಿಟ್ ಮಾಡಿದ್ದಾರೆ.

VISTARANEWS.COM


on

Delhi News
Koo

ನವದೆಹಲಿ: 10 ವರ್ಷದ ಶಾಲಾ ಬಾಲಕನೊಬ್ಬ ತನ್ನ ಮನೆಯಲ್ಲಿಟ್ಟಿದ್ದ ಪಿಸ್ತೂಲ್ ಅನ್ನು ಆಟಿಕೆಯೆಂದು ತಪ್ಪಾಗಿ ಭಾವಿಸಿ ಅದನ್ನು ತನ್ನ ಶಾಲೆಗೆ ತಂದ ಘಟನೆ ಆಗಸ್ಟ್ 24 ರಂದು ದೆಹಲಿಯಲ್ಲಿ (Delhi News) ನಡೆದಿದೆ. ದೀಪಕ್‌ ವಿಹಾರ್‌ನ ಗ್ರೀನ್ ವ್ಯಾಲಿ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯಿಂದ ಕರೆ ಬಂದ ನಂತರ ಪೊಲೀಸರು ವಿದ್ಯಾರ್ಥಿಯ ಚೀಲದಿಂದ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ.

ಆಡಳಿತ ಮಂಡಳಿ ತಕ್ಷಣ ಬಾಲಕನ ತಾಯಿಯನ್ನು ಕರೆಸಿದ್ದಾರೆ. ಈ ವೇಳೆ ವಿದ್ಯಾರ್ಥಿಯ ತಾಯಿ, ಪಿಸ್ತೂಲ್‌ ಕೆಲವು ತಿಂಗಳ ಹಿಂದೆ ನಿಧನರಾದ ಬಾಲಕನ ತಂದೆಗೆ ಸೇರಿದ್ದು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂದೂಕಿಗೆ ಪರವಾನಗಿ ಇದೆ ಎಂದು ಅವಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಡೆಪಾಸಿಟ್‌ ಮಾಡಲು ಪಿಸ್ತೂಲ್ ಅನ್ನು ಹೊರಗೆ ಇಟ್ಟಿದ್ದೆ ಎಂದು ತಾಯಿ ಹೇಳಿದ್ದಾರೆ.

ಇದನ್ನೂ ಓದಿ: Shocking Video : ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಪೊಲೀಸ್‌ ವಶಕ್ಕೆ

ಪರಿಶೀಲನೆಯ ನಂತರ ಪಿಸ್ತೂಲ್‌‌ನ ಪರವಾನಗಿ ಮಾನ್ಯವೆಂದು ಕಂಡುಬಂದಿದ್ದರಿಂದ ಗುರುತಿಸಬಹುದಾದ ಅಪರಾಧ ನಡೆದಿಲ್ಲ ಎಂದು ಪೊಲೀಸರು ತೀರ್ಮಾನಿಸಿದ್ದಾರೆ. ವಿದ್ಯಾರ್ಥಿಯ ತಾಯಿ ಪಿಸ್ತೂಲ್ ಅನ್ನು ಪೊಲೀಸ್ ಠಾಣೆಯಲ್ಲಿ ಡೆಪಾಸಿಟ್ ಮಾಡಿದ್ದಾರೆ.

Continue Reading

ಕರ್ನಾಟಕ

KAS Prelims exam: ಕೆಎಎಸ್‌ ಪರೀಕ್ಷೆ ಮುಂದೂಡಲು ಕೆಲವರಿಂದ ಲಾಬಿ; ಆದರೆ ಮುಂದೂಡುವುದಿಲ್ಲ ಎಂದ ಸರ್ಕಾರ

KAS Prelims exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮುಂದೂಡಲು ಒತ್ತಾಯಗಳು ಕೇಳಿಬರುತ್ತಿರುವ ಹಿನ್ನೆಲೆ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಪ್ರತಿಕ್ರಿಯಿಸಿದ್ದು, ಕೆಲವರ ಲಾಬಿಗೆ ಮಣಿದರೆ ಸುಮಾರು 2.5 ಲಕ್ಷಕ್ಕೂ ಹೆಚ್ಚು ಅರ್ಜಿದಾರರು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ಹೇಳಿದ್ದಾರೆ.

VISTARANEWS.COM


on

Koo

ಬೆಂಗಳೂರು: ಆಗಸ್ಟ್ 27 ರಂದು ನಡೆಯಲಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯನ್ನು (KAS Prelims exam) ಮುಂದೂಡಲು ಆಗ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊಂದು ಲಾಬಿ ನಡೆಸುತ್ತಿದೆ. ಎಲ್ಲಾ ರೀತಿಯಲ್ಲಿ ಒತ್ತಡ ಹೇರಲು ಈ ಗುಂಪು ಯತ್ನಿಸುತ್ತಿದ್ದು, ಕೆಪಿಎಸ್‌ಸಿ, ಡಿಪಿಎಆರ್‌, ಮತ್ತು ಸಿಎಂಒನ ಎಲ್ಲಾ ಪ್ರಮುಖ ಅಧಿಕಾರಿಗಳಿಗೆ ಕರೆ ಮಾಡಿ, ವಾಟ್ಸ್‌ ಆ್ಯಪ್ ಸಂದೇಶಗಳ ಸುರಿಮಳೆ ಸುರಿಸುತ್ತಿದ್ದಾರೆ. ಎಷ್ಟರಮಟ್ಟಿಗೆ ಎಂದರೆ ಕೆಲವೊಮ್ಮೆ ನನ್ನ ಫೋನ್ ಅನ್ನು ನಾನು ಏರೋಪ್ಲೇನ್ ಮೋಡ್‌ನಲ್ಲಿ ಇಡಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಆರೋಪ ಮಾಡಿದ್ದಾರೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮುಂದೂಡಲು ಒತ್ತಾಯಗಳು ಕೇಳಿಬರುತ್ತಿರುವ ಹಿನ್ನೆಲೆ ಪ್ರತಿಕ್ರಿಯಿಸಿರುವ ಅವರು, ಕೆಪಿಎಸ್‌ಸಿ ಸುತ್ತಾ ಅನುಮಾನಗಳ ಹುತ್ತ! ಎಂಬಂತಹ ಪದಗಳನ್ನು ಬಳಸಿ ಸಾಕಷ್ಟು ತಪ್ಪು ಮಾಹಿತಿ ಹರಡಿ ಹಗರಣ ನಡೆದಿದೆ ಎಂಬಂತೆ ಬಿಂಬಿಸಲು ಕೆಲವರು ಯತ್ನಿಸುತ್ತಿದ್ದಾರೆ. ಕೆಪಿಎಸ್‌ಸಿ ಅಥವಾ ಸರ್ಕಾರವು ನೀಡಿರುವ ಹೆಚ್ಚುವರಿ ಅವಕಾಶ ಮತ್ತು ವಯೋಮಿತಿ ಸಡಿಲಿಕೆಯನ್ನು ಪಡೆದ ಸುಮಾರು ಈ 1500 ವಿದ್ಯಾರ್ಥಿಗಳ (ವಯೋಮಿತಿ ಸಡಿಲಿಕೆ ನೀಡಿದ ನಂತರ ತಡವಾಗಿ ಅರ್ಜಿ ಸಲ್ಲಿಸಿದವರ ಸಂಖ್ಯೆ) ಈ ಲಾಬಿಗೆ ಮಣಿದರೆ ಸುಮಾರು 2.5 ಲಕ್ಷಕ್ಕೂ ಹೆಚ್ಚು ಅರ್ಜಿದಾರರು ಸಂಕಷ್ಟಕ್ಕೆ ಸಿಲುಕುತ್ತಾರೆ ಮತ್ತು ಅನ್ಯಾಯವನ್ನು ಎದುರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | KAS Prelims exam: ಕೆಎಎಸ್ ಪೂರ್ವಭಾವಿ ಪರೀಕ್ಷೆ ಮುಂದೂಡಿ, ಇಲ್ಲವೇ ದಯಾಮರಣ ಕೊಡಿ: ಸಿಎಂಗೆ ಅಭ್ಯರ್ಥಿಗಳ ಮನವಿ

ಪರೀಕ್ಷೆಗೆ 2.5 ಲಕ್ಷ ಅಭ್ಯರ್ಥಿಗಳು ಪೂರ್ಣ ಸಿದ್ಧತೆ ನಡೆಸಿದ್ದಾರೆ, ಪರೀಕ್ಷಾ ಕೇಂದ್ರಗಳಿಗೆ ಬರಲು ತಮ್ಮ ಪ್ರಯಾಣದ ಟಿಕೆಟ್‌ಗಳನ್ನು ಕಾಯ್ದಿರಿಸಿದ್ದಾರೆ. ಹಾಗಾಗಿ ಕೆಳಗಿನ ಸಂಗತಿಗಳನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ‌.

  1. ಫೆಬ್ರವರಿ 25ರ ಅಧಿಸೂಚನೆಯ ಪ್ರಕಾರ ಪೂರ್ವಭಾವಿ ಪರೀಕ್ಷಾ ದಿನಾಂಕವನ್ನು ಮೇ 05 ರಂದು ನಿಗದಿಪಡಿಸಲಾಗಿತ್ತು. ಆದರೆ, ಮೇ 7ರಂದು ಚುನಾವಣೆ ಇರುವ ಕಾರಣದಿಂದಾಗಿ ಜುಲೈ 21ಕ್ಕೆ ಮುಂದೂಡಲಾಗಿತ್ತು. (ಆರಂಭದಲ್ಲಿ ಜುಲೈ 7ರಂದು ನಡೆಸಲು ತೀರ್ಮಾನಿಸಲಾಗಿತ್ತು ಆದರೆ ಆ ದಿನ UPSC ಪರೀಕ್ಷೆಯೊಂದಕ್ಕೆ ಘರ್ಷಣೆಯಾಗುತ್ತೆ ಎಂಬ ಕಾರಣದಿಂದಾಗಿ ಜುಲೈ 21ಕ್ಕೆ ಬದಲಾಯಿಸಲಾಗಿತ್ತು)
  2. ⁠2017-18ರ ವಯೋಮಿತಿ ನಿರ್ಬಂಧಿತ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ ಅವಕಾಶ ನೀಡಲು ಜೂನ್ 21ರಂದು ಸರ್ಕಾರಿ ಆದೇಶವನ್ನು ಪ್ರಕಟಿಸಲಾಗಿತ್ತು. ಈ ರೀತಿ ವಯೋಮಿತಿ ನಿರ್ಬಂಧಿತರಿಗೆ ಅವಕಾಶ ನೀಡಿದ್ದರಿಂದ ಪರೀಕ್ಷೆಯ ದಿನಾಂಕವನ್ನು ಆಗಸ್ಟ್ 25ಕ್ಕೆ ನಡೆಸುವುದಾಗಿ ಜೂನ್ 26ರ ರಂದು ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿತ್ತು.
  3. ಜುಲೈ 6 ರ ಹೊತ್ತಿಗೆ 2017-18 ಬ್ಯಾಚ್‌ನಿಂದ ಅಪ್ಲಿಕೇಶನ್‌ಗಳನ್ನು ಸ್ವೀಕರಿಸಲು ಸರಳವಾದ ಸಾಫ್ಟ್‌ವೇರ್‌ ಆವೃತ್ತಿಯನ್ನು ಅಭಿವೃದ್ಧಿಪಡಿಸಲಾಗಿತ್ತು. ಮತ್ತು ಅರ್ಜಿ ಸ್ವೀಕರಿಸಲು ಜುಲೈ 21 ಕೊನೆಯ ದಿನವಾಗಿತ್ತು. ಈ ಅವಧಿಯಲ್ಲಿ ಸುಮಾರು 1560 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ.
  4. ಜುಲೈ 1ರಂದು IBPS ಪರೀಕ್ಷೆ ದಿನಾಂಕಗಳ ಅಧಿಸೂಚನೆಯನ್ನು ಪ್ರಕಟಿಸಲಾಗಿತ್ತು. (ಅವರ ತಾತ್ಕಾಲಿಕ ದಿನಾಂಕಗಳನ್ನು ಜನವರಿಯಲ್ಲಿ ಘೋಷಿಸಲಾಗಿತ್ತಾದರೂ ವೆಬ್‌ಸೈಟ್‌ಗಳಲ್ಲಿ ಅಥವಾ ಆನ್‌ಲೈನ್‌ನಲ್ಲಿ ನಮಗೆ ಯಾವುದೇ ಮಾಹಿತಿ ಅಥವಾ ದೃಢೀಕರಣ ಲಭ್ಯವಾಗಿಲ್ಲ).
  5. ಮುಖ್ಯಮಂತ್ರಿಯವರ ಕಚೇರಿಯಲ್ಲಿ ನಡೆದ ಚರ್ಚೆಯ ಬಳಿಕ ಆಗಸ್ಟ್ 25ರಂದು ನಡೆಯುವ ಪರೀಕ್ಷೆಯನ್ನು ಮುಂದೂಡಿರುವ ಕುರಿತು ಸಿಎಂ‌ ರವರು ಆಗಸ್ಟ್ 3ರಂದು ಟ್ವೀಟ್ ಮಾಡಿದ್ದಾರೆ. ಆಗಸ್ಟ್ 5ರಂದು ಆಯೋಗವು ಒಂದೇ ಅಜೆಂಡಾದ ಮೂಲಕ ಪರೀಕ್ಷೆ ನಡೆಯಬೇಕಿದ್ದ ಅದೇ ವಾರದಲ್ಲಿ ಅಂದರೆ, ಆಗಸ್ಟ್ 27ರಂದು ಪರೀಕ್ಷೆ ನಡೆಸಲು ನಿರ್ಧಾರ ತೆಗೆದುಕೊಂಡಿದೆ. ಯಾಕೆಂದರೆ ಆಗಸ್ಟ್ 27ರಂದು ಬೇರೆ ಯಾವುದೇ ಪರೀಕ್ಷೆಗಳನ್ನು ನಿಗದಿಪಡಿಸಲಾಗಿಲ್ಲ. ಆದ್ದರಿಂದ ಪರೀಕ್ಷೆ ನಡೆಸಬೇಕಿದ್ದ ಈ ವಾರದಲ್ಲಿಯೇ ಪರೀಕ್ಷೆ ನಡೆಸಲು ಆಯೋಗ ನಿರ್ಧರಿಸಿದೆ.

ಈ ಪ್ರಕ್ರಿಯೆಯ ವೇಳೆ, ಸಾಕಷ್ಟು ಸಮಯವನ್ನು ಅಭ್ಯರ್ಥಿಗಳಿಗೆ ನೀಡಲಾಗಿದೆ ಎಂಬ ಅಂಶವು ತುಂಬಾ ಸ್ಪಷ್ಟವಾಗಿದ್ದು, ಕೆಪಿಎಸ್‌ಸಿ ತರಾತುರಿಯಲ್ಲಿ ಪರೀಕ್ಷೆ ನಡೆಸುತ್ತಿದೆ ಎಂದು ಹೇಳಲು ಯಾವುದೇ ಆಧಾರವಿಲ್ಲ. ಮುಂದಿನ 2 ತಿಂಗಳವರೆಗೆ ಯಾವುದೇ ಭಾನುವಾರಗಳು ಖಾಲಿ ಇಲ್ಲದ ಕಾರಣದಿಂದಾಗಿ ಕೆಲಸದ ದಿನಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ಎಲ್.ಕೆ.ಅತೀಕ್ ತಿಳಿಸಿದ್ದಾರೆ.

ಇದನ್ನೂ ಓದಿ | KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ: ಸಿಎಂ ಸ್ಪಷ್ಟನೆ

2.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನಡೆಸಲು ಸಾಕಷ್ಟು ತಯಾರಿ ನಡೆಸಲಾಗಿದೆ. ಪತ್ರಿಕೆಗಳ ಮುದ್ರಣಕ್ಕೆ ಸುಮಾರು 4-5 ಕೋಟಿ ಖರ್ಚಾಗುತ್ತದೆ. 2 ತಿಂಗಳು ಮುಂದೂಡಿ ಎಂದರೆ ಮುದ್ರಿತ ಪತ್ರಿಕೆಗಳನ್ನು ನಾಶಪಡಿಸಿ ಹೊಸ ಪತ್ರಿಕೆಗಳನ್ನು ಮುದ್ರಿಸಬೇಕು. ಪ್ರಶ್ನೆ ಪತ್ರಿಕೆ ಸೋರಿಕೆಯಾಗುವ ಅಪಾಯವಿರುವುದರಿಂದ ಪೇಪರ್‌ಗಳನ್ನು ಹೆಚ್ಚು ಸಮಯ ಇಡುವಂತಿಲ್ಲ. ಈ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಲಾಬಿ ನಡೆಸುತ್ತಿರುವ ವಿದ್ಯಾರ್ಥಿಗಳ ಸಣ್ಣ ಗುಂಪಿನ ಬಗ್ಗೆ ಮತ್ತು ಸತ್ಯವನ್ನು ಪರಿಶೀಲಿಸಲು ಮಾಧ್ಯಮಗಳು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

Continue Reading

ಕ್ರೀಡೆ

PAK vs BNG: ಪಾಕ್​ಗೆ ತವರಿನಲ್ಲೇ 10 ವಿಕೆಟ್​ ಹೀನಾಯ ಸೋಲು; ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾ

PAK vs BNG: ಬಾಂಗ್ಲಾದೇಶ ಪಾಕಿಸ್ತಾನದಲ್ಲಿ ಇದುವರೆಗೆ 13 ಟೆಸ್ಟ್​ ಪಂದ್ಯಗಳನ್ನು ಆಡಿತ್ತಾದರೂ ಒಂದೇ ಒಂದು ಗೆಲುವು ಸಾಧಿಸಲು ಸಾಧ್ಯವಾಗಿರಲಿಲ್ಲ. ಇದೀಗ 14 ನೇ ಪ್ರಯತ್ನದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿದೆ

VISTARANEWS.COM


on

PAK vs BNG
Koo

ರಾವಲ್ಪಿಂಡಿ: ತಾನು ತೋಡಿದ ಹಳ್ಳಕ್ಕೆ ತಾನೇ ಬಿದ್ದ ಎನ್ನುವ ನಾಣ್ಣುಡಿಯಂತೆ ಪಾಕಿಸ್ತಾನ(PAK vs BNG) ತಂಡ ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್​(PAK vs BNG 1st Test) ಪಂದ್ಯದಲ್ಲಿ ಹೀನಾಯ 10 ವಿಕೆಟ್​ಗಳ ಸೋಲು ಕಂಡಿದೆ. ಬಾಂಗ್ಲಾದೇಶ ತಂಡ ಪಾಕ್​ ನೆಲದಲ್ಲಿ ಇದೇ ಮೊದಲ ಗೆಲುವು ಸಾಧಿಸಿ ಐತಿಹಾಸಿಕ ಸಾಧನೆ ಮಾಡಿದೆ.

ರಾವಲ್ಪಿಂಡಿಯಲ್ಲಿ ನಡೆದ ಈ ಟೆಸ್ಟ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಪಾಕಿಸ್ತಾನ 6 ವಿಕೆಟ್​ಗೆ 448 ರನ್‌ ಗಳಿಸಿ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 565 ರನ್‌ ಪೇರಿಸಿತು. ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ಪಾಕಿಸ್ತಾನ ಅಂತಿಮ ದಿನದಾಟದಲ್ಲಿ ಕೇವಲ 146 ರನ್​ಗೆ ಸರ್ವ ಪತನ ಕಂಡಿತು. ಗೆಲುವಿಗೆ 28 ರನ್​ ಗುರಿ ಪಡೆದ ಬಾಂಗ್ಲಾದೇಶ ವಿಕೆಟ್​ ನಷ್ಟವಿಲ್ಲದೆ 30 ರನ್​ ಬಾರಿಸಿ ಗೆಲುವಿನ ನಗೆ ಬೀರಿತು. ಅತಿಯಾದ ಆತ್ಮವಿಶ್ವಾಸವೇ ಪಾಕ್​ ತಂಡದ ಸೋಲಿಗೆ ಕಾರಣವಾಯಿತು. ಮೊದಲ ಇನಿಂಗ್ಸ್​ನಲ್ಲಿ ಡಿಕ್ಲೇರ್‌ ಮಾಡದೇ ಇರುತ್ತಿದ್ದರೆ ಕನಿಷ್ಠ ಪಂದ್ಯವನ್ನು ಡ್ರಾ ಮಾಡುವ ಅವಕಾಶ ದೊರಕುತ್ತಿತ್ತು. ಇದೀಗ ಸೋಲು ಕಂಡು ಪೇಚಿಗೆ ಸಿಲುಕಿದೆ.

ಐತಿಹಾಸಿಕ ಗೆಲುವು


ಬಾಂಗ್ಲಾದೇಶ ಪಾಕಿಸ್ತಾನ ನೆಲದಲ್ಲಿ ಸಾಧಿಸಿದ ಮೊದಲ ಗೆಲುವು ಇದಾಗಿದೆ. ಇದುವರೆಗೆ 13 ಟೆಸ್ಟ್​ ಪಂದ್ಯಗಳನ್ನು ಆಡಿತ್ತಾದರೂ ಒಂದೇ ಒಂದು ಗೆಲುವು ಸಾಧಿಸಲು ಸಾಧ್ಯವಾಗಿರಲಿಲ್ಲ. ಇದೀಗ 14 ನೇ ಪ್ರಯತ್ನದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದು ಸಾಧನೆ ಮಾಡಿದೆ.

ಬಾಂಗ್ಲಾ ಪರ ದ್ವಿತೀಯ ಇನಿಂಗ್ಸ್​ನಲ್ಲಿ ಮಾರಕ ಬೌಲಿಂಗ್​ ದಾಳಿ ನಡೆಸಿದ ಮೆಹಿದಿ ಹಸನ್ ಮಿರಾಜ್ 21 ರನ್​ಗೆ 4 ವಿಕೆಟ್​ ಉಡಾಯಿಸಿದರೆ, ಅನುಭವಿ ಶಕಿಬ್​ ಅಲ್​ ಹಸನ್​, 3 ವಿಕೆಟ್​ ಕಡೆವಿದರು. ಬ್ಯಾಟಿಂಗ್​ನಲ್ಲಿ ಮೊದಲ ಇನಿಂಗ್ಸ್​ನಲ್ಲಿ ಪಾಕ್‌ ಬೌಲರ್‌ಗಳ ಮೇಲೆ ಸವಾರಿ ಮಾಡಿದ್ದ ಅನುಭವಿ ಆಟಗಾರ ಮುಶ್ಫಿಕರ್‌ ರಹೀಂ 191 ರನ್‌ ಬಾರಿಸಿದ್ದರು. ಅವರ ಈ ಭರ್ಜರಿ ಆಟ ಬಾಂಗ್ಲಾ ತಂಡಕ್ಕೆ ಮೇಲುಗೈ ಸಾಧಿಸುವಂತೆ ಮಾಡಿತು. ಉಳಿದಂತೆ ಮೆಹಿದಿ ಹಸನ್ 77, ಶಾದ್ಮನ್ ಇಸ್ಲಾಂ 93 ರನ್​ ಬಾರಿಸಿದ್ದರು.

ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿಯೂ ಪ್ರಗತಿ ಸಾಧಿಸಿದ ಬಾಂಗ್ಲಾ


ಪಾಕಿಸ್ತಾನದ ವಿರುದ್ಧದ ಮೊದಲ ಟೆಸ್ಟ್ ಗೆಲುವು ಸಾಧಿಸಿದ ಬಾಂಗ್ಲಾದೇಶ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2023-25 ​​ಅಂಕಗಳ ಪಟ್ಟಿಯಲ್ಲಿ ಜಂಟಿ-ಐದನೇ ಸ್ಥಾನಕ್ಕೆ ಏರಿತು. ಮತ್ತೊಂದೆಡೆ, ಶಾನ್ ಮಸೂದ್ ನಾಯಕತ್ವದಲ್ಲಿ ಆಡಿದ ಎಲ್ಲಾ ನಾಲ್ಕು ಟೆಸ್ಟ್ ಪಂದ್ಯಗಳನ್ನು ಕಳೆದುಕೊಂಡಿರುವ ಪಾಕಿಸ್ತಾನ ಇದೀಗ ಎರಡನೇ-ಕೊನೆಯ ಸ್ಥಾನಕ್ಕೆ ಕುಸಿದಿದೆ. ಬಾಂಗ್ಲಾದೇಶ 2 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಅಂತಿಮ ಟೆಸ್ಟ್​ ಆಗಸ್ಟ್​ 30ರಿಂದ ಆರಂಭಗೊಳ್ಳಲಿದೆ. ಈ ಪಂದ್ಯವನ್ನು ಸೋತರೆ ಪಾಕ್​ ತವರಿನಲ್ಲಿ ಸರಣಿ ಸೋಲಿನ ಮುಖಭಂಗ ಎದುರಿಸಲಿದೆ.

Continue Reading

ಕರ್ನಾಟಕ

Price Support Scheme: ರೈತರಿಗೆ ಕೇಂದ್ರದಿಂದ ಗುಡ್‌ ನ್ಯೂಸ್; ಬೆಂಬಲ ಬೆಲೆಯಲ್ಲಿ ಹೆಸರು, ಸೂರ್ಯಕಾಂತಿ ಖರೀದಿಸಲು ರಾಜ್ಯಕ್ಕೆ ಸೂಚನೆ

Price Support Scheme: ರಾಜ್ಯದ ಮಾರುಕಟ್ಟೆಗಳಲ್ಲಿ ಹೆಸರಿನ ಬೆಲೆ ಕುಸಿದು ರೈತರು ಬೆಳೆದ ಬೆಳೆಗೆ ಸರಿಯಾದ ಮೌಲ್ಯ ದೊರೆಯದೇ ತೊಂದರೆ ಸಿಲುಕಿದ್ದು, ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರ ಸಹಾಯಕ್ಕೆ ನಿಂತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

VISTARANEWS.COM


on

Koo

ಹುಬ್ಬಳ್ಳಿ: ಕೇಂದ್ರ ಸರ್ಕಾರ ರಾಜ್ಯದ ರೈತರ ನೆರವಿಗೆ ಧಾವಿಸಿದ್ದು, ಬೆಂಬಲ ಬೆಲೆಯಲ್ಲಿ (Price Support Scheme) ಹೆಸರು ಕಾಳು ಹಾಗೂ ಸೂರ್ಯಕಾಂತಿ ಬೆಳೆ ಖರೀದಿಗೆ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಸರು ಕಾಳು ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗೆ ಮುಂದಾಗಿರುವ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಯೋಜನೆ ಅಡಿ ಪ್ರತಿ ಕ್ವಿಂಟಾಲ್‌ಗೆ 8,682 ರೂ. (MSP) ದರದಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಜೋಶಿ ಟ್ವೀಟ್ ಮಾಡಿದ್ದಾರೆ.

ರಾಜ್ಯದ ಮಾರುಕಟ್ಟೆಗಳಲ್ಲಿ ಹೆಸರಿನ ಬೆಲೆ ಕುಸಿದು ರೈತರು ಬೆಳೆದ ಬೆಳೆಗೆ ಸರಿಯಾದ ಮೌಲ್ಯ ದೊರೆಯದೇ ತೊಂದರೆ ಸಿಲುಕಿದ್ದು, ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರ ಸಹಾಯಕ್ಕೆ ನಿಂತಿದೆ. ಕೇಂದ್ರ ಸರ್ಕಾರ, ಎಂಎಸ್‌ಪಿ ಅಡಿ ಹೆಸರು ಕಾಳು ಖರೀದಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದು, ರಾಜ್ಯದ ರೈತರ ಹೆಸರುಕಾಳು ಬೆಳೆಯನ್ನು ಬೆಲೆ ಬೆಂಬಲ ಯೋಜನೆ (Price Support Scheme (PSS)) ಅಡಿ ಖರೀದಿಗೆ ಅನುಮತಿ ನೀಡಿದೆ. 2215 ಮೆಟ್ರಿಕ್‌ ಟನ್ ಹೆಸರುಕಾಳನ್ನು ಪ್ರತಿ ಕ್ವಿಂಟಾಲ್‌ಗೆ 8,682‌ ರೂ.ನಂತೆ ಖರೀದಿ ಮಾಡಲಾಗುವುದು ಎಂದು ಸಚಿವ ಜೋಶಿ ಮಾಹಿತಿ ನೀಡಿದ್ದಾರೆ.

ಸೂರ್ಯಕಾಂತಿ ಖರೀದಿಗೂ ಅನುಮೋದನೆ

ಸೂರ್ಯಕಾಂತಿ ಬೆಳೆಯನ್ನು ಕೂಡ ಬೆಲೆ ಬೆಂಬಲ ಯೋಜನೆ ಅಡಿಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. 13210 ಎಂ.ಟಿ. ಸೂರ್ಯಕಾಂತಿಯನ್ನು ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸಲಿದೆ ಎಂದು ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರ, ಕೇಂದ್ರಕ್ಕೆ ಆಗಸ್ಟ್ 21ರಂದು ಪತ್ರ ಬರೆದು ವಿನಂತಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣವರನ್ನು ಭೇಟಿ ಮಾಡಿ ಚರ್ಚಿಸಿ, ರಾಜ್ಯದ ಹೆಸರಕಾಳು ಮತ್ತು ಸೂರ್ಯಕಾಂತಿ ಬೆಳೆಗಾರರ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದ್ದೆ. ಇದಕ್ಕೆ ತಕ್ಷಣವೇ ಸ್ಪಂದಿಸಿದ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣವೇ ಬೆಂಬಲ ಬೆಲೆಯಲ್ಲಿ ಹೆಸರು ಮತ್ತು ಸೂರ್ಯಕಾಂತಿ ಖರೀದಿಗೆ ಅನುಮತಿ ನೀಡುವಂತೆ ಸೂಚಿಸಿದರು. ಕೇಂದ್ರ ಸರ್ಕಾರ ಆಗಸ್ಟ್ 22ರಂದೇ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ | Industrial City: ಹೊಸೂರಿನಲ್ಲಿ ಟಾಟಾ ಗ್ರೂಪ್‌ನಿಂದ ಇಂಡಸ್ಟ್ರಿಯಲ್‌ ಸಿಟಿ ನಿರ್ಮಾಣಕ್ಕೆ ಸಿದ್ಧತೆ; ಬೆಂಗಳೂರಿನ ಐಟಿ ಸಿಟಿ ಪಟ್ಟಕ್ಕೆ ಕುತ್ತು?

ತ್ವರಿತವಾಗಿ ಖರೀದಿ ಕೇಂದ್ರ ತೆರೆಯಲು ಒತ್ತಾಯ: ರಾಜ್ಯ ಸರ್ಕಾರ ತ್ವರಿತವಾಗಿ ರಾಜ್ಯದೆಲ್ಲೆಡೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ, ಬೆಂಬಲ ಬೆಲೆಯಲ್ಲಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ.

Continue Reading
Advertisement
Delhi News
ಪ್ರಮುಖ ಸುದ್ದಿ9 mins ago

Delhi News : ಆಟಿಕೆಯೆಂದು ಭಾವಿಸಿ ಅಪ್ಪನ ಪಿಸ್ತೂಲ್‌ ಶಾಲೆಗೆ ತೆಗೆದುಕೊಂಡು ಹೋದ 10 ವರ್ಷದ ಬಾಲಕ

Basavaraj Bommai
ಕರ್ನಾಟಕ18 mins ago

Basavaraj Bommai: ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ: ಬೊಮ್ಮಾಯಿ ಕಿಡಿ

ಕ್ರೀಡೆ20 mins ago

Fatima Sana: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಾಕ್​; 22 ವರ್ಷದ ಫಾತಿಮಾ ನಾಯಕಿ

Self Harming
ಬೆಂಗಳೂರು23 mins ago

Self Harming: ನೇಣಿಗೆ ಶರಣಾದ ಕ್ಯಾಬ್‌ ಚಾಲಕ; ಮಗನ ಶವದ ಮುಂದೆ ಕಣ್ಣೀರಿಡುತ್ತಾ ಕೊನೆಯುಸಿರೆಳೆದ ತಾಯಿ

Shocking Video
ವೈರಲ್ ನ್ಯೂಸ್39 mins ago

Shocking Video : ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಪೊಲೀಸ್‌ ವಶಕ್ಕೆ

Jindal Steels
ಕರ್ನಾಟಕ50 mins ago

Jindal Steels: ಬಿಜೆಪಿ ಸರ್ಕಾರವೇ ಜಿಂದಾಲ್ ಕಂಪನಿಗೆ ಭೂಮಿ ನೀಡಲು ತೀರ್ಮಾನಿಸಿತ್ತು: ಎಂ.ಬಿ. ಪಾಟೀಲ್

Virat Kohli
ಕ್ರೀಡೆ60 mins ago

Virat Kohli: ಧವನ್‌ ವಿದಾಯದ ಕುರಿತು ವಿರಾಟ್​ ಕೊಹ್ಲಿ ಭಾವನಾತ್ಮಕ ಸಂದೇಶ

ಕರ್ನಾಟಕ1 hour ago

KAS Prelims exam: ಕೆಎಎಸ್‌ ಪರೀಕ್ಷೆ ಮುಂದೂಡಲು ಕೆಲವರಿಂದ ಲಾಬಿ; ಆದರೆ ಮುಂದೂಡುವುದಿಲ್ಲ ಎಂದ ಸರ್ಕಾರ

Nissan Magnite EZ
ಆಟೋಮೊಬೈಲ್1 hour ago

Nissan Magnite : ನಿಸ್ಸಾನ್‌ ಮ್ಯಾಗ್ನೈಟ್‌ ಇಜಡ್‌- ಶಿಫ್ಟ್‌ ಕಾರು ಹೇಗಿದೆ?; ಪವರ್‌, ಫೀಚರ್‌ಗಳು ಹೇಗಿವೆ? ಇಲ್ಲಿದೆ ವಿವರ

Narendra Modi
ದೇಶ1 hour ago

Narendra Modi: ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಸಾಧ್ಯವೇ ಇಲ್ಲದ ಪಾಪ; ಪ್ರಧಾನಿ ಮೋದಿ ಗುಡುಗು

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ1 day ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌