Narendra Modi: ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಸಾಧ್ಯವೇ ಇಲ್ಲದ ಪಾಪ; ಪ್ರಧಾನಿ ಮೋದಿ ಗುಡುಗು - Vistara News

ದೇಶ

Narendra Modi: ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಸಾಧ್ಯವೇ ಇಲ್ಲದ ಪಾಪ; ಪ್ರಧಾನಿ ಮೋದಿ ಗುಡುಗು

Narendra Modi: ಮಹಾರಾಷ್ಟ್ರದ ಜಲ್ಗಾಂವ್‌ನಲ್ಲಿ ನಡೆದ ಲಕ್‌ಪತಿ ದೀದಿ ಸಮ್ಮೇಳನದಲ್ಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ʼʼಮಹಿಳೆಯರ ಸುರಕ್ಷತೆಗೆ ಭಾರತದಲ್ಲಿ ಅತ್ಯಂತ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಮಹಿಳೆಯರ ವಿರುದ್ಧದ ಅಪರಾಧಗಳು ಕ್ಷಮಿಸಲಾಗದ ಪಾಪʼʼ ಎಂದು ಗುಡುಗಿದ್ದಾರೆ. ʼʼಮಹಿಳೆಯ ಮೇಲೆ ದೌರ್ಜನ್ಯ ಎಸಗುವ ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಬಿಡಬಾರದುʼʼ ಎಂದು ಸೂಚಿಸಿದ್ದಾರೆ.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ʼʼಮಹಿಳೆಯರ ಸುರಕ್ಷತೆಗೆ ಭಾರತದಲ್ಲಿ ಅತ್ಯಂತ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಮಹಿಳೆಯರ ವಿರುದ್ಧದ ಅಪರಾಧಗಳು ಕ್ಷಮಿಸಲಾಗದ ಪಾಪ ಎಂದು ನಾನು ರಾಜ್ಯ ಸರ್ಕಾರಗಳಿಗೆ ಪದೇ ಪದೆ ಹೇಳುತ್ತಿದ್ದೇನೆʼʼ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಭಾನುವಾರ ಹೇಳಿದ್ದಾರೆ.

ಮಹಾರಾಷ್ಟ್ರದ ಜಲ್ಗಾಂವ್‌ನಲ್ಲಿ ನಡೆದ ಲಕ್‌ಪತಿ ದೀದಿ ಸಮ್ಮೇಳನ (Lakhpati Didi Sammelan)ದಲ್ಲಿ ಮಾತನಾಡಿದ ಮೋದಿ, “ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳ ಶಕ್ತಿಯನ್ನು ಹೆಚ್ಚಿಸುವುದರ ಜತೆಗೆ ಅವರ ಸುರಕ್ಷತೆಯ ಬಗ್ಗೆಯೂ ದೇಶ ಗಮನ ಹರಿಸುತ್ತದೆ. ಮಹಿಳೆಯರ ಸುರಕ್ಷತೆ ಬಗ್ಗೆ ನಾನು ಕೆಂಪು ಕೋಟೆಯಿಂದ ಪದೇ ಪದೆ ಹೇಳುತ್ತಿದ್ದೇನೆ. ಇಂದು ದೇಶದ ಯಾವುದೇ ರಾಜ್ಯವಾಗಿರಲಿ ಅಲ್ಲಿನ ನನ್ನ ಸಹೋದರಿಯರು ಮತ್ತು ಹೆಣ್ಣುಮಕ್ಕಳ ನೋವು ಮತ್ತು ಕೋಪವನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಮಹಿಳೆಯರ ಮೇಲಿನ ಅಪರಾಧವು ಕ್ಷಮಿಸಲಾಗದ ಪಾಪ ಎನ್ನುವುದನ್ನು ನಾನು ಮತ್ತೊಮ್ಮೆ ದೇಶದ ಪ್ರತಿಯೊಂದು ರಾಜಕೀಯ ಪಕ್ಷಕ್ಕೆ, ಪ್ರತಿ ರಾಜ್ಯ ಸರ್ಕಾರಕ್ಕೆ ನೆನಪಿಸುತ್ತಿದ್ದೇನೆ” ಎಂದು ಎಚ್ಚರಿಸಿದ್ದಾರೆ.

ʼʼಮಹಿಳೆಯ ಮೇಲೆ ದೌರ್ಜನ್ಯ ಎಸಗುವ ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಬಿಡಬಾರದು. ಮಾತ್ರವಲ್ಲ ಅವರಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡುವವರನ್ನೂ ಕ್ಷಮಿಸಬಾರದು. ಆಸ್ಪತ್ರೆ, ಶಾಲೆ, ಸರ್ಕಾರ ಅಥವಾ ಪೊಲೀಸ್ ವ್ಯವಸ್ಥೆಯಾಗಿರಲಿ ಯಾವುದೇ ಮಟ್ಟದಲ್ಲಿನ, ಚಿಕ್ಕ ನಿರ್ಲಕ್ಷ್ಯವನ್ನೂ ಸಹಿಸಲು ಸಾಧ್ಯವಿಲ್ಲ. ಅಪರಾಧದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಹೊಣೆಗಾರರನ್ನಾಗಿ ಮಾಡಬೇಕು. ಈ ಅಪರಾಧ ಕ್ಷಮಿಸಲಾಗದು ಎನ್ನುವ ಸ್ಪಷ್ಟ ಸಂದೇಶವನ್ನು ರವಾನಿಸಬೇಕುʼʼ ಎಂದು ಮೋದಿ ಸೂಚಿಸಿದ್ದಾರೆ.

ಪಶ್ಚಿಮ ಬಂಗಾಳದ ಕೋಲ್ಕತ್ತಾ ಆರ್‌.ಜಿ. ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯೊಬ್ಬರು ಅತ್ಯಾಚಾರಕ್ಕೆ ಒಳಗಾಗಿ ಕ್ರೂರವಾಗಿ ಹತ್ಯೆಗೀಡಾದ ಪ್ರಕರಣ ದೇಶಾದ್ಯಂತ ಸಂಸಚಲ ಸೃಷ್ಟಿಸಿದ್ದು ಇದನ್ನು ವಿರೋಧಿಸಿ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮಹಿಳೆಯರ ಸುರಕ್ಷತೆಗೆ ಬಗ್ಗೆ ಭರವಸೆ ನೀಡಿದ್ದಾರೆ.

ಮಹಿಳೆಯರ ಸುರಕ್ಷತೆಗೆ ಒತ್ತು

ತಮ್ಮ ಸರ್ಕಾರ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಲಿ ಜಾರಿಗೊಳಿಸಿರುವ ಹೊಸ ಕಾನೂನುಗಳನ್ನೂ ಮೋದಿ ಈ ವೇಳೆ ವಿವರಿಸಿದ್ದಾರೆ. ʼʼಇಂದು ದೊಡ್ಡ ಸಂಖ್ಯೆಯಲ್ಲಿ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಸೇರಿದ್ದಾರೆ. ನಿಮ್ಮ ಸುರಕ್ಷತೆಗಾಗಿ ನಮ್ಮ ಸರ್ಕಾರ ಕೈಗೊಂಡ ಕೆಲವು ಕ್ರಮಗಳ ಕುರಿತು ಹೇಳಲು ಬಯಸುತ್ತೇನೆ. ಈ ಹಿಂದೆ ಎಫ್ಐಆರ್‌ಗಳನ್ನು ಸಮಯಕ್ಕೆ ಸರಿಯಾಗಿ ದಾಖಲಿಸುತ್ತಿಲ್ಲ, ಸರಿಯಾಗಿ ವಿಚಾರಣೆ ನಡೆಯುತ್ತಿಲ್ಲ ಎಂಬೆಲ್ಲ ದೂರುಗಳು ಬರುತ್ತಿದ್ದವು. ಭಾರತೀಯ ನ್ಯಾಯ ಸಂಹಿತೆಯಲ್ಲಿದ್ದ ಇಂತಹ ಅನೇಕ ಅಡೆತಡೆಗಳನ್ನು ನಾವು ತೆಗೆದು ಹಾಕಿದ್ದೇವೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸಲು ಹೊಸ ಅಧ್ಯಾಯವನ್ನು ರಚಿಸಲಾಗಿದೆ. ಸಂತ್ರಸ್ತ ಮಹಿಳೆಯರು ಪೊಲೀಸ್ ಠಾಣೆಗೆ ಹೋಗಲು ಬಯಸದಿದ್ದರೆ ಅವರು ಮನೆಯಿಂದ ಇ-ಎಫ್ಐಆರ್ ದಾಖಲಿಸಬಹುದು” ಎಂದು ಪ್ರಧಾನಿ ವಿವರಿಸಿದ್ದಾರೆ.

ಏನಿದು ಲಕ್‌ಪತಿ ದೀದಿ ಯೋಜನೆ?

2024ರ ಕೇಂದ್ರ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ ಮಹತ್ವದ ಯೋಜನೆಗಳಲ್ಲಿ ʼಲಕ್‌ಪತಿ ದೀದಿʼಯೂ ಒಂದು. ಸ್ವಸಹಾಯ ಗುಂಪುಗಳಿಗೆ ವರ್ಷಕ್ಕೆ ಒಂದು ಲಕ್ಷ ರೂ.ವರೆಗೆ ಆದಾಯ ಗಳಿಸುವಂತೆ ಮಾಡುವ ಯೋಜನೆ ಇದಾಗಿದೆ. ಆ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಉದ್ದೇಶವನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹೊಂದಿದೆ. ಈ ಯೋಜನೆಯಡಿ, ಮಹಿಳೆಯರಿಗೆ ಪ್ಲಂಬಿಂಗ್, ಎಲ್ಇಡಿ ಬಲ್ಬ್ ತಯಾರಿಕೆ ಮತ್ತು ಡ್ರೋನ್‌ಗಳ ಕಾರ್ಯಾಚರಣೆ ಮತ್ತು ದುರಸ್ತಿಯಂತಹ ಕೌಶಲಗಳ ತರಬೇತಿ ನೀಡಲಾಗುತ್ತದೆ.

ಇದನ್ನೂ ಓದಿ: Mann Ki Baat: ಚಂದ್ರಯಾನ-3ರ ಯಶಸ್ಸನ್ನು ದೇಶ ಮರೆಯಲು ಸಾಧ್ಯವೇ ಇಲ್ಲ: ʼಮನ್​ ಕಿ ಬಾತ್​ʼನಲ್ಲಿ ಮೋದಿ ಬಣ್ಣನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Murder Case : ಭಕ್ತನ ಮೈಮೇಲೆ ದೆವ್ವ ಸೇರಿದೆ ಎಂದು ಚೆನ್ನಾಗಿ ಬಡಿದು ಕೊಂದ ಚರ್ಚ್‌ ಫಾದರ್‌!

Murder Case : ಘಟನೆ ನಡೆದ ಎರಡು ದಿನಗಳ ನಂತರ, ಸ್ಯಾಮ್ಯುಯೆಲ್‌ನ ತಾಯಿ ಮತ್ತು ಅವನ ಹೆಂಡತಿ ಪಾದ್ರಿಯ ವಿರುದ್ಧ ದೂರು ದಾಖಲಿಸಿದ್ದರು. ಸ್ಯಾಮ್ಯುಯೆಲ್ ಶವವನ್ನು ಶನಿವಾರ ಮರಣೋತ್ತರ ಪರೀಕ್ಷೆಗಾಗಿ ಹೊರತೆಗೆಯಲಾಗಿತ್ತು. ಪ್ರಕ್ರಿಯೆಯನ್ನು ಮ್ಯಾಜಿಸ್ಟ್ರೇಟ್ ಇಂದರ್ಜಿತ್ ಕೌರ್ ಅವರ ಮೇಲ್ವಿಚಾರಣೆಯಲ್ಲಿ ನಡೆಸಲಾಗಿದೆ. ಪಾದ್ರಿ ಮತ್ತು ಇತರ ಎಂಟು ಜನರ ವಿರುದ್ಧ ದೂರು ದಾಖಲಾಗಿದೆ.

VISTARANEWS.COM


on

Crime News
Koo

ಚಂಡೀಗಢ: ಮೈಮೇಲೆ ದೆವ್ವ ಸೇರಿಕೊಂಡಿದೆ ಎಂದು ಆತನಿಗೆ ಚೆನ್ನಾಗಿ ಬಡಿದು ದೆವ್ವ ಬಿಡಿಸಲು ಹೋದ ಚರ್ಚ್‌‌ನ ಪಾಸ್ಟರ್‌ ಕೊಲೆಗಾರನಾದ ಆಘಾತಕಾರಿ ಘಟನೆ ನಡೆದಿದೆ. ದೆವ್ವ ಬಿಡಿಸಲು ಯಗ್ಗಾಮುಗ್ಗಾ ಬಡಿದ ಕಾರಣ ಆತ ಮೃತಪಟ್ಟಿದ್ದಾನೆ (Murder Case). ಘಟನೆಯಲ್ಲಿ ಪಾಸ್ಟರ್‌ಗೆ ಎಂಟು ಮಂದಿ ನೆರವು ನೀಡಿದ್ದು ಎಲ್ಲರ ಮೇಲೂ ಕೊಲೆ ಕೇಸ್‌ ದಾಖಲಾಗಿದೆ. ಪಂಜಾಬ್‌‌‌ ಗುರುದಾಸ್ಪುರ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಗುರುದಾಸ್ಪುರದ ಧರಿವಾಲ್‌ನ ಸಿಂಗ್ಪುರ ಗ್ರಾಮದ ನಿವಾಸಿ ಸ್ಯಾಮ್ಯುಯೆಲ್ ಮಾಸಿಹ್ ಮೃತಪಟ್ಟವರು. ಅವರಿಗೆ ಅನಾರೋಗ್ಯ ಸಮಸ್ಯೆ ಇತ್ತು. ಅದು ದೆವ್ವ ಎಂದು ಅಂದುಕೊಂಡಿದ್ದ ಅವರು ಬಡಿದಿದ್ದರು.

ಮಾಸಿಹ್ ಅವರ ಕುಟುಂಬವು ಬುಧವಾರ ಪ್ರಾರ್ಥನೆ ನಡೆಸಲು ಜಾಕೋಬ್ ಮಾಸಿಹ್ ಎಂದು ಗುರುತಿಸಲಾದ ಸ್ಥಳೀಯ ಪಾದ್ರಿಯನ್ನು ತಮ್ಮ ಮನೆಗೆ ಆಹ್ವಾನಿಸಿದ್ದರು. ಅಲ್ಲಿಗ ಹೋದ ಪಾದ್ರಿಯು ಆತ ದೆವ್ವದಿಂದ ಪೀಡಿತನಾಗಿದ್ದೇನೆ ಎಂದು ಕುಟುಂಬಕ್ಕೆ ಹೇಳಿದ್ದರು. ನಂತರ, ಪಾದ್ರಿ ಮತ್ತು ಇತರ ಎಂಟು ಜನರು ಮಾಸಿಹ್‌ನನ್ನು ಹೊಡೆಯಲು ಪ್ರಾರಂಭಿಸಿದ್ದ. ಅವರ ಹೊಡೆತವನ್ನು ನೋಡಿದ ಕುಟುಂಬಸ್ಥರು ಆತಂಕ ವ್ಯಕ್ತಪಡಿಸಿದ್ದರೂ ಪಾದ್ರಿ ಏನೂ ಆಗುವುದಿಲ್ಲ ಎಂದು ಭರವಸೆ ಕೊಟ್ಟಿದ್ದ. ಆದರೆ, ಸರಿಯಾಗಿ ಪೆಟ್ಟು ತಿಂದ ಸ್ಯಾಮ್ಯುಯೆಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮರುದಿನ ಅವರೆಲ್ಲರೂ ಸೇರಿಕೊಂಡು ಆತನ ಅಂತ್ಯಕ್ರಿಯೆ ನಡೆಸಿತ್ತು.

ಇದನ್ನೂ ಓದಿ: Crime News : ತನ್ನನ್ನು ಬಿಟ್ಟು ಹೆಂಡತಿಗೆ ಹೆಚ್ಚು ಹಣ ಕೊಡುತ್ತಿ ದ್ದ ಪ್ರಿಯತಮನ ಮರ್ಮಾಂಗ ಕತ್ತರಿಸಿದ ಮಹಿಳೆ

ಘಟನೆ ನಡೆದ ಎರಡು ದಿನಗಳ ನಂತರ, ಸ್ಯಾಮ್ಯುಯೆಲ್‌ನ ತಾಯಿ ಮತ್ತು ಅವನ ಹೆಂಡತಿ ಪಾದ್ರಿಯ ವಿರುದ್ಧ ದೂರು ದಾಖಲಿಸಿದ್ದರು. ಸ್ಯಾಮ್ಯುಯೆಲ್ ಶವವನ್ನು ಶನಿವಾರ ಮರಣೋತ್ತರ ಪರೀಕ್ಷೆಗಾಗಿ ಹೊರತೆಗೆಯಲಾಗಿತ್ತು. ಪ್ರಕ್ರಿಯೆಯನ್ನು ಮ್ಯಾಜಿಸ್ಟ್ರೇಟ್ ಇಂದರ್ಜಿತ್ ಕೌರ್ ಅವರ ಮೇಲ್ವಿಚಾರಣೆಯಲ್ಲಿ ನಡೆಸಲಾಗಿದೆ. ಪಾದ್ರಿ ಮತ್ತು ಇತರ ಎಂಟು ಜನರ ವಿರುದ್ಧ ದೂರು ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

Crime News : ತನ್ನನ್ನು ಬಿಟ್ಟು ಹೆಂಡತಿಗೆ ಹೆಚ್ಚು ಹಣ ಕೊಡುತ್ತಿ ದ್ದ ಪ್ರಿಯತಮನ ಮರ್ಮಾಂಗ ಕತ್ತರಿಸಿದ ಮಹಿಳೆ

Crime News : ವಿಜಯ್ ಮತ್ತು ಸೀತಾ ಇಬ್ಬರೂ ಬಿಹಾರದ ನಿವಾಸಿಗಳು. ವಿಜಯ್ ಮದುವೆಯಾಗಿದ್ದ ಹೊರತಾಗಿಯೂ ಸೀತಾ ಜತೆ ಜೀವನ ನಡೆಸುತ್ತಿದ್ದಳು. ಆದಾಗ್ಯೂ ಆಕೆಗೆ ದುಡ್ಡು ಕಳುಹಿಸುತ್ತಿದ್ದಳು. ತನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎಂದು ಸೀತಾಕುಮಾರಿ ಅಸಮಾಧಾನಗೊಂಡಿದ್ದಳು. ಹೀಗಾಗಿ ಆತ ಮಲಗಿದ್ದಾಗ ಹಲ್ಲೆ ಮಾಡಿದಳು. ವಿಜಯ್ ತೊರಗುಡಿಪಾಡು ಗ್ರಾಮದಲ್ಲಿ ಹೈನುಗಾರನಾಗಿ ಕೆಲಸ ಮಾಡುತ್ತಿದ್ದರು.

VISTARANEWS.COM


on

crime news
Koo

ವಿಶಾಖಪಟ್ಟಣಂ : ತನಗಿಂತ ಹೆಂಡತಿಗೆ ಹೆಚ್ಚು ಹಣ ಕೊಡುತ್ತಿದ್ದಾನೆ ಎಂಬ ಕೋಪಕ್ಕೆ ಮಹಿಳೆಯೊಬ್ಬಳು ತನ್ನ ಲಿವ್‌ ಇನ್‌ ಪಾರ್ಟನರ್‌ನ ಮರ್ಮಾಂಗವನ್ನು ತರಕಾರಿ ಕೊಯ್ಯುವ ಚಾಕುವಿನಲ್ಲಿ ಕತ್ತರಿಸಿದ ಪ್ರಸಂಗ (Crime News) ನಡೆದಿದೆ. ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಗಾಯಗೊಂಡವನನ್ನು ಬಿಹಾರ ಮೂಲದ ವಿಜಯ್ ಕುಮಾರ್ ಯಾದವ್ ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ತನ್ನ ಲಿವ್-ಇನ್ ಪಾರ್ಟ್‌‌ನರ್‌‌ ಸೀತಾ ಕುಮಾರಿ ಎಂಬಾಕೆಯೊಂದಿಗೆ ವಾಸಿಸುತ್ತಿದ್ದಳು. ಆದಾಗ್ಯೂ ಯಾದವ್ ತನ್ನ ದುಡಿಮೆಯ ಬಹುಪಾಲು ಹಣವನ್ನು ಪತ್ನಿಗೆ ಕಳುಹಿಸುತ್ತಿದ್ದ.. ಕೋಪಗೊಂಡ ಸೀತಾ ನಿದ್ದೆ ಮಾಡುತತಿದ್ದ ವಿಜಯ್‌ಕುಮಾರ್‌ ಕಣ್ಣು, ಕೈಗಳನ್ನು ಕಟ್ಟಿ, ಮೊಬೈಲ್ ಜನನಾಂಗಗಳಿಗೆ ಕತ್ತರಿ ಹಾಕಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯ್ ಮತ್ತು ಸೀತಾ ಇಬ್ಬರೂ ಬಿಹಾರದ ನಿವಾಸಿಗಳು. ವಿಜಯ್ ಮದುವೆಯಾಗಿದ್ದ ಹೊರತಾಗಿಯೂ ಸೀತಾ ಜತೆ ಜೀವನ ನಡೆಸುತ್ತಿದ್ದಳು. ಆದಾಗ್ಯೂ ಆಕೆಗೆ ದುಡ್ಡು ಕಳುಹಿಸುತ್ತಿದ್ದಳು. ತನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎಂದು ಸೀತಾಕುಮಾರಿ ಅಸಮಾಧಾನಗೊಂಡಿದ್ದಳು. ಹೀಗಾಗಿ ಆತ ಮಲಗಿದ್ದಾಗ ಹಲ್ಲೆ ಮಾಡಿದಳು. ವಿಜಯ್ ತೊರಗುಡಿಪಾಡು ಗ್ರಾಮದಲ್ಲಿ ಹೈನುಗಾರನಾಗಿ ಕೆಲಸ ಮಾಡುತ್ತಿದ್ದರು.

ಸೀತಾ ಕುಮಾರಿ ಮತ್ತು ವಿಜಯ್ ಯಾದವ್ ಕಳೆದ ನಾಲ್ಕು ತಿಂಗಳಿನಿಂದ ಇಲ್ಲಿ ವಾಸಿಸುತ್ತಿದ್ದರು. ಮಹಿಳೆ ವಿಜಯ್ ಅವರ ಖಾಸಗಿ ಭಾಗಗಳ ಮೇಲೆ ಹಲ್ಲೆ ನಡೆಸಿ ಕತ್ತರಿಸಿದ್ದಾಳೆ. ಎಂದು ಪೊಲೀಸ್ ಅಧಿಕಾರಿಯೊಬ್ಬರು ಎನ್ಡಿಟಿವಿಗೆ ತಿಳಿಸಿದ್ದಾರೆ.

ನಾನು ಸಂಪಾದಿಸಿದ ಹಣವನ್ನು ಮನೆಗೆ ಕಳುಹಿಸುತ್ತಿದ್ದೆ. ಈ ಬಗ್ಗೆ ಸೀತಾ ಅದರ ಬಗ್ಗೆ ಅತೃಪ್ತಿ ಹೊಂದಿದ್ದಳು. ಊಟದ ನಂತರ ನಾನು ಮಲಗಲು ಹೋದಾಗ ಸೀತಾ ನನ್ನ ಮೇಲೆ ಹಲ್ಲೆ ಮಾಡಿದಳು ಎಂದು ವಿಜಯ್ ಹೇಳಿದ್ದರು.

ಇದನ್ನೂ ಓದಿ: Delhi News : ಆಟಿಕೆಯೆಂದು ಭಾವಿಸಿ ಅಪ್ಪನ ಪಿಸ್ತೂಲ್‌ ಶಾಲೆಗೆ ತೆಗೆದುಕೊಂಡು ಹೋದ 10 ವರ್ಷದ ಬಾಲಕ

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 26 ವರ್ಷದ ಮಹಿಳೆಯೊಬ್ಬಳು ಮದುವೆಯಾಗಲು ನಿರಾಕರಿಸಿದ್ದಕ್ಕಾಗಿ ಗೆಳೆಯನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಅವನ ಖಾಸಗಿ ಭಾಗಗಳನ್ನು ಗಾಯಗೊಳಿಸಿದ್ದಾಳೆ. ಈ ಘಟನೆ ಆಗಸ್ಟ್ 16 ರಂದು ಭಿವಾಂಡಿಯಲ್ಲಿ ನಡೆದಿತ್ತು ಸಂತ್ರಸ್ತ ವ್ಯಕ್ತಿ ಮನೆಯಿಂದ ಹೊರಗೆ ಓಡಿ ಆಸ್ಪತ್ರೆಗೆ ಹೋಗಿ ನಂತರ ಪೊಲೀಸ್ ದೂರು ದಾಖಲಿಸಿದ್ದಾರೆ. ಆದಾಗ್ಯೂ, ಈ ಪ್ರಕರಣದಲ್ಲಿ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.

Continue Reading

ಪ್ರಮುಖ ಸುದ್ದಿ

Delhi News : ಆಟಿಕೆಯೆಂದು ಭಾವಿಸಿ ಅಪ್ಪನ ಪಿಸ್ತೂಲ್‌ ಶಾಲೆಗೆ ತೆಗೆದುಕೊಂಡು ಹೋದ 10 ವರ್ಷದ ಬಾಲಕ

Delhi News : ಪರಿಶೀಲನೆಯ ನಂತರ ಪಿಸ್ತೂಲ್‌‌ನ ಪರವಾನಗಿ ಮಾನ್ಯವೆಂದು ಕಂಡುಬಂದಿದ್ದರಿಂದ ಗುರುತಿಸಬಹುದಾದ ಅಪರಾಧ ನಡೆದಿಲ್ಲ ಎಂದು ಪೊಲೀಸರು ತೀರ್ಮಾನಿಸಿದ್ದಾರೆ. ವಿದ್ಯಾರ್ಥಿಯ ತಾಯಿ ಪಿಸ್ತೂಲ್ ಅನ್ನು ಪೊಲೀಸ್ ಠಾಣೆಯಲ್ಲಿ ಡೆಪಾಸಿಟ್ ಮಾಡಿದ್ದಾರೆ.

VISTARANEWS.COM


on

Delhi News
Koo

ನವದೆಹಲಿ: 10 ವರ್ಷದ ಶಾಲಾ ಬಾಲಕನೊಬ್ಬ ತನ್ನ ಮನೆಯಲ್ಲಿಟ್ಟಿದ್ದ ಪಿಸ್ತೂಲ್ ಅನ್ನು ಆಟಿಕೆಯೆಂದು ತಪ್ಪಾಗಿ ಭಾವಿಸಿ ಅದನ್ನು ತನ್ನ ಶಾಲೆಗೆ ತಂದ ಘಟನೆ ಆಗಸ್ಟ್ 24 ರಂದು ದೆಹಲಿಯಲ್ಲಿ (Delhi News) ನಡೆದಿದೆ. ದೀಪಕ್‌ ವಿಹಾರ್‌ನ ಗ್ರೀನ್ ವ್ಯಾಲಿ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯಿಂದ ಕರೆ ಬಂದ ನಂತರ ಪೊಲೀಸರು ವಿದ್ಯಾರ್ಥಿಯ ಚೀಲದಿಂದ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ.

ಆಡಳಿತ ಮಂಡಳಿ ತಕ್ಷಣ ಬಾಲಕನ ತಾಯಿಯನ್ನು ಕರೆಸಿದ್ದಾರೆ. ಈ ವೇಳೆ ವಿದ್ಯಾರ್ಥಿಯ ತಾಯಿ, ಪಿಸ್ತೂಲ್‌ ಕೆಲವು ತಿಂಗಳ ಹಿಂದೆ ನಿಧನರಾದ ಬಾಲಕನ ತಂದೆಗೆ ಸೇರಿದ್ದು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂದೂಕಿಗೆ ಪರವಾನಗಿ ಇದೆ ಎಂದು ಅವಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಡೆಪಾಸಿಟ್‌ ಮಾಡಲು ಪಿಸ್ತೂಲ್ ಅನ್ನು ಹೊರಗೆ ಇಟ್ಟಿದ್ದೆ ಎಂದು ತಾಯಿ ಹೇಳಿದ್ದಾರೆ.

ಇದನ್ನೂ ಓದಿ: Shocking Video : ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಪೊಲೀಸ್‌ ವಶಕ್ಕೆ

ಪರಿಶೀಲನೆಯ ನಂತರ ಪಿಸ್ತೂಲ್‌‌ನ ಪರವಾನಗಿ ಮಾನ್ಯವೆಂದು ಕಂಡುಬಂದಿದ್ದರಿಂದ ಗುರುತಿಸಬಹುದಾದ ಅಪರಾಧ ನಡೆದಿಲ್ಲ ಎಂದು ಪೊಲೀಸರು ತೀರ್ಮಾನಿಸಿದ್ದಾರೆ. ವಿದ್ಯಾರ್ಥಿಯ ತಾಯಿ ಪಿಸ್ತೂಲ್ ಅನ್ನು ಪೊಲೀಸ್ ಠಾಣೆಯಲ್ಲಿ ಡೆಪಾಸಿಟ್ ಮಾಡಿದ್ದಾರೆ.

Continue Reading

ವೈರಲ್ ನ್ಯೂಸ್

Shocking Video : ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಪೊಲೀಸ್‌ ವಶಕ್ಕೆ

Shocking Video : ಈ ವಿಡಿಯೋದಲ್ಲಿ ಹೆಣ್ಣು ನಾಯಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಆಘಾತಕಾರಿ ದೃಶ್ಯಗಳಿವೆ. ಸುರೇಂದ್ರ ಸಿಂಗ್‌ ಮುಗ್ಧ ಪ್ರಾಣಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎಂದು ಸುರಭಿ ರಾವತ್ ಎಂಬುವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

VISTARANEWS.COM


on

Shocking Video
Koo

ಗಾಜಿಯಾಬಾದ್: ಕಾಮುಕನೊಬ್ಬ ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಿಂದ ವರದಿಯಾಗಿದೆ. ಹೆಣ್ಣು ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ಭಯಾನಕ ವೀಡಿಯೊ (Shocking Video) ಆನ್ ಲೈನ್ ನಲ್ಲಿ ವೈರಲ್ ಆದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. 21 ಸೆಕೆಂಡುಗಳ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿಗಿದೆ. ಕ್ಲಿಪ್‌‌ನಲ್ಲಿರುವ ಆರೋಪಿಯನ್ನು ಸುರೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಗಾಜಿಯಾಬಾದ್‌ನ ಮೋದಿನಗರದಲ್ಲಿ ನಿವಾಸಿ ನಾಯಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವಿಡಿಯೋದಲ್ಲಿ ಹೆಣ್ಣು ನಾಯಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಆಘಾತಕಾರಿ ದೃಶ್ಯಗಳಿವೆ. ಸುರೇಂದ್ರ ಸಿಂಗ್‌ ಮುಗ್ಧ ಪ್ರಾಣಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎಂದು ಸುರಭಿ ರಾವತ್ ಎಂಬುವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇಂತಹ ದುಷ್ಕೃತ್ಯಗಳನ್ನು ಕೇವಲ ಪ್ರಾಣಿಗಳ ಕ್ರೌರ್ಯ ಎಂದು ವರ್ಗೀಕರಿಸಬಾರದು. ಕಠಿಣ ಕಾನೂನು ಕ್ರಮದ ಅಗತ್ಯವಿದೆಯೇ ಎಂದು ಹೇಳಿದ್ದಾರೆ. ಘೋರ ವರ್ತನೆಗಾಗಿ ಆ ವ್ಯಕ್ತಿಯನ್ನು ಜೈಲಿಗೆ ಹಾಕಬೇಕೆಂದು ಅವರು ಒತ್ತಾಯಿಸಿದ್ದಾರೆ.

ಈ ಪೋಸ್ಟ್ ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಜೊತೆಗೆ ಗ್ರಾಮೀಣ ಡಿಸಿಪಿ, ಗಾಜಿಯಾಬಾದ್ ಪೊಲೀಸ್ ಮತ್ತು ಯುಪಿ ಪೊಲೀಸರು ಸೇರಿದಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳನ್ನು ಟ್ಯಾಗ್ ಮಾಡಲಾಗಿದೆ. ಪ್ರಾಣಿಗಳ ಮೇಲಿನ ಇಂತಹ ದೌರ್ಜನ್ಯಗಳ ವಿರುದ್ಧ ಸಮಾಜವು ಧ್ವನಿ ಎತ್ತದಿದ್ದರೆ ಈ ರಾಕ್ಷಸರು ಮುಂದೆ ದುರ್ಬಲ ಮಕ್ಕಳು ಮತ್ತು ಮಹಿಳೆಯರನ್ನು ಗುರಿಯಾಗಿಸಬಹುದು ಎಂದು ರಾವತ್ ಅಭಿಪ್ರಾಯಪಟ್ಟಿದ್ದಾರೆ. ಕ್ರೌರ್ಯದ ಕೃತ್ಯಗಳನ್ನು ಅವರು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Narendra Modi: ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಸಾಧ್ಯವೇ ಇಲ್ಲದ ಪಾಪ; ಪ್ರಧಾನಿ ಮೋದಿ ಗುಡುಗು

ವೀಡಿಯೊ ಬಗ್ಗೆ ನಾಗರಿಕರಿಂದ ಭಾರಿ ವಿರೋಧ ವ್ಯಕ್ತಗೊಂಡಿದೆ. ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಎಕ್ಸ್ ಬಳಕೆದಾರರು ಈ ಘಟನೆಯ ಬಗ್ಗೆ ತ್ವರಿತವಾಗಿ ಗಮನ ಹರಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ. ಇಂತಹ ಕೆಟ್ಟ ಮನಸ್ಥಿತಿ ಹೊಂದಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ . ಕೋಪಗೊಂಡ ನೆಟ್ಟಿಗರು, ಯುಪಿ ಪೊಲೀಸರನ್ನು ಟ್ಯಾಗ್ ಮಾಡಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ವಿನಂತಿಸಿದ್ದಾರೆ.

ವೀಡಿಯೊ ಪ್ರಸಾರವಾದ ನಂತರ, ಮೋದಿನಗರ ಪೊಲೀಸರು ಕ್ರಮ ಕೈಗೊಂಡು, ಪ್ರಾಣಿ ಕ್ರೌರ್ಯ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Continue Reading
Advertisement
Karkala Physical Abuse
ಕರ್ನಾಟಕ9 mins ago

Karkala Physical Abuse: ಕಾರ್ಕಳದ ಅತ್ಯಾಚಾರ ಸಂತ್ರಸ್ತೆ ರಕ್ತದಲ್ಲಿ ಡ್ರಗ್ಸ್ ಪತ್ತೆ; ಆರೋಪಿಗಳ ರಿಪೋರ್ಟ್‌ ನೆಗೆಟಿವ್!

Paul Valthaty
ಪ್ರಮುಖ ಸುದ್ದಿ14 mins ago

Paul Valthaty : ಅಮೆರಿಕದ ಕ್ರಿಕೆಟ್‌ ತಂಡದ ಕೋಚಿಂಗ್ ಹುದ್ದೆ ವಹಿಸಿಕೊಂಡ ಐಪಿಎಲ್ ಸ್ಟಾರ್‌ ಪಾಲ್ ವಾಲ್ತಾಟಿ

Krishna Janmastami 2024
ಧಾರ್ಮಿಕ45 mins ago

Krishna Janmastami 2024: ಜನ್ಮಾಷ್ಟಮಿಯಂದು ಕೃಷ್ಣನಿಗೆ ಬೆಣ್ಣೆ ಅರ್ಪಿಸುವುದು ಏಕೆ?

KAS Prelims exam
ಕರ್ನಾಟಕ47 mins ago

KAS Prelims exam: ಕೆಎಎಸ್‌ ಪ್ರಿಲಿಮ್ಸ್ ಮುಂದೂಡಲು ರಾಜ್ಯಪಾಲರಿಗೆ ಅಭ್ಯರ್ಥಿಗಳ ನಿಯೋಗ ಮನವಿ

Crime News
ದೇಶ59 mins ago

Murder Case : ಭಕ್ತನ ಮೈಮೇಲೆ ದೆವ್ವ ಸೇರಿದೆ ಎಂದು ಚೆನ್ನಾಗಿ ಬಡಿದು ಕೊಂದ ಚರ್ಚ್‌ ಫಾದರ್‌!

Gruha Lakshmi Scheme
ಕರ್ನಾಟಕ2 hours ago

Gruha Lakshmi Scheme: ಗೃಹಲಕ್ಷ್ಮೀ ದುಡ್ಡಿನಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ರೇಷ್ಮೆ ಸೀರೆ ಕಳುಹಿಸಿದ ಲಕ್ಷ್ಮಿ ಹೆಬ್ಬಾಳ್ಕರ್

crime news
ಪ್ರಮುಖ ಸುದ್ದಿ2 hours ago

Crime News : ತನ್ನನ್ನು ಬಿಟ್ಟು ಹೆಂಡತಿಗೆ ಹೆಚ್ಚು ಹಣ ಕೊಡುತ್ತಿ ದ್ದ ಪ್ರಿಯತಮನ ಮರ್ಮಾಂಗ ಕತ್ತರಿಸಿದ ಮಹಿಳೆ

UGCET 2024
ಬೆಂಗಳೂರು2 hours ago

UGCET 2024 : ವೈದ್ಯಕೀಯ, ಇಂಜಿನಿಯರಿಂಗ್ ಕೋರ್ಸ್‌ಗಳ ಅಣುಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ

Actor Darshan
ಕರ್ನಾಟಕ3 hours ago

Actor Darshan: ದರ್ಶನ್‌ಗೆ ರಾಜಾತಿಥ್ಯ ನೋಡಿ ರೇಣುಕಾಸ್ವಾಮಿ ತಂದೆ ಕಣ್ಣೀರು; ಜೈಲು ರೆಸಾರ್ಟ್‌ ಆಗಬಾರ್ದು ಎಂದು ಕಿಡಿ

Karnataka Rain House collapses due to heavy rains in Shivamogga
ಮಳೆ3 hours ago

Karnataka Rain : ಶಿವಮೊಗ್ಗದಲ್ಲಿ ಧಾರಾಕಾರ ಮಳೆಗೆ ಕುಸಿದು ಬಿದ್ದ ಮನೆ; ನಾಳೆಗೂ ಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ1 day ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌