KAS Prelims exam: ಕೆಎಎಸ್‌ ಪ್ರಿಲಿಮ್ಸ್ ಮುಂದೂಡಲು ರಾಜ್ಯಪಾಲರಿಗೆ ಅಭ್ಯರ್ಥಿಗಳ ನಿಯೋಗ ಮನವಿ - Vistara News

ಕರ್ನಾಟಕ

KAS Prelims exam: ಕೆಎಎಸ್‌ ಪ್ರಿಲಿಮ್ಸ್ ಮುಂದೂಡಲು ರಾಜ್ಯಪಾಲರಿಗೆ ಅಭ್ಯರ್ಥಿಗಳ ನಿಯೋಗ ಮನವಿ

KAS Prelims exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆಗೆ ಇನ್ನು ಎರಡು ದಿನವಷ್ಟೆ ಬಾಕಿ ಇದೆ. ಹೀಗಾಗಿ ಇನ್ನು ನಾಲ್ಕು ದಿನಗಳಾದರೂ ಪರೀಕ್ಷೆ ಮುಂದೂಡಿಕೆ ಮಾಡಿ, ಅಭ್ಯರ್ಥಿಗಳಿಗೆ ಅನುಕೂಲ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ.

VISTARANEWS.COM


on

KAS Prelims exam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಗಸ್ಟ್‌ 27ರಂದು ನಿಗದಿಯಾಗಿರುವ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ಕ್ರಮ ಕೈಗೊಳ್ಳಬೇಕು ಎಂದು ಅಭ್ಯರ್ಥಿಗಳ ನಿಯೋಗ, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಭಾನುವಾರ ಸಂಜೆ ಮನವಿ ಪತ್ರ ಸಲ್ಲಿಸಿದೆ. ಇನ್ನು ಕೆಎಎಸ್‌ ಆಕಾಂಕ್ಷಿಗಳಿಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಶಾಸಕ ಧೀರಜ್‌ ಮುನಿರಾಜು ಮತ್ತಿತರ ನಾಯಕರು ಬೆಂಬಲ ನೀಡಿದ್ದು, ಕೆಪಿಎಸ್‌ಸಿ ತರಾತುರಿಯಲ್ಲಿ ಪರೀಕ್ಷೆ ನಡೆಸುತ್ತಿರುವುದರಿಂದ ಅಭ್ಯರ್ಥಿಗಳಿಗೆ ತೊಂದರೆಯಾಗಿದೆ. ಹೀಗಾಗಿ ಕೆಎಎಸ್‌ ಪ್ರಿಲಿಮ್ಸ್ ಪರೀಕ್ಷೆ (KAS Prelims exam) ಮುಂದೂಡಲು ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ ಅವರು, ಕಳೆದ ಹತ್ತು ದಿನಗಳಿಂದ ಕೆಪಿಎಸ್‌ಸಿ ಪರೀಕ್ಷೆ ಮುಂದೂಡುವಂತೆ ಸರ್ಕಾರ ಹಾಗೂ ಕೆಪಿಎಸ್‌ಸಿಗೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ವಾರದ ದಿನದಲ್ಲಿ ಪರೀಕ್ಷೆ ನಡೆಸುತ್ತಿದ್ದು, ಇದರಿಂದ ಅನೇಕ ಅಭ್ಯರ್ಥಿಗಳಿಗೆ ತೊಂದರೆಯಾಗಿದೆ. ಪರೀಕ್ಷಾ ಕೇಂದ್ರಗಳನ್ನೂ ಕೂಡ ದೂರದ ಊರುಗಳಲ್ಲಿ ನಿಗದಿ ಮಾಡಲಾಗಿದೆ. ಸಾಕಷ್ಟು ಅಭ್ಯರ್ಥಿಗಳು ಬೇರೆ ಬೇರೆ ಕಡೆ ಕೆಲಸ‌ ಮಾಡುತ್ತಿರುತ್ತಾರೆ. ವಿಶೇಷ ಚೇತನ ಅಭ್ಯರ್ಥಿಗಳು ಸ್ಕ್ರೈಬ್‌ಗಳ ಮೇಲೆ ಅವಲಂಬಿತರಾಗಿದ್ದು, ಸ್ಕ್ರೈಬ್‌ಗಳಿಗೂ ರಜೆ ಹಾಕಿ ಬರಲು ಸಮಸ್ಯೆ ಆಗಲಿದೆ. ಹೀಗಾಗಿ ಪರೀಕ್ಷೆ ಮುಂದೆ ಹಾಕಲು ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಸುಳ್ಳು ಕೇಸ್ ಹಾಕಿ, ಬಂಧಿಸಿದ್ದಾರೆ. ಈ ಬಗ್ಗೆ ರಾಜ್ಯಪಾಲರ ಗಮನಕ್ಕೆ ತಂದಿದ್ದು, ಇದೊಂದು ಗಂಭೀರ ವಿಚಾರ ಅಂತ ಅವರು ಹೇಳಿದ್ದಾರೆ. ಕೆಪಿಎಸ್‌ಸಿ ಚೇರ್ಮನ್ ಜೊತೆ ರಾಜ್ಯಪಾಲರು ಮಾತನಾಡಿದ್ದು, ಅಭ್ಯರ್ಥಿಗಳ ಜೊತೆ ಮಾತನಾಡುವಂತೆ ಸೂಚಿಸಿದ್ದಾರೆ. ಕೆಪಿಎಸ್‌ಸಿ ಮೂರು ವರ್ಷಕ್ಕೊಮ್ಮೆ ಪರೀಕ್ಷೆ ನಡೆಸುತ್ತದೆ, ಆದರೆ ಪರೀಕ್ಷೆ ಕ್ಯಾಲೆಂಡರ್ ನೋಡದೆ ಡೇಟ್ ನಿಗದಿ ಹಾಕಿದ್ದಾರೆ. ಪರೀಕ್ಷೆಗೆ ಇನ್ನು ಎರಡು ದಿನವಷ್ಟೆ ಬಾಕಿ ಇದೆ. ಹೀಗಾಗಿ ಇನ್ನು ನಾಲ್ಕು ದಿನಗಳಾದರೂ ಪರೀಕ್ಷೆ ಮುಂದೂಡಿಕೆ ಮಾಡಿ, ಅಭ್ಯರ್ಥಿಗಳಿಗೆ ಅನುಕೂಲ ಮಾಡಬೇಕು ಎಂದು ಸರ್ಕಾರವನ್ನು ಕೋರಿದ್ದಾರೆ.

ಇದನ್ನೂ ಓದಿ | KAS Prelims exam: ಕೆಎಎಸ್‌ ಪರೀಕ್ಷೆ ಮುಂದೂಡಲು ಕೆಲವರಿಂದ ಲಾಬಿ; ಆದರೆ ಮುಂದೂಡುವುದಿಲ್ಲ ಎಂದ ಸರ್ಕಾರ

ವೈದ್ಯಕೀಯ, ಇಂಜಿನಿಯರಿಂಗ್ ಕೋರ್ಸ್‌ಗಳ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ (UGCET 2024) ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಎರಡನೇ ಅಣಕು ಸೀಟು‌ ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ಸಂಜೆ ಪ್ರಕಟಿಸಿದೆ.

ಕೆಇಎ ವೆಬ್ ಸೈಟ್‌ನಲ್ಲಿ ಅಣಕು ಫಲಿತಾಂಶ ಲಭ್ಯ‌ ಇದ್ದು, ಅದನ್ನು ನೋಡಿದ ನಂತರ ಆಗಸ್ಟ್ 27ರ ಬೆಳಗ್ಗೆ 11ರವರೆಗೆ ಅಭ್ಯರ್ಥಿಗಳು ತಮ್ಮ‌ ಇಚ್ಛೆಯನುಸಾರ ಕಾಲೇಜು/ಕೋರ್ಸ್ ಗಳನ್ನು ಅಧಿಕೃತ ಮೊದಲ ಸುತ್ತಿನ ಆಯ್ಕೆಗೆ ಬದಲಿಸಿಕೊಳ್ಳಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಿಗದಿಯಂತೆ ಮೊ‌ದಲ ಸುತ್ತಿನ‌ ನೈಜ ಸೀಟು ಹಂಚಿಕೆ ಫಲಿತಾಂಶವನ್ನು ಸೆ.1ರಂದು ಪ್ರಕಟಿಸಲಾಗುವುದು ಎಂದು ಅವರು ವಿವರಿಸಿದ್ದಾರೆ. ಆಗಸ್ಟ್ 22ರ ಸಂಜೆ 5ಗಂಟೆವರೆಗೆ ಆದ್ಯತಾ ಕ್ರಮದಲ್ಲಿ ದಾಖಲಿಸಿರುವ ಇಚ್ಛೆ/ಆಯ್ಕೆಗಳನ್ನು ಪರಿಗಣಿಸಿ, ಮೆರಿಟ್ ಮತ್ತು ರೋಸ್ಟರ್ ಪದ್ಧತಿ ಅನುಸಾರ ಅಣಕು ಸೀಟು ಹಂಚಿಕೆಯನ್ನು ಮಾಡಲಾಗಿದೆ. ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್‌ಸಿ (ನರ್ಸಿಂಗ್), ಬಿ-ಫಾರ್ಮ, ಫಾರ್ಮ್-ಡಿ ಇತ್ಯಾದಿ ಕೋರ್ಸುಗಳ ಸೀಟು ಹಂಚಿಕೆಯನ್ನು ಮಾಡಲಾಗಿದೆ.

ಇದನ್ನೂ ಓದಿ: UGCET 2024: ಸೆಪ್ಟೆಂಬರ್ 1ಕ್ಕೆ ಸಿಇಟಿ/ನೀಟ್ ಸೀಟು ಹಂಚಿಕೆ ರಿಸ್ಟಲ್‌ ಅನೌನ್ಸ್‌; ಆಪ್ಶನ್ ಎಂಟ್ರಿಗೆ ಇವತ್ತೆ ಲಾಸ್ಟ್

ಇಲ್ಲಿಯವರೆಗೆ ಇಚ್ಚೆ / ಆಯ್ಕೆಗಳನ್ನು ದಾಖಲಿಸದೇ ಇರುವ ಅರ್ಹ ಅಭ್ಯರ್ಥಿಗಳು ಇಷ್ಟವಿದ್ದಲ್ಲಿ ಆ.27ರ ಬೆಳಗ್ಗೆ 11ರೊಳಗೆ ಮೊದಲನೆ ಸುತ್ತಿನ ಸೀಟು ಹಂಚಿಕೆಗೆ ಕಾಲೇಜು ಮತ್ತು ಕೋರ್ಸುಗಳ ಆಯ್ಕೆಗಾಗಿ ಆದ್ಯತಾ ಕ್ರಮದಲ್ಲಿ ದಾಖಲಿಸಬಹುದು ಎಂದರು.

ಅಭ್ಯರ್ಥಿಗಳು ಕೇಳಬಹುದಾದ ಪುನರಾವರ್ತಿತ ಪ್ರಶ್ನೆಗಳನ್ನು ಕ್ರೋಡೀಕರಿಸಿ ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಉತ್ತರಗಳನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಅದನ್ನು ಓದಿಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ ಭೇಟಿ ನೀಡಬಹುದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Krishnadevaraya Palika Bazaar: ಬೆಂಗಳೂರಲ್ಲಿ ದಕ್ಷಿಣ ಭಾರತದಲ್ಲೇ ಪ್ರಪ್ರಥಮ ಹವಾನಿಯಂತ್ರಿತ ಪಾಲಿಕೆ ಬಜಾರ್ ಉದ್ಘಾಟಿಸಿದ ಸಿಎಂ

Krishnadevaraya Palika Bazaar: ಬೆಂಗಳೂರಿನ ವಿಜಯನಗರ ಕ್ಷೇತ್ರ ವ್ಯಾಪ್ತಿಯ ಮೆಟ್ರೊ ನಿಲ್ದಾಣದ ಬಳಿ ʼಶ್ರೀ ಕೃಷ್ಣದೇವರಾಯ ಪಾಲಿಕೆ ಬಜಾರ್ʼ ಅನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ಇದೇ ವೇಳೆ ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

VISTARANEWS.COM


on

Krishnadevaraya Palika Bazar
Koo

ಬೆಂಗಳೂರು: ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಹವಾನಿಯಂತ್ರಿತ ʼಶ್ರೀ ಕೃಷ್ಣದೇವರಾಯ ಪಾಲಿಕೆ ಬಜಾರ್ʼ (Krishnadevaraya Palika Bazaar) ಅನ್ನು ಬೆಂಗಳೂರಿನ ವಿಜಯನಗರ ಕ್ಷೇತ್ರ ವ್ಯಾಪ್ತಿಯ ಮೆಟ್ರೊ ನಿಲ್ದಾಣದ ಬಳಿ ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ಉದ್ಘಾಟಿಸಿದರು. ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸಲಾಗಿದ್ದು, ಇಲ್ಲಿ 79 ಮಳಿಗೆಗಳಿವೆ. ದಕ್ಷಿಣ ಭಾರತದಲ್ಲಿಯೇ ಇಂತಹ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿತವಾಗಿರುವುದು ಇದೇ ಮೊದಲು.

ಪಾಲಿಕೆ ಬಜಾರ್ ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚನೆ ನೀಡಿದರು.

ಪಾಲಿಕೆ ಬಜಾರ್ ಸರ್ಕಾರದ ಜನಪರ ಚಿಂತನೆಯ ಯೋಜನೆ

ಪಾಲಿಕೆ ಬಜಾರ್‌ಗೆ ಕೃಷ್ಣದೇವರಾಯ ಪಾಲಿಕೆ ಬಜಾರ್ ಎಂದು ನಾಮಕರಣ ಮಾಡಿರುವುದು ಶ್ಲಾಘನೀಯ. ಪಾಲಿಕೆ ಬಜಾರ್ ಸರ್ಕಾರದ ಜನಪರ ಚಿಂತನೆಯ ಯೋಜನೆ. ಇಂದು ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ 13 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇಂತಹ ಬಜಾರ್‌ಗಳು ಬೆಂಗಳೂರಿನ ಅನೇಕ ಸ್ಥಳಗಳಲ್ಲಿ ವಿಶೇಷವಾಗಿ ಗಾಂಧಿಬಜಾರ್‌ನಂತಹ ಜನನಿಬಿಡ ಪ್ರದೇಶಗಳಲ್ಲಿ ನಿರ್ಮಿಸುವ ಅಗತ್ಯವಿದೆ ಎಂದರು.

ವಿಜಯನಗರ ನನಗೆ ಚಿರಪರಿಚಿತ

ತಾನು ಈ ಹಿಂದೆಯೂ ವಿಜಯನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ನೆನಪನ್ನು ಮೆಲಕು ಹಾಕಿದ ಮುಖ್ಯಮಂತ್ರಿಗಳು , ಈ ಪ್ರದೇಶ ನನಗೆ ಬಹಳ ಚಿರಪರಿಚಿತವಾಗಿದೆ ಎಂದರು. ವ್ಯಾಪಾರಿಗಳ ಪರಿಸ್ಥಿತಿಯನ್ನು ಆಗನಿಂದಲೇ ಗಮನಿಸಿದ್ದ ನನಗೆ, ಶಾಸಕ ಕೃಷ್ಣಪ್ಪನವರ ಬೇಡಿಕೆ ಸಮಂಜಸವಾಗಿದೆ ಎನ್ನಿಸಿತ್ತು ಎಂದು ತಿಳಿಸಿದರು.

ಎಂ.ಕೃಷ್ಣಪ್ಪ ಅವರ ಕನಸಿನ ಯೋಜನೆ

ವಿಜಯನಗರ ವಿಧಾನಸಭಾಕ್ಷೇತ್ರದಲ್ಲಿ ಕೃಷ್ಣದೇವರಾಯ ಪಾಲಿಕೆ ಬಜಾರ್ ಯೋಜನೆ ಇಲ್ಲಿನ ಶಾಸಕರಾದ ಎಂ.ಕೃಷ್ಣಪ್ಪ ಅವರ ಕನಸು. ಇಲ್ಲಿನ ಬೀದಿವ್ಯಾಪಾರಿಗಳು ಬಿಸಿಲು ಗಾಳಿ ಮಳೆಯಲ್ಲಿ ವ್ಯಾಪಾರ ಮಾಡಬೇಕಾಗಿದ್ದು, ಅವರಿಗೆ ವ್ಯಾಪಾರ ಮಾಡಲು ಸ್ಥಳಾವಕಾಶ ಮಾಡಿಕೊಡಲು ಬೇಡಿಕೆಯಿರಿಸಿದ್ದರು. ನಾನು 2017 ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ , ಪಾಲಿಕೆ ಬಜಾರ್‌ಗಳ ನಿರ್ಮಾಣಕ್ಕೆ 5 ಕೋಟಿ ರೂ.ಗಳ ಅನುದಾನಕ್ಕೆ ಅನುಮೋದನೆ ನೀಡಿದ್ದು, ಇಂದು ನಾನೇ ಈ ಬಜಾರ್ ನ್ನು ಉದ್ಘಾಟಿಸುತ್ತಿರುವುದು ಸಂತೋಷ ತಂದಿದೆ ಎಂದರು.

ಬೆಂಗಳೂರು ನಗರ ಬಹಳ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಬಸ್ ನಿಲ್ದಾಣ ಹಾಗೂ ಮೆಟ್ರೋ ರೈಲು ನಿಲ್ದಾಣವಿರುವ ಸೂಕ್ತ ಸ್ಥಳದಲ್ಲಿ ಪಾಲಿಕೆ ಬಜಾರ್ ನಿರ್ಮಾಣವಾಗಿದೆ. ಇದರಿಂದ ಬಹಳ ಜನರಿಗೆ ಅನುಕೂಲವಾಗಲಿದೆ. ಒಂದೇ ಕಡೆ ಎಲ್ಲಾ ವ್ಯಾಪಾರ ಮಾಡುವವರಿಗೆ ವ್ಯವಸ್ಥೆ ಕಲ್ಪಿಸಿದ್ದು, ನಾಗರಿಕರಿಗೆ ಅನುಕೂಲವಾಗಲಿದೆ ಎಂದರು.

ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ

ನಮ್ಮ ಸರ್ಕಾರ ಜನರಿಗೆ ಮಾತು ನೀಡಿದ್ದಂತೆ ಎಲ್ಲಾ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಧಿಕಾರಕ್ಕೆ ಬಂದು ಒಂದು ವರ್ಷ ಮೂರು ತಿಂಗಳಲ್ಲಿ ನಮ್ಮ ಐದು ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿದೆ. ಎಲ್ಲಾ ಧರ್ಮ, ಜಾತಿಯ ಬಡವರಿಗೆ ಈ ಕಾರ್ಯಕ್ರಮಗಳನ್ನು ತಲುಪಿಸುವ ಪ್ರಯತ್ನ ಮಾಡುತ್ತಿದ್ದೇವೆ. ವಿರೋಧ ಪಕ್ಷದವರು ಈ ಕಾರ್ಯಕ್ರಮಗಳ ಜಾರಿಗೆ ಮುನ್ನ ಹಾಗೂ ನಂತರದಲ್ಲಿ ಬಹಳ ಟೀಕೆ ಮಾಡುತ್ತಿದ್ದರು. ಲೋಕಸಭಾ ಚುನಾವಣೆ ನಂತರ ಯೋಜನೆಗಳನ್ನು ನಿಲ್ಲಿಸುವುದಾಗಿಯೂ ಹೇಳಿದ್ದರು. ಯಾವ ಕಾರಣಕ್ಕೂ ಕೂಡ ಐದು ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದರು. ವಿರೋಧ ಪಕ್ಷದವರು ಈ ಕಾರ್ಯಕ್ರಮಗಳ ವಿರುದ್ಧವಾಗಿದ್ದಾರೆ. ಶಕ್ತಿ, ಅನ್ನ ಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ಮಹಿಳೆಯರಿಗೆ ಸಾಮಾಜಿಕ, ಆರ್ಥಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳಾಗಿವೆ. ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ, ಆರ್ಥಿಕ ಸ್ವಾತಂತ್ಯ್ರ ದೊರೆತಾಗ ಮಾತ್ರ ದೇಶದಲ್ಲಿ ಬಡತನ ತೊಲಗಿಸಲು , ಸಾಮಾಜಿಕ ಸಮಾನತೆ ತರಲು ಸಾಧ್ಯವಾಗುತ್ತದೆ ಎಂದರು.

ಇದನ್ನೂ ಓದಿ | Gruha Lakshmi Scheme: ಗೃಹಲಕ್ಷ್ಮೀ ದುಡ್ಡಿನಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ರೇಷ್ಮೆ ಸೀರೆ ಕಳುಹಿಸಿದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಪ್ರಯತ್ನ

ಅಭಿವೃದ್ಧಿ ಯೋಜನೆಗಳಿಗೆ 1 ಲಕ್ಷದ 60 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಂಜೂರು ಮಾಡಿದ್ದೇವೆ. ಬೆಂಗಳೂರು ನಗರವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಹಾಗೂ ಬ್ರಾಂಡ್ ಬೆಂಗಳೂರು ಮಾಡುವುದು ನಮ್ಮ ಉದ್ದೇಶ. ಆ ದಿಕ್ಕಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.

Continue Reading

ಕರ್ನಾಟಕ

Karkala Physical Abuse: ಕಾರ್ಕಳದ ಅತ್ಯಾಚಾರ ಸಂತ್ರಸ್ತೆ ರಕ್ತದಲ್ಲಿ ಡ್ರಗ್ಸ್ ಪತ್ತೆ; ಆರೋಪಿಗಳ ರಿಪೋರ್ಟ್‌ ನೆಗೆಟಿವ್!

‌ಕಾರ್ಕಳ ಹಿಂದು ಯುವತಿ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ರಕ್ತದಲ್ಲಿ ಮಾದಕ ವಸ್ತು ಇರುವ ಬಗ್ಗೆ ಪಾಸಿಟಿವ್ ವರದಿ ಬಂದಿದೆ. ಆದರೆ, ಇಬ್ಬರು ಆರೋಪಿಗಳ ವರದಿ ನೆಗೆಟಿವ್‌ ಬಂದಿದೆ ಎಂದು ಉಡುಪಿ ಎಸ್‌.ಪಿ. ಡಾ. ಅರುಣ್ ಕೆ. ತಿಳಿಸಿದ್ದಾರೆ.

VISTARANEWS.COM


on

Karkala Physical Abuse
ಕಾರ್ಕಳ ಹಿಂದು ಯುವತಿ ಅತ್ಯಾಚಾರ ಪ್ರಕರಣದ 1ನೇ ಆರೋಪಿ ಅಲ್ತಾಫ್.
Koo

ಉಡುಪಿ‌: ಕಾರ್ಕಳ ಹಿಂದು ಯುವತಿ ಅತ್ಯಾಚಾರ ಪ್ರಕರಣದ (Karkala Physical Abuse) ಸಂತ್ರಸ್ತ ಯುವತಿಯ ಬ್ಲಡ್ ಟೆಸ್ಟ್ ರಿಪೋರ್ಟ್ ಮಾಹಿತಿ ಲಭ್ಯವಾಗಿದ್ದು, ಸಂತ್ರಸ್ತೆಯ ರಕ್ತದಲ್ಲಿ ಮಾದಕ ವಸ್ತು ಇರುವ ಬಗ್ಗೆ ಪಾಸಿಟಿವ್ ವರದಿ ಬಂದಿದೆ. ಆದರೆ, ಇಬ್ಬರು ಆರೋಪಿಗಳ ವರದಿ ನೆಗೆಟಿವ್‌ ಬಂದಿದೆ ಎಂದು ಉಡುಪಿ ಎಸ್‌.ಪಿ. ಡಾ. ಅರುಣ್ ಕೆ. ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಎಸ್‌.ಪಿ. ಡಾ. ಅರುಣ್ ಕೆ. ಅವರು, ಪ್ರಕರಣದ 1ನೇ ಆರೋಪಿ ಅಲ್ತಾಫ್ ಹಾಗೂ ಬಿಯರ್ ಬಾಟಲ್ ತಂದುಕೊಟ್ಟ 2ನೇ ಆರೋಪಿ ರಿಚರ್ಡ್ ಬ್ಲಡ್ ಟೆಸ್ಟ್‌ ರಿಪೋರ್ಟ್ ನೆಗೆಟಿವ್ ಬಂದಿದೆ. ಆರೋಪಿ ಅಲ್ತಾಫ್ ವಿಚಾರಣೆ ವೇಳೆ ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿದ್ದ. ಇದನ್ನೇ ಸಂತ್ರಸ್ತ ಯುವತಿ ತೆಗೆದುಕೊಂಡಿದ್ದಾಗಿ ಹೇಳಿಕೆ ನೀಡಿದ್ದಾನೆ. ಸದ್ಯ ಆ ಪೌಡರ್ ಅನ್ನು ನಾವು ಎಫ್ಎಸ್ಎಲ್‌ಗೆ ಕಳಿಸಲಾಗಿದ್ದು, ಯಾವ ಡ್ರಗ್ಸ್ ಎಂದು ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಕರಣದ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಪ್ರಕರಣ ದಾಖಲಾಗಿದೆ. ಈ ಡ್ರಗ್‌ ಅನ್ನು ಎಲ್ಲಿಂದ ಪಡೆದಿದ್ದಾರೆ ಮತ್ತು ಎಲ್ಲಿಂದ ಬಂದಿದೆ ಎನ್ನುವ ಕುರಿತು ಅಪರಾಧ ಕ್ರಮಾಂಕ : 146/24 ಕಲಂ. 8(c), 22(b) NDPS Act, Sec. 3(5) BNS ನಲ್ಲಿ ಪ್ರಕರಣ ದಾಖಲಾಗಿದೆ. ಡ್ರಗ್ ಎಲ್ಲಿಂದ ಬಂದಿದೆ ಎಂಬುದರ ಬಗ್ಗೆ ಪೂರ್ಣ ತನಿಖೆ ಮಾಡಲಾಗುವುದು. ಸಂತ್ರಸ್ತೆಯು ಜಡ್ಜ್ ಮುಂದೆ ಹೇಳಿಕೆ ಕೊಡಲಿದ್ದು, ವೈದ್ಯಕೀಯ ಪರೀಕ್ಷೆ ಆದ ನಂತರ ಈ ಪ್ರಕ್ರಿಯೆ ನಡೆಯಲಿದೆ. ಆದಷ್ಟು ಬೇಗನೆ ಅತ್ಯಾಚಾರ ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸಲಾಗುವುದು ಎಂದು ಉಡುಪಿ ಎಸ್ಪಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಇದನ್ನೂ ಓದಿ | Murder Case : ಭಕ್ತನ ಮೈಮೇಲೆ ದೆವ್ವ ಸೇರಿದೆ ಎಂದು ಚೆನ್ನಾಗಿ ಬಡಿದು ಕೊಂದ ಚರ್ಚ್‌ ಫಾದರ್‌!

ಏನಿದು ಪ್ರಕರಣ?

ಇನ್‌ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿದ ಹಿಂದು ಯುವತಿಯನ್ನು (Hindu girl) ಕರೆದೊಯ್ದ ಮುಸ್ಲಿಂ ಯುವಕ, ಆಕೆಗೆ ಬಿಯರ್‌ನಲ್ಲಿ ಮತ್ತು ಬರಿಸುವ ಔಷಧ ಸೇರಿಸಿ ಕುಡಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದ ಘಟನೆ ಆ.23ರಂದು ಕಾರ್ಕಳ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಇದಕ್ಕೆ ಆರೋಪಿಯ ಇಬ್ಬರು ಸ್ನೇಹಿತರು ಸಹಕರಿಸಿದ್ದರಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಈ ಪ್ರಕರಣವು ಕಾರ್ಕಳ ನಗರದಲ್ಲಿ ಕೋಮು ಉದ್ವಿಗ್ನತೆಗೆ ಕಾರಣವಾಗಿದೆ.

ಕಾರ್ಕಳ ಠಾಣೆ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಎ1 ಅಲ್ತಾಫ್ ಹಾಗೂ ಈತನಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರು ಆರೋಪಿಗಳ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿತ್ತು. ಸದ್ಯ ಸಂತ್ರಸ್ತೆಗೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂತ್ರಸ್ತೆಗೆ ಆರೋಪಿ ಜೊತೆಗೆ ಮೂರು ತಿಂಗಳಿಂದ ಪರಿಚಯವಿತ್ತು. ಇನ್ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು ಎನ್ನಲಾಗದೆ. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಅಲ್ಲಿಂದ ಅಪಹರಿಸಿದ್ದ. ಬಿಯರ್‌ನಲ್ಲಿ ಏನನ್ನೊ ಬೆರೆಸಿ ಕುಡಿಸಿ ಮತ್ತು ಬರಿಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಳು.

ಇದನ್ನೂ ಓದಿ | Crime News : ತನ್ನನ್ನು ಬಿಟ್ಟು ಹೆಂಡತಿಗೆ ಹೆಚ್ಚು ಹಣ ಕೊಡುತ್ತಿ ದ್ದ ಪ್ರಿಯತಮನ ಮರ್ಮಾಂಗ ಕತ್ತರಿಸಿದ ಮಹಿಳೆ

ಯುವತಿ ಜೇನು ಕೃಷಿ ಇಲಾಖೆಯಲ್ಲಿ ಕೆಲಸಕ್ಕಿದ್ದಳು. ಇನ್‌ಸ್ಟಾಗ್ರಾಂನಲ್ಲಿ ಇವರಿಗೆ ಸ್ನೇಹ ಬೆಳೆದಿತ್ತು ಎಂದು ತಿಳಿದುಬಂದಿದ್ದು, ಮಾದಕ ಪದಾರ್ಥ ನೀಡಿ ಹಿಂದು ಯುವತಿಯ ರೇಪ್ ಎಸಗಿದ ಪ್ರಕರಣದಲ್ಲಿ ಕಾರ್ಕಳ ನಗರ ಠಾಣೆಯಲ್ಲಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿರ್ಜನ ಪ್ರದೇಶದಲ್ಲಿ ರೇಪ್ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

Gruha Lakshmi Scheme: ಗೃಹಲಕ್ಷ್ಮೀ ದುಡ್ಡಿನಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ರೇಷ್ಮೆ ಸೀರೆ ಕಳುಹಿಸಿದ ಲಕ್ಷ್ಮಿ ಹೆಬ್ಬಾಳ್ಕರ್

Gruha Lakshmi Scheme: ಬೆಳಗಾವಿ‌ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ ಎಂಬ ಹಿರಿಯ ಜೀವ ಗೃಹಲಕ್ಷ್ಮಿ ಹಣ ಕೂಡಿಟ್ಟು ಸಿದ್ದರಾಮಯ್ಯನವರ ಶ್ರೇಯಸ್ಸಿಗಾಗಿ ಊರಿಗೆಲ್ಲ ಹೋಳಿಗೆ ಊಟ ಹಾಕಿಸಿ, ಐದು ಜನ ಮುತ್ತೈದೆಯರಿಗೆ ಉಡಿ ತುಂಬಿರುವುದು ಗೃಹಲಕ್ಷ್ಮಿ ಯೋಜನೆಯ ಸಾರ್ಥಕ ಕ್ಷಣಕ್ಕೆ ಮತ್ತೊಂದು ಉದಾಹರಣೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Gruha Lakshmi Scheme
Koo

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ದುಡ್ಡಿನಿಂದ ಊರಿಗೆಲ್ಲ ಹೋಳಿಗೆ ಊಟ ಹಾಕಿಸಿದ ಅಜ್ಜಿ ಅಕ್ಕಾತಾಯಿ ಲಂಗೋಟಿ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಅಜ್ಜಿಗೆ ರೇಷ್ಮೆ ಸೀರೆ ಕಳುಹಿಸಿದ್ದಾರೆ. ಸಚಿವೆ ನೀಡಿದ್ದ ರೇಷ್ಮೆ ಸೀರೆಯನ್ನು ಅಜ್ಜಿಗೆ ನೀಡಿ ಅಧಿಕಾರಿಗಳು ಸನ್ಮಾನಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು, ಬೆಳಗಾವಿ‌ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ ಎಂಬ ಹಿರಿಯ ಜೀವ ಗೃಹಲಕ್ಷ್ಮಿ ಹಣ ಕೂಡಿಟ್ಟು ಸಿದ್ದರಾಮಯ್ಯನವರ ಶ್ರೇಯಸ್ಸಿಗಾಗಿ ಊರಿಗೆಲ್ಲ ಹೋಳಿಗೆ ಊಟ ಹಾಕಿಸಿ, ಐದು ಜನ ಮುತ್ತೈದೆಯರಿಗೆ ಉಡಿ ತುಂಬಿರುವುದು ಗೃಹಲಕ್ಷ್ಮಿ ಯೋಜನೆಯ ಸಾರ್ಥಕ ಕ್ಷಣಕ್ಕೆ ಮತ್ತೊಂದು ಉದಾಹರಣೆ. ಇಂದು ಈ ತಾಯಿಯ ಜೊತೆ ಮಾತನಾಡಿ, ಅವರನ್ನು ಅಭಿನಂದಿಸಿ, ಗೌರವಿಸಿದ್ದೇನೆ ಎಂದು ತಿಳಿಸಿದ್ದಾರೆ.

ವೃದ್ಧೆಗೆ ಸಚಿವೆ ಹೆಬ್ಬಾಳ್ಕರ್ ಅಭಿನಂದನೆ

ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು ನೀಡುತ್ತಿರುವ ‘ಗೃಹಲಕ್ಷ್ಮೀ ಯೋಜನೆ ’ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿರುವ ಅಜ್ಜಿಯ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ‘ಗೃಹಲಕ್ಷ್ಮೀ’ ಜಾರಿಗೆ ತಂದಿದ್ದು ಸಾರ್ಥಕವಾಗುತ್ತಿದೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೋಟಿ ಎಂಬ ಅಜ್ಜಿ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಇಡೀ ಊರಿಗೆ ಹಬ್ಬದ ಊಟ ಹಾಕಿಸಿದ್ದಾರೆ. ಅಜ್ಜಿಯ ಈ ನಡೆಗೆ ರಾಜ್ಯದೆಲ್ಲೆಡೆಯಿಂದ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡ ಅಜ್ಜಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ.

ಗೃಹಲಕ್ಷ್ಮೀ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿರುವ ಅಜ್ಜಿ ಅಕ್ಕಾತಾಯಿ ಲಂಗೋಟಿ ಅವರನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ದೂರವಾಣಿ ಮೂಲಕ ಸಂಪರ್ಕಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ. ದೂರವಾಣಿಯಲ್ಲಿ ಅಜ್ಜಿಯೊಂದಿಗೆ ಬಹಳ ಹೊತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅತ್ಯಂತ ಗೌರವ ಮತ್ತು ಸಂಯಮದಿಂದ, ಬೆಳಗಾವಿ ಶೈಲಿಯಲ್ಲೇ ಮಾತನಾಡಿದರು.

ಈಗ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ್ದಿ, ನಿನ್ನ ಮಗಳಾದ ನನಗೆ ಯಾವಾಗ ಊಟ ಹಾಕಿಸುತ್ತೀ ಎನ್ನುವ ಸಚಿವರ ಪ್ರಶ್ನೆಗೆ, ಜರೂರೇ ಬಾ ನಿನಗೂ ಊಟ ಹಾಕಿಸ್ತೀನಿ, ನೀನೇ ನಮಗೆಲ್ಲ ಗೃಹಲಕ್ಷ್ಮೀ ಹಣ ಕೊಡುವ ಮನೆ ಮಗಳು.. ನಿನಗೆ ಇಲ್ಲ ಎನ್ನಲಾಗುವುದೇ ಎಂದು ಅಜ್ಜಿ ಹೇಳಿದ್ದಾರೆ. ಅಜ್ಜಿ ಮಾತುಗಳಿಂದ ಬಹಳ ಸಂತಸಗೊಂಡ ಸಚಿವರು, ನಿನಗೊಂದು ರೇಷ್ಮೆ ಸೀರೆ ಕಳುಹಿಸಿರುವುದಾಗಿ ತಿಳಿಸಿದರು.

ಗೃಹಲಕ್ಷ್ಮೀ ಯೋಜನೆ ನಿಮ್ಮಂತವರ ಮನೆಗೆ ತಲುಪುತ್ತಿರುವುದರಿಂದ ಏನೆಲ್ಲ ಅನುಕೂಲವಾಗುತ್ತಿದೆ ಎಂದು ತಿಳಿದು ಸಂತಸವಾಗುತ್ತಿದೆ, ಬಡ ಜನರ ಬದುಕಿಗೆ ನೆರವಾಗಬೇಕು. ನೊಂದವರ ಬಾಳಲ್ಲಿ ನೆಮ್ಮದಿ ಮೂಡಿಸಬೇಕು ಎಂಬ ತಮ್ಮ ಸರ್ಕಾರದ ಉದ್ದೇಶವನ್ನು ಗೃಹಲಕ್ಷ್ಮೀ ಯೋಜನೆ ಈಡೇರಿಸುತ್ತಿದೆ. ಯೋಜನೆ ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಸಚಿವರು ಹೇಳಿದರು.

ತಮ್ಮ ಸಾರ್ವಜನಿಕ ಸಂಪರ್ಕ ಅಧಿಕಾರಿ ಮೂಲಕ ಸಚಿವರು ಅಜ್ಜಿಗೆ ರೇಷ್ಮೆ ಸೀರೆ ಮತ್ತು ಹೋಳಿಗೆ ಕಳುಹಿಸಿ ಕೊಟ್ಟಿದ್ದು, ಅಜ್ಜಿಗೆ ಶಾಲು ಹೊದಿಸಿ ಸನ್ಮಾನ ಮಾಡಲಾಗಿದೆ.

ಇದನ್ನೂ ಓದಿ | Basavaraj Bommai: ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ: ಬೊಮ್ಮಾಯಿ ಕಿಡಿ

ಊರಿಗೆಲ್ಲಾ ಹೋಳಿಗೆ ಊಟ ಹಾಕಿಸಿದ್ದ ಅಜ್ಜಿ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ವೃದ್ಧೆ ಅಕ್ಕಾತಾಯಿ ಲಂಗೋಟಿ ಅವರು ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ್ದರು. ಸಿದ್ದರಾಮಯ್ಯನವರು ಪ್ರತಿ ತಿಂಗಳು ನಮಗೆಲ್ಲಾ 2000 ಹಣ ನೀಡ್ತಿದ್ದಾರೆ, ರಾಜಕೀಯವಾಗಿ ಸಿದ್ದರಾಮಯ್ಯನವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಹೀಗಾಗಿ ಗ್ರಾಮದ ದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟವನ್ನು ಅಜ್ಜಿ ಹಾಕಿಸಿದ್ದರು. ಅಲ್ಲದೇ ಐದು ಜನ ಮುತ್ತೈದೆಯರಿಗೆ ಉಡಿ ತುಂಬಿ ಹರಸಿದ್ದರು. ಅಜ್ಜಿಯ ಕಾರ್ಯಕ್ಕೆ ಸುಟ್ಟಟ್ಟಿ ಗ್ರಾಮದ ಮಹಿಳೆಯರು ಸಾಥ್ ನೀಡಿದ್ದರು.

Continue Reading

ಬೆಂಗಳೂರು

UGCET 2024 : ವೈದ್ಯಕೀಯ, ಇಂಜಿನಿಯರಿಂಗ್ ಕೋರ್ಸ್‌ಗಳ ಅಣುಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ

UGCET 2024 : ವೈದ್ಯಕೀಯ, ಇಂಜಿನಿಯರಿಂಗ್ ಕೋರ್ಸುಗಳ ಅಣುಕು ಸೀಟು ಹಂಚಿಕೆ ಫಲಿತಾಂಶ ಪ್ರಕಟವಾಗಿದೆ. ನಿಗದಿಯಂತೆ ಮೊ‌ದಲ ಸುತ್ತಿನ‌ ನೈಜ ಸೀಟು ಹಂಚಿಕೆ ಫಲಿತಾಂಶವನ್ನು ಸೆ.1ರಂದು ಪ್ರಕಟಿಸಲಾಗುವುದು

VISTARANEWS.COM


on

By

UGCET 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಎಂಜಿನಿಯರಿಂಗ್ (UGCET 2024) ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಎರಡನೇ ಅಣಕು ಸೀಟು‌ ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ಸಂಜೆ ಪ್ರಕಟಿಸಿದೆ.

ಕೆಇಎ ವೆಬ್ ಸೈಟ್‌ನಲ್ಲಿ ಅಣಕು ಫಲಿತಾಂಶ ಲಭ್ಯ‌ ಇದ್ದು, ಅದನ್ನು ನೋಡಿದ ನಂತರ ಆಗಸ್ಟ್ 27ರ ಬೆಳಗ್ಗೆ 11ರವರೆಗೆ ಅಭ್ಯರ್ಥಿಗಳು ತಮ್ಮ‌ ಇಚ್ಛೆಯನುಸಾರ ಕಾಲೇಜು/ಕೋರ್ಸ್ ಗಳನ್ನು ಅಧಿಕೃತ ಮೊದಲ ಸುತ್ತಿನ ಆಯ್ಕೆಗೆ ಬದಲಿಸಿಕೊಳ್ಳಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಿಗದಿಯಂತೆ ಮೊ‌ದಲ ಸುತ್ತಿನ‌ ನೈಜ ಸೀಟು ಹಂಚಿಕೆ ಫಲಿತಾಂಶವನ್ನು ಸೆ.1ರಂದು ಪ್ರಕಟಿಸಲಾಗುವುದು ಎಂದು ಅವರು ವಿವರಿಸಿದ್ದಾರೆ. ಆಗಸ್ಟ್ 22ರ ಸಂಜೆ 5ಗಂಟೆವರೆಗೆ ಆದ್ಯತಾ ಕ್ರಮದಲ್ಲಿ ದಾಖಲಿಸಿರುವ ಇಚ್ಛೆ/ಆಯ್ಕೆಗಳನ್ನು ಪರಿಗಣಿಸಿ, ಮೆರಿಟ್ ಮತ್ತು ರೋಸ್ಟರ್ ಪದ್ಧತಿ ಅನುಸಾರ ಅಣಕು ಸೀಟು ಹಂಚಿಕೆಯನ್ನು ಮಾಡಲಾಗಿದೆ. ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್‌ಸಿ (ನರ್ಸಿಂಗ್), ಬಿ-ಫಾರ್ಮ, ಫಾರ್ಮ್-ಡಿ ಇತ್ಯಾದಿ ಕೋರ್ಸುಗಳ ಸೀಟು ಹಂಚಿಕೆಯನ್ನು ಮಾಡಲಾಗಿದೆ.

ಇದನ್ನೂ ಓದಿ: UGCET 2024: ಸೆಪ್ಟೆಂಬರ್ 1ಕ್ಕೆ ಸಿಇಟಿ/ನೀಟ್ ಸೀಟು ಹಂಚಿಕೆ ರಿಸ್ಟಲ್‌ ಅನೌನ್ಸ್‌; ಆಪ್ಶನ್ ಎಂಟ್ರಿಗೆ ಇವತ್ತೆ ಲಾಸ್ಟ್

ಇಲ್ಲಿಯವರೆಗೆ ಇಚ್ಚೆ / ಆಯ್ಕೆಗಳನ್ನು ದಾಖಲಿಸದೇ ಇರುವ ಅರ್ಹ ಅಭ್ಯರ್ಥಿಗಳು ಇಷ್ಟವಿದ್ದಲ್ಲಿ ಆ.27ರ ಬೆಳಗ್ಗೆ 11ರೊಳಗೆ ಮೊದಲನೆ ಸುತ್ತಿನ ಸೀಟು ಹಂಚಿಕೆಗೆ ಕಾಲೇಜು ಮತ್ತು ಕೋರ್ಸುಗಳ ಆಯ್ಕೆಗಾಗಿ ಆದ್ಯತಾ ಕ್ರಮದಲ್ಲಿ ದಾಖಲಿಸಬಹುದು ಎಂದರು.

ಅಭ್ಯರ್ಥಿಗಳು ಕೇಳಬಹುದಾದ ಪುನರಾವರ್ತಿತ ಪ್ರಶ್ನೆಗಳನ್ನು ಕ್ರೋಡೀಕರಿಸಿ ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಉತ್ತರಗಳನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಅದನ್ನು ಓದಿಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ ಭೇಟಿ ನೀಡಬಹುದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral Video
ದೇಶ1 hour ago

Viral Video : ರೈಲ್ವೆ ಹಳಿಯ ಮೇಲೆ ಮಲಗಿದ್ದವನನ್ನು ಎಬ್ಬಿಸಿ ರೈಲು ಮುಂದಕ್ಕೆ ತೆಗೆದುಕೊಂಡ ಹೋದ ಲೋಕೋ ಪೈಲೆಟ್‌

PM Narendra Modi
ಪ್ರಮುಖ ಸುದ್ದಿ2 hours ago

Narendra Modi : ಪಾಕಿಸ್ತಾನದ ವಾಯಮಾರ್ಗ ಬಳಸಿ ಪೋಲೆಂಡ್‌ನಿಂದ ಭಾರತಕ್ಕೆ ಮರಳಿದ್ದ ಪ್ರಧಾನಿ ಮೋದಿ

Amy Jackson
ಸಿನಿಮಾ3 hours ago

Amy Jackson : ಮದುವೆಯ ಮೊದಲ ಚಿತ್ರಗಳನ್ನು ಹಂಚಿಕೊಂಡ ನಟಿ ಆ್ಯಮಿ ಜಾಕ್ಸನ್‌

Krishna janmastami 2024
ಆಹಾರ/ಅಡುಗೆ3 hours ago

Krishna janmastami 2024: ಕೃಷ್ಣ ಜನ್ಮಾಷ್ಟಮಿಗೆ ಏನೆಲ್ಲ ಸಿಹಿ ತಿನಿಸು ತಯಾರಿಸಬಹುದು? ಇಲ್ಲಿದೆ ಟಿಪ್ಸ್‌

New Fashion Trend
ಫ್ಯಾಷನ್3 hours ago

New Fashion Trend : ಯುವತಿಯರನ್ನು ಆಕರ್ಷಿಸುತ್ತಿದೆ ಇಂಡೊ-ವೆಸ್ಟರ್ನ್‌ ಡಿಸೈನ್‌‌‌ನ ಮ್ಯಾಚಿಂಗ್‌ ಸೀರೆ

Krishnadevaraya Palika Bazar
ಕರ್ನಾಟಕ3 hours ago

Krishnadevaraya Palika Bazaar: ಬೆಂಗಳೂರಲ್ಲಿ ದಕ್ಷಿಣ ಭಾರತದಲ್ಲೇ ಪ್ರಪ್ರಥಮ ಹವಾನಿಯಂತ್ರಿತ ಪಾಲಿಕೆ ಬಜಾರ್ ಉದ್ಘಾಟಿಸಿದ ಸಿಎಂ

Sound of UI
ಸಿನಿಮಾ4 hours ago

Sound of UI : ಸದ್ದು ಮಾಡುತ್ತಿದೆ UI ಚಿತ್ರದ ‘ಸೌಂಡ್ ಆಫ್ ಯುಐ’

Karkala Physical Abuse
ಕರ್ನಾಟಕ4 hours ago

Karkala Physical Abuse: ಕಾರ್ಕಳದ ಅತ್ಯಾಚಾರ ಸಂತ್ರಸ್ತೆ ರಕ್ತದಲ್ಲಿ ಡ್ರಗ್ಸ್ ಪತ್ತೆ; ಆರೋಪಿಗಳ ರಿಪೋರ್ಟ್‌ ನೆಗೆಟಿವ್!

Paul Valthaty
ಪ್ರಮುಖ ಸುದ್ದಿ4 hours ago

Paul Valthaty : ಅಮೆರಿಕದ ಕ್ರಿಕೆಟ್‌ ತಂಡದ ಕೋಚಿಂಗ್ ಹುದ್ದೆ ವಹಿಸಿಕೊಂಡ ಐಪಿಎಲ್ ಸ್ಟಾರ್‌ ಪಾಲ್ ವಾಲ್ತಾಟಿ

Krishna Janmastami 2024
ಧಾರ್ಮಿಕ5 hours ago

Krishna Janmastami 2024: ಜನ್ಮಾಷ್ಟಮಿಯಂದು ಕೃಷ್ಣನಿಗೆ ಬೆಣ್ಣೆ ಅರ್ಪಿಸುವುದು ಏಕೆ?

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ1 day ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌