Vastu Tips: ಮನೆಯಿದ ಹೊರಡುವಾಗ ಯಾವ ಪ್ರಾಣಿಗಳು ಸಿಕ್ಕರೆ ಶುಭಶಕುನ ಮತ್ತು ಅಪಶಕುನ? - Vistara News

ಧಾರ್ಮಿಕ

Vastu Tips: ಮನೆಯಿದ ಹೊರಡುವಾಗ ಯಾವ ಪ್ರಾಣಿಗಳು ಸಿಕ್ಕರೆ ಶುಭಶಕುನ ಮತ್ತು ಅಪಶಕುನ?

ಸಾಮಾನ್ಯವಾಗಿ ಬೆಕ್ಕು ನಮ್ಮ ಹಾದಿಯನ್ನು ದಾಟಿದರೆ ಅಶುಭ ಚಿಹ್ನೆ ಎಂದು ಪರಿಗಣಿಸಲಾಗಿದೆ. ಈ ನಂಬಿಕೆಯನ್ನು ನಾರದ ಪುರಾಣವು ಉಲ್ಲೇಖಿಸಿದೆ. ಆದರೆ ಇನ್ನು ಕೆಲವು ಪ್ರಾಣಿಗಳು ನಮ್ಮ ದಾರಿಯಲ್ಲಿ ಬಂದರೆ ವಿವಿಧ ರೀತಿಯ ಸಂಕೇತವನ್ನು (Vastu Tips) ನೀಡುತ್ತದೆ ಎನ್ನಲಾಗುತ್ತದೆ. ಅಂತಹ ಪ್ರಾಣಿಗಳು ಯಾವುದು, ಅವುಗಳು ನಮಗೆ ಅದೃಷ್ಟ ವನ್ನು ತರುತ್ತದೋ ಅಥವಾ ದುರಾದೃಷ್ಟವನ್ನೋ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

VISTARANEWS.COM


on

Vastu Tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೆಲವೊಂದು ನಂಬಿಕೆಗಳು ಎಷ್ಟು ಸರಿಯೋ ಗೊತ್ತಿಲ್ಲ. ಆದರೆ ಹೆಚ್ಚಿನವರು ನಂಬುತ್ತಾರೆ. ಮನೆಯಲ್ಲಿ ಸಾಕುವ ಬೆಕ್ಕು, (cat) ನಾಯಿಗಳಿಂದ (dog) ಹಿಡಿದು ಕೆಲವು ಪ್ರಾಣಿಗಳನ್ನು (animals) ಶುಭ ಸಂಕೇತಗಳಿಗೆ (Good sign) ಭಾವಿಸುತ್ತೇವೆ. ವಾಸ್ತು ಪ್ರಕಾರವೂ (Vastu Tips) ಕೆಲವು ಪ್ರಾಣಿಗಳು ದಾರಿಯಲ್ಲಿ ನಮಗೆ ಸಿಕ್ಕರೆ ಶುಭ ಶಕುನ ಎಂದೇ ಹೇಳಲಾಗುತ್ತದೆ.

ಹಿಂದೂ ಧರ್ಮದಲ್ಲಿ ಸಾಮಾನ್ಯವಾಗಿ ಬೆಕ್ಕು ನಮ್ಮ ಹಾದಿಯನ್ನು ದಾಟಿದರೆ ಅಶುಭ ಎಂದು ಪರಿಗಣಿಸಲಾಗುತ್ತದೆ. ಈ ನಂಬಿಕೆಯನ್ನು ನಾರದ ಪುರಾಣವು ಉಲ್ಲೇಖಿಸಿದೆ. ಆದರೆ ಇನ್ನು ಕೆಲವು ಪ್ರಾಣಿಗಳು ನಮ್ಮ ದಾರಿಯಲ್ಲಿ ಬಂದರೆ ವಿವಿಧ ರೀತಿಯ ಸಂಕೇತವನ್ನು ನೀಡುತ್ತದೆ ಎನ್ನಲಾಗುತ್ತದೆ. ಅಂತಹ ಪ್ರಾಣಿಗಳು ಯಾವುದು, ಅವುಗಳು ನಮಗೆ ಅದೃಷ್ಟ ವನ್ನು ತರುತ್ತದೋ ಅಥವಾ ದುರಾದೃಷ್ಟವನ್ನೋ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಮುಂಗುಸಿ

ದಾರಿಯಲ್ಲಿ ಮುಂಗುಸಿ ಸಿಕ್ಕರೆ ತಕ್ಷಣ ನಿಲ್ಲಬೇಕು. ಮುಂದೆ ಸಾಗಬಾದರು. ಅಂದರೆ ಪ್ರತಿಸ್ಪರ್ಧಿಗಳು ನಮ್ಮ ಕಾರ್ಯಗಳಿಗೆ ಅಡೆತಡೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂಬುದರ ಸಂಕೇತ ಅದು.


ಹಸುಗಳ ಹಿಂಡು

ಹಸುಗಳ ಹಿಂಡು ಮಾರ್ಗಕ್ಕೆ ಅಡ್ಡ ಬಂದರೆ ಅವುಗಳು ಹೋಗುವ ತನಕ ಕಾಯಬೇಕು. ಈ ವಿರಾಮವು ಮುಂಬರುವ ಎದುರಾಗುವ ತೊಂದರೆಗಳಿಂದ ನಮ್ಮನ್ನು ರಕ್ಷಿಸುತ್ತದೆ ಎಂದು ನಂಬಲಾಗುತ್ತದೆ.


ಇದನ್ನೂ ಓದಿ: Bhavishya: ಅಂಗೈಯಲ್ಲಿರುವ ʼಹೃದಯ ರೇಖೆಗಳುʼ ನಿಮ್ಮ ವ್ಯಕ್ತಿತ್ವ ಏನೆಂದು ಹೇಳುತ್ತವೆ; ಚೆಕ್‌ ಮಾಡಿ ನೋಡಿ!

ಕೆಸರಿನಿಂದ ತುಂಬಿರುವ ನಾಯಿ

ಮನೆಯಿಂದ ಹೊರಡುವಾಗ ಮಣ್ಣು ಮೆತ್ತಿಕೊಂಡಿರುವ ನಾಯಿಯನ್ನು ನೋಡುವುದು ಸಾಮಾನ್ಯವಾಗಿ ಅಶುಭ ಲಕ್ಷಣ ಎಂದು ಹೇಳಲಾಗುತ್ತದೆ. ಇದು ಭವಿಷ್ಯದಲ್ಲಿ ಸಂಭವನೀಯ ತೊಂದರೆಗಳಿಗೆ ಮುನ್ಸೂಚನೆಯಾಗಿರುತ್ತದೆ ಎಂಬ ನಂಬಿಕೆ ಇದೆ.

Vastu Tips
Vastu Tips


ಕಪ್ಪು ಬೆಕ್ಕು

ಕಪ್ಪು ಬೆಕ್ಕುಗಳನ್ನು ಸಾಂಪ್ರದಾಯಿಕವಾಗಿ ದುರದೃಷ್ಟ ಎನ್ನಲಾಗುತ್ತದೆ. ವಿಶೇಷವಾಗಿ ಅವು ನಮ್ಮ ದಾರಿಯನ್ನು ದಾಟಿದರೆ ಅದರಿಂದ ಮುಂದೆ ನಾವು ಮಾಡಬೇಕಿರುವ ಕೆಲಸ ಆಗುವುದಿಲ್ಲ ಎನ್ನಲಾಗುತ್ತದೆ. ಕೆಲವು ಸಂಸ್ಕೃತಿಗಳಲ್ಲಿ ಕಪ್ಪು ಬೆಕ್ಕುಗಳು ದುಷ್ಟಶಕ್ತಿಗಳಿಂದ ನಮ್ಮನ್ನು ರಕ್ಷಿಸುತ್ತದೆ ಎಂದು ಪರಿಗಣಿಸಲಾಗಿದೆ.


ಕಾಗೆಗಳು

ಮನೆ ಹತ್ತಿರ ಕಾಗೆಯೊಂದು ನಿರಂತರ ಕಾಣಿಸಿಕೊಂಡರೆ ಅವು ದುರದೃಷ್ಟ ತರುತ್ತದೆ ಅಥವಾ ಸಾವಿನ ಸೂಚನೆ ಎನ್ನಲಾಗುತ್ತದೆ. ಇನ್ನು ಕೆಲವರು ಕಾಗೆಗಳು ಅದೃಷ್ಟದ ಸಂದೇಶವಾಹಕಗಳು ಎಂದು ನಂಬುತ್ತಾರೆ.


ಲೇಡಿಬಗ್

ಲೇಡಿಬಗ್ ಎಂದು ಕರೆಯಲ್ಪಡುವ ಚಿಕ್ಕ ಕೀಟ ಅದೃಷ್ಟ ಮತ್ತು ರಕ್ಷಣೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದರ ಉಪಸ್ಥಿತಿಯು ಉತ್ತಮ ಹವಾಮಾನ, ಸಮೃದ್ಧವಾದ ಸುಗ್ಗಿಯನ್ನು ತರುತ್ತದೆ, ಮನೆಯಲ್ಲಿ ಮಕ್ಕಳಾಗುತ್ತದೆ ಎಂದು ನಂಬಲಾಗುತ್ತದೆ.


ಗೂಬೆ

ಅನೇಕ ಸಂಸ್ಕೃತಿಗಳಲ್ಲಿ ಗೂಬೆಗಳನ್ನು ಸಾಮಾನ್ಯವಾಗಿ ದುರದೃಷ್ಟದ ಶಕುನವೆಂದು ಪರಿಗಣಿಸಲಾಗುತ್ತದೆ. ಅವುಗಳ ಕೂಗು ಸಾವು ಅಥವಾ ದುರದೃಷ್ಟವನ್ನು ಸೂಚಿಸುತ್ತವೆ ಎಂದು ಭಾವಿಸಲಾಗಿದೆ.


ನವಿಲು

ನವಿಲುಗಳು ಗರಿ ಬಿಚ್ಚಿ ಕುಣಿಯುವುದನ್ನು ನೋಡಿದರೆ ಅದೃಷ್ಟ ಎಂದು ಭಾವಿಸಲಾಗುತ್ತದೆ. ಅವುಗಳ ಗರಿಗಳನ್ನು ಮನೆಯಲ್ಲಿ ತಂದು ಇರಿಸಿದರೆ ಕೆಟ್ಟ ಶಕ್ತಿಗಳು ದೂರವಾಗಿ, ನಮ್ಮನ್ನು ರಕ್ಷಿಸುತ್ತವೆ ಎಂದು ಭಾವವಿಸಲಾಗುತ್ತದೆ.


ಮೊಲಗಳು

ಮೊಲಗಳು ಸಾಮಾನ್ಯವಾಗಿ ಅದೃಷ್ಟದ ಸಂಕೇತ ಎಂದು ಭಾವಿಸಲಾಗುತ್ತದೆ. ಅನೇಕ ಸಂಸ್ಕೃತಿಗಳಲ್ಲಿ, ಮೊಲವನ್ನು ನೋಡುವುದು ಫಲವತ್ತತೆ, ಸಮೃದ್ಧಿಯನ್ನು ಸೂಚಿಸುತ್ತದೆ.


ಜೇಡ

ಒಳ್ಳೆಯ ಮತ್ತು ಕೆಟ್ಟ ಶಕುನಗಳಾಗಿ ಜೇಡವನ್ನು ಕಾಣಲಾಗುತ್ತದೆ. ಕೆಲವು ಸಂಸ್ಕೃತಿಗಳಲ್ಲಿ, ಜೇಡವನ್ನು ಗುರುತಿಸುವುದು ಅದೃಷ್ಟ ಮತ್ತು ಸಂಪತ್ತಿನ ಸಂಕೇತವೆಂದು ಪರಿಗಣಿಸಿದ್ದರೆ ಇನ್ನು ಕೆಲವರು ಇದು ದುರದೃಷ್ಟ ಮತ್ತು ಮೋಸವನ್ನು ಸೂಚಿಸುತ್ತದೆ ಎನ್ನುತ್ತಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಫ್ಯಾಷನ್

krishna janmashtami 2024: ಹೀಗಿತ್ತು ಸೆಲೆಬ್ರಿಟಿಗಳ ಕೃಷ್ಣ ಜನ್ಮಾಷ್ಟಮಿ ಸಂಭ್ರಮ!

krishna janmashtami 2024:ರಾಷ್ಟ್ರಾದ್ಯಂತ ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇದಕ್ಕೆ ಸೆಲೆಬ್ರೆಟಿಗಳು ಕೂಡ ಹೊರತಾಗಿಲ್ಲ! ತಮ್ಮ ಮಕ್ಕಳನ್ನು ಕೃಷ್ಣ-ರಾಧೆಯಂತೆ ಸಿಂಗರಿಸಿ ಸೆಲೆಬ್ರೇಟ್‌ ಮಾಡಿದ್ದಾರೆ. ಇನ್ನು, ಕೆಲವರು ತಮ್ಮ ಬಾಲ್ಯದ ಕೃಷ್ಣನ ಪೋಟೋಗಳನ್ನು ಹಂಚಿಕೊಂಡು ಖುಷಿಪಟ್ಟಿದ್ದಾರೆ. ಈ ಕುರಿತಂತೆ ಇಲ್ಲಿದೆ ವರದಿ.

VISTARANEWS.COM


on

Krishna Janmastami 2024
ಚಿತ್ರ ಕೃಪೆ : ಇನ್ಸ್‌ಟಾಗ್ರಾಮ್‌
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ರಾಷ್ಟ್ರದಾದ್ಯಂತ ಎಲ್ಲೆಡೆ ಕೃಷ್ಣ ಜನ್ಮಾಷ್ಟಮಿಯನ್ನು (krishna janmashtami 2024) ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸಾಮಾನ್ಯ ಜನರಿಂದಿಡಿದು, ಸೆಲೆಬ್ರೆಟಿಗಳು ಕೂಡ ಗೋಕುಲಾಷ್ಟಮಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ, ಕೆಲವರು, ತಮ್ಮ ಮಕ್ಕಳನ್ನು ಕೃಷ್ಣ-ರಾಧೆಯಂತೆ ಸಿಂಗರಿಸಿ, ಸೆಲೆಬ್ರೇಟ್‌ ಮಾಡಿದ್ದಾರೆ. ಇನ್ನು, ಕೆಲವರು ತಮ್ಮ ಬಾಲ್ಯದಲ್ಲಿನ ಕೃಷ್ಣನ ಪೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡರೇ, ಮತ್ತೇ ಕೆಲವರು ಗೋಪಾಲಕನ ಹಾಡುಗಳಿಗೆ ಕುಣಿದು ಕುಪ್ಪಳಿಸಿ ವಿಡಿಯೋ ಮಾಡಿ ರೀಲ್ಸ್ ಮಾಡಿ ಹಂಚಿಕೊಂಡಿದ್ದಾರೆ. ಈ ಎಲ್ಲದರ ಈ ಕುರಿತಂತೆ ಇಲ್ಲಿದೆ ವರದಿ.

ಸೆಲೆಬ್ರೆಟಿಗಳ ಕೃಷ್ಣ ಜನ್ಮಾಷ್ಟಮಿ

ಸಾಕಷ್ಟು ಬಾಲಿವುಡ್‌ ಹಾಗೂ ಸ್ಯಾಂಡಲ್‌ವುಡ್‌ ತಾರೆಯರು ತಮ್ಮದೇ ಆದ ರೀತಿಯಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಿದ್ದಾರೆ. ಹಿರಿಯ-ಕಿರಿಯ ತಾರೆಯರು ಕೃಷ್ಣನ ಪೂಜೆಯನ್ನು ಮಾಡುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇನ್ನು ಕೆಲವು ನಟ-ನಟಿಯರು, ಕೃಷ್ಣನ ಮಂದಿರಗಳಿಗೆ ಭೇಟಿ ಇತ್ತ ಫೋಟೋಗಳನ್ನು ಹಾಗೂ ವಿಡಿಯೋಗಳನ್ನು ಶೇರ್‌ ಮಾಡಿದ್ದಾರೆ. ಒಬ್ಬೊಬ್ಬರು ಒಂದೊಂದು ರೀತಿಯ ಭಾವನೆಗಳನ್ನು ಹಂಚಿಕೊಂಡಿದ್ದಾರೆ.
ಬಾಲಿವುಡ್‌ನ ಹಿರಿಯ ನಟಿ ಹೇಮಾ ಮಾಲಿನಿ, ತಮ್ಮ ನೃತ್ಯ ರೂಪಕದ ವಿಡಿಯೋ ಹಂಚಿಕೊಂಡಿದ್ದು, ನಟ ರಾಜ್‌ ಗ್ರೋವರ್‌ ಕೃಷ್ಣನನ್ನು ಎತ್ತಿ ಹಿಡಿದು ಆಚರಿಸಿದ್ದಾರೆ. ನಟಿ ದೀಪಿಕಾ ದಾಸ್‌ ಸೇರಿದಂತೆ ಹಲವು ನಟಿಯರು ಕೃಷ್ಣನ ತೊಟ್ಟಿಲು ತೂಗುವ, ಆರಾಧಿಸುವ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.

ಸೆಲೆಬ್ರೆಟಿಗಳ ಮುದ್ದು ಮಕ್ಕಳ ಸೆಲೆಬ್ರೇಷನ್‌

ನಟಿ ಪ್ರಣೀತಾ, ತಮ್ಮ ಮೊದಲ ಮಗುವಿನ ಕೃಷ್ಣನ ಅವತಾರದ ತುಂಟಾಟದ ವಿಡಿಯೋ ಕ್ಲಿಪ್‌ ಹಂಚಿಕೊಂಡಿದ್ದಾರೆ. ಇನ್ನು ನಟಿ ಶ್ವೇತಾ ಶ್ರೀವಾತ್ಸವ್‌ ತಮ್ಮ ಮಗಳನ್ನು ರಾಧೆಯಂತೆ ಸಿಂಗರಿಸಿದ್ದಾರೆ. ನಟಿ ಮಮತಾ ರಾವುತ್‌ ಕಂದಮ್ಮನನ್ನು ಕೃಷ್ಣನಂತೆ ಅಲಂಕರಿಸಿದ್ದಾರೆ. ಇದೇ ರೀತಿ ನಟಿ ರಾಧಿಕಾ ಪಂಡಿತ್‌ರಿಂದ ಹಿಡಿದು, ಟೆಲಿಲೋಕದ ತಾರೆಯರು ಕೂಡ ಮಕ್ಕಳನ್ನು ಘನಶ್ಯಾಮನಂತೆ ಸಿಂಗರಿಸಿ ಸಂತಸ ಪಟ್ಟಿದ್ದಾರೆ.

ಇದನ್ನೂ ಓದಿ: Krishna Janmashtami Fancy Dress Tips: ಕೃಷ್ಣನ ಫ್ಯಾನ್ಸಿ ಡ್ರೆಸ್‌ ಮಾಡುವವರಿಗೆ ಇಲ್ಲಿದೆ 5 ಟಿಪ್ಸ್!

ಮಾಡೆಲ್‌ಗಳ ಕೃಷ್ಣನ ಆರಾಧನೆ

ಇತರೇ ಕ್ಷೇತ್ರದವರಂತೆ ಫ್ಯಾಷನ್‌ ಕ್ಷೇತ್ರದ ಸೆಲೆಬ್ರೆಟಿಗಳು ಕೂಡ ತಮ್ಮದೇ ಆದ ರೀತಿಯಲ್ಲಿ ಈ ಗೋಕುಲಾಷ್ಟಮಿಯನ್ನು ಮಾಡರ್ನ್‌ ಶೈಲಿಯಲ್ಲಿ ಆಚರಿಸಿ, ಸಂಭ್ರಮಿಸಿದ್ದಾರೆ. ಕೃಷ್ಣನ ಹಾಡುಗಳಿಗೆ ವಿಡಿಯೋ ರೀಲ್ಸ್ ಮಾಡಿ, ಖುಷಿ ಪಟ್ಟಿದ್ದಾರೆ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

Continue Reading

ದೇಶ

Krishna Janmastami 2024: ಭೇಟಿ ನೀಡಲೇಬೇಕಾದ ವಿಶ್ವ ಪ್ರಸಿದ್ಧ 5 ಕೃಷ್ಣ ದೇವಾಲಯಗಳಿವು

ದೇಶಾದ್ಯಂತ ಕೃಷ್ಣ ಜನ್ಮಾಷ್ಟಮಿಯನ್ನು (Krishna janmastami 2024) ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಅದರಲ್ಲೂ ವಿಶೇಷವಾಗಿ ಕೆಲವು ಕೃಷ್ಣನ ದೇಗುಲಗಳು ಇದರ ಆಚರಣೆಗೆ ವಿಶ್ವ ಪ್ರಸಿದ್ಧಿಯನ್ನು ಗಳಿಸಿವೆ. ಜನ್ಮಾಷ್ಟಮಿ ಸಮಯದಲ್ಲಿ ಅತ್ಯಂತ ಸುಂದರವಾಗಿ ಅಲಂಕರಿಸಲ್ಪಡುವ ಆ ದೇವಾಲಯಗಳು ಯಾವುದು, ಎಲ್ಲಿದೆ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Krishna Janmastami 2024
Koo

ಕೃಷ್ಣನ ಜನ್ಮದಿನವನ್ನು ಸೋಮವಾರದಿಂದ ಮೂರು ದಿನಗಳ ಕಾಲ ದೇಶಾದ್ಯಂತ ಆಚರಿಸಲಾಗುತ್ತದೆ. ಜನ್ಮಾಷ್ಟಮಿಯ (Krishna janmastami 2024) ಈ ವಿಶೇಷ ಸಂದರ್ಭದಲ್ಲಿ ಭೇಟಿ ನೀಡಬಹುದಾದ ದೇಶದ ಐದು ಸುಪ್ರಸಿದ್ಧ ಶ್ರೀಕೃಷ್ಣ ದೇವಾಲಯಗಳಿವೆ (sri krishna temple). ಇಲ್ಲಿ ಶ್ರೀಕೃಷ್ಣನ ಜನ್ಮಾಷ್ಟಮಿಯು (janmastami) ಅತ್ಯಂತ ವೈಭವಾಗಿ ನಡೆಯುತ್ತದೆ.

Krishna janmastami
Krishna janmastami


1. ದ್ವಾರಕಾಧೀಶ ದೇವಾಲಯ, ದ್ವಾರಕಾ

ಗುಜರಾತಿನ ದ್ವಾರಕಾದಲ್ಲಿರುವ ದ್ವಾರಕಾಧೀಶ ದೇವಾಲಯವನ್ನು ಜಗತ್ ಮಂದಿರ ಎಂದೂ ಕರೆಯಲಾಗುತ್ತದೆ. ದ್ವಾರಕಾಧೀಶ ದೇವಾಲಯವನ್ನು 2,500 ವರ್ಷಗಳ ಹಿಂದೆ ಶ್ರೀಕೃಷ್ಣನ ಮೊಮ್ಮಗ ವಜ್ರನಾಭ್ ಸ್ಥಾಪಿಸಿದನೆಂದು ನಂಬಲಾಗಿದೆ. ಸಣ್ಣ ಬೆಟ್ಟದ ಮೇಲಿರುವ ಈ ದೇವಾಲಯವನ್ನು ಭಕ್ತರು 50 ಮೆಟ್ಟಿಲುಗಳನ್ನು ಹತ್ತಿ ತಲುಪಬಹುದು. ಈ ದೇವಾಲಯಕ್ಕೆ ಭೇಟಿ ನೀಡಲು ಉತ್ತಮ ಸಮಯವೆಂದರೆ ಜನ್ಮಾಷ್ಟಮಿ. ಈ ಸಂದರ್ಭದಲ್ಲಿ ದೇವಾಲಯಕ್ಕೆ ಅತ್ಯಂತ ಸುಂದರವಾಗಿ ಅಲಂಕಾರ ಮಾಡಲಾಗುತ್ತದೆ.


2. ಶ್ರೀ ಕೃಷ್ಣ ಜನ್ಮಸ್ಥಾನ ದೇವಾಲಯ, ಮಥುರಾ

ಉತ್ತರ ಪ್ರದೇಶದ ಮಥುರಾದಲ್ಲಿ ಶ್ರೀ ಕೃಷ್ಣ ಜನ್ಮಸ್ಥಾನ ದೇವಾಲಯವಿದೆ. ಇದು ಶ್ರೀಕೃಷ್ಣನ ತಂದೆತಾಯಿಗಳಾದ ವಸುದೇವ ಮತ್ತು ದೇವಕಿಯನ್ನು ಅವನ ಮಾವ ಕಂಸನಿಂದ ಬಂಧಿಸಲಾಗಿದೆ ಎನ್ನಲಾಗುವ ಸ್ಥಳದಲ್ಲಿ ನಿರ್ಮಿಸಲಾಗಿದೆ. ದೇವಾಲಯದ ಸಂಕೀರ್ಣವು ಶ್ರೀಕೃಷ್ಣನಿಗೆ ಸಮರ್ಪಿತವಾದ ಹಲವಾರು ದೇವಾಲಯಗಳನ್ನು ಒಳಗೊಂಡಿದೆ. ಇಲ್ಲಿ ಜನ್ಮಾಷ್ಟಮಿ ಸಮಯದಲ್ಲಿ ಸುಂದವಾಗಿ ಅಲಂಕರಿಸಲಾಗುತ್ತದೆ.


3. ಬಂಕೆ ಬಿಹಾರಿ ದೇವಾಲಯ, ಉತ್ತರ ಪ್ರದೇಶ

ಉತ್ತರ ಪ್ರದೇಶದ ವೃಂದಾವನದಲ್ಲಿರುವ ಬಂಕೆ ಬಿಹಾರಿ ದೇವಾಲಯವು ಭಾರತದಲ್ಲಿನ ಶ್ರೀಕೃಷ್ಣನ ಅತ್ಯಂತ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ. ಇದು ವೃಂದಾವನದ ಏಳು ಪ್ರಮುಖ ದೇವಾಲಯಗಳಲ್ಲಿ ಒಂದಾಗಿದೆ. ಜನ್ಮಾಷ್ಟಮಿ ಆಚರಣೆಯ ಸಮಯದಲ್ಲಿ ಭಕ್ತರು ಸಾಂಪ್ರದಾಯಿಕವಾದ ಬಂಕೆ ಬಿಹಾರಿಯಲ್ಲಿ ಮಂಗಳ ಆರತಿಯಲ್ಲಿ ಪಾಲ್ಗೊಳ್ಳಬಹುದು. ಇಲ್ಲಿ ದೇವರ ದರ್ಶನವು ಮಧ್ಯಾಹ್ನ ಎರಡು ಗಂಟೆಗೆ ಪ್ರಾರಂಭವಾಗುತ್ತದೆ ಮತ್ತು ಮರುದಿನ ಬೆಳಗ್ಗೆ ಆರು ಗಂಟೆಯವರೆಗೆ ಮುಂದುವರಿಯುತ್ತದೆ.


4. ಗುರುವಾಯೂರು ಕೃಷ್ಣ ದೇವಾಲಯ, ಕೇರಳ

ದಕ್ಷಿಣದ ದ್ವಾರಕಾ ಎಂದೂ ಕರೆಯಲ್ಪಡುವ ಐತಿಹಾಸಿಕ ಕೃಷ್ಣ ದೇವಾಲಯವು ಕೇರಳದ ಗುರುವಾಯೂರಿನಲ್ಲಿದೆ. ಇದು ಇಂದಿಗೂ ಭಾರತದ ಅತ್ಯಂತ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಮುಖ್ಯ ದೇವಾಲಯವನ್ನು 1638ರಲ್ಲಿ ಪುನರ್ನಿರ್ಮಿಸಲಾಯಿತು ಎನ್ನಲಾಗುತ್ತದೆ. ದೇವಾಲಯದ ಒಳಾಂಗಣ ವಿನ್ಯಾಸ ಮತ್ತು ವಾಸ್ತುಶಿಲ್ಪದ ಶೈಲಿಯು ಪ್ರವಾಸಿಗರಿಗೆ ವಿಶೇಷವಾಗಿ ಕೃಷ್ಣ ಜನ್ಮಾಷ್ಟಮಿ ಸಮಯದಲ್ಲಿ ಅತ್ಯಂತ ಸುಂದರ ಅನುಭವವನ್ನು ನೀಡುತ್ತದೆ.

ಇದನ್ನೂ ಓದಿ: Lakshadweep Tour: ಲಕ್ಷದ್ವೀಪದಲ್ಲಿ ಪ್ರವಾಸಿಗರನ್ನು ಸೆಳೆಯುವ ಪಂಚರತ್ನಗಳಿವು


5. ಉಡುಪಿ ಶ್ರೀ ಕೃಷ್ಣ ಮಠ

ನಮ್ಮ ರಾಜ್ಯದ ಉಡುಪಿಯ ಶ್ರೀಕೃಷ್ಣ ದೇವಾಲಯವು ಒಂದು ಅಪ್ರತಿಮ ಯಾತ್ರಾಸ್ಥಳವಾಗಿದೆ. ಶ್ರೀಕೃಷ್ಣನ ಸುಂದರವಾದ ವಿಗ್ರಹವೊಂದು ಅಲ್ಲಿ ಸ್ಥಾಪಿಸಲಾಗಿದೆ. ಜನ್ಮಾಷ್ಟಮಿ ಸಮಯದಲ್ಲಿ ಭವ್ಯವಾಗಿ ದೇವಾಲಯವನ್ನು ಅಲಂಕರಿಸಲಾಗುತ್ತದೆ. ವಿಗ್ರಹವನ್ನು ಒಂಬತ್ತು ರಂಧ್ರಗಳ ಕಿಟಕಿ ಅಥವಾ ನವಗ್ರಹ ಕಿಟಿಕಿ ಮೂಲಕವೂ ಭಕ್ತರು ನೋಡುತ್ತಾರೆ. ವಿಟ್ಲ ಪಿಂಡಿ ಉತ್ಸವ ಮತ್ತು ಮೊಸರು ಕುಡಿಕೆ ಇಲ್ಲಿಯ ವಿಶೇಷ ಆಕರ್ಷಣೆ. ಹುಲಿ ವೇಷ ಕುಣಿತ ಜನರನ್ನು ರಂಜಿಸುತ್ತದೆ.

Continue Reading

ಧಾರ್ಮಿಕ

Krishna Janmastami 2024: ಇಂದು ಕೃಷ್ಣ ಜನ್ಮಾಷ್ಟಮಿ; ಹಬ್ಬದ ಹಿನ್ನೆಲೆ ಏನು? ದೇಶದ ವಿವಿಧೆಡೆ ಹೇಗೆ ಆಚರಿಸುತ್ತಾರೆ?

ಶೃಂಗಾರಗೊಂಡ ಬೀದಿಯಲ್ಲಿ ಹೆಜ್ಜೆ ಹಾಕಿದರೆ ಸಾಕು ಎಲ್ಲೆಲ್ಲೂ ಕೃಷ್ಣನ ದರ್ಶನವಾಗುತ್ತದೆ. ಕೃಷ್ಣನ ತುಂಟಾಟ, ಬಾಲಲೀಲೆಗಳನ್ನು ಕಣ್ತುಂಬಿಸಿಕೊಳ್ಳಬಹುದು. ಸೋಮವಾರ ದೇಶಾದ್ಯಂತ ಕೃಷ್ಣ ಜನ್ಮಾಷ್ಟಮಿ (Krishna janmastami 2024), ಮರುದಿನ ಉಡುಪಿಯಲ್ಲಿ ವಿಟ್ಲ ಪಿಂಡಿ/ ದಹಿ ಹಂಡಿ ಆಚರಣೆ ನಡೆಯುತ್ತದೆ. ಜಗತ್ತಿಗೆ ಪ್ರೀತಿಯ ಸಂದೇಶ ಸಾರಿದ ಕೃಷ್ಣನ ಭಕ್ತಿ ಸಾಗರದಲ್ಲಿ ಈ ದಿನ ಪ್ರತಿಯೊಬ್ಬರೂ ಮಿಂದೇಳಬಹುದು.

VISTARANEWS.COM


on

By

Krishna janmastami
Koo

ದೇಶಾದ್ಯಂತ ಆಚರಿಸಲ್ಪಡುವ ಪ್ರಮುಖ ಹಬ್ಬ ಕೃಷ್ಣ (god krishna) ಜನ್ಮಾಷ್ಟಮಿಯನ್ನು (Krishna janmastami 2024) ಗೋಕುಲಾಷ್ಟಮಿ (Gokulastami) ಎಂದೂ ಕರೆಯಲಾಗುತ್ತದೆ. ಚಾಂದ್ರಮಾನ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದ (shravana masa) ಶುಕ್ಲ ಪಕ್ಷದಂದು ಮತ್ತು ಸೌರಮಾನ ಕ್ಯಾಲೆಂಡರ್ ಪ್ರಕಾರ ಸಿಂಹ ಮಾಸದ ರೋಹಿಣಿ ನಕ್ಷತ್ರದಂದು ಈ ದಿನವನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತದೆ.

ಈ ಹಬ್ಬದ ಹಿನ್ನೆಲೆ ಏನು?

ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯಂದು ಮಥುರೆಯಲ್ಲಿ ವಾಸುದೇವ ಮತ್ತು ದೇವಕಿಯ ಮಗನಾಗಿ ವಿಷ್ಣುವಿನ ಎಂಟನೇ ಅವತಾರವೆಂದೇ ನಂಬಿರುವ ಕೃಷ್ಣನ ಜನನವಾಗುತ್ತದೆ.


ಪುರಾಣಗಳಲ್ಲಿ ಉಲ್ಲೇಖಿಸಿರುವಂತೆ ಅಷ್ಟಮಿಯಂದು ಮಧ್ಯರಾತ್ರಿ ಕಂಸನ ಕಾರಾಗೃಹದಲ್ಲಿ ಕೃಷ್ಣನ ಜನನವಾಗಿತ್ತು. ಈ ಸಂದರ್ಭದಲ್ಲಿ ಕಂಸ ಸೇರಿದಂತೆ ಜೈಲನ್ನು ಕಾಯುತ್ತಿದ್ದ ಎಲ್ಲರೂ ನಿದ್ದೆಗೆ ಜಾರಿದ್ದರು. ಕೃಷ್ಣ ಹುಟ್ಟಿದೊಡನೆ ತಂದೆ ವಸುದೇವ ಮಗುವನ್ನು ಬುಟ್ಟಿಯಲ್ಲಿ ಹಾಕಿ ಎತ್ತಿಕೊಂಡು ಯಾರಿಗೂ ತಿಳಿಯದಂತೆ ಗೋಕುಲಕ್ಕೆ ಕರೆದೊಯ್ಯುತ್ತಾನೆ. ಅಲ್ಲಿ ನಂದರಾಜನ ಮನೆಯಲ್ಲಿ ಕೃಷ್ಣನನ್ನು ಬಿಟ್ಟು ಬರುತ್ತಾನೆ. ಈ ಕಾರ್ಯಕ್ಕೆ ಪ್ರಕೃತಿ ಅವನಿಗೆ ಸಂಪೂರ್ಣ ನೆರವಾಗುತ್ತದೆ. ಹೀಗೆ ದೇವಕಿ ಜನ್ಮ ನೀಡಿದ ಮಗುವಿಗೆ ನಂದರಾಜನ ಪತ್ನಿ ಯಶೋಧೆಯು ತಾಯಿಯಾಗುತ್ತಾಳೆ. ಕೃಷ್ಣನ ತುಂಟಾಟ, ಬಾಲಲೀಲೆಗಳು ಎಷ್ಟು ಪ್ರಸಿದ್ಧವೋ ಅಷ್ಟೇ ಅವನು ಮಾಡಿರುವ ಪವಾಡ ಕಾರ್ಯಗಳು ಕೂಡ ಜಗತ್ಪ್ರಸಿದ್ಧವಾಗಿವೆ. ಅನೇಕ ರಾಕ್ಷಸರನ್ನು ಕೊಂದಿರುವ ಕೃಷ್ಣನೇ ಮುಂದೆ ಪಾಂಡವರ ನೇತೃತ್ವದ ಧರ್ಮ ಯುದ್ಧಕ್ಕೆ ಸಾರಥಿಯಾಗುತ್ತಾನೆ. ಅಧರ್ಮವೇ ತುಂಬಿದ್ದ ಕೌರವರು ಮತ್ತು ಅವರಿಗೆ ಬೆಂಬಲವಾಗಿ ನಿಂತವರ ವಿನಾಶದಲ್ಲಿ ಪ್ರಮುಖ ಪಾತ್ರಧಾರಿಯಾಗುತ್ತಾನೆ.

ಸಂಪ್ರದಾಯ

ಕೃಷ್ಣ ಜನ್ಮಾಷ್ಟಮಿಯನ್ನು ಬಹುತೇಕ ಹಿಂದೂಗಳು ಮನೆಮನೆಯಲ್ಲೂ ಆಚರಿಸುತ್ತಾರೆ. ಹೆಚ್ಚಿನವರು ತಮ್ಮ ಮಕ್ಕಳಿಗೆ ಕೃಷ್ಣನ ವೇಷ ಭೂಷಣಗಳನ್ನು ತೊಡಿಸಿ ಸಂಭ್ರಮಿಸುತ್ತಾರೆ. ಇದಕ್ಕೆ ಪೂರಕವಾಗಿ ದೇವಾಲಯಗಳು, ವಿವಿಧ ಸಂಘ ಸಂಸ್ಥೆಗಳು ಕೃಷ್ಣ ವೇಷ ಸ್ಪರ್ಧೆ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಅನೇಕ ಕೃಷ್ಣ ದೇವಾಲಯಗಳು ವಧುವಣಗಿತ್ತಿಯಂತೆ ಸಿಂಗಾರಗೊಂಡು ಕೃಷ್ಣನ ಲೀಲೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶಿಸಿ ಕೃಷ್ಣನ ಸಂದೇಶಗಳನ್ನು ಸಾರುತ್ತವೆ.

ಕೃಷ್ಣಜನ್ಮಾಷ್ಟಮಿಯ ದಿನದಂದು ಮನೆ ಮತ್ತು ದೇವಾಲಯಗಳನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ. ಕೃಷ್ಣನ ಪುಟ್ಟ ಹೆಜ್ಜೆಗಳನ್ನು ರಂಗೋಲಿಯಲ್ಲಿ ಬರೆದು ಸಂಭ್ರಮಿಸಲಾಗುತ್ತದೆ. ಕೃಷ್ಣನ ವಿಗ್ರಹಗಳನ್ನು ಅಲಂಕರಿಸಿ ಕೃಷ್ಣನಿಗೆ ಪ್ರಿಯವಾದ ವಿವಿಧ ಬಗೆಬಗೆಯ ತಿಂಡಿಗಳನ್ನು ಮಾಡಿ ಅರ್ಪಿಸಲಾಗುತ್ತದೆ. ಕೆಲವರು ಈ ದಿನ ಮಧ್ಯರಾತ್ರಿಯವರೆಗೆ ಉಪವಾಸವಿದ್ದು, ಅನಂತರ ಆಹಾರ ಸ್ವೀಕರಿಸುವ ಸಂಪ್ರದಾಯವಿದೆ.

Krishna janmastami
Krishna janmastami


ವಿವಿಧೆಡೆ ಆಚರಣೆ

ದೇಶ ವಿದೇಶಗಳಲ್ಲೂ ಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತದೆ. ಅದರಲ್ಲೂ ಉತ್ತರ ಭಾರತದ ಅತ್ಯಂತ ಜನಪ್ರಿಯ ಹಬ್ಬವೆಂದರೆ ಜನ್ಮಾಷ್ಟಮಿ. ಈ ದಿನ ಜನರು ರಾಸಲೀಲೆಯನ್ನು ಆಚರಿಸುವ ಪದ್ಧತಿ ಇದೆ. ಭಗವಾನ್ ಕೃಷ್ಣನ ಜನ್ಮಸ್ಥಳವಾದ ಮಥುರಾ ಮತ್ತು ವೃಂದಾವನದಲ್ಲಿ ಈ ಸಂದರ್ಭದಲ್ಲಿ ಭವ್ಯವಾದ ಮೆರವಣಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಕೃಷ್ಣನ ಜೀವನದ ಘಟನೆಗಳನ್ನು ಪ್ರದರ್ಶಿಸಿ ಅದ್ಧೂರಿಯಿಂದ ಆಚರಿಸಲಾಗುತ್ತದೆ.

ಜಮ್ಮುವಿನಲ್ಲಿ ಜನ್ಮಾಷ್ಟಮಿಯಂದು ಗಾಳಿಪಟ ಹರಿಸಲಾಗುತ್ತದೆ. ಮಣಿಪುರದ ನಿವಾಸಿಗಳು ರಾಧಾ- ಕೃಷ್ಣನ ನೃತ್ಯ ನಾಟಕಗಳನ್ನು ಪ್ರಸ್ತುತಪಡಿಸುತ್ತಾರೆ. ಪಾಲಕರು ತಮ್ಮ ಮಕ್ಕಳನ್ನು ಕೃಷ್ಣ, ಗೋಪಿಕೆಯರಂತೆ ಅಲಂಕರಿಸುತ್ತಾ ಭಾಗವತ ಗೀತೆ ಮತ್ತು ಭಾಗವತ ಪುರಾಣದ ಹತ್ತನೇ ಅಧ್ಯಾಯವನ್ನು ಓದುತ್ತಾರೆ.


ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಜನರು ಮಧ್ಯರಾತ್ರಿಯವರೆಗೆ ಉಪವಾಸ ಮತ್ತು ಪೂಜೆ ಮಾಡುತ್ತಾರೆ. ಅಷ್ಟಮಿಯ ಮರುದಿನ ‘ನಂದ ಉತ್ಸವ’ ವನ್ನು ಆಚರಿಸಿ ಕೃಷ್ಣನ ಸಾಕುತಂದೆಗಳಾದ ನಂದ ಮತ್ತು ಯಶೋದಾ ಅವರನ್ನು ಗೌರವಿಸಲಾಗುತ್ತದೆ. ಮಹಾರಾಷ್ಟ್ರ, ರಾಜಸ್ಥಾನ ಮತ್ತು ಗುಜರಾತ್ ನಲ್ಲಿ ಮಡಿಕೆ ಒಡೆಯುವ ಆಚರಣೆಗಳು ಅತ್ಯಂತ ಅದ್ಧೂರಿಯ ನಡೆಸಲಾಗುತ್ತದೆ.

ದಕ್ಷಿಣ ಭಾರತದಲ್ಲೂ ಗೋಕುಲ ಅಷ್ಟಮಿಯನ್ನು ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಕೃಷ್ಣನ ವಿವಿಧ ಲೀಲೆಗಳನ್ನು ಪ್ರದರ್ಶಿಸುವುದು ಈ ದಿನದ ವಿಶೇಷತೆಯಾಗಿದೆ.\


ದೇವಾಲಯಗಳಲ್ಲಿ ಸಂಭ್ರಮ

ದಕ್ಷಿಣ ಭಾರತದಲ್ಲಿರುವ ಕೃಷ್ಣನ ಜನಪ್ರಿಯ ದೇವಾಲಯಗಳೆಂದರೆ ತಿರುವರೂರು ಜಿಲ್ಲೆಯ ಮನ್ನಾರ್ಗುಡಿಯಲ್ಲಿರುವ ರಾಜಗೋಪಾಲಸ್ವಾಮಿ ದೇವಾಲಯ, ಕಾಂಚೀಪುರಂನ ಪಾಂಡವಧೂತರ್ ದೇವಾಲಯ, ಉಡುಪಿಯ ಶ್ರೀ ಕೃಷ್ಣ ದೇವಾಲಯ ಮತ್ತು ಗುರುವಾಯೂರಿನಲ್ಲಿರುವ ಕೃಷ್ಣ ದೇವಾಲಯ. ಈ ದೇವಾಲಯಗಳಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇದಕ್ಕಾಗಿ ದೇವಾಲಯವನ್ನು ಮೊದಲೇ ವಿಶೇಷವಾಗಿ ಅಲಂಕರಿಸಲಾಗುತ್ತದೆ.

ಇದನ್ನೂ ಓದಿ: Krishna janmastami: ಕೃಷ್ಣ ಜನ್ಮಾಷ್ಟಮಿಯ ಫೋಟೋಶೂಟ್‌‌ಗೆ ಇಲ್ಲಿದೆ 4 ಐಡಿಯಾ


ಇನ್ನು ಕೃಷ್ಣನ ನಗರಿ ಎಂದೇ ಖ್ಯಾತಿ ಪಡೆದಿರುವ ಉಡುಪಿಯಲ್ಲಿ ಈಗಾಗಲೇ ಅಷ್ಟಮಿಯ ವೈಭವ ಪ್ರಾರಂಭವಾಗಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಉಡುಪಿ ಕೃಷ್ಣನ ಆಲಯದ ಆವರಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಹುಲಿ ವೇಷ, ಕೃಷ್ಣ ವೇಷ ಸ್ಪರ್ಧೆಯೊಂದಿಗೆ ವಿವಿಧ ಕಾರ್ಯಕ್ರಮಗಳು ರಥಬೀದಿಯಲ್ಲಿ ಪ್ರದರ್ಶನಗೊಳ್ಳಲು ವೇದಿಕೆ ಸಿದ್ಧವಾಗುತ್ತಿದೆ. ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ದೂರದೂರಿನಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಉಡುಪಿಗೆ ಆಗಮಿಸುತ್ತಿದ್ದು, ರಾಜಾಂಗಣದಲ್ಲಿ ನಿತ್ಯ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.


ಅಷ್ಟಮಿ ಪ್ರಸಾದವಾಗಿ ಹಂಚುವ ಕಾರ್ಯಕ್ಕೆ ಲಕ್ಷಾಂತರ ಉಂಡೆ, ಚಕ್ಕುಲಿಗಳ ತಯಾರಿಯೂ ನಡೆಯುತ್ತಿದೆ. ಅಷ್ಟಮಿಯಂದು ನಡುರಾತ್ರಿ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಲಾಗುತ್ತದೆ. ಅರಳು, ನೆಲಗಡಲೆ, ಗುಂಡಿಟ್ಟು, ಕಡಲೆ, ಎಳ್ಳು, ಗೋಧಿ, ಗೇರು, ಶುಂಠಿ, ಹೆಸರು ಹಿಟ್ಟಿನಿಂದ ಮಾಡಿದ ಉಂಡೆ, ಚಕ್ಕುಲಿಯನ್ನು ದೇವರಿಗೆ ನೈವೇದ್ಯವಾಗಿ ಅರ್ಪಿಸಿ ಮರುದಿನ ಭಕ್ತರಿಗೆ ಪ್ರಸಾದವಾಗಿ ನೀಡಲಾಗುತ್ತದೆ.

Continue Reading

ಆಹಾರ/ಅಡುಗೆ

Krishna janmastami 2024: ಕೃಷ್ಣ ಜನ್ಮಾಷ್ಟಮಿಗೆ ಏನೆಲ್ಲ ಸಿಹಿ ತಿನಿಸು ತಯಾರಿಸಬಹುದು? ಇಲ್ಲಿದೆ ಟಿಪ್ಸ್‌

ನಾಲಿಗೆಯ ರುಚಿಯನ್ನು ತೃಪ್ತಿಪಡಿಸುವ, ಜೊತೆಗೆ ಆರೋಗ್ಯವನ್ನೂ ಕಾಪಾಡುವ ಕೆಲವು ಪೌಷ್ಟಿಕ ಖಾದ್ಯಗಳ ಕುರಿತು ಮಾಹಿತಿ ಇಲ್ಲಿದೆ. ಈ ಬಾರಿ ಜನ್ಮಾಷ್ಟಮಿಯಲ್ಲಿ (Krishna janmastami 2024) ಇದನ್ನು ಮಾಡಿ ದೇವರಿಗೂ ನೈವೇದ್ಯ ಮಾಡಬಹುದು. ಆರೋಗ್ಯದ ಬಗ್ಗೆ ಹೆಚ್ಚು ಚಿಂತೆ ಮಾಡದೇ ನೀವು ಧಾರಾಳವಾಗಿ ಮೆಲ್ಲಬಹುದು, ಅತಿಥಿಗಳಿಗೂ ನೀಡಬಹುದು.

VISTARANEWS.COM


on

By

Krishna janmastami 2024
Koo

ಕೃಷ್ಣ ಜನ್ಮಾಷ್ಟಮಿ (Krishna janmastami 2024) ಎಂದರೆ ದೇವರಿಗೆ ನೈವೇದ್ಯ ಮಾಡಲು, ಬಂದಂಥ ಅತಿಥಿಗಳನ್ನು ಸತ್ಕರಿಸಲು ಮನೆಯಲ್ಲಿ ಬಗೆಬಗೆಯ ಖಾದ್ಯ, ಸಿಹಿ ತಿಂಡಿಗಳನ್ನು (sweets) ಮಾಡಲೇಬೇಕು. ಹಾಗಂತ ಹಬ್ಬದ ಸಂದರ್ಭದಲ್ಲಿ ಆರೋಗ್ಯವನ್ನೂ ಕಡೆಗಣಿಸುವಂತಿಲ್ಲ. ಹೀಗಾಗಿ ಈ ಬಾರಿ ಜನ್ಮಾಷ್ಟಮಿಯಲ್ಲಿ (janmastami) ಸಿಹಿ ಜೊತೆಗೆ ಆರೋಗ್ಯಕರವಾದ (Healthy Sweets) ಖಾದ್ಯಗಳನ್ನು ಮನೆಯಲ್ಲೇ ಮಾಡಲು ಟ್ರೈ ಮಾಡಿನೋಡಬಹುದು.

ನಾಲಿಗೆಯ ರುಚಿಯನ್ನು ತೃಪ್ತಿ ಪಡಿಸುವ, ಜೊತೆಗೆ ಆರೋಗ್ಯವನ್ನೂ ಕಾಪಾಡುವ ಕೆಲವು ಪೌಷ್ಟಿಕ ಖಾದ್ಯಗಳ ಕುರಿತು ಮಾಹಿತಿ ಇಲ್ಲಿದೆ. ಈ ಬಾರಿ ಜನ್ಮಾಷ್ಟಮಿಯಲ್ಲಿ ಇದನ್ನು ಮಾಡಿ ದೇವರಿಗೂ ನೈವೇದ್ಯ ಮಾಡಬಹುದು. ಆರೋಗ್ಯದ ಬಗ್ಗೆ ಹೆಚ್ಚು ಚಿಂತೆ ಮಾಡದೇ ನೀವು ಮೆಲ್ಲಬಹುದು, ಅತಿಥಿಗಳಿಗೂ ನೀಡಬಹುದು.


ಖರ್ಜೂರ ಮತ್ತು ಒಣ ಹಣ್ಣಿನ ಲಡ್ಡು

ಖರ್ಜೂರದ ನೈಸರ್ಗಿಕ ಮಾಧುರ್ಯವನ್ನು ವಿವಿಧ ಒಣ ಹಣ್ಣುಗಳೊಂದಿಗೆ ಸವಿಯಬಹುದು. ಖರ್ಜೂರದ ಬೀಜಗಳನ್ನು ತೆಗೆದು ಹಾಲಿನಲ್ಲಿ ಎರಡು ಗಂಟೆಗಳ ಕಾಲ ನೆನೆಸಿ ಇಡಿ. ಬಾದಾಮಿ, ಗೋಡಂಬಿ ಮತ್ತು ಪಿಸ್ತಾಗಳಂತಹ ಬೀಜಗಳನ್ನು ಖರ್ಜೂರದೊಂದಿಗೆ ಸೇರಿಸಿ ಮಿಶ್ರಣವನ್ನು ಸಣ್ಣ ಉಂಡೆಗಳಾಗಿ ಮಾಡಿ ಫ್ರಿಜ್‌ನಲ್ಲಿ ಇಡಿ. ಜನ್ಮಾಷ್ಟಮಿಗೆ ಪರಿಪೂರ್ಣವಾದ ಆರೋಗ್ಯಕರ, ಶಕ್ತಿ-ಉತ್ತೇಜಿಸುವ ಲಡ್ಡು ಇದಾಗಿದೆ.

Krishna janmashtami
Krishna janmashtami


ಸೀಡ್ಸ್ ಲಡ್ಡು

ಚಿಯಾ, ಫ್ಲಾಕ್ಸ್ ಮತ್ತು ಸೂರ್ಯಕಾಂತಿಗಳಂತಹ ಬೀಜಗಳ ಮಿಶ್ರಣವನ್ನು ಲಘುವಾಗಿ ಹುರಿದು ಪುಡಿ ಮಾಡಿ. ಬೀಜದ ಪುಡಿಯನ್ನು ಜೇನುತುಪ್ಪದೊಂದಿಗೆ ಸೇರಿಸಿ ಲಡ್ಡು ಮಾಡಿ. ಪೋಷಕಾಂಶಗಳಿರುವ ಈ ಲಡ್ಡಿನಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಫೈಬರ್‌ ಸಮೃದ್ಧವಾಗಿವೆ.

Krishna janmashtami
Krishna janmashtami


ಫ್ರೂಟ್ ಸಲಾಡ್

ಬಾಳೆಹಣ್ಣು, ಸೇಬು, ದ್ರಾಕ್ಷಿ ಮತ್ತು ದಾಳಿಂಬೆಗಳಂತಹ ತಾಜಾ ಹಣ್ಣುಗಳನ್ನು ಕತ್ತರಿಸಿ ಹಾಲಿನ ಕೆನೆಯೊಂದಿಗೆ ಸೇರಿಸಿ. ಜೇನುತುಪ್ಪ ಬೆರೆಸಿ ಸಿಹಿಗೊಳಿಸಿ. ಈ ತಿಳಿ ಮತ್ತು ಕೆನೆ ಖಾದ್ಯವು ರುಚಿಕರವಾದದ್ದು ಮಾತ್ರವಲ್ಲದೆ ಅಗತ್ಯವಾದ ಜೀವಸತ್ವ, ಖನಿಜಾಂಶಗಳನ್ನು ಹೊಂದಿದೆ.


ಡ್ರೈ ಫ್ರೂಟ್ ಚಿಕ್ಕಿ

ಒಣ ಹಣ್ಣುಗಳಾದ ಶೇಂಗಾ, ಬಾದಾಮಿ ಮತ್ತು ಎಳ್ಳನ್ನು ಬೆಲ್ಲದೊಂದಿಗೆ ಹುರಿದು ಬೆರೆಸಿ ಡ್ರೈಫ್ರೂಟ್ ಚಿಕ್ಕಿ ತಯಾರಿಸಿ. ಮಿಶ್ರಣವನ್ನು ತುಪ್ಪ ಹಚ್ಚಿದ ಟ್ರೇಗೆ ಸುರಿಯಿರಿ. ಅದನ್ನು ತಣ್ಣಗಾಗಲು ಬಿಡಿ, ತದನಂತರ ತುಂಡುಗಳಾಗಿ ಕತ್ತರಿಸಿ. ಇದು ಪ್ರೋಟೀನ್ ಮತ್ತು ಆರೋಗ್ಯಕರ ಕೊಬ್ಬಿನ ಉತ್ತಮ ಮೂಲವಾಗಿದೆ.

ಇದನ್ನೂ ಓದಿ: Health Tips Kannada: ಮಾರಕ ರೋಗಗಳನ್ನು ದೂರ ಇರಿಸುತ್ತದೆ ಬೂದುಗುಂಬಳದ ರಸ!


ಡ್ರೈಫ್ರೂಟ್ ಲಡ್ಡು

ವಾಲ್‌ನಟ್ಸ್, ಬಾದಾಮಿ, ಗೋಡಂಬಿ ಮತ್ತು ಖರ್ಜೂರದಂತಹ ಒಣ ಹಣ್ಣುಗಳನ್ನು ಬ್ಲೆಂಡರ್‌ನಲ್ಲಿ ಮಿಶ್ರಣ ಮಾಡಿ. ಮಿಶ್ರಣಕ್ಕೆ ಜೇನುತುಪ್ಪವನ್ನು ಸೇರಿಸಿ ಮತ್ತು ಚೆನ್ನಾಗಿ ಮಿಶ್ರಣ ಮಾಡಿ. ಸಣ್ಣ ಉಂಡೆಗಳಾಗಿ ಆಕಾರ ಮಾಡಿ ಮತ್ತು ತಣ್ಣಗಾಗಿಸಿ. ಸಣ್ಣ ಸಣ್ಣ ಉಂಡೆಗಳಾಗಿ ಮಾಡಿ. ಅತ್ಯಧಿಕ ಪೋಷಕಾಂಶಗಳನ್ನು ಹೊಂದಿರುವ ಇದು ನೈಸರ್ಗಿಕ ಸಿಹಿಯನ್ನು ನೀಡುತ್ತದೆ.

Continue Reading
Advertisement
Kannada New Movie
ಬೆಂಗಳೂರು22 mins ago

Kannada New Movie: ಪೃಥ್ವಿ ಅಂಬಾರ್, ಪ್ರಮೋದ್ ಅಭಿನಯದ ‘ಭುವನಂ ಗಗನಂ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್‌

Ranjani Raghavan
ಸಿನಿಮಾ39 mins ago

Ranjani Raghavan: ಹಸೆಮಣೆ ಏರಲು ಸಜ್ಜಾದ ನಟಿ ರಂಜನಿ ರಾಘವನ್; ಇವ್ರೇ ನೋಡಿ ಅವ್ರ ಹುಡುಗ

DK Shivakumar
ಬೆಂಗಳೂರು1 hour ago

DK Shivakumar: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ; ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ: ಡಿ.ಕೆ. ಶಿವಕುಮಾರ್‌

Prajwal Revannas anticipatory bail plea adjourned to September 5
ಹಾಸನ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್‌; ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ

Actor Darshan
ಸಿನಿಮಾ2 hours ago

Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

Physical Abuse
ಉಡುಪಿ3 hours ago

Physical Abuse : ರೈಲಿನಲ್ಲಿ ಯುವತಿ ಮೇಲೆ ಮಾನಭಂಗಕ್ಕೆ ಯತ್ನ! ಭಟ್ಕಳ ಮೂಲದ ಕಾಮುಕ ಅರೆಸ್ಟ್‌

Kangana Ranaut
ರಾಜಕೀಯ3 hours ago

Kangana Ranaut: ದೂರದೃಷ್ಟಿಯೇ ಇಲ್ಲದ ರಾಹುಲ್ ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ: ಕಂಗನಾ

attempt to murder case
ತುಮಕೂರು4 hours ago

Attempt To murder : ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ!

Deepfake Video
ವೈರಲ್ ನ್ಯೂಸ್4 hours ago

Deepfake Video: ಶುಬ್ ಮನ್ ಗಿಲ್ ಅನ್ನು ದೂಷಿಸಿದ ವಿರಾಟ್; ಡೀಪ್ ಫೇಕ್ ವಿಡಿಯೋ ವೈರಲ್

Road Accident
ಬೆಂಗಳೂರು4 hours ago

Road Accident : ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್‌ ಸವಾರನಿಗೆ ಲಾರಿ ಡಿಕ್ಕಿ; ಹೊರಬಂತು ಮೆದುಳು!

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Actor Darshan
ಸ್ಯಾಂಡಲ್ ವುಡ್5 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಟ್ರೆಂಡಿಂಗ್‌