ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಬಂದೂಕುಧಾರಿಗಳ ದಾಳಿ; ಕನಿಷ್ಠ 23 ಮಂದಿ ಸಾವು - Vistara News

ವಿದೇಶ

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಬಂದೂಕುಧಾರಿಗಳ ದಾಳಿ; ಕನಿಷ್ಠ 23 ಮಂದಿ ಸಾವು

Balochistan: ನೈಋತ್ಯ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೋಮವಾರ (ಆಗಸ್ಟ್‌ 26) ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ.

VISTARANEWS.COM


on

Balochistan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಸ್ಲಾಮಾಬಾದ್‌: ಪಾಕಿಸ್ತಾನ (Southwest Pakistan)ದ ಬಲೂಚಿಸ್ತಾನ (Balochistan)ದಲ್ಲಿ ಸೋಮವಾರ (ಆಗಸ್ಟ್‌ 26) ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ʼʼಬಲೂಚಿಸ್ತಾನ ಪ್ರಾಂತ್ಯದ ಮುಸಖೈಲ್ ಜಿಲ್ಲೆಯಲ್ಲಿ ಭಯೋತ್ಪಾದಕರು ಹಲವು ಬಸ್ಸುಗಳು, ಟ್ರಕ್‌ಗಳು ಮತ್ತು ವ್ಯಾನ್‌ಗಳನ್ನು ನಿಲ್ಲಿಸಿ ಅದರಲ್ಲಿನ ಪ್ರಯಾಣಿಕರ ಜನಾಂಗೀಯತೆಯನ್ನು ಪರಿಶೀಲಿಸಿದ ನಂತರ ಗುಂಡಿಕ್ಕಿ ಕೊಂದಿದ್ದಾರೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆʼʼ ಎಂದು ಮೂಲಗಳು ತಿಳಿಸಿವೆ.

“ಪಂಜಾಬ್ ಮತ್ತು ಬಲೂಚಿಸ್ತಾನವನ್ನು ಸಂಪರ್ಕಿಸುವ ಹೆದ್ದಾರಿಯಲ್ಲಿ ಭಯೋತ್ಪಾದಕರು ಹಲವು ಬಸ್ಸುಗಳು, ಟ್ರಕ್‌ಗಳು ಮತ್ತು ವ್ಯಾನ್‌ಗಳ ಮೇಲೆ ನಡೆಸಿದ ದಾಳಿಯಲ್ಲಿ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಐದು ಮಂದಿ ಗಾಯಗೊಂಡಿದ್ದಾರೆ” ಎಂದು ಮುಸಖೈಲ್‌ನ ಹಿರಿಯ ಅಧಿಕಾರಿ ನಜೀಬುಲ್ಲಾ ಕಾಕರ್ ಹೇಳಿದ್ದಾರೆ. ಮುಸಖೈಲ್‌ನ ರಾರಾಶಮ್ ಜಿಲ್ಲೆಯಲ್ಲಿ ಬಂದೂಕುಧಾರಿಗಳು ಹೆದ್ದಾರಿಯನ್ನು ತಡೆದು ವಾಹನಗಳಲ್ಲಿದ್ದ ಪ್ರಯಾಣಿಕರನ್ನು ಇಳಿಸಿ ದಾಳಿ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದು, ಈ ವೇಳೆ 10 ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಲೂಚ್ ಲಿಬರೇಶನ್ ಆರ್ಮಿಯ ಕೈವಾಡ?

ಜಿಲ್ಲೆಯ ಮತ್ತೊಬ್ಬ ಹಿರಿಯ ಅಧಿಕಾರಿ ಹಮೀದ್ ಜೆಹ್ರಿ ಮಾತನಾಡಿ ಘಟನೆಯ ಹಿಂದೆ ಬಲೂಚ್ ಲಿಬರೇಶನ್ ಆರ್ಮಿ (Baloch Liberation Army-BLA)ಯ ಕೈವಾಡ ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. “ಈ ಘಟನೆಯ ಹಿಂದೆ ಬಿಎಲ್ಎ ಭಯೋತ್ಪಾದಕರು ಇದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ” ಎಂದು ಅವರು ಹೇಳಿದ್ದಾರೆ. ಬಿಎಲ್ಎ ಈ ಪ್ರದೇಶದ ಅತ್ಯಂತ ಸಕ್ರಿಯ ಉಗ್ರಗಾಮಿ ಪ್ರತ್ಯೇಕತಾವಾದಿ ಗುಂಪು.

ಬಲೂಚಿಸ್ತಾನ ಮುಖ್ಯಮಂತ್ರಿ ಸರ್ಫರಾಜ್ ಬುಗ್ತಿ ಘಟನೆಯನ್ನು ಖಂಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಬಲೂಚಿಸ್ತಾನ ಸರ್ಕಾರವು ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.

ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ ಪ್ರತ್ಯೇಕತಾವಾದಿ ಗುಂಪು ಹೆದ್ದಾರಿಗಳಿಂದ ದೂರವಿರಲು ಜನರಿಗೆ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳ ನಂತರ ಈ ದಾಳಿ ನಡೆದಿದೆ. ಆದರೆ ಯಾವುದೇ ಗುಂಪು ಇದುವರೆಗೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಬಲೂಚಿಸ್ತಾನದ ಪ್ರತ್ಯೇಕತಾವಾದಿಗಳು ದೇಶದ ಪೂರ್ವ ಪಂಜಾಬ್ ಪ್ರದೇಶದ ಕಾರ್ಮಿಕರು ಮತ್ತು ಇತರರನ್ನು ಪ್ರಾಂತ್ಯವನ್ನು ತೊರೆಯುವಂತೆ ಒತ್ತಾಯಿಸಿ ದಾಳಿ ನಡೆಸುತ್ತಿವೆ.

ಇದನ್ನೂ ಓದಿ: Operation Dara-e-Bolan: 78 ಪಾಕಿಸ್ತಾನಿ ಸೈನಿಕರನ್ನು ಕೊಂದ ಬಲೂಚ್ ಲಿಬರೇಶನ್ ಆರ್ಮಿ

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಲೂಚಿಸ್ತಾನದ ಕೆಚ್ ಜಿಲ್ಲೆಯ ತುರ್ಬತ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳು ಪಂಜಾಬ್ ಮೂಲದ ಆರು ಕಾರ್ಮಿಕರನ್ನು ಗುಂಡಿಕ್ಕಿ ಕೊಂದಿದ್ದರು. ಮೃತರು ದಕ್ಷಿಣ ಪಂಜಾಬ್‌ನ ವಿವಿಧ ಪ್ರದೇಶಗಳಿಗೆ ಸೇರಿದವರಾಗಿದ್ದು, ಅವರ ಜನಾಂಗೀಯ ಹಿನ್ನೆಲೆಯೇ ಹತ್ಯೆಗೆ ಕಾರಣ ಎನ್ನಲಾಗಿದೆ. 2015ರಲ್ಲಿ ತುರ್ಬತ್ ಬಳಿಯ ಕಾರ್ಮಿಕರ ಶಿಬಿರದ ಮೇಲೆ ಬಂದೂಕುಧಾರಿಗಳು ನಡೆಸಿದ ದಾಳಿಯಲ್ಲಿ 20 ಕಾರ್ಮಿಕರು ಸಾವನ್ನಪ್ಪಿದ್ದರು. ಮೃತರು ಸಿಂಧ್ ಮತ್ತು ಪಂಜಾಬ್ ಮೂಲದವರಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Google Map: ಗೂಗಲ್ ಮ್ಯಾಪ್‌‌ನಲ್ಲಿ ಕೇಳುವ ಧ್ವನಿ ಯಾರದಿರಬಹುದೆಂದು ಎಂದಾದರೂ ಯೋಚಿಸಿದ್ದೀರಾ?

ಗೂಗಲ್ ಮ್ಯಾಪ್ (Google Map) ಮೂಲಕ ಪ್ರಪಂಚದಾದ್ಯಂತದ ಜನರಿಗೆ ಮಾರ್ಗದರ್ಶನ ನೀಡುತ್ತಿರುವುದು ಆಸ್ಟ್ರೇಲಿಯನ್ ಮಹಿಳೆ. ಇದಕ್ಕಾಗಿ ಅವರು 2002ರಲ್ಲಿ 50 ಗಂಟೆಗಳ ಆಡಿಯೋ ರೆಕಾರ್ಡ್ ಮಾಡಿದ್ದರು. ಅವರ ಉಚ್ಛಾರಣೆ ಸ್ಪಷ್ಟವಾಗಿದೆ ಮತ್ತು ಕೇಳಲು ಹಿತಕರವಾಗಿದೆ ಎಂದು ಗೂಗಲ್ ಅವರನ್ನು ಆಯ್ಕೆ ಮಾಡಿತು. ಆ ಮಹಿಳೆ ಯಾರು, ಅವರು ಬೆಳೆದು ಬಂದ ಹಾದಿ ಹೇಗಿತ್ತು ಎನ್ನುವ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Google Map
Koo

ಬಹುತೇಕ ಮಂದಿ ಇಂದು ಗೂಗಲ್ ಮ್ಯಾಪ್ (Google Map) ಬಳಸುತ್ತಿದ್ದಾರೆ. ಇದರಲ್ಲಿ ಕೇಳುವ ಧ್ವನಿಯನ್ನು ಆಲಿಸಿ ತಮಗೆ ಬೇಕಾದ ಸ್ಥಾನವನ್ನು ತಲುಪುತ್ತಿದ್ದಾರೆ. ಈ ಧ್ವನಿ ಆಸ್ಟ್ರೇಲಿಯಾದ ಮಹಿಳೆಯೊಬ್ಬರದ್ದು (Australian woman). ತಮ್ಮ ಧ್ವನಿಯಿಂದಲೇ (voice) ಇಂದು ಪ್ರಪಂಚದಾದ್ಯಂತದ ಜನರನ್ನು ತಲುಪಿದ್ದಾರೆ ಆಸ್ಟ್ರೇಲಿಯಾದ ಕರೆನ್ ಜಾಕೋಬ್ಸೆನ್.

ಅಂತಾರಾಷ್ಟ್ರೀಯ ಕನ್ಸರ್ಟ್ ಕಲಾವಿದ, ಗೀತರಚನೆಕಾರ ಮತ್ತು ವೃತ್ತಿಪರ ಧ್ವನಿ ನೀಡುವ ಕಲಾವಿದೆ ಕರೆನ್ ಜಾಕೋಬ್ಸೆನ್ ಅವರು ಜಿಪಿಎಸ್ ಗಾಗಿ ಧ್ವನಿ ನೀಡಿದ ಬಳಿಕ ಪ್ರಪಂಚದಾದ್ಯಂತ ಮನೆ ಮಾತಾದರು. ಅವರ ಧ್ವನಿಯು ವಿಶಿಷ್ಟವಾದ ಪಾಪ್ ಸಂಸ್ಕೃತಿಯ ಸ್ಥಾನಮಾನಕ್ಕೆ ಕಾರಣವಾಯಿತು.

ವಿಶ್ವದಾದ್ಯಂತ ಒಂದು ಬಿಲಿಯನ್ ಜಿಪಿಎಸ್ ಮತ್ತು ಸ್ಮಾರ್ಟ್‌ಫೋನ್ ಸಾಧನಗಳಲ್ಲಿ, ‘ಸಿರಿ’ಯ ಮೂಲ ಆಸ್ಸೀ (Aussie) ಧ್ವನಿಯನ್ನು ಒಳಗೊಂಡಂತೆ ಅವರು ಎಲ್ಲಿಗೆ ಹೋಗಬೇಕು,ಪ್ರತಿದಿನ ಏನು ಮಾಡಬೇಕೆಂದು ನಮಗೆ ತಿಳಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.

Google Map
Google Map


ಭವಿಷ್ಯದ ಕನಸು ಕಂಡ ಏಳು ವರ್ಷದ ಬಾಲಕಿ

1970ರ ದಶಕದ ಅಂತ್ಯದ ವೇಳೆಗೆ ಏಳು ವರ್ಷದ ಕರೆನ್ ಜಾಕೋಬ್ಸೆನ್ ದೂರದರ್ಶನದಲ್ಲಿ ಒಲಿವಿಯಾ ನ್ಯೂಟನ್ ಜಾನ್ ಅವರನ್ನು ನೋಡಿ ಮುಂದೆ ತಾನು ಜೀವನದಲ್ಲಿ ಏನು ಮಾಡಬೇಕು ಎಂದು ನಿರ್ಧರಿಸಿದರು. ವೃತ್ತಿಪರ ಗಾಯಕನಾಗಲು ಅಮೆರಿಕಕ್ಕೆ ತೆರಳಿದರು.

ಬ್ರಿಸ್ಬೇನ್‌ನಲ್ಲಿ ವೃತ್ತಿಜೀವನ ಪ್ರಾರಂಭ

ಕರೆನ್ ಬ್ರಿಸ್ಬೇನ್‌ನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಪ್ರಶಸ್ತಿ ವಿಜೇತ ಗಾಯಕರು, ಗೀತರಚನೆಕಾರರೊಂದಿಗೆ ವೇದಿಕೆ ಹಂಚಿಕೊಂಡ ಜಾಕೋಬ್ಸೆನ್ ಪ್ರಮುಖ ಕ್ರೀಡಾಕೂಟಗಳಲ್ಲಿ ರಾಷ್ಟ್ರಗೀತೆ ಪ್ರದರ್ಶನಗಳನ್ನು ನೀಡಿದರು.

ಎಲ್ಲವನ್ನೂ ಬದಲಾಯಿಸಿದ ಕರೆ

ನ್ಯೂಯಾರ್ಕ್ ನಗರದಲ್ಲಿ ಕರೆನ್ ತಮ್ಮ ಧ್ವನಿಯಿಂದ ಧ್ವನಿ ವ್ಯವಸ್ಥೆಗೆ ಪಠ್ಯವನ್ನು ರೆಕಾರ್ಡ್ ಮಾಡಲು ಆಡಿಷನ್ ಮಾಡಿದರು. ಅದು ತಮ್ಮನ್ನು ಜಗತ್ತಿನ ಮೂಲೆ ಮೂಲೆಗೆ ಕೊಂಡೊಯ್ಯುತ್ತದೆ ಎಂಬುದನ್ನು ಅವರು ಊಹಿಸಿರಲಿಲ್ಲ.
ಕರೆನ್ ಮೊದಲ ಬಾರಿಗೆ 2002ರಲ್ಲಿ ಜಿಪಿಎಸ್ ಗಾಗಿ 50 ಗಂಟೆಗಳ ಆಡಿಯೋ ರೆಕಾರ್ಡ್ ಮಾಡಿದರು. ತಮ್ಮ ಆಸ್ಟ್ರೇಲಿಯನ್ ಉಚ್ಛಾರಣೆ ಸ್ಪಷ್ಟ ವಾಗಿದೆ ಮತ್ತು ಕೇಳಲು ಆರಾಮದಾಯಕವಾಗಿದೆ ಎಂದು ಗೂಗಲ್ ಅವರನ್ನು ಆಯ್ಕೆ ಮಾಡಿತು.

ಆ ಒಂದು ವಾಯ್ಸ್-ಓವರ್ ಬುಕಿಂಗ್‌ನಿಂದ ಅವರು ಸಬಲೀಕರಣ ಬ್ರ್ಯಾಂಡ್ ಜಿಪಿಎಸ್ ಗರ್ಲ್ ಅನ್ನು ರಚಿಸಿದರು. ಜೀವನ ಮತ್ತು ವ್ಯವಹಾರಕ್ಕೆ ನಿರ್ದೇಶನ ನೀಡುವ, ಮರು ಲೆಕ್ಕಾಚಾರ ಪ್ರಕ್ರಿಯೆಗಾಗಿ ಐದು ದಿಕ್ಕುಗಳೊಂದಿಗೆ ಬದಲಾವಣೆಯನ್ನು ಶಕ್ತಿಯುತವಾಗಿ ನ್ಯಾವಿಗೇಟ್ ಮಾಡುವುದು ಹೇಗೆ ಎಂಬುದನ್ನು ತೋರಿಸುತ್ತಾರೆ.


ಎರಡು ಆಲ್ಬಮ್‌ ಬಿಡುಗಡೆ

ಕರೆನ್ ತಮ್ಮದೇ ಸ್ವಂತ ಬ್ಯಾನರ್ ನಡಿ 2024 ರಲ್ಲಿ ಎರಡು ಆಲ್ಬಮ್‌ಗಳೊಂದಿಗೆ 12 ರೆಕಾರ್ಡ್‌ಗಳನ್ನು ಬಿಡುಗಡೆ ಮಾಡಿದ್ದಾರೆ. ಅವರ ಹಾಡುಗಳನ್ನು ಯುಎಸ್ ನೆಟ್‌ವರ್ಕ್ ಟೆಲಿವಿಷನ್‌ಗೆ ಪರವಾನಗಿ ನೀಡಲಾಗಿದೆ.

2023ರಲ್ಲಿ ಮಿಸೋಜಿನಿ ಓಪಸ್ ಪಾಪ್ ಆರ್ಕೆಸ್ಟ್ರಾದಲ್ಲಿ ಕರೆನ್‌ ಏಕವ್ಯಕ್ತಿ ವಾದಕರಾಗಿ ಕ್ವೀನ್ಸ್‌ಲ್ಯಾಂಡ್ ಸಿಂಫನಿ ಆರ್ಕೆಸ್ಟ್ರಾದ ಸಂಗೀತಗಾರರೊಂದಿಗೆ ಸಹ-ಕಮಿಷನಿಂಗ್ ಪಾಲುದಾರ ಎಂಇಸಿಸಿಯ ಆಡಿಟೋರಿಯಂನಲ್ಲಿ ಪ್ರದರ್ಶಿಸಿದರು.

ಕರೆನ್ ಅವರು ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಜೂಲಿಯಾ ಗಿಲ್ಲಾರ್ಡ್ ಅವರ ಸಾಂಪ್ರದಾಯಿಕ ಸ್ತ್ರೀದ್ವೇಷದ ಭಾಷಣವನ್ನು ಪದವನ್ನು ವಿಭಿನ್ನ ಸಂಗೀತ ಶೈಲಿಗಳಲ್ಲಿ 18 ಚಲನೆಗಳಲ್ಲಿ ಹೊಂದಿಸಿದ್ದಾರೆ. ಇದನ್ನು ವುಡ್‌ಫೋರ್ಡ್ ಫೋಕ್ ಫೆಸ್ಟಿವಲ್‌ನಲ್ಲಿ ಪ್ರದರ್ಶಿಸಲಾಯಿತು ಮತ್ತು ಆಸ್ಟ್ರೇಲಿಯನ್ ಇಂಡಿಪೆಂಡೆಂಟ್ ರೆಕಾರ್ಡ್ (AIR) ಅವಾರ್ಡ್ಸ್ 2024 ರಲ್ಲಿ ಅತ್ಯುತ್ತಮ ಸ್ವತಂತ್ರ ಶಾಸ್ತ್ರೀಯ ಆಲ್ಬಮ್‌ಗೆ ನಾಮನಿರ್ದೇಶನಗೊಂಡ ಪೂರ್ಣ ಉದ್ದದ ಪರಿಕಲ್ಪನೆಯ ಆಲ್ಬಂ ಆಗಿ ಬಿಡುಗಡೆಯಾಯಿತು.

ಹಲವಾರು ಕಾರ್ಯಕ್ರಮಗಳಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿರುವ ಅವರು ಎರಡು ಜರ್ನಲ್ ಶೈಲಿಯ ಪುಸ್ತಕಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಅನಾಥಾಶ್ರಮದ ಹುಡುಗಿಯು ಅಮೇರಿಕನ್ ಕಂಪೆನಿಯ ಸಿಇಒ ಆದ ಕಥೆ

2022 ರಿಂದ ವಿಟ್ಸಂಡೆಸ್ ಸಾಂಗ್ ರೈಟರ್ ಫೆಸ್ಟಿವಲ್‌ನ ಸಂಸ್ಥಾಪಕರಾಗಿರುವ ಕರೆನ್ ಸದ್ಯ ಈ ಪ್ರದೇಶದಲ್ಲಿ ಕಲೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವಲ್ಲಿ ಸಕ್ರಿಯರಾಗಿದ್ದಾರೆ. ಇದು ಮುಂದಿನ ಪೀಳಿಗೆಯ ಗೀತರಚನೆಕಾರರಿಗೆ ಅವಕಾಶಗಳನ್ನು ಒದಗಿಸುವ ವಾರ್ಷಿಕ ಉತ್ಸವವನ್ನು ಏರ್ಪಡಿಸುವ ಯೋಜನೆಯನ್ನು ಹೊಂದಿದೆ.

Continue Reading

ವಿದೇಶ

Lenovo Company: ಹೊಟೇಲ್ ಲಾಬಿಯಲ್ಲಿ ಮೂತ್ರ ವಿಸರ್ಜನೆ ಮಾಡಿದ ಸೇಲ್ಸ್ ಮ್ಯಾನ್ ವಜಾ! ದಾವೆ ಹೂಡಿದ ನೌಕರ!

ಲೆನೆವೊ ಕಂಪ್ಯೂಟರ್ ಮಾರಾಟಗಾರನೊಬ್ಬ (Lenovo Company) ಟೈಮ್ಸ್ ಸ್ಕ್ವೇರ್ ಹೊಟೇಲ್ ಲಾಬಿಯಲ್ಲಿ ಮೂತ್ರ ಮಾಡಿದ್ದಾನೆ ಎಂಬ ದೂರಿನ ಮೇರೆಗೆ ಕಂಪನಿ ಆತನನ್ನು ಕೆಲಸದಿಂದ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ನ್ಯೂಯಾರ್ಕ್ ಸ್ಟೇಟ್ ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಸಲ್ಲಿಸಿದ ಮೊಕದ್ದಮೆಯ ಪ್ರಕಾರ 66 ವರ್ಷದ ರಿಚರ್ಡ್ ಬೆಕರ್ ಎಂಬವರು ಕಂಪೆನಿಯಿಂದ ಕನಿಷ್ಠ 1.5 ಮಿಲಿಯನ್‌ ಡಾಲರ್ ಪರಿಹಾರ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

VISTARANEWS.COM


on

By

Lenovo Company
Koo

ನ್ಯೂಯಾರ್ಕ್: ಹೊಟೇಲ್ ಲಾಬಿಯಲ್ಲಿ (Hotel Lobby) ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ಸೇಲ್ಸ್‌ಮ್ಯಾನ್ ಹುದ್ದೆಯಿಂದ ವಜಾಗೊಳಿಸಿದ ಚೀನಾದ (china) ಕಂಪ್ಯೂಟರ್ ದೈತ್ಯ, ಅಮೆರಿಕನ್ (America) ಅಂಗಸಂಸ್ಥೆಯಾದ ಲೆನೊವೊ ಕಂಪನಿ (Lenovo Company) ವಿರುದ್ಧ 1.5 ಮಿಲಿಯನ್ ಡಾಲರ್ ಪರಿಹಾರಕ್ಕೆ ಒತ್ತಾಯಿಸಿ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ.

ಲೆನೊವೊ ಕಂಪ್ಯೂಟರ್ ಮಾರಾಟಗಾರರೊಬ್ಬರು ಟೈಮ್ಸ್ ಸ್ಕ್ವೇರ್ ಹೊಟೇಲ್ ಲಾಬಿಯಲ್ಲಿ ಮೂತ್ರ ಮಾಡಿದ್ದಾನೆ ಎಂಬ ದೂರಿನ ಮೇರೆಗೆ ಕಂಪೆನಿ ಆತನನ್ನು ಕೆಲಸದಿಂದ ವಜಾಗೊಳಿಸಿದೆ. ನ್ಯೂಯಾರ್ಕ್ ಸ್ಟೇಟ್ ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಸಲ್ಲಿಸಿದ ಮೊಕದ್ದಮೆಯ ಪ್ರಕಾರ 66 ವರ್ಷದ ರಿಚರ್ಡ್ ಬೆಕರ್ ಎಂಬವರು ಕನಿಷ್ಠ 1.5 ಮಿಲಿಯನ್‌ ಡಾಲರ್ ಪರಿಹಾರ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಕಂಪನಿಯು ನ್ಯೂಯಾರ್ಕ್ ನಗರದ ಮಾನವ ಹಕ್ಕುಗಳ ಕಾನೂನುಗಳನ್ನು ಉಲ್ಲಂಘಿಸಿ ಅಂಗವೈಕಲ್ಯದ ಆಧಾರದ ಮೇಲೆ ತಾರತಮ್ಯವನ್ನು ಮಾಡಿದೆ ಎಂದು ಅವರು ಆರೋಪಿಸಿದ್ದಾರೆ. ಮೊಕದ್ದಮೆಯ ಪ್ರಕಾರ, ಬೆಕರ್ ಫೆಬ್ರವರಿಯಲ್ಲಿ ಕೆಲಸದ ನಡುವೆ ಭೋಜನದ ಬಳಿಕ ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್‌ನ ಬಳಿಯ ತನ್ನ ಹೊಟೇಲ್ ಗೆ ಹಿಂದಿರುಗುತ್ತಿದ್ದಾಗ ಅವರು ಅನಿವಾರ್ಯ ಕಾರಣದಿಂದ ಮುಖ್ಯ ಲಾಬಿಯಿಂದ ಪ್ರತ್ಯೇಕ ಮಹಡಿಯಲ್ಲಿರುವ ವೆಸ್ಟಿಬುಲ್‌ನಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾರೆ.


ಸಹೋದ್ಯೋಗಿಯೊಬ್ಬರು ಬೆಕರ್ ಮೂತ್ರ ವಿಸರ್ಜಿಸುತ್ತಿರುವುದನ್ನು ಗಮನಿಸಿ ಸ್ಪಷ್ಟವಾದ ದ್ವೇಷ ಮತ್ತು ದುರುದ್ದೇಶದ ಕಾರಣದಿಂದ ಅವರ ವಿರುದ್ಧ ಕಂಪನಿಗೆ ದೂರು ನೀಡಿದ್ದಾರೆ. ಅವರ ನಡವಳಿಕೆಯು ಯಾರಿಗೂ ಯಾವುದೇ ಹಾನಿಯನ್ನುಂಟು ಮಾಡದಿದ್ದರೂ ಸಹ ತಕ್ಷಣವೇ ಹೆಚ್ ಆರ್‌ಗೆ ದೂರು ನೀಡಿ ಕೆಲಸದಿಂದ ವಜಾಗೊಳ್ಳಲು ಕಾರಣವಾಗಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: IBM: ಐಬಿಎಂನಲ್ಲಿ ಮತ್ತೊಂದು ಸುತ್ತಿನ ಉದ್ಯೋಗ ಕಡಿತ; ಚೀನಾದ ಕಚೇರಿ ಬೆಂಗಳೂರಿಗೆ ಸ್ಥಳಾಂತರ

ಬೆಕರ್ ಅವರು 2016ರಿಂದ ದೀರ್ಘಕಾಲದ ಮೂತ್ರಕೋಶದ ತೊಂದರೆಯನ್ನು ಎದುರಿಸುತ್ತಿದ್ದಾರೆ. ಮೂತ್ರಶಾಸ್ತ್ರಜ್ಞರ ಬಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲೆನೊವೊ ಸಹೋದ್ಯೋಗಿಗಳು ಮತ್ತು ವ್ಯವಸ್ಥಾಪಕರು ಅವರ ಸ್ಥಿತಿಯ ಬಗ್ಗೆ ತಿಳಿದಿದ್ದರು ಎಂದು ನ್ಯಾಯಾಲಯದಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಯಾವುದೇ ಸಹಾನುಭೂತಿ, ಕಾನೂನಿನ ಅನುಸರಣೆಯನ್ನು ಮಾಡದೆ ಘಟನೆಯ ಕೆಲವು ದಿನಗಳ ಬಳಿಕ ಕೆಲಸದಿಂದ ವಜಾಗೊಳಿಸಲಾಯಿತು. ಬಳಿಕ ತಾನು ನಿರುದ್ಯೋಗಿಯಾಗಿರುವುದಾಗಿ ಆತ ತಿಳಿಸಿದ್ದಾನೆ. ಈ ಬಗ್ಗೆ ಕಂಪೆನಿ ಮಾತ್ರ ಇದುವರೆಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

Continue Reading

ವಿದೇಶ

IBM: ಐಬಿಎಂನಲ್ಲಿ ಮತ್ತೊಂದು ಸುತ್ತಿನ ಉದ್ಯೋಗ ಕಡಿತ; ಚೀನಾದ ಕಚೇರಿ ಬೆಂಗಳೂರಿಗೆ ಸ್ಥಳಾಂತರ

IBM: ಅಮೆರಿಕ ಮೂಲದ ಐಟಿ ದಿಗ್ಗಜ ಸಂಸ್ಥೆ ಇಂಟರ್‌ನ್ಯಾಷನಲ್ ಬಿಸಿನೆಸ್ ಮಷಿನ್ಸ್ ಚೀನಾದ ಪ್ರಮುಖ ಸಂಶೋಧನಾ ವಿಭಾಗವನ್ನು ಮುಚ್ಚಲು ನಿರ್ಧರಿಸಿದೆ. ಇದರಿಂದ 1,000ಕ್ಕೂ ಮಂದಿ ತಮ್ಮ ಉದ್ಯೋಗಗಳನ್ನು ಕಳೆದುಕೊಳ್ಳಲಿದ್ದಾರೆ. ಕಂಪನಿಯು ಬೆಂಗಳೂರಿನಲ್ಲಿ ಕಚೇರಿ ತೆರೆಯಲಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

IBM
Koo

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕ ಮೂಲದ ಐಟಿ ದಿಗ್ಗಜ ಸಂಸ್ಥೆ ಇಂಟರ್‌ನ್ಯಾಷನಲ್ ಬಿಸಿನೆಸ್ ಮಷಿನ್ಸ್ (IBM) ಚೀನಾದ ಪ್ರಮುಖ ಸಂಶೋಧನಾ ವಿಭಾಗವನ್ನು ಮುಚ್ಚಲು ನಿರ್ಧರಿಸಿದೆ. ಇದರಿಂದ 1,000ಕ್ಕೂ ಮಂದಿ ತಮ್ಮ ಉದ್ಯೋಗಗಳನ್ನು ಕಳೆದುಕೊಳ್ಳಲಿದ್ದಾರೆ (Layoffs). ಕಂಪನಿಯು ಬೆಂಗಳೂರಿನಲ್ಲಿ ಕಚೇರಿ ತೆರೆಯಲಿದೆ ಎಂದು ಮೂಲಗಳು ತಿಳಿಸಿವೆ.

ಐಬಿಎಂ ಚೀನಾದಲ್ಲಿರುವ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ಟೆಸ್ಟಿಂಗ್‌ ಶಾಖೆಗಳನ್ನು ಮುಚ್ಚಲು ನಿರ್ಧರಿಸಿದೆ ಎಂದು ವರದಿಯೊಂದು ಹೇಳಿದೆ. ಆರ್ಥಿಕ ಕುಸಿತದ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಜತೆಗೆ ಚೀನಾ ಸ್ಥಳೀಯ ಕಂಪನಿಗಳ ಪರವಾಗಿದೆ ಎಂಬ ಆತಂಕದಿಂದಾಗಿ ವಿದೇಶಿ ಹೂಡಿಕೆ ಭಾಗಶಃ ನಿಧಾನಗೊಂಡಿರುವುದು ಕೂಡ ಕಚೇರಿ ಸ್ಥಳಾಂತರಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಕಚೇರಿ ತೆರೆಯುವ ಸಾಧ್ಯತೆ ಇದೆ. ವಿಶ್ವದ ಅತಿದೊಡ್ಡ ತಂತ್ರಜ್ಞಾನ ಸೇವೆಗಳ ಕಂಪನಿಯಾದ ಐಬಿಎಂ ಸದ್ಯ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಉದ್ಯೋಗ ಕಡಿತ

ಐಬಿಎಂ ಕೆಲವು ತಿಂಗಳ ಹಿಂದೆಯೂ ಉದ್ಯೋಗ ಕಡಿತಗೊಳಿಸಿತ್ತು. ಮಾರ್ಕೆಟಿಂಗ್ ಮತ್ತು ಸಂವಹನ ವಿಭಾಗದಲ್ಲಿ ಉದ್ಯೋಗ ಕಡಿತಗೊಂಡಿತ್ತು. ಐಬಿಎಂನ ಮುಖ್ಯ ಸಂವಹನ ಅಧಿಕಾರಿ ಜೊನಾಥನ್ ಅಡಾಶೆಕ್ ಅವರು ಇಲಾಖೆಯ ಉದ್ಯೋಗಿಗಳೊಂದಿಗೆ ನಡೆಸಿದ ಸಭೆಯಲ್ಲಿ ವಜಾಗೊಳಿಸುವ ನಿರ್ಧಾರವನ್ನು ಪ್ರಕಟಿಸಿದ್ದರು. ಐಬಿಎಂ 3,900 ಜನರನ್ನು ಕೆಲಸದಿಂದ ತೆಗೆಯಲಿರುವುದಾಗಿ ಜನವರಿಯಲ್ಲಿ ಹೇಳಿತ್ತು. ಈ ಕಾರ್ಯದಿಂದ ಸಂಸ್ಥೆಗೆ 400 ಮಿಲಿಯನ್ ಡಾಲರ್ (33,12,92,00,000 ರೂ.) ಹಣ ಉಳಿತಾಯವಾಗಿದೆ ಎಂದು ಅಂದಾಜಿಸಲಾಗಿದೆ. ಈ ಹಣವನ್ನು ಪುನಾರಚನೆ ಕಾರ್ಯಗಳಿಗೆ ಬಳಸಲಾಗುವುದು ಎಂದು ಅಂದು ಐಬಿಎಂನ ಚೀಫ್ ಫೈನಾನ್ಷಿಯಲ್ ಆಫೀಸರ್ ಜೇಮ್ಸ್ ಕೆವನಾಘ್ ತಿಳಿಸಿದ್ದರು.

2022ರಿಂದ ಈಚೆಗೆ ವಿವಿಧ ಟೆಕ್ ಕಂಪನಿಗಳ ಬಹಳಷ್ಟು ಉದ್ಯೋಗಿಗಳು ಉದ್ಯೋಗ ಕಳೆದುಕೊಂಡಿದ್ದಾರೆ. ಈ ವರ್ಷ 204 ಟೆಕ್ ಕಂಪನಿಗಳು ಉದ್ಯೋಗ ಕಡಿತದ ನಿರ್ಧಾರ ಕೈಗೊಂಡಿವೆ. ಇದರಿಂದ 49,978 ಮಂದಿ ಟೆಕ್ಕಿಗಳು ಕೆಲಸ ಕಳೆದುಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Lays off: 200 ಉದ್ಯೋಗಿಗಳ ಹಬ್ಬದ ಖುಷಿ ಕಿತ್ತುಕೊಂಡ ಎಲ್‌&ಟಿ ಟೆಕ್ನಾಲಜಿ ಸರ್ವೀಸ್!

Continue Reading

ದೇಶ

Sunita Williams: ಸುನೀತಾ ವಿಲಿಯಮ್ಸ್‌ ಇಲ್ಲದೆಯೇ ಭೂಮಿಗೆ ಹಿಂದಿರುಗಲಿದೆ ಸ್ಟಾರ್‌ಲೈನರ್ ನೌಕೆ- 1 ಶತಕೋಟಿ ಡಾಲರ್‌ ನಷ್ಟ

Sunita Williams: ಇತ್ತೀಚಿನ ಬೆಳವಣಿಗೆಯು ಬೋಯಿಂಗ್‌ನ ಸಂಕಟವನ್ನು ಹೆಚ್ಚಿಸಿದೆ. ಹೀಗಾಗಿ ಇದು ಖಾಲಿಯಾಗಿ ಹಿಂದಿರುಗುತ್ತಿದ್ದು, ಇದರ ಅಂದಾಜು ನಷ್ಟವು 1 ಬಿಲಿಯನ್ ಡಾಲರ್ ಮೀರಿದೆ ಎಂದು CNBC ವರದಿ ಮಾಡಿದೆ. ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಈಗ ಐಎಸ್‌ಎಸ್‌ನಲ್ಲಿ ಆರು ತಿಂಗಳ ವಿಸ್ತೃತ ವಾಸ್ತವ್ಯದ ನಂತರ ಫೆಬ್ರವರಿ 2025 ರಲ್ಲಿ ಎಲೋನ್ ಮಸ್ಕ್‌ನ ಸ್ಪೇಸ್‌ಎಕ್ಸ್‌ನ ಕ್ರ್ಯೂ-9 ವಾಹನದಲ್ಲಿ ಹಿಂತಿರುಗುತ್ತಾರೆ. ಸ್ಟಾರ್‌ಲೈನರ್‌ನ ಥ್ರಸ್ಟರ್‌ಗಳೊಂದಿಗಿನ ಸಮಸ್ಯೆಗಳಿಂದಾಗಿ ಮೂಲ ಒಂಬತ್ತು ದಿನಗಳ ಪರೀಕ್ಷಾ ಹಾರಾಟವು ವಿಳಂಬವಾಗಿದೆ.

VISTARANEWS.COM


on

Sunita Williams
Koo

ವಾಷಿಂಗ್ಟನ್‌: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಆದರೆ, ಸುನೀತಾ ವಿಲಿಯಮ್ಸ್‌ ಹಾಗೂ ಮತ್ತೊಬ್ಬ ಗಗನಯಾತ್ರಿ ಬುಚ್ ವಿಲ್ಮೋರ್ (Butch Wilmore) ತಾಂತ್ರಿಕ ದೋಷದಿಂದಾಗಿ ಬಾಹ್ಯಕಾಶದಲ್ಲೇ ಸಿಲುಕಿರುವ ವಿಚಾರ ಎಲ್ಲರಿಗೂ ತಿಳಿದೇ ಇದೆ. ಇದೀಗ ಈ ಬಗ್ಗೆ ಅಮೆರಿಕದ ಬಾಹ್ಯಾಕಾಶ ಸಂಸ್ಥೆ(NASA) ಮಹತ್ವದ ಸುದ್ದಿಯೊಂದನ್ನು ಹೊರಹಾಕಿದ್ದು, ಈ ಇಬ್ಬರು ಗಗನಯಾತ್ರಿಗಳನ್ನ ಹೊತ್ತೊಯ್ದಿದ್ದ ಬೋಯಿಂಗ್‌ನ ಸ್ಟಾರ್‌ಲೈನರ್ ಕ್ಯಾಪ್ಸುಲ್ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ISS) ಖಾಲಿಯಾಗಿ ಹಿಂದಿರುಗುತ್ತದೆ ಎಂದು NASA ಶನಿವಾರ ಘೋಷಿಸಿದೆ.

ಇತ್ತೀಚಿನ ಬೆಳವಣಿಗೆಯು ಬೋಯಿಂಗ್‌ನ ಸಂಕಟವನ್ನು ಹೆಚ್ಚಿಸಿದೆ. ಹೀಗಾಗಿ ಇದು ಖಾಲಿಯಾಗಿ ಹಿಂದಿರುಗುತ್ತಿದ್ದು, ಇದರ ಅಂದಾಜು ನಷ್ಟವು 1 ಬಿಲಿಯನ್ ಡಾಲರ್ ಮೀರಿದೆ ಎಂದು CNBC ವರದಿ ಮಾಡಿದೆ. ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಈಗ ಐಎಸ್‌ಎಸ್‌ನಲ್ಲಿ ಆರು ತಿಂಗಳ ವಿಸ್ತೃತ ವಾಸ್ತವ್ಯದ ನಂತರ ಫೆಬ್ರವರಿ 2025 ರಲ್ಲಿ ಎಲೋನ್ ಮಸ್ಕ್‌ನ ಸ್ಪೇಸ್‌ಎಕ್ಸ್‌ನ ಕ್ರ್ಯೂ-9 ವಾಹನದಲ್ಲಿ ಹಿಂತಿರುಗುತ್ತಾರೆ. ಸ್ಟಾರ್‌ಲೈನರ್‌ನ ಥ್ರಸ್ಟರ್‌ಗಳೊಂದಿಗಿನ ಸಮಸ್ಯೆಗಳಿಂದಾಗಿ ಮೂಲ ಒಂಬತ್ತು ದಿನಗಳ ಪರೀಕ್ಷಾ ಹಾರಾಟವು ವಿಳಂಬವಾಗಿದೆ.

ಮುಂದಿನ ಫೆಬ್ರವರಿಯಲ್ಲಿ ಬುಚ್ ಮತ್ತು ಸುನಿತಾ ಕ್ರ್ಯೂ -9 ರೊಂದಿಗೆ ಹಿಂತಿರುಗುತ್ತಾರೆ ಮತ್ತು ಸ್ಟಾರ್ಲೈನರ್ ಸಿಬ್ಬಂದಿಯಿಲ್ಲದೆ ಹಿಂತಿರುಗುತ್ತಾರೆ ಎಂದು ನಾಸಾ ನಿರ್ವಾಹಕ ಬಿಲ್ ನೆಲ್ಸನ್ ಹೇಳಿದ್ದಾರೆ. ಬೋಯಿಂಗ್ ಬಾಹ್ಯಾಕಾಶ ನೌಕೆಯ ಥ್ರಸ್ಟರ್ ಅಸಮರ್ಪಕ ಕಾರ್ಯಗಳಿಂದ ಸುನಿತಾ ವಿಲಿಯಮ್ಸ್‌ ಮತ್ತು ಬುಚ್‌ ಹಿಂತಿರುಗುವುದು ವಿಳಂಬವಾಗಿದೆ ಎಂದು ಅವರು ಹೇಳಿದರು.

ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನವನ್ನು ಜೂನ್‌ 5ರಂದು ಆರಂಭಿಸಿದ್ದರು. ಜೂನ್‌ 6ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ಸ್ಟೇಷನ್‌ ತಲುಪಿದ್ದ ಅವರು ಒಂದು ವಾರ ಸಂಶೋಧನೆ ನಡೆಸಿ ವಾಪಸಾಗಬೇಕಿತ್ತು. ಆದರೆ, ತಾಂತ್ರಿಕ ಕಾರಣದಿಂದ ಅವರು ಅಲ್ಲಿಯೇ ಸಿಲುಕಿದ್ದಾರೆ.

ಸುನೀತಾ ವಿಲಿಯಮ್ಸ್‌ ಹಿನ್ನೆಲೆ

ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.

ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.

Sunita Williams: ಮುಂದಿನ ವರ್ಷ ಫೆಬ್ರುವರಿಯಲ್ಲಿ ಭೂಮಿಗೆ ಮರಳಲಿದ್ದಾರೆ ಸುನೀತಾ ವಿಲಿಯಮ್ಸ್;‌ ನಾಸಾ ಘೋಷಣೆ

Continue Reading
Advertisement
Viral News
ವೈರಲ್ ನ್ಯೂಸ್31 mins ago

Viral News: ಮತ್ತೆ ಜಗಳಕ್ಕಿಳಿದ ಯೂಟ್ಯೂಬರ್ ಗಳಾದ ಧ್ರುವ ರಥೀ ಮತ್ತು ಗೌರವ್ ತನೇಜಾ

Finance Commission Meeting
ಬೆಂಗಳೂರು1 hour ago

Finance Commission Meeting: 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಒಟ್ಟು ರೂ.79770 ಕೋಟಿ ನಷ್ಟ: ಸಿದ್ದರಾಮಯ್ಯ

Muda scam CM gets temporary relief Hearing adjourned to August 31
ಬೆಂಗಳೂರು1 hour ago

CM Siddaramaiah : ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್‌; ಆ.31ಕ್ಕೆ ವಿಚಾರಣೆ ಮುಂದೂಡಿಕೆ

Deep Fake Video
ವೈರಲ್ ನ್ಯೂಸ್1 hour ago

Deep Fake Video: ಎಐ ಬಳಸಿ ದರ್ಶನ್‌- ಧನ್ವಿರ್ ವಿಡಿಯೋ ದುರ್ಬಳಕೆ..!

Viral News
ವೈರಲ್ ನ್ಯೂಸ್2 hours ago

Viral News: 10 ವರ್ಷಗಳ ಬೋಧನೆಯ ಅನಂತರವೂ ಸಂಬಳ ಹೆಚ್ಚಿಸಿಲ್ಲ; ಹತಾಶೆಯಿಂದ ರಾಜೀನಾಮೆ

Kannada New Movie
ಬೆಂಗಳೂರು2 hours ago

Kannada New Movie: ಪೃಥ್ವಿ ಅಂಬಾರ್, ಪ್ರಮೋದ್ ಅಭಿನಯದ ‘ಭುವನಂ ಗಗನಂ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್‌

Ranjani Raghavan
ಸಿನಿಮಾ3 hours ago

Ranjani Raghavan: ಹಸೆಮಣೆ ಏರಲು ಸಜ್ಜಾದ ನಟಿ ರಂಜನಿ ರಾಘವನ್; ಇವ್ರೇ ನೋಡಿ ಅವ್ರ ಹುಡುಗ

DK Shivakumar
ಬೆಂಗಳೂರು3 hours ago

DK Shivakumar: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ; ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ: ಡಿ.ಕೆ. ಶಿವಕುಮಾರ್‌

Prajwal Revannas anticipatory bail plea adjourned to September 5
ಹಾಸನ4 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್‌; ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ

Actor Darshan
ಸಿನಿಮಾ4 hours ago

Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Actor Darshan
ಸ್ಯಾಂಡಲ್ ವುಡ್7 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಟ್ರೆಂಡಿಂಗ್‌