Actor Darshan: ನಟಿ ರಚಿತಾ ರಾಮ್‌ ಜೈಲಿಗೆ ಎಂಟ್ರಿ ಕೊಟ್ಟ ದಿನವೇ ನಡೀತಾ ದರ್ಶನ್ ಸಿಗರೇಟ್ ಪಾರ್ಟಿ? - Vistara News

ಪ್ರಮುಖ ಸುದ್ದಿ

Actor Darshan: ನಟಿ ರಚಿತಾ ರಾಮ್‌ ಜೈಲಿಗೆ ಎಂಟ್ರಿ ಕೊಟ್ಟ ದಿನವೇ ನಡೀತಾ ದರ್ಶನ್ ಸಿಗರೇಟ್ ಪಾರ್ಟಿ?

actor darshan: ಪ್ರಾಥಮಿಕ ಮಾಹಿತಿ ಪ್ರಕಾರ ಕಳೆದ ಗುರುವಾರ ನಟಿ ರಚಿತಾ ರಾಮ್ ಜೈಲಿಗೆ ಎಂಟ್ರಿ ಕೊಟ್ಟಿದ್ದರು. ದರ್ಶನ್ ಭೇಟಿ ಮಾಡಿ ಬಂದಿದ್ದ ದಿನವೇ ಈ ಫೋಟೋ ಘಟನೆ ಆಗಿರಬಹುದು ಎಂದು ಅಲ್ಲಿನ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರಂತೆ.

VISTARANEWS.COM


on

actor darshan rachitha ram
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ರಚಿತಾ ರಾಮ್ (Rachitha Ram) ಇತ್ತೀಚೆಗೆ ಪರಪ್ಪನ ಅಗ್ರಹಾರ (Parappana Agrhara) ಜೈಲಿಗೆ ಹೋಗಿ, ರೇಣುಕಾ ಸ್ವಾಮಿ ಕೊಲೆ (Renuka Swamy Murder) ಆರೋಪದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ನನ್ನು (Actor Darshan) ಭೇಟಿಯಾಗಿದ್ದರು. ಅದೇ ದಿನವೇ ನಟ ದರ್ಶನ್ ಸಿಗರೇಟ್ ಪಾರ್ಟಿ ಮಾಡಿದರಾ ಎಂಬ ಅನುಮಾನ ಇದೀಗ ಗಟ್ಟಿಯಾಗುತ್ತಿದೆ.

ದರ್ಶನ್‌ ಸಿಗರೇಟ್-‌ ಟೀ ಪಾರ್ಟಿಯ ಫೋಟೋ ತೆಗೆದವನು ರೌಡಿಶೀಟರ್ ವೇಲು ಎಂದು ಗೊತ್ತಾಗಿದೆ. ಇದನ್ನು ಆತ ಮೈಸೂರಿನಲ್ಲಿರುವ ದರ್ಶನ್ ಫ್ಯಾನ್ಸ್‌ಗೆ ಕಳಿಸಿದ್ದ. ಅಲ್ಲಿಂದ ಚಾಮರಾಜನಗರದ ಕ್ರೈಂ ಪೊಲೀಸ್ ಒಬ್ಬರಿಗೆ ಫೋಟೋ ತಲುಪಿತ್ತು. ಪೋಟೋ ಲೀಕ್ ಆಗದಂತೆ ತಡೆಯಲು ಲಕ್ಷಾಂತರ ರೂಪಾಯಿಯ ಡೀಲ್ ಸಹ ನಡೆದಿತ್ತು ಎಂದು ಗೊತ್ತಾಗಿದೆ.

ಆದರೆ ಫೋಟೋ ಲೀಕ್ ಆಗಿಯೇ ಬಿಟ್ಟಿದೆ. ಸೋರಿಕೆ ಆದ ಬೆನ್ನಲ್ಲೇ ಎಎಜಿ ಆನಂದ್ ರೆಡ್ಡಿ ಕೈದಿಗಳು ಹಾಗೂ ಅಧಿಕಾರಿಗಳನ್ನು ತಡರಾತ್ರಿವರೆಗೂ ವಿಚಾರಣೆ ನಡೆಸಿದ್ದಾರೆ. ತನಿಖೆ ನಡೆಸಿ ಪ್ರಕರಣದ ಬಗ್ಗೆ ಡಿಜಿಗೆ ವರದಿ ಸಲ್ಲಿಸಿದ್ದಾರೆ. ದರ್ಶನ್, ನಾಗ ಸಿಗರೇಟ್ ಪಾರ್ಟಿ ಮಾಡಿರುವ ಫೋಟೋ ಯಾವತ್ತಿನದು, ಯಾರು ಫೋಟೋ ತೆಗದದ್ದು ಎಂಬ ಪ್ರಾಥಮಿಕ ಮಾಹಿತಿಯನ್ನು ಕಲೆ ಹಾಕಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ ಕಳೆದ ಗುರುವಾರ ನಟಿ ರಚಿತಾ ರಾಮ್ ಜೈಲಿಗೆ ಎಂಟ್ರಿ ಕೊಟ್ಟಿದ್ದರು. ದರ್ಶನ್ ಭೇಟಿ ಮಾಡಿ ಬಂದಿದ್ದ ದಿನವೇ ಈ ಫೋಟೋ ಘಟನೆ ಆಗಿರಬಹುದು ಎಂದು ಅಲ್ಲಿನ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರಂತೆ. ಸದ್ಯ ಈ ಬಗ್ಗೆ ಜೈಲಿನ ಸಿಸಿಟಿವಿ ಪರಿಶೀಲನೆ ನಡೆಸಲಾಗುತ್ತಿದೆ. ಹಾಗಾದರೆ ಸಿಗರೇಟ್‌ ಯಾರ ಮೂಲಕ ಹೋಗಿರಬಹುದು ಎಂಬುದರ ಬಗ್ಗೆಯೂ ಅನುಮಾನ ಮೂಡಿದೆ.

ಸದ್ಯ ಪ್ರಕರಣದಲ್ಲಿ ಅಮಾನತಾಗಿರುವ ಜೈಲರ್‌ಗಳಾದ ಪ್ರಭು ಖಂಡ್ರೆ ಹಾಗೂ ಶರಣಬಸಪ್ಪ ಎರಡು ಪಾಳಿಯಲ್ಲಿ ಜೈಲಿನ ಮೇಲ್ವಿಚಾರಕರಾಗಿ ಕೆಲಸ ಮಾಡ್ತಾರೆ. ಇವರ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಜೈಲರ್ ಶರಣಬಸವ ಅಮೀನಗಡ, ಅಸಿಸ್ಟೆಂಟ್ ಜೈಲರ್ ಎಲ್ಎಸ್ ತಿಪ್ಪೇಸ್ವಾಮಿ, ಶ್ರೀಕಾಂತ್ ತಳವಾರ್, ಹೆಡ್ ವಾರ್ಡರ್ಸ್‌ ಸಂಪತ್ ಕುಮಾರ್ ಕಡಪಟ್ಟಿ, ಬಸಪ್ಪ ಕೂಡ ಅಮಾನತಾಗಿದ್ದಾರೆ.

ಜೈಲಿನಲ್ಲಿ ದರ್ಶನ್ ಸಿಗರೇಟ್‌ ಪಾರ್ಟಿ, 7 ಅಧಿಕಾರಿಗಳು ಅಮಾನತು

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌, ಜೈಲಿನೊಳಗೇ ಐಷಾರಾಮಿ ಜೀವನ ನಡೆಸಿರುವ ಫೋಟೋ ಹಾಗೂ ವಿಡಿಯೋಗಳು ವೈರಲ್‌ ಆಗಿರುವ ಬೆನ್ನಲ್ಲೇ, ಜೈಲಿನ 7 ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡಲಾಗಿದೆ. ಗೃಹ ಸಚಿವ ಜಿ. ಪರಮೇಶ್ವರ್ ಈ ಕುರಿತು ಹೇಳಿಕೆ ನೀಡಿದ್ದಾರೆ.

ನಿನ್ನೆ ಸಂಜೆ 4.30ಕ್ಕೆ ಸುದ್ದಿ ಬಂತು. ಈ ಕುರಿತು ರಾತ್ರಿ 1 ಗಂಟೆವರೆಗೂ ಆಂತರಿಕ ತನಿಖೆ ನಡೆಸಲಾಗಿದೆ. ಜೈಲಿನಲ್ಲಿ ದರ್ಶನ್ ಮತ್ತು ಅವರ ಸ್ನೇಹಿತರ ಜೊತೆ ಟೀ ಕುಡಿಯುವ ಫೋಟೋ ವೈರಲ್ ಆಗಿದೆ. ಈ ಕುರಿತು 7 ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಶರಣ ಬಸವ ಅಮೀನಗಡ, ಪ್ರಭು, ತಿಪ್ಪೇಸ್ವಾಮಿ, ವೆಂಕಪ್ಪ ಕೊರ್ಟಿ, ಸಂಪತ್ ಕುಮಾರ್, ಶ್ರೀಕಾಂತ್ ತಲವಾರ್, ಬಸಪ್ಪ ತೇಲಿ ಇವರನ್ನು ಅಮಾನತು ಮಾಡಿದ್ದೇವೆ ಎಂದು ಗೃಹ ಸಚಿವರು ತಿಳಿಸಿದರು.

ಇದು ಹೇಗೆ ಸಾಧ್ಯವಾಯಿತು ಎಂದು ವರದಿ ಕೇಳಿದ್ದೇನೆ. ಈ 7 ಜನ ಭಾಗಿಯಾಗಿದ್ದಾರೆ ಅಂತ ವರದಿ ಬಂದ ಬಳಿಕ ಅವರ ಮೇಲೆ ಕ್ರಮ ಆಗಿದೆ. ಜೈಲ್ ಸೂಪರಿಂಟೆಂಡೆಂಟ್ ಅವರನ್ನು ಶಿಫ್ಟ್ ಮಾಡುತ್ತೇವೆ. ಇಂತಹ ಘಟನೆ ನಡೆಯಬಾರದು. ಪದೇ ಪದೆ ಈ ರೀತಿ ಆಗಬಾರದು. ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ತಪ್ಪು ಮಾಡಿದ್ದರೂ ಅವರ ವಿರುದ್ಧ ತನಿಖೆ ಮಾಡಿ ಕ್ರಮ‌ ತೆಗೆದುಕೊಳ್ಳುತ್ತೇವೆ ಎಂದು ಸಚಿವರು ನುಡಿದರು.

ಎಲ್ಲಾ ಜೈಲುಗಳಲ್ಲಿ ಜಾಮರ್, ಕ್ಯಾಮರಾ ಹಾಕಿದರೂ ಹೀಗೆ ಆಗೋದು ಸರಿಯಲ್ಲ. ತನಿಖೆ ಬಳಿಕ ಫೋನ್ ಎಲ್ಲಿಂದ ಬಂತು, ಸಿಗರೇಟ್ ಹೇಗೆ ಬಂತು ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಜೈಲಿನಲ್ಲಿ 24 ಗಂಟೆ ಮಾನಿಟರ್ ನಡೆಯುತ್ತಿರುತ್ತದೆ. ಪ್ರಕರಣದಿಂದ ಸರ್ಕಾರಕ್ಕೆ ಯಾವುದೇ ಮುಜುಗರ ಆಗಿಲ್ಲ. ಯಾರು ತಪ್ಪು ‌ಮಾಡಿದ್ದಾರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಇದನ್ನೂ ಓದಿ: Actor Darshan: ನಟನ ಐಷಾರಾಮಿ ʼಜೈಲು ದರ್ಶನʼ, 7 ಅಧಿಕಾರಿಗಳು ಅಮಾನತು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಕುಟುಂಬಸ್ಥರು ಹೊರತು ಪಡಿಸಿ ಬೇರೆ ಯಾರಿಗೂ ಅವಕಾಶವಿಲ್ಲ. ಜತೆಗೆ ಯಾವುದೇ ವಿವಿಐಪಿ ಟ್ರೀಟ್ಮೆಂಟ್‌ ಇರುವುದಿಲ್ಲ. ಸಾಮಾನ್ಯ ಖೈದಿಯಂತೆ ಸಿಸಿಟಿವಿ ಕಣ್ಗಾವಲು ಇರಲಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್‌ನನ್ನು (Actor Darshan) ಪೊಲೀಸ್‌ ಬಂದೋಬಸ್ತ್‌ನಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಇನ್ಮುಂದೆ ನಟ ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ ಎನ್ನಲಾಗಿದೆ.

ಕೇವಲ ಕೈದಿಯ ಧರ್ಮಪತ್ನಿ, ರಕ್ತಸಂಬಂಧಿಗಳು ಮತ್ತು ವಕಾಲತ್ತು ವಹಿಸಿದ ವಕೀಲರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ವ್ಯಕ್ತಿಗಳು ಯಾರಿಗೂ ದರ್ಶನ್‌ ಭೇಟಿಗೆ ಅವಕಾಶ ಇರುವುದಿಲ್ಲ. ಇನ್ನೂ ಸಾಮಾನ್ಯ ಖೈದಿಯಂತೆ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇರಲಿದ್ದು, ಗೃಹ, ಮನರಂಜನೆ ಸೌಲಭ್ಯಗಳು, ಕಾರಾಗೃಹದ ನಿಯಮದಂತೆ ಒದಗಿಸಲಾಗುತ್ತದೆ. ನಿಯಮ ಉಲ್ಲಂಘನೆ ಮಾಡುವ ಆಗಿಲ್ಲ. ಬೇರೆ ಕೈದಿಗಳ ಜತೆ ಬೆರೆಯದಂತೆ ಸೂಕ್ತ ಭದ್ರತೆ ನೀಡಲಾಗಿದೆ.

ಇದನ್ನೂ ಓದಿ: Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ದರ್ಶನ್‌ಗಿಲ್ಲ ವಿವಿಐಪಿ ಟ್ರೀಟ್ಮೆಂಟ್‌; ಸಾಮಾನ್ಯ ಖೈದಿಗೆ ಸಿಸಿಟಿವಿ ಕಣ್ಗಾವಲು

ಈಗಾಗಲೇ ನಟ ದರ್ಶನ್‌ ಬಳ್ಳಾರಿ ಜೈಲಿಗೆ ಸ್ಥಳಾಂತರವಾಗಿದ್ದು, ಸಾಮಾನ್ಯ ಖೈದಿಯಂತೆ ಇರಬೇಕಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ವಿವಿಐಪಿ ಟ್ರೀಟ್ಮೆಂಟ್‌ ಬಳ್ಳಾರಿ ಜೈಲಿನಲ್ಲಿ ಇರುವುದಿಲ್ಲ. ಇನ್ನೂ ದಿನದ 24/7 ದರ್ಶನ್ ಮೇಲೆ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಇರಲಿದೆ. ದಿನನಿತ್ಯ ದರ್ಶನ್ ಸಿಸಿಟಿವಿ ಫೂಟೇಜ್ ಪ್ರತ್ಯೇಕವಾಗಿ ಶೇಖರಿಸಿಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ದರ್ಶನ್ ಇರುವ ಕೊಠಡಿಗೆ ಮುಖ್ಯ ವೀಕ್ಷಕ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ಅನುಭವವುಳ್ಳ ಸಿಬ್ಬಂದಿ ವರ್ಗ ನಿಯೋಜನೆ ಮಾಡಲಾಗಿದೆ. ಭದ್ರತೆ ಹಾಗೂ ದರ್ಶನ್ ಚಲನವಲನಗಳ ಬಗ್ಗೆ ತೀವ್ರ ನಿಗಾ ಇಡಲಾಗುತ್ತದೆ. ಕಾರಾಗೃಹದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿನಿತ್ಯ ಬೀಗ ತೆರೆಯುವ ಹಾಗೂ ಬೀಗ ಮುದ್ರೆ ಮಾಡುವ ಸಮಯದಲ್ಲಿ ಕೂಲಂಕುಷವಾಗಿ ತಪಾಸಣೆ ಮಾಡುವಂತೆ ಸೂಚನೆನೀಡಲಾಗಿದೆ. ಯಾವುದೇ ನಿಷೇಧಿತ ವಸ್ತುಗಳು ದೊರಕದ ಹಾಗೆ ಪ್ರತ್ಯೇಕ ವಹಿಯನ್ನು ನಿರ್ವಹಿಸಬೇಕು. ಪಹರೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಬಾಡಿ ವೋರ್ನ್ ಕ್ಯಾಮೆರಾ ಧರಿಸಬೇಕು ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Chikkanna: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಭೇಟಿ ಮಾಡಿದ್ದಕ್ಕೆ ನಟ ಚಿಕ್ಕಣ್ಣ ವಿಚಾರಣೆಗೆ ಹಾಜರು

ಕಳೆದ ಬಾರಿ ವಿಚಾರಣೆ ಬಳಿಕ ನಟ ದರ್ಶನ್ ಅವರನ್ನು ಕಾಣಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರಿಂದ ನಟ ಚಿಕ್ಕಣ್ಣನನ್ನು (Actor Chikkanna) ಮತ್ತೆ ಈ ಬಾರಿ ಎಸಿಪಿ ಚಂದನ್ ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದ ನಟ ಚಿಕ್ಕಣ್ಣ ನ್ಯಾಯಾಧೀಶರ ಮುಂದೆಯೂ ಹಾಜರಾಗಿದ್ದರು. ಸಿಆರ್ ಪಿಸಿ 164 ಅಡಿಯಲ್ಲಿ ಅವರ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿತ್ತು.

VISTARANEWS.COM


on

By

Actor Chikkanna
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿ ನಟ ಚಿಕ್ಕಣ್ಣ (Actor Chikkanna) ಬಸವೇಶ್ವರನಗರದಲ್ಲಿರುವ ತನಿಖಾಧಿಕಾರಿ ಮುಂದೆ ಗುರುವಾರ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಣ್ಣ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾದರು.

ಕಳೆದ ಬಾರಿ ವಿಚಾರಣೆ ಬಳಿಕ ನಟ ದರ್ಶನ್ (actor darshan) ಅವರನ್ನು ಕಾಣಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರಿಂದ ನಟ ಚಿಕ್ಕಣ್ಣನನ್ನು ಮತ್ತೆ ಈ ಬಾರಿ ಎಸಿಪಿ ಚಂದನ್ ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದ ನಟ ಚಿಕ್ಕಣ್ಣ ನ್ಯಾಯಾಧೀಶರ ಮುಂದೆಯೂ ಹಾಜರಾಗಿದ್ದರು. ಸಿಆರ್ ಪಿಸಿ 164 ಅಡಿಯಲ್ಲಿ ಅವರ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿತ್ತು.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್ ಭೇಟಿಗೆ ತೆರೆಳಿದ್ದ ನಟ ಚಿಕ್ಕಣ್ಣನ ಜೊತೆ ಈ ಸಂದರ್ಭದಲ್ಲಿ ಅಭಿಷೇಕ್ ಅಂಬರೀಶ್ , ಧನ್ವೀರ್ ಕೂಡ ಇದ್ದರು. ಅಲ್ಲಿ ದರ್ಶನ್ ಭೇಟಿ ಮಾಡಿ ಕೆಲಕಾಲ ಚಿಕ್ಕಣ್ಣ ಮಾತುಕತೆ ನಡೆಸಿದ್ದರು.
ನಟ ದರ್ಶನ್ ನನ್ನು ಭೇಟಿ ಮಾಡಿದ ಕಾರಣಕ್ಕಾಗಿ ಪೊಲೀಸರಿಂದ ಚಿಕ್ಕಣ್ಣಗೆ ನೊಟೀಸ್ ನೀಡಲಾಗಿತ್ತು.


ನಾನೊಬ್ಬ ಸಾಕ್ಷಿದಾರನಾಗಿದ್ದುಕೊಂಡು ಜೈಲಿಗೆ ಹೋಗಿ ದರ್ಶನ್‌ ಜತೆಗೆ ಮಾತನಾಡಿಸಬಾರದು ಎಂಬುದು ನನಗೆ ತಿಳಿದಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿ ದರ್ಶನ್ ಭೇಟಿ ಮಾಡಿ ಬಂದಿದ್ದೆ. ಹೀಗಾಗಿ ಪೊಲೀಸರು ವಿಚಾರಣೆಗೆ ಬರುವಂತೆ ನಿನ್ನೆ ಬುಧವಾರ ನೋಟಿಸ್ ಕೊಟ್ಟು 9 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೊಡಲಾಗಿತ್ತು. ಈ ನಿಟ್ಟಿನಲ್ಲಿ ಗುರುವಾರ ಬಂದು ವಿಚಾರಣೆಗೆ ಹಾಜರಾಗಿದ್ದೇನೆ. ವಿಚಾರಣೆ ವೇಳೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರ ಬಗ್ಗೆ ಒಂದಷ್ಟು ಪ್ರಶ್ನೆ ಕೇಳಿದ್ದರು ಅದಕ್ಕೆ ಉತ್ತರ ಕೊಟ್ಟಿದ್ದಿನಿ. ಮತ್ತೆ ವಿಚಾರಣೆಗೆ ಕರೆದರೆ ಬರುತ್ತೇನೆ. ಸದ್ಯ ವಿಚಾರಣೆಗೆ ಬರುವುದಕ್ಕೆ ಹೇಳಿಲ್ಲ. ಸಾಕ್ಷಿದಾರ ಹೋಗ ಬಾರದು ಅನ್ನೋದು ನನಗೆ ತಿಳಿದಿರಲಿಲ್ಲ, ಗೊತ್ತಿದ್ದರೆ ಹೋಗಿ ದರ್ಶನ್‌ನನ್ನು ಜೈಲಿನಲ್ಲಿ ಭೇಟಿ ಆಗುತ್ತಿರಲಿಲ್ಲ ಎಂದು ಚಿಕ್ಕಣ್ಣ ಪ್ರತಿಕ್ರಿಯಿಸಿದ್ದಾರೆ.

ಪಾರ್ಟಿ ವಿಚಾರದಲ್ಲಿ ವಿಚಾರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೆಸ್ಟ್ ಆಗಿದ್ದ ನಟ ದರ್ಶನ್ ಜೊತೆ ಅದೇ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ ಅವರನ್ನು ಈ ಹಿಂದೆ ವಿಚಾರಣೆಗೆ ಒಳಪಡಿಸಲಾಗಿತ್ತು. ನಟ ಯಶಸ್‌ ಸೂರ್ಯ ಕೂಡ ಅಂದು ಕುಖ್ಯಾತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ ನಲ್ಲಿ ಡಿ ಗ್ಯಾಂಗ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು.

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಲ್ಲದೇ ಹಲವು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಹೇಳಿಕೆ ನೀಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ.

ಇದನ್ನೂ ಓದಿ: Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ನಟ ದರ್ಶನ್ ಜೊತೆ ಕೊಲೆಯ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ ಅವರನ್ನು ಈ ಹಿಂದೆ ಮೂರು ಗಂಟೆಗಳ ಕಾಲ ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿದೆ. ವಿಚಾರಣೆ ಸಂದರ್ಭದಲ್ಲಿ, ಅದೇ ದಿನ ತಾನು ದರ್ಶನ್ ಜೊತೆ ಪಾರ್ಟಿ ಮಾಡಿದ್ದು ನಿಜ ಎಂದು ಚಿಕ್ಕಣ್ಣ ಒಪ್ಪಿಕೊಂಡಿದ್ದರು.

Continue Reading

ಸ್ಯಾಂಡಲ್ ವುಡ್

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

Actor Darshan: ಪರಪ್ಪನ ಅಗ್ರಹಾರ ಜೈಲಿನೊಳಗೆ ಕೈದಿಗಳ ಜತೆಗೆ ಕಾಫಿ ಕಪ್‌ ಹಿಡಿದು ಸಿಗರೇಟು ಸೇದುತ್ತಾ ಕುಳಿತಿದ್ದ ಕಾರಣಕ್ಕೆ ಇದೀಗ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

VISTARANEWS.COM


on

By

Actor Darshan
Koo

ಬಳ್ಳಾರಿ/ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Chitradurga Renukaswamy murder case) ಬಂಧಿಯಾಗಿರುವ ನಟ ದರ್ಶನ್ (Actor Darshan) ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಇದೀಗ ಕೋರ್ಟ್‌ ಆದೇಶದ ಮೇರೆಗೆ ಬಳ್ಳಾರಿ ಜೈಲಿಗೆ (bellary jail) ಸ್ಥಳಾಂತರ ಆಗಿದ್ದಾರೆ. ಬಿಗಿ ಭದ್ರೆತೆಯೊಂದಿಗೆ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಜೈಲಿಗೆ ದರ್ಶನ್‌ನನ್ನು ಕರೆತರಲಾಯಿತು.

ಪೊಲೀಸರು ದರ್ಶನ್ ಇದ್ದ ವಾಹನಕ್ಕೆ ಸಂಪೂರ್ಣ ಬಟ್ಟೆ ಕಟ್ಟಿ ಯಾರಿಗೂ ಕಾಣಿಸಬಾರೆಂದು ಕರೆತಂದಿದ್ದರು. ಬಳ್ಳಾರಿ ಜೈಲಿಗೆ ಬಂದ ನಟ ದರ್ಶನ್‌ರಿಗೆ ಮೊದಲು ಮೆಡಿಕಲ್ ಚೆಕಪ್‌ಗೆ ಕರೆದೊಯ್ದಲಾಗಿತ್ತು. ಬಳಿಕ ದರ್ಶನ್‌ಗೆ ನಿಗದಿ ಮಾಡಿದ್ದ ಸೆಲ್‌ಗೆ ಬಿಡಲಾಗಿದೆ.

ಗಾಡಿಗೆ ಅಡ್ಡ ಬಂದ ಹಸುಗಳು

ನಟ ದರ್ಶನ್‌ ಕರೆತರುವಾಗ ಸೆಂಟ್ರಲ್ ಜೈಲ್ ರಸ್ತೆಯಲ್ಲಿ ಹತ್ತಾರು ಹಸುಗಳು ಅಡ್ಡಬಂದಿದ್ದವು. ಬಳಿಕ ಪೊಲೀಸ್‌ ಸಿಬ್ಬಂದಿಯೇ ಹಸುಗಳು ಬೇಗ ಹೋಗಲಿ ಎಂದು ಓಡಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಓಡಿಸುವ ವೇಳೆ ಬೆದರಿದ ಘಟನೆಯು ನಡೆದಿದೆ.

ಹೈದರ್‌ಬಾದ್‌ ರಸ್ತೆ ಮೂಲಕ ಬಳ್ಳಾರಿ ತಲುಪಿದ ಪೊಲೀಸರು

ಇನ್ನೂ ಪೊಲೀಸರು ಮಾಧ್ಯಮಗಳ ಕಣ್ತಪ್ಪಿಸಿ ದರ್ಶನ್‌ನನ್ನು ಹೈದರ್‌ಬಾದ್ ರಸ್ತೆಯಲ್ಲಿ ಕರೆದುಕೊಂಡು ಹೋದರು. ಬಳ್ಳಾರಿಗೆ ದೇವನಹಳ್ಳಿ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ ಮಾರ್ಗವಾಗಿ ಕರೆದುಕೊಂಡು ಹೋಗಿದ್ದಾರೆ. ಎರಡು ಬೊಲೇರೋ ಹಾಗೂ ಒಂದು ಟಿಟಿ ವಾಹನ ಪ್ರತ್ಯೇಕವಾಗಿ ಗುರುವಾರ ಬೆಳಗ್ಗೆ 5:28ಕ್ಕೆ ದೇವನಹಳ್ಳಿ ಟೋಲ್ ಪಾಸ್ ಆದ ದೃಶ್ಯ ಲಭ್ಯವಾಗಿದೆ. ದೇವನಹಳ್ಳಿ ಸಾದಹಳ್ಳಿ ಟೋಲ್‌ನಲ್ಲಿ ಪೊಲೀಸರಿಂದ ದರ್ಶನ್ ಕರೆದುಕೊಂಡು ಹೋಗುತ್ತಿರುವ ವಾಹನಗಳು ಪಾಸ್ ಮಾಡಿಕೊಟ್ಟಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಹಿನ್ನೆಲೆಯಲ್ಲಿ ಕಲಬುರಗಿ ಜೈಲಿಗೆ ಗುರುವಾರ ಆರೋಪಿ ನಾಗರಾಜ್ ಶಿಫ್ಟ್ ಆಗಲಿದ್ದಾರೆ. ನಟ ದರ್ಶನ ಮ್ಯಾನೇಜರ್ ಆಗಿದ್ದ ನಾಗರಾಜ್ A-11 ಆಗಿದ್ದು, ಬೆಂಗಳೂರಿನಿಂದ ಕಲಬುರಗಿ ಜೈಲಿಗೆ ಸಂಜೆ 4 ಗಂಟೆ ತಲುಪಲಿದ್ದಾರೆ. ಈಗಾಗಲೆ ಬೆಂಗಳೂರಿನಿಂದ ಕಲಬುರಗಿಗೆ ಬಿಗಿ ಭದ್ರತೆಯಲ್ಲಿ ಕರೆತರಲಾಗುತ್ತಿದೆ. ಇತ್ತ ಶಿವಮೊಗ್ಗ ಜೈಲಿಗೆ A6 ಆರೋಪಿ ಜಗದೀಶ್ ಹಾಗೂ ಆ12 ಲಕ್ಷ್ಮಣ ಕರೆತರಲಿದ್ದಾರೆ. ರಾಜ್ಯದಲ್ಲೇ ಹೈ ಟೆಕ್ ಕಾರಾಗೃಹ ಎಂಬ ಖ್ಯಾತಿ ಹೊಂದಿರುವ ಶಿವಮೊಗ್ಗ ಜೈಲು ಕೊರಿಯನ್ ಮಾದರಿಯಲ್ಲಿದೆ. 270 ಕೊಠಡಿ ಹೊಂದಿರುವ ಕೇಂದ್ರ ಕಾರಗೃಹದಲ್ಲಿ 773 ಜನ ಖೈದಿಗಳು ಇದ್ದಾರೆ.

ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿದ್ದು ಯಾಕಾಗಿ?

ಪರಪ್ಪನ ಅಗ್ರಹಾರ ಜೈಲಿನೊಳಗೆ ಕಾಫಿ ಕಪ್‌ ಹಿಡಿದು ಸಿಗರೇಟು ಸೇದುತ್ತಾ ಕೈದಿಗಳ ಜತೆಗೆ ಕುಳಿತಿರುವ ನಟ ದರ್ಶನ್‌ನ (Actor Darshan) ಫೋಟೊಗಳು ವೈರಲ್‌ ಆಗಿತ್ತು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ2 ಆರೋಪಿ ಆಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ ಬಂಧಿಯಾಗಿದೆ.

ಜೈಲಿನ ಒಳಗೆ ದರ್ಶನ್‌ ಬಿಂದಾಸ್‌ ಆಗಿದ್ದರು. ಬ್ಯಾರಕ್‌ನಿಂದ ಹೊರಗೆ ಚೇರ್‌ನಲ್ಲಿ ಕುಳಿತಿರುವ ನಟ ದರ್ಶನ್‌ ಬಲಗೈನಲ್ಲಿ ಕಪ್‌, ಎಡಗೈನಲ್ಲಿ ಸಿಗರೇಟ್‌ ಸೇದುವ ಫೋಟೋ ವೈರಲ್‌ ಆಗಿತ್ತು. ದರ್ಶನ್‌ ಜತೆಗೆ ವಿಲ್ಸನ್‌ ಗಾರ್ಡನ್‌ ನಾಗ, ಎ11 ಆರೋಪಿ ದರ್ಶನ್‌ ಮ್ಯಾನೇಜರ್‌ ನಾಗರಾಜ್‌, ಕುಳ್ಳ ಸೀನಾ ಒಟ್ಟಾಗಿ ಕೂತು ಹರಟೆ ಹೊಡೆದಿದ್ದರು.

ಯಾವ್ಯಾವ ಜೈಲಿಗೆ ಯಾರು?

  1. 1.ಬಳ್ಳಾರಿ‌ ಜೈಲಿಗೆ ದರ್ಶನ್
    2.ಮೈಸೂರು ಜೈಲಿಗೆ ಪವನ್, ರಾಘವೇಂದ್ರ ನಂದೀಶ್
  2. 3.ಶಿವಮೊಗ್ಗ ಜೈಲಿಗೆ ಜಗದೀಶ್, ಲಕ್ಷ್ಮಣ್
  3. 4.ಧಾರವಾಡ ಜೈಲಿಗೆ ಧನರಾಜ್
  4. 5.ವಿಜಯಪುರ ಜೈಲಿಗೆ ವಿನಯ್
  5. 6.ಕಲಬುರುಗಿ ಜೈಲಿಗೆ ನಾಗರಾಜ್
  6. 7.ಬೆಳಗಾವಿ ಜೈಲಿಗೆ ಪ್ರದೂಶ್

ಜೈಲು ಸಿಬ್ಬಂದಿ ಜತೆ ಅಳಲು ತೋಡಿಕೊಂಡ ದರ್ಶನ್

ಈಗಾಗಲೇ ಸೆರೆಮನೆ ವಾಸದ ಕಷ್ಟ ಅನುಭವಿಸಿರುವ ನಟ ದರ್ಶನ್ ಈ ಕುರಿತು ಜೈಲು ಸಿಬ್ಬಂದಿ ಜತೆ ದುಃಖ ವ್ಯಕ್ತಪಡಿಸಿದ್ದರು. ಇದೆಲ್ಲಾ ಬೇಕಿತ್ತಾ ನಂಗೆ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ಅಭಿನಯದ ಚೌಕ ಚಿತ್ರವನ್ನು ಈ ಹಿಂದೆ ಬಳ್ಳಾರಿ ಜೈಲಿನಲ್ಲಿಯೇ ಚಿತ್ರೀಕರಣ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿನ ಖೈದಿಗಳ ಜೊತೆ ನಟ ಸಹಜ ಮಾತುಕತೆ ನಡೆಸಿದ್ದರು. ಬಳ್ಳಾರಿ ಜೈಲಿನ ಕಷ್ಟಗಳು, ಅಲ್ಲಿನ ವಾತಾವರಣದ ಬಗ್ಗೆ ಅಲ್ಲಿನ ಖೈದಿಗಳಿಂದ ತಿಳಿದುಕೊಂಡಿರುವ ದರ್ಶನ್‌ಗೆ ಈಗ ತಾನೇ ಆ ಜೈಲಿಗೆ ಖೈದಿಯಾಗಿ ವರ್ಗಾವಣೆಯಾಗುತ್ತಿರುವುದು ಆತಂಕ ಹೆಚ್ಚಿಸಿದೆ ಎನ್ನಲಾಗಿದೆ.

ಸಾಮಾನ್ಯ ಸೆಲ್ ನಲ್ಲಿ ದರ್ಶನ್ ?

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ವಿಐಪಿ ಸೆಲ್‌ಗಳು ಇಲ್ಲ. ಇಲ್ಲಿ ಎಲ್ಲವೂ ಸಾಮಾನ್ಯ ಸೆಲ್‌ಗಳಾಗಿದೆ. ಹೀಗಾಗಿ ದರ್ಶನ್ ಕೂಡ‌ ಇಲ್ಲಿರುವ ಎಲ್ಲ ಕೈದಿಗಳಂತೆಯೇ ಸಾಮಾನ್ಯ ಕೈದಿಯಾಗಿ‌ ಮುಂದುವರಿಯಬೇಕಿದೆ. ಕೇಂದ್ರ ಕಾರಾಗೃಹದ ಹೊರ ಭದ್ರತಾ ವಿಭಾಗದ ಸೆಲ್‌ನಲ್ಲಿ ನಟ ದರ್ಶನ್ ಅವರನ್ನು ಇರಿಸಲಾಗುತ್ತದೆ. ಹೊರ ಭದ್ರತಾ ವಿಭಾಗದಲ್ಲಿ ಒಟ್ಟು 11 ಸೆಲ್‌ಗಳಿದ್ದು, ಒಂದು ಸೆಲ್‌ನಲ್ಲಿ ಇಬ್ಬರು ಕೈದಿಗಳು ಇರುವ ವ್ಯವಸ್ಥೆ ಇದೆ. ಪ್ರತಿಯೊಂದು ಸೆಲ್ 10/10 ಅಡಿ ಅಗಲವನ್ನು ಹೊಂದಿದೆ.

ಇಲ್ಲಿರುವ ಹನ್ನೊಂದು ಸೆಲ್‌ಗಳಿಗೆ ದಿನದ 24 ಗಂಟೆಯೂ ಭದ್ರತೆ ವ್ಯವಸ್ಥೆ ಮಾಡಲಾಗುತ್ತದೆ. ಸೆಲ್ ಮುಂಭಾಗ 20 ಅಡಿ ಅಗಲ 60 ಅಡಿ ಉದ್ದದ ಜಾಗದಲ್ಲಿ ವಾಕಿಂಗ್ ಮಾಡಬಹುದು. ಬೆಳಗ್ಗೆ ಮತ್ತು ಸಂಜೆ ವಾಕಿಂಗ್ ಮಾಡಲು 15 ನಿಮಿಷ ಅವಕಾಶವಿದೆ. ಈ ವೇಳೆ ಭದ್ರತೆ ಸಿಬ್ಬಂದಿ ಕೂಡ ಹಾಜರಿರುತ್ತಾರೆ. ಸೆಲ್‌ನ ಒಳಗಡೆ ಬಾತ್ ರೂಂ, ಶೌಚಾಲಯದ ವ್ಯವಸ್ಥೆ ಇದ್ದು, ಸ್ನಾನ ಮಾಡಲು ತಣ್ಣೀರು ಮಾತ್ರ ಇರುತ್ತದೆ. ಈ ಸೆಲ್‌ಗೆ ಎರಡು ಗೇಟ್‌ಗಳಿರುತ್ತವೆ. ಇಲ್ಲಿರುವ ಹನ್ನೊಂದು ಸೆಲ್ ಗಳಲ್ಲಿ ಸದ್ಯ ಶಿವಮೊಗ್ಗ, ಹಾಸನ,ಬೆಂಗಳೂರು, ಮಂಗಳೂರು ಮೂಲದ ಕೈದಿಗಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಅಂಕಣ

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು?

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧದ ಅಪರೂಪದ ಸನ್ನಿವೇಶ ಇಲ್ಲಿದೆ. ವಾನರೇಂದ್ರನ ಮಂತ್ರಿ ಕೋಸಲೇಂದ್ರನ ದಾಸನಾದ ಪ್ರಸಂಗವಿದು.

VISTARANEWS.COM


on

By

dhavala dharini column Hanuman's setubandha to meet Sugriva in ramayana by narayana yaji
Koo

ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧದ ಅಪರೂಪದ ಸನ್ನಿವೇಶ

dhavala dharini by Narayana yaji

ಧವಳ ಧಾರಿಣಿ ಅಂಕಣ: ಭವತಾ ಸಖ್ಯಕಾಮೌ ತೌ ಭ್ರಾತರೌ ರಾಮಲಕ್ಷ್ಮಣೌ.
ಪ್ರತಿಗೃಹ್ಯಾರ್ಚಯಸ್ವೈತೌ ಪೂಜನೀಯತಮಾವುಭೌ৷৷ ಕಿ.5.7৷৷

ಸಹೋದರರಾದ ರಾಮಲಕ್ಷ್ಮಣರು ನಿನ್ನೊಡನೆ ಗೆಳೆತನವನ್ನು ಬೆಳೆಸುವ ಆಶಯವನ್ನು ಹೊಂದಿದ್ದಾರೆ. ಪೂಜನೀಯರಾದ ಇವರಿಬ್ಬರನ್ನೂ ನೀನು ಯಥೋಚಿತವಾಗಿ ಪ್ರತಿಗ್ರಹಿಸಿ ಪೂಜಿಸಬೇಕು

ರಾಮಾಯಣದ ಕಿಷ್ಕಿಂಧಾಕಾಂಡದಿಂದ ತೊಡಗಿ ಯುದ್ಧ ಕಾಂಡದಕೊನೆಯ ತನಕ ಸುಗ್ರೀವ ಪ್ರಮುಖವಾದ ಪಾತ್ರವನ್ನು ವಹಿಸುತ್ತಾನೆ. ಅನೇಕ ಸಲ ಆತನ ವ್ಯಕ್ತಿತ್ವ ಮರ್ಕಟ ಸ್ವಭಾವಕ್ಕೆ ಅನುಗುಣವಾಗಿದೆ. ವಾಲಿಯನ್ನು ಸಂಹರಿಸಿದ ನಂತರದಲ್ಲಿ ಸೀತಾನ್ವೇಷಣೆಗೆ ಪ್ರಾರಂಭಿಸಿದನೋ, ಅಲ್ಲಿಂದ ಆತ ತುಂಬಾ ಪ್ರೌಢತ್ವದಿಂದಲೇ ವ್ಯವಹರಿಸುತ್ತಾನೆ. ಸುಗ್ರೀವನ ಜೊತೆ ರಾಮನ ಸಖ್ಯದಲ್ಲಿ ಆತನ ವ್ಯವಹಾರ ಮೇಲ್ನೋಟಕ್ಕೆ ಚಂಚಲತೆಯಿಂದ ಕೂಡಿತ್ತು ಎಂದು ತೋರಿದರೂ ವಾಸ್ತವವಾಗಿ ಆತ ಸೂಕ್ಷ್ಮವಾಗಿ ಎದುರಾದವರನ್ನು ಅಭ್ಯಸಿಸುತ್ತಿದ್ದ. ವಾಲಿ ಆತನನ್ನು ರಾಜ್ಯದಿಂದ ಹೊರಗಟ್ಟಿ ಆತನನ್ನು ಕೊಲ್ಲಬೇಕೆಂದು ಇಡೀ ಪ್ರಪಂಚವನ್ನೆಲ್ಲಾ ಓಡಾಡಿಸಿದ ವಿಷಯವನ್ನು ಸವಿಸ್ತಾರವಾಗಿ ಹಿಂದಿನ ಸಂಚಿಕೆಯಲ್ಲಿ ಗಮನಿಸಿದ್ದೇವೆ. ಮತಂಗ ಋಷಿಯ ಶಾಪದ ಕಾರಣಕ್ಕೆ ವಾಲಿಗೆ ಮತಂಗಾಶ್ರಮವಿರುವ ಋಷ್ಯಮೂಕ ಪರ್ವತವನ್ನು ತನ್ನ ಅಡಗುದಾಣವನ್ನಾಗಿಸಿಕೊಂಡ. ಋಷ್ಯಮೂಕ ಪರ್ವತಕ್ಕೆ ಆ ಹೆಸರು ಬಂದಿರುವುದಕ್ಕೆ ಕಾರಣ ಅದು ತಪಸ್ವಿಗಳ ಜ್ಞಾನಾರ್ಜನಗೆ ಹೇಳಿ ಮಾಡಿಸಿದ ಸ್ಥಳವಾಗಿತ್ತು ಎನ್ನುವ ಕಾರಣಕ್ಕಾಗಿ. ಋಷೀಣಾಂ ತತ್ರ ಪ್ರಾಪ್ವಾನಾಂ ಅಮೂಕಃ- ಅಲ್ಲಿಗೆ ಹೋದ ಋಷಿಗಳ ಅಜ್ಞಾನವು ಹೋಗಿಬಿಡುತ್ತಿತ್ತು ಹಾಗಾಗಿ ಆ ಪರ್ವತಕ್ಕೆ ಋಷ್ಯಮೂಕವೆನ್ನುವ ಹೆಸರು ಬಂತು. ಮೌನಿಗಳಾದ ಋಷಿಗಳ ಪರ್ವತ ಎನ್ನುವ ಇನ್ನೊಂದು ಅರ್ತವೂ ಋಷ್ಯಮೂಕಕ್ಕೆ ಇದೆ. ಅಲ್ಲಿ ಮತಂಗ ಮುನಿಗಳು ಮೌನವಾಗಿಯೇ ತಪಸ್ಸಿಗೆ ಕುಳಿತಿರುತ್ತಿದ್ದರು.

ದುಂದುಭಿಯಂತಹ ರಾಕ್ಷಸನನ್ನು ಕೊಂದು ವಾಲಿ ಲೋಕಕ್ಕೆ ಉಪಕಾರವನ್ನು ಮಾಡಿದರೂ ಆತನಿಗೆ ಶಾಪ ಏತಕ್ಕೆ ಬಂತು ಎಂದು ಅನುಕಂಪ ಬರುವುದು ಸಹಜ. ವಾಲಿ ಮತ್ತು ದುಂದುಭಿಯ ಜಗಳದ ಹಿನ್ನೆಲೆಯನ್ನು ಗಮನಿಸಬೇಕು. ದುಂದುಭಿ ಕೋಣನ ಆಕಾರವನ್ನು ಹೊಂದಿದ್ದ ರಾಕ್ಷಸ. ಆತನಿಗೆ ಸಾವಿರ ಆನೆಯ ಬಲವಿತ್ತು. ತನ್ನ ಪರಾಕ್ರಮವನ್ನು ತೋರುವ ಹುಚ್ಚು. ಆ ಕಾರಣಕ್ಕಾಗಿ ಆತ “ಮಹ್ಯಂ ಯುದ್ಧ ಪ್ರಯಚ್ಛ- ನನಗೆ ಯುದ್ಧದ ಆತಿಥ್ಯವನ್ನು ನೀಡಿ” ಎಂದು ಎಲ್ಲಾ ಬಲಶಾಲಿಗಳ ಹತ್ತಿರ ಹೋಗಿ ಕೇಳಿದ್ದ. ಮೊದಲು ಆತ ಹೋಗಿದ್ದು ಸಮುದ್ರ ರಾಜನಲ್ಲಿಗೆ.

ಮುದ್ರದೊಡಯನಿಗೆ ಆತನೊಡನೆ ಯುದ್ಧ ಮಾಡುವ ಸಾಮರ್ಥ್ಯವಿಲ್ಲವೆಂದು ಅರ್ಥವಲ್ಲ; ಇದು ವೃಥಾ ಜಗಳ, ಅದರಿಂದ ತನ್ನೊಡಲಲ್ಲಿದ್ದ ಜಲಚರಗಳಿಗೆ ತೊಂದರೆಯಾಗುತ್ತದೆ ಎಂದು ಆತ ಪರ್ವತಗಳ ರಾಜನಾದ ಹಿಮವಂತನನ್ನು ತೋರಿಸಿದ. ಆತ ದುಂದುಭಿಯ ಆಹ್ವಾನವನ್ನು ನಿರಾಕರಿಸುವ ಕಾರಣ ತನ್ನಲ್ಲಿ ಸತ್ವಗುಣಶೀಲರಾದ ತಪಸ್ವಿಗಳು ತಪಸ್ಸನ್ನು ಮಾಡುತ್ತಿದ್ದಾರೆ. ಅವರ ತಪಸ್ಸಿಗೆ ಭಂಗಬಾರದೆನ್ನುವಕಾರಣಕ್ಕಾಗಿ ಜಗಳಕ್ಕೆ ಬರಲು ಒಪ್ಪುವುದಿಲ್ಲ. ಜಗಳವೆನ್ನುವುದು ಇನ್ನೊಬ್ಬರ ಶಾಂತತೆಗೆ ಭಂಗತರುವಂತಹುದಾಗಬಾರದು ಎನ್ನುವ ವಿವೇಕ ಇರಬೇಕು. ಸಮುದ್ರರಾಜನಾಗಲಿ, ಹಿಮವಂತನಾಗಲೀ ದುಂದುಭಿಯ ಯುದ್ಧಾಹ್ವಾನವನ್ನು ತಿರಸ್ಕರಿಸಿದರು ಎಂದ ಕಾರಣಕ್ಕೆ ಅವರು ಸಣ್ಣವರೇನೂ ಆಗಲಿಲ್ಲ. ವಾಲಿ ಜಗಳಕ್ಕೆ ಒಪ್ಪಿದ್ದೂ ಅಲ್ಲದೇ ಯುದ್ಧಮಾಡಿ ಆ ರಾಕ್ಷಸನನ್ನು ಕೊಂದಮೇಲೆ ಆತನ ದೇಹವನ್ನು ಒಂದು ಯೋಜನದಷ್ಟು ದೂರ ಎಸೆದನು. ಆಗ ಸಿಡಿದ ರಕ್ತದ ಹನಿಗಳೂ ಮತಂಗ ಆಶ್ರಮದಲ್ಲಿ ಬಿದ್ದು ಆಶ್ರಮ ಮಲಿನವಾಯಿತು. ಸತ್ತಮೇಲೆ ವೈರವಿರಕೂಡದು ಎನ್ನುತ್ತದೆ ಧರ್ಮಶಾಸ್ತ್ರ. ವಾಲಿ ಸತ್ತಮೇಲೆಯಾಗಲೀ, ರಾವಣ ಸತ್ತಮೇಲೆಯಾಗಲಿ ಅವರ ಕಳೇಬರಕ್ಕೆ ರಾಮ ಗೌರವಯುತವಾಗಿ ಅಂತ್ಯಸಂಸ್ಕಾರವನ್ನು ಮಾಡಿಸುತ್ತಾನೆ. ವಿಭೀಷಣ ರಾವಣನ ಸಂಸ್ಕಾರಕ್ಕೆ ಒಪ್ಪದಿದ್ದರೆ ತಾನೇ ರಾವಣನ ಅಂತ್ಯಸಂಸ್ಕಾರವನ್ನು ಮಾಡುತ್ತೇನೆ ಎನ್ನುತ್ತಾನೆ. ಮತಂಗರು ಶಾಪವನ್ನು ಕೊಡುವಾಗ ಹೇಳುವ ಮಾತು

ಯೇನಾಹಂ ಸಹಸಾ ಸ್ಪೃಷ್ಟಶ್ಶೋಣಿತೇನ ದುರಾತ್ಮನಾ.

ಕೋಯಂ ದುರಾತ್ಮಾ ದುರ್ಭುದ್ಘಿರಕೃತಾತ್ಮಾ ಚ ಬಾಲಿಶಃ II ಕಿ.11.50৷৷

ನನ್ನನ್ನು ಅಪವಿತ್ರವಾದ ರಕ್ತದ ಮೂಲಕ ಮುಟ್ಟಿದ ದುರಾತ್ಮನು ಯಾವನು. ಮೂಢನಾದ, ದುರಾತ್ಮನಾದ, ದುರ್ಬುದ್ಧಿಯುಳ್ಳ, ಜಿತೇಂದ್ರಿಯನಲ್ಲದ (ಅಕೃತಾತ್ಮಾ) ಆ ಮೂರ್ಖನು ಯಾರಾಗಿಬಹುದು”

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡದಲ್ಲಿನ ರಾಜನೀತಿಯ ವಿಲಕ್ಷಣ ಘಟನೆ

ಇಲ್ಲಿ ಜಿತೇಂದ್ರಿಯ ಎನ್ನುವ ಶಬ್ಧವನ್ನು ಬಳಸಿದ್ದಾರೆ. ಮೈತೀಟೆಯನ್ನು ತೀರಿಸಿಕೊಳ್ಳುವುದಕ್ಕೆ ಯುದ್ಧವಲ್ಲ. ಲೋಕ ಹಿತಕ್ಕಾಗಿ ಯುದ್ಧ ಅಪರಾಧವಲ್ಲ. ಇಲ್ಲಿ ವಾಲಿ ಕೇವಲ ರಕ್ತದಿಂದ ಆಶ್ರಮವನ್ನು ಮಲಿನಮಾಡಿದ್ದಲ್ಲ. ಪರ್ವತಮಯವಾದ ದುಂದುಭಿಯ ದೇಹವನ್ನು ಬಿಸುಟು ಆಶ್ರಮದ ವೃಕ್ಷಗಳೆಲ್ಲವನ್ನೂ ಧ್ವಂಸಮಾಡಿದ್ದಾನೆ. ಅವರಿಗೆ ಈ ಕೃತ್ಯವನ್ನು ನಡೆಸಿದವ ವಾಲಿ ಎನ್ನುವುದು ತಿಳಿಯಿತು. “ಯಾವಾತ ಈ ಕೃತ್ಯವನ್ನು ಎಸಗಿದವೋ ಆತನೇನಾದರೂ ಇನ್ನುಮುಂದೆ ಈ ಆಶ್ರಮದ ಪ್ರದೇಶಕ್ಕೆ ಬಂದರೆ ಇಲ್ಲಿಯೇ ಮರಣ ಹೊಂದುವನು. ಪುತ್ರನಂತೆ ಅಕ್ಕರೆಯಿಂದ ಬೆಳೆಸಿದ ಅವರ ಆಶ್ರಮದ ಗಡ್ಡೆಗೆಣಸುಗಳ ವಿನಾಶಾರ್ಥವಾಗಿ ಆತನ ಮಂತ್ರಿಗಳೇನಾದರೂ ಆತನ ಆಶ್ರಮದ ಪರಿಸರದಲ್ಲಿದ್ದರೆ ಅವರು ಒಂದು ದಿನಗಳೊಳಗಾಗಿ ಆ ಪ್ರದೇಶದಿಂದ ಹೊರಟುಬಿಡಬೇಕು. ಹೋಗದೇ ಉಳಿದರೆ ಅಂತವರು ಹಲವಾರು ಸಾವಿರ ವರುಷಗಳ ಕಾಲ ಕಲ್ಲಾಗಿಬಿಡುವರು” ಎನ್ನುವ ಶಾಪ ಕೊಟ್ಟರು. ವಿಷಯ ಅರಿತ ವಾಲಿ ಓಡೋಡಿ ಬಂದು ಮತಂಗ ಮುನಿಗಳಿಗೆ ತನ್ನನ್ನು ಕ್ಷಮಿಸಿ ಎಂದರೂ ಅವರು ಕ್ಷಮಿಸದೇ ಆಶ್ರಮವನ್ನೇ ಬಿಟ್ಟು ಹೊರಟುಹೋದರು. ಆ ನಂತರದಲ್ಲಿ ವಾಲಿಯಾಗಲೀ ಆತನ ಕಡೆಯವರಾಗಲೀ, ಶಾಪದ ಭಯದಿಂದ ಮತಂಗಾಶ್ರಮದ ಪರಿಸರಕ್ಕೆ ಬರುತ್ತಿರಲಿಲ್ಲ. ವಾಲಿ ಸುಗ್ರೀವ ಎಲ್ಲಿಯೇ ಅಡಗಿದ್ದರೂ ಆತನನ್ನು ಹುಡುಕಿ ಕೊಲ್ಲಲು ಬರುತ್ತಿದ್ದ ಎಂದು ಅನಿಸುತ್ತದೆ. ತನ್ನ ಜೀವ ಉಳಿಸಿಕೊಳ್ಳಲು ಸುಗ್ರೀವ ಪ್ರಪಂಚದ ಎಲ್ಲಾ ಕಡೆ ನಿರಂತರವಾಗಿ ಎಲ್ಲಿಯೂ ನಿಲ್ಲದೇ ಹಾರುತ್ತಿದ್ದ. ಶಾಪದ ಘಟನೆ ಹನುಮಂತನಿಗೆ ಅದುಹೇಗೋ ತಿಳಿಯಿತು. ಆತ ಈ ವಿಷಯವನ್ನು ಸುಗ್ರೀವನಿಗೆ ಹೇಳಿದ. ಮತಂಗಮುನಿಗಳ ಶಾಪದ ಕಾರಣದಿಂದ ಋಷ್ಯಮೂಕ ಪರ್ವತ ಸುಗ್ರೀವನಿಗೆ ಸುರಕ್ಷಿತ ತಾಣವಾಗಿ ಉಳಿಯಿತು. ಸುಗ್ರೀವ ತನ್ನ ಹತ್ತಿರವೇ ಬಂದು ಉಳಿದದ್ದು ನೋಡಿದ ವಾಲಿಗೆ ಮೈ ಪರಚಿಕೊಳ್ಳುವಂತಾಗಿದ್ದಂತೂ ಸತ್ಯ.

ಲಕ್ಷ್ಮಣನಿಂದ ಸಮಾಧಾನಿಸಲ್ಪಟ್ಟ ರಾಮ ಋಷ್ಯಮೂಕ ಪರಿಸರದಲ್ಲಿ ತಿರುಗಾಡುತ್ತಿರುವುದನ್ನು ದೂರದಲ್ಲಿಯೇ ನೋಡಿದ ಸುಗ್ರೀವನಿಗೆ ನಡುಕ ಉಂಟಾಯಿತು. ಅವರ ತೇಜಸ್ಸು ಆತನನ್ನು ಭಯಪಡಿಸಿತು. ವಾಲಿಯೇನಾದರೂ ತನ್ನನ್ನು ಕೊಲ್ಲಲು ಬೇರೆಯವರನ್ನು ಕಳುಹಿಸಿರಬಹುದೆನ್ನುವ ಸಂಶಯದಿಂದ ಆತನ ಚಲನವಲನಗಳೇ ನಿಂತು ಹೋಯಿತು. ಆತ ಹೆದರಿಕೆಯಿಂದ ಏನು ಮಾಡುವುದು ಎಂದು ತಿಳಿಯದೇ ಒಂದು ಪರ್ವತದಿಂದ ಇನ್ನೊಂದು ಪರ್ವತಕ್ಕೆ ಹಾರತೊಡಗಿದ. ಆಗ ಹನುಮಂತ ಸುಗ್ರೀವನಿಗೆ ಸಮಾಧಾನವನ್ನು ಹೇಳಿ “ನೀನು ರಾಜನಾದವನು, ಹೀಗೆ ಹೆದರಕೂಡದು. ಚನ್ನಾಗಿ ಆಲೋಚಿಸಿ ಅವರ ಹಾವ ಭಾವವನ್ನು ತಿಳಿದು ಶತ್ರುವೋ ಅಲ್ಲವೋ ಎನ್ನುವುದನ್ನು ತಿಳಿಯಬೇಕೆನ್ನುತ್ತಾನೆ. ಸುಗ್ರೀವ ಹನುಮಂತನಿಗೆ ಬಂದವರು ಯಾರು ಎಂದು ತಿಳಿದುಕೊಂಡು ಬರಲು ಕಳಿಸುತ್ತಾನೆ.

ನಮ್ಮ ರಾಜ್ಯದ ಆನೆಗೊಂದಿಯಲ್ಲಿ ಹನುಮಂತ ಮೊದಲು ರಾಮ ಲಕ್ಷ್ಮಣರನ್ನು ಭೆಟ್ಟಿಮಾಡಿರುವುದು. ಇಲ್ಲಿಯತನಕ ಸುಗ್ರೀವನ ಸಚಿವನಾಗಿದ್ದ ಹನುಮಂತ ಇಲ್ಲಿಂದ ಮುಂದೆ “ದಾಸೋಹಂ ಕೋಸಲೇಂದ್ರಸ್ಯ ರಾಮಸ್ಯಾಕ್ಲಿಷ್ಟಕರ್ಮಣಃ” ಎಂದು ಪ್ರಸಿದ್ದನಾಗುವುದಕ್ಕೆ ಪೀಠಿಕೆ ಇದು. ಕಪಿಯ ರೂಪದಲ್ಲಿದ್ದರೆ ಯಾರಿಗೂ ನಂಬಿಕೆ ಹುಟ್ಟಲು ಸಾಧ್ಯವಿಲ್ಲವೆಂದು ಹನುಮಂತ ಬಿಕ್ಷುವಿನ ರೂಪದಲ್ಲಿ ರಾಮನ ಪರಿಚಯವನ್ನು ಕೇಳುತ್ತಾನೆ. ಕಿಷ್ಕಿಂಧಾ ಕಾಂಡದ 3 ನೆಯ ಸರ್ಗದಲ್ಲಿ ಹನುಮಂತ ರಾಮನ್ನು ಮಾತಾಡಿಸುವಾಗ ಉಪಯೋಗಿಸುವ ಭಾಷೆ, ದೇಹದ ಭಂಗಿ, ವಿನೀತ ಭಾವ, ತನ್ನ ಒಡೆಯನ ಕುರಿತು ಗೌರವ ಇವೆಲ್ಲವೂ ಸಮ್ಮಿಳಿತವಾಗಿದ್ದವು. ದೀರ್ಘವಾಗಿ ಮಾತಾಡಿದ್ದರಲ್ಲಿ ಒಂದೇ ಒಂದು ಅಪಶಬ್ಧವೂ ಇಲ್ಲವಾಗಿತ್ತು. ದೇಹದ ಯಾವ ಅವಯವಗಳಲ್ಲಿಯೂ ಯಾವುದೇ ದೋಷವಿರಲಿಲ್ಲ. ವಿಷಯನಿರೂಪಣೆಯಲ್ಲಿ ವಿಸ್ತಾರವಿರಲಿಲ್ಲ. ಸಮಯಕ್ಕೆ ಎಷ್ಟು ಬೇಕೋ ಅಷ್ಟು ಮಾತ್ರ ಮಾತಾಡಿದ್ದನು. ಸಂಶಯಕ್ಕೆಡೆಮಾಡುವಂತಹ ಯಾವ ಮಾತನ್ನೂ ಆತ ಆಡಲಿಲ್ಲ. ಮದ್ಯಸ್ವರದಲ್ಲಿ ವ್ಯಾಕರಣದಿಂದ ಸಂಸ್ಕೃತವಾದ ಶಬ್ದಗಳನ್ನು ಬಳಸಿ ಯಾವ ಯಾವ ವಾಕ್ಯಗಳನ್ನು ಎಲ್ಲೆಲ್ಲಿ ಆಡಬೇಕೋ ಅದನ್ನು ಮಾತ್ರವೇ ಆಡಿದ್ದ. ಎಲ್ಲಕ್ಕಿಂತ ಹೆಚ್ಚಾಗಿ ಕೇಳುವವರ ಮನಸ್ಸಿಗೆ ಹರ್ಷವನ್ನುಂಟುಮಾಡುವ ಶುಭಕರವಾದ ಮಾತುಗಳನ್ನೇ ಆಡಿದ್ದ. ಇಲ್ಲಿ ಒಂದು ಸಂಶಯ ಬರುತ್ತದೆ. ಅಷ್ಟೊಂದು ಸುಂದರವಾಗಿ ಮಾತನಾಡಿದ್ದ ಹನುಮಂತ ತನ್ನ ವೇಷವನ್ನು ಮರೆಮಾಚಿ ಬಿಕ್ಶುವಿನ ವೇಷವನ್ನು ಧರಿಸಿರುವುದು ವಂಚನೆಯಲ್ಲವೇ. ಅದಕ್ಕೆ ವಾಲ್ಮೀಕಿ ಪ್ರಾರಂಬದಲ್ಲಿಯೇ ಹೇಳಿದ್ದಾನೆ. ನೇರವಾಗಿ ಆತ ಕಪಿಯ ರೂಪದಲ್ಲಿಯೇ ಹೋದರೆ ಆತ ಆಡುವ ಮಾತಿನ ಶೈಲಿಗೂ ಆತನ ಬಹಿರಂಗ ರೂಪಕ್ಕೂ ಅಂತರ ಕಂಡು ಇದು ಯಾವುದೋ ಮಾಯೆ ಎನ್ನುವ ಭಾವಕ್ಕೆ ರಾಮ ಲಕ್ಷ್ಮಣರು ಬರುವ ಸಾಧ್ಯತೆಯಿದೆ. ಬಿಕ್ಷುವಿನ ವೇಷವಾದರೆ ಆಡುವ ಮಾತಿಗೆ ಸಾಮ್ಯತೆ ಬರುತ್ತದೆ. ಅದೂ ಅಲ್ಲದೇ ರಾಮ ಲಕ್ಷ್ಮಣರೂ ಸಹ ತಾಪಸಿಗಳಂತೆ ಇದ್ದರು. ಆದರೆ ಅವರ ಕೈಯಲ್ಲಿ ಬಿಲ್ಲು ಬಾಣಗಳಿದ್ದವು. ಬತ್ತಳಿಕೆ ಬಿಗಿದ್ದರು. ಹೀಗಿರುವಾಗ ಅವರನ್ನು ಮೊದಲು ನೋಡಲು ಸರ್ವಮಾನ್ಯವಾದ ಬಿಕ್ಷುವಿನ ರೂಪ ಧರಿಸಿದರೆ ಅವರು ತನ್ನ ಕಡೆಗೆ ಗಮನವನ್ನು ಹರಿಸುತ್ತಾರೆ ಎನ್ನುವುದಾಗಿದೆ. ರಾಮ ಲಕ್ಷ್ಮಣರನ್ನು ಹತ್ತಿರದಿಂದ ಕಂಡಾಗ ಅವರಲ್ಲಿ ದಿವ್ಯ ಪ್ರಭೆ ದೇದೀಪ್ಯಮಾನವಾಗಿ ಬೆಳಗುತ್ತಿತ್ತು. ಆ ಪ್ರಭೆಯ ಎದುರು ಹನುಮಂತನಿಗೆ ತಾನು ವೇಷವನ್ನು ಮರೆಮಾಚಿರುವ ವಿಷಯವನ್ನು ಮುಚ್ಚಿಟ್ಟುಕೊಳ್ಳಲಾವದಾಗಲಿಲ್ಲ. ಆತ ತಾನು ಬಿಕ್ಷುವಿನ ವೇಷವನ್ನು ಧರಿಸಿ ಬಂದವ. ಕಾಮರೂಪಿಯಾದ ತಾನು ಇಚ್ಛೆಬಂದ ಕಡೆ ಹೋಗಬಲ್ಲೆ, ಇಚ್ಛೆಬಂದ ರೂಪವನ್ನು ಧರಿಸಬಲ್ಲೆ ಎಂದು ಪ್ರಾರಂಭದಲ್ಲಿಯೇ ಹೇಳಿಬಿಡುತ್ತಾನೆ. ಸುಗ್ರೀವನ ಸಚಿವ ತಾನು, ಆತನಿಗೆ ಪ್ರಿಯವನ್ನುಂಟುಮಾಡಬೇಕೆಂಬ ಆಶಯದಿಂದ ಈ ವೇಷದಲ್ಲಿ ಬಂದಿರುವೆ ಎನ್ನುತ್ತಾನೆ. ಆತನ ಮಾತಿನಲ್ಲಿ ಎಲ್ಲಿಯೂ ಕಪಟತೆ ತಿಲಮಾತ್ರವೂ ಇರಲಿಲ್ಲ. ಧ್ವನಿ ಹೃದಯ ಕಂಠ ಮತ್ತು ಮುಖಗಳ ಮೂಲಕವಾಗಿ ಹೊರಬರುತ್ತಿತ್ತು. ತನ್ನೊಡೆಯನ ಕ್ಷೇಮಕ್ಕಾಗಿ ವೇಷಧರಿಸುವುದು ಅಗತ್ಯವಿತ್ತು. ಆದರೆ ಅವರನ್ನು ನೋಡಿದಾಗ ಅದರ ಅವಶ್ಯಕತೆ ಉಳಿದಿಲ್ಲ ಎನ್ನುವುದು ಆತನ ಮಾತಿನ ಸಾರಾಂಶವಾಗಿತ್ತು. ರಾಮನಿಗೆ ಆತನ ಸರಳ ಮತ್ತು ಸುಂದರವಾದ ಭಾಷೆಯನ್ನು ಕೇಳಿ ಆನಂದವಾಯಿತು. ಅದಕ್ಕಿಂತಲೂ ಆತ ಸುಗ್ರೀವನ ಸಚಿವನೆನ್ನುವುದನ್ನು ಕೇಳಿ ಇಮ್ಮಡಿ ಆನಂದವಾಯಿತು. ಯಾರನ್ನು ತಾವು ಹುಡುಕಲು ಬಂದ್ದೇವೆಯೋ ಆತನ ಸಚಿವನೇ ತನ್ನನ್ನು ಎದುರುಗೊಳ್ಳಲು ಬಂದಿದ್ದಾನೆ. ಇದರಿಂದ ಅಯೋಧ್ಯೆಯ ಚಕ್ರವರ್ತಿ ಮನೆತನದವರು ಅಪರಿಚಿತರಂತೆ ಬೇರೊಬ್ಬರ ಭೇಟಿಗೆ ಹೋಗಿರುವುದಲ್ಲ, ರಾಜಪರಂಪರೆಯ ನಡಾವಳಿಯಂತೆ (Protocol) ಸಚಿವನೋರ್ವ ಎದುರುಗೊಳ್ಳಲು ಬಂದಿದ್ದಾನೆ. ರಾಜರುಗಳನ್ನು ಎದುರುಗೊಳ್ಳಲು ಯಾರು ಯಾರು ಹೋಗಬೇಕೆನ್ನುವ ನಡಾವಳಿಕೆಗಳು ಪ್ರಾಚೀನ ಕಾಲದಲ್ಲಿಯೂ ಇತ್ತು. ರಾಮನಿಗೆ ಆತನ ವ್ಯಕ್ತಿತ್ವ ಮೊದಲ ಭೇಟಿಯಲ್ಲಿಯೇ ಇಷ್ಟವಾಯಿತು. ಲಕ್ಷ್ಮಣನಿಗೆ ಆತ ಹೇಳುವ ಮಾತು

ನಾನೃಗ್ವೇದವಿನೀತಸ್ಯ ನಾಯಜುರ್ವೇದಧಾರಿಣಃ.
ನಾಸಾಮವೇದವಿದುಷಶ್ಶಕ್ಯಮೇವಂ ವಿಭಾಷಿತುಮ್ ৷৷ಕಿ.3.27৷৷

ಋಗ್ವೇದ, ಯಜುರ್ವೇದ ಮತ್ತು ಸಾಮವೇದಗಳನ್ನು ಅಧ್ಯಯನಮಾಡಿ ಶಿಕ್ಷಣ ಪಡೆಯದವನಿಗೆ ಹೀಗೆ ಮಾತಾಡಲು ಸಾಧ್ಯವಿಲ್ಲ. ಎನ್ನುತ್ತಾನೆ. ಇಲ್ಲಿ ಪ್ರತಿಯೊಂದು ವೇದದ ವಿಶೇಷವನ್ನುಹೇಳುವಾಗ “ವಿನೀತ”, “ಧಾರಿ” ಮತ್ತು “ವಿತ್” ಶಬ್ಧಗಳನ್ನು ವಿಶೇಷಣಗಳನ್ನಾಗಿ ಬಳಸಿದ್ದಾರೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡ ಭಾಗ 2: ದೀಪದ ಬುಡದಲ್ಲಿ ಕತ್ತಲೆ

ಸಂಭಾಷಣೆಯಲ್ಲಿ ಸಂವಹನ ಕ್ರಿಯೆ ತುಂಬಾ ಮುಖ್ಯ. ಇದೊಂದು ಮಾತಿನಲ್ಲಿ ಹನುಮಂತನ ವಾಕ್ ಪಟುತ್ವವನ್ನು ರಾಮ ಶ್ಲಾಘಿಸುತ್ತಾನೆ. ಋಗ್ವೇದದ ಪ್ರತಿವರ್ಣವೂ ಸ್ವರಪೂರ್ಣವಾಗಿರುತ್ತದೆ. ಅದನ್ನು ಉಚ್ಛರಿಸಬೇಕಾದರೆ ಸಾವಧಾನವಾಗಿ, ವಿನಿಯೋಗಿಸಬೇಕಾದ ಛಂದಸ್ಸು, ವ್ಯಾಕರಣ ಶುದ್ಧತೆ ಮತ್ತು ಗಂಭೀರ ಸ್ವರಬೇಕಾಗುತ್ತದೆ. ಅದನ್ನು ಸರಿಯಾಗಿ ಅಧ್ಯಯನ ಮಾಡಿದವನಿಂದಲೇ ಹೀಗೆ ಮಾತಾಡಲು ಸಾಧ್ಯ. ಹಾಗಾಗಿ ವಿನೀತ ಎನ್ನುವ ಶಬ್ದವನ್ನು ಬಳಸಿದ್ದಾನೆ. ವಿನೀತ ಎಂದರೆ ಆಚಾರ್ಯಮುಖೇನ ಶಾಸ್ತ್ರಬದ್ಧವಾಗಿ ಕಲಿತವ ಎಂದು ಅರ್ಥ. ಯಜುರ್ವೇದದಲ್ಲಿ ಪ್ರತಿಯೊಂದು ಅನುವಾಕನ್ನೂ ಇತರ ಅನುವಾಕಗಳೊಡನೆ ಸಂಕರ ಆಗದ ರೀತಿಯಲ್ಲಿ ಉಚ್ಛರಿಸಬೇಕು. ಅದಕೆ ಅಸಾಧಾರಣ ಧಾರಣಶಕ್ತಿಯ ಅವಶ್ಯಕತೆ ಇದೆ. ಸಾಮವೇದವು ಊಹರಹಸ್ಯಗಳಿಂದ ಗಾನರೂಪವಾಗಿದೆ. ಹನುಮಂತ ಆಡುವ ಮಾತಿನಲ್ಲಿ ಪದ್ಯದ ಗೇಯತೆಯೂ ಇತ್ತು. ಕಿವಿಗೆ ಇಂಪಾಗಿ ಆದರೆ ಅರ್ಥಗರ್ಭಿತವಾಗಿ ಇತ್ತು ಎನ್ನುವುದನ್ನು ಮೂರು ಶಬ್ದಗಳಾದ ವಿನೀತ, ಧಾರಿ ಮತ್ತು ವಿತ್ ಶಬ್ದಗಳ ಮೂಲಕ ರಾಮ ತಿಳಿಸುತ್ತಾನೆ. ರಾಮನೂ ಮೂರೂ ವೇದಗಳಲ್ಲಿ ಪಾರಂಗತನಾಗಿರುವುದರಿಂದಲೇ ಹನುಮಂತನ ಮಾತನ್ನು ಗ್ರಹಿಸಲು ಸಾಧ್ಯವಾಯಿತು ಎಂದೂ ಇಲ್ಲಿ ಅರ್ಥೈಸಬಹುದಾಗಿದೆ. ಮಂತ್ರಿ ಎದುರಾದಾಗ ರಾಜನಾದವ ಮಾತನ್ನಾಡುವುದಲ್ಲ. ಆತನ ಪರವಾಗಿ ಮಂತ್ರಿಯೋ ಅಥವಾ ಸಮರ್ಥ ದೂತನೋ ಮಾತನ್ನಾಡಬೇಕು. ಹಾಗಾಗಿ ಇಲ್ಲಿ ಹನುಮಂತನೊಡನೆ ಮುಂದಿನ ವಿಷಯವನ್ನು ಲಕ್ಷ್ಮಣ ಮಾತಾಡಲಿ ಎಂದು ರಾಮ ಇಂಗಿತವನ್ನು ವ್ಯಕ್ತಪಡಿಸುತ್ತಾನೆ. ಹಾಗಾಗಿ ಮುಂದೆ ಲಕ್ಷ್ಮಣ ಹನುಮಂತನಲ್ಲಿ ತಮ್ಮ ಅರಣ್ಯವಾಸದ ವಿಷಯವನ್ನು, ಸೀತಾಪಹರಣದ ವಿಷಯವನ್ನೂ ಸಹ ಸಮಗ್ರವಾಗಿ ತಿಳಿಸಿ ತಮ್ಮ ಭೇಟಿಯ ಉದ್ಧೇಶ ಸೀತೆ ಎಲ್ಲಿರುತ್ತಾಳೆಂದು ಕಂಡುಹಿಡಿಯಲು ಕಬಂಧನ ಸೂಚನೆಯ ಮೇರೆಗೆ ಸುಗ್ರೀವನೊಡನೆ ಆಶ್ರಯಕೋರಲು ಬಂದಿದ್ದೇವೆ ಎನುತ್ತಾ ಮೊದಲು ಹೇಳಿದ ಸುಗ್ರೀವಂ ಶರಣಂ ಗತಃ ಎನ್ನುವ ಆರು ಬಗೆಯ ಉಲ್ಲೇಖವನ್ನು ಮಾಡುತ್ತಾನೆ.

ಹನುಮಂತನು ಸೂರ್ಯನ ಹತ್ತಿರ ಸೂತ್ರ, ವೃತ್ತಿ, ವಾರ್ತಿಕ, ಮಹಾಭಾಷ್ಯ, ಶಾಸ್ತ್ರ, ಛಂದಃಶಾಸ್ತ್ರಗಳನ್ನೂ, ನವವ್ಯಾಕರಣಗಳನ್ನೂ ಕಲಿತವ. ಅಗಸ್ತ್ಯರು ಹನುಮಂತನ ಕುರಿತು ಆತ ಶಾಸ್ತ್ರವಿಷಯದಲ್ಲಿ ಬ್ರಹಸ್ಪತಿಯೊಡನೆ ಹೋಲಿಸಬಹುದು ಎನ್ನುತ್ತಾರೆ. ಆತನಿಗೆ ಲಕ್ಷ್ಮಣ ಸುಗ್ರೀವನೊಡನೆ ಶರಣಾಗತಿಗಾಗಿ ಬಂದಿದ್ದಾರೆ ಎಂದು ಹೇಳಿರುವುದು ಮನಸ್ಸಿಗೆ ಸರಿಕಾಣಲಿಲ್ಲ. ಅತನಿಗೆ ಸೂರ್ಯವಂಶದ ವಿಷಗಳೆಲ್ಲವೂ ತಿಳಿದಿದೆ. ಅವರ ಶ್ರೇಷ್ಠತೆಯ ಮತ್ತು ಮಹಾತ್ಮತೆಯ ಕುರಿತು ಗೌರವವಿದೆ. ಆದರೆ ಈ ವಾಕ್ ದೋಷವನ್ನು ಟೀಕಿಸಲೂ ಹೋಗುವುದಿಲ್ಲ. ರಾಮಲಕ್ಷ್ಮಣರನ್ನು ತನ್ನ ಭುಜದಮೇಲೆ ಹೊತ್ತು ಅವರನ್ನು ಋಷ್ಯಮೂಕ ಪರ್ವತಕ್ಕೆ ಕರೆತರುತ್ತಾನೆ. ಸುಗ್ರೀವ ಆಗ ಆಗಂತುಕರ ವಿಷಯದಲ್ಲಿ ಭಯಪಟ್ಟು ಅಲ್ಲೇ ಪಕದಲ್ಲಿದ್ದ ಮಲಯ ಪರ್ವತದಲ್ಲಿ ಇದ್ದ. ಆತನಲ್ಲಿ ರಾಮ ಲಕ್ಷ್ಮಣರ ಮತ್ತು ದಶರಥನ ಸಹಿತವಾಗಿ ಸೂರ್ಯವಂಶದ ದೊರೆಗಳ ಮಹಿಮೆಯನ್ನು ಹೇಳುತ್ತಾನೆ. ಅಂತಹ ಮಹಿಮಾನ್ವಿತರು ಸೀತಾನ್ವೇಷಣೆಯ ಸಲುವಾಗಿ ನಿನ್ನ ಸಹಾಯವನ್ನು ಬಯಸಿ ಬಂದಿದ್ದಾರೆ ಎನ್ನುತ್ತಾನೆ. ಇಲ್ಲಿ ಹನುಮಂತನ ಜಾಣ್ಮೆಯನ್ನು ಗಮನಿಸಬೇಕು. “ಸುಗ್ರೀವನಲ್ಲಿ ಶರಣಾಗತಿಯನ್ನು ಹೊಂದಲು ಬಂದಿದ್ದಾರೆ ಎನ್ನುವ ಮಾತಿನ ದೋಷವನ್ನು ಹನುಮಂತ ಪ್ರಾರಂಭದಲ್ಲಿ ಹೇಳಿದ ಶ್ಲೋಕದಂತೆ “ಸಹೋದರರಾದ ರಾಮಲಕ್ಷ್ಮಣರು ನಿನ್ನೊಡನೆ ಗೆಳೆತನವನ್ನು ಬೆಳೆಸುವ ಆಶಯವನ್ನು ಹೊಂದಿದ್ದಾರೆ. ಪೂಜನೀಯರಾದ ಇವರಿಬ್ಬರನ್ನೂ ನೀನು ಯಥೋಚಿತವಾಗಿ ಪ್ರತಿಗ್ರಹಿಸಿ ಪೂಜಿಸಬೇಕು” ಎಂದು ಬದಲಾಯಿಸಿ ಹೇಳುತ್ತಾನೆ.

“ನವವ್ಯಾಕರಣವೇತ್ತಾ -ಒಂಬತ್ತು ವ್ಯಾಕರಣ ಸಿದ್ಧಾಂತವನ್ನು ತಿಳಿದವ ಹನುಮಂತ ಎಂದು ಅಗಸ್ತ್ಯರು ಈತನನ್ನು ಹೊಗಳಿದ್ದು ಆತನ ಜಾಣ್ಮೆ ಮತ್ತು ಶಾಸ್ತ್ರಕೌಶಲ್ಯದ ಪರಿಣಿತಿಗಾಗಿ. ರಾಮನ ಅನುಗ್ರಹದಿಂದ ಹನುಮಂತ ಬ್ರಹ್ಮನೇ ಆಗುವನು- “ಬ್ರಹ್ಮಾ ಭವಿಷ್ಯತ್ಯಪಿ ತೇ ಪ್ರಸಾದಾತ್” ಎನ್ನುವ ಮಾತನ್ನೂ ಆಡುತ್ತಾರೆ. ಸುಂದರನೆನ್ನುವುದು ಆತನ ಇನ್ನೊಂದು ಹೆಸರು. ಅದು ಬಾಹ್ಯರೂಪದಿಂದ ಅಲ್ಲ, ಆತನ ವಿದ್ಯೆ ಮತ್ತು ವಿನಯಗಳ ಶೋಭೆಯಿಂದಾಗಿ. ಸುಗ್ರೀವನ ಸಚಿವ ರಾಮನೆಡೆಗೆ ಆಕರ್ಷಿತನಾಗುವುದು ಆತನ ಮೊದಲ ನೋಟದಲ್ಲಿಯೇ. ರಾಮನನ್ನು ನೋಡಿದ ತಕ್ಷಣ ಆತನ ಶಾಪ ವಿಮೋಚನೆಯಾಯಿತು ಎನ್ನುವ ಕಥೆ ಮೂಲ ರಾಮಾಯಣದಲ್ಲಿಲ್ಲ.

ಸುಗ್ರೀವನ ಚಂಚಲತೆಯ ವಿಷಯಗಳನ್ನು ಮುಂದಿನ ಸಂಚಿಕೆಯಲ್ಲಿ ಗಮನಿಸೋಣ.

Continue Reading
Advertisement
Actor Darshan
ಸಿನಿಮಾ17 mins ago

Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

Physical Abuse
ಉಡುಪಿ1 hour ago

Physical Abuse : ರೈಲಿನಲ್ಲಿ ಯುವತಿ ಮೇಲೆ ಮಾನಭಂಗಕ್ಕೆ ಯತ್ನ! ಭಟ್ಕಳ ಮೂಲದ ಕಾಮುಕ ಅರೆಸ್ಟ್‌

Kangana Ranaut
ರಾಜಕೀಯ1 hour ago

Kangana Ranaut: ದೂರದೃಷ್ಟಿಯೇ ಇಲ್ಲದ ರಾಹುಲ್ ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ: ಕಂಗನಾ

attempt to murder case
ತುಮಕೂರು2 hours ago

Attempt To murder : ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ!

Deepfake Video
ವೈರಲ್ ನ್ಯೂಸ್2 hours ago

Deepfake Video: ಶುಬ್ ಮನ್ ಗಿಲ್ ಅನ್ನು ದೂಷಿಸಿದ ವಿರಾಟ್; ಡೀಪ್ ಫೇಕ್ ವಿಡಿಯೋ ವೈರಲ್

Road Accident
ಬೆಂಗಳೂರು2 hours ago

Road Accident : ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್‌ ಸವಾರನಿಗೆ ಲಾರಿ ಡಿಕ್ಕಿ; ಹೊರಬಂತು ಮೆದುಳು!

Actor Chikkanna
ಪ್ರಮುಖ ಸುದ್ದಿ3 hours ago

Actor Chikkanna: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಭೇಟಿ ಮಾಡಿದ್ದಕ್ಕೆ ನಟ ಚಿಕ್ಕಣ್ಣ ವಿಚಾರಣೆಗೆ ಹಾಜರು

Actor Darshan
ಸ್ಯಾಂಡಲ್ ವುಡ್3 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

Hair Combing
ಆರೋಗ್ಯ7 hours ago

Hair Combing: ಕೂದಲು ಬಾಚುವ ಅಭ್ಯಾಸವಿಲ್ಲವೇ? ಹಾಗಾದರೆ ಇದನ್ನೊಮ್ಮೆ ಓದಿ!

dhavala dharini column Hanuman's setubandha to meet Sugriva in ramayana by narayana yaji
ಅಂಕಣ7 hours ago

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು?

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Actor Darshan
ಸ್ಯಾಂಡಲ್ ವುಡ್3 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಟ್ರೆಂಡಿಂಗ್‌