Sangolli Rayanna Statue: ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು; ಸಿದ್ದರಾಮಯ್ಯ - Vistara News

ಕರ್ನಾಟಕ

Sangolli Rayanna Statue: ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು; ಸಿದ್ದರಾಮಯ್ಯ

ಗೋಕಾಕದ ಕಳ್ಳಿಗುದ್ದಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು (Sangolli Rayanna Statue) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ರಾಯಣ್ಣನ ದೇಶಪ್ರೇಮ, ಜನಪ್ರೇಮವನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಸೈನಿಕ ಶಾಲೆ ಆರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.

VISTARANEWS.COM


on

Sangolli Rayanna Statue
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗೋಕಾಕ: ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿ ರಾಯಣ್ಣ (Sangolli Rayanna Statue) ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ. ಈಗ ಇನ್ನಷ್ಟು ಕಾಲ ಬದುಕಿದ್ದರೆ ಕಿತ್ತೂರಿನ ಮೇಲೆ ಬ್ರಿಟೀಷರ ಕಣ್ಣುಬೀಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಗೋಕಾಕದ ಕಳ್ಳಿಗುದ್ದಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು. ಇಲ್ಲದೇ ಹೋಗಿದ್ದರೆ ಇನ್ನಷ್ಟು ಕಾಲ ಕ್ರಾಂತಿಕಾರಿ ಗೆರಿಲ್ಲಾ ಹೋರಾಟ ಮುಂದುವರೆದು ಬ್ರಿಟೀಷರಿಗೆ ನೀರು ಕುಡಿಸುತ್ತಿದ್ದರು ಎಂದರು.

ಇದನ್ನೂ ಓದಿ: SSLC Exam 3 Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆ 3ರ ಫಲಿತಾಂಶ ಪ್ರಕಟ; ಮರುಎಣಿಕೆ, ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

ರಾಯಣ್ಣನ ದೇಶಪ್ರೇಮ, ಜನಪ್ರೇಮವನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಸೈನಿಕ ಶಾಲೆ ಆರಂಭಿಸಿದ್ದೇವೆ. ನೀವೆಲ್ಲಾ ಸಂಗೊಳ್ಳಿಗೆ ಭೇಟಿ ನೀಡಿ ಎಂದು ಕರೆ ನೀಡಿದರು.

ಇದನ್ನೂ ಓದಿ: Job Alert: ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ, ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಿ

ಈ ಸಂದರ್ಭದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ಮುಖ್ಯಸಚೇತಕ ಅಶೋಕ್ ಪಟ್ಟಣ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ. ಸಣ್ಣಕ್ಕಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Bomb Threat: ನಗರದಲ್ಲಿ ಮತ್ತೆ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ (Bomb Threat) ಇಮೇಲ್ ಬಂದಿದೆ. ಬೆಳಗ್ಗೆ 6.57ರ ಸುಮಾರಿಗೆ ಬಂದಿರುವ ಇಮೇಲ್ ನಲ್ಲಿ ಶಾಲೆ ಆವರಣದಲ್ಲಿ ಐದು ಪೈಪ್ ಲೈನ್ ಬಾಂಬ್ ಗಳನ್ನು ಇಡಲಾಗಿದೆ ಎಂದು ದುಷ್ಕರ್ಮಿಗಳು ಹೇಳಿದ್ದಾರೆ.

VISTARANEWS.COM


on

By

Bomb Threat
Koo

ಬೆಂಗಳೂರು: ಕೆಲವು ತಿಂಗಳ ಹಿಂದೆ ಬೆಂಗಳೂರು ನಗರದ (bengaluru city) ಕೆಲವು ಖಾಸಗಿ ಶಾಲೆಗಳಿಗೆ (Private schools) ಬಾಂಬ್ ಬೆದರಿಕೆ (Bomb Threat) ಬಂದಿತ್ತು. ಇದೀಗ ಮತ್ತೆ ದುಷ್ಕರ್ಮಿಗಳು ಇಮೇಲ್ ಮೂಲಕ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಹಾಕಿರುವುದಾಗಿ ಗೋವಿಂದಪುರ ಠಾಣೆಯಲ್ಲಿ (govindapura station) ಪ್ರಕರಣ ದಾಖಲಿಸಲಾಗಿದೆ.

ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಬೆಳಗ್ಗೆ 6.57ರ ಸುಮಾರಿಗೆ ಬಂದಿರುವ ಇಮೇಲ್ ನಲ್ಲಿ ಶಾಲೆ ಆವರಣದಲ್ಲಿ ಐದು ಪೈಪ್ ಲೈನ್ ಬಾಂಬ್ ಗಳನ್ನು ಇಡಲಾಗಿದೆ ಎಂದು ದುಷ್ಕರ್ಮಿಗಳು ಹೇಳಿದ್ದಾರೆ.

Father Kodachi ಹೆಸರಿನ coldghost456@gmail.com askbirnorth@tipsglobal.net ಎಂಬ ಐಡಿಯಿಂದ ಇಮೇಲ್ ಬೆದರಿಕೆ ಬಂದಿದ್ದು, ಮಧ್ಯಾಹ್ನ 1.30ಕ್ಕೆ ಬ್ಲಾಸ್ಟ್ ಆಗ ಆಗಲಿದೆ ಎಂದು ಮೇಲ್ ನಲ್ಲಿ ತಿಳಿಸಲಾಗಿದೆ.

ಮಾಹಿತಿ ಬಂದ ಕೂಡಲೇ ಶಾಲೆಗೆ ಹೋಗಿ ಗೋವಿಂದಪುರ ಪೊಲೀಸರು, ಬಾಂಬ್ ಸ್ಕ್ವಾಡ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಯಾವುದೇ ಆತಂಕಕಾರಿ ವಿಚಾರ ಪತ್ತೆಯಾಗಿಲ್ಲ.
ಸದ್ಯ ಘಟನೆ ಸಂಬಂಧ ಶಾಲೆಯ ಆಡಳಿತಾಧಿಕಾರಿ ನೀಡಿರುವ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್‌; ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ

Bomb Threat
Bomb Threat


ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್‌ ಬೆದರಿಕೆ

ಇತ್ತೀಚೆಗಷ್ಟೇ ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್ ಬೆದರಿಕೆಯ ಸಂದೇಶ ಬಂದಿತ್ತು. ಇಂಗ್ಲಿಷ್ ಬಳಸಿ‌ ಉರ್ದು ಭಾಷೆಯಲ್ಲಿ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿತ್ತು.

ವಂಡರ್‌ ಲಾ ಅಮ್ಯೂಸ್ಮೆಂಟ್ ಪಾರ್ಕ್ ಆಡಳಿತ ಹಾಗೂ ಸಿಬ್ಬಂದಿಗೆ ಇ-ಮೇಲ್ ಬಂದಿದೆ. ಸಂಡೇ ನಿನ್ನ ಹಾಗೂ ವಂಡರ್‌ ಲಾ ಪಾರ್ಕ್‌ಗೆ ಮೂರು ಬಾಂಬ್ ಸಿಡಿಸುತ್ತೇವೆ ಇನ್ಶಾಅಲ್ಲಾ..! ಕನ್ನಡದ ಕಾಫೀರರು ಮುಸ್ಲಿಂರ ಮೇಲೆ ಮಾಡುತ್ತಿರುವ ದಬ್ಬಾಳಿಕೆಯ ಶಿಕ್ಷೆ ಸಿಗಲಿದೆ ಎಂದು ಸಂದೇಶ ಕಳಿಸಿದ್ದರು.

ಕಳೆದ ಆಗಸ್ಟ್ ‌3ರಂದು ಹುಸಿ ಬಾಂಬ್ ಬೆದರಿಕೆ ಬಂದಿದ್ದು, ‌ತಡವಾಗಿ ಬೆಳಕಿಗೆ ಬಂದಿದೆ. ಮೊಹಮ್ಮದ್ ಇರ್ಫಾನ್ ಜಿಹಾದಿ ಎಂಬ ಹೆಸರಿನ‌ ಇ -ಮೇಲ್‌ನಿಂದ ಬಂದಿದೆ. ಬಿಡದಿ ಪೊಲೀಸರು ಇ ಮೇಲ್ ಮಾಡಿದ ಆರೋಪಿಯನ್ನು ಹುಡುಕುತ್ತಿದ್ದಾರೆ. ಬಾಂಬ್ ಬೆದರಿಕೆ ಬಳಿಕ‌ ಇಡೀ ಪಾರ್ಕ್ ಪರಿಶೀಲನೆ ಮಾಡಲಾಗಿದೆ.

Continue Reading

ಬೆಂಗಳೂರು

Actor Darshan: ನಟ ದರ್ಶನ್ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಬೆಂಗಾವಲು ಪಡೆಗೆ ನೋಟಿಸ್!

ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ (Actor Darshan) ಬಳ್ಳಾರಿ ಜೈಲಿಗೆ ಸ್ಟೈಲಿಶ್ ಲುಕ್ನಲ್ಲಿ ಎಂಟ್ರಿ ನೀಡಿದ ವಿಚಾರವಾಗಿ ನಿಯಮ ಉಲ್ಲಂಘಿಸಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗುವುದು ಎಂದು ಬಂಧಿಕಾನೆ ಡಿಐಜಿ ಟಿ.ಪಿ ಶೇಷಾ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ (Actor Darshan) ಬಳ್ಳಾರಿ ಜೈಲಿಗೆ ಸ್ಟೈಲಿಶ್ ಲುಕ್‌ನಲ್ಲಿ ಎಂಟ್ರಿ ನೀಡಿದ ವಿಚಾರವಾಗಿ ನಿಯಮ ಉಲ್ಲಂಘಿಸಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗುವುದು ಎಂದು ಬಂಧಿಕಾನೆ ಡಿಐಜಿ ಟಿ.ಪಿ ಶೇಷಾ ತಿಳಿಸಿದ್ದಾರೆ.

ಇದನ್ನೂ ಓದಿ: Viral News: 10 ವರ್ಷಗಳ ಬೋಧನೆಯ ಅನಂತರವೂ ಸಂಬಳ ಹೆಚ್ಚಿಸಿಲ್ಲ; ಹತಾಶೆಯಿಂದ ರಾಜೀನಾಮೆ

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಬಳ್ಳಾರಿ ಜೈಲಿನ ಕಾರಾಗೃಹದ ಒಳಗೆ ಎಂಟ್ರಿ ನೀಡುವಾಗ ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿಕೊಂಡರು. ಆದರೆ ಯಾವುದೇ ಕಾರಣಕ್ಕೂ ಜೈಲಿನಲ್ಲಿ ಕೂಲಿಂಗ್ ಗ್ಲಾಸ್‌ನಂಥ ವಸ್ತುಗಳನ್ನು ಒಯ್ಯುವ ಹಾಗಿಲ್ಲ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗುವುದು ಎಂದು ಬಂಧಿಕಾನೆ ಡಿಐಜಿ ಟಿ.ಪಿ ಶೇಷಾ, ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್‌ನನ್ನು (Actor Darshan) ಪೊಲೀಸ್‌ ಬಂದೋಬಸ್ತ್‌ನಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಇನ್ಮುಂದೆ ನಟ ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ ಎನ್ನಲಾಗಿದೆ.

ಕೇವಲ ಕೈದಿಯ ಧರ್ಮಪತ್ನಿ, ರಕ್ತಸಂಬಂಧಿಗಳು ಮತ್ತು ವಕಾಲತ್ತು ವಹಿಸಿದ ವಕೀಲರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ವ್ಯಕ್ತಿಗಳು ಯಾರಿಗೂ ದರ್ಶನ್‌ ಭೇಟಿಗೆ ಅವಕಾಶ ಇರುವುದಿಲ್ಲ. ಇನ್ನೂ ಸಾಮಾನ್ಯ ಖೈದಿಯಂತೆ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇರಲಿದ್ದು, ಗೃಹ, ಮನರಂಜನೆ ಸೌಲಭ್ಯಗಳು, ಕಾರಾಗೃಹದ ನಿಯಮದಂತೆ ಒದಗಿಸಲಾಗುತ್ತದೆ. ನಿಯಮ ಉಲ್ಲಂಘನೆ ಮಾಡುವ ಆಗಿಲ್ಲ. ಬೇರೆ ಕೈದಿಗಳ ಜತೆ ಬೆರೆಯದಂತೆ ಸೂಕ್ತ ಭದ್ರತೆ ನೀಡಲಾಗಿದೆ.

ದರ್ಶನ್‌ಗಿಲ್ಲ ವಿವಿಐಪಿ ಟ್ರೀಟ್ಮೆಂಟ್‌; ಸಾಮಾನ್ಯ ಖೈದಿಗೆ ಸಿಸಿಟಿವಿ ಕಣ್ಗಾವಲು

ಈಗಾಗಲೇ ನಟ ದರ್ಶನ್‌ ಬಳ್ಳಾರಿ ಜೈಲಿಗೆ ಸ್ಥಳಾಂತರವಾಗಿದ್ದು, ಸಾಮಾನ್ಯ ಖೈದಿಯಂತೆ ಇರಬೇಕಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ವಿವಿಐಪಿ ಟ್ರೀಟ್ಮೆಂಟ್‌ ಬಳ್ಳಾರಿ ಜೈಲಿನಲ್ಲಿ ಇರುವುದಿಲ್ಲ. ಇನ್ನೂ ದಿನದ 24/7 ದರ್ಶನ್ ಮೇಲೆ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಇರಲಿದೆ. ದಿನನಿತ್ಯ ದರ್ಶನ್ ಸಿಸಿಟಿವಿ ಫೂಟೇಜ್ ಪ್ರತ್ಯೇಕವಾಗಿ ಶೇಖರಿಸಿಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Road Accident : ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್‌ ಸವಾರನಿಗೆ ಲಾರಿ ಡಿಕ್ಕಿ; ಹೊರಬಂತು ಮೆದುಳು!

ದರ್ಶನ್ ಇರುವ ಕೊಠಡಿಗೆ ಮುಖ್ಯ ವೀಕ್ಷಕ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ಅನುಭವವುಳ್ಳ ಸಿಬ್ಬಂದಿ ವರ್ಗ ನಿಯೋಜನೆ ಮಾಡಲಾಗಿದೆ. ಭದ್ರತೆ ಹಾಗೂ ದರ್ಶನ್ ಚಲನವಲನಗಳ ಬಗ್ಗೆ ತೀವ್ರ ನಿಗಾ ಇಡಲಾಗುತ್ತದೆ. ಕಾರಾಗೃಹದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿನಿತ್ಯ ಬೀಗ ತೆರೆಯುವ ಹಾಗೂ ಬೀಗ ಮುದ್ರೆ ಮಾಡುವ ಸಮಯದಲ್ಲಿ ಕೂಲಂಕುಷವಾಗಿ ತಪಾಸಣೆ ಮಾಡುವಂತೆ ಸೂಚನೆನೀಡಲಾಗಿದೆ. ಯಾವುದೇ ನಿಷೇಧಿತ ವಸ್ತುಗಳು ದೊರಕದ ಹಾಗೆ ಪ್ರತ್ಯೇಕ ವಹಿಯನ್ನು ನಿರ್ವಹಿಸಬೇಕು. ಪಹರೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಬಾಡಿ ವೋರ್ನ್ ಕ್ಯಾಮೆರಾ ಧರಿಸಬೇಕು ಎನ್ನಲಾಗಿದೆ.

Continue Reading

ಕ್ರೈಂ

Karwar Jail: ನಟ ದರ್ಶನ್‌ಗೆ ಐಷಾರಾಮಿ ಸವಲತ್ತು! ಕಾರವಾರ ಜೈಲಿನಲ್ಲಿ ತಂಬಾಕಿಗೆ ಬೇಡಿಕೆ ಇಟ್ಟ ಖೈದಿಗಳಿಂದ ಗಲಾಟೆ

ಕೆಲವು ಖೈದಿಗಳು ಹೊರಗಡೆಯಿಂದ ತಂಬಾಕು ತಂದುಕೊಡುವಂತೆ ಕಾರವಾರ ಜೈಲು (Karwar Jail) ಸಿಬ್ಬಂದಿಗೆ ಆಗ್ರಹಿಸಿದ್ದು, ಇದಕ್ಕೆ ಜೈಲು ಸಿಬ್ಬಂದಿ ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಖೈದಿಗಳು ಕಲ್ಲಿನಿಂದ ಸ್ವಯಂ ಹಲ್ಲೆ ಮಾಡಿಕೊಂಡು ಜೈಲಿನಲ್ಲಿ ರಾದ್ಧಾಂತ ಎಬ್ಬಿಸಿದ್ದಾರೆ. ಗಾಯಗೊಂಡ ಇಬ್ಬರು ಖೈದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

By

Karwar Jail
Koo

ಕಾರವಾರ: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappa Agrahara Jail) ನಟ ದರ್ಶನ್ ಗೆ (Actor darshan) ಐಷಾರಾಮಿ ಸವಲತ್ತು ಕಲ್ಪಿಸಿರುವ ಹಿನ್ನೆಲೆಯಲ್ಲಿ ಇದೀಗ ಉತ್ತರಕನ್ನಡ ಜಿಲ್ಲೆಯ (Uttara Kannada District) ಕಾರವಾರ ನಗರದ ಜೈಲಿನಲ್ಲಿ (Karwar Jail) ಖೈದಿಗಳು ಜೈಲು ಸಿಬ್ಬಂದಿಗೆ ಕೆಲವು ವಸ್ತುಗಳನ್ನು ತಂದುಕೊಡುವಂತೆ ಬೇಡಿಕೆ ಇಟ್ಟ ಘಟನೆ ನಡೆದಿದೆ.

ಕೆಲವು ಖೈದಿಗಳು ಹೊರಗಡೆಯಿಂದ ತಂಬಾಕು ತಂದುಕೊಡುವಂತೆ ಜೈಲು ಸಿಬ್ಬಂದಿಗೆ ಆಗ್ರಹಿಸಿದ್ದಾರೆ. ಜೈಲು ಸಿಬ್ಬಂದಿ ತಂಬಾಕು ತಂದುಕೊಡಲು ನಿರಾಕರಿಸಿದ್ದಕ್ಕೆ ಖೈದಿಗಳು ಕಲ್ಲಿನಿಂದ ಸ್ವಯಂ ಹಲ್ಲೆ ಮಾಡಿಕೊಂಡು ಜೈಲಿನಲ್ಲಿ ರಾದ್ಧಾಂತ ಎಬ್ಬಿಸಿದ್ದಾರೆ.

ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಗುರುವಾರ ತಂಬಾಕು ಕೊಡುವಂತೆ ಆಗ್ರಹಿಸಿ ಖೈದಿಗಳು ಗಲಾಟೆ ಮಾಡಿದ್ದಾರೆ. ತಂಬಾಕು ನೀಡದ್ದಕ್ಕೆ ಇಬ್ಬರು ಖೈದಿಗಳು ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಮಹಮ್ಮದ್ ಮುಜಾಮಿಲ್, ಫರಾನ್ ಛಬ್ಬಿ ಕಲ್ಲಿನಿಂದ ಜಜ್ಜಿಕೊಂಡು ಹಲ್ಲೆ ಮಾಡಿಕೊಂಡ ಖೈದಿಗಳು.

Karwar Jail
Karwar Jail


ಹಲ್ಲೆ ಮಾಡಿಕೊಂಡ ಬಳಿಕ ವಾರ್ಡನ್ ಮೇಲೆ ಆರೋಪ ಮಾಡಿರುವ ಖೈದಿಗಳು ತಂಬಾಕು ನೀಡದ್ದಕ್ಕೆ ವಾರ್ಡನ್ ಮೇಲೂ ಹಲ್ಲೆಗೆ ಮುಂದಾಗಿದ್ದಾರೆ. ಬಳಿಕ ವಾರ್ಡನ್‌ಗಳೇ ತಮ್ಮ ಮೇಲೆ ಹಲ್ಲೆ ಮಾಡಿದ್ದಾಗಿ ಆರೋಪಿಸಿದ್ದಾರೆ.

ಗಾಯಗೊಂಡ ಖೈದಿಗಳನ್ನು ಕಾರವಾರ ಪೊಲೀಸರು ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಖೈದಿಗಳ ವಾರ್ಡ್ ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಇದನ್ನೂ ಓದಿ: Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಿಯತಮೆಗೆ ಚಾಕುವಿನಿಂದ ಇರಿದ ಯುವಕ

ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಯುವಕನೋರ್ವ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ಹನೀಷಾ (21) ಚಾಕುವಿನಿಂದ ಇರಿತಕ್ಕೊಳಗಾದ ಮಂಗಳಮುಖಿಯಾಗಿದ್ದಾರೆ. ಮಂಡ್ಯದ ಆದಿಲ್‌ (23) ಚಾಕು ಇರಿದ ಆರೋಪಿ. ಇವರಿಬ್ಬರು ಕಳೆದ ಆರು ತಿಂಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಹನೀಷಾ ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ನಿಮಿತ್ತ ಪರ ಊರುಗಳಿಗೆ ಆಗಾಗ ಹೋಗುತ್ತಿದ್ದರು.

ಇದನ್ನು ಸಹಿಸದ ಆದಿಲ್‌ ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸುತ್ತಿದ್ದ. ಇದರಿಂದ ಬೇಸತ್ತು ಹನೀಷಾ ಪ್ರೇಮ ನಿರಾಕರಿಸಿದ್ದಳು. ಈ ಹಿನ್ನೆಲೆಯಲ್ಲಿ ಬುಧವಾರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭದಲ್ಲಿ ಸಿಟ್ಟಿನಲ್ಲಿ ಆದಿಲ್‌ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ಹನೀಷಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

Continue Reading

ಮಳೆ

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಜನ-ಜೀವನ ಅಸ್ತವ್ಯಸ್ತ

Karnataka Weather Forecast : ಗುರುವಾರ ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ (Rain News) ಜನರು ಪರದಾಡಿದರು. ಉಡುಪಿ ಜಿಲ್ಲೆಯ ಮೀನುಗಾರರಿಗೂ ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ಉಡುಪಿ: ಪೂರ್ವ ಅರಬ್ಬೀ ಸಮುದ್ರದಲ್ಲಿ ಟ್ರಫ್ ಎದ್ದಿದ್ದು, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ.ಇದರ ಪ್ರಭಾವದಿಂದಾಗಿ ಗುರುವಾರ ರಾಜ್ಯದ ಹಲವೆಡೆ ಮಳೆ (Rain News) ಅಬ್ಬರಿಸಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದ ಮಳೆಯು ಗುರುವಾರ (Karnataka Weather Forecast) ಗರ್ಜಿಸಿತ್ತು.

ಮಧ್ಯಾಹ್ನ 1 ಗಂಟೆ ಸುಮಾರಿಗೆ ಮೋಡ ಕವಿದು ಗುಡುಗು ಸಹಿತ ಭರ್ಜರಿ ಮಳೆಯಾಗಿತ್ತು. ದಿಢೀರ್‌ ಮಳೆಗೆ ಕೋರಮಂಗಲ, ಆಡುಗೋಡಿ, ಮಡಿವಾಳ, ಬನ್ನೇರುಘಟ್ಟ, ಮೆಜೆಸ್ಟಿಕ್‌, ಶಿವಾಜಿನಗರ, ವಿಧಾನಸೌಧ ಸೇರಿದಂತೆ ಹಲವೆಡೆ ಮಳೆಯಾಗಿದೆ.

ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡಿ, ಬಸ್ ನಿಲ್ದಾಣವನ್ನು ಆಶ್ರಯ ಪಡೆದರು. ಕೆಲವೆಡೆ ರಸ್ತೆ ಮೇಲೆ ನೀರು ನಿಂತ ಕಾರಣ ಸವಾರರು ಸಂಕಷ್ಟ ಎದುರಿಸಿದರು. ಫ್ರೀಡಂ ಪಾರ್ಕ್‌ನಿಂದ ಆನಂದ್‌ ರಾವ್ ಸರ್ಕಲ್‌ಗೆ ಸಂಪರ್ಕಿಸುವ ರಸ್ತೆಯಲ್ಲಿ ನೀರು ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಲೋಕಾಯುಕ್ತ ಕಚೇರಿಯ ಮುಂಭಾಗ ಸಂಪೂರ್ಣ ಕೆರೆಯಂತಾಗಿತ್ತು. ಮಳೆ ನೀರಲ್ಲಿ ರಸ್ತೆ ದಾಟಲು ಜನರು ಪರದಾಡಿದರು.

ಇನ್ನು ಬೆಂಗಳೂರಿನಲ್ಲಿ ಭಾರಿ ಮಳೆಗೆ ಚಿಕ್ಕಪೇಟೆಯಲ್ಲಿರುವ ಸುಲ್ತಾನ್ ಪೇಟೆ ಜಲಾವೃತಗೊಂಡಿತ್ತು. ಜವಳಿ ಅಂಗಡಿಗಳ ಪ್ರಮುಖ ಕೇಂದ್ರವಾಗಿರುವ ಸುಲ್ತಾನ್ ಪೇಟೆಯ ಬಹುತೇಕ ಗಲ್ಲಿಗಳಿಗೆ, ಅಂಗಡಿಗಳಿಗೂ ಮೋರಿ ನೀರು ನುಗ್ಗಿತ್ತು. ನೀರು ತೆರವು ಮಾಡಲು ಅಂಗಡಿ ಸಿಬ್ಬಂದಿ ಪರದಾಡಿದರು.

ಇದನ್ನೂ ಓದಿ: CM Siddaramaiah : ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್‌; ಆ.31ಕ್ಕೆ ವಿಚಾರಣೆ ಮುಂದೂಡಿಕೆ

ಮುಂದಿನ ಐದು ದಿನಗಳಿಗೆ ಮಳೆ ಅಲರ್ಟ್

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಎರಡೂ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆಗಸ್ಟ್ 29 ರಿಂದ ಆಗಸ್ಟ್ 31ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಆಗಸ್ಟ್ 29 ರಿಂದ 30ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಹಾಗೂ ಆಗಸ್ಟ್ 29ರಿಂದ ಸೆಪ್ಟೆಂಬರ್1ರ ವರೆಗೆ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಆಳಸಮುದ್ರ ಮೀನುಗಾರಿಕೆಗೆ ತೆರಳಿದವರಿಗೆ ಕಟ್ಟೆಚ್ಚರ

ಕರಾವಳಿಯ ಉಡುಪಿಗೆ ಆರೆಂಜ್ ಹಾಗೂ ರೆಡ್ ಅಲರ್ಟ್ ನೀಡಲಾಗಿದೆ. ಗಾಳಿ ಜತೆಗೆ ಮಳೆಯಾಗಲಿದ್ದು, ಕಡಲಿಗಿಳಿಯುವ ಮೀನುಗಾರರಿಗೆ ಎಚ್ಚರಿಕೆ ಸಂದೇಶ ನೀಡಿದೆ. ಆಳಸಮುದ್ರ ಮೀನುಗಾರಿಕೆಗೆ ತೆರಳಿದವರಿಗೆ ಕಟ್ಟೆಚ್ಚರ ನೀಡಿದೆ. ಹವಾಮಾನ ಇಲಾಖೆ ಮನ್ಸೂಚನೆ ಮೇರೆಗೆ ಕೆಲ ಬೋಟ್‌ಗಳು ವಾಪಸ್ ಆಗಿವೆ. ಐಎಂಡಿ ಆಗಸ್ಟ್ 30 ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಆಗಸ್ಟ್ 31 ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kannada New Movie
ಸಿನಿಮಾ9 mins ago

Kannada New Movie: ‘ಸರ್ವೇ ನಂಬರ್ 45’ ಚಿತ್ರೀಕರಣಕ್ಕೆ ಚಾಲನೆ

Spectrum Dress Fashion
ಫ್ಯಾಷನ್13 mins ago

Spectrum Dress Fashion: ಮಳೆಗಾಲದ ಫ್ಯಾಷನ್‌ಗೆ ಕಾಲಿಟ್ಟಿವೆ ಗ್ಲಾಮರಸ್‌ ಸಿಕ್ವೀನ್ಸ್ ರೆಟ್ರೊ ಸ್ಪೆಕ್ಟ್ರಮ್‌ ಡ್ರೆಸ್

Bomb Threat
ಕ್ರೈಂ31 mins ago

Bomb Threat: ನಗರದಲ್ಲಿ ಮತ್ತೆ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

Actor Darshan
ಬೆಂಗಳೂರು52 mins ago

Actor Darshan: ನಟ ದರ್ಶನ್ ಕೂಲಿಂಗ್ ಗ್ಲಾಸ್‌ ಧರಿಸಲು ಅನುಮತಿ ನೀಡಿದ ಬೆಂಗಾವಲು ಪಡೆಗೆ ನೋಟಿಸ್!

Karwar Jail
ಕ್ರೈಂ1 hour ago

Karwar Jail: ನಟ ದರ್ಶನ್‌ಗೆ ಐಷಾರಾಮಿ ಸವಲತ್ತು! ಕಾರವಾರ ಜೈಲಿನಲ್ಲಿ ತಂಬಾಕಿಗೆ ಬೇಡಿಕೆ ಇಟ್ಟ ಖೈದಿಗಳಿಂದ ಗಲಾಟೆ

Shalini Rajaneesh
ಫ್ಯಾಷನ್1 hour ago

Shalini Rajaneesh: ಸೀರೆ, ಹಣೆಗೆ ಅಗಲವಾದ ರೆಡ್ ಬಿಂದಿ ಎಂದಿಗೂ ಬದಲಾಗದ ನನ್ನ ಯೂನಿಕ್ ಫ್ಯಾಷನ್ ಸ್ಟೇಟ್ಮೆಂಟ್!

karnataka Weather Forecast
ಮಳೆ1 hour ago

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆಗೆ ಜನ-ಜೀವನ ಅಸ್ತವ್ಯಸ್ತ

Namratha Gowda
ಕಿರುತೆರೆ1 hour ago

Namratha Gowda: ಕಪ್ಪು ಸೀರೆಯುಟ್ಟು ನೋಡುಗರ ನಿದ್ದೆಗೆಡಿಸಿದ ಕಿರುತೆರೆ ನಟಿ ನಮ್ರತಾ ಗೌಡ

DK Shivakumar
ರಾಜಕೀಯ2 hours ago

DK Shivakumar: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ; ಸಿಬಿಐ, ಯತ್ನಾಳ್ ಅರ್ಜಿ ವಜಾ: ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

Viral News
ವೈರಲ್ ನ್ಯೂಸ್3 hours ago

Viral News: ಯುಪಿ ಸರ್ಕಾರದ ಆಫರ್‌; ಇದು ಕಾನೂನುಬದ್ಧ ಲಂಚ ಎಂದು ಪರ-ವಿರೋಧದ ಜಗಳಕ್ಕಿಳಿದ ಯೂಟ್ಯೂಬರ್ಸ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Actor Darshan
ಸ್ಯಾಂಡಲ್ ವುಡ್9 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಟ್ರೆಂಡಿಂಗ್‌