Accident case : ಉಳುಮೆ ಮಾಡುವಾಗ ಅವಘಡ; ಟ್ರ್ಯಾಕ್ಟರ್‌ ಕೆಳಗೆ ಸಿಲುಕಿ ರೈತ ಸಾವು - Vistara News

ಕ್ರೈಂ

Accident case : ಉಳುಮೆ ಮಾಡುವಾಗ ಅವಘಡ; ಟ್ರ್ಯಾಕ್ಟರ್‌ ಕೆಳಗೆ ಸಿಲುಕಿ ರೈತ ಸಾವು

Accident Case : ಗದ್ದೆಯಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್‌ ಕೆಸರಿನಲ್ಲಿ ಸಿಲುಕಿತ್ತು. ಅದನ್ನೂ ಮೇಲೆತ್ತಲು ಹೋದಾಗ ಟ್ರ್ಯಾಕ್ಟರ್‌ ಪಲ್ಟಿಯಾಗಿ ರೈತರು ಮೃತಪಟ್ಟಿದ್ದಾರೆ.

VISTARANEWS.COM


on

Accident case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಬಳ್ಳಾಪುರ: ಗದ್ದೆಯಲ್ಲಿ ಉಳುಮೆ ಮಾಡುವ ವೇಳೆ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ರೈತ (Accident case) ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದ ಚೇಳೂರು ತಾಲ್ಲೂಕಿನ ದಿಗವಪ್ಯಯಲವಾರಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಂಕರ್ ರೆಡ್ಡಿ (40) ಮೃತ ದುರ್ದೈವಿ.

ಶಂಕರ್‌ ರೆಡ್ಡಿ ಟ್ರ್ಯಾಕ್ಟರ್ ಚಾಲನೆ ಮಾಡುತ್ತಾ ಕೆಸರು ಗದ್ದೆ ಉಳುಮೆ ಮಾಡುತ್ತಿದ್ದರು. ಈ ವೇಳೆ ಕೆಸರಿನಲ್ಲಿ ಸಿಲುಕಿದ ಟ್ರ್ಯಾಕ್ಟರ್ ಮೇಲೆತ್ತಲು ಪ್ರಯತ್ನ ಪಟ್ಟಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಅದರ ಅಡಿ ಸಿಲುಕಿ ಮೃತಪಟ್ಟರು. ಅಲ್ಲಿದ್ದವರು ಸ್ಥಳೀಯರು ಜೆಸಿಬಿ ಮೂಲಕ ಟ್ರ್ಯಾಕ್ಟರ್‌ನಡಿಯಲ್ಲಿದ್ದ ಮೃತ ದೇಹವನನ್ನು ಹೊರತೆಗೆದಿದ್ದಾರೆ.

ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದೆ. ಚಿಕ್ಕಬಳ್ಳಾಪುರದ ಚೇಳೂರು ತಾಲೂಕು ದಿಗವ ಪ್ಯಯಲವಾರಪಲ್ಲಿ ದುರ್ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Actor darshan : ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ; ನಟ ದರ್ಶನ್ ವಿರುದ್ಧ ಮತ್ತೆ 3 ಪ್ರತ್ಯೇಕ ಎಫ್‌ಐಆರ್‌ ದಾಖಲು

ಬಳ್ಳಾರಿಯಲ್ಲಿ ಖಾಸಗಿ ಬಸ್‌ ಪಲ್ಟಿ

ಬಳ್ಳಾರಿಯ ಯರ್ರಗುಡಿ ಗ್ರಾಮದ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಭಾರೀ ಅನಾಹುತ ತಪ್ಪಿದೆ. ಬಳ್ಳಾರಿ ತಾಲೂಕಿನ ಯರ್ರಗುಡಿ ಗ್ರಾಮ ಬಳಿ ಅಪಘಾತ ನಡೆದಿದೆ. ದಿಢೀರ್ ಆಗಿ ಖಾಸಗಿ ಬಸ್‌ಗೆ ಅಡ್ಡ ಬಂದ ಬೈಕ್, ಡಿಕ್ಕಿ ಯತ್ನಿಸಲು ಹೋಗಿ ಪಲ್ಟಿಯಾಗಿದೆ. ಬೈಕ್‌ಗೆ ಡಿಕ್ಕಿಯಾಗಿ, ಸವಾರನಿಗೆ ಗಂಭೀರ ಗಾಯವಾಗಿದೆ. ಬಸ್ಸಿನಲ್ಲಿದ್ದ ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಳ್ಳಾರಿಯಿಂದ ಆಂಧ್ರದ ಆದೋನಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೋಕಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೆಟ್ಟು ನಿಂತಿದ್ದ ಲಾರಿಗೆ ಆಂಬ್ಯುಲೆನ್ಸ್‌ ಡಿಕ್ಕಿ, ಮಹಿಳೆ ಸಾವು

ಕೆಟ್ಟು ನಿಂತಿದ್ದ ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿಯಾಗಿದ್ದು ಸ್ಥಳದಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಆಂಬ್ಯುಲೆನ್ಸ್‌ನಲ್ಲಿ ಮೃತದೇಹವನ್ನು ಸಾಗಿಸುವಾಗ ಅಪಘಾತ ಸಂಭವಿಸಿದೆ. ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 4 ರ ಬಳ್ಳೇಕಟ್ಟೆ ಬಳಿ ಬ್ರಿಡ್ಜ್ ಬಳಿ ಘಟನೆ ನಡೆದಿದೆ. ಹಾವೇರಿ ಮೂಲದ ಸರೋಜಮ್ಮ (60) ಸಾವು ಇನ್ನೂ ಮೂವರಿಗೆ ಗಂಭೀರ ಗಾಯವಾಗಿದೆ. ಆಂಬ್ಯುಲೆನ್ಸ್ ಬೆಂಗಳೂರಿನಿಂದ ಹಾವೇರಿಗೆ ಹೊರಟಿತ್ತು. ಇತ್ತ ಬಳ್ಳೇಕಟ್ಟೆ ಬ್ರಿಡ್ಜ್ ಬಳಿ ಲಾರಿ ಚಾಲಕ
ರಸ್ತೆಯಲ್ಲೆ ಲಾರಿ ನಿಲ್ಲಿಸಿ ರಿಪೇರಿ ಮಾಡುತ್ತಿದ್ದ. ಆತನ ಯಡವಟ್ಟಿಗೆ ಅಪಘಾತ ಸಂಭವಿಸಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಕುಟುಂಬಸ್ಥರು ಹೊರತು ಪಡಿಸಿ ಬೇರೆ ಯಾರಿಗೂ ಅವಕಾಶವಿಲ್ಲ. ಜತೆಗೆ ಯಾವುದೇ ವಿವಿಐಪಿ ಟ್ರೀಟ್ಮೆಂಟ್‌ ಇರುವುದಿಲ್ಲ. ಸಾಮಾನ್ಯ ಖೈದಿಯಂತೆ ಸಿಸಿಟಿವಿ ಕಣ್ಗಾವಲು ಇರಲಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್‌ನನ್ನು (Actor Darshan) ಪೊಲೀಸ್‌ ಬಂದೋಬಸ್ತ್‌ನಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಇನ್ಮುಂದೆ ನಟ ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ ಎನ್ನಲಾಗಿದೆ.

ಕೇವಲ ಕೈದಿಯ ಧರ್ಮಪತ್ನಿ, ರಕ್ತಸಂಬಂಧಿಗಳು ಮತ್ತು ವಕಾಲತ್ತು ವಹಿಸಿದ ವಕೀಲರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ವ್ಯಕ್ತಿಗಳು ಯಾರಿಗೂ ದರ್ಶನ್‌ ಭೇಟಿಗೆ ಅವಕಾಶ ಇರುವುದಿಲ್ಲ. ಇನ್ನೂ ಸಾಮಾನ್ಯ ಖೈದಿಯಂತೆ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇರಲಿದ್ದು, ಗೃಹ, ಮನರಂಜನೆ ಸೌಲಭ್ಯಗಳು, ಕಾರಾಗೃಹದ ನಿಯಮದಂತೆ ಒದಗಿಸಲಾಗುತ್ತದೆ. ನಿಯಮ ಉಲ್ಲಂಘನೆ ಮಾಡುವ ಆಗಿಲ್ಲ. ಬೇರೆ ಕೈದಿಗಳ ಜತೆ ಬೆರೆಯದಂತೆ ಸೂಕ್ತ ಭದ್ರತೆ ನೀಡಲಾಗಿದೆ.

ಇದನ್ನೂ ಓದಿ: Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ದರ್ಶನ್‌ಗಿಲ್ಲ ವಿವಿಐಪಿ ಟ್ರೀಟ್ಮೆಂಟ್‌; ಸಾಮಾನ್ಯ ಖೈದಿಗೆ ಸಿಸಿಟಿವಿ ಕಣ್ಗಾವಲು

ಈಗಾಗಲೇ ನಟ ದರ್ಶನ್‌ ಬಳ್ಳಾರಿ ಜೈಲಿಗೆ ಸ್ಥಳಾಂತರವಾಗಿದ್ದು, ಸಾಮಾನ್ಯ ಖೈದಿಯಂತೆ ಇರಬೇಕಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ವಿವಿಐಪಿ ಟ್ರೀಟ್ಮೆಂಟ್‌ ಬಳ್ಳಾರಿ ಜೈಲಿನಲ್ಲಿ ಇರುವುದಿಲ್ಲ. ಇನ್ನೂ ದಿನದ 24/7 ದರ್ಶನ್ ಮೇಲೆ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಇರಲಿದೆ. ದಿನನಿತ್ಯ ದರ್ಶನ್ ಸಿಸಿಟಿವಿ ಫೂಟೇಜ್ ಪ್ರತ್ಯೇಕವಾಗಿ ಶೇಖರಿಸಿಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ದರ್ಶನ್ ಇರುವ ಕೊಠಡಿಗೆ ಮುಖ್ಯ ವೀಕ್ಷಕ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ಅನುಭವವುಳ್ಳ ಸಿಬ್ಬಂದಿ ವರ್ಗ ನಿಯೋಜನೆ ಮಾಡಲಾಗಿದೆ. ಭದ್ರತೆ ಹಾಗೂ ದರ್ಶನ್ ಚಲನವಲನಗಳ ಬಗ್ಗೆ ತೀವ್ರ ನಿಗಾ ಇಡಲಾಗುತ್ತದೆ. ಕಾರಾಗೃಹದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿನಿತ್ಯ ಬೀಗ ತೆರೆಯುವ ಹಾಗೂ ಬೀಗ ಮುದ್ರೆ ಮಾಡುವ ಸಮಯದಲ್ಲಿ ಕೂಲಂಕುಷವಾಗಿ ತಪಾಸಣೆ ಮಾಡುವಂತೆ ಸೂಚನೆನೀಡಲಾಗಿದೆ. ಯಾವುದೇ ನಿಷೇಧಿತ ವಸ್ತುಗಳು ದೊರಕದ ಹಾಗೆ ಪ್ರತ್ಯೇಕ ವಹಿಯನ್ನು ನಿರ್ವಹಿಸಬೇಕು. ಪಹರೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಬಾಡಿ ವೋರ್ನ್ ಕ್ಯಾಮೆರಾ ಧರಿಸಬೇಕು ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Attempt To murder : ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ!

Attempt To murder : ಪ್ರೀತಿ ನಿರಾಕರಿಸಿದ್ದಕ್ಕೆ ಸಿಟ್ಟಾದ ಯುವಕನೊರ್ವ ಮಂಗಳಮುಖಿಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ್ದಾನೆ. ಚಾಕು ಇರಿದು ಪರಾರಿ ಆಗಲು ಯತ್ನಿಸಿದ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

VISTARANEWS.COM


on

By

attempt to murder case
Koo

ತುಮಕೂರು: ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಯುವಕನೊರ್ವ ಚಾಕು (Attempt To murder) ಇರಿದಿದ್ದಾನೆ. ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ಘಟನೆ ನಡೆದಿದೆ.

ಹನೀಷಾ (21) ಚಾಕುವಿನಿಂದ ಇರಿತಕ್ಕೊಳಗಾದ ಮಂಗಳಮುಖಿಯಾಗಿದ್ದಾರೆ. ಮಂಡ್ಯದ ಆದಿಲ್‌ (23) ಚಾಕು ಇರಿದ ಆರೋಪಿಯಾಗಿದ್ದಾನೆ. ಇವರಿಬ್ಬರು ಕಳೆದ ಆರು ತಿಂಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಹನೀಷಾ ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ನಿಮಿತ್ತ ಪರ ಊರುಗಳಿಗೆ ಆಗಾಗ ಹೋಗುತ್ತಿದ್ದರು.

ಇದನ್ನು ಸಹಿಸದ ಆದಿಲ್‌ ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸುತ್ತಿದ್ದ. ಇದರಿಂದ ಬೇಸತ್ತು ಹನೀಷಾ ಪ್ರೇಮ ನಿರಾಕರಿಸಿದ್ದಳು. ಈ ಹಿನ್ನೆಲೆಯಲ್ಲಿ ಬುಧವಾರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭದಲ್ಲಿ ಸಿಟ್ಟಿನಲ್ಲಿ ಆದಿಲ್‌ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ಹನೀಷಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Road Accident : ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್‌ ಸವಾರನಿಗೆ ಲಾರಿ ಡಿಕ್ಕಿ; ಹೊರಬಂತು ಮೆದುಳು!

ಬುದ್ಧಿ ಹೇಳಿದಕ್ಕೆ ಹೆತ್ತ ತಾಯಿಯನ್ನೆ ಕೊಂದ ಪಾಪಿ ಪುತ್ರ!

ಪಾಪಿ ಪುತ್ರನೊಬ್ಬ ಬುದ್ದಿ ಹೇಳಿದ್ದಕ್ಕೆ ಮಲಗಿದಲ್ಲೇ ಹೆತ್ತ ತಾಯಿಯನ್ನು ಕೊಂದಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ಜರುಗಿದೆ. ಶಾರದಮ್ಮ ಅಗಡಿ (85) ಕೊಲೆಯಾದ ತಾಯಿಯಾಗಿದ್ದು, ಸಿದ್ಧಲಿಂಗ ಅಗಡಿ ಕೊಲೆ ಮಾಡಿದ ಪಾಪಿ ಪುತ್ರನಾಗಿದ್ದಾನೆ.

ನಿನ್ನೆ ಪಕ್ಕದ ಮನೆಯವರ ಜತೆ ಸಿದ್ಧಲಿಂಗ ಅಗಡಿ ಜಗಳ ಮಾಡಿಕೊಂಡಿದ್ದ‌.‌ ಈ ವೇಳೆ ನನ್ನ ಮಗನ ತಲೆ ಸರಿಯಿಲ್ಲ ಬಿಟ್ಟು ಬಿಡಿ ಎಂದು ತಾಯಿ ಬೇಡಿಕೊಂಡಿದ್ದರು. ಇನ್ನು ತಾಯಿಯನ್ನು ಕೊಂದು ಸಹೋದರಿಯರಿಗೆ ಫೋನ್ ಮಾಡಿದ ಪಾಪಿ ಪುತ್ರ, ತಾಯಿ ಸಾವನ್ನಪ್ಪಿದ್ದಾಳೆ ಎಂದು ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ಮಾನಸಿಕ ಅಸ್ವಸ್ಥ ಸಹೋದರನ ಮಾತು ನಂಬದ ಅಕ್ಕಂದಿರು, ಬಳಿಕ ಪೊಲೀಸರು ಮಾಹಿತಿ ನೀಡಿದ ಬಳಿಕ ಓಡೋಡಿ ಬಂದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಬಿ ಎಸ್ ನೇಮಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಘಟನೆಯು ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್‌ ಸವಾರನಿಗೆ ಲಾರಿ ಡಿಕ್ಕಿ; ಹೊರಬಂತು ಮೆದುಳು!

Road Accident : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಸೈಕಲ್‌ ಸವಾರನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸವಾರನ ತಲೆಯೇ ನಜ್ಜುಗುಜ್ಜಾಗಿದೆ.

VISTARANEWS.COM


on

By

Road Accident
Koo

ಬೆಂಗಳೂರು: ಸೈಕಲ್ ಸವಾರನಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ದಾರುಣವಾಗಿ (Road Accident) ಮೃತಪಟ್ಟಿದ್ದಾರೆ. ಬೆಂಗಳೂರಿನ ಚಾಲುಕ್ಯ ಸರ್ಕಲ್‌ನಲ್ಲಿ ದುರ್ಘಟನೆ ನಡೆದಿದೆ. ಮೃತ ಸೈಕಲ್ ಸವಾರ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಈ ಅಪಘಾತ ಸಂಭವಿಸಿದೆ.

ಮೃತ ಸೈಕಲ್ ಸವಾರ ರಾಜಸ್ಥಾನ ಮೂಲದವನು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹೈಗ್ರೌಂಡ್ ಸಂಚಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಯಲ್ಲಿ ಸವಾರನ ತಲೆಯೇ ನಜ್ಜುಗುಜ್ಜಾಗಿತ್ತು. ಕೂಡಲೇ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಘಟನೆ ಸಂಬಂದ ಹೈಗ್ರೌಂಡ್ ಸಂಚಾರಿ ಪೊಲೀಸರು ಲಾರಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಮೃತನ ಗುರುತು ಪತ್ತೆಗಾಗಿ ತನಿಖೆಯನ್ನು ಕೈಕೊಂಡಿದ್ದಾರೆ.

ಚಲಿಸುತ್ತಿದ್ದಾಗಲೇ ತುಂಡಾಗಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಚಕ್ರ

ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ನ ಮುಂಬದಿ ಚಕ್ರವೊಂದು ರಸ್ತೆ ಮಧ್ಯೆ ತುಂಡಾಗಿದೆ. ಕೂದಲೆಳೆ ಅಂತರದಲ್ಲಿ ಬಸ್ಸ್‌ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಸಮೀಪ ಅನಾಹುತವೊಂದು ತಪ್ಪಿದೆ. ಬಾಚಹಳ್ಳಿ ಮಾರ್ಗವಾಗಿ ಗುಂಡ್ಲುಪೇಟೆಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗುಂಡ್ಲುಪೇಟೆ ಘಟಕದ ಅಧಿಕಾರಿಗಳು ಬಸ್‌ಗಳ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದ್ದಾರೆ. ಕೋಡಹಳ್ಳಿ ಸಮೀಪ ತುಂಡಾಗಿ ಬಿದ್ದ ಬಸ್ಸಿನ ಮುಂಭಾಗದ ಚಕ್ರ ಕಂಡು ಚಲಾಯಿಸಲು ಯೋಗ್ಯವಲ್ಲದ ಬಸ್ಸುಗಳನ್ನು ಗ್ರಾಮಾಂತರ ಪ್ರದೇಶಕ್ಕೆ ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಚಿಕ್ಕಬಳ್ಳಾಪುರದಲ್ಲಿ ರಸ್ತೆ ಅಪಘಾತಕ್ಕೆ ಅಪ್ಪ-ಅಮ್ಮನೊಟ್ಟಿಗೆ ಮಗನೂ ಸಾವು

ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲ್ಲೂಕಿನ ದಂಡುಪಾಳ್ಯ ಗೇಟ್ ಬಳಿ ಕಾರು ಮತ್ತು ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ.ದಂಪತಿಯಾದ ಶ್ರೀನಿವಾಸಲು (50), ಪುಷ್ಪ (45), ಪುತ್ರ ಶ್ರೀಕಾಂತ (30) ಮೃತ ದುರ್ದೈವಿಗಳು. ಈ ಕುಟುಂಬಸ್ಥರು ಕಾರಿನಲ್ಲಿ ಮದುವೆಗೆಂದು ಬೆಂಗಳೂರಿನಿಂದ ಆಂಧ್ರದ ನೆಲ್ಲೂರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಇತ್ತ ಟಿಟಿ ವಾಹನದಲ್ಲಿದ್ದ ಹನ್ನೆರಡು ಮಂದಿ ಎಲೆಕ್ಟ್ರಾನಿಕ್ ಸಿಟಿಯಿಂದ ಬೋಯಕೊಂಡ ಕ್ಷೇತ್ರಕ್ಕೆ ಹೋಗಿಬರುತಿದ್ದಾಗ ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿದ್ದ ಹನ್ನೆರಡು ಜನರಗೆ ಗಂಭೀರ ಗಾಯಗಳಾಗಿದ್ದು, ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಟಾ ಏಸ್‌ ವಾಹನಕ್ಕೆ ಲಾರಿ ಡಿಕ್ಕಿ; ಮಹಿಳೆ ಸಾವು

ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟರೆ, ಐವರ ಸ್ಥಿತಿ ಗಂಭೀರವಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿಯ ತಡಸ ಕ್ರಾಸ್ ಬಳಿ ಘಟನೆ ನಡೆದಿದೆ. ಮಹಿಳೆಯರು ಗಾರ್ಮೆಂಟ್ಸ್‌ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿಯೊಂದು ಟಾಟಾ ಏಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟರೆ, ಉಳಿದವರ ಸ್ಥಿತಿಯೂ ಗಂಭೀರವಾಗಿದೆ. ಕಲಘಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Chikkanna: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಭೇಟಿ ಮಾಡಿದ್ದಕ್ಕೆ ನಟ ಚಿಕ್ಕಣ್ಣ ವಿಚಾರಣೆಗೆ ಹಾಜರು

ಕಳೆದ ಬಾರಿ ವಿಚಾರಣೆ ಬಳಿಕ ನಟ ದರ್ಶನ್ ಅವರನ್ನು ಕಾಣಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರಿಂದ ನಟ ಚಿಕ್ಕಣ್ಣನನ್ನು (Actor Chikkanna) ಮತ್ತೆ ಈ ಬಾರಿ ಎಸಿಪಿ ಚಂದನ್ ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದ ನಟ ಚಿಕ್ಕಣ್ಣ ನ್ಯಾಯಾಧೀಶರ ಮುಂದೆಯೂ ಹಾಜರಾಗಿದ್ದರು. ಸಿಆರ್ ಪಿಸಿ 164 ಅಡಿಯಲ್ಲಿ ಅವರ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿತ್ತು.

VISTARANEWS.COM


on

By

Actor Chikkanna
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿ ನಟ ಚಿಕ್ಕಣ್ಣ (Actor Chikkanna) ಬಸವೇಶ್ವರನಗರದಲ್ಲಿರುವ ತನಿಖಾಧಿಕಾರಿ ಮುಂದೆ ಗುರುವಾರ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಣ್ಣ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾದರು.

ಕಳೆದ ಬಾರಿ ವಿಚಾರಣೆ ಬಳಿಕ ನಟ ದರ್ಶನ್ (actor darshan) ಅವರನ್ನು ಕಾಣಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರಿಂದ ನಟ ಚಿಕ್ಕಣ್ಣನನ್ನು ಮತ್ತೆ ಈ ಬಾರಿ ಎಸಿಪಿ ಚಂದನ್ ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದ ನಟ ಚಿಕ್ಕಣ್ಣ ನ್ಯಾಯಾಧೀಶರ ಮುಂದೆಯೂ ಹಾಜರಾಗಿದ್ದರು. ಸಿಆರ್ ಪಿಸಿ 164 ಅಡಿಯಲ್ಲಿ ಅವರ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿತ್ತು.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್ ಭೇಟಿಗೆ ತೆರೆಳಿದ್ದ ನಟ ಚಿಕ್ಕಣ್ಣನ ಜೊತೆ ಈ ಸಂದರ್ಭದಲ್ಲಿ ಅಭಿಷೇಕ್ ಅಂಬರೀಶ್ , ಧನ್ವೀರ್ ಕೂಡ ಇದ್ದರು. ಅಲ್ಲಿ ದರ್ಶನ್ ಭೇಟಿ ಮಾಡಿ ಕೆಲಕಾಲ ಚಿಕ್ಕಣ್ಣ ಮಾತುಕತೆ ನಡೆಸಿದ್ದರು.
ನಟ ದರ್ಶನ್ ನನ್ನು ಭೇಟಿ ಮಾಡಿದ ಕಾರಣಕ್ಕಾಗಿ ಪೊಲೀಸರಿಂದ ಚಿಕ್ಕಣ್ಣಗೆ ನೊಟೀಸ್ ನೀಡಲಾಗಿತ್ತು.


ನಾನೊಬ್ಬ ಸಾಕ್ಷಿದಾರನಾಗಿದ್ದುಕೊಂಡು ಜೈಲಿಗೆ ಹೋಗಿ ದರ್ಶನ್‌ ಜತೆಗೆ ಮಾತನಾಡಿಸಬಾರದು ಎಂಬುದು ನನಗೆ ತಿಳಿದಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿ ದರ್ಶನ್ ಭೇಟಿ ಮಾಡಿ ಬಂದಿದ್ದೆ. ಹೀಗಾಗಿ ಪೊಲೀಸರು ವಿಚಾರಣೆಗೆ ಬರುವಂತೆ ನಿನ್ನೆ ಬುಧವಾರ ನೋಟಿಸ್ ಕೊಟ್ಟು 9 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೊಡಲಾಗಿತ್ತು. ಈ ನಿಟ್ಟಿನಲ್ಲಿ ಗುರುವಾರ ಬಂದು ವಿಚಾರಣೆಗೆ ಹಾಜರಾಗಿದ್ದೇನೆ. ವಿಚಾರಣೆ ವೇಳೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರ ಬಗ್ಗೆ ಒಂದಷ್ಟು ಪ್ರಶ್ನೆ ಕೇಳಿದ್ದರು ಅದಕ್ಕೆ ಉತ್ತರ ಕೊಟ್ಟಿದ್ದಿನಿ. ಮತ್ತೆ ವಿಚಾರಣೆಗೆ ಕರೆದರೆ ಬರುತ್ತೇನೆ. ಸದ್ಯ ವಿಚಾರಣೆಗೆ ಬರುವುದಕ್ಕೆ ಹೇಳಿಲ್ಲ. ಸಾಕ್ಷಿದಾರ ಹೋಗ ಬಾರದು ಅನ್ನೋದು ನನಗೆ ತಿಳಿದಿರಲಿಲ್ಲ, ಗೊತ್ತಿದ್ದರೆ ಹೋಗಿ ದರ್ಶನ್‌ನನ್ನು ಜೈಲಿನಲ್ಲಿ ಭೇಟಿ ಆಗುತ್ತಿರಲಿಲ್ಲ ಎಂದು ಚಿಕ್ಕಣ್ಣ ಪ್ರತಿಕ್ರಿಯಿಸಿದ್ದಾರೆ.

ಪಾರ್ಟಿ ವಿಚಾರದಲ್ಲಿ ವಿಚಾರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೆಸ್ಟ್ ಆಗಿದ್ದ ನಟ ದರ್ಶನ್ ಜೊತೆ ಅದೇ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ ಅವರನ್ನು ಈ ಹಿಂದೆ ವಿಚಾರಣೆಗೆ ಒಳಪಡಿಸಲಾಗಿತ್ತು. ನಟ ಯಶಸ್‌ ಸೂರ್ಯ ಕೂಡ ಅಂದು ಕುಖ್ಯಾತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ ನಲ್ಲಿ ಡಿ ಗ್ಯಾಂಗ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು.

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಲ್ಲದೇ ಹಲವು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಹೇಳಿಕೆ ನೀಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ.

ಇದನ್ನೂ ಓದಿ: Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ನಟ ದರ್ಶನ್ ಜೊತೆ ಕೊಲೆಯ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ ಅವರನ್ನು ಈ ಹಿಂದೆ ಮೂರು ಗಂಟೆಗಳ ಕಾಲ ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿದೆ. ವಿಚಾರಣೆ ಸಂದರ್ಭದಲ್ಲಿ, ಅದೇ ದಿನ ತಾನು ದರ್ಶನ್ ಜೊತೆ ಪಾರ್ಟಿ ಮಾಡಿದ್ದು ನಿಜ ಎಂದು ಚಿಕ್ಕಣ್ಣ ಒಪ್ಪಿಕೊಂಡಿದ್ದರು.

Continue Reading
Advertisement
Actor Darshan
ಸಿನಿಮಾ19 mins ago

Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

Physical Abuse
ಉಡುಪಿ1 hour ago

Physical Abuse : ರೈಲಿನಲ್ಲಿ ಯುವತಿ ಮೇಲೆ ಮಾನಭಂಗಕ್ಕೆ ಯತ್ನ! ಭಟ್ಕಳ ಮೂಲದ ಕಾಮುಕ ಅರೆಸ್ಟ್‌

Kangana Ranaut
ರಾಜಕೀಯ1 hour ago

Kangana Ranaut: ದೂರದೃಷ್ಟಿಯೇ ಇಲ್ಲದ ರಾಹುಲ್ ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ: ಕಂಗನಾ

attempt to murder case
ತುಮಕೂರು2 hours ago

Attempt To murder : ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ!

Deepfake Video
ವೈರಲ್ ನ್ಯೂಸ್2 hours ago

Deepfake Video: ಶುಬ್ ಮನ್ ಗಿಲ್ ಅನ್ನು ದೂಷಿಸಿದ ವಿರಾಟ್; ಡೀಪ್ ಫೇಕ್ ವಿಡಿಯೋ ವೈರಲ್

Road Accident
ಬೆಂಗಳೂರು2 hours ago

Road Accident : ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್‌ ಸವಾರನಿಗೆ ಲಾರಿ ಡಿಕ್ಕಿ; ಹೊರಬಂತು ಮೆದುಳು!

Actor Chikkanna
ಪ್ರಮುಖ ಸುದ್ದಿ3 hours ago

Actor Chikkanna: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಭೇಟಿ ಮಾಡಿದ್ದಕ್ಕೆ ನಟ ಚಿಕ್ಕಣ್ಣ ವಿಚಾರಣೆಗೆ ಹಾಜರು

Actor Darshan
ಸ್ಯಾಂಡಲ್ ವುಡ್3 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

Hair Combing
ಆರೋಗ್ಯ7 hours ago

Hair Combing: ಕೂದಲು ಬಾಚುವ ಅಭ್ಯಾಸವಿಲ್ಲವೇ? ಹಾಗಾದರೆ ಇದನ್ನೊಮ್ಮೆ ಓದಿ!

dhavala dharini column Hanuman's setubandha to meet Sugriva in ramayana by narayana yaji
ಅಂಕಣ7 hours ago

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು?

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Actor Darshan
ಸ್ಯಾಂಡಲ್ ವುಡ್3 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಟ್ರೆಂಡಿಂಗ್‌