Bengaluru News: ಕೆರೆಗಳ ಮೇಲೆ ಸೋಲಾರ್‌ ಪ್ಯಾನೆಲ್‌ ಅಳವಡಿಕೆ; ಪೂರ್ವ ಕಾರ್ಯಸಾಧ್ಯತಾ ವರದಿಗೆ ಸಚಿವ ಭೋಸರಾಜು ಸೂಚನೆ - Vistara News

ಬೆಂಗಳೂರು

Bengaluru News: ಕೆರೆಗಳ ಮೇಲೆ ಸೋಲಾರ್‌ ಪ್ಯಾನೆಲ್‌ ಅಳವಡಿಕೆ; ಪೂರ್ವ ಕಾರ್ಯಸಾಧ್ಯತಾ ವರದಿಗೆ ಸಚಿವ ಭೋಸರಾಜು ಸೂಚನೆ

ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯ ಕೆರೆಗಳಲ್ಲಿ ಫ್ಲೋಟಿಂಗ್‌ ಸೋಲಾರ್‌ ಅಳವಡಿಸುವ ನಿಟ್ಟಿನಲ್ಲಿ ಪೂರ್ವ ಕಾರ್ಯಸಾಧ್ಯತಾ ವರದಿ (ಪ್ರಿ ಫೀಸಿಬಲಿಟಿ ರಿಪೋರ್ಟ್‌) ಸಲ್ಲಿಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌. ಭೋಸರಾಜು, ಅಧಿಕಾರಿಗಳಿಗೆ ಸೂಚನೆ (Bengaluru News) ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Bengaluru News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯ ಕೆರೆಗಳಲ್ಲಿ ಫ್ಲೋಟಿಂಗ್‌ ಸೋಲಾರ್‌ ಅಳವಡಿಸುವ ನಿಟ್ಟಿನಲ್ಲಿ ಪೂರ್ವ ಕಾರ್ಯಸಾಧ್ಯತಾ ವರದಿ (ಪ್ರಿ ಫೀಸಿಬಲಿಟಿ ರಿಪೋರ್ಟ್‌) ಸಲ್ಲಿಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌. ಭೋಸರಾಜು, ಅಧಿಕಾರಿಗಳಿಗೆ (Bengaluru News) ಸೂಚನೆ ನೀಡಿದರು.

ಸಣ್ಣ ನೀರಾವರಿ ಕೆರೆಗಳ ವ್ಯಾಪ್ತಿಯಲ್ಲಿನ ಕೆರೆಗಳ ಮೇಲೆ ಸೋಲಾರ್‌ ಪ್ಯಾನೆಲ್‌ ಅಳವಡಿಕೆಯ ಮೂಲಕ ವಿದ್ಯುತ್‌ ಉತ್ಪಾದನೆ ಮಾಡುವ ನಿಟ್ಟಿನಲ್ಲಿ, ಫ್ಲೋಟಿಂಗ್‌ ಸೋಲಾರ್‌ ಅಳವಡಿಕೆಯಲ್ಲಿ ಕಾರ್ಯನಿರತರಾಗಿರುವ ಸಂಸ್ಥೆಗಳ ಜತೆ ಸಭೆಯನ್ನು ಆಯೋಜಿಸುವಂತೆ ಕೆಆರ್‌ಇಡಿಎಲ್‌ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈ ಸೂಚನೆಯ ಹಿನ್ನಲೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ, ಫ್ಲೋಟಿಂಗ್‌ ಸೋಲಾರ್‌ ಅಳವಡಿಕೆಯಲ್ಲಿ ಮುಂಚೂಣಿಯಲ್ಲಿರುವ ಬಿಎಚ್‌ಇಎಲ್‌, ಸನ್‌ಗ್ರೋ, ಆರುಷಿ ಗ್ರೀನ್‌ ಎನರ್ಜಿ, ಸಿಲ್‌ & ಟ್ರೆರೆ ಸಂಸ್ಥೆಯ ಪದಾಧಿಕಾರಿಗಳಿಂದ ಯೋಜನೆಯ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಳ್ಳಲಾಯಿತು.

ಇದನ್ನೂ ಓದಿ: Bengaluru Power Cut: ಆ.28 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ದೇಶದ ವಿವಿಧ ಭಾಗಗಳಲ್ಲಿ ಸುಮಾರು 200 ಮೆಗಾವ್ಯಾಟ್‌ಗೂ ಹೆಚ್ಚು ವಿದ್ಯುತ್‌ ಫ್ಲೋಟಿಂಗ್‌ ಸೋಲಾರ್‌ ಯೋಜನೆಯ ಮೂಲಕ ಉತ್ಪಾದಿಸಲಾಗುತ್ತಿದೆ. ಇದರಿಂದ ಆಗುವ ಅನುಕೂಲಗಳು ಹಾಗೂ ವೆಚ್ಚದ ಬಗ್ಗೆ ಸಮಗ್ರ ಮಾಹಿತಿಯನ್ನು ಸಚಿವರು ಪಡೆದುಕೊಂಡರು. ಬಿಎಚ್‌ಇಎಲ್‌ ಸಂಸ್ಥೆ ಈ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದು, ತಾವು ಈಗಾಗಲೇ ಪೂರ್ಣಗೊಳಿಸಿರುವ ಯೋಜನೆಗಳ ಸಮಗ್ರ ಮಾಹಿತಿ ನೀಡಿದರು. ಇತರೆ ಸಂಸ್ಥೆಗಳ ಪದಾಧಿಕಾರಿಗಳು ಫ್ಲೋಟಿಂಗ್‌ ಸೋಲಾರ್‌ ಪ್ಯಾನೆಲ್‌ ಕ್ಷೇತ್ರದಲ್ಲಿನ ಹೊಸ ಸಾಧ್ಯತೆಗಳ ಬಗ್ಗೆ ಮಾಹಿತಿ ನೀಡಿದರು.

ಪ್ರಿ ಫೀಸಿಬಲಿಟಿ ವರದಿ ಪಡೆದುಕೊಳ್ಳಲು ಸೂಚನೆ

ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿರುವ 100 ಎಕರೆಗೂ ಹೆಚ್ಚು ವ್ಯಾಪ್ತಿಯನ್ನು ಹೊಂದಿರುವ 40 ಕೆರೆಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಫ್ಲೋಟಿಂಗ್‌ ಸೋಲಾರ್‌ ಅಳವಡಿಕೆಯ ಮೂಲಕ ಸುಮಾರು 2500 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದಿಸಬಹುದಾಗಿದೆ. ಇಂದು ಸಭೆಯಲ್ಲಿ ಸಂಗ್ರಹಿಸಲಾದ ಮಾಹಿತಿಯ ಆಧಾರದ ಮೇಲೆ, ಕೆರೆಗಳಲ್ಲಿ ಫ್ಲೋಟಿಂಗ್‌ ಸೋಲಾರ್‌ ಪ್ಯಾನೆಲ್‌ ಅಳವಡಿಸುವ ನಿಟ್ಟಿನಲ್ಲಿ ಪೂರ್ವ ಕಾರ್ಯಸಾಧ್ಯತಾ ವರದಿ (ಪ್ರಿ ಫಿಸಿಬಲಿಟಿ) ತಯಾರು ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವರದಿಯಲ್ಲಿ ಯೋಜನೆ ಅಳವಡಿಕೆಯಿಂದ ಆಗುವ ಪ್ರಯೋಜನಗಳು, ವಿದ್ಯುತ್‌ ಉತ್ಪಾದನೆ, ಕೆರೆಯ ಪರಿಸರದ ಮೇಲೆ ಆಗುವ ಪರಿಣಾಮ ಹೀಗೆ ಎಲ್ಲಾ ಕೋನಗಳ ಮಾಹಿತಿಯನ್ನು ಪಡೆದುಕೊಳ್ಳಲು ಸೂಚನೆ ನೀಡಿದರು.

ಈ ವರದಿ ಸಲ್ಲಿಕೆಯ ನಂತರ ಮುಂದಿನ ಕ್ರಮಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ: Kannada New Movie: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್‍’ ಚಿತ್ರ ನ.15ಕ್ಕೆ ರಿಲೀಸ್‌

ಸಭೆಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯ ಕಾರ್ಯದರ್ಶಿ ರಾಘವನ್‌, ಕೆಆರ್‌ಇಡಿಎಲ್‌ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪಯ್ಯ, ಸಣ್ಣ ನೀರಾವರಿ ಇಲಾಖೆಯ ಮುಖ್ಯ ಎಂಜಿನಿಯರ್‌ ಶ್ರೀಹರಿ, ಬಿಎಚ್‌ಇಎಲ್‌ ಸಂಸ್ಥೆಯ ಸೋಲಾರ್‌ ವಿಭಾಗದ ಅಧಿಕಾರಿಗಳು, ಸನ್‌ಗ್ರೋ, ಆರುಷಿ ಗ್ರೀನ್‌ ಎನರ್ಜಿ, ಸಿಲ್‌ & ಟ್ರೆರೆ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಕುಟುಂಬಸ್ಥರು ಹೊರತು ಪಡಿಸಿ ಬೇರೆ ಯಾರಿಗೂ ಅವಕಾಶವಿಲ್ಲ. ಜತೆಗೆ ಯಾವುದೇ ವಿವಿಐಪಿ ಟ್ರೀಟ್ಮೆಂಟ್‌ ಇರುವುದಿಲ್ಲ. ಸಾಮಾನ್ಯ ಖೈದಿಯಂತೆ ಸಿಸಿಟಿವಿ ಕಣ್ಗಾವಲು ಇರಲಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್‌ನನ್ನು (Actor Darshan) ಪೊಲೀಸ್‌ ಬಂದೋಬಸ್ತ್‌ನಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಇನ್ಮುಂದೆ ನಟ ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ ಎನ್ನಲಾಗಿದೆ.

ಕೇವಲ ಕೈದಿಯ ಧರ್ಮಪತ್ನಿ, ರಕ್ತಸಂಬಂಧಿಗಳು ಮತ್ತು ವಕಾಲತ್ತು ವಹಿಸಿದ ವಕೀಲರಿಗೆ ಮಾತ್ರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಚಿತ್ರರಂಗದ ಕಲಾವಿದರು, ಅಭಿಮಾನಿಗಳು, ರಾಜಕೀಯ ವ್ಯಕ್ತಿಗಳು ಯಾರಿಗೂ ದರ್ಶನ್‌ ಭೇಟಿಗೆ ಅವಕಾಶ ಇರುವುದಿಲ್ಲ. ಇನ್ನೂ ಸಾಮಾನ್ಯ ಖೈದಿಯಂತೆ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇರಲಿದ್ದು, ಗೃಹ, ಮನರಂಜನೆ ಸೌಲಭ್ಯಗಳು, ಕಾರಾಗೃಹದ ನಿಯಮದಂತೆ ಒದಗಿಸಲಾಗುತ್ತದೆ. ನಿಯಮ ಉಲ್ಲಂಘನೆ ಮಾಡುವ ಆಗಿಲ್ಲ. ಬೇರೆ ಕೈದಿಗಳ ಜತೆ ಬೆರೆಯದಂತೆ ಸೂಕ್ತ ಭದ್ರತೆ ನೀಡಲಾಗಿದೆ.

ಇದನ್ನೂ ಓದಿ: Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ದರ್ಶನ್‌ಗಿಲ್ಲ ವಿವಿಐಪಿ ಟ್ರೀಟ್ಮೆಂಟ್‌; ಸಾಮಾನ್ಯ ಖೈದಿಗೆ ಸಿಸಿಟಿವಿ ಕಣ್ಗಾವಲು

ಈಗಾಗಲೇ ನಟ ದರ್ಶನ್‌ ಬಳ್ಳಾರಿ ಜೈಲಿಗೆ ಸ್ಥಳಾಂತರವಾಗಿದ್ದು, ಸಾಮಾನ್ಯ ಖೈದಿಯಂತೆ ಇರಬೇಕಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ವಿವಿಐಪಿ ಟ್ರೀಟ್ಮೆಂಟ್‌ ಬಳ್ಳಾರಿ ಜೈಲಿನಲ್ಲಿ ಇರುವುದಿಲ್ಲ. ಇನ್ನೂ ದಿನದ 24/7 ದರ್ಶನ್ ಮೇಲೆ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಇರಲಿದೆ. ದಿನನಿತ್ಯ ದರ್ಶನ್ ಸಿಸಿಟಿವಿ ಫೂಟೇಜ್ ಪ್ರತ್ಯೇಕವಾಗಿ ಶೇಖರಿಸಿಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ದರ್ಶನ್ ಇರುವ ಕೊಠಡಿಗೆ ಮುಖ್ಯ ವೀಕ್ಷಕ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ಅನುಭವವುಳ್ಳ ಸಿಬ್ಬಂದಿ ವರ್ಗ ನಿಯೋಜನೆ ಮಾಡಲಾಗಿದೆ. ಭದ್ರತೆ ಹಾಗೂ ದರ್ಶನ್ ಚಲನವಲನಗಳ ಬಗ್ಗೆ ತೀವ್ರ ನಿಗಾ ಇಡಲಾಗುತ್ತದೆ. ಕಾರಾಗೃಹದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿನಿತ್ಯ ಬೀಗ ತೆರೆಯುವ ಹಾಗೂ ಬೀಗ ಮುದ್ರೆ ಮಾಡುವ ಸಮಯದಲ್ಲಿ ಕೂಲಂಕುಷವಾಗಿ ತಪಾಸಣೆ ಮಾಡುವಂತೆ ಸೂಚನೆನೀಡಲಾಗಿದೆ. ಯಾವುದೇ ನಿಷೇಧಿತ ವಸ್ತುಗಳು ದೊರಕದ ಹಾಗೆ ಪ್ರತ್ಯೇಕ ವಹಿಯನ್ನು ನಿರ್ವಹಿಸಬೇಕು. ಪಹರೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಬಾಡಿ ವೋರ್ನ್ ಕ್ಯಾಮೆರಾ ಧರಿಸಬೇಕು ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್‌ ಸವಾರನಿಗೆ ಲಾರಿ ಡಿಕ್ಕಿ; ಹೊರಬಂತು ಮೆದುಳು!

Road Accident : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಸೈಕಲ್‌ ಸವಾರನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸವಾರನ ತಲೆಯೇ ನಜ್ಜುಗುಜ್ಜಾಗಿದೆ.

VISTARANEWS.COM


on

By

Road Accident
Koo

ಬೆಂಗಳೂರು: ಸೈಕಲ್ ಸವಾರನಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ದಾರುಣವಾಗಿ (Road Accident) ಮೃತಪಟ್ಟಿದ್ದಾರೆ. ಬೆಂಗಳೂರಿನ ಚಾಲುಕ್ಯ ಸರ್ಕಲ್‌ನಲ್ಲಿ ದುರ್ಘಟನೆ ನಡೆದಿದೆ. ಮೃತ ಸೈಕಲ್ ಸವಾರ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಈ ಅಪಘಾತ ಸಂಭವಿಸಿದೆ.

ಮೃತ ಸೈಕಲ್ ಸವಾರ ರಾಜಸ್ಥಾನ ಮೂಲದವನು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹೈಗ್ರೌಂಡ್ ಸಂಚಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಯಲ್ಲಿ ಸವಾರನ ತಲೆಯೇ ನಜ್ಜುಗುಜ್ಜಾಗಿತ್ತು. ಕೂಡಲೇ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಘಟನೆ ಸಂಬಂದ ಹೈಗ್ರೌಂಡ್ ಸಂಚಾರಿ ಪೊಲೀಸರು ಲಾರಿ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಮೃತನ ಗುರುತು ಪತ್ತೆಗಾಗಿ ತನಿಖೆಯನ್ನು ಕೈಕೊಂಡಿದ್ದಾರೆ.

ಚಲಿಸುತ್ತಿದ್ದಾಗಲೇ ತುಂಡಾಗಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಚಕ್ರ

ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ನ ಮುಂಬದಿ ಚಕ್ರವೊಂದು ರಸ್ತೆ ಮಧ್ಯೆ ತುಂಡಾಗಿದೆ. ಕೂದಲೆಳೆ ಅಂತರದಲ್ಲಿ ಬಸ್ಸ್‌ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಸಮೀಪ ಅನಾಹುತವೊಂದು ತಪ್ಪಿದೆ. ಬಾಚಹಳ್ಳಿ ಮಾರ್ಗವಾಗಿ ಗುಂಡ್ಲುಪೇಟೆಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗುಂಡ್ಲುಪೇಟೆ ಘಟಕದ ಅಧಿಕಾರಿಗಳು ಬಸ್‌ಗಳ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದ್ದಾರೆ. ಕೋಡಹಳ್ಳಿ ಸಮೀಪ ತುಂಡಾಗಿ ಬಿದ್ದ ಬಸ್ಸಿನ ಮುಂಭಾಗದ ಚಕ್ರ ಕಂಡು ಚಲಾಯಿಸಲು ಯೋಗ್ಯವಲ್ಲದ ಬಸ್ಸುಗಳನ್ನು ಗ್ರಾಮಾಂತರ ಪ್ರದೇಶಕ್ಕೆ ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಚಿಕ್ಕಬಳ್ಳಾಪುರದಲ್ಲಿ ರಸ್ತೆ ಅಪಘಾತಕ್ಕೆ ಅಪ್ಪ-ಅಮ್ಮನೊಟ್ಟಿಗೆ ಮಗನೂ ಸಾವು

ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲ್ಲೂಕಿನ ದಂಡುಪಾಳ್ಯ ಗೇಟ್ ಬಳಿ ಕಾರು ಮತ್ತು ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ.ದಂಪತಿಯಾದ ಶ್ರೀನಿವಾಸಲು (50), ಪುಷ್ಪ (45), ಪುತ್ರ ಶ್ರೀಕಾಂತ (30) ಮೃತ ದುರ್ದೈವಿಗಳು. ಈ ಕುಟುಂಬಸ್ಥರು ಕಾರಿನಲ್ಲಿ ಮದುವೆಗೆಂದು ಬೆಂಗಳೂರಿನಿಂದ ಆಂಧ್ರದ ನೆಲ್ಲೂರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಇತ್ತ ಟಿಟಿ ವಾಹನದಲ್ಲಿದ್ದ ಹನ್ನೆರಡು ಮಂದಿ ಎಲೆಕ್ಟ್ರಾನಿಕ್ ಸಿಟಿಯಿಂದ ಬೋಯಕೊಂಡ ಕ್ಷೇತ್ರಕ್ಕೆ ಹೋಗಿಬರುತಿದ್ದಾಗ ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿದ್ದ ಹನ್ನೆರಡು ಜನರಗೆ ಗಂಭೀರ ಗಾಯಗಳಾಗಿದ್ದು, ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಟಾ ಏಸ್‌ ವಾಹನಕ್ಕೆ ಲಾರಿ ಡಿಕ್ಕಿ; ಮಹಿಳೆ ಸಾವು

ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟರೆ, ಐವರ ಸ್ಥಿತಿ ಗಂಭೀರವಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿಯ ತಡಸ ಕ್ರಾಸ್ ಬಳಿ ಘಟನೆ ನಡೆದಿದೆ. ಮಹಿಳೆಯರು ಗಾರ್ಮೆಂಟ್ಸ್‌ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿಯೊಂದು ಟಾಟಾ ಏಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟರೆ, ಉಳಿದವರ ಸ್ಥಿತಿಯೂ ಗಂಭೀರವಾಗಿದೆ. ಕಲಘಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಾಯಾಳುಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

Actor Darshan: ಪರಪ್ಪನ ಅಗ್ರಹಾರ ಜೈಲಿನೊಳಗೆ ಕೈದಿಗಳ ಜತೆಗೆ ಕಾಫಿ ಕಪ್‌ ಹಿಡಿದು ಸಿಗರೇಟು ಸೇದುತ್ತಾ ಕುಳಿತಿದ್ದ ಕಾರಣಕ್ಕೆ ಇದೀಗ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

VISTARANEWS.COM


on

By

Actor Darshan
Koo

ಬಳ್ಳಾರಿ/ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Chitradurga Renukaswamy murder case) ಬಂಧಿಯಾಗಿರುವ ನಟ ದರ್ಶನ್ (Actor Darshan) ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಇದೀಗ ಕೋರ್ಟ್‌ ಆದೇಶದ ಮೇರೆಗೆ ಬಳ್ಳಾರಿ ಜೈಲಿಗೆ (bellary jail) ಸ್ಥಳಾಂತರ ಆಗಿದ್ದಾರೆ. ಬಿಗಿ ಭದ್ರೆತೆಯೊಂದಿಗೆ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಜೈಲಿಗೆ ದರ್ಶನ್‌ನನ್ನು ಕರೆತರಲಾಯಿತು.

ಪೊಲೀಸರು ದರ್ಶನ್ ಇದ್ದ ವಾಹನಕ್ಕೆ ಸಂಪೂರ್ಣ ಬಟ್ಟೆ ಕಟ್ಟಿ ಯಾರಿಗೂ ಕಾಣಿಸಬಾರೆಂದು ಕರೆತಂದಿದ್ದರು. ಬಳ್ಳಾರಿ ಜೈಲಿಗೆ ಬಂದ ನಟ ದರ್ಶನ್‌ರಿಗೆ ಮೊದಲು ಮೆಡಿಕಲ್ ಚೆಕಪ್‌ಗೆ ಕರೆದೊಯ್ದಲಾಗಿತ್ತು. ಬಳಿಕ ದರ್ಶನ್‌ಗೆ ನಿಗದಿ ಮಾಡಿದ್ದ ಸೆಲ್‌ಗೆ ಬಿಡಲಾಗಿದೆ.

ಗಾಡಿಗೆ ಅಡ್ಡ ಬಂದ ಹಸುಗಳು

ನಟ ದರ್ಶನ್‌ ಕರೆತರುವಾಗ ಸೆಂಟ್ರಲ್ ಜೈಲ್ ರಸ್ತೆಯಲ್ಲಿ ಹತ್ತಾರು ಹಸುಗಳು ಅಡ್ಡಬಂದಿದ್ದವು. ಬಳಿಕ ಪೊಲೀಸ್‌ ಸಿಬ್ಬಂದಿಯೇ ಹಸುಗಳು ಬೇಗ ಹೋಗಲಿ ಎಂದು ಓಡಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಓಡಿಸುವ ವೇಳೆ ಬೆದರಿದ ಘಟನೆಯು ನಡೆದಿದೆ.

ಹೈದರ್‌ಬಾದ್‌ ರಸ್ತೆ ಮೂಲಕ ಬಳ್ಳಾರಿ ತಲುಪಿದ ಪೊಲೀಸರು

ಇನ್ನೂ ಪೊಲೀಸರು ಮಾಧ್ಯಮಗಳ ಕಣ್ತಪ್ಪಿಸಿ ದರ್ಶನ್‌ನನ್ನು ಹೈದರ್‌ಬಾದ್ ರಸ್ತೆಯಲ್ಲಿ ಕರೆದುಕೊಂಡು ಹೋದರು. ಬಳ್ಳಾರಿಗೆ ದೇವನಹಳ್ಳಿ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ ಮಾರ್ಗವಾಗಿ ಕರೆದುಕೊಂಡು ಹೋಗಿದ್ದಾರೆ. ಎರಡು ಬೊಲೇರೋ ಹಾಗೂ ಒಂದು ಟಿಟಿ ವಾಹನ ಪ್ರತ್ಯೇಕವಾಗಿ ಗುರುವಾರ ಬೆಳಗ್ಗೆ 5:28ಕ್ಕೆ ದೇವನಹಳ್ಳಿ ಟೋಲ್ ಪಾಸ್ ಆದ ದೃಶ್ಯ ಲಭ್ಯವಾಗಿದೆ. ದೇವನಹಳ್ಳಿ ಸಾದಹಳ್ಳಿ ಟೋಲ್‌ನಲ್ಲಿ ಪೊಲೀಸರಿಂದ ದರ್ಶನ್ ಕರೆದುಕೊಂಡು ಹೋಗುತ್ತಿರುವ ವಾಹನಗಳು ಪಾಸ್ ಮಾಡಿಕೊಟ್ಟಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಹಿನ್ನೆಲೆಯಲ್ಲಿ ಕಲಬುರಗಿ ಜೈಲಿಗೆ ಗುರುವಾರ ಆರೋಪಿ ನಾಗರಾಜ್ ಶಿಫ್ಟ್ ಆಗಲಿದ್ದಾರೆ. ನಟ ದರ್ಶನ ಮ್ಯಾನೇಜರ್ ಆಗಿದ್ದ ನಾಗರಾಜ್ A-11 ಆಗಿದ್ದು, ಬೆಂಗಳೂರಿನಿಂದ ಕಲಬುರಗಿ ಜೈಲಿಗೆ ಸಂಜೆ 4 ಗಂಟೆ ತಲುಪಲಿದ್ದಾರೆ. ಈಗಾಗಲೆ ಬೆಂಗಳೂರಿನಿಂದ ಕಲಬುರಗಿಗೆ ಬಿಗಿ ಭದ್ರತೆಯಲ್ಲಿ ಕರೆತರಲಾಗುತ್ತಿದೆ. ಇತ್ತ ಶಿವಮೊಗ್ಗ ಜೈಲಿಗೆ A6 ಆರೋಪಿ ಜಗದೀಶ್ ಹಾಗೂ ಆ12 ಲಕ್ಷ್ಮಣ ಕರೆತರಲಿದ್ದಾರೆ. ರಾಜ್ಯದಲ್ಲೇ ಹೈ ಟೆಕ್ ಕಾರಾಗೃಹ ಎಂಬ ಖ್ಯಾತಿ ಹೊಂದಿರುವ ಶಿವಮೊಗ್ಗ ಜೈಲು ಕೊರಿಯನ್ ಮಾದರಿಯಲ್ಲಿದೆ. 270 ಕೊಠಡಿ ಹೊಂದಿರುವ ಕೇಂದ್ರ ಕಾರಗೃಹದಲ್ಲಿ 773 ಜನ ಖೈದಿಗಳು ಇದ್ದಾರೆ.

ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿದ್ದು ಯಾಕಾಗಿ?

ಪರಪ್ಪನ ಅಗ್ರಹಾರ ಜೈಲಿನೊಳಗೆ ಕಾಫಿ ಕಪ್‌ ಹಿಡಿದು ಸಿಗರೇಟು ಸೇದುತ್ತಾ ಕೈದಿಗಳ ಜತೆಗೆ ಕುಳಿತಿರುವ ನಟ ದರ್ಶನ್‌ನ (Actor Darshan) ಫೋಟೊಗಳು ವೈರಲ್‌ ಆಗಿತ್ತು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ2 ಆರೋಪಿ ಆಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ ಬಂಧಿಯಾಗಿದೆ.

ಜೈಲಿನ ಒಳಗೆ ದರ್ಶನ್‌ ಬಿಂದಾಸ್‌ ಆಗಿದ್ದರು. ಬ್ಯಾರಕ್‌ನಿಂದ ಹೊರಗೆ ಚೇರ್‌ನಲ್ಲಿ ಕುಳಿತಿರುವ ನಟ ದರ್ಶನ್‌ ಬಲಗೈನಲ್ಲಿ ಕಪ್‌, ಎಡಗೈನಲ್ಲಿ ಸಿಗರೇಟ್‌ ಸೇದುವ ಫೋಟೋ ವೈರಲ್‌ ಆಗಿತ್ತು. ದರ್ಶನ್‌ ಜತೆಗೆ ವಿಲ್ಸನ್‌ ಗಾರ್ಡನ್‌ ನಾಗ, ಎ11 ಆರೋಪಿ ದರ್ಶನ್‌ ಮ್ಯಾನೇಜರ್‌ ನಾಗರಾಜ್‌, ಕುಳ್ಳ ಸೀನಾ ಒಟ್ಟಾಗಿ ಕೂತು ಹರಟೆ ಹೊಡೆದಿದ್ದರು.

ಯಾವ್ಯಾವ ಜೈಲಿಗೆ ಯಾರು?

  1. 1.ಬಳ್ಳಾರಿ‌ ಜೈಲಿಗೆ ದರ್ಶನ್
    2.ಮೈಸೂರು ಜೈಲಿಗೆ ಪವನ್, ರಾಘವೇಂದ್ರ ನಂದೀಶ್
  2. 3.ಶಿವಮೊಗ್ಗ ಜೈಲಿಗೆ ಜಗದೀಶ್, ಲಕ್ಷ್ಮಣ್
  3. 4.ಧಾರವಾಡ ಜೈಲಿಗೆ ಧನರಾಜ್
  4. 5.ವಿಜಯಪುರ ಜೈಲಿಗೆ ವಿನಯ್
  5. 6.ಕಲಬುರುಗಿ ಜೈಲಿಗೆ ನಾಗರಾಜ್
  6. 7.ಬೆಳಗಾವಿ ಜೈಲಿಗೆ ಪ್ರದೂಶ್

ಜೈಲು ಸಿಬ್ಬಂದಿ ಜತೆ ಅಳಲು ತೋಡಿಕೊಂಡ ದರ್ಶನ್

ಈಗಾಗಲೇ ಸೆರೆಮನೆ ವಾಸದ ಕಷ್ಟ ಅನುಭವಿಸಿರುವ ನಟ ದರ್ಶನ್ ಈ ಕುರಿತು ಜೈಲು ಸಿಬ್ಬಂದಿ ಜತೆ ದುಃಖ ವ್ಯಕ್ತಪಡಿಸಿದ್ದರು. ಇದೆಲ್ಲಾ ಬೇಕಿತ್ತಾ ನಂಗೆ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ಅಭಿನಯದ ಚೌಕ ಚಿತ್ರವನ್ನು ಈ ಹಿಂದೆ ಬಳ್ಳಾರಿ ಜೈಲಿನಲ್ಲಿಯೇ ಚಿತ್ರೀಕರಣ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿನ ಖೈದಿಗಳ ಜೊತೆ ನಟ ಸಹಜ ಮಾತುಕತೆ ನಡೆಸಿದ್ದರು. ಬಳ್ಳಾರಿ ಜೈಲಿನ ಕಷ್ಟಗಳು, ಅಲ್ಲಿನ ವಾತಾವರಣದ ಬಗ್ಗೆ ಅಲ್ಲಿನ ಖೈದಿಗಳಿಂದ ತಿಳಿದುಕೊಂಡಿರುವ ದರ್ಶನ್‌ಗೆ ಈಗ ತಾನೇ ಆ ಜೈಲಿಗೆ ಖೈದಿಯಾಗಿ ವರ್ಗಾವಣೆಯಾಗುತ್ತಿರುವುದು ಆತಂಕ ಹೆಚ್ಚಿಸಿದೆ ಎನ್ನಲಾಗಿದೆ.

ಸಾಮಾನ್ಯ ಸೆಲ್ ನಲ್ಲಿ ದರ್ಶನ್ ?

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ವಿಐಪಿ ಸೆಲ್‌ಗಳು ಇಲ್ಲ. ಇಲ್ಲಿ ಎಲ್ಲವೂ ಸಾಮಾನ್ಯ ಸೆಲ್‌ಗಳಾಗಿದೆ. ಹೀಗಾಗಿ ದರ್ಶನ್ ಕೂಡ‌ ಇಲ್ಲಿರುವ ಎಲ್ಲ ಕೈದಿಗಳಂತೆಯೇ ಸಾಮಾನ್ಯ ಕೈದಿಯಾಗಿ‌ ಮುಂದುವರಿಯಬೇಕಿದೆ. ಕೇಂದ್ರ ಕಾರಾಗೃಹದ ಹೊರ ಭದ್ರತಾ ವಿಭಾಗದ ಸೆಲ್‌ನಲ್ಲಿ ನಟ ದರ್ಶನ್ ಅವರನ್ನು ಇರಿಸಲಾಗುತ್ತದೆ. ಹೊರ ಭದ್ರತಾ ವಿಭಾಗದಲ್ಲಿ ಒಟ್ಟು 11 ಸೆಲ್‌ಗಳಿದ್ದು, ಒಂದು ಸೆಲ್‌ನಲ್ಲಿ ಇಬ್ಬರು ಕೈದಿಗಳು ಇರುವ ವ್ಯವಸ್ಥೆ ಇದೆ. ಪ್ರತಿಯೊಂದು ಸೆಲ್ 10/10 ಅಡಿ ಅಗಲವನ್ನು ಹೊಂದಿದೆ.

ಇಲ್ಲಿರುವ ಹನ್ನೊಂದು ಸೆಲ್‌ಗಳಿಗೆ ದಿನದ 24 ಗಂಟೆಯೂ ಭದ್ರತೆ ವ್ಯವಸ್ಥೆ ಮಾಡಲಾಗುತ್ತದೆ. ಸೆಲ್ ಮುಂಭಾಗ 20 ಅಡಿ ಅಗಲ 60 ಅಡಿ ಉದ್ದದ ಜಾಗದಲ್ಲಿ ವಾಕಿಂಗ್ ಮಾಡಬಹುದು. ಬೆಳಗ್ಗೆ ಮತ್ತು ಸಂಜೆ ವಾಕಿಂಗ್ ಮಾಡಲು 15 ನಿಮಿಷ ಅವಕಾಶವಿದೆ. ಈ ವೇಳೆ ಭದ್ರತೆ ಸಿಬ್ಬಂದಿ ಕೂಡ ಹಾಜರಿರುತ್ತಾರೆ. ಸೆಲ್‌ನ ಒಳಗಡೆ ಬಾತ್ ರೂಂ, ಶೌಚಾಲಯದ ವ್ಯವಸ್ಥೆ ಇದ್ದು, ಸ್ನಾನ ಮಾಡಲು ತಣ್ಣೀರು ಮಾತ್ರ ಇರುತ್ತದೆ. ಈ ಸೆಲ್‌ಗೆ ಎರಡು ಗೇಟ್‌ಗಳಿರುತ್ತವೆ. ಇಲ್ಲಿರುವ ಹನ್ನೊಂದು ಸೆಲ್ ಗಳಲ್ಲಿ ಸದ್ಯ ಶಿವಮೊಗ್ಗ, ಹಾಸನ,ಬೆಂಗಳೂರು, ಮಂಗಳೂರು ಮೂಲದ ಕೈದಿಗಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಘಳಿಗೆವೊಂದು ವಾತಾವರಣ; ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

karnataka Weather Forecast : ಇಂದು ರಾಜಧಾನಿ ಬೆಂಗಳೂರಿನಲ್ಲಿ ಘಳಿಗೆಗೊಂದು ವಾತಾವರಣ ಇರಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ಕರಾವಳಿ ಸುತ್ತಮುತ್ತ ಗುಡುಗು ಸಹಿತ ಭಾರೀ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ. ಮಲೆನಾಡಿನಲ್ಲಿ ಸಾಧಾರಣ ಮಳೆಯಾದರೆ (Rain News) ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕೋಲಾರ-ಬೆಳಗಾವಿಯಲ್ಲಿ ಮಳೆ ಅಬ್ಬರ

ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಾದ ಧಾರವಾಡ, ಬಾಗಲಕೋಟೆ, ಬೀದರ್‌, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಬಿಸಿಲಿನ ಜತೆಗೆ ಮೋಡ ಕವಿದ ವಾತಾವರಣ ಇರಲಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor Darshan
ಸಿನಿಮಾ18 mins ago

Actor Darshan : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್‌ ಭೇಟಿಗೆ ಸೆಲೆಬ್ರೆಟಿಗಳಿಗೆ ಇಲ್ಲ ಅವಕಾಶ!

Physical Abuse
ಉಡುಪಿ1 hour ago

Physical Abuse : ರೈಲಿನಲ್ಲಿ ಯುವತಿ ಮೇಲೆ ಮಾನಭಂಗಕ್ಕೆ ಯತ್ನ! ಭಟ್ಕಳ ಮೂಲದ ಕಾಮುಕ ಅರೆಸ್ಟ್‌

Kangana Ranaut
ರಾಜಕೀಯ1 hour ago

Kangana Ranaut: ದೂರದೃಷ್ಟಿಯೇ ಇಲ್ಲದ ರಾಹುಲ್ ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ: ಕಂಗನಾ

attempt to murder case
ತುಮಕೂರು2 hours ago

Attempt To murder : ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ!

Deepfake Video
ವೈರಲ್ ನ್ಯೂಸ್2 hours ago

Deepfake Video: ಶುಬ್ ಮನ್ ಗಿಲ್ ಅನ್ನು ದೂಷಿಸಿದ ವಿರಾಟ್; ಡೀಪ್ ಫೇಕ್ ವಿಡಿಯೋ ವೈರಲ್

Road Accident
ಬೆಂಗಳೂರು2 hours ago

Road Accident : ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್‌ ಸವಾರನಿಗೆ ಲಾರಿ ಡಿಕ್ಕಿ; ಹೊರಬಂತು ಮೆದುಳು!

Actor Chikkanna
ಪ್ರಮುಖ ಸುದ್ದಿ3 hours ago

Actor Chikkanna: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಭೇಟಿ ಮಾಡಿದ್ದಕ್ಕೆ ನಟ ಚಿಕ್ಕಣ್ಣ ವಿಚಾರಣೆಗೆ ಹಾಜರು

Actor Darshan
ಸ್ಯಾಂಡಲ್ ವುಡ್3 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

Hair Combing
ಆರೋಗ್ಯ7 hours ago

Hair Combing: ಕೂದಲು ಬಾಚುವ ಅಭ್ಯಾಸವಿಲ್ಲವೇ? ಹಾಗಾದರೆ ಇದನ್ನೊಮ್ಮೆ ಓದಿ!

dhavala dharini column Hanuman's setubandha to meet Sugriva in ramayana by narayana yaji
ಅಂಕಣ7 hours ago

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು?

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Actor Darshan
ಸ್ಯಾಂಡಲ್ ವುಡ್3 hours ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಟ್ರೆಂಡಿಂಗ್‌