Actor Darshan: ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ: ಪೊಲೀಸ್ ತನಿಖೆ ಶುರು - Vistara News

ಪ್ರಮುಖ ಸುದ್ದಿ

Actor Darshan: ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ: ಪೊಲೀಸ್ ತನಿಖೆ ಶುರು

ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಗೆ (Actor Darshan) ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ಹಿನ್ನೆಲೆಯಲ್ಲಿ ದರ್ಶನ್ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ಬುಧವಾರ ತನಿಖೆ ಆರಂಭಿಸಿದ್ದಾರೆ. ಮಂಗಳವಾರ ಪ್ರಾಥಮಿಕ ಹಂತದ ತನಿಖೆ ನಡೆಸಿ ದರ್ಶನ್ ಹೇಳಿಕೆ ದಾಖಲಿಸಲಾಗಿತ್ತು.

VISTARANEWS.COM


on

Actor Darshan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ (Parappa Agrahara) ನಟ ದರ್ಶನ್ ಗೆ (Actor Darshan) ರಾಜಾತಿಥ್ಯ ನೀಡಿರುವ ಹಿನ್ನೆಲೆಯಲ್ಲಿ ಪೊಲೀಸರು ಬುಧವಾರ ತನಿಖೆ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಬೇಗೂರು ಇನ್ಸಪೆಕ್ಟರ್ ಕೃಷ್ಣ ಕುಮಾರ್ (Begur Inspector Krishna Kumar) ಆಗಮಿಸಿದ್ದು, ಲಾನ್ ನಲ್ಲಿ ಕುಳಿತಿದ್ದ ವಿಚಾರಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಮಂಗಳವಾರ ಪ್ರಾಥಮಿಕ ಹಂತದ ತನಿಖೆ ನಡೆಸಲಾಗಿತ್ತು.

ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Chitradurga Renukaswamy murder case) ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿರುವುದರಿಂದ ಬುಧವಾರ ಮಧ್ಯಾಹ್ನ ಬಳಿಕ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ. ದರ್ಶನ್ ನ್ಯಾಯಾಂಗ ಬಂಧನ ಅವಧಿ ಬುಧವಾರ ಮುಕ್ತಾಯವಾಗಲಿದ್ದು, ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಬಳಿಕ ಸ್ಥಳಾಂತರ ಪ್ರಕ್ರಿಯೆ ನಡೆಯಲಿದೆ.

ಜೈಲು ಸಿಬ್ಬಂದಿ ಜೊತೆ ಅಳಲು ತೋಡಿಕೊಂಡ ದರ್ಶನ್

ಈಗಾಗಲೇ ಸೆರೆಮನೆ ವಾಸದ ಕಷ್ಟ ಅನುಭವಿಸಿರುವ ನಟ ದರ್ಶನ್ ಈ ಕುರಿತು ಜೈಲು ಸಿಬ್ಬಂದಿ ಜೊತೆ ದುಃಖ ವ್ಯಕ್ತಪಡಿಸಿದ್ದಾರೆ. ಇದೆಲ್ಲಾ ಬೇಕಿತ್ತಾ ನಂಗೆ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ಅಭಿನಯದ ಚೌಕ ಚಿತ್ರವನ್ನು ಈ ಹಿಂದೆ ಬಳ್ಳಾರಿ ಜೈಲಿನಲ್ಲಿಯೇ ಚಿತ್ರೀಕರಣ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿನ ಖೈದಿಗಳ ಜೊತೆ ನಟ ಸಹಜ ಮಾತುಕತೆ ನಡೆಸಿದ್ದರು. ಬಳ್ಳಾರಿ ಜೈಲಿನ ಕಷ್ಟಗಳು, ಅಲ್ಲಿನ ವಾತಾವರಣದ ಬಗ್ಗೆ ಅಲ್ಲಿನ ಖೈದಿಗಳಿಂದ ತಿಳಿದುಕೊಂಡಿರುವ ದರ್ಶನ್ ಗೆ ಈಗ ತಾನೇ ಆ ಜೈಲಿಗೆ ಖೈದಿಯಾಗಿ ವರ್ಗಾವಣೆಯಾಗುತ್ತಿರುವುದು ಆತಂಕ ಹೆಚ್ಚಿಸಿದೆ ಎನ್ನಲಾಗಿದೆ.

ರಾಜಾತಿಥ್ಯ ವಿಚಾರಣೆ

ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ರಾಜಾತಿಥ್ಯ ವಿಚಾರಣೆ ಪ್ರಾರಂಬವಾಡಿದೆ. ವಿಡಿಯೋ ಕಾಲ್ ಬಗ್ಗೆಯೂ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ. ಹುಳಿಮಾವು ಇನ್ಸ್ ಪೆಕ್ಟರ್ ಕುಮಾರಸ್ವಾಮಿ ವಿಚಾರಣೆ ನಡೆಸಿದ್ದು, ಈ ವೇಳೆ ಮೊಬೈಲ್ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ದರ್ಶನ್ ತಿಳಿಸಿದ್ದಾರೆ.

ನನ್ನ ಪಾಡಿಗೆ ನಾನು ನನ್ನ ಕೊಠಡಿಯಲ್ಲಿ ಕುಳಿತಿದ್ದೆ. ಏಕಾಏಕಿ ನನ್ನ ಕೊಠಡಿಗೆ ಒರ್ವ ವ್ಯಕ್ತಿ ಬರುತ್ತಾನೆ. ಬಾಸ್ ನಿಮ್ಮ ಅಭಿಮಾನಿ‌ ಬಾಸ್ ಪ್ಲೀಸ್ ಒಮ್ಮೆ ಮಾತಾಡಿ ಅಂದ್ರು. ಅಭಿಮಾನಿ ಅಲ್ವಾ ಅಂತ ನಾನು ಊಟ ಆಯ್ತಾ ಅಂದೆ. ಹೇಗಿದ್ದೀರಾ ಬಾಸ್ ಅಂದ ನಾನು ಆರಾಮಾಗಿ ಇದ್ದೀನಿ ಅಂದೆ. ಅದು ಬಿಟ್ಟರೇ ನನಗೂ ಆ ವಿಡಿಯೋ ಕಾಲ್ ಗೂ ಸಂಬಂಧ ಇಲ್ಲ. ಮೊಬೈಲ್ ತಗೊಂಡು ಬಂದ ವ್ಯಕ್ತಿ ರೌಡಿಶೀಟರ್ ಅನ್ನೋದು ನನಗೆ ಗೊತ್ತಿಲ್ಲ. ನಾನು ಜೈಲಿನಲ್ಲಿ ಯಾವುದೇ ಮೊಬೈಲ್ ಬಳಕೆ ಮಾಡ್ತಾ ಇಲ್ಲ. ಫೋನ್ ನಲ್ಲಿ ಮಾತನಾಡಿದ ವ್ಯಕ್ತಿಯೂ ಯಾರು ಅನ್ನೋದು ಗೊತ್ತಿಲ್ಲ. ಬಹುಶ ಯಾವ ದಿನ ಮಾತನಾಡಿದ್ದು ಅಂತ ಸರಿಯಾಗಿ ಗೊತ್ತಿಲ್ಲ. ಸುಮಾರು 10- 15 ದಿನಗಳ ಹಿಂದೆ ಇರಬಹುದು ಎಂದು ವಿಚಾರಣೆ ವೇಳೆ ದರ್ಶನ್ ತಿಳಿಸಿದ್ದಾರೆ.

ದರ್ಶನ್ ಹೇಳಿಕೆ ದಾಖಲಿಸಿರುವ ಇನ್ಸ್ ಪೆಕ್ಟರ್ ಬುಧವಾರ ಮತ್ತೆ ಪರಪ್ಪನ ಅಗ್ರಹಾರದಲ್ಲಿ ವಿಚಾರಣೆ ನಡೆಸಲಿದ್ದಾರೆ. ಅವಶ್ಯಕತೆ ಇದ್ದರೆ ತನಿಖೆ ಭಾಗವಾಗಿ ಮತ್ತೆ ಬುಧವಾರ ಕೂಡ ದರ್ಶನ್ ವಿಚಾರಣೆ ನಡೆಯಲಿದೆ.


ಸಿಗರೇಟ್ ಸೇದಿದ ಪ್ರಕರಣ

ಲಾನ್ ನಲ್ಲಿ ಸಿಗರೇಟ್ ಸೇದಿದ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯಲ್ಲಿ ದರ್ಶನ್, ಹುಡುಗರು ಕ್ರಿಕೆಟ್ ಆಡುತ್ತಿದ್ದರು. ಅದನ್ನು ನಾನು ನಿತ್ಯ ನೋಡುತ್ತಿದ್ದೆ. ಅಂದು ಕೂಡ ನನ್ನ ಪಾಡಿಗೆ ಸಿಗರೇಟ್ ಸೇದುತ್ತಾ ಕ್ರಿಕೆಟ್ ಆಡೋದನ್ನು ನೋಡುತ್ತಿದ್ದೆ. ಈ ವೇಳೆ ನಾಗ ಮತ್ತೆ ಆತನ ಸ್ನೇಹಿತ ಬಂದ. ನಾನು ಸಿಗರೇಟ್ ಸೇದುತ್ತಾ ಅವರ ಬಳಿ ಬಂದು ಕುಳಿತಿದ್ದೇನೆ ಅಷ್ಟೆ. ಇದರ ಹಿಂದೆ ಯಾವ ಉದ್ದೇಶ ಕೂಡ ಇರಲಿಲ್ಲ. ಅವರ ಜೊತೆ ಮಾತುಕತೆ ಮಾಡುವ ಉದ್ದೇಶ ಕೂಡ ಇರಲಿಲ್ಲ ಎಂದು ಠಾಣಾಧಿಕಾರಿ ಮುಂದೆ ಪ್ರಾಥಮಿಕ ತನಿಖೆಯಲ್ಲಿ ಹೇಳಿದ್ದಾರೆ.

ಬಳ್ಳಾರಿ ಜೈಲಿಗೆ ಶಿಫ್ಟ್

ದರ್ಶನ್ ಗೆ ರಾಜಾಥಿತ್ಯ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ದರ್ಶನ್ ನನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಈ ಆದೇಶದಂತೆ ಬುಧವಾರ ಮಧ್ಯಾಹ್ನದ ಅನಂತರ ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ೩ ಗಂಟೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಹೊರತರುವ ಸಾಧ್ಯತೆ ಇದ್ದು, ಈಗಾಗಲೆ ದರ್ಶನ್ ವಿರುದ್ದ ದಾಖಲಾಗಿರುವ ಎಫ್ಐಆರ್ ಗಳ ವಿಚಾರಣೆ ಮಂಗಳವಾರದಿಂದಲೇ ನಡೆಯುತ್ತಿದೆ. ಎರಡು ಎಫ್ ಐ ಆರ್ ನಲ್ಲಿ ದರ್ಶನ್ ಹೆಸರಿದ್ದು, ಸ್ಥಳ ಮಹಜರು ಹಾಗೂ ಆರೋಪಿಗಳ ಹೇಳಿಕೆಯನ್ನು ತನಿಖಾಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.

ಬದಲಾಗಲಿದೆ ದರ್ಶನ್ ಖೈದಿ ಸಂಖ್ಯೆ 6106

ಬಾರಿ ಟ್ರೆಂಡ್ ಆಗಿದ್ದ ನಟ ದರ್ಶನ್ ವಿಚಾರಣಾಧಿನ ಖೈದಿ ನಂಬರ್ ಮತ್ತೆ ಬದಲಾಗುವ ಸಾಧ್ಯತೆ ಇದೆ. 6106 ಖೈದಿ ನಂಬರ್ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಗೆ ನೀಡಲಾಗಿತ್ತು. ಈಗ ಬಳ್ಳಾರಿಗೆ ಶಿಫ್ಟ್ ಆಗುತ್ತಿರುವುದರಿಂದ ನಟ ದರ್ಶನ್ ಖೈದಿ ನಂಬರ್ ಬದಲಾಗಲಿದೆ.

ನಟ ದರ್ಶನ್ ಅಭಿಮಾನಿಗಳು 6106 ನಂಬರ್ ಟ್ರೆಂಡ್ ಮಾಡಿಕೊಂಡಿದ್ದರು. ಕೆಲವು ಅಭಿಮಾನಿಗಳು ತಮ್ಮ ವಾಹನಗಳ ಮೇಲೆ ನಂಬರ್ ಹಾಕಿಸಿಕೊಂಡಿದ್ದರು. ಮಗುವಿನ ಪೋಟೋ ಶೂಟ್ ನಲ್ಲೂ ಕೈದಿ ನಂಬರ್ ಬಳಸಿದ್ದರು.
ಬಳ್ಳಾರಿ ಜೈಲಿಗೆ ಸೇರಿದ ಬಳಿಕ ನಟ ದರ್ಶನ್ ಗೆ ಹೊಸ ಖೈದಿ ನಂಬರ್ ಅನ್ನು ಬಳ್ಳಾರಿ ಜೈಲಿನ ಅಧಿಕಾರಿಗಳು ನೀಡಲಿದ್ದಾರೆ.

ಇದನ್ನೂ ಓದಿ: Actor Darshan: ಇನ್ಮುಂದೆ ಬಳ್ಳಾರಿ ಜೈಲಿನಲ್ಲಿ ಮುದ್ದೆ ಮುರಿಯುವ ನಟ ದರ್ಶನ್

ಬಳ್ಳಾರಿ ಖೈದಿಗಳಂತೆಯೇ ದರ್ಶನ್‌ಗೂ ವಿಚಾರಣಾಧೀನ ಖೈದಿ ಸಂಖ್ಯೆ ( under crime prisoner) ನೀಡಲಾಗುತ್ತದೆ. ಹೀಗಾಗಿ ದರ್ಶನ್ ಖೈದಿ ನಂಬರ್ ಬದಲಾವಣೆ ಯಾಗುವುದು ಖಚಿತ. ಬಳ್ಳಾರಿ ಜೈಲಿನಲ್ಲಿ ಮೂರು ಸಂಖ್ಯೆಯ ಖೈದಿ ನಂಬರ್ ನೀಡಲು ಸಿದ್ದತೆ ನಡೆಸಲಾಗಿದೆ. ಜೈಲ್ ಗೆ ಸೇರಿದ ಬಳಿಕ ದರ್ಶನ್ ಗೆ ಹೊಸ ಖೈದಿ ಸಂಖ್ಯೆ ಸಿಗಲಿದೆ. ಖೈದಿ ಸಂಖ್ಯೆ ನೀಡಿದ ಬಳಿಕ ಜೈಲು ರೂಂ ನೀಡಲಾಗುತ್ತದೆ. ಸಮಾನ್ಯ ಖೈದಿಯಂತೆ ಇಲ್ಲಿ ದರ್ಶನ್ ನನ್ನು ನೋಡಿಕೊಳ್ಳಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು?

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧದ ಅಪರೂಪದ ಸನ್ನಿವೇಶ ಇಲ್ಲಿದೆ. ವಾನರೇಂದ್ರನ ಮಂತ್ರಿ ಕೋಸಲೇಂದ್ರನ ದಾಸನಾದ ಪ್ರಸಂಗವಿದು.

VISTARANEWS.COM


on

By

dhavala dharini column Hanuman's setubandha to meet Sugriva in ramayana by narayana yaji
Koo

ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧದ ಅಪರೂಪದ ಸನ್ನಿವೇಶ

dhavala dharini by Narayana yaji

ಧವಳ ಧಾರಿಣಿ ಅಂಕಣ: ಭವತಾ ಸಖ್ಯಕಾಮೌ ತೌ ಭ್ರಾತರೌ ರಾಮಲಕ್ಷ್ಮಣೌ.
ಪ್ರತಿಗೃಹ್ಯಾರ್ಚಯಸ್ವೈತೌ ಪೂಜನೀಯತಮಾವುಭೌ৷৷ ಕಿ.5.7৷৷

ಸಹೋದರರಾದ ರಾಮಲಕ್ಷ್ಮಣರು ನಿನ್ನೊಡನೆ ಗೆಳೆತನವನ್ನು ಬೆಳೆಸುವ ಆಶಯವನ್ನು ಹೊಂದಿದ್ದಾರೆ. ಪೂಜನೀಯರಾದ ಇವರಿಬ್ಬರನ್ನೂ ನೀನು ಯಥೋಚಿತವಾಗಿ ಪ್ರತಿಗ್ರಹಿಸಿ ಪೂಜಿಸಬೇಕು

ರಾಮಾಯಣದ ಕಿಷ್ಕಿಂಧಾಕಾಂಡದಿಂದ ತೊಡಗಿ ಯುದ್ಧ ಕಾಂಡದಕೊನೆಯ ತನಕ ಸುಗ್ರೀವ ಪ್ರಮುಖವಾದ ಪಾತ್ರವನ್ನು ವಹಿಸುತ್ತಾನೆ. ಅನೇಕ ಸಲ ಆತನ ವ್ಯಕ್ತಿತ್ವ ಮರ್ಕಟ ಸ್ವಭಾವಕ್ಕೆ ಅನುಗುಣವಾಗಿದೆ. ವಾಲಿಯನ್ನು ಸಂಹರಿಸಿದ ನಂತರದಲ್ಲಿ ಸೀತಾನ್ವೇಷಣೆಗೆ ಪ್ರಾರಂಭಿಸಿದನೋ, ಅಲ್ಲಿಂದ ಆತ ತುಂಬಾ ಪ್ರೌಢತ್ವದಿಂದಲೇ ವ್ಯವಹರಿಸುತ್ತಾನೆ. ಸುಗ್ರೀವನ ಜೊತೆ ರಾಮನ ಸಖ್ಯದಲ್ಲಿ ಆತನ ವ್ಯವಹಾರ ಮೇಲ್ನೋಟಕ್ಕೆ ಚಂಚಲತೆಯಿಂದ ಕೂಡಿತ್ತು ಎಂದು ತೋರಿದರೂ ವಾಸ್ತವವಾಗಿ ಆತ ಸೂಕ್ಷ್ಮವಾಗಿ ಎದುರಾದವರನ್ನು ಅಭ್ಯಸಿಸುತ್ತಿದ್ದ. ವಾಲಿ ಆತನನ್ನು ರಾಜ್ಯದಿಂದ ಹೊರಗಟ್ಟಿ ಆತನನ್ನು ಕೊಲ್ಲಬೇಕೆಂದು ಇಡೀ ಪ್ರಪಂಚವನ್ನೆಲ್ಲಾ ಓಡಾಡಿಸಿದ ವಿಷಯವನ್ನು ಸವಿಸ್ತಾರವಾಗಿ ಹಿಂದಿನ ಸಂಚಿಕೆಯಲ್ಲಿ ಗಮನಿಸಿದ್ದೇವೆ. ಮತಂಗ ಋಷಿಯ ಶಾಪದ ಕಾರಣಕ್ಕೆ ವಾಲಿಗೆ ಮತಂಗಾಶ್ರಮವಿರುವ ಋಷ್ಯಮೂಕ ಪರ್ವತವನ್ನು ತನ್ನ ಅಡಗುದಾಣವನ್ನಾಗಿಸಿಕೊಂಡ. ಋಷ್ಯಮೂಕ ಪರ್ವತಕ್ಕೆ ಆ ಹೆಸರು ಬಂದಿರುವುದಕ್ಕೆ ಕಾರಣ ಅದು ತಪಸ್ವಿಗಳ ಜ್ಞಾನಾರ್ಜನಗೆ ಹೇಳಿ ಮಾಡಿಸಿದ ಸ್ಥಳವಾಗಿತ್ತು ಎನ್ನುವ ಕಾರಣಕ್ಕಾಗಿ. ಋಷೀಣಾಂ ತತ್ರ ಪ್ರಾಪ್ವಾನಾಂ ಅಮೂಕಃ- ಅಲ್ಲಿಗೆ ಹೋದ ಋಷಿಗಳ ಅಜ್ಞಾನವು ಹೋಗಿಬಿಡುತ್ತಿತ್ತು ಹಾಗಾಗಿ ಆ ಪರ್ವತಕ್ಕೆ ಋಷ್ಯಮೂಕವೆನ್ನುವ ಹೆಸರು ಬಂತು. ಮೌನಿಗಳಾದ ಋಷಿಗಳ ಪರ್ವತ ಎನ್ನುವ ಇನ್ನೊಂದು ಅರ್ತವೂ ಋಷ್ಯಮೂಕಕ್ಕೆ ಇದೆ. ಅಲ್ಲಿ ಮತಂಗ ಮುನಿಗಳು ಮೌನವಾಗಿಯೇ ತಪಸ್ಸಿಗೆ ಕುಳಿತಿರುತ್ತಿದ್ದರು.

ದುಂದುಭಿಯಂತಹ ರಾಕ್ಷಸನನ್ನು ಕೊಂದು ವಾಲಿ ಲೋಕಕ್ಕೆ ಉಪಕಾರವನ್ನು ಮಾಡಿದರೂ ಆತನಿಗೆ ಶಾಪ ಏತಕ್ಕೆ ಬಂತು ಎಂದು ಅನುಕಂಪ ಬರುವುದು ಸಹಜ. ವಾಲಿ ಮತ್ತು ದುಂದುಭಿಯ ಜಗಳದ ಹಿನ್ನೆಲೆಯನ್ನು ಗಮನಿಸಬೇಕು. ದುಂದುಭಿ ಕೋಣನ ಆಕಾರವನ್ನು ಹೊಂದಿದ್ದ ರಾಕ್ಷಸ. ಆತನಿಗೆ ಸಾವಿರ ಆನೆಯ ಬಲವಿತ್ತು. ತನ್ನ ಪರಾಕ್ರಮವನ್ನು ತೋರುವ ಹುಚ್ಚು. ಆ ಕಾರಣಕ್ಕಾಗಿ ಆತ “ಮಹ್ಯಂ ಯುದ್ಧ ಪ್ರಯಚ್ಛ- ನನಗೆ ಯುದ್ಧದ ಆತಿಥ್ಯವನ್ನು ನೀಡಿ” ಎಂದು ಎಲ್ಲಾ ಬಲಶಾಲಿಗಳ ಹತ್ತಿರ ಹೋಗಿ ಕೇಳಿದ್ದ. ಮೊದಲು ಆತ ಹೋಗಿದ್ದು ಸಮುದ್ರ ರಾಜನಲ್ಲಿಗೆ.

ಮುದ್ರದೊಡಯನಿಗೆ ಆತನೊಡನೆ ಯುದ್ಧ ಮಾಡುವ ಸಾಮರ್ಥ್ಯವಿಲ್ಲವೆಂದು ಅರ್ಥವಲ್ಲ; ಇದು ವೃಥಾ ಜಗಳ, ಅದರಿಂದ ತನ್ನೊಡಲಲ್ಲಿದ್ದ ಜಲಚರಗಳಿಗೆ ತೊಂದರೆಯಾಗುತ್ತದೆ ಎಂದು ಆತ ಪರ್ವತಗಳ ರಾಜನಾದ ಹಿಮವಂತನನ್ನು ತೋರಿಸಿದ. ಆತ ದುಂದುಭಿಯ ಆಹ್ವಾನವನ್ನು ನಿರಾಕರಿಸುವ ಕಾರಣ ತನ್ನಲ್ಲಿ ಸತ್ವಗುಣಶೀಲರಾದ ತಪಸ್ವಿಗಳು ತಪಸ್ಸನ್ನು ಮಾಡುತ್ತಿದ್ದಾರೆ. ಅವರ ತಪಸ್ಸಿಗೆ ಭಂಗಬಾರದೆನ್ನುವಕಾರಣಕ್ಕಾಗಿ ಜಗಳಕ್ಕೆ ಬರಲು ಒಪ್ಪುವುದಿಲ್ಲ. ಜಗಳವೆನ್ನುವುದು ಇನ್ನೊಬ್ಬರ ಶಾಂತತೆಗೆ ಭಂಗತರುವಂತಹುದಾಗಬಾರದು ಎನ್ನುವ ವಿವೇಕ ಇರಬೇಕು. ಸಮುದ್ರರಾಜನಾಗಲಿ, ಹಿಮವಂತನಾಗಲೀ ದುಂದುಭಿಯ ಯುದ್ಧಾಹ್ವಾನವನ್ನು ತಿರಸ್ಕರಿಸಿದರು ಎಂದ ಕಾರಣಕ್ಕೆ ಅವರು ಸಣ್ಣವರೇನೂ ಆಗಲಿಲ್ಲ. ವಾಲಿ ಜಗಳಕ್ಕೆ ಒಪ್ಪಿದ್ದೂ ಅಲ್ಲದೇ ಯುದ್ಧಮಾಡಿ ಆ ರಾಕ್ಷಸನನ್ನು ಕೊಂದಮೇಲೆ ಆತನ ದೇಹವನ್ನು ಒಂದು ಯೋಜನದಷ್ಟು ದೂರ ಎಸೆದನು. ಆಗ ಸಿಡಿದ ರಕ್ತದ ಹನಿಗಳೂ ಮತಂಗ ಆಶ್ರಮದಲ್ಲಿ ಬಿದ್ದು ಆಶ್ರಮ ಮಲಿನವಾಯಿತು. ಸತ್ತಮೇಲೆ ವೈರವಿರಕೂಡದು ಎನ್ನುತ್ತದೆ ಧರ್ಮಶಾಸ್ತ್ರ. ವಾಲಿ ಸತ್ತಮೇಲೆಯಾಗಲೀ, ರಾವಣ ಸತ್ತಮೇಲೆಯಾಗಲಿ ಅವರ ಕಳೇಬರಕ್ಕೆ ರಾಮ ಗೌರವಯುತವಾಗಿ ಅಂತ್ಯಸಂಸ್ಕಾರವನ್ನು ಮಾಡಿಸುತ್ತಾನೆ. ವಿಭೀಷಣ ರಾವಣನ ಸಂಸ್ಕಾರಕ್ಕೆ ಒಪ್ಪದಿದ್ದರೆ ತಾನೇ ರಾವಣನ ಅಂತ್ಯಸಂಸ್ಕಾರವನ್ನು ಮಾಡುತ್ತೇನೆ ಎನ್ನುತ್ತಾನೆ. ಮತಂಗರು ಶಾಪವನ್ನು ಕೊಡುವಾಗ ಹೇಳುವ ಮಾತು

ಯೇನಾಹಂ ಸಹಸಾ ಸ್ಪೃಷ್ಟಶ್ಶೋಣಿತೇನ ದುರಾತ್ಮನಾ.

ಕೋಯಂ ದುರಾತ್ಮಾ ದುರ್ಭುದ್ಘಿರಕೃತಾತ್ಮಾ ಚ ಬಾಲಿಶಃ II ಕಿ.11.50৷৷

ನನ್ನನ್ನು ಅಪವಿತ್ರವಾದ ರಕ್ತದ ಮೂಲಕ ಮುಟ್ಟಿದ ದುರಾತ್ಮನು ಯಾವನು. ಮೂಢನಾದ, ದುರಾತ್ಮನಾದ, ದುರ್ಬುದ್ಧಿಯುಳ್ಳ, ಜಿತೇಂದ್ರಿಯನಲ್ಲದ (ಅಕೃತಾತ್ಮಾ) ಆ ಮೂರ್ಖನು ಯಾರಾಗಿಬಹುದು”

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡದಲ್ಲಿನ ರಾಜನೀತಿಯ ವಿಲಕ್ಷಣ ಘಟನೆ

ಇಲ್ಲಿ ಜಿತೇಂದ್ರಿಯ ಎನ್ನುವ ಶಬ್ಧವನ್ನು ಬಳಸಿದ್ದಾರೆ. ಮೈತೀಟೆಯನ್ನು ತೀರಿಸಿಕೊಳ್ಳುವುದಕ್ಕೆ ಯುದ್ಧವಲ್ಲ. ಲೋಕ ಹಿತಕ್ಕಾಗಿ ಯುದ್ಧ ಅಪರಾಧವಲ್ಲ. ಇಲ್ಲಿ ವಾಲಿ ಕೇವಲ ರಕ್ತದಿಂದ ಆಶ್ರಮವನ್ನು ಮಲಿನಮಾಡಿದ್ದಲ್ಲ. ಪರ್ವತಮಯವಾದ ದುಂದುಭಿಯ ದೇಹವನ್ನು ಬಿಸುಟು ಆಶ್ರಮದ ವೃಕ್ಷಗಳೆಲ್ಲವನ್ನೂ ಧ್ವಂಸಮಾಡಿದ್ದಾನೆ. ಅವರಿಗೆ ಈ ಕೃತ್ಯವನ್ನು ನಡೆಸಿದವ ವಾಲಿ ಎನ್ನುವುದು ತಿಳಿಯಿತು. “ಯಾವಾತ ಈ ಕೃತ್ಯವನ್ನು ಎಸಗಿದವೋ ಆತನೇನಾದರೂ ಇನ್ನುಮುಂದೆ ಈ ಆಶ್ರಮದ ಪ್ರದೇಶಕ್ಕೆ ಬಂದರೆ ಇಲ್ಲಿಯೇ ಮರಣ ಹೊಂದುವನು. ಪುತ್ರನಂತೆ ಅಕ್ಕರೆಯಿಂದ ಬೆಳೆಸಿದ ಅವರ ಆಶ್ರಮದ ಗಡ್ಡೆಗೆಣಸುಗಳ ವಿನಾಶಾರ್ಥವಾಗಿ ಆತನ ಮಂತ್ರಿಗಳೇನಾದರೂ ಆತನ ಆಶ್ರಮದ ಪರಿಸರದಲ್ಲಿದ್ದರೆ ಅವರು ಒಂದು ದಿನಗಳೊಳಗಾಗಿ ಆ ಪ್ರದೇಶದಿಂದ ಹೊರಟುಬಿಡಬೇಕು. ಹೋಗದೇ ಉಳಿದರೆ ಅಂತವರು ಹಲವಾರು ಸಾವಿರ ವರುಷಗಳ ಕಾಲ ಕಲ್ಲಾಗಿಬಿಡುವರು” ಎನ್ನುವ ಶಾಪ ಕೊಟ್ಟರು. ವಿಷಯ ಅರಿತ ವಾಲಿ ಓಡೋಡಿ ಬಂದು ಮತಂಗ ಮುನಿಗಳಿಗೆ ತನ್ನನ್ನು ಕ್ಷಮಿಸಿ ಎಂದರೂ ಅವರು ಕ್ಷಮಿಸದೇ ಆಶ್ರಮವನ್ನೇ ಬಿಟ್ಟು ಹೊರಟುಹೋದರು. ಆ ನಂತರದಲ್ಲಿ ವಾಲಿಯಾಗಲೀ ಆತನ ಕಡೆಯವರಾಗಲೀ, ಶಾಪದ ಭಯದಿಂದ ಮತಂಗಾಶ್ರಮದ ಪರಿಸರಕ್ಕೆ ಬರುತ್ತಿರಲಿಲ್ಲ. ವಾಲಿ ಸುಗ್ರೀವ ಎಲ್ಲಿಯೇ ಅಡಗಿದ್ದರೂ ಆತನನ್ನು ಹುಡುಕಿ ಕೊಲ್ಲಲು ಬರುತ್ತಿದ್ದ ಎಂದು ಅನಿಸುತ್ತದೆ. ತನ್ನ ಜೀವ ಉಳಿಸಿಕೊಳ್ಳಲು ಸುಗ್ರೀವ ಪ್ರಪಂಚದ ಎಲ್ಲಾ ಕಡೆ ನಿರಂತರವಾಗಿ ಎಲ್ಲಿಯೂ ನಿಲ್ಲದೇ ಹಾರುತ್ತಿದ್ದ. ಶಾಪದ ಘಟನೆ ಹನುಮಂತನಿಗೆ ಅದುಹೇಗೋ ತಿಳಿಯಿತು. ಆತ ಈ ವಿಷಯವನ್ನು ಸುಗ್ರೀವನಿಗೆ ಹೇಳಿದ. ಮತಂಗಮುನಿಗಳ ಶಾಪದ ಕಾರಣದಿಂದ ಋಷ್ಯಮೂಕ ಪರ್ವತ ಸುಗ್ರೀವನಿಗೆ ಸುರಕ್ಷಿತ ತಾಣವಾಗಿ ಉಳಿಯಿತು. ಸುಗ್ರೀವ ತನ್ನ ಹತ್ತಿರವೇ ಬಂದು ಉಳಿದದ್ದು ನೋಡಿದ ವಾಲಿಗೆ ಮೈ ಪರಚಿಕೊಳ್ಳುವಂತಾಗಿದ್ದಂತೂ ಸತ್ಯ.

ಲಕ್ಷ್ಮಣನಿಂದ ಸಮಾಧಾನಿಸಲ್ಪಟ್ಟ ರಾಮ ಋಷ್ಯಮೂಕ ಪರಿಸರದಲ್ಲಿ ತಿರುಗಾಡುತ್ತಿರುವುದನ್ನು ದೂರದಲ್ಲಿಯೇ ನೋಡಿದ ಸುಗ್ರೀವನಿಗೆ ನಡುಕ ಉಂಟಾಯಿತು. ಅವರ ತೇಜಸ್ಸು ಆತನನ್ನು ಭಯಪಡಿಸಿತು. ವಾಲಿಯೇನಾದರೂ ತನ್ನನ್ನು ಕೊಲ್ಲಲು ಬೇರೆಯವರನ್ನು ಕಳುಹಿಸಿರಬಹುದೆನ್ನುವ ಸಂಶಯದಿಂದ ಆತನ ಚಲನವಲನಗಳೇ ನಿಂತು ಹೋಯಿತು. ಆತ ಹೆದರಿಕೆಯಿಂದ ಏನು ಮಾಡುವುದು ಎಂದು ತಿಳಿಯದೇ ಒಂದು ಪರ್ವತದಿಂದ ಇನ್ನೊಂದು ಪರ್ವತಕ್ಕೆ ಹಾರತೊಡಗಿದ. ಆಗ ಹನುಮಂತ ಸುಗ್ರೀವನಿಗೆ ಸಮಾಧಾನವನ್ನು ಹೇಳಿ “ನೀನು ರಾಜನಾದವನು, ಹೀಗೆ ಹೆದರಕೂಡದು. ಚನ್ನಾಗಿ ಆಲೋಚಿಸಿ ಅವರ ಹಾವ ಭಾವವನ್ನು ತಿಳಿದು ಶತ್ರುವೋ ಅಲ್ಲವೋ ಎನ್ನುವುದನ್ನು ತಿಳಿಯಬೇಕೆನ್ನುತ್ತಾನೆ. ಸುಗ್ರೀವ ಹನುಮಂತನಿಗೆ ಬಂದವರು ಯಾರು ಎಂದು ತಿಳಿದುಕೊಂಡು ಬರಲು ಕಳಿಸುತ್ತಾನೆ.

ನಮ್ಮ ರಾಜ್ಯದ ಆನೆಗೊಂದಿಯಲ್ಲಿ ಹನುಮಂತ ಮೊದಲು ರಾಮ ಲಕ್ಷ್ಮಣರನ್ನು ಭೆಟ್ಟಿಮಾಡಿರುವುದು. ಇಲ್ಲಿಯತನಕ ಸುಗ್ರೀವನ ಸಚಿವನಾಗಿದ್ದ ಹನುಮಂತ ಇಲ್ಲಿಂದ ಮುಂದೆ “ದಾಸೋಹಂ ಕೋಸಲೇಂದ್ರಸ್ಯ ರಾಮಸ್ಯಾಕ್ಲಿಷ್ಟಕರ್ಮಣಃ” ಎಂದು ಪ್ರಸಿದ್ದನಾಗುವುದಕ್ಕೆ ಪೀಠಿಕೆ ಇದು. ಕಪಿಯ ರೂಪದಲ್ಲಿದ್ದರೆ ಯಾರಿಗೂ ನಂಬಿಕೆ ಹುಟ್ಟಲು ಸಾಧ್ಯವಿಲ್ಲವೆಂದು ಹನುಮಂತ ಬಿಕ್ಷುವಿನ ರೂಪದಲ್ಲಿ ರಾಮನ ಪರಿಚಯವನ್ನು ಕೇಳುತ್ತಾನೆ. ಕಿಷ್ಕಿಂಧಾ ಕಾಂಡದ 3 ನೆಯ ಸರ್ಗದಲ್ಲಿ ಹನುಮಂತ ರಾಮನ್ನು ಮಾತಾಡಿಸುವಾಗ ಉಪಯೋಗಿಸುವ ಭಾಷೆ, ದೇಹದ ಭಂಗಿ, ವಿನೀತ ಭಾವ, ತನ್ನ ಒಡೆಯನ ಕುರಿತು ಗೌರವ ಇವೆಲ್ಲವೂ ಸಮ್ಮಿಳಿತವಾಗಿದ್ದವು. ದೀರ್ಘವಾಗಿ ಮಾತಾಡಿದ್ದರಲ್ಲಿ ಒಂದೇ ಒಂದು ಅಪಶಬ್ಧವೂ ಇಲ್ಲವಾಗಿತ್ತು. ದೇಹದ ಯಾವ ಅವಯವಗಳಲ್ಲಿಯೂ ಯಾವುದೇ ದೋಷವಿರಲಿಲ್ಲ. ವಿಷಯನಿರೂಪಣೆಯಲ್ಲಿ ವಿಸ್ತಾರವಿರಲಿಲ್ಲ. ಸಮಯಕ್ಕೆ ಎಷ್ಟು ಬೇಕೋ ಅಷ್ಟು ಮಾತ್ರ ಮಾತಾಡಿದ್ದನು. ಸಂಶಯಕ್ಕೆಡೆಮಾಡುವಂತಹ ಯಾವ ಮಾತನ್ನೂ ಆತ ಆಡಲಿಲ್ಲ. ಮದ್ಯಸ್ವರದಲ್ಲಿ ವ್ಯಾಕರಣದಿಂದ ಸಂಸ್ಕೃತವಾದ ಶಬ್ದಗಳನ್ನು ಬಳಸಿ ಯಾವ ಯಾವ ವಾಕ್ಯಗಳನ್ನು ಎಲ್ಲೆಲ್ಲಿ ಆಡಬೇಕೋ ಅದನ್ನು ಮಾತ್ರವೇ ಆಡಿದ್ದ. ಎಲ್ಲಕ್ಕಿಂತ ಹೆಚ್ಚಾಗಿ ಕೇಳುವವರ ಮನಸ್ಸಿಗೆ ಹರ್ಷವನ್ನುಂಟುಮಾಡುವ ಶುಭಕರವಾದ ಮಾತುಗಳನ್ನೇ ಆಡಿದ್ದ. ಇಲ್ಲಿ ಒಂದು ಸಂಶಯ ಬರುತ್ತದೆ. ಅಷ್ಟೊಂದು ಸುಂದರವಾಗಿ ಮಾತನಾಡಿದ್ದ ಹನುಮಂತ ತನ್ನ ವೇಷವನ್ನು ಮರೆಮಾಚಿ ಬಿಕ್ಶುವಿನ ವೇಷವನ್ನು ಧರಿಸಿರುವುದು ವಂಚನೆಯಲ್ಲವೇ. ಅದಕ್ಕೆ ವಾಲ್ಮೀಕಿ ಪ್ರಾರಂಬದಲ್ಲಿಯೇ ಹೇಳಿದ್ದಾನೆ. ನೇರವಾಗಿ ಆತ ಕಪಿಯ ರೂಪದಲ್ಲಿಯೇ ಹೋದರೆ ಆತ ಆಡುವ ಮಾತಿನ ಶೈಲಿಗೂ ಆತನ ಬಹಿರಂಗ ರೂಪಕ್ಕೂ ಅಂತರ ಕಂಡು ಇದು ಯಾವುದೋ ಮಾಯೆ ಎನ್ನುವ ಭಾವಕ್ಕೆ ರಾಮ ಲಕ್ಷ್ಮಣರು ಬರುವ ಸಾಧ್ಯತೆಯಿದೆ. ಬಿಕ್ಷುವಿನ ವೇಷವಾದರೆ ಆಡುವ ಮಾತಿಗೆ ಸಾಮ್ಯತೆ ಬರುತ್ತದೆ. ಅದೂ ಅಲ್ಲದೇ ರಾಮ ಲಕ್ಷ್ಮಣರೂ ಸಹ ತಾಪಸಿಗಳಂತೆ ಇದ್ದರು. ಆದರೆ ಅವರ ಕೈಯಲ್ಲಿ ಬಿಲ್ಲು ಬಾಣಗಳಿದ್ದವು. ಬತ್ತಳಿಕೆ ಬಿಗಿದ್ದರು. ಹೀಗಿರುವಾಗ ಅವರನ್ನು ಮೊದಲು ನೋಡಲು ಸರ್ವಮಾನ್ಯವಾದ ಬಿಕ್ಷುವಿನ ರೂಪ ಧರಿಸಿದರೆ ಅವರು ತನ್ನ ಕಡೆಗೆ ಗಮನವನ್ನು ಹರಿಸುತ್ತಾರೆ ಎನ್ನುವುದಾಗಿದೆ. ರಾಮ ಲಕ್ಷ್ಮಣರನ್ನು ಹತ್ತಿರದಿಂದ ಕಂಡಾಗ ಅವರಲ್ಲಿ ದಿವ್ಯ ಪ್ರಭೆ ದೇದೀಪ್ಯಮಾನವಾಗಿ ಬೆಳಗುತ್ತಿತ್ತು. ಆ ಪ್ರಭೆಯ ಎದುರು ಹನುಮಂತನಿಗೆ ತಾನು ವೇಷವನ್ನು ಮರೆಮಾಚಿರುವ ವಿಷಯವನ್ನು ಮುಚ್ಚಿಟ್ಟುಕೊಳ್ಳಲಾವದಾಗಲಿಲ್ಲ. ಆತ ತಾನು ಬಿಕ್ಷುವಿನ ವೇಷವನ್ನು ಧರಿಸಿ ಬಂದವ. ಕಾಮರೂಪಿಯಾದ ತಾನು ಇಚ್ಛೆಬಂದ ಕಡೆ ಹೋಗಬಲ್ಲೆ, ಇಚ್ಛೆಬಂದ ರೂಪವನ್ನು ಧರಿಸಬಲ್ಲೆ ಎಂದು ಪ್ರಾರಂಭದಲ್ಲಿಯೇ ಹೇಳಿಬಿಡುತ್ತಾನೆ. ಸುಗ್ರೀವನ ಸಚಿವ ತಾನು, ಆತನಿಗೆ ಪ್ರಿಯವನ್ನುಂಟುಮಾಡಬೇಕೆಂಬ ಆಶಯದಿಂದ ಈ ವೇಷದಲ್ಲಿ ಬಂದಿರುವೆ ಎನ್ನುತ್ತಾನೆ. ಆತನ ಮಾತಿನಲ್ಲಿ ಎಲ್ಲಿಯೂ ಕಪಟತೆ ತಿಲಮಾತ್ರವೂ ಇರಲಿಲ್ಲ. ಧ್ವನಿ ಹೃದಯ ಕಂಠ ಮತ್ತು ಮುಖಗಳ ಮೂಲಕವಾಗಿ ಹೊರಬರುತ್ತಿತ್ತು. ತನ್ನೊಡೆಯನ ಕ್ಷೇಮಕ್ಕಾಗಿ ವೇಷಧರಿಸುವುದು ಅಗತ್ಯವಿತ್ತು. ಆದರೆ ಅವರನ್ನು ನೋಡಿದಾಗ ಅದರ ಅವಶ್ಯಕತೆ ಉಳಿದಿಲ್ಲ ಎನ್ನುವುದು ಆತನ ಮಾತಿನ ಸಾರಾಂಶವಾಗಿತ್ತು. ರಾಮನಿಗೆ ಆತನ ಸರಳ ಮತ್ತು ಸುಂದರವಾದ ಭಾಷೆಯನ್ನು ಕೇಳಿ ಆನಂದವಾಯಿತು. ಅದಕ್ಕಿಂತಲೂ ಆತ ಸುಗ್ರೀವನ ಸಚಿವನೆನ್ನುವುದನ್ನು ಕೇಳಿ ಇಮ್ಮಡಿ ಆನಂದವಾಯಿತು. ಯಾರನ್ನು ತಾವು ಹುಡುಕಲು ಬಂದ್ದೇವೆಯೋ ಆತನ ಸಚಿವನೇ ತನ್ನನ್ನು ಎದುರುಗೊಳ್ಳಲು ಬಂದಿದ್ದಾನೆ. ಇದರಿಂದ ಅಯೋಧ್ಯೆಯ ಚಕ್ರವರ್ತಿ ಮನೆತನದವರು ಅಪರಿಚಿತರಂತೆ ಬೇರೊಬ್ಬರ ಭೇಟಿಗೆ ಹೋಗಿರುವುದಲ್ಲ, ರಾಜಪರಂಪರೆಯ ನಡಾವಳಿಯಂತೆ (Protocol) ಸಚಿವನೋರ್ವ ಎದುರುಗೊಳ್ಳಲು ಬಂದಿದ್ದಾನೆ. ರಾಜರುಗಳನ್ನು ಎದುರುಗೊಳ್ಳಲು ಯಾರು ಯಾರು ಹೋಗಬೇಕೆನ್ನುವ ನಡಾವಳಿಕೆಗಳು ಪ್ರಾಚೀನ ಕಾಲದಲ್ಲಿಯೂ ಇತ್ತು. ರಾಮನಿಗೆ ಆತನ ವ್ಯಕ್ತಿತ್ವ ಮೊದಲ ಭೇಟಿಯಲ್ಲಿಯೇ ಇಷ್ಟವಾಯಿತು. ಲಕ್ಷ್ಮಣನಿಗೆ ಆತ ಹೇಳುವ ಮಾತು

ನಾನೃಗ್ವೇದವಿನೀತಸ್ಯ ನಾಯಜುರ್ವೇದಧಾರಿಣಃ.
ನಾಸಾಮವೇದವಿದುಷಶ್ಶಕ್ಯಮೇವಂ ವಿಭಾಷಿತುಮ್ ৷৷ಕಿ.3.27৷৷

ಋಗ್ವೇದ, ಯಜುರ್ವೇದ ಮತ್ತು ಸಾಮವೇದಗಳನ್ನು ಅಧ್ಯಯನಮಾಡಿ ಶಿಕ್ಷಣ ಪಡೆಯದವನಿಗೆ ಹೀಗೆ ಮಾತಾಡಲು ಸಾಧ್ಯವಿಲ್ಲ. ಎನ್ನುತ್ತಾನೆ. ಇಲ್ಲಿ ಪ್ರತಿಯೊಂದು ವೇದದ ವಿಶೇಷವನ್ನುಹೇಳುವಾಗ “ವಿನೀತ”, “ಧಾರಿ” ಮತ್ತು “ವಿತ್” ಶಬ್ಧಗಳನ್ನು ವಿಶೇಷಣಗಳನ್ನಾಗಿ ಬಳಸಿದ್ದಾರೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡ ಭಾಗ 2: ದೀಪದ ಬುಡದಲ್ಲಿ ಕತ್ತಲೆ

ಸಂಭಾಷಣೆಯಲ್ಲಿ ಸಂವಹನ ಕ್ರಿಯೆ ತುಂಬಾ ಮುಖ್ಯ. ಇದೊಂದು ಮಾತಿನಲ್ಲಿ ಹನುಮಂತನ ವಾಕ್ ಪಟುತ್ವವನ್ನು ರಾಮ ಶ್ಲಾಘಿಸುತ್ತಾನೆ. ಋಗ್ವೇದದ ಪ್ರತಿವರ್ಣವೂ ಸ್ವರಪೂರ್ಣವಾಗಿರುತ್ತದೆ. ಅದನ್ನು ಉಚ್ಛರಿಸಬೇಕಾದರೆ ಸಾವಧಾನವಾಗಿ, ವಿನಿಯೋಗಿಸಬೇಕಾದ ಛಂದಸ್ಸು, ವ್ಯಾಕರಣ ಶುದ್ಧತೆ ಮತ್ತು ಗಂಭೀರ ಸ್ವರಬೇಕಾಗುತ್ತದೆ. ಅದನ್ನು ಸರಿಯಾಗಿ ಅಧ್ಯಯನ ಮಾಡಿದವನಿಂದಲೇ ಹೀಗೆ ಮಾತಾಡಲು ಸಾಧ್ಯ. ಹಾಗಾಗಿ ವಿನೀತ ಎನ್ನುವ ಶಬ್ದವನ್ನು ಬಳಸಿದ್ದಾನೆ. ವಿನೀತ ಎಂದರೆ ಆಚಾರ್ಯಮುಖೇನ ಶಾಸ್ತ್ರಬದ್ಧವಾಗಿ ಕಲಿತವ ಎಂದು ಅರ್ಥ. ಯಜುರ್ವೇದದಲ್ಲಿ ಪ್ರತಿಯೊಂದು ಅನುವಾಕನ್ನೂ ಇತರ ಅನುವಾಕಗಳೊಡನೆ ಸಂಕರ ಆಗದ ರೀತಿಯಲ್ಲಿ ಉಚ್ಛರಿಸಬೇಕು. ಅದಕೆ ಅಸಾಧಾರಣ ಧಾರಣಶಕ್ತಿಯ ಅವಶ್ಯಕತೆ ಇದೆ. ಸಾಮವೇದವು ಊಹರಹಸ್ಯಗಳಿಂದ ಗಾನರೂಪವಾಗಿದೆ. ಹನುಮಂತ ಆಡುವ ಮಾತಿನಲ್ಲಿ ಪದ್ಯದ ಗೇಯತೆಯೂ ಇತ್ತು. ಕಿವಿಗೆ ಇಂಪಾಗಿ ಆದರೆ ಅರ್ಥಗರ್ಭಿತವಾಗಿ ಇತ್ತು ಎನ್ನುವುದನ್ನು ಮೂರು ಶಬ್ದಗಳಾದ ವಿನೀತ, ಧಾರಿ ಮತ್ತು ವಿತ್ ಶಬ್ದಗಳ ಮೂಲಕ ರಾಮ ತಿಳಿಸುತ್ತಾನೆ. ರಾಮನೂ ಮೂರೂ ವೇದಗಳಲ್ಲಿ ಪಾರಂಗತನಾಗಿರುವುದರಿಂದಲೇ ಹನುಮಂತನ ಮಾತನ್ನು ಗ್ರಹಿಸಲು ಸಾಧ್ಯವಾಯಿತು ಎಂದೂ ಇಲ್ಲಿ ಅರ್ಥೈಸಬಹುದಾಗಿದೆ. ಮಂತ್ರಿ ಎದುರಾದಾಗ ರಾಜನಾದವ ಮಾತನ್ನಾಡುವುದಲ್ಲ. ಆತನ ಪರವಾಗಿ ಮಂತ್ರಿಯೋ ಅಥವಾ ಸಮರ್ಥ ದೂತನೋ ಮಾತನ್ನಾಡಬೇಕು. ಹಾಗಾಗಿ ಇಲ್ಲಿ ಹನುಮಂತನೊಡನೆ ಮುಂದಿನ ವಿಷಯವನ್ನು ಲಕ್ಷ್ಮಣ ಮಾತಾಡಲಿ ಎಂದು ರಾಮ ಇಂಗಿತವನ್ನು ವ್ಯಕ್ತಪಡಿಸುತ್ತಾನೆ. ಹಾಗಾಗಿ ಮುಂದೆ ಲಕ್ಷ್ಮಣ ಹನುಮಂತನಲ್ಲಿ ತಮ್ಮ ಅರಣ್ಯವಾಸದ ವಿಷಯವನ್ನು, ಸೀತಾಪಹರಣದ ವಿಷಯವನ್ನೂ ಸಹ ಸಮಗ್ರವಾಗಿ ತಿಳಿಸಿ ತಮ್ಮ ಭೇಟಿಯ ಉದ್ಧೇಶ ಸೀತೆ ಎಲ್ಲಿರುತ್ತಾಳೆಂದು ಕಂಡುಹಿಡಿಯಲು ಕಬಂಧನ ಸೂಚನೆಯ ಮೇರೆಗೆ ಸುಗ್ರೀವನೊಡನೆ ಆಶ್ರಯಕೋರಲು ಬಂದಿದ್ದೇವೆ ಎನುತ್ತಾ ಮೊದಲು ಹೇಳಿದ ಸುಗ್ರೀವಂ ಶರಣಂ ಗತಃ ಎನ್ನುವ ಆರು ಬಗೆಯ ಉಲ್ಲೇಖವನ್ನು ಮಾಡುತ್ತಾನೆ.

ಹನುಮಂತನು ಸೂರ್ಯನ ಹತ್ತಿರ ಸೂತ್ರ, ವೃತ್ತಿ, ವಾರ್ತಿಕ, ಮಹಾಭಾಷ್ಯ, ಶಾಸ್ತ್ರ, ಛಂದಃಶಾಸ್ತ್ರಗಳನ್ನೂ, ನವವ್ಯಾಕರಣಗಳನ್ನೂ ಕಲಿತವ. ಅಗಸ್ತ್ಯರು ಹನುಮಂತನ ಕುರಿತು ಆತ ಶಾಸ್ತ್ರವಿಷಯದಲ್ಲಿ ಬ್ರಹಸ್ಪತಿಯೊಡನೆ ಹೋಲಿಸಬಹುದು ಎನ್ನುತ್ತಾರೆ. ಆತನಿಗೆ ಲಕ್ಷ್ಮಣ ಸುಗ್ರೀವನೊಡನೆ ಶರಣಾಗತಿಗಾಗಿ ಬಂದಿದ್ದಾರೆ ಎಂದು ಹೇಳಿರುವುದು ಮನಸ್ಸಿಗೆ ಸರಿಕಾಣಲಿಲ್ಲ. ಅತನಿಗೆ ಸೂರ್ಯವಂಶದ ವಿಷಗಳೆಲ್ಲವೂ ತಿಳಿದಿದೆ. ಅವರ ಶ್ರೇಷ್ಠತೆಯ ಮತ್ತು ಮಹಾತ್ಮತೆಯ ಕುರಿತು ಗೌರವವಿದೆ. ಆದರೆ ಈ ವಾಕ್ ದೋಷವನ್ನು ಟೀಕಿಸಲೂ ಹೋಗುವುದಿಲ್ಲ. ರಾಮಲಕ್ಷ್ಮಣರನ್ನು ತನ್ನ ಭುಜದಮೇಲೆ ಹೊತ್ತು ಅವರನ್ನು ಋಷ್ಯಮೂಕ ಪರ್ವತಕ್ಕೆ ಕರೆತರುತ್ತಾನೆ. ಸುಗ್ರೀವ ಆಗ ಆಗಂತುಕರ ವಿಷಯದಲ್ಲಿ ಭಯಪಟ್ಟು ಅಲ್ಲೇ ಪಕದಲ್ಲಿದ್ದ ಮಲಯ ಪರ್ವತದಲ್ಲಿ ಇದ್ದ. ಆತನಲ್ಲಿ ರಾಮ ಲಕ್ಷ್ಮಣರ ಮತ್ತು ದಶರಥನ ಸಹಿತವಾಗಿ ಸೂರ್ಯವಂಶದ ದೊರೆಗಳ ಮಹಿಮೆಯನ್ನು ಹೇಳುತ್ತಾನೆ. ಅಂತಹ ಮಹಿಮಾನ್ವಿತರು ಸೀತಾನ್ವೇಷಣೆಯ ಸಲುವಾಗಿ ನಿನ್ನ ಸಹಾಯವನ್ನು ಬಯಸಿ ಬಂದಿದ್ದಾರೆ ಎನ್ನುತ್ತಾನೆ. ಇಲ್ಲಿ ಹನುಮಂತನ ಜಾಣ್ಮೆಯನ್ನು ಗಮನಿಸಬೇಕು. “ಸುಗ್ರೀವನಲ್ಲಿ ಶರಣಾಗತಿಯನ್ನು ಹೊಂದಲು ಬಂದಿದ್ದಾರೆ ಎನ್ನುವ ಮಾತಿನ ದೋಷವನ್ನು ಹನುಮಂತ ಪ್ರಾರಂಭದಲ್ಲಿ ಹೇಳಿದ ಶ್ಲೋಕದಂತೆ “ಸಹೋದರರಾದ ರಾಮಲಕ್ಷ್ಮಣರು ನಿನ್ನೊಡನೆ ಗೆಳೆತನವನ್ನು ಬೆಳೆಸುವ ಆಶಯವನ್ನು ಹೊಂದಿದ್ದಾರೆ. ಪೂಜನೀಯರಾದ ಇವರಿಬ್ಬರನ್ನೂ ನೀನು ಯಥೋಚಿತವಾಗಿ ಪ್ರತಿಗ್ರಹಿಸಿ ಪೂಜಿಸಬೇಕು” ಎಂದು ಬದಲಾಯಿಸಿ ಹೇಳುತ್ತಾನೆ.

“ನವವ್ಯಾಕರಣವೇತ್ತಾ -ಒಂಬತ್ತು ವ್ಯಾಕರಣ ಸಿದ್ಧಾಂತವನ್ನು ತಿಳಿದವ ಹನುಮಂತ ಎಂದು ಅಗಸ್ತ್ಯರು ಈತನನ್ನು ಹೊಗಳಿದ್ದು ಆತನ ಜಾಣ್ಮೆ ಮತ್ತು ಶಾಸ್ತ್ರಕೌಶಲ್ಯದ ಪರಿಣಿತಿಗಾಗಿ. ರಾಮನ ಅನುಗ್ರಹದಿಂದ ಹನುಮಂತ ಬ್ರಹ್ಮನೇ ಆಗುವನು- “ಬ್ರಹ್ಮಾ ಭವಿಷ್ಯತ್ಯಪಿ ತೇ ಪ್ರಸಾದಾತ್” ಎನ್ನುವ ಮಾತನ್ನೂ ಆಡುತ್ತಾರೆ. ಸುಂದರನೆನ್ನುವುದು ಆತನ ಇನ್ನೊಂದು ಹೆಸರು. ಅದು ಬಾಹ್ಯರೂಪದಿಂದ ಅಲ್ಲ, ಆತನ ವಿದ್ಯೆ ಮತ್ತು ವಿನಯಗಳ ಶೋಭೆಯಿಂದಾಗಿ. ಸುಗ್ರೀವನ ಸಚಿವ ರಾಮನೆಡೆಗೆ ಆಕರ್ಷಿತನಾಗುವುದು ಆತನ ಮೊದಲ ನೋಟದಲ್ಲಿಯೇ. ರಾಮನನ್ನು ನೋಡಿದ ತಕ್ಷಣ ಆತನ ಶಾಪ ವಿಮೋಚನೆಯಾಯಿತು ಎನ್ನುವ ಕಥೆ ಮೂಲ ರಾಮಾಯಣದಲ್ಲಿಲ್ಲ.

ಸುಗ್ರೀವನ ಚಂಚಲತೆಯ ವಿಷಯಗಳನ್ನು ಮುಂದಿನ ಸಂಚಿಕೆಯಲ್ಲಿ ಗಮನಿಸೋಣ.

Continue Reading

ಭವಿಷ್ಯ

Dina Bhavishya: ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಆದ್ರೆ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಗುರುವಾರವೂ ಕಟಕ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ವೃಷಭ ರಾಶಿಯವರು ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ.
ತಿಥಿ: ಏಕಾದಶಿ 25:36 ವಾರ: ಗುರುವಾರ
ನಕ್ಷತ್ರ: ಆರಿದ್ರಾ 16:38 ಯೋಗ: ಸಿದ್ಧಿ 18:15
ಕರಣ: ಭವ 13:24 ಅಮೃತಕಾಲ: ಬೆಳಗ್ಗೆ 06:20 ರಿಂದ 07:59
ದಿನದ ವಿಶೇಷ: ಸರ್ವತ್ರ ಏಕಾದಶಿ

ಸೂರ್ಯೋದಯ : 06:08   ಸೂರ್ಯಾಸ್ತ : 06:32

ರಾಹುಕಾಲ: ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ, ಆದಷ್ಟು ವಿಶ್ರಾಂತಿ ಪಡೆಯಿರಿ. ಅನಗತ್ಯ ಖರ್ಚು ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಚು ತುಂಬಾ ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಬೆಂಗಳೂರು

Actor Darshan: ಪವಿತ್ರಾಗೌಡ ಜಾಮೀನು ಅರ್ಜಿಯ ಭವಿಷ್ಯ ಆ.31ಕ್ಕೆ ನಿರ್ಧಾರ

Actor Darshan: ರೇಣುಕಾಸ್ವಾಮಿ‌ ಕೊಲೆ ಪ್ರಕರಣದ ಎ1 ಆರೋಪಿ‌ ಪವಿತ್ರಗೌಡ ಸೇರಿದಂತೆ ನಾಲ್ವರು ಆರೋಪಿಗಳು ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಸುಧೀರ್ಘವಾದ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಆಗಸ್ಟ್ 31ಕ್ಕೆ ಆದೇಶ ಕಾಯ್ದಿರಿಸಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ‌ ಕೊಲೆ ಪ್ರಕರಣದ ಎ1 ಆರೋಪಿ‌ ಪವಿತ್ರಗೌಡ ಸೇರಿದಂತೆ ನಾಲ್ವರು ಆರೋಪಿಗಳು ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಯಿತು. (Actor Darshan) ಸುಧೀರ್ಘವಾದ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಆಗಸ್ಟ್ 31ಕ್ಕೆ ಆದೇಶ ಕಾಯ್ದಿರಿಸಿದೆ.

ಇದನ್ನೂ ಓದಿ: Stray Dogs Attack: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಬಂಧನವಾಗಿದ್ದ ಆರೋಪಿಗಳಾದ ಪವಿತ್ರಗೌಡ, ವಿನಯ್, ಕೇಶವಮೂರ್ತಿ ಹಾಗೂ ಅನುಕುಮಾರ್ ಜಾಮೀನು ಕೋರಿ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಹಾಕಿದ್ದರು. ನಿನ್ನೆ ಆರೋಪಿಗಳ ಪರ ವಕೀಲರು ವಾದ ನಡೆಸಿದ್ದು, ಪವಿತ್ರಾಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡನೆ ಮಾಡಿದ್ರು. ಇಂದು ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಿದರು.

ಇದನ್ನೂ ಓದಿ: Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

ಸುಮಾರು ಒಂದು ಗಂಟೆಯ ಕಾಲ ವಾದ ಮಂಡಿಸಿದ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ಕಿಡ್ನಾಪ್‌ನಿಂದ ಹಿಡಿದು ಕೊಲೆಯ ಆಗಿ ಸಾಕ್ಷ್ಯನಾಶದ ಬಗ್ಗೆ ಇಂಚಿಂಚೂ ಮಾಹಿತಿ ಕೋರ್ಟ್‌ಗೆ ನೀಡಿದ್ದು, ಯಾವುದೇ ಕಾರಣಕ್ಕೂ ಜಾಮೀನು‌‌ ಕೊಡದಂತೆ ಮನವಿ ಮಾಡಿ ವಾದ ಮುಕ್ತಾಯ ಮಾಡಿದರು. ಎರಡೂ ಕಡೆ ವಾದ-ಪ್ರತಿವಾದ ಮುಕ್ತಾಯ ಆಗಿದ್ದು, ಆಗಸ್ಟ್‌ 31 ಕ್ಕೆ ಪವಿತ್ರಗೌಡ ಹಾಗೂ ಅನುಕುಮಾರ್ ಅರ್ಜಿಯ ಆದೇಶ ಕಾಯ್ದಿರಿಸಿದರೆ, ಸೆ.2ಕ್ಕೆ ವಿನಯ್ ಹಾಗೂ ಕೇಶವಮೂರ್ತಿ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿತು.

Continue Reading

ಕ್ರೈಂ

Stray Dogs Attack: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

ಬೆಂಗಳೂರು ಜಾಲಹಳ್ಳಿಯ ಏರ್ ಫೋರ್ಸ್ ಈಸ್ಟ್ 7 ನೇ ರೆಸಿಡೆನ್ಶಿಯಲ್ ಕ್ಯಾಂಪ್‌ನಲ್ಲಿರುವ ಆಟದ ಮೈದಾನದಲ್ಲಿ ಬೆಳಗ್ಗೆ 6.30ರ ಸುಮಾರಿಗೆ 75 ವರ್ಷದ ಮಹಿಳೆ ಮೇಲೆ ಸುಮಾರು ಏಳೆಂಟು ಬೀದಿ ನಾಯಿಗಳು ಹಠಾತ್ ದಾಳಿ (Stray Dogs Attack) ನಡೆಸಿದ್ದು, ತಲೆ ಹಿಂಬದಿ, ಮುಖ, ಕೈ, ಕತ್ತಿನ ಭಾಗವನ್ನು ಶ್ವಾನಗಳು ಕಚ್ಚಿವೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

VISTARANEWS.COM


on

By

Stray Dogs Attack
Koo

ಬೆಂಗಳೂರು: ನಿವೃತ್ತ ಶಿಕ್ಷಕಿಯೊಬ್ಬರು ( retired teacher) ಬುಧವಾರ ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದಾಗ ಅವರ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ (Stray Dogs Attack) ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ (bengaluru) ನಡೆದಿದೆ.

ಜಾಲಹಳ್ಳಿಯ ಏರ್ ಫೋರ್ಸ್ ಈಸ್ಟ್ 7 ನೇ ರೆಸಿಡೆನ್ಶಿಯಲ್ ಕ್ಯಾಂಪ್‌ನಲ್ಲಿರುವ ಆಟದ ಮೈದಾನದಲ್ಲಿ ಬೆಳಗ್ಗೆ 6.30ರ ಸುಮಾರಿಗೆ ವಾಯುಸೇನೆ ಸಿಬ್ಬಂದಿಯ ಅತ್ತೆ, 75 ವರ್ಷದ ರಾಜ್ದುಲಾರಿ ಸಿನ್ಹಾ ಅವರ ಮೇಲೆ ಸುಮಾರು ಏಳೆಂಟು ಬೀದಿ ನಾಯಿಗಳು ಹಠಾತ್ ದಾಳಿ ನಡೆಸಿದ್ದು, ತಲೆ ಹಿಂಬದಿ, ಮುಖ, ಕೈ, ಕತ್ತಿನ ಭಾಗವನ್ನು ಶ್ವಾನಗಳು ಕಚ್ಚಿವೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಮೃತ ಮಹಿಳೆಯ ಅಳಿಯ ಏರ್ ಫೋರ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಅಳಿಯ ಮತ್ತು ಮಗಳನ್ನು ನೋಡಲು ಮಹಿಳೆ ಬಿಹಾರದಿಂದ ಕೆಲವು ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು.

ಈ ಹಿಂದೆಯೂ ಇದೇ ಕ್ಯಾಂಪಸ್ ನಲ್ಲಿ ನಾಲ್ಕೈದು ಜನರ ಮೇಲೆ ನಾಯಿಗಳು ದಾಳಿ ನಡೆಸಿತ್ತು.

ಈ ಕುರಿತು ಗಂಗಮ್ಮ ಗುಡಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.


ಘಟನೆಯ ಕುರಿತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿದ್ದು, ಇದು ಬುಧವಾರ ಬೆಳಗ್ಗೆ ನಡೆದ ಒಂದು ದುರಂತ ದೃಶ್ಯವಾಗಿದೆ.ವಿದ್ಯಾರಣ್ಯಪುರದ ಜಾಲಹಳ್ಳಿಯ ಏರ್‌ಫೋರ್ಸ್ ಆಟದ ಮೈದಾನದಲ್ಲಿ ಹಲವು ಬೀದಿನಾಯಿಗಳು ಮಹಿಳೆಯ ಮೇಲೆ ದಾಳಿ ಮಾಡಿವೆ. ನಾನು ಅಸಹಾಯಕ ಪ್ರತ್ಯಕ್ಷದರ್ಶಿಯಾಗಿದ್ದೆ. ಅವರ ದೊಡ್ಡ ಗೋಡೆಯಿಂದಾಗಿ ನಾನು ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ನಾನು ಕೂಗಿ ಕೆಲವು ಜನರನ್ನು ಕರೆದಿದ್ದೇನೆ ಮತ್ತು ಅವರು ಅವಳನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Murder Case: ಬುದ್ಧಿ ಹೇಳಿದಕ್ಕೆ ಹೆತ್ತ ತಾಯಿಯನ್ನೆ ಕೊಂದ ಪಾಪಿ ಪುತ್ರ!

ಶಾಲಾ ಆವರಣದಲ್ಲಿ ಹಾವು ಕಚ್ಚಿ ಮಗು ಸಾವು

ಶಾಲಾ ಆವರಣದಲ್ಲಿ ಹಾವು ಕಚ್ಚಿ ಮಗು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಘಟನೆಯಿಂದ ಶಾಲಾ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮಸ್ಥರು ಶಾಲಾ ಆವರಣದಲ್ಲಿ ಸೇರಿದ್ದರಿಂದ ಸ್ಥಳಕ್ಕೆ ಆಗಮಿಸಿದ ದೊಡ್ಡಬೆಳವಂಗಲ ಇನ್ಸ್‌ಪೆಕ್ಟರ್ ನವೀನ್ ಕುಮಾರ್ ಎಂ.ಬಿ. ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ಉಂಟಾಯಿತು.

ಇನ್ಸ್ ಪೆಕ್ಟರ್ ಮನವೊಲಿಕೆಗೆ ಬಗ್ಗದ ಗ್ರಾಮಸ್ಥರು ಆಡಳಿತ ಮಂಡಳಿ ಸ್ಥಳಕ್ಕೆ ಆಗಮಿಸುವವರೆಗೂ ಶವಸಂಸ್ಕಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು.

Continue Reading
Advertisement
Hair Combing
ಆರೋಗ್ಯ3 hours ago

Hair Combing: ಕೂದಲು ಬಾಚುವ ಅಭ್ಯಾಸವಿಲ್ಲವೇ? ಹಾಗಾದರೆ ಇದನ್ನೊಮ್ಮೆ ಓದಿ!

dhavala dharini column Hanuman's setubandha to meet Sugriva in ramayana by narayana yaji
ಅಂಕಣ3 hours ago

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು?

karnataka weather Forecast
ಮಳೆ4 hours ago

Karnataka Weather : ಬೆಂಗಳೂರಿನಲ್ಲಿ ಘಳಿಗೆವೊಂದು ವಾತಾವರಣ; ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ5 hours ago

Dina Bhavishya: ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಆದ್ರೆ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ

Murder Case
ಬೆಂಗಳೂರು13 hours ago

Murder Case: ಶೀಲ ಶಂಕೆ; ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು ಭೀಕರ ಹತ್ಯೆ

Actor Darshan
ಬೆಂಗಳೂರು14 hours ago

Actor Darshan: ಪವಿತ್ರಾಗೌಡ ಜಾಮೀನು ಅರ್ಜಿಯ ಭವಿಷ್ಯ ಆ.31ಕ್ಕೆ ನಿರ್ಧಾರ

Fashion Trend
ಫ್ಯಾಷನ್15 hours ago

Fashion Trend: ಕಟೌಟ್‌ ಪ್ಯಾಂಟ್‌ ಸೂಟ್‌; ಗ್ಲಾಮರಸ್‌ ಯುವತಿಯರ ಲೇಟೆಸ್ಟ್ ಆಯ್ಕೆ!

Stray Dogs Attack
ಕ್ರೈಂ15 hours ago

Stray Dogs Attack: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

R Ashok
ಬೆಂಗಳೂರು15 hours ago

R Ashok: ರಾಜ್ಯ ಸರ್ಕಾರದಿಂದ ದ್ವೇಷ ರಾಜಕಾರಣ; ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ ಎಂದ ಆರ್‌. ಅಶೋಕ್‌

karnataka weather Forecast
ಮಳೆ15 hours ago

Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌